ಸೋಲನ್, ಡಿಸೆಂಬರ್ 12: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಅಪಾರ್ಟ್ಮೆಂಟ್ ಕಟ್ಟಡವೊಂದರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ (Fire Accident) 8 ವರ್ಷದ ಮಗು ಸಾವನ್ನಪ್ಪಿದ್ದು, ನೇಪಾಳಿ ಮೂಲದ ವಲಸೆ ಕಾರ್ಮಿಕರು ಸೇರಿದಂತೆ ಹಲವರು ಸಿಲುಕಿಕೊಂಡಿದ್ದಾರೆ. ಹಲವಾರು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ತಕ್ಷಣ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಯಿತು. ಆದರೂ ನಿರಂತರವಾಗಿ ಸಿಲಿಂಡರ್ ಸ್ಫೋಟಗಳು ಉಂಟಾಗಿದ್ದರಿಂದ ಬೆಂಕಿ ನಂದಿಸುವುದು ಕಷ್ಟವಾಯಿತು. ಇಂದು ಬೆಳಿಗ್ಗೆ 8 ಗಂಟೆಯವರೆಗೂ ಬೆಂಕಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿರಲಿಲ್ಲ.
ಬೆಂಕಿಯನ್ನು ನಿಯಂತ್ರಿಸಲು, ಹತ್ತಿರದ ಅಂಗಡಿಗಳು ಮತ್ತು ಮನೆಗಳಿಗೆ ಹರಡದಂತೆ ತಡೆಯಲು 6 ಅಗ್ನಿಶಾಮಕ ದಳದ ವಾಹನಗಳು ಮತ್ತು ನೀರಿನ ಟ್ಯಾಂಕರ್ಗಳನ್ನು ಕರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ತಂಡಗಳನ್ನು ಸಹ ಕರೆಸಿಕೊಳ್ಳಲಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನಟ ದಳಪತಿ ವಿಜಯ್ (Thalapathy Vijay) ಅವರ ಕೊನೇ ಸಿನಿಮಾ ಎಂಬ ಕಾರಣಕ್ಕೆ ‘ಜನ ನಾಯಗನ್’ (Jana Nayagan) ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜನವರಿ 9ರಂದು ಈ ಸಿನಿಮಾ ಬಿಡುಗಡೆ ಆಗಬೇಕಿತ್ತು. ಚಿತ್ರದ ಬಿಡುಗಡೆಗೆ ಸಕಲ ಸಿದ್ಧತೆ ನಡೆದಿತ್ತು. ಅಡ್ವಾನ್ಸ್ ಬುಕಿಂಗ್ ಕೂಡ ಶುರುವಾಗಿತ್ತು. ಆದರೆ ಅಂತಿಮ ಹಂತದಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಸೆನ್ಸಾರ್ ಸಮಸ್ಯೆ ಎದುರಾಯಿತು. ಸೆನ್ಸಾರ್ ಪ್ರಮಾಣಪತ್ರ ಸಿಗದ ಕಾರಣ ಚಿತ್ರದ ಬಿಡುಗಡೆಯನ್ನು ಮುಂದೂಡುವುದು ಅನಿವಾರ್ಯ ಆಯಿತು. ಈಗ ಈ ವಿವಾದ ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲೇರಿದೆ.
ಜನ ನಾಯಗನ್ ಸಿನಿಮಾಗೆ ಸೆನ್ಸಾರ್ ಪ್ರಮಾಣಪತ್ರ ಸಿಗದೇ ಇರುವುದನ್ನು ಪ್ರಶ್ನಿಸಿ ನಿರ್ಮಾಪಕರು ಮದ್ರಾಸ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಏಕ ಸದಸ್ಯ ಪೀಠವು ಪ್ರಮಾಣಪತ್ರ ನೀಡುವಂತೆ ಸೆನ್ಸಾರ್ ಮಂಡಳಿಗೆ ಆದೇಶ ನೀಡಿತ್ತು. ಆದರೆ ಕೆಲವೇ ಗಂಟೆಗಳ ಬಳಿಕ ಈ ಆದೇಶಕ್ಕೆ ಸ್ವತಃ ಮದ್ರಾಸ್ ಹೈಕೋರ್ಟ್ ತಡೆ ನೀಡಿತು.
ಈ ಅರ್ಜಿಯ ಸೂಕ್ತ ವಿಚಾರಣೆ ನಡೆಯದೆಯೇ ಆದೇಶ ನೀಡಲಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತು. ಹಾಗಾಗಿ ವಿಚಾರಣೆಯನ್ನು ಜನವರಿ 21ಕ್ಕೆ ಮುಂದೂಡಲಾಯಿತು. ಅಂದರೆ, ಅಲ್ಲಿಯ ತನಕ ‘ಜನ ನಾಯಗನ್’ ಸಿನಿಮಾದ ಬಿಡುಗಡೆಗೆ ಅವಕಾಶ ಇಲ್ಲದಂತಾಯಿತು. ಈಗ ನಿರ್ಮಾಪಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮದ್ರಾಸ್ ಹೈಕೋರ್ಟ್ ತಡೆ ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
‘ಜನ ನಾಯಗನ್’ ಸಿನಿಮಾದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ಕತೆ ಇದೆ ಎನ್ನಲಾಗಿದೆ. ಸ್ವತಃ ವಿಜಯ್ ಅವರು ಸಿನಿಮಾ ಬಿಟ್ಟು ರಾಜಕೀಯದ ಕಡೆಗೆ ಹೊರಳಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯ್ ವಿರುದ್ಧ ರಾಜಕೀಯ ಕುತಂತ್ರದ ಭಾಗವಾಗಿಯೇ ‘ಜನ ನಾಯಗನ್’ ಸಿನಿಮಾಗೆ ತೊಂದರೆ ಕೊಡಲಾಗಿದೆ ಎನ್ನಲಾಗುತ್ತಿದೆ. ಒಟ್ಟಾರೆ ಈ ವಿವಾದವು ಈಗ ರಾಜಕೀಯದ ತಿರುವು ಪಡೆದುಕೊಂಡಿದೆ.
ಜನವರಿ 21ಕ್ಕೆ ಮದ್ರಾಸ್ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ. ಇದರ ವಿಚಾರಣೆ ನಡೆದು, ಅಂತಿಮ ತೀರ್ಪು ಯಾವಾಗ ಬರಲಿದೆ ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಇದರಿಂದಾಗಿ ನಿರ್ಮಾಣ ಸಂಸ್ಥೆಗೆ ಸಾಕಷ್ಟು ನಷ್ಟ ಆಗಲಿದೆ. ‘ಜನ ನಾಯಗನ್’ ಬಿಡುಗಡೆ ದಿನಾಂಕ ಅನಿಶ್ವಿತ ಆಗಿರುವುದರಿಂದ ಇನ್ನುಳಿದ ಸಿನಿಮಾ ಮೇಲೂ ಇದು ಪರಿಣಾಮ ಬೀರಲಿದೆ.
ಕಾರವಾರ, ಜನವರಿ 12: ಖದೀಮರು ಶೌಚಾಲಯದ (Toilet) ಗೋಡೆ ಕೊರೆದು ಬ್ಯಾಂಕ್ ದರೋಡೆಗೆ (Bank Robbery)ಯತ್ನಿಸಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಂಕಸಾಳ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ನಡೆದಿದೆ. ಸದ್ಯ ಸ್ಥಳಕ್ಕೆ ಉತ್ತರ ಕನ್ನಡ ಎಸ್ಪಿ ದೀಪನ್ ಎಂ.ಎನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಶ್ವಾನ ದಳ ಸೇರಿದಂತೆ ತಜ್ಞರ ತಂಡ ಕಾರ್ಯಾಚರಣೆ ಮಾಡಿದ್ದು, ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಷ್ಟ್ರೀಯ ಹೆದ್ದಾರಿ 63ರ ಪಕ್ಕದಲ್ಲೇ ಬ್ಯಾಂಕ್ ಆಫ್ ಬರೋಡಾ ಇದೆ. ಶೌಚಾಲಯ ಪ್ರದೇಶ ಬಿಟ್ಟು ಬೇರೆ ಕಡೆ ಸಿಸಿ ಕ್ಯಾಮರಾ ಇರುವುದನ್ನು ತಿಳಿದ ಖದೀಮರು ಶೌಚಾಲಯದ ಹಿಂಭಾಗದ ಗೋಡೆಯನ್ನು ಕೊರೆದು ಒಳಹೊಕ್ಕಿದ್ದಾರೆ. ಬ್ಯಾಕ್ನ ಸ್ಟ್ರಾಂಗ್ ರೂಮ್ ಗೋಡೆ ಒಡೆಯಲು ಯತ್ನಿಸಿದ್ದಾರೆ, ಆದರೆ ಸಾಧ್ಯವಾಗಿಲ್ಲ. ಹೀಗಾಗಿ ಕಳ್ಳರು ಖಾಲಿ ಕೈಯಲ್ಲಿ ಹಿಂತಿರುಗಿದ್ದಾರೆ.
ಐಷಾರಾಮಿ ಬೈಕ್ ಮನೆ ಮುಂದೆ ನಿಲ್ಲಿಸುವ ಮುನ್ನ ಎಚ್ಚರ: 4 ಲಕ್ಷ ರೂ ಮೌಲ್ಯದ ಬೈಕ್ ಕಳ್ಳತನ
ಮನೆ ಮುಂದೆ ನಿಲ್ಲಿಸಿದ್ದ ನಾಲ್ಕು ಲಕ್ಷ ರೂ ಬೆಲೆ ಬಾಳುವ ಡ್ಯೂಕ್ ಬೈಕ್ ಕಳ್ಳತನ ನಡೆದಿರುವಂತಹ ಘಟನೆ ನೆಲಮಂಗಲದ ಗಂಗಮ್ಮಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ಬಿಗೆರೆಯಲ್ಲಿ ನಡೆದಿದೆ. ರಾಜೇಶ್ ಎಂಬುವವರಿಗೆ ಸೇರಿದ್ದ ಡ್ಯೂಕ್ ಬೈಕ್ ಕಳ್ಳತನವಾಗಿದೆ.
ರಾಜೇಶ್ ಇಂಜಿನಿಯರಿಂಗ್ ಮುಗಿಸಿ ಸ್ಟಾರ್ಟಪ್ ಕಂಪನಿ ನಡೆಸುತ್ತಿದ್ದಾರೆ. ಕೆಲಸ ಮಗಿಸಿ ಮನೆ ಮುಂದೆ ಡ್ಯೂಕ್ ಬೈಕ್ ನಿಲ್ಲಿಸಿದ್ದರು. ಬೆಳಿಗ್ಗೆ ಜಿಮ್ಗೆ ಹೋಗಲು ಹೊರ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಬೆಂಗಳೂರು ವಾಯುವ್ಯ ವಿಭಾಗ ಗಂಗಮ್ಮ ಗುಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಎಫ್ಐಆರ್ ದಾಖಲಾಗಿದೆ.
ಶ್ರೀಗಂಧದ ಮರ ಕಳ್ಳತನ ಮಾಡ್ತಿದ್ದ ಮೂವರ ಬಂಧನ
ಶ್ರೀ ಗಂಧದ ಮರ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಸವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 5 ಲಕ್ಷ ರೂ ಮೌಲ್ಯದ ಗಂಧದ ತುಂಡುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಿಕ್ಕಮಗಳೂರು ನಗರದ ಆಂಜನೇಯ, ಸುಬ್ರಹ್ಮಣ್ಯ ಮತ್ತು ಸಂಜಯ್ ಬಂಧಿತ ಆರೋಪಿಗಳು. ಮೂರು ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ಬಿಗ್ಬಾಸ್ ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲಾಗಿದೆ. ಇದಕ್ಕೆ ಕಾರಣ ಆಗಿದ್ದು ಸುದೀಪ್ ಬಳಕೆ ಮಾಡಿದ ಪದ. ರಣಹದ್ದುಗಳ ಬಗ್ಗೆ ನಟ ಸುದೀಪ್ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ದೂರು ದಾಖಲು ಮಾಡಲಾಗಿದೆ! ಸುದೀಪ್ ವಿರುದ್ಧ ಪಕ್ಷಿಪ್ರೇಮಿಗಳು ಹಾಗೂ ರಹಣದ್ದು ಸಂರಕ್ಷಣಾ ಟ್ರಸ್ಟ್ನಿಂದ ಬೆಂಗಳೂರು ದಕ್ಷಿಣ DFO ರಾಮಕೃಷ್ಣಪ್ಪಗೆ ದೂರು ದಾಖಲು ಮಾಡಲಾಗಿದೆ. ರಣಹದ್ದುಗಳು ಹೊಂಚು ಹಾಕಿ ಕರೆಕ್ಟ್ ಟೈಮ್ಗೆ ಹಿಡಿಯುತ್ತೆಂಬ ಹೇಳಿಕೆಯೇ ದೂರು ನೀಡಲು ಕಾರಣ! ಹದ್ದುಗಳ ಬಗ್ಗೆ ಸರಿಯಾದ ಮಾಹಿತಿಯನ್ನು ವೀಕ್ಷಕರಿಗೆ ತಿಳಿಸಬೇಕೆಂಬ ಆಗ್ರಹ ಕೇಳಿ ಬಂದಿದೆ.
ಕುಂದಾಪುರ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಕೆಂಡ ಮಹೋತ್ಸವ ನಡೆಯಲಿದೆ. ಈ ಕ್ಷೇತ್ರದ ಜಾತ್ರೆಯ ಸಮಯದಲ್ಲಿ ಈ ಹೂವು ಇರಲೇಬೇಕು.ಬ್ರಹ್ಮಲಿಂಗೇಶ್ವರನಿಗೆ ಸೇವಂತಿಗೆ ಹೂ ಸಮರ್ಪಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ.
ಹಳದಿ ಬಣ್ಣದ, ಕಣ್ಮನ ಸೆಳೆಯುವ ಸುವಾಸನೆಯ ಸೇವಂತಿಗೆ ಬ್ರಹ್ಮಲಿಂಗೇಶ್ವರನ ಜಾತ್ರೆ ಬೇಕೇಬೇಕು. ತಲೆ ಮೇಲೆ ಹಣ್ಣು–ಕಾಯಿ ಹಾಗೂ ಹರಕೆ ಹೊತ್ತುಸಾಗುವ ಭಕ್ತರ ಬುಟ್ಟಿಯಲ್ಲಿ ಸೇವಂತಿಗೆಗೆ ವಿಶೇಷ ಸ್ಥಾನವಿದೆ. ಬ್ರಹ್ಮಲಿಂಗೇಶ್ವರನಿಗೆ ಅತ್ಯಂತ ಪ್ರಿಯವಾದ ಹೂ ಎನ್ನಲಾಗುವ ಸೇವಂತಿಗೆ ಇಷ್ಟಾರ್ಥಗಳ ಈಡೇರಿಕೆಗೆ ಭಕ್ತರಿಂದ ಹರಕೆಯಾಗಿ ಸಮರ್ಪಣೆ ಆಗುತ್ತದೆ.
ಮಾರಣಕಟ್ಟೆ ಜಾತ್ರೆಯಂದು ಪ್ರತಿ ವರ್ಷ ಇಲ್ಲಿನ ಈ ಸೇವಂತಿಯನ್ನು ತಮ್ಮ ತೋಟದಲ್ಲಿ ಬೆಳೆಯುತ್ತಾರೆ. ಕರಾವಳಿ ಭಾಗದಲ್ಲಿ ಎರಡು ಕಡೆ ಮಾತ್ರ ದೇವರ ಜಾತ್ರೆಗೆ ಹಣ್ಣು ಹಾಗೂ ಹೂವಿನ ಕೃಷಿ ಮಾಡುವುದು, ಒಂದು ದಕ್ಷಿಣ ಕನ್ನಡ ಪೊಳಲಿ ಶ್ರೀ ರಾಜರಾಜೇಶ್ವರಿ ಕಲ್ಲಂಗಡಿಯನ್ನು ಹಾಗೂ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಸೇವಂತಿಗೆ ಹೂ.
ಕುಂದಾಪುರ ತಾಲ್ಲೂಕಿನ ಹೆಮ್ಮಾಡಿ, ಕಟ್ಟು, ಭಟ್ರ ಬೆಟ್ಟು, ಹೊಸ್ಕಳಿ, ಹರೆಗೋಡು, ಸುಳ್ಸೆ, ಗುಡ್ಡೆಮನೆ, ದೇವಸ್ಥಾನ ಬೆಟ್ಟು ಸೇರಿದಂತೆ ಹಲವು ಗ್ರಾಮಗಳಲ್ಲಿ ಹೆಮ್ಮಾಡಿ ಸೇವಂತಿಗೆ ಕೃಷಿಯನ್ನು ಮಾಡುತ್ತಾರೆ. ಗಾತ್ರದಲ್ಲಿ ಚಿಕ್ಕದಾದರೂ ನೋಡಲು ಆಕರ್ಷಕವಾಗಿರುವ ಹೆಮ್ಮಾಡಿ ಸೇವಂತಿಗೆ ಆಡುಭಾಷೆಯಲ್ಲಿ ‘ಹೆಮ್ಮಾಡಿ ಶ್ಯಾಮಂತಿ’ ಎಂದೇ ಪ್ರಸಿದ್ಧಿಯನ್ನು ಪಡೆದಿದೆ.
ಆಗಸ್ಟ್ನಲ್ಲಿ ಭತ್ತದ ಕಟಾವು ಮುಗಿಸಿದ ಬಳಿಕ ಕೃಷಿಕರು ಗದ್ದೆಗಳಲ್ಲಿ ಸೇವಂತಿಗೆ ಗಿಡಗಳನ್ನು ನಾಟಿ ಮಾಡುತ್ತಾರೆ. ಮೂರು ತಿಂಗಳ ಪೋಷಣೆಯ ನಂತರ ಜನವರಿ ಎರಡನೇ ವಾರದಲ್ಲಿ ಹೂ ಕಟಾವು ಆರಂಭವಾಗುತ್ತದೆ. ಸಂಕ್ರಾಂತಿ ಹಬ್ಬದ ಮೊದಲ ದಿನ ಮೊದಲ ಹೂ ಕೊಯ್ಲನ್ನು ಬುಟ್ಟಿಯಲ್ಲಿ ತುಂಬಿಕೊಂಡು ಮಾರಣಕಟ್ಟೆ ಬ್ರಹ್ಮಲಿಂಗೇಶ್ವರನಿಗೆ ಅರ್ಪಿಸಿದ ಬಳಿಕವೇ ಉಳಿದ ಹೂವನ್ನು ಮಾರಾಟ ಮಾಡಬೇಕು.
ಮಾರಣಕಟ್ಟೆ ಜಾತ್ರೆಯ ಬಳಿಕ ಹೆಮ್ಮಾಡಿ ಸೇವಂತಿಗೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯುವ ಜಾತ್ರೆ, ಉತ್ಸವ, ಕೆಂಡ ಮಹೋತ್ಸವ, ಕೋಲ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳಿಗೆ ಕಳಿಸಲಾಗುತ್ತದೆ. ಆದರೆ ಹವಾಮಾನ ವೈಪರೀತ್ಯ, ಕಾರ್ಮಿಕರ ಕೊರತೆ ಸೇರಿದಂತೆ ಹಲವು ಕಾರಣಗಳಿಂದ ಸೇವಂತಿಗೆ ಬೆಳೆಗಾರರು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಇದರಿಂದ ಕೆಲ ಕೃಷಿಕರು ಸೇವಂತಿಗೆ ಬೆಳೆಯಿಂದ ಹಿಂದೆ ಸರಿದಿದ್ದಾರೆ.
ಬೆಂಗಳೂರು, ಜನವರಿ 12: ಬೆಂಗಳೂರು (Bengaluru) ಅಂದರೆ ಅದೇನೋ ಸೆಳೆತ. ಹೀಗಾಗಿ ಅದೆಷ್ಟೋ ಯುವ ಮನಸ್ಸುಗಳನ್ನು ಕೈ ಬೀಸಿ ತನ್ನತ್ತ ಕರೆಯುತ್ತದೆ. ಆದರೆ ಇದೀಗ ಯುವತಿಯೊಬ್ಬಳು (Young woman) ತಾನು ಎಂದಿಗೂ ಬೆಂಗಳೂರಿಗೆ ಬರಲು ಬಯಸಿರಲಿಲ್ಲ. ಆದರೆ ಇಲ್ಲಿಗೆ ಬಂದ ನಂತರದಲ್ಲಿ ನನ್ನ ಆರಂಭಿಕ ದಿನಗಳ ಹಿಂಜರಿಕೆ ಹಾಗೂ ಕಾಲಾನಂತರದಲ್ಲಿ ಆ ಭಾವನೆಗಳು ಸಂಪೂರ್ಣವಾಗಿ ಬದಲಾಗಿವೆ ಎಂಬುವುದನ್ನು ತಿಳಿಸಿದ್ದಾಳೆ. ರಾಜಧಾನಿ ಬೆಂಗಳೂರಿಗೆ ತೆರಳಿ ಒಂದು ವರ್ಷ ಪೂರೈಸಿದ ಬಗ್ಗೆ ಪ್ರಗತಿ ಝಾ ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋ ಹಂಚಿ ಕೊಂಡಿದ್ದು ಜೀವನ ಬದಲಾಯಿಸಿದ ನಗರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾಳೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.
ಪ್ರಗತಿ ಝಾ (Pragathi Jha) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಯುವತಿ ಜನವರಿ 5, 2025 ರಂದು ಬೆಂಗಳೂರಿಗೆ ಬಂದಿಳಿದದ್ದನ್ನು ನೆನಪಿಸಿಕೊಳ್ಳುತ್ತಾ ಕಾಲೇಜು ಪ್ಲೇಸ್ಮೆಂಟ್ ವೇಳೆ ನಾನು ಎಂದಿಗೂ ಇಲ್ಲಿಗೆ ಬರಲು ಬಯಸಿರಲಿಲ್ಲ. ದೇವರ ಯೋಜನೆಯನ್ನು ಕಣ್ಣು ಮುಚ್ಚಿ ಒಪ್ಪಬೇಕು. ನಾನು ಈ ಬೆಂಗಳೂರಿಗೆ ಬಂದು ನಿಖರವಾಗಿ ಒಂದು ವರ್ಷವಾಗಿದೆ ಎಂದು ಹೇಳುವುದನ್ನು ಕಾಣಬಹುದು.
ವೈರಲ್ ವಿಡಿಯೋ ಇಲ್ಲಿದೆ
ಆದರೆ ಈ ಬೆಂಗಳೂರಿನ ಹೊರತಾಗಿ ಬೇರೆಲ್ಲಿಯಾದರೂ ನನಗೆ ಪ್ಲೇಸ್ ಮೆಂಟ್ ಆಗಲಿ ಎಂದು ಸಕ್ರಿಯವಾಗಿ ಪ್ರಾರ್ಥಿಸುತ್ತಿದ್ದೆ. ಇದು ತುಂಬಾ ದೊಡ್ಡ ನಗರ, ಸಂಚಾರ, ಜನದಟ್ಟಣೆ ಎಲ್ಲವೂ ಹೆಚ್ಚು. ನಾನು ಯಾವಾಗಲೂ ಈ ಜನಸಂದಣಿಯಿಂದ ದೂರವಿರಲು ಬಯಸುತ್ತೇನೆ. ಆದರೆ ವಿಧಿಯ ಯೋಜನೆಯೇ ಬೇರೆಯಾಗಿತ್ತು. ಬೆಂಗಳೂರು ತನ್ನನ್ನು ತಾನು ಊಹಿಸಿದ್ದಕ್ಕಿಂತ ಹೆಚ್ಚು ಬಲಶಾಲಿಯನ್ನಾಗಿ ಮಾಡಿತು ಎಂದಿದ್ದಾಳೆ.
ಅಂತಿಮ ಪರೀಕ್ಷೆಯ ವೇಳೆ ತಾನು ಕಾಲೇಜಿಗೆ ಮತ್ತೆ ಭೇಟಿ ನೀಡಿದ್ದನ್ನು ನೆನಪಿಸಿಕೊಳ್ಳುತ್ತಾ, ನಾನು ಬೆಂಗಳೂರಿಗೆ ಹಿಂತಿರುಗಲು ಬಯಸುತ್ತೇನೆ ಎಂದು ನನಗೆ ಅನಿಸಿತು. ನಾನು ನನ್ನ ನಗರಕ್ಕೆ ಹಿಂತಿರುಗಲು ಬಯಸುತ್ತೇನೆ. ಇಲ್ಲಿನ ವಾತಾವರಣವು ಬೆಚ್ಚಗಿನ ಅಪ್ಪುಗೆಯಂತೆ ಭಾಸವಾಗುತ್ತದೆ. ಪ್ರತಿ ಏರಿಳಿತದಲ್ಲಿ ತನ್ನೊಂದಿಗೆ ನಿಂತಿದ್ದಕ್ಕಾಗಿ ಈ ನಗರಕ್ಕೆ ಧನ್ಯವಾದ. ಈ ನಗರವು ಎಲ್ಲಾ ಏರಿಳಿತಗಳನ್ನು ಕಂಡಿದೆ ಮತ್ತು ನನ್ನನ್ನು ತುಂಬಾ ಬಲಶಾಲಿಯನ್ನಾಗಿ ಮಾಡಿದೆ ಎಂದು ಹೇಳಿರುವುದನ್ನು ನೋಡಬಹುದು.
ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಬೆಂಗಳೂರು ನಿಜವಾಗಿಯೂ ಅದ್ಭುತ ನಗರ. ನಾನು ಈ ನಗರವನ್ನು ತುಂಬಾ ಪ್ರೀತಿಸುತ್ತೇನೆ” ಎಂದು ಹೇಳಿದ್ದಾರೆ. ಮತ್ತೊಬ್ಬರು ದೇವರ ಯೋಜನೆಯನ್ನು ನಂಬಿರಿ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಬೆಂಗಳೂರಿನ ಮೇಲಿನ ನಿಮ್ಮ ಪ್ರೀತಿ ಅಪ್ರತಿಮ ಎಂದಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬಿ-ಖಾತಾ ಹೊಂದಿರುವ ಅಪಾರ್ಟ್ಮೆಂಟ್ ಮಾಲೀಕರು ಎ-ಖಾತಾಗೆ ಕನ್ವರ್ಟ್ ಆಗೋದು ಹೇಗೆ? ಇಲ್ಲಿದೆ ಮಾಹಿತಿ
ಬೆಂಗಳೂರು, ಜನವರಿ 12: ನವೆಂಬರ್ 1 ರಿಂದ ಬಿ-ಖಾತಾ ಆಸ್ತಿ ದಾಖಲೆಗಳ ಎ-ಖಾತಾ ಪರಿವರ್ತನೆಗೆ ಇ- ಖಾತಾ ಹೊಂದಿರುವುದು ಅಗತ್ಯ ಎಂದು GBAಹೇಳಿತ್ತು. ಈ ಹಿನ್ನೆಲೆ ರಾಜ್ಯದಲ್ಲಿ ಆಸ್ತಿ ನೋಂದಣಿ ಹಾಗೂ ರಿಯಲ್ ಎಸ್ಟೇಟ್ ವಹಿವಾಟುಗಳಲ್ಲಿ ಪಾರದರ್ಶಕತೆ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಎ-ಖಾತಾ ನೀಡುವ ಪ್ರಕ್ರಿಯೆಗೆ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸಿದೆ . ಈ ನಿಯಮಗಳು ವಿಶೇಷವಾಗಿ ಬಿ-ಖಾತಾ ಹೊಂದಿರುವ ಅನುಮೋದಿತ ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ಗಳಿಗೆ ಮಹತ್ವದ್ದಾಗಿವೆ.
ಇ-ಖಾತಾ ದೊರಕಿದ ನಂತರವೇ ಎ-ಖಾತಾಗೆ ಅರ್ಜಿ
ಅಧಿಕಾರಿಗಳು ಹೇಳುವಂತೆ ಅನುಮೋದಿತ ಲೇಔಟ್ಗಳು ಹಾಗೂ ಅನುಮೋದಿತ ಕಟ್ಟಡಗಳಲ್ಲಿನ ಫ್ಲಾಟ್ ಮಾಲೀಕರು ಈಗ ಎ-ಖಾತಾಗೆ ಅರ್ಜಿ ಸಲ್ಲಿಸಬಹುದು. ಆದರೆ ಅದಕ್ಕೂ ಮೊದಲು ಪ್ರತಿಯೊಬ್ಬ ಫ್ಲಾಟ್ ಮಾಲೀಕರು ಕಡ್ಡಾಯವಾಗಿ ಆನ್ಲೈನ್ ಪೋರ್ಟಲ್ ಮೂಲಕ ಇ-ಖಾತಾ ಪಡೆಯಬೇಕು. ಇ-ಖಾತಾ ದೊರಕಿದ ನಂತರವೇ ಎ-ಖಾತಾ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ. ಪ್ರತ್ಯೇಕ ಫ್ಲಾಟ್ ಮಾಲೀಕರಿಂದ ವೈಯಕ್ತಿಕ ಅರ್ಜಿಯೇ ಕಡ್ಡಾಯವಾಗಿದೆ.
ಪರಿಷ್ಕೃತ ವ್ಯವಸ್ಥೆಯಡಿ ಮಾಲೀಕರು ತಮ್ಮ ಮಾಲೀಕತ್ವದ ದಾಖಲೆಗಳು ಹಾಗೂ ಆಸ್ತಿ ತೆರಿಗೆ ಪಾವತಿ ವಿವರಗಳನ್ನು ಅಪ್ಲೋಡ್ ಮಾಡಿ ಇ-ಖಾತಾಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಹತೆಗೆ ಪ್ರಸ್ತುತ ವರ್ಷದ ಆಸ್ತಿ ತೆರಿಗೆಯ ಸಂಪೂರ್ಣ ಪಾವತಿ, ಮಂಜೂರಾದ ಕಟ್ಟಡ ಯೋಜನೆ ಹಾಗೂ ಬಿ-ಖಾತಾ ಹೊಂದಿರುವ ಭೂಮಿಯ ದಾಖಲೆಗಳನ್ನು ಹೊಂದಿರುವುದು ಅಗತ್ಯವಾಗಿದೆ. 1961ರ ಪುರಸಭೆ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದ ಅಪಾರ್ಟ್ಮೆಂಟ್ಗಳನ್ನೂ ಎ-ಖಾತಾಗೆ ಪರಿಗಣಿಸಬಹುದು. ಆದರೆ ಉಲ್ಲಂಘನೆಯ ಪ್ರಮಾಣದ ಆಧಾರದಲ್ಲಿ ದಂಡ ವಿಧಿಸಲಾಗುತ್ತದೆ. ಪ್ರಮುಖ ನಿರ್ಮಾಣ ಉಲ್ಲಂಘನೆಗಳಿದ್ದರೆ ಮಾರ್ಗದರ್ಶನ ಮೌಲ್ಯದ ಶೇಕಡಾ 5 ರಿಂದ 50 ರವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ.
ಚಿಕ್ಕಮಗಳೂರು, (ಜನವರಿ 12): ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಇನ್ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ ಅವಮಾನಕಾರಿ ಕಾಮೆಂಟ್ಗಳನ್ನು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಾಮನಗರ ಮೂಲದ ಯಕ್ಷಿತ್ ರಾಜ್ ಎಂಬ ಯುವಕನನ್ನು ಮೂಡಿಗೆರೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಸಂಬಂಧ ಖುದ್ದು ‘ಕೈ’ ಶಾಸಕಿ ನಯನಾ ಮೋಟಮ್ಮ ಪ್ರತಿಕ್ರಿಯಿಸಿದ್ದು, ಪರ್ಸನಲ್ ಮತ್ತು ರಾಜಕೀಯ ವಿಚಾರವಾಗಿ 2 ಇನ್ಸ್ಟಾಗ್ರಾಮ್ ಖಾತೆ ಇದೆ. ಈ ನಡುವೆ ಪರ್ಸನಲ್ ಖಾತೆಗೆ ಕೆಟ್ಟ ಕಮೆಂಟ್ ಮಾಡುತ್ತಿದ್ದಾರೆ. ವ್ಯಾಯಾಮ ಮಾಡಿದ್ರೂ ತಪ್ಪು, ಬರ್ತ್ಡೇ ಆಚರಿಸಿದ್ರೆ ತಪ್ಪಾ? ವಿಶೇಷವಾಗಿ ನಾನು ಮಹಿಳೆಯರ ಪರ ಧ್ವನಿ ಎತ್ತಿದ್ದೇನೆ.ಅಶ್ಲೀಲ ಕಮೆಂಟ್ ಸಂಬಂಧ ಕಾರ್ಯಕರ್ತರು ದೂರು ನೀಡಿದ್ದಾರೆ.ಈಗಾಗಲೇ ಆರೋಪಿಗಳನ್ನು ಅರೆಸ್ಟ್ ಕೂಡ ಮಾಡಿದ್ದಾರೆ. ನಾನು ಧೈರ್ಯವಾಗಿ ಜೀವನ ಮಾಡ್ತೇನೆ, ನನಗೆ ಯಾರ ಭಯವಿಲ್ಲ ಎಂದು ಗುಡುಗಿದರು.
ರಾಜಕೀಯಕ್ಕೆ ಪ್ರವೇಶ ಮಾಡುವ ಮುನ್ನ ನಾನು ಹೇಗಿದ್ದೆನೋ ಅದೇ ರೀತಿ ಈಗಲೂ ಇರಲು ಪ್ರಯತ್ನ ಮಾಡುತ್ತೇನೆ. ರಾಜಕೀಯ ವಿಚಾರದಲ್ಲಿ ಯಾವುದೇ ಮುಚ್ಚುಮರೆ ಇರಬಾರದು. ನಮ್ಮ ವೈಯಕ್ತಿಕ ಜೀವನ ಸಾರ್ವಜನಿಕರೊಂದಿಗೆ ಹಂಚಿಕೊಳ್ಳಬೇಕು . ನನ್ನ ಬಟ್ಟೆಗಳ ಬಗ್ಗೆ ಇನ್ಸ್ಟಾಗ್ರಾಮ್ ಎಂಎಲ್ಎ ಹಾಗೂ ಗುಂಡಿ ಮುಚ್ಚಿಲ್ಲ ಎಂದು ಪರ್ಸನಲ್ ಆಗಿ ಟಾರ್ಗೆಟ್ ಮಾಡ್ತಾರೆ. ರಾಜ್ಯದಲ್ಲಿ 11 ಮಹಿಳಾ ಶಾಸಕರಿದ್ದೇವೆ. ನನ್ನ ಇನ್ಸ್ಟಾಗ್ರಾಮ್, ಫೇಸ್ಬುಕ್ ಖಾತೆ ಜನರಿಗೆ ಇಟ್ಟಿದ್ದೇನೆ. ಇದು ತಪ್ಪಾ? ಪಾರದರ್ಶಕವಾಗಿ ಜೀವನ ಮಾಡುವುದು ತಪ್ಪಾ? ಇದೆ ಕಾರಣಕ್ಕೆ ರಾಜಕಾರಣಿಗಳು ವೈಯಕ್ತಿಕ ಜೀವನ ಮುಚ್ಚಿಡ್ತಾರೆ . ನಾವು ಸಾರ್ವಜನಿಕ ಜೀವನದಲ್ಲಿದ್ದೇನೆ, ಜಿಗುಪ್ಸೆ ಮತ್ತು ಹಿಂಸೆ ಆಗುತ್ತಿದೆ ಎಂದು ಅಸಮಾಧಾನ ಹೊರಹಾಕಿದರು.
ಹುಬ್ಬಳ್ಳಿ, ಜನವರಿ 12: ಮಹಿಳೆಯೋರ್ವಳ ಜೊತೆಗೆ ಅಕ್ರಮ ಸಂಬಂಧದ ಕಾರಣ ಆಕೆಯ ಕುಟುಂಬಸ್ಥರಿಂದ ಗಂಭೀರ ಹಲ್ಲೆಗೆ ಒಳಗಾಗಿದ್ದ ಹುಬ್ಬಳ್ಳಿ ಕಾನೂನು ವಿಶ್ವ ವಿದ್ಯಾಲಯದ ಎಂಜಿನಿಯರ್ ವಿಠ್ಠಲ್ ರಾಠೋಡ್(60) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಹುಬ್ಬಳ್ಳಿಯ ನವನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಡಿ.10ರಂದು ವಿಠ್ಠಲ್ ಅವರ ಮೇಲೆ ಹಲ್ಲೆ ನಡೆದಿತ್ತು.
ಹಲ್ಲೆ ನಡೆಸಿ ನಾಟಕವಾಡಿದ್ದ ಆರೋಪಿಗಳು
ಕಾನೂನು ವಿವಿಯಲ್ಲಿ ಗುತ್ತಿಗೆ ಕೆಲಸ ಪಡೆದಿದ್ದ ವಿಠ್ಠಲ್ ರಾಠೋಡ್ ಬಳಿ 4-5 ವರ್ಷಗಳಿಂದ ಛತ್ತೀಸ್ಗಢ ಮೂಲದ ಕುಟುಂಬವೊಂದು ಕೆಲಸ ಮಾಡುತ್ತಿತ್ತು. ಆ ಪೈಕಿ ವಿಮಾಲ ಜೊತೆ ವಿಠ್ಠಲ್ ರಾಠೋಡ್ ಅನೈತಿಕ ಸಂಬಂಧ ಹೊಂದಿದ್ದರು. ಇದೇ ವಿಚಾರಕ್ಕೆ ಅನೇಕ ಬಾರಿ ಜಗಳ ಕೂಡ ನಡೆದಿತ್ತು. ಜನವರಿ 10ರ ರಾತ್ರಿ ಕೂಡ ಇದೇ ವಿಚಾರಕ್ಕೆ ಮತ್ತೆ ಗಲಾಟೆಯಾಗಿದ್ದು, ಆ ವೇಳೆ ವಿಠ್ಠಲ್ ಮೇಲೆ ಮೇಘವ್ ಮತ್ತು ಭಗವಾನದಾಸ್ ಹಲ್ಲೆ ಮಾಡಿದ್ದರು. ಬಳಿಕ ಮದ್ಯ ಸೇವಿಸಿ ಬಿದ್ದು ವಿಠ್ಠಲ್ ಗಾಯಗೊಂಡಿರೋದಾಗಿ ಬಿಂಬಿಸಿದ್ದರು. ಗಂಭೀರ ಗಾಯಗೊಂಡಿದ್ದ ಅವರನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಕಳೆದೆರಡು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆಗೆ ಫಲಕಾರಿಯಾಗದೆ ಅವರಿಂದು ಕೊನೆಯುಸಿರೆಳೆದಿದ್ದಾರೆ.
ಘಟನೆ ಬಗ್ಗೆ ಅನುಮಾನಗೊಂಡು ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸಿದಾಗ ಪ್ರಕರಣದ ರಹಸ್ಯ ಬಯಲಾಗಿದೆ. ಛತ್ತೀಸ್ಗಢ ಮೂಲದ ದಂಪತಿ ಮತ್ತು ಮಗ ಸೇರಿ ವಿಜಯಪುರದ ಅರಕೇರಾ ತಾಂಡಾ ಮೂಲದ ನಿವಾಸಿ ವಿಠ್ಠಲ್ರನ್ನು ಕೊಂದಿದ್ದು, ಪ್ರಕರಣ ಸಂಬಂಧ ಮೇಘವ, ಭಗವಾನದಾಸ್ ಹಾಗೂ ವಿಮಲಾಳನ್ನು ಬಂಧಿಸಲಾಗಿದೆ. ಈ ಬಗ್ಗೆ ಹುಬ್ಬಳ್ಳಿಯ ನವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯೂಟ್ಯೂಬ್ನಲ್ಲಿ ರಿಲೀಸ್ ಆದ‘ಟಾಕ್ಸಿಕ್’ ಸಿನಿಮಾದ ಟೀಸರ್ ಸಾಕಷ್ಟು ಸದ್ದು ಮಾಡಿತ್ತು. ಈ ಟೀಸರ್ನ ಅಲ್ಲಿ ಹಸಿಬಿಸಿ ದೃಶ್ಯಗಳು ಇದ್ದವು. ಈ ಸಂಬಂಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆ ಆಗಿದೆ. ‘ನಾನು ಹಸಿಬಿಸಿ ದೃಶ್ಯ ಮಾಡೋದಿಲ್ಲ ಎಂದು ಯಶ್ ಈ ಮೊದಲು ಹೇಳಿದ್ದರು. ಆದರೆ, ಈಗ ರಿಲೀಸ್ ಆಗಿರುವ ಟಾಕ್ಸಿಕ್ ಅದಕ್ಕೆ ವಿರುದ್ಧವಾಗಿದೆ. ಕುಟುಂಬದವರು ಕುಳಿತು ಟೀಸರ್ನ ನೋಡೋಕೆ ಆಗುತ್ತಾ? ಅದನ್ನು ತೆಗೆದು ಹಾಕಿ’ ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ಒತ್ತಾಯಿಸಿದೆ.