Headlines

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಸ್ವಾರ್ಥದ ಪರವಾಗಿ ಯೋಚಿಸಿ, ದುಃಖ – Kannada News | Horoscope April 19 Sunday 2026; Dina Rashi Bhavishya Today, Checkout the details here

ಮೇಷ ರಾಶಿ: ಬಾಂಧವ್ಯದಲ್ಲಿ ಅಭಿಪ್ರಾಯ ಭೇದದಿಂದ ಕಲಹವಾಗಬಹುದು. ಹಣದ ನಷ್ಟದ ಸಂಭವವಿದೆ. ದೂರದ ಬಂಧುಗಳಿಂದ‌ ಕಾರ್ಯ ಮಾಡಬಹುದು. ವಿದ್ಯಾರ್ಥಿಗಳ ಸಾಧನೆಯ ಹಾದಿಯು ಸುಗಮವಾಗುವುದು. ಸ್ವಂತ ಭೂಮಿ ಅಥವಾ ಮನೆಯನ್ನು ಕೊಳ್ಳುವ ವಿಚಾರವೊರುವುದು. ದೂರಪ್ರಯಾಣದಿಂದ ಆತಂಕ ಸೃಷ್ಟಯಾಗಬಹುದು. ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಬಹುದು. ಅತಿಯಾದ ನಿದ್ರೆಯಿಂದ ಮನಸ್ಸು ಕುಗ್ಗುವುದು. ವೃಷಭ ರಾಶಿ: ಹೊಸ ಪರಿಚಯಗಳಿಂದ ದೂರವಿರಲು ಪ್ರಯತ್ನಿಸಿ. ತಮ್ಮಂದಿರು ಮತ್ತು ಅಣ್ಣಂದಿರೊಡನೆ ಜಗಳ ಆಗದಂತೆ ನೋಡಿಕೊಳ್ಳಿ. ಕೆಲ ಕೆಲಸಗಳು ವಿಳಂಬವಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಬಡ್ತಿ ದೊರೆತು…

Read More

SRH vs CSK: ಸನ್‌ರೈಸರ್ಸ್ ವಿರುದ್ಧ 10 ರನ್​ಗಳಿಂದ ಸೋತ ಸಿಎಸ್​ಕೆ

ಐಪಿಎಲ್ 2026 ರ 27 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಸಿಎಸ್​ಕೆ ತಂಡವನ್ನು ಮಣಿಸಿದ ಸನ್‌ರೈಸರ್ಸ್ ಲೀಗ್​ನಲ್ಲಿ ಮೂರನೇ ಗೆಲುವು ದಾಖಲಿಸುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಇತ್ತ ಕಳೆದೆರಡು ಪಂದ್ಯಗಳಲ್ಲಿ ಗೆದ್ದು ಗೆಲುವಿನ ಹಾದಿಗೆ ಮರಳಿದ್ದ ಸಿಎಸ್​ಕೆ ಮತ್ತೆ ಸೋಲಿನ ಸುಳಿಗೆ ಸಿಲುಕಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ತಂಡ 194 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಸಿಎಸ್​ಕೆ…

Read More

ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ – Kannada News | Arul Selvam cycle tour to Tamil Nadu supporting Thalapathy Vijay

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಅವರು ರಾಜಕೀಯಕ್ಕೆ ಧುಮುಕಿದ್ದು ಟಿವಿಕೆ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿ, ತಮಿಳುನಾಡು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಭರ್ಜರಿಯಾಗಿ ರಾಜ್ಯದಾದ್ಯಂತ ಪ್ರಚಾರ ಮಾಡುತ್ತಿರುವ ದಳಪತಿ ವಿಜಯ್ ಅವರು ಖುದ್ದಾಗಿ ಎರಡು ಕ್ಷೇತ್ರಗಳಿಂದ ಚುನಾವಣೆಗೂ ಸಹ ಸ್ಪರ್ಧೆ ಮಾಡಿದ್ದಾರೆ. ದಳಪತಿ ವಿಜಯ್ ಅವರಿಗೆ ಉತ್ತಮ ಬೆಂಬಲ ತಮಿಳುನಾಡಿನಲ್ಲಿ ವ್ಯಕ್ತವಾಗುತ್ತಿದೆ. ಇದೀಗ ಮೈಸೂರಿನಿಂದ ಅರುಳ್ ಸೆಲ್ವಂ ಹೆಸರಿನ ಯುವಕ ಸೈಕಲ್ ಯಾತ್ರೆ ಮಾಡಿಕೊಂಡು ತಮಿಳುನಾಡಿಗೆ ಹೋಗಿ ವಿಜಯ್​ಗೆ ಬೆಂಬಲ ಸೂಚಿಸಲಿದ್ದಾರೆ. ಇಲ್ಲಿದೆ…

Read More

ಈ ರಾಶಿಗೆ ಶುಕ್ರನ ಪ್ರವೇಶ: ಒಂದಲ್ಲ 10 ರಾಜ ಯೋಗ, ಆದರೆ ಈ ನಿರ್ಧಾರದಿಂದ ಜೀವನವೇ ನಾಶವಾಗಬಹುದು – Kannada News | Taurus Monthly Astrology: Planetary Transits, Shubha

ಈ ತಿಂಗಳು ವೃಷಭ ರಾಶಿಯವರಿಗೆ ಹೆಚ್ಚು ಮಿಶ್ರ ಫಲಗಳಿಂದ ಕೂಡಿದೆ. ರಾಶ್ಯಾಧಿಪತಿ ಶುಕ್ರನ ಸಂಚಾರ ಮತ್ತು ಪ್ರಭಾವವು ಜೀವನದ ವಿವಿಧ ಆಯಾಮಗಳ ಮೇಲೆ ನೇರ ಪರಿಣಾಮ ಬೀರಲಿದೆ. ಶುಕ್ರನು ನಿಮ್ಮ ರಾಶಿಯಲ್ಲಿ ಸಂಚಾರವಾಗಲಿದೆ ಮತ್ತು ಶನಿಯು ಈ ರಾಶಿಯ ಮೇಲೆ ದೃಷ್ಟಿ ಇಡುವನು. ಆಗಾಗ ಉಂಟಾಗುವ ಚಂದ್ರನ ಸಂಯೋಗ ಮತ್ತು ದೃಷ್ಟಿಯಿಂದ ಮಾನಸಿಕ ಸ್ಥಿತಿಯೂ ವಿಚಿತ್ರವಾಗಬಹುದು. ​ ಶುಭ ದಶೆ ​ಶುಕ್ರ ದಶೆ : ನಿಮ್ಮ ರಾಶ್ಯಾಧಿಪತಿಯಾದ ಶುಕ್ರನು ಬಲವಾಗಿದ್ದರೆ, ಈ ತಿಂಗಳು ಸುಖ-ಸಂತೋಷದ ವೃದ್ಧಿಯಾಗಲಿದೆ. ಹೊಸ…

Read More

ಸದ್ದಿಲ್ಲದೆ ಮದುವೆಯಾದರೆ ನಟಿ ಮಲೈಕಾ ವಸುಪಾಲ್? ಸತ್ಯಾಂಶವೇನು? – Kannada News | Did Malaika Vasupal got married, new video creates doubt

ಕನ್ನಡ ಕಿರುತೆರೆ (Serial) ಮತ್ತು ಹಿರಿತೆರೆ ಎರಡರಲ್ಲೂ ಮಿಂಚುತ್ತಿರುವ ನಟಿ ಮಲೈಕಾ ವಸುಪಾಲ್ (Malaika Vasupal). ಧಾರಾವಾಹಿ ಮೂಲಕ ನಟನೆ ಪ್ರವೇಶಿಸಿದ ಇದೀಗ ನಾಯಕಿಯಾಗಿಯೂ ಸಖತ್ ಆಗಿ ಮಿಂಚುತ್ತಿದ್ದಾರೆ. ಆದರೆ ಇದೀಗ ಅವರ ವಿಡಿಯೋ ಒಂದು ವೈರಲ್ ಆಗಿದ್ದು, ವಿಡಿಯೋನಲ್ಲಿ ಮಲೈಕಾ ವಸುಪಾಲ್ ಅವರು ವಧುವಿನ ವೇಷ-ಭೂಷಣದಲ್ಲಿ ಕಂಗೊಳಿಸುತ್ತಿದ್ದಾರೆ. ಯೂಟ್ಯೂಬ್ ಚಾನಲ್‌ ಒಂದರಲ್ಲಿ ಮಲೈಕಾ ಅವರ ವಿಡಿಯೋ ಹಂಚಿಕೆ ಆಗಿದ್ದು, ವಿಡಿಯೋ ನೋಡಿದವರು ಇದೇನು ಮಲೈಕಾ ಮದುವೆ ಆಗಿಬಿಟ್ಟರೆ ಎಂದು ಹುಬ್ಬೇರಿಸಿದ್ದಾರೆ. ವೈರಲ್ ಆಗಿರುವ ಈ ವಿಡಿಯೋದಲ್ಲಿ…

Read More

ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆ ಬೆನ್ನಲ್ಲೇ ಕೆಇಎ ಫುಲ್​​ ಅಲರ್ಟ್: ವಿವಾದ ತಡೆಯಲು ಮಾಸ್ಟರ್ ಪ್ಲಾನ್ – Kannada News | Karnataka CET Exam Dress Code: KEA’s New Plan to Prevent Controversies and Ensure Smooth Exams

ಬೆಂಗಳೂರು, ಏಪ್ರಿಲ್​ 18: ಕಳೆದ ವರ್ಷ ಸಿಇಟಿ ಪರೀಕ್ಷೆ (CET Exam) ವೇಳೆ ಜನಿವಾರ ಮತ್ತು ಹಿಜಾಬ್ ವಿಚಾರವಾಗಿ ಉಂಟಾಗಿದ್ದ ವಿವಾದಗಳಿಂದ ಎಚ್ಚೆತ್ತುಕೊಂಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA), ಈ ಬಾರಿ ಪರೀಕ್ಷಾ ಕೇಂದ್ರಗಳಲ್ಲಿ ಗೊಂದಲ ತಡೆಯಲು ಹೊಸ ತಂತ್ರ ರೂಪಿಸಿದೆ. ಏಪ್ರಿಲ್ 23 ಮತ್ತು 24ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಕೆಇಎ ಈಗಿನಿಂದಲೇ ಫುಲ್ ಅಲರ್ಟ್ ಆಗಿದೆ. ಕಳೆದ ವರ್ಷ ಶಿವಮೊಗ್ಗ ಮತ್ತು ಬೀದರ್‌ನಲ್ಲಿ ಪರೀಕ್ಷಾರ್ಥಿಗಳ ತಪಾಸಣೆ ವೇಳೆ ಜನಿವಾರ ತೆಗೆಸಿದ್ದು ದೊಡ್ಡ ಮಟ್ಟದ ಆಕ್ರೋಶಕ್ಕೆ…

Read More

“ನಾವು ತೆರಿಗೆ​​​ ಕಟ್ಟುತ್ತೇವೆ ಶೇ.80ರಷ್ಟು ನಮಗೇ ಕೊಡಿ”: ಸಿಎಂ ಸಮ್ಮುಖದಲ್ಲೇ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ ಸುಪ್ರೀಂ ಕೋರ್ಟ್ ಜಡ್ಜ್ – Kannada News | Judicial Backlog: Karnataka Govt Hinders Justice, Reduces Posts Justice Arvind Kumar

ಬೆಂಗಳೂರು, ಏ.18: ಕರ್ನಾಟಕ ರಾಜ್ಯದಲ್ಲಿ ನ್ಯಾಯಾಂಗ ವ್ಯವಸ್ಥೆಯ ಬಲವರ್ಧನೆಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ರಾಜ್ಯ ಸರ್ಕಾರದ ಅಧಿಕಾರಿಗಳು ಮಂದಗತಿಯಲ್ಲಿ ವಿಲೇವಾರಿ ಮಾಡುತ್ತಿರುವುದು ಹಾಗೂ ಹುದ್ದೆಗಳ ಸಂಖ್ಯೆಯನ್ನು ಕಡಿತಗೊಳಿಸುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಅರವಿಂದ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಲೋಕಾಯುಕ್ತ ತನ್ನ 40 ವರ್ಷಗಳ ಅರ್ಥಪೂರ್ಣ ಸೇವೆಯನ್ನು ಯಶಸ್ವಿಯಾಗಿ ಪೂರೈಸಿದೆ. ಈ ಸಾರ್ಥಕ ಪಯಣದ ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನ್ಯಾಯಾಂಗದ ಮುಂದಿರುವ ಸವಾಲುಗಳನ್ನು ಅಂಕಿಅಂಶಗಳ ಸಮೇತ ವಿವರಿಸಿದರು. 2023 ರಲ್ಲಿ ರಾಜ್ಯದಲ್ಲಿ…

Read More

ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​ ಹತ್ಯೆ – Kannada News | Ukraine Police Killed Gunman After 5 Dead In Supermarket shootout

ಕೈವ್, ಏಪ್ರಿಲ್ 18: ಉಕ್ರೇನ್ ರಾಜಧಾನಿ ಕೈವ್‌ನಲ್ಲಿನ ಸೂಪರ್ ಮಾರ್ಕೆಟ್​​ನಲ್ಲಿ ಇಂದು ರಾತ್ರಿ ಬಂದೂಕುಧಾರಿಯೊಬ್ಬ ಗುಂಡು ಹಾರಿಸಿ 5 ಜನರನ್ನು ಕೊಂದಿದ್ದ. ಈ ದಾಳಿಯಲ್ಲಿ ಹಲವಾರು ಜನರು ಗಾಯಗೊಂಡಿದ್ದರು. ಇದಾದ ನಂತರ ದಾಳಿಕೋರ ಹಲವರನ್ನು ಸೂಪರ್‌ಮಾರ್ಕೆಟ್‌ನೊಳಗೆ ಒತ್ತೆಯಾಳಾಗಿರಿಸಿಕೊಂಡಿದ್ದ. ಕೊನೆಗೂ ಉಕ್ರೇನ್ ಪೊಲೀಸ್ ಕಾರ್ಯಾಚರಣೆಯ ಸಮಯದಲ್ಲಿ ಆತನನ್ನು ಕೊಲ್ಲಲಾಗಿದೆ. ಆ ಶೂಟರ್ ಜನರನ್ನು ಒತ್ತೆಯಾಳಾಗಿ ಇಟ್ಟುಕೊಂಡು, ಘರ್ಷಣೆಯ ಸಮಯದಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ಗುಂಡು ಹಾರಿಸಿದ್ದ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  Source link

Read More

ಬೆಂಗಳೂರಿನಲ್ಲಿ ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ! – Kannada News | Viral Frying Pan Helmet in Bengaluru: HSR Layout Youth’s Stunt Raises Safety Concerns

ಬೆಂಗಳೂರು, ಏ.18: ಸಿಲಿಕಾನ್ ಸಿಟಿಯ ಟ್ರಾಫಿಕ್ ನಡುವೆ ವಿಲಕ್ಷಣ ಘಟನೆಗಳಿಗೇನೂ ಕೊರತೆಯಿಲ್ಲ. ಆದರೆ ಈಗ ಹೊರರಾಜ್ಯದ ಯುವಕನೊಬ್ಬ ಮಾಡಿರುವ ‘ಹುಚ್ಚಾಟ’ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಟ್ರಾಫಿಕ್ ಪೊಲೀಸರ ದಂಡದಿಂದ ತಪ್ಪಿಸಿಕೊಳ್ಳಲು ಅಥವಾ ಟ್ರೋಲ್ ಆಗಲು ಈ ಯುವಕ ಹೆಲ್ಮೆಟ್ ಬದಲಿಗೆ ಅಡುಗೆ ಮನೆಯಲ್ಲಿ ಬಳಸುವ ಬಾಂಡ್ಲಿಯನ್ನು (Frying Pan) ತಲೆ ಮೇಲೆ ಇಟ್ಟುಕೊಂಡು ಬೈಕ್ ಸವಾರಿ ಮಾಡಿದ್ದಾನೆ. ಬೆಂಗಳೂರಿನ ಎಚ್.ಎಸ್.ಆರ್ ಲೇಔಟ್ (HSR Layout) ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ರೂಪೇನಾ ಅಗ್ರಹಾರ ಬಳಿ…

Read More

ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ – Kannada News | Adivi Sesh visited Bengaluru theater, interacted with fans

ತೆಲುಗು ಚಿತ್ರರಂಗದ ನಟ ಅಡಿವಿಶೇಷ್ (Adivishesh) ನಟನೆಯ ‘ಡಕಾಯತ್’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ನಿನ್ನೆ ಬೆಂಗಳೂರಿನ ಜಿಟಿ ಮಾಲ್​​ಗೆ ಬಂದಿದ್ದ ಅಡಿವಿಶೇಷ್, ಮಾಲ್​​ನಲ್ಲಿ ತಮ್ಮ ಸಿನಿಮಾ ಪ್ರದರ್ಶನ ಆಗುತ್ತಿದ್ದ ಸಮಯದಲ್ಲಿ ಬಂದು ಪ್ರೇಕ್ಷಕರೊಡನೆ ಮಾತನಾಡಿದರು. ಈ ವೇಳೆ ನಟ ಅಡಿವಿಶೇಷ್ ಅವರೊಟ್ಟಿಗೆ ಕೈಕುಲುಕಲು ಜನ ಮುಗಿಬಿದ್ದರು. ಪ್ರೇಕ್ಷಕರೊಟ್ಟಿಗೆ ಮಾತನಾಡಿದ ಅಡಿವಿಶೇಷ್, ತಮ್ಮ ಸಿನಿಮಾಕ್ಕೆ ಪ್ರೀತಿ ನೀಡುತ್ತಿರುವುದಕ್ಕೆ ಧನ್ಯವಾದ ಅರ್ಪಿಸಿದರು. ಅವರೊಟ್ಟಿಗೆ ನಟ, ನಿರ್ದೇಶಕ ಅನುರಾಗ್ ಕಶ್ಯಪ್ ಸಹ ಇದ್ದರು. ಸಿನಿಮಾ…

Read More