ರಾಜಕೀಯ ಸ್ವರೂಪ ಪಡೆದುಕೊಂಡ ಕೊಪ್ಪಳ ಲವ್ ಜಿಹಾದ್ ಪ್ರಕರಣ​: ಎಸ್ಪಿ ಭೇಟಿ ಮಾಡಿದ ಬಿಜೆಪಿ ನಿಯೋಗ – Kannada News | Love jihad case takes political turn: BJP delegation meets SP

ಬಿಜೆಪಿ ನಿಯೋಗ, ಮುಸ್ತಫಾ ಖಾದ್ರಿ, ಹಿಂದೂ ಯುವತಿImage Credit source: tv9 kannada

ಕೊಪ್ಪಳ, ಏಪ್ರಿಲ್​ 17: ಜಿಲ್ಲೆಯಲ್ಲಿ ಈಗ ಲವ್ ಜಿಹಾದ್ (Love Jihad) ಆತಂಕ ಮನೆಮಾಡಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಲವ್ ಜಿಹಾದ್ ಚರ್ಚೆ ಜೋರಾಗಿದೆ. ಮುಸ್ತಫಾ ಖಾದ್ರಿ ಎಂಬಾತನ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳು ಜಿಲ್ಲೆಯಲ್ಲಿ ಸಂಚಲನ ಮೂಡಿಸಿವೆ. 16 ಯುವತಿಯರ ಸಾವಿರಾರು ವಿಡಿಯೋಗಳು ಆತನ ಫೋನ್‌ನಲ್ಲಿ ಪತ್ತೆಯಾಗಿವೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದ ಬೆನ್ನಲ್ಲೇ ಇದೀಗ ಬಿಜೆಪಿ (BJP) ನಿಯೋಗ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಕೂಡಲೇ ಕ್ರಮಕ್ಕೆ ಆಗ್ರಹಿಸಿದೆ. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಬಿಜೆಪಿ‌ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಎಸ್ಪಿ ಕಚೇರಿಗೆ ಭೇಟಿ ನೀಡಿದ ಬಿಜೆಪಿ ನಿಯೋಗ

ಕೊಪ್ಪಳದಲ್ಲಿ ಈಗ ಮುಸ್ತಫಾ ಖಾದ್ರಿ ಎಂಬಾತನ ವಿರುದ್ಧ ಕೇಳಿಬಂದಿರುವ ಆರೋಪಗಳು ಆಕ್ರೋಶದ ಕಟ್ಟೆ ಒಡೆಯುವಂತೆ ಮಾಡಿದೆ. ಲವ್ ಜಿಹಾದ್ ಕೃತ್ಯ ಎಸಗುತ್ತಿರುವ ಆರೋಪ ಹಿನ್ನಲೆ ಮುಸ್ತಫಾ ವಿರುದ್ಧ ಈವರೆಗೂ ಕ್ರಮಕೈಗೊಳ್ಳದ ಹಿನ್ನೆಲೆ, ಇಂದು ಎಂಎಲ್‌ಸಿ ಹೇಮಲತಾ ನಾಯಕ್ ನೇತೃತ್ವದಲ್ಲಿ ಬಿಜೆಪಿ ನಿಯೋಗ ಎಸ್‌ಪಿ ಡಾ. ರಾಮ್ ಎಲ್. ಅರಸಿದ್ದಿ ಅವರಿಗೆ ಮನವಿ ಸಲ್ಲಿಸಿದೆ.

ಮತಾಂತರ ಆರೋಪ

ಬಿಜೆಪಿ ನಾಯಕರ ಆರೋಪದ ಪ್ರಕಾರ ಮುಸ್ತಫಾ ಖಾದ್ರಿ ಅಮಾಯಕ ಹಿಂದೂ ಯುವತಿಯರನ್ನು ಪುಸಲಾಯಿಸಿ ಮತಾಂತರ ಮಾಡಲು ಪ್ರಯತ್ನಿಸಿದ್ದಾನೆ. ಆತನ ಮೊಬೈಲ್ ಫೋನ್‌ನಲ್ಲಿ ಬರೋಬ್ಬರಿ 16 ಜನ ಹಿಂದೂ ಯುವತಿಯರ 9 ಸಾವಿರ ವಿಡಿಯೋಗಳು ಹಾಗೂ 7ಸಾವಿರಕ್ಕೂ ಅಧಿಕ ಫೋಟೋಗಳು ಪತ್ತೆಯಾಗಿವೆ ಎನ್ನುತ್ತಿದ್ದಾರೆ. ಕೂಡಲೇ ಆತನ ವಿರುದ್ದ ಕ್ರಮಕೈಗೊಳ್ಳಬೇಕೆಂದು ಬಿಜೆಪಿ ನಾಯಕರು ಎಸ್​​​ಪಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ: “ನನ್ನನ್ನ ಯಾಕೆ ಮದುವೆಯಾಗಲ್ಲ?”: ನಡುರಸ್ತೆಯಲ್ಲೇ ಯುವತಿಯನ್ನು ಬೆದರಿಸಿದ ಮುಸ್ತಫಾ ಖಾದ್ರಿ; ವಿಡಿಯೋ ವೈರಲ್

ಪೊಲೀಸ್ ಇಲಾಖೆಯ ವಿಳಂಬ ಧೋರಣೆ ವಿರುದ್ಧ ಬಿಜೆಪಿ ನಾಯಕರು ಕೆಂಡಾಮಂಡಲವಾಗಿದ್ದಾರೆ.  ಎಫ್‌ಎಸ್‌ಎಲ್ ವರದಿ ಬರುವ ಮುನ್ನವೇ ಆ ವಿಡಿಯೋಗಳು ವೈರಲ್ ಆದರೆ ಅಮಾಯಕ ಯುವತಿಯರ ಗತಿ ಏನು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, ಸ್ಥಳೀಯ ಶಾಸಕರು ಮತ್ತು ಸಂಸದರ ಒತ್ತಡಕ್ಕೆ ಮಣಿದು ಪೊಲೀಸರು ಮುಸ್ತಫಾನನ್ನು ಬಂಧಿಸುತ್ತಿಲ್ಲ ಎಂಬ ಗಂಭೀರ ಆರೋಪವೂ ಮಾಡಿದ್ದಾರೆ.

ಹೋರಾಟದ ಎಚ್ಚರಿಕೆ

ಗಾಂಜಾ, ಹುಕ್ಕಾ ಅಥವಾ ಮಟ್ಕಾ ದಂಧೆಗೆ ಸಂಬಂಧಿಸಿದ ವಿಡಿಯೋ ಕೂಡ ವೈರಲ್ ಆಗಿವೆ. ಮುಸ್ತಫಾ ಕೇವಲ ಲವ್ ಜಿಹಾದ್ ಆರೋಪಿಯಷ್ಟೇ ಅಲ್ಲ, ಆತ ಮಟ್ಕಾ ಕಿಂಗ್ ಪಿನ್ ಕೂಡ ಆಗಿದ್ದಾನೆ. ಗಾಂಜಾ ಸೇವನೆಯ ವಿಡಿಯೋಗಳು ಲಭ್ಯವಿದ್ದರೂ, ನಿಷೇಧಿತ ಹುಕ್ಕಾ ಆತನಿಗೆ ಎಲ್ಲಿಂದ ಸಿಗುತ್ತಿದೆ ಎಂದು ಪ್ರಶ್ನಿಸಿರುವ ಬಿಜೆಪಿ, ಆತನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದು, ಮುಸ್ತಫಾ ಬಂಧನವಾಗದೆ ಹೋದರೆ ಹೋರಾಟ ಮಾಡಲಾಗವುದು ಎಂದಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್ ಪ್ರಕರಣ: 9000 ವಿಡಿಯೋ, ಫೋಟೋ ಪತ್ತೆಯಾದ್ರೂ ಅರೆಸ್ಟ್ ಇಲ್ಲವೇಕೆ? ಪೊಲೀಸರಿಗೆ ಕಾಂಗ್ರೆಸ್​ ಶಾಸಕರಿಂದ ಒತ್ತಡ ಆರೋಪ

ಸದ್ಯ ಎಸ್‌ಪಿ ಕಚೇರಿಗೆ ಮನವಿ ಸಲ್ಲಿಸಿರುವ ಬಿಜೆಪಿ, ಒಂದು ವೇಳೆ ಪೊಲೀಸರು ಕೂಡಲೇ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಬೃಹತ್ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಮತ್ತೊಂದು ಕಡೆ ಪ್ರಕರಣ ರಾಜಕೀಯ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಮುಸ್ತಫಾ ಬಳಿ ಇದ್ದ ಮೊಬೈಲ್​ಗಳು ಇದುವರೆಗೂ ಓಪನ್ ಆಗಿಲ್ಲ, ಮೊಬೈಲ್ ಓಪನ್ ಆದ ಬಳಿಕವೇ ಪ್ರಕರಣದ ಅಸಲಿಯತ್ತು ಬಯಲಾಗಲಿದೆ. ಎರಡು ಮೊಬೈಲ್​​ಗಳನ್ನ ಪೊಲೀಸರು ಎಫ್​ಎಸ್​ಎಲ್​​ಗೆ ರವಾನೆ ಮಾಡಿದ್ದು, ಆರೋಪಿ ಮುಸ್ತಫಾರನ್ನು ಕರೆದು ವಿಚಾರಣೆ ಮಾಡಿದ್ದಾರೆ. ಐಟಿ ಆ್ಯಕ್ಟ್ ಅಡಿಯಲ್ಲಿ ದೂರು ದಾಖಲಾದ ಕಾರಣ ಕೊಪ್ಪಳ ಸೈಬರ್ ಕ್ರೈಂ ಪೊಲೀಸರು ಕರೆದು ವಿಚಾರಣೆ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ – Kannada News | ADGP Alok Kumar Conducts Thorough Inspection of Jamakhandi Prison

ಬಾಗಲಕೋಟೆ, ಏಪ್ರಿಲ್​​ 17: ಜಿಲ್ಲೆಯ ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಅವರು ಭೇಟಿ ನೀಡಿದ್ದಾರೆ. ಗೌರವ ರಕ್ಷೆ ನೀಡಿ ಅವರನ್ನು ಸ್ವಾಗತಿಸಲಾಗಿದ್ದು, ಕಾರಾಗೃಹದ ಭದ್ರತಾ ವ್ಯವಸ್ಥೆ, ಕೈದಿಗಳಿಗೆ ಒದಗಿಸಲಾಗುವ ಸೌಲಭ್ಯಗಳು ಮತ್ತು ಸ್ವಚ್ಛತಾ ಕ್ರಮಗಳ ಕುರಿತು ಅಲೋಕ್ ಕುಮಾರ್ ಈ ವೇಳೆ ಕೂಲಂಕುಷ ಪರಿಶೀಲನೆ ನಡೆಸಿದ್ದಾರೆ. ಕೈದಿಗಳೊಂದಿಗೆ ನೇರವಾಗಿ ಮಾತುಕತೆ ನಡೆಸಿರುವ ಅವರು, ಅಹವಾಲುಗಳನ್ನು ಆಲಿಸಿದ್ದಾರೆ. ಅಲ್ಲದೆ, ಕಾರಾಗೃಹದ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಶಿಸ್ತುಬದ್ಧವಾಗಿ ಮತ್ತು ಕರ್ತವ್ಯನಿಷ್ಠೆಯಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಚಾಮರಾಜನಗರ: ಅನಾರೋಗ್ಯ ಪೀಡಿತ ತಾಯಿಯನ್ನು ನೋಡಲು ಹೋದ ಪತ್ನಿಗೆ ‘ಸಾಮಾಜಿಕ ಬಹಿಷ್ಕಾರ’! – Kannada News | Inhuman Social Boycott in Chamarajanagar: Kenchamma Fights for Justice Against Elders

ಚಾಮರಾಜನಗರ, ಏ.17: ಜಿಲ್ಲೆಯ ಹನೂರು ತಾಲೂಕಿನ ಹೂಗ್ಯಂ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ನೋಡಲು ತವರು ಮನೆಗೆ ಹೋದ ಮಹಿಳೆಗೆ ಗ್ರಾಮದ ಯಜಮಾನರು ಸಾಮಾಜಿಕ ಬಹಿಷ್ಕಾರ ಹಾಕುವ ಮೂಲಕ ಅನಿಷ್ಠ ಪದ್ಧತಿಯನ್ನು ಮುಂದುವರಿಸಿದ್ದಾರೆ.ಇದೀಗ ಈ ಬಗ್ಗೆ ಭಾರೀ ಅಕ್ರೋಶ ವ್ಯಕ್ತವಾಗಿದೆ. ಯರಂಬಾಡಿ ಮೂಲದ ಕೆಂಚಮ್ಮ ಎಂಬುವವರು ಹೂಗ್ಯಂ ಗ್ರಾಮದ ರಾಮು ಎಂಬುವವರನ್ನು ವಿವಾಹವಾಗಿದ್ದರು. ಇತ್ತೀಚೆಗೆ ಕೆಂಚಮ್ಮ ಅವರ ತಾಯಿಗೆ ಆರೋಗ್ಯ ಕೈಕೊಟ್ಟ ಕಾರಣ, ಅವರನ್ನು ಉಪಚರಿಸಲು ಕೆಂಚಮ್ಮ ತವರು ಮನೆಗೆ ತೆರಳಿದ್ದರು.

ತವರು ಮನೆಯಲ್ಲಿ ಒಂದು ತಿಂಗಳಿಗೂ ಅಧಿಕ ಕಾಲ ಉಳಿದುಕೊಂಡಿದ್ದಕ್ಕೆ ಗ್ರಾಮದ ಯಜಮಾನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಂಚಮ್ಮ ವಾಪಸ್ ಬರುವುದು ತಡವಾಯಿತು ಎಂಬ ಕ್ಷುಲ್ಲಕ ಕಾರಣ ನೀಡಿ ಅವರಿಗೆ ಸಾಮಾಜಿಕ ಬಹಿಷ್ಕಾರ ವಿಧಿಸಲಾಗಿದೆ. ಬಹಿಷ್ಕಾರ ಹಿಂತೆಗೆದುಕೊಳ್ಳಬೇಕಾದರೆ ಲಕ್ಷಾಂತರ ರೂಪಾಯಿ ದಂಡ ಪಾವತಿಸಬೇಕು ಎಂದು ಗ್ರಾಮದ ಮುಖಂಡರು ಸೂಚಿಸಿದ್ದಾರೆ ಎನ್ನಲಾಗಿದೆ. ಕೇವಲ ಕೆಂಚಮ್ಮ ಮಾತ್ರವಲ್ಲದೆ, ಗ್ರಾಮದ ಇನ್ನೂ ಮೂರ್ನಾಲ್ಕು ಮಂದಿಗೆ ಇದೇ ರೀತಿ ಬಹಿಷ್ಕಾರ ಹಾಕಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಇದನ್ನೂ ಓದಿ: ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್

ಗ್ರಾಮದ ಯಜಮಾನರ ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಿರುವ ಕೆಂಚಮ್ಮ, ನ್ಯಾಯಕ್ಕಾಗಿ ರಾಮಾಪುರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಅಲ್ಲದೆ, ಅನಿಷ್ಠ ಪದ್ಧತಿಯ ವಿರುದ್ಧ ಕಾನೂನು ಹೋರಾಟ ನಡೆಸಲು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ನಾನು ನೋಡಿದ ಬೆಸ್ಟ್ ಕ್ಯಾಚ್’; ಶ್ರೇಯಸ್ ಹಿಡಿದ ಕ್ಯಾಚ್​​ಗೆ ಸಲಾಂ ಹೊಡದ ಕ್ರಿಕೆಟ್ ದೇವರು – Kannada News | Shreyas Iyer’s IPL 2026 Masterpiece Catch: Sachin Tendulkar Calls It Best Ever

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 2026 (IPL 2026) ರ 24ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ (MI vs PBKS) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಅಸಾಧಾರಣ ಕ್ಯಾಚ್ ತೆಗೆದುಕೊಳ್ಳುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು. ಶ್ರೇಯಸ್ ಅಯ್ಯರ್ ಹಿಡಿದ ಈ ಅದ್ಭುತ ಕ್ಯಾಚ್​ ಅನ್ನು ನೋಡಿದ ಮುಂಬೈ ತಂಡದ ಆಟಗಾರರು ಕೂಡ ದಿಗ್ಭ್ರಮೆಗೊಂಡಿದ್ದರು. ಅಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಶ್ರೇಯಸ್ ಅಯ್ಯರ್ (Shreyas Iyer) ಅವರ ಸಮಯ ಪ್ರಜ್ಞೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ (Sachin Tendulkar) ಕೂಡ ಶ್ರೇಯಸ್ ಅಯ್ಯರ್ ಅವರನ್ನು ಹಾಡಿ ಹೊಗಳಿದಿದ್ದಾರೆ.

ವಾಸ್ತವವಾಗಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಲಾಂಗ್ ಆನ್ ಕಡೆಗೆ ಬಿಗ್ ಶಾಟ್ ಆಡಿದರು. ಈ ವೇಳೆ ಬೌಂಡರಿ ಲೈನ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಶ್ರೇಯಸ್ ಅಯ್ಯರ್ ಗಾಳಿಯಲ್ಲಿ ಹಾರಿ ಮೊದಲು ಚೆಂಡನ್ನು ಹಿಡಿದರು. ಆ ನಂತರ, ತಾನು ಬೌಂಡರಿ ಲೈನ್‌ ಅನ್ನು ದಾಡುತ್ತಿರುವುದನ್ನು ಗಮನಿಸಿದ ಶ್ರೇಯಸ್ ಗಾಳಿಯಲ್ಲಿ ಇರುವಾಗಲೇ ಚೆಂಡನ್ನು ಮೇಲಕ್ಕೆ ಎಸೆದರು. ಈ ವೇಳೆ ಅಲ್ಲಿಯೇ ಇದ್ದ ಕ್ಸೇವಿಯರ್ ಬಾರ್ಟ್ಲೆಟ್ ಕ್ಯಾಚ್ ಪೂರ್ಣಗೊಳಿಸಿದ್ದರು.

IPL 2026: ಐಪಿಎಲ್‌ನಲ್ಲಿ ವಿಶೇಷ ತ್ರಿಶತಕ ಬಾರಿಸುವ ಹೊಸ್ತಿಲಿನಲ್ಲಿ ವಿರಾಟ್ ಕೊಹ್ಲಿ

ನಾನು ಲೈವ್ ಆಗಿ ನೋಡಿದ ಅತ್ಯುತ್ತಮ ಕ್ಯಾಚ್‌

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಚಿನ್ ತೆಂಡೂಲ್ಕರ್, ‘ಶ್ರೇಯಸ್ ಅಯ್ಯರ್ ಅವರ ಕ್ಯಾಚ್ ಕೇವಲ ಕ್ರೀಡಾಶೀಲತೆಯ ಬಗ್ಗೆ ಮಾತ್ರವಲ್ಲ, ಬದಲಿಗೆ ಆ ಕ್ಯಾಚ್ ಹಿಡಿಯುವಾಗ ಅವರು ಎಷ್ಟು ಜಾಗರೂಕರಾಗಿದ್ದರು ಎಂಬುದನ್ನು ತೋರಿಸುತ್ತದೆ. ಏಕೆಂದರೆ ಶ್ರೇಯಸ್ ಆ ಚೆಂಡಿನ ವೇಗ, ಎತ್ತರ, ಬೌಂಡರಿ ಲೈನ್ ಎಲ್ಲಿದೆ? ಎಂಬುದನ್ನೆಲ್ಲ ಗಮನದಲ್ಲಿಟ್ಟುಕೊಂಡಿರಬೇಕಿತ್ತು. ಇದರ ಜೊತೆಗೆ ಬೌಂಡರಿ ಲೈನ್​ಗೆ ತುಂಬಾ ಹತ್ತಿರದಲ್ಲೇ ಶ್ರೇಯಸ್ ಅವರ ಕಾಲಿತ್ತು. ಇದರಿಂದ ಅವರ ಕಾಲು ಬೌಂಡರಿ ಲೈನ್​ಗೆ ತಾಗುವುದಕ್ಕೂ ಮೊದಲು, ಗಾಳಿಯಲಿದ್ದಾಗಲೇ ಚೆಂಡನ್ನು ತಂಡದ ಸಹ ಆಟಗಾರನ ಕಡೆಗೆ ಎಸೆದರು. ಅಂದರೆ ಶ್ರೇಯಸ್ ಇದೆಲ್ಲದರ ನಡುವೆ ಸಹ ಆಟಗಾರ ಎಲ್ಲಿದ್ದಾನೆ ಎಂಬುದನ್ನು ಗಮನಿಸಿದ್ದರು. ಇದೆಲ್ಲವನ್ನು ಕ್ಷಣ ಮಾತ್ರದಲ್ಲಿ ಮಾಡಬೇಕಿತ್ತು. ಶ್ರೇಯಸ್ ಇದೆಲ್ಲವನ್ನು ಮಾಡಲು ಸಾಧ್ಯವಾಗಿದ್ದು, ಅವರ ಸಮಯಪ್ರಜ್ಞೆ, ಫಿಟ್‌ನೆಸ್​ನಿಂದ. ನಾನು ಲೈವ್ ಆಗಿ ನೋಡಿದ ಅತ್ಯುತ್ತಮ ಕ್ಯಾಚ್‌ಗಳಲ್ಲಿ ಇದು ಒಂದು!’ ಎಂದು ಬರೆದುಕೊಂಡಿದ್ದಾರೆ.

Published On – 3:55 pm, Fri, 17 April 26

Source link

‘ಕಾಂತಾರ’ ಸಿನಿಮಾನಲ್ಲಿ ನಟಿಸುವ ಆಸೆ ಇರಲಿಲ್ಲ ರಿಷಬ್ ಶೆಟ್ಟಿಗೆ – Kannada News | Rishab Shetty says he does not have planning to act in Kantara movie

ಕಾಂತಾರ’ (Kantara) ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾದಿಂದ ರಿಷಬ್ ಶೆಟ್ಟಿಯ ಬದುಕೇ ಬದಲಾಗಿದೆ. ‘ಕಾಂತಾರ’ ಸಿನಿಮಾದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ದೊರೆಕಿದ್ದು ಮಾತ್ರವೇ ಅಲ್ಲದೆ ಇಂದು ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟರಲ್ಲಿ ಒಬ್ಬರನ್ನಾಗಿ ಮಾಡಿದೆ ಈ ಸಿನಿಮಾ. ಆದರೆ ಇತ್ತೀಚೆಗೆ ಅವಾರ್ಡ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ರಿಷಬ್ ಶೆಟ್ಟಿ, ತಮಗೆ ‘ಕಾಂತಾರ’ ಸಿನಿಮಾನಲ್ಲಿ ನಟಿಸುವ ಆಸೆಯೇ ಇರಲಿಲ್ಲ ಎಂದಿದ್ದಾರೆ.

ಇತ್ತೀಚೆಗಷ್ಟೆ ರಿಷಬ್ ಶೆಟ್ಟಿ ಅವರು ಐಎನ್​​ಸಿಎ 2026 ಅವಾರ್ಡ್ ದೊರಕಿತು. ‘ಕಾಂತಾರ 1’ ಸಿನಿಮಾದ ನಟನೆಗೆ ಅತ್ಯುತ್ತಮ ನಟ ಪ್ರಶಸ್ತಿ, ಅತ್ಯುತ್ತಮ ನಿರ್ದೇಶಕ ಮತ್ತು ಅತ್ಯುತ್ತಮ ಸಿನಿಮಾ ಪ್ರಶಸ್ತಿಗಳನ್ನು ‘ಕಾಂತಾರ: ಚಾಪ್ಟರ್ 1’ ಬಾಚಿಕೊಂಡಿತು. ಪ್ರಶಸ್ತಿ ಸ್ವೀಕಾರ ಮಾಡಿ ಮಾತನಾಡಿದ ರಿಷಬ್ ಶೆಟ್ಟಿ ತಮಗೆ ‘ಕಾಂತಾರ’ ಸಿನಿಮಾನಲ್ಲಿ ನಟಿಸುವ ಆಲೋಚನೆಯೇ ಇರಲಿಲ್ಲ ಎಂದಿದ್ದಾರೆ. ಅದು ಏಕೆಂದು ಸಹ ವಿವರಿಸಿದ್ದಾರೆ.

ಅವಾರ್ಡ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸುವಾಗ ಪತ್ನಿ ಪ್ರಗತಿ ಶೆಟ್ಟಿ ಅವರನ್ನೂ ವೇದಿಕೆಗೆ ಕರೆದ ರಿಷಬ್ ಶೆಟ್ಟಿ, ‘ನಾನು ‘ಕಾಂತಾರ’ ಸಿನಿಮಾ ಬರೆದಾಗ ನನಗೆ ಬಹಳ ಖುಷಿ ಆಗಿತ್ತು. ಕತೆ ಚೆನ್ನಾಗಿ ಮೂಡಿ ಬಂದಿತ್ತು. ನಾನು ಸಿನಿಮಾಗಳಲ್ಲಿ ಅದಕ್ಕೂ ಮುಂಚೆ ನಟಿಸಿದ್ದೆ ಆದರೆ ನಾನು ನಿರ್ದೇಶಿಸಿದ ಸಿನಿಮಾನಲ್ಲಿ ನಟಿಸುತ್ತಿರಲಿಲ್ಲ ಅಥವಾ ಸಣ್ಣ ಪಾತ್ರದಲ್ಲಿ ಮಾತ್ರ ನಟಿಸುತ್ತಿದ್ದೆ. ಹೇಗೋ ಕತೆ ಚೆನ್ನಾಗಿ ಮೂಡಿ ಬಂದಿದೆ, ನಾನು ಆರಾಮವಾಗಿ ನಿರ್ದೇಶನ ಮಾತ್ರ ಮಾಡೋಣ ಎಂದುಕೊಂಡಿದ್ದೆ, ‘ಕಾಂತಾರ’ ಸಿನಿಮಾನಲ್ಲಿ ನಟಿಸುವ ಆಸೆ ನನಗೆ ಇರಲಿಲ್ಲ’ ಎಂದಿದ್ದಾರೆ ರಿಷಬ್.

ಇದನ್ನೂ ಓದಿ:ರಾಜ್ ಬಿ. ಶೆಟ್ಟಿಗೆ ಕೇಳಿ ರಿಷಬ್ ಶೆಟ್ಟಿ ಫೋನ್ ನಂಬರ್ ತಗೊಂಡೆ: ಟೊವಿನೋ ಥಾಮಸ್

‘ಆದರೆ ಪ್ರಗತಿ ಶೆಟ್ಟಿ, ‘‘ಇಲ್ಲ ಶಿವ ಪಾತ್ರ ನಿಮಗೆ ಚೆನ್ನಾಗಿ ಒಪ್ಪುತ್ತದೆ ನೀವು ಆ ಪಾತ್ರದಲ್ಲಿ ನಟಿಸಲೇ ಬೇಕು ಎಂದರು. ನನಗೆ ಧೈರ್ಯ ನೀಡಿ, ಆ ಪಾತ್ರ ಮಾಡಲು ನನ್ನಲ್ಲಿ ಸ್ಪೂರ್ತಿ ತುಂಬಿದರು. ಅದರಿಂದಲೇ ನಾನು ಕಾಂತಾರ’ ಸಿನಿಮಾನಲ್ಲಿ ನಟಿಸಿದೆ’ ಎಂದಿದ್ದಾರೆ ರಿಷಬ್. ಆ ನಂತರ ‘ಕಾಂತಾರ 1’ನಲ್ಲಿಯೂ ಅದನ್ನೇ ಮುಂದುವರೆಸಿದೆ’ ಎಂದಿದ್ದಾರೆ ರಿಷಬ್.

‘ಕಾಂತಾರ ಮತ್ತು ಕಾಂತಾರ 1’ ಸಿನಿಮಾದ ಹಿಂದೆ ಸಾಕಷ್ಟು ಜನರ ಶ್ರಮ ಇದೆ. ಆ ಸಿನಿಮಾದಿಂದಾಗಿ ಈ ನಮ್ಮ ಊರು ‘ಫಿಲಂ ವಿಲೇಜ್’ ಆಗಿಬಿಟ್ಟಿದೆ. ಇಲ್ಲೆಲ್ಲ ಫಿಲಂ ಸಿಟಿಗಳು ಸಿಕ್ಕರೆ ನಮ್ಮದು ‘ಫಿಲಂ ವಿಲೇಜ್’ ಆಗಿಬಿಟ್ಟಿದೆ. ಪ್ರತಿದಿನ ಮೂರು-ನಾಲ್ಕು ಸಿನಿಮಾ ಶೂಟಿಂಗ್ ನಮ್ಮ ಊರಿನ ಸುತ್ತ-ಮುತ್ತ ಇರುತ್ತದೆ. ಈ ಸಿನಿಮಾದ ಯಶಸ್ಸು ಎಲ್ಲ ಕನ್ನಡಿಗರಿಗೆ ಸಲ್ಲಬೇಕು. ಅವರ ಪ್ರೀತಿ, ಆಶೀರ್ವಾದ ಇಲ್ಲದೇ ಹೋಗಿದ್ದರೆ ಕಾಂತಾರ ಇಲ್ಲಿಯವರೆಗೆ ಬರುತ್ತಿರಲಿಲ್ಲ’ ಎಂದಿದ್ದಾರೆ ರಿಷಬ್ ಶೆಟ್ಟಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Video: ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್ – Kannada News | Hyderabad Guard’s Viral Mosquito Net: Sparks Debate on Worker Challenges

ಹೈದರಾಬಾದ್‌ನ ಅಪಾರ್ಟ್‌ಮೆಂಟ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಭದ್ರತಾ ಸಿಬ್ಬಂದಿಯೊಬ್ಬರು, ಸೊಳ್ಳೆಗಳ ಕಾಟದಿಂದ ರಕ್ಷಿಸಿಕೊಳ್ಳಲು ಕುರ್ಚಿಯ ಮೇಲೆಯೇ ಸೊಳ್ಳೆ ಹಾಕಿಕೊಂಡು ಕುಳಿತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಕ್ಸ್ (X) ಬಳಕೆದಾರರಾದ ಸುರಜ್ ಕುಮಾರ್ ಬೌದ್ಧ್ ಎಂಬುವವರು ಹಂಚಿಕೊಂಡಿರುವ ಈ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ಈ ದೃಶ್ಯವು ನೆಟ್ಟಿಗರ ಗಮನ ಸೆಳೆದಿದ್ದು, ಕನಿಷ್ಠ ಸೌಲಭ್ಯಗಳಿಲ್ಲದೆ ಸೊಳ್ಳೆಗಳ ಕಡಿತದ ನಡುವೆಯೂ ರಾತ್ರಿ ಪೂರ್ತಿ ಕಷ್ಟಪಟ್ಟು ಕೆಲಸ ಮಾಡುವ ಸೆಕ್ಯೂರಿಟಿ ಗಾರ್ಡ್‌ಗಳ ಸ್ಥಿತಿಗತಿ ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಈಗ ದೊಡ್ಡ ಮಟ್ಟದ ಚರ್ಚೆ ಆರಂಭವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ.

Source link

ಶ್ರೀರಾಮನ ಪಾತ್ರಕ್ಕೆ ರಣಬೀರ್ ಕಪೂರ್​ಗಿಂತ ಉತ್ತಮ ನಟ ಯಾರೂ ಇಲ್ಲ: ನಮಿತ್ ಮಲ್ಹೋತ್ರಾ – Kannada News | Namit Malhotra praises Ranbir Kapoor as best choice for Lord Rama in Ramayana movie

ಬಾಲಿವುಡ್ ನಟ ರಣಬೀರ್ ಕಪೂರ್ (Ranbir Kapoor) ಅವರು ‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿದ್ದಾರೆ. ಆ ಸಿನಿಮಾದ ಬಿಡುಗಡೆಗೂ ಮೊದಲೇ ಅವರು ಜಾಗತಿಕ ಮಟ್ಟದಲ್ಲಿ ಸುದ್ದಿ ಆಗುತ್ತಿದ್ದಾರೆ. ಪ್ರತಿಷ್ಠಿತ ‘ಟೈಮ್’ (TIME) ಮ್ಯಾಗಜಿನ್ ಬಿಡುಗಡೆ ಮಾಡಿರುವ 2026ನೇ ಸಾಲಿನ ವಿಶ್ವದ 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯಲ್ಲಿ ರಣಬೀರ್ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ನಟ ಎಂಬ ಹೆಗ್ಗಳಿಕೆಗೆ ರಣಬೀರ್ ಪಾತ್ರರಾಗಿದ್ದಾರೆ. ಈ ಸಂದರ್ಭದಲ್ಲಿ ‘ರಾಮಾಯಣ’ ಚಿತ್ರದ ನಿರ್ಮಾಪಕ ನಮಿತ್ ಮಲ್ಹೋತ್ರಾ (Namit Malhotra) ಅವರು ರಣಬೀರ್ ಕುರಿತು ವಿಶೇಷ ಪೋಸ್ಟ್ ಹಂಚಿಕೊಂಡಿದ್ದಾರೆ.

ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ರಣಬೀರ್ ಕಪೂರ್ ಮತ್ತು ನಿರ್ದೇಶಕ ನಿತೇಶ್ ತಿವಾರಿ ಅವರೊಂದಿಗಿನ ಫೋಟೋ ಹಂಚಿಕೊಂಡಿರುವ ನಮಿತ್, ‘ಶ್ರೀರಾಮನ ಪಾತ್ರವನ್ನು ನಿರ್ವಹಿಸಲು ನಿಮಗಿಂತ ಉತ್ತಮ ನಟ ಬೇರೊಬ್ಬರಿಲ್ಲ. ನೀವು ನಿಸ್ಸಂದೇಹವಾಗಿ ನಮ್ಮ ತಲೆಮಾರಿನ ಅತ್ಯುತ್ತಮ ನಟ’ ಎಂದು ಬಣ್ಣಿಸಿದ್ದಾರೆ. ಬೃಹತ್ ಬಜೆಟ್​​ನಲ್ಲಿ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ನಿತೇಶ್ ತಿವಾರಿ ನಿರ್ದೇಶನದ ಮಹತ್ವಾಕಾಂಕ್ಷೆಯ ‘ರಾಮಾಯಣ’ ಸಿನಿಮಾದಲ್ಲಿ ದೊಡ್ಡ ತಾರಾಗಣವೇ ಇದೆ. ರಣಬೀರ್ ಕಪೂರ್ ಅವರು ಶ್ರೀರಾಮನ ಪಾತ್ರ ಮಾಡುತ್ತಿದ್ದು, ರಾವಣನಾಗಿ ‘ರಾಕಿಂಗ್ ಸ್ಟಾರ್’ ಯಶ್ ಕಾಣಿಸಿಕೊಳ್ಳಲಿದ್ದಾರೆ. ಸಾಯಿ ಪಲ್ಲವಿ ಅವರು ಸೀತೆಯ ಪಾತ್ರ ಮಾಡುತ್ತಿದ್ದಾರೆ. ರವಿ ದುಬೆ ಅವರು ಲಕ್ಷ್ಮಣನಾಗಿ, ಸನ್ನಿ ಡಿಯೋಲ್ ಹನುಮಂತನಾಗಿ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ಈಗಾಗಲೇ ಟೀಸರ್ ಮೂಲಕ ‘ರಾಮಾಯಣ’ ಸಿನಿಮಾ ಕೌತುಕ ಮೂಡಿಸಿದೆ. ಎರಡು ಪಾರ್ಟ್​ಗಳಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ. ‘ರಾಮಾಯಣ ಭಾಗ 1’ ಈ ವರ್ಷ ದೀಪಾವಳಿ ಹಬ್ಬದ ಪ್ರಯುಕ್ತ ವಿಶ್ವದಾದ್ಯಂತ ಅದ್ದೂರಿಯಾಗಿ ತೆರೆಗೆ ಬರಲಿದೆ. ಈಗಾಗಲೇ ವಿದೇಶದಲ್ಲಿ ಈ ಸಿನಿಮಾದ ಪ್ರಚಾರ ಮಾಡಲಾಗುತ್ತಿದೆ.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾದಲ್ಲಿ ರಣಬೀರ್ ಕಪೂರ್ ದ್ವಿಪಾತ್ರ: ಶ್ರೀರಾಮನ ಜೊತೆಗೆ ಪರಶುರಾಮನ ದರ್ಶನ

ರಣಬೀರ್ ಕಪೂರ್ ಅವರು ರಾಮನ ಪಾತ್ರ ಮಾಡುತ್ತಾರೆ ಎಂದಾಗ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿಂದಿನ ಸಂದರ್ಶನವೊಂದರಲ್ಲಿ ರಣಬೀರ್ ಕಪೂರ್ ಅವರು ಗೋಮಾಂಸ ತಿನ್ನುವುದನ್ನು ಒಪ್ಪಿಕೊಂಡಿದ್ದರು. ಹಾಗಾಗಿ ವಿರೋಧ ಎದುರಾಗಿತ್ತು. ಅಂತಿಮವಾಗಿ ಅವರೇ ಶ್ರೀರಾಮನ ಪಾತ್ರಕ್ಕೆ ಆಯ್ಕೆ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮೈಸೂರಿನ ಸಿದ್ದಾರ್ಥ ನಗರದಲ್ಲಿ ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ; ಹೌಹಾರಿದ ಕುಟುಂಬಸ್ಥರು! – Kannada News | Leopard Enters House in Mysuru, Hides Under Bed; Family Escapes Safely

ಮೈಸೂರು, ಏಪ್ರಿಲ್​​ 17: ಸಿದ್ದಾರ್ಥ ನಗರದ ಮನೆಯೊಂದರಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸುರೇಶ್ ಎಂಬುವವರ ಮನೆಯ ಮಂಚದ ಕೆಳಗೆ ಅವಿತು ಕುಳಿತಿರೋದು ಕಂಡುಬಂದಿದೆ. ಸುರೇಶ್ ಪತ್ನಿ ಸುಜಾತಾ, ತಾಯಿ ಶೈಲಜಾ ಮನೆಯಲ್ಲಿದ್ದಾಗ ಏಕಾಏಕಿ ಮನೆಗೆ ಎಂಟ್ರಿಕೊಟ್ಟ ಚಿರತೆ ವೃದ್ಧೆ ಶೈಲಜಾ ಮಲಗಿದ್ದ ಕೊಠಡಿಯೊಳಗೆ ಪ್ರವೇಶಿಸಿದೆ. ಸಮಯಪ್ರಜ್ಞೆಯಿಂದ ಅತ್ತೆ ಶೈಲಜಾರನ್ನು ಈ ವೇಳೆ ಸುಜಾತಾ ರಕ್ಷಣೆ ಮಾಡಿದ್ದು, ಏಕಾಏಕಿ ಚಿರತೆ ನುಗ್ಗಿದ್ದರಿಂದ ಮನೆಯವರು ಆತಂಕಕ್ಕೀಡಾದ ಪ್ರಸಂಗ ನಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಬ್ಬಂದಿಯಿಂದ ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ಪ್ರಧಾನಿ ಮೋದಿ ಮತ್ತು ನನಗೆ ಇಬ್ರಿಗೂ ‘ಹೆಂಡತಿ’ ಕಾಟ ಇಲ್ಲ ಎಂದ ರಾಹುಲ್ ಗಾಂಧಿ – Kannada News | Amid Serious Debate, Rahul Gandhi’s Remark Brings Smiles in Lok Sabha

ನವದೆಹಲಿ, ಏಪ್ರಿಲ್ 17:  ಪ್ರಧಾನಿ ಮೋದಿ ಹಾಗೂ ನನಗೆ ಇಬ್ಬರಿಗೂ ಹೆಂಡತಿ ಕಾಟವಿಲ್ಲ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಗಂಭೀರವಾದ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ವಿಂಗಡಣೆ (Delimitation) ಕುರಿತ ಚರ್ಚೆ ನಡೆಯುತ್ತಿದ್ದಾಗ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯ ಒಂದು ಹೇಳಿಕೆ ಇಡೀ ಸದನದ ಗಮನವನ್ನು ಬೇರೆಡೆಗೆ ಸೆಳೆಯಿತು. ನನಗೆ ಹಾಗೂ ಪ್ರಧಾನಿ ಮೋದಿ ಇಬ್ಬರಿಗೂ ಹೆಂಡತಿ ಕಾಟ ಇಲ್ಲ ಎಂದು ಹೇಳಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮಹಿಳಾ ಮೀಸಲಾತಿ ಮಸೂದೆಯ ಕುರಿತು ಸುದೀರ್ಘ ಚರ್ಚೆ ನಡೆಯುತ್ತಿತ್ತು. ರಾಜಕೀಯ ಆರೋಪ-ಪ್ರತ್ಯಾರೋಪಗಳ ನಡುವೆ ಮೈಕ್ ಹಿಡಿದ ರಾಹುಲ್ ಗಾಂಧಿ, ಸರ್ಕಾರದ ಮೇಲೆ ವಾಗ್ದಾಳಿ ನಡೆಸುತ್ತಾ ವೈಯಕ್ತಿಕ ಜೀವನದ ಕುರಿತು ಲಘು ಟೀಕೆ ಮಾಡಿದರು.

ತಮ್ಮ ಹೇಳಿಕೆಯನ್ನು ಮುಂದುವರಿಸಿದ ರಾಹುಲ್, ನಮಗೆ ಅಂತಹ ವೈಯಕ್ತಿಕ ಸಮಸ್ಯೆಗಳಿಲ್ಲದಿದ್ದರೂ, ನಾವು ಮಹಿಳೆಯರನ್ನು ಈ ದೇಶದ ಪ್ರೇರಕ ಶಕ್ತಿ ಎಂದು ಗೌರವಿಸುತ್ತೇವೆ. ಆದರೆ ಬಿಜೆಪಿ ಸರ್ಕಾರವು ಮಹಿಳೆಯರ ಅಭಿವೃದ್ಧಿಯ ಹೆಸರಿನಲ್ಲಿ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದರು. ಬಿಜೆಪಿ ಸರ್ಕಾರವು ಮಹಿಳೆಯರ ಬೆನ್ನ ಹಿಂದೆ ಅಡಗಿ ಭಾರತದ ಚುನಾವಣಾ ನಕ್ಷೆಯನ್ನು ತನಗೆ ಬೇಕಾದಂತೆ ಬದಲಿಸಲು ಹೊರಟಿದೆ. ಕ್ಷೇತ್ರ ಪುನರ್ವಿಂಗಡಣೆಯ ಮೂಲಕ ದಕ್ಷಿಣ ಭಾರತದ ರಾಜ್ಯಗಳ ಶಕ್ತಿಯನ್ನು ಕುಂದಿಸುವುದು ಮತ್ತು ಒಬಿಸಿ ಸಮುದಾಯದ ಮಹಿಳೆಯರನ್ನು ಕಡೆಗಣಿಸುವುದು ಇವರ ಅಸಲಿ ಉದ್ದೇಶ ಎಂದು ಆರೋಪಿಸಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ಚಿನ್ನ ಮತ್ತು ಬೆಳ್ಳಿ ಆಮದಿಗೆ 15 ಬ್ಯಾಂಕುಗಳಿಗೆ ಸರ್ಕಾರದಿಂದ 3 ವರ್ಷ ಅನುಮತಿ – Kannada News | Govt authorises 15 banks to import gold and silver till 2029 March

ನವದೆಹಲಿ, ಏಪ್ರಿಲ್ 17: ಕೇಂದ್ರ ಸರ್ಕಾರ ವಿದೇಶಗಳಿಂದ ಚಿನ್ನ ಮತ್ತು ಬೆಳ್ಳಿ ಆಮದು (gold and silver import) ಮಾಡಿಕೊಳ್ಳಲು ಭಾರತದ 15 ಪ್ರಮುಖ ಬ್ಯಾಂಕುಗಳಿಗೆ ಅನುಮತಿ ನೀಡಿದೆ. ಎಸ್​ಬಿಐ, ಎಕ್ಸಿಸ್ ಬ್ಯಾಂಕ್, ಎಚ್​ಡಿಎಫ್​ಸಿ ಇತ್ಯಾದಿ 15 ಬ್ಯಾಂಕುಗಳು 2029ರ ಮಾರ್ಚ್ 31ರವರೆಗೂ ಚಿನ್ನ, ಬೆಳ್ಳಿಯನ್ನು ಆಮದು ಮಾಡಿಕೊಳ್ಳಲು ಸರ್ಕಾರದ ಅನುಮತಿ ಪಡೆದಿವೆ. ಎರಡು ಬ್ಯಾಂಕುಗಳಿಗೆ ಚಿನ್ನವನ್ನು ಮಾತ್ರವೇ ಆಮದು ಮಾಡಿಕೊಳ್ಳುವ ಅನುಮತಿ ಸಿಕ್ಕಿದೆ. ಅನುಮತಿ ಪಡೆದ ಬ್ಯಾಂಕುಗಳಲ್ಲಿ ಎರಡು ವಿದೇಶೀ ಬ್ಯಾಂಕುಗಳೂ ಸೇರಿವೆ.

ಸರ್ಕಾರದ ಅನುಮತಿ ಇಲ್ಲದೇ ಬ್ಯಾಂಕುಗಳು ಚಿನ್ನ ಮತ್ತು ಬೆಳ್ಳಿಯನ್ನು ಆಮದು ಮಾಡಿಕೊಳ್ಳುವಂತಿಲ್ಲ. 2026ರ ಮಾರ್ಚ್ 31ರವರೆಗೂ ಮಾತ್ರವೇ ಅನುಮತಿ ಇತ್ತು. ಆ ನಂತರ ಸರ್ಕಾರದಿಂದ ಯಾವುದೇ ಹೊಸ ಅಧಿಸೂಚನೆ ಬಂದಿರಲಿಲ್ಲ. ಹೀಗಾಗಿ, ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗಿದ್ದ ಸರಕುಗಳು ಕಸ್ಟಮ್ಸ್ ವಿಭಾಗದಲ್ಲೇ ಉಳಿದುಕೊಂಡಿದ್ದವು. ಇದರಿಂದ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೇಡಿಕೆಗೆ ತಕ್ಕಷ್ಟು ಪೂರೈಕೆ ಇರದ ಪರಿಸ್ಥಿತಿ ಬರುವುದರಲ್ಲಿತ್ತು.

ಇದನ್ನೂ ಓದಿ: Gold Rates: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ದರಪಟ್ಟಿ

ಭಾರತದಲ್ಲಿ ಚಿನ್ನಕ್ಕೆ ತಗ್ಗಿದ ಬೇಡಿಕೆ

ಭಾರತದಲ್ಲಿ 2025ರಲ್ಲಿ ಚಿನ್ನಕ್ಕೆ ಇರುವ ಬೇಡಿಕೆ 710.9 ಮೆಟ್ರಿಕ್ ಟನ್​ಗೆ ಇಳಿದಿದೆ. ವರ್ಲ್ಡ್ ಗೋಲ್ಡ್ ಕೌನ್ಸಿಲ್ ಪ್ರಕಾರ ಇದು ಐದು ವರ್ಷದಲ್ಲೇ ಅತ್ಯಂತ ಕಡಿಮೆ ಬೇಡಿಕೆ ಎನಿಸಿದೆ. ಚಿನ್ನಕ್ಕೆ ಬೇಡಿಕೆ ಕಡಿಮೆ ಆಗಲು ಗ್ರಾಹಕರ ಖರೀದಿ ನಿರಾಸಕ್ತಿ ಪ್ರಮುಖ ಕಾರಣವಿರಬಹುದು. ಚಿನ್ನಕ್ಕೆ ಡಿಮ್ಯಾಂಡ್ ಕಡಿಮೆಗೊಂಡರೆ ಅದು ದೇಶದ ಆರ್ಥಿಕತೆಗೆ ಸಕಾರಾತ್ಮಕ ಕೊಡುಗೆ ನೀಡಬಲ್ಲುದು.

ಚೀನಾ ನಂತರ ಭಾರತವೇ ಜಗತ್ತಿನಲ್ಲಿ ಅತಿಹೆಚ್ಚು ಚಿನ್ನ ಮತ್ತು ಬೆಳ್ಳಿ ಖರೀದಿಸುವುದು. ಚಿನ್ನಕ್ಕೆ ಬೇಡಿಕೆ ಕಡಿಮೆ ಆದರೆ ಆಮದು ವೆಚ್ಚ ಕಡಿಮೆ ಆಗುತ್ತದೆ. ಡಾಲರ್ ಎದುರು ರುಪಾಯಿ ಮೌಲ್ಯ ಉತ್ತಮಗೊಳ್ಳುತ್ತದೆ. ಜಾಗತಿಕವಾಗಿ ಚಿನ್ನ, ಬೆಳ್ಳಿ ಬೆಲೆಗಳು ತಗ್ಗಬಹುದು.

ಚಿನ್ನ, ಬೆಳ್ಳಿ ಎರಡನ್ನೂ ಆಮದು ಮಾಡಲು ಅನುಮತಿಸಲಾದ ಬ್ಯಾಂಕುಗಳಿವು

  1. ಎಕ್ಸಿಸ್ ಬ್ಯಾಂಕ್
  2. ಬ್ಯಾಂಕ್ ಆಫ್ ಇಂಡಿಯಾ
  3. ಡ್ಯೂಶೆ ಬ್ಯಾಂಕ್
  4. ಫೆಡರಲ್ ಬ್ಯಾಂಕ್
  5. ಎಚ್​ಡಿಎಫ್​ಸಿ ಬ್ಯಾಂಕ್
  6. ಇಂಡಸ್ಟ್ರಿಯಲ್ ಅಂಡ್ ಕಮರ್ಷಿಯಲ್ ಬ್ಯಾಂಕ್ ಆಫ್ ಚೀನಾ
  7. ಐಸಿಐಸಿಐ ಬ್ಯಾಂಕ್
  8. ಇಂಡಸ್​ಇಂಡ್ ಬ್ಯಾಂಕ್
  9. ಇಂಡಿಯನ್ ಓವರ್​ಸೀಸ್ ಬ್ಯಾಂಕ್
  10. ಕೋಟಕ್ ಮಹೀಂದ್ರ ಬ್ಯಾಂಕ್
  11. ಕರೂರ್ ವೈಷ್ಯ ಬ್ಯಾಂಕ್
  12. ಪಂಜಾಬ್ ನ್ಯಾಷನಲ್ ಬ್ಯಾಂಕ್
  13. ಆರ್ಬಿಐ ಬ್ಯಾಂಕ್
  14. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
  15. ಯೆಸ್ ಬ್ಯಾಂಕ್

ಇದನ್ನೂ ಓದಿ: ಏಷ್ಯಾದ ನಂ. 1 ಶ್ರೀಮಂತ ಅಂಬಾನಿಯಲ್ಲ, ಅದಾನಿ; ಟಾಪ್-20ಯಲ್ಲಿ ಅಮೆರಿಕನ್ನರನ್ನು ಬಿಟ್ಟರೆ ಭಾರತೀಯರೇ ಹೆಚ್ಚು

ಚಿನ್ನವನ್ನು ಮಾತ್ರವೇ ಆಮದು ಮಾಡಿಕೊಳ್ಳಲು ಅನುಮತಿಸಲಾದ ಬ್ಯಾಂಕುಗಳು

  1. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
  2. ಸಬೆರ್ ಬ್ಯಾಂಕ್ (Sberbank)

ಬ್ಯಾಂಕುಗಳು ಈ ಚಿನ್ನ, ಬೆಳ್ಳಿಯನ್ನು ಏನು ಮಾಡುತ್ತವೆ?

ಬ್ಯಾಂಕುಗಳು ಈ ಚಿನ್ನವನ್ನು ರೀಟೇಲ್ ಕ್ಷೇತ್ರಕ್ಕೆ ಮಾರುತ್ತವೆ. ಆಭರಣದಂಗಡಿಗಳು, ಗೋಲ್ಡ್ ರಿಫೈನರಿಗಳು, ರೀಟೇಲ್ ಮಾರಾಟಗಾರರು ಮೊದಲಾದವರಿಗೆ ಮಾರುತ್ತವೆ. ಈ ಮೂಲಕ ಬೇಡಿಕೆಗೆ ತಕ್ಕಷ್ಟು ಹೊಸ ಚಿನ್ನ, ಬೆಳ್ಳಿ ಸರಕುಗಳು ಮಾರುಕಟ್ಟೆ ಪ್ರವೇಶಿಸುತ್ತವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version