ಚಾಕು ತೋರಿಸಿ ಬಂಗಾಳ ಕಾರ್ಮಿಕರ ದರೋಡೆ: ಮೊಬೈಲ್, ನಗದು ದೋಚಿದ ದುಷ್ಕರ್ಮಿಗಳು – Kannada News | Bengaluru: West Bengal Laborers Robbed at Knife Point in Electronics City; Cash, Phones and UPI Money Stolen
ಬೆಂಗಳೂರು, ಜುಲೈ 02: ನಗರದ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಬೆಟ್ಟದಾಸನಪುರ ಸಮೀಪ ಚಾಕು ತೋರಿಸಿ ಬೆದರಿಸಿ ನಾಲ್ವರು ಕಾರ್ಮಿಕರನ್ನು ದರೋಡೆ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಜೂನ್ 28ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರ ಪ್ರಕಾರ ಘಟನೆ ಸಂಜೆ 6.30ರಿಂದ ರಾತ್ರಿ 9.15ರ ನಡುವೆ ನಡೆದಿದೆ ಎನ್ನಲಾಗಿದೆ. ಕೆಲಸ ಮುಗಿಸಿ ಬೆಟ್ಟದಾಸನಪುರದ ಬಳಿ ಮಾತನಾಡುತ್ತ ನಿಂತಿದ್ದ ಪಶ್ಚಿಮ ಬಂಗಾಳ ಮೂಲದ 25 ವರ್ಷದ ಯೂನುಸ್, 19 ವರ್ಷದ ಇರ್ಫಾನ್ ಶೇಖ್, 20…