Headlines

ಚಾಕು ತೋರಿಸಿ ಬಂಗಾಳ ಕಾರ್ಮಿಕರ ದರೋಡೆ: ಮೊಬೈಲ್, ನಗದು ದೋಚಿದ ದುಷ್ಕರ್ಮಿಗಳು – Kannada News | Bengaluru: West Bengal Laborers Robbed at Knife Point in Electronics City; Cash, Phones and UPI Money Stolen

ಬೆಂಗಳೂರು, ಜುಲೈ 02: ನಗರದ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಬೆಟ್ಟದಾಸನಪುರ ಸಮೀಪ ಚಾಕು ತೋರಿಸಿ ಬೆದರಿಸಿ ನಾಲ್ವರು ಕಾರ್ಮಿಕರನ್ನು ದರೋಡೆ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಜೂನ್ 28ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರ ಪ್ರಕಾರ ಘಟನೆ ಸಂಜೆ 6.30ರಿಂದ ರಾತ್ರಿ 9.15ರ ನಡುವೆ ನಡೆದಿದೆ ಎನ್ನಲಾಗಿದೆ. ಕೆಲಸ ಮುಗಿಸಿ ಬೆಟ್ಟದಾಸನಪುರದ ಬಳಿ ಮಾತನಾಡುತ್ತ ನಿಂತಿದ್ದ ಪಶ್ಚಿಮ ಬಂಗಾಳ ಮೂಲದ 25 ವರ್ಷದ ಯೂನುಸ್, 19 ವರ್ಷದ ಇರ್ಫಾನ್ ಶೇಖ್, 20…

Read More

ಇಂಧನ ಇಲಾಖೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಬೇಸತ್ತು ರಾಜೀನಾಮೆಗೆ ಮುಂದಾಗಿದ್ದ ಕೆಜೆ ಜಾರ್ಜ್: ಆಮೇಲಾಗಿದ್ದೇ ಬೇರೆ! – Kannada News | KJ George, Karnataka Energy Minister Decided to resign due to Yathindra Siddaramaiah’s interference in his Department; Here’s exclusive report

ಯತೀಂದ್ರ, ಸಿದ್ದರಾಮಯ್ಯ, ಕೆಜೆ ಜಾರ್ಜ್Image Credit source: Tv9 ಬೆಂಗಳೂರು, ಜನವರಿ 29: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹಸ್ತಕ್ಷೇಪಕ್ಕೆ ಬೇಸತ್ತು ಸಚಿವ ಕೆಜೆ ಜಾರ್ಜ್ (KJ George) ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಸ್ಫೋಟಕ ಮಾಹಿತಿ ಇದೀಗ ಬಹಿರಂಗವಾಗಿದೆ. ಸದ್ಯ ಈ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇಂಧನ ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪದಿಂದ ನಡೆದ ಕೆಲ ಅಧಿಕಾರಿಗಳ ವರ್ಗಾವಣೆ ಹಾಗೂ ಅಮಾನತು ವಿಚಾರ ಸರ್ಕಾರದೊಳಗೆ…

Read More

ದೇವೇಗೌಡರ ಪತ್ನಿ ಚೆನ್ನಮ್ಮನ ಮೇಲೆ ಆ್ಯಸಿಡ್ ದಾಳಿ ಎಲ್ಲಿ-ಯಾವಾಗ ಆಗಿತ್ತು ಗೊತ್ತಾ? – Kannada News | Acid attacked On HD Deve Gowda’s Wife Chennamma In 2001, here Is details Where And Why?

ಬೆಂಗಳೂರು, (ಜುಲೈ 18): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ (HD Deve Gowda’s Wife Chennamma) ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಕಳೆದ ಒಂದು ವರ್ಷದಿಂದ ಚೆನ್ನಮ್ಮ ಅವರ ಆರೋಗ್ಯದಲ್ಲಿ ಸಣ್ಣ ಪ್ರಮಾಣದ ಸಮಸ್ಯೆಗಳು ಕಾಣಿಸಿಕೊಳ್ಳಲಾರಂಭಿಸಿದ್ದವು. ಇತ್ತೀಚೆಗಷ್ಟೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಸುಮಾರು 25 ದಿನ ಚಿಕಿತ್ಸೆ ಪಡೆದುಕೊಂಡು ಮನೆಗೆ ಹಿಂದಿರುಗಿದ್ದರು. ಮತ್ತೆ ಜುಲೈ 15ರಂದು ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನು…

Read More

ರಾಜ್ಯಸಭೆಯಲ್ಲಿ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕನ್ನಡ ಚಿತ್ರರಂಗದ ಬೆಂಬಲ ಇಲ್ವಾ? – Kannada News | Jaggesh gives update about steps taken by Central Government to curb Movie Piracy

ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಪೈರಸಿ (Piracy) ವಿರುದ್ಧ ಧ್ವನಿ ಎತ್ತಿದ್ದಾರೆ. ರಾಜ್ಯಸಭೆಯಲ್ಲಿ ಅವರು ಈ ಬಗ್ಗೆ ಚರ್ಚಿಸಿದ್ದಾರೆ. ಅದರ ಫಲವಾಗಿ ಸರ್ಕಾರದಿಂದ ಭರವಸೆ ಸಿಕ್ಕಿದೆ. ಆ ಬಗ್ಗೆ ಜಗ್ಗೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗಕ್ಕೂ ಪೈರಸಿ ಎಂಬುದು ಮಾರಕ ಆಗಿದೆ. ಇದರ ವಿರುದ್ಧ ಹೋರಾಡಲು ಕನ್ನಡ ಚಿತ್ರರಂಗದ ಯಾರೂ ಕೂಡ ತಮಗೆ ಬೆಂಬಲ ನೀಡಲಿಲ್ಲ ಎಂದು ಜಗ್ಗೇಶ್ (Jaggesh) ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಮಾಡಿದ ಪೋಸ್ಟ್ ಈ…

Read More

ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ – Kannada News | Belagavi, Bagalkote, Mangaluru Hit by Severe Storms: Uprooted Trees, Power Cuts and Traffic Disruption

ಬೆಳಗಾವಿ, ಮೇ 13: ಬೆಳಗಾವಿ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿರುಗಾಳಿಯ ರಭಸಕ್ಕೆ ಬೃಹತ್ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಅತಿ ಹೆಚ್ಚು ಹಾನಿಯಾಗಿದ್ದು, ಸಂಚಾರಕ್ಕೆ ತೀವ್ರ ಅಡ್ದಿಯಾಗಿದೆ. ರಸ್ತೆಗಳ ಮೇಲೆ ಬಿದ್ದ ಮರಗಳಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ವಿದ್ಯುತ್ ಕಂಬಗಳು ನೆಲಕ್ಕುರುಳಿದ ಪರಿಣಾಮ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಬಾಗಲಕೋಟೆಯ ಬಾದಾಮಿಯಲ್ಲೂ ಇದೇ ರೀತಿಯ…

Read More

IPL 2026: ಡೆಡ್ ಬಾಲ್​ನಲ್ಲಿ ಔಟ್ ನೀಡಿದ ಅಂಪೈರ್..! – Kannada News | IPL 2026 Drama: Shardul’s Towel Mishap Sparks Outrage as Dubey Rules Out

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ವಿವಾದಗಳಿಂದಲೇ ಮತ್ತೆ ಸುದ್ದಿಯಲ್ಲಿದೆ. ಈ ಬಾರಿ ವಿವಾದ ಸೃಷ್ಟಿಯಾಗಿರುವುದು ಅಂಪೈರ್ ತೀರ್ಪಿನಿಂದ. ಅದು ಕೂಡ ಡೆಡ್ ಬಾಲ್ ಘೋಷಿಸದೇ ಔಟ್ ನೀಡಿರುವುದರಿಂದ. ಮೇ 24, 2026 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ಪರ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಎಡಗೈ ದಾಂಡಿಗ ಶುಭಂ ದುಬೆ…

Read More

ಸುದೀಪ್ ಹಾಗೂ ಶಿವಣ್ಣ ಭೇಟಿ ಮಾಡಿ ಆಶೀರ್ವಾದ ಪಡೆದ ಗಿಲ್ಲಿ; ನಟರು ಹೇಳಿದ್ದೇನು? – Kannada News | Big Boss Kannada 12 Winner Gilli Nata Meets Shiva Rajkumar and Sudeep for Blessings

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ವಿನ್ನರ್ ಆಗಿ ಹೊರ ಹೊಮ್ಮಿರೋ ಗಿಲ್ಲಿ ನಟ ಅವರು ಇತ್ತೀಚೆಗೆ ತಮ್ಮ ಹುಟ್ಟೂರಲ್ಲಿ ದೊಡ್ಡದಾದ ರ್ಯಾಲಿ ಮಾಡಿದ್ದರು. ಆ ಬಳಿಕ ಅವರು ಮರಳಿ ಬೆಂಗಳೂರಿಗೆ ಬಂದಿದ್ದರು. ಈಗ ಅವರು ಶಿವರಾಜ್​​​ಕುಮಾರ್ ಹಾಗೂ ಸುದೀಪ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಇಬ್ಬರೂ ಗಿಲ್ಲಿ ಬದುಕಿಗೆ ದಾರಿ ದೀಪ ಆದವರು. ಹೀಗಾಗಿ, ಅವರನ್ನು ಗಿಲ್ಲಿ ಭೇಟಿ ಮಾಡಿದ್ದಾರೆ. ಗಿಲ್ಲಿ ನಟ ಅವರಿಗೆ ಶಿವರಾಜ್​​ಕುಮಾರ್ ಮೊದಲೇ ಪರಿಚಯ. ಜೀ ಕನ್ನಡದಲ್ಲಿ…

Read More

ಹೊಕ್ಕುಳಿಗೆ ರಿಂಗ್ ಚುಚ್ಚಿಸಿಕೊಂಡ ‘ಅಧ್ಯಕ್ಷ’ ನಟಿ ಹೆಬಾ ಪಟೇಲ್; ನೋವಿನಲ್ಲೂ ನಕ್ಕ ನಟಿ – Kannada News

ಕನ್ನಡದ ಸೂಪರ್ ಹಿಟ್ ಸಿನಿಮಾ ‘ಅಧ್ಯಕ್ಷ’ ನೆನಪಿದೆಯೇ? ಅದರಲ್ಲಿ ಶಿವರುದ್ರೇಗೌಡರ (ರವಿಶಂಕರ್) ಮುದ್ದಿನ ಮಗಳು ಐಶ್ವರ್ಯಾ ಆಗಿ, ಶರಣ್ ಪ್ರೇಯಸಿಯಾಗಿ ಕನ್ನಡಿಗರ ಮನಗೆದ್ದಿದ್ದ ನಟಿ ಹೆಬಾ ಪಟೇಲ್ (Hebah Patel) ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸೌಂಡ್ ಮಾಡುತ್ತಿದ್ದಾರೆ. ಅದಕ್ಕೆ ಕಾರಣ ಅವರ ಹೊಸ ಸಾಹಸ. ಹೌದು, ನಟಿ ಹೆಬಾ ಪಟೇಲ್ ಇತ್ತೀಚೆಗೆ ತಮ್ಮ ಹೊಕ್ಕುಳಿಗೆ ಬೆಲ್ಲಿ ರಿಂಗ್ ಚುಚ್ಚಿಸಿಕೊಂಡಿದ್ದಾರೆ. ಸಾಮಾನ್ಯವಾಗಿ ಹೊಕ್ಕುಳಿಗೆ ರಿಂಗ್ ಚುಚ್ಚಿಸಿಕೊಳ್ಳುವಾಗ ವಿಪರೀತ ನೋವಾಗುತ್ತದೆ. ಆದರೆ, ಹೆಬಾ ಪಟೇಲ್ ಈ ಪ್ರಕ್ರಿಯೆಯುದ್ದಕ್ಕೂ ತೋರಿದ…

Read More

7 ವರ್ಷಗಳ ಬಳಿಕ ಚಿತ್ರರಂಗಕ್ಕೆ ನಟ ಗೋವಿಂದ ಕಮ್‌ಬ್ಯಾಕ್; ಹೊಸ ಸಿನಿಮಾ ‘ರೂಪಾ’ ಘೋಷಣೆ – Kannada News | Actor Govinda announces Comeback Film Roopa after Seven years with new actress

ಬಾಲಿವುಡ್‌ನ ಹಿರಿಯ ನಟ ಗೋವಿಂದ (Govinda) ಅವರು ಸರಿಸುಮಾರು 7 ವರ್ಷಗಳ ಸುದೀರ್ಘ ಬಿಡುವಿನ ನಂತರ ಮತ್ತೆ ಬೆಳ್ಳಿಪರದೆಗೆ ಮರಳಲು ಸಜ್ಜಾಗಿದ್ದಾರೆ. ತಮ್ಮ ಮುಂಬರುವ ಹೊಸ ಚಿತ್ರ ‘ರೂಪಾ’ (Roopa) ಮೂಲಕ ಅವರು ಚಿತ್ರರಂಗಕ್ಕೆ ಗ್ರ್ಯಾಂಡ್ ಕಮ್‌ಬ್ಯಾಕ್ ಮಾಡುತ್ತಿರುವುದಾಗಿ ಘೋಷಿಸಿದ್ದಾರೆ. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಚಿತ್ರದ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಈ ಚಿತ್ರದಲ್ಲಿ ಗೋವಿಂದ ಅವರಿಗೆ ಜೋಡಿಯಾಗಿ ಹೊಸ ನಟಿ ರಾಣಿ ಸ್ವರ್ಣಕಾರ್ ನಟಿಸಲಿದ್ದಾರೆ. ಕೇವಲ ನಾಯಕನಾಗಿ ನಟಿಸುವುದು ಮಾತ್ರವಲ್ಲದೆ, ಸ್ವತಃ ಗೋವಿಂದ ಅವರೇ ‘ರೂಪಾ’…

Read More

83ನೇ ವಯಸ್ಸಿನಲ್ಲೂ 24 ಗಂಟೆ ನಿರಂತರ ಕೆಲಸ ಮಾಡಿದ ನಟ ಅಮಿತಾಭ್ ಬಚ್ಚನ್ – Kannada News | Amitabh Bachchan works 24 hour shift for KBC season 18 shoot at the age of 83

ಬಾಲಿವುಡ್‌ನ ಹಿರಿಯ ನಟ ಅಮಿತಾಭ್ ಬಚ್ಚನ್ (Amitabh Bachchan) ಅವರು 83ನೇ ವಯಸ್ಸಿನಲ್ಲೂ ಯುವ ನಟರಿಗೆ ಸವಾಲೆಸೆಯುವಂತಹ ಕಾರ್ಯವೈಖರಿ ಹಾಗೂ ನಿಷ್ಠೆಯನ್ನು ಮೆರೆಯುತ್ತಿದ್ದಾರೆ. ಇತ್ತೀಚೆಗೆ ಅವರು ಸತತ 24 ಗಂಟೆಗಳ ಕಾಲ ವಿಶ್ರಾಂತಿಯಿಲ್ಲದೆ ಕೆಲಸ ಮಾಡಿದ್ದು, ತಕ್ಷಣವೇ ತಮ್ಮ ಜನಪ್ರಿಯ ಕ್ವಿಜ್ ಶೋ ‘ಕೌನ್ ಬನೇಗಾ ಕರೋಡ್‌ಪತಿ’ (KBC) ಶೂಟಿಂಗ್‌ನಲ್ಲಿ ಪಾಲ್ಗೊಳ್ಳಲು ಸಜ್ಜಾಗಿದ್ದಾರೆ. ಆಗಸ್ಟ್ 6ರಂದು ‘ಕೌನ್ ಬನೇಗಾ ಕರೋಡ್‌ಪತಿ’ ಶೂಟಿಂಗ್‌ಗೆ ತೆರಳಬೇಕಿರುವ ಬಗ್ಗೆ ಉಲ್ಲೇಖಿಸಿದ ಅಮಿತಾಭ್ ಬಚ್ಚನ್ ಅವರು, ‘ಸ್ವಲ್ಪ ಆಹಾರ ಸೇವಿಸಿ, ವಿಶ್ರಾಂತಿ ಪಡೆಯಬೇಕಿದೆ….

Read More