ನಿರಂತರವಾಗಿ ಕಂಡುಬರುವ ಮಲಬದ್ಧತೆ ಸಮಸ್ಯೆ ಹೊಟ್ಟೆಯ ಕ್ಯಾನ್ಸರ್ ಗೆ ಕಾರಣವಾಗಬಹುದೇ? – Kannada News | Stomach Cancer Causes: Symptoms & Risk Factors

ಹೊಟ್ಟೆಯ ಕ್ಯಾನ್ಸರ್ ಗೂ ಮಲಬದ್ಧತೆಗೂ ಇರುವ ಸಂಬಂಧImage Credit source: Getty Images

ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಕ್ಯಾನ್ಸರ್ (Stomach Cancer) ಗೆ ಸಂಬಂಧಪಟ್ಟ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಹೊಟ್ಟೆಯಲ್ಲಿರುವ ಜೀವಕೋಶಗಳು ಅಸಹಜವಾಗಿ ಬೆಳೆಯಲು ಪ್ರಾರಂಭಿಸಿದಾಗ ಮತ್ತು ಅದರ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಿದಾಗ ಈ ರೋಗ ಕಂಡುಬರುತ್ತದೆ. ಪರಿಣಾಮವಾಗಿ, ಹೊಟ್ಟೆಯ ಕಾರ್ಯನಿರ್ವಹಣೆಯು ದುರ್ಬಲಗೊಳ್ಳಬಹುದು, ಅಷ್ಟೇ ಅಲ್ಲ, ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಇದರ ಜೊತೆಗೆ, ಅನೇಕರು ಮಲಬದ್ಧತೆಯ (Constipation) ಸಮಸ್ಯೆಯಿಂದ ಬಳಲುತ್ತಿರುವುದನ್ನು ನೀವು ನೋಡಿರಬಹುದು, ಇದು ಕೂಡ ಹೊಟ್ಟೆಯ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ಸಮಸ್ಯೆ ನಿರಂತರವಾಗಿ ಕಂಡುಬಂದಲ್ಲಿ ಗಂಭೀರ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಹಾಗಾದರೆ ಹೊಟ್ಟೆಯ ಕ್ಯಾನ್ಸರ್ ಗೂ ಮಲಬದ್ಧತೆಗೂ ಸಂಬಂಧವಿದೆಯೇ, ಈ ಸಮಸ್ಯೆ ಕಂಡುಬರುವುದಕ್ಕೆ ಕಾರಣವೇನು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೊಟ್ಟೆಯ ಕ್ಯಾನ್ಸರ್ ಕಂಡುಬರುವುದಕ್ಕೆ ಕಾರಣವೇನು?

ಲೇಡಿ ಹಾರ್ಡಿಂಗ್ ಆಸ್ಪತ್ರೆಯ ಡಾ. ಎಲ್.ಎಚ್. ​​ಘೋಟೇಕರ್ ಹೇಳುವ ಪ್ರಕಾರ, ಹೊಟ್ಟೆಯ ಜೀವಕೋಶಗಳು ಅಸಹಜವಾಗಿ ಬೆಳೆಯಲು ಪ್ರಾರಂಭಿಸಿದಾಗ ಹೊಟ್ಟೆಯಲ್ಲಿ ಕ್ಯಾನ್ಸರ್ ಕಂಡುಬರುತ್ತದೆ. ಈ ಜೀವಕೋಶಗಳು ತಮ್ಮ ಸಾಮಾನ್ಯ ಕಾರ್ಯಗಳನ್ನು ನಿರ್ವಹಿಸುವುದಿಲ್ಲ, ಅದಾದ ಬಳಿಕ, ಕ್ರಮೇಣ ಹೊಟ್ಟೆಯ ಹತ್ತಿರದ ಅಂಗಗಳನ್ನು ಹಾನಿಗೊಳಿಸಬಹುದು. ಈ ಬೆಳವಣಿಗೆಗೆ ಹಲವಾರು ಕಾರಣಗಳಿವೆ. ವಯಸ್ಸಾಗುವುದು ಮತ್ತು ಕುಟುಂಬದ ಇತಿಹಾಸವಿರುವುದು ಸೇರಿದಂತೆ ಇನ್ನಿತರ ಕಾರಣಗಳು ಇಂತಹ ಅಪಾಯವನ್ನು ಹೆಚ್ಚಿಸುತ್ತದೆ. ಇದೆಲ್ಲದರ ಜೊತೆಗೆ, ಎಣ್ಣೆಯುಕ್ತ, ಮಸಾಲೆಯುಕ್ತ ಮತ್ತು ಸಂಸ್ಕರಿಸಿದ ಆಹಾರಗಳನ್ನು ನಿರಂತರವಾಗಿ ಸೇವಿಸುವುದರ ಜೊತೆಗೆ ಧೂಮಪಾನ ಮತ್ತು ಮದ್ಯಪಾನವು ಹೊಟ್ಟೆಯ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹೊಟ್ಟೆಯಲ್ಲಿರುವ ಎಚ್. ಪೈಲೋರಿ ಬ್ಯಾಕ್ಟೀರಿಯಾದಂತಹ ಸೋಂಕುಗಳು ಸಹ ಕ್ಯಾನ್ಸರ್‌ಗೆ ಕಾರಣವಾಗಬಹುದು. ನಿಯಮಿತವಾಗಿ ಹೊಟ್ಟೆ ತಪಾಸಣೆ ಮಾಡದಿರುವುದು ಅಥವಾ ಆರಂಭಿಕ ಲಕ್ಷಣಗಳನ್ನು ನಿರ್ಲಕ್ಷಿಸುವುದರಿಂದ ರೋಗವು ತ್ವರಿತವಾಗಿ ಪ್ರಗತಿ ಹೊಂದಲು ಅನುವು ಮಾಡಿಕೊಡುತ್ತದೆ. ಆದ್ದರಿಂದ, ಸಮಯಕ್ಕೆ ಸರಿಯಾಗಿ ತಪಾಸಣೆ ಮಾಡುವುದು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ.

ಮಲಬದ್ಧತೆ ಹೊಟ್ಟೆಯ ಕ್ಯಾನ್ಸರ್‌ಗೆ ಕಾರಣವಾಗಬಹುದೇ?

ಸಾಮಾನ್ಯವಾಗಿ ಮಲಬದ್ಧತೆ ಹೊಟ್ಟೆಯ ಸಾಮಾನ್ಯ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ದೀರ್ಘಕಾಲದ ಮಲಬದ್ಧತೆ ಹೊಟ್ಟೆಗೆ ಒತ್ತಡವನ್ನುಂಟು ಮಾಡುತ್ತದೆ ಮತ್ತು ಆಂತರಿಕ ಸೋಂಕುಗಳ ಅಪಾಯವನ್ನು ಹೆಚ್ಚಿಸುತ್ತದೆ. ಮಲಬದ್ಧತೆಯಿಂದಾಗಿ, ಆಹಾರವು ದೀರ್ಘಕಾಲದವರೆಗೆ ಹೊಟ್ಟೆಯಲ್ಲಿ ಉಳಿಯುತ್ತದೆ, ಇದು ಹೊಟ್ಟೆಯ ಜೀವಕೋಶಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲ, ನಿರಂತರ ಮಲಬದ್ಧತೆ ಅನಿಲ, ಅಜೀರ್ಣ ಮತ್ತು ಉಬ್ಬರದಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಮಲಬದ್ಧತೆ ನೇರವಾಗಿ ಹೊಟ್ಟೆಯ ಕ್ಯಾನ್ಸರ್‌ಗೆ ಕಾರಣವಾಗದಿದ್ದರೂ, ಹೊಟ್ಟೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಉಲ್ಬಣಗೊಳಿಸುವ ಮೂಲಕ ಅಪಾಯಗಳನ್ನು ಹೆಚ್ಚಿಸುತ್ತದೆ. ಆದ್ದರಿಂದ, ಮಲಬದ್ಧತೆಯನ್ನು ನಿರ್ಲಕ್ಷಿಸಬೇಡಿ.

ಇದನ್ನೂ ಓದಿ: ಈ ಆಹಾರಗಳ ಸೇವನೆ ಮಾಡಿದರೆ ಮಲಬದ್ಧತೆ ಕಡಿಮೆಯಾಗಿ ಹೊಟ್ಟೆ ಕ್ಲೀನ್ ಆಗುತ್ತೆ

ಹೊಟ್ಟೆಯ ಆರೋಗ್ಯಕ್ಕೆ ಮುಖ್ಯವಾಗಿ ಸೇವಿಸಬೇಕಾದ ಆಹಾರಗಳು:

  • ತರಕಾರಿಗಳು, ಹಣ್ಣುಗಳು ಮತ್ತು ಧಾನ್ಯಗಳಂತಹ ಫೈಬರ್ ಭರಿತ ಆಹಾರವನ್ನು ಸೇವಿಸಿ.
  • ದಿನವಿಡೀ ಸಾಕಷ್ಟು ನೀರು ಕುಡಿಯಿರಿ.
  • ಲಘು ವ್ಯಾಯಾಮದಂತಹ ನಿಯಮಿತ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಿ.
  • ಸಂಸ್ಕರಿಸಿದ, ಎಣ್ಣೆಯುಕ್ತ ಮತ್ತು ಮಸಾಲೆಯುಕ್ತ ಆಹಾರ ಸೇವನೆ ಮಾಡುವುದನ್ನು ತಪ್ಪಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನಕ್ಕೆ ಕೇವಲ 20 ನಿಮಿಷ ಕಪಾಲಭಾತಿ ಮಾಡಿ ಆರೋಗ್ಯ ಕಾಪಾಡಿ: ಬಾಬಾ ರಾಮದೇವ್ ಸಲಹೆ – Kannada News | Baba Ramdev recommends Kapalabhati pranayama everyday 20 30 mins for healthier life

ಇಂದಿನ ವೇಗದ ಜೀವನದಲ್ಲಿ, ಕಳಪೆ ಆಹಾರ, ಒತ್ತಡ ಮತ್ತು ದೈಹಿಕ ಚಟುವಟಿಕೆಯ ಕೊರತೆಯಿಂದಾಗಿ, ಜನರು ಸಣ್ಣಪುಟ್ಟ ಕಾಯಿಲೆಗಳಿಂದ ಹಿಡಿದು ಗಂಭೀರ ಸಮಸ್ಯೆಗಳವರೆಗೆ ಬಳಲುತ್ತಿದ್ದಾರೆ. ಈ ಸ್ಥಿತಿಯಲ್ಲಿ, ಯೋಗ ಮತ್ತು ಪ್ರಾಣಾಯಾಮವನ್ನು ಆರೋಗ್ಯಕರ ಜೀವನ ನಡೆಸಲು ಸುಲಭ ಮತ್ತು ಪರಿಣಾಮಕಾರಿ ಮಾರ್ಗವೆಂದು ಪರಿಗಣಿಸಲಾಗುತ್ತದೆ. ಒಬ್ಬ ವ್ಯಕ್ತಿಯು ಪ್ರತಿದಿನ ತನ್ನ ದೇಹಕ್ಕೆ ಸ್ವಲ್ಪ ಸಮಯವನ್ನು ಮೀಸಲಿಟ್ಟರೆ, ಔಷಧಿಗಳ ಅಗತ್ಯ ಕಡಿಮೆಯಾಗುತ್ತದೆ ಎಂದು ಯೋಗ ಗುರು ಬಾಬಾ ರಾಮದೇವ್ (Baba Ramdev) ಯಾವಾಗಲೂ ಒತ್ತಿ ಹೇಳುತ್ತಿರುತ್ತಾರೆ. ನೀವು ಆಗಾಗ್ಗೆ ಅನಾರೋಗ್ಯಕ್ಕೆ ಒಳಗಾಗುತ್ತಿದ್ದರೆ, ಬಾಬಾ ರಾಮದೇವ್ ಕೆಲ ಆಸನಗಳನ್ನು ಶಿಫಾರಸು ಮಾಡುತ್ತಾರೆ. ಕಪಾಲಭಾತಿಯೂ ಕೂಡ ಅವರು ಶಿಫಾರಸು ಮಾಡುವ ಒಂದು ಪ್ರಾಣಾಯಾಮ ಕ್ರಮ.

ಕಪಾಲಭಾತಿ ಮಾಡುವ ಸರಿಯಾದ ವಿಧಾನವನ್ನು ಬಾಬಾ ತಿಳಿಸಿಕೊಟ್ಟಿದ್ದಾರೆ. ಪ್ರತಿದಿನ 20-30 ನಿಮಿಷಗಳ ಕಾಲ ಇದನ್ನು ಅಭ್ಯಾಸ ಮಾಡುವುದರಿಂದ ವಿವಿಧ ಕಾಯಿಲೆಗಳನ್ನು ಗುಣಪಡಿಸಬಹುದು. ಅದರ ವಿವರ ಇಲ್ಲಿದೆ.

ಪ್ರತಿದಿನ ಕಪಾಲಭಾತಿ ಪ್ರಾಣಾಯಾಮ

ಬಾಬಾ ರಾಮದೇವ್ ತಮ್ಮ ವೀಡಿಯೊಗಳಲ್ಲಿ ಯೋಗಾಸನಗಳನ್ನು ಮಾಡುವ ವಿಧಾನ ಮತ್ತು ಅದರ ಪ್ರಯೋಜನಗಳನ್ನು ಆಗಾಗ್ಗೆ ವಿವರಿಸುತ್ತಾರೆ. ಪ್ರತಿದಿನ 20-30 ನಿಮಿಷಗಳ ಕಾಲ ಕಪಾಲಭಾತಿ ಪ್ರಾಣಾಯಾಮವನ್ನು ಅಭ್ಯಾಸ ಮಾಡುವುದರಿಂದ ಅನೇಕ ಕಾಯಿಲೆಗಳನ್ನು ದೂರವಿಡಬಹುದು ಎಂದು ಒಂದು ವೀಡಿಯೊದಲ್ಲಿ ವಿವರಿಸುತ್ತಾರೆ. ಅವರ ಪ್ರಕಾರ, ಈ ಅಭ್ಯಾಸವು ದೇಹವನ್ನು ಆಂತರಿಕವಾಗಿ ಶುದ್ಧೀಕರಿಸುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಈ ಪ್ರಾಣಾಯಾಮವು ಹೊಟ್ಟೆ, ಯಕೃತ್ತು, ಮೇದೋಜ್ಜೀರಕ ಗ್ರಂಥಿ ಮತ್ತು ಕರುಳಿನ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ದೇಹದಲ್ಲಿ ಸಂಗ್ರಹವಾದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಪತಂಜಲಿ ದಿವ್ಯ ಯೌವನಾಮೃತ ವಟಿ ಔಷಧ ಯಾರಿಗೆ ಉಪಯುಕ್ತ? ಇದರ ಪ್ರಯೋಜನ, ಬಳಕೆ ಇತ್ಯಾದಿ ವಿವರ

ಕಪಾಲಭಾತಿಯಿಂದ ಪ್ರಯೋಜನಗಳು

ಬೊಜ್ಜು ನಿವಾರಣೆ: ಕಪಾಲಭಾತಿ ಪ್ರಾಣಾಯಾಮವನ್ನು ಪ್ರತಿದಿನ ಅಭ್ಯಾಸ ಮಾಡುವುದರಿಂದ ಹೊಟ್ಟೆಯ ಕೊಬ್ಬು ಕಡಿಮೆಯಾಗುತ್ತದೆ ಮತ್ತು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಬಾಬಾ ರಾಮದೇವ್ ಹೇಳುತ್ತಾರೆ. ಈ ಪ್ರಾಣಾಯಾಮದಲ್ಲಿ ಉಸಿರು ವೇಗವಾಗಿ ಹೊರಹಾಕುವಾಗ ಹೊಟ್ಟೆಯನ್ನು ಒಳಗೆ ಎಳೆಯಲಾಗುತ್ತದೆ. ಇದರಿಂದ ಫ್ಯಾಟ್ ಬರ್ನ್ ಮಾಡಲು ಸಹಾಯ ಮಾಡುತ್ತದೆ. ಆದಾಗ್ಯೂ, ಇದನ್ನು ಅಭ್ಯಾಸ ಮಾಡುವಾಗ ಸಮತೋಲಿತ ಆಹಾರ ಸೇವನೆ ಸಹ ಮುಖ್ಯವಾಗಿದೆ.

ಮಧುಮೇಹವನ್ನು ನಿಯಂತ್ರಣ: ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಕಪಾಲಭಾತಿ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ವಾಸ್ತವವಾಗಿ, ಕಪಾಲಭಾತಿ ಮೇದೋಜ್ಜೀರಕ ಗ್ರಂಥಿಯ ಬೀಟಾ ಕೋಶಗಳನ್ನು ಸಕ್ರಿಯಗೊಳಿಸುತ್ತದೆ, ಇದು ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಸಮತೋಲನವನ್ನು ಕಾಪಾಡಿಕೊಳ್ಳುತ್ತದೆ.

ಮಲಬದ್ಧತೆ ಮತ್ತು ಗ್ಯಾಸ್ಟ್ರೈಟಿಸ್: ಈ ಪ್ರಾಣಾಯಾಮವನ್ನು ನಿಯಮಿತವಾಗಿ ಮಾಡುವುದರಿಂದ ಜೀರ್ಣಾಂಗ ವ್ಯವಸ್ಥೆ ಬಲಗೊಳ್ಳುತ್ತದೆ. ಕಿಬ್ಬೊಟ್ಟೆಯ ಸ್ನಾಯುಗಳನ್ನು ಸಕ್ರಿಯಗೊಳಿಸುವುದರಿಂದ ಮತ್ತು ಪಚನಾಗ್ನಿಯನ್ನು ಹೆಚ್ಚಿಸುವುದರಿಂದ ಮಲಬದ್ಧತೆ ಮತ್ತು ಆ್ಯಸಿಡಿಟಿ ನಿವಾರಣೆ ಆಗುತ್ತದೆ. ಇದು ಗ್ಯಾಸ್ ಮತ್ತು ಟಾಕ್ಸಿಕ್ ಅನ್ನು ನಿವಾರಿಸಿ, ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ ಮತ್ತು ಕರುಳಿನ ಚಲನೆಯನ್ನು ಸುಗಮಗೊಳಿಸುತ್ತದೆ.

ಕೊಬ್ಬಿನ ಪಿತ್ತಜನಕಾಂಗ/ಯಕೃತ್ತಿನ ಸಮಸ್ಯೆ ನಿವಾರಣೆ: ಕಪಾಲಭಾತಿ ಅಭ್ಯಾಸವು ಕೊಬ್ಬಿನ ಪಿತ್ತಜನಕಾಂಗ ಮತ್ತು ಯಕೃತ್ತಿನ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಪಾಲಭಾತಿ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ, ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ದೇಹದಿಂದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಪತಂಜಲಿ ದಿವ್ಯ ದಂತಮಂಜನ್ ಟೂತ್ ಪೇಸ್ಟ್; ಹಲ್ಲಿನ ಸಮಸ್ಯೆಗಳನ್ನು ನಿವಾರಿಸುವ ಆಯುರ್ವೇದ ಉತ್ಪನ್ನ

ಕಪಾಲಭಾತಿ ಪ್ರಾಣಾಯಾಮ ಮಾಡುವ ಸರಿಯಾದ ಮಾರ್ಗ

ಕಪಾಲಭಾತಿ ಪ್ರಾಣಾಯಾಮ ಮಾಡಲು, ಮೊದಲು ನಿಮ್ಮ ಬೆನ್ನನ್ನು ನೇರವಾಗಿರುವಂತೆ ನೆಲದ ಮೇಲೆ ಕುಳಿತುಕೊಳ್ಳಿ. ಆಳವಾದ ಉಸಿರನ್ನು ತೆಗೆದುಕೊಳ್ಳಿ, ನಂತರ ಉಸಿರನ್ನು ಬಲವಾಗಿ ವೇಗವಾಗಿ ಬಿಡುತ್ತಾ ನಿಮ್ಮ ಹೊಟ್ಟೆಯನ್ನು ಒಳಗೆ ಎಳೆದುಕೊಳ್ಳಿ. ನಂತರ ಸಹಜವಾಗಿ ಉಸಿರು ಒಳಗೆಳೆದುಕೊಳ್ಳಿ. ಈ ಪ್ರಕ್ರಿಯೆಯನ್ನು 20-25 ಬಾರಿ ಪುನರಾವರ್ತಿಸಿ.

ಇನ್ನಷ್ಟು ಆರೋಗ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

IND vs NZ: ನ್ಯೂಜಿಲೆಂಡ್ ತಂಡದಲ್ಲಿ ತಮಿಳುನಾಡು ಮೂಲದ ಆಟಗಾರ; ರಜನಿಯ ಬಿಗ್ ಫ್ಯಾನ್

Source link

ಸೋಮನಾಥಪುರದಲ್ಲಿ ಪ್ರಧಾನಿ ಮೋದಿ ಶೌರ್ಯಯಾತ್ರೆ; 13ನೇ ಶತಮಾನದ ಹುತಾತ್ಮಕರಿಗೆ ಗೌರವ; ಡೋಲು ಡಮರುಗ ಸದ್ದು

Source link

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?, ಗಂಡ-ಹೆಂಡ್ತಿ ಜಗಳ ಕೇಸ್​ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ – Kannada News | Big Twist To Chikkaballapur Husband And Wife Harassment Case: Manjunath Released Meghashree Photos

ಚಿಕ್ಕಬಳ್ಳಾಪುರ, (ಜನವರಿ 11): ಗಂಡ ಹೆಂಡ್ತಿ ಜಗಳ ಉಂಡು ಮಲಗೋ ತನಕ ಅಂತಾರೆ. ಆದ್ರೆ, ಇವರ ಜಗಳ ಮಾತ್ರ ಬೀದಿಗೆ ಬಂದಿದೆ. ತನ್ನ ಗಂಡ ಸೈಕೋ, ಸಾಕಷ್ಟು ಟಾರ್ಚರ್ ಕೊಡುತ್ತಾನೆ ಎಂದು ಮಹಿಳೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಅತ್ತೆ ಮಾನವ ಮುಂದೆ ಬೆತ್ತಲಾಗಿ ಓಡಾಡುತ್ತಾನೆ. ಅಶ್ಲೀಲ ವಿಡಿಯೋ ತೋರಿಸಿ ಕಾಟ ಕೊಡುತ್ತಾನೆಂದು ದೂರಿದ್ದಾಳೆ. ಆದರೆ, ಈ ಕೇಸಿಗೆ ಗಂಡ ಟ್ವಿಸ್ಟ್ ಮೇಲೆ ಟ್ವಿಸ್ಟ್ ಕೊಟ್ಟಿದ್ದಾರೆ. ನಮ್ಮಿಬ್ಬರಿಗೂ ಅಧಿಕೃತವಾಗಿ ಮದುವೆಯಾಗಿಲ್ಲ. ಮದುವೆ ನೊಂದಣಿಗೆ ಮೇಘಾಶ್ರೀ ದಾಖಲೆಗಳನ್ನು ಕೋಡಲಿಲ್ಲ. ಇದರಿಂದ ಅನುಮಾನ ಬಂದು ಪ್ರಶ್ನಿಸಿದಾಗ ಮೇಘಾಶ್ರೀ ಬಂಡವಾಳ ಬಯಲಾಗಿದೆ ಎಂದು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಮೇಘಾಶ್ರೀ ಪತಿ ಮಂಜುನಾಥ್ ಟಿವಿ9ಗೆ ಪ್ರತಿಕ್ರಿಯಿಸಿ, ನಾನು ಕೆಲಸ ಮಾಡ್ತಿದ್ದ ಕಂಪನಿಯಲ್ಲಿ ನನ್ನ ಬಳಿ ರಿಪೋರ್ಟ್ ಮಾಡಲು ಬಂದಿದ್ದಳು. ಬೆತ್ತಲೆಯಾಗಿ ವಿಡಿಯೊ ಕಾಲ್ ಮಾಡುವುದು, ಅರೆಬೆತ್ತಲು ವಿಡಿಯೊ ಕಳುಹಿಸುವುದು, ಹನಿಟ್ರ್ಯಾಪ್ ಮಾಡುವ ರೀತಿಯಲ್ಲಿ ವರ್ತಿಸುತ್ತಿದ್ದಳು. ನಾನು ಆಕೆಯ ಜೊತೆ ವಿಚಿತ್ರವಾಗಿ ವರ್ತಿಸಿಲ್ಲ. ಆಕೆ ಮೊದಲೆ ಎರಡು ಮದುವೆ ಮಾಡಿಕೊಂಡಿದ್ದಳು. ಮದುವೆ ಮಾಡಿಕೊಂಡಿರುವ ವಿಚಾರ ನನಗೆ ತಿಳಿಸಿರಲಿಲ್ಲ. ಆಕೆ ಶೋಕಿ ಮಾಡುವ ಗೀಳು ಹೊಂದಿದ್ದಾಳೆ. ಕುಡಿದು ಬೇಕಾಬಿಟ್ಟಿ ವರ್ತಿಸುತ್ತಿದ್ದಳು ಎಂದು ಆರೋಪಿಸಿದ್ದಾರೆ.

ಇದನ್ನೂ ನೋಡಿ; ಎರಡು ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​

ರೌಡಿ ಶೀಟರ್ ನೊರ್ವನನ್ನು ಅಣ್ಣ ಅಂತಾ ಆತನಿಂದ ಬೆದರಿಕೆ ಹಾಕಿಸುತ್ತಿದ್ದಳು. ಸುಮಾರು 25 ಲಕ್ಷ ರೂಪಾಯಿ ನಷ್ಟು ಹಣ ಪಡೆದುಕೊಂಡಿದ್ದಾಳೆ. ಮೊದಲನೆ ಗಂಡ, ಎರಡನೇ ಗಂಡ, ಶಾಪಿಂಗ್ ಮಾಡುವ , ಸ್ನೇಹಿತರ ಜೊತೆ ಶೋಕಿ ಮಾಡುವ ಫೋಟೋಗಳನ್ನು ರಿಲೀಸ್ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

IND vs NZ: ಪಂದ್ಯದ ವೇಳೆ ಗಾಯಗೊಂಡು ಮೈದಾನದಿಂದ ಹೊರನಡೆದ ಟೀಂ ಇಂಡಿಯಾ ಆಲ್‌ರೌಂಡರ್

Source link

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ: ವಾಹನ ಸವಾರರ ಪರದಾಟ – Kannada News | Rajajinagar Drainage Blocked: Unscientific Asphalt Laying Over Drain Covers Causes Safety Concerns

ಬೆಂಗಳೂರು, ಜ.11:  ರಾಜಾಜಿನಗರದ ಸುಜಾತಾ ಅಂಡರ್‌ಪಾಸ್‌ನಲ್ಲಿ ಜಿಬಿಎ ನಡೆಸಿದ ಅವೈಜ್ಞಾನಿಕ ರಸ್ತೆ ಡಾಂಬರೀಕರಣವು ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡಿದೆ. ರಸ್ತೆ ಗುಂಡಿಗಳನ್ನು ಮುಚ್ಚುವ ಗಡಿಬಿಡಿಯಲ್ಲಿ ಡ್ರೈನ್ ಕವರ್‌ಗಳ ಮೇಲೆಯೇ ಡಾಂಬರ್ ಹಾಕಲಾಗಿದೆ. ಇದರಿಂದ ಡ್ರೈನ್ ಕವರ್‌ಗಳ ಬಳಿ ವಾಹನಗಳು ಕುಸಿಯುತ್ತಿದ್ದು, ಸವಾರರು ಪರದಾಡುತ್ತಿದ್ದಾರೆ. ದ್ವಿಚಕ್ರ ವಾಹನ ಸವಾರರು ಜಿಗಿದು ಬೀಳುವ ಅಪಾಯವನ್ನು ಎದುರಿಸುತ್ತಿದ್ದಾರೆ. ಇದಲ್ಲದೆ, ಅಂಡರ್‌ಪಾಸ್‌ನಲ್ಲಿ ನೀರು ಸರಾಗವಾಗಿ ಹರಿಯಲು ನಿರ್ಮಿಸಲಾಗಿದ್ದ ಗ್ಯಾಲರಿಗಳನ್ನು ಸಂಪೂರ್ಣವಾಗಿ ಟಾರ್ ಹಾಕಿ ಮುಚ್ಚಲಾಗಿದೆ. ಮುಂಬರುವ ಮಳೆಗಾಲದಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಪರಿಸ್ಥಿತಿಯಲ್ಲಿ ನೀರು ಹರಿಯಲು ಅಡ್ಡಿಯಾಗಿ ಅಂಡರ್‌ಪಾಸ್‌ನಲ್ಲಿ ನೀರು ತುಂಬಿ ದ್ವಿಚಕ್ರ ವಾಹನ ಸವಾರರಿಗೆ ಗಂಭೀರ ಸಮಸ್ಯೆ ಉಂಟಾಗಲಿದೆ. ಇದರಿಂದ ವಾಹನಗಳು ಸ್ಕಿಡ್ ಆಗಿ ಅಪಘಾತಗಳಾಗುವ ಸಾಧ್ಯತೆಯಿದೆ. ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಿ, ಮುಚ್ಚಿರುವ ಗ್ಯಾಲರಿಗಳನ್ನು ಸರಿಪಡಿಸಿ, ಡ್ರೈನ್ ಕವರ್‌ಗಳಿಂದ ಟಾರ್ ತೆಗೆಯಬೇಕೆಂದು ವಾಹನ ಸವಾರರು ಆಗ್ರಹಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Chitradurga Jobs: ಗ್ರಾಮ ಪಂಚಾಯತ್ನಲ್ಲಿ ಬಿಲ್ ಕಲೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು – Kannada News | Chitradurga Bill Collector Jobs: GP Recruitment, Apply Online by Feb 8

ಚಿತ್ರದುರ್ಗ ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಮೂಲಕ ಬಿಲ್ ಕಲೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಚಿತ್ರದುರ್ಗದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 08ರ ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು.

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಪೂರ್ಣಗೊಳಿಸಬೇಕು.

ವಯಸ್ಸಿನ ಮಿತಿ:

ಫೆಬ್ರವರಿ 08 , 2026 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳು ಎಂದು ನಿಗದಿಪಡಿಸಲಾಗಿದೆ. ಇದಲ್ಲದೇ 2A, 2B, 3A, 3B ಅಭ್ಯರ್ಥಿಗಳಿಗೆ 03 ವರ್ಷಗಳು, SC/ST ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಇದನ್ನೂ ಓದಿ: ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕ್ರೆಡಿಟ್ ಆಫೀಸರ್ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲನೆಯದಾಗಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.(Chitradurga-Gram-Panchayat-Recruitment)
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ (ಅನ್ವಯಿಸಿದರೆ) ಅಪ್‌ಲೋಡ್ ಮಾಡಿ.
  • ಕೊನೆಗೆ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಕ್ಲಿಕ್ ಮಾಡಿ. ಬಹು ಮುಖ್ಯವಾಗಿ ಅರ್ಜಿಯ ಪ್ರಿಂಟ್​ ಕಾಪಿ ತೆಗೆದಿಟ್ಟುಕೊಳ್ಳಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯಶ್ ಜೊತೆ ಕಾರಿನಲ್ಲಿದ್ದ ಯುವತಿ ಯಾರು? ಖಾತ್ರಿ ಪಡಿಸಿದ ನಿರ್ದೇಶಕಿ – Kannada News | Not Natalie Burn its Beatriz Taufenbach is with Yash in Toxic teaser

ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್ ಕೆಲವೇ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ಟೀಸರ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ, ಸುದ್ದಿ ವಾಹಿನಿಗಳಲ್ಲಿಯೂ ಸಹ ಚರ್ಚೆ ನಡೆಯುತ್ತಿದೆ. ಇದೀಗ ಬಿಡುಗಡೆ ಆಗಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್ ಹಾಲಿವುಡ್ ಮಾದರಿಯಲ್ಲಿದೆ. ಮೂರು ನಿಮಿಷವೂ ಇಲ್ಲದ ಈ ಟೀಸರ್ ಅನ್ನು ವಿಶ್ವದಾದ್ಯಂತ 30 ಕೋಟಿಗೂ ಹೆಚ್ಚು ಮಂದಿ ಈಗಾಗಲೇ ವೀಕ್ಷಿಸಿದ್ದಾರೆ. ಟೀಸರ್​​ನಲ್ಲಿರುವ ಹಾಟ್ ದೃಶ್ಯದ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ.

ಇದು ಹೀಗಿರುವಾಗ, ಟೀಸರ್​​ನಲ್ಲಿ ಯಶ್​​ ಜೊತೆ ಕಾರಿನಲ್ಲಿರುವ ಯುವತಿ ಯಾರೆಂಬುದನ್ನು ಪತ್ತೆ ಹಚ್ಚುವ ಕಾರ್ಯವನ್ನು ನೆಟ್ಟಿಗರು ಮಾಡಿದ್ದಾರೆ. ಬಹುತೇಕರು, ‘ಟಾಕ್ಸಿಕ್’ ಟೀಸರ್​​ನಲ್ಲಿ ಯಶ್ ಜೊತೆಗಿರುವ ಯುವತಿ ನಟಿ ನಟೇಲಾ ಬರ್ನ್ ಎನ್ನಲಾಗಿತ್ತು. ಹಲವು ಹಾಲಿವುಡ್ ಸಿನಿಮಾಗಳಲ್ಲಿ ನಟಿಸಿರುವ ನಟೇಲಿ ಬರ್ನ್, ‘ಟಾಕ್ಸಿಕ್’ ಸಿನಿಮಾದ ಟೀಸರ್ ಹಂಚಿಕೊಂಡಿದ್ದರು. ಅಲ್ಲದೆ, ಅವರ ವಿಕಿಪೀಡಿಯಾ ಪೇಜ್​​ನಲ್ಲಿಯೂ ನಟೇಲಿ ಬರ್ನ್, ‘ಟಾಕ್ಸಿಕ್’ ಸಿನಿಮಾನಲ್ಲಿ ನಟಿಸುತ್ತಿರುವುದಾಗಿ ಮಾಹಿತಿ ಇತ್ತು. ಇದೇ ಕಾರಣಕ್ಕೆ ಎಲ್ಲರೂ ‘ಟಾಕ್ಸಿಕ್’ ಸಿನಿಮಾದ ಟೀಸರ್​​ನಲ್ಲಿ ಯಶ್ ಜೊತೆಗೆ ಹಾಟ್ ದೃಶ್ಯದಲ್ಲಿ ಕಾಣಿಸಿಕೊಂಡಿರುವ ವಿದೇಶಿ ನಟಿ ನಟೇಲಿ ಬರ್ನ್ ಎಂದುಕೊಂಡಿದ್ದರು.

ಆದರೆ ಇದನ್ನು ಗಮನಿಸಿದ ‘ಟಾಕ್ಸಿಕ್’ ಸಿನಿಮಾದ ನಿರ್ದೇಶಕಿ ಗೀತು ಮೋಹನ್​​ದಾಸ್, ‘ಟಾಕ್ಸಿಕ್’ ಸಿನಿಮಾ ಟೀಸರ್​​ನಲ್ಲಿ ಇದ್ದ ನಟಿಯನ್ನು ಸಾಮಾಜಿಕ ಜಾಲತಾಣದ ಮೂಲಕ ಪರಿಚಯಿಸಿದ್ದಾರೆ. ಟೀಸರ್​​ನಲ್ಲಿರುವುದು ನಟೇಲಿ ಬರ್ನ್ ಅಲ್ಲ ಬದಲಿಗೆ ನಟಿ ಬಿಯಾತ್ರೀಜ್ ಟಾಫೆಬಾಕ್. ನಟಿಯ ಚಿತ್ರ ಹಂಚಿಕೊಂಡಿರುವ ಗೀತು ಮೋಹನ್​​ದಾಸ್, ‘ಈಕೆಯೇ ನನ್ನ ಸಿಮೆಟ್ರಿ (ಸ್ಮಶಾನ)ದ ಹುಡುಗಿ’ ಎಂದಿದ್ದಾರೆ. ಅವರ ಇನ್​​ಸ್ಟಾಗ್ರಾಂ ಖಾತೆಯನ್ನು ಸಹ ಗೀತು ಮೋಹನ್​​ದಾಸ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಯಶ್ ಮುಂದಿನ ಸಿನಿಮಾ ನಿರ್ದೇಶಕರಿಗೆ ಸಲಹೆ ಕೊಟ್ಟ ‘ಟಾಕ್ಸಿಕ್’ ನಿರ್ದೇಶಕಿ

ನಟಿ ಬಿಯಾತ್ರೀಜ್ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ. ನಟಿಯ ಇನ್​​ಸ್ಟಾಗ್ರಾಂ ಖಾತೆ ಸಹ ಲಾಕ್ ಆಗಿದೆ. ಆದರೆ ‘ಟೀಸರ್’ ಬಿಡುಗಡೆ ಆಗುವ ಮುಂಚೆ ಬಿಯಾತ್ರೀಜ್ ಅವರ ಇನ್​​ಸ್ಟಾಗ್ರಾಂನಲ್ಲಿ ಕೇವಲ 1800 ಮಂದಿ ಫಾಲೋವರ್​​ಗಳು ಇದ್ದರು. ಆದರೆ ಟೀಸರ್ ಬಿಡುಗಡೆ ಆದ ಬಳಿಕ ಇದು ಲಕ್ಷಗಳಲ್ಲಿ ಹೆಚ್ಚಾಗಿರುವುದಂತೂ ಖಾತ್ರಿ. ಆದರೆ ಅವರ ಇನ್​​ಸ್ಟಾಗ್ರಾಂ ಪ್ರೈವೇಟ್ ಆಗಿರುವ ಕಾರಣ ಆಯ್ದ ಕೆಲವರಿಗಷ್ಟೆ ಅವರ ಫೋಟೊಗಳು, ಫಾಲೋವರ್​​ಗಳ ಸಂಖ್ಯೆ ತಿಳಿಯಲಿದೆ.

‘ಟಾಕ್ಸಿಕ್’ ಸಿನಿಮಾನಲ್ಲಿ ಯಶ್ ನಾಯಕರಾದರೂ ನಾಯಕಿಯ ಪಾತ್ರಗಳಿಗೆ ಹೆಚ್ಚಿನ ಪ್ರಾಧಾನ್ಯತೆ ಇದ್ದಂತಿದೆ. ಸಿನಿಮಾನಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅವರುಗಳು ನಾಯಕಿಯರಾಗಿ ನಟಿಸಿದ್ದಾರೆ. ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ವಿಧಾನಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮುಖಂಡ ಆತ್ಮಹತ್ಯೆಗೆ ಶರಣು – Kannada News | Davanagere BJP Leader Chandrasekhar Sunkol Commits Suicide

ಚಂದ್ರಶೇಖರ್ ಸಂಕೋಳ್ ಶಾಮನೂರು ಗ್ರಾಮದಲ್ಲಿ ಸಿಮೆಂಟ್, ಕಬ್ಬಿಣದ ಅಂಗಡಿಯನ್ನು ನಡೆಸುತ್ತ ಇಡೀ ಜಿಲ್ಲೆಗೆ ಹೆಸರುವಾಸಿಯಾಗಿದ್ದರು. ಅಲ್ಲದೇ ಬಿಜೆಪಿಯ ಪ್ರಮುಖ ಮುಂಖಂಡನಾಗಿ ಪಕ್ಷ ಸಂಘಟನೆಯಲ್ಲಿ ಕೂಡ ಹೆಚ್ಚು ತೊಡಗಿಸಿಕೊಂಡಿದ್ದರು. ಅಲ್ಲದೆ ಅಡಿಕೆ ತೋಟ, ಕಾಂಪ್ಲೆಕ್ಸ್ ಗಳನ್ನು ಕೂಡ ಹೊಂದಿದ್ದ ಚಂದ್ರಶೇಖರ್, ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

Source link

Exit mobile version