‘ಅವರು ಕೆಟ್ಟವರಲ್ಲ, ದೇವರೇ ಇದನ್ನು ಮಾಡಿಸಿದ್ದು’; ಕಷ್ಟದ ದಿನ ನೆನೆದ ಮಯೂರಿ – Kannada News | Mayuri Kyatari’s Journey: From TV Struggles to Film Stardom and Aspiring Comeback

ಮಯೂರಿ (Mayuri) ಅವರು ‘ಅಶ್ವಿನಿ ನಕ್ಷತ್ರ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದವರು.ನಂತರ ಹಿರಿತೆರೆಯಲ್ಲಿ ಮಿಂಚಿದರು. ಅವರು ಈಗ ಫ್ಯಾಮಿಲಿ ಕಡೆ ಗಮನ ಹರಿಸುತ್ತಾ ಇದ್ದಾರೆ. ಮಗ ಆರವ್​ಗೆ ಐದು ವರ್ಷ. ಅವರು ನಟನಾ ಕ್ಷೇತ್ರದಲ್ಲಿ ಮೊದಲಿನಷ್ಟು ಆ್ಯಕ್ಟೀವ್ ಆಗಿಲ್ಲ, ಆದರೆ, ಅವರಿಗೆ ನಟನೆಗೆ ಮರಳಬೇಕು ಎಂಬ ಆಸೆ ಇದೆ. ಈ ಎಲ್ಲಾ ವಿಷಯಗಳ ಬಗ್ಗೆ ಮಾತನಾಡುವಾಗ ತಾವು ನಡೆದು ಬಂದ ಕಷ್ಟದ ಹಾದಿಯನ್ನು ಅವರು ನೆನಪಿಸಿಕೊಂಡರು. ತಮಗೆ ಕೆಟ್ಟದನ್ನು ಮಾಡಿದವರು ಯಾರೂ ಕೆಟ್ಟವರಲ್ಲ ಎಂದಿದ್ದಾರೆ.

ಮಯೂರಿ ಆಗತಾನೇ ಬಣ್ಣದ ಲೋಕಕ್ಕೆ ಬಂದಿದ್ದರು. ಆಗ ಅವರು ಸಾಕಷ್ಟು ತೊಂದರೆ ಅನುಭವಿಸಿದಿರಂತೆ. ಕಿರುತೆರೆ ನಟಿ ಏನು ಮಾಡಲು ಸಾಧ್ಯ ಎಂಬ ರೀತಿಯಲ್ಲಿ ಎಲ್ಲರೂ ಪ್ರಶ್ನೆ ಮಾಡಿದ್ದರು. ಆ ಪ್ರಶ್ನೆ ಮಯೂರಿ ಅವರನ್ನು ಬಹುವಾಗಿ ಚುಚ್ಚಿತ್ತು. ಸಿನಿಮಾ ಮಾಡಲು ಇದುವೇ ಅವರಿಗೆ ಸ್ಫೂರ್ತಿ ಆಯಿತು.ರಾಜೇಶ್ ಗೌಡ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.

‘ಗೊತ್ತಿದ್ದು ಗೊತ್ತಿಲ್ಲದೆ ತಪ್ಪು ಸರಿ ಮಾಡಿರುತ್ತೇವೆ. ನಾನು ಆಗತಾನೇ ನಟನೆಗೆ ಬಂದಿದ್ದೆ. ಆಗ ಕೆಲವರು ಕೆಟ್ಟ ಕಮೆಂಟ್ ಪಾಸ್ ಮಾಡುತ್ತಿದ್ದರು. ಅವರು ಕೆಟ್ಟವರಲ್ಲ. ನಾನು ಏನೋ ಮಾಡಿ ತೋರ್ತೀನಿ ಎಂಬ ಛಲ ಬಂದಿದ್ದು ಅವರಿಂದ. ದೇವರೇ ಅವರಿಗೆ ಟಾಸ್ಕ್ ಕೊಟ್ಟಿದ್ದರು ಅನಿಸುತ್ತದೆ. ನನಗೆ ಯಾರಾದರೂ ಏನಾದರೂ ಹೇಳಿದರೆ ಅದು ನನಗೆ ಮ್ಯಾಟರ್ ಆಗುತ್ತದೆಯೋ ಇಲ್ಲವೋ ಎಂದು ನೋಡುತ್ತೇನೆ. ಮ್ಯಾಟರ್ ಆದರೆ ಮಾತ್ರ ಯೋಚಿಸುವೆ’ ಎಂಬುದು ಮಯೂರಿ ಮಾತು.

‘ಮೂರನೇ ವ್ಯಕ್ತಿಯ ಜೀವನದಲ್ಲಿ ಏನಾಗುತ್ತಿದೆ ಎಂಬುದನ್ನು ನೋಡೋದು ಸಹಜಗುಣ. ಈ ರೀತಿಯ ಗುಣ ಬೆಳೆಸಿಕೊಂಡರೆ ಎಲ್ಲಿಯೂ ಹೋಗೋಕೆ ಆಗಲ್ಲ. ಇದ್ದಲ್ಲಿಯೇ ಇರಬೇಕಾಗುತ್ತದೆ. ಹಾಗೆ ಮಾಡಬಾರದು. ಆ ಎಲ್ಲವೂ ಚೆನ್ನಾಗಿರುತ್ತದೆ. ಎಲ್ಲರ ಲೈಫ್​​​ಗೂ ಕ್ಲ್ಯಾರಿಟಿ ಬರುತ್ತದೆ’ ಎಂದು ಹೇಳಿದ್ದಾರೆ ಅವರು. ನೋಡೋ ದೃಷ್ಟಿ ಚೆನ್ನಾಗಿದ್ದರೆ ಎಲ್ಲವೂ ಚೆನ್ನಾಗಿ ಕಾಣುತ್ತದೆ’ ಎಂದಿದ್ದಾರೆ ಮಯೂರಿ.

ಇದನ್ನೂ ಓದಿ: ‘ಮಗನಿಗೆ ಒಳ್ಳೆಯ ಅಪ್ಪ ಇದ್ದಾನೆ’; ಮೊದಲ ಬಾರಿಗೆ ಡಿವೋರ್ಸ್ ಬಗ್ಗೆ ಮೌನ ಮುರಿದ ಮಯೂರಿ

‘ಹಾಡು ಕೇಳುವಾಗ, ಸುತ್ತಾಡುವಾಗ ನನಗೆ ನೆನಪು ಕಾಡುತ್ತದೆ. ಹಾಗೆ ಮಾಡದೆ, ಹೀಗೆ ಮಾಡದೆ ಎಂದೆಲ್ಲ ನೆನಪಿಸಿಕೊಳ್ಳುತ್ತೇವೆ. ನಮ್ಮನ್ನು ನಾವು ಮೊದಲು ಕ್ಷಮಿಸಿಕೊಳ್ಳಬೇಕು. ಆಗ ಎಲ್ಲವೂ ಸುಂದರವಾಗಿರುತ್ತದೆ’ ಎನ್ನುತ್ತಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ತಡರಾತ್ರಿ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಭೇಟಿಯಾದ ಡಿಕೆ ಸಹೋದರರು: ಕಾಂಗ್ರೆಸ್ ಕುರ್ಚಿ ಕದನಕ್ಕೆ ರಂಗು – Kannada News | DK Brothers Meet Mallikarjun Kharge, KC Venugopal Late Night in Delhi; Karnataka Congress Power Tussle Intensifies

ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್Image Credit source: tv9

ನವದೆಹಲಿ, ಫೆಬ್ರವರಿ 12: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಕುರ್ಚಿ ಕದನ ದಿನಕ್ಕೊಂದು ರಂಗುಪಡೆಯುತ್ತಿದೆ. ಮಾಜಿ ಸಚಿವ ಕೆಎನ್‌ ರಾಜಣ್ಣ ಹೇಳಿದ ಸೆಪ್ಟೆಂಬರ್‌ ಕ್ರಾಂತಿ ನಡೆಯಲಿಲ್ಲ. ಬಳಿಕ ನವೆಂಬರ್ ಕ್ರಾಂತಿಯೂ ಆಗಲಿಲ್ಲ. ಡಿಸೆಂಬರ್‌ ಕ್ರಾಂತಿ, ಹೊಸ ವರ್ಷ, ಸಂಕ್ರಾಂತಿಯ ಕೊಡುಗೆ ಎಲ್ಲವೂ ಮುಗಿದವು. ವಿಧಾನಮಂಡಲ ಅಧಿವೇಶನದ ಬಳಿಕ ಹೈಕಮಾಂಡ್‌ ದೆಹಲಿಗೆ ಕರೆಯಲಿದೆ ಎಂದು ಹೇಳಲಾಯಿತು. ಈಗ ಬಜೆಟ್‌ ಅಧಿವೇಶನದ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ರಾಜಕೀಯ ಕ್ರಾಂತಿಯಾಗಲಿದೆ ಎಂದು ಹೇಳಲಾಗುತ್ತಿದೆ. ಇದೀಗ ದೆಹಲಿಯಲ್ಲಿ ಡಿಕೆ ಸಹೋದರರು ದಾಳ ಉರುಳಿಸಿದ್ದು ಸಂಚಲನಕ್ಕೆ ಕಾರಣವಾಗಿದೆ.

ತಡರಾತ್ರಿ ಖರ್ಗೆ ನಿವಾಸದಲ್ಲಿ ಮಹತ್ವದ ಮಾತುಕತೆ

ಹೈಕಮಾಂಡ್ ನಾಯಕರ ಭೇಟಿಗಾಗಿ 2 ದಿನಗಳಿಂದ ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ಸಕ್ರಿಯರಾಗಿದ್ದಾರೆ. ಶತಾಯಗತಾಯ ಅಧಿಕಾರ ಹಂಚಿಕೆ ಬಗ್ಗೆ ಅಂತಿಮ ನಿರ್ಧಾರ ಆಗಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಬುಧವಾರವೇ ಡಿಕೆ ಸುರೇಶ್‌ಕೂಡ ದೆಹಲಿಗೆ ತೆರಳಿದ್ದು, ತಡರಾತ್ರಿ ಮಹತ್ವದ ಬೆಳವಣಿಗೆಯಲ್ಲಿ ದೆಹಲಿಯ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಎಡತಾಕಿ ಚರ್ಚಿಸಿದ್ದಾರೆ. ಖರ್ಗೆ ಭೇಟಿ ಬೆನ್ನಲ್ಲೇ ಕೆಸಿ ವೇಣುಗೋಪಾಲ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಕದ್ದುಮುಚ್ಚಿ ಮಾತನಾಡಿಲ್ಲ. ನಾನು ಸಿದ್ದರಾಮಯ್ಯ ಮಾತನಾಡಿಡಿದ್ದೇವೆ. ಕಾಲವೇ ಉತ್ತರಿಸುತ್ತದೆ ಎಂದು ದೆಹಲಿಯಲ್ಲಿ ಡಿಸಿಎಂ ಡಿಕೆಶಿ ಆಡಿದ ಮಾತು ಕೌತುಕ ಹೆಚ್ಚಿಸಿದೆ. ಇನ್ನು ಡಿಕೆ ಸುರೇಶ್ ಕೂಡ, ಸಿಎಂ ಕೊಟ್ಟ ಮಾತು ಉಳಿಸಿಕೊಳ್ತಾರೆ ಎಂದಿದ್ದಾರೆ.

ಪವರ್ ಶೇರಿಂಗ್ ಬಗ್ಗೆ ಮಾತುಕತೆ ಆಗಿದೆ ಎಂಬ ಧಾಟಿಯಲ್ಲೇ ಡಿಕೆ ಸಹೋದರರು ಮಾತನಾಡಿದ್ದರೆ, ಸಿಎಂ ಸಿದ್ದರಾಮಯ್ಯ ಮಾತ್ರ ಅಂತಹದ್ದೇನು ಅಗಿಲ್ಲ. ಹೈಕಮಾಂಡ್ ಹೇಳಿದರೆ ನಾನು, ಡಿಕೆ ಕೇಳ್ಬೇಕು ಎಂದಿದ್ದಾರೆ. ನಾಯಕತ್ವ ಬದಲಾವಣೆ ಕುರಿತು ಪ್ರಶ್ನೆ ಕೇಳಿದ್ದಕ್ಕೆ ಗರಂ ಆಗಿದ್ದಾರೆ. ಪೂರ್ಣಾವಧಿ ಸಿದ್ದರಾಮಯ್ಯ ಅವರೇ ಸಿಎಂ ಎಂದು ಪದೇ ಪದೇ ಯತೀಂದ್ರ ಹೇಳಿರುವ ಮಾತಿಗೆ ಡಿಕೆ ಸುರೇಶ್ ನಯವಾಗೇ ಕೌಂಟರ್ ಕೊಟ್ಟಿದ್ದಾರೆ. ಅವರ ಮಾತೇ ವೇದವಾಕ್ಯ ಎಂದು ಕುಹಕವಾಡಿದ್ದಾರೆ.

ಸಿದ್ದರಾಮಯ್ಯ, ಡಿಕೆಶಿ ಬಣಗಳ ನಡುವೆ ವಾಕ್ಸಮರ ಜೋರು

ಇದೆಲ್ಲದರ ನಡುವೆ ಡಿಕೆಶಿ ಬಣ ಮತ್ತು ಸಿದ್ದರಾಮಯ್ಯ ಬಣದವರ ಮಾತಿನ ಯುದ್ಧವೂ ಜೋರಾಗಿದೆ. ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ಮೌನ ಮುರಿಯಬೇಕು ಎಂದು ಶಾಸಕ ಬಾಲಕೃಷ್ಣ ಹೇಳಿದ್ದಾರೆ. 2028ರವರೆಗೂ ಸಿದ್ದರಾಮಯ್ಯ ಅವರೇ ಸಿಎಂ. ಆದರೆ ಹೈಕಮಾಂಡ್ ಬೀದಿ ದಾಸಯ್ಯನ ಸಿಎಂ ಮಾಡಿದರೂ ಒಪ್ಪಿಕೊಳ್ಳಬೇಕಾಗುತ್ತದೆ ಎಂದು ಸಚಿವ ಜಮೀರ್ ಹೇಳಿದ್ದಾರೆ.

ಸಿದ್ದರಾಮಯ್ಯ ಆಪ್ತ ಸಚಿವರ ನೇತೃತ್ವದಲ್ಲಿ ಶಾಸಕರ ಫಾರಿನ್ ಟೂರ್

ಸಿದ್ದರಾಮಯ್ಯ ಆಪ್ತ ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ನೇತೃತ್ವದಲ್ಲಿ ಫೆಬ್ರವರಿ 16ಕ್ಕೆ 25 ಶಾಸಕರ ಫಾರಿನ್ ಟೂರ್ ಕೈಗೊಳ್ಳಲಾಗುತ್ತಿದೆ. ಕುರ್ಚಿ ಉಳಿಸಿಕೊಳ್ಳುವ ಆತಂಕದಲ್ಲಿರುವ ಸಿದ್ದರಾಮಯ್ಯ ತಮ್ಮ ಬಣದ ಶಾಸಕರನ್ನು ಹಿಡಿದಿಟ್ಟಿಕೊಳ್ಳಲು ಸದ್ದಿಲ್ಲದೇ ಫಾರಿನ್‌ ಟ್ರಿಪ್ ಕಳಿಸಲು ಪ್ಲಾನ್‌ ಮಾಡಿದ್ದಾರೆ. ಪಟ್ಟಕ್ಕಾಗಿ ದೆಹಲಿ ಯಾತ್ರೆಯಲ್ಲಿರುವ ಡಿಕೆ ಶಿವಕುಮಾರ್ ಹೇಗಾದರೂ ಮಾಡಿ ಕುರ್ಚಿ ಪಡೆಯಬೇಕು ಎಂದು ಹೈಕಮಾಂಡ್‌ ಹಿಂದೆ ಬಿದ್ದಿದ್ದಾರೆ.

ಇದನ್ನೂ ಓದಿ: ಸಿಎಂ ಕುರ್ಚಿ ಕದನ: ಅಖಾಡಕ್ಕಿಳಿದ ಡಿಕೆ ಬ್ರದರ್ಸ್​; ಕೊಟ್ಟ ಮಾತಿನ ವಿಚಾರ ಮತ್ತೆ ಮುನ್ನೆಲೆಗೆ

ಏತನ್ಮಧ್ಯೆ, ಬಜೆಟ್‌ನಲ್ಲಿ ಸಿಗುವ ಅನುದಾನಕ್ಕಿಂತ ಫಾರಿನ್‌ ಟೂರ್‌ನಲ್ಲಿ ಸಿಗುವ ಸಮಾಧಾನ ದೊಡ್ಡದು ಎಂದು ಕೆಲ ಶಾಸಕರು ವಿಮಾನ ಹತ್ತಲು ರೆಡಿಯಾಗಿದ್ದಾರೆ ಎಂದು ಜೆಡಿಎಸ್ ಟೀಕಿಸಿದೆ. ಒಟ್ಟಿನಲ್ಲಿ, ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ಕ್ಲೈಮ್ಯಾಕ್ಸ್ ಘಟ್ಟಕ್ಕೆ ಬಂದಂತೆ ಕಾಣಿಸುತ್ತಿದೆ. ಬಜೆಟ್ ಬಳಿಕ ದೊಡ್ಡ ಕ್ರಾಂತಿಯಾಗುತ್ತದೆಯೇ ಎಂಬುದೇ ಸದ್ಯದ ಪ್ರಶ್ನೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು – Kannada News | Unveiling the Scientific and Spiritual Benefits of Childrens Anklets

ಬೆಂಗಳೂರು, ಫೆ.12: ನಮ್ಮ ಸನಾತನ ಹಿಂದೂ ಸಂಪ್ರದಾಯದಲ್ಲಿ ಪುಟ್ಟ ಮಕ್ಕಳಿಗೆ ಕಾಲು ಚೈನುಗಳನ್ನು ಹಾಕುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದ ಪದ್ಧತಿಯಾಗಿದೆ. ಮಕ್ಕಳನ್ನು ದೈವಸ್ವರೂಪರೆಂದು ಭಾವಿಸುವ ನಮ್ಮ ಸಂಸ್ಕೃತಿಯಲ್ಲಿ, ಈ ಆಭರಣಗಳು ಕೇವಲ ಅಲಂಕಾರಿಕವಲ್ಲದೆ, ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವವನ್ನೂ ಹೊಂದಿವೆ. ವೈಜ್ಞಾನಿಕವಾಗಿ, ಕಾಲ್ಗೆಜ್ಜೆಗಳು, ವಿಶೇಷವಾಗಿ ಬೆಳ್ಳಿಯವು, ಮಗುವಿನ ದೇಹಕ್ಕೆ ಧನಾತ್ಮಕ ಶಕ್ತಿಯನ್ನು ಆಕರ್ಷಿಸುತ್ತವೆ ಎಂದು ಹೇಳಲಾಗುತ್ತದೆ. ಇವು ನಕಾರಾತ್ಮಕ ಶಕ್ತಿಗಳನ್ನು ದೂರವಿಡಲು ಸಹಕಾರಿ. ಅಷ್ಟೇ ಅಲ್ಲದೆ, ಸಣ್ಣ ಬ್ಯಾಕ್ಟೀರಿಯಾಗಳು ಮತ್ತು ಕ್ರಿಮಿಕೀಟಗಳಿಂದ ಮಗುವನ್ನು ರಕ್ಷಿಸುವಲ್ಲಿ ಸಹಕಾರಿಯಾಗಿವೆ. ಬೆಳ್ಳಿ ಚಂದ್ರನ ಲೋಹವಾಗಿದ್ದು, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಚರ್ಮದ ಕಾಂತಿಯನ್ನು ವೃದ್ಧಿಸುತ್ತದೆ ಮತ್ತು ಮಗುವಿನ ಅಳು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆಯುರ್ವೇದದಲ್ಲೂ ಬೆಳ್ಳಿಯ ಬಳಕೆಗೆ ಮಹತ್ವವಿದೆ. ಧಾರ್ಮಿಕವಾಗಿ, ಕಾಲ್ಗೆಜ್ಜೆಗಳು ಶುಭ ವಾತಾವರಣವನ್ನು ಸೃಷ್ಟಿಸುತ್ತವೆ. ಇದರ ಸದ್ದು ಮಗುವಿನ ಶ್ರವಣ ಶಕ್ತಿಯನ್ನು ವೃದ್ಧಿಸುತ್ತದೆ. ತಾಯಿ ಅಡುಗೆ ಮಾಡುವಾಗ ಮಗುವಿನ ಚಲನೆಯನ್ನು ತಿಳಿಸಲು ಸಹಾಯಕ. ಒಟ್ಟಾರೆ, ಮಕ್ಕಳ ಚೈತನ್ಯ ಮತ್ತು ಆರೋಗ್ಯಕ್ಕೆ ಪೂರಕವಾದ ನಂಬಿಕೆಯ ಆಧಾರದ ಮೇಲೆ ಈ ಸಂಪ್ರದಾಯ ಬೆಳೆದುಬಂದಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today 12 February​: ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ – Kannada News | Dr. Basavaraj Gurujis Horoscope: Effects of Planets on Aries, Taurus, Gemini, Cancer

ಬೆಂಗಳೂರು, ಫೆ.12: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಇಂದಿನ (ಫೆ.12) ದಿನಭವಿಷ್ಯದ ಬಗ್ಗೆ ಹೇಳಿದ್ದಾರೆ. ಅವರು ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದು, ವಿಶ್ವಾಸು ನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಕೃಷ್ಣ ಪಕ್ಷ ದಶಮಿ, ಜ್ಯೇಷ್ಠಾ ನಕ್ಷತ್ರದ ಇಂದಿನ ದಿನ ಹಲವು ಶುಭ ಮತ್ತು ಅಶುಭ ಅಂಶಗಳನ್ನು ಒಳಗೊಂಡಿದೆ. ರಾಹುಕಾಲ ಮಧ್ಯಾಹ್ನ 2:01 ರಿಂದ 3:29 ರವರೆಗೆ ಇರಲಿದ್ದು, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲವು ಮಧ್ಯಾಹ್ನ 12:34 ರಿಂದ 2:01 ರವರೆಗೆ ಇರುತ್ತದೆ. ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ವೃಶ್ಚಿಕ ರಾಶಿಯ ಜ್ಯೇಷ್ಠಾ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ಮೇಷ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭಫಲವಿದ್ದು, ಕೆಲಸ ಕಾರ್ಯಗಳಲ್ಲಿ ಜಯ, ಆರ್ಥಿಕವಾಗಿ ಉತ್ತಮ ಸ್ಥಿತಿ ಇರುತ್ತದೆ. ವೃಷಭ ರಾಶಿಯವರಿಗೆ ಸ್ವಪ್ರಯತ್ನದಿಂದ ಯಶಸ್ಸು, ಆರ್ಥಿಕ ವಿಷಯಗಳಲ್ಲಿ ಶುಭವಾಗಲಿದೆ. ಮಿಥುನ ರಾಶಿಯವರಿಗೆ ಆಕಸ್ಮಿಕ ಧನಯೋಗ ಮತ್ತು ಪ್ರಯಾಣದಲ್ಲಿ ಶುಭಫಲವಿದೆ. ಕರ್ಕಾಟಕ ರಾಶಿಯವರಿಗೆ ಮನಸ್ತಾಪಗಳ ಸಾಧ್ಯತೆ ಇದ್ದರೂ, ಹಣಕಾಸಿನ ವಿಚಾರದಲ್ಲಿ ಸುಧಾರಣೆ ಇರುತ್ತದೆ. ಈ ರಾಶಿಗಳಿಗೆ ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಜಪಿಸಬೇಕಾದ ಮಂತ್ರಗಳನ್ನು ಗುರೂಜಿ ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Karnataka Weather Today: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾಗಶಃ ಬಿಸಿಲಿನ ವಾತಾವರಣವಿರಲಿದೆ – Kannada News | Karnataka Weather Today: Bengaluru Max 33°C, Heat Alert for Kalburgi and Raichur

ಬೆಂಗಳೂರು, ಫೆ.12: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾಗಶಃ ಬಿಸಿಲಿನ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ (Karnataka Weather Today) ಹೇಳಿದೆ. ಬೆಂಗಳೂರಿನಲ್ಲಿ ಬಿಸಿಲು ಹೆಚ್ಚಾಗಲಿದ್ದು, ಗರಿಷ್ಠ ತಾಪಮಾನ 31°C ನಿಂದ 33°C ವರೆಗೆ ದಾಖಲಾಗುವ ಸಾಧ್ಯತೆಯಿದೆ. ಸಂಜೆ ಮತ್ತು ರಾತ್ರಿ ವೇಳೆ ಆಹ್ಲಾದಕರ ಹವಾಮಾನವಿರಲಿದ್ದು, ಕನಿಷ್ಠ ತಾಪಮಾನ 18°C ಆಸುಪಾಸಿನಲ್ಲಿರಲಿದೆ. ಯಾವುದೇ ಮಳೆಯ ಮುನ್ಸೂಚನೆ ಇಲ್ಲ ಎಂದು ಇಲಾಖೆ ಹೇಳಿದೆ.

ಕಲ್ಬುರ್ಗಿ, ರಾಯಚೂರು, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಲಿದೆ. ಇಲ್ಲಿ ಗರಿಷ್ಠ ತಾಪಮಾನವು 35°C ನಿಂದ 37°C ವರೆಗೆ ತಲುಪಬಹುದು. ಮಧ್ಯಾಹ್ನದ ವೇಳೆ ಒಣ ಹವೆ ಇರಲಿದ್ದು, ಬಿಸಿಲಿನ ಝಳ ಹೆಚ್ಚಾಗಿರುತ್ತದೆ. ಮಂಗಳೂರು, ಉಡುಪಿ ಮತ್ತು ಕಾರವಾರ ಭಾಗಗಳಲ್ಲಿ ಉಷ್ಣಾಂಶದ ಜೊತೆಗೆ ತೇವಾಂಶ ಕೂಡ ಇರಲಿದೆ. ಇದರಿಂದ ಸೆಕೆ ಹೆಚ್ಚಾಗುವ ಸಾಧ್ಯತೆ ಇದೆ.

ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣವಿದ್ದು, ಹಗಲಿನಲ್ಲಿ ಸಾಧಾರಣ ಬಿಸಿಲಿರುತ್ತದೆ. ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಮಾನ್ಯ ಹವಾಮಾನವಿರಲಿದ್ದು, ತಾಪಮಾನವು ಸರಿಸುಮಾರು 32°C ಇರಲಿದೆ. ಬಿಸಿಲು ಹೆಚ್ಚಾಗುತ್ತಿರುವುದರಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗದಂತೆ ಸಾಕಷ್ಟು ನೀರು ಕುಡಿಯಿರಿ ಎಂದು ತಜ್ಞರು ಹೇಳಿದ್ದಾರೆ. ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ನೇರ ಬಿಸಿಲಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಿ ಎಂದು ಕೂಡ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಮತ್ತೆ ಕರ್ನಾಟಕದ ಪರ ಧ್ವನಿ ಎತ್ತಿದ ದೇವೇಗೌಡ್ರು, ಈ ಬಾರಿ ಕೇಳಿದ್ದೇನು?

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಹಗಲಿನಲ್ಲಿ ಸಾಧಾರಣ ಬಿಸಿಲಿದ್ದರೂ, ರಾತ್ರಿ ಮತ್ತು ಮುಂಜಾನೆ ತಂಪು ವಾತಾವರಣವಿರುತ್ತದೆ. ಮೈಸೂರು, ಹಾಸನ, ತುಮಕೂರು, ಮಂಡ್ಯ ಸಮತೋಲಿತ ಹವಾಮಾನವಿರಲಿದ್ದು, ಮಳೆಯ ಯಾವುದೇ ಮುನ್ಸೂಚನೆ ಇಲ್ಲ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಯಾವುದೇ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ತೀರಾ ಕಡಿಮೆ ಇದೆ. ಗಾಳಿಯ ಮಟ್ಟದಲ್ಲೂ ಬೆಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡದಂತಹ ನಗರಗಳಲ್ಲಿ ಸಾಧಾರಣ ಮಟ್ಟದಲ್ಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರ ಬಗ್ಗೆ ಅನೇಕರಿಗೆ ಅನುಮಾನ – Kannada News | Horoscope 12 February 2026; Dina Rashi Bhavishya Today, Checkout the details here

ಮೇಷ ರಾಶಿ:

ಎಲ್ಲರಂತೆ ಒಂದಾಗುವ ಇಚ್ಛೆ ನಿಮ್ಮೊಳಗೆ ಬಾರದು. ತಪ್ಪಿನ ಗಂಭೀರತೆಯನ್ನು ಅರ್ಥಮಾಡಿಕೊಳ್ಳಿ. ಅಸಮಾಧಾನವನ್ನು ಯಾವುದಾದರೊಂದು ರೀತಿಯಲ್ಲಿ ಹೊರಹಾಕಿ. ಕಳೆದು ಹೋದುದರ ಬಗ್ಗೆ ಅತಿಯಾಗಿ ಆಲೋಚಿಸಿ ಫಲವಿಲ್ಲ. ಹಠಮಾರಿ ಸ್ವಭಾವದಿಂದ ಮನೆಯಲ್ಲಿ ತೊಂದರೆ ಆದೀತು. ನಿಮ್ಮ ಯೋಗ್ಯತೆಗೆ ಅನುಗುಣವಾದ ಕಾರ್ಯವನ್ನು ಒಪ್ಪಿಕೊಳ್ಳಿ. ಮೂರನೇ ವ್ಯಕ್ತಿಗಳ ಮೂಲಕ ಇಂದು ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ.

ವೃಷಭ ರಾಶಿ:

ಸಂಗಾತಿಯ ಮಾತುಗಳು ನಿಮ್ಮನ್ನು ಹಿಂಜರಿಯುವಂತೆ ಮಾಡುವುದು. ಅನಿರೀಕ್ಷಿತ ಸಂಪತ್ತನ್ನು ತಂದೆಯಿಂದ ಪಡೆಯುವಿರಿ. ಕಛೇರಿಯ ಕೆಲಸದಲ್ಲಿ ನೀವು ಹೆಚ್ಚು ಆಸ್ಥೆಯನ್ನು ತೋರಿಸಬೇಕಾಗುವುದು. ನಿಮ್ಮ ಇರಾದೆಯನ್ನು ಸಂಗಾತಿಯ ಜೊತೆ ಹೇಳಿಕೊಳ್ಳಬಹುದು. ಅವಕಾಶ ಸಿಕ್ಕಾಗ ಮುನ್ನುಗ್ಗಲು ಹಿಂಜರಿಯುವಿರಿ. ಮನೋವ್ಯಥೆಯಿಂದ ನಿಮಗೆ ಬಹಳಷ್ಟು ತೊಂದರೆಗಳು ಬರಬಹುದು. ಪುಣ್ಯಕ್ಷೇತ್ರದ ದರ್ಶನವನ್ನು ಮಾಡಿ. ಮಿತವಾದ ಮಾತು ನಿಮಗೆ ಆಗದು.

ಮಿಥುನ ರಾಶಿ:

ಸೃಜನಾತ್ಮಕವಾಗಿ ಏನನ್ನಾದರೂ ಮಾಡುವುದು ಒಳ್ಳೆಯದು. ಸ್ಥಿರಾಸ್ತಿಯ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದುಕೊಳ್ಳುವಿರಿ. ಒಂಟಿತನವು ನಿಮಗೆ ಇಷ್ಟವಾಗದು. ಇನ್ನೊಬ್ಬರ ನೋವನ್ನು ಕಂಡೂ ನೀವು ಸುಮ್ಮನಿರುವುದು ಬೇಡ. ಆಕರ್ಷಕ ವಸ್ತುಗಳಿಗೆ ಮನಸೋಲುವಿರಿ. ನಿಮ್ಮ ಯಂತ್ರಗಳು ದುರಸ್ತಿಗೆ ಬರಬಹುದು. ನೂತನ ವಸ್ತುಗಳಿಂದ ನಿಮಗೆ ಇಂದು ಸಂತೋಷವು ಸಿಗುವುದು. ನಿಮ್ಮ ವ್ಯವಹಾರವು ಇಂದು ಪೂರ್ಣವಾಗಲಾರದು.

ಕರ್ಕಾಟಕ ರಾಶಿ:

ಉದ್ಯಮದಲ್ಲಿ ಊಹಿಸಿದ ತೊಂದರೆ ಎದುರಾಗುತ್ತದೆ. ತಜ್ಞರಿಂದ ಅದನ್ನು ಸರಿ ಮಾಡಿಕೊಳ್ಳುವುದು ಉತ್ತಮ. ಯಾರನ್ನೋ ಅನುಕರಿಸುತ್ತ ನೀವು ಸಂತೋಷವನ್ನು ಪಡುವಿರಿ. ಕೆಲವು ವ್ಯಕ್ತಿಗಳ ಬೆಂಬಲವೂ ಕೂಡ ನಿಮಗೆ ಸಿಗುತ್ತದೆ. ಅವಸರದ ನಿರ್ಧಾರವನ್ನು ಮಾಡಲುಹೋಗುವುದು ಬೇಡ. ಪಾಲುದಾರಿಕೆಯಲ್ಲಿ ಮನಸ್ತಾಪವನ್ನು ಉಳಿಸಿಕೊಳ್ಳದೇ ಮುನ್ನಡೆಯಿರಿ. ಈ ದಿನವನ್ನು ಕಳೆಯಲು ನೀವು ನಾನಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಿರಿ.

ಸಿಂಹ ರಾಶಿ:

ಸರ್ಕಾರಿ ಉದ್ಯೋಗಿಗಳು ಹೆಚ್ಚುವರಿ ಜವಾಬ್ದಾರಿಯನ್ನು ನಿರ್ವಹಣೆ ಮಾಡುವರು. ಭೂಮಿಯ ವ್ಯವಹಾರವು ಪೂರ್ಣ ಲಾಭವನ್ನು ತಂದುಕೊಡದು. ಚಿಂತೆಗಳೇ ಇರುವ ಮನಸ್ಸಿನಲ್ಲಿ ದೇವರ ಭಕ್ತಿಯನ್ನು ತುಂಬಿಕೊಂಡು ಸಮಾಧಾನದಿಂದ ಇರಿ. ಸಂಗಾತಿಯ ವಿಚಾರದಲ್ಲಿ ನಿಮಗೆ ಪೂರ್ಣ ವಿಶ್ವಾಸವಿರದು. ಇಂದು ನಿಮ್ಮ ಆರ್ಥಿಕತೆಯ ಸ್ಥಿತಿಯು ಸರಿಯಾಗಿ ಗೊತ್ತಾಗಲಿದೆ. ಸ್ಥಗಿತವಾದ ಕಾರ್ಯಗಳಿಗೆ ಕಾಯಕಲ್ಪದ ಅವಶ್ಯಕತೆ ಇದೆ.

ಕನ್ಯಾ ರಾಶಿ:

ಕೆಲವು ಸಂಗತಿಗಳನ್ನು ನಿಮ್ಮನ್ನೇ ಹುಡುಕಿಕೊಂಡು ಬಂದು ನಿಮ್ಮ ಮನಸ್ಸನ್ನು ಮತ್ತಷ್ಟು ದುರ್ಬಲಗೊಳಿಸೀತು. ಮಾರುಕಟ್ಟೆಯ ವ್ಯವಹಾರವನ್ನು ಅರಿತು ಹೂಡಿಕೆ ಮಾಡಿ. ಒಳ್ಳೆಯ ಸಮಯವನ್ನು ಕಳೆದುಕೊಳ್ಳಬೇಕಾಗುವುದು. ಬಹಳ ಕಾಲದ ಹಿಂದೇ ಆಲೋಚಿಸಿದ್ದ ಕಾರ್ಯವು ಇಂದು ಆರಂಭಿಸಬೇಕು ಎಂದೆನಿಸುವುದು. ಸಂಗಾತಿಯ ಮಾತಿಗೆ ಸ್ಪಂದನೆಯೂ ಇರದು. ನಿಮ್ಮ ವಾಗ್ದಾನವನ್ನು ಉಳಿಸಿಕೊಳ್ಳಿ.

ತುಲಾ ರಾಶಿ:

ನಿಮ್ಮ ವಿದ್ಯಾಭ್ಯಾಸದ ಕನಸನ್ನು ಕುಟುಂಬದಲ್ಲಿ ಹಂಚಿಕೊಳ್ಳುವಿರಿ. ಎಲ್ಲಿ ಕಳೆದುಕೊಂಡಿರೋ ಅಲ್ಲಿಯೇ ಪಡೆಯುವ ಪ್ರಯತ್ನ ನಡೆಯುವುದು. ಕೆಲವು ಘಟನೆಗಳು ಕೌಟುಂಬಿಕ ಕಾಳಜಿಯನ್ನು ಹೆಚ್ಚು ಮಾಡುವುದು. ಜಾಣ್ಮೆಯ ವ್ಯವಹಾರವನ್ನು ಇಂದು ಮಾಡಬೇಕಾದೀತು. ವಿವಾಹದ ಬಗ್ಗೆ ನಾನಾ ಗೊಂದಲ ಕಾಡಬಹುದು. ಪಾಪಪ್ರಜ್ಞೆಯು ನಿಮ್ಮನ್ನು ಖಿನ್ನವಾಗಿಸಬಹುದು. ಸಕಾರಾತ್ಮಕ ಆಲೋಚನೆಯನ್ನು ಪ್ರಯತ್ನಪೂರ್ವಕವಾಗಿ ಮಾಡುವಿರಿ.

ವೃಶ್ಚಿಕ ರಾಶಿ:

ಮನೆಗೆ ಬೇಕಾದ ವಸ್ತುಗಳ ಖರೀದಿಯಲ್ಲಿ ನೀವು ಮಗ್ನರಾಗುವಿರಿ. ವ್ಯಾಪಾರದ ಹೊಸ ಅನುಭವವು ನಿಮಗೆ ಅಚ್ಚರಿಯಾದೀತು. ದೈವದ ಬಗ್ಗೆ ನಿಮಗೆ ಅಪನಂಬಿಕೆ ಬರಬಹುದು. ನಿಮ್ಮ ತಿಳಿವಳಿಕಯೇ ಉನ್ನತ ಸ್ಥಾನಕ್ಕೆ ಏರುವಂತೆ ಮಾಡುವುದು. ಮಕ್ಕಳ ಹಠಸ್ವಭಾವವು ಇಮಗೆ ಇಷ್ಟವಾಗದು. ಇಂದು ಆಡಂಬರಕ್ಕೆ ತೋರ್ಪಡಿಕೆಗೆ ಹೆಚ್ಚು ಒತ್ತು ನೀಡುವಿರಿ. ಸಾರ್ವಜನಿಕ ಮನ್ನಣೆಯನ್ನು ಗಳಿಸವಿರಿ. ಉದ್ಯಮದ ವಿಸ್ತರಣೆಗೆ ನಿಮ್ಮ ಕ್ರಮವು ಯಶಸ್ವಿಯಾಗುವುದು.

ಧನು ರಾಶಿ:

ಅಶುಭ ಸೂಚನೆಗಳನ್ನು ಗಮನಿಸಿ ಕೊಂಡು ಕಾರ್ಯಪ್ರವೃತ್ತರಾಗಿ. ಭೂಮಿಯ ಲಾಭಕ್ಕಾಗಿ ಓಡಾಟವನ್ನು ಮಾಡಬೇಕಾದೀತು. ಒಂದು ರೀತಿಯಲ್ಲಿ ನಿಮಗೆ ಆತಂಕದ ದಿವಸವೂ ಆಗಬಹುದು. ವಿದೇಶದ ವ್ಯವಹಾರವು ನಿಮಗೆ ಸರಿಯಾಗಿ ಆಗಿಬರದು. ಸಾಹಿತ್ಯಾಸಕ್ತರು ತಮ್ಮ ಬಳಗದ ಜೊತೆ ಹೆಚ್ಚು ಸಮಯ ಇರುವರು. ಎಲ್ಲರೂ ನಿಮ್ಮ ಬಗ್ಗೆ ನಕಾರಾತ್ಮಕವಾಗಿ ಮಾತನಾಡಲಿದ್ದು ನೀವು ಹತಾಶೆಯ ಭಾವ ಜಾಗೃತವಾಗಿ ಖಿನ್ನತೆಗೂ ಹೋಗಬಹುದು.

ಮಕರ ರಾಶಿ:

ಆರ್ಥಿಕ ವಹಿವಾಟಿನಲ್ಲಿ ಎಚ್ಚರಿಕೆ ಲಕ್ಷ್ಯವು ಹೆಚ್ಚಿರಲಿ. ನಿಮ್ಮ ಯೋಜನೆಗಳನ್ನು ಮಹಿಳೆಯರು ವಿರೋಧಿಸುವರು. ಕುಟುಂಬದ ಸಮಸ್ಯೆಗಳ ಪರಿಹಾರಕ್ಕೆ ನಿಮ್ಮ ಸಲಹೆಯು ಬೇಕಾಗುವುದು. ಇಂದಿನ ಆದಾಯಕ್ಕೆ ತಕ್ಕಂತೆ ಖರ್ಚೂ ಇರಲಿದೆ. ನಿಮ್ಮ ಪ್ರೀತಿಗೆ ಇಂದು ಅಧಿಕೃತ ಮುದ್ರೆಯು ಬೀಳಲಿದ್ದು ನಿಮಗೆ ಖುಷಿಯಾಗಲಿದೆ. ನಿಮ್ಮ ವೃತ್ತಿಯ ಕುರಿತು ಯಾರಾದರೂ ಕೇಳಿಯಾರು.

ಕುಂಭ ರಾಶಿ:

ಯಾರ ಮೇಲೂ ಸಂದೇಹವನ್ನು ಇಟ್ಟುಕೊಳ್ಳುವುದು ಬೇಡ. ದುರಭ್ಯಾಸವನ್ನು ತಡೆಯಲಾಗದೇ ದುಃಖವಾಗಬಹುದು. ವ್ಯಾಪಾರವನ್ನು ಮಾಡುವಾಗ ಜಾಗರೂಕತೆ ಇರಲಿ. ಮನೆಯ ಜವಾಬ್ದಾರಿಯು ನಿಮಗೆ ಅನಿರೀಕ್ಷಿತವಾಗಿ ಬರಬಹುದು. ಗ್ರಾಹಕರಿಂದ ಮೋಸ ಹೋಗಬೇಕಾದೀತು. ಯಾರನ್ನಾದರೂ ಕಳೆದುಕೊಳ್ಳುವ ಭೀತಿಯು ಇರಲಿದೆ. ನಿಮಗೇ ನೆರವು ಬೇಕಾಗಿದ್ದರೂ ಇನ್ನೊಬ್ಬರ ಸಹಾಯಕ್ಕೆ ಹೋಗುವಿರಿ. ನಿಮ್ಮ ವಿರೋಧಿಗಳ ಸಂಖ್ಯೆ ಕಡಿಮೆಯಾಗುವುದು.

ಮೀನ ರಾಶಿ:

ಅಪರಿಚಿತರಿಂದ ಬೆಂಬಲವು ಸಿಗಲಿದೆ. ಕುಟುಂಬಕ್ಕೆ ನೀವು ಹಾಕಿದ ಶ್ರಮ ಫಲಿಸುವುದು. ವಿದ್ಯಾಭ್ಯಾಸದಲ್ಲಿ ಶ್ರದ್ಧೆಯು ಹೆಚ್ಚು ಬೇಕಾಗುವುದು. ನಿರ್ಮಾಣ ಕಾರ್ಯದ ಅಗತ್ಯವನ್ನು ನೀವು ಅನುಭವಿಸುವಿರಿ. ಸ್ನೇಹಿತರ ಮಾತಿನಿಂದ ವಿದೇಶಕ್ಕೆ ಹೋಗುವ ಆಸೆ ಅತಿಯಾಗುವುದು. ಮಕ್ಕಳು ನಿಮ್ಮ ಜೊತೆ ವಾಗ್ವಾದ ಬರಬಹುದು. ಒಳ್ಳೆಯ ಸುದ್ದಿಯು ನಿಮ್ಮ ಉತ್ಸಾಹವನ್ನು ಹೆಚ್ಚಿಸುವುದು. ಮನೆಯ ಬಗ್ಗೆ ಚಿಂತಿಸಬೇಕಾಗುವುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಗುರು, ಪಕ್ಷ : ಕೃಷ್ಣ, ತಿಥಿ : ದಶಮೀ, ನಿತ್ಯನಕ್ಷತ್ರ : ಪೂರ್ವಾಷಾಢ, ಯೋಗ : ಧ್ರುವ, ಕರಣ : ಗರಜ, ಸೂರ್ಯೋದಯ – 06 – 50 am, ಸೂರ್ಯಾಸ್ತ – 06 – 26 pm, ಇಂದಿನ ಶುಭಾಶುಭ ಕಾಲ : ರಾಹು 14:06 – 15:13, ಯಮಗಂಡ ಕಾಲ 06:50 – 08:17 ಗುಳಿಕ ಕಾಲ 09:45 – 11:12

-ಲೋಹಿತ ಹೆಬ್ಬಾರ್ – 8762924271 (what’s app only)

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 12ರ ದಿನಭವಿಷ್ಯ

ಈ ದಿನ ನಲವತ್ತೆಂಟು ಬಾರಿ ಓಂ ನಮಃ ಶಿವಾಯ ಎಂದು ಹೇಳಿಕೊಳ್ಳಿ. ನಿಮಗೆ ಕಾಡುವಂಥ ಹಿಂಜರಿಕೆ, ಅಭದ್ರತೆಯಿಂದ ಹೊರಬರುವುದಕ್ಕೆ ಇದರಿಂದ ಸಹಾಯ ಆಗುತ್ತದೆ. ಸಾಧ್ಯವಾದಲ್ಲಿ ಈಶ್ವರನ ದೇವಸ್ಥಾನಕ್ಕೆ ತೆರಳಿ ದರ್ಶನ ಕೂಡ ಪಡೆದುಕೊಳ್ಳಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಯಾವ ಕಾರ್ಯಗಳನ್ನು ಪೂರ್ಣಗೊಳ್ಳುವುದು ಬಹಳ ಕಷ್ಟ ಆಗಬಹುದು ಎಂದು ನೀವು ಅಂದುಕೊಳ್ಳುತ್ತಾ ಇರುತ್ತೀರೋ ಅಂಥವು ಬಹಳ ಆಶ್ಚರ್ಯಕರ ರೀತಿಯಲ್ಲಿ ಮಾಡಿ ಮುಗಿಸಲಿದ್ದೀರಿ. ಇಷ್ಟು ಸಮಯ ನಿಮ್ಮನ್ನು ಬೇಕಂತಲೆ ರೇಗಿಸುತ್ತಿದ್ದವರು, ತಮಾಷೆ ಮಾಡುತ್ತಿದ್ದವರು ಗಾಬರಿ ಆಗುವ ಮಟ್ಟಕ್ಕೆ ನೀವು ಈ ದಿನ ಅವರಿಗೆ ಕಾಡಲಿದ್ದೀರಿ. ತಂದೆ- ತಾಯಿಯ ಪ್ರವಾಸಕ್ಕಾಗಿ ಹಣ ಖರ್ಚು ಮಾಡಲಿದ್ದೀರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಯಾರ ಜತೆಗೆ ಹೆಚ್ಚಿನ ಸಮಯ ಕಳೆಯಬೇಕು ಎಂದು ಇಷ್ಟು ಸಮಯ ಬಯಸುತ್ತಾ ಇರುತ್ತೀರಿ ಅಂಥವರೊಂದಿಗೆ ದೀರ್ಘವಾದ ಒಡನಾಟ ಸಾಧ್ಯವಾಗಲಿದೆ. ಕಟ್ಟಡ ನಿರ್ಮಾಣ ಸಂಸ್ಥೆಗಳಲ್ಲಿ ಉದ್ಯೋಗಿಗಳಾಗಿ ಕಾರ್ಯ ನಿರ್ವಹಿಸುತ್ತಾ ಇರುವವರಿಗೆ ಮೆಚ್ಚುಗೆ ಮಾತುಗಳು ಕೇಳಿಬರಲಿವೆ. ಇದರ ಜತೆಗೆ ಪ್ರಮುಖವಾದ ಪ್ರಾಜೆಕ್ಟ್ ಒಂದನ್ನು ನಿಮಗೆ ವಹಿಸುವ ಸಾಧ್ಯತೆಯೂ ಇದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಹೊಸ ವ್ಯಾಪಾರವನ್ನು ಆರಂಭ ಮಾಡಲು ಬಂಡವಾಳ ಹೊಂದಿಸುವುದಕ್ಕೆ ಶ್ರಮ ಪಡುತ್ತಿದ್ದೀರಿ ಅಂತಾದಲ್ಲಿ ಶುಭ ಸುದ್ದಿ ಕೇಳಿಬರಲಿದೆ. ನಿಮಗೆ ಅನುಕೂಲ ಆಗಲಿ ಎಂಬ ಕಾರಣಕ್ಕೆ ಪ್ರಭಾವಿಯೊಬ್ಬರು ಶಿಫಾರಸು ಮಾಡುವುದಕ್ಕೆ ಮುಂದೆ ಬರಲಿದ್ದು, ಅವರಿಂದ ಹೇಗೆ ಪ್ರಯೋಜನ ಪಡೆದುಕೊಳ್ಳಬೇಕು ಎಂಬ ಆಲೋಚನೆಯೇ ಹೊಳೆಯದಂತೆ ಆಗಲಿದೆ. ಏಕಾಂಗಿತನ ಈ ದಿನ ನಿಮ್ಮನ್ನು ಕಾಡಲಿದೆ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 12ರ ದಿನಭವಿಷ್ಯ

ದುರ್ಗಾ ಸೂಕ್ತದ ಶ್ರವಣ ಮಾಡಿದಲ್ಲಿ ಕೆಲವು ಬೆಳವಣಿಗೆಗಳು ನಿಮ್ಮ ಪರವಾಗಿ ಆಗಲಿವೆ. ಒಂದು ವೇಳೆ ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಿದ್ದಲ್ಲಿ ಆ ವಿಚಾರದಲ್ಲಿ ನಿಮಗೆ ಕಾಡುತ್ತಿರುವ ಅಡೆತಡೆಗಳು ದೂರ ಆಗಲಿವೆ. ಆರ್ಥಿಕ ಒತ್ತಡಗಳಿಂದ ಹೊರಬರಲು ಸಹಾಯಗಳು ಒದಗಲಿವೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಸೇಲ್ಸ್- ಮಾರ್ಕೆಟಿಂಗ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಾ ಇದ್ದೀರಿ ಅಂತಾದಲ್ಲಿ ಮೇಲಧಿಕಾರಿ ನೀಡುವ ಸಲಹೆಯನ್ನು ಗಂಭೀರವಾಗಿ ತೆಗೆದುಕೊಳ್ಳಿ. ದೂರ ಪ್ರಯಾಣ ಅನಿವಾರ್ಯ ಅಂತಾದಲ್ಲಿ ಯಾವುದೇ ಹಿಂಜರಿಕೆ ಮಾಡದೆ ಹೊರಟುಬಿಡಿ. ಇದರಿಂದ ನಿಮಗೆ ಹಲವು ರೀತಿಯಲ್ಲಿ ಅನುಕೂಲಗಳು ಒದಗಿಬರಲಿವೆ. ದೇವತಾ ಕಾರ್ಯಗಳಲ್ಲಿ ಭಾಗೀ ಆಗುವುದಕ್ಕೆ ಆಹ್ವಾನ ಬಂದಲ್ಲಿ ಇಲ್ಲ ಎನ್ನದೆ ಕಡ್ಡಾಯವಾಗಿ ಭಾಗಿ ಆಗುವುದಕ್ಕೆ ಪ್ರಯತ್ನಿಸಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಸಾವಯವ ಉತ್ಪನ್ನಗಳ ಮಾರಾಟ ಮಾಡುತ್ತಾ ಇರುವವರು ವ್ಯಾಪಾರದ ವಿಸ್ತರಣೆಗೆ ಹಲವು ರೀತಿ ಪ್ರಯತ್ನಗಳನ್ನು ಮಾಡಲಿದ್ದೀರಿ. ನಿಮ್ಮ ಉಳಿತಾಯ ಹಾಗೂ ಹೂಡಿಕೆ ಮಾಡಿದ್ದ ಹಣವನ್ನು ತೆಗೆದು, ಅದನ್ನು ಈ ಉದ್ದೇಶಕ್ಕೆ ಬಳಸುವುದಕ್ಕೆ ಮುಂದಾಗಲಿದ್ದೀರಿ. ಹೊಸ ಮಾರುಕಟ್ಟೆಯಲ್ಲಿ ಈಗಷ್ಟೇ ಕೆಲಸ ಆರಂಭಿಸಿದವರು ತಾಳ್ಮೆ- ಸಂಯಮ ವಹಿಸುವುದು ಮುಖ್ಯವಾಗುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಹಣ್ಣು- ತರಕಾರಿ ಬೆಳೆಗಾರರಿಗೆ ಹೊಸ ವ್ಯಕ್ತಿಗಳ ಪರಿಚಯದಿಂದ ಲಾಭದ ಪ್ರಮಾಣ ಹೆಚ್ಚಿಸಿಕೊಳ್ಳಲು ಮಾರ್ಗೋಪಾಯ ಗೋಚರ ಆಗಲಿವೆ. ಇಷ್ಟು ದಿನ ಯಾವ ಅಡೆತಡೆಗಳು ನಿಮಗೆ ಸವಾಲಾಗಿ ಪರಿಣಮಿಸಿದ್ದವೋ ಅವುಗಳನ್ನು ದಾಟುವುದಕ್ಕೆ ಸಾಧ್ಯವಾಗಲಿದೆ. ಚಿತ್ರಮಂದಿರಗಳ ಮಾಲೀಕರು ವ್ಯವಹಾರದಲ್ಲಿ ಬದಲಾವಣೆ ಮಾಡಿಕೊಳ್ಳಲು ತೀರ್ಮಾನ ಮಾಡುತ್ತೀರಿ. ಇದಕ್ಕೆ ಕುಟುಂಬ ಸದಸ್ಯರ ಬೆಂಬಲ ಸಹ ದೊರೆಯಲಿದೆ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 12ರ ದಿನಭವಿಷ್ಯ

ಈ ದಿನ ರಾಘವೇಂದ್ರ ಸ್ವಾಮಿ ಮಠದಲ್ಲಿನ ವೃಂದಾವನಕ್ಕೆ ಹಾಕುವುದಕ್ಕೆ ತುಳಸೀ ಮಾಲೆಯನ್ನು ತೆಗೆದುಕೊಂಡು ಹೋಗಿ ಕೊಡಿ. ಒಂದು ವೇಳೆ ಸಾಧ್ಯವಾಗದೇ ಇದ್ದಲ್ಲಿ ರಾಘವೇಂದ್ರ ಸ್ವಾಮಿಗಳನ್ನು ನೆನಪಿಸಿಕೊಂಡು, ದೇವರ ಮನೆಯಲ್ಲಿ ಚಿತ್ರಪಟಕ್ಕಾದರೂ ತುಳಸಿ ದಳವನ್ನು ಅರ್ಪಿಸಿ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಈಗ ನಿಮ್ಮ ಬಳಿ ಇರುವ ಎಲ್ಲ ಮೊತ್ತವನ್ನು ಒಂದೇ ಕಡೆಗೆ ಹೂಡಿಕೆ ಮಾಡುವ ಮುಂಚೆ ಒಂದಕ್ಕೆ ನಾಲ್ಕು ಬಾರಿಗೆ ಆಲೋಚನೆ ಮಾಡಿಕೊಳ್ಳುವುದು ಒಳ್ಳೆಯದು. ನಿಮ್ಮ ಬಳಿ ಇರುವ ವಾಹನದ ಮಾಡಿಫಿಕೇಷನ್ ಮಾಡಿಸಬೇಕು ಎಂದಿದ್ದಲ್ಲಿ ಸ್ವಲ್ಪ ಸಮಯಕ್ಕೆ ತೀರ್ಮಾನವನ್ನು ಮುಂದಕ್ಕೆ ಹಾಕಿ. ಇನ್ನು ಈಗಾಗಲೇ ಸಾಕಷ್ಟು ಮುಂದುವರಿದಿದ್ದೇವೆ, ಇನ್ನೇನಿದ್ದರೂ ಕೆಲಸ ಮಾಡಿಸುವುದಷ್ಟೇ ಬಾಕಿ ಅಂತೇನಾದರೂ ಇದ್ದಲ್ಲಿ ಟ್ರೆಂಡ್ ಒಮ್ಮೆ ನೋಡಿಕೊಳ್ಳಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಆಗಲಿ, ಮಾಡಿಕೊಡುತ್ತೇನೆ ಎಂದು ನೀವಾಗಿಯೇ ಭರವಸೆ ನೀಡಿದ್ದ ಕೆಲವು ಕಾರ್ಯಗಳನ್ನು ಅಂದುಕೊಂಡ ಸಮಯದ ಒಳಗಾಗಿ ಪೂರ್ಣ ಮಾಡುವುದು ಅಸಾಧ್ಯ ಎಂಬುದು ಖಚಿತ ಆಗಲಿದೆ. ಆದರೆ ಈ ವಿಚಾರವನ್ನು ಹೇಗೆ ಹೇಳುವುದು ಎಂಬುದು ಇಕ್ಕಟ್ಟಿಗೆ ಸಿಲುಕಿಸಲಿದೆ. ಆರ್ಥಿಕ ವಿಚಾರಗಳಿಗೆ ಅಭದ್ರತೆ ಭಾವವೊಂದು ನಿಮ್ಮನ್ನು ಮುತ್ತಿಕೊಳ್ಳಲಿದೆ. ನಿಮ್ಮ ಉದ್ದೇಶ ಬದಲಿಸಿಕೊಳ್ಳುವುದಕ್ಕೆ ಸಾಧ್ಯವಿದ್ದಲ್ಲಿ ಆ ದಿಕ್ಕಿನ ಕಡೆಗೆ ಮುನ್ನಡೆಯಿರಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನಿಮ್ಮಿಂದ ಎಷ್ಟು ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯ ಎಂಬ ಸ್ಪಷ್ಟ ಚಿತ್ರಣವೊಂದು ಇರಿಸಿಕೊಂಡ ನಂತರವೇ ದೊಡ್ಡ ದೊಡ್ಡ ಪ್ರಾಜೆಕ್ಟ್ ಗಳಿಗೆ ಕೈ ಹಾಕುವುದು ಒಳ್ಳೆಯದು. ಏಕೆಂದರೆ ಈ ದಿನ ನಿಮಗೆ ಬರುವಂಥ ಕೆಲವು ಕೆಲಸಗಳು ಮೇಲ್ನೋಟಕ್ಕೆ ಬಹಳ ದೊಡ್ಡ ಲಾಭ ತಂದುಕೊಡುವಂತೆ ಅನಿಸಲಿದೆ. ಆದರೆ ಸರ್ಕಾರದ ಮಟ್ಟದಲ್ಲಿ ಆಗಿರುವ ಅಥವಾ ಮುಂದೆ ಆಗುವ ಬದಲಾವಣೆಗಳ ಕಾರಣಕ್ಕೆ ನೀವು ನಿರೀಕ್ಷೆ ಮಾಡಿರುವ ಮಟ್ಟಕ್ಕೆ ಲಾಭ ತಂದುಕೊಡುವುದಿಲ್ಲ.

ಲೇಖನ- ಸ್ವಾತಿ ಎನ್.ಕೆ.

Source link

ಪೊಲೀಸ್ ಆಗಬೇಕೆಂದುಕೊಂಡಿದ್ದ ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್ – Kannada News | Bihar Police Aspirant Drugged And Dragged for Forced Marriage watch video

ಸಮಸ್ತಿಪುರ, ಫೆಬ್ರವರಿ 11: ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಬಿಹಾರ ಪೊಲೀಸ್ ನೇಮಕಾತಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವಕನನ್ನು ಅಪಹರಿಸಿ, ಡ್ರಗ್ಸ್ ನೀಡಿ, ಅವನ ಇಚ್ಛೆಗೆ ವಿರುದ್ಧವಾಗಿ ಹುಡುಗಿಯನ್ನು ಮದುವೆ (Wedding) ಮಾಡಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆ ಯುವಕ ನಿತೀಶ್ ಕುಮಾರ್ ಸಂಪೂರ್ಣವಾಗಿ ಕುಡಿದ ಸ್ಥಿತಿಯಲ್ಲಿದ್ದಾರೆ. ಅವರಿಗೆ ಹಾರವನ್ನು ಹಿಡಿಯಲು ಸಹ ಸಾಧ್ಯವಾಗುತ್ತಿರಲಿಲ್ಲ. ವಧುವಿನ ಕುತ್ತಿಗೆಗೆ ಹಾರವನ್ನು ಹಾಕಲು ಮತ್ತೊಬ್ಬ ವ್ಯಕ್ತಿ ಬಲವಂತವಾಗಿ ಅವರ ಕೈಯನ್ನು ಹಿಡಿದುಕೊಂಡಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version