ನಾಪತ್ತೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ದಿಢೀರ್ ಪತ್ತೆ; ಹೇಳಿದ್ದೇನು? – Kannada News | Darshan’s Ex Manager Mallikarjun Resurfaces, Reveals Disappearance Reason
ನಟ ದರ್ಶನ್ ಅವರು (Darshan) ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದಾಗ ಸಾಕಷ್ಟು ಟೀಕೆಗಳು ಬಂದವು. ಇದೇ ವೇಳೆ ಅವರ ಮಾಜಿ ಮ್ಯಾನೇಜರ್ ಮಲ್ಲಿ ಅಲಿಯಾಸ್ ಮಲ್ಲಿಕಾರ್ಜುನ್ ವಿಷಯ ಕೂಡ ಮುನ್ನೆಲೆಗೆ ಬಂತು. ‘ಅವರನ್ನು ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ತನಿಖೆ ಆಗಬೇಕು’ ಎಂದೆಲ್ಲ ಒತ್ತಾಯಿಸಲಾಯಿತು. ಈಗ ಈ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಎದುರಾಗಿದೆ. ಮಲ್ಲಿಕಾರ್ಜುನ್ ಅವರೇ ಎಲ್ಲರ ಎದುರು ಬಂದಿದ್ದು, ಇಷ್ಟು ದಿನ ತಲೆಮರಿಸಿಕೊಂಡಿದ್ದಕ್ಕ ಕಾರಣ ನೀಡಿದ್ದಾರೆ. ಮಲ್ಲಿಕಾರ್ಜುನ ಅವರು ವೃತ್ತಿಯಲ್ಲಿ ನಿರ್ಮಾಪಕರಾಗಿದ್ದರು. ವಿತರಣೆ ಕೂಡ…