ಬಿಗ್​​ಬಾಸ್ ಕನ್ನಡ 12ರ ವಿನ್ನರ್ ಯಾರು: ಪ್ರಶಾಂತ್ ಸಂಬರ್ಗಿ ಹೇಳಿದ್ದು ಹೀಗೆ – Kannada News | Bigg Boss Kannada 12: Prashanth Sambargi pics his contestant

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss) ರ ಫಿನಾಲೆ ಹತ್ತಿರವಾಗುತ್ತಿದೆ. ಮನೆಯಲ್ಲಿ ಸದ್ಯಕ್ಕೆ ಎಂಟು ಮಂದಿ ಸದಸ್ಯರಿದ್ದಾರೆ. ಗಿಲ್ಲಿ ಸದ್ಯದ ವಿನ್ನರ್ ಎನ್ನಲಾಗುತ್ತಿದೆ. ಆದರೆ ಅಶ್ವಿನಿ, ರಕ್ಷಿತಾ, ಧನುಶ್ ಸಹ ವಿನ್ನರ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದೀಗ ಕೆಲವು ಮಾಜಿ ಸ್ಪರ್ಧಿಗಳು ತಮ್ಮ ಮೆಚ್ಚಿನ ಸ್ಪರ್ಧಿ ಯಾರು? ಈ ಬಾರಿ ಗೆಲ್ಲಬಹುದು ಎಂಬ ಊಹೆಯನ್ನು ಸಹ ಮಾಡುತ್ತಿದ್ದಾರೆ. ಎರಡು ಬಾರಿ ಬಿಗ್​​ಬಾಸ್ ಸ್ಪರ್ಧೆಯಲ್ಲಿ ಭಾಗವಹಿಸಿರುವ ಪ್ರಶಾಂತ್ ಸಂಬರ್ಗಿ ಅವರು ಈ ಬಾರಿ ತಮ್ಮ ಮೆಚ್ಚಿನ…

Read More

ಲಕ್ಷಾಂತರ ರೂ ಲಂಚ ಆರೋಪ: CPRI ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ, ಕೋಟ್ಯಂತರ ರೂ ಪತ್ತೆ – Kannada News | CBI Raids Bengaluru CPRI Official: 3.59 Cr Cash, Foreign Currency Seized

ಬೆಂಗಳೂರು, ಜನವರಿ 09: ಸೆಂಟ್ರಲ್ ಪವರ್ ರಿಸರ್ಚ್‌ ಇನ್ಸ್ಟಿಟ್ಯೂಟ್ ಜಂಟಿ ನಿರ್ದೇಶಕ ರಾಜಾರಾಮ್ ಮೋಹನ್ ರಾವ್ ಚೆನ್ನು ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ (CBI Raid) ಮಾಡಿದ್ದಾರೆ. 9.5 ಲಕ್ಷ ರೂ. ಲಂಚ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದ್ದು, ಈ ವೇಳೆ ಅವರ ನಿವಾಸದಲ್ಲಿ 3.59 ಕೋಟಿ ರೂ ನಗದು ಪತ್ತೆ ಆಗಿದೆ. ವಿದೇಶಿ‌ ಕರೆನ್ಸಿ (Foreign currency) ಮತ್ತು ಚಿನ್ನಾಭರಣಗಳು ಸೇರಿದಂತೆ ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಮುಖ ದಾಖಲೆಗಳು ವಶಕ್ಕೆ ಲಂಚ…

Read More

Mysuru: ತವರಿಗೆ ಬಂದ್ರೂ ತಪ್ಪಲಿಲ್ಲ ಪತಿ ಕಾಟ; ಬಡಿದು ಪತ್ನಿಯನ್ನೇ ಕೊಂದ ಕುಡುಕ ಗಂಡ! – Kannada News | Husband Arrested for Brutally Killing Wife Over Domestic Dispute in Nanjangud, Mysuru

ಮೈಸೂರು, ಜನವರಿ 09: ತನ್ನಿಂದ ದೂರವಾಗಿ ತವರು ಮನೆ ಸೇರಿದ್ದ ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ನಡೆದಿದೆ. ಸುಧಾ ಮೃತ ಮಹಿಳೆಯಾಗಿದ್ದು, ಮರದ ತುಂಡಿನಿಂದ ಹೊಡೆದು ಮರ್ಡರ್​​ ಮಾಡಿರುವ ಆರೋಪಿ ಮಹೆಶ್​​ನನ್ನು ಪೊಲೀಸರು ಬಂಧಿಸಿದ್ದಾರೆ. ತಾಳಿ ಕಟ್ಟಿದ ಪತಿಯೇ ಪತ್ನಿಯನ್ನು ಕೊಲೆ ಮಾಡಿರೋದು ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ. ಘಟನೆ ಏನು? 13 ವರ್ಷಗಳ ಹಿಂದೆ ಮಲ್ಲಹಳ್ಳಿ ಗ್ರಾಮದ ಮಹೇಶ್ ಜೊತೆ ವಿವಾಹವಾಗಿದ್ದ ಸುಧಾ ಎರಡು ವರ್ಷಗಳ ಹಿಂದೆ…

Read More

ಇರಾನ್ ಹಿಂದೆ ಸರಿಯುವುದಿಲ್ಲ, ಟ್ರಂಪ್ ಪದಚ್ಯುತಿ ಖಚಿತ; ಸುಪ್ರೀಂ ನಾಯಕ ಖಮೇನಿ ಪ್ರತಿಜ್ಞೆ – Kannada News | Iran will not back down Supreme Leader Ayatollah Khamenei vows

ಟೆಹ್ರಾನ್, ಜನವರಿ 9: ಇಂದು ಇರಾನ್​ ದೇಶವನ್ನುದ್ದೇಶಿಸಿ ಮಾತನಾಡಿದ ಇರಾನ್​​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Khamenei), ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ಗೆ ಎಚ್ಚರಿಕೆ ನೀಡಿದ್ದಾರೆ. ದುರಹಂಕಾರ ಮತ್ತು ಹೆಮ್ಮೆಯಿಂದ ಕುಳಿತು ಇಡೀ ಪ್ರಪಂಚದ ಮೇಲೆ ತೀರ್ಪು ನೀಡುವ ಟ್ರಂಪ್ ಬಗ್ಗೆ ಹೇಳುವುದಾದರೆ, ಸಾಮಾನ್ಯವಾಗಿ ವಿಶ್ವದ ನಿರಂಕುಶಾಧಿಕಾರಿಗಳು ಮತ್ತು ದುರಹಂಕಾರಿ ಶಕ್ತಿಗಳಾದ ಫರೋ, ನಿಮ್ರೋಡ್, ರೆಜಾ ಖಾನ್, ಮೊಹಮ್ಮದ್ ರೆಜಾ ಮತ್ತು ಅವರಂಥವರು ದುರಹಂಕಾರದ ಉತ್ತುಂಗದಲ್ಲಿದ್ದಾಗಲೇ ಅವರ ಪತನವಾಯಿತು ಎಂಬುದನ್ನು ಟ್ರಂಪ್ ತಿಳಿಯುವುದು ಒಳ್ಳೆಯದು….

Read More

‘ದಿ ರಾಜಾ ಸಾಬ್’ಗೂ ಎದುರಾಯ್ತು ಕಂಟಕ: ಅಡಕತ್ತರಿಯಲ್ಲಿ ನಿರ್ಮಾಪಕ – Kannada News | Courts slams Telangana Government for permitting ticket price hike for The Raja Saab

ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಇಂದು (ಜನವರಿ 09) ಬಿಡುಗಡೆ ಆಗಿದೆ. ಭಾರಿ ಬಜೆಟ್​​ನಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ. ನಿನ್ನೆ (ಜನವರಿ 08) ಸಿನಿಮಾದ ಫ್ಯಾನ್ಸ್ ಶೋ ಅನ್ನು ಸಹ ಹಲವು ಚಿತ್ರಮಂದಿರಗಳಲ್ಲಿ ಆಯೋಜನೆ ಮಾಡಲಾಗಿತ್ತು. ಸಿನಿಮಾ ಬಿಡುಗಡೆ ಮುಂಚೆ ಆಂಧ್ರ ಮತ್ತು ತೆಲಂಗಾಣ ಎರಡೂ ಸರ್ಕಾರಗಳಿಂದ ಅನುಮತಿ ಪಡೆದು ಟಿಕೆಟ್ ದರಗಳನ್ನು ಸಹ ಹೆಚ್ಚಳ ಮಾಡಲಾಗಿದ್ದು, ಇದೀಗ ಹೈದರಾಬಾದ್​​ನಲ್ಲಿ ‘ದಿ ರಾಜಾ ಸಾಬ್’ ಸಿನಿಮಾ ಟಿಕೆಟ್ ದರ 450-550 ರೂಪಾಯಿಗಳಿದೆ. ಆದರೆ…

Read More

WPL 2026: ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಪರ 6 ಆಟಗಾರ್ತಿಯರು ಪಾದಾರ್ಪಣೆ – Kannada News | WPL 2026: MI vs RCB Opening Match Toss! RCB Bowls First in Navi Mumbai

ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ನಾಲ್ಕನೇ ಸೀಸನ್ ಜನವರಿ 9 ರಿಂದ ಪ್ರಾರಂಭವಾಗುತ್ತಿದೆ. ಈ ಆವೃತ್ತಿಯ ಉದ್ಘಾಟನಾ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಹರ್ಮನ್‌ಪ್ರೀತ್ ಕೌರ್ ಮುಂಬೈ ತಂಡವನ್ನು ಮುನ್ನಡೆಸುತ್ತಿದ್ದರೆ, ಸ್ಮೃತಿ ಮಂಧಾನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಮುಂಬೈ ಮತ್ತು ಆರ್‌ಸಿಬಿ ಎರಡೂ ಚಾಂಪಿಯನ್ ತಂಡಗಳಾಗಿದ್ದು, ಮುಂಬೈ 2 ಬಾರಿ ಟ್ರೋಫಿ…

Read More

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ – Kannada News | Dhruvanth overacting in front of Ashwini Gowda in Bigg Boss Kannada Season 12

ಬಿಗ್ ಬಾಸ್ ಮನೆಯಲ್ಲಿ ಧ್ರುವಂತ್ (Dhruvanth) ಅವರು ಬಗೆಬಗೆಯ ಎಕ್ಸ್​ಪ್ರೆಷನ್ ನೀಡುವ ಮೂಲಕ ಹೈಲೈಟ್ ಆಗುತ್ತಾರೆ. ರಕ್ಷಿತಾ ಶೆಟ್ಟಿಯ ಹಾವಭಾವವನ್ನು ಧ್ರುವಂತ್ ಅನುಕರಣೆ ಮಾಡುತ್ತಾರೆ. ಈಗ ಅಶ್ವಿನಿ ಗೌಡ ಎದುರಲ್ಲಿ ಧ್ರುವಂತ್ ಬೇಕಂತಲೇ ಓವರ್ ಆ್ಯಕ್ಟಿಂಗ್ ಮಾಡಿದ್ದಾರೆ. ಸದ್ಯಕ್ಕೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ 8 ಜನರು ಉಳಿದುಕೊಂಡಿದ್ದಾರೆ. ಶೀಘ್ರದಲ್ಲೇ ಇಬ್ಬರ ಎಲಿಮಿನೇಷನ್ ಆಗಲಿದೆ. ಆಗ ಕೇವಲ 6 ಜನರು ಉಳಿದುಕೊಳ್ಳುತ್ತಾರೆ. ಈ ವಿಷಯವನ್ನು ಧ್ರುವಂತ್​​ಗೆ ಅಶ್ವಿನಿ…

Read More

G-RAM-G: ಜಿ ರಾಮ್‌ ಜಿ ಕಾಯ್ದೆ- ಮತ್ತಷ್ಟು ಉದ್ಯೋಗ, ಮತ್ತಷ್ಟು ಭದ್ರತೆ – Kannada News | How Viksit Bharat G RAM G act can empower rural community

ಕಳೆದ ಕೆಲ ದಿನಗಳಿಂದ ಸಾಕಷ್ಟು ಸದ್ದು ಮಾಡುತ್ತಿರುವ ಕಾಯಿದೆಗಳಲ್ಲಿ ಒಂದು ಜಿ ರಾಮ್‌ ಜಿ. ಇದರ ಪೂರ್ತಿ ಹೆಸರು ವಿಬಿ-ಜಿ-ರಾಮ್‌-ಜಿ ಅಂದರೆ ವಿಕಸಿತ ಭಾರತ- ರೋಜಗಾರ ಮತ್ತು ಆಜೀವಿಕ ಮಿಷನ್‌ (ಗ್ರಾಮೀಣ) Viksit Bharat – Guaratee Rozgar Azeevika Mission (Gramin) (VB-G-RAM-G) ಎಂಬುದಾಗಿದೆ. ಈ ಕಾಯ್ದೆಯು ಗ್ರಾಮೀಣ ಉದ್ಯೋಗ ವ್ಯವಸ್ಥೆಯನ್ನು ತಳಮಟ್ಟದಿಂದ ಬಲಪಡಿಸುವ ಗುರಿ ಹೊಂದಿದೆ. ಇದು ರೈತರು ಹಾಗೂ ಕಾರ್ಮಿಕರ ಘನತೆಗೆ, ಪಾರದರ್ಶಕತೆ ಹಾಗೂ ನಿಜವಾದ ಗ್ರಾಮೀಣ ಸಬಲೀಕರಣಕ್ಕೆ ಒತ್ತು ನೀಡುತ್ತದೆ. 60…

Read More

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆಯನ್ನು ಕಾಪಾಡಿದ ಅರಣ್ಯ ಇಲಾಖೆ ಸಿಬ್ಬಂದಿ, ವಿಡಿಯೋ ನೋಡಿ – Kannada News | Forest Department Staff Rescues Leopard From Well at At Ramanagara

ರಾಮನಗರ, (ಜನವರಿ 09): ಆಹಾರ ಅರಸಿ ಬಂದು ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿ ಸಿಂಗರಾಜಿಪುರ ಗ್ರಾಮದ 30 ಅಡಿ ಆಳದ ಬಾವಿಗೆ ಚಿರತೆ ಬಿದ್ದು ಒದ್ದಾಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ದೌಡಾಯಿಸಿ ಚಿರತೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಪ್ರತ್ಯೇಕ ಘಟನೆ: ಭೂಸ್ವಾಧೀನ ಪರಿಹಾರ ನೀಡದಕ್ಕೆ NHAI ಕಚೇರಿ, ಡಿಸಿ ಕಾರು ಜಪ್ತಿ – Kannada News | Land Compensation Row: Dharwad NHAI Office and Hassan DC Car Seized by Court Order

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಜಪ್ತಿ ಧಾರವಾಡ/ಹಾಸನ: ರೈತರಿಗೆ ಭೂಸ್ವಾಧೀನ ಪರಿಹಾರ ನೀಡದ ಹಿನ್ನೆಲೆ ಧಾರವಾಡ ಜಿಲ್ಲಾ ಪ್ರಧಾನ ನ್ಯಾಯಾಲಯದ ಆದೇಶದ ಅನ್ವಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಧಾರವಾಡ ಕಚೇರಿ ಜಪ್ತಿ ಮಾಡಲಾಗಿದೆ. ರೈತರಿಗೆ ನೀಡಬೇಕಿದ್ದ 10 ಕೋಟಿ ರೂ. ಬಡ್ಡಿ ಹಣ ಪಾವತಿ ಮಾಡದ ಕಾರಣ, ನಗರದ ವಿದ್ಯಾಗಿರಿ ಬಡಾವಣೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರ ಕಚೇರಿಯ ಪೀಠೋಪಕರಣ, ಕಂಪ್ಯೂಟರ್, ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ರಾಷ್ಟ್ರೀಯ ಹೆದ್ದಾರಿ 63ಕ್ಕೆಂದು 2012ರಲ್ಲಿ ಗದಗ ನಗರದ ಹೊರಭಾಗದಲ್ಲಿನ…

Read More