Headlines

PM Modi in WITT Summit 2026: ಕಾಂಗ್ರೆಸ್​ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ನವದೆಹಲಿ, ಮಾರ್ಚ್ 23: ದೆಹಲಿಯಲ್ಲಿ ಇಂದಿನಿಂದ ಟಿವಿ9 ನೆಟ್​ವರ್ಕ್​ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit 2026) ಶೃಂಗಸಭೆ ಆರಂಭವಾಗಿದೆ. ಈ ಶೃಂಗಸಭೆಯಲ್ಲಿ ಮುಖ್ಯ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (PM Modi in WITT Summit) ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಮಾಡಿದ ಪಾಪದ ಹೊರೆಗಳನ್ನು ನಾವು ಹೊತ್ತಿದ್ದೇವೆ ಎಂದು ಅಸಮಾಧಾನ ಹೊರಹಾಕಿದ್ದಾರೆ. “ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಬಿಕ್ಕಟ್ಟು ಉಂಟಾಗಿತ್ತು. ಆದರೆ ಕಾಂಗ್ರೆಸ್ ದೇಶದ…

Read More

ಶೂಟಿಂಗ್ ಮುಗಿಸಿದ ‘ದೇವಸಸ್ಯ’: 150 ಸಿದ್ದಿ ಕಲಾವಿದರು ನಟಿಸಿದ ಸಿನಿಮಾ – Kannada News | Devasasya Kannada movie shooting completed Film team press meet

‘ದೇವಸಸ್ಯ’ (Devasasya) ಸಿನಿಮಾದ ಶೂಟಿಂಗ್ ಮುಕ್ತಾಯ ಆಗಿದೆ. ಕನ್ನಡ, ತೆಲುಗು, ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ‘ಅನಂತ ಫಿಲ್ಮ್ಸ್’ ಬ್ಯಾನರ್ ಮೂಲಕ ಅನಂತಮೂರ್ತಿ ಎಂ. ಹೆಗಡೆ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಕಾರ್ತಿಕ್ ಭಟ್ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಕೊನೆಯ ದಿನದ ಶೂಟಿಂಗ್ ಮಾಗಡಿ ರಸ್ತೆಯಲ್ಲಿರುವ ಪುಟ್ಟಣ್ಣ ಕಣಗಾಲ್ ಸ್ಟುಡಿಯೋದಲ್ಲಿ ನಡೆಯಿತು. ಈ ವೇಳೆ ಸುದ್ದಿಗೋಷ್ಠಿ ಮಾಡಲಾಯಿತು. ‘1995ರ ಕಾಲಘಟ್ಟದಲ್ಲಿ ನಡೆಯುವ ನಮ್ಮ ಮಣ್ಣಿನ ಕಥೆಯನ್ನು ಈ ಚಿತ್ರದಲ್ಲಿ…

Read More

Maarnami Movie: ‘ಮಾರ್ನಮಿ’ ಸಿನಿಮಾಗೆ ಪ್ರೇಕ್ಷಕರಿಂದ ಸಿಕ್ತು ಭರ್ಜರಿ ರೆಸ್ಪಾನ್ಸ್ – Kannada News | Ritvvikk Chaithra J Achar starrer Maarnami Kannada movie audience Review and reaction

ಕರಾವಳಿ ಭಾಗದ ಕತೆ ಹೊಂದಿರುವ ‘ಮಾರ್ನಮಿ’ (Maarnami) ಸಿನಿಮಾ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ರಿತ್ವಿಕ್ ಮಠದ್ ಮತ್ತು ಚೈತ್ರಾ ಆಚಾರ್ ಅವರು ಜೋಡಿಯಾಗಿ ನಟಿಸಿದ್ದಾರೆ. ಸೋನು ಗೌಡ, ಪ್ರಕಾಶ್ ತುಮ್ಮಿನಾಡು, ಸುಮನ್ ತಲ್ವಾರ್, ಜ್ಯೋತಿ ಶೆಟ್ಟಿ, ಸ್ವರಾಜ್ ಶೆಟ್ಟಿ ಮುಂತಾದವರು ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಶಿಲ್ಪಾ ನಿಶಾಂತ್ ನಿರ್ಮಾಣ ಮಾಡಿದ ಈ ಚಿತ್ರಕ್ಕೆ ರಿಷಿತ್ ಶೆಟ್ಟಿ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ಫೆಬ್ರವರಿ 20ರಂದು ತೆರೆಕಂಡ ಈ ಸಿನಿಮಾಗೆ ಪ್ರೇಕ್ಷಕರಿಗೆ ಮೆಚ್ಚುಗೆ ಸಿಕ್ಕಿದೆ. ನಟಿ ಚೈತ್ರಾ…

Read More

ಚಳಿಗಾಲದಲ್ಲಿ ಈ ಆಹಾರಗಳ ಸೇವನೆ ಮಾಡುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಬಹುದು ಎಚ್ಚರ! – Kannada News | Bad Cholesterol: Winter Foods That Can Increase LDL

ಚಳಿಗಾಲದಲ್ಲಿ ಆಹಾರ ಪದ್ಧತಿಯ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಬಹಳ ಮುಖ್ಯವಾಗುತ್ತದೆ. ಈ ಸಮಯದಲ್ಲಿ ಜನ ಬೇಸಿಗೆಗಿಂತ ಹೆಚ್ಚು ಆಹಾರ ಸೇವನೆ ಮಾಡುತ್ತಾರೆ. ಅದರಲ್ಲಿಯೂ ಕರಿದ ಆಹಾರ ಮತ್ತು ಸಿಹಿತಿಂಡಿಗಳ ಸೇವನೆ ಹೆಚ್ಚಾಗುತ್ತದೆ. ಆದರೆ ಈ ರೀತಿಯ ಆಹಾರಗಳ ಸೇವನೆ ಕೆಟ್ಟ ಕೊಲೆಸ್ಟ್ರಾಲ್ (Bad Cholesterol) ಅನ್ನು ತ್ವರಿತವಾಗಿ ಹೆಚ್ಚಿಸಬಹುದು ಎಂಬುದನ್ನು ಮರೆಯಬಾರದು. ಅದಕ್ಕೂ ಮೊದಲು ಕೊಲೆಸ್ಟ್ರಾಲ್ ಹೆಚ್ಚಾಗುವುದಕ್ಕೆ ಕಾರಣವೇನು, ಯಾಕೆ ಈ ಸಮಯದಲ್ಲಿ ಜನ ಹೆಚ್ಚು ಹೆಚ್ಚು ಆಹಾರ ಸೇವನೆ ಮಾಡುತ್ತಾರೆ ಎಂಬುದರ ಬಗ್ಗೆ ತಿಳಿಯಬೇಕಾಗುತ್ತದೆ….

Read More

ನಿಂತು ಹೋಗಿದ್ದ ಬಿಗ್ ಬಜೆಟ್ ಚಿತ್ರ ಕೈಗೆತ್ತಿಕೊಂಡ ರಿಷಬ್? ನಟನೆಯ ಜೊತೆಗೆ ನಿರ್ದೇಶನ – Kannada News | Rishab Shetty Revives Stalled Big Budget Film? Directing and Acting in Randamoozham

ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಗೆಲುವಿನ ಬಳಿಕ ಬ್ರೇಕ್ ಪಡೆದಿದ್ದಾರೆ. ಕುಟುಂಬದ ಜೊತೆ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಈಗ ರಿಷಬ್ ಶೆಟ್ಟಿ ಅವರು ನಟನೆಯ ಕಡೆ ಗಮನ ಹರಿಸುತ್ತಿದ್ದಾರೆ. ಒಪ್ಪಿಕೊಂಡ ಸಿನಿಮಾಗಳ ಶೂಟ್​​ನ ಅವರು ಪೂರ್ಣಗೊಳಿಸಬೇಕಿದೆ. ಈ ಮಧ್ಯೆ ಅವರು ಹೊಸ ಸಿನಿಮಾ ಕೈಗೆತ್ತಿಕೊಂಡರೇ ಎನ್ನುವ ಪ್ರಶ್ನೆ ಮೂಡಿದೆ. ಅದು ಕೂಡ ನಿಂತು ಹೋದ ಬಿಗ್ ಬಜೆಟ್ ಚಿತ್ರ ಎಂಬ ವದಂತಿ ಹರಿದಾಡಿದೆ. ಮಲಯಾಳಂ ಚಿತ್ರರಂಗದಲ್ಲಿ ‘ರಂಡಮೂಳಂ’ ಎಂಬ ಸಿನಿಮಾ…

Read More

ಲಕ್ಕುಂಡಿಯಲ್ಲಿ‌ ಮತ್ತೊಂದು ಅಚ್ಚರಿ: ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ! – Kannada News | Real Cobra Found in Lakkundi Temple: Workers Stunned During Renovation at Historic Site in Gadag

ಗದಗ, ಫೆಬ್ರವರಿ 11: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಕಾಣಿಸಿಕೊಂಡು ಆತಂಕ ಮೂಡಿಸಿದೆ. ಗದಗ ತಾಲೂಕಿನ ಪ್ರಸಿದ್ಧ ಲಕ್ಕುಂಡಿ ಗ್ರಾಮದಲ್ಲಿರುವ ಈಶ್ವರ ಹಾಗೂ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಿಜವಾದ ನಾಗಸರ್ಪ ಕಾಣಿಸಿಕೊಂಡು, ಸ್ಥಳೀಯರು ಹಾಗೂ ಕಾರ್ಮಿಕರಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಯಿತು. ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾದ ಐತಿಹಾಸಿಕ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯ ಇದೀಗ ಲಕ್ಕುಂಡಿಯಲ್ಲಿ ನಡೆಯುತ್ತಿದೆ. ಚೌಕಿಮಠ ಕುಟುಂಬಕ್ಕೆ ಸೇರಿದ ಮನೆ ಸಂಕೀರ್ಣದೊಳಗಿನ ಹುದುಗಿದ ಈಶ್ವರ ದೇವಸ್ಥಾನವನ್ನು ‘ಮನೆಯೊಳಗೊಂದು ದೇವಸ್ಥಾನ’…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಬೇರೆಯವರ ಜಗಳದಲ್ಲಿ ಮಧ್ಯಸ್ಥಿಕೆ ವಹಿಸಲು ಹೋಗಬೇಡಿ – Kannada News | Numerology Prediction: Birth Numbers 1, 2, 3 Horoscope for January 18

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನೀವು ಮನೆಯಲ್ಲಿ ಹಳೆಯ ವಸ್ತುಗಳನ್ನು ವಿಂಗಡಿಸುವಾಗ ಅಥವಾ ಶುಚಿಗೊಳಿಸುವಾಗ ಪ್ರಮುಖವಾದ ದಾಖಲೆ ಅಥವಾ ಕಳೆದುಹೋಗಿದ್ದ ವಸ್ತುಗಳನ್ನು ಮರಳಿ ಪಡೆಯುವಿರಿ. ಸಂಜೆ ವೇಳೆ ಬಾಲ್ಯದ ಸ್ನೇಹಿತರ ಭೇಟಿಯಿಂದ ಮನಸ್ಸು ಹಗುರವಾಗಲಿದೆ. ನೀವು ತೆಗೆದುಕೊಳ್ಳುವ ನಿರ್ಧಾರವೊಂದು ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ದಾರಿಯಾಗಲಿದೆ. ವಿನಾಕಾರಣ ಬೇರೆಯವರ ಜಗಳದಲ್ಲಿ ಮಧ್ಯಸ್ಥಿಕೆ ವಹಿಸಲು ಹೋಗಬೇಡಿ. ನೀವು ಭವಿಷ್ಯದ ಯೋಜನೆಗಳ ಬಗ್ಗೆ ಚಿಂತನೆ ನಡೆಸಲು ಸೂಕ್ತ ಸಮಯ….

Read More

ಕೋಟ್ಯಂತರ ಅಕ್ರಮದ ನಡುವೆಯೇ 10 ದಿನಗಳಲ್ಲಿ ನಗರ ಸಭೆ ಜೆಇ ಅಮಾನತು ವಾಪಸ್! ಅನುಮಾನಕ್ಕೆ ಎಡೆ ಮಾಡಿ‌ಕೊಟ್ಟ ಆದೇಶ!

ಕೊಪ್ಪಳ, ಮಾರ್ಚ್​ 27: ಅಕ್ರಮ ಹಣ ವ್ಯವಹಾರ ನಡೆಸಿದ ಆರೋಪದ ಹಿನ್ನೆಲೆ ಅಮಾನತುಗೊಂಡಿದ್ದ ಕೊಪ್ಪಳ (Koppal) ನಗರಸಭೆಯ ಜೂನಿಯರ್ ಇಂಜಿನಿಯರ್ ಸೋಮಲಿಂಗಪ್ಪ ಪ್ರಕರಣದಲ್ಲಿ ಹೊಸ ತಿರುವು ಎದುರಾಗಿದೆ. ಪೌರಾಡಳಿತ ಇಲಾಖೆ ಕೇವಲ 10 ದಿನಗಳಲ್ಲೇ ಅಮಾನತು ಆದೇಶವನ್ನು ಹಿಂಪಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ನೂರಾರು ಕಾಮಗಾರಿಗಳಲ್ಲಿ ಲೋಪ ಸೋಮಲಿಂಗಪ್ಪ ವಿರುದ್ಧ ಸುಮಾರು 10 ಕೋಟಿ ರೂಪಾಯಿ ಅಕ್ರಮ ಆರೋಪ ಕೇಳಿಬಂದಿತ್ತು. 2023-24 ಹಾಗೂ 2024-25ನೇ ಸಾಲಿನ ಸುಮಾರು 336 ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿರುವುದು ಲೋಕಾಯುಕ್ತ ತನಿಖೆಯಲ್ಲಿ ಬಹಿರಂಗವಾಗಿತ್ತು….

Read More

ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!

ಕೊಡಗು, ಏಪ್ರಿಲ್​ 04: ಪ್ರವಾಸಿಗರ ಬಸ್​​ವೊಂದು ಕಾರಿನ‌ ಮೇಲೆ ಉರುಳಿ ಬಿದ್ದಿರುವಂತಹ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪವಾಡ ಸದೃಶ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ‌ ಸುದೀಪ್​ ಅತಿ ವೇಗವಾಗಿ ಬಸ್ ಚಲಾಯಿಸಿದ್ದಾರೆ. ಈ ವೇಳೆ ರಸ್ತೆ‌ ಬದಿ‌ ನಿಂತಿದ್ದ ಕಾರಿನ‌ ಮೇಲೆ ಬಸ್ ಉರುಳಿ ಬಿದ್ದಿದೆ. ಸದ್ಯ ​​ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source…

Read More

ಕರ್ನಾಟಕ ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!

ಹುಬ್ಬಳ್ಳಿ, ಏಪ್ರಿಲ್ 10: ಹಜರತ್ ನಿಜಾಮುದ್ದೀನ್‌ ಹಾಗೂ ಯಶವಂತಪುರ ಮಧ್ಯೆ ಸಂಚರಿಸುವ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 12650) ರೈಲಿನಲ್ಲಿ ಯುವಕರಿಬ್ಬರು ಬಹಿರಂಗವಾಗಿ ಗಾಂಜಾ ಸೇವನೆ ಮಾಡಿದ್ದಾರೆ. ರಾತ್ರಿ ಪ್ರಯಾಣದ ವೇಳೆ ಸಿಗರೇಟ್‌ನಲ್ಲಿ ಗಾಂಜಾ ಸೇರಿಸಿ ಸೇದುತ್ತಾ ಸಹಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡಿದ್ದಾರೆ. ಸಾರ್ವಜನಿಕರ ಭಯವಿಲ್ಲದೆ ಅಟ್ಟಹಾಸ ಮೆರೆದ ಈ ಯುವಕರ ಕೃತ್ಯವನ್ನು ಪ್ರಯಾಣಿಕರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ಈಗ ವೈರಲ್ ಆಗಿದೆ. ರೈಲ್ವೆ ಪೊಲೀಸರು ಇವರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ….

Read More