ಸಾಯಿ ಪಲ್ಲವಿ ಜೊತೆ ಆಮಿರ್ ಖಾನ್ ಮಗನ ಒಂದು ದಿನದ ಪ್ರೀತಿ; ಏನಿದು ಕಥೆ? – Kannada News | Aamir Khan son Junaid Khan Sai Pallavi Ek Din movie Trailer release

ಬಾಲಿವುಡ್ ನಟ ಆಮಿರ್ ಖಾನ್ ಅವರ ಪುತ್ರ ಜುನೈದ್ ಖಾನ್ (Junaid Khan) ಕೂಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಬಹುಭಾಷಾ ನಟಿ ಸಾಯಿ ಪಲ್ಲವಿ (Sai Pallavi) ಜೊತೆ ಜುನೈದ್ ಖಾನ್ ಅಭಿನಯದ ‘ಏಕ್ ದಿನ್’ ಸಿನಿಮಾ ಮೇಲೆ ನಿರೀಕ್ಷೆ ಇದೆ. ಈ ಸಿನಿಮಾದ ಟ್ರೇಲರ್ ಗುರುವಾರ (ಏಪ್ರಿಲ್ 16) ಬಿಡುಗಡೆಯಾಗಿದೆ. ಸುನಿಲ್ ಪಾಂಡೆ ನಿರ್ದೇಶನದ ಈ ಚಿತ್ರವು ‘ಆಮಿರ್ ಖಾನ್ ಪ್ರೊಡಕ್ಷನ್ಸ್’ ಬ್ಯಾನರ್ ಮೂಲಕ ನಿರ್ಮಾಣ ಆಗಿದೆ. ‘ಏಕ್ ದಿನ್’ (Ek Din) ಸಿನಿಮಾದ ಕಥೆ ಏನು ಎಂಬುದು ಟ್ರೇಲರ್ ಮೂಲಕ ಗೊತ್ತಾಗಿದೆ.

‘ಏಕ್ ದಿನ್’ ಚಿತ್ರದ ಮೂಲಕ ಜುನೈದ್ ಖಾನ್ ಮತ್ತು ಸಾಯಿ ಪಲ್ಲವಿ ಮೊದಲ ಬಾರಿಗೆ ತೆರೆಯ ಮೇಲೆ ಒಂದಾಗುತ್ತಿದ್ದಾರೆ. ಬಿಡುಗಡೆಯಾಗಿರುವ 2 ನಿಮಿಷ 54 ಸೆಕೆಂಡುಗಳ ಟ್ರೇಲರ್​ನಲ್ಲಿ ಒಂದು ಸುಂದರವಾದ ಲವ್ ಸ್ಟೋರಿ ಕಾಣಿಸಿದೆ. ಹೀರೋ ಮತ್ತು ಹೀರೋಯಿನ್ ನಡುವೆ ನಡೆಯುವ ಒಂದೇ ದಿನದ ಪ್ರೀತಿಯನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತದೆ.

ಟ್ರೇಲರ್‌ನಲ್ಲಿ ಜುನೈದ್ ಖಾನ್ ಒಬ್ಬ ನಾಚಿಕೆ ಸ್ವಭಾವದ ಯುವಕನಾಗಿ ಕಾಣಿಸಿಕೊಂಡಿದ್ದಾರೆ. ಒಂದೇ ಆಫೀಸ್​ನಲ್ಲಿ ಕೆಲಸ ಮಾಡುವ ಸಾಯಿ ಪಲ್ಲವಿ ಮೇಲೆ ಅವರಿಗೆ ಪ್ರೀತಿ ಇರುತ್ತದೆ. ಆದರೆ ಅದನ್ನು ವ್ಯಕ್ತಪಡಿಸಲು ಧೈರ್ಯ ಸಾಲದೆ ಒದ್ದಾಡುತ್ತಿರುತ್ತಾರೆ. ಆದರೆ, ಇಡೀ ಆಫೀಸ್​ನವರು ಜಪಾನ್‌ ಪ್ರವಾಸಕ್ಕೆ ತೆರಳಿದಾಗ ನಡೆಯುವ ಒಂದು ಅಪಘಾತದಿಂದ ಕಥೆಗೆ ರೋಚಕ ತಿರುವು ಬರುತ್ತದೆ.

‘ಏಕ್ ದಿನ್’ ಚಿತ್ರದ ಟ್ರೇಲರ್‌:

ಅಪಘಾತದ ನಂತರ ಸಾಯಿ ಪಲ್ಲವಿ ಪಾತ್ರಕ್ಕೆ ಒಂದು ದಿನದ ಮಟ್ಟಿಗೆ ಹಳೆಯದೆಲ್ಲ ಮರೆತು ಹೋಗುತ್ತದೆ. ಆ ಒಂದೇ ದಿನದಲ್ಲಿ ಜುನೈದ್ ಖಾನ್ ಪಾತ್ರದ ಜೊತೆ ಲವ್ ಆಗುತ್ತದೆ. ಆ ಲವ್ ಸ್ಟೋರಿಗೆ ಒಂದು ದಿನ ಮಾತ್ರ ಆಯಸ್ಸು. ಹಾಗಾದರೆ ಮುಂದೇನಾಗುತ್ತದೆ? ಮೇ 1ರಂದು ಸಿನಿಮಾ ಬಿಡುಗಡೆ ಆಗಲಿದ್ದು, ಅಂದೇ ಈ ಪ್ರಶ್ನೆಗೆ ಉತ್ತರ ಸಿಗಲಿದೆ.

ಇದನ್ನೂ ಓದಿ: ರಣಬೀರ್, ಸಾಯಿ ಪಲ್ಲವಿ ‘ರಾಮಾಯಣ’ ಫೋಟೋ ಫೇಕ್; ಅಸಲಿ ವಿಷಯ ಬಿಚ್ಚಿಟ್ಟ ನಟ

ಆಮಿರ್ ಖಾನ್, ಮನ್ಸೂರ್ ಖಾನ್ ಮತ್ತು ಅಪರ್ಣಾ ಪುರೋಹಿತ್ ಅವರು ಜೊತೆಯಾಗಿ ಈ ಸಿನಿಮಾ ನಿರ್ಮಿಸಿದ್ದಾರೆ. ರಾಮ್ ಸಂಪತ್ ಅವರು ಸಂಗೀತ ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಸಿನಿಮಾದ ಟ್ರೇಲರ್​ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬುದನ್ನು ಕಾದುನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಜನ ನಾಯಗನ್’ ಸಿನಿಮಾ ಸೋರಿಕೆ: ಮೂವರ ಬಂಧನ – Kannada News | Jana Nayagan movie piracy three people arrested by Tamil Nadu police

ನಟ ಮತ್ತು ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ಸಂಸ್ಥಾಪಕ ವಿಜಯ್ (Thalapaty Vijay) ನಟಿಸಿರುವ ಬಹುನಿರೀಕ್ಷಿತ ಚಿತ್ರ ‘ಜನ ನಾಯಗನ್’ ಬಿಡುಗಡೆಗೆ ಮುನ್ನವೇ ಅಂತರ್ಜಾಲದಲ್ಲಿ ಸೋರಿಕೆಯಾಗಿದೆ. ಈ ಕುರಿತು ಈಗಾಗಲೇ ದೂರು ದಾಖಲಾಗಿದ್ದು, ತಮಿಳುನಾಡು ಸೈಬರ್ ಕ್ರೈಮ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ತಾತ್ಕಾಲಿಕ ನೌಕರನೊಬ್ಬನಿಂದಾಗಿ ‘ಜನ ನಾಯಗನ್’ ಸಿನಿಮಾ ಸೋರಿಕೆ ಆಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಬುಧವಾರ (ಏಪ್ರಿಲ್ 15) ಈ ಪ್ರಕರಣದ ಮುಖ್ಯ ಆರೋಪಿ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಚಿತ್ರದ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದರು. ಏಪ್ರಿಲ್ 9 ರಂದು ಚಿತ್ರದ ಕೆಲವು ಪ್ರಮುಖ ದೃಶ್ಯಗಳು ಮತ್ತು ನಂತರ ಪೂರ್ಣ ಎಚ್‌ಡಿ (HD) ಆವೃತ್ತಿಯು ಪೈರಸಿ ಸೈಟ್‌ಗಳಲ್ಲಿ ಕಾಣಿಸಿಕೊಂಡಿತ್ತು. ಇದು ಚಿತ್ರತಂಡ ಮತ್ತು ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಆದರೆ ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಎಡಿಟಿಂಗ್ ಸ್ಟುಡಿಯೋದಿಂದ ಸಿನಿಮಾ ಲೀಕ್ ಆಗಿದ್ದು, ಸ್ಟುಡಿಯೋನಲ್ಲಿ ಬೇರೆ ಸಿನಿಮಾಕ್ಕೆ ಕೆಲಸ ಮಾಡಲು ಬಂದಿದ್ದ ತಾತ್ಕಾಲಿಕ ನೌಕರನೊಬ್ಬ ‘ಜನ ನಾಯಗನ್’ ಸಿನಿಮಾವನ್ನು ಅಲ್ಲಿನ ಕಂಪ್ಯೂಟರ್​​ಗಳಿಂದ ಡೌನ್​​ಲೋಡ್ ಮಾಡಿಕೊಂಡು ಆ ಬಳಿಕ ಬಿಡುಗಡೆ ಮಾಡಿದ್ದಾನೆ. ಇದೀಗ ಪೊಲೀಸರು ಆತನನ್ನೂ ಸೇರಿದಂತೆ ಆತನಿಗೆ ಸಹಕಾರ ನೀಡಿದ ಇನ್ನಿಬ್ಬರನ್ನು ಬಂಧಿಸಿದ್ದಾರೆ. ಮಾತ್ರವಲ್ಲದೆ ಪೊಲೀಸರು ಈವರೆಗೆ 300ಕ್ಕೂ ಹೆಚ್ಚು ಪೈರಸಿ ಲಿಂಕ್‌ಗಳನ್ನು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದುಹಾಕಿದ್ದಾರೆ. ಕ್ಲೌಡ್ ಸ್ಟೋರೇಜ್ ಮತ್ತು ಡ್ರೈವ್ ಲಿಂಕ್‌ಗಳ ಮೂಲಕ ಚಿತ್ರವನ್ನು ಹಂಚುತ್ತಿದ್ದವರನ್ನು ಪತ್ತೆಹಚ್ಚಲು ಡಿಜಿಟಲ್ ವಿಧಿವಿಜ್ಞಾನದ ನೆರವು ಪಡೆಯಲಾಗಿದೆ. ಬಂಧಿತರಿಂದ ಮೊಬೈಲ್ ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ:ಆಶಾ ಭೋಸ್ಲೆಗೆ ಸುಮಲತಾ-ವಿಜಯ್ ಪ್ರಕಾಶ್ ವಿಶೇಷ ಗೌರವ

‘ಜನ ನಾಯಗನ್’ ಸಿನಿಮಾ ಜನವರಿ 9 ಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ ಕೆಲವು ದೃಶ್ಯಗಳಿಗೆ ಆಕ್ಷೇಪ ವ್ಯಕ್ತಪಡಿಸಿ ಸೆನ್ಸಾರ್ ಪ್ರಮಾಣಪತ್ರ ನೀಡಲು ವಿಳಂಬ ಮಾಡಿತು. ಚಿತ್ರದಲ್ಲಿನ ಕೆಲವು ರಾಜಕೀಯ ಮತ್ತು ಧಾರ್ಮಿಕ ಅಂಶಗಳು ಸಮಾಜದಲ್ಲಿ ಅಶಾಂತಿ ಮೂಡಿಸಬಹುದು ಎಂಬ ಕಾರಣಕ್ಕೆ ಸೆನ್ಸಾರ್ ಮಂಡಳಿಯು ಈ ವಿಷಯವನ್ನು ರಿವೈಸಿಂಗ್ ಕಮಿಟಿಗೆ ವರ್ಗಾಯಿಸಿತ್ತು. ಆದರೆ ಈ ವರೆಗೆ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಿಲ್ಲ.

ವಿಜಯ್ ಅವರ ರಾಜಕೀಯ ಪ್ರವೇಶದ ಹಿನ್ನೆಲೆಯಲ್ಲಿ ಈ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇತ್ತು. ಈ ವಿಳಂಬದ ಹಿಂದೆ ರಾಜಕೀಯ ಹಸ್ತಕ್ಷೇಪವಿದೆ ಎಂದು ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಕಮಲ್ ಹಾಸನ್, ರಜನಿಕಾಂತ್ ಸೇರಿದಂತೆ ಅನೇಕ ನಟರು ಪೈರಸಿ ಮತ್ತು ಸೆನ್ಸಾರ್ ವಿಳಂಬವನ್ನು ಖಂಡಿಸಿದ್ದಾರೆ. ಸಿಬಿಎಫ್​​ಸಿಯಿಂದಲೇ ಸಿನಿಮಾ ಲೀಕ್ ಆಗಿದೆ ಎಂದು ಸಹ ಆರೋಪಿಸಲಾಗಿತ್ತು. ಆದರೆ ತನಿಖೆಯಿಂದ ಇದೀಗ ಸಿಬಿಎಫ್​​ಸಿಯಿಂದ ಲೀಕ್ ಆಗಿಲ್ಲ ಎಂಬುದು ಪತ್ತೆ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ತಪ್ಪಿದ ಭಾರೀ ದುರಂತ; ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್ – Kannada News | SpiceJet Plane Hits parked Akasa Aircraft At Delhi Airport

ನವದೆಹಲಿ, ಏಪ್ರಿಲ್ 16: ದೆಹಲಿ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಆಕಾಶ ಏರ್ ವಿಮಾನಕ್ಕೆ ಸ್ಪೈಸ್‌ಜೆಟ್ ವಿಮಾನ (SpiceJet Plane) ಡಿಕ್ಕಿ ಹೊಡೆದ ಕಾರಣದಿಂದ ಎರಡೂ ಜೆಟ್‌ಗಳಿಗೆ ಹಾನಿಯಾಗಿದ್ದು, ಈ ಬಗ್ಗೆ ತನಿಖೆ ಆರಂಭವಾಗಿದೆ. ಸ್ಪೈಸ್‌ಜೆಟ್ ಬಿ737-700 ವಿಮಾನದ ಬಲಭಾಗದ ರೆಕ್ಕೆಗೆ ಹಾನಿಯಾಗಿದೆ. “ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಇಳಿಸಲಾಯಿತು. ನಮ್ಮ ತಂಡಗಳು ನಮ್ಮ ಪ್ರಯಾಣಿಕರನ್ನು ಹೈದರಾಬಾದ್‌ಗೆ ಆದಷ್ಟು ಬೇಗ ಕಳುಹಿಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ” ಎಂದು ಸ್ಪೈಸ್​ಜೆಟ್ ವಕ್ತಾರರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಡಿಕೆ ತೋಟದ ಬಳಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ: ಅಕ್ರಮ ಸಂಬಂಧಕ್ಕೆ ನಡೆಯಿತಾ ಹತ್ಯೆ? – Kannada News | Nelamangala: Missing Woman Skeleton Found; Illicit Affair Suspected Murder Case

ನೆಲಮಂಗಲ, ಏಪ್ರಿಲ್​ 16: ಮಹಿಳೆಯೊಬ್ಬರ (Woman) ಅಸ್ಥಿಪಂಜರ (Skeleton) ಪತ್ತೆಯಾದ ಘಟನೆ ನೆಲಮಂಗಲ ತಾಲೂಕಿನ ಗಡಿ ಗ್ರಾಮವಾದ ಹಳೇ ನಿಜಗಲ್‌ನಲ್ಲಿ ಗ್ರಾಮದಲ್ಲಿ ನಡೆದಿದೆ. ಅಡಿಕೆ ತೋಟದ ಪಕ್ಕದಲ್ಲಿ ಮಹಿಳೆಯ ತಲೆ ಬುರುಡೆ, ಕೈ-ಕಾಲುಗಳ ಕೆಲ ಮೂಳೆಗಳು ಪತ್ತೆ ಆಗಿವೆ. ಯಮುನಾ (35) ಮೃತ ಮಹಿಳೆ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು. ಸದ್ಯ ಇವರ ಅಸ್ಥಿಪಂಜರ ಪತ್ತೆಯಾಗಿದೆ. ಅಕ್ರಮ ಸಂಬಂಧದ ಹಿನ್ನೆಲೆ ಈ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ನಡೆದಿದ್ದೇನು?

ಮೃತ ಮಹಿಳೆ ಯಮುನಾ ತುಮಕೂರು ನಿವಾಸಿ. 19 ವರ್ಷಗಳ ಹಿಂದೆ ಮಲ್ಲಿಕಾರ್ಜುನ್ ಎಂಬುವವರನ್ನು ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೆ, ಎಂಟು ವರ್ಷಗಳ ಹಿಂದೆ ರಾಘವೇಂದ್ರ ಎಂಬಾತನ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ ಯಮುನಾ, ಪತಿಯನ್ನು ಬಿಟ್ಟು ಐದು ವರ್ಷಗಳ ಕಾಲ ಆತನೊಂದಿಗೆ ದೊಡ್ಡಬಳ್ಳಾಪುರದಲ್ಲಿ ವಾಸವಿದ್ದರು.

ಇದನ್ನೂ ಓದಿ: ವಿಜಯಪುರದಲ್ಲೊಂದು ಅಮಾನವೀಯ ಘಟನೆ: ನೋಡಲು ತನ್ನಂತಿಲ್ಲ ಎಂದು ಮಗನನ್ನೇ ಕೊಂದ ತಂದೆ

ತನ್ನ ತಪ್ಪಿನ ಅರಿವಾಗಿ ಎರಡು ವರ್ಷಗಳ ಹಿಂದೆ ಯಮುನಾ ಮರಳಿ ಪತಿಯ ಮನೆಗೆ ಬಂದು ಜೀವನ ನಡೆಸುತ್ತಿದ್ದರು. ಆದರೆ, ಕಳೆದ ಮಾರ್ಚ್ 21ರಂದು ಯಮುನಾ ಹುಟ್ಟುಹಬ್ಬ ಇತ್ತು. ಹೀಗಾಗಿ ಭೇಟಿ ಮಾಡುವಂತೆ ರಾಘವೇಂದ್ರ ಒತ್ತಾಯಿಸಿದ್ದ. ಕೆಲಸ ಮುಗಿಸಿ ಆತನನ್ನು ಭೇಟಿ ಮಾಡಲು ಹೋದ ಯಮುನಾ ಅಂದಿನಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ತುಮಕೂರು ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು.

ಅಸ್ಥಿಪಂಜರವಾಗಿ ಪತ್ತೆ

ಹಳೇ ನಿಜಗಲ್ ಗ್ರಾಮದ ಅಡಿಕೆ ತೋಟದ ಪಕ್ಕದಲ್ಲಿ ತಲೆಬುರುಡೆ ಹಾಗೂ ಕೈಕಾಲುಗಳ ಮೂಳೆಗಳು ಪತ್ತೆಯಾಗಿವೆ. ಮೂಳೆಗಳ ಪಕ್ಕದಲ್ಲೇ ಮಹಿಳೆಯ ಬ್ಯಾಗ್ ಹಾಗೂ ಐಡಿ ಕಾರ್ಡ್ ಸಿಕ್ಕಿದ್ದರಿಂದ, ಯಮುನಾ ಎಂದು ಗುರುತಿಸಲಾಗಿದೆ. ಪೊಲೀಸರು ನೀಡಿದ ಮಾಹಿತಿಯ ಮೇರೆಗೆ ಸ್ಥಳಕ್ಕೆ ಬಂದ ಕುಟುಂಬಸ್ಥರು ಮೃತದೇಹವನ್ನು ಗುರುತಿಸಿದ್ದಾರೆ.

ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು: 6 ಸುತ್ತು ಫೈರಿಂಗ್ ಮಾಡಿ ಗ್ರಾ.ಪಂ ಸದಸ್ಯನ ಹತ್ಯೆ

ಸ್ಥಳಕ್ಕೆ ಡಾಬಸ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ರಾಘವೇಂದ್ರ ಎಂಬಾತನೇ ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಲು ಮೃತದೇಹವನ್ನು ಅಡಿಕೆ ತೋಟದ ಬಳಿ ಎಸೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ವರದಿ: ಮಂಜುನಾಥ್​

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕುರಿ ಮೈತೊಳೆಯಲು ಕೆರೆಗೆ ಹೋಗಿದ್ದ ಸಹೋದರರು ನೀರುಪಾಲು: ಬದುಕು ದುರಂತ ಅಂತ್ಯ – Kannada News | Two Brothers Drown in Javagal Lake While Washing Sheep

ಹಾಸನ, ಏಪ್ರಿಲ್​ 16: ಶಾಲೆಗೆ ರಜೆಯಿದ್ದ ಕಾರಣ ಕುರಿ ತೊಳೆಯಲು ತೆರಳಿದ್ದ ಇಬ್ಬರು ಸಹೋದರರು ಕೆರೆಯಲ್ಲಿ ಮುಳುಗಿ (drowning) ಸಾವನ್ನಪ್ಪಿರುವಂತಹ (death) ದಾರುಣ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಜಾವಗಲ್ ಗ್ರಾಮದಲ್ಲಿ ನಡೆದಿದೆ. ಇಮ್ರಾನ್ (15) ಮತ್ತು ಯಾಸಿನ್ (13) ಮೃತ ದುರ್ದೈವಿಗಳು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ನಡೆದಿದ್ದೇನು?

ಜಾವಗಲ್ ಗ್ರಾಮದ ಇಮ್ರಾನ್ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ, ಯಾಸಿನ್ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದ. ಬೇಸಿಗೆ ರಜೆ ಹಿನ್ನೆಲೆ ಮನೆಯಲ್ಲಿದ್ದ ಬಾಲಕರು, ತಾವು ಸಾಕಿದ್ದ ಕುರಿಗಳನ್ನು ಮೈತೊಳೆಯಲೆಂದು ನಿನ್ನೆ ಸಂಜೆ ಗ್ರಾಮದ ಸಮೀಪವಿರುವ ಜಾವಗಲ್ ದೊಡ್ಡಕೆರೆಗೆ ತೆರಳಿದ್ದರು.

ಇದನ್ನೂ ಓದಿ: ಅರಹಳ್ಳಿ ಕೆರೆಯಲ್ಲಿ ದುರಂತ: ಮಕ್ಕಳನ್ನು ರಕ್ಷಿಸಲು ಹೋಗಿ ಜೀವ ತೆತ್ತ ಮಹಿಳೆಯರು

ಕುರಿಗಳ ಮೈತೊಳೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಯ ಆಳದ ಸ್ಥಳಕ್ಕೆ ಬಿದ್ದಿದ್ದಾರೆ. ಒಬ್ಬರನ್ನು ರಕ್ಷಿಸಲು ಹೋಗಿ ಮತ್ತೊಬ್ಬರು ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ಸ್ಥಳೀಯ ಕುರಿಗಾಹಿಗಳು ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸತತ ಕಾರ್ಯಾಚರಣೆಯ ಮೂಲಕ ಬಾಲಕರ ಶವಗಳನ್ನು ಕೆರೆಯಿಂದ ಹೊರತೆಗೆಯಲಾಗಿದೆ.

ಚಿಗುರು ಮೀಸೆಯ ಸಹೋದರರು ಸಾವನ್ನಪ್ಪಿರುವುದು ಜಾವಗಲ್ ಗ್ರಾಮದಲ್ಲಿ ಮೌನ ಆವರಿಸುವಂತೆ ಮಾಡಿದೆ. ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಜಾವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮಿನಿ ಬಸ್ ಹಾಗೂ ಟ್ರ್ಯಾಕ್ಟರ್ ಪರಸ್ಪರ ಡಿಕ್ಕಿ: ಓರ್ವ ಮಹಿಳೆ ಸಾವು

ಮಿನಿ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿ ಓರ್ವ ಮಹಿಳೆ ಸಾವನ್ನಪ್ಪಿದ್ದರೆ ಆರು ಜನರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ಹೊರವಲಯದ ಆಂಜನೇಯ ದೇವಸ್ಥಾನ ಬಳಿ ನಡೆದಿದೆ. ರತ್ನಮ್ಮ (32) ಮೃತ ಮಹಿಳೆ.

ಇದನ್ನೂ ಓದಿ: ಜಲ ಕಂಟಕ: ಕರ್ನಾಟಕದಲ್ಲಿ ಸೋಮವಾರ ಒಂದೇ ದಿನ 10 ಮಂದಿ ನೀರು ಪಾಲು

ಇನ್ನು ಗಂಭೀರವಾಗಿ ಗಾಯಗೊಂಡವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ತಿರುಪತಿಯಿಂದ ಕೊಪ್ಪಳ ಕಡೆಗೆ ಮಿನಿ ಬಸ್ ಹೊರಟಿತ್ತು. ಕಂಪ್ಲಿಯಿಂದ ಕುರುಗೋಡು ಕಡೆ ಬರುತ್ತಿದ್ದ ಟ್ರಾಕ್ಟರ್​​ ಡಿಕ್ಕಿ ಹೊಡೆದಿವೆ. ಇಬ್ಬರು ಚಾಲಕರ ನಿರ್ಲಕ್ಷ್ಯದಿಂದಲೇ ಅಪಘಾತ ನಡೆದಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಕುರುಗೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವಿನಯ್ ಕುಲಕರ್ಣಿ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ – Kannada News | Special Court santosh gajanan bhat And Others 114 judge transfer

ಬೆಂಗಳೂರು, (ಏಪ್ರಿಲ್ 16): ಕರ್ನಾಟಕದ ಜಿಲ್ಲಾ, ಸಿವಿಲ್, ಹಿರಿಯ ಸಿವಿಲ್ ನ್ಯಾಯಾಧೀಶರು ಸೇರಿದಂತೆ ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಪ್ರತಿವರ್ಷ ನಡೆಯುವ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯಂತೆ ವರ್ಗಾವಣೆ ಮಾಡಿ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಆದೇಶ ಹೊರಡಿಸಿದ್ದು, ಜೂನ್ 1ರಿಂದ ಹೊಸ ಕಾರ್ಯಭಾರ ವಹಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಇನ್ನು ನಿನ್ನೆ (ಏಪ್ರಿಲ್ 15) ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಕೊಲೆ ಪ್ರಕರಣ ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಅವರನ್ನೂ ಸಹ ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಯೋಗೀಶ್ ಗೌಡ ಕೊಲೆ ಕೇಸ್: ಯಾರಿಗೆ ಜೀವಾವಧಿ? ಯಾರಿಗೆ ರಿಯಾಯಿತಿ? ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಫೈನಲ್

ಧಾರವಾಡದ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ವಿನಯ್ ಕುಲಕರ್ಣಿ ಸೇರಿದಂತೆ 17 ಅಪರಾಧಿಗಳ ಶಿಕ್ಷೆ ಪ್ರಮಾಣ ಪ್ರಕಟಿಸುವ ಒಂದು ದಿನ ಮುನ್ನವೇ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ವರ್ಗಾವಣೆಗೊಂಡಿದ್ದಾರೆ. ಸಂತೋಷ್ ಗಜಾನನ ಭಟ್ ಅವರೇ ಯೋಗೇಶ್ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಪ್ರಕಟಿಸಿದ್ದು, ವಿನಯ್ ಕುಲಕರ್ಣಿ ಸೇರಿದಂತೆ ಇತರೆ 17 ಜನರನ್ನು ದೋಷಿ ಎಂದು ತೀರ್ಪು ನೀಡಿದ್ದರು. ಅಲ್ಲದೇ ಇಂದು (ಏಪ್ರಿಲ್ 16) ಶಿಕ್ಷೆ ಪ್ರಮಾಣದ ಬಗ್ಗೆ ವಿಚಾರಣೆ ನಡೆಸಿದ್ದು, ನಾಳೆ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಮುಂದೂಡಿದ್ದರು. ಇದರ ಮಧ್ಯೆ ಅವರು ವರ್ಗಾವಣೆಯಾಗಿದ್ದು, ನಾಳೆ ಅಪರಾಧಿಗಳಿಗೆ ಅವರು ಶಿಕ್ಷೆ ಪ್ರಮಾಣ ಪ್ರಕಟಿಸುತ್ತಾರಾ ಇಲ್ವಾ ಅಂತ ಸಹಜವಾಗಿಯೇ ಹಲವು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ. ಆದ್ರೆ, ಈ ವರ್ಗಾವಣೆಯಲ್ಲಿ ಯಾವುದೇ ಅನುಮಾನಗಳಿಲ್ಲ. ಇದೊಂದು ಸಹಜ ವರ್ಗಾವಣೆಯಾಗಿದ್ದು, ಪ್ರತಿ ವರ್ಷ ಏಪ್ರಿಲ್​ ತಿಂಗಳಲ್ಲಿ ಜಡ್ಜ್​​ಗಳ ವರ್ಗಾವಣೆ ಪ್ರಕ್ರಿಯೆ ನಡೆಯುತ್ತೆ. ಇದರಿಂದ ಸಹಜವಾಗಿಯೇ ಎಲ್ಲಾ ಪ್ರಕರಣಗಳ ಪ್ರಕ್ರಿಯೆಗಳನ್ನು ಹೇಗೆ ಈವರೆಗೆ ನಡೆಸುತ್ತಿದ್ದರೋ ಜೂನ್ 1ರವರೆಗೂ ಹಾಗೇ ನಡೆಸಬಹುದು. ಹೀಗಾಗಿ ನಾಳೆ (ಏಪ್ರಿಲ್ 17) ಕೊಲೆ ಕೇಸ್ ಸಂಬಂಧ ವಿನಯ್ ಕುಲಕರ್ಣಿ ಸೇರಿದಂತೆ 17 ಅಪರಾಧಿಗಳಿಗೆ ಜಡ್ಜ್ ಸಂತೋಷ್ ಗಜಾನನ ಭಟ್ ಅವರೇ ಶಿಕ್ಷೆ ಪ್ರಮಾಣ ಪ್ರಕಟಿಸಲಿದ್ದಾರೆ.

Source link

MI vs PBKS: ಟಾಸ್ ಗೆದ್ದ ಪಂಜಾಬ್; ರೋಹಿತ್ ಸೇರಿದಂತೆ ಮುಂಬೈ ತಂಡದಲ್ಲಿ 2 ಬದಲಾವಣೆ – Kannada News | MI vs PBKS Playing XI Mumbai Indians vs Punjab Kings Today IPL 2026 match Confirmed playing 11 details with name in Kannada

ಐಪಿಎಲ್‌ನ 19 (IPL 2026) ನೇ ಸೀಸನ್‌ನಲ್ಲಿ ಮುಂಬೈ ಇಂಡಿಯನ್ಸ್ (MI) ತನ್ನ ಅಭಿಯಾನವನ್ನು ಗೆಲುವಿನೊಂದಿಗೆ ಆರಂಭಿಸಿತು. ತನ್ನ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸುವ ಮೂಲಕ ಮುಂಬೈಗೆ ಶುಭಾರಂಭ ಸಿಕ್ಕಿತ್ತು. ಆದಾಗ್ಯೂ, ಅದರ ನಂತರ ಮುಂಬೈ ಸತತ 3 ಸೋಲುಗಳನ್ನು ಎದುರಿಸಬೇಕಾಯಿತು. ಇದೀಗ ಮುಂಬೈ ಇಂಡಿಯನ್ಸ್ ಕಳೆದ ಸೀಸನ್‌ನ ರನ್ನರ್-ಅಪ್ ಪಂಜಾಬ್ ಕಿಂಗ್ಸ್ ತಂಡವನ್ನು ತನ್ನ ಐದನೇ ಪಂದ್ಯದಲ್ಲಿ ಎದುರಿಸುತ್ತಿದೆ. ಪಂಜಾಬ್ ಕಿಂಗ್ಸ್‌ಗೂ ಇದು ಐದನೇ ಪಂದ್ಯವಾಗಿದೆ. ಈ ಸೀಸನ್‌ನಲ್ಲಿ ಪಂಜಾಬ್ ಕಿಂಗ್ಸ್ (PBKS) ಇದುವರೆಗೆ ಅಜೇಯವಾಗಿದೆ. ಆದ್ದರಿಂದ, ಮುಂಬೈ ಇಂಡಿಯನ್ಸ್ ಪಂಜಾಬ್ ಕಿಂಗ್ಸ್‌ನಿಂದ ಕಠಿಣ ಸವಾಲನ್ನು ಎದುರಿಸಲಿದೆ. ಮುಂಬೈಕರ್ ಶ್ರೇಯಸ್ ಅಯ್ಯರ್ ಪಂಜಾಬ್ ತಂಡವನ್ನು ಮುನ್ನಡೆಸಿದರೆ, ಹಾರ್ದಿಕ್ ಪಾಂಡ್ಯ ಮುಂಬೈ ನಾಯಕರಾಗಿದ್ದಾರೆ.

ಟಾಸ್ ಗೆದ್ದ ಪಂಜಾಬ್

ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟಾಸ್ ಸೋತ ಮುಂಬೈ ಮೊದಲು ಬ್ಯಾಟಿಂಗ್‌ ಮಾಡಲಿದೆ. ಇದರೊಂದಿಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಪಂಜಾಬ್ ತಂಡ ತನ್ನ ಗೆಲುವಿನ ಸಂಯೋಜನೆಯನ್ನು ಬದಲಿಸಿಲ್ಲ. ಅಂದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಂಡವೇ ಇಂದು ಆಡುತ್ತಿದೆ. ಇತ್ತ ಮುಂಬೈ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ. ಮಾಜಿ ನಾಯಕ ರೋಹಿತ್ ಶರ್ಮಾ ಗಾಯದಿಂದ ಈ ಪಂದ್ಯವನ್ನು ಆಡುತ್ತಿಲ್ಲ. ಹಾಗೆಯೇ ಮಿಚೆಲ್ ಸ್ಯಾಂಟ್ನರ್ ಕೂಡ ಈ ಪಂದ್ಯವನ್ನು ಆಡುತ್ತಿಲ್ಲ.

ಮುಖಾಮುಖಿ ದಾಖಲೆ

ಪಂಜಾಬ್ ಮತ್ತು ಮುಂಬೈ ನಡುವಿನ 35 ನೇ ಪಂದ್ಯವು ಇಂದು ನಡೆಯುತ್ತಿದೆ. ಎರಡೂ ತಂಡಗಳ ನಡುವಿನ 34 ಪಂದ್ಯಗಳ ಫಲಿತಾಂಶಗಳನ್ನು ನೋಡಿದರೆ, ಎರಡೂ ತಂಡಗಳು ಸಮಾನವಾಗಿ ಬಲಿಷ್ಠವಾಗಿವೆ ಎಂದು ಹೇಳಬಹುದು. ಎರಡೂ ತಂಡಗಳು ತಲಾ 17 ಪಂದ್ಯಗಳನ್ನು ಗೆದ್ದಿವೆ. ಆದ್ದರಿಂದ, ಗುರುವಾರ ಯಾವ ತಂಡ ಗೆದ್ದು ಮುನ್ನಡೆ ಸಾಧಿಸುತ್ತದೆ ಎಂಬುದನ್ನು ನೋಡುವುದು ಮುಖ್ಯವಾಗಿರುತ್ತದೆ.

MI vs PBKS IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ

ಉಭಯ ತಂಡಗಳ ಪ್ಲೇಯಿಂಗ್

ಮುಂಬೈ ಇಂಡಿಯನ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಿಯಾನ್ ರಿಕೆಲ್ಟನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ಶೆರ್ಫೇನ್ ರುದರ್‌ಫೋರ್ಡ್, ನಮನ್ ಧೀರ್, ಮಯಾಂಕ್ ರಾವತ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಜಸ್ಪ್ರೀತ್ ಬುಮ್ರಾ.

ಪಂಜಾಬ್ ಕಿಂಗ್ಸ್: ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯ, ಕೂಪರ್ ಕೊನೊಲಿ, ಶ್ರೇಯಸ್ ಅಯ್ಯರ್ (ನಾಯಕ), ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಯಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ವಿಜಯ್‌ಕುಮಾರ್ ವೈಶಾಕ್, ಅರ್ಷ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:14 pm, Thu, 16 April 26

Source link

ಮೈಗ್ರೇನ್ ಇದ್ಯಾ? ಹಾಗಿದ್ರೆ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ – Kannada News | Are You Making These Migraine Mistakes? Expert Tips

Are You Making These Migraine Mistakes? Expert TipsImage Credit source: Getty Images

ಮೈಗ್ರೇನ್ (Migraine) ಎಂದರೆ ತಲೆನೋವಿನ ಒಂದು ತೀವ್ರ ರೂಪ. ಸಾಮಾನ್ಯವಾಗಿ ಇದರ ಬಗ್ಗೆ ನಿಮಗೆ ತಿಳಿದಿರಬಹುದು, ಕೆಲವರು ಅನುಭವಿಸಿಯೂ ಇರಬಹುದು. ತಲೆಯ ಒಂದು ಭಾಗದಲ್ಲಿ ಸೂಜಿ ಚುಚ್ಚುವಂತೆ ನೋವು ಕಾಣಿಸಿಕೊಳ್ಳುತ್ತದೆ. ಕೆಲವರಿಗೆ ಇದು ಗಂಟೆಗಳವರೆಗೆ ಅಥವಾ ದಿನಗಳವರೆಗೆ ಕಂಡುಬರಬಹುದು. ಇದು ಕೇವಲ ತಲೆನೋವಷ್ಟೇ ಅಲ್ಲ, ವಾಂತಿ, ವಾಕರಿಕೆ, ಬೆಳಕಿನ ಸಂವೇದನೆ ಮತ್ತು ಶಬ್ದದಿಂದ ತೊಂದರೆಗಳನ್ನು ಉಂಟುಮಾಡುವ ನರಮಂಡಲದ ಸಮಸ್ಯೆಯಾಗಿದೆ. ಹಾಗಾದರೆ ಮೈಗ್ರೇನ್ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು, ದಿನನಿತ್ಯದ ಯಾವ ಅಭ್ಯಾಸ ಈ ರೀತಿಯ ಸಮಸ್ಯೆಗಳನ್ನು ಹೆಚ್ಚಿಸುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮೈಗ್ರೇನ್ ಏಕೆ ಉಂಟಾಗುತ್ತದೆ?

ತಜ್ಞರ ಪ್ರಕಾರ, ಮೆದುಳಿನಲ್ಲಿ ನಡೆಯುವ ರಾಸಾಯನಿಕ ಬದಲಾವಣೆಗಳು, ವಿಶೇಷವಾಗಿ ಸೆರೋಟೋನಿನ್ ಮಟ್ಟದ ಕುಸಿತ, ನರಮಂಡಲವನ್ನು ಹೆಚ್ಚು ಸಂವೇದನಾಶೀಲವಾಗಿಸುತ್ತದೆ. ಇದರಿಂದ ತಲೆನೋವು ಟ್ರಿಗರ್ ಆಗುತ್ತದೆ. ಒತ್ತಡ, ನಿದ್ರೆಯ ಕೊರತೆ, ಹಾರ್ಮೋನಲ್ ಬದಲಾವಣೆಗಳು, ಹೆಚ್ಚು ಬೆಳಕು, ಶಬ್ದ ಮತ್ತು ಕೆಲವು ಆಹಾರ ಪದಾರ್ಥಗಳು (ಚಾಕೊಲೇಟ್, ಕ್ಯಾಫೀನ್) ಮೈಗ್ರೇನ್ ಹೆಚ್ಚಿಸಲು ಕಾರಣವಾಗುತ್ತವೆ.

ಈ ತಪ್ಪುಗಳು ನೋವನ್ನು ಹೆಚ್ಚಿಸಬಹುದು;

ಸರಿಯಾಗಿ ನಿದ್ರೆ ಮಾಡದಿರುವುದು: ನಿದ್ರೆಯ ಕೊರತೆಯಿಂದ ಮೆದುಳು ವಿಶ್ರಾಂತಿ ಪಡೆಯುವುದಿಲ್ಲ, ಇದರಿಂದ ಮೈಗ್ರೇನ್ ಸಮಸ್ಯೆ ಹೆಚ್ಚಾಗಬಹುದು. ಪ್ರತಿದಿನ 7– 8 ಗಂಟೆ ನಿದ್ರೆ ಮಾಡುವುದು ಅತ್ಯಗತ್ಯ.

ಹೆಚ್ಚು ಶಬ್ದ ಮತ್ತು ಬೆಳಕಿರುವಲ್ಲಿ ಹೋಗುವುದು: ಜೋರಾದ ಶಬ್ದ ಅಥವಾ ಬೆಳಕಿನ ನಡುವೆ ಇರುವುದರಿಂದ ಮೈಗ್ರೇನ್ ಟ್ರಿಗರ್ ಆಗಬಹುದು. ಶಾಂತ ವಾತಾವರಣದಲ್ಲಿ ಸಮಯ ಕಳೆಯುವುದು ಉತ್ತಮ.

ಇದನ್ನೂ ಓದಿ: ಬಿಸಿಲಿಗೆ ಹೋದ ತಕ್ಷಣ ತಲೆನೋವು ಬರುತ್ತಾ? ಹಾಗಿದ್ರೆ ನಿಮಗೆ ಈ ಸಮಸ್ಯೆ ಇದೆ ಎಂದರ್ಥ!

ಖಾಲಿ ಹೊಟ್ಟೆಯಲ್ಲಿ ಹೆಚ್ಚು ಸಮಯ ಇರುವುದು: ದೀರ್ಘಕಾಲ ಆಹಾರ ಸೇವಿಸದಿರುವುದು ದೇಹದ ಶಕ್ತಿ ಮಟ್ಟವನ್ನು ಕುಗ್ಗಿಸುತ್ತದೆ. ಇದರಿಂದ ಮೈಗ್ರೇನ್ ಹೆಚ್ಚಾಗಬಹುದು. ಹಾಗಾಗಿ ನಿಯಮಿತವಾಗಿ ಸಮತೋಲನ ಆಹಾರ ಸೇವಿಸಬೇಕು.

ಹೆಚ್ಚು ಕ್ಯಾಫೀನ್ ಸೇವನೆ: ಹೆಚ್ಚು ಕಾಫಿ ಅಥವಾ ಚಹಾ ಸೇವನೆಯಿಂದ ನಿದ್ರೆಯ ಮಾದರಿ ಬದಲಾಗುತ್ತದೆ, ಇದು ಮೈಗ್ರೇನ್ ಹೆಚ್ಚಿಸಲು ಕಾರಣವಾಗಬಹುದು.

ನಿಯಂತ್ರಣಕ್ಕೆ ಸಲಹೆಗಳು:

ಮೈಗ್ರೇನ್ ನಿಯಂತ್ರಿಸಲು ನಿಯಮಿತ ನಿದ್ರೆ, ಆರೋಗ್ಯಕರ ಆಹಾರ, ಒತ್ತಡ ನಿಯಂತ್ರಣ ಮತ್ತು ವ್ಯಾಯಾಮ ಮುಖ್ಯ. ಅಗತ್ಯವಿದ್ದರೆ ವೈದ್ಯರ ಸಲಹೆ ಪಡೆಯುವುದು ಉತ್ತಮ. ಇಲ್ಲವಾದಲ್ಲಿ ಇದು ಒಂದು ದೀರ್ಘಕಾಲದ ಸಮಸ್ಯೆಯಾಗಬಹುದು. ಹಾಗಾಗಿ ಸರಿಯಾದ ಜೀವನಶೈಲಿ ಮತ್ತು ಕೆಲವು ತಪ್ಪುಗಳನ್ನು ತಪ್ಪಿಸುವ ಮೂಲಕ ಇದನ್ನು ನಿಯಂತ್ರಿಸಬಹುದು. ಆರೋಗ್ಯಕರ ಅಭ್ಯಾಸಗಳು ನೋವನ್ನು ಕಡಿಮೆ ಮಾಡಲು ಸಹಕಾರಿಯಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಅನಂತಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ ಹೈಕೋರ್ಟ್ – Kannada News | Karnataka High Court Relief to BJP Ex MP Anantkuma hegde Son In Car Over Take Case

ಬೆಂಗಳೂರು, (ಏಪ್ರಿಲ್ 16): ದಾಬಸ್​ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದ ಅನಂತಕುಮಾರ್ ಹೆಗಡೆ (Ananth Kumar Hegde) ಪುತ್ರನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪುತ್ರ ಅಶುತೋಷ್ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಗಲಾಟೆ ಪ್ರಕರಣದಿಂದಾಗಿ ಅವರಿಗೆ ಪಾಸ್‌ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ಕೈಬಿಡಿ ಎಂದು ಮಾಜಿ ಸಂಸದ ಅನಂತಕುಮಾರ್ ಹೆಗಡೆ ಹೈಕೋರ್ಟ್​​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಶುತೋಷ್ ವಿರುದ್ಧದ ಪ್ರಕರಣದ ವಿಚಾರಣೆಗೆ ತಡೆ ನೀಡಿ ಇಂದು (ಏಪ್ರಿಲ್ 16) ಆದೇಶ ಹೊರಡಿಸಿದೆ.

ದಾಬಸ್​ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್​ನಲ್ಲಿ ಅಶುತೋಷ್​ ಹೆಸರಿಲ್ಲದಿದ್ದರೂ ದೋಷಾರೋಪಪಟ್ಟಿಯಲ್ಲಿ ಸೇರಿಸಲಾಗಿದೆ. ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವುದರಿಂದ ಪಾಸ್‌ಪೋರ್ಟ್​ಗೆ ಸಮಸ್ಯೆಯಾಗಲಿದೆ. ಕುಟುಂಬದ ಹಿರಿಯರನ್ನು ನೋಡಲು ವಿದೇಶದಿಂದ ಬಂದಿದ್ದಾಗ ಘಟನೆ ನಡೆದಿದೆ. ಘಟನೆಯಲ್ಲಿ ಅಶುತೋಷ್ ಪಾತ್ರವಿಲ್ಲವೆಂದು ವಕೀಲ ಪವನ್ ಚಂದ್ರ ಶೆಟ್ಟಿ ವಾದ ಮಂಡಿಸಿದರು. ಈ ವಾದ ಆಲಿಸಿದ ಹೈಕೋರ್ಟ್​, ಅಶುತೋಷ್ ವಿರುದ್ಧದ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಇದರಿಂದ ಅನಂತಕುಮಾರ ಹೆಗಡೆ ಪುತ್ರ ಅಶುತೋಷ್​ಗೆ ಮಧ್ಯಂತರ ರಿಲೀಫ್ ಸಿಕ್ಕಂತಾಗಿದೆ.

ಇದನ್ನೂ ಓದಿ: ನೆಲಮಂಗಲ: ಗಲಾಟೆ-ಹಲ್ಲೆ ಆರೋಪ, ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ, ಗನ್​ಮ್ಯಾನ್, ಚಾಲಕನ ವಿರುದ್ಧ ಎಫ್​ಐಆರ್

ಕೋರ್ಟ್​​​ಗೆ ಅನಂತ್ ಕುಮಾರ್ ಹೆಗಡೆ ಮನವಿ ಮಾಡಿದ್ದೇನು?

ತುಮಕೂರಿನ ದಾಬಸ್‌ಪೇಟೆ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಅನಂತಕುಮಾರ ಹೆಗಡೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌. ಸುನೀಲ್‌ ದತ್‌ ಯಾದವ್‌ ಏಕಸದಸ್ಯ ಪೀಠ ನಡೆಸಿತ್ತು. ವಿದೇಶದಿಂದ ಬಂದಿದ್ದ ಪುತ್ರ ಅಶುತೋಷ್‌, ತನ್ನ ಅಜ್ಜಿಯನ್ನು ಕಾಣಲು ತಂದೆ ಜೊತೆ ಯಲ್ಲಾಪುರಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅನ್ಯ ರಾಜ್ಯದ ಕಾರು ಅವರ ಕಾರು ಹಿಂದಿಕ್ಕಲು ಪ್ರಯತ್ನಿಸಿತ್ತು. ಒಮ್ಮೆ ಕಾರಿಗೂ ಡಿಕ್ಕಿ ಹೊಡೆದಿದೆ. ಈ ಹಿನ್ನೆಲೆಯಲ್ಲಿ ಅವರ ಅಂಗ ರಕ್ಷಕ ಮತ್ತು ಚಾಲಕ ದೂರುದಾರರ ಜೊತೆ ವಾಗ್ವಾದ ನಡೆಸಿದ್ದರು. ಇದರಲ್ಲಿ ಅನಂತಕುಮಾರ್ ಮತ್ತು ಅವರ ಪುತ್ರ ಅಶುತೋಷ್‌ ಪಾತ್ರ ಇಲ್ಲ ಎಂದು ಅನಂತಕುಮಾರ್ ಹೆಗಡೆ ಪರ ವಕೀಲರು ವಾದಿಸಿದರು.

ಕಾರಿನ ಹಿಂಬದಿ ಸೀಟಲ್ಲಿ ಅಶುತೋಷ್‌ ಕುಳಿತಿದ್ದರು. ಘಟನಾ ಸ್ಥಳಕ್ಕೆ ಅವರು ಬಂದಿಲ್ಲ. ಅವರ ಕಾರಿನ ಮಧ್ಯದ ಸೀಟುಗಳನ್ನು ತೆಗೆದರೆ ಮಾತ್ರ ಹಿಂದಿನ ಸೀಟಿನಲ್ಲಿರುವವರು ಇಳಿಯಲು ಸಾಧ್ಯ. ಹೀಗಿದ್ದರೂ, ತನಿಖೆ ಸಂದರ್ಭದಲ್ಲಿ ತನಿಖಾಧಿಕಾರಿ ಅಶುತೋಷ್‌ ಅವರನ್ನು ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ಆರೋಪ ಪಟ್ಟಿಯಲ್ಲೂ ತಂದೆ-ಮಕ್ಕಳ ಪಾತ್ರದ ಬಗ್ಗೆ ಉಲ್ಲೇಖವಿಲ್ಲ. ಅಶುತೋಷ್‌ ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದು, ಹಾಲಿ ಪ್ರಕರಣ ಅವರ ಪಾಸ್‌ಪೋರ್ಟ್‌ ಪಡೆಯುವುದಕ್ಕೆ ಅಡ್ಡಿಯಾಗಿದೆ. ಹೀಗಾಗಿ, ಅವರ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದ್ದರು. ಇದನ್ನು ಆಲಿಸಿದ ಹೈಕೋರ್ಟ, ವಿಚಾರಣೆಯನ್ನು ಇಂದಿಗೆ ಅಂದರೆ ಏಪ್ರಿಲ್ 16ಕ್ಕೆ ಮುಂದೂಡಿತ್ತು.

ಭಾರೀ ಸದ್ದು ಮಾಡಿದ ಅನಂತ ಕುಮಾರ್ ಹೆಗಡೆ ಮನವಿ

ಇನ್ನು ಅನಂತ ಕುಮಾರ ಹೆಗಡೆ ಕೋರ್ಟ್​​ಗೆ ಮಾಡಿದ್ದ ಮನವಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿತ್ತು.  ಪುತ್ರ ಅಶುತೋಷ್ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಹೀಗಾಗಿ ಪ್ರಕರಣದಿಂದ ಕೈಬಿಡಿ ಎಂದು ಕೋರ್ಟ್​​ಗೆ ಅನಂತ ಕುಮಾರ್ ಹೆಗಡೆ ಮನವಿ ಮಾಡಿದ್ದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ,  ವಬಡವರ ಮಕ್ಕಳು ಗಲಾಟೆಗೆ, ತಮ್ಮ ಮಕ್ಕಳು ವಿದೇಶ ವ್ಯಾಸಂಗಕ್ಕೆ, ಇದು ಬಿಜೆಪಿಯವರ ವರಸೆ. ತಮ್ಮ ಮಗನ ವಿದೇಶ ವ್ಯಾಸಂಗಕ್ಕಾಗಿ ಪಾಸ್ಪೋರ್ಟ್ ಪಡೆಯಲು ಗಲಾಟೆ ಕೇಸ್ ಅಡ್ಡಿಯಾಗುತ್ತಿದೆ ಎಂದು ಅವಲತ್ತುಕೊಂಡಿರುವ ಇದೇ ಬಿಜೆಪಿ ನಾಯಕ ಬಡವರ ಮಕ್ಕಳಿಗೆ ಗಲಾಟೆಗೆ, ದೊಂಬಿಗೆ ಪ್ರಚೋದನೆ ಕೊಡುವುದರಲ್ಲಿ ಎತ್ತಿದ ಕೈ ಎಂದು ಟಾಂಗ್ ಕೊಟ್ಟಿದ್ದರು.

ಏನಿದು ಪ್ರಕರಣ?

ಕಳೆದ ವರ್ಷ ಅಂದರೆ 2025ರ ಜೂನ್​​ ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ (Nelamangala) ತಾಲೂಕಿನ ಹಳೇ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ, ಗೂಂಡಾಗಿರಿ ನಡೆಸಿದ ಆರೋಪ ಕೇಳಿಬಂದಿತ್ತು. ಅನಂತ್‌ ಕುಮಾರ್‌ ಹೆಗಡೆ ಅವರು ತೆರಳುತ್ತಿದ್ದ ಕಾರನ್ನು, ಓವರ್​ ಟೇಕ್​ ಮಾಡಲಾಯಿತು ಎಂಬ ಕಾರಣಕ್ಕೆ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ, ಅನಂತ್ ಕುಮಾರ್​ ಹೆಗಡೆ ಪುತ್ರ ಅಶುತೋಷ್, ಚಾಲಕ ಹಾಗೂ ಗನ್​​ಮ್ಯಾನ್​ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇನ್ನೋವಾ ಕಾರಿನಲ್ಲಿ ಸಲ್ಮಾನ್, ಸೈಫ್‌, ಇಲಿಯಾಜ್ ಖಾನ್‌ ಹಾಗೂ ಉನ್ನೀಸಾ ಎಂಬವರ ಮೇಲೆ ಹಲ್ಲೆ ಆರೋಪ ಕೇಳಿಬಂದಿತ್ತು. ಬಳಿಕ ಹಲ್ಲೆಗೊಳಗಾಗಿದ್ದ ಸೈಫ್ ನೀಡಿದ ದೂರಿನ ಮೇರೆಗೆ ದಾಬಸ್​​ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಅನಂತಕುಮಾರ್ ಹೆಗಡೆ A1, ಗನ್‌ಮ್ಯಾನ್ ಶ್ರೀಧರ್‌ A2, ಕಾರು ಚಾಲಕ ಮಹೇಶ್‌ A3 ಮತ್ತು ಇತರರ ವಿರುದ್ಧ ಬಿಎನ್​ಎಸ್ ಕಾಯ್ದೆಯ 6 ಸೆಕ್ಷನ್‌ಗಳಡಿ ಎಫ್​ಐಆರ್ ದಾಖಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

MI vs PBKS IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ – Kannada News | Mumbai Indians vs Punjab Kings IPL 2026 Live Cricket Score MI vs PBKS Match on 16th April latest news in Kannada

ಐಪಿಎಲ್ 19 ನೇ ಸೀಸನ್‌ನ 24 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಎರಡೂ ತಂಡಗಳಿಗೆ ಇದು ಐದನೇ ಪಂದ್ಯ. ಮುಂಬೈ 4 ಪಂದ್ಯಗಳಲ್ಲಿ 3 ರಲ್ಲಿ ಸೋತಿದೆ. ಆದ್ದರಿಂದ, ಪಂಜಾಬ್ ವಿರುದ್ಧದ ಪಂದ್ಯ ಮುಂಬೈಗೆ ಬಹಳ ಮುಖ್ಯವಾಗಿದೆ. ಆದಾಗ್ಯೂ, ಮುಂಬೈ ಅಜೇಯ ಪಂಜಾಬ್‌ನಿಂದ ಕಠಿಣ ಸವಾಲನ್ನು ಎದುರಿಸಲಿದೆ. ಈ ಋತುವಿನಲ್ಲಿ ಪಂಜಾಬ್ 4 ಪಂದ್ಯಗಳಲ್ಲಿ 3 ರಲ್ಲಿ ಗೆದ್ದಿದೆ. ಆದ್ದರಿಂದ, ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಹೇಗೆ ಪ್ರದರ್ಶನ ನೀಡುತ್ತದೆ ಎಂಬುದನ್ನು ನೋಡುವುದು ಮುಖ್ಯವಾಗಿರುತ್ತದೆ.

Source link

Exit mobile version