ಬಳ್ಳಾರಿ ಗಲಭೆ: ಪೊಲೀಸರ ನಡೆಗೆ ಜನಾರ್ದನ ರೆಡ್ಡಿ ಭಾರಿ ಅಸಮಧಾನ; ಕಾರಣ ಇಲ್ಲಿದೆ – Kannada News | Ballari Poster Row: Janardhan Reddy Blames Police, outraged over not filing an FIR

ಬಳ್ಳಾರಿ ಗಲಭೆಗೆ ಅಧಿಕಾರಿಗಳೇ ಕಾರಣವೆಂದು ದೂರು; FIR ಮಾಡದ್ದಕ್ಕೆ ರೆಡ್ಡಿ ಆಕ್ರೋಶ

ಬಳ್ಳಾರಿ, ಜನವರಿ 09: ಜಿಲ್ಲೆಯಲ್ಲಿ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದ ಗಲಭೆ ಪ್ರಕರಣ ದಿನೇದಿನೇ ತಿರುವು ಪಡೆದುಕೊಳ್ಳುತ್ತಿದ್ದು, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಲಭೆಗೆ ಪೊಲೀಸ್ ಅಧಿಕಾರಿಗಳೇ ನೇರ ಕಾರಣ ಎಂದು ಆರೋಪಿಸಿ, ಬಳ್ಳಾರಿ ASP ರವಿಕುಮಾರ್, DSP ಚಂದ್ರಕಾಂತ ನಂದರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಬ್ರೂಸ್‌ಪೇಟೆ ಪೊಲೀಸ್ ಠಾಣೆಗೆ ರೆಡ್ಡಿ ದೂರು ಸಲ್ಲಿಸಿದ್ದರು.

ಜನವರಿ 1ರಂದು ತಮ್ಮ ನಿವಾಸದ ಬಳಿ ಬ್ಯಾನರ್ ಹಾಕುವ ವಿಚಾರದಲ್ಲಿ ಗಲಾಟೆ ನಡೆದಿದ್ದು, ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆತ ಹಾಗೂ ಗುಂಡಿನ ದಾಳಿ ನಡೆದಿರುವುದಾಗಿ ರೆಡ್ಡಿ ಆರೋಪಿಸಿದ್ದಾರೆ. ಈ ಘಟನೆಯಲ್ಲಿ ತಮ್ಮನ್ನು ಕೊಲ್ಲಲು ಸಂಚು ರೂಪಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಆದರೆ, ಜನವರಿ 6ರಂದು ಮೂವರ ವಿರುದ್ಧ ನೀಡಿದ ದೂರಿಗೆ ಪೊಲೀಸರು FIR ದಾಖಲಿಸದೇ ಹಿಂಬರಹ ನೀಡಿರುವುದಕ್ಕೆ ರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರಿಂದ ಹಿಂಬರಹ

ನಾನು ನೀಡಿದ ದೂರು ಬೇರೆ, ಪೊಲೀಸರು ಕೊಟ್ಟ ಹಿಂಬರಹ ಬೇರೆ. ಸ್ಪಷ್ಟವಾಗಿ ಆರೋಪಿಗಳ ವಿರುದ್ಧ ಕೇಸ್ ಮಾಡಬೇಕಾದರೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ರೆಡ್ಡಿ ಕಿಡಿಕಾರಿದ್ದಾರೆ. ಈ ಕುರಿತು ಹಿಂಬರಹ ನೀಡಿರುವ ಪೊಲೀಸರು, ಇದೇ ಘಟನೆಗೆ ಸಂಬಂಧಿಸಿ ಈಗಾಗಲೇ ಪ್ರಕರಣ ದಾಖಲಾಗಿದ್ದು, ಹೊಸ ದೂರನ್ನು ಮುಂದುವರೆದ ಮಾಹಿತಿ ಎಂದು ಪರಿಗಣಿಸಿ ತನಿಖೆಗೆ ಸೇರಿಸಲಾಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ ಬಳ್ಳಾರಿ ಬ್ಯಾನರ್ ಗಲಾಟೆ: ಡಿಐಜಿಪಿ ವರ್ತಿಕಾ ಕಟಿಯಾರ್ ಎತ್ತಂಗಡಿ; ನೂತನ ಎಸ್ಪಿ ನೇಮಕ

ಆದರೆ ಅಧಿಕಾರಿಗಳು ಮತ್ತು ರಾಜಕೀಯ ಒತ್ತಡದಿಂದ ಹಾದಿ ತಪ್ಪಿಸಲಾಗುತ್ತಿದೆ ಎಂದು ಗಾಲಿ ಜನಾರ್ದನ ರೆಡ್ಡಿ ಭಾರೀ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರಕರಣ ಬಳ್ಳಾರಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಹಗಲು ಗೌರಮ್ಮ, ರಾತ್ರಿಯಾದರೆ ಕಾಳಿ: ಸಮಂತಾ ಹೊಸ ಅವತಾರ – Kannada News | Samantha Ruth Prabhu starrer Maa Inti Bangaaram movie teaser released

ಸಮಂತಾ ಋತ್ ಪ್ರಭು (Samantha Ruth Prabhu) ದಕ್ಷಿಣದ ಸ್ಟಾರ್ ನಟಿ ಆಗಿದ್ದವರು. ಆದರೆ ಇತ್ತೀಚೆಗೆ ಅವರೇ ಹೇಳಿಕೊಂಡಿರುವಂತೆ ತೆಲುಗು ಚಿತ್ರರಂಗದಲ್ಲಿ ಅವರಿಗೆ ಅವಕಾಶಗಳು ಕಡಿಮೆ ಆಗಿವೆಯಂತೆ. ಇದೇ ಕಾರಣಕ್ಕೆ ಅವರು ಹಿಂದಿಯ ವೆಬ್ ಸರಣಿಗಳ ಕಡೆ ಮುಖ ಮಾಡಿದ್ದಾರೆ. ಆದರೆ ವರ್ಷದ ಹಿಂದೆಯೇ ಸಮಂತಾ ನಟಿಸಲಿದ್ದ ‘ಮಾ ಇಂಟಿ ಬಂಗಾರಂ’ ಸಿನಿಮಾ ಘೋಷಣೆ ಆಗಿತ್ತು. ಕೆಲವು ಕಾರಣಗಳಿಗಾಗಿ ಸಿನಿಮಾ ಚಿತ್ರೀಕರಣ ತಡವಾಗಿತ್ತು. ಇದೀಗ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಟ್ರೇಲರ್ನಲ್ಲಿ ಸಮಂತಾ ಎರಡು ಭಿನ್ನ ಅವತಾರದಲ್ಲಿ ಕಾಣಿಸಿಕೊಂಂಡಿದ್ದಾರೆ.

ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾದ ಟೀಸರ್ ಇಂದು (ಜನವರಿ 09) ಬಿಡುಗಡೆ ಆಗಿದೆ. ಸಿನಿಮಾನಲ್ಲಿ ಸಮಂತಾ ಪತಿಯಾಗಿ ಕನ್ನಡದ ನಟ ದಿಗಂತ್ ನಟಿಸಿದ್ದಾರೆ. ಟೀಸರ್​​ನಲ್ಲಿ ತೋರಿಸಿರುವಂತೆ ಸಮಂತಾ ಹಾಗೂ ದಿಗಂತ್ ಪ್ರೀತಿಸಿ ಮನೆಯವರಿಗೆ ತಿಳಿಯದೇ ಮದುವೆ ಆಗಿದ್ದಾರೆ. ಈಗ ಸಮಂತಾ ಮೊದಲ ಬಾರಿ ಗಂಡನ ಮನೆಗೆ ಬಂದಿದ್ದಾರೆ. ಗಂಡನ ಮನೆಯದ್ದು ಕೂಡು ಕುಟುಂಬ, ಎಲ್ಲರೂ ಸೊಸೆ ಹೇಗೆ, ಸೊಸೆಯ ವ್ಯಕ್ತಿತ್ವ ಹೇಗೆ ಎಂದು ಕುತೂಹಲದಿಂದ ಇರುತ್ತಾರೆ, ಪ್ರತಿ ಹೆಜ್ಜೆಗೂ ಟೀಕೆ, ಪರಿಶೀಲನೆ ನಡೆಯುತ್ತಲೇ ಇರುತ್ತದೆ. ಆದರೆ ಸಮಂತಾ ಮಾತ್ರ ಸುಸಂಸ್ಕೃತ ಸೊಸೆಯಂತೆ ನಗು ಮುಖದಿಂದ ಎಲ್ಲರ ಸೇವೆ ಮಾಡುತ್ತಾರೆ. ಆದರೆ ಸಮಂತಾರ ಈ ಗೌರಮ್ಮನ ಅವತಾರ ಹಗಲು ಹೊತ್ತು ಮಾತ್ರ.

ಇದನ್ನೂ ಓದಿ:ಮದುವೆ ಬಳಿಕ ಸಮಂತಾ ಮೊದಲ ಸಿನಿಮಾ; ಹೇಗಿದೆ ನೋಡಿ ಫಸ್ಟ್ ಲುಕ್

ಸಮಂತಾಗೆ ಇನ್ನೊಂದು ಮುಖವೂ ಇದೆ. ಟೀಸರ್​​ನಲ್ಲಿ ತೋರಿಸಿರುವಂತೆ ಸಮಂತಾ ಯಾವ ನಾಯಕರಿಗೂ ಕಡಿಮೆ ಇಲ್ಲದಂತೆ ವಿಲನ್​​ಗಳನ್ನು ಚಚ್ಚಿ ಕೆಡವುತ್ತಾರೆ. ಸೀರೆಯುಟ್ಟು ಕಾಳಿಯಂತೆ ವಿಲನ್ನುಗಳ ಮೇಲೆ ಹಾರಿ ಬೀಳುತ್ತಿದ್ದಾರೆ. ಚುಚ್ಚಿ ಕೊಂದೇ ಹಾಕುತ್ತಿದ್ದಾರೆ. ಈ ಎಲ್ಲ ಸಾಹಸ ಅತ್ತೆಯ ಮನೆಯಲ್ಲೇ ನಡೆಯುತ್ತಿದೆ. ಮನೆ ಮಂದಿಯ ಕಣ್ಣು ತಪ್ಪಿಸಿ ಈ ಸಾಹಸಗಳನ್ನು ಸಮಂತಾ ಮಾಡುತ್ತಿದ್ದಾರೆ. ಆದರೆ ಸಮಂತಾರ ಈ ದ್ವಿವ್ಯಕ್ತಿತ್ವಕ್ಕೆ ಕಾರಣ ಏನು? ಸಮಂತಾ ಮೇಲೆ ದಾಳಿ ಮಾಡುತ್ತಿರುವ ಆ ಪುಂಡರು ಯಾರು? ಇದೆಲ್ಲ ತಿಳಿಯಬೇಕೆಂದರೆ ಸಿನಿಮಾ ನೋಡಬೇಕು.

https://www.youtube.com/watch?v=aXAZNg50Xgs

‘ಮಾ ಇಂಟಿ ಬಂಗಾರಂ’ ಸಿನಿಮಾನಲ್ಲಿ ಸಮಂತಾ ಪತಿಯ ಪಾತ್ರದಲ್ಲಿ ಕನ್ನಡಿಗ ದಿಗಂತ್ ನಟಿಸಿದ್ದಾರೆ. ಮತ್ತೊಂದು ಪ್ರಮುಖ ಪಾತ್ರದಲ್ಲಿ ಮತ್ತೊಬ್ಬ ಕನ್ನಡಿಗ ಗುಲ್ಷನ್ ದೇವಯ್ಯ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ನಂದಿನಿ ರೆಡ್ಡಿ. ನಿರ್ಮಾಣ ಮಾಡಿರುವುದು ಸಮಂತಾರ ಪತಿ ರಾಜ್ ನಿಧಿಮೋರು. ಸಿನಿಮಾದ ಬಿಡುಗಡೆ ದಿನಾಂಕ ಇನ್ನಷ್ಟೆ ಘೋಷಿಸಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Optical Illusion: ಈ ಚಿತ್ರದಲ್ಲಿ ಅಡಗಿರುವ ನಾಲ್ಕನೇ ವ್ಯಕ್ತಿಯನ್ನು ಪತ್ತೆ ಹಚ್ಚಬಲ್ಲಿರಾ – Kannada News | Optical Illusion: There are four people in this picture, not three, solve this puzzle in 7 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media

ಒಗಟುಗಳನ್ನು ಬಿಡಿಸುವುದೆಂದರೆ ಕೆಲವರಿಗೆ ಸುಲಭ, ಇನ್ನು ಕೆಲವರಿಗೆ ಕಷ್ಟಕರ. ಈ ಟ್ರಿಕ್ಕಿ ಒಗಟಿನ ಚಿತ್ರ ಬಿಡಿಸುತ್ತಾ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಆದರೆ ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಮೆದುಳಿಗೆ ವ್ಯಾಯಾಮ ನೀಡಿ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುತ್ತದೆ. ಇದೀಗ ಇಂತಹದ್ದೇ ಕಠಿಣ ಸವಾಲಿನ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಪ್ಪು ಬಿಳುಪಿನ ಚಿತ್ರದಲ್ಲಿ ಅಡಗಿರುವ ನಾಲ್ಕನೇ ವ್ಯಕ್ತಿಯನ್ನು ಕೇವಲ 7 ಸೆಕೆಂಡುಗಳಲ್ಲಿ ಕಂಡುಹಿಡಿಯಬೇಕು. ಕಣ್ಣು ಬಿಟ್ಟು ಈ ಚಿತ್ರ ನೋಡಿ ಒಗಟು ಬಿಡಿಸಲು ಪ್ರಯತ್ನಿಸಿ.

ಈ ಚಿತ್ರ ನೋಡಿದಾಗ ನಿಮ್ಮ ಕಣ್ಣಿಗೆ ಏನು ಕಾಣಿಸಿತು?

ಆಪ್ಟಿಕಲ್‌ ಇಲ್ಯೂಷನ್‌ ಒಗಟಿನ ಚಿತ್ರವು ನೋಡುವುದಕ್ಕೆ ಸುಲಭವಾಗಿ ಕಂಡರೂ ಟ್ರಿಕ್ಕಿಯಾಗಿರುತ್ತದೆ. ಇದೀಗ ಈ ಚಿತ್ರವೂ ಅಷ್ಟೇ ಕಠಿಣ ಸವಾಲಿನದ್ದಾಗಿದ್ದು, ಕಪ್ಪು ಬಿಳುಪಿನ ಈ ಚಿತ್ರದಲ್ಲಿ ಮೂವರು ಕಾಡಿನಲ್ಲಿ ಕೆಲಸ ಮಾಡುತ್ತಿರುವಂತೆ ಕಾಣುತ್ತದೆ. ನಾಲ್ಕನೇ ವ್ಯಕ್ತಿಯೂ ಇಲ್ಲಿ ಅಡಗಿ ಕುಳಿತಿದ್ದಾನೆ. ಈ ವ್ಯಕ್ತಿಯನ್ನು ಗುರುತಿಸುವುದೇ ಇಲ್ಲಿರುವ ಸವಾಲು. ಏಳು ಸೆಕೆಂಡುಗಳಲ್ಲಿ ಈ ಒಗಟು ಬಿಡಿಸಲು ಸಾಧ್ಯವೇ ಎಂದು ನೋಡಿ.

ಇದನ್ನೂ ಓದಿ: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರಗಳ ನಡುವಿನ ಮೂರು ವ್ಯತ್ಯಾಸಗಳನ್ನು ಗುರುತಿಸಬಲ್ಲಿರಾ

ನಾಲ್ಕನೇ ವ್ಯಕ್ತಿ ನಿಮ್ಮ ಕಣ್ಣಿಗೆ ಬಿದ್ದನೇ?

ಎಷ್ಟೇ ಹುಡುಕಿದರೂ ಈ ಚಿತ್ರದಲ್ಲಿ ಅಡಗಿ ಕುಳಿತಿರುವ ನಾಲ್ಕನೇ ವ್ಯಕ್ತಿಯನ್ನು ಕಂಡು ಹಿಡಿಯಲು ನಿಮ್ಮಿಂದ ಸಾಧ್ಯವಾಗುತ್ತಿಲ್ಲವೇ, ಹೆಚ್ಚು ತಲೆಕೆಡಿಸಿಕೊಳ್ಳಬೇಡಿ. ಈ ಚಿತ್ರವನ್ನು ನೇರವಾಗಿ ನೋಡಬೇಡಿ. ನಿಮ್ಮ ಫೋನ್‌ನ್ನು ತಿರುಗಿಸಿ ಅಥವಾ ಬೇರೆ ದೃಷ್ಟಿ ಕೋನದಿಂದ ನೋಡಲು ಪ್ರಯತ್ನಿಸಿ. ಮರಗಳ ನಡುವಿನ ಸ್ಥಳಗಳು ಮತ್ತು ನೆರಳುಗಳಿಂದ ರಚಿಸಲಾದ ಆಕಾರಗಳ ಮೇಲೆ ಕೇಂದ್ರೀಕರಿಸಿ. ಆಗ ಮಾತ್ರ ಮನುಷ್ಯನ ಆಕೃತಿಯನ್ನು ಕಾಣಲು ಸಾಧ್ಯ. ಈ ಎಲ್ಲಾ ಸುಳಿವು ನೀಡಿದರೂ ನಾಲ್ಕನೇ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಿಲ್ಲವೇ. ನಾವೇ ಉತ್ತರವನ್ನು ಹೇಳುತ್ತೇವೆ. ಮರದ ಕಾಂಡಗಳ ನಡುವಿನ ಖಾಲಿ ಜಾಗದಲ್ಲಿ ನಾಲ್ಕನೇ ವ್ಯಕ್ತಿಯನ್ನು ಜಾಣತನದಿಂದ ಇರಿಸಲಾಗಿದೆ. ನಾವು  ನಾಲ್ಕನೇ ವ್ಯಕ್ತಿಯನ್ನು ಕೆಂಪು ಬಣ್ಣದಿಂದ ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್: ದೃಶ್ಯ ನೋಡಿದ್ರೆ ಬೆಚ್ಚಿ ಬೀಳ್ತೀರ

ಹುಬ್ಬಳ್ಳಿ, ಜನವರಿ 09: ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ವಿವಿಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಆರೋಪ ರಾಜ್ಯಾದ್ಯಂತ ಚರ್ಚೆ ಆಗುತ್ತಿರುವ ನಡುವೆ ಆಕೆಯೇ ವ್ಯಕ್ತಿಯೋರ್ವನನ್ನು ಬಟ್ಟೆ ಬಿಚ್ಚಿಸಿ ಥಳಿಸಿರುವ ವಿಡಿಯೋ ವೈರಲ್​​ ಆಗಿದೆ. ಧಾರವಾಡ ಮೂಲದ ತುಕಾರಾಂ ಎಂಬವರನ್ನು ವಿವಸ್ತ್ರಗೊಳಿಸಿ ಸುಜಾತಾ ಮತ್ತು ಆಕೆ ಸಹಚರರು ಥಳಿಸಿದ್ದರು. ಹನಿಟ್ರ್ಯಾಪ್ ಮಾಡಿ ತುಕಾರಾಂನನ್ನು ಅಪಹರಿಸಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಎರಡೂವರೆ ವರ್ಷದ ಹಿಂದೆ ನಡೆದಿದ್ದ ಘಟನೆ ವಿಡಿಯೋ ಈಗ ವೈರಲ್ ಆಗಿದೆ.

ಇನ್ನು BJP ಕಾರ್ಯಕರ್ತೆ ಸುಜಾತಾ ಹಳೆಯ ವಿಡಿಯೋ ರಿಲೀಸ್​ ವಿಚಾರ ಸಂಬಂಧ ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಯಾವ ಸಂದರ್ಭದಲ್ಲಿ ವಿಡಿಯೋ ಆಗಿತ್ತೆಂದು ಸ್ಪಷ್ಟೀಕರಣ ನೀಡಲಿ. ಕಾಂಗ್ರೆಸ್ ಸಹಯೋಗದಲ್ಲಿದ್ದಾಗಲೇ ಇದು ನಡೆದಿದೆ. ಮೊನ್ನೆ ನಡೆದ ಘಟನೆ ಖಂಡಿಸಿ ಮಾತ್ರ ನಾವು ಹೋರಾಟ ಮಾಡ್ತಿದ್ದೇವೆ. ಸುಜಾತಾ ಹಂಡಿ ತಪ್ಪು ಮಾಡಿದ್ರೆ ಕಾನೂನಿನಡಿ ಶಿಕ್ಷೆಯಾಗಲಿ. ಪಾಲಿಕೆ ಸದಸ್ಯೆ ಸುವರ್ಣ ಪ್ರಕರಣಯೊಂದರಲ್ಲಿ ದೋಷಿ ಆಗಿದ್ದು, ಅವರ ಬಗ್ಗೆ ಯಾಕೆ ಕಾಂಗ್ರೆಸ್​ನವರು ಮಾತನಾಡುತ್ತಿಲ್ಲ ಎಂದು ಶಾಸಕರು ಪ್ರಶ್ನಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Video:ಬಾಯಿಂದ ಹರೀತಿತ್ತು ರಕ್ತ, ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ – Kannada News | Dead for 47 Years Iranian Protester’s Message Draws Global Attention

ಇರಾನ್, ಜನವರಿ 09: ಇರಾನ್ ಸರ್ಕಾರ ತನ್ನ ವಿರೋಧಿ ಪ್ರತಿಭಟನೆಗಳನ್ನು ಹತ್ತಿಕ್ಕುವ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದ್ದಂತೆ, ಇರಾನ್ ಮಹಿಳೆಯೊಬ್ಬರು ಇಸ್ಲಾಮಿಕ್ ಆಡಳಿತವನ್ನು ಧಿಕ್ಕರಿಸುತ್ತಾ ರಕ್ತ ಸಿಕ್ತವಾದ ಸ್ಥಿತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಬಾಯಿಯಿಂದ ರಕ್ತ ಸುರಿಯುತ್ತಿದ್ದರೂ ಮಹಿಳೆ ಟೆಹ್ರಾನ್​ನ ಬೀದಿಯಲ್ಲಿ ಮಹಿಳೆ ಘೋಷಣೆ ಕೂಗುತ್ತಾ ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ನನಗೆ ಭಯವಿಲ್ಲ, ನಾನು ಸತ್ತು 47 ವರ್ಷಗಳಾಯಿತು ಎಂದು ಆಕೆ ಕೂಗುತ್ತಿದ್ದರು.ಇರಾನ್‌ನ ಇಸ್ಲಾಮಿಕ್ ಆಡಳಿತವು 47 ವರ್ಷಗಳ ಹಿಂದೆ 1979 ರ ಇಸ್ಲಾಮಿಕ್ ಕ್ರಾಂತಿಯೊಂದಿಗೆ ಪ್ರಾರಂಭವಾಯಿತು.ಪಾಶ್ಚಿಮಾತ್ಯ ಪರ ಶಾ ಮೊಹಮ್ಮದ್ ರೆಜಾ ಪಹ್ಲವಿಯನ್ನು ಪದಚ್ಯುತಗೊಳಿಸಿ ಅಯತೊಲ್ಲಾ ರುಹೊಲ್ಲಾ ಖೊಮೇನಿ ನೇತೃತ್ವದ ಶಿಯಾ ಇಸ್ಲಾಮಿಕ್ ಪ್ರಭುತ್ವವನ್ನು ಸ್ಥಾಪಿಸಿತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Gold Rate Today Bangalore: ಚಿನ್ನದ ಬೆಲೆ ಏರಿಕೆ, ಬೆಳ್ಳಿ ಬೆಲೆ ಇಳಿಕೆ – Kannada News | Gold Price Today on 9th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 9: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಭಿನ್ನ ದಾರಿ ತುಳಿದಿವೆ. ಚಿನ್ನದ ಬೆಲೆ (gold rates) ಏರಿದರೆ, ಬೆಳ್ಳಿಗೆ ಬೆಲೆ ಇಳಿದಿವೆ. ನಿನ್ನೆ 130 ರೂ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು 65 ರೂ ಏರಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಇನ್ನು, ಬೆಳ್ಳಿ ಬೆಲೆ ಇಂದು 3 ರೂ ತಗ್ಗಿದೆ. ಎರಡು ದಿನದಲ್ಲಿ 13 ರೂ ಬೆಲೆ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,27,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,38,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,27,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,900 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,800 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 9ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,871 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,715 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,403 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 249 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,871 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,715 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 249 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,715 ರೂ
  • ಚೆನ್ನೈ: 12,800 ರೂ
  • ಮುಂಬೈ: 12,715 ರೂ
  • ದೆಹಲಿ: 12,730 ರೂ
  • ಕೋಲ್ಕತಾ: 12,715 ರೂ
  • ಕೇರಳ: 12,715 ರೂ
  • ಅಹ್ಮದಾಬಾದ್: 12,720 ರೂ
  • ಜೈಪುರ್: 12,730 ರೂ
  • ಲಕ್ನೋ: 12,730 ರೂ
  • ಭುವನೇಶ್ವರ್: 12,715 ರೂ

ಇದನ್ನೂ ಓದಿ: ಈ ಬಾರಿ ಬಹಳ ಜನರಿಗೆ ಸಿಕ್ಕಿಲ್ಲ ಇನ್ಕಮ್ ಟ್ಯಾಕ್ಸ್ ರೀಫಂಡ್; ಏನು ಕಾರಣ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 569 ರಿಂಗಿಟ್ (12,598 ರುಪಾಯಿ)
  • ದುಬೈ: 496.75 ಡಿರಾಮ್ (12,168 ರುಪಾಯಿ)
  • ಅಮೆರಿಕ: 138.50 ಡಾಲರ್ (12,462 ರುಪಾಯಿ)
  • ಸಿಂಗಾಪುರ: 179.30 ಸಿಂಗಾಪುರ್ ಡಾಲರ್ (12,551 ರುಪಾಯಿ)
  • ಕತಾರ್: 494.50 ಕತಾರಿ ರಿಯಾಲ್ (12,206 ರೂ)
  • ಸೌದಿ ಅರೇಬಿಯಾ: 506 ಸೌದಿ ರಿಯಾಲ್ (12,141 ರುಪಾಯಿ)
  • ಓಮನ್: 52.65 ಒಮಾನಿ ರಿಯಾಲ್ (12,305 ರುಪಾಯಿ)
  • ಕುವೇತ್: 40.46 ಕುವೇತಿ ದಿನಾರ್ (11,913 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 249 ರೂ
  • ಚೆನ್ನೈ: 268 ರೂ
  • ಮುಂಬೈ: 249 ರೂ
  • ದೆಹಲಿ: 249 ರೂ
  • ಕೋಲ್ಕತಾ: 249 ರೂ
  • ಕೇರಳ: 268 ರೂ
  • ಅಹ್ಮದಾಬಾದ್: 249 ರೂ
  • ಜೈಪುರ್: 249 ರೂ
  • ಲಕ್ನೋ: 249 ರೂ
  • ಭುವನೇಶ್ವರ್: 268 ರೂ
  • ಪುಣೆ: 249

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Weekly Job Horoscope: ನಿಮ್ಮ ರಾಶಿಗನುಗುಣವಾಗಿ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Job Prospects Weekly Horoscope January 11 17, 2026: Challenges and Opportunities

11-01-2026ರಿಂದ 17-01-2026ರವರಗೆ ಉದ್ಯೋಗದಲ್ಲಿ ನಾನಾ ಬಗೆಯ ವಿಷಮತೆಗಳು ಕಂಡುಬಂದರೂ ಅಂತ್ಯದಲ್ಲಿ ಸಮತ್ವ ಉಂಟಾಗಲಿದೆ.‌ ನಿರುದ್ಯೋಗಿಗಳಿಗೆ ಅವರಿಗೆ ಬೇಕಾದ ಕೆಲಸವಿಲ್ಲ ಎಂಬ ಬೇಸರವೇ ಅಧಿಕ. ನಿಮ್ಮ ಮನಸ್ಸಿನ ಮೇಲೆ ಈ ವಾರ ಹೆಚ್ಚು ಪರಿಣಾಮಕಾರಿಯಾದ ಪ್ರಭಾವ ಬೀರಲಿದೆ.

ಮೇಷ ರಾಶಿ:

ರಾಶಿ ಚಕ್ರದ ಮೊದಲನೇ ರಾಶಿಯವರಿಗೆ ಈ ವಾರ ಉದ್ಯೋಗದಲ್ಲಿರುವವರಿಗೆ ಹೊಸ ಹೊಣೆಗಾರಿಕೆಗಳಿಂದ ಮೆಚ್ಚುಗೆ ಸಿಗುತ್ತದೆ, ನಿರುದ್ಯೋಗಿಗಳಿಗೆ ಅವಕಾಶ ಸೂಚನೆ ಇದ್ದರೂ ಆತುರದ ನಿರ್ಧಾರ ಮತ್ತು ಅಸಮಾಧಾನ ಪ್ರಗತಿಯನ್ನು ಸ್ವಲ್ಪ ತಡೆಯಬಹುದು.

ವೃಷಭ ರಾಶಿ:

ಈ ವಾರದಲ್ಲಿ ಉದ್ಯೋಗಸ್ಥರಿಗೆ ಸ್ಥಿರತೆ ಹಾಗೂ ಆದಾಯ ವೃದ್ಧಿಯ ಸೂಚನೆ, ನಿರುದ್ಯೋಗಿಗಳಿಗೆ ಸಹಾಯ ಸಿಗಬಹುದು, ಆದರೆ ನಿಧಾನಗತಿ ಮತ್ತು ಬದಲಾವಣೆ ಭಯ ಅವಕಾಶಗಳನ್ನು ಕೈ ತಪ್ಪಿಸಬಹುದು.

ಮಿಥುನ ರಾಶಿ:

ಮೂರನೇ ರಾಶಿಯವರಿಗೆ ಈ ವಾರ ಉದ್ಯೋಗದಲ್ಲಿರುವವರಿಗೆ ಹೊಸ ಯೋಜನೆ, ನಿರುದ್ಯೋಗಿಗಳಿಗೆ ಸಂದರ್ಶನ ಯೋಗ ಇದ್ದರೂ ಏಕಾಗ್ರತೆಯ ಕೊರತೆ ಮತ್ತು ಗೊಂದಲ ಸಂಪೂರ್ಣ ಯಶಸ್ಸಿಗೆ ಅಡ್ಡಿಯಾಗಬಹುದು.

ಕರ್ಕಾಟಕ ರಾಶಿ:

ಚಂದ್ರನ ಆಧಿಪತ್ಯದ ಈ ರಾಶಿಯ ಉದ್ಯೋಗಸ್ಥರಿಗೆ ಅಧಿಕೃತ ಕೆಲಸಗಳಲ್ಲಿ ಅನುಕೂಲ, ನಿರುದ್ಯೋಗಿಗಳಿಗೆ ಪ್ರಯತ್ನ ಫಲ ನೀಡಬಹುದು, ಆದರೆ ಮಾತಿನ ಅಸಾವಧಾನತೆ ಮತ್ತು ಮನಸ್ತಾಪ ಮಾನಸಿಕ ಒತ್ತಡ ತರುತ್ತದೆ.

ಸಿಂಹ ರಾಶಿ:

ಈ ವಾರದಲ್ಲಿ ಉದ್ಯೋಗದಲ್ಲಿರುವವರಿಗೆ ನಾಯಕತ್ವ ಮತ್ತು ಗೌರವ, ನಿರುದ್ಯೋಗಿಗಳಿಗೆ ಉತ್ತಮ ಅವಕಾಶ ಇದ್ದರೂ ಅಹಂಕಾರ ಮತ್ತು ಇತರರ ಅಸೂಯೆ ವಿಳಂಬಕ್ಕೆ ಕಾರಣವಾಗಬಹುದು.

ಕನ್ಯಾ ರಾಶಿ:

ಈ ರಾಶಿಯರಿಗೆ ಎರಡನೇ ವಾರ ಉದ್ಯೋಗಸ್ಥರಿಗೆ ಶಿಸ್ತಿನ ಕೆಲಸದಿಂದ ಮೆಚ್ಚುಗೆ, ನಿರುದ್ಯೋಗಿಗಳಿಗೆ ಅವಕಾಶದ ಸೂಚನೆ ಇದ್ದರೂ ಅಧಿಕ ಒತ್ತಡ ಮತ್ತು ದಣಿವು ಉತ್ಸಾಹ ಕಡಿಮೆ ಮಾಡಬಹುದು.

ತುಲಾ ರಾಶಿ:

ಏಳನೇ ರಾಶಿಯವರಿಗೆ ಉದ್ಯೋಗದಲ್ಲಿರುವವರಿಗೆ ಹೊಸ ಒಪ್ಪಂದ ಲಾಭ, ನಿರುದ್ಯೋಗಿಗಳಿಗೆ ಪರಿಚಯದಿಂದ ಅವಕಾಶ ಸಿಗಬಹುದು, ಆದರೆ ನಿರ್ಧಾರದಲ್ಲಿ ಗೊಂದಲ ಮತ್ತು ವಿಳಂಬವು ಪ್ರಗತಿಯನ್ನು ಕುಗ್ಗಿಸುತ್ತದೆ.

ವೃಶ್ಚಿಕ ರಾಶಿ:

ಕುಜನ ಆಧಿಪತ್ಯದ ಈ ರಾಶಿಯವರಿಗೆ ಉದ್ಯೋಗಸ್ಥರಿಗೆ ಸ್ಪರ್ಧೆಯಲ್ಲಿ ಗೆಲುವು, ನಿರುದ್ಯೋಗಿಗಳಿಗೆ ಅವಕಾಶ ಕಾಣಿಸಿಕೊಳ್ಳಬಹುದು, ಆದರೆ ಶತ್ರುಕಾಟ ಮತ್ತು ರಹಸ್ಯ ವಿಚಾರಗಳು ಒತ್ತಡ ಹೆಚ್ಚಿಸಬಹುದು.

ಧನು ರಾಶಿ:

ಎರಡನೇ ವಾರ ಉದ್ಯೋಗದಲ್ಲಿರುವವರಿಗೆ ಬದಲಾವಣೆ ಅಥವಾ ವಿದೇಶ ಸಂಪರ್ಕ ಲಾಭ, ನಿರುದ್ಯೋಗಿಗಳಿಗೆ ಅವಕಾಶ ಇದ್ದರೂ ಅತಿಯಾದ ನಿರೀಕ್ಷೆ ಅಸ್ಥಿರತೆ ಉಂಟುಮಾಡಬಹುದು.

ಮಕರ ರಾಶಿ:

ಈ ವಾರ ಉದ್ಯೋಗಸ್ಥರಿಗೆ ಶ್ರಮದಿಂದ ಸ್ಥಾನಮಾನ ಹೆಚ್ಚಳ, ನಿರುದ್ಯೋಗಿಗಳಿಗೆ ನಿಧಾನವಾಗಿ ಅವಕಾಶ ಸಿಗುತ್ತದೆ, ಆದರೆ ಫಲ ತಡ ಮತ್ತು ಮಾನಸಿಕ ಒತ್ತಡ ಸಹನೆ ಪರೀಕ್ಷಿಸುತ್ತದೆ.

ಕುಂಭ ರಾಶಿ:

ಜನವರಿಯ ಈ ವಾರ ಉದ್ಯೋಗದಲ್ಲಿರುವವರಿಗೆ ತಾಂತ್ರಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಆಲೋಚನೆಗಳಿಂದ ಅವಕಾಶ, ಆದರೆ ತಂಡದ ಅಸಮಂಜಸತೆ ಮತ್ತು ವಿಳಂಬ ಅಡ್ಡಿಯಾಗಬಹುದು.

ಮೀನು ರಾಶಿ:

ಈ ವಾರದಲ್ಲಿ ಉದ್ಯೋಗಸ್ಥರಿಗೆ ಸಮಸ್ಯೆ ಪರಿಹಾರ, ನಿರುದ್ಯೋಗಿಗಳಿಗೆ ಕೆಲಸದ ಸೂಚನೆ ಕಂಡರೂ ಆತ್ಮವಿಶ್ವಾಸ ಕೊರತೆ ಮತ್ತು ನಿರ್ಧಾರ ವಿಳಂಬ ಪ್ರಗತಿಯನ್ನು ನಿಧಾನಗೊಳಿಸಬಹುದು.

– ಲೋಹಿತ ಹೆಬ್ಬಾರ್ – 8762924271 (what’s app only)

Source link

ಬೆಂಗಳೂರು ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್: ಆ್ಯಂಬುಲೆನ್ಸ್ ಸಿಲುಕಿ ರೋಗಿ ನರಳಾಟ – Kannada News | Bengaluru–Hosur National Highway Traffic Jam for Kilometres, Ambulance Stuck and Patient Suffers

ಆನೇಕಲ್, ಜನವರಿ 9: ಬೆಂಗಳೂರು–ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಮ್ಮೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಚಂದಾಪುರದಿಂದ ಅತ್ತಿಬೆಲೆವರೆಗೆ ಸುಮಾರು ನಾಲ್ಕೈದು ಕಿಲೋಮೀಟರ್‌ಗಳಷ್ಟು ದೂರ ವಾಹನಗಳು ಸರಿಯದೇ ನಿಂತಿದ್ದು, ಹೆದ್ದಾರಿ ಸಂಪೂರ್ಣವಾಗಿ ಸ್ಥಬ್ಧಗೊಂಡಿತ್ತು. ಟ್ರಾಫಿಕ್ ಜಾಮ್ ಮಧ್ಯೆ ಆ್ಯಂಬುಲೆನ್ಸ್ ಸಿಲುಕಿ, ರೋಗಿಯೊಬ್ಬರು ನರಳಾಡುವಂತಾಯಿತು. ರೋಗಿಯನ್ನು ಬೇಗ ಆಸ್ಪತ್ರೆಗೆ ತಲುಪಿಸಲು ಆ್ಯಂಬುಲೆನ್ಸ್ ಚಾಲಕ ಸಾಕಷ್ಟು ಪ್ರಯತ್ನಪಟ್ಟರೂ, ವಾಹನಗಳ ದಟ್ಟಣೆಯಿಂದ ಮುಂದೆ ಸಾಗಲು ಸಾಧ್ಯವಾಗಲಿಲ್ಲ.

ಟ್ರಾಫಿಕ್ ಜಾಮ್‌ನ ಪರಿಣಾಮವಾಗಿ ಶಾಲೆ ಹಾಗೂ ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಸಹ ತೀವ್ರ ತೊಂದರೆಗೆ ಒಳಗಾದರು. ಸಮಯಕ್ಕೆ ಶಾಲೆ–ಕಾಲೇಜು ತಲುಪಲು ಸಾಧ್ಯವಾಗದೆ, ಮಕ್ಕಳು ಮತ್ತು ಪೋಷಕರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.

ಕಳೆದ ಒಂದೂವರೆ ವರ್ಷದಿಂದ ಬೆಂಗಳೂರು–ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದೇ ನಿತ್ಯದ ಟ್ರಾಫಿಕ್ ಜಾಮ್‌ಗೆ ಪ್ರಮುಖ ಕಾರಣ ಎನ್ನಲಾಗಿದೆ. ಚಂದಾಪುರದಿಂದ ಅತ್ತಿಬೆಲೆವರೆಗೆ ಪ್ರತಿದಿನವೂ ಸಂಚಾರ ದುಸ್ಥರವಾಗುತ್ತಿದ್ದು, ವಾಹನ ಸವಾರರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ದಿ ರಾಜಾ ಸಾಬ್’ ಪ್ರೀಮಿಯರ್ ಶೋ: ಚಿತ್ರಮಂದಿರದಲ್ಲಿ ಪ್ರಭಾಸ್ ಫ್ಯಾನ್ಸ್ ಗಲಾಟೆ – Kannada News | Prabhas fans creates rucks in theaters on The Raja Saab premier show

ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಇಂದು (ಜನವರಿ 09) ಬಿಡುಗಡೆ ಆಗಿದೆ. ಸಿನಿಮಾದ ಪ್ರೀಮಿಯರ್ ಶೋಗಳು ನಿನ್ನಿ (ಜನವರಿ 08) ರಾತ್ರಿ ಆಂಧ್ರ ಮತ್ತು ತೆಲಂಗಾಣಗಳಲ್ಲಿ ಪ್ರದರ್ಶನವಾಗಿವೆ. ಆದರೆ ತೆಲಂಗಾಣ ನ್ಯಾಯಾಲಯದಿಂದ ವಿಶೇಷ ಶೋ ಮತ್ತು ಟಿಕೆಟ್ ಹೆಚ್ಚಳಕ್ಕೆ ಅನುಮತಿ ಪಡೆಯಬೇಕಿದ್ದ ಕಾರಣದಿಂದಾಗಿ ಸಿನಿಮಾದ ಪ್ರೀಮಿಯರ್ ಶೋಗ ಟಿಕೆಟ್​​ಗಳನ್ನು ಕೊನೆಯ ಹಂತದಲ್ಲಿ ಬಿಡುಗಡೆ ಮಾಡಲಾಯ್ತು. ಇದು ಅಭಿಮಾನಿಗಳ ಗೊಂದಲಕ್ಕೆ ಕಾರಣವಾಯ್ತು. ಇದೇ ಕಾರಣಕ್ಕೆ ‘ದಿ ರಾಜಾ ಸಾಬ್’ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನವಾದ ಕೆಲವು ಚಿತ್ರಮಂದಿರಗಳಲ್ಲಿ ಅಭಿಮಾನಿಗಳು ಗಲಾಟೆ ಮಾಡಿದ್ದು, ಚಿತ್ರಮಂದಿರಗಳಿಗೆ ಹಾನಿ ಮಾಡಿದ್ದಾರೆ.

ಆಂಧ್ರ ಪ್ರದೇಶದಲ್ಲಿ ‘ದಿ ರಾಜಾ ಸಾಬ್’ ಸಿನಿಮಾದ ಪ್ರೀಮಿಯರ್ ಶೋ ಮತ್ತು ಟಿಕೆಟ್ ಹೆಚ್ಚಳಕ್ಕೆ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ ತೆಲಂಗಾಣದಲ್ಲಿ ಅದರಲ್ಲೂ ವಿಶೇಷವಾಗಿ ಹೈದರಾಬಾದ್​​ನಲ್ಲಿ ಕೆಲವು ಚಿತ್ರಮಂದಿರಗಳಲ್ಲಿ ಬಹಳ ತಡವಾಗಿ ಪ್ರೀಮಿಯರ್ ಶೋ ಆಯೋಜನೆ ಮಾಡಲಾಯ್ತು. ಇದರಿಂದಾಗಿ ಸಾಕಷ್ಟು ಗೊಂದಲ ಉಂಟಾಗಿದೆ.

ಹೈದರಾಬಾದ್​​ನ ವಿಮಲ್ ಚಿತ್ರಮಂದಿರಗಳಲ್ಲಿ ಪ್ರಭಾಸ್ ಅಭಿಮಾನಿಗಳು ಗುರುವಾರ ರಾತ್ರಿ ದಾಂಧಲೆ ನಡೆಸಿದ್ದು, ಚಿತ್ರಮಂದಿರದ ಗಾಜುಗಳನ್ನು ಒಡೆದಿದ್ದಾರೆ. ವಿಮಲ್ ಚಿತ್ರಮಂದಿರದಲ್ಲಿ ಶೋ ತಡವಾಗಿದ್ದಕ್ಕೆ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ಹೈದರಾಬಾದ್​​ನ ಇನ್ನೂ ಕೆಲವು ಚಿತ್ರಮಂದಿರಗಳಲ್ಲಿಯೂ ಸಹ ಪ್ರಭಾಸ್ ಅಭಿಮಾನಿಗಳು ಗಲಾಟೆ ಮಾಡಿದ್ದಾರೆ. ವಿಮಲ್ ಚಿತ್ರಮಂದಿರದಲ್ಲಿ ಪೊಲೀಸರು ಲಾಠಿಚಾರ್ಜ್ ಸಹ ಮಾಡಿದ್ದಾರೆ. ಕೆಲವು ಅಭಿಮಾನಿಗಳು, ಪೊಲೀಸರಿಂದ ಲಾಠಿ ಕಿತ್ತುಕೊಂಡು ಅವರ ಮೇಲೆಯೇ ದಾಳಿ ಮಾಡಿರುವ ವಿಡಿಯೋಗಳು ಹರಿದಾಡುತ್ತಿವೆ.

ಪ್ರಭಾಸ್ ನಟಿಸಿರುವ ‘ದಿ ರಾಜಾ ಸಾಬ್’ ಸಿನಿಮಾ ಹಾರರ್ ಕಾಮಿಡಿ ಸಿನಿಮಾ ಆಗಿದ್ದು, ಪ್ರಭಾಸ್ ಜೊತೆಗೆ ನಿಧಿ ಅಗರ್ವಾಲ್, ರಿಧ್ಧಿ ಕುಮಾರ್, ಮಾಳವಿಕಾ ಮೋಹನನ್ ನಟಿಸಿದ್ದಾರೆ. ಬೊಮನ್ ಇರಾನಿ ಮತ್ತು ಸಂಜಯ್ ದತ್ ಸಹ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಮಾರುತಿ. ಬಹಳ ವರ್ಷಗಳ ಬಳಿಕ ಪ್ರಭಾಸ್ ಹಾಸ್ಯಕ್ಕೆ ಪ್ರಾಮುಖ್ಯತೆ ಇರುವ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಜನ ನಾಯಗನ್’ ಚಿತ್ರಕ್ಕೆ ದೊಡ್ಡ ಜಯ; ಯುಎ ಪ್ರಮಾಣಪತ್ರ ನೀಡಲು ಕೋರ್ಟ್ ಆದೇಶ – Kannada News | Madras High court Order Censor Board to Grant UA Certificate To Jana Nayagan

ಸಂಕಷ್ಟದಲ್ಲಿದ್ದ ‘ಜನ ನಾಯಗನ್’ ಚಿತ್ರಕ್ಕೆ ದೊಡ್ಡ ಗೆಲುವು ಸಿಕ್ಕಿದೆ. ಈ ಸಿನಿಮಾಗೆ ತಕ್ಷಣವೇ ಸೆನ್ಸಾರ್ ಪತ್ರ ನೀಡುವಂತೆ ಆದೇಶ ಹೊರಡಿಸಿದೆ. ಇದರಿಂದ ತಂಡಕ್ಕೆ ದೊಡ್ಡ ರಿಲೀಫ್ ಸಿಕ್ಕಿದೆ. ಸಿನಿಮಾನ ಯಾವಾಗ ರಿಲೀಸ್ ಮಾಡಬೇಕು ಎಂಬುದರ ಬಗ್ಗೆ ತಂಡ ಶೀಘ್ರವೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಸಿನಿಮಾಗೆ ಸೆನ್ಸಾರ್ ಪತ್ರ ನೀಡದ ಬಗ್ಗೆ ಕೆವಿಎನ್ ಸಂಸ್ಥೆ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ಸೆನ್ಸಾರ್ ಮಂಡಳಿ ಸೂಚಿಸಿದ ಬದಲಾವಣೆ ಮಾಡಿದರೂ ನಮಗೆ ಪ್ರಮಾಣಪತ್ರ ನೀಡಿಲ್ಲ ಎಂದು ನಿರ್ಮಾಣ ಸಂಸ್ಥೆ ಅಳಲು ತೋಡಿಕೊಂಡಿತ್ತು. ಸಿನಿಮಾಗೆ ದೊಡ್ಡ ಮೊತ್ತದ ಬಂಡವಾಳ ಹೂಡಿದ್ದಾಗಿಯೂ ಹೇಳಿಕೊಂಡಿತ್ತು. ಈಗ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಕೋರ್ಟ್ ಆದೇಶ ನೀಡಿದ್ದು, ‘ಯುಎ’ ಸೆನ್ಸಾರ್ ಪತ್ರ ನೀಡುವಂತೆ ಸೂಚಿಸಿದೆ.

Published On – 11:04 am, Fri, 9 January 26

Source link

Exit mobile version