Headlines

ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ – Kannada News | Spandana Somanna Talks About Boyfriend and Marriage plan

ಸ್ಪಂದನಾ ಸೋಮಣ್ಣ ಅವರು ಬಾಯ್​ಫ್ರೆಂಡ್ ಬಗ್ಗೆ ಬಿಗ್ ಬಾಸ್ ಅಲ್ಲಿ ಮಾತನಾಡಿದ್ದರು ಎನ್ನಲಾಗಿತ್ತು. ಎಲಿಮಿನೇಟ್ ಆದ ಬಳಿಕ ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಇದೇ ವಿಷಯ ಚರ್ಚೆಗೆ ಬಂದಿದೆ. ‘ಸ್ಪಂದನಾಗೆ ಬಾಯ್ಫ್ರೆಂಡ್ ಇದಾನಾ ಇಲ್ವ ಅನ್ನೋದನ್ನು ಗೆಸ್ ಮಾಡ್ತಾ ಇರಿ. ಆ ಕುತೂಹಲ ಇರಲಿ. ಮದುವೆ ಆಗೋಕೆ ಇನ್ನೂ ಸಮಯ ಇದೆ. ಈಗ ಸಿಕ್ಕಿರೋ ಫೇಮ್​​ನ ಎಂಜಾಯ್ ಮಾಡ್ತೀನಿ’ ಎಂದಿದ್ದಾರೆ ಸ್ಪಂದನಾ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಇರಾನ್ ಆರ್ಥಿಕತೆ ಪಾತಾಳಕ್ಕೆ, ನಿರುದ್ಯೋಗ, ಹಣದುಬ್ಬರದಿಂದ ಬೇಸತ್ತು ಬೀದಿಗಿಳಿದ ಜನ, ಪ್ರತಿಭಟನೆಯಲ್ಲಿ 35 ಮಂದಿ ಸಾವು – Kannada News | Iran Sees Deadly Unrest Amid Economic Protests India Advises Citizens to Stay Alert

ಇರಾನ್, ಜನವರಿ 06: ಇರಾನ್​(Iran)ನ ರಾಜಧಾನಿ ಟೆಹ್ರಾನ್​ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಹಿಂಸಾಚಾರ ತೀವ್ರ ಸ್ವರೂಪವನ್ನು ಪಡೆದಿದ್ದು ಇಲ್ಲಿಯವರೆಗೆ 35ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 1,200 ಮಂದಿಯನ್ನು ಬಂಧಿಸಲಾಗಿದೆ. ಕೇವಲ ನಗರ ಮಾತ್ರವಲ್ಲ ಹಳ್ಳಿಯ ಜನರು ಕೂಡ ಬೀದಿಗಿಳಿದಿದ್ದಾರೆ.ಡಿಸೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಪ್ರತಿಭಟನೆಗಳು ಈಗ ದೊಡ್ಡ ಪ್ರಮಾಣದಲ್ಲಿ ಉಲ್ಬಣಗೊಂಡಿವೆ. ಹದಗೆಡುತ್ತಿರುವ ಆರ್ಥಿಕತೆ, ಹಣದುಬ್ಬರ ಮತ್ತು ನಿರುದ್ಯೋಗ ಸಮಸ್ಯೆ ದೇಶದಲ್ಲಿ ತಾಂಡವವಾಡುತ್ತಿದ್ದು, ಆಯತೊಲ್ಲಾ ಅಲಿ ಖಮೇನಿ ವಿರುದ್ಧ ಜನರು ಬೀದಿಗಿಳಿದಿದ್ದಾರೆ. ಬೀದಿಗಿಳಿಯುತ್ತಿರುವ ಸಾರ್ವಜನಿಕರು ಸರ್ವಾಧಿಕಾರ ವಿರೋಧಿ ಘೋಷಣೆಗಳನ್ನು ಕೂಗುತ್ತಿದ್ದಾರೆ,…

Read More

ತಂದೆ ಜಾಗ ನೀಡಿದ್ದ ಆಸ್ಪತ್ರೆಯಲ್ಲೇ ಮಗನ ದುರಂತ ಅಂತ್ಯ: ಅಷ್ಟಕ್ಕೂ ಆಗಿದ್ದೇನು? – Kannada News | Son Dies in Hospital Built on Land Donated by His Father Amid Ambulance Delay in Tumakuru

ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್​​ ಸಿಗದೆ ವ್ಯಕ್ತಿ ಸಾವು ತುಮಕೂರು, ಜನವರಿ 18: ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್​​ ಸಿಗದ ಕಾರಣ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯಲ್ಲಿ ನಡೆದಿದೆ. ಸೈಯ್ಯದ್​​ ಅಕ್ರಮ್(42) ಮೃತ ದುರ್ದೈವಿಯಾಗಿದ್ದು, ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಬಗ್ಗೆ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದು, ನಮಗಾದ ತೊಂದರೆ ಮತ್ಯಾರಿಗೂ ಆಗಬಾರದು ಎಂದು ಅಲವತ್ತುಕೊಂಡಿದ್ದಾರೆ. 1 ಗಂಟೆ ಕಾದರೂ…

Read More

Budget 2026: ಕೇಂದ್ರ ಬಜೆಟ್ 2026: ಯಾವುದು ಅಗ್ಗ, ಯಾವುದು ದುಬಾರಿ? – Kannada News | Union Budget 2026: Items That Get Cheaper and Costlier

ನವದೆಹಲಿ, ಫೆಬ್ರವರಿ 01: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಭಾನುವಾರ ತಮ್ಮ ದಾಖಲೆಯ 9ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಭೌಗೋಳಿಕ ರಾಜಕೀಯ ಪ್ರಕ್ಷುಬ್ದತೆ, ಆರ್ಥಿಕ ಏರಿಳಿತ ಮತ್ತು ವ್ಯಾಪಾರ ಯುದ್ಧದ ನಡುವೆಯೂ, ಆದಾಯ ತೆರಿಗೆ ಸ್​ಲ್ಯಾಬ್​ಗಳು ಮತ್ತು ಮತ್ತು ದರಗಳಲ್ಲಿನ ಸಂಭವನೀಯ ಬದಲಾವಣೆಗಳ ಮೇಲೆ ಗಮನಹರಿಸಲಾಗಿದೆ. ಮದ್ಯವು ಹೆಚ್ಚು ದುಬಾರಿಯಾಗಿದೆ ಮತ್ತು ಚರ್ಮದ ಬೂಟುಗಳು, ಕ್ಯಾನ್ಸರ್ ಮತ್ತು ಮಧುಮೇಹ ಔಷಧಿಗಳು ಅಗ್ಗವಾಗಿವೆ ಎಂದು ಬಜೆಟ್​ನಲ್ಲಿ ತಿಳಿಸಲಾಗಿದೆ. ಚರ್ಮ ಮತ್ತು ಜವಳಿ ಉಡುಪುಗಳನ್ನು ರಫ್ತು ಮಾಡುವ…

Read More

ಪರೀಕ್ಷೆ ಬರೆದವರೇ ಬೇರೆ, ನೇಮಕಗೊಂಡವರೇ ಬೇರೆ! ಬೆಂಗಳೂರಿನ ಪ್ರತಿಷ್ಠಿತ ಇನ್ಸ್ಟಿಟ್ಯೂಟ್​ನ ಪರೀಕ್ಷೆಯಲ್ಲಿ ನಡೆದಿದ್ದೇನು? – Kannada News | Bengaluru Recruitment Scam: 7 Caught in IWST Exam Impersonation Fraud

ಪರೀಕ್ಷೆ ಬರೆದವರೇ ಬೇರೆ, ನೇಮಕಗೊಂಡವರೇ ಬೇರೆ! ಬೆಂಗಳೂರಿನ ಪ್ರತಿಷ್ಠಿತ ಇನ್ಸ್ಟಿಟ್ಯೂಟ್​ನ ಪರೀಕ್ಷೆಯಲ್ಲಿ ನಡೆದಿದ್ದೇನು? ಬೆಂಗಳೂರು, ಜನವರಿ 17: ಬೆಂಗಳೂರು ನಗರದ ಪ್ರತಿಷ್ಠಿತ ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಅಂಡ್ ಟೆಕ್ನಾಲಜಿಯಲ್ಲಿ ನಡೆದ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ (Exam Fraud) ಬೆಳಕಿಗೆ ಬಂದಿದೆ. ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ICFRE) ಪರೀಕ್ಷೆಯನ್ನು ನಡೆಸಿತ್ತು. ಈ ವೇಳೆ ಸರ್ಕಾರಿ ಉದ್ಯೋಗ ಪಡೆಯುವ ಉದ್ದೇಶದಿಂದ ಪರೀಕ್ಷೆಗೆ ಬೇರೆ ವ್ಯಕ್ತಿಗಳನ್ನು ಹಾಜರುಪಡಿಸಿ ಪರೀಕ್ಷೆ ಬರೆಸಿದ್ದ 7 ಅಭ್ಯರ್ಥಿಗಳ ಕೃತ್ಯ…

Read More

ಬೆಂಗಳೂರಿಗೆ ಬ್ರೆಡ್​ನಲ್ಲಿ ಬರುತ್ತಿತ್ತು ಡ್ರಗ್ಸ್! ನೈಜಿರಿಯಾ ಮಹಿಳೆಯ ಬಂಧನ – Kannada News | Cocaine Hidden Inside Bread, Professor Turned Thief and Daylight Burglar Nabbed: Bengaluru Police Crack Major Crime Cases

ಬ್ರೆಡ್​ನಲ್ಲಿ ಡ್ರಗ್ಸ್, ಒಳಚಿತ್ರದಲ್ಲಿ ಆರೋಪಿ ಒಲಾಜಿಡೆ ಎಸ್ತಾರ್ ಬೆಂಗಳೂರು, ಡಿಸೆಂಬರ್ 24: ಬೆಂಗಳೂರು (Bangalore) ನಗರದಲ್ಲಿ ಮಾದಕ ವಸ್ತು ಸಾಗಣೆ ಹಾಗೂ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಒಂದೇ ದಿನ ಮೂರು ವಿಭಿನ್ನ ಪ್ರಕರಣಗಳನ್ನು ಭೇದಿಸಿದ್ದು, ಆರೋಪಿಗಳನ್ನು ಬಂಧಿಸಿ ಅಪಾರ ಪ್ರಮಾಣದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಮುಖ ಪ್ರಕರಣವೊಂದರಲ್ಲಿ, ತಿನ್ನುವ ಬ್ರೆಡ್‌ನೊಳಗೆ ಕೊಕೇನ್ ಮರೆಮಾಡಿ ಮಾರಾಟಕ್ಕೆ ಯತ್ನಿಸುತ್ತಿದ್ದ ನೈಜೀರಿಯನ್ ಮೂಲದ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಒಲಾಜಿಡೆ ಎಸ್ತಾರ್, ಬ್ರೆಡ್ ಪೀಸ್‌ಗಳನ್ನು ಕಟ್ ಮಾಡಿ…

Read More

ಕುಡಿದ ಅಮಲಿನಲ್ಲಿ ಬಿಎಂಟಿಸಿ ಬಸ್ ಚಾಲನೆ: ಸರಣಿ ಅಪಘಾತಗಳಾಗುತ್ತಿದ್ದರೂ ಚಾಲಕರಿಗೆ ಬುದ್ಧಿ ಬರುತ್ತಿಲ್ಲವೇ?

ಬೆಂಗಳೂರು, ಮಾ.19: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ಬಿಎಂಟಿಸಿ ಚಾಲಕರ ಅಟ್ಟಹಾಸ ಮುಂದುವರಿದಿದೆ. ನಿನ್ನೆ ರಾತ್ರಿ ಸುಮಾರು 7:30ರ ಸುಮಾರಿಗೆ ಟಿನ್ ಫ್ಯಾಕ್ಟರಿ ಬಳಿ ಮದ್ಯದ ಅಮಲಿನಲ್ಲಿ ಬಸ್ ಚಲಾಯಿಸುತ್ತಿದ್ದ ಚಾಲಕನೊಬ್ಬ ಮಹಿಳಾ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ್ದಾನೆ. KA 57 F 3660 ನೋಂದಣಿ ಸಂಖ್ಯೆಯ ಬಿಎಂಟಿಸಿ ಬಸ್ ಚಾಲಕ ಪೂರ್ಣ ಪ್ರಮಾಣದಲ್ಲಿ ಮದ್ಯ ಸೇವಿಸಿ ಬಸ್ ಚಲಾಯಿಸುತ್ತಿದ್ದ ಎನ್ನಲಾಗಿದೆ. ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಸ್ ಚಲಾಯಿಸುತ್ತಿದ್ದುದನ್ನು ಕಂಡು ಪ್ರಯಾಣಿಕರು ಭೀತಿಗೊಳಗಾಗಿದ್ದರು. ಚಾಲಕನ ವರ್ತನೆಯಿಂದ ಗಾಬರಿಗೊಂಡ ಮಹಿಳೆಯೊಬ್ಬರು ಬಸ್…

Read More

ಜಿಬಿಎ ಲ್ಯಾಬ್‌ಗೆ ಅಂಟಿದ ಗ್ರಹಣ: ಬೆಂಕಿ ಅವಘಡದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು! – Kannada News | BBMP/GBA Quality Control Lab Negligence: Machinery Rots After Fire Mishap

ಕ್ವಾಲಿಟಿ ಕಂಟ್ರೋಲ್ ಲ್ಯಾಬ್Image Credit source: The Hindu ಬೆಂಗಳೂರು, ಏಪ್ರಿಲ್ 29: ಸಿಲಿಕಾನ್ ಸಿಟಿಯ ಅಭಿವೃದ್ಧಿ ಕಾಮಗಾರಿಗಳ ಬೆನ್ನೆಲುಬಾಗಬೇಕಿದ್ದ ಬಿಬಿಎಂಪಿ ಗುಣನಿಯಂತ್ರಣ ಪ್ರಯೋಗಾಲಯವು (Quality Control Lab) ಸದ್ಯ ಅನಾಥ ಸ್ಥಿತಿಯಲ್ಲಿದೆ. ಎರಡು ವರ್ಷಗಳ ಹಿಂದೆ ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿದ್ದ ಲ್ಯಾಬ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡ ಹಲವರನ್ನು ಬಲಿ ಪಡೆದಿತ್ತು. ಆ ಘಟನೆಯ ನಂತರವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಮತ್ತು ಜಿಬಿಎ (GBA), ಪ್ರಯೋಗಾಲಯದ ಪುನಶ್ಚೇತನಕ್ಕೆ ಆಸಕ್ತಿ ತೋರದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೊಸ…

Read More

ದೇಶದ ಆಹಾರ ಭದ್ರತಾ ವ್ಯವಸ್ಥೆ ಬಲಪಡಿಸಲು ದಿಟ್ಟ ನಿರ್ಧಾರ: ಗುಣಮಟ್ಟದ ಅಕ್ಕಿ ಪೂರೈಕೆಗೆ ಕೇಂದ್ರ ಅನುಮೋದನೆ – Kannada News | Modi Government approves supply of improved quality rice under PMGKAY; over 80 crore beneficiaries to receive better quality rice

ನವದೆಹಲಿ, (ಜುಲೈ 02): ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಮತ್ತು ಇತರ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಪೂರೈಕೆಯಾಗುವ ಅಕ್ಕಿಯ ಗುಣಮಟ್ಟವನ್ನು ಸುಧಾರಿಸುವ ಐತಿಹಾಸಿಕ ಸುಧಾರಣಾ ಕ್ರಮಕ್ಕೆ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (CCEA) ಅನುಮೋದನೆ ನೀಡಿದೆ. ಸರಿಸುಮಾರು ಮೂರು ದಶಕಗಳಲ್ಲಿ ಮೊದಲ ಬಾರಿಗೆ, ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (PDS) ಪೂರೈಸಲಾಗುವ ಅಕ್ಕಿಯ ಗುಣಮಟ್ಟದ ಮಾನದಂಡಗಳನ್ನು ಸರ್ಕಾರವು ಪರಿಷ್ಕರಿಸಿದೆ. ಇದರಿಂದ ಫಲಾನುಭವಿಗಳು ಪ್ರಸ್ತುತ ಪಡೆಯುತ್ತಿರುವ ಪಾಲಿನಲ್ಲಿ ಯಾವುದೇ ಕಡಿತವಿಲ್ಲದೆ, ಗಮನಾರ್ಹವಾಗಿ ಕಡಿಮೆ ನುಚ್ಚು ಇರುವ…

Read More

Video: ಉತ್ತರಾಖಂಡದ ಸುರಂಗದಲ್ಲಿ ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ – Kannada News | Two Worker Trains Collide Inside Uttarakhand Tunnel, Dozens Injured

ಚಮೋಲಿ, ಡಿಸೆಂಬರ್ 31: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಎರಡು ರೈಲುಗಳು ಸುರಂಗದೊಳಗೆ ಡಿಕ್ಕಿ ಹೊಡೆದುಕೊಂಡ ಪರಿಣಾಮ 60 ಕಾರ್ಮಿಕರು ಗಾಯಗೊಂಡಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಉತ್ತರಾಖಂಡದ ಚಮೋಲಿ ಜಿಲ್ಲೆಯ ಜಲವಿದ್ಯುತ್ ಯೋಜನೆಯೊಂದರಲ್ಲಿ ತಡರಾತ್ರಿ ಪಾಳಿ ಬದಲಾವಣೆಯು ಅಸ್ತವ್ಯಸ್ತವಾಗಿದೆ, ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಎರಡು ರೈಲುಗಳು ಸುರಂಗದೊಳಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 60 ಜನರು ಗಾಯಗೊಂಡಿದ್ದಾರೆ. ಟಿಎಚ್‌ಡಿಸಿ ನಡೆಸುತ್ತಿರುವ ವಿಷ್ಣುಗಡ-ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯಲ್ಲಿ ರಾತ್ರಿ 930 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.ಸುರಂಗದೊಳಗೆ ಚಲಿಸುತ್ತಿದ್ದ ಎರಡು ಲೋಕೋ ರೈಲುಗಳು ಶಿಫ್ಟ್…

Read More