ರಾಮಾಯಣದ ಬಗ್ಗೆ ಪ್ರಕಾಶ್ ರಾಜ್ ಮಾತನಾಡಿದ ವಿಡಿಯೋ ವೈರಲ್; ತೀವ್ರ ಟೀಕೆ – Kannada News | Prakash Raj gets trolled for saying Ram a North Indian and Ravan a South Indian

ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಅವರು ರಾಜಕೀಯದ ವಿಷಯಗಳ ಬಗ್ಗೆ ಆಗಾಗ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ಬಿಜೆಪಿ ನಿಲುವುಗಳನ್ನು ಅವರು ಆಗಾಗ ವಿರೋಧಿಸುತ್ತಾರೆ. ಆ ಕಾರಣದಿಂದ ಅವರನ್ನು ವಿರೋಧಿಗಳು ಟ್ರೋಲ್ ಮಾಡುತ್ತಾರೆ. ಕೇರಳ ಸಾಹಿತ್ಯ ಉತ್ಸವದ ವೇದಿಕೆಯಲ್ಲಿ ಪ್ರಕಾಶ್ ರಾಜ್ ಅವರು ಮಾತನಾಡಿದ್ದ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ರಾಮಾಯಣದ (Ramayana) ಬಗ್ಗೆ ಮಾತನಾಡಿದ್ದಾರೆ. ಈಗಿನ ರಾಜಕೀಯ ಪರಿಸ್ಥಿತಿಯ ವಿಡಂಬನೆಗೆ ಅವರು ರಾಮಾಯಣವನ್ನು ಉದಾಹರಣೆಯಾಗಿ ತೆಗೆದುಕೊಂಡಿದ್ದಾರೆ. ಆದರೆ ಅವರು ಮಾತನಾಡಿದ್ದನ್ನು ಅನೇಕರು ಖಂಡಿಸುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರುವ ಅನೇಕರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ಪ್ರಕಾಶ್ ರಾಜ್ ಹೇಳುವುದೇನೆಂದರೆ ರಾಮನು ಉತ್ತರ ಭಾರತೀಯ, ರಾವಣನು ದಕ್ಷಿಣ ಭಾರತೀಯ ಆದಿವಾಸಿ. ರಾಮನು ಹಣ್ಣುಗಳನ್ನು ಕದ್ದ ಕಾರಣದಿಂದ ಅವರ ನಡುವಿನ ಸಂಘರ್ಷವು ಆರಂಭವಾಯಿತು. ನೀವು ಇತಿಹಾಸವನ್ನು ಚರ್ಚ್‌ನಿಂದ ಕಲಿತರೆ ಇಂತಹದ್ದೇ ಆಗುತ್ತದೆ’ ಎಂದು ನೆಟ್ಟಿಗರೊಬ್ಬರು ಟೀಕೆ ಮಾಡಿದ್ದಾರೆ.

‘ಪ್ರಕಾಶ್ ರಾಜ್ ತನ್ನದೇ ರಾಮಾಯಣವನ್ನು ರಚಿಸಿಕೊಂಡು, ಉತ್ತರ ಭಾರತದ ರಾಮನು ದಕ್ಷಿಣ ಭಾರತದ ಆದಿವಾಸಿಯಾದ ರಾವಣನಿಂದ ಹಣ್ಣುಗಳನ್ನು ಕದ್ದನೆಂದು ಹೇಳುತ್ತಿದ್ದಾರೆ. ಇದಕ್ಕೆ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಮತ್ತೊಬ್ಬರು ಒತ್ತಾಯಿಸಿದ್ದಾರೆ. ಟ್ವಿಟರ್​​ನಲ್ಲಿ ಈ ವಿಷಯ ಈಗ ಟ್ರೆಂಡ್ ಆಗುತ್ತಿದೆ.

‘ಹಿಂದೂಗಳನ್ನು ಅಪಹಾಸ್ಯ ಮಾಡಲು ಪ್ರಕಾಶ್ ರಾಜ್ ರಾಮಾಯಣದ ಕಲ್ಪಿತ ಆವೃತ್ತಿಯನ್ನು ವಿವರಿಸುತ್ತಾರೆ. ಅವರು ಈ ನಿಂದನೀಯ ಕಥೆಯನ್ನು ಕೇವಲ ಗೋಮಾಂಸ ಸೇವನೆಯನ್ನು ಉತ್ತೇಜಿಸಲು ಮತ್ತು ಉತ್ತರ-ದಕ್ಷಿಣ ವಿಭಜನೆಯನ್ನು ಸೃಷ್ಟಿಸಲು ಮಾಡಿದ್ದಾರೆ. ಇಂತಹ ವ್ಯಕ್ತಿಗೆ ದೃಶ್ಯಂ 3 ಮತ್ತು ವಾರಾಣಸಿ ಸಿನಿಮಾಗಳಲ್ಲಿ ಕೆಲಸ ಕೊಟ್ಟ ಅಜಯ್ ದೇವಗನ್ ಮತ್ತು ಎಸ್‌ಎಸ್ ರಾಜಮೌಳಿ ಅವರಿಗೆ ನಾಚಿಕೆ ಆಗಬೇಕು’ ಎಂದು ಇನ್ನೊಬ್ಬರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

‘ನಾನು ಪ್ರಕಾಶ್ ರಾಜ್ ಅವರಿಂದ ಏನನ್ನೂ ನಿರೀಕ್ಷಿಸುವುದಿಲ್ಲ. ಆದರೆ ಪ್ರೇಕ್ಷಕರಲ್ಲಿ ಇದ್ದ ಜನರು ಏನು ಮಾಡುತ್ತಿದ್ದರು? ಅವರ ಅಸಂಬದ್ಧ ಮಾತುಗಳಿಗೆ ಚಪ್ಪಾಳೆ ಹೊಡೆಯುತ್ತಾ ಪ್ರೋತ್ಸಾಹಿಸುತ್ತಿದ್ದರು. ಯಾಕೆ ಯಾರೂ ಎದ್ದು ವಿರೋಧಿಸಲಿಲ್ಲ? ಅಲ್ಲಿ ಹಿಂದೂಗಳು ಯಾರೂ ಇರಲಿಲ್ಲವೇ?’ ಎಂದು ನೆಟ್ಟಿಗರೊಬ್ಬರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ನಟ ಪ್ರಕಾಶ್ ರಾಜ್ ತಾಯಿ ನಿಧನ: ಶಾಂತಿನಗರ ಚರ್ಚ್​​ನಲ್ಲಿ ಪ್ರಾರ್ಥನೆ: ವಿಡಿಯೋ

ಈ ರೀತಿಯ ಅನೇಕ ಟೀಕೆಗಳು ಎದುರಾಗಿವೆ. ಇವುಗಳಿಗೆ ಪ್ರಕಾಶ್ ರಾಜ್ ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇತ್ತೀಚೆಗೆ ಪ್ರಕಾಶ್ ರಾಜ್ ಅವರ ತಾಯಿ ನಿಧನರಾದಾಗ ಅಂತ್ಯ ಸಂಸ್ಕಾರ ಮಾಡಿದ ರೀತಿಯ ಬಗ್ಗೆಯೂ ಅನೇಕರು ಟೀಕಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಲಕ್ನೋದಲ್ಲಿ ಇಡೀ ಸ್ಲಮ್ ಬೆಂಕಿಗಾಹುತಿ; ಕರಕಲಾದ ಗುಡಿಸಲುಗಳ ಡ್ರೋನ್ ವಿಡಿಯೋ ವೈರಲ್ – Kannada News | Drone video shows massive slum fire in Lucknow’s Vikas Nagar 2 childrens burnt alive

ಲಕ್ನೋ, ಏಪ್ರಿಲ್ 16: ಉತ್ತರ ಪ್ರದೇಶದ ಲಕ್ನೋದ ವಿಕಾಸ್ ನಗರದ ಸ್ಲಮ್ ಪ್ರದೇಶದಲ್ಲಿ ನಡೆದ ಬೆಂಕಿಯ (Fire Accident) ಭೀಕರ ಚಿತ್ರವನ್ನು ಡ್ರೋನ್ ದೃಶ್ಯಗಳು ತೋರಿಸಿವೆ. ಡಜನ್​ಗಟ್ಟಲೆ ಕೊಳೆಗೇರಿಗಳು ಬೂದಿಯ ರಾಶಿಯಾಗಿ ಬದಲಾಗುತ್ತಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಬೆಂಕಿಯಿಂದಾಗಿ ಮನೆಯ ಎಲ್ಲಾ ವಸ್ತುಗಳು ಸುಟ್ಟುಹೋಗಿವೆ. ಲಕ್ನೋದ ವಿಕಾಸ್ ನಗರ ಪ್ರದೇಶದಲ್ಲಿ ಬುಧವಾರ ಸಂಜೆ ಸಂಭವಿಸಿದ ಭಾರಿ ಬೆಂಕಿಯಲ್ಲಿ ಇಬ್ಬರು ಮಕ್ಕಳು ಜೀವಂತವಾಗಿ ಸುಟ್ಟುಹೋಗಿದ್ದಾರೆ ಮತ್ತು ಡಜನ್ಗಟ್ಟಲೆ ಮನೆಗಳು ಸುಟ್ಟುಹೋಗಿವೆ. ಬೆಂಕಿಯ ಪರಿಣಾಮವಾಗಿ ಕನಿಷ್ಠ 250 ಕುಟುಂಬಗಳು ಮನೆಗಳನ್ನು ಕಳೆದುಕೊಂಡಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕ್ಷೇತ್ರ ಪುನರ್ ವಿಂಗಡಣೆಯಿಂದ ದಕ್ಷಿಣ ಭಾರತಕ್ಕೆ ಅನ್ಯಾಯವಾಗದು; ಪ್ರಧಾನಿ ಮೋದಿ ಭರವಸೆ – Kannada News | No Discrimination Against North to South PM Modis Guarantee On Delimitation

ನವದೆಹಲಿ, ಏಪ್ರಿಲ್ 16: ಕ್ಷೇತ್ರ ಪುನರ್ ವಿಂಗಡಣೆಯ ಬಗ್ಗೆ ಎದ್ದಿರುವ ವಿವಾದ, ಗೊಂದಲಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ತೆರೆ ಎಳೆದಿದ್ದಾರೆ. ಇಂದು ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಉಂಟಾಗುವುದಿಲ್ಲ ಎಂದು ಗ್ಯಾರಂಟಿ ನೀಡಿದ್ದಾರೆ.

“ಪೂರ್ವದಿಂದ ಪಶ್ಚಿಮಕ್ಕೆ, ಉತ್ತರದಿಂದ ದಕ್ಷಿಣಕ್ಕೆ ಯಾವುದೇ ರಾಜ್ಯಕ್ಕೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ನಾನು ಗ್ಯಾರಂಟಿ ನೀಡುತ್ತೇನೆ” ಎಂದು ಪ್ರಧಾನಿ ಮೋದಿ ಲೋಕಸಭೆಯಲ್ಲಿ ಹೇಳಿದ್ದಾರೆ. ಲೋಕಸಭೆಯಲ್ಲಿ ಪರಿಚಯಿಸಲಾದ ಮೂರು ಮಸೂದೆಗಳ ಕುರಿತು ಚರ್ಚೆ ನಡೆಸಲು ವಿಶೇಷ ಸಂಸತ್ತಿನ ಅಧಿವೇಶನವು ಇಂದು ಪ್ರಾರಂಭವಾಯಿತು. ಈ ಅಧಿವೇಶನವು ಎನ್‌ಡಿಎ ಮತ್ತು ವಿರೋಧ ಪಕ್ಷದ ನಡುವೆ 40 ನಿಮಿಷಗಳ ಕಾಲ ನಡೆದ ಬಿಸಿ ಬಿಸಿ ಚರ್ಚೆಯೊಂದಿಗೆ ಪ್ರಾರಂಭವಾಯಿತು. ನಂತರ ಎನ್‌ಡಿಎ ಮತ್ತು ವಿರೋಧ ಪಕ್ಷದವರು ಸಾಂವಿಧಾನಿಕ (131 ನೇ ತಿದ್ದುಪಡಿ) ಮಸೂದೆಯನ್ನು ಪರಿಚಯಿಸುವ ಮೊದಲು ಮತಗಳ ವಿಭಜನೆಗೆ ಒತ್ತಾಯಿಸಿದರು. ಕೊನೆಗೆ ಈ ಮಸೂದೆಯನ್ನು 251 ಸದಸ್ಯರು ಬೆಂಬಲಿಸಿದರು ಮತ್ತು 185 ಸಂಸದರು ಅದರ ವಿರುದ್ಧ ಮತ ಚಲಾಯಿಸಿದರು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆಗೆ ರಾಜಕೀಯದ ಬಣ್ಣ ಬಳಿಯಬೇಡಿ; ಸಂಸತ್​​ನಲ್ಲಿ ಪ್ರಧಾನಿ ಮೋದಿ ಭಾಷಣ

ದಕ್ಷಿಣ ಭಾರತದ ಮುಖ್ಯಮಂತ್ರಿಗಳಾದ ತಮಿಳುನಾಡಿನ ಎಂ.ಕೆ. ಸ್ಟಾಲಿನ್, ಕೇರಳದ ಪಿಣರಾಯಿ ವಿಜಯನ್, ತೆಲಂಗಾಣದ ರೇವಂತ್ ರೆಡ್ಡಿ ಮತ್ತು ಕರ್ನಾಟಕದ ಸಿದ್ದರಾಮಯ್ಯ ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದ ತಮ್ಮ ರಾಜ್ಯಗಳಿಗೆ ಈ ಸೀಮಾ ನಿರ್ಣಯದಿಂದ ಅನ್ಯಾಯವಾಗುತ್ತದೆ. ಜನಸಂಖ್ಯೆ ಹೆಚ್ಚಿರುವ ಉತ್ತರ ಭಾರತದ ರಾಜ್ಯಗಳಿಗೆ ಇದರಿಂದ ಹೆಚ್ಚು ಅನುಕೂಲವಾಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದರು.

ಇದನ್ನೂ ಓದಿ: ದೇಶದ ಮಹಿಳೆಯರು ನಿಮ್ಮನ್ನೆಂದೂ ಕ್ಷಮಿಸುವುದಿಲ್ಲ; ವಿಪಕ್ಷಗಳಿಗೆ ಮೋದಿ ಎಚ್ಚರಿಕೆ

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಪ್ರಕ್ರಿಯೆಯನ್ನು ವಿರೋಧಿಸುವ ಧ್ವನಿಗಳು ಕೇವಲ ರಾಜಕೀಯ ಲಾಭಕ್ಕಾಗಿ ಹಾಗೆ ಮಾಡುತ್ತಿವೆ. ಇದರಿಂದ ಯಾವ ರಾಜ್ಯಕ್ಕೂ ಯಾವುದೇ ತಾರತಮ್ಯ, ಅನ್ಯಾಯ ಆಗುವುದಿಲ್ಲ ಎಂಬುದು ನನ್ನ ಗ್ಯಾರಂಟಿ ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹರಿಯಾಣದ ಕಾಂಗ್ರೆಸ್ ಪಕ್ಷದ 5 ಶಾಸಕರ ಅಮಾನತು; ಕಾರಣ ಇಲ್ಲಿದೆ – Kannada News | Congress suspends 5 Haryana MLAs for cross voting in Rajya Sabha elections

ಚಂಡೀಗಢ, ಏಪ್ರಿಲ್ 16: ಕಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯ (Rajya Sabha Elections) ಸಂದರ್ಭದಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಹರಿಯಾಣದ ಕಾಂಗ್ರೆಸ್ ಇಂದು (ಏಪ್ರಿಲ್ 16) ತನ್ನ ಪಕ್ಷದ 5 ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಮಾಜಿ ಸಂಸದ ಧರ್ಮಪಾಲ್ ಮಲಿಕ್ ನೇತೃತ್ವದ ಪಕ್ಷದ ಹರಿಯಾಣ ಘಟಕದ ಶಿಸ್ತು ಕ್ರಿಯಾ ಸಮಿತಿ ಶಾಸಕರಾದ ಮೊಹಮ್ಮದ್ ಇಲ್ಯಾಸ್ (ಪುನಾಹನ), ಮೊಹಮ್ಮದ್ ಇಸ್ರೇಲ್ (ಹತಿನ್), ರೇಣು ಬಾಲಾ (ಸಧೌರ), ಶಲ್ಲಿ ಚೌಧರಿ (ನರೈಂಗಢ) ಮತ್ತು ಜರ್ನೈಲ್ ಸಿಂಗ್ (ರತಿಯಾ) ಅವರನ್ನು ಅಮಾನತುಗೊಳಿಸಲಾಗಿದೆ.

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಕಾಂಗ್ರೆಸ್ ಈ ಐವರು ಶಾಸಕರನ್ನು ತಪ್ಪಿತಸ್ಥರೆಂದು ಘೋಷಿಸಿದ್ದು, ಅಮಾನತುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ರಾವ್ ನರೇಂದರ್ ಸಿಂಗ್ ಹೇಳಿದ್ದಾರೆ. ರಾಜ್ಯ ಶಿಸ್ತು ಸಮಿತಿಯ ಶಿಫಾರಸುಗಳನ್ನು ಅನುಸರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಒಂದು ಕುಟುಂಬಕ್ಕಾಗಿ ಕಾಂಗ್ರೆಸ್ ನಮ್ಮ ಕೈಬಿಟ್ಟಿದೆ: ಮುಸ್ಲಿಂ ಮುಖಂಡರಿಂದ ತೀವ್ರ ಆಕ್ರೋಶ

“ನಾರಾಯಣಗಢ, ಸಧೌರಾ, ಪೆಹೋವಾ, ಪಟೌಡಿ ಮತ್ತು ಫಿರೋಜ್‌ಪುರ್ ಝಿರ್ಕಾ ಕ್ಷೇತ್ರಗಳಿಂದ ಆಯ್ಕೆಯಾದ ಶಾಸಕರಾದ ಶಲ್ಲಿ ಚೌಧರಿ, ರೇಣು ಬಾಲಾ, ಸರ್ದಾರ್ ಗುರ್ಮೀತ್ ಸಿಂಗ್, ಮೊಹಮ್ಮದ್ ಇಲ್ಯಾಸ್ ಮತ್ತು ಮೊಹಮ್ಮದ್ ಇಸ್ರೇಲ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಕಾರಣಕ್ಕೆ ಅಮಾನತುಗೊಳಿಸಲಾಗಿದೆ. ಶಿಸ್ತು ಕ್ರಿಯಾ ಸಮಿತಿಯ ಶಿಫಾರಸಿನ ಮೇರೆಗೆ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯೊಂದಿಗೆ ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಅವರು ಘೋಷಿಸಿದ್ದಾರೆ.

ರಾಜ್ಯಸಭಾ ಚುನಾವಣೆಯ ಸಮಯದಲ್ಲಿ ಈ 5 ಶಾಸಕರು ಇತ್ತೀಚೆಗೆ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಮತ ಚಲಾಯಿಸಿದ್ದರು. ಪಕ್ಷದ ಯಾವುದೇ ಮಟ್ಟದಲ್ಲಿ ಅಶಿಸ್ತನ್ನು ಕಾಂಗ್ರೆಸ್ ಸಹಿಸುವುದಿಲ್ಲ. ಪಕ್ಷದ ಸಾಮೂಹಿಕ ನಿರ್ಧಾರಗಳು ಮತ್ತು ಅಧಿಕೃತ ನಿಲುವಿಗೆ ವಿರುದ್ಧವಾದ ಯಾವುದೇ ಚಟುವಟಿಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಸ್ಪಷ್ಟ ಸಂದೇಶವನ್ನು ಈ ನಿರ್ಧಾರವು ಎಲ್ಲಾ ನಾಯಕರು ಮತ್ತು ಕಾರ್ಯಕರ್ತರಿಗೆ ರವಾನಿಸುತ್ತದೆ” ಎಂದು ರಾವ್ ನರೇಂದರ್ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ:Video: ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್ 

ಹರಿಯಾಣದ ಎರಡು ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 16ರಂದು ಮತದಾನ ನಡೆಯಿತು. ಬಿಜೆಪಿ ಸಂಜಯ್ ಭಾಟಿಯಾ ಒಂದು ಸ್ಥಾನವನ್ನು ಆರಾಮವಾಗಿ ಗೆದ್ದರೆ, ನಂದಲ್ ವಿರುದ್ಧದ ನಿಕಟ ಸ್ಪರ್ಧೆಯ ನಂತರ ಕಾಂಗ್ರೆಸ್ ಅಭ್ಯರ್ಥಿ ಕರಮವೀರ್ ಸಿಂಗ್ ಬೌಧ್ ಎರಡನೇ ಸ್ಥಾನವನ್ನು ಪಡೆದಿದ್ದರು. 5 ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂದು ಹೇಳಲಾಗಿದ್ದು, ಮತಎಣಿಕೆಯ ಸಮಯದಲ್ಲಿ ಕಾಂಗ್ರೆಸ್​​ನ 4 ಮತಗಳನ್ನು ಸಹ ಅಮಾನ್ಯವೆಂದು ಘೋಷಿಸಲಾಯಿತು. ಆದರೆ, ಶಾಸಕರಾದ ಶಲ್ಲಿ ಚೌಧರಿ, ರೇಣು ಬಾಲಾ ಮತ್ತು ಜರ್ನೈಲ್ ಸಿಂಗ್ ಅಡ್ಡ ಮತದಾನದ ಆರೋಪಗಳನ್ನು ನಿರಾಕರಿಸಿದ್ದರು. ನಮ್ಮ ಹೆಸರುಗಳನ್ನು ಅನಗತ್ಯವಾಗಿ ವಿವಾದಕ್ಕೆ ಎಳೆಯಲಾಗುತ್ತಿದೆ ಮತ್ತು ನಾವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಿರುವುದಾಗಿ ಸಮರ್ಥಿಸಿಕೊಂಡಿದ್ದರು. ಆದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:24 pm, Thu, 16 April 26

Source link

‘ಟಾಕ್ಸಿಕ್’ ಸಿನಿಮಾವನ್ನು ಆಸ್ಕರ್ ವಿಜೇತ ಸಿನಿಮಾಕ್ಕೆ ಹೋಲಿಸಿದ ಯಶ್ – Kannada News | Yash compares his Toxic movie to Hollywood’s Sinners movie

ಯಶ್ (Yash) ನಟನೆಯ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಪ್ರಸ್ತುತ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಚಿತ್ರವಾಗಿದೆ. ಮಾರ್ಚ್ 19ರಂದೇ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ, ಅಮೆರಿಕ-ಇರಾನ್ ಯುದ್ಧದ ಕಾರಣದಿಂದಾಗಿ ರಿಲೀಸ್ ಮುಂದೂಡಲ್ಪಟ್ಟಿದೆ. ಇದೀಗ ಸಿನಿಮಾ ಜೂನ್ 4 ರಂದು ರಿಲೀಸ್ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಯಶ್ ಆರಂಭಿಸಿದಂತಿದ್ದಾರೆ. ಯಶ್ ನಟಿಸಿರುವ ‘ರಾಮಾಯಣ’ ಸಿನಿಮಾದ ಪ್ರಚಾರಕ್ಕಾಗಿ ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026ನಲ್ಲಿ ಯಶ್ ಭಾಗಿ ಆಗಿದ್ದರು. ಈ ವೇಳೆ ಅವರು ‘ಟಾಕ್ಸಿಕ್’ ಸಿನಿಮಾದ ಬಗ್ಗೆಯೂ ಮಾತನಾಡಿದ್ದು, ‘ಟಾಕ್ಸಿಕ್’ ಸಿನಿಮಾವನ್ನು ಆಸ್ಕರ್ ವಿಜೇತ ಹಾಲಿವುಡ್ ಸಿನಿಮಾಕ್ಕೆ ಹೋಲಿಕೆ ಮಾಡಿದ್ದಾರೆ.

ಯಶ್ ಅವರು ತಮ್ಮ ‘ಟಾಕ್ಸಿಕ್’ ಸಿನಿಮಾವನ್ನು ಹಾಲಿವುಡ್​​ನ ಹಿಟ್ ಸಿನಿಮಾ ‘ಸಿನ್ನರ್ಸ್’ಗೆ ಹೋಲಿಸಿದ್ದಾರೆ. ಮೈಕಲ್ ಬಿ ಜೋರ್ಡನ್ ದ್ವಿಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಬಹಳ ಭಿನ್ನ ಕತೆಯುಳ್ಳ ಹಾರರ್ ಸಿನಿಮಾ ಆಗಿದೆ. ಹೆಸರಿಗೆ ಇದು ಝಾಂಬಿ ಸಿನಿಮಾ ಆಗಿದ್ದರೂ ಸಹ ಸಿನಿಮಾದ ಒಳ ಅರ್ಥವೇ ಬೇರೆಯದ್ದಾಗಿದೆ. ಸಿನಿಮಾ, ಕಪ್ಪುವರ್ಣೀಯರ ಚರಿತ್ರೆ, ಅವರ ಮೇಲಾದ ದಬ್ಬಾಳಿಕೆಗಳ ಬಗ್ಗೆ ಮಾತನಾಡುತ್ತಾರೆ. ಬಹಳ ಒರಿಜಿನಲ್, ಪ್ರತ್ಯೇಕ ಕತೆಯನ್ನು ಈ ಸಿನಿಮಾ ಹೊಂದಿದ್ದು, ಇದೇ ಕಾರಣಕ್ಕೆ ಬಹಳ ಪ್ರಶಂಸೆಗೆ ಪಾತ್ರವಾಗಿದೆ ಮತ್ತು ಆಸ್ಕರ್​​ ಪ್ರಶಸ್ತಿಗಳನ್ನು ಸಹ ಗೆದ್ದಿದೆ.

‘ಸಿನರ್ಸ್’ ಸಿನಿಮಾ ಯಾವ ರೀತಿ ತನ್ನ ಶೈಲಿ ಮತ್ತು ನಿರೂಪಣೆಯಲ್ಲಿ ವಿಶಿಷ್ಟವಾಗಿದೆಯೋ, ಅದೇ ರೀತಿ ‘ಟಾಕ್ಸಿಕ್’ ಕೂಡ ಭಾರತೀಯ ಚಿತ್ರರಂಗಕ್ಕೆ ಒಂದು ಹೊಸ ಮಾದರಿಯ ಅನುಭವ ನೀಡಲಿದೆ ಎಂದು ಯಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದು ಯಾವುದೇ ಸಿನಿಮಾದ ಪ್ರೇರಣೆಯಲ್ಲ ಅಥವಾ ರಿಮೇಕ್ ಅಲ್ಲ. ಬದಲಿಗೆ, ನಿರ್ದೇಶಕಿ ಗೀತು ಮೋಹನ್‌ದಾಸ್ ಅವರು ಸಿದ್ಧಪಡಿಸಿರುವ ಸಂಪೂರ್ಣ ವಿಶಿಷ್ಟವಾದ ಸ್ಕ್ರಿಪ್ಟ್ ಇದಾಗಿದೆ. “ನಾವು ಹೊಸದನ್ನು ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುವಂತಹದ್ದನ್ನು ಮಾಡಲು ಪ್ರಯತ್ನಿಸುತ್ತಿದ್ದೇವೆ” ಎಂದು ಯಶ್ ಹೇಳಿದ್ದಾರೆ.

ಇದನ್ನೂ ಓದಿ:ತಮ್ಮನ್ನು ಬೆಂಬಲಿಸದವರನ್ನು ಅಮೆರಿಕದಲ್ಲೂ ನೆನಪಿಸಿಕೊಂಡ ಯಶ್

‘ಈ ಚಿತ್ರವು ಅಂತರಾಷ್ಟ್ರೀಯ ಗುಣಮಟ್ಟದ ಮೇಕಿಂಗ್ ಮತ್ತು ತಾಂತ್ರಿಕತೆಯನ್ನು ಹೊಂದಿರಲಿದ್ದು, ಕೇವಲ ಭಾರತೀಯ ಪ್ರೇಕ್ಷಕರಿಗಷ್ಟೇ ಅಲ್ಲದೆ ವಿಶ್ವದಾದ್ಯಂತ ಸಿನಿಮಾ ಪ್ರೇಮಿಗಳಿಗೆ ಇಷ್ಟವಾಗುವಂತೆ ಸಿದ್ಧವಾಗುತ್ತಿದೆ. ನಮ್ಮದು ಮೇಲ್ನೋಟಕ್ಕೆ ಗ್ಯಾಂಗ್​​ಸ್ಟರ್ ಸಿನಿಮಾ ಆಗಿದ್ದರೂ ಸಹ ಆಳದಲ್ಲಿ ಅದು ಮಾನವೀಯತೆ ಪ್ರತಿಪಾದಿಸುವ ಸಿನಿಮಾ ಆಗಿದೆ. ಗೀತು ಮೋಹನ್​​ದಾಸ್ ಅವರು ವಿಶಿಷ್ಟವಾದ ಸಿನಿಮಾ ಮಾಡಿದ್ದಾರೆ’ ಎಂದಿದ್ದಾರೆ ಯಶ್.

‘ಟಾಕ್ಸಿಕ್’ ಸಿನಿಮಾದ ಟೀಸರ್​ಗಳಲ್ಲಿ ಸಖತ್ ಹಿಂಸಾತ್ಮಕವಾಗಿ ಯಶ್ ಕಾಣಿಸಿಕೊಂಡಿದ್ದಾರೆ. ಟೀಸರ್ ಬಿಡುಗಡೆ ಆದಾಗ ಸಿನಿಮಾದಲ್ಲಿರುವ ಹಿಂಸೆಯ ಬಗ್ಗೆ ಕೆಲವರು ತಕರಾರು ಎತ್ತಿದ್ದರು. ಆದರೆ ತಮ್ಮ ಸಿನಿಮಾದ ಆಶಯ ಮಾನವೀಯತೆ ಎಂದು ಯಶ್ ಹೇಳಿದ್ದಾರೆ. ‘ಟಾಕ್ಸಿಕ್’ ಸಿನಿಮಾನಲ್ಲಿ ಯಶ್ ಅವರೊಂದಿಗೆ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್, ತಾರಾ ಸುತಾರಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಟಿಸಿಎಸ್ ಪ್ರಕರಣ: ತನಿಖೆ ತೀವ್ರ, ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ – Kannada News | TCS Nashik Probe: Conversion Attempts & Sexual Harassment Claims Lead to WFH, NIA

ಮುಂಬೈ, ಏಪ್ರಿಲ್ 16: ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಚೇರಿಯಲ್ಲಿ ಕೇಳಿಬಂದಿರುವ ಮತಾಂತರ ಪ್ರಯತ್ನ ಹಾಗೂ ಲೈಂಗಿಕ ಕಿರುಕುಳದ ಗಂಭೀರ ಆರೋಪಗಳು ಈಗ ರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿವೆ. ಪ್ರಕರಣದ ಹಿನ್ನೆಲೆಯಲ್ಲಿ ತನಿಖೆ ತೀವ್ರಗೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನೌಕರರಿಗೆ ವರ್ಕ್ ಫ್ರಮ್ ಹೋಮ್ (WFH) ಸೂಚಿಸಲಾಗಿದೆ. ನಾಸಿಕ್ ಪೊಲೀಸರು ತನಿಖೆ ವಿಸ್ತರಿಸುತ್ತಿದ್ದು, ಎನ್​ಐಎ, ಎಟಿಎಸ್ (ಭಯೋತ್ಪಾದನಾ ನಿಗ್ರಹ ದಳ) ಹಾಗೂ ರಾಜ್ಯ ಗುಪ್ತಚರ ಘಟಕಗಳ ಸಹಾಯ ಪಡೆಯುತ್ತಿದ್ದಾರೆ.

ಏನಿದು ಟಿಸಿಎಸ್ ಪ್ರಕರಣ?

ನಾಸಿಕ್‌ನ ಟಿಸಿಎಸ್ ಘಟಕದ ಹಿರಿಯ ಅಧಿಕಾರಿಯೊಬ್ಬರು ಉದ್ಯೋಗಿಗಳಿಗೆ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಮತ್ತು ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ವಿಷಯವು ಸ್ಥಳೀಯವಾಗಿ ಉದ್ವಿಗ್ನತೆಗೆ ಕಾರಣವಾಗಿದ್ದು, ಕಂಪನಿಯ ಆಂತರಿಕ ಶಿಸ್ತು ಸಮಿತಿ ಹಾಗೂ ಬಾಹ್ಯ ಸಂಸ್ಥೆಗಳು ತನಿಖೆಗೆ ಇಳಿದಿವೆ.

ತನಿಖಾ ಸಂಸ್ಥೆಗಳ ಬಿರುಸಿನ ಕ್ರಮ

ಈ ದೂರುಗಳನ್ನು ಗಂಭೀರವಾಗಿ ಪರಿಗಣಿಸಿರುವ ಟಿಸಿಎಸ್ ಆಡಳಿತ ಮಂಡಳಿ, ದೆಹಲಿಯಿಂದ ವಿಶೇಷ ತಂಡವೊಂದನ್ನು ನಾಸಿಕ್‌ಗೆ ಕಳುಹಿಸಿಕೊಟ್ಟಿದೆ. ಈ ತಂಡವು ಈಗಾಗಲೇ ಉದ್ಯೋಗಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಿದೆ.

ಇದನ್ನೂ ಓದಿ: ಹಿಜಾಬ್ vs ಕುಂಕುಮ; ವಿವಾದ ಸೃಷ್ಟಿಸಿದ ಲೆನ್ಸ್​ಕಾರ್ಟ್ ಪಾಲಿಸಿ ಡಾಕ್ಯುಮೆಂಟ್; ಆನ್​ಲೈನ್​ನಲ್ಲಿ ತಕರಾರು

ಕಾರ್ಮಿಕ ಉಪ ಆಯುಕ್ತರ ಕಚೇರಿಯ ತಂಡವು ಇತ್ತೀಚೆಗೆ ಕಚೇರಿಯ ಮೇಲೆ ದಾಳಿ ನಡೆಸಿತ್ತು. ದಾಳಿಯ ವೇಳೆ ಕಚೇರಿಯಲ್ಲಿ ಉದ್ಯೋಗಿಗಳು ಇರಲಿಲ್ಲವಾದರೂ, ತಂಡವು ‘ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ’ಯ ಅಡಿಯಲ್ಲಿ ಕೆಲವು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದೆ.

ಪ್ರಕರಣದ ಗಂಭೀರತೆ ಅರಿತು ರಾಷ್ಟ್ರೀಯ ಮಹಿಳಾ ಆಯೋಗದ (NCW) ತಂಡವು ಏಪ್ರಿಲ್ 18 ರಂದು ನಾಸಿಕ್‌ಗೆ ಭೇಟಿ ನೀಡಲಿದ್ದು, ಕಿರುಕುಳಕ್ಕೊಳಗಾದ ಮಹಿಳಾ ಉದ್ಯೋಗಿಗಳೊಂದಿಗೆ ನೇರ ವಿಚಾರಣೆ ನಡೆಸಲಿದೆ.

ಮನೆಯಿಂದ ಕೆಲಸ ಮಾಡುವಂತೆ ಉದ್ಯೋಗಿಗಳಿಗೆ ಸೂಚನೆ

ಕಚೇರಿ ಆವರಣದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ನಡೆಯುತ್ತಿರುವ ತನಿಖೆಯ ದೃಷ್ಟಿಯಿಂದ, ಸುಮಾರು 150 ಉದ್ಯೋಗಿಗಳಿಗೆ ಸೋಮವಾರದಿಂದ ಮನೆಯಿಂದಲೇ ಕೆಲಸ ಮಾಡುವಂತೆ (Work From Home) ಸೂಚಿಸಲಾಗಿದೆ. ತನಿಖೆಗೆ ಯಾವುದೇ ಅಡ್ಡಿಯಾಗದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಐಟಿ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ, ಮತಾಂತರಕ್ಕೆ ಯತ್ನ, ನಾಸಿಕ್​ನ ಟಿಸಿಎಸ್ ಕಚೇರಿಗೆ ಬೀಗ

ಟಿಸಿಎಸ್ ಸ್ಪಷ್ಟನೆ

ಕಂಪನಿಯು ತನ್ನ ಉದ್ಯೋಗಿಗಳ ಸುರಕ್ಷತೆ ಮತ್ತು ನೈತಿಕತೆಗೆ ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ತಿಳಿಸಿದೆ. ಆಂತರಿಕ ವಿಚಾರಣೆ ಪ್ರಗತಿಯಲ್ಲಿದ್ದು, ದೋಷ ಸಾಬೀತಾದಲ್ಲಿ ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಂಪನಿ ಮೂಲಗಳು ತಿಳಿಸಿವೆ.
ಪ್ರಸ್ತುತ, ವಿವಿಧ ತನಿಖಾ ಸಂಸ್ಥೆಗಳು ಈ ಪ್ರಕರಣದ ಪ್ರತಿಯೊಂದು ಮಗ್ಗುಲನ್ನೂ ಕೂಲಂಕಷವಾಗಿ ಪರಿಶೀಲಿಸುತ್ತಿವೆ.

ಇತರ ಐಟಿ ಕಂಪನಿಗಳ ಮೇಲೂ ಕಣ್ಣು

ಟಿಸಿಎಸ್​ನಲ್ಲಿ ಲೈಂಗಿಕ ಕಿರುಕುಳ ಮತಾಂತರ ಪಿತೂರಿ ಆರೋಪಗಳು ಕೇಳಿಬರುತ್ತಿರುವಂತೆಯೇ ಇತರ ಕಾರ್ಪೊರೇಟ್ ಸಂಸ್ಥೆಗಳತ್ತ ಎಲ್ಲರ ಚಿತ್ತ ನೆಡಲು ಶುರುವಾಗಿದೆ. ಲೆನ್ಸ್​ಕಾರ್ಟ್​ನಲ್ಲಿ ಉದ್ಯೋಗಿಗಳು ಹಿಜಾಬ್ ಹಾಕಬಹುದು, ಆದರೆ, ಸಿಂದೂರ ಇಡುವಂತಿಲ್ಲ ಎನ್ನುವ ನಿಯಮ ಇರುವುದನ್ನು ಕೆಲವರು ಎತ್ತಿ ತೋರಿಸಿದ್ದಾರೆ. ಇನ್ಫೋಸಿಸ್​ನಲ್ಲಿ ಲೈಂಗಿಕ ಕಿರುಕುಳ ಘಟನೆ ನಡೆಯುತ್ತಿರುವುದನ್ನು ಯಾರೋ ಬೊಟ್ಟು ಮಾಡಿದ್ದಾರೆ. ಟೆಕ್ ಮಹೀಂದ್ರ ಕಂಪನಿಯಲ್ಲಿ ರಂಜಾನ್ ಮುಗಿಯುವವರೆಗೂ ಪಾದರಕ್ಷೆಮುಕ್ತ ವಲಯ ನಿರ್ಮಿಸಿದ ಘಟನೆಯನ್ನು ಮತ್ತೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ರೋಹಿತ್ ಶರ್ಮಾ ಗಾಯಗೊಂಡ ಬೆನ್ನಲ್ಲೇ ಮುಂಬೈ ತಂಡಕ್ಕೆ ಬದಲಿ ಆಟಗಾರನ ಎಂಟ್ರಿ – Kannada News | IPL 2026: Rohit Sharma’s Injury Hits MI Hard; Krish Bhagat Replaces Atharva Ankolekar

ಐಪಿಎಲ್ 2026 (IPL 2026) ರ ಆವೃತ್ತಿಯಲ್ಲಿ ಸರಣಿ ಸೋಲುಗಳಿಂದ ಬಳಲುತ್ತಿರುವ ಮುಂಬೈ ಇಂಡಿಯನ್ಸ್ (Mumbai Indians) ತಂಡಕ್ಕೆ ರೋಹಿತ್ ಶರ್ಮಾ (Rohit Sharma) ಅವರ ಗಾಯ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಈ ನಡುವೆ ಗಾಯದಿಂದಾಗಿ ಪಂದ್ಯಾವಳಿಯಿಂದ ಹೊರಗುಳಿದ ಯುವ ಆಟಗಾರ ಅಥರ್ವ ಅಂಕೋಲೆಕರ್ ಬದಲಿಗೆ ಕ್ರಿಶ್ ಭಗತ್ ಎಂಬ ಹೊಸ ಹುಡುಗನನ್ನು ಮುಂಬೈ ಫ್ರಾಂಚೈಸಿ ತಂಡಕ್ಕೆ ಸೇರಿಸಿಕೊಂಡಿದೆ. ಮೊಣಕಾಲಿನ ಗಾಯದಿಂದಾಗಿ ಅಂಕೋಲೆಕರ್ ಸೀಸನ್​ ಆರಂಭಕ್ಕೂ ಮುನ್ನವೇ ತಂಡವನ್ನು ತೊರೆಯಬೇಕಾಯಿತು. ಇದೀಗ ಮುಂಬೈ ಆಡಳಿತ ಮಂಡಳಿ ನಾಲ್ಕು ಪಂದ್ಯಗಳ ನಂತರ ಅಧಿಕೃತವಾಗಿ ಬದಲಿ ಆಟಗಾರನನ್ನು ಘೋಷಿಸಿದೆ. ಇಂದು ಪಂಜಾಬ್ ಕಿಂಗ್ಸ್ ವಿರುದ್ಧದ ನಿರ್ಣಾಯಕ ಪಂದ್ಯಕ್ಕೂ ಮುನ್ನ ಈ ಬದಲಾವಣೆ ನಡೆದಿರುವುದು ಗಮನಾರ್ಹ.

ಕ್ರಿಶ್ ಭಗತ್ ಯಾರು?

21 ವರ್ಷದ ಕ್ರಿಶ್ ಭಗತ್ ಆಲ್‌ರೌಂಡರ್ ಆಗಿದ್ದು, ದೇಶೀಯ ಕ್ರಿಕೆಟ್‌ನಲ್ಲಿ ಪಂಜಾಬ್ ರಾಜ್ಯವನ್ನು ಪ್ರತಿನಿಧಿಸುತ್ತಾರೆ. ಕ್ರಿಶ್ ಉತ್ತಮ ವೇಗದ ಬೌಲರ್ ಮಾತ್ರವಲ್ಲ, ಸಮರ್ಥ ಕೆಳ ಕ್ರಮಾಂಕದ ಬ್ಯಾಟರ್ ಕೂಡ. ಅವರು ಕಳೆದ ಎರಡು ವರ್ಷಗಳಿಂದ ಮುಂಬೈ ಇಂಡಿಯನ್ಸ್ ಟ್ರಯಲ್ಸ್‌ನಲ್ಲಿ ಭಾಗವಹಿಸುತ್ತಿದ್ದಾರೆ. ಈ ವರ್ಷ ಡಿವೈ ಪಾಟೀಲ್ ಟಿ20 ಕಪ್‌ನಲ್ಲಿ ರಿಲಯನ್ಸ್ ತಂಡದ ಪರ ಆಡುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದರು.

ದಾಖಲೆಗಳು ಹೇಗಿವೆ?

ಕ್ರಿಶ್ ಭಗತ್ ಇಲ್ಲಿಯವರೆಗೆ ಆಡಿರುವ 7 ಪ್ರಥಮ ದರ್ಜೆ ಪಂದ್ಯಗಳಲ್ಲಿ 145 ರನ್ ಗಳಿಸಿದ್ದು 7 ವಿಕೆಟ್‌ಗಳನ್ನು ಪಡೆದಿದ್ದಾರೆ. ಲಿಸ್ಟ್-ಎ ಕ್ರಿಕೆಟ್‌ನಲ್ಲಿ 9 ಪಂದ್ಯಗಳನ್ನು ಆಡಿರುವ ಅವರು 52 ರನ್​ಗಳೊಂದಿಗೆ 9 ವಿಕೆಟ್‌ಗಳನ್ನು ಪಡೆದಿದ್ದಾರೆ.

IPL 2026: ಇದಕ್ಕಿದ್ದಂತೆ ಐಪಿಎಲ್ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದ ಬಿಸಿಸಿಐ

ಮುಂಬೈಗೆ ಇಂದು ನಿರ್ಣಾಯಕ ಪಂದ್ಯ

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ಕಳೆದ ನಾಲ್ಕು ಪಂದ್ಯಗಳಲ್ಲಿ ಕೇವಲ ಒಂದನ್ನು ಮಾತ್ರ ಗೆದ್ದಿದೆ. ರೋಹಿತ್ ಶರ್ಮಾ ಅವರ ಫಿಟ್ನೆಸ್ ಕೂಡ ತಂಡಕ್ಕೆ ಕಳವಳಕಾರಿಯಾಗಿದೆ. ಈ ಗಾಯದಿಂದಾಗಿ ರೋಹಿತ್ ಪಂಜಾಬ್ ವಿರುದ್ಧ ಆಡಲು ಸಾಧ್ಯವಾಗುವುದಿಲ್ಲ ಎಂದು ಹೇಳಲಾಗುತ್ತಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಮುಂಬೈ ಇಂದು ವಾಂಖೆಡೆ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೊಟ್ಟೆಗೂ ಇಲ್ಲ, ಜುಟ್ಟಿಗೂ ಇಲ್ಲ: ಬಿಸಿಲ ತಾಪಕ್ಕೆ ಕಮರಿದ ಹೂ; ನಷ್ಟದ ಸುಳಿಯಲ್ಲಿ ಬೆಳೆಗಾರರು – Kannada News | Chikkaballapur flower cultivation withers heatwave devastates farmers and blooms

ತಂಪಾದ ಹವಗುಣಕ್ಕೆ ಹೆಸರಾಗಿದ್ದ ಜಿಲ್ಲೆಯಲ್ಲಿ ಈಗ ಉಷ್ಣಾಂಶ ದಾಖಲೆ ಮಟ್ಟಕ್ಕೇರಿದೆ. ಚೆಂಡು ಹೂ, ಗುಲಾಬಿ ಸೇರಿದಂತೆ ವಿವಿಧ ತಳಿಯ ಹೂವುಗಳು ಗಿಡದಲ್ಲೇ ಒಣಗುತ್ತಿದ್ದು, ಬಿಸಿಲಿನ ತಾಪ ಹೂ ಬೆಳೆಗಾರರ ಬದುಕನ್ನು ಕಮರಿಸುತ್ತಿದೆ.

Source link

ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ – Kannada News | Free Biryani, Saree Draw Crowd Rush in Tekal Village of Kolar’s Malur

ಕೋಲಾರ, ಏಪ್ರಿಲ್​​ 16: ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ನಡೆದ ನೂತನ ಐಟಿಐ ಕಾಲೇಜು ಕಟ್ಟಡ ಲೋಕಾರ್ಪಣೆ ಹಾಗೂ ಕಟ್ಟಡ ಕಾರ್ಮಿಕರ ವಸತಿ ಶಾಲೆಯ ಗುದ್ದಲಿ ಪೂಜೆ ವೇಳೆ ಚಿಕನ್ ಬಿರಿಯಾನಿ ಮತ್ತು ಸೀರೆಗಾಗಿ ಜನ ಮುಗಿಬಿದ್ದ ಪ್ರಸಂಗ ನಡೆದಿದೆ. ಒಬ್ಬರ ಮೇಲೊಬ್ಬರು ಬಿದ್ದು ನೂಕುನುಗ್ಗಲು ಉಂಟಾದ ಕಾರಣ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಡಬೇಕಾಯಿತು. ಶಾಸಕ ನಂಜೇಗೌಡ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, MLC ಅನಿಲ್ ಕುಮಾರ್ ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪುಣೆ–ಬೆಂಗಳೂರು ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ: ಕಾಮಗಾರಿ ಯಾವಾಗ ಶುರು? ಏನೆಲ್ಲ ಉಪಯೋಗ? – Kannada News | Pune Bengaluru Greenfield Expressway: Final Approval Nears, Halving Travel Time

ಬೆಂಗಳೂರು, ಏಪ್ರಿಲ್​​ 16: ಕೇಂದ್ರ ಸರ್ಕಾರದಿಂದ ಶೀಘ್ರವೇ ಶುಭಸುದ್ದಿ ಸಿಗುವ ಸಾಧ್ಯತೆಯಿದ್ದು, ಪ್ರಸ್ತಾವಿತ ಪುಣೆ–ಬೆಂಗಳೂರು ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ ಯೋಜನೆಗೆ ಅಂತಿಮ ಮುದ್ರೆಗೆ ದಿನಗಣನೆ ಆರಂಭವಾಗಿದೆ. ಕೆಲವಾರಗಳಲ್ಲಿ ಇದರ ಮಾರ್ಗರೇಖೆಗೆ ಕೇಂದ್ರ ಅನುಮತಿ ನೀಡುವ ಸಾಧ್ಯತೆ ಇದೆ. ಭಾರತಮಾಲಾ ಯೋಜನೆಯಡಿ ರೂಪಿಸಲಾದ 25 ಗ್ರೀನ್‌ಫೀಲ್ಡ್ ಕಾರಿಡಾರ್‌ಗಳಲ್ಲಿ ಇದೂ ಒಂದಾಗಿದ್ದು, ಅನುಮೋದನಾ ಪ್ರಕ್ರಿಯೆ ಈಗ ಅಂತಿಮ ಹಂತದಲ್ಲಿದೆ. ಆ ಬಳಿಕ ಭೂಸ್ವಾಧೀನ ಪ್ರಕ್ರಿಯೆ ನಡೆದು, ಕಾಮಗಾರಿಯೂ ಆರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಮಾರು 700 ಕಿ.ಮೀ ಉದ್ದದ ಈ ಎಕ್ಸ್‌ಪ್ರೆಸ್‌ವೇ 6ರಿಂದ 8 ಲೇನ್‌ಗಳನ್ನು ಹೊಂದಿರಲಿದೆ. ಒಟ್ಟು ವೆಚ್ಚವನ್ನು 45 ಸಾವಿರ ಕೋಟಿ ರೂಪಾಯಿಗಳಿಂದ 50 ಸಾವಿರ ಕೋಟಿ ಎಂದು ಅಂದಾಜಿಲಸಲಾಗಿದೆ. ಈ ಮಾರ್ಗವು ಮಹಾರಾಷ್ಟ್ರ ಮತ್ತು ಕರ್ನಾಟಕದ ಪ್ರಮುಖ ಜಿಲ್ಲೆಗಳ ಮೂಲಕ ಸಾಗಲಿದೆ. ಪುಣೆಯಿಂದ ಆರಂಭವಾಗಿ ಸತಾರಾ, ಸಾಂಗ್ಲಿ ಮೂಲಕ ಸಾಗಲಿರುವ ಈ ಮಾರ್ಗ ಬಳಿಕ ಬೆಳಗಾವಿ, ವಿಜಯನಗರ ಮತ್ತು ದಾವಣಗೆರೆ ಮೂಲಕ ಬೆಂಗಳೂರು ತಲುಪಲಿದೆ.

ಇದನ್ನೂ ಓದಿ: ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಇನ್ನಷ್ಟು ವಿಳಂಬ? ಕಾರಣ ಇಲ್ಲಿದೆ

ಪುಣೆ–ಬೆಂಗಳೂರು ನಡುವಿನ ರಸ್ತೆ ಪ್ರಯಾಣಕ್ಕೆ ಟ್ರಾಫಿಕ್ ದಟ್ಟಣೆ ಮತ್ತು ಕಿರಿದಾದ ಮಾರ್ಗಗಳ ಕಾರಣದಿಂದ ಹಾಲಿ ಸುಮಾರು 14ರಿಂದ 15 ಗಂಟೆಗಳು ಬೇಕಾಗುತ್ತವೆ. ಆದರೆ ಈ ಎಕ್ಸ್‌ಪ್ರೆಸ್‌ವೇ ಪೂರ್ಣಗೊಂಡ ನಂತರ ಪ್ರಯಾಣ ಸಮಯವು ಸುಮಾರು 7 ಗಂಟೆಗಳವರೆಗೆ ಕಡಿಮೆಯಾಗುವ ನಿರೀಕ್ಷೆ ಇದೆ. ಇದರಿಂದ ಪ್ರಯಾಣಿಕರಿಗೂ, ಸರಕು ಸಾಗಣೆ ಮತ್ತು ಲಾಜಿಸ್ಟಿಕ್ಸ್ ಕ್ಷೇತ್ರಕ್ಕೂ ದೊಡ್ಡ ಅನುಕೂಲವಾಗುವ ನಿರೀಕ್ಷೆ ಇದೆ.

ಈ ಎಕ್ಸ್‌ಪ್ರೆಸ್‌ವೇ ಸಂಪರ್ಕವನ್ನು ಸುಧಾರಿಸುವುದರ ಜೊತೆಗೆ ಆರ್ಥಿಕ ಬೆಳವಣಿಗೆಗೂ ಉತ್ತೇಜನ ನೀಡಲಿದೆ. ಮಾರ್ಗದ ಸುತ್ತಮುತ್ತ ಕೈಗಾರಿಕೆಗಳು, ಗೋದಾಮುಗಳು, ಲಾಜಿಸ್ಟಿಕ್ಸ್ ಪಾರ್ಕ್‌ಗಳು ಮತ್ತು ಇತರೆ ವ್ಯಾಪಾರಿಕ ಚಟುವಟಿಕೆಗಳು ಬೆಳೆಯುವ ಸಾಧ್ಯತೆ ಇದೆ. ವೇಗವಾದ ಪ್ರಯಾಣ ಮತ್ತು ಉತ್ತಮ ರಸ್ತೆ ಮೂಲಸೌಕರ್ಯದೊಂದಿಗೆ ಪುಣೆ–ಬೆಂಗಳೂರು ಎಕ್ಸ್‌ಪ್ರೆಸ್‌ವೇ ಪಶ್ಚಿಮ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಪ್ರಮುಖ ಸಂಪರ್ಕ ಮಾರ್ಗವಾಗಿ ರೂಪುಗೊಳ್ಳಲಿದ್ದು, ಪ್ರಯಾಣಿಕರು ಹಾಗೂ ವಾಣಿಜ್ಯ ಚಟುವಟಿಕೆಗಳಿಗೆ ಮಹತ್ವದ ಬೆಂಬಲ ನೀಡಲಿದೆ ಎಂದು ಅಧಿಕಾರಿಗಳು ತಿಳಿಸಿರೋದಾಗಿ ಬೆಂಗಳೂರು ನೌ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:31 pm, Thu, 16 April 26

Source link

Exit mobile version