ವಿವಾದದ ಬೆನ್ನಲ್ಲೇ ಭೂಕಾಂತ್​​ಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ – Kannada News | Arnataka Govt Revokes BJP Leader Bhookant’s Cabinet Rank Amidst Congress Backlash

ಭೂಕಾಂತ್​​ಗೆ ನೀಡಲಾಗಿದ್ದ ಸಚಿವ ಸಂಪುಟದ ಸ್ಥಾನಮಾನ ಹಿಂಪಡೆದ ಸರ್ಕಾರImage Credit source: Tv9 Kannada

ಬೆಂಗಳೂರು, ಫೆಬ್ರವರಿ 11: ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಆ ಪೈಕಿ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ನಿಯಮಿತ ಅಧ್ಯಕ್ಷರಾಗಿರುವ ಭೂಕಾಂತ್​​ ಅವರಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದರ ವಿರುದ್ಧ ಕಾಂಗ್ರೆಸ್​​ ಪಾಳಯದಿಂದ ಭಾರೀ ಆಕ್ಷೇಪ ಕೇಳಿಬಂದಿತ್ತು. ಬಿಜೆಪಿ ನಾಯಕನಿಗೆ ಕಾಂಗ್ರೆಸ್​​ ಸರ್ಕಾರದಿಂದ ಈ ಸ್ಥಾನ ಮಾನ ನೀಡಿರೋದು ಎಷ್ಟು ಸರಿ ಎಂಬ ವಿರೋಧ ಕೇಳಿಬಂದ ಬೆನ್ನಲ್ಲೇ ಭೂಕಾಂತ್​​ಗೆ ನೀಡಲಾಗಿದ್ದ ಸಚಿವ ಸಂಪುಟದ ಸ್ಥಾನಮಾನವನ್ನು ಸರ್ಕಾರವೀಗ ಹಿಂಪಡೆದಿದೆ. ಕಾರ್ಯಕರ್ತರ ಅಸಮಾಧಾನದ ಬೆನ್ನಲ್ಲೇ ಈ ತೀರ್ಮಾನ ಮಾಡಲಾಗಿದೆ.

ಭೂಕಾಂತ್ ಅವರ ಪತ್ನಿ ಕೂಡ ಬಿಜೆಪಿಯಿಂದ ಜಿಲ್ಲಾ ಪಂಚಾಯತಿ ಸದಸ್ಯೆಯಾಗಿದ್ದರು. ಹೀಗಿರುವಾಗ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿರುವ ಹಿನ್ನೆಲೆ ಕಾಂಗ್ರೆಸ್​​ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇಲ್ಲಿಯವರೆಗೂ ಪ್ರಮುಖ ನಿಗಮಗಳ ಅಧ್ಯಕ್ಷರಾಗಿರುವ ಶಾಸಕರಿಗಷ್ಟೇ ದೊರೆಯುತ್ತಿದ್ದ ಈ ಸ್ಥಾನಮಾನವನ್ನು ಎಲ್ಲ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಿಗೂ ಅನ್ವಯಿಸುವಂತೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ ಸರಿ. ಆದರೆ ಕಾಂಗ್ರೆಸ್​​ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿರುವಾಗ ಬಿಜೆಪಿ ಮುಖಂಡನಿಗೆ ಈ ಸ್ಥಾನಮಾನ ನೀಡಿದ್ದು ಯಾಕೆ ಎಂದು ಪ್ರಶ್ನಿಸಲಾಗಿತ್ತು.

ಇದನ್ನೂ ಓದಿ: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಬಿಜೆಪಿ ಮುಖಂಡನಿಗೆ ರಾಜ್ಯ ಸಚಿವ ಸ್ಥಾನಮಾನ!; ‘ಕೈ’ ಕಾರ್ಯಕರ್ತರ ಕಿಡಿ

ಕಿಡಿ ಕಾರಿದ್ದ ಡಿ.ಕೆ. ಸುರೇಶ್​​

ಕಾರ್ಯಕರ್ತರು ಮಾತ್ರವಲ್ಲದೆ ತಮ್ಮದೇ ಸರ್ಕಾರದ ವಿರುದ್ಧ ಮಾಜಿ ಸಂಸದ, ಡಿಸಿಎಂ ಡಿಕೆಶಿ ಸಹೋದರ ಡಿ.ಕೆ. ಸುರೇಶ್​​ ಕೂಡ ಲೇವಡಿ ಮಾಡದ್ದರು. ನಮ್ಮದು ಸರ್ವಧರ್ಮ ಪಾಲಿಸಿಯಾಗಿದ್ದು, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲರೂ ನಮ್ಮ ಪಕ್ಷದಲ್ಲೇ ಇದ್ದಾರೆ. ಹೀಗಾಗಿ ಎಲ್ಲ ವಿಚಾರದಲ್ಲೂ ಹೊರಗಿನಿಂದ ಬಂದ ಅತಿಥಿಗಳಿಗೆ ಮೊದಲ ಆದ್ಯತೆ ನೀಡಿ, ಕಾಂಗ್ರೆಸ್ ಕಾರ್ಯಕರ್ತರಿಗೆ ಎರಡನೇ‌ ಆದ್ಯತೆ ನೀಡುತ್ತೇವೆ ಎಂದು ಪರೋಕ್ಷವಾಗಿ ತಿವಿದಿದ್ದರು.

ವರದಿ: ಈರಣ್ಣಾ ಬಸವ, ಟಿವಿ9 ಕನ್ನಡ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:01 pm, Wed, 11 February 26

Source link

AUS vs IRE: ಆಸ್ಟ್ರೇಲಿಯಾಕ್ಕೆ ಸುಲಭ ತುತ್ತಾದ ಐರ್ಲೆಂಡ್ – Kannada News | T20 World Cup 2026: Australia Dominates Ireland in Opener; Ellis, Zampa Star

ಮಾಜಿ ಚಾಂಪಿಯನ್ ಆಸ್ಟ್ರೇಲಿಯಾ 2026 ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಗೆಲುವಿನೊಂದಿಗೆ ತನ್ನ ಅಭಿಯಾನವನ್ನು ಆರಂಭಿಸಿದೆ. ಕೊಲಂಬೊದಲ್ಲಿ ನಡೆದ ತನ್ನ ಮೊದಲ ಗುಂಪು ಹಂತದ ಪಂದ್ಯದಲ್ಲಿ ಆಸ್ಟ್ರೇಲಿಯಾ, ಐರ್ಲೆಂಡ್ ( Australia vs Ireland) ತಂಡವನ್ನು 67 ರನ್‌ಗಳಿಂದ ಸುಲಭವಾಗಿ ಸೋಲಿಸಿ ಗೆಲುವಿನ ಖಾತೆ ತೆರೆದಿದೆ. ನಾಯಕ ಮಿಚೆಲ್ ಮಾರ್ಷ್ ಅನುಪಸ್ಥಿತಿಯಲ್ಲಿ ಟ್ರಾವಿಸ್ ತಂಡವನ್ನು ಮುನ್ನಡೆಸಿದರು. ಅದರಂತೆ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 182 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಐರ್ಲೆಂಡ್ ಕೇವಲ 115 ರನ್‌ಗಳಿಗೆ ಆಲೌಟ್ ಆಯಿತು. ಆಸೀಸ್ ಪರ ಬೌಲಿಂಗ್​ನಲ್ಲಿ ಮಿಂಚಿದ ನಾಥನ್ ಎಲ್ಲಿಸ್ ನಾಲ್ಕು ವಿಕೆಟ್‌ಗಳನ್ನು ಕಬಳಿಸಿ ಮಿಂಚಿದರು.

182 ರನ್ ಕಲೆಹಾಕಿದ ಆಸೀಸ್

ದುರ್ಬಲ ಐರ್ಲೆಂಡ್ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ತಂಡಕ್ಕೆ ಹೇಳಿಕೊಳ್ಳುವಂತಹ ಆರಂಭ ಸಿಗಲಿಲ್ಲ. ಆದಾಗ್ಯೂ ಆ ಬಳಿಕ ಬಂದ ಜೋಶ್ ಇಂಗ್ಲಿಸ್ (37), ಮಾರ್ಕಸ್ ಸ್ಟೊಯಿನಿಸ್ (45) ಮತ್ತು ಕ್ಯಾಮರೂನ್ ಗ್ರೀನ್ (21) ಅವರ ಗಮನಾರ್ಹ ಇನ್ನಿಂಗ್ಸ್ ತಂಡವನ್ನು 182 ರನ್‌ಗಳ ಬಲವಾದ ಮೊತ್ತಕ್ಕೆ ಕೊಂಡೊಯ್ಯಿತು.

ಎಲ್ಲಿಸ್-ಝಂಪಾ ಮಾರಕ ದಾಳಿ

ಆಸೀಸ್ ಬೌಲಿಂಗ್ ಮುಂದೆ ಐರ್ಲೆಂಡ್ ತಂಡಕ್ಕೆ ಈ ಗುರಿ ಬೆನ್ನಟ್ಟುವುದು ಕಷ್ಟಕರ ಎಂಬುದು ಆರಂಭದಲ್ಲೇ ಸ್ಪಷ್ಟವಾಗಿತ್ತು. ಅದರಂತೆ ನಾಥನ್ ಎಲಿಸ್ ಬೌಲಿಂಗ್​ಗೆ ಐರ್ಲೆಂಡ್​ ಬ್ಯಾಟರ್​​ಗಳ ಬಳಿ ಉತ್ತರವಿರಲಿಲ್ಲ. ಇದರ ಜೊತೆಗೆ ನಾಯಕ ಪಾಲ್ ಸ್ಟಿರ್ಲಿಂಗ್ ಗಾಯಗೊಂಡು ನಿವೃತ್ತರಾದರೆ, ಮೂರನೇ ಓವರ್‌ನ ಹೊತ್ತಿಗೆ, ತಂಡದ ಪ್ರಮುಖ ಮೂರು ವಿಕೆಟ್‌ಗಳು ಪತನಗೊಂಡವು. ಅವುಗಳಲ್ಲಿ ಎರಡನ್ನು ಎಲಿಸ್ ಒಂದೇ ಓವರ್‌ನಲ್ಲಿ ಪಡೆದರು. ಏಳನೇ ಓವರ್‌ನ ವೇಳೆಗೆ, ಐರ್ಲೆಂಡ್ ಕೇವಲ 43 ರನ್‌ಗಳಿಗೆ ಐದು ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

T20 World Cup: 2ನೇ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗುಡ್​ ನ್ಯೂಸ್

ತಂಡದ ಪರ ಏಕಾಂಗಿ ಹೋರಾಟ ನೀಡಿದ ಜಾರ್ಜ್ ಡಾಕ್ರೆಲ್ 41 ರನ್ ಬಾರಿಸಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ. ಇನ್ನು ಲೆಗ್-ಸ್ಪಿನ್ನರ್ ಆಡಮ್ ಜಂಪಾ ಮಧ್ಯಮ ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಕಬಳಿಸಿ ಐರ್ಲೆಂಡ್ ತಂಡವನ್ನು ಬೇಗನೇ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಎಲಿಸ್ ತಮ್ಮ 3.5 ಓವರ್‌ಗಳಲ್ಲಿ ಕೇವಲ 12 ರನ್‌ಗಳನ್ನು ನೀಡಿ ನಾಲ್ಕು ವಿಕೆಟ್‌ಗಳನ್ನು ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:09 pm, Wed, 11 February 26

Source link

93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ – Kannada News | Jayamala said no one has has power to oppose film chamber decision

ಕನ್ನಡ ಚಿತ್ರರಂಗದ (Sandalwood) 93ನೇ ವರ್ಷದ ಸಂಭ್ರಮಾಚರಣೆಯನ್ನು ಮಾಡಬೇಕು ಎಂದು ನೂತನ ಅಧ್ಯಕ್ಷೆ ಜಯಮಾಲ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ಇದಕ್ಕೆ ನಿರ್ಮಾಪಕರ ಸಂಘ ಆಕ್ಷೇಪ ವ್ಯಕ್ತಪಡಿಸಿದ್ದು, ಕೆ ಮಂಜು, ಪ್ರಿಯಾ ಹಾಸನ್ ಇನ್ನೂ ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಫಿಲಂ ಚೇಂಬರ್​​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅಧ್ಯಕ್ಷೆ ಜಯಮಾಲ ಅವರು, 93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ ಎಂದು ನೇರವಾಗಿ ಹೇಳಿದ್ದಾರೆ. ಈ ನಿರ್ಧಾರಕ್ಕೂ ನಿರ್ಮಾಪಕರ ಸಂಘಕ್ಕೂ ಸಂಬಂಧ ಇಲ್ಲ’ ಎಂದಿದ್ದಾರೆ. ಜಯಮಾಲ ಹೇಳಿರುವುದೇನು? ವಿಡಿಯೋ ಇಲ್ಲಿದೆ..

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

T20 World Cup: 2ನೇ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗುಡ್​ ನ್ಯೂಸ್ – Kannada News | T20 World Cup 2026: India vs Namibia – Abhishek Sharma Discharged, Match Update

ಮೇಲೆ ಹೇಳಿದಂತೆ ಫೆಬ್ರವರಿ 12, ಗುರುವಾರ, ಟೀಂ ಇಂಡಿಯಾ ವಿಶ್ವಕಪ್‌ನ ಎರಡನೇ ಗುಂಪು ಹಂತದ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೂ ಮುನ್ನ ಅಭಿಷೇಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ತಂಡದ ತಲೆನೋವು ಕಡಿಮೆ ಮಾಡಿದೆ. ಆದರೆ ಅವರು ಈ ಪಂದ್ಯದಲ್ಲಿ ಆಡುವ ಸಾಧ್ಯತೆಗಳಿಲ್ಲ. ಏಕೆಂದರೆ ಮುಂಬರುವ ಪಂದ್ಯಗಳನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ವಿಶ್ರಾಂತಿ ನೀಡಬಹುದು.

Source link

ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಪರಾರಿ: ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು – Kannada News | Mother Emotional for Her Daughter Escaped With Muslim Man at mangaluru

ಮಂಗಳೂರು, (ಫೆಬ್ರವರಿ 11): ಅನ್ಯಕೋಮಿನ ಯುವಕನೊಂದಿಗೆ ಹಿಂದೂ (Hindu) ಯುವತಿ ಪರಾರಿಯಾಗಿರುವ ಘಟನೆ ಮಂಗಳೂರಿನ (Mangaluru) ಸುರತ್ಕಲ್​​ನಲ್ಲಿ ನಡೆದಿದೆ. ಸುರತ್ಕಲ್​ನ ಮುಕ್ಕ ಕಾಲೇಜಿನಲ್ಲಿ ಓದುತ್ತಿದ್ದ ಕಾಸರಗೋಡು ಆರ್.ಡಿ‌.ನಗರದ ಮೀಪುಗುರಿ ನಿವಾಸಿಯಾದ ವೈಶಾಲಿ ಪರಾರಿಯಾಗಿದ್ದು, ಜನವರಿ 31ರಂದು ಮಿದ್ಲಾಜ್ ಜತೆ ರಿಜಿಸ್ಟರ್​ ಮ್ಯಾರೇಜ್ ಆಗಿರುವ ಮಾಹಿತಿ ತಿಳಿದುಬಂದಿದೆ. ಆದ್ರೆ, ಮಗಳು ಸಂಪರ್ಕಕ್ಕೆ ಸಿಗದಿದ್ದರಿಂದ ಕಂಗಾಲಾಗಿರುವ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ವೈಶಾಲಿ ತಂದೆ ವಿದೇಶದಿಂದ ದೌಡಾಯಿಸಿದ್ದು, ಮಗಳಿಗಾಗಿ ಕಣ್ಣೀರಿಟ್ಟಿದ್ದಾರೆ. ಇನ್ನೊಂದೆಡೆ ವೈಶಾಲಿ ತಾಯಿಯೂ ಸಹ ಕಣ್ಣೀರುತ್ತಲ್ಲೇ ತಮ್ಮ ದುಖವನ್ನು ತೋಡಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು – Kannada News | Mangaluru: Hindu Young girl Escaped With other religion boy Case: her father came from abroad, sheds tears for daughter

ಮಂಗಳೂರು, ಫೆಬ್ರವರಿ 11: 23 ವರ್ಷದ ವೈಶಾಲಿ ಮನೆಯಲ್ಲಿ ಎಲ್ಲರಿಗೂ ಮುದ್ದು ಮಗಳು. ಓದಿ ಒಳ್ಳೆಯ ಕೆಲಸಕ್ಕೆ ಸೇರಬೇಕು ಎನ್ನುವ ಆಸೆಗೆ ತಕ್ಕಂತೆ ಪೋಷಕರು (parents) ಆಕೆಯನ್ನು ಕ್ರಿಮಿನಾಲಜಿಯಲ್ಲಿ ಡಿಗ್ರಿ ಓದಿಸುತ್ತಿದ್ದರು. ಆದರೆ ಓದಿ ಕೆಲಸ ಹಿಡಿಯಬೇಕಾದ ಮಗಳು ಅನ್ಯಕೋಮಿಯ ಯುವಕನೊಂದಿಗೆ ಪರಾರಿಯಾಗಿದ್ದಾಳೆ. ಇತ್ತ ಪೋಷಕರು ಮಗಳೇ ವಾಪಾಸ್ ಮನೆಗೆ ಬಾ ಅಂತಾ ಕಣ್ಣೀರಿಟ್ಟಿದ್ದಾರೆ.

ವೈಶಾಲಿ ಮಂಗಳೂರಿನ ಸುರತ್ಕಲ್ ಬಳಿಯ ಮುಕ್ಕಾದ ಕಾಲೇಜ್​ ಒಂದರಲ್ಲಿ ಓದುತ್ತಿರುವ ಕ್ರಿಮಿನಾಲಜಿ ಪದವಿ ವಿದ್ಯಾರ್ಥಿನಿ. ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯವರು. ಇನ್ನು ಈಕೆಯನ್ನು ಮದುವೆ ಮಾಡಿಕೊಂಡಿರುವನ ಹೆಸರು ಮೊಹಮ್ಮದ್ ವಿದ್ಲಾಜ್ ಪಿ.ಎಚ್. ಈತ ಕೇರಳದ ವಯನಾಡಿನವನು. ಈತ ಸುರತ್ಕಲ್​ನ ಜ್ಯುವೆಲ್ಲರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಇವರಿಬ್ಬರು ಜ.31ರಂದು ವಯನಾಡಿನ ರಿಜಿಸ್ಟರ್ ಕಚೇರಿಯಲ್ಲಿ ಮದುವೆ ಆಗಿರುವ ವಿಚಾರ ಸಾಮಾಜಿಕ ಜಾಲತಾಣದ ಮೂಲಕ ವೈಶಾಲಿ ಮನೆಯವರಿಗೆ ಗೊತ್ತಾಗಿದೆ.

ಆಕೆಯ ಬ್ರೈನ್ ವಾಶ್ ಮಾಡಲಾಗಿದೆ ಎಂದ ಪೋಷಕರು 

ರಿಜಿಸ್ಟರ್ ಮ್ಯಾರೇಜ್ ವಿಚಾರ ತನ್ನ ಪೋಷಕರಿಗೆ ಗೊತ್ತಾಗಿರುವುದು ವೈಶಾಲಿಗೆ ಗೊತ್ತಾಗುತ್ತಿದ್ದಂತೆ ಫೆಬ್ರವರಿ 9 ರಂದು ತಾನು ವಾಸವಾಗಿದ್ದ ಸುರತ್ಕಲ್ ಪಿಜಿಯಿಂದ ಪರಾರಿಯಾಗಿದ್ದಾಳೆ. ಇನ್ನು ವಿಚಾರ ತಿಳಿದ ತಕ್ಷಣ ಆತನ ತಂದೆ ವಿಶ್ವನಾಥ್ ವಿದೇಶದಿಂದ ದೌಡಾಯಿಸಿದ್ದಾರೆ. ಪೋಷಕರು ಸುರತ್ಕಲ್ ಠಾಣೆಗೆ ದೂರು ನೀಡಿದ್ದಾರೆ. ಮಗಳು ಲವ್ ಮಾಡುವವಳಂತವಳಲ್ಲ. ಆಕೆಯ ಬ್ರೈನ್ ವಾಶ್ ಮಾಡಲಾಗಿದೆ. ಆಕೆಗೆ ಬ್ಲಾಕ್ ಮೇಲ್ ಮಾಡಿ, ಬೆದರಿಸಿ ಕರೆದುಕೊಂಡು ಹೋಗಾಲಾಗಿದೆ. ಮುಸ್ಲಿಮರು ಷಡ್ಯಂತ್ರ ಮಾಡಿದ್ದಾರೆ ಅಂತಾ ಪೋಷಕರು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ, ಆತಂಕದಲ್ಲಿ ಆಕೆಯ ಪೋಷಕರು

ಇನ್ನು ವಯನಾಡು ಪೊಲೀಸ್ ಠಾಣೆಯಲ್ಲಿ ಇವರಿಬ್ಬರು ಇರುವುದು ಗೊತ್ತಾಗಿದೆ. ವಿಶ್ವನಾಥ್ ಮತ್ತು ಲತಾ ದಂಪತಿ ವಯನಾಡು ಠಾಣೆಗೆ ಹೋಗಿ ತಮ್ಮ ಮಗಳನ್ನು ಭೇಟಿಯಾಗಿದ್ದಾರೆ. ಮಗಳು ‘ನಾನು ನಿಮ್ಮ ಜೊತೆ ಬರುತ್ತೇನೆ’ ಅಂತಾ ಹೇಳಿದ್ದಳಂತೆ. ಅದೇ ರೀತಿ ಮುಚ್ಚಳಿಕೆ ಬರೆದುಕೊಟ್ಟಳಂತೆ. ಆದರೆ ವಯನಾಡು ಪೊಲೀಸರು ಮಗಳ ಜೊತೆ ಮಾತನಾಡಲು ಕೇವಲ 5 ನಿಮಿಷ ಕಾಲಾವಕಾಶ ನೀಡಿದ್ದಾರೆ. ಆ ಹುಡುಗನಿಗೆ ಹೆಚ್ಚು ಸಮಯ ನೀಡಿದ್ದಾರೆ. ಪೊಲೀಸರು ಕೂಡ ಆ ಹುಡುಗನ ಪರವಹಿಸಿದರು. ಹೀಗಾಗಿ ಬರೆದುಕೊಟ್ಟ ಮುಚ್ಚಳಿಕೆಯನ್ನು ಹರಿದು ಮತ್ತೆ ಬೇರೆ ಬರೆದುಕೊಟ್ಟಿದ್ದಾಳೆ ಅಂತಾ ಪೋಷಕರು ಕಣ್ಣೀರಿಟ್ಟರು. ಇನ್ನು ಮಗಳೇ ಎಲ್ಲಿದರೂ ಬಾ ಅಂತಾ ತಾಯಿ ಲತಾ ಅಂಗಲಾಚಿ ಬೇಡಿಕೊಂಡರು.

ಇದನ್ನೂ ಓದಿ: Mangaluru: ಕೌಟುಂಬಿಕ ಕಲಹಕ್ಕೆ ಹರಿದ ನೆತ್ತರು; ಗಲಾಟೆ ವೇಳೆ ಹೋಯ್ತು ಇಬ್ಬರ ಪ್ರಾಣ!

ಕೇರಳ ಪೊಲೀಸರು ಹುಡುಗನ ಕಡೆ ಶ್ಯಾಮೀಲಾಗಿದ್ದಾರೆ. ನೀವು ನಮಗೆ ನ್ಯಾಯ ದೊರಕಿಸಿಕೊಡಿ ಅಂತಾ ಪೋಷಕರು ಸುರತ್ಕಲ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪ್ರೀತಿಸಿದವನ ಜೊತೆ ಹೋಗುತ್ತಾಳಾ ಅಥವಾ ಪೋಷಕರ ಪ್ರೀತಿಗೆ ವೈಶಾಲಿ ಕರಗುತ್ತಾಳಾ ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಥಾಯ್ಲೆಂಡ್‌ನ ಶಾಲೆಯಲ್ಲಿ ಗುಂಡಿನ ದಾಳಿ; ಶಿಕ್ಷಕರು, ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿಟ್ಟುಕೊಂಡ ಗನ್ ಮ್ಯಾನ್ – Kannada News | Thailand Armed Gunman Takes Students And Teachers Hostages In School 1 Dead and 3 Injured

ಬ್ಯಾಂಕಾಕ್, ಫೆಬ್ರವರಿ 11: ಇಂದು ಮಧ್ಯಾಹ್ನ ದಕ್ಷಿಣ ಥೈಲ್ಯಾಂಡ್‌ನ (Thailand) ಶಾಲೆಯಲ್ಲಿ 18 ವರ್ಷದ ಬಂದೂಕುಧಾರಿಯೊಬ್ಬ ಮೆಷಿನ್ ಗನ್‌ನೊಂದಿಗೆ ಕ್ಯಾಂಪಸ್‌ಗೆ ನುಗ್ಗಿ ಶಾಲಾ ಪ್ರಾಂಶುಪಾಲರನ್ನು ಗಾಯಗೊಳಿಸಿ, ಶಿಕ್ಷಕರು ಮತ್ತು ಮಕ್ಕಳನ್ನು ಒತ್ತೆಯಾಳುಗಳಾಗಿ ತೆಗೆದುಕೊಂಡ ನಂತರ ಭಯಾನಕ ಘಟನೆ ನಡೆದಿದೆ. ಮಲೇಷ್ಯಾ ಗಡಿಯ ಸಮೀಪವಿರುವ ಹ್ಯಾಟ್ ಯೈ ಜಿಲ್ಲೆಯ ಪಟೋಂಗ್ ಪ್ರಥಾನ್ ಕಿರಿವತ್ ಶಾಲೆಯಲ್ಲಿ ತರಗತಿ ಮುಗಿದ ಸ್ವಲ್ಪ ಸಮಯದ ನಂತರ ಈ ದಾಳಿ ಪ್ರಾರಂಭವಾಯಿತು.

ಮೆಷಿನ್ ಗನ್ ಹಿಡಿದಿದ್ದ ವ್ಯಕ್ತಿಯೊಬ್ಬ ಮೈದಾನದಲ್ಲಿ ನಡೆದುಕೊಂಡು ಬರುವಾಗ ಗುಂಡು ಹಾರಿಸುತ್ತಿದ್ದ. ಇದನ್ನು ಕಂಡ ವಿದ್ಯಾರ್ಥಿಗಳು ಕಂಗಾಲಾಗಿ ಹೊರಗೆ ಓಡಿದ್ದಾರೆ. ಕೆಲವರು ಆತನ ಕೈಗೆ ಸಿಕ್ಕಿಬಿದ್ದಿದ್ದಾರೆ. ಆರಂಭದಲ್ಲಿ ಆತ ಶಾಲೆಯ ಮುಖ್ಯೋಪಾಧ್ಯಾಯರಿಗೆ ಗುಂಡು ಹಾರಿಸಿದ. ಭದ್ರತಾ ಸಿಬ್ಬಂದಿಯ ಹೊಟ್ಟೆಗೂ ಶೂಟ್ ಮಾಡಿದ್ದ. ನಂತರ ಆತ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಒತ್ತೆಯಾಳಾಗಿಟ್ಟುಕೊಂಡಿದ್ದಾನೆ.

ಸಾಂಗ್ಖ್ಲಾ ಪ್ರಾಂತ್ಯದ ಶಾಲೆಯ ಮೇಲೆ ಬಂದೂಕುಧಾರಿ ಹಲವು ಗುಂಡುಗಳನ್ನು ಹಾರಿಸಿ ಹಲವಾರು ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿದ್ದ. ಕೊನೆಗೂ ಆತನನ್ನು ಬಂಧಿಸಿದ ಪೊಲೀಸರು ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಅಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್‌ ಗ್ರೀನ್‌ ಸಿಗ್ನಲ್‌ – Kannada News | Kalaburagi High Court Bench Green To Shivalinga pooja at ladle mashak dargah Aland

ಕಲಬುರಗಿ, (ಫೆಬ್ರವರಿ 11): ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ (Ladley Mashak Dargah) ಶಿವಲಿಂಗಕ್ಕೆ ಶಿವರಾತ್ರಿಯಂದು (Shivaratri) ಪೂಜೆ ಸಲ್ಲಿಸಲು ಕಲಬುರಗಿ ಹೈಕೋರ್ಟ್‌ ​ ಪೀಠ (Kalaburagi High Court Bench) ಅನುಮತಿ ನೀಡಿದೆ. ಫೆಬ್ರವರಿ 15ರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪೂಜೆ ಸಲ್ಲಿಸಲು ಕೇವಲ ಒಬ್ಬರಿ ಅದರು ಅರ್ಜಿದಾರ ಸಿದ್ರಾಮಯ್ಯ ಹಿರೇಮಠ ಎಂಬುವರಿಗೆ ಮಾತ್ರ ಅವಕಾಶ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಹಾಗೇ ಪೂಜೆ ಸಲ್ಲಿಸಲು ತೆರಳುವ ಅರ್ಜಿದಾರರಿಗೆ ಭದ್ರತೆ ಕಲ್ಪಿಸಬೇಕು. ಒಂದು ವೇಳೆ ಕಾನೂನು ಸುವ್ಯವಸ್ಥೆ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.

ಫೆಬ್ರವರಿ 15ರಂದು ಮಹಾಶಿವರಾತ್ರಿಯಂದು ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶಿವಲಿಂಗಕ್ಕೆ ಪೂಜೆ ಮಾಡಲು 15 ಜನರಿಗೆ ಅನುಮತಿ ನೀಡುವಂತೆ ಹಿಂದೂ ಸಂಘಟನೆಗಳು ಕಲಬುರಗಿ ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿ ವಿಚಾರನೆ ನಡೆಸಿದ ಕೋರ್ಟ್, ಕೇವಲ ಒಬ್ಬರಿಗೆ ಅದು ದೂರುದಾರ ಸಿದ್ರಾಮಯ್ಯ ಹಿರೇಮಠ ಎಂಬುವರಿಗೆ ಮಾತ್ರ ಪೂಜೆ ಸಲ್ಲಿಸಲು ಅವಕಾಶನ ನೀಡಿ ಆದೇಶಿಸಿದೆ. ಇದರೊಂದಿಗೆ 15 ಜನರಿಗೆ ಅನುಮತಿ ಕೋರಿದ್ದ ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ.

Published On – 5:17 pm, Wed, 11 February 26

Source link

‘ಟಾಕ್ಸಿಕ್’ ವಿರುದ್ಧ ದೂರುಗಳು: ಬೆಂಬಲಕ್ಕೆ ನಿಂತ ಚೇಂಬರ್ ಅಧ್ಯಕ್ಷೆ ಜಯಮಾಲ – Kannada News | Film Chamber new president Jayamala supports Toxic movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಭಾರಿ ದೊಡ್ಡ ಪ್ರಾಜೆಕ್ಟ್ ಇದಾಗಿದ್ದು, ಸಹಜವಾಗಿಯೇ ಸಿನಿಮಾದ ವಿರುದ್ಧ ಕೆಲವರು ದೂರುಗಳು, ಟೀಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಸಿನಿಮಾದ ಟೀಸರ್ ಬಿಡುಗಡೆ ಆದ ಬಳಿಕವಂತೂ ಟೀಕೆ ಮಾಡುವವರು, ದೂರು ನೀಡುವವರ ಸಂಖ್ಯೆ ಹೆಚ್ಚಾಗಿದೆ. ಈ ಹಿಂದೆ ಚಿತ್ರೀಕರಣದ ಸಮಯದಲ್ಲಿಯೂ ಸಹ ‘ಟಾಕ್ಸಿಕ್’ ಸಿನಿಮಾ ಬಗ್ಗೆ ದೂರುಗಳು ದಾಖಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ಆದರೆ ಇದೀಗ ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಅವರು ‘ಟಾಕ್ಸಿಕ್’ ಸಿನಿಮಾದ ಬೆಂಬಲಕ್ಕೆ ನಿಂತಿದ್ದಾರೆ.

‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆದ ಬಳಿಕ ಮಹಿಳಾ ಆಯೋಗಕ್ಕೆ, ಸೆನ್ಸಾರ್ ಮಂಡಳಿಗೆ ದೂರುಗಳು ದಾಖಲಾಗಿದ್ದವು. ಇದೀಗ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ‘ಟಾಕ್ಸಿಕ್’ ಸಿನಿಮಾದ ವಿರುದ್ಧ ಆರೋಪ ಮಾಡಿದ್ದು, ದೇವದೂತ ಸಂತ ಮಿಕಯೇಲ್ ಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇಂದು ಫಿಲಂ ಚೇಂಬರ್​​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನೂತನ ಅಧ್ಯಕ್ಷೆ ಜಯಮಾಲ ಅವರು ಈ ಬಗ್ಗೆ ಮಾತನಾಡಿದ್ದು, ‘ಟಾಕ್ಸಿಕ್’ ಸಿನಿಮಾಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

‘ಸಿನಿಮಾದ ಟೀಸರ್ ನೋಡಿ ಇಡೀ ಸಿನಿಮಾ ಹೀಗೆಯೇ ಇರಲಿದೆ ಎಂದು ಮುಂಚಿತವಾಗಿ ನಿರ್ಧರಿಸುವುದು ತಪ್ಪು. ನಿಮಗೆ ಪ್ರತಿಭಟನೆ ಮಾಡುವ ಮನಸ್ಸಿದ್ದರೆ ಸಿನಿಮಾ ನೋಡಿ ಪ್ರತಿಭಟನೆ ಮಾಡಿ. ಕನ್ನಡ ಚಿತ್ರರಂಗ ಪ್ರಾರಂಭವಾಗಿ 93 ವರ್ಷಗಳಾಯ್ತು, ಈ ವರೆಗೆ ಒಮ್ಮೆಯೂ ಸಹ ಇತರ ಧರ್ಮಕ್ಕೆ ಅವಹೇಳನ ಮಾಡಿಲ್ಲ, ಸರ್ವಧರ್ಮ ಸಹಿಷ್ಣುವಾಗಿ ಚಿತ್ರರಂಗ ನಡೆದುಕೊಂಡು ಬಂದಿದೆ. ಈಗ ಒಂದು ಟೀಸರ್ ನೋಡಿ ಸಿನಿಮಾ ಬಗ್ಗೆ, ಚಿತ್ರರಂಗದ ಬಗ್ಗೆ ಆರೋಪ ಮಾಡುವುದು ತಪ್ಪು’ ಎಂದಿದ್ದಾರೆ ಜಯಮಾಲ.

ಇದನ್ನೂ ಓದಿ:ಯಶ್, ರಣ್​​ಬೀರ್ ನಟನೆಯ ‘ರಾಮಾಯಣ’ಕ್ಕೆ ಯುವ ಸ್ಟಾರ್ ಎಂಟ್ರಿ

‘ಟಾಕ್ಸಿಕ್’ ಸಿನಿಮಾ ಇನ್ನೂ ಸೆನ್ಸಾರ್ ಆಗಿಲ್ಲ, ಸೆನ್ಸಾರ್​​ನವರು ಸಿನಿಮಾವನ್ನು ನೋಡುತ್ತಾರೆ. ಆ ರೀತಿಯ ಅಂಶಗಳು ಇದ್ದರೆ ಅವರೇ ಅದನ್ನು ತೆಗೆದು ಬಿಡುತ್ತಾರೆ. ಆದರೆ ಅಷ್ಟರಲ್ಲೆ ಮಾಧ್ಯಮಗಳನ್ನು ಕರೆದು ಸುದ್ದಿ ಮಾಡುವುದು ತಪ್ಪಾಗುತ್ತದೆ, ಇದೆಲ್ಲ ಏನು ಪ್ರಚಾರಕ್ಕಾ ಮಾಡುತ್ತಿರೋದು. ಟೀಸರ್ ಅನ್ನು ಮಾಡುವುದು ಜನರನ್ನು ಚಿತ್ರಮಂದಿರಕ್ಕೆ ಕರೆತರಲು, ಒಂದು ಫೋಟೊ ನೋಡಿ ಸಿನಿಮಾ ಹೀಗೆಯೇ ಇರಲಿದೆ ಎಂದು ಹೇಳುವುದು ತಪ್ಪು. ನಾನು ಈ ಮೂಲಕ ಎಲ್ಲ ಸಂಘದವರಿಗೆ ಮನವಿ ಮಾಡಿಕೊಳ್ಳುವುದೇನೆಂದರೆ ದಯವಿಟ್ಟು ಸ್ವಲ್ಪ ತಾಳ್ಮೆ ಇರಲಿ’ ಎಂದಿದ್ದಾರೆ.

ಇನ್ನು ‘ಟಾಕ್ಸಿಕ್’ ಟೀಸರ್​​ನಲ್ಲಿರುವ ಹಿಂಸೆ ಮತ್ತು ಗ್ಲಾಮರಸ್ ದೃಶ್ಯಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಜಯಮಾಲ, ‘ಈಗ ಯಾವ ಸಿನಿಮಾನಲ್ಲಿ ಹಿಂಸೆ ಇಲ್ಲ ಹೇಳಿ. ಆದರೆ ಆ ಹಿಂಸೆ ಕತೆಯಲ್ಲಿ ಯಾವ ಕಾರಣಕ್ಕೆ ಇದೆ ಎಂಬುದು ಮುಖ್ಯವಾಗುತ್ತದೆ. ಕತೆಯೇ ಗೊತ್ತಿಲ್ಲದೆ ಹಿಂಸೆಯನ್ನು ದೂರುವುದು ಸರಿಯಲ್ಲ. ಅಲ್ಲದೆ ನಾವು ಸಿನಿಮಾದ ನಿರ್ಮಾಪಕರ ಜೊತೆಗೂ ಮಾತನಾಡಿದ್ದು, ಸಿನಿಮಾನಲ್ಲಿ ವಿವಾದ ಅನಿಸಿಕೊಳ್ಳುವಂಥಹದ್ದು ಏನೂ ಇಲ್ಲ’ ಎಂದು ಅವರು ಹೇಳಿದ್ದಾರೆ. ಸಿನಿಮಾನಲ್ಲಿ ಅಶ್ಲೀಲತೆಯನ್ನು ತೋರಿಸಲಾಗಿಲ್ಲ, ಟೀಸರ್​​ನಿಂದ ಇಡೀ ಸಿನಿಮಾವನ್ನು ಜಡ್ಜ್ ಮಾಡಲು ಸಾಧ್ಯವಿಲ್ಲ. ಹಾಗೇನಾದರೂ ಸಮಸ್ಯೆ ಇದ್ದರೆ ಅದನ್ನು ಸೆನ್ಸಾರ್ ಮಂಡಳಿ ನೋಡಿಕೊಳ್ಳಲಿದೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 5:46 pm, Wed, 11 February 26

Source link

ಶಾಸಕ ಸೇರಿ ಐವರಿಂದ ಕಿರುಕುಳ ಆರೋಪ: ಡೆತ್​​ನೋಟ್​​ ಬರೆದಿಟ್ಟು ನಾಪತ್ತೆಯಾಗಿದ್ದ ಅಧಿಕಾರಿ ಪತ್ತೆ – Kannada News | MLA, Four Others Face Harassment Allegations; Missing Officer Located After Death Note in Chikkamagaluru

ಡೆತ್​​ನೋಟ್​​ ಬರೆದಿಟ್ಟು ನಾಪತ್ತೆಯಾಗಿದ್ದ ಇಕ್ಬಾಲ್​​Image Credit source: Tv9 Kannada

ಚಿಕ್ಕಮಗಳೂರು, ಫೆಬ್ರವರಿ 11: ಕಾಂಗ್ರೆಸ್​​ ಶಾಸಕ ಸೇರಿ ಐವರ ಮೇಲೆ ಕಿರುಕುಳ ಆರೋಪ ಮಾಡಿ ಡೆತ್​​ನೋಟ್​​ ಬರೆದಿಟ್ಟು ಕಡೂರು ತಾಲೂಕು ಕಚೇರಿಯ ಸಾಂಖ್ಯಿಕ ನಿರೀಕ್ಷಿಕ ಇಕ್ಬಾಲ್ ನಾಪತ್ತೆಯಾಗಿದ್ದ ಘಟನೆ ಆತಂಕಕ್ಕೆ ಕಾರಣವಾಗಿತ್ತು. ಆದರೆ ಕೂಡಲೇ ಅಲರ್ಟ್​​ ಆದ ಪೊಲೀಸರು ಹುಡುಕಾಟ ನಡೆಸಿದ್ದು, ಈ ವೇಳೆ ಇಕ್ಬಾಲ್​​ ಚಿಕ್ಕಮಗಳೂರು ನಗರದ ವಿಜಯಪುರದ ತಮ್ಮ ಮನೆಯಲ್ಲಿಯೇ ಪತ್ತೆಯಾಗಿದ್ದಾರೆ. ಡೆತ್​​ನೋಟ್​​ನಲ್ಲಿ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಅಧಿಕಾರಿ ಉಲ್ಲೇಖಿಸಿದ್ದ ಕಾರಣ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿತ್ತು.

ಇಕ್ಬಾಲ್​​ ಆರೋಪವೇನು?

ಕಡೂರು ಶಾಸಕ ಆನಂದ್, ಪಿಎ‌ ಮಂಜುನಾಥ್, ಕಡೂರು ತಹಶೀಲ್ದಾರ್ ಪೂರ್ಣಿಮಾ ಸೇರಿ ಐವರ ಬಗ್ಗೆ ಇಕ್ಬಾಲ್​​ ಗಂಭೀರ ಆರೋಪ ಮಾಡಿದ್ದಾರೆ. ಕಡೂರು ಶಾಸಕ ಮಂಜುನಾಥ್​​ ತಿಂಗಳು 25 ಸಾವಿರ ಹಣ ಕೊಡುವಂತೆ ಪೀಡಿಸುತ್ತಿದ್ದರು. ಕಳೆದ ಕೆಲದಿನಗಳ ಹಿಂದೆ ಫೇಕ್​​ ಮರಣಪತ್ರ ನೀಡುವಂತೆ ಕೇಳಿದ್ದರು. ನಾನು ಮುಸ್ಲಿಂ ಎನ್ನುವ ಕಾರಣಕ್ಕೆ ತಹಶೀಲ್ದಾರ್​​ ಪೂರ್ಣಿಮಾ ಪ್ರತಿದಿನ ಬೈಯುತ್ತಿದ್ದರು. ಮಂಜುನಾಥ್​​ ನಮ್ಮ ಸಮುದಾಯಕ್ಕೂ ಅವಮಾನಿಸಿದ್ದು, ಈ ಬಗ್ಗೆ ವಿಷಯವನ್ನು ಶಾಸಕರಿಗೆ ತಿಳಿಸಿದರೆ ಅವರೂ ನನಗೆ ಬೈದು ಕಳುಹಿಸಿದ್ದರು. ಅನಾರೋಗ್ಯದಿಂದ ಬಳಲುತ್ತಿರುವ ತನ್ನನ್ನು ವರ್ಗಾವಣೆ ಮಾಡಲಾಗಿದ್ದು, ನಾನು ಆತ್ಮಹತ್ಯೆ ಮಾಡಿಕೊಳ್ಳೋದಂತೂ ನಿಜ. ನನಗೆ ಕಿರುಕುಳ ನೀಡಿದವರು ಜೈಲಿಗೆ ಹೋಗಲೇ ಬೇಕು ಎಂದಿದ್ದಾರೆ.

ಇದನ್ನೂ ಓದಿ: ಫ್ಲ್ಯಾಟ್, ಚಿನ್ನದ ವ್ಯವಹಾರದಲ್ಲಿ ಉದ್ಯಮಿಗೆ ಕೋಟಿ ಕೋಟಿ ದೋಖಾ! ಶೆಟ್ಟಿ ದಂಪತಿ ಮೇಲೆ ಕೇಸ್

ಕಡೂರು ತಾಲೂಕು ಕಚೇರಿಯಲ್ಲಿ ಅತೀ ಹೆಚ್ಚು ನಕಲಿ ವ್ಯವಹಾರಗಳು ನಡೆಯುತ್ತಿದ್ದು ಜಿಲ್ಲೆಯಲ್ಲಿಯೇ ಕಚೇರಿ ಪ್ರಥಮ ಸ್ಥಾನದಲ್ಲಿದೆ. ನಕಲಿ ಮರಣಪತ್ರ ಕೊಡಲ್ಲ ಎಂದಿದ್ದಕ್ಕೆ ನನ್ನ ಮೇಲೆ ಹುನ್ನಾರ ನಡೆಸಲಾಗಿದೆ. ನಾನು ಬದುಕಬೇಕಂದರೆ ನನಗೆ ನೀಡಲಾಗಿರುವ ವರ್ಗಾವಣೆ ಆದೇಶವನ್ನು ಹಿಂಪಡೆಯಬೇಕು ಎಂದು ಇಕ್ಬಾಲ್​ ಆಗ್ರಹಿಸಿದ್ದಾರೆ. ಸ್ಥಳೀಯರಿಂದ ದೂರು ಹಾಗೂ ಅನುಚಿತ ವರ್ತನೆ ಮೇರೆಗೆ ವರ್ಗಾವಣೆ ಮಾಡುವಂತೆ ಶಾಸಕ ಆನಂದ್ ಶಿಫಾರಸ್ಸು ಮಾಡಿದ್ದ ಹಿನ್ನೆಲೆ ಇಕ್ಬಾಲ್ ಟ್ರಾನ್ಸ್​​ಫರ್​​ ಮಾಡಲಾಗಿತ್ತು ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version