ಚಿತ್ರದುರ್ಗ: ಮರಕ್ಕೆ ಬೊಲೆರೊ ವಾಹನ ಡಿಕ್ಕಿ; ಒಂದೇ ಗ್ರಾಮದ ನಾಲ್ವರು ಕಾರ್ಮಿಕರು ಸಾವು – Kannada News | Chitradurga Bolero Accident: 4 Workers Dead Near Andanur

ಚಿತ್ರದುರ್ಗ, ಜನವರಿ 06: ಮರಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಬಳಿ ನಡೆದಿದೆ. ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಲ್ಲಿ ಅಡಕೆ ಲೋಡ್​​ ಇಳಿಸಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಕಿರಣ್(25), ಅರುಣ್(32), ಹನುಮಂತ(32) ಮತ್ತು ಗಿರಿರಾಜ್(46) ಮೃತರು. ನಾಲ್ವರು ಕಾರ್ಮಿಕರಿಗೆ ಗಾಯಗಳಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ಮಾಹಿತಿ ಅಪ್​​ಡೇಟ್ ಆಗಲಿದೆ. Source link

Read More

ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ – Kannada News | DCM DK Shivakumar Wishes Siddaramaiah For Becoming Longest Serving CM of Karnataka

ಬೆಂಗಳೂರು, ಜನವರಿ 6: ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ದೇವರಾಜ ಅರಸು ಅವರು ದಾಖಲೆಯನ್ನು ಮುರಿದಿರುವ ಸಿದ್ದರಾಮಯ್ಯನವರಿಗೆ (Siddaramaiah) ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ಇಬ್ಬರ ನಡುವೆ ಅಧಿಕಾರದ ವಿಷಯಕ್ಕೆ ಶೀತಲ ಸಮರ ನಡೆಯುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಇದರ ನಡುವೆ ಸಿದ್ದರಾಮಯ್ಯನವರ ಸಾಧನೆಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ‘ಶುಭವಾಗಲಿ,’ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರಿಗೆ ಒಳ್ಳೆಯದಾಗಲಿ. ನಾನು ಅವರಿಗೆ ಶುಭ ಹಾರೈಸುತ್ತೇನೆ. ಶುಭವಾಗಲಿ ಎಂದು ಡಿಕೆ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

Viral Photo: ನೀವು ಕೂಡ ಮನೆ ಮುಂದೆ ಈ ದೊಡ್ಡ ಕಣ್ಣುಗಳ ಮಹಿಳೆಯ ಫೋಟೋ ನೋಡಿದ್ದೀರಾ? – Kannada News | Why Is The Big Eyed Mystery Woman photo hanging At Bengaluru Construction Sites Viral News

ಬೆಂಗಳೂರು, ಜನವರಿ 6: ರಸ್ತೆಯಲ್ಲಿ ಹೋಗುವಾಗ ಯಾವುದಾದರೂ ನಿರ್ಮಾಣವಾಗುತ್ತಿರುವ ಕಟ್ಟಡವಿದ್ದರೆ ಅಥವಾ ಹೊಸದಾಗಿ ಕಟ್ಟಿದ ಮನೆಯಿದ್ದರೆ ಅದರ ಮುಂದೆ ನೀವು ಈ ದೊಡ್ಡ ಕಣ್ಣುಗಳ ಮಹಿಳೆಯ ಭಯಭೀತಗೊಳಿಸುವ ಫೋಟೋವನ್ನು ಖಂಡಿತ ನೋಡಿರುತ್ತೀರಿ. ಅದರಲ್ಲೂ ನೀವು ಬೆಂಗಳೂರಿನಲ್ಲಿ (Bengaluru) ಇರುವವರಾದರೆ ಈ ಫೋಟೋ ನೋಡದೆ ಇರಲು ಸಾಧ್ಯವೇ ಇಲ್ಲ. ಸೀರೆಯುಟ್ಟ ಮಹಿಳೆ ದೊಡ್ಡ ಬಟ್ಟಲುಕಂಗಳನ್ನು ಬಿಟ್ಟುಕೊಂಡು ಹೆದರಿಸುತ್ತಿರುವ ಫೋಟೋ ಇದಾಗಿದೆ. ಈ ಫೋಟೋದ ಬಗ್ಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಶುರುವಾಗಿವೆ. ಸಾಮಾನ್ಯವಾಗಿ, ಯಾವುದಾದರೂ ಹೊಸ ಕಟ್ಟಡ ಕಟ್ಟುವಾಗ,…

Read More

0,0,0,1,4,1.. ಕೊನೆಯ ಓವರ್​ನಲ್ಲಿ ತಂಡದ ಸೋಲಿಗೆ ಕಾರಣರಾದ ಡೇವಿಡ್ ವಾರ್ನರ್; ವಿಡಿಯೋ – Kannada News | BBL: David Warner’s Fifty Fails to Save Sydney Thunder from Another Loss

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್‌ನಲ್ಲಿ ಸಿಡ್ನಿ ಥಂಡರ್ ತಂಡದ ಅದೃಷ್ಟ ಸುಧಾರಿಸುವ ಲಕ್ಷಣಗಳು ಕಾಣುತ್ತಿಲ್ಲ. ಡೇವಿಡ್ ವಾರ್ನರ್ ನಾಯಕತ್ವದ ತಂಡಕ್ಕೆ ಗೆಲುವಿನ ಸಿಹಿಗಿಂತ ಸೋಲಿನ ಕಹಿಯೇ ಎದುರಾಗುತ್ತಿದೆ. ಅದರಲ್ಲೂ ಗೆಲ್ಲುವ ಪಂದ್ಯವನ್ನು ಕಳೆದುಕೊಳ್ಳುತ್ತಿರುವುದು ಸಿಡ್ನಿ ತಂಡದ ದುರಾದೃಷ್ಟವಾಗಿದೆ. ಇಂದು ನಡೆದ ಅಡಿಲೇಡ್ ಸ್ಟ್ರೈಕರ್ಸ್ ವಿರುದ್ಧದ ಪಂದ್ಯದಲ್ಲೂ ಸ್ವತಃ ನಾಯಕ ಡೇವಿಡ್ ವಾರ್ನರ್ ಕೈನಿಂದಲೂ ತಂಡಕ್ಕೆ ಗೆಲುವು ತಂದುಕೊಡಲಾಗಲಿಲ್ಲ. ಒಂದರರ್ಥದಲ್ಲಿ ತಂಡದ ಸೋಲಿಗೆ ನಾಯಕ ವಾರ್ನರ್ ಕಾರಣ ಎಂದರಲೂ ತಪ್ಪಾಗಲಾರದು. ಜನವರಿ 6, ಮಂಗಳವಾರ ಅಡಿಲೇಡ್‌ನಲ್ಲಿ ನಡೆದ…

Read More

ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು – Kannada News | Ballari Riot: Sriramulu Alleges Congress Activist Rajasekhar Body Burned for Evidence Destruction

ಬಳ್ಳಾರಿ, ಜನವರಿ 06: ಸಂಪ್ರದಾಯದ ಪ್ರಕಾರ ಕಾಂಗ್ರೆಸ್​​ ಕಾರ್ಯಕರ್ತ ರಾಜಶೇಖರ್​ ಮೃತದೇಹವನ್ನು ಮಣ್ಣು ಮಾಡಬೇಕಿತ್ತು. ಆದರೆ ಸುಟ್ಟು ಹಾಕಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಬಳ್ಳಾರಿ ಜನಾರ್ದನರೆಡ್ಡಿ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಶೇಖರ್ ಮೃತದೇಹವನ್ನ ಮಣ್ಣು ಮಾಡಬೇಕಿತ್ತು. ಸಾಕ್ಷಿ ನಾಶ ಮಾಡಬೇಕು ಅಂತ ವ್ಯವಸ್ಥಿತವಾಗಿ ಸುಟ್ಟು ಹಾಕಲಾಗಿದೆ. ಅವರ ಕುಟುಂಬಸ್ಥರನ್ನ ಪೊಲೀಸರು ಹೆದರಿಸಿ, ಬೆದರಿಸಿದ್ದಾರೆ. ಬಹಳಷ್ಟು ಬುಲೆಟ್ ಆತನ ದೇಹ ಹೊಕ್ಕಿದೆ. ಏಕೆ ಸುಟ್ಟು ಹಾಕಿದರು. ಇಂದಲ್ಲಾ ನಾಳೆ…

Read More

ಕನ್ನಡ, ತಮಿಳು ಮುಂತಾದ ಭಾಷೆಯ 55 ಹೊಸ ಪುಸ್ತಕ ಬಿಡುಗಡೆ ಮಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ – Kannada News | Union Minister Dharmendra Pradhan releases 55 new Classical Language Books

ನವದೆಹಲಿ, ಜನವರಿ 6: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಶಾಸ್ತ್ರೀಯ ಭಾಷೆಗಳಾದ ಕನ್ನಡ, ತೆಲುಗು, ಮಲಯಾಳಂ ಮತ್ತು ಒಡಿಯಾದ ಶ್ರೇಷ್ಠತಾ ಕೇಂದ್ರಗಳು ಅಭಿವೃದ್ಧಿಪಡಿಸಿದ 55 ಸಾಹಿತ್ಯ ಕೃತಿಗಳನ್ನು ಇಂದು ಬಿಡುಗಡೆ ಮಾಡಿದರು. ಕನ್ನಡ, ತೆಲುಗು, ಮಲಯಾಳಂ, ಒಡಿಯಾ, ತಮಿಳು ಮತ್ತು ಸೈನ್ ಭಾಷೆಯಲ್ಲಿ ಪ್ರಕಟವಾದ ಈ ಹೊಸ ಕೃತಿಗಳು ಭಾರತದ ಶ್ರೀಮಂತ ಭಾಷಾ ಸಂಪ್ರದಾಯಗಳ ಸುತ್ತ ಸಂಶೋಧನೆ ಮತ್ತು ಶಿಕ್ಷಣವನ್ನು ಬಲಪಡಿಸಲು ವಿನ್ಯಾಸಗೊಳಿಸಲಾಗಿದೆ. ಕೇಂದ್ರ ಸರ್ಕಾರವು ವಿಶಾಲವಾದ ರಾಷ್ಟ್ರೀಯ ಚಳವಳಿಯ ಭಾಗವಾಗಿ…

Read More

ದೇಶಿ ಪಂದ್ಯದಲ್ಲೂ ಗಿರ್ಕಿ ಹೊಡೆದ ಶುಭ್​ಮನ್ ಗಿಲ್; ಏಕದಿನ ಸರಣಿ ಕಥೆ ಏನು? – Kannada News | Shubman Gill’s Injury Return: Form Struggles Raise Team India Concerns

ಮೇಲೆ ಹೇಳಿದಂತೆ ಜನವರಿ 11 ರಿಂದ ಪ್ರಾರಂಭವಾಗುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಶುಭಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದಾರೆ, ಆದರೆ ಅವರ ಫಾರ್ಮ್ ಪ್ರಸ್ತುತ ಕಳಪೆಯಾಗಿದೆ. ಗಿಲ್ ಅವರ ದೊಡ್ಡ ಸಮಸ್ಯೆ ಎಂದರೆ ಟಿ20 ಮತ್ತು ಏಕದಿನ ಮಾದರಿಗಳಲ್ಲಿ ಅವರ ಕಳಪೆ ಪ್ರದರ್ಶನ. ಫೆಬ್ರವರಿ 20, 2025 ರಿಂದ ಗಿಲ್ ಏಕದಿನ ಪಂದ್ಯಗಳಲ್ಲಿ ಒಂದು ಅರ್ಧಶತಕವನ್ನೂ ಬಾರಿಸಿಲ್ಲ. ತಮ್ಮ ಕೊನೆಯ ಎಂಟು ಏಕದಿನ ಇನ್ನಿಂಗ್ಸ್‌ಗಳಲ್ಲಿ ರನ್ ಬರ ಎದುರಿಸಿರುವ ಗಿಲ್ ಅವರ ಅತ್ಯುತ್ತಮ ಸ್ಕೋರ್ ಕೇವಲ 46…

Read More

ಬಳ್ಳಾರಿಯಲ್ಲಿ ಶಾಂತಿಮಂತ್ರ ಜಪಿಸಿದ ಡಿಕೆ ಶಿವಕುಮಾರ್​: ರೆಡ್ಡಿ ಬ್ರದರ್ಸ್‌ ವಿರುದ್ಧ ವಾಗ್ದಾಳಿ – Kannada News | Ballari Violence: DK Shivakumar Peace Bid Amidst Firing, Political Blame

ಬೆಂಗಳೂರು, ಜನವರಿ 06: ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ಗಲಾಟೆ ಮತ್ತು ಫೈರಿಂಗ್ ಪ್ರಕರಣ (Ballari Banner Violence) ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಶಾಸಕ ಭರತ್‌ ರೆಡ್ಡಿ ಕಡೆಯವರು ಫೈರಿಂಗ್‌ ಮಾಡುತ್ತಿರುವ ದೃಶ್ಯಗಳನ್ನ ಬಿಜೆಪಿ ನಾಯಕರು ರಿಲೀಸ್‌ ಮಾಡಿದ್ದರು. ಇತ್ತ ಬಿಜೆಪಿ ಕಡೆಯವರು ಖಾರದಪುಡಿ ಎರಚಿರೋದು, ಬ್ಯಾನರ್‌ ಹರಿಯುತ್ತಿರುವ ದೃಶ್ಯಗಳನ್ನ ಕಾಂಗ್ರೆಸ್​ ಪಡೆ ಕೂಡ ರಿಲೀಸ್ ಮಾಡಿದೆ. ಇದರ ನಡುವೆ ಬಳ್ಳಾರಿಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಭೇಟಿ ನೀಡಿದ್ದು, ಶಾಂತಿಮಂತ್ರ ಜಪಿಸಿದ್ದಾರೆ. ಬ್ಯಾನರ್‌…

Read More

ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ – Kannada News | Rashmika Mandanna is the Number 1 Tax Payer in Kodagu District

ಪ್ಯಾನ್ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ ಅವರು ಕೊಡಗು (Kodagu) ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ಆಗಿದ್ದಾರೆ. ದೇಶಾದ್ಯಂತ ಹೆಸರು ಹೊಂದಿರುವ ಅವರು ಕೊಡಗಿನ ಮೂಲಕವೇ ತೆರಿಗೆ ಪಾವತಿಸುತ್ತಿದ್ದಾರೆ. ‘ರಶ್ಮಿಕಾ ಮಂದಣ್ಣ ಎಲ್ಎಲ್​ಪಿ’ ಹೆಸರಿನಲ್ಲಿ ಆದಾಯ ತೆರಿಗೆ (Income Tax) ಪಾವತಿ ಮಾಡುತ್ತಿದ್ದಾರೆ. ಈವರೆಗೆ 4.69 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿಸಿದ್ದಾರೆ. ಪ್ರಸಕ್ತ ಹಣಕಾಸು ವರ್ಷದ 3 ಅವಧಿಯಲ್ಲಿ ತೆರಿಗೆ ಪಾವತಿ ಮಾಡಲಾಗಿದ್ದು, ಅದರಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಮೊದಲ ಸ್ಥಾನದಲ್ಲಿ…

Read More

ಅರಸು ದಾಖಲೆ ಮುರಿದ ಸಿದ್ದರಾಮಯ್ಯ ಇಂದಿರಾ ಗಾಂಧಿಯನ್ನು ಖಂಡಿಸುತ್ತಾರಾ? ಸಂಸದ ಲೆಹರ್ ಸಿಂಗ್ ಪ್ರಶ್ನೆ – Kannada News | BJP leader Lehar Singh reaction on Siddaramaiah Surpassing Devaraj Urs Record on Longest Serving CM

ಬೆಂಗಳೂರು, ಜನವರಿ 6: ಕರ್ನಾಟಕದಲ್ಲಿ ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಮೂಲಕ ದೇವರಾಜ ಅರಸು ಅವರ ದಾಖಲೆಯನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಮುರಿದಿದ್ದಾರೆ. ಕರ್ನಾಟಕದ ಅತ್ಯಂತ ಯಶಸ್ವಿ ರಾಜಕಾರಣಿಗಳಲ್ಲಿ ಒಬ್ಬರಾದ ಸಿದ್ದರಾಮಯ್ಯ 2 ಬಾರಿ ಉಪಮುಖ್ಯಮಂತ್ರಿಯಾಗಿ, ವಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದರು. ಜೆಡಿಎಸ್​​ನಿಂದ ಕಾಂಗ್ರೆಸ್​ ಪಕ್ಷಕ್ಕೆ ಬಂದ ನಂತರ ಮುಖ್ಯಮಂತ್ರಿ ಹುದ್ದೆಗೇರಿದ ಅವರು ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವುದಕ್ಕೆ ಹಲವು ನಾಯಕರು ಅಭಿನಂದಿಸಿದ್ದಾರೆ. ಇದರ ನಡುವೆ ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್…

Read More