ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿಂಗ್ ಸ್ಟಾರ್ – Kannada News | Yash Photo On Namma Bengaluru Metro Ahead Of His Birthday

ನೆಚ್ಚಿನ ಹಿರೋನ ಬರ್ತ್​​ಡೇ ಎಂದಾಗ ಕಟೌಟ್ ಹಾಕಲಾಗುತ್ತದೆ. ಅದಕ್ಕೆ ಹಾಲಿನ ಅಭಿಷೇಕ ಮಾಡಲಾಗುತ್ತದೆ. ಈಗ ಯಶ್ ಅಭಿಮಾನಿಗಳು ಒಂದು ಹಂತ ಮೇಲಕ್ಕೆ ಹೋಗಿದ್ದಾರೆ. ಜನವರಿ 8 ಯಶ್ ಜನ್ಮದಿನ. ಹೀಗಾಗಿ, ನಮ್ಮ ಮೆಟ್ರೋದಲ್ಲಿ ಯಶ್ ಫೋಟೋ ರಾರಾಜಿಸಲಿದೆ. ಅಭಿಮಾನಿ ಸಂಘಟನೆಗಳು ಮೆಟ್ರೋಗೆ ಜಾಹೀರಾತು ನೀಡಿ, ಯಶ್​​ಗೆ ಬರ್ತ್​ಡೇ ವಿಶ್ ತಿಳಿಸಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮೈಸೂರು, ಬಾಗಲಕೋಟೆ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ, ಪಾಸ್‌ಪೋರ್ಟ್ ಕಚೇರಿಗೂ ಬಂತು ಇ-ಮೇಲ್ – Kannada News | Karnataka Bomb Threats: Mysuru, Bagalkote Courts Receive Email Hoaxes

ಮೈಸೂರು, ಬಾಗಲಕೋಟೆ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ

ಮೈಸೂರು/ ಬಾಗಲಕೋಟೆ, ಜನವರಿ 06: ಕಳೆದ ತಿಂಗಳಲ್ಲಿ ಕೋಲಾರ, ಗದಗ ಸೇರಿದಂತೆ ರಾಜ್ಯದ ಹಲವು ಕಡೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಆತಂಕ ಸೃಷ್ಟಿಸಿತ್ತು. ಇದೀಗ ಮತ್ತೊಮ್ಮೆ ಇಂತದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ ಹಳೆ ಕೋರ್ಟ್ ಹಾಗೂ ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶ ಬಂದಿದ್ದು, ತಪಾಸಣೆ ನಡೆಸಲಾಗಿದೆ.

ಆತ್ಮಾಹುತಿ ದಾಳಿ ಮಾಡುವುದಾಗಿ ಬೆದರಿಕೆ

ಮೈಸೂರಿನಲ್ಲಿ ಮಧ್ಯಾಹ್ನ 1.55ಕ್ಕೆ ಮೂರು ಆರ್‌ಡಿಎಕ್ಸ್ ಬಾಂಬ್ ಇಟ್ಟಿರುವುದಾಗಿ, ಆತ್ಮಹತ್ಯಾ ದಾಳಿ ಮಾಡುವುದಾಗಿ ಬೆದರಿಕೆ ಇತ್ತು. ಸಂದೇಶದಲ್ಲಿ ನ್ಯಾಯಾಧೀಶರನ್ನು ಸ್ಥಳಾಂತರಿಸುವಂತೆ ಎಚ್ಚರಿಸಲಾಗಿತ್ತು. ಮಾಹಿತಿ ಸ್ವೀಕರಿಸಿರುವ ನ್ಯಾಯಾಧೀಶರು, ಕಕ್ಷಿದಾರರು, ವಕೀಲರು ತಕ್ಷಣ ಕೋರ್ಟ್ ಆವರಣದಿಂದ ಹೊರಬಂದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ತಂಡ ತಕ್ಷಣ ಹೋಗಿ ಪರಿಶೀಲನೆ ನಡೆಸಿದೆ.

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೂ ಮಧ್ಯಾಹ್ನ ಇ-ಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ. ನಿಮ್ಮ ಜಿಲ್ಲಾ ನ್ಯಾಯಾಲಯದ ಕ್ರಿಟಿಕಲ್ ಸ್ಥಳಗಳಲ್ಲಿ ಬಾಂಬ್ ಇಟ್ಟಿದ್ದೇವೆ, ಮಧ್ಯಾಹ್ನದ ಊಟದ ಅವಧಿಯಲ್ಲಿ ಸ್ಫೋಟ ಮಾಡುತ್ತೇವೆ ಎಂಬ ಎಚ್ಚರಿಕೆ ನೀಡಲಾಗಿತ್ತು. ಈ ವಿಷಯ ತಿಳಿದ ನ್ಯಾಯವಾದಿಗಳು, ಕಕ್ಷಿದಾರರು, ನೌಕರರು ಮತ್ತು ಸಾರ್ವಜನಿಕರು ಭಯಭೀತರಾಗಿ ಹೊರಬಂದಿದ್ದಾರೆ. ಪೊಲೀಸ್‌, ಜಿಲ್ಲಾಡಳಿತ ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಸ್ಥಳಕ್ಕೆ ತೆರಳಿ ಕಟ್ಟಡ ಹಾಗೂ ಆವರಣದ ಸಂಪೂರ್ಣ ತಪಾಸಣೆ ನಡೆಸುತ್ತಿದೆ.

ಇದನ್ನೂ ಓದಿ ಗದಗ, ಮಂಗಳೂರು ಆಯ್ತು ಈಗ ಭಟ್ಕಳದ ತಹಶೀಲ್ದಾರ್ ಕಚೇರಿಗೂ ಬಾಂಬ್ ಬೆದರಿಕೆ!

ಪಾಸ್‌ಪೋರ್ಟ್ ಕಚೇರಿಗೂ ಬಾಂಬ್ ಥ್ರೆಟ್

ಬೆಂಗಳೂರಿನ ಲಾಲ್‌ಬಾಗ್ ರಸ್ತೆಯಲ್ಲಿರುವ ಪಾಸ್‌ಪೋರ್ಟ್ ಕಚೇರಿಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿರುವುದು ಬೆಳಕಿಗೆ ಬಂದಿದೆ. ಕಿಡಿಗೇಡಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆವೊಡ್ಡಿದ್ದು, ಮಾಹಿತಿ ತಿಳಿದ ವಿಲ್ಸನ್ ಗಾರ್ಡನ್ ಹಾಗೂ ಎಸ್.ಆರ್.ನಗರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳ ಸಿಬ್ಬಂದಿಯಿಂದ ಪಾಸ್‌ಪೋರ್ಟ್ ಕಚೇರಿ ಆವರಣದಲ್ಲಿ ತಪಾಸಣೆ ನಡೆಲಾಗಿದೆ.

ಇದೇ ಮೊದಲೇನಲ್ಲ ಹುಸಿ ಬೆದರಿಕೆ

ಡಿ.12ರಂದು ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಂದ ಬಾಂಬ್ ಬೆದರಿಕೆ ಇಮೇಲ್ ಕೆಲಕಾಲ ಆತಂಕ ಸೃಷ್ಟಿಸಿತ್ತು. ಜಿಲ್ಲಾಡಳಿತ ಹಾಗೂ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಶೋಧ ನಡೆಸಿದ್ದು, ತಮಿಳುನಾಡಿನ 13 ವರ್ಷದ ಬಾಲಕಿಯಿಂದ ಬಂದ ಹುಸಿ ಬೆದರಿಕೆ ಎಂದು ತಿಳಿದುಬಂದಿತ್ತು. ಡಿ.15ರಂದು ಗದಗ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಡಿಸಿ ಕಚೇರಿಗೆ ಬಾಂಬ್​​ ಬೆದರಿಕೆ ಹಾಕಲಾಗಿದ್ದು, ಪಾಕ್​ನ ಐಎಸ್​​ಐ ಮತ್ತು ಎಲ್​​​ಟಿಟಿಇ ಕಾರ್ಯಕರ್ತರ ಜೊತೆ ಸೇರಿ 5 ಬಾಂಬ್​ಗಳಿಂದ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಕಿಡಿಗೇಡಿಗಳು ಧಮ್ಕಿ ಹಾಕಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

56 ರನ್​ಗೆ 7 ವಿಕೆಟ್​… ಆದರೂ ಪಂದ್ಯ ಗೆದ್ದ ಸಿಡ್ನಿ ಸಿಕ್ಸರ್ಸ್

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನ 24ನೇ ಪಂದ್ಯದಲ್ಲಿ ರಣರೋಚಕ ಹೋರಾಟ ಕಂಡು ಬಂದಿದೆ. ಅದು ಕೂಡ ಲೋ ಸ್ಕೋರಿಂಗ್ ಆಟದೊಂದಿಗೆ. ಅಂದರೆ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬ್ರಿಸ್ಬೇನ್ ಹೀಟ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 114 ರನ್​ಗಳು ಮಾತ್ರ.

115 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಸಿಡ್ನಿ ಸಿಕ್ಸರ್ಸ್ ತಂಡವು 56 ರನ್​ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡಿತು. ಇದರೊಂದಿಗೆ ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ತಂಡದ ಗೆಲುವನ್ನು ಎಲ್ಲರೂ ನಿರೀಕ್ಷಿಸಿದ್ದರು.

ಆದರೆ 8ನೇ ವಿಕೆಟ್​ಗೆ ಜೊತೆಗೂಡಿದ ಜೋಯೆಲ್ ಡೇವಿಸ್ ಹಾಗೂ ಹೇಡನ್ ಕೇರ್ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದರು. ಅತ್ಯತ್ತಮವಾಗಿ ಬ್ಯಾಟ್ ಬೀಸಿದ ಡೇವಿಸ್ 26 ಎಸೆತಗಳಲ್ಲಿ 35 ರನ್ ಬಾರಿಸಿದರೆ, ಹೇಡನ್ ಕೇರ್ 27 ರನ್​ಗಳಿಸಿದರು.

ಅಲ್ಲದೆ 8ನೇ ವಿಕೆಟ್​ಗೆ 62 ರನ್​ಗಳ ಜೊತೆಯಾಟವಾಡುವ ಮೂಲಕ ಸಿಡ್ನಿ ಸಿಕ್ಸರ್ಸ್ ತಂಡವನ್ನು 18.4 ಓವರ್​ಗಳಲ್ಲಿ ಗುರಿ ಮುಟ್ಟಿಸಿದರು. ಈ ಮೂಲಕ ಸಿಡ್ನಿ ಸಿಕ್ಸರ್ಸ್ ತಂಡವು 3 ವಿಕೆಟ್​ಗಳ ರೋಚಕ ಜಯ ತಂದು ಕೊಡುವಲ್ಲಿ ಯಶಸ್ವಿಯಾದರು.

 

Source link

Railway stocks: ಬಜೆಟ್​ಗೆ ಮುಂಚೆ ರೈಲ್ವೆ ಕ್ಷೇತ್ರದ ಯಾವ ಷೇರುಗಳನ್ನು ಖರೀದಿಸಬಹುದು? – Kannada News | Demand for railway stocks, weeks ahead of 2026 Budget

ನವದೆಹಲಿ, ಜನವರಿ 6: ಬಜೆಟ್ ಮಂಡನೆಗೆ (Union Budget) ಕೆಲವೇ ವಾರ ಬಾಕಿ ಇದೆ. ನಿರೀಕ್ಷೆಗಳು ಹಲವಿವೆ. ರೈಲ್ವೆ ಕ್ಷೇತ್ರದಲ್ಲೂ (Indian Railways) ನಿರೀಕ್ಷೆ ಹೆಚ್ಚಿದೆ. ಆ ಕ್ಷೇತ್ರದ ಹಲವು ಕಂಪನಿಗಳ ಷೇರುಗಳಿಗೆ ಇತ್ತೀಚೆಗೆ ಬೇಡಿಕೆ ಹೆಚ್ಚುತ್ತಿದೆ. ರೈಲ್ವೆ ಸ್ಟಾಕ್​ಗಳು ಕಳೆದ ಎರಡು ವಾರಗಳಲ್ಲಿ ಸರಾಸರಿಯಾಗಿ ಶೇ. 13ರಷ್ಟು ಏರಿವೆ. ಇತ್ತೀಚೆಗೆ ರೈಲು ಪ್ರಯಾಣ ದರವನ್ನು ಏರಿಸಿರುವುದು, ಮುಂಬರುವ ಬಜೆಟ್​ನಲ್ಲಿ ಪೂರಕ ಕ್ರಮಗಳಿಗೆ ನಿರೀಕ್ಷೆ ಹೆಚ್ಚಿರುವುದು ರೈಲು ಷೇರುಗಳ ಮೇಲೆ ಹೂಡಿಕೆದಾರರ ಕಣ್ಣು ನೆಡುವಂತೆ ಮಾಡಿದೆ.

ಡಿಸೆಂಬರ್ 26ರಂದು ರೈಲು ಪ್ರಯಾಣ ದರ ಏರಿಸಿದ್ದರಿಂದ ಭಾರತೀಯ ರೈಲ್ವೆಯ ಆದಾಯಕ್ಕೆ 600 ಕೋಟಿ ರೂನಷ್ಟು ಹೆಚ್ಚಳ ಆಗಿದೆ. ಈ ಬಾರಿಯ ಬಜೆಟ್​ನಲ್ಲಿ ರೈಲ್ವೆ ಕ್ಷೇತ್ರಕ್ಕೆ ಸರ್ಕಾರದಿಂದ 1.3 ಲಕ್ಷ ಕೋಟಿ ರೂ ಬಂಡವಾಳ ವೆಚ್ಚ ಪ್ರಕಟಗೊಳ್ಳುವ ನಿರೀಕ್ಷೆ ಇದೆ ಎಂದು ತಜ್ಞರು ನಿರೀಕ್ಷಿಸಿದ್ದಾರೆ.

ಇದನ್ನೂ ಓದಿ: ರಾಮ್​ಜೆಟ್ ಶಕ್ತ ಆರ್ಟಿಲರಿ ಶೆಲ್ ಹೊಂದಿರುವ ವಿಶ್ವದ ಮೊದಲ ಸೇನೆ ಭಾರತದ್ದು; ಏನಿದರ ವಿಶೇಷತೆ?

ಭಾರತೀಯ ರೈಲ್ವೇಸ್ ಯಾಕೆ ಮುಖ್ಯ?

ಭಾರತದಲ್ಲಿ ಈಗಲೂ ಕೂಡ ಜನರಿಗೆ ಕಡಿಮೆ ಬೆಲೆಯಲ್ಲಿ ಪ್ರಯಾಣ ವ್ಯವಸ್ಥೆ ಇದೆ ಎಂದರೆ ಅದು ರೈಲು. ದೇಶದ ಬಹುತೇಕ ಎಲ್ಲಾ ಜಾಗಕ್ಕೂ ಈಗ ರೈಲ್ವೆ ನೆಟ್ವರ್ಕ್ ಇದೆ. ಜನರ ಪ್ರಯಾಣಕ್ಕೆ ಮಾತ್ರವಲ್ಲ, ಸರಕು ಸಾಗಣೆಯಲ್ಲೂ ರೈಲ್ವೆಯದ್ದು ಮುಖ್ಯ ಪಾತ್ರ ಇದೆ. ದೇಶದ ಲಾಜಿಸ್ಟಿಕ್ಸ್ ವ್ಯವಸ್ಥೆಗೆ ರೈಲ್ವೆಯ ಬಲ ಇದೆ. ರಫ್ತು, ಆಮದು, ಸರಬರಾಜು ಸರಪಳಿ ಇದಕ್ಕೆ ಗೂಡ್ಸ್ ರೈಲುಗಳ ಬಳಕೆ ಬಹಳ ಆಗುತ್ತದೆ. ಹೀಗಾಗಿ, ಸರ್ಕಾರ ಯಾವತ್ತಿಗೂ ಕೂಡ ರೈಲ್ವೇ ವಿಭಾಗವನ್ನು ಕಡೆಗಣಿಸಲು ಸಾಧ್ಯವಿಲ್ಲ.

ಕಳೆದ ಎರಡು ವಾರದಲ್ಲಿ ವಿವಿಧ ರೈಲು ಷೇರುಗಳ ಬೆಲೆ ಏರಿಕೆ

  • ಇರ್​ಕಾನ್ ಇಂಟರ್ನ್ಯಾಷನಲ್: ಶೇ. 13.93ರಷ್ಟು ಹೆಚ್ಚಳ
  • ಐಆರ್​ಎಫ್​ಸಿ: ಶೇ. 9.79
  • ತೀತಾಗಡ್ ರೈಲ್: ಶೇ. 8.79
  • ಐಆರ್​ಸಿಟಿಸಿ: ಶೇ. 1.94
  • ರೈಟ್ಸ್: ಶೇ. 5.72
  • ರೈಲ್ ವಿಕಾಸ್: ಶೇ. 10
  • ಜುಪಿಟರ್ ವ್ಯಾಗನ್ಸ್: ಶೇ. 8.90 ಹೆಚ್ಚಳ

ಇದನ್ನೂ ಓದಿ: ಈ ಬಾರಿಯ ಗಣರಾಜ್ಯೋತ್ಸವ ಬಹಳ ಡಿಫರೆಂಟ್; ಸೇನೆಯಿಂದ ಒಂಟೆ, ಭಾರತೀಯ ತಳಿಯ ನಾಯಿಗಳ ಮೆರವಣಿಗೆ

ಬಜೆಟ್​ಗೆ ಮುನ್ನ ಯಾವ ರೈಲ್ವೆ ಸ್ಟಾಕ್​ಗಳನ್ನು ಖರೀದಿಸಬಹುದು?

ವೆಂಚುರಾ ಸಂಸ್ಥೆಯ ವಿನೀತ್ ಬೋಳಿಂಜಕರ್ ಅವರು ಕೆಲ ರೈಲ್ವೆ ಷೇರುಗಳನ್ನು ಖರೀದಿಸಲು ಶಿಫಾರಸು ಮಾಡಿದ್ದಾರೆ. ಅದಕ್ಕೆ ಕೆಲ ಕಾರಣಗಳನ್ನೂ ನೀಡಿದ್ದಾರೆ. ಅವರು ಶಿಫಾರಸು ಮಾಡಿದ ಷೇರುಗಳೆಂದರೆ ಆರ್​ವಿಎನ್​ಎಲ್, ಐಆರ್​ಎಫ್​ಸಿ, ಐಆರ್​ಸಿಟಿಸಿ, ತೀತಾಗಡ್ ಮತ್ತು ರೈಟ್ಸ್.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬಿಗ್ ಬಾಸ್ ಫಿನಾಲೆ ಯಾವಾಗ? ಇನ್ನೂ ಎಷ್ಟು ಎಲಿಮಿನೇಷನ್ ನಡೆಯುತ್ತೆ? – Kannada News | Bigg Boss Kannada 12 Finale: Date, Eliminations, Winner name and Prize Money Revealed

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಹಂತ ತಲುಪಿದೆ. ಕಳೆದ ಕೆಲವು ವಾರಗಳಿಂದ ಈ ಶೋ ಪ್ರೇಕ್ಷಕರಿಗೆ ಮನರಂಜನೆ ನೀಡುತ್ತಾ ಬರುತ್ತಿದೆ. ಈಗ ಶೋ ಕೊನೆ ಆಗುವ ಹಂತ ತಲುಪಿದೆ. ಜನವರಿ 17 ಹಾಗೂ 18ರಂದು ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಅದಕ್ಕೂ ಮೊದಲು ಎಷ್ಟು ಎಲಿಮಿನೇಷನ್ ನಡೆಯುತ್ತದೆ? ಫಿನಾಲೆ ಯಾವ ರೀತಿಯಲ್ಲಿ ನಡೆಯುತ್ತದೆ ಎಂಬ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 12’ ಈಗ 15ನೇ ವಾರಕ್ಕೆ ಕಾಲಿಟ್ಟಿದೆ. ಸದ್ಯ ದೊಡ್ಮನೆಯಲ್ಲಿ ಗಿಲ್ಲಿ ನಟ, ರಘು, ಅಶ್ವಿನಿ ಗೌಡ, ಕಾವ್ಯಾ ಶೈವ, ರಾಶಿಕಾ ಶೆಟ್ಟಿ, ರಕ್ಷಿತಾ ಶೆಟ್ಟಿ, ಧ್ರುವಂತ್ ಹಾಗೂ ಧನುಷ್ ಇದ್ದಾರೆ. ಇವರ ಪೈಕಿ ಒಬ್ಬರು ಕಪ್ ಎತ್ತಲಿದ್ದಾರೆ. ಅದಕ್ಕೂ ಮೊದಲು ಕೆಲವು ಎಲಿಮಿನೇಷನ್ ನಡೆಯಲಿದೆ.

ಸದ್ಯ ದೊಡ್ಮನೆಯಲ್ಲಿ 8 ಮಂದಿ ಇದ್ದಾರೆ. ಇವರ ಪೈಕಿ ಫಿನಾಲೆಗೆ ಉಳಿಯೋದು ಆರು ಅಥವಾ ಐದು ಮಂದಿ ಮಾತ್ರ. ಕಳೆದ ಎರಡು ಸೀಸನ್​​ಗಳಿಂದ ಫಿನಾಲೆಗೆ ಆರು ಜನರನ್ನು ಉಳಿಸಿಕೊಳ್ಳಲಾಗಿತ್ತು. ಈ ಬಾರಿಯೂ ಹಾಗೆಯೇ ಮಾಡಲಾಗುತ್ತದೆಯೇ ಎಂಬ ಪ್ರಶ್ನೆ ಮೂಡಿದೆ. ಹಾಗಾದಲ್ಲಿ, ಈ ವಾರ ಅಥವಾ ಮುಂದಿನ ವಾರ ಮಧ್ಯವಾರದ ಎಲಿಮಿನೇಷನ್ ಇರಲಿದೆ. ಈ ವಾರಾಂತ್ಯದಲ್ಲಿ ಒಂದು ಎಲಿಮಿನೇಷನ್ ಆಗಲಿದೆ.

ಆರು ಮಂದಿಯನ್ನು ಫಿನಾಲೆಗೆ ಕರೆದುಕೊಂಡು ಹೋದರೆ ಜನವರಿ 17ರಂದು ಒಬ್ಬರನ್ನು ಎಲಿಮಿನೇಟ್ ಮಾಡಲಾಗುತ್ತದೆ. ಜನವರಿ 18ರಂದು ಹಂತ ಹಂತವಾಗಿ ಎಲಿಮಿನೇಷನ್ ಮಾಡಿ, ಇಬ್ಬರನ್ನು ಉಳಿಸಿಕೊಳ್ಳಲಾಗುತ್ತದೆ. ಫಿನಾಲೆ ಸಂಜೆ 6 ಗಂಟೆಗೆ ಆರಂಭ ಆಗುವ ಸಾಧ್ಯತೆ ಇದೆ. ವಿವಿಧ ಸ್ಪರ್ಧಿಗಳು ಡ್ಯಾನ್ಸ್ ಕೂಡ ಮಾಡುತ್ತಾರೆ. ಈ ಬಾರಿ ಎಲಿಮಿನೇಟ್ ಆದ ಸ್ಪರ್ಧಿಗಳು ಫಿನಾಲೆಯಲ್ಲಿ ಇರಲಿದ್ದಾರೆ. ಗೆದ್ದ ಸ್ಪರ್ಧಿಗೆ 50 ಲಕ್ಷ ಕ್ಯಾಶ್ ಹಾಗೂ ಆಕರ್ಷಕ ಟ್ರೋಫಿ ಸಿಗಲಿದೆ.

ಇದನ್ನೂ ಓದಿ: ಬಿಗ್ ಬಾಸ್​​ನಲ್ಲಿ ಇಬ್ಬರಿಗೆ ರೆಡ್ ಕಾರ್ಡ್; ಮೂರು ತಿಂಗಳ ಸಂಬಳ ಕಟ್, ಫಿನಾಲೆಗೂ ಇಲ್ಲ ಅವಕಾಶ

ಈ ವಾರ ಧನುಷ್ ಅವರನ್ನು ಹೊರತುಪಡಿಸಿ ಉಳಿದ ಏಳು ಮಂದಿ ನಾಮಿನೇಟ್ ಆಗಿದ್ದಾರೆ. ಇವರಲ್ಲಿ ಯಾರು ಹೊರ ಹೋಗುತ್ತಾರೆ ಎಂಬ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಟೊಮೊಟೊ ಬಳಸಿ ಪೂರಿ ಲಟ್ಟಿಸಿದ ಯುವಕ, ವೈರಲ್‌ ಆಯ್ತು ದೃಶ್ಯ – Kannada News | A young man used the jugaad idea to make puri

ನಮ್ಮಲ್ಲಿ ಪ್ರತಿಭೆಗಳಿಗೆ, ಜುಗಾಡ್ ಐಡಿಯಾಗಳಿಗೇನು ಕೊರತೆ ಇಲ್ಲ ಬಿಡಿ. ತಮ್ಮ ದಿನನಿತ್ಯದ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ವಿಭಿನ್ನ ಶೈಲಿಯ ದೇಸಿ ಉಪಾಯಗಳನ್ನು (desi idea) ಬಳಸಿಕೊಳ್ಳುತ್ತಾರೆ. ಇದಕ್ಕೆ ಉದಾಹರಣಯಂತಿದೆ ಈ ವಿಡಿಯೋ. ಸಾಮಾನ್ಯವಾಗಿ ಚಪಾತಿ ಅಥವಾ ಪೂರಿ ಲಟ್ಟಿಸಲು ಲಟ್ಟಣಿಗೆ ಬಳಸುತ್ತೇವೆ. ಆದರೆ ಇಲ್ಲೊಬ್ಬ ಯುವಕನು (young man) ಟೊಮೊಟೊದಿಂದಲೇ ಪೂರಿ ಲಟ್ಟಿಸುತ್ತಿರುವ ವಿಡಿಯೋ ನೆಟ್ಟಿಗರ ಗಮನ ಸೆಳೆಯುತ್ತಿದೆ.

Maximum_manthan ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿಯುವಕನೊಬ್ಬ ಲಟ್ಟಣಿಗೆ ಬದಲು ಟೊಮೊಟೊದಿಂದ ಪೂರಿ ಲಟ್ಟಿಸುವುದನ್ನು ಕಾಣಬಹುದು. ಜುಗಾಡ್ ಐಡಿಯಾ ಬಳಸಿ ಲಟ್ಟಿಸಿದ ಪೂರಿ ದುಂಡಗೆ ಇರುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ:12 ಲಕ್ಷ ರೂ ಸಾಲ ತೀರಿಸಲು ಹಣ ನೀಡಿದ ಮಗ, ಕಣ್ಣೀರು ಹಾಕಿದ ತಾಯಿ

ಈ ವಿಡಿಯೋ ಎಂಭತ್ತೇಳು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಇದು ತಂತ್ರಜ್ಞಾನದ ಪ್ರಭಾವ ಎಂದರೆ, ಮತ್ತೊಬ್ಬರು, ಒಳ್ಳೆಯ ಪ್ರಯತ್ನ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಅದ್ಭುತ ಉಪಾಯ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅವಳಿ ಜವಳಿ ಆಕಳು ಕರುಗಳಿಗೆ ಅದ್ಧೂರಿಯಾಗಿ ತೊಟ್ಟಿಲು ಶಾಸ್ತ್ರ: ಮುದ್ದಾದ ಚಿತ್ರಗಳು ಇಲ್ಲಿವೆ – Kannada News | Grand cradle ceremony for twin cow calves in Gadag

ಗ್ರಾಮದ ರೈತ ನಾಗರಾಜ್ ಮಡಿವಾಳರ ಮನೆಯಲ್ಲಿ ತೊಟ್ಟಿಲಿಗೆ ತೆಂಗಿನ ಗರಿ, ತಳಿರು ತೋರಣ, ಹೂವುಗಳಿಂದ ಶೃಂಗಾರ ಮಾಡಲಾಗಿದ್ದು, ಅಕ್ಷರಶಃ ಹಬ್ಬದ ವಾತಾವರಣ ಸ್ಥಳದಲ್ಲಿ ಮನೆ ಮಾಡಿತ್ತು. ಸಂಪ್ರದಾಯದಂತೆ ಮುದ್ದಾದ ಕರುಗಳನ್ನು ತೊಟ್ಟಿಲಿಗೆ ಹಾಕಿ ನೆರೆದಿದ್ದವರು ಸಂತಸಪಟ್ಟರು. ಮಠಾಧೀಶರು ಕೂಡ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

Source link

ಆಸ್ಕರ್​​ಗೆ ಇನ್ನಷ್ಟು ಹತ್ತಿರವಾದ ‘ಹೋಮ್​​ಬೌಂಡ್’, ಇನ್ನೆಷ್ಟು ಹಂತ ಬಾಕಿ – Kannada News | Indian movie Homebound movie another step closer to Oscars

ಸಿನಿಮಾಗಳಿಗಾಗಿ (Cinema) ನೀಡಲಾಗುವ ವಿಶ್ವಶ್ರೇಷ್ಠ ಪ್ರಶಸ್ತಿ ಎಂದು ನಂಬಲಾಗಿರುವ ಆಸ್ಕರ್ಸ್ ಅಥವಾ ಅಕಾಡೆಮಿ ಅವಾರ್ಡ್ಸ್​ನಲ್ಲಿ ಭಾರತದ ಸಿನಿಮಾಗಳು ಪ್ರಶಸ್ತಿಯ ರೇಸಿನಲ್ಲಿದ್ದು, ಭಾರತದಿಂದ ಈ ಬಾರಿ ಅಧಿಕೃತವಾಗಿ ಆಸ್ಕರ್ಸ್​​ಗೆ ಆಯ್ಕೆ ಆಗಿರುವ ‘ಹೋಮ್​​ಬೌಂಡ್’ ಸಿನಿಮಾ ಈಗಾಗಲೇ ಕೆಲವು ಮೆಟ್ಟಿಲುಗಳನ್ನು ಹತ್ತಿದೆ. ಇದೀಗ ಆಸ್ಕರ್​ಗೆ ಇನ್ನಷ್ಟು ಸನಿಹವಾಗಿದೆ ‘ಹೋಮ್​​ಬೌಂಡ್’ ಈ ಹಿಂದೆ ಪ್ರಾಥಮಿಕ ಹಂತ, ಅದರ ಬಳಿಕದ ಅಂತಿಮ ಹದಿನೈದರ ಪಟ್ಟಿಗೆ ಸಹ ‘ಹೋಮ್​​ಬೌಂಡ್’ ಆಯ್ಕೆ ಆಗಿತ್ತು. ಈಗ ನಾಮಿನೇಷನ್​​ಗೆ ಶಾರ್ಟ್ ಲಿಸ್ಟ್ ಆಗುವ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

ಕರಣ್ ಜೋಹರ್ ನಿರ್ಮಾಣ ಮಾಡಿರುವ ‘ಹೋಮ್​​ಬೌಂಡ್’ ಸಿನಿಮಾ ಧರ್ಮ ಮತ್ತು ಜಾತಿ ಮತ್ತು ಮಹಿಳಾ ದೌರ್ಜನ್ಯದ ಬಗೆ ವಸ್ತುವನ್ನು ಒಳಗೊಂಡ ಸಿನಿಮಾ ಆಗಿದ್ದು ಸಿನಿಮಾನಲ್ಲಿ ಇಶಾನ್ ಕಟ್ಟರ್, ಜಾನ್ಹವಿ ಕಪೂರ್ ಮತ್ತು ವಿಶಾಲ್ ಜೇಟ್ವಾ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ನೀರಜ್ ಗಯ್ವಾನ್ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಆಸ್ಕರ್​​ಸ್​ನ ಅತ್ಯುತ್ತಮ ವಿದೇಶಿ ಸಿನಿಮಾ ವಿಭಾಗದಲ್ಲಿ ಸ್ಪರ್ಧೆಯಲ್ಲಿರುವ ‘ಹೋಮ್​​ಬೌಂಡ್’ ಸಿನಿಮಾ ಅಂತಿಮ ಹದಿನೈದು ಸಿನಿಮಾಗಳ ಪಟ್ಟಿಗೆ ಆಯ್ಕೆ ಆಗಿತ್ತು. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ.

ಇದನ್ನೂ ಓದಿ:ಕಮಲ್-ರಜನಿ ಕಾಂಬಿನೇಷನ್ ಸಿನಿಮಾ: ಯುವ ನಿರ್ದೇಶಕನಿಗೆ ಅದೃಷ್ಟ

ಈ ವರೆಗೆ ಭಾರತದ ಐದು ಸಿನಿಮಾಗಳು ಮಾತ್ರವೇ ವಿದೇಶಿ ವಿಭಾಗದಲ್ಲಿ ಆಸ್ಕರ್ಸ್​ನ ಶಾರ್ಟ್ ಲಿಸ್ಟ್ ಪಟ್ಟಿ ಸೇರಿವೆ. ಐದು ಸಿನಿಮಾಗಳಲ್ಲಿ ‘ಹೋಮ್​​ಬೌಂಡ್’ ಸಹ ಒಂದಾಗಿದೆ. ನಾಮಿನೇಷನ್ಸ್ ಪಟ್ಟಿಯನ್ನು ಜನವರಿ 22 ರಂದು ಘೋಷಣೆ ಮಾಡಲಿದ್ದು, ‘ಹೋಮ್​​ಬೌಂಡ್’ ಸಿನಿಮಾ ನಾಮಿನೇಷನ್ಸ್​​ಗೆ ಎಂಟ್ರಿ ಕೊಟ್ಟಲ್ಲಿ, ಭಾರತೀಯ ಚಿತ್ರರಂಗದ ಪಾಲಿಗೆ ಹೆಮ್ಮೆಯ ವಿಷಯವಾಗಲಿದೆ. ಈ ಹಿಂದೆ ಕೇವಲ ‘ಲಗಾನ್’ ಸಿನಿಮಾ ಮಾತ್ರವೇ ವಿದೇಶಿ ಸಿನಿಮಾ ವಿಭಾಗದಲ್ಲಿ ಆಸ್ಕರ್ಸ್​ನ ನಾಮಿನೇಷನ್ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡ ಭಾರತೀಯ ಸಿನಿಮಾ ಆಗಿತ್ತು.

ಆದರೆ ‘ಹೋಮ್​​ಬೌಂಡ್​​’ಗೆ ಕಠಿಣ ಸ್ಪರ್ಧೆ ಸಹ ಇದೆ. ಇರಾಖ್​ನ ‘ದಿ ಪ್ರೆಸಿಡೆಂಟ್ ಕೇಕ್’, ಪ್ಯಾಲೆಸ್ತೇನಿನ ‘ಪ್ಯಾಲೆಸ್ತೇನ್ 36’, ‘ದಕ್ಷಿಣ ಕೊರಿಯಾದ ‘ನೋ ಅದರ್ ಚಾಯ್ಸ್’ ಸಿನಿಮಾಗಳು ಕಠಿಣ ಸ್ಪರ್ಧೆ ಒಡ್ಡಲಿವೆ. ಮಾತ್ರವಲ್ಲದೆ ‘ಹೋಮ್ಬೌಂಡ್’ ಸಿನಿಮಾಕ್ಕೆ ಇನ್ನು ಮುಂದಿನ ಹಾದಿ ಕ್ರಮಿಸಲು ದೊಡ್ಡ ಮಟ್ಟದ ಪ್ರಚಾರದ ಅವಶ್ಯಕತೆಯೂ ಸಹ ಇದೆ.

‘ಹೋಮ್​​ಬೌಂಡ್’ ಸಿನಿಮಾ ಆಸ್ಕರ್ಸ್​ ರೇಸಿನಲ್ಲಿ ಇದೆಯಾದರೂ ಸಿನಿಮಾ ಅಂತಿಮ ಹಂತ ತಲುಪಲು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಭರ್ಜರಿ ಪ್ರಚಾರವನ್ನೂ ಮಾಡಬೇಕಿದೆ. ಆದರೆ ಸಿನಿಮಾದ ನಿರ್ಮಾಪಕರುಗಳ್ಯಾರು ಈ ಬಗ್ಗೆ ಹೆಚ್ಚಿಗೆ ತಲೆ ಕೆಡಿಸಿಕೊಂಡಂತಿಲ್ಲ. ಜನವರಿ 22 ರಂದು ನಾಮಿನೇಷನ್ಸ್ ಘೋಷಣೆ ಆಗಲಿದ್ದು, ಅಂದು ‘ಹೋಮ್​​ಬೌಂಡ್​’ ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತದೆಯೇ ಇಲ್ಲವೇ ತಿಳಿಯಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

SIR ವಿಚಾರಣೆಗೆ ಹಾಜರಾಗಲು ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಸಮನ್ಸ್ – Kannada News | Team India Cricketer Mohammed Shami summoned for SIR

ದೇಶದ ಹಲವು ರಾಜ್ಯಗಳಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಚಾಲ್ತಿಯಲ್ಲಿದೆ. ಈ ಪರಿಷ್ಕರಣೆಯ ಭಾಗವಾಗಿ ಇದೀಗ ವಿಚಾರಣೆಗೆ ಹಾಜರಾಗುವಂತೆ ಟೀಮ್ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ಮತ್ತು ಅವರ ಸಹೋದರ ಮೊಹಮ್ಮದ್ ಕೈಫ್​ ಅವರಿಗೆ ಚುನಾವಣಾ ಆಯೋಗ ಸಮನ್ಸ್ ಜಾರಿ ಮಾಡಿದೆ.

ದಕ್ಷಿಣ ಕೋಲ್ಕತ್ತಾದ ಜಾದವ್‌ಪುರ ಪ್ರದೇಶದ ಕರ್ತ್ಜು ನಗರ ಶಾಲೆಯಿಂದ ಸೋಮವಾರ ನೋಟಿಸ್‌ಗಳನ್ನು ಜಾರಿಗೊಳಿಸಲಾಗಿದ್ದು, ಸಹಾಯಕ ಚುನಾವಣಾ ನೋಂದಣಿ ಅಧಿಕಾರಿ (AERO) ಮುಂದೆ ಹಾಜರಾಗುವಂತೆ ಶಮಿ ಮತ್ತು ಅವರ ತಮ್ಮನಿಗೆ ಸೂಚಿಸಲಾಗಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಮೊಹಮ್ಮದ್ ಶಮಿ ವಿಜಯ್ ಹಝಾರೆ ಟ್ರೋಫಿಯಲ್ಲಿ ರಾಜ್‌ಕೋಟ್‌ನಲ್ಲಿ ಬಂಗಾಳವನ್ನು ಪ್ರತಿನಿಧಿಸುತ್ತಿರುವುದರಿಂದ ನಿಗದಿತ ದಿನಾಂಕದಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ಈ ಪಂದ್ಯದ ಬಳಿಕ ಅವರು ಕೊಲ್ಕತ್ತಾಗೆ ಮರಳುವ ಸಾಧ್ಯತೆಯಿದೆ.

ಸಮನ್ಸ್ ಜಾರಿಗೊಳಿಸಿದ್ದೇಕೆ?

ಮೊಹಮ್ಮದ್ ಶಮಿ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ (ಕೆಎಂಸಿ) ವಾರ್ಡ್ ಸಂಖ್ಯೆ 93 ರಲ್ಲಿ ಮತದಾರರಾಗಿ ದಾಖಲಾಗಿದ್ದಾರೆ. ಇದು ರಾಶ್‌ಬೆಹರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಅಂದರೆ ರಾಶ್​ಬೆಹರಿ ಕ್ಷೇತ್ರದಲ್ಲಿ ಮೊಹಮ್ಮದ್ ಶಮಿ ಮತದಾನದ ಹಕ್ಕನ್ನು ಹೊಂದಿದ್ದಾರೆ.

ಆದರೆ ಶಮಿ ಅವರು ಮೂಲತಃ ಉತ್ತರ ಪ್ರದೇಶದವರು. ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಜನಿಸಿದ ಅವರು ಹಲವಾರು ವರ್ಷಗಳಿಂದ ಕೋಲ್ಕತ್ತಾದ ಖಾಯಂ ನಿವಾಸಿಯಾಗಿದ್ದಾರೆ

ಇದೀಗ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ವೇಳೆ  ಮೊಹಮ್ಮದ್ ಶಮಿ ಮತ್ತು ಅವರ ಸಹೋದರನ ಹೆಸರುಗಳು ಎಣಿಕೆ ನಮೂನೆಗಳಲ್ಲಿನ ತೊಡಕುಗಳಿಂದಾಗಿ ವಿಚಾರಣಾ ಪಟ್ಟಿಯಲ್ಲಿ ಕಾಣಿಸಿಕೊಂಡಿವೆ. ಈ ಮ್ಯಾಪಿಂಗ್ ವ್ಯತ್ಯಾಸಗಳ ಬಗ್ಗೆ ವಿಚಾರಣೆ ನಡೆಸಲು ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಕೈಫ್ ಅವರಿಗೆ ಚುನಾವಣಾ ಆಯೋಗ ನೋಟೀಸ್ ಕಳುಹಿಸಿದೆ.

ಅತ್ತ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿಯುತ್ತಿರುವುದರಿಂದ ಮೊಹಮ್ಮದ್ ಶಮಿ ಈವರೆಗೆ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಶಮಿ ಅವರ ವಿಚಾರಣೆಯನ್ನು ಜನವರಿ 9 ರಿಂದ 11 ರ ನಡುವೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ ಎಂದು ವರದಿಯಾಗಿದೆ.

ಸದ್ಯ ಪಶ್ಚಿಮ ಬಂಗಾಳದಲ್ಲಿ ಎಸ್​ಐಆರ್​ ಪ್ರಕ್ರಿಯೆ ಚಾಲನೆಯಲ್ಲಿದ್ದು, ಮುಂದಿನ ವಿಧಾನಸಭಾ ಚುನಾವಣೆಗೂ ಮುನ್ನ ಈ ಪ್ರಕ್ರಿಯೆಯು ಅಂತ್ಯಗೊಳ್ಳಲಿದೆ. ಅಲ್ಲದೆ ಬಂಗಾಳದ ಅಂತಿಮ ಮತದಾರರ ಪಟ್ಟಿಯನ್ನು ಫೆಬ್ರವರಿ 14 ರಂದು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಇದನ್ನೂ ಓದಿ: ಅಬ್ಬರ ಸಿಡಿಲಬ್ಬರ… ಟ್ರಾವಿಸ್ ಹೆಡ್​ ಬ್ಯಾಟ್​ನಿಂದ ದಾಖಲೆಯ ಸೆಂಚುರಿ

ಇದಕ್ಕೂ ಮುನ್ನ ಪಶ್ಚಿಮ ಬಂಗಾಳದ ಎಸ್​ಐಆರ್​ ಪ್ರಕ್ರಿಯೆಯ ಭಾಗವಾಗಿ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಪಟ್ಟಿಯಲ್ಲಿ 58 ಲಕ್ಷಕ್ಕೂ ಅಧಿಕ ಮತದಾರರ ಹೆಸರುಗಳನ್ನು ಅಳಿಸಲಾಗಿತ್ತು. ಅಲ್ಲದೆ ಪ್ರಕಟವಾದ ಕರಡು ಮತದಾರರ ಪಟ್ಟಿಯಿಂದ ಹೆಸರು ಅಳಿಸಿಹೋಗಿದ್ದರೆ ಅಥವಾ ಕಾಣೆಯಾಗಿದ್ದರೆ, ಅವರು ಮತ್ತೊಮ್ಮೆ ಅಧಿಕೃತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ಚುನಾವಣಾ ಆಯೋಗ ತಿಳಿಸಿದೆ.

Published On – 1:06 pm, Tue, 6 January 26

Source link

ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಮರಕ್ಕೆ ಕಟ್ಟಿ ಹಾಕಿ, ಕೂದಲು ಕತ್ತರಿಸಿದ ದುರುಳರು – Kannada News | Another minority horror in Bangladesh: Hindu woman Physically Assaulted,tied to tree, hair cut off

ಢಾಕಾ, ಜನವರಿ 06: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. ಕಳೆದ 18 ದಿನಗಳಲ್ಲಿ ಆರು ಹಿಂದೂ(Hindu)ಗಳನ್ನು ಹತ್ಯೆ ಮಾಡಲಾಗಿದೆ. ಜೆನೈದಾ ಜಿಲ್ಲೆಯ ಕಾಲಿಗಂಜ್‌ನಲ್ಲಿ ಹಿಂದೂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ, ಅಷ್ಟೇ ಅಲ್ಲದೆ ಆಕೆಯನ್ನು ಮರಕ್ಕೆ ಕಟ್ಟಿ ಕೂದಲು ಕತ್ತರಿಸಿ ಹಲ್ಲೆ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ.

ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಇಬ್ಬರು ಆರೋಪಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿ, ಮರಕ್ಕೆ ಕಟ್ಟಿ. ಬಲವಂತವಾಗಿ ಆಕೆಯ ಕೂದಲುಗಳನ್ನು ಕತ್ತರಿಸಿ ಲೈಂಗಿಕ ದೌರ್ಜನ್ಯವೆಸಗಿ ಹಲ್ಲೆಯನ್ನು ವಿಡಿಯೋದಲ್ಲಿ ರೆಕಾರ್ಡ್​ ಮಾಡಿದ್ದಾರೆ. ನಂತರ ಆ ದೃಶ್ಯಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ್ದರು.
ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ಮಹಿಳೆ ಸುಮಾರು ಎರಡೂವರೆ ವರ್ಷಗಳ ಹಿಂದೆ ಕಾಲಿಗಂಜ್ ಪುರಸಭೆಯ ವಾರ್ಡ್ ಸಂಖ್ಯೆ 7 ರಲ್ಲಿ ಶಾಹಿನ್ ಎಂಬ ವ್ಯಕ್ತಿ ಮತ್ತು ಅವನ ಸಹೋದರನಿಂದ ಭೂಮಿ ಮತ್ತು ಎರಡು ಅಂತಸ್ತಿನ ಮನೆಯನ್ನು ಖರೀದಿಸಿದ್ದಾಗಿ ಹೇಳಿದ್ದಾರೆ. ಖರೀದಿಯ ನಂತರ, ಶಾಹಿನ್ ಆಕೆಗೆ ಕಿರುಕುಳ ನೀಡಲು ಮತ್ತು ಅಸಭ್ಯವಾಗಿ ವರ್ತಿಸಲು ಪ್ರಾರಂಭಿಸಿದ್ದ. ಆದರೆ ಆಕೆ ಪದೇ ಪದೇ ನಿರಾಕರಿಸಿದರೂ ಆತ ಕಿರುಕುಳ ನೀಡುತ್ತಲೇ ಇದ್ದ.

ಮತ್ತಷ್ಟು ಓದಿ: ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ಹತ್ಯೆ; 3 ವಾರಗಳಲ್ಲಿ ಅಲ್ಪಸಂಖ್ಯಾತರ ಮೇಲೆ 5ನೇ ದಾಳಿ

ಶನಿವಾರ ಸಂಜೆ, ಆಕೆಯ ಗ್ರಾಮದ ಇಬ್ಬರು ಸಂಬಂಧಿಕರು ಭೇಟಿ ನೀಡಿದ್ದಾಗ, ಶಾಹಿನ್ ಮತ್ತು ಆತನ ಸಹಚರ ಹಸನ್ ಮನೆಗೆ ಬಲವಂತವಾಗಿ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಪುರುಷರು ಮಹಿಳೆಯಿಂದ 50,000 ಟಾಕಾಗೆ ಬೇಡಿಕೆ ಇಟ್ಟಿದ್ದರು, ಆಕೆ ನಿರಾಕರಿಸಿದಾಗ, ಆಕೆಯ ಸಂಬಂಧಿಕರ ಮೇಲೆ ಹಲ್ಲೆ ನಡೆಸಿ ಮನೆಯಿಂದ ಹೊರಗೆ ಹಾಕಿದ್ದಾರೆ ಎಂದು ವರದಿಯಾಗಿದೆ.

ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ಎಂ. ಮೊಸ್ತಫಿಜುರ್ ರೆಹಮಾನ್ ಮಾತನಾಡಿ, ಮಹಿಳೆ ಆರಂಭದಲ್ಲಿ ಹಲ್ಲೆಯ ಬಗ್ಗೆ ಹೇಳಿರಲಿಲ್ಲ, ವೈದ್ಯಕೀಯ ಪರೀಕ್ಷೆಯ ನಂತರ, ಆಕೆ ಮೇಲೆ ದೌರ್ಜನ್ಯ ನಡೆದಿದೆ ಎಂದು ನಮಗೆ ತಿಳಿದುಬಂದಿದೆ” ಎಂದು ಅವರು ಹೇಳಿದರು.

ಪ್ರಜ್ಞೆ ಮರಳಿದ ನಂತರ, ಮಹಿಳೆ ಕಾಲಿಗಂಜ್ ಪೊಲೀಸ್ ಠಾಣೆಯಲ್ಲಿ ಶಾಹಿನ್ ಮತ್ತು ಹಸನ್ ವಿರುದ್ಧ ಔಪಚಾರಿಕ ದೂರು ದಾಖಲಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ನಡೆಯುತ್ತಿರುವ ಹಿಂಸಾಚಾರದ ನಡುವೆಯೇ ಈ ಅಪರಾಧ ನಡೆದಿದೆ. ಶರಿಯತ್‌ಪುರ ಜಿಲ್ಲೆಯಲ್ಲಿ ಗುಂಪೊಂದು ಹಿಂದೂ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಬೆಂಕಿ ಹಚ್ಚಿ ಸಾವನ್ನಪ್ಪಿದ ದಿನವೇ ಆ ಮಹಿಳೆಯ ಮೇಲೆ ಅತ್ಯಾಚಾರ ನಡೆದಿತ್ತು.

ಮತ್ತೊಂದು ಘಟನೆಯಲ್ಲಿ, ಡಿಸೆಂಬರ್ 24 ರಂದು ಕಲಿಮೋಹರ್ ಯೂನಿಯನ್‌ನಲ್ಲಿ ಹಿಂದೂ ಯುವಕ ಅಮೃತ್ ಮಂಡಲ್ ಅವರನ್ನು ಗುಂಪೊಂದು ಹತ್ಯೆ ಮಾಡಿತ್ತು. ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಹತ್ಯೆಯನ್ನು ಖಂಡಿಸಿತು ಆದರೆ ವಿವಾದಾತ್ಮಕವಾಗಿ ಮಂಡಲ್ ಒಬ್ಬ ಸುಲಿಗೆಕೋರ ಎಂದು ಹೇಳಿಕೊಂಡಿತ್ತು.

ಇದಕ್ಕೂ ಮೊದಲು, ಡಿಸೆಂಬರ್ 18 ರಂದು, 25 ವರ್ಷದ ದೀಪು ಚಂದ್ರ ದಾಸ್ ಅವರನ್ನು ಸುಳ್ಳು ಆರೋಪದ ಮೇಲೆ ಗುಂಪೊಂದು ಹೊಡೆದು ಕೊಂದಿತ್ತು. ಅವರ ದೇಹವನ್ನು ಮರಕ್ಕೆ ನೇತುಹಾಕಿ ಬೆಂಕಿ ಹಚ್ಚಲಾಗಿತ್ತು ಎಂದು ವರದಿಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version