IND vs AFG: ಗುರ್ಬಾಜ್ ಶತಕ ವ್ಯರ್ಥ; ಅಫ್ಘನ್ ವಿರುದ್ಧ ಭಾರತಕ್ಕೆ ಸುಲಭ ಜಯ

ಧರ್ಮಶಾಲಾದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಏಕದಿನ ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಸುಲಭವಾಗಿ ಗೆದ್ದುಕೊಂಡಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಮಳೆ ಪೀಡಿತ ಈ ಪಂದ್ಯವನ್ನು ತಲಾ 25 ಓವರ್​ಗಳಿಗೆ ಸೀಮಿತಗೊಳಿಸಲಾಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ತಂಡ ಆರಂಭಿಕ ರಹಮಾನುಲ್ಲಾ ಗುರ್ಬಾಜ್ ಅವರ ಸ್ಫೋಟಕ ಶತಕದ ನೆರವಿನಿಂದ 194 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಅವರ ಅಜೇಯ ಅರ್ಧಶತಕದ ಇನ್ನಿಂಗ್ಸ್​ ಹಾಗೂ ಕೆಎಲ್ ರಾಹುಲ್ ಅವರ ಸ್ಫೋಟಕ ಬ್ಯಾಟಿಂಗ್​ನಿಂದಾಗಿ 3 ವಿಕೆಟ್​ಗಳನ್ನು ಕಳೆದುಕೊಂಡು ಗೆಲುವಿನ ದಡ ಮುಟ್ಟಿತು.

Source link

World Blood Donor Day 2026: ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಲು ನೆರವಾಗಿ – Kannada News | World Blood Donor Day 2026: What is the significance of World Blood Donor Day?

ವಿಶ್ವ ರಕ್ತದಾನಿಗಳ ದಿನImage Credit source: png magic

ರಕ್ತದಾನವು (Blood donation) ಮಹಾದಾನ ಮಾತ್ರವಲ್ಲ ಇದು ಮಾನವೀಯತೆಯ ಅಮೂಲ್ಯವಾದ ಅಭಿವ್ಯಕ್ತಿಯೂ ಹೌದು. ಅಪಘಾತಕ್ಕೀಡಾದವರಿಗೆ, ಕ್ಯಾನ್ಸರ್‌ ರೋಗಿಗಳಿಗೆ, ಶಸ್ತ್ರಚಿಕಿತ್ಸೆಯ ಸಮಯದಲ್ಲಿ ರೋಗಿಗಳಿಗೆ ಹೀಗೆ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವವರಿಗೆ ರಕ್ತ ಬೇಕಾಗುತ್ತದೆ. ಈ ಸಂದರ್ಭದಲ್ಲಿ ನಾವು ರಕ್ತ ದಾನವನ್ನು ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಬಹುದಾಗಿದೆ.  ರಕ್ತದಾನದ ಈ ಮಹತ್ವವನ್ನು ಸಾರಲು, ರಕ್ತದಾನ ಮಾಡುವಂತೆ ಜನರನ್ನು ಪ್ರೋತ್ಸಾಹಿಸಲು ಹಾಗೂ ರಕ್ತದಾನಿಗಳನ್ನು ಗೌರವಿಸಲು ಪ್ರತಿವರ್ಷ ಜೂನ್‌ 14 ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

ವಿಶ್ವ ರಕ್ತದಾನಿಗಳ ದಿನದ ಇತಿಹಾಸವೇನು?

ವಿಶ್ವ ಆರೋಗ್ಯ ಸಂಸ್ಥೆ (WHO), ಅಂತರರಾಷ್ಟ್ರೀಯ ರೆಡ್ ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟೀಸ್ ಒಕ್ಕೂಟ (IFRC), ಅಂತರರಾಷ್ಟ್ರೀಯ ರಕ್ತ ವರ್ಗಾವಣೆ ಸಂಘ (ISBT), ಮತ್ತು ಅಂತರರಾಷ್ಟ್ರೀಯ ರಕ್ತದಾನ ಸಂಸ್ಥೆಗಳ ಒಕ್ಕೂಟ (IFBDO) ಜಂಟಿಯಾಗಿ ವಿಶ್ವ ರಕ್ತದಾನಿಗಳ ದಿನದ ಆಚರಣೆಯನ್ನು  ಪ್ರಾರಂಭಿಸಿದವು. ಈ ದಿನವನ್ನು ಮೊದಲ ಬಾರಿಗೆ 2004 ರಲ್ಲಿ ಆಚರಿಸಲಾಯಿತು. ನಂತರ ಪ್ರತಿವರ್ಷ ಈ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಜೂನ್ 14 ರಂದೇ  ಏಕೆ ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತದೆ?

ಆಸ್ಟ್ರಿಯಾದ ಜೀವಶಾಸ್ತ್ರಜ್ಞ ಮತ್ತು ವೈದ್ಯ ಕಾರ್ಲ್ ಲ್ಯಾಂಡ್‌ಸ್ಟೈನರ್ ಅವರ ಜನ್ಮದಿನ . ABO ರಕ್ತ ಗುಂಪುಗಳನ್ನು ಕಂಡುಹಿಡಿದ ಮತ್ತು ರಕ್ತ ಗುಂಪುಗಳನ್ನು ವರ್ಗೀಕರಿಸಲು ಆಧುನಿಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ  ಆಸ್ಟ್ರಿಯಾದ ಜೀವಶಾಸ್ತ್ರಜ್ಞ ಮತ್ತು ವೈದ್ಯ ಕಾರ್ಲ್ ಲ್ಯಾಂಡ್‌ಸ್ಟೈನರ್ ಅವರ ಜನ್ಮ ದಿನದ ಸವಿ ನೆನಪಿಗಾಗಿ ಜೂನ್‌ 14 ರಂದೇ ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ರಕ್ತದಾನಿಗಳ ದಿನದ ಮಹತ್ವವೇನು?

  • ಅಪಘಾತಗಳು, ಶಸ್ತ್ರಚಿಕಿತ್ಸೆಗಳು, ಕ್ಯಾನ್ಸರ್ ಚಿಕಿತ್ಸೆಗಳು, ಥಲಸ್ಸೆಮಿಯಾ ಮತ್ತು ಇತರ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ರಕ್ತದಾನವು ಹೊಸ ಜೀವನವನ್ನು ನೀಡುತ್ತದೆ. ಒಂದು ಯೂನಿಟ್ ರಕ್ತವು ಅನೇಕ ಜೀವಗಳನ್ನು ಉಳಿಸಲು ಸಹಾಯ ಮಾಡುತ್ತದೆ. ರಕ್ತದಾನದ ಈ ಮಹತ್ವವನ್ನು ಈ ದಿನ ಸಾರಲಾಗುತ್ತದೆ.
  • ರಕ್ತದಾನದ ಮಹತ್ವವನ್ನು ಉತ್ತೇಜಿಸಲು ಮತ್ತು ರಕ್ತದಾನಿಗಳನ್ನು ಗೌರವಿಸಲು ವಿಶ್ವ ರಕ್ತದಾನಿಗಳ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ.
  • ಪ್ರತಿ ವರ್ಷ, ಈ ವಿಶೇಷ ದಿನದಂದು, ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳು ಮತ್ತು ಅಭಿಯಾನಗಳನ್ನು ಆಯೋಜಿಸಲಾಗುತ್ತದೆ.
  • ವಿಶ್ವ ರಕ್ತದಾನಿಗಳ ದಿನವು ಸಮಾಜದಲ್ಲಿ ಮಾನವೀಯತೆಯ ಸಂದೇಶವನ್ನು ಬಲಪಡಿಸುತ್ತದೆ.

ಇದನ್ನೂ ಓದಿ: ಮಕ್ಕಳ ಸುಂದರ ಬಾಲ್ಯ, ಉಜ್ವಲ ಭವಿಷ್ಯವನ್ನು ಕಸಿಯುತ್ತಿದೆ ಬಾಲ ಕಾರ್ಮಿಕ ಪದ್ಧತಿ

ರಕ್ತದಾನದ ಬಗೆಗಿನ ಕುತೂಹಲಕಾರಿ ಸಂಗತಿಗಳು:

  • ಒಮ್ಮೆ ರಕ್ತದಾನ ಮಾಡುವುದರಿಂದ ಮೂರು ಜನರ ಜೀವ ಉಳಿಸಬಹುದು.
  • 18 ರಿಂದ 65 ವರ್ಷ ವಯಸ್ಸಿನ ಯಾವುದೇ ಆರೋಗ್ಯವಂತ ವ್ಯಕ್ತಿ ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.
  • ವರ್ಷಕ್ಕೆ ಮೂರರಿಂದ ನಾಲ್ಕು ಬಾರಿ ರಕ್ತದಾನ ಮಾಡಬಹುದು.
  • ರಕ್ತದಾನವು ದೇಹದಲ್ಲಿ ಹೊಸ ಕೆಂಪು ರಕ್ತ ಕಣಗಳ ರಚನೆಯ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ.
  • ರಕ್ತದಾನ ಮಾಡಲು, ದಾನಿಯೊಬ್ಬರು ಪ್ರತಿ ಡೆಸಿಲೀಟರ್‌ಗೆ 12.5 ಗ್ರಾಂ ಹಿಮೋಗ್ಲೋಬಿನ್ ಹೊಂದಿರಬೇಕು, ಇದಕ್ಕಿಂತ ಕಡಿಮೆ ಇದ್ದರೆ ಅವರು ಅನರ್ಹರಾಗುತ್ತಾರೆ.
  • ರಕ್ತದಾನ ಮಾಡುವುದರಿಂದ ದಾನಿಯ ರಕ್ತದ ಗುಣಮಟ್ಟ ವೃದ್ಧಿಸುತ್ತದೆ. ಇದು ಕೊಲೆಸ್ಟ್ರಾಲ್‌ ಸಾಂದ್ರತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವೃದ್ಧೆಗೂ ಇಲ್ಲ ಭದ್ರತೆ; ಕಣ್ಣು ಕಾಣದ 70 ವರ್ಷದ ದೆಹಲಿಯ ಮಹಿಳೆ ಮೇಲೆ ಹಲ್ಲೆ, ಲೈಂಗಿಕ ದೌರ್ಜನ್ಯಕ್ಕೆ ಯತ್ನ – Kannada News | Delhi 70 year old blind woman assaulted and attempted to physically harassment

ನವದೆಹಲಿ, ಜೂನ್ 13: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆಯನ್ನು ಮತ್ತೊಮ್ಮೆ ಪ್ರಶ್ನಿಸುವಂತಹ ಅಮಾನವೀಯ ಘಟನೆಯೊಂದು ನಡೆದಿದೆ. ದೆಹಲಿಯ ತ್ರಿಲೋಕಪುರಿ ಪ್ರದೇಶದಲ್ಲಿ 70 ವರ್ಷದ ಕಣ್ಣು ಕಾಣದ ವೃದ್ಧೆಯೊಬ್ಬರ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಅತ್ಯಾಚಾರಕ್ಕೆ (Delhi Crime News) ಯತ್ನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯು ಮಯೂರ್ ವಿಹಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸ್ಥಳೀಯ ನಿವಾಸಿಗಳ ಪ್ರಕಾರ, ದೃಷ್ಟಿ ದೋಷ ಹಾಗೂ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ವೃದ್ಧೆ ಕಳೆದ ಸುಮಾರು 35 ವರ್ಷಗಳಿಂದ ಇದೇ ಪ್ರದೇಶದ ಬೀದಿಗಳಲ್ಲಿ ವಾಸಿಸುತ್ತಿದ್ದರು. ಸ್ಥಳೀಯರೇ ಇವರಿಗೆ ನಿಯಮಿತವಾಗಿ ಆಹಾರ ಮತ್ತು ಬಟ್ಟೆಗಳನ್ನು ನೀಡಿ ನೋಡಿಕೊಳ್ಳುತ್ತಿದ್ದರು. ಗುರುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ವೃದ್ಧೆಯು ಮನೆಯ ಹೊರಗಿದ್ದಾಗ ಬಂದ ಅಪರಿಚಿತ ವ್ಯಕ್ತಿಯೊಬ್ಬ ಅವರ ಮೇಲೆ ಮುಗಿಬಿದ್ದಿದ್ದಾನೆ. ಈ ವೇಳೆ ವೃದ್ಧೆ ಆತನನ್ನು ತಳ್ಳಲು ಯತ್ನಿಸಿದಾಗ, ಆಕ್ರೋಶಗೊಂಡ ಆರೋಪಿ ಇಟ್ಟಿಗೆಯಿಂದ ಅವರ ತಲೆ ಮತ್ತು ಮುಖದ ಭಾಗಕ್ಕೆ ಭೀಕರವಾಗಿ ಜಜ್ಜಿದ್ದಾನೆ. ಇದರಿಂದ ವೃದ್ಧೆ ತೀವ್ರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಪೊಲೀಸ್ ಮೂಲಗಳ ಪ್ರಕಾರ, ವೃದ್ಧೆ ರಕ್ತದ ಮಡುವಿನಲ್ಲಿ ಬಿದ್ದಿದ್ದರೂ ಆರೋಪಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಇಡೀ ಕೃತ್ಯವು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿಯು ವೃದ್ಧೆಯ ಮೇಲೆ ಹಲ್ಲೆ ನಡೆಸುತ್ತಿರುವುದು ಮತ್ತು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದೆ ಎಂದು ಹೇಳಲಾಗಿದೆ. ಗಾಯಗೊಂಡಿದ್ದ ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಯ ಪತ್ತೆಗಾಗಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs AFG: ಸಿಕ್ಸರ್ ಬಾರಿಸಿ 16 ಸಾವಿರ ರನ್​ಗಳ ಗಡಿ ದಾಟಿದ ರೋಹಿತ್ ಶರ್ಮಾ

Source link

ಧರ್ಮಸ್ಥಳ ಕೇಸ್​: ಬುರುಡೆ ಗ್ಯಾಂಗ್ ಸಂಪರ್ಕ ಮಾಡಿದ್ದ ಸ್ವಾಮೀಜಿ ರಹಸ್ಯ ರಿವೀಲ್ – Kannada News | Dharmasthala Case: New Revelations Surface Over Swamiji’s Reported Meeting With Burude Gang

ಮಂಗಳೂರು, ಜೂನ್​ 13: ಧರ್ಮಸ್ಥಳದ (Dharmasthala Case) ವಿರುದ್ಧ ಹೆಣೆದಿದ್ದ ಕರಾಳ ಷಡ್ಯಂತ್ರ ಬಯಲಾಗುತ್ತಿದೆ. ಧರ್ಮಸ್ಥಳದಲ್ಲಿ ಶವ ಸಿಗುತ್ತೆ ಅಂತಾ SIT ಅಧಿಕಾರಿಗಳಿಂದ ಗುಂಡಿ ತೋಡಿಸಿದ್ದ ಮಾಸ್ಕ್​ಮ್ಯಾನ್ ಚಿನ್ನಯ್ಯ, ಹೈಕೋರ್ಟ್​​​​​​ನಲ್ಲಿ ರಿಟ್ ಅರ್ಜಿ ಸಲ್ಲಿಸುವ ಮೂಲಕ ತಮ್ಮದೇ ಬುರುಡೆ ಗ್ಯಾಂಗ್ ವಿರುದ್ಧ ತಿರುಗಿ ಬಿದ್ದಿದ್ದಾನೆ.  ನಿನ್ನೆ ಯಾರು ಪ್ರೊಡ್ಯೂಸರ್? ಎಷ್ಟು ಕೋಟಿ ಫಂಡಿಂಗ್? ಅನ್ನೋದೆಲ್ಲ ರಿವೀಲ್ ಆಗಿತ್ತು. ಜೊತೆ ನಟ ಪ್ರಕಾಶ್​​ರಾಜ್ ಹೆಸರನ್ನು ಉಲ್ಲೇಖಿಸಿದ್ದ. ಆದರೆ ಇಂದು ಧರ್ಮಸ್ಥಳ ಬುರುಡೆ ರಹಸ್ಯದ ಹಿಂದೆ ಸ್ವಾಮೀಜಿ ಸಂಪರ್ಕ ಇರುವುದು ರಿವೀಲ್ ಆಗಿದೆ.

ಮುಖ್ಯಾಂಶಗಳು

  • ಬುರುಡೆ ಗ್ಯಾಂಗ್ ಸಂಪರ್ಕ ಮಾಡಿದ್ದ ಸ್ವಾಮೀಜಿ
  • ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಸ್ವಾಮೀಜಿ ಭೇಟಿ
  • ಚಿನ್ನಯ್ಯನ ರಿಟ್ ಅರ್ಜಿಯಲ್ಲಿ ಸ್ವಾಮೀಜಿ ಹೆಸರು ಉಲ್ಲೇಖ

ಚಂದ್ರಶೇಖರ್ ಸ್ವಾಮೀಜಿ ಯಾರು?

ಧರ್ಮಸ್ಥಳ ಬುರುಡೆ ಗ್ಯಾಂಗ್ ಮುಲ್ಕಿ ಆಶ್ರಮದ ಚಂದ್ರಶೇಖರ್ ಸ್ವಾಮೀಜಿಯನ್ನ ಭೇಟಿಯಾದ ಬಗ್ಗೆಯೂ ಚಿನ್ನಯ್ಯನ ತನ್ನ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾನೆ. ಷಡ್ಯಂತ್ರಕಾರರ ಮನವಿ ಮೇರೆಗೆ ಸ್ವಾಮೀಜಿಯೂ ಪೊಲೀಸರನ್ನು ಭೇಟಿಯಾಗಿದ್ದರಂತೆ. ಮಂಗಳೂರು ಪೊಲೀಸ್ ಅಧೀಕ್ಷಕರರನ್ನು ಸ್ವಾಮೀಜಿ ಭೇಟಿ ಮಾಡಿದ್ದರು. ಜೊತೆಗೆ ಬೆಂಗಳೂರಿನ ಹಿರಿಯ ಪೊಲೀಸರನ್ನೂ ಸ್ವಾಮೀಜಿ ಸಂಪರ್ಕಿಸಿದ್ದರು. ಪೊಲೀಸರಿಗೆ ಅರ್ಜಿದಾರರು ದೂರು ದಾಖಲಿಸಿದ್ದಾರೆಂದು ತಿಳಿಸಿದ್ದರು. ಚಿನ್ನಯ್ಯನ ದೂರು ಸ್ವೀಕರಿಸುವಂತೆ ಸ್ವಾಮೀಜಿ ಪ್ರಭಾವ ಬೀರಿದ್ದಾರೆ ಎಂದು ಚಿನ್ನಯ್ಯ ತನ್ನ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾನೆ.

ಚಿನ್ನಯ್ಯ ಬೇಡಿಕೆಯಂತೆ ಸ್ವಾಮೀಜಿ ಬಳಿ ಹೋಗಿದ್ವಿ ಎಂದ ಮಟ್ಟಣ್ಣನವರ್

ಇನ್ನು ಚಂದ್ರಶೇಖರ್ ಸ್ವಾಮೀಜಿ ಭೇಟಿ ಬಗ್ಗೆ ಗಿರೀಶ್ ಮಟ್ಟಣ್ಣನವರ್ ಪ್ರತಿಕ್ರಿಯಿಸಿದ್ದು, ಚಿನ್ನಯ್ಯನ ಬೇಡಿಕೆಯಂತೆ ಚಂದ್ರಶೇಖರ್ ಸ್ವಾಮೀಜಿ ಬಳಿ ಹೋಗಿದ್ವಿ ಅಂತ ಹೇಳಿದ್ದಾರೆ. ಮತ್ತೊಂದ್ಕಡೆ 200 ಕೋಟಿ ರೂ ಫಂಡಿಂಗ್ ಸುಳ್ಳು, ಕೋಮುಗಲಭೆ ಎಬ್ಬಿಸುವ ಹುನ್ನಾರ ಎಂದು ಈ ಬಗ್ಗೆಯೂ ಗಿರೀಶ್ ಮಟ್ಟಣ್ಣನವರ್ ಸ್ಪಷ್ಟನೆ ನೀಡಿದ್ದಾರೆ.

ಗೃಹ ಸಚಿವರನ್ನು ಭೇಟಿಯಾದ ಎಸ್​ಐಟಿ ಮುಖ್ಯಸ್ಥ

ಧರ್ಮಸ್ಥಳ ಬುರುಡೆ ಪ್ರಕರಣದ ಬಗ್ಗೆ ಹೈಕೋರ್ಟ್ ವರದಿ ಕೇಳಿದೆ. ಈ ಬೆನ್ನಲ್ಲೇ SIT ಅಲರ್ಟ್ ಆಗಿದೆ. ಇವತ್ತು ಗೃಹ ಸಚಿವರನ್ನು ಎಸ್​ಐಟಿ ಮುಖ್ಯಸ್ಥ ಪ್ರಣಬ್ ಮೋಹಂತಿ ಭೇಟಿಯಾಗಿದ್ದಾರೆ. ಸುಮಾರು 20 ನಿಮಿಷಗಳ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಪ್ರಕರಣದ ತನಿಖೆ ಪ್ರಗತಿ ಕುರಿತು ಸಚಿವರಿಗೆ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಜೂನ್ 17ರಂದು ಫ್ರಾನ್ಸ್​ನಲ್ಲಿ ಟ್ರಂಪ್-ಮೋದಿ ನಡುವೆ ಮಹತ್ವದ ಮಾತುಕತೆ – Kannada News | PM Modi and Donald Trump To Hold Bilateral Meeting in France G7 Summit On June 17

ನವದೆಹಲಿ, ಜೂನ್ 13: ಫ್ರಾನ್ಸ್‌ನಲ್ಲಿ ಮುಂದಿನ ವಾರ ನಡೆಯಲಿರುವ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೂನ್ 17ರಂದು ಮುಖಾಮುಖಿ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ವೈಟ್‌ಹೌಸ್ ಅಧಿಕೃತವಾಗಿ ಖಚಿತಪಡಿಸಿದೆ. 2024ರ ನವೆಂಬರ್‌ನಲ್ಲಿ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆದ್ದ ನಂತರ, 2025ರ ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಅವರು ಅಮೆರಿಕಾಗೆ ಭೇಟಿ ನೀಡಿದ್ದರು. ಅದಾದ ಬಳಿಕ ಉಭಯ ನಾಯಕರ ನಡುವೆ ನಡೆಯುತ್ತಿರುವ ಮೊದಲ ಮುಖಾಮುಖಿ ಭೇಟಿ ಇದಾಗಿದೆ.

ಟ್ರಂಪ್ ಮತ್ತು ಮೋದಿಯವರ ಸಭೆಯು ಭಾರತ ಮತ್ತು ಅಮೆರಿಕ ನಡುವೆ ರಾಜತಾಂತ್ರಿಕವಾಗಿ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಇರುವ ಸಮಯದಲ್ಲಿ ನಡೆಯುತ್ತಿದೆ. ಇತ್ತೀಚೆಗೆ ಒಮಾನ್ ಕೊಲ್ಲಿಯಲ್ಲಿ ಭಾರತೀಯ ನಾವಿಕರಿದ್ದ ವಾಣಿಜ್ಯ ಹಡಗುಗಳ ಮೇಲೆ ಅಮೆರಿಕ ಪಡೆಗಳು ನಡೆಸಿದ ಸರಣಿ ದಾಳಿಗಳ ಹಿನ್ನೆಲೆಯಲ್ಲಿ ಉಭಯ ದೇಶಗಳ ಸಂಬಂಧದ ಮೇಲೆ ಒತ್ತಡ ಉಂಟಾಗಿದೆ.

ಇದನ್ನೂ ಓದಿ: ಭಾರತದ ಸಿಬ್ಬಂದಿಯಿದ್ದ ಹಡಗುಗಳ ಮೇಲೆ ದಾಳಿ; ಅಮೆರಿಕದ ರಾಯಭಾರಿಗೆ ಭಾರತ 2ನೇ ಬಾರಿ ಸಮನ್ಸ್

‘ಎಂಟಿ ಸೆಟ್ಟೆಬೆಲ್ಲೊ’ ಎಂಬ ಪಲಾವ್ ಧ್ವಜದ ತೈಲ ಟ್ಯಾಂಕರ್ ಮೇಲಿನ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಸಾವನ್ನಪ್ಪಿದ್ದರು ಮತ್ತು ಇತರ 2 ಭಾರತೀಯ ಸಿಬ್ಬಂದಿಯಿದ್ದ ಹಡಗುಗಳನ್ನೂ ಗುರಿಯಾಗಿಸಲಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ, ಕೇವಲ ಒಂದು ವಾರದಲ್ಲಿ ನವದೆಹಲಿಯ ಅಮೆರಿಕದ ಉಪ ರಾಯಭಾರಿಗೆ ಎರಡು ಬಾರಿ ಸಮನ್ಸ್ ಜಾರಿ ಮಾಡಿ ತನ್ನ ತೀವ್ರ ಪ್ರತಿಭಟನೆಯನ್ನು ದಾಖಲಿಸಿತ್ತು. ನಾಗರಿಕ ಹಡಗುಗಳ ಮೇಲಿನ ದಾಳಿಯನ್ನು ತಕ್ಷಣವೇ ನಿಲ್ಲಿಸುವಂತೆ ಆಗ್ರಹಿಸಿತ್ತು.

ಅಮೆರಿಕ ಆಡಳಿತದ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಜೂನ್ 17ರ ಸಭೆಯಲ್ಲಿ ಉಭಯ ನಾಯಕರು ವ್ಯಾಪಾರ ಒಪ್ಪಂದಗಳು, ಎಚ್-1ಬಿ ವೀಸಾ ನೀತಿ, ಇಂಧನ ಸಹಕಾರ, ಪಶ್ಚಿಮ ಏಷ್ಯಾ ಸಂಘರ್ಷ ಮುಂತಾದ ವಿಷಯಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಒಂದು ವಾರದ ಸುದೀರ್ಘ ವಿದೇಶಿ ಪ್ರವಾಸವನ್ನು ಆರಂಭಿಸಿದ್ದಾರೆ. ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ಜೂನ್ 15ರಿಂದ 17ರವರೆಗೆ ಫ್ರಾನ್ಸ್‌ನ ‘ಎವಿಯನ್-ಲೆಸ್-ಬೈನ್ಸ್’ನಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ. ಇದು ಜಿ7 ಶೃಂಗಸಭೆಯಲ್ಲಿ ಅವರ ಸತತ 7ನೇ ಪಾಲ್ಗೊಳ್ಳುವಿಕೆಯಾಗಿದ್ದು, ಜಾಗತಿಕವಾಗಿ ಭಾರತವು ‘ಗ್ಲೋಬಲ್ ಸೌತ್’ನ ಪ್ರಬಲ ಧ್ವನಿಯಾಗಿ ಹೊರಹೊಮ್ಮುತ್ತಿದೆ.

ಇದಾದ ನಂತರ ಪ್ರಧಾನಿ ಮೋದಿ ಅವರು ಸ್ಲೋವಾಕಿಯಾಗೆ ಭೇಟಿ ನೀಡಲಿದ್ದಾರೆ. 1993ರಲ್ಲಿ ಸ್ಲೋವಾಕಿಯಾ ಸ್ವತಂತ್ರ ರಾಷ್ಟ್ರವಾದ ನಂತರ ಭಾರತದ ಪ್ರಧಾನಿಯೊಬ್ಬರು ಅಲ್ಲಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಹೀಗಾಗಿ, ಈ ಭೇಟಿ ಬಹಳ ಮಹತ್ವ ಪಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:11 pm, Sat, 13 June 26

Source link

IND vs AFG: ಚೊಚ್ಚಲ ಪಂದ್ಯದಲ್ಲೇ ಮಿಂಚಿದ ಹರ್ಷ್ ದುಬೆ, ಗುರ್ನೂರ್ ಬ್ರಾರ್ – Kannada News | Gurnoor Brar and Harsh Dubey Shine: India vs Afghanistan ODI Debutants Take 3 Wickets Each

ಧರ್ಮಶಾಲಾದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಮೊದಲ ಏಕದಿನ ಪಂದ್ಯವನ್ನು ಮಳೆಯಿಂದಾಗಿ ತಲಾ 25 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಅದರಂತೆ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ತಂಡ 195 ರನ್​ಗಳ ಗುರಿ ನೀಡಿತು. ಅದಾಗ್ಯೂ ಅಫ್ಘನ್ ತಂಡವನ್ನು ಆರಂಭದಲ್ಲಿ ಮತ್ತು ಡೆತ್ ಓವರ್​ಗಳಲ್ಲಿ ಕಟ್ಟಿಹಾಕುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು. ಇದರಲ್ಲಿ ತಂಡದ ಪರ ಚೊಚ್ಚಲ ಪಂದ್ಯವನ್ನಾಡಿದ ಗುರ್ನೂರ್ ಬ್ರಾರ್ (Gurnoor Brar) ಮತ್ತು ಹರ್ಷ್​ ದುಬೆ (Harsh Dubey) ಅವರ ಕೊಡುಗೆ ಅಪಾರವಾಗಿತ್ತು. ಈ ಇಬ್ಬರು ಬೌಲರ್​ಗಳು ತಲಾ 3 ವಿಕೆಟ್ ಪಡೆಯುವ ಮೂಲಕ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನಕ್ಕೆ ಸ್ಮರಣೀಯ ಆರಂಭ ನೀಡಿದರು.

3 ವಿಕೆಟ್ ಉರುಳಿಸಿದ ಗುರ್ನೂರ್ ಬ್ರಾರ್

ಮೊದಲನೆಯದಾಗಿ ಅರ್ಷದೀಪ್ ಸಿಂಗ್ ಜೊತೆಗೆ ಭಾರತದ ಬೌಲಿಂಗ್ ಆರಂಭಿಸುವ ಜವಾಬ್ದಾರಿ ಹೊತ್ತಿದ್ದ ಪಂಜಾಬ್‌ ವೇಗಿ ಗುರ್ನೂರ್ ಬ್ರಾರ್ ಅಫ್ಘಾನಿಸ್ತಾನ ವಿರುದ್ಧ 4.5 ಓವರ್‌ಗಳನ್ನು ಬೌಲಿಂಗ್ ಮಾಡಿ ಕೇವಲ 27 ರನ್‌ ನೀಡಿ ಮೂರು ನಿರ್ಣಾಯಕ ವಿಕೆಟ್‌ಗಳನ್ನು ಕಬಳಿಸಿದರು. ಈ ಅದ್ಭುತ ಪ್ರದರ್ಶನದ ಮೂಲಕ ಚೊಚ್ಚಲ ಏಕದಿನ ಪಂದ್ಯದಲ್ಲಿ ಭಾರತದ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಬೌಲರ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆದರು.

ಭಾರತದ ಪರ ಚೊಚ್ಚಲ ಏಕದಿನ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ದಾಖಲೆ ಕನ್ನಡಿಗ ಪ್ರಸಿದ್ಧ್ ಕೃಷ್ಣ ಹೆಸರಿನಲ್ಲಿದೆ. ಪ್ರಸಿದ್ಧ್ 2021 ರಲ್ಲಿ ಇಂಗ್ಲೆಂಡ್ ವಿರುದ್ಧದ ತಮ್ಮ ಚೊಚ್ಚಲ ಏಕದಿನ ಪಂದ್ಯದಲ್ಲಿ 54 ರನ್‌ಗಳಿಗೆ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದ್ದರು. ಇದೀಗ ಗುರ್ನೂರ್ ಬ್ರಾರ್ 27 ರನ್​ಗಳಿಗೆ 3 ವಿಕೆಟ್ ಕಬಳಿಸುವ ಮೂಲಕ ಈ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದಿದ್ದಾರೆ.

ಅತ್ಯುತ್ತಮ ಬೌಲಿಂಗ್ ಪ್ರದರ್ಶನ

  • ಪ್ರಸಿದ್ಧ್ ಕೃಷ್ಣ: 4/54 vs ಇಂಗ್ಲೆಂಡ್ (ಪುಣೆ, 2021)
  • ನೋಯೆಲ್ ಡೇವಿಡ್: 3/21 vs ವೆಸ್ಟ್ ಇಂಡೀಸ್ (ಪೋರ್ಟ್ ಆಫ್ ಸ್ಪೇನ್, 1997)
  • ವರುಣ್ ಆರನ್: 3/24 vs ಇಂಗ್ಲೆಂಡ್ (ಮುಂಬೈ, 2011)
  • ಗುರ್ನೂರ್ ಬ್ರಾರ್: 3/27 vs ಅಫ್ಘಾನಿಸ್ತಾನ (ಧರ್ಮಶಾಲಾ, 2026)
  • ಸುಬ್ರೊಟೊ ಬ್ಯಾನರ್ಜಿ: 3/30 vs ವೆಸ್ಟ್ ಇಂಡೀಸ್ (ಪರ್ತ್, 1991)

ಸ್ಪಿನ್ನರ್ ಹರ್ಷ್ ದುಬೆಗೂ 3 ವಿಕೆಟ್

ಗುರ್ನೂರ್ ಬ್ರಾರ್ ಜೊತೆಗೆ, ಚೊಚ್ಚಲ ಪಂದ್ಯವನ್ನಾಡಿದ ಹರ್ಷ್ ದುಬೆ ಕೂಡ ಉತ್ತಮ ಪ್ರದರ್ಶನ ನೀಡಿದರು. ಈ ಎಡಗೈ ಸ್ಪಿನ್ನರ್ ಮಧ್ಯಮ ಓವರ್‌ಗಳಲ್ಲಿ ಭಾರತಕ್ಕೆ ನಿರ್ಣಾಯಕ ವಿಕೆಟ್​ಗಳನ್ನು ತಂದುಕೊಟ್ಟರು. ಹರ್ಷ್ ದುಬೆ ತಾವು ಬೌಲ್ ಮಾಡಿದ ಐದು ಓವರ್‌ಗಳಲ್ಲಿ 47 ರನ್‌ ನೀಡಿ ಮೂರು ನಿರ್ಣಾಯಕ ವಿಕೆಟ್‌ಗಳನ್ನು ಪಡೆದರು. ಈ ಇಬ್ಬರು ಯುವ ಬೌಲರ್‌ಗಳು ಒಟ್ಟಾಗಿ ಆರು ಆಫ್ಘನ್ ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಿದರು. ಪರಿಣಾಮವಾಗಿ, ಭಾರತ ತಂಡವು ಅಫ್ಘಾನಿಸ್ತಾನವನ್ನು 24.5 ಓವರ್‌ಗಳಲ್ಲಿ 194 ರನ್‌ಗಳಿಗೆ ಆಲೌಟ್ ಮಾಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಂಬಂಧದಲ್ಲಿ ಅತಿಯಾಗಿ ಅನುಮಾನಿಸುವುದು ರಿಲೇಷನ್‌ಶಿಪ್ ಒಸಿಡಿಯ ಲಕ್ಷಣವೇ? ಹೇಗಿರುತ್ತದೆ ಈ ಡಿಸಾರ್ಡರ್ ಲಕ್ಷಣ? – Kannada News | ROCD Explained: Why Constant Doubts Can Destroy Healthy Relationships

ದಾಂಪತ್ಯ ಅಥವಾ ಪ್ರೀತಿಯಲ್ಲಿರುವವರಿಗೆ ಒಬ್ಬರ ಮೇಲೆ ಒಬ್ಬರಿಗೆ ಸಣ್ಣಪುಟ್ಟ ಅನುಮಾನಗಳು ಬರುವುದು ಸಾಮಾನ್ಯ. ಆದರೆ ಅದೇ ಅನುಮಾನ ದಿನೇದಿನೇ ಹೆಚ್ಚಾಗಿ, ಮನಸ್ಸಿನಲ್ಲಿ ನಿರಂತರ ಆತಂಕ ಹಾಗೂ ಗೊಂದಲ ಉಂಟುಮಾಡಿದರೆ ಅದನ್ನು ‘ರಿಲೇಷನ್‌ಶಿಪ್ ಒಬ್ಸೆಸಿವ್ ಕಂಪಲ್ಸಿವ್ ಡಿಸಾರ್ಡರ್’ (Relationship OCD ಅಥವಾ ROCD) ಎಂದು ಕರೆಯಲಾಗುತ್ತದೆ. ಇದು ಮಾನಸಿಕ ಆರೋಗ್ಯಕ್ಕೆ (Mental Health) ಸಂಬಂಧಿಸಿದ ಒಂದು ಸಮಸ್ಯೆಯಾಗಿದ್ದು, ಸಂಬಂಧಗಳ ಮೇಲೆ ದೊಡ್ಡ ಮಟ್ಟದ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾದರೆ ಏನಿದು ರಿಲೇಷನ್‌ಶಿಪ್ ಒಸಿಡಿ, ಈ ರೀತಿ ಸಮಸ್ಯೆಯನ್ನು ನಿಯಂತ್ರಿಸಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ರಿಲೇಷನ್‌ಶಿಪ್ ಒಸಿಡಿ ಎಂದರೇನು?

ಸಾಮಾನ್ಯವಾಗಿ ರಿಲೇಷನ್‌ಶಿಪ್ ಒಸಿಡಿ ಇರುವ ವ್ಯಕ್ತಿಗೆ ತನ್ನ ಸಂಗಾತಿಯ ಬಗ್ಗೆ ನಿರಂತರ ಅನುಮಾನಗಳು ಕಾಡುತ್ತವೆ. “ನನ್ನ ಸಂಗಾತಿ ನನಗೆ ಸರಿಯಾದ ವ್ಯಕ್ತಿಯೇ?”, “ಅವರು ನನ್ನನ್ನು ನಿಜವಾಗಿಯೂ ಪ್ರೀತಿಸುತ್ತಾರೆಯೇ?”, “ಅವರು ನನಗೆ ಮೋಸ ಮಾಡುತ್ತಿದ್ದಾರೆಯೇ?” ಎಂಬ ಪ್ರಶ್ನೆಗಳು ಮತ್ತೆ ಮತ್ತೆ ಮನಸ್ಸಿಗೆ ಬರುತ್ತಿರುತ್ತವೆ. ಈ ರೀತಿಯ ಆಲೋಚನೆಗಳು ವ್ಯಕ್ತಿಯ ಮಾನಸಿಕ ಶಾಂತಿಯನ್ನು ಹಾಳು ಮಾಡಬಹುದು ಇದನ್ನೇ ರಿಲೇಷನ್‌ಶಿಪ್ ಒಸಿಡಿ ಎಂದು ಕರೆಯಲಾಗುತ್ತದೆ.

ರಿಲೇಷನ್‌ಶಿಪ್ ಒಸಿಡಿಯ ಲಕ್ಷಣಗಳು ಹೇಗಿರುತ್ತದೆ?

  • ಸಂಗಾತಿಯ ಫೋನ್ ಅಥವಾ ವೈಯಕ್ತಿಕ ವಿಚಾರಗಳನ್ನು ಪದೇ ಪದೇ ಪರಿಶೀಲಿಸುವುದು
  • ಸಂಗಾತಿಯ ಸಣ್ಣ ತಪ್ಪುಗಳೇ ದೊಡ್ಡದಾಗಿ ಕಾಣುವುದು
  • ಸಂಬಂಧದಲ್ಲಿ ಪರಿಪೂರ್ಣತೆ ಹುಡುಕುವುದು
  • ಸಂಗಾತಿಯಿಂದ ನಿರಂತರ ಭರವಸೆಯನ್ನು ಆಶಿಸುವುದು
  • ಇತರರ ಸಂಬಂಧಗಳೊಂದಿಗೆ ತಮ್ಮ ಸಂಬಂಧವನ್ನು ಹೋಲಿಕೆ ಮಾಡುವುದು
  • “ನನ್ನನ್ನು ನಿಜವಾಗಿಯೂ ಪ್ರೀತಿಸುತ್ತಾರೆಯೇ?” ಎಂಬ ಅನುಮಾನದಲ್ಲಿ ಬದುಕುವುದು
    ಈ ರೀತಿಯ ವರ್ತನೆಗಳು ಸಂಬಂಧದಲ್ಲಿ ಒತ್ತಡ ಮತ್ತು ಅಂತರ ಹೆಚ್ಚಿಸಬಹುದು.

ಯಾವಾಗ ಅನುಮಾನ ನಿಜವಾಗಿರಬಹುದು?

ಕೆಲವೊಮ್ಮೆ ಸಂಗಾತಿಯ ವರ್ತನೆಯಲ್ಲಿ ಬದಲಾವಣೆ ಕಂಡುಬಂದರೆ ಅನುಮಾನಗಳು ಸಹಜವಾಗಿರಬಹುದು. ಉದಾಹರಣೆಗೆ, ಸಂಗಾತಿ ಹೆಚ್ಚು ರಹಸ್ಯವಾಗಿ ಮಾತನಾಡಲು ಆರಂಭಿಸಿದರೆ, ಮಾತುಕತೆ ಕಡಿಮೆ ಮಾಡಿದರೆ ಅಥವಾ ವರ್ತನೆ ಬದಲಾಗಿದೆಯೆಂದು ಕಂಡುಬಂದರೆ ಸಂಬಂಧದಲ್ಲಿ ಸಮಸ್ಯೆ ಇರಬಹುದೆಂಬ ಸೂಚನೆಯಾಗಿರಬಹುದು.

ರಿಲೇಷನ್‌ಶಿಪ್ ಒಸಿಡಿಯನ್ನು ಹೇಗೆ ನಿಯಂತ್ರಿಸಬಹುದು?

ತಮ್ಮ ಭಾವನೆಗಳನ್ನು ಮನಸ್ಸಿನೊಳಗೆ ಇಟ್ಟುಕೊಳ್ಳುವುದಕ್ಕಿಂತ ಸಂಗಾತಿಯೊಂದಿಗೆ ನೇರವಾಗಿ ಮಾತನಾಡುವುದು ಮುಖ್ಯ. ಅನುಮಾನಗಳು ಹೆಚ್ಚಾದರೆ ವಿಶ್ವಾಸಾರ್ಹ ವ್ಯಕ್ತಿ ಅಥವಾ ಮನೋವೈದ್ಯರ ಸಲಹೆ ಪಡೆಯಬಹುದು. ಧ್ಯಾನ, ಯೋಗ ಮತ್ತು ಮಾನಸಿಕ ಒತ್ತಡ ಕಡಿಮೆ ಮಾಡುವ ಚಟುವಟಿಕೆಗಳು ಸಹ ಸಹಾಯಕರಾಗುತ್ತವೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಲಗಾನ್’ ಸಿನಿಮಾಕ್ಕೆ 25ರ ಸಂಭ್ರಮ, ಮತ್ತೆ ಜೊತೆಯಾದ ಹಳೆಯ ‘ತಂಡ’ – Kannada News | 25 years for Lagaan, movie re release in many cities

ಭಾರತೀಯ ಚಿತ್ರರಂಗದ ಐಕಾನಿಕ್ ಸಿನಿಮಾ ‘ಲಗಾನ್’ (Lagaan). ಆಸ್ಕರ್​​ಗೆ ನಾಮಿನೇಟ್ ಆಗಿದ್ದ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆ ಪಡೆದ ಈ ಸಿನಿಮಾ ಬಿಡುಗಡೆಯಾಗಿ 25 ವರ್ಷಗಳು ಪೂರ್ಣಗೊಂಡಿವೆ. ಇದೇ ಖುಷಿಯಲ್ಲಿ ‘ಲಗಾನ್’ ಸಿನಿಮಾ ಮರು ಬಿಡುಗಡೆ ಆಗಿದೆ. ಮುಂಬೈ, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಸಿನಿಮಾ ಮರು ಬಿಡುಗಡೆ ಆಗಿದ್ದು, ಅಭಿಮಾನಿಗಳು ತಂಡೋಪತಂಡವಾಗಿ ಸಿನಿಮಾಕ್ಕೆ ಹೋಗಿ ಎಂಜಾಯ್ ಮಾಡುತ್ತಿದ್ದಾರೆ. ಮಾತ್ರವಲ್ಲದೆ, ಸಿನಿಮಾದ ಮರು ಬಿಡುಗಡೆ ಖುಷಿಯಲ್ಲಿ ‘ಲಗಾನ್’ ಚಿತ್ರತಂಡವೂ ಸಹ ಮತ್ತೆ ಒಂದಾಗಿ ಸಂವಾದ ನಡೆಸಿದೆ.

ಆಮಿರ್ ಖಾನ್, ನಿರ್ದೇಶಕ ಅಶುತೋಷ್ ಗೋವಾರಿಕರ್, ಹಿರಿಯ ನಟಿ ಸುಹಾಸಿನಿ ಮುಳೆ, ನಟರಾದ ಅಖಿಲೇಂದ್ರ ಮಿಶ್ರಾ, ಯಶ್‌ಪಾಲ್ ಶರ್ಮಾ, ರಾಜ್ ಝುತ್ಶಿ, ಹಾಗೂ ಆಮಿರ್ ಅವರ ಮಾಜಿ ಪತ್ನಿ ಮತ್ತು ಸಿನಿಮಾದ ಕಾರ್ಯಕಾರಿ ನಿರ್ಮಾಪಕಿ ಆಗಿದ್ದ ರೀನಾ ದತ್ತಾ. ಚಿತ್ರತಂಡದ ಸದಸ್ಯರು ಫೋಟೋಗ್ರಾಫರ್‌ಗಳೊಂದಿಗೆ ಸಂವಾದ ನಡೆಸುತ್ತಾ, ಚಿತ್ರೀಕರಣದ ದಿನಗಳ ಸಿಹಿ ನೆನಪುಗಳನ್ನು ಹಂಚಿಕೊಂಡರು. ವಿಶೇಷವೆಂದರೆ ಸಿನಿಮಾನಲ್ಲಿ ನಟಿಸಿರುವ ಕೆಲ ಬ್ರಿಟಿಷ್ ನಟರು ಸಹ ಈ ವಿಶೇಷ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಇದನ್ನೂ ಓದಿ:‘ಲಗಾನ್’ ಸಿನಿಮಾಗೆ 25 ವರ್ಷಗಳ ಸಂಭ್ರಮ; ಚಿತ್ರಮಂದಿರಗಳಲ್ಲಿ ಮತ್ತೆ ಬಿಡುಗಡೆ

2001ರಲ್ಲಿ ಬಿಡುಗಡೆಯಾದ ‘ಲಗಾನ್’, 1893ರ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯ ಹಿನ್ನೆಲೆಯನ್ನು ಹೊಂದಿದೆ. ಬರಗಾಲದಿಂದ ನಲುಗಿದ ಹಳ್ಳಿಯ ಜನರು ಬ್ರಿಟಿಷ್ ಅಧಿಕಾರಿ ವಿಧಿಸಿದ ಅತಿಯಾದ ತೆರಿಗೆಯ ವಿರುದ್ಧ ಹೋರಾಡಲು ಕ್ರಿಕೆಟ್ ಪಂದ್ಯವನ್ನೇ ಆಯುಧವನ್ನಾಗಿ ಮಾಡಿಕೊಳ್ಳುವ ಕಥಾವಸ್ತುವನ್ನು ಈ ಸಿನಿಮಾ ಹೊಂದಿದೆ. ಧೈರ್ಯ, ಏಕತೆ ಮತ್ತು ಹೋರಾಟದ ಕಥೆಯನ್ನು ಒಳಗೊಂಡಿರುವ ಈ ಚಿತ್ರವು ಹಿಂದಿ ಚಿತ್ರರಂಗದ ಅತ್ಯಂತ ಪ್ರೀತಿಯ ಸಿನಿಮಾಗಳಲ್ಲಿ ಒಂದಾಗಿದೆ.

ಈ ಚಿತ್ರವು ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿದ್ದು, 2002ರಲ್ಲಿ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) ‘ಅತ್ಯುತ್ತಮ ವಿದೇಶಿ ಭಾಷಾ ಚಿತ್ರ’ ವಿಭಾಗದಲ್ಲಿ ನಾಮನಿರ್ದೇಶನಗೊಂಡಿತ್ತು. 1957ರ ‘ಮದರ್ ಇಂಡಿಯಾ’ ಮತ್ತು 1988ರ ‘ಸಲಾಮ್ ಬಾಂಬೆ!’ ನಂತರ ಈ ಗೌರವ ಪಡೆದ ಮೂರನೇ ಭಾರತೀಯ ಚಿತ್ರ ಎಂಬ ಹೆಗ್ಗಳಿಕೆಗೆ ‘ಲಗಾನ್’ ಪಾತ್ರವಾಗಿತ್ತು. ಸಿನಿಮಾಕ್ಕೆ ಆಸ್ಕರ್ ಸಿಗಲಿಲ್ಲವಾದರೂ ಭಾರಿ ಜನಪ್ರೀತಿ ಈ ಸಿನಿಮಾಕ್ಕೆ ಧಕ್ಕಿತ್ತು.

‘ಲಗಾನ್’ ಸಿನಿಮಾಕ್ಕೆ ಭಾರಿ ಸಂಖ್ಯೆಯ ಅಭಿಮಾನಿಗಳಿದ್ದು, ಸಿನಿಮಾದ ವಿಡಿಯೋ ತುಣುಕುಗಳು, ಹಾಡುಗಳು ಇಂದಿಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ ನೀಡಿದ್ದು, ಸಿನಿಮಾದ ಎಲ್ಲ ಹಾಡುಗಳು ಸಹ ಬ್ಲಾಕ್ ಬಸ್ಟರ್ ಎನಿಸಿಕೊಂಡಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

W,W,W..ಆಂಗ್ಲರ ನೆಲದಲ್ಲೂ ಮಿಂಚಿದ ಮಾನವ್ ಸುತಾರ್

Source link

Exit mobile version