ಹೊಟ್ಟೆಗೂ ಇಲ್ಲ, ಜುಟ್ಟಿಗೂ ಇಲ್ಲ: ಬಿಸಿಲ ತಾಪಕ್ಕೆ ಕಮರಿದ ಹೂ; ನಷ್ಟದ ಸುಳಿಯಲ್ಲಿ ಬೆಳೆಗಾರರು – Kannada News | Chikkaballapur flower cultivation withers heatwave devastates farmers and blooms

ತಂಪಾದ ಹವಗುಣಕ್ಕೆ ಹೆಸರಾಗಿದ್ದ ಜಿಲ್ಲೆಯಲ್ಲಿ ಈಗ ಉಷ್ಣಾಂಶ ದಾಖಲೆ ಮಟ್ಟಕ್ಕೇರಿದೆ. ಚೆಂಡು ಹೂ, ಗುಲಾಬಿ ಸೇರಿದಂತೆ ವಿವಿಧ ತಳಿಯ ಹೂವುಗಳು ಗಿಡದಲ್ಲೇ ಒಣಗುತ್ತಿದ್ದು, ಬಿಸಿಲಿನ ತಾಪ ಹೂ ಬೆಳೆಗಾರರ ಬದುಕನ್ನು ಕಮರಿಸುತ್ತಿದೆ.

Source link

ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ – Kannada News | Free Biryani, Saree Draw Crowd Rush in Tekal Village of Kolar’s Malur

ಕೋಲಾರ, ಏಪ್ರಿಲ್​​ 16: ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ನಡೆದ ನೂತನ ಐಟಿಐ ಕಾಲೇಜು ಕಟ್ಟಡ ಲೋಕಾರ್ಪಣೆ ಹಾಗೂ ಕಟ್ಟಡ ಕಾರ್ಮಿಕರ ವಸತಿ ಶಾಲೆಯ ಗುದ್ದಲಿ ಪೂಜೆ ವೇಳೆ ಚಿಕನ್ ಬಿರಿಯಾನಿ ಮತ್ತು ಸೀರೆಗಾಗಿ ಜನ ಮುಗಿಬಿದ್ದ ಪ್ರಸಂಗ ನಡೆದಿದೆ. ಒಬ್ಬರ ಮೇಲೊಬ್ಬರು ಬಿದ್ದು ನೂಕುನುಗ್ಗಲು ಉಂಟಾದ ಕಾರಣ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಡಬೇಕಾಯಿತು. ಶಾಸಕ ನಂಜೇಗೌಡ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, MLC ಅನಿಲ್ ಕುಮಾರ್ ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪುಣೆ–ಬೆಂಗಳೂರು ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ: ಕಾಮಗಾರಿ ಯಾವಾಗ ಶುರು? ಏನೆಲ್ಲ ಉಪಯೋಗ? – Kannada News | Pune Bengaluru Greenfield Expressway: Final Approval Nears, Halving Travel Time

ಬೆಂಗಳೂರು, ಏಪ್ರಿಲ್​​ 16: ಕೇಂದ್ರ ಸರ್ಕಾರದಿಂದ ಶೀಘ್ರವೇ ಶುಭಸುದ್ದಿ ಸಿಗುವ ಸಾಧ್ಯತೆಯಿದ್ದು, ಪ್ರಸ್ತಾವಿತ ಪುಣೆ–ಬೆಂಗಳೂರು ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ ಯೋಜನೆಗೆ ಅಂತಿಮ ಮುದ್ರೆಗೆ ದಿನಗಣನೆ ಆರಂಭವಾಗಿದೆ. ಕೆಲವಾರಗಳಲ್ಲಿ ಇದರ ಮಾರ್ಗರೇಖೆಗೆ ಕೇಂದ್ರ ಅನುಮತಿ ನೀಡುವ ಸಾಧ್ಯತೆ ಇದೆ. ಭಾರತಮಾಲಾ ಯೋಜನೆಯಡಿ ರೂಪಿಸಲಾದ 25 ಗ್ರೀನ್‌ಫೀಲ್ಡ್ ಕಾರಿಡಾರ್‌ಗಳಲ್ಲಿ ಇದೂ ಒಂದಾಗಿದ್ದು, ಅನುಮೋದನಾ ಪ್ರಕ್ರಿಯೆ ಈಗ ಅಂತಿಮ ಹಂತದಲ್ಲಿದೆ. ಆ ಬಳಿಕ ಭೂಸ್ವಾಧೀನ ಪ್ರಕ್ರಿಯೆ ನಡೆದು, ಕಾಮಗಾರಿಯೂ ಆರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಮಾರು 700 ಕಿ.ಮೀ ಉದ್ದದ ಈ ಎಕ್ಸ್‌ಪ್ರೆಸ್‌ವೇ 6ರಿಂದ 8 ಲೇನ್‌ಗಳನ್ನು ಹೊಂದಿರಲಿದೆ. ಒಟ್ಟು ವೆಚ್ಚವನ್ನು 45 ಸಾವಿರ ಕೋಟಿ ರೂಪಾಯಿಗಳಿಂದ 50 ಸಾವಿರ ಕೋಟಿ ಎಂದು ಅಂದಾಜಿಲಸಲಾಗಿದೆ. ಈ ಮಾರ್ಗವು ಮಹಾರಾಷ್ಟ್ರ ಮತ್ತು ಕರ್ನಾಟಕದ ಪ್ರಮುಖ ಜಿಲ್ಲೆಗಳ ಮೂಲಕ ಸಾಗಲಿದೆ. ಪುಣೆಯಿಂದ ಆರಂಭವಾಗಿ ಸತಾರಾ, ಸಾಂಗ್ಲಿ ಮೂಲಕ ಸಾಗಲಿರುವ ಈ ಮಾರ್ಗ ಬಳಿಕ ಬೆಳಗಾವಿ, ವಿಜಯನಗರ ಮತ್ತು ದಾವಣಗೆರೆ ಮೂಲಕ ಬೆಂಗಳೂರು ತಲುಪಲಿದೆ.

ಇದನ್ನೂ ಓದಿ: ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಇನ್ನಷ್ಟು ವಿಳಂಬ? ಕಾರಣ ಇಲ್ಲಿದೆ

ಪುಣೆ–ಬೆಂಗಳೂರು ನಡುವಿನ ರಸ್ತೆ ಪ್ರಯಾಣಕ್ಕೆ ಟ್ರಾಫಿಕ್ ದಟ್ಟಣೆ ಮತ್ತು ಕಿರಿದಾದ ಮಾರ್ಗಗಳ ಕಾರಣದಿಂದ ಹಾಲಿ ಸುಮಾರು 14ರಿಂದ 15 ಗಂಟೆಗಳು ಬೇಕಾಗುತ್ತವೆ. ಆದರೆ ಈ ಎಕ್ಸ್‌ಪ್ರೆಸ್‌ವೇ ಪೂರ್ಣಗೊಂಡ ನಂತರ ಪ್ರಯಾಣ ಸಮಯವು ಸುಮಾರು 7 ಗಂಟೆಗಳವರೆಗೆ ಕಡಿಮೆಯಾಗುವ ನಿರೀಕ್ಷೆ ಇದೆ. ಇದರಿಂದ ಪ್ರಯಾಣಿಕರಿಗೂ, ಸರಕು ಸಾಗಣೆ ಮತ್ತು ಲಾಜಿಸ್ಟಿಕ್ಸ್ ಕ್ಷೇತ್ರಕ್ಕೂ ದೊಡ್ಡ ಅನುಕೂಲವಾಗುವ ನಿರೀಕ್ಷೆ ಇದೆ.

ಈ ಎಕ್ಸ್‌ಪ್ರೆಸ್‌ವೇ ಸಂಪರ್ಕವನ್ನು ಸುಧಾರಿಸುವುದರ ಜೊತೆಗೆ ಆರ್ಥಿಕ ಬೆಳವಣಿಗೆಗೂ ಉತ್ತೇಜನ ನೀಡಲಿದೆ. ಮಾರ್ಗದ ಸುತ್ತಮುತ್ತ ಕೈಗಾರಿಕೆಗಳು, ಗೋದಾಮುಗಳು, ಲಾಜಿಸ್ಟಿಕ್ಸ್ ಪಾರ್ಕ್‌ಗಳು ಮತ್ತು ಇತರೆ ವ್ಯಾಪಾರಿಕ ಚಟುವಟಿಕೆಗಳು ಬೆಳೆಯುವ ಸಾಧ್ಯತೆ ಇದೆ. ವೇಗವಾದ ಪ್ರಯಾಣ ಮತ್ತು ಉತ್ತಮ ರಸ್ತೆ ಮೂಲಸೌಕರ್ಯದೊಂದಿಗೆ ಪುಣೆ–ಬೆಂಗಳೂರು ಎಕ್ಸ್‌ಪ್ರೆಸ್‌ವೇ ಪಶ್ಚಿಮ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಪ್ರಮುಖ ಸಂಪರ್ಕ ಮಾರ್ಗವಾಗಿ ರೂಪುಗೊಳ್ಳಲಿದ್ದು, ಪ್ರಯಾಣಿಕರು ಹಾಗೂ ವಾಣಿಜ್ಯ ಚಟುವಟಿಕೆಗಳಿಗೆ ಮಹತ್ವದ ಬೆಂಬಲ ನೀಡಲಿದೆ ಎಂದು ಅಧಿಕಾರಿಗಳು ತಿಳಿಸಿರೋದಾಗಿ ಬೆಂಗಳೂರು ನೌ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:31 pm, Thu, 16 April 26

Source link

ಗಾಂಧಿ ಗ್ರಾಮ ಪುರಸ್ಕೃತ ಪಂಚಾಯತ್​​ ವ್ಯಾಪ್ತಿಯಲ್ಲಿಲ್ಲ ಕನಿಷ್ಠ ಮೂಲಸೌಕರ್ಯ: ಹನಿ ನೀರಿಗೂ ಜನರ ಪರದಾಟ! – Kannada News | Bidar: Gandhi Grama Awarded Jambagi Lacks Basic Infrastructure

ನೀರಿಗಾಗಿ ಮಹಿಳೆಯರ ಪರದಾಟImage Credit source: Tv9 Kannada

ಬೀದರ್​​, ಏಪ್ರಿಲ್​​ 16: ತೆಲಂಗಾಣ ರಾಜ್ಯದ ಜೊತೆ ಗಡಿ ಹಂಚಿಕೊಂಡಿರುವ ಬೀದರ್ ಜಿಲ್ಲೆಯ ಔರಾದಾ ತಾಲೂಕಿನ ಜಂಬಗಿ ಗ್ರಾಮ ಪಂಚಾಯತ್​​ 2025ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ. ಹೀಗಿದ್ದರೂ ಈ ಪಂಚಾಯತ್​​ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಎಂಬುದು ಮಾತ್ರ ಇನ್ನೂ ಮರೀಚಿಕೆಯಾಗಿಯೇ ಉಳಿದಿದೆ. ಕುಡಿಯುವ ನೀರಿಗೂ ಜನರು ಪರದಾಡಬೇಕಾದ ಸ್ಥಿತಿ ಇದ್ದು, ಸ್ವಚ್ಛತೆ ಎಂಬುದಂತೂ ಬಲು ದೂರದ ಮಾತು. ಜಂಬಗಿ ಸೇರಿದಂತೆ ಐದು ಗ್ರಾಮಗಳು ಈ ಪಂಚಾಯತ್​​ ವ್ಯಾಪ್ತಿಗೆ ಬರುತ್ತವೆ. 13 ತಾಂಡಾಗಳನ್ನು ಹೊಂದಿರುವ ಈ ಪಂಚಾಯತ್​​ಗೆ ಒಟ್ಟು 28 ಜನ ಸದಸ್ಯರಿದ್ದಾರೆ. ಆದರೂ ಜನರ ಪರದಾಟ ಕೇಳೋರು ಮಾತ್ರ ಯಾರೂ ಇಲ್ಲ ಎನ್ನುವ ಸ್ಥಿತಿ ಇಲ್ಲಿಯದ್ದು.

ಆಡಳಿತ ಮತ್ತು ಪಾರದರ್ಶಕತೆ, ಸ್ವಚ್ಛತೆ ಮತ್ತು ಹಸಿರು, ಮೂಲಸೌಕರ್ಯ ಮತ್ತು ಅಭಿವೃದ್ಧಿ, ಆರ್ಥಿಕ ಸ್ವಾವಲಂಬನೆ ಸೇರಿದಂತೆ ಹತ್ತು ಹಲವು ಮಾನದಂಡಗಳ ಆಧಾರದಲ್ಲಿ ಸರ್ಕಾರ ಗಾಂಧಿ ಗ್ರಾಮ ಪುರಸ್ಕಾರ ನೀಡುತ್ತದೆ. ಆದರೆ ಅದೇ ಪ್ರಶಸ್ತಿಗೆ ಭಾಜನವಾಗಿರುವ ಈ ಪಂಚಾಯತ್​​ನಲ್ಲಿ ಜನ, ಜಾನುವಾರುಗಳು ಹನಿ ನೀರಿಗೂ ಪರದಾಡಬೇಕಿದೆ. ಗ್ರಾಮದಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ನಲ್ಲಿಗಳನ್ನ ಅಳವಡಿಸಿದ್ದಾರೆಯಾದರೂ ಅವುಗಳಲ್ಲಿ ಈವರೆಗೆ ಒಂದು ಹನಿ ನೀರು ಬಂದದ್ದನ್ನೂ ಕಂಡವರಿಲ್ಲ. ಹೀಗಾಗಿ ನೀರು ಬೇಕೆಂದರೆ ಕಿಲೋಮೀಟರ್​​ಗಟ್ಟಲೆ ದೂರವನ್ನು ಗ್ರಾಮಸ್ಥರು ಸಾಗಲೇಬೇಕಿದೆ. ಈ ವಿಚಾರದ ಬಗ್ಗೆ ಹತ್ತಾರು ಸಲ ಗ್ರಾಮಸ್ಥರು ಮೆಲಾಧಿಕಾರಿಗೆ ಗಮನಕ್ಕೆ ತಂದರು ಕೂಡ ಯಾವುದೆ ಪ್ರಯೋಜನವಾಗಿಲ್ಲ. ಹೀಗಾಗಿ ಗ್ರಾಮಸ್ಥರು ಬೋರ್​​ವೆಲ್​​ ನೀರನ್ನೇ ಅವಲಂಬಿಸಿ ಬದುಕಬೇಕಿದೆ ಎಂಬುದು ಸ್ಥಳೀಯ ಮಹಿಳೆಯರ ಆಕ್ರೋಶ.

ಇದನ್ನೂ ಓದಿ: ಈರುಳ್ಳಿ ಬೀಜದ ದರ ಅರ್ಧದಷ್ಟು ಇಳಿಕೆ; ರೈತರಲ್ಲಿ ಕಣ್ಣೀರು ತರಿಸಿದ ಈರುಳ್ಳಿ

ಹೀಗೆ ಹತ್ತಾರು ಸಮಸ್ಯೆಗಳಿಂದ ಬಳಲುತ್ತಿರುವ ಜಂಬಗಿ ಗ್ರಾಮ ಪಂಚಾಯತ್​​ಗೆ ಅದ್ಯಾವ ಮಾನದಂಡ ಪರಿಗಣಿಸಿ ಸರ್ಕಾರ ಗಾಂಧಿ ಗ್ರಾಮ ಪುರಸ್ಕಾರ ನೀಡಿದೆಯೋ ಗೊತ್ತಿಲ್ಲ. ಗ್ರಾಮದಲ್ಲಿರುವ ಸಮಸ್ಯೆಗಳನ್ನು ಪಂಚಾಯತ್​​ ಶೀಘ್ರ ಪರಿಹರಿಸಿದರೆ ಅದುವೇ ನಮಗೆ ದೊಡ್ಡ ಸಹಾಯ ಎಂದು ಗ್ರಾಮಸ್ಥರು ಅಲವತ್ತುಕೊಂಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಎಲ್ಲವನ್ನೂ ಹೇಳಿದ ಮಲ್ಲಿಕಾರ್ಜುನ್ – Kannada News | Darshan Ex Manager Mallikarjun reveals why he absconded

ನಟ ದರ್ಶನ್ (Darshan) ಅವರಿಗೆ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ್ ಹಲವು ವರ್ಷಗಳಿಂದ ನಾಪತ್ತೆ ಆಗಿದ್ದರು. ಅವರು ಬದುಕಿಲ್ಲ ಎಂಬ ಅಭಿಪ್ರಾಯ ಕೂಡ ಕೆಲವರಿಗೆ ಇತ್ತು. ಆದರೆ ಈಗ ಮಲ್ಲಿಕಾರ್ಜುನ್ ಅವರು ಏಕಾಏಕಿ ಪ್ರತ್ಯಕ್ಷ ಆಗಿದ್ದಾರೆ. ತಾವು ಊರು ಬಿಟ್ಟು ಹೋಗಿ ಕಣ್ಮರೆ ಆಗಲು ಕಾರಣ ಏನು ಎಂಬುದನ್ನು ಅವರು ಈಗ ವಿವರಿಸಿದ್ದಾರೆ. ‘ತುಂಬಾ ಸಾಲ ಮಾಡಿಕೊಂಡಿದ್ದೆ. ಹಲವಾರು ಬಿಸ್ನೆಸ್​ನಲ್ಲಿ ದುಡ್ಡು ಹಾಕಿ ಕಳೆದುಕೊಂಡಿದ್ದೆ. ತುಂಬ ಸಾಲ ಆಗಿತ್ತು. ಅದನ್ನು ಎದುರಿಸಲು ಸಾಧ್ಯವಾಗದೇ ನಾನು ಊರು ಬಿಡಬೇಕಾಯಿತು. ಇದೆಲ್ಲವೂ ದರ್ಶನ್ ಅವರಿಗೆ ಗೊತ್ತಾದರೆ ಅವರು ಬೇಜಾರು ಮಾಡಿಕೊಳ್ಳುತ್ತಾರೆ ಅಂತ ಅನಿಸಿತು. ಅದಾಗಲೇ ಅವರು ನನಗೆ ಸಹಾಯ ಮಾಡಿದ್ದರು. ಪದೇ ಪದೇ ಅವರನ್ನೇ ಕೇಳೋದು ಸರಿ ಇರಲ್ಲ. ಅವರಿಗೆ ಹೇಗೆ ಮುಖ ತೋರಿಸೋದು ಅಂತ ಮುಜುಗರ ಆಗಿತ್ತು. ಆ ಸಂದರ್ಭದಲ್ಲಿ ಅನಿವಾರ್ಯವಾಗಿ ಊರು ಬಿಡಬೇಕಾದ ಪರಿಸ್ಥಿತಿ ಬಂತು’ ಎಂದು ಮಲ್ಲಿಕಾರ್ಜುನ್ (Darshan Ex Manager Mallikarjun) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Airport Jobs: ವಿಮಾನ ನಿಲ್ದಾಣದಲ್ಲಿ 2,442 ಹುದ್ದೆಗಳಿಗೆ ಭರ್ಜರಿ ನೇಮಕಾತಿ; 10th, ಪಿಯುಸಿ ಪಾಸ್​​ ಆಗಿದ್ರೆ ಸಾಕು – Kannada News | Jewar Airport Jobs: 2442 Freshers Vacancies for Ground Staff and Cargo | No Diploma Needed

ನೋಯ್ಡಾದ ಜೇವರ್‌ನಲ್ಲಿ ನಿರ್ಮಾಣವಾಗುತ್ತಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ವಿಮಾನ ನಿಲ್ದಾಣದ ಕಾರ್ಯಾಚರಣೆ ಶೀಘ್ರದಲ್ಲೇ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ಒಟ್ಟು 2,442 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿಯಲ್ಲಿ ಗ್ರೌಂಡ್ ಸ್ಟಾಫ್, ಕಾರ್ಗೋ ಎಕ್ಸಿಕ್ಯೂಟಿವ್ ಮತ್ತು ಲೋಡರ್ ಹುದ್ದೆಗಳಿದ್ದು, ವಿಶೇಷವೆಂದರೆ ಯಾವುದೇ ಏವಿಯೇಷನ್ ಡಿಪ್ಲೊಮಾ ಅಥವಾ ವಿಶೇಷ ತರಬೇತಿಯ ಅಗತ್ಯವಿಲ್ಲದೆ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಗ್ರೌಂಡ್ ಸ್ಟಾಫ್ ಮತ್ತು ಕಾರ್ಗೋ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ 12ನೇ ತರಗತಿ ಪಾಸಾದ 18 ರಿಂದ 30 ವರ್ಷದೊಳಗಿನ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಇವರಿಗೆ ಮಾಸಿಕ 25,000 ರಿಂದ 35,000ರೂ. ವರೆಗೆ ವೇತನ ಸಿಗಲಿದೆ. ಇನ್ನು ಲೋಡರ್ ಹುದ್ದೆಗೆ 10ನೇ ತರಗತಿ ಪಾಸಾದ 20 ರಿಂದ 40 ವರ್ಷದೊಳಗಿನ ಪುರುಷರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, 15,000 ರಿಂದ 25,000ರೂ. ವರೆಗೆ ವೇತನ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಆಸಕ್ತ ಅಭ್ಯರ್ಥಿಗಳು ಜೂನ್ 15, 2026 ರೊಳಗೆ ಅಧಿಕೃತ ವೆಬ್‌ಸೈಟ್ www.niasjewar.com ಮೂಲಕ ತಮ್ಮ ಇಮೇಲ್ ಮತ್ತು ಮೊಬೈಲ್ ಸಂಖ್ಯೆಯನ್ನು ಬಳಸಿ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬಹುದು. ಅರ್ಜಿಯ ಜೊತೆಗೆ ಅಗತ್ಯ ಭಾವಚಿತ್ರ ಮತ್ತು ಸಹಿಯನ್ನು ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ. ವಿಮಾನಯಾನ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಹೊಸಬರಿಗೆ (Freshers) ಇದೊಂದು ಅತ್ಯುತ್ತಮ ವೇದಿಕೆಯಾಗಿದ್ದು, ಕೊನೆಯ ದಿನಾಂಕದ ಮುಂಚಿತವಾಗಿ ಅರ್ಜಿ ಸಲ್ಲಿಸಿ ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಸೂಚಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ – Kannada News | Moving tanker fire reaches Road side Forest In Ankola

ಕಾರವಾರ, ಏಪ್ರಿಲ್ 16): ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್​​ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಾಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮೊದಲೇ ಪೆಟ್ರೋಲ್ ಇದ್ದಿದ್ದರಿಂದ ನೋಡ ನೋಡುತ್ತಿದ್ದಂತೇ ಟ್ಯಾಂಕರ್ ಹೊತ್ತಿ ಉರಿದಿದೆ. ಅಲ್ಲದೇ ಬೆಂಕಿಯ ಜ್ವಾಲೆ ರಸ್ತೆ ಪಕ್ಕದ ಅರಣ್ಯಕ್ಕೂ ವ್ಯಾಪಿಸಿದ್ದು, ಬೆಂಕಿ ನಂದಿಸಲು ಆಗ್ನಿಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬಾಗಲಕೋಟೆ ಲವ್‌ ಜಿಹಾದ್​ ಆರೋಪಕ್ಕೆ ಬಿಗ್ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ – Kannada News | Bagalkot love jihad case Big twist; SP Siddharth Goyal reveals explosive information

ಎಸ್ಪಿ ಸಿದ್ದಾರ್ಥ ಗೋಯೆಲ್, ಯುವಕ, ಮರತ ಯುವತಿImage Credit source: tv9 kannada

ಬಾಗಲಕೋಟೆ, ಏಪ್ರಿಲ್​ 16: ಆಕೆ‌ ಹಿಂದೂ ಹುಡುಗಿ, ಆತ‌ ಮುಸ್ಲಿಂ ಹುಡುಗ. ಇಬ್ಬರ ಮಧ್ಯೆ ನಾಲ್ಕು ವರ್ಷದಿಂದ ಪ್ರೀತಿ ಇತ್ತಂತೆ. ಆದರೆ ಹುಡುಗಿ ನಿನ್ನೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಳು (death). ಈ ಬೆನ್ನಲ್ಲೇ ಲವ್‌ ಜಿಹಾದ್​ (Love Jihad) ಆರೋಪ ಕೇಳಿಬಂದಿತ್ತು. ಹುಡುಗನ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಸಂಬಂಧಿಕರು ಗಂಭೀರ ಆರೋಪ ಕೂಡ ಮಾಡಿದ್ದಾರೆ. ಈ ಮಧ್ಯೆ ಹುಡುಗಿಯ ತಾಯಿ ನೀಡಿದ ದೂರಿನಲ್ಲಿ ಹಲವು ವರ್ಷಗಳಿಂದ ಹುಡುಗ ರಿಲೇಷನ್‌ಶಿಪ್​​​ನಲ್ಲಿದ್ದ ಎಂಬ ಸ್ಫೋಟಕ ವಿಚಾರವನ್ನು ಬಾಗಲಕೋಟೆ ಎಸ್​​ಪಿ ಸಿದ್ದಾರ್ಥ ಗೋಯೆಲ್​ ಬಹಿರಂಗ ಮಾಡಿದ್ದಾರೆ.

ಎಸ್​​ಪಿ ಸಿದ್ದಾರ್ಥ ಗೋಯೆಲ್ ಹೇಳಿದ್ದಿಷ್ಟು

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್​​ಪಿ ಸಿದ್ದಾರ್ಥ ಗೋಯೆಲ್​, ನಿನ್ನೆ ಭೂಮಿಕಾ ಮೋಹನ್ ತಿಪ್ಪಣ್ಣವರ ಎಂಬ 19 ವರ್ಷದ ಯುವತಿ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಕ್ಷಣ ನಾವು ಹಾಗೂ ನಮ್ಮ ಸಿಬ್ಬಂದಿ ಸ್ಥಳಕ್ಕೆ ಹೋಗಿದ್ದೆವು. ಸೀನ್ ಆಫ್ ಕ್ರೈಂ ಅಧಿಕಾರಿಗಳು ಕೂಡ ಬಂದಿದ್ದರು. ಹುಡುಗಿಯ ಫೋನ್ ಸೀಜ್ ಮಾಡಿದ್ದೇವೆ. ಡೊಂಗ್ರಿ ಸಾಬ್ ನದಾಫ್ ಎಂಬ ಹುಡುಗನ ಮೇಲೆ ಯುವತಿ ತಾಯಿ ಕೊಟ್ಟ ದೂರಿನ ಮೇಲೆ ಎಫ್​ಐಆರ್​ ದಾಖಲಿಸಿದ್ದೇವೆ. ಆತನ ಫೋನ್ ಕೂಡ ಸೀಜ್ ಮಾಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ ಯುವತಿ ಆತ್ಮಹತ್ಯೆ, ಲವ್ ಜಿಹಾದ್ ಆರೋಪ

ಕ್ರೈಂ ನಂ 68/2026, ಬಿಎನ್​ಎಸ್ 108 ಆತ್ಮಹತ್ಯೆಗೆ ಪ್ರೇರಣೆ ಅಡಿ ಪ್ರಕರಣ ದಾಖಲಿಸಿದ್ದೇವೆ. ಈಗಾಗಲೇ ಆ ಹುಡುಗನನ್ನು ಅರೆಸ್ಟ್ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದೇವೆ. ಅವರ ತಾಯಿ ಹೇಳುವ ಪ್ರಕಾರ  ಹುಡುಗಿಯ ಜೊತೆ ಹಲವು ವರ್ಷಗಳಿಂದ ಹುಡುಗ ರಿಲೇಷನ್‌ಶಿಪ್​​ನಲ್ಲಿದ್ದ​. ಮದುವೆ ಮಾಡಿಕೊಳ್ಳಲು ಆತ ಒತ್ತಾಯ ಮಾಡುತ್ತಿದ್ದ ಎಂದು ಹೇಳಲಾಗಿದೆ. ಆದ ಕಾರಣ ಮಾನಸಿಕವಾಗಿ ನೊಂದು ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ತಾಯಿ ದೂರದಲ್ಲಿ ಉಲ್ಲೇಖಿಸಿದ್ದಾರೆ ಎಂದರು.

ಡೆತ್ ನೋಟ್ ಸಿಕ್ಕಿಲ್ಲ ಎಂದ ಎಸ್​​ಪಿ

ಯುವತಿಗೆ ಯಾವ ರೀತಿ ಟಾರ್ಚರ್ ಕೊಡಿತ್ತಿದ್ದರು, ಏನೆಲ್ಲಾ ತೊಂದರೆ ಕೊಡುತ್ತಿದ್ದರು ಅದರ ಬಗ್ಗೆ ಸಂಪೂರ್ಣ ವಿಚಾರಣೆ ಮಾಡಿ ನಾವು ಕೋರ್ಟ್​ಗೆ ಚಾರ್ಜ್ ಶೀಟ್ ಸಲ್ಲಿಸುತ್ತೇವೆ. ಎರಡು ಸಮುದಾಯದವರೆಗೂ ನಾವು ಮನವಿ ಮಾಡುತ್ತೇವೆ ದಯವಿಟ್ಟು ಶಾಂತಿ ಕಾಪಾಡಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಪ್ರಕಾರ ನಾವು ಕ್ರಮಕೈಗೊಳ್ಳುತ್ತೇವೆ. ಡೆತ್ ನೋಟ್ ಏನು ಸಿಕ್ಕಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರೇಮ ಸಂಬಂಧವೋ? ಲವ್​​ ಜಿಹಾದೋ?: ಅಸಲಿಗೆ ಹುಬ್ಬಳ್ಳಿ, ಧಾರವಾಡದಲ್ಲಿ ಆಗ್ತಿರೋದೇನು?

ಇನ್ನು ಹಿಂದೂಪರ ಸಂಘಟನೆಯಿಂದ ಲವ್ ಜಿಹಾದ್ ಆರೋಪ‌ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ತಾಯಿಯ ದೂರಿನಲ್ಲಿ ಸದ್ಯಕ್ಕೆ ಅಂತಹ ಯಾವುದೇ ವಿಷಯಗಳ ಉಲ್ಲೇಖವಿಲ್ಲ. ಅವರಿಗೆ ಅವಕಾಶ ಇದೆ, ಇನ್ನೊಂದು ಸಾರಿ ದೂರು ಕೊಡುವುದಕ್ಕೆ. ಅವರು ಏನೆಲ್ಲಾ ವಿಷಯಗಳನ್ನು ಉಲ್ಲೇಖ ಮಾಡುತ್ತಾರೆ ಅದರ ಪ್ರಕಾರ ಕ್ರಮಕೈಗೊಳ್ಳುತ್ತೇವೆ ಎಂದು ಎಸ್​​ಪಿ ಸಿದ್ದಾರ್ಥ ಗೋಯೆಲ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 4:42 pm, Thu, 16 April 26

Source link

ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್? – Kannada News | Darshan’s ex manager talks about allegations on him

ನಟ ದರ್ಶನ್ (Darshan) ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಹಠಾತ್ತನೆ ಸುದ್ದಿಗೋಷ್ಠಿ ನಡೆಸಿದ್ದು, ತಾವು ಹಠಾತ್ತನೇ ನಾಪತ್ತೆ ಆಗಿದ್ದೇಕೆ ಎಂದು ವಿವರಿಸಿದ್ದಾರೆ. ತಮ್ಮ ಮೇಲಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಅರ್ಜುನ್ ಸರ್ಜಾ ಅವರು ನೀಡಿದ ದೂರಿನ ಕುರಿತು ಮಾತನಾಡಿರುವ ಮಲ್ಲಿಕಾರ್ಜುನ, ದರ್ಶನ್ ಅವರಿಗೂ 1 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆಯೇ ಎಂಬ ಪ್ರಶ್ನೆಗೂ ಸಹ ಮಲ್ಲಿಕಾರ್ಜುನ ಉತ್ತರ ನೀಡಿದ್ದಾರೆ. ಮಲ್ಲಿಕಾರ್ಜುನ ಹೇಳೀದ್ದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Source link

ಎನ್​ಬಿಎಫ್​ಸಿಗಳಿಗೆ ಆರ್​ಬಿಐ ನಿಯಮಗಳು ಸಡಿಲ; ಪೂರ್ವಾನುಮತಿ ಇಲ್ಲದೇ ಹೊಸ ಶಾಖೆಗಳ ಸ್ಥಾಪನೆಗೆ ಅವಕಾಶ – Kannada News | RBI Eases NBFC Branch Rules: Boosting Financial Sector & Business Growth in India

ನವದೆಹಲಿ, ಏಪ್ರಿಲ್ 16: ಭಾರತೀಯ ರಿಸರ್ವ್ ಬ್ಯಾಂಕ್ (RBI) ಹಣಕಾಸು ವಲಯದಲ್ಲಿ ಮಹತ್ವದ ಸುಧಾರಣೆ ತಂದಿದ್ದು, ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ (NBFC) ಶಾಖೆಗಳನ್ನು ತೆರೆಯುವ ನಿಯಮಗಳನ್ನು ಸಡಿಲಗೊಳಿಸಿದೆ. ರಿಸರ್ವ್ ಬ್ಯಾಂಕ್ ಈಗ NBFC ಸಂಸ್ಥೆಗಳಿಗೆ ತನ್ನ ಪೂರ್ವಾನುಮತಿ ಇಲ್ಲದೆಯೇ ಹೊಸ ಶಾಖೆಗಳನ್ನು ತೆರೆಯಲು ಮುಕ್ತ ಅವಕಾಶ ನೀಡಿದೆ. ಈ ಕ್ರಮವು ಈ ಸಂಸ್ಥೆಗಳ ಕಾರ್ಯನಿರ್ವಹಣಾ ಸ್ವಾತಂತ್ರ್ಯವನ್ನು ಹೆಚ್ಚಿಸಲು ಮತ್ತು ವ್ಯವಹಾರವನ್ನು ಸುಲಭಗೊಳಿಸಲು (Ease of Doing Business) ಸಹಕಾರಿಯಾಗಲಿದೆ.

ಈ ಮುಂಚೆ ಕೆಲ ನಿರ್ದಿಷ್ಟ ವಿಭಾಗಗಳಿಗೆ ಶಾಖೆಗಳನ್ನು ತೆರೆಯಲು ಪೂರ್ವಾನುಮತಿ ಪಡೆಯುವ ಅಗತ್ಯ ಇತ್ತು. ಈಗ ಎನ್​ಬಿಎಫ್​ಸಿಗಳು ಸಾಮಾನ್ಯವಾಗಿ ಮುಕ್ತವಾಗಿ ಹೊಸ ಶಾಖೆಗಳನ್ನು ತೆರೆಯಲು ಸಾಧ್ಯವಾಗಲಿದೆ.

ಠೇವಣಿ ಪಡೆಯುವ NBFCಗಳಿಗೆ ಆರ್​ಬಿಐನ ಮಾರ್ಗಸೂಚಿಗಳು

ಸಾರ್ವಜನಿಕರಿಂದ ಠೇವಣಿ ಪಡೆಯುವ NBFCಗಳ ಹೂಡಿಕೆ ಸಾಮರ್ಥ್ಯ ಮತ್ತು ಕ್ರೆಡಿಟ್ ರೇಟಿಂಗ್ ಆಧಾರದ ಮೇಲೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ:

  • 50 ಕೋಟಿ ರೂಗಿಂತ ಕಡಿಮೆ ನಿವ್ವಳ ಹಣ (Net Owned Funds) ಹೊಂದಿರುವ ಅಥವಾ ‘AA’ ಗಿಂತ ಕಡಿಮೆ ಕ್ರೆಡಿಟ್ ರೇಟಿಂಗ್ ಹೊಂದಿರುವ ಸಂಸ್ಥೆಗಳು ತಮ್ಮ ನೋಂದಾಯಿತ ಕಚೇರಿ ಇರುವ ರಾಜ್ಯದಲ್ಲಿ ಮಾತ್ರ ಶಾಖೆಗಳನ್ನು ತೆರೆಯಬಹುದು.
  • 50 ಕೋಟಿ ರೂಗಿಂತ ಹೆಚ್ಚು ನಿವ್ವಳ ಹಣ ಮತ್ತು ‘AA’ ಅಥವಾ ಅದಕ್ಕಿಂತ ಹೆಚ್ಚಿನ ಕ್ರೆಡಿಟ್ ರೇಟಿಂಗ್ ಹೊಂದಿರುವ NBFCಗಳು ಭಾರತದಾದ್ಯಂತ ಎಲ್ಲಿ ಬೇಕಾದರೂ ಶಾಖೆಗಳನ್ನು ಆರಂಭಿಸಬಹುದು.
  • 50 ಕೋಟಿ ರೂಗಿಂತ ಹೆಚ್ಚು ನಿವ್ವಳ ಹಣ ಇದ್ದು, ‘AA’ ಗಿಂತಲೂ ಕಡಿಮೆ ಕ್ರೆಡಿಟ್ ರೇಟಿಂಗ್ ಹೊಂದಿರುವ ಎನ್​ಬಿಎಫ್​ಸಿಗಳು ತಮ್ಮ ಮೂಲ ರಾಜ್ಯ ಬಿಟ್ಟು ಬೇರೆಡೆ ವಿಸ್ತರಣೆ ಮಾಡಲು ಅವಕಾಶ ಇರದು.

ಇದನ್ನೂ ಓದಿ: ಚೀನಾ ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರ: ಅಮೆರಿಕ ಹಿಂದಿಕ್ಕಿ ಅಗ್ರಸ್ಥಾನ, ಹೆಚ್ಚಿದ ವ್ಯಾಪಾರ ಕೊರತೆ

ಕೋರ್ ಇನ್ವೆಸ್ಟ್‌ಮೆಂಟ್ ಕಂಪನಿಗಳಿಗೂ (CIC) ಬದಲಾವಣೆ

ಕೋರ್ ಇನ್ವೆಸ್ಟ್‌ಮೆಂಟ್ ಕಂಪನಿಗಳ ವಿದೇಶಿ ಪ್ರತಿನಿಧಿ ಕಚೇರಿಗಳ ವಿಷಯದಲ್ಲೂ RBI ತನ್ನ ಧೋರಣೆಯನ್ನು ಬದಲಿಸಿದೆ. ಈ ಹಿಂದೆ ನಿಯಮ ಉಲ್ಲಂಘನೆಯಾದಲ್ಲಿ ಕಚೇರಿಗಳನ್ನು ಮುಚ್ಚಲು ಆದೇಶಿಸುತ್ತಿದ್ದ RBI, ಈಗ ಅಂತಹ ಕಚೇರಿಗಳಿಗೆ ನೀಡಲಾದ ಅನುಮತಿಯನ್ನು ಮರುಪರಿಶೀಲಿಸುವ ಅಥವಾ ಹಿಂಪಡೆಯುವ ಅಧಿಕಾರವನ್ನು ತನ್ನ ಬಳಿ ಇಟ್ಟುಕೊಂಡಿದೆ. ಇದು ಹೆಚ್ಚು ಫ್ಲೆಕ್ಸಿಬಿಲಿಟಿಯಿಂದ ಕೂಡಿದ ನಿಯಂತ್ರಣಾ ಕ್ರಮವಾಗಿದೆ.

ಈ ಹೊಸ ನಿಯಮಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ರಿಸರ್ವ್ ಬ್ಯಾಂಕ್ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version