Angaraka Sankashti: ಇಂದು ಬಹಳ ಅಪರೂಪದ ದಿನ, ಅಡೆತಡೆ ಮತ್ತು ಸಾಲದಿಂದ ಮುಕ್ತಿ ಪಡೆಯಲು ಈ ರೀತಿ ಮಾಡಿ – Kannada News | Sankashtahara Chaturthi: Angaraka Significance, Rituals and Ganesha Blessings

ಹಿಂದೂ ಕ್ಯಾಲೆಂಡರ್ ಪ್ರಕಾರ, ಸಂಕಷ್ಟಹರ ಚತುರ್ಥಿಯು ಪ್ರತಿ ತಿಂಗಳು ಬರುವ ಗಣೇಶನ ಹಬ್ಬವಾಗಿದೆ. ಇದನ್ನು ಸಂಕಷ್ಟ ಚತುರ್ಥಿ ಎಂದೂ ಕರೆಯುತ್ತಾರೆ. ಈ ಸಂಕಷ್ಟ ಚತುರ್ಥಿ ಹುಣ್ಣಿಮೆಯ ನಂತರ 4 ನೇ ದಿನದಂದು ಬರುತ್ತದೆ. ಈ ಸಂಕಷ್ಟಹರ ಚತುರ್ಥಿ ಮಂಗಳವಾರ ಬಂದರೆ, ಅದನ್ನು ಅಂಗಾರಕ ಸಂಕಷ್ಟಹರ ಚತುರ್ಥಿ ಎಂದು ಕರೆಯಲಾಗುತ್ತದೆ. ಈ ಅಂಗಾರಕ ಸಂಕಷ್ಟಹರ ಚತುರ್ಥಿಯು ವರ್ಷದ ಉಳಿದಿರುವ ಸಂಕಷ್ಟಹರ ಚತುರ್ಥಿ ದಿನಗಳಲ್ಲಿ ಅತ್ಯಂತ ಪ್ರಮುಖವಾದುದು ಎಂದು ಪರಿಗಣಿಸಲಾಗಿದೆ.

ಈ ದಿನದಂದು, ಮಹಿಳೆಯರು ತಮ್ಮ ಮಕ್ಕಳ ದೀರ್ಘಾಯುಷ್ಯ, ಅವರ ಕುಟುಂಬಗಳ ಸಂತೋಷ ಮತ್ತು ಸಮೃದ್ಧಿಗಾಗಿ ಉಪವಾಸ ಮಾಡುತ್ತಾರೆ. ಈ ವರ್ಷ, ಮಂಗಳವಾರ, ಜನವರಿ 6 ರಂದು ಶುಭ ಸಂಕಷ್ಟಿ ಚತುರ್ಥಿ ಉಪವಾಸವನ್ನು ಆಚರಿಸಲಾಗುತ್ತಿದೆ. ಈ ದಿನವು ಬಹಳ ಅಪರೂಪದ ದಿನ ಎಂದು ವಿದ್ವಾಂಸರು ಹೇಳುತ್ತಾರೆ. ಈ ದಿನದಂದು ಮಾಡಬೇಕಾದ ಪೂಜಾ ವಿಧಾನ ಮತ್ತು ಉಪವಾಸದ ಫಲಿತಾಂಶಗಳ ಬಗ್ಗೆ ಸಂಪೂರ್ಣ ವಿವರ ಇಲ್ಲಿ ತಿಳಿದುಕೊಳ್ಳಿ.

ಇಂದು ಬೆಳಿಗ್ಗೆ 11.37 ರಿಂದ ನಾಳೆ ಬುಧವಾರ 7ನೇ ತಾರೀಕಿನ ವರೆಗೆ ಇದೆ. ಚೌತಿ ತಿಥಿ ಚಂದ್ರ ಉದಯಿಸುವ ದಿನದಂದು ಸಂಕಟ ಹರ ಚತುರ್ಥಿಯನ್ನು ಆಚರಿಸಲಾಗುತ್ತದೆ. ಮಂಗಳವಾರ ಬರುವ ಈ ದಿನವನ್ನು ಅಂಗಾರಕ ಸಂಕಷ್ಟ ಹರ ಚತುರ್ಥಿ ಎಂದು ಕರೆಯಲಾಗುತ್ತದೆ. ಅಲ್ಲದೆ, ಭದ್ರ ಕಾಲದ ಒಂದು ನಿರ್ದಿಷ್ಟ ಅವಧಿ ಇದೆ. ಭದ್ರ ಕಾಲ ಪೂಜೆ ಅಥವಾ ಶುಭ ಕಾರ್ಯಗಳಿಗೆ ಸೂಕ್ತವಲ್ಲ. ಆದ್ದರಿಂದ, ಭದ್ರ ಕಾಲದಲ್ಲಿ ಪೂಜೆ ಅಥವಾ ಸಂಕಲ್ಪ ಇತ್ಯಾದಿಗಳನ್ನು ಮಾಡಬಾರದು ಎಂದು ವಿದ್ವಾಂಸರು ಹೇಳುತ್ತಾರೆ. ಈ ದಿನ ಉಪವಾಸ ಮಾಡುವವರು ಶುಭ ಸಮಯದಲ್ಲಿ ಪೂಜೆ ಮತ್ತು ಪ್ರಾರ್ಥನೆಗಳನ್ನು ಮಾಡಬೇಕು. ಚಂದ್ರ ಉದಯಿಸಿದ ನಂತರ, ರಾತ್ರಿ ಚಂದ್ರನನ್ನು ನೋಡಿ ಅರ್ಘ್ಯ ಅರ್ಪಿಸಿದ ನಂತರವೇ ಅವರು ಉಪವಾಸವನ್ನು ಬಿಡಲಾಗುತ್ತದೆ. ಇದರೊಂದಿಗೆ, ಸಂಕಟ ಹರ ಚತುರ್ಥಿ ಉಪವಾಸವು ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ: ಮನೆಯಲ್ಲಿ ತಪ್ಪಿಯೂ ಈ ಜಾಗದಲ್ಲಿ ಹಣ ಇಡಬೇಡಿ, ಸಾಲ ಹೆಚ್ಚಾಗಬಹುದು

ಸಂಕಷ್ಟಹರ ಚತುರ್ಥಿಯ ದಿನದಂದು ಭಕ್ತರು, ವಿಶೇಷವಾಗಿ ಮಹಿಳೆಯರು, ಗಣೇಶನನ್ನು ಭಕ್ತಿಯಿಂದ ಪೂಜಿಸುತ್ತಾರೆ. ಜೊತೆಗೆ ದಿನವಿಡೀ ಉಪವಾಸ ಮಾಡುತ್ತಾರೆ. ಸಂಜೆ, ಚಂದ್ರ ಉದಯಿಸಿದ ನಂತರ, ಚಂದ್ರನ ದರ್ಶನ ಮಾಡಿದ ನಂತರ ಉಪವಾಸವನ್ನು ಕೊನೆಗೊಳಿಸುತ್ತಾರೆ. ಈ ದಿನದಂದು ಗಣೇಶ ಮತ್ತು ಚಂದ್ರನನ್ನು ಪೂಜಿಸಿದರೆ ಕೆಲಸದಲ್ಲಿನ ಅಡೆತಡೆಗಳು, ಆರ್ಥಿಕ ಸಮಸ್ಯೆಗಳು ಮತ್ತು ಸಾಲದ ಸಮಸ್ಯೆಗಳು ದೂರವಾಗುತ್ತವೆ. ಜೀವನದಲ್ಲಿ ಸಕಾರಾತ್ಮಕತೆ ಉಂಟಾಗುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Budhaditya Yoga 2026: ಜನವರಿ 17ರಿಂದ ಬುಧಾದಿತ್ಯ ರಾಜಯೋಗ; ಈ ರಾಶಿಗೆ ಅಪಾರ ಧನ ಲಾಭ! – Kannada News | Budhaditya Yoga 2026: Jan 17 Capricorn Transit Lucky Zodiac Effects and Forecast

ಇದೇ ಜನವರಿ 17ರಂದು ಬುದ್ಧಿವಂತಿಕೆಯ ಕಾರಕತ್ವ ಇರುವಂಥ ಬುಧ ಮತ್ತು ಆತ್ಮಕಾರಕನಾದ ಸೂರ್ಯ ಮಕರ ರಾಶಿಯಲ್ಲಿ ಯುತಿ ಆಗುತ್ತಿದ್ದಾರೆ. ಅಂದರೆ ಅದೇ ರಾಶಿಯಲ್ಲಿ ಇರುತ್ತಾರೆ. ಈ ಸಂಯೋಗದಿಂದ ಅತ್ಯಂತ ಪ್ರಭಾವಶಾಲಿ ‘ಬುಧಾದಿತ್ಯ ಯೋಗ’ ಸೃಷ್ಟಿ ಆಗುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಬುಧಾದಿತ್ಯ ಯೋಗವನ್ನು ಅತ್ಯುತ್ತಮ ಯೋಗ ಎಂದು ಪರಿಗಣಿಸಲಾಗುತ್ತದೆ.

ಮೇಷದಿಂದ ಮೀನದ ತನಕ ಪ್ರಭಾವ ಹೀಗಿದೆ:

ಮೇಷ ರಾಶಿ:

ಈ ಯೋಗವು ನಿಮ್ಮ ಕರ್ಮ ಸ್ಥಾನ- ಉದ್ಯೋಗ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ತರಲಿದೆ. ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆ ದೊರೆಯುತ್ತದೆ, ಜತೆಗೆ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ.

ವೃಷಭ ರಾಶಿ:

ಭಾಗ್ಯ ಸ್ಥಾನದಲ್ಲಿ ಈ ಯೋಗವು ಸೃಷ್ಟಿ ಆಗುವುದರಿಂದ ನಿಂತುಹೋದ ಕೆಲಸಗಳು ಪುನಾರಂಭಗೊಳ್ಳಲಿವೆ. ದೂರದ ಪ್ರಯಾಣ ಅಥವಾ ವಿದೇಶಿ ಶಿಕ್ಷಣದ ಹಾದಿ ಸುಗಮವಾಗಲಿದ್ದು, ಆಧ್ಯಾತ್ಮಿಕ ಚಿಂತನೆ ಹೆಚ್ಚಲಿದೆ.

ಮಿಥುನ ರಾಶಿ:

ಹಠಾತ್ ಧನಲಾಭ ಉಂಟಾಗುವ ಸಾಧ್ಯತೆ ಇದ್ದರೂ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯ. ವಾಹನ ಚಾಲನೆ ವೇಳೆ ಎಚ್ಚರಿಕೆ ಮುಖ್ಯ. ಗುಪ್ತ ವಿದ್ಯೆಗಳ ಕಲಿಕೆಯಲ್ಲಿ ಆಸಕ್ತಿ ಮೂಡಲಿದೆ ಮತ್ತು ವಿಮಾ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಅನುಕೂಲವಾಗಲಿದೆ.

ಕರ್ಕಾಟಕ ರಾಶಿ:

ಪಾಲುದಾರಿಕೆ ವ್ಯವಹಾರದಲ್ಲಿ ಉತ್ತಮ ಲಾಭವನ್ನು ನಿರೀಕ್ಷಿಸಬಹುದು. ದಾಂಪತ್ಯದಲ್ಲಿ ಇದ್ದ ಅಸಮಾಧಾನಗಳು ದೂರವಾಗಿ ಸಂಗಾತಿಯೊಂದಿಗೆ ಸುಂದರ ಕ್ಷಣಗಳನ್ನು ಕಳೆಯುವಿರಿ. ಆದರೆ ನಿಮ್ಮ ಎದುರಿಗೆ ಇರುವ ವ್ಯಕ್ತಿಗಳು ಹೇಳುವ ಮಾತುಗಳನ್ನು ಕೇಳಿಸಿಕೊಳ್ಳಿ.

ಸಿಂಹ ರಾಶಿ:

ಕಚೇರಿಯಲ್ಲಿ ಸಹೋದ್ಯೋಗಿಗಳ ಬೆಂಬಲ ದೊರೆತು ಶತ್ರುಗಳ ಮೇಲೆ ಜಯ ಸಾಧಿಸುವಿರಿ. ಹಳೆಯ ಸಾಲಗಳಿಂದ ಮುಕ್ತಿ ಪಡೆಯಲು ಇದು ಸಕಾಲವಾಗಿದ್ದು, ಕೋರ್ಟ್ ಕಚೇರಿ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ.

ಕನ್ಯಾ ರಾಶಿ:

ಈ ಸಮಯವು ವಿದ್ಯಾರ್ಥಿಗಳಿಗೆ ಬಹಳ ಶುಭದಾಯಕವಾಗಿದ್ದು, ಸೃಜನಾತ್ಮಕ ಕೆಲಸಗಳಲ್ಲಿ ಪ್ರಗತಿ ಕಾಣುವಿರಿ. ಪ್ರೇಮ ಜೀವನದಲ್ಲಿ ಹೊಸ ತಿರುವು ಸಿಗಲಿದ್ದು, ಮಕ್ಕಳ ಪ್ರಗತಿಯಿಂದ ಸಂತಸ ಉಂಟಾಗಲಿದೆ.

ತುಲಾ ರಾಶಿ:

ಕುಟುಂಬದ ಸದಸ್ಯರ ನಡುವೆ ಬಾಂಧವ್ಯ ವೃದ್ಧಿ ಆಗಲಿದ್ದು, ಹೊಸ ಆಸ್ತಿ ಅಥವಾ ವಾಹನ ಖರೀದಿಗೆ ಯೋಗವಿದೆ. ತಾಯಿಯ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದ್ದು, ಮನೆಯಲ್ಲಿ ಸುಖ-ಶಾಂತಿ ನೆಲೆಸಲಿದೆ.

ವೃಶ್ಚಿಕ ರಾಶಿ:

ನಿಮ್ಮ ಧೈರ್ಯ ಮತ್ತು ಪರಾಕ್ರಮ ಹೆಚ್ಚಾಗಲಿದ್ದು, ಕಠಿಣ ಸವಾಲುಗಳನ್ನು ಸಮರ್ಥವಾಗಿ ಎದುರಿಸುವಿರಿ. ಸಣ್ಣ ಪ್ರಯಾಣಗಳಿಂದ ಲಾಭವಾಗುವುದೇ ಅಲ್ಲದೆ, ಸಹೋದರ-ಸಹೋದರಿಯರೊಂದಿಗೆ ಸೌಹಾರ್ದತೆ ಹೆಚ್ಚಲಿದೆ.

ಇದನ್ನೂ ಓದಿ: ಮನೆಯಲ್ಲಿ ತಪ್ಪಿಯೂ ಈ ಜಾಗದಲ್ಲಿ ಹಣ ಇಡಬೇಡಿ, ಸಾಲ ಹೆಚ್ಚಾಗಬಹುದು

ಧನು ರಾಶಿ:

ಆರ್ಥಿಕ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸಲಿದ್ದು, ಬಾಕಿ ಉಳಿದಿದ್ದ ಹಣ ನಿಮ್ಮ ಕೈ ಸೇರಲಿದೆ. ಮಾತು ಮಧುರವಾಗುವುದರಿಂದ ಸಾಮಾಜಿಕವಾಗಿ ನಿಮ್ಮ ಗೌರವ ಪ್ರತಿಷ್ಠೆಗಳು ಹೆಚ್ಚಲಿವೆ. ಆದರೆ ಮಾತಿನ ಮೇಲೆ ನಿಗಾ ಇರಿಸಿಕೊಳ್ಳಬೇಕು. ಪದ ಬಳಕೆಯಲ್ಲಿ ಜಾಗ್ರತೆ.

ಮಕರ ರಾಶಿ:

ನಿಮ್ಮದೇ ರಾಶಿಯಲ್ಲಿ ಬುಧಾದಿತ್ಯ ಯೋಗವು ಸಂಭವಿಸುತ್ತಿರುವುದರಿಂದ ಆತ್ಮವಿಶ್ವಾಸ ದುಪ್ಪಟ್ಟಾಗಲಿದೆ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ಲಭಿಸುವುದಲ್ಲದೆ, ವೈಯಕ್ತಿಕ ಬೆಳವಣಿಗೆಗೆ ಹೊಸ ದಾರಿಗಳು ಗೋಚರಿಸಲಿವೆ.

ಕುಂಭ ರಾಶಿ:

ವಿದೇಶ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ ಕಂಡುಬರಲಿದ್ದು, ಖರ್ಚುಗಳ ಮೇಲೆ ಹಿಡಿತ ಸಾಧಿಸುವುದು ಒಳ್ಳೆಯದು. ಹೂಡಿಕೆ ಮಾಡುವ ಮುನ್ನ ಅನುಭವಸ್ಥರ ಸಲಹೆ ಪಡೆಯುವುದು ಉತ್ತಮ. ಅತಿಯಾದ ಆತ್ಮವಿಶ್ವಾಸ ಸಮಸ್ಯೆಗೆ ಕಾರಣ ಆಗಬಹುದು, ಎಚ್ಚರ.

ಮೀನ ರಾಶಿ:

ಆದಾಯದ ಮೂಲಗಳು ಹೆಚ್ಚಾಗಲಿದ್ದು, ಬಹುಕಾಲದ ಆಸೆಗಳು ಈ ಸಮಯದಲ್ಲಿ ಈಡೇರಲಿವೆ. ದೊಡ್ಡ ವ್ಯಕ್ತಿಗಳ ಪರಿಚಯದಿಂದ ಭವಿಷ್ಯದ ಯೋಜನೆಗಳಿಗೆ ಸಹಕಾರ ಸಿಗಲಿದೆ ಮತ್ತು ಸಮಾಜದಲ್ಲಿ ನಿಮ್ಮ ಪ್ರಭಾವ ವೃದ್ಧಿಸಲಿದೆ.

ಲೇಖನ- ಶ್ರೀನಿವಾಸ ಮಠ

Published On – 12:34 pm, Tue, 6 January 26

Source link

Sonia Gandhi: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು – Kannada News | Congress Leader Sonia Gandhi Admitted to Hospital in Delhi

ನವದೆಹಲಿ, ಜನವರಿ 06: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ(Sonia Gandhi) ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ. ಸೋಮವಾರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಕೆಲವು ದಿನಗಳಿಂದ ಕೆಮ್ಮು ಕಾಣಿಸಿಕೊಂಡಿತ್ತು. ದೆಹಲಿಯಲ್ಲಿ ಮಾಲಿನ್ಯ ಹೆಚ್ಚಾದ ಹಿನ್ನೆಲೆಯಲ್ಲಿ ಕೆಮ್ಮು ಕಡಿಮೆಯಾಗುತ್ತಿರಲಿಲ್ಲ. ಹೀಗಾಗಿ ಆಸ್ಪತ್ರೆಗೆ ತೆರಳಿದ್ದಾರೆ.

ಸೋನಿಯಾ ಗಾಂಧಿಗೆ ಡಿಸೆಂಬರ್​​ನಲ್ಲಿ 79 ವರ್ಷ ತುಂಬಿತ್ತು. ಕೆಲವು ತಿಂಗಳ ಹಿಂದೆ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಫೆಬ್ರವರಿಯಲ್ಲಿ ಅವರ ಆಸ್ಪತ್ರೆಗೆ ಒಂದು ದಿನ ಚಿಕಿತ್ಸೆ ನೀಡಲಾಯಿತು, ಆ ಸಮಯದಲ್ಲಿ ಅವರು ಗ್ಯಾಸ್ಟ್ರೋಎಂಟರಾಲಜಿ ತಜ್ಞರ ಮೇಲ್ವಿಚಾರಣೆಯಲ್ಲಿದ್ದರು.

ಜೂನ್ 19 ರಂದು, ಹೊಟ್ಟೆಗೆ ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ಪಡೆದ ನಂತರ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಜೂನ್ 15 ರಂದು ಹೊಟ್ಟೆಯ ಸೋಂಕಿಗೆ ಒಳಗಾಘಿದ್ದರು, ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ಕು ದಿನಗಳಿಂದ,ಗಾಂಧಿಯವರ ಮೇಲೆ ತೀವ್ರ ವೈದ್ಯಕೀಯ ನಿಗಾ ಇಡಲಾಗಿತ್ತು.

ಮತ್ತಷ್ಟು ಓದಿ: ನೆಹರುಗೆ ಸಂಬಂಧಿಸಿದ ದಾಖಲೆಗಳು ಕಾಣೆಯಾಗಿರಲಿಲ್ವಾ? ಗಜೇಂದ್ರ ಶೇಖಾವತ್ ಹೇಳಿದ್ದೇನು? ಸೋನಿಯಾ ಕುರಿತು ಚರ್ಚೆ ಶುರು

ಜೂನ್ 7 ರಂದು ಕೂಡ ಕಾಂಗ್ರೆಸ್ ನಾಯಕಿ ಹಿಮಾಚಲ ಪ್ರದೇಶದ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಹೋಗಿದ್ದರು, ಕೆಲವು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಂದಾಗಿ ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರನ್ನು ಕರೆತರಲಾಗಿತ್ತು ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿಯ ಪ್ರಧಾನ ಸಲಹೆಗಾರ (ಮಾಧ್ಯಮ) ನರೇಶ್ ಚೌಹಾಣ್ ಹೇಳಿದ್ದರು.

ಸೆಪ್ಟೆಂಬರ್ 2022 ರಲ್ಲಿ, ಸೋನಿಯಾ ಗಾಂಧಿ ವೈದ್ಯಕೀಯ ತಪಾಸಣೆಗಾಗಿ ಅಮೆರಿಕಕ್ಕೆ ಹೋಗಲು ಮುಂದಾಗಿದ್ದರು, ಆದರೆ ಕೋವಿಡ್-19 ಕೋವಿಡ್​ನಿಂದಾಗಿ ಆ ಭೇಟಿಯನ್ನು ಮುಂದೂಡಲಾಗಿತ್ತು. ಆ ಪ್ರವಾಸದಲ್ಲಿ ಅವರ ಮಗ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಇದ್ದರು.

ರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Budhaditya Yoga 2025: ಜನವರಿ 17ರಿಂದ ಬುಧಾದಿತ್ಯ ರಾಜಯೋಗ; ಈ ರಾಶಿಗೆ ಅಪಾರ ಧನ ಲಾಭ! – Kannada News | Budhaditya Yoga 2025: Jan 17 Capricorn Transit Lucky Zodiac Effects and Forecast

ಇದೇ ಜನವರಿ 17ರಂದು ಬುದ್ಧಿವಂತಿಕೆಯ ಕಾರಕತ್ವ ಇರುವಂಥ ಬುಧ ಮತ್ತು ಆತ್ಮಕಾರಕನಾದ ಸೂರ್ಯ ಮಕರ ರಾಶಿಯಲ್ಲಿ ಯುತಿ ಆಗುತ್ತಿದ್ದಾರೆ. ಅಂದರೆ ಅದೇ ರಾಶಿಯಲ್ಲಿ ಇರುತ್ತಾರೆ. ಈ ಸಂಯೋಗದಿಂದ ಅತ್ಯಂತ ಪ್ರಭಾವಶಾಲಿ ‘ಬುಧಾದಿತ್ಯ ಯೋಗ’ ಸೃಷ್ಟಿ ಆಗುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಬುಧಾದಿತ್ಯ ಯೋಗವನ್ನು ಅತ್ಯುತ್ತಮ ಯೋಗ ಎಂದು ಪರಿಗಣಿಸಲಾಗುತ್ತದೆ.

ಮೇಷದಿಂದ ಮೀನದ ತನಕ ಪ್ರಭಾವ ಹೀಗಿದೆ:

ಮೇಷ ರಾಶಿ:

ಈ ಯೋಗವು ನಿಮ್ಮ ಕರ್ಮ ಸ್ಥಾನ- ಉದ್ಯೋಗ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ತರಲಿದೆ. ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆ ದೊರೆಯುತ್ತದೆ, ಜತೆಗೆ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ.

ವೃಷಭ ರಾಶಿ:

ಭಾಗ್ಯ ಸ್ಥಾನದಲ್ಲಿ ಈ ಯೋಗವು ಸೃಷ್ಟಿ ಆಗುವುದರಿಂದ ನಿಂತುಹೋದ ಕೆಲಸಗಳು ಪುನಾರಂಭಗೊಳ್ಳಲಿವೆ. ದೂರದ ಪ್ರಯಾಣ ಅಥವಾ ವಿದೇಶಿ ಶಿಕ್ಷಣದ ಹಾದಿ ಸುಗಮವಾಗಲಿದ್ದು, ಆಧ್ಯಾತ್ಮಿಕ ಚಿಂತನೆ ಹೆಚ್ಚಲಿದೆ.

ಮಿಥುನ ರಾಶಿ:

ಹಠಾತ್ ಧನಲಾಭ ಉಂಟಾಗುವ ಸಾಧ್ಯತೆ ಇದ್ದರೂ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯ. ವಾಹನ ಚಾಲನೆ ವೇಳೆ ಎಚ್ಚರಿಕೆ ಮುಖ್ಯ. ಗುಪ್ತ ವಿದ್ಯೆಗಳ ಕಲಿಕೆಯಲ್ಲಿ ಆಸಕ್ತಿ ಮೂಡಲಿದೆ ಮತ್ತು ವಿಮಾ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಅನುಕೂಲವಾಗಲಿದೆ.

ಕರ್ಕಾಟಕ ರಾಶಿ:

ಪಾಲುದಾರಿಕೆ ವ್ಯವಹಾರದಲ್ಲಿ ಉತ್ತಮ ಲಾಭವನ್ನು ನಿರೀಕ್ಷಿಸಬಹುದು. ದಾಂಪತ್ಯದಲ್ಲಿ ಇದ್ದ ಅಸಮಾಧಾನಗಳು ದೂರವಾಗಿ ಸಂಗಾತಿಯೊಂದಿಗೆ ಸುಂದರ ಕ್ಷಣಗಳನ್ನು ಕಳೆಯುವಿರಿ. ಆದರೆ ನಿಮ್ಮ ಎದುರಿಗೆ ಇರುವ ವ್ಯಕ್ತಿಗಳು ಹೇಳುವ ಮಾತುಗಳನ್ನು ಕೇಳಿಸಿಕೊಳ್ಳಿ.

ಸಿಂಹ ರಾಶಿ:

ಕಚೇರಿಯಲ್ಲಿ ಸಹೋದ್ಯೋಗಿಗಳ ಬೆಂಬಲ ದೊರೆತು ಶತ್ರುಗಳ ಮೇಲೆ ಜಯ ಸಾಧಿಸುವಿರಿ. ಹಳೆಯ ಸಾಲಗಳಿಂದ ಮುಕ್ತಿ ಪಡೆಯಲು ಇದು ಸಕಾಲವಾಗಿದ್ದು, ಕೋರ್ಟ್ ಕಚೇರಿ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ.

ಕನ್ಯಾ ರಾಶಿ:

ಈ ಸಮಯವು ವಿದ್ಯಾರ್ಥಿಗಳಿಗೆ ಬಹಳ ಶುಭದಾಯಕವಾಗಿದ್ದು, ಸೃಜನಾತ್ಮಕ ಕೆಲಸಗಳಲ್ಲಿ ಪ್ರಗತಿ ಕಾಣುವಿರಿ. ಪ್ರೇಮ ಜೀವನದಲ್ಲಿ ಹೊಸ ತಿರುವು ಸಿಗಲಿದ್ದು, ಮಕ್ಕಳ ಪ್ರಗತಿಯಿಂದ ಸಂತಸ ಉಂಟಾಗಲಿದೆ.

ತುಲಾ ರಾಶಿ:

ಕುಟುಂಬದ ಸದಸ್ಯರ ನಡುವೆ ಬಾಂಧವ್ಯ ವೃದ್ಧಿ ಆಗಲಿದ್ದು, ಹೊಸ ಆಸ್ತಿ ಅಥವಾ ವಾಹನ ಖರೀದಿಗೆ ಯೋಗವಿದೆ. ತಾಯಿಯ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದ್ದು, ಮನೆಯಲ್ಲಿ ಸುಖ-ಶಾಂತಿ ನೆಲೆಸಲಿದೆ.

ವೃಶ್ಚಿಕ ರಾಶಿ:

ನಿಮ್ಮ ಧೈರ್ಯ ಮತ್ತು ಪರಾಕ್ರಮ ಹೆಚ್ಚಾಗಲಿದ್ದು, ಕಠಿಣ ಸವಾಲುಗಳನ್ನು ಸಮರ್ಥವಾಗಿ ಎದುರಿಸುವಿರಿ. ಸಣ್ಣ ಪ್ರಯಾಣಗಳಿಂದ ಲಾಭವಾಗುವುದೇ ಅಲ್ಲದೆ, ಸಹೋದರ-ಸಹೋದರಿಯರೊಂದಿಗೆ ಸೌಹಾರ್ದತೆ ಹೆಚ್ಚಲಿದೆ.

ಇದನ್ನೂ ಓದಿ: ಮನೆಯಲ್ಲಿ ತಪ್ಪಿಯೂ ಈ ಜಾಗದಲ್ಲಿ ಹಣ ಇಡಬೇಡಿ, ಸಾಲ ಹೆಚ್ಚಾಗಬಹುದು

ಧನು ರಾಶಿ:

ಆರ್ಥಿಕ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸಲಿದ್ದು, ಬಾಕಿ ಉಳಿದಿದ್ದ ಹಣ ನಿಮ್ಮ ಕೈ ಸೇರಲಿದೆ. ಮಾತು ಮಧುರವಾಗುವುದರಿಂದ ಸಾಮಾಜಿಕವಾಗಿ ನಿಮ್ಮ ಗೌರವ ಪ್ರತಿಷ್ಠೆಗಳು ಹೆಚ್ಚಲಿವೆ. ಆದರೆ ಮಾತಿನ ಮೇಲೆ ನಿಗಾ ಇರಿಸಿಕೊಳ್ಳಬೇಕು. ಪದ ಬಳಕೆಯಲ್ಲಿ ಜಾಗ್ರತೆ.

ಮಕರ ರಾಶಿ:

ನಿಮ್ಮದೇ ರಾಶಿಯಲ್ಲಿ ಬುಧಾದಿತ್ಯ ಯೋಗವು ಸಂಭವಿಸುತ್ತಿರುವುದರಿಂದ ಆತ್ಮವಿಶ್ವಾಸ ದುಪ್ಪಟ್ಟಾಗಲಿದೆ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ಲಭಿಸುವುದಲ್ಲದೆ, ವೈಯಕ್ತಿಕ ಬೆಳವಣಿಗೆಗೆ ಹೊಸ ದಾರಿಗಳು ಗೋಚರಿಸಲಿವೆ.

ಕುಂಭ ರಾಶಿ:

ವಿದೇಶ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ ಕಂಡುಬರಲಿದ್ದು, ಖರ್ಚುಗಳ ಮೇಲೆ ಹಿಡಿತ ಸಾಧಿಸುವುದು ಒಳ್ಳೆಯದು. ಹೂಡಿಕೆ ಮಾಡುವ ಮುನ್ನ ಅನುಭವಸ್ಥರ ಸಲಹೆ ಪಡೆಯುವುದು ಉತ್ತಮ. ಅತಿಯಾದ ಆತ್ಮವಿಶ್ವಾಸ ಸಮಸ್ಯೆಗೆ ಕಾರಣ ಆಗಬಹುದು, ಎಚ್ಚರ.

ಮೀನ ರಾಶಿ:

ಆದಾಯದ ಮೂಲಗಳು ಹೆಚ್ಚಾಗಲಿದ್ದು, ಬಹುಕಾಲದ ಆಸೆಗಳು ಈ ಸಮಯದಲ್ಲಿ ಈಡೇರಲಿವೆ. ದೊಡ್ಡ ವ್ಯಕ್ತಿಗಳ ಪರಿಚಯದಿಂದ ಭವಿಷ್ಯದ ಯೋಜನೆಗಳಿಗೆ ಸಹಕಾರ ಸಿಗಲಿದೆ ಮತ್ತು ಸಮಾಜದಲ್ಲಿ ನಿಮ್ಮ ಪ್ರಭಾವ ವೃದ್ಧಿಸಲಿದೆ.

ಲೇಖನ- ಶ್ರೀನಿವಾಸ ಮಠ

Source link

ರಾಯಚೂರಿನಲ್ಲಿ ರಸ್ತೆಗಿಳಿದ ‘ವಿದ್ಯಾರ್ಥಿ ರಥ’; ಸ್ಕೂಲ್ ಮಕ್ಕಳೀಗಾಗಿಯೇ ರಿಸರ್ವ್​ 15 ಹೊಸ ಬಸ್ಗಳು – Kannada News | Sindhanur’s “Vidhyarthi Ratha”: New Bus Service for 25K Students

ರಾಯಚೂರಿನಲ್ಲಿ ರಸ್ತೆಗಿಳಿದ ‘ವಿದ್ಯಾರ್ಥಿ ರಥ’; ಸ್ಕೂಲ್ ಮಕ್ಕಳೀಗಾಗಿಯೇ ರಿಸರ್ವ್​ 15 ಹೊಸ ಬಸ್ಗಳು

ರಾಯಚೂರು, ಜನವರಿ 06: ಕರ್ನಾಟಕದ ಹಲವೆಡೆ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಸಾರಿಗೆ ವ್ಯವಸ್ಥೆಯಿಲ್ಲದೆ ಪರದಾಡುತ್ತಿದ್ದಾರೆ. ರಾಯಚೂರಿನಲ್ಲಿಯೂ ಮಕ್ಕಳು ಇದೇ ಸಮಸ್ಯೆ ಎದುರಿಸುತ್ತಿದ್ದು, ಇದಕ್ಕೆ ಪರಿಹಾರವಾಗಿ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆಂದೇ ಬಸ್ ಸೇವೆ ಆರಂಭವಾಗಿದ್ದು, ಸಿಂಧನೂರು ತಾಲ್ಲೂಕಿನಲ್ಲಿ 15 ಹೊಸ ಬಸ್‌ಗಳನ್ನು ವಿದ್ಯಾರ್ಥಿಗಳಿಗಾಗಿ ರಿಸರ್ವ್ ಮಾಡಲಾಗಿದೆ. ‘ವಿದ್ಯಾರ್ಥಿ ರಥ’ ಹೆಸರಿನ ಯೋಜನೆಯಡಿ ಸೇವೆ ನೀಡಲು ಸಿದ್ಧತೆ ಸಂಪೂರ್ಣಗೊಂಡಿದ್ದು, ಈ ಬಸ್‌ಗಳಲ್ಲಿ ಕೇವಲ ಪಿಯು, ಡಿಗ್ರಿ, ಪಿಜಿ ವಿದ್ಯಾರ್ಥಿಗಳು ಮಾತ್ರ ಪ್ರಯಾಣಿಸಬಹುದಾಗಿದೆ.

5 ಕೋಟಿ ರೂ. ವೆಚ್ಚದ ಯೋಜನೆ

ಕಾಂಗ್ರೆಸ್ ಶಾಸಕ ಹಂಪನಗೌಡ ಬಾದರ್ಲಿರಿಂದ ಈ ವಿನೂತನ ಕಾರ್ಯ ನಡೆದಿದ್ದು, ಸಿಂಧನೂರು ತಾಲೂಕಿನಲ್ಲಿ ಸಂಚರಿಸಲಿರುವ 15 ಹೊಸ ಬಸ್‌ಗಳ ಯೋಜನೆಯನ್ನು ಜನವರಿ 3ರಂದು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. 25,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಂಟಾಗುತ್ತಿದ್ದ ಬಸ್ ಕೊರತೆಯನ್ನು ಪರಿಹರಿಸಲು 5 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಜಾರಿಗೆ ಬಂದಿದೆ. ಈ ಬಸ್​ಗಳಲ್ಲಿ ಸಾರ್ವಜನಿಕರಿಗೆ ಅವಕಾಶವಿಲ್ಲದೆ ಕೇಲವ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿರುವುದಾಗಿ ಹೇಳಲಾಗಿದೆ.

ವಿದ್ಯಾರ್ಥಿಗಳ ಹರ್ಷ

ಇದಕ್ಕಾಗಿ ಬಸ್‌ಗಳ ಸಂಚಾರ ದೈನಂದಿನ ಶಕ್ತಿ ಯೋಜನೆ ರೂಪಿಸಲ್ಪಟ್ಟಿದ್ದು, ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ಬಸ್‌ಗಳ ಕೊರತೆಯಿಂದ ತರಗತಿಗೆ ಹಾಜರಾಗಲು ತೊಂದರೆ ಎದುರಿಸುತ್ತಿದ್ದ ವಿದ್ಯಾರ್ಥಿಗಳಿಗೆ ಪರಿಹಾರ ನೀಡಲಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ಹೊಸ ಬಸ್ ಸೇವೆಯನ್ನು ಖುಷಿಯಿಂದ ಸ್ವಾಗತಿಸಿದ್ದಾರೆ. ವಿದ್ಯಾರ್ಥಿ ರಥ ಯೋಜನೆಯಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸುಲಭ, ಸುರಕ್ಷಿತ ಮತ್ತು ಸಮಯಬದ್ಧ ಪ್ರಯಾಣ ಸಿಗುವ ನಿರೀಕ್ಷೆ ವ್ಯಕ್ತವಾಗಿದ್ದು, ಈ ಸೇವೆ ರಾಜ್ಯದ ಬಸ್ ಸಾರಿಗೆ ವ್ಯವಸ್ಥೆಯಲ್ಲಿ ಹೊಸ ಮಾದರಿಯ ಹೆಜ್ಜೆ ಇಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ರಾಮ್​ಜೆಟ್ ಶಕ್ತ ಆರ್ಟಿಲರಿ ಶೆಲ್ ಹೊಂದಿರುವ ವಿಶ್ವದ ಮೊದಲ ಸೇನೆ ಭಾರತದ್ದು; ಏನಿದರ ವಿಶೇಷತೆ? – Kannada News | In a world’s first, Indian Army to deploy ramjet powered 155 mm artillery shells

ನವದೆಹಲಿ, ಜನವರಿ 6: ಭಾರತೀಯ ಸೇನೆಯ (Indian Army) 155 ಎಂಎಂ ಗನ್​ಗಳಿಗೆ ರಾಮ್​ಜೆಟ್ ಶಕ್ತ ಆರ್ಟಿಲರಿ ಶೆಲ್​ಗಳನ್ನು ನಿಯೋಜಿಸಿದೆ. ಈ ಬಲ ಪಡೆದ ವಿಶ್ವದ ಮೊದಲ ಸಶಸ್ತ್ರ ಸೇನೆ ಭಾರತದ್ದಾಗಿದೆ. ಡಿಆರ್​ಡಿಒ ಮತ್ತು ಐಐಟಿ ಮದ್ರಾಸ್ ಜಂಟಿಯಾಗಿ ಮತ್ತು ಸ್ವಂತವಾಗಿ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿವೆ. ಭೂಸೇನೆಯ ಬತ್ತಳಿಕೆಯಲ್ಲಿ ಇರುವ ಪ್ರಮುಖ ಶಸ್ತ್ರಾಸ್ತ್ರಗಳಲ್ಲಿ ಆರ್ಟಿಲರಿ ಶೆಲ್​ಗಳು ಇವೆ. ಈ ಶೆಲ್​ಗಳಿಗೆ ರಾಮ್​ಜೆಟ್ ಎಂಜಿನ್ ಅಳವಡಿಸಿರುವುದು ಗೇಮ್ ಚೇಂಜರ್ ಎನಿಸಿದೆ.

ಏನಿದು ರಾಮ್​ಜೆಟ್?

ರಾಮ್​ಜೆಟ್ ಎಂಬುದು ಒಳನುಗ್ಗುವ ಗಾಳಿ ಬಳಸಿಕೊಂಡು ಕೆಲಸ ಮಾಡುವ ಎಂಜಿನ್ ಆಗಿದೆ. ತಿರುಗುವ ಕಂಪ್ರೆಸ್ಸರ್​ಗಳು ಮತ್ತು ಟರ್ಬೈನ್​ಗಳು ಬೇಕಾಗುವುದಿಲ್ಲ. ಗನ್​ನಿಂದ ಹೊರಹಾರುವ ಶೆಲ್ ಒಂದು ನಿರ್ದಿಷ್ಟ ವೇಗ ಪಡೆದಾಗ ರಾಮ್​ಜೆಟ್ ಎಂಜಿನ್ ಸಕ್ರಿಯಗೊಳ್ಳುತ್ತದೆ. ರಾಮ್​ಜೆಟ್ ಎಂಜಿನ್​ಗೆ ಗಾಳಿಯೇ ಪ್ರಮುಖ ಶಕ್ತಿ. ಈ ರಾಮ್​ಜೆಟ್​ಗಳನ್ನು ಸಾಮಾನ್ಯವಾಗಿ ಮಿಸೈಲ್​ಗಳಿಗೆ ಅಳವಡಿಸಲಾಗುತ್ತದೆ. ಆರ್ಟಿಲರಿ ಶೆಲ್​ಗಳಿಗೆ ಇತ್ತೀಚೆಗೆ ಇದರ ಅಳವಡಿಕೆ ಆರಂಭವಾಗಿದೆ.

ಇದನ್ನೂ ಓದಿ: ಈ ಬಾರಿಯ ಗಣರಾಜ್ಯೋತ್ಸವ ಬಹಳ ಡಿಫರೆಂಟ್; ಸೇನೆಯಿಂದ ಒಂಟೆ, ಭಾರತೀಯ ತಳಿಯ ನಾಯಿಗಳ ಮೆರವಣಿಗೆ

ಏನಿದು ಆರ್ಟಿಲರಿ ಶೆಲ್?

ಇದು ಒಂದು ರೀತಿಯಲ್ಲಿ ಬುಲೆಟ್​ಗಳಂತೆ. ಆದರೆ, ಸ್ಫೋಟಕಗಳು ಆರ್ಟಿಲರಿ ಶೆಲ್​ನ ಒಳಗೆ ಇರುತ್ತವೆ. 155 ಎಂಎಂ ಗನ್, ಹೌವಿಟ್ಜರ್ ಗನ್ ಇತ್ಯಾದಿಗಳಿಂದ ಇವುಗಳನ್ನು ಶೂಟ್ ಮಾಡಲಾಗುತ್ತದೆ. ಸಾಮಾನ್ಯ ಆರ್ಟಿಲರಿ ಶೆಲ್​ಗಳು 5ರಿಂದ 10 ಕಿಮೀ ದೂರದವರೆಗೆ ಹೋಗಬಲ್ಲುವು. ರಾಮ್​ಜೆಟ್ ಶಕ್ತ ಆರ್ಟಿಲರಿ ಶೆಲ್​ಗಳು 50 ಕಿಮೀ ದೂರದವರೆಗೂ ಗುರಿಯನ್ನು ಹೊಡೆದುರುಳಿಸಬಲ್ಲುವು.

ಭಾರತದಲ್ಲಿ ನಿಯೋಜಿಸಲಾಗಿರುವ ರಾಮ್​ಜೆಟ್ ಶಕ್ತ ಆರ್ಟಿಲರಿ ಶೆಲ್​ಗಳು ಸಾಮಾನ್ಯದವಕ್ಕಿಂತ ಶೇ. 30ರಷ್ಟು ಹೆಚ್ಚು ದೂರ ತಲುಪಬಲ್ಲುವು ಎಂದೆನ್ನಲಾಗುತ್ತಿದೆ. ಸದ್ಯ ಇದನ್ನು 155 ಎಂಎಂ ಗನ್​ಗಳಿಗೆ ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ಲೈಟ್ ಹೌವಿಟ್ಜರ್ ಗನ್ ಇತ್ಯಾದಿ ಇನ್ನೂ ಹಲವು ವೆಪನ್ ಸಿಸ್ಟಂಗಳಿಗೆ ರಾಮ್​ಜೆಟ್ ಶಕ್ತ ಆರ್ಟಿಲರಿ ಶೆಲ್​ಗಳನ್ನು ಸೇರಿಸುವ ಯೋಜನೆ ಭಾರತದ್ದಾಗಿದೆ.

ಇದನ್ನೂ ಓದಿ: ದೆಹಲಿ ರಕ್ಷಣೆಗೆ ‘ಸುದರ್ಶನ ಚಕ್ರ’; ಐಎಡಿಎಫ್​ಎಸ್ ಖರೀದಿಗೆ ಸರ್ಕಾರ ಅನುಮೋದನೆ

ಬೇರೆ ದೇಶಗಳಲ್ಲಿ ಇಲ್ಲವಾ ರಾಮ್​ಜೆಟ್ ಟೆಕ್ನಾಲಜಿ?

ಕ್ಷಿಪಣಿಗಳಿಗೆ ರಾಮ್​ಜೆಟ್ ಎಂಜಿನ್ ಬಳಸಲಾಗುತ್ತದೆ. ಆದರೆ, ಆರ್ಟಿಲರಿ ಶೆಲ್​ಗಳಿಗೆ ಇದನ್ನು ಅಳವಡಿಸುವ ಪ್ರಯತ್ನ ಇತ್ತೀಚಿನ ವರ್ಷಗಳಿಂದ ಆಗುತ್ತಿದೆ. ಅಮೆರಿಕದ ಬೋಯಿಂಗ್ ಮತ್ತು ನಾರ್ವೆಯ ನ್ಯಾಮ್ಮೋ ಕಂಪನಿಗಳು ಇಂಥ ಶೆಲ್​ಗಗಳನ್ನು ಅಭಿವೃದ್ಧಿಪಡಿಸಿವೆ. ಆದರೆ, ಇನ್ನೂ ಕೂಡ ಯಾವುದೇ ಸಶಸ್ತ್ರ ಸೇನಾ ಪಡೆಗಳ ಬಳಕೆಗೆ ಅದನ್ನು ನಿಯೋಜಿಸಲಾಗಿಲ್ಲ. ಆ ಮಟ್ಟಿಗೆ, ಇದನ್ನು ಬಳಸಿದ ಮೊದಲ ಸಶಸ್ತ್ರ ಪಡೆ ಭಾರತೀಯ ಸೇನೆಯದ್ದು ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ತಿರುಪ್ಪರನ್​ಕುಂದ್ರಂ ಬೆಟ್ಟಗಳ ಮೇಲೆ ದರ್ಗಾದ ಬಳಿ ದೀಪ ಬೆಳಗಲು ಹಿಂದೂಗಳಿಗೆ ಅನುಮತಿ, ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗ – Kannada News | Tamil Nadu News Madras High Court Backs Hilltop Lamp Lighting in Deepam Dispute

ಚೆನ್ನೈ, ಜನವರಿ 06: ತಮಿಳುನಾಡಿನ ತಿರುಪ್ಪರನ್​ಕುಂದ್ರಂ ಬೆಟ್ಟಗಳ ಮೇಲೆ ದರ್ಗಾದ ಬಳಿ ದೀಪ ಬೆಳಗಿಸುವ ವಿಚಾರ ಎರಡು ಧರ್ಮಗಳ ನಡುವೆ ವಿವಾದವನ್ನು ಹುಟ್ಟುಹಾಕಿದೆ. ಆದರೆ ಮದ್ರಾಸ್ ಹೈಕೋರ್ಟ್ ಹಿಂದೂಗಳಿಗೆ​ ದೀಪ ಬೆಳಗಲು ಅನುಮತಿ ನೀಡಿದ್ದು ಇದು ಎಡ ಪಂಥೀಯರು ಹಾಗೂ ತಮಿಳುನಾಡು(Tamil Nadu) ಸರ್ಕಾರಕ್ಕೆ ಪೆಟ್ಟು ಕೊಟ್ಟಂತಾಗಿದೆ. ತಮಿಳುನಾಡು ಸರ್ಕಾರ ಮತ್ತು ಜಿಲ್ಲಾಡಳಿತದ ವಾದಗಳನ್ನು ಹೈಕೋರ್ಟ್ ತನ್ನ ತೀರ್ಪಿನಲ್ಲಿ ತಿರಸ್ಕರಿಸಿದೆ. ದೀಪಂ ವಕ್ಫ್ ಮಂಡಳಿ ಮತ್ತು ದರ್ಗಾದ ಆಸ್ತಿ ಎಂಬ ಹೇಳಿಕೆಯನ್ನು ಕೂಡ ನ್ಯಾಯಾಲಯ ತಿರಸ್ಕರಿಸಿದೆ.

ದೇವಾಲಯ ದೇವಸ್ಥಾನದ ದೀಪ ಪ್ರಕರಣವನ್ನು ಆಲಿಸಿದ ನಂತರ, ಮದ್ರಾಸ್ ಹೈಕೋರ್ಟ್‌ನ ವಿಭಾಗೀಯ ಪೀಠವು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ತಮಿಳುನಾಡು ಸರ್ಕಾರವು ದೇವಾಲಯವು ಜೈನ ದೇವಾಲಯ ಎಂದು ವಾದಿಸಿತ್ತು. ಇದಲ್ಲದೆ, ದೀಪಸ್ತಂಭವು ದರ್ಗಾದ ಆಸ್ತಿ ಎಂದು ವಕ್ಫ್ ಮಂಡಳಿ ಹೇಳಿಕೊಂಡಿತ್ತು.
ದೀಪಸ್ತಂಭವು ತಿರುಪ್ಪರನ್​ಕುಂದ್ರಂ ಬೆಟ್ಟದ ದೇವಾಲಯದ ಬಳಿ ಇರುವ ಕಲ್ಲಿನ ಕಂಬದ ಮೇಲೆ ಇದೆ. ಹಿಂದೂಗಳು ತಮ್ಮ ಧಾರ್ಮಿಕ ಆಚರಣೆಯ ಭಾಗವಾಗಿರುವ ದೀಪಗಳನ್ನು ಬೆಳಗಿಸುವ ಹಕ್ಕನ್ನು ಹೊಂದಿದ್ದಾರೆಯೇ ಎಂಬುದು ಪ್ರಶ್ನೆಯಾಗಿತ್ತು.

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಮಂಗಳವಾರ ತೀರ್ಪು ನೀಡಿದೆ. ದೇವಾಲಯದ ದೇವಾಲಯಗಳು ದೀಪಸ್ತಂಭಗಳ ಮೇಲೆ ದೀಪಗಳನ್ನು ಬೆಳಗಿಸಲು ಅವಕಾಶ ನೀಡಬೇಕು ಎಂದು ತೀರ್ಪು ನೀಡಿದೆ . ದೀಪಗಳನ್ನು ಬೆಳಗಿಸುವ ಅಭ್ಯಾಸವು ಪ್ರಾಚೀನ ಹಿಂದೂ ಸಂಪ್ರದಾಯವಾಗಿದೆ ಎಂದು ಹೈಕೋರ್ಟ್ ಹೇಳಿದೆ. ದೂರದಿಂದಲೇ ಭಕ್ತರಿಗೆ ದೀಪಗಳು ಗೋಚರಿಸುವಂತೆ ನೋಡಿಕೊಳ್ಳುವುದು ಇದರ ಉದ್ದೇಶವಾಗಿದೆ.

ಮತ್ತಷ್ಟು ಓದಿ: ತಮಿಳುನಾಡು ಚುನಾವಣೆಗೆ ನಟ ವಿಜಯ್ ಸಿಎಂ ಅಭ್ಯರ್ಥಿ; ಟಿವಿಕೆ ಅಧಿಕೃತ ಘೋಷಣೆ

ಭಕ್ತರ ಕೋರಿಕೆಯನ್ನು ನಿರಾಕರಿಸಲು ದೇವಾಲಯದ ಅಧಿಕಾರಿಗಳಿಗೆ ಯಾವುದೇ ಮಾನ್ಯ ಅಥವಾ ಕಾನೂನು ಕಾರಣವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ನ್ಯಾಯಾಲಯದ ನಿರ್ದೇಶನವನ್ನು ಪಾಲಿಸಲು ದೇವಸ್ಥಾನಕ್ಕೆ ಸೂಚನೆ ನೀಡಿದೆ. ಅಧಿಕಾರಿಗಳು ಮಂಡಿಸಿದ ವಾದಗಳನ್ನು ನ್ಯಾಯಾಲಯವು ತೀವ್ರವಾಗಿ ಆಕ್ಷೇಪಿಸಿತು. ತಮಿಳುನಾಡು ಸರ್ಕಾರ ಮತ್ತು ಜಿಲ್ಲಾಡಳಿತದ ವಾದಗಳನ್ನು ಹಾಸ್ಯಾಸ್ಪದ ಮತ್ತು ನಂಬಲು ಕಷ್ಟ ಎಂದು ನ್ಯಾಯಾಲಯ ಬಣ್ಣಿಸಿತು, ದೇವಾಲಯದ ಆವರಣದಲ್ಲಿ ದೀಪವನ್ನು ಬೆಳಗಿಸುವಂತಹ ಸರಳವಾದ ವಿಚಾರ ಹೇಗೆ ಸಮಾಜದಲ್ಲಿ ಶಾಂತಿಗೆ ಅಪಾಯವನ್ನುಂಟು ಮಾಡುತ್ತದೆ ಎಂದು ಪ್ರಶ್ನಿಸಿದ್ದಾರೆ.

ಸ್ವಲ್ಪ ತಿಂಗಳುಗಳ ಹಿಂದೆ ತಮಿಳುನಾಡಿನ ತಿರುಪರನಕುಂದ್ರಂ ಬೆಟ್ಟದಲ್ಲಿ ದರ್ಗಾದ ಬಳಿ ಇರುವ ಕಲ್ಲಿನ ಕಂಬದ ಮೇಲೆ ಸಾಂಪ್ರದಾಯಿಕ ದೀಪ ಬೆಳಗಲು ಅನುಮತಿ ನೀಡಿದ್ದ ನ್ಯಾಯಾಧೀಶ ಜಿ. ಆರ್ ಸ್ವಾಮಿನಾಥನ್ ವಿರುದ್ಧ ವಿಪಕ್ಷಗಳ ಸಂಸದರು ಕಿಡಿ ಕಾರಿದ್ದರು. ಅಷ್ಟೇ ಅಲ್ಲದೇ ಬೆಟ್ಟದ ಮೇಲಿನ ದರ್ಗಾ ಬಳಿ ಇರುವ ಕಲ್ಲಿನ ಕಂಬದ ಮೇಲೆ ಸಾಂಪ್ರದಾಯಿಕ ದೀಪ ಬೆಳಗಲು ಆದೇಶ ನೀಡಿರುವ ನ್ಯಾಯಮೂರ್ತಿಗಳನ್ನು ಪದಚ್ಯುತಗೊಳಿಸಬೇಕೆಂದು ಆಗ್ರಹಿಸಿ ಸ್ಪೀಕರ್ ಗೆ ದೂರು ನೀಡಿದ್ದರು.

ದೇವಾಲಯ ಮತ್ತು ಹತ್ತಿರದ ದರ್ಗಾ ಹೊಂದಿರುವ ತಿರುಪರಂಕುಂದ್ರಂನಲ್ಲಿರುವ ಬೆಟ್ಟದ ಮೇಲೆ ಸಾಂಪ್ರದಾಯಿಕ ಕಾರ್ತಿಗೈ ದೀಪವನ್ನು ಬೆಳಗಿಸುವ ಬಗ್ಗೆ ನ್ಯಾ.ಜಿಆರ್ ಸ್ವಾಮಿನಾಥನ್ ಅವರು ಆದೇಶ ನೀಡಿದ್ದರು. ನ್ಯಾಯಾಧೀಶರ ಆದೇಶದ ಪ್ರಕಾರ ಡಿಸೆಂಬರ್ 4 ರೊಳಗೆ “ದೀಪಥೂನ್” ಕಂಬದ ಮೇಲೆ ದೀಪವನ್ನು ಬೆಳಗಿಸಬೇಕಿತ್ತು.

ಇಲ್ಲಿನ ತಿರುಪ್ಪರನ್​ಕುಂದ್ರಂ ಬೆಟ್ಟದಲ್ಲಿನ ಕಾಶಿ ವಿಶ್ವನಾಥ ದೇವಾಲಯದ ಸ್ತಂಭದಲ್ಲಿ ಕಾರ್ತಿಕ ದೀಪ ಬೆಳಗಲು ಹೈಕೋರ್ಟ್​ ಅನುಮತಿ ನೀಡಿತ್ತು. ಆದರೆ, ತಮಿಳುನಾಡು ಸರ್ಕಾರದ ಇದಕ್ಕೆ ಅನುಮತಿ ನೀಡದೆ, ಅದೇ ಜಾಗದಲ್ಲಿರುವ ದರ್ಗಾದಲ್ಲಿ ಉರುಸ್​ ಆಚರಣೆಗೆ ಅನುಮತಿ ನೀಡಿರುವುದು ಕೋಲಾಹಲಕ್ಕೆ ಕಾರಣವಾಗಿತ್ತು.

ಬೆಟ್ಟದಲ್ಲಿರುವ ಹಜರತ್ ಸುಲ್ತಾನ್ ಸಿಕಂದರ್ ಬಾದುಶಾ ಔಲಿಯಾ ದರ್ಗಾದಲ್ಲಿ ಇಂದಿನಿಂದ ಜನವರಿ 6ರಂದು ಸಂತನಕೂಡು ಉತ್ಸವ ಜರುಗಲಿದೆ. ಇದರ ಭಾಗವಾಗಿ ಡಿಸೆಂಬರ್ 21ರಂದು ರಾತ್ರಿ ದರ್ಗಾದಲ್ಲಿ ಧ್ವಜಾರೋಹಣ ನಡೆಸಲು ತಿರುಮಂಗಲಂ ಕಂದಾಯ ವಿಭಾಗೀಯ ಅಧಿಕಾರಿ ಅನುಮತಿ ನೀಡಿದ್ದರು. ಇದರ ವಿರುದ್ಧ ಕೆಲ ಹಿಂದೂಗಳು ಮತ್ತು ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.

ದರ್ಗಾದ ಪಕ್ಕದಲ್ಲಿರುವ ಸ್ತಂಭದಲ್ಲಿ ದೀಪ ಬೆಳಗಲು ಹಿಂದುಗಳಿಗೂ ಅವಕಾಶ ನೀಡಬೇಕು. ಈ ಕುರಿತು ಕೋರ್ಟ್​ ಆದೇಶವಿದೆ ಎಂದು ಬಿಜೆಪಿ ಮತ್ತು ಹಿಂದೂಗಳು ಒತ್ತಾಯಿಸಿದ್ದಾರೆ. ಅಲ್ಲದೆ, ಅಧಿಕಾರಿಯ ನಿರ್ಧಾರವನ್ನು ವಿರೋಧಿಸಿ ‘ರಸ್ತೆ ರೋಕೋ’ ಆಂದೋಲನ ನಡೆಸಿದ್ದಾರೆ. ಹಿಂದುಗಳಿಗೆ ಅನುಮತಿ ನೀಡದೆ ಇನ್ನೊಂದು ಸಮುದಾಯಕ್ಕೆ ಹೇಗೆ ಅನುಮತಿ ನೀಡಲಾಯಿತು ಎಂದು ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 12:11 pm, Tue, 6 January 26

Source link

ಕಳ್ಳರ ಕೈ ಹಿಡಿಯಲಿಲ್ಲ ಮಂಜುನಾಥ: ಉದ್ಯಮಿ ಮನೆಯಲ್ಲಿ ಕದ್ದು ಸಿಕ್ಕಿಬಿದ್ದ ಗ್ಯಾಂಗ್​ – Kannada News | Vidyaranyapura Businessman’s House Robbed; Police Arrest Four, Including House Workers

ಬೆಂಗಳೂರು, ಜನವರಿ 06: ಉದ್ಯಮಿಯೋರ್ವರ ಮನೆಯಲ್ಲಿ ಬಂಗಾರ, ಬೆಳ್ಳಿ ಮತ್ತು ಹಣ ಕಳ್ಳತನ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಗೋಪಾಲ ಸಿಂಧೆ ಎಂಬವರಿಗೆ ಸೇರಿದ ಲಕ್ಷ್ಮೀಪುರ ಕ್ರಾಸ್ ಬಳಿಯ ಡೊನಾಟಾ ಕೌಂಟಿ ಎಂಬ ವಿಲ್ಲಾದಲ್ಲಿ ಕಳೆದ ಡಿಸೆಂಬರ್ 24ರಂದು ಗ್ಯಾಂ ಕೈಚಳಕ ತೋರಿಸಿತ್ತು. ಪ್ರಕರಣದ ತನಿಖೆ ವೇಳೆ ಮನೆಗೆಲಸದವರೇ ಆರೋಪಿಗಳು ಎಂಬುದು ಗೊತ್ತಾಗಿದ್ದು, ಗ್ಯಾಂ ಪ್ಲ್ಯಾನ್​​ ಕಂಡು ಖಾಕಿಯೇ ಗಾಬರಿಯಾಗಿದೆ.

ಮಂಜುನಾಥ, ಚಂದನ್, ನರೇಂದ್ರ ಹಾಗೂ ಮಂಜಿತ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ಬರೋಬ್ಬರಿ 550 ಗ್ರಾಂ ಚಿನ್ನಾಭರಣ, 3 ಕೆ.ಜಿ. ಬೆಳ್ಳಿ ಮತ್ತು 3 ಲಕ್ಷ ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪೈಕಿ ಮಂಜಿತ್ ಉದ್ಯಮಿ ಮನೆಯ ಕೆಲಸದಾಳು ಆಗಿದ್ರೆ ನರೇಂದ್ರ ಡ್ರೈವರ್​ ಆಗಿದ್ದ ಎನ್ನಲಾಗಿದೆ. ಮಂಜಿತ್ ಮೂಲತಃ ಬಿಹಾರದವನಾಗಿದ್ದು ನರೇಂದ್ರ ದೊಡ್ಡಬಳ್ಳಾಪುರದವನು. ಇಬ್ಬರು ಸೇರಿ ಮನೆಗಳ್ಳತನಕ್ಕೆ ಪ್ಲ್ಯಾನ್​ ಮಾಡಿದ್ದರು. ಎಷ್ಟು ದಿನ ಹೀಗೆ ಕೆಲಸ ಮಾಡೋದು ಎಂದು ಯೋಚಿಸಿದ್ದ ಇವರು, ಮಾಲೀಕನ ಮನೆ ಕಳ್ಳತನ ಮಾಡಿ ಲೈಫ್ ಸೆಟಲ್ ಮಾಡಿಕೊಳ್ಳುವ ಉದ್ದೇಶ ಹೊಂದಿದ್ದರು ಎಂಬುದು ತನಿಖೆ ವೇಳೆ ಬಯಲಾಗಿದೆ.

ಇದನ್ನೂ ಓದಿ: ಕೈ ಮುರಿದು, ಕಣ್ಣಿಗೆ ಚಾಕು ಇರಿದ ಪತ್ನಿ; ಪೊಲೀಸ್​​ ಠಾಣೆಗೆ ಓಡೋಡಿ ಬಂದ ರೌಡಿಶೀಟರ್​​

ತಮ್ಮ ಪ್ಲ್ಯಾನ್​​ ಪ್ರಕಾರ ನರೇಂದ್ರ ತನ್ನ ಸ್ನೇಹಿತ ಮಂಜುನಾಥನ ಟೀಂಗೆ ಸೇರಿಸಿಕೊಂಡಿದ್ದ. ಈತ ಅದಾಗಲೇ ಸಣ್ಣಪುಟ್ಟ ಕಳ್ಳತನ ಮಾಡಿಕೊಂಡಿದ್ದ ಕಾರಣ ತಮಗೆ ನೆರವಾಗ್ತಾನೆಂದು ಭಾವಿಸಿದ್ದ. ಇತ್ತ ಮಂಜಿತ್​​ ಕೂಡ ತನ್ನ ಬಿಹಾರದ ಸ್ನೇಹಿತ ಚಂದನ್​​ನ ಜೊತೆ ಸೇರಿಸಿಕೊಂಡಿದ್ದ. ಸುಮಾರು 3 ತಿಂಗಳು ಕಳ್ಳತನಕ್ಕಾಗಿ ಟೀಂ ಸ್ಕೆಚ್​​ ಹಾಕಿತ್ತು. ಈ ನಡುವೆ ಉದ್ಯಮಿ ಮನೆಯವರು ಕ್ರಿಸ್​​ಮಸ್ ರಜೆ ಹಿನ್ನೆಲೆ ಪ್ರವಾಸಕ್ಕೆ ಹೋದಾಗ ಗ್ಯಾಂಗ್​​ ಮನೆಯಲ್ಲಿ ಕಳ್ಳತನ ನಡೆಸಿದೆ. ಆರೋಪಿ ಮಂಜುನಾಥ ಧರ್ಮಸ್ಥಳದ  ಭಕ್ತನಾಗಿದ್ದು, ಕಳ್ಳತನದ ಬಳಿಕ ಹರಕೆ ತೀರಿಸಲು ಚಂದನ್​​ ಮತ್ತು ಮಂಜುನಾಥ್​ ಧರ್ಮಸ್ಥಳಕ್ಕೆ ತೆರಳಿದ್ದರು. ನಂತರ ಸುಮಾರು ಮೂರು ದಿನಗಳ ಕಾಲ ಕದ್ದ ದುಡ್ಡಲ್ಲಿ ಟ್ರಿಪ್ ಮಾಡಿದ್ದರು ಎನ್ನಲಾಗಿದೆ.

ಇತ್ತ ಪ್ರವಾಸ ಮುಗಿಸಿ ಉದ್ಯಮಿ ಮನೆಗೆ ಬಂದಾಗ ಕಳ್ಳತನ ನಡೆದಿರೋದು ಗೊತ್ತಾಗಿದೆ. ಈ ಹಿನ್ನೆಲೆ ಹೊಸ ವರ್ಷದ ದಿನವೇ ಅವರು ದೂರು ಸಲ್ಲಿಸಿದ್ದರು. ಬಟ್ಟೆ ಒಗೆಯುವಾಗ ಜೇಬಿನಲ್ಲಿ ಹಣ ಸಿಕ್ಕರೂ ಮಂಜಿತ್ ವಾಪಸ್ಸು ಕೊಡುತ್ತಿದ್ದ ಕಾರಣ, ಮನೆ ಕೆಲಸದವರ ಮೇಲೆ ಇವರಿಗೆ ಯಾವುದೇ ಅನುಮಾನ ಬಂದಿರಲಿಲ್ಲ. ಆದರೆ ಸಿಸಿ ಕ್ಯಾಮರಾ ದೃಶ್ಯಾವಳಿಗಳ ಆಧಾರದಲ್ಲಿ ಪೊಲೀಸರು ತನಿಖೆ ನಡೆಸಿದಾಗ ಮನೆ ಕೆಲಸದವರ ಕಳ್ಳಾಟ ಬಯಲಾಗಿದೆ. ಪ್ರಾಮಾಣಿಕರು ಎಂದು ನಂಬಿದ್ದವರ ಈ ಕೃತ್ಯ ಕಂಡು ಉದ್ಯಮಿ ಕುಟುಂಬ ಹೌಹಾರಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

6,6,6,4,6,6… ಬೈರ್​ಸ್ಟೋವ್ ಬಿರುಗಾಳಿ ಬ್ಯಾಟಿಂಗ್

ಸೌತ್ ಆಫ್ರಿಕಾ ಟಿ20 ಟೂರ್ನಿಯಲ್ಲಿ ಜಾನಿ ಬೈರ್​ಸ್ಟೋವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದು ಕೂಡ ಒಂದೇ ಓವರ್​ನಲ್ಲಿ 34 ರನ್​ ಚಚ್ಚುವ ಮೂಲಕ. ಸೆಂಚುರಿಯನ್​ನ ಸೂಪರ್​ಸ್ಪೋರ್ಟ್ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ಹಾಗೂ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತು.

177 ರನ್​ಗಳ ಗುರಿ ಪಡೆದ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ಪರ ಜಾನಿ ಬೈರ್​ಸ್ಟೋವ್ ಹಾಗೂ ಕ್ವಿಂಟನ್ ಡಿಕಾಕ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಈ ಜೋಡಿಯು ಕ್ಯಾಪಿಟಲ್ಸ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ 10 ಓವರ್​ಗಳ ಮುಕ್ತಾಯದ ವೇಳೆಗೆ ತಂಡದ ಸ್ಕೋರ್ 105 ಕ್ಕೆ ಬಂದು ನಿಂತಿತು.

ಇನ್ನು ಕೇಶವ್ ಮಹಾರಾಜ್ ಎಸೆದ 11ನೇ ಓವರ್​ನಲ್ಲಿ ಜಾನಿ ಬೈರ್​ಸ್ಟೋವ್ 5 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 34 ರನ್​ ಚಚ್ಚಿದರು. ಈ ಮೂಲಕ ಜಾನಿ ಬೈರ್​ಸ್ಟೋವ್ 45 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 85 ರನ್ ಬಾರಿಸಿದರು.

ಮತ್ತೊಂದೆಡೆ ಕ್ವಿಂಟನ್ ಡಿಕಾಕ್ 41 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 79 ರನ್ ಚಚ್ಚಿದರು. ಈ ಮೂಲಕ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು 14.2 ಓವರ್​ಗಳಲ್ಲಿ 177 ರನ್ ಬಾರಿಸಿ 10 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ.

 

Source link

ದೇವರಾಜ ಅರಸು ದಾಖಲೆ ಬ್ರೇಕ್​​: ಹೊಸ ಇತಿಹಾಸ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ – Kannada News | Siddaramaiah Breaks Devaraj Urs Record as Karnatakas Longest Serving Chief Minister

ಬೆಂಗಳೂರು, ಜನವರಿ 06: ಸಿಎಂ ಆಗಿ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಮುರಿದಿದ್ದು, ಮುಖ್ಯಮಂತ್ರಿಯಾಗಿ ಹೆಚ್ಚು ಅವಧಿ ಸೇವೆ ಸಲ್ಲಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. 7 ವರ್ಷ 7 ತಿಂಗಳು 20 ದಿನಗಳ ಕಾಲ ದೇವರಾಜ ಅರಸು ಸಿಎಂ ಆಗಿದ್ದರು. ಇದೀಗ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ  ಬ್ರೇಕ್​​ ಮಾಡಿದ್ದಾರೆ. 2013ರಲ್ಲಿ ಮೊದಲ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದ ಸಿದ್ದರಾಮಯ್ಯ, 2013ರ ಮೇ 13ರಿಂದ 2018ರ ಮೇ 17ರವರೆಗೆ ಸೇವೆ ಸಲ್ಲಿಸಿದ್ದರು. ಆ ಬಳಿಕ 2023ರ ಮೇ 20ರಿಂದ 2ನೇ ಅವಧಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಅವಧಿಯಲ್ಲೂ ಈಗಾಗಲೇ 963 ದಿನ ಪೂರೈಸಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಗಳ ಪಟ್ಟಿಗೆ ಸೇರಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version