Headlines

ಬದಲಾಗುತ್ತಿರುವ ಹವಾಮಾನದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ಇಲ್ಲಿದೆ ಆಯುರ್ವೇದ ತಜ್ಞರು ನೀಡಿದ ಸಲಹೆ – Kannada News | Ayurvedic Tips to Stay Healthy During Seasonal Change

ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ಅಕಸ್ಮಿಕ ಬದಲಾವಣೆಗಳು ಕಾಣಿಸುತ್ತಿವೆ. ಹಗಲು ಸಮಯದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದ್ದು, ಸಂಜೆ ವೇಳೆಗೆ ಸ್ವಲ್ಪ ತಂಪು ಅನುಭವವಾಗುತ್ತಿದೆ. ಕೆಲವೊಮ್ಮೆ ಏಕಾಏಕಿ ಮಳೆ, ಮತ್ತೆ ತೀವ್ರ ಬಿಸಿಲು ಈ ರೀತಿಯ ಬದಲಾವಣೆಗಳು ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಆದರೆ ಹವಾಮಾನ ಬದಲಾವಣೆ ಈ ರೀತಿ ಬದಲಾಗುತ್ತಿರುವಾಗ ನಾವು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಕೆಲವು ಸರಳ ಸಲಹೆಗಳನ್ನು ಅನುಸರಿಸುವುದು ಬಹಳ ಮುಖ್ಯವಾಗುತ್ತದೆ. ಇಲ್ಲವಾದಲ್ಲಿ ಪದೇ ಪದೇ ಅನಾರೋಗ್ಯಕ್ಕೆ ಒಳಗಾಗಬೇಕಾಗಬಹುದು. ಹಾಗಾದರೆ…

Read More

ಲೈಂಗಿಕ ಕಿರುಕುಳ ಆರೋಪಕ್ಕೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಸ್ಪಷ್ಟನೆ: ಮತ್ತೊಂದೆಡೆ ಸುಮೋಟೋ ಕೇಸ್​​ ದಾಖಲಿಸಿದ ಮಹಿಳಾ ಆಯೋಗ

ಮಂಗಳೂರು, ಮಾರ್ಚ್​​ 17:  ತಮ್ಮ ವಿರುದ್ಧದ ಲೈಂಗಿಕ ಕಿರುಕುಳ, ಹಲ್ಲೆ ಹಾಗೂ ಹಣ ಕೇಳಿದ ಆರೋಪಗಳನ್ನು ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜೆ. ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಟಿವಿ9 ಜೊತೆ ಮಾತನಾಡಿರುವ ಅವರು, ಈ ಎಲ್ಲಾ ಆರೋಪಗಳು ಸುಳ್ಳು. ಆಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಂದು ಅವರ ಪತಿ ಹೇಳಿದ್ರು. ಹೀಗಾಗಿ ಆಕೆಯನ್ನು ರಕ್ಷಿಸಲು ನಾನು ಕಾಂಪೌಂಡ್ ಹಾರಿದ್ದು ನಿಜ ಎಂದಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿ ಸಂದೇಶ್ ಪಿ.ಜಿ. ವಿರುದ್ಧ ತನಿಖೆಗೆ ಮಂಗಳೂರು ಪೊಲೀಸ್​​ ಕಮಿಷನರ್​​ ಸುಧೀರ್​​ ರೆಡ್ಡಿ ಸೂಚನೆ ನೀಡಿದ್ದಾರೆ….

Read More

ರಂಭಾಪುರಿ ಪೀಠಕ್ಕೆ ಭೇಟಿ ವೇಳೆ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ: ಡಿಕೆಶಿ ಮಾರ್ಮಿಕ ಮಾತು – Kannada News | Next CM DK Shivakumar Slogans Echo at Rambhapuri Peetha; Deputy CM Reacts, Says Work is Ours, Result is God’s

ಚಿಕ್ಕಮಗಳೂರು, ಮಾರ್ಚ್ 1: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಭಾನುವಾರ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ (Rambhapuri Peetha) ಭೇಟಿ ನೀಡಿ ಜಗದ್ಗುರು ರೇಣುಕಾಚಾರ್ಯ, ವೀರಭದ್ರೇಶ್ವರನ ದರ್ಶನ ಪಡೆದರು. ಇದೇ ವೇಳೆ, ಕರ್ನಾಟಕ ರಾಜಕೀಯ ಹಾಗೂ ಇರಾನ್, ಇಸ್ರೇಲ್ ಸಂಘರ್ಷದ ಬಗ್ಗೆಯೂ ಹಲವು ಮಹತ್ವದ ವಿಚಾರಗಳನ್ನು ಉಲ್ಲೇಖಿಸಿದರು. ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿರುವ ಸಂದರ್ಭದಲ್ಲೇ, ರಂಭಾಪುರಿ ಪೀಠದ ಹೆಲಿಪ್ಯಾಡ್‌ನಲ್ಲಿ ಡಿಕೆ ಶಿವಕುಮಾರ್ ಆಗಮಿಸುತ್ತಿದ್ದಂತೆಯೇ ಕೆಲ ಬೆಂಬಲಿಗರು ‘‘ಡಿ.ಕೆ. ಶಿವಕುಮಾರ್ ಮುಂದಿನ…

Read More

ಅಬಕಾರಿ ಹಗರಣದ ಆರೋಪದ ನಡುವೆಯು ಆರ್.ಬಿ. ತಿಮ್ಮಾಪುರಗೆ ಸಿಎಂ ಭಾಗ್ಯ?: ‘ಕೊರವಂಜಿ’ ಭವಿಷ್ಯಕ್ಕೆ ಸಚಿವ ಫುಲ್​​​ ಖುಷ್ – Kannada News | Viral Video: Student Predicts CM Post for Thimmapur, A Boost Amid Excise Probe?

 ಬಾಗಲಕೋಟೆ , ಫೆ.7: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಚರ್ಚೆಯ ನಡುವೆಯೂ ಒಂದು ತಮಾಷೆಯ ಮತ್ತು ಕುತೂಹಲದ ಸುದ್ದಿಯೊಂದು ಸೋಶಿಯಲ್​​​​​ ಮೀಡಿಯಾದಲ್ಲಿ ವೈರಲ್​ ಆಗಿದೆ. ಒಂದೆಡೆ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಆರ್.ಬಿ. ತಿಮ್ಮಾಪುರ (R.B. Thimmapur) ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದರೆ, ಇನ್ನೊಂದೆಡೆ ಈ ‘ಕೊರವಂಜಿ’ ವಿದ್ಯಾರ್ಥಿನಿಯ ಭವಿಷ್ಯವಾಣಿ ಸಚಿವರಿಗೆ ಹೊಸ ಹುರುಪು ನೀಡಿದಂತಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಶಿರೋಳ ಗ್ರಾಮದ ಖಾಸಗಿ ಪ್ರೌಢಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ…

Read More

Gautam Gambhir: ನಾನೂ ಮನುಷ್ಯ, ಕೆಲ ತಪ್ಪುಗಳನ್ನು ಮಾಡಿದ್ದೇನೆ..!

ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಹಾಗೂ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿಯಿಲ್ಲವಾ? ಈ ಒಂದು ಪ್ರಶ್ನೆ ಮತ್ತೆ ಉದ್ಭವಿಸಲು ಮುಖ್ಯ ಕಾರಣ ಇತ್ತೀಚೆಗೆ ಗಂಭೀರ್ ನೀಡಿದ ಹೇಳಿಕೆ.  ಕೋಲ್ಕತ್ತಾದಲ್ಲಿ ನಡೆದ ‘ರೇವ್‌ಸ್ಪೋರ್ಟ್ಜ್ ಟ್ರೇಲ್‌ಬ್ಲೇಝರ್ಸ್ ಕಾನ್ಕ್ಲೇವ್ 4.0’ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಗಂಭೀರ್​ಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಡುವಣ ಸಂಬಂಧದ ಬಗ್ಗೆಗಿನ ಪ್ರಶ್ನೆ ಎದುರಾಗಿದೆ. ಈ ಪ್ರಶ್ನೆಗೆ ಉತ್ತರಿಸಿದರ ಗಂಭೀರ್,  ಆಟಗಾರರಂತೆ ತರಬೇತುದಾರರೂ ಕೂಡ ಮನುಷ್ಯರು. ಕಳೆದ…

Read More

Horoscope Today 31 December: ಇಂದು ಈ ರಾಶಿಯವರಿಗೆ ನಂಬಿದವರಿಂದ ಮೋಸ ಹೋಗುವ ಸಾಧ್ಯತೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 31-12-2025 ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಇಂದು 2025ರ ಕೊನೆಯ ದಿನವಾಗಿದ್ದು, ಆತ್ಮಾವಲೋಕನ ಮಾಡಿಕೊಳ್ಳಲು ಮತ್ತು 2026 ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಿದ್ಧರಾಗಲು ಕರೆ ನೀಡಿದ್ದಾರೆ. ಕೇವಲ ಹಣ ಸಂಪಾದನೆಯ ಗುರಿಯ ಬದಲು, ಉತ್ತಮ ಆಲೋಚನೆಗಳು ಮತ್ತು ದಾನ-ಧರ್ಮಗಳ ಮಹತ್ವವನ್ನು ಒತ್ತಿ ಹೇಳಿದ್ದಾರೆ. ಇಂದು ಮುಕ್ಕೋಟಿ ದ್ವಾದಶಿ ಇರುವುದರಿಂದ ಉಪವಾಸ ತ್ಯಜಿಸಿ, ದಾನ-ಧರ್ಮಗಳನ್ನು ಮಾಡಲು ಶುಭ ದಿನವಾಗಿದೆ. ರವಿ ಧನು ರಾಶಿಯಲ್ಲಿ ಮತ್ತು…

Read More

ಸಿಎಸ್​​ಕೆಗೆ ದುಸ್ವಪ್ನವಾದ ಜಡೇಜಾ; ವಿಕೆಟ್ ತೆಗೆದು ಗನ್ ಶಾಟ್ ಸೆಲೆಬ್ರೇಷನ್

ರವೀಂದ್ರ ಜಡೇಜಾ ಅವರಿಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವೆ ಅವಿನಾಭಾವ ಸಂಬಂಧ ಇತ್ತು. ಜಡೇಜಾ ಎಂದರೆ ನೆನಪಾಗುತ್ತಿದ್ದುದು ಸಿಎಸ್​​ಕೆ. ಆದರೆ, ಸಿಎಸ್​​ಕೆ ತಂಡ ಸಂಜು ಸ್ಯಾಮ್​​ಸನ್ ಅವರನ್ನು ಖರೀದಿ ಮಾಡಲು ಜಡೇಜಾ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಬಿಟ್ಟುಕೊಟ್ಟಿತು. ಈ ವಿಷಯ ಜಡೇಜಾಗೆ ನೋವು ತರಿಸಿದ್ದಿರಬಹುದು. ಹೀಗಾಗಿ, ಸಿಎಸ್​​ಕೆ ವಿರುದ್ಧ ಮಾರಕ ಬೌಲಿಂಗ್ ದಾಳಿ ಮಾಡಿ, ಎರಡು ವಿಕೆಟ್ ಪಡೆದು ಅವರು ಭರ್ಜರಿ ಸೆಲೆಬ್ರೇಷನ್ ಮಾಡಿದರು. ಮೂರು ಓವರ್ ಎಸೆದ ಜಡೇಜಾ, ಎರಡು ವಿಕೆಟ್ ಕಿತ್ತು…

Read More

ಮ್ಯಾಚ್ ಫಿಕ್ಸಿಂಗ್: ಬಾಂಗ್ಲಾದೇಶದ ತಮೀಮ್ ರೆಹಮಾನ್​ಗೆ ಶ್ರೀಲಂಕಾದಲ್ಲಿ ಜೈಲು, ಭಾರಿ ದಂಡ – Kannada News | LPL Match Fixing Scandal: Tamim Rahman Jailed 4 Years, Banned 5. Sri Lanka’s tough stance

ಶ್ರೀಲಂಕಾದ ಟಿ20 ಲೀಗ್‌ನಲ್ಲಿ ( Sri Lanka cricket) ನಡೆದ ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಶ್ರೀಲಂಕಾ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಕೊಲಂಬೊ ಹೈಕೋರ್ಟ್ ಬಾಂಗ್ಲಾದೇಶದ ತಮೀಮ್ ರೆಹಮಾನ್ (Tamim Rahman) ಅವರನ್ನು ತಪ್ಪಿತಸ್ಥ ಎಂದು ಘೋಷಿಸಿದ್ದು, ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ ಅವರನ್ನು ಐದು ವರ್ಷಗಳ ಕಾಲ ಅಮಾನತುಗೊಳಿಸಲಾಗಿದ್ದು, 24 ಮಿಲಿಯನ್ ಶ್ರೀಲಂಕಾ ರೂಪಾಯಿ (ಸುಮಾರು 80 ಸಾವಿರ ಅಮೆರಿಕನ್ ಡಾಲರ್) ದಂಡ ವಿಧಿಸಲಾಗಿದೆ. ತಮೀಮ್ ರೆಹಮಾನ್ ಒಂದೆಡೆ ಬಾಂಗ್ಲಾದೇಶ ಮೂಲದವರಾಗಿದ್ದರೆ, ಮತ್ತೊಂದೆಡೆ…

Read More

ಒಂದೇ ಒಂದು ಪಂದ್ಯ ಗೆಲ್ಲದೆ ಸೂಪರ್​ ಸಿಕ್ಸ್​ಗೇರಿದ ನ್ಯೂಝಿಲೆಂಡ್ – Kannada News | U19 World Cup 2026: New Zealand enter in Super 6 without any win

ಅಂಡರ್-19 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಒಂದೇ ಒಂದು ಪಂದ್ಯ ಗೆಲ್ಲದೇ ನ್ಯೂಝಿಲೆಂಡ್ ತಂಡವು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಕೇಳಲು ಅಚ್ಚರಿ ಎನಿಸಿದರೂ ಇಂತಹದೊಂದು ಫಲಿತಾಂಶಕ್ಕೆ ಕಿರಿಯರ ವಿಶ್ವಕಪ್ ಪಾಯಿಂಟ್ಸ್ ಟೇಬಲ್​ ಸಾಕ್ಷಿಯಾಗಿದೆ. ಈ ಟೂರ್ನಿಯಲ್ಲಿ ಗ್ರೂಪ್-ಬಿ ನಲ್ಲಿ ಕಣಕ್ಕಿಳಿದಿದ್ದ ನ್ಯೂಝಿಲೆಂಡ್ ತಂಡದ ಮೊದಲೆರಡು ಪಂದ್ಯಗಳು ಮಳೆಯ ಕಾರಣ ರದ್ದಾಗಿದ್ದವು. ಇನ್ನು ಮೂರನೇ ಪಂದ್ಯದಲ್ಲಿ ಭಾರತದ ವಿರುದ್ಧ 7 ವಿಕೆಟ್​ಗಳಿಂದ ಸೋಲನುಭವಿಸಿದ್ದರು. ಅಂದರೆ ಮೂರು ಪಂದ್ಯಗಳಿಂದ ನ್ಯೂಝಿಲೆಂಡ್​ಗೆ ಸಿಕ್ಕಿರುವುದು ಕೇವಲ 2 ಅಂಕಗಳು ಮಾತ್ರ. ಅದು ಕೂಡ ರದ್ದಾದ…

Read More

ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​ : ಮೊದಲ ಹಂತದಲ್ಲಿ 80 ಅರ್ಜಿಗಳು ತಿರಸ್ಕೃತ – Kannada News | Kogilu Layout Demolition: 80 Rehabilitation Applications Rejected

ಬೆಂಗಳೂರು, ಜನವರಿ 25: ಕೋಗಿಲು ಲೇಔಟ್ ಒತ್ತುವರಿದಾರರಿಗೆ ಆಘಾತಕಾರಿ ಸುದ್ದಿ ಎದುರಾಗಿದೆ. ಮನೆ ಹಂಚಿಕೆಗಾಗಿ ಸಲ್ಲಿಕೆಯಾಗಿದ್ದ 167 ಅರ್ಜಿಗಳ ಪೈಕಿ ಮೊದಲ ಹಂತದಲ್ಲಿ 80 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಮನೆ ಒದಗಿಸುವ ಭರವಸೆ ನೀಡಲಾಗಿದ್ದ 26 ಜನರ ಅರ್ಜಿಗಳೂ ಕೂಡ ರಿಜೆಕ್ಟ್​​ ಆಗಿರುವುದು ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಉಳಿದ 87 ಅರ್ಜಿಗಳ ಪರಿಶೀಲನಾ ಕಾರ್ಯ ಪ್ರಸ್ತುತ ನಡೆಯುತ್ತಿದೆ. ಡಿಸೆಂಬರ್ 20ರಂದು ಕೋಗಿಲು ಲೇಔಟ್‍ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಲಾಗಿತ್ತು. ವಿಚಾರ ದೇಶಾದ್ಯಂತ ಚರ್ಚೆಯಾದ ಬಳಿಕ ಕೆಲವೇ ದಿನಗಳಲ್ಲಿ ಮನೆ ಹಂಚಿಕೆ…

Read More