Headlines

Bengaluru Air Quality: ಉಳಿದ ಮೆಟ್ರೋ ಸಿಟಿಗಳಿಗಿಂತ ಒಳಿತು ಬೆಂಗಳೂರಿನ ಏರ್ ಕ್ವಾಲಿಟಿ!

ಬೆಂಗಳೂರು, ಏಪ್ರಿಲ್ 12: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹೈದರಾಬಾದ್, ಮುಂಬೈ ಮತ್ತು ಕೋಲ್ಕತ್ತಾ ಸೇರಿದಂತೆ ಉಳಿದ ಮೆಟ್ರೋ ಸಿಟಿಗಳಲ್ಲಿ AQI…

Read More

Sanju Samson: ನೀವು ನನ್ನ ‘ಅದೃಷ್ಟ’, ಪ್ರತಿ ಪಂದ್ಯಕ್ಕೂ ನೀವೇ ಬನ್ನಿ!

IPL 2026: ಐಪಿಎಲ್ 2026ರ ಕಣದಲ್ಲಿ ರನ್ ಬರ ಎದುರಿಸುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಸ್ಫೋಟಕ ಬ್ಯಾಟರ್ ಸಂಜು ಸ್ಯಾಮ್ಸನ್, ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ್ದಾರೆ. ಈ ಅಮೋಘ ಶತಕದ ಬೆನ್ನಲ್ಲೇ ಸಂಜು ಸ್ಯಾಮ್ಸನ್ ಮಾಜಿ ಕೋಚ್ ರವಿಶಾಸ್ತ್ರಿ ಅವರಲ್ಲಿ ವಿಶೇಷ ಮನವಿಯನ್ನು ಸಹ ಮಾಡಿದ್ದಾರೆ. ಏಪ್ರಿಲ್ 11ರಂದು ಚೆಪಾಕ್​ನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಪಂದ್ಯದಲ್ಲಿ ಸಂಜು ಸ್ಯಾಮ್ಸನ್​ ಕೇವಲ 56 ಎಸೆತಗಳಲ್ಲಿ ಅಜೇಯ 115 ರನ್ ಸಿಡಿಸಿದ್ದರು.  ಈ…

Read More

Video: ಮಹಾರಾಷ್ಟ್ರ ಪೊಲೀಸ್ ಪಡೆಗೆ ಸೇರ್ಪಡೆಯಾದ ಖುಷಿ, ತಂದೆಯನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ ಮಗಳು

ಬೀಡ್, ಏಪ್ರಿಲ್ 12: ಯಶಸ್ಸು ಯಾವಾಗಲೂ ಸಿಹಿಯಾಗಿರುತ್ತದೆ, ಆದರೆ ಈ ಯಶಸ್ಸನ್ನು ನಾವು ಪ್ರೀತಿಸುವವರೊಂದಿಗೆ ಹಂಚಿಕೊಂಡಾಗ ಅದು ಮರೆಯಲಾಗದ ನೆನಪಾಗುತ್ತದೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಯುವತಿ ಸುಮೇಧಾ ಶೇಖ್ ಅವರು ಮಹಾರಾಷ್ಟ್ರ ಪೊಲೀಸ್ ಪಡೆಗೆ ಆಯ್ಕೆಯಾದ ನಂತರ ಆಚರಿಸಿದ ರೀತಿ ಈಗ ಇಡೀ ದೇಶದ ಗಮನ ಸೆಳೆದಿದೆ. ಅವರು ತನ್ನ ಯಶಸ್ಸಿಗೆ ಕಾರಣರಾದ ತಂದೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಕುಣಿಯುವ ಮೂಲಕ ಸಂಭ್ರಮಪಟ್ಟಿದ್ದಾರೆ. ಇದು ಕೇವಲ ದೈಹಿಕ ಶಕ್ತಿಯ ಪ್ರದರ್ಶನವಲ್ಲ, ಬದಲಿಗೆ ತನ್ನನ್ನು ಬೆಳೆಸಲು ತಂದೆ ಅನುಭವಿಸಿದ…

Read More

ಡಾ. ರಾಜ್​ಕುಮಾರ್ ಪುಣ್ಯಸ್ಮರಣೆ: ಅಣ್ಣಾವ್ರು ನಿಧನರಾಗಿ ಕಳೆಯಿತು 20 ವರ್ಷ

ಏಪ್ರಿಲ್ 12 ಎಂದರೆ ಡಾ. ರಾಜ್​ಕುಮಾರ್ (Dr. Rajkumar) ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಕರಾಳ ದಿನ. ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವವಾಗಿದ್ದ ಅಣ್ಣಾವ್ರು ಕೊನೆಯುಸಿರು ಎಳೆದ ದಿನವಿದು. ಡಾ. ರಾಜ್​ಕುಮಾರ್ ಅವರು ನಿಧನರಾಗಿದ್ದು 2006ರ ಏಪ್ರಿಲ್ 12ರಂದು. ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲಿದೇ ಈಗ 20 ವರ್ಷಗಳು ಕಳೆದಿವೆ. ಎಷ್ಟೇ ವರ್ಷ ಉರುಳಿದರೂ ಮೇರುನಟನ ಮೇಲಿನ ಅಭಿಮಾನ ಕಡಿಮೆ ಆಗಿಲ್ಲ. ಹಳೇ ಕಾಲದ ಮಂದಿ ಮಾತ್ರವಲ್ಲದೇ ಈಗ ಕಾಲದ ಜೆನ್-ಜಿ ಪ್ರೇಕ್ಷಕರು ಕೂಡ ಡಾ. ರಾಜ್…

Read More

SSLC ತೃತೀಯ ಭಾಷೆಗೆ ಗ್ರೇಡ್​​ ನಿರ್ಧಾರ ಹೇಗೆ?: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಕರಡು ಅಧಿಸೂಚನೆ ಪ್ರಕಟ

ಬೆಂಗಳೂರು, ಏಪ್ರಿಲ್​​ 12: ಎಸ್​​ಎಸ್​​ಎಲ್​​ಸಿ ಪರೀಕ್ಷೆಯ ತೃತೀಯ ಭಾಷೆಗೆ ಅಂಕಗಳನ್ನು ನೀಡುವ ಬದಲು ಗ್ರೇಡ್​​ ನೀಡುವ ನಿರ್ಧಾರ ಸಂಬಂಧ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಇದೇ ವಿಚಾರ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆ ಮೌಲ್ಯಮಾಪನ ಕುರಿತ ಕರಡು ಅಧಿಸೂಚನೆಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡಲಾಗುತ್ತದೆ ಹಾಗೂ ಒಟ್ಟು ಅಂಕಗಳನ್ನು 625ರಿಂದ 525ಕ್ಕೆ ಪರಿಗಣಿಸಲಲು ನಿರ್ಧರಿಸಿರುವ ಬಗ್ಗೆ ಇತ್ತೀಚೆಗೆ…

Read More

Video: ಕ್ಯಾಮೆರಾ ಮುಂದೆಯೇ ವಕೀಲನ ಶೂಟೌಟ್, ಪರಾರಿಯಾಗಲು ಯತ್ನಿಸಿದ ಹಂತಕನಿಗೆ ಕೈಕೊಟ್ಟ ಬೈಕ್

ಮಿರ್ಜಾಪುರ, ಏಪ್ರಿಲ್ 12: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶನಿವಾರ ಬೆಳಗ್ಗೆ ರಕ್ತಪಾತ ನಡೆದಿದೆ. ಹಿರಿಯ ವಕೀಲರೊಬ್ಬರನ್ನು ಗುರಿಯಾಗಿಸಿಕೊಂಡು ಬಂದ ಇಬ್ಬರು ಹಂತಕರು, ಸಾರ್ವಜನಿಕರ ಕಣ್ಣೆದುರೇ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಆದರೆ, ಈ ಕೊಲೆಯ ನಂತರ ಹಂತಕರು ಅಲ್ಲಿಂದ ತಪ್ಪಿಸಿಕೊಳ್ಳಲು ನಡೆಸಿದ ಹರಸಾಹಸ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 40 ವರ್ಷದ ಹಿರಿಯ ವಕೀಲ ರಾಜೀವ್ ಸಿಂಗ್ ಅವರು ಪ್ರತಿದಿನದಂತೆ ಶನಿವಾರ ಬೆಳಿಗ್ಗೆ ಕೂಡ ವಾಯುವಿಹಾರಕ್ಕೆ ಹೊರಟಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು…

Read More

VIDEO: ಚೆನ್ನೈನಲ್ಲಿ ಹೈಡ್ರಾಮಾ: ಅಂಪೈರ್​ ಜೊತೆ ನಿತೀಶ್ ರಾಣಾ ವಾಗ್ವಾದ!

IPL 2026: ಐಪಿಎಲ್ 2026ರ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ ಪಂದ್ಯದಲ್ಲಿ ವೇಳೆ ಅಂಪೈರ್ ತೆಗೆದುಕೊಂಡ ನಿರ್ಧಾರವು ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.  ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 20 ಓವರ್​ಗಳಲ್ಲಿ 212 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18 ಓವರ್​ಗಳಲ್ಲಿ 181 ರನ್​ ಗಳಿಸಿದ್ದರು. ಅದರಂತೆ ಕೊನೆಯ 12 ಎಸೆತಗಳಲ್ಲಿ 31 ರನ್​ಗಳು ಬೇಕಿದ್ದವು….

Read More

ಬ್ಯಾಡ್ ನ್ಯೂಸ್: ಪಾಕಿಸ್ತಾನ ಸಂಧಾನ ವಿಫಲ, ಇರಾನ್ ಜೊತೆ ಒಪ್ಪಂದವಿಲ್ಲದೆ ಅಮೆರಿಕ ನಿಯೋಗ ವಾಪಸ್

ವಾಷಿಂಗ್ಟನ್, ಏಪ್ರಿಲ್ 12: ಅಮೆರಿಕ ಮತ್ತು ಇರಾನ್(Iran) ನಡುವಿನ ದೀರ್ಘಕಾಲದ ವೈಮನಸ್ಸು ಶಮನಗೊಳಿಸಲು ಪಾಕಿಸ್ತಾನದ ಮಣ್ಣಿನಲ್ಲಿ ನಡೆದ ಐತಿಹಾಸಿಕ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಸತತ 21 ಗಂಟೆಗಳ ಕಾಲ ಎರಡೂ ದೇಶಗಳ ಪ್ರತಿನಿಧಿಗಳು ಮುಖಾಮುಖಿಯಾಗಿ ಚರ್ಚಿಸಿದರೂ, ಅಂತಿಮವಾಗಿ ಯಾವುದೇ ಒಪ್ಪಂದಕ್ಕೆ ಸಹಿ ಹಾಕಲು ಸಾಧ್ಯವಾಗಿಲ್ಲ ಎಂದು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಘೋಷಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ನಡೆದ ಸುದೀರ್ಘ 21 ಗಂಟೆಗಳ ಹೈ-ವೋಲ್ಟೇಜ್ ರಾಜತಾಂತ್ರಿಕ ಸಂಘರ್ಷ ಅಂತಿಮವಾಗಿ ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಇಡೀ ಜಗತ್ತು ಕುತೂಹಲದಿಂದ ಕಾಯುತ್ತಿದ್ದ ಅಮೆರಿಕ-ಇರಾನ್ ನೇರ…

Read More

ಕೊನೆಗೂ ಈಡೇರಿತು 40 ವರ್ಷಗಳ ಕೊರಗು: ಮಗನ ಜೊತೆ ತಂದೆಯೂ ದ್ವಿತೀಯ ಪಿಯುಸಿ ಉತ್ತೀರ್ಣ

ಮಂಗಳೂರು, ಏಪ್ರಿಲ್​​ 12: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಹಲವು ವಿಚಾರಗಳಿಗೆ ಗಮನಸೆಳೆದಿದೆ. ಒಟ್ಟಿಗೆ ಪರೀಕ್ಚೆ ಬರೆದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೈಕಂಬದ ತಾಯಿ-ಮಗಳು ಉತ್ತೀರ್ಣವಾಗಿರುವ ಸುದ್ದಿ ಸದ್ದು ಮಾಡುತ್ತಿರುವ ನಡುವೆಯೇ ಮಂಗಳೂರು ಕೊಳ್ಯ ನಿವಾಸಿಯಾದ 57 ವರ್ಷದ ಮೋಹನ್ ರಾಜ್ ಅವರು ತಮ್ಮ ಮಗ ಕ್ಷಿತಿಜ್ ರಾಜ್ ಜೊತೆಗೂಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿರುವ ವಿಚಾರ ಗೊತ್ತಾಗಿದೆ. ಶೇ.52 ಅಂಕಗಳೊಂದಿಗೆ ಅವರು ತೇರ್ಗಡೆ ಹೊಂದಿದ್ದಾರೆ. ಚಿಟ್ ಫಂಡ್​​ ವ್ಯವಹಾರದಲ್ಲಿ ತೊಡಗಿರುವ ಮೋಹನ್ ರಾಜ್…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿ ಭಾಗಗಳಲ್ಲಿ ಉಷ್ಣ ಅಲೆ; ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆ

ಬೆಂಗಳೂರು, ಏಪ್ರಿಲ್ 12: ಬೆಂಗಳೂರು ಸೇರಿದಂತೆ ಇಂದು ಹಲವು ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದ್ದು, ಕೆಲ ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ (Weather Forecast) ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಇಂದು ತಾಪಮಾನ ಹೆಚ್ಚಳದ ಸಾಧ್ಯತೆಯಿದ್ದು, ಹೀಟ್ ವೇವ್ ಅಲರ್ಟ್​ ನೀಡಲಾಗಿದೆ. ಇನ್ನುಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆಯ ಜೊತೆಗೆ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಹೀಟ್​ ವೇವ್, ಒಣ ಹವೆ? ಕರಾವಳಿಯಲ್ಲಿಂದು ಬಿಸಿ ವಾತಾವರಣದ ಜೊತೆ ಒಣ ಹವೆಯೂ…

Read More