ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಡಬಲ್​​ ಗುಡ್​​ನ್ಯೂಸ್​​ – Kannada News | Namma Metro Pink and Blue Lines will open in 2026

ಬೆಂಗಳೂರು, ಜನವರಿ 06: ಕೊರೊನಾ ಬಳಿಕ ಕೊಂಚ ಇಳಿಕೆಯಾಗಿದ್ದ ಬೆಂಗಳೂರಿನ ಟ್ರಾಫಿಕ್​​ ಸಮಸ್ಯೆ ಈಗ ಮತ್ತೆ ಹಳೆಯ ಸ್ಥಿತಿಗೆ ಮರಳಿದೆ. ಪ್ರತಿದಿನ ವಾಹನ ದಟ್ಟಣೆ ಸಮಸ್ಯೆಗೆ ಸಿಲುಕಿ ಒದ್ದಾಡುತ್ತಿರುವ ಸಿಲಿಕಾನ್​ ಸಿಟಿ ಮಂದಿಗೆ ನಮ್ಮ ಮೆಟ್ರೋ ಗುಡ್​​ನ್ಯೂಸ್​​ ಕೊಟ್ಟಿದ್ದು, ಒಂದಲ್ಲ ಎರಡು ಹೊಸ ಮಾರ್ಗಗಗಳು ಈ ವರ್ಷದಿಂದಲೇ ಕಾರ್ಯಾರಂಭ ಮಾಡಲಿವೆ. ಈಗಾಗಲೇ ಸೇವೆ ಒದಗಿಸುತ್ತಿರುವ ಹಸಿರು, ಗುಲಾಬಿ ಮತ್ತು ಹಳದಿ ಮಾರ್ಗಗಳ ಜೊತೆ ಮತ್ತೆರಡು ಮಾರ್ಗಗಳಲ್ಲಿ ಮೆಟ್ರೋ ರೈಲುಗಳ ಸಂಚಾರದಿಂದ ನಗರದ ಟ್ರಾಫಿಕ್​​ ಸಮಸ್ಯೆಗೆ ಬಹುತೇಕ ಪರಿಹಾರ ಸಿಗಬಹುದೆಂಬ ನಿರೀಕ್ಷೆಯಿದೆ.

ಯಾವೆಲ್ಲ ಹೊಸ ಮಾರ್ಗ ಓಪನ್​?

2026ರ ಅಂತ್ಯದ ಒಳಗೆ ಪಿಂಕ್​ ಮತ್ತು ಬ್ಲ್ಯೂ ಲೈನ್​​ಗಳಲ್ಲಿ ಮೆಟ್ರೋ ರೈಲುಗಳು ವಾಣಿಜ್ಯ ಸಂಚಾರ ನಡೆಸಲಿವೆ. ಮೇ ತಿಂಗಳಿನಲ್ಲಿ ಪಿಂಕ್ ಲೈನ್ ಮೊದಲ ಹಂತ ಓಪನ್ ಆದರೆ, ಡಿಸೆಂಬರ್​​ ವೇಳೆಗೆ ಬ್ಲ್ಯೂ ಲೈನ್​​ನ ಮೊದಲ ಹಂತವೂ ಕಾರ್ಯಾಚರಣೆ ಆರಂಭಿಸಿಲಿದೆ. ಕಾಳೇನ ಅಗ್ರಹಾರ ಟು ನಾಗವಾರ ಸಂಪರ್ಕಿಸುವ ಪಿಂಕ್ ಲೈನ್​​ 21.25 ಕಿ.ಮೀ. ವಿಸ್ತೀರ್ಣವಿದ್ದು, ಆ ಪೈಕಿ ಕಾಳೇನ ಅಗ್ರಹಾರ ಟು ತಾವರೆಕೆರೆ ವರೆಗಿನ 7.5 ಕಿ.ಮೀ.ಯ 6 ಎಲಿವೇಟೆಡ್ ಮೆಟ್ರೋ ಸ್ಟೇಷನ್​​ಗಳು ಮೇನಲ್ಲಿ ಓಪನ್ ಆಗಲಿದೆ. ನವೆಂಬರ್​​ನಲ್ಲಿ ತಾವರೆಕೆರೆ ಟು ನಾಗವಾರ 12 ಅಂಡರ್ ಗ್ರೌಂಡ್ ಮೆಟ್ರೋ ಸ್ಟೇಷನ್​​ಗಳ ಕಾರ್ಯಾಚರಣೆ ಶುರುವಾಗಲಿದೆ.  ಪಿಂಕ್ ಲೈನ್​​ಗಾಗಿ ಈಗಾಗಲೇ BEMLನಿಂದ ಒಂದು ಡ್ರೈವರ್ಲೆಸ್ ರೈಲು ಕೂಡ ಬಂದಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಹಳದಿ ಮಾರ್ಗ ಪ್ರಯಾಣಿಕರಿಗೆ ಶುಭಸುದ್ದಿ; ಬೆಂಗಳೂರು ತಲುಪಿದ ಡ್ರೈವರ್ಲೆಸ್ 7ನೇ ರೈಲು

ಬ್ಲೂ ಲೈನ್​​ನ ಸಿಲ್ಕ್ ಬೋರ್ಡ್ ಟು ಕೆ.ಆರ್.ಪುರಂ ಮಾರ್ಗ ಈ ವರ್ಷ ಡಿಸೆಂಬರ್​​ ವೇಳೆಗೆ ಓಪನ್ ಆಗಲಿದೆ. ಇದು 17.75 ಕಿ.ಮೀ. ಮಾರ್ಗದಲ್ಲಿ, 13 ಸ್ಟೇಷನ್​​ಗಳಿವೆ. ನೀಲಿ ಮಾರ್ಗವು ಒಟ್ಟು 58.19 ಕಿ.ಮೀ. ವಿಸ್ತೀರ್ಣವಿದ್ದು, ಮೊದಲ ಹಂತ 2026ರ ವರ್ಷಾಂತ್ಯದ ವೇಳೆಗೆ ಕಾರ್ಯಾರಂಭವಾದರೆ, 2027ರಲ್ಲಿ ಎರಡನೇ ಹಂತ ಓಪನ್​​ ಆಗಲಿದೆ. ಈ ಎರಡು ಮಾರ್ಗಗಳು ಕಾರ್ಯಾಚರಣೆ ಆರಂಭಿಸಿದರೆ ನಗರದ ಟ್ರಾಫಿಕ್ ಇಳಿಕೆಗೆ ಇನ್ನಷ್ಟು ಸಹಕಾರಿಯಾಗಲಿದೆ ಎಂದು ಮೆಟ್ರೋ ಪ್ರಯಾಣಿಕರು ಕೂಡ ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Numerology Prediction: ಈ ಜನ್ಮಸಂಖ್ಯೆಯವರಿಗೆ ಪ್ರೀತಿ- ಪ್ರೇಮದಲ್ಲಿ ಲಾಭ ಖಂಡಿತ – Kannada News | Birth Number 7, 8, 9 Forecast: Your Daily Horoscope Guide

ಜನ್ಮಸಂಖ್ಯೆಗೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 6ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಅತಿಯಾದ ಚಿಂತೆ ನಿಮಗೆ ಸುಸ್ತು ಮಾಡಲಿದೆ. ಭವಿಷ್ಯದ ಬಗ್ಗೆ ಆಲೋಚಿಸುವುದು ತಪ್ಪಲ್ಲ, ಆದರೆ ಅದರ ಬಗ್ಗೆಯೇ ಯೋಚಿಸುತ್ತಾ ನಿಮ್ಮ ದೈನಂದಿನ ಕೆಲಸ-ಕಾರ್ಯಗಳು ದಾರಿ ತಪ್ಪದಿರುವಂತೆ ನೋಡಿಕೊಳ್ಳಿ. ನೀವು ವಹಿಸಿಕೊಂಡ ಪ್ರಾಜೆಕ್ಟ್, ಜವಾಬ್ದಾರಿಗಳನ್ನು ಗಡುವಿನೊಳಗೆ ಮುಗಿಸುವುದಕ್ಕೆ ಎಲ್ಲ ಶಕ್ತಿಯನ್ನು ಒಟ್ಟುಗೂಡಿಸಿ ಹಾಕಲಿದ್ದೀರಿ. ನಿಮ್ಮದೇ ಕೆಲಸ ಎಂಬಷ್ಟು ಶ್ರದ್ಧೆಯಿಂದ ಸ್ನೇಹಿತರಿಗೆ ಕೆಲಸ ಮಾಡಿಕೊಟ್ಟ ನಂತರವೂ ಕೆಲವು ಆಕ್ಷೇಪದ ಮಾತುಗಳನ್ನು ಕೇಳಿಸಿಕೊಳ್ಳುವಂತೆ ಆಗಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ರೈತರಿಗೆ ಬಹಳ ಉತ್ತಮವಾದ ದಿನ ಇದಾಗಿರುತ್ತದೆ. ಕೃಷಿ ಉತ್ಪನ್ನಗಳ ರಫ್ತು ವ್ಯವಹಾರದಲ್ಲಿ ತೊಡಗಿದವರಿಗೆ ಹೊಸ- ದೊಡ್ಡ ಪ್ರಮಾಣದ ಆರ್ಡರ್ ಹುಡುಕಿಕೊಂಡು ಬರಲಿದೆ. ಅಚಾನಕ್ ಆಗಿ ಪ್ರಯಾಣ ಮಾಡಬೇಕಾಗುತ್ತದೆ. ಆಲೋಚಿಸಿಯೇ ತೀರ್ಮಾನ ಮಾಡಬೇಕು ಎಂಬ ಸನ್ನಿವೇಶದಲ್ಲಿ ನಿಮ್ಮ ಧೈರ್ಯದ ಹೆಜ್ಜೆಯಿಂದ ಲಾಭ ಮಾಡಿಕೊಳ್ಳುವಿರಿ. ನಿಮ್ಮ ಬಳಿ ಸಹಾಯ ಕೇಳಿಕೊಂಡು ಬಂದವರ ಬಳಿ ಸಂಪೂರ್ಣವಾದ ವಿಚಾರ ತಿಳಿದುಕೊಳ್ಳದೆ, ಮಾತು ನೀಡುವುದಕ್ಕೆ ಹೋಗಬೇಡಿ. ಸಿಹಿ ಪದಾರ್ಥಗಳ ಸೇವನೆ ಕಡಿಮೆ ಮಾಡಿ.

ಇದನ್ನೂ ಓದಿ: ನಿಮ್ಮ ರಾಶಿಗನುಗುಣವಾಗಿ ಜನವರಿ ತಿಂಗಳ ಮೊದಲ ವಾರದ ಭವಿಷ್ಯ ತಿಳಿಯಿರಿ

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಪ್ರೀತಿ- ಪ್ರೇಮದಲ್ಲಿ ಇರುವವರಿಗೆ ಉತ್ತಮವಾದ ದಿನ ಇದಾಗಿರುತ್ತದೆ. ನಿಮ್ಮ ಆಪ್ತರು ಉಡುಗೊರೆಗಳನ್ನು ನೀಡುವ ಸಾಧ್ಯತೆ ಇದೆ. ಹೋಲ್- ಸೇಲ್ ವ್ಯಾಪಾರಿಗಳು, ವಿತರಕರಾಗಿ ಕಾರ್ಯ ನಿರ್ವಹಿಸುವವರಿಗೆ ಲಾಭದ ಪ್ರಮಾಣದಲ್ಲಿ ಏರಿಕೆ ಆಗಲಿದೆ. ಸರ್ಕಾರದ ಕೆಲಸವೊಂದಕ್ಕೆ ಕನ್ಸಲ್ಟೇಷನ್ ಆಧಾರದಲ್ಲಿ ಬರುವಂತೆ ನಿಮ್ಮನ್ನು ಕೇಳುವಂಥ ಸಾಧ್ಯತೆ ಇದೆ. ಇನ್ನು ಉದ್ಯೋಗ ಸ್ಥಳದಲ್ಲಿ ನಿಮ್ಮ ನಿರ್ಧಾರ ಏನೇ ಆಗಿರಲಿ, ಅದನ್ನು ಎದುರಿಗೆ ಇರುವವರಿಗೆ ಬೇಸರ ಆಗದ ಧ್ವನಿಯಲ್ಲಿ ಹೇಳುವುದಕ್ಕೆ ಪ್ರಯತ್ನಿಸಿ.

ಲೇಖನ- ಎನ್‌.ಕೆ.ಸ್ವಾತಿ

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 6ರ ದಿನಭವಿಷ್ಯ – Kannada News | Numerology 4: Daily Predictions for Money, Work and Health

ಜನ್ಮಸಂಖ್ಯೆಗೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 6ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಈಗಿಂದ ಈಗಲೇ ಕೆಲಸ ಆಗಬೇಕು, ಹೆಚ್ಚಿಗೆ ಹಣ ಆದರೂ ಕೊಡಲು ತಯಾರಾಗಿದ್ದೀವಿ ಅಂತ ನಿಮ್ಮ ಬಳಿ ಕೆಲಸಕ್ಕೆ ಒತ್ತಾಯ ಮಾಡುತ್ತಾ ನಿಂತಲ್ಲಿ ಒಂದಕ್ಕೆ ನಾಲ್ಕು ಬಾರಿ ಆಲೋಚಿಸಿದ ನಂತರ ಹೂಂ ಅನ್ನುವುದು ಒಳ್ಳೆಯದು. ಸುಲಭಕ್ಕೆ ಆಗದು ಎಂದುಕೊಂಡಿದ್ದ ಸರ್ಕಾರಿ ಕೆಲಸವೊಂದು ಸಲೀಸಾಗಿ ಮುಗಿಯಲಿದೆ. ಬಹಳ ದಿನಗಳಿಂದ ಬೆನ್ನಟ್ಟಿದ್ದಾರೆ ಎಂಬ ಕಾರಣಕ್ಕೆ ಸಾಲ ಕೊಡುವುದಕ್ಕೆ ಒಪ್ಪಿಕೊಂಡಲ್ಲಿ ಅದನ್ನು ವಾಪಸ್ ವಸೂಲಿ ಮಾಡುವುದರ ಒಳಗೆ ಹೈರಾಣಾಗಲಿದ್ದೀರಿ. ಹಲ್ಲಿನ ನೋವಿನ ಸಮಸ್ಯೆ ಇರುವವರು ಜಾಗ್ರತೆಯಿಂದ ಇರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಛಲದೊಳ್ ದುರ್ಯೋಧನ ಎಂಬ ಮಾತಿನಂತೆ ನಿಮ್ಮ ಹಿಂದಿನ ಸಿಟ್ಟು, ಪ್ರತೀಕಾರವನ್ನು ತೀರಿಸಿಕೊಳ್ಳುವ ಮನಸ್ಥಿತಿಯಲ್ಲಿ ಇರುತ್ತೀರಿ. ಹೊಸ ಬಟ್ಟೆ, ಫ್ಯಾಷನ್ ದಿರಿಸುಗಳ ಖರೀದಿಗೆ ಹಣ ಖರ್ಚು ಮಾಡುವ ಯೋಗ ಈ ದಿನ ಇದೆ. ಬಹಳ ದಿನಗಳಿಂದ ಬಾಕಿ ಉಳಿದುಹೋಗಿದ್ದ ಹಣವನ್ನು ನಾಜೂಕಾಗಿ ವಸೂಲಿ ಮಾಡುವುದಕ್ಕೆ ಸಾಧ್ಯ ಆಗಲಿದೆ. ಸರ್ಕಾರಿ ಕೆಲಸದಲ್ಲಿ ಇರುವವರಿಗೆ ಸ್ವಲ್ಪ ಮಟ್ಟಿಗೆ ಒತ್ತಡ ಇರಲಿದೆ. ಮುಖ್ಯವಾದ ಕೆಲಸವೊಂದನ್ನು ಪೂರ್ತಿ ಮಾಡಿಕೊಂಡು ಬರುವುದಕ್ಕೆ ನಿಮಗೆ ವಹಿಸಲಿದ್ದಾರೆ.

ಇದನ್ನೂ ಓದಿ: 2026ರಲ್ಲಿ ಎದುರಾಗುವ ಆಕಸ್ಮಿಕ ಕಷ್ಟಗಳಿಂದ ಪಾರಾಗುವ ವಿಧಾನ

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಮೆಟ್ಟಿಲು ಹತ್ತುವಾಗ ಇಳಿಯುವಾಗ ಜಾಗ್ರತೆ ಇರಲಿ. ಮನೆಯಲ್ಲಿ ಆಗಬೇಕಾದ ಕೆಲಸ- ಕಾರ್ಯಗಳನ್ನು ಮುಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ವ್ಯಕ್ತಿಗಳನ್ನು ಕರೆಸಿ, ಮಾತನಾಡಲಿದ್ದೀರಿ. ಸಿನಿಮಾ ರಂಗದಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ದಾಕ್ಷಿಣ್ಯಕ್ಕೆ ಸಿಲುಕಿಕೊಂಡು ನೀವು ಒಪ್ಪಿಕೊಂಡ ಕೆಲಸಗಳಿಗೆ ಹೆಚ್ಚು ಸಮಯವನ್ನು ಎತ್ತಿಡಬೇಕಾದ ಸನ್ನಿವೇಶ ಎದುರಾಗಲಿದೆ. ಮದುವೆಗೆ ಪ್ರಯತ್ನಿಸುತ್ತಿರುವ ವಿವಾಹ ವಯಸ್ಕರಿಗೆ ಶುಭ ವಾರ್ತೆ ಕೇಳಲಿದೆ.

ಲೇಖನ- ಎನ್‌.ಕೆ.ಸ್ವಾತಿ

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಗೆ ಇಂದು ಲಾಭವೋ ಲಾಭ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 6ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)
ಒತ್ತಡ ತಂದು ನಿಮ್ಮಿಂದ ಕೆಲಸ ಮಾಡಿಸಿಕೊಳ್ಳಬಹುದು ಅಂದುಕೊಂಡವರಿಗೆ ಅಚ್ಚರಿ ಎದುರಾಗಲಿದೆ. ನೇರವಾಗಿ ಉತ್ತರ ನೀಡಿ, ಬಾಯಿ ಮುಚ್ಚಿಸುತ್ತೀರಿ. ರಿಯಲ್ ಎಸ್ಟೇಟ್ ವ್ಯವಹಾರ ಕೈ ಹಿಡಿಯಲಿದೆ. ಉದ್ಯೋಗವೋ- ವ್ಯವಹಾರವೋ ಕುಟುಂಬದ ವಿಚಾರವೋ ಒಟ್ಟಿನಲ್ಲಿ ನಿಮ್ಮ ತನಕ ಬಂದ ದೂರನ್ನು ಗಂಭೀರವಾಗಿಯೇ ತೆಗೆದುಕೊಳ್ಳಿ. ಮಕ್ಕಳ ವರ್ತನೆಯಲ್ಲಿ ಆಗುವ ಬದಲಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸುವುದು ಮುಖ್ಯ. ಆದಾಯ ಮೂಲ ತೆರೆದುಕೊಳ್ಳಲಿದೆ. ನಿಮಗೆ ಹೊಸ ಉದ್ಯೋಗದ ಆಫರ್ ವೊಂದು ಸ್ನೇಹಿತರ ಮೂಲಕ ಬರಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)
ಹೆಲ್ತ್ ಚೆಕಪ್ ಮಾಡಿಸಿಕೊಳ್ಳಲು ಆದ್ಯತೆ ನೀಡುತ್ತೀರಿ. ಭುಜ- ಬೆನ್ನಿನ ನೋವಿನ ಸಮಸ್ಯೆ ಇರುವವರಿಗೆ ಸೂಕ್ತವಾದ ವೈದ್ಯೋಪಚಾರ ಸಿಗುತ್ತದೆ. ಬೆಟ್ಟಿಂಗ್ ನಿಂದ ದೂರ ಇರುವುದು ಒಳ್ಳೆಯದು. ಆಕಸ್ಮಿಕವಾಗಿ ಸಿಗುವಂಥ ಅವಕಾಶಗಳನ್ನು ಚೆನ್ನಾಗಿ ಬಳಸಿಕೊಳ್ಳುತ್ತೀರಿ. ಉತ್ಸಾಹದ ಪರಿಸರದಲ್ಲಿ ಸಂತೋಷದ ಕ್ಷಣಗಳನ್ನು ಕಳೆಯಲಿದ್ದೀರಿ. ಬಾಯಿಯ ಮೇಲೆ ನಿಯಂತ್ರಣ ಇರಿಸಿಕೊಳ್ಳುವುದು ಮುಖ್ಯ. ಅದು ಮಾತಿಗೆ ಸಂಬಂಧಿಸಿದಂತೆಯೇ ಇರಲಿ, ರುಚಿಯ ಖಾದ್ಯವೇ ಇರಲಿ ಹತೋಟಿಯಲ್ಲಿ ಇರಿ. ಏಕಾಗ್ರತೆ ಈ ದಿನದ ನಿಮ್ಮ ಯಶಸ್ಸಿಗೆ ಸೂತ್ರ ಆಗಲಿದೆ.

ಇದನ್ನೂ ಓದಿ : ಜನವರಿ 04ರಿಂದ 10ರ ವರೆಗಿನ ವಾರದ ಪ್ರೇಮ – ಪ್ರೀತಿ ಭವಿಷ್ಯ ತಿಳಿಯಿರಿ

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)
ಸಂಬಂಧಿಗಳು ಮನೆಗೆ ಬರುವಂಥ ಸಾರ್ಥಕ ಅನಿಸುವ ರೀತಿಯ ಕೆಲವು ಕೆಲಸಗಳು ನಿಮ್ಮಿಂದ ಆಗಲಿವೆ. ಸ್ನೇಹಿತರು- ಸಂಬಂಧಿಗಳಿಗೆ ಹಲವು ಬಗೆಯಲ್ಲಿ ನಿಮ್ಮ ಸಹಕಾರ- ನೆರವು ದೊರೆಯಲಿದೆ. ನೀವು ಈಗಾಗಲೇ ಮಾಡಿದಂಥ ಹೂಡಿಕೆ ಹಿಂಪಡೆಯುವುದರಿಂದ ಲಾಭದಲ್ಲಿ ಇರುತ್ತೀರಿ. ದೂರ ಪ್ರದೇಶದಲ್ಲಿ ವಾಸ ಇರುವವರು ಪ್ರಾಣಿಗಳ ಕಡಿತದಿಂದ ತೊಂದರೆ ಅನುಭವಿಸುವಂತೆ ಆಗಬಹುದು. ಸಾಮಾನ್ಯ ದಿನಗಳಿಗಿಂತ ಹೆಚ್ಚು ಎಚ್ಚರ ವಹಿಸಿ. ಜ್ಯುವೆಲ್ಲರಿ ಮಳಿಗೆ ನಡೆಸುತ್ತಾ ಇರುವವರಿಗೆ ಉತ್ತಮವಾದ ದಿನ ಇದು.

ಲೇಖನ- ಎನ್‌.ಕೆ.ಸ್ವಾತಿ

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today 06 January: ಲಾಭ – ನಷ್ಟಗಳ ಏರಿಳಿತ, ಇಂದು ಈ ರಾಶಿಯವರಿಗೆ ಮಿಶ್ರ‌ ಫಲ – Kannada News | Tuesday Horoscope: Shalivahana 1948 RashiFluctuations in profit and loss, mixed results for these zodiac signs todayphala Marital, Income and Luck

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ದ್ವಿತೀಯ ತಿಥಿ ಮಂಗಳವಾರ ವಿವಾಹದಲ್ಲಿ ಕಲಹ, ಅರೂಪದ ಭೇಟಿ, ಆದಾಯಕ್ಕೆ ಆಲೋಚನೆ, ಸಿಟ್ಟಿಗೆ ಕ್ಷಮೆ, ಪ್ರೀತಿ ಬದಲಾವಣೆ ಇವೆಲ್ಲ ಇಂದಿನ ವಿಶೇಷ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಶ್ರವಣಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ ನಿತ್ಯನಕ್ಷತ್ರ : ಪುಷ್ಯಾ ಯೋಗ : ಶೋಭನ, ಕರಣ : ವಣಿಜ, ಸೂರ್ಯೋದಯ – 06 – 51 am, ಸೂರ್ಯಾಸ್ತ – 06 – 08 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15-20 – 16:40, ಯಮಗಂಡ ಕಾಲ 09:41 – 11:06, ಗುಳಿಕ ಕಾಲ 12:30 – 13:55

ಮೇಷ ರಾಶಿ :

ಆಪ್ತರ ಜೊತೆಗಿನ ಮಾತುಕತೆಯು ನಿಮಗೆ ಆಹ್ಲಾದವನ್ನು ಉಂಟುಮಾಡುವುದು. ಭೂಮಿಯ ಮೇಲೆ ಸಾಲವನ್ನು ಮಾಡಬೇಕಾದೀತು. ಹಳೆಯ ಕೆಲಸದಲ್ಲಿ ಮಂದಗತಿ ಇರಲಿದೆ. ಒತ್ತಾಯದಿಂದ ನಿಮಗೆ ಗೌರವ ಪ್ರಾಪ್ತವಾಗಬಹುದು. ವ್ಯಾಪಾರದಲ್ಲಿ ಅಲ್ಪ ಲಾಭವೇ ಆದರೂ ನೆಮ್ಮದಿ ಇರಲಿದೆ. ಯಾರಿಗೋ ಸಹಾಯ ಮಾಡಲು ಹೋಗಿ ಆಪತ್ತಿನಲ್ಲಿ ಸಿಕ್ಕಿಕೊಳ್ಳಬಹುದು. ಸ್ನೇಹಿತರ ಜೊತೆ ನೋವನ್ನು ಹಂಚಿಕೊಂಡು ಸಮಾಧಾನ ತಂದುಕಳ್ಳುವಿರಿ. ತಂದೆಯ ಜೊತೆ ಅಪರೂಪದ ಸಮಾರಂಭಕ್ಕೆ ಹೋಗುವಿರಿ. ಖರೀದಿಯಲ್ಲಿ ನೀವು ಸ್ಥೂಲವಾಗಿ ಖರ್ಚನ್ನು ಅಂದಾಜಿಸಿಕೊಳ್ಳಿ. ಮಕ್ಕಳು ನಿಮ್ಮ ಬಳಿ ಹೊಸತನ್ನು ತಿಳಿದುಕೊಳ್ಳಲು ಬಯಸುವರು. ಸಂಗಾತಿಯ ಜೊತೆ ದೂರ ಪ್ರಯಾಣ ಮಾಡುವಿರಿ. ಸಿಕ್ಕ ಅಧಿಕಾರದ ಬಗ್ಗೆ ಕೀಳರಿಮೆ ಬೇಡ.

ವೃಷಭ ರಾಶಿ :

ಸರ್ಕಾರದ ನಿಮ್ಮ ಕೆಲಸವು ಬೇಗನೆ ಮುಗಿದುಹೋಗುವುದು. ಮಿತ್ರರ ಕಾರಣದಿಂದ ವೃಥಾ ಕಾಲಹರಣವಾಗಲಿದ್ದು ಕಛೇರಿಯ ಕೆಲಸದ ಬಗ್ಗೆಯೇ ಚಿಂತೆ ಇರುವುದು. ಮಾರಾಟದ ವಿಚಾರವಾಗಿ ನೀವು ಬೇರೆ ಊರಿಗೆ ಹೋಗಬೇಕಾಗಬಹುದು. ಅವಿವಾಹಿತರಾಗಿರುವವರಿಗೆ ಕೊರಗು ಕಾಣಿಸವಹುದು. ನಿಮ್ಮ ಸ್ವಭಾವಕ್ಕೆ ಹೊಂದಿಕೊಳ್ಳುವ ಸಂಗಾತಿಯು ಸಿಗುವುದು ಕಷ್ಟವಾದೀತು. ಇಂದು ಮಾಡುವ ಪ್ರಯಾಣದಲ್ಲಿ ಅಪರಿಚಿತರ ಗೆಳೆತನವಾಗಬಹುದು. ನಿಮ್ಮ ಎಲ್ಲ ವಿವರಗಳನ್ನು ಇನ್ನೊಬ್ಬರ ಜೊತೆ ಹೇಳಿಕೊಳ್ಳುವುದು ಬೇಡ. ಯಾರನ್ನೂ ಉಪಯೋಗಿಸಿಕೊಳ್ಳಲು ಹೋಗಬೇಡಿ. ಉದ್ಯೋಗದಲ್ಲಿ ಯಾವುದಾದರೊಂದು ರೀತಿಯಲ್ಲಿ ಪ್ರಗತಿಯನ್ನು ಸಾಧಿಸಲು ಹೆಜ್ಜೆ ಇಡಿ.

ಮಿಥುನ ರಾಶಿ :

ಸ್ಥಿರಾಸ್ತಿಗಾಗಿ ಹೆಚ್ಚು ಓಡಾಡುವಿರಿ. ವಿದೇಶ ಪ್ರಯಾಣವು ನಿಮಗೆ ಇಷ್ಟವಿಲ್ಲದಿದ್ದರೂ ಮಾಡುವುದು ಅನಿವಾರ್ಯವಾದೀತು. ಉದ್ಯಮವು ಬೆಳೆಯುತ್ತಿರುವುದು ಸಂತೋಷ ಕೊಡುವುದು. ಚಾಲಕರಿಗೆ ಕರ್ತವ್ಯಕ್ಕೆ ಪ್ರಶಂಸೆ ಸಿಗುವುದು. ಅಪರಿಚಿತರಿಗೆ ನೀವು ಹಣವನ್ನು ಕೊಡುವಿರಿ. ಅರಿವಿಲ್ಲದೆ ಇಂದಿನ ತುರ್ತು ಕಾರ್ಯವನ್ನು ಮರೆಯುವಿರಿ. ಅಸಹಜ ವರ್ತನೆಯಿಂದ ಸಂಗಾತಿಗೆ ಅನುಮಾನ ಬರುವುದು. ಮನೆಯ ಹಿರಿಯರನ್ನು ಅನಾದರದಿಂದ ನೋಡುವುದು ಯೋಗ್ಯವಾಗದು. ಅಧಿಕಾರದಿಂದ ಅಹಂಕಾರವು ಹೆಚ್ಚಾದೀತು. ಇಂದು ನೀವು ಬಹಳ ಸಿಟ್ಟಗೊಂಡರೂ ಬೇಗ ಶಾಂತರಾಗುವಿರಿ. ಸ್ವಾವಲಂಬನೆ ನಿಮಗೆ ಇಷ್ಟವಾಗುವುದು. ಕಛೇರಿಯಲ್ಲಿ ಕೆಲವರ ವರ್ತನೆಯು ಬದಲಾದಂತೆ ತೋರುವುದು.

ಕರ್ಕಾಟಕ ರಾಶಿ :

ಭೂಮಿಯ ಲಾಭದ ವಿಚಾರದಲ್ಲಿ ಸರಿಯಾದ ಮಾತುಕತೆಗಳು ಆಗಲಿ. ಆರೋಪ ಪ್ರತ್ಯಾರೋಪಗಳಿಂದ ಪರಸ್ಪರ ಕಲಹವೂ ಆಗುವುದು. ದುಸ್ಸಾಧ್ಯ ಎನಿಸಿದ ಕಾರ್ಯವನ್ನು ಮಾಡಲು ಪ್ರಯತ್ನಿಸುವುದು ಬೇಡ. ಸ್ಥಿರಾಸ್ತಿಯನ್ನು ಮಾರಾಟ ಮಾಡುವ ಪ್ರಯತ್ನದಲ್ಲಿ ಇರುವಿರಿ. ಇಂದಿನ ಮನೆಯ ಕೆಲಸದಿಂದ ನಿಮಗೆ ಶ್ರಮವಾಗುವುದು. ಹಳೆಯ ಆಸೆಯನ್ನು ನೀವು ತೀರಿಸಿಕೊಳ್ಳುವ ಅವಕಾಶವಿರಲಿದೆ. ‌ಇಂದು ನಿಮ್ಮ ಅನಗತ್ಯ ಮಾತುಗಳು ಕಲಹಕ್ಕೆ ಕಾರಣವಾಗಬಹುದು. ನಿಮ್ಮ ನಂಬಿಕೆಗೆ ಘಾಸಿಯಾಗಬಹುದು. ವಿದ್ಯಾಭ್ಯಾಸದ ಸಾಲವನ್ನು ನೀವು ತೀರಿಸುವಿರಿ. ಹಿರಿಯರ ಬಳಿ ಮಾತನಾಡುವಾಗ ವಿನಯವಿರಲಿ.

ಸಿಂಹ ರಾಶಿ :

ದಾಂಪತ್ಯದಲ್ಲಿ ಪರಸ್ಪರ ನೋವು ಹಂಚಿಕೊಂಡು ಸಮಾಧಾನವಾಗುವಿರಿ. ನಿಮ್ಮ ನಡವಳಿಕೆಗೆ ಬಂಧುಗಳಿಂದ ಪ್ರಶಂಸೆಯು ಸಿಗಲಿದೆ. ಅಂದುಕೊಂಡಂತೆ ಕಾರ್ಯವು ಸಾಗದು ಎಂಬ ಕೊರಗು ಇರುವುದು. ನಿಮ್ಮ ಬಲದ ಮೇಲೇ ಕೆಲಸವನ್ನು ಪ್ರಾರಂಭಿಸಿ. ಇನ್ನೊಬ್ಬರ ಗೊತ್ತಿಲ್ಲದ ವಿಚಾರವನ್ನು ಹೇಳುವುದು ಬೇಡ. ಅನೇಕ ದಿನಗಳಿಂದ ಉದ್ಯೋಗ ನಿರ್ವಹಣೆಯಲ್ಲಿ ಬೇಸರ ಉಂಟಾಗಿದ್ದು ಹೊರಗೆ ಸುತ್ತಾಡುವ, ವಿರಾಮವನ್ನು ಪಡೆಯುವ ಮನಸ್ಸು ಇರಲಿದೆ. ನಿಮ್ಮ ಮಾತಿಗೆ ಬೆಲೆ ಇಲ್ಲವಾದೀತು. ಅಪರಿಚಿತರ ಹಸಿವನ್ನು ನೀಗಿಸುವಿರಿ. ಖರೀದಿಯನ್ನು ನೀವು ಬಹಳ ಉತ್ಸಾಹದಿಂದ ಮಾಡಲಾಗದು.

ಕನ್ಯಾ ರಾಶಿ :

ವಿದ್ಯಾಭ್ಯಾಸದಲ್ಲಿ ಯಶಸ್ಸನ್ನು ಸಾಧಿಸಲು ಅನೇಕ ಮಾರ್ಗಗಳು ಇರಲಿದೆ. ನಿಮ್ಮನ್ನು ಬಳಸಿಕೊಳ್ಳಬಹುದು, ಯಾರನ್ನೂ ಅತಿಯಾಗಿ ನಂಬಿ ನೀವು ಮೋಸಹೋಗಬಹುದು.‌ ನ್ಯಾಯಾಲಯದ ವಿಚಾರವನ್ನು ಯಾರ ಬಳಿಯೂ ಹೇಳಲು ಇಚ್ಛಿಸುವುದಿಲ್ಲ. ವಿವಾಹಕ್ಕೆ ಸಂಬಂಧಿಸಿದಂತೆ ತುರ್ತಾಗಿ ತೀರ್ಮಾನವನ್ನು ತೆಗೆದುಕೊಳ್ಳುವುದು ಸೂಕ್ತ. ನಿಮ್ಮವರ ತಪ್ಪುಗಳನ್ನು ತಿದ್ದಿಕೊಳ್ಳಲು ಸಮಯವನ್ನು ಕೊಡಿ. ಭೂಮಿಯ ವ್ಯವಹಾರದಿಂದ ಅಲ್ಪ ಅಭಿವೃದ್ಧಿಯು ಆಗಲಿದೆ. ಆರ್ಥಿಕ ಒತ್ತಡದಿಂದ ಮನೆಯ ನೆಮ್ಮದಿಯು ಕದಡಬಹುದು. ಸಂಗಾತಿಯ ಬಗ್ಗೆ ಹೆಚ್ಚು ಕರುಣೆ ಬರಬಹುದು. ಕರ್ತವ್ಯಗಳನ್ನು ದೃಢ ಮನಸ್ಸಿನಿಂದ ಮಾಡುವಿರಿ.

ತುಲಾ ರಾಶಿ :

ತಜ್ಞರ ಜೊತೆ ಇಂದಿನ ಸಮಯವನ್ನು ಕಳೆಯುವಿರಿ. ಸಹನೆಯಿಂದ ಅದನ್ನು ಎದುರಿಸಬೇಕಾಗುವುದು. ದುಡುಕಿ ಏನನ್ನಾದರೂ ಮಾಡಿಕೊಳ್ಳುವುದು ಬೇಡ. ನ್ಯಾಯಾಲಯದ ವಿಚಾರದಲ್ಲಿ ನಿಮಗೆ ಹಿನ್ನಡೆಯ ಸಾಧ್ಯತೆ ಇದೆ. ನಿಮಗೆ ಬರಬೇಕಾದ ಹಣದ ವಿಚಾರದಲ್ಲಿಯೂ ನಿಮಗೆ ಸೋಲಾಗುವುದು. ಮನೆಯಲ್ಲಿಯೂ ನಿಮ್ಮ ಮಾತಿಗೆ ಸರಿಯಾದ ಬೆಲೆಯೂ ಸಿಗದು. ಕಛೇರಿಯಲ್ಲಿ ಇಂದು ನಿಮ್ಮಿಂದ ತಪ್ಪಾಗಿದ್ದು ಅದನ್ನು ನೀವು ಒಪ್ಪಿಕೊಳ್ಳಲಾರಿರಿ. ದುರ್ವ್ಯಸನದಿಂದ ಸಂಪತ್ತನ್ನು ನಷ್ಟ ಮಾಡಿಕೊಳ್ಳುವಿರಿ. ನಿಮ್ಮ ತಪ್ಪಿಗೆ ಪಶ್ಚಾತ್ತಾಪವಾದರೂ ಕೊನೆಯ ಹಂತವಾಗಿ ಇರಲಿ. ಏಕಾಗ್ರತೆಯ ಕೊರತೆಯನ್ನು ಸರಿ ಮಾಡಿಕೊಳ್ಳಿ. ನಿಮ್ಮ ಯೋಜನೆಗೆ ಸರಿಯಾದ ಚೌಕಟ್ಟು ಬೇಕು.

ವೃಶ್ಚಿಕ ರಾಶಿ :

ಎಲ್ಲವನ್ನೂ ನಂಬಿಕೆಯ ಆಧಾರದ ಮೇಲೆ ಸ್ವೀಕರಿಸಬೇಕಿಲ್ಲ. ಸರ್ಕಾರಿ ಉದ್ಯೋಗಿಗಳಿಗೆ ನಿಮ್ಮ ಚಾತುರ್ಯದ ಕಾರಣದಿಂದ ಹೆಚ್ಚಿನ ಅಧಿಕಾರವು ಪ್ರಾಪ್ತವಾಗುವುದು. ಧೈರ್ಯದಿಂದ ಮುನ್ನಡೆದರೆ ಯಾವ ತೊಂದರೆಯೂ ತೊಂದರೆಯಾಗಿ ಉಳಿಯದು. ಪ್ರಯಾಣದಲ್ಲಿ ಯಾವುದೇ ತೊಂದರೆಯು ಬಾರದಂತೆ ದೈವವನ್ನು ಪ್ರಾರ್ಥಿಸಿ. ದಾಂಪತ್ಯದಲ್ಲಿ ಉಂಟಾದ ಕಲಹವನ್ನು ನೀವೇ ಸರಿ ಮಾಡಿಕೊಳ್ಳಿ. ನಿಮ್ಮನ್ನೇ ನೀವು ವಂಚಿಸಿಕೊಳ್ಳುವಿರಿ. ಕಲಾವಿದರಿಗೆ ಸಿಕ್ಕ ಅವಕಾಶಗಳು ತಪ್ಪಿಹೋಗಬಹುದು. ಆಸ್ತಿಯ ವಿಚಾರದಲ್ಲಿ ದುಡುಕುವುದು ಬೇಡ, ಎಲ್ಲವೂ ಶಾಂತವಾಗುವ ತನಕ ಕಾಯಬೇಕಾಗುವುದು. ವ್ಯವಸ್ಥೆಯ ಸಣ್ಣ ಕೊರತೆಗಳು ಮುಖ್ಯವಾಗಬಾರದು. ಕುಟುಂಬದ ಬಗ್ಗೆ ನಿಮಗೆ ಅಭಿಮಾನದ ಕಾಣಿಸದು.

ಧನು ರಾಶಿ :

ಕಳೆದುಕೊಂಡ ಸಂಪತ್ತು ಮತ್ತಾವುದೋ ರೀತಿಯಲ್ಲಿ ಬರಬಹುದು. ಬಹಳ‌ ದಿನಗಳ‌ ಅನಂತರ ಕುಟುಂಬದವರನ್ನು ಭೇಟಿಯಾಗುತ್ತಿರುವುದು ನಿಮ್ಮ‌ ಮುಖದಲ್ಲಿ ಹರುಷ ಕಾಣುವುದು. ಸಣ್ಣ ಮಕ್ಕಳಿಂದ ನೆಮ್ಮದಿಯು ಸಿಗಲಿದೆ. ನಿಮ್ಮ ಯಶಸ್ಸನ್ನು ಮನೆಯವರು ಸಂಭ್ರಮಿಸಬಹುದು. ರಾಜಕಾರಣದತ್ತ ನಿಮ್ಮ ಒಲವು ಹೆಚ್ಚಾಗುವುದು. ಪ್ರಭಾವಿ ವ್ಯಕ್ತಿಗಳು ನಿಮ್ಮನ್ನು ಪರಿವರ್ತಿಸುವರು. ಆದಾಯದ ಮೂಲವು ಸರಿಯಾಗಿ ಇರಲಿದೆ. ನಿಮ್ಮ ಸಹೋದರನ ಆರೋಗ್ಯದಲ್ಲಿ ವ್ಯತ್ಯಾಸವು ಕಾಣಿಸಬಹುದು. ಹೂಡಿಕೆಯಬ್ಯಾಂಕ್ಲ್ಲಿ ನಿಮಗೆ ಆಸಕ್ತಿಯು ಇಂದು ಕಡಿಮೆ ಇರಲಿದೆ. ದೇವರ ಕಾರ್ಯದಲ್ಲಿ ಪಾಲ್ಗೊಳ್ಳುವಿರಿ.‌ ಆಪ್ತರ ಬಗ್ಗೆ ಇರುವ ನಕಾರತ್ಮಕ ಭಾವವನ್ನು ನೀವು ಅವರಿಗೆ ಹೇಳುವಿರಿ.

ಮಕರ ರಾಶಿ :

ಒತ್ತಡದಿಂದ ನಿಮ್ಮ ಕಾರ್ಯವು ಮಂದಗತಿಯಲ್ಲಿ ಸಾಗುವುದು. ಯಂತ್ರಜ್ಞರು ಇಂದು ಬಹಳ ಒತ್ತಡದಿಂದ ಇರುವರು. ಸ್ವಲ್ಪ ಮಾನಸಿಕ‌ ಆಲಸ್ಯವು ಇರುವುದು. ಗೊಂದಲವನ್ನು ಇನ್ನೊಬ್ಬರ ಬಳಿ ಹೇಳಿ. ಪರಿಹಾರವನ್ನು ಕಂಡುಕೊಳ್ಳಬಹುದು. ನಿಮ್ಮ ಜಾಣ್ಮೆಯಿಂದ ನಿಮ್ಮ‌ ಸಂಸ್ಥೆಯು ಹೆಚ್ಚಿನ ಯಶಸ್ಸನ್ನು ಗಳಿಸಬಹುದು. ನಿಮ್ಮ ಆಲೋಚನೆಗಳೇ ನಿಮ್ಮನ್ನು ನಿರೂಪಿಸುತ್ತವೆ. ಇಂದು ಸಂಗಾತಿಯ ನಡುವೆ ಭಿನ್ನಾಭಿಪ್ರಾಯಗಳು ಕಲಹವಾಗಿ ಪರಿಣಮಿಸೀತು. ಒಬ್ಬರಾದರೂ ತಟಸ್ಥರಾಗಿರುವುದು ವಿವಾದವು ಆಗದಂತೆ ನೋಡಿಕಳ್ಳಬಹುದು. ಯಾರೇ ಏನೇ ಹೇಳಿದರೂ ಕೇಳಿಕೊಳ್ಳುವ ತಾಳ್ಮೆ ಅಗತ್ಯವಾಗಿ ಬೇಕು. ನಿಮ್ಮ ಇಂದಿನ ಕಾರ್ಯದಿಂದ ಕಛೇರಿಯಲ್ಲಿ ನಿರೀಕ್ಷೆ ಮೀರಿ ಪ್ರಶಂಸೆ ಸಿಗುವುದು.

ಕುಂಭ ರಾಶಿ :

ವೈದ್ಯ ವೃತ್ತಿಯವರಿಗೆ ಅಪವಾದವು ಬರಬಹುದು. ಸಾಲಗಾರರಿಂದ ನಿಮ್ಮ ಮಾನಸಿಕ ಸ್ಥಿತಿಯು ಕೆಡಬಹುದು. ಯಾರದೋ ತಪ್ಪಿಗೆ ನೀವು ತಲೆಕೊಡಬೇಕಾದೀತು. ವಿವಾಹಕ್ಕೆ ಸಂಬಂಧಿಸಿದ ದೋಷಗಳನ್ನು ದೈವಜ್ಞರ ಬಳಿ ಕೇಳಿ ಸರಿಪಡಿಸಿಕೊಳ್ಳಿ. ಊಹಾಪೋಹಗಳಿಗೆ ಕಿವಿಗೊಡದೇ ನಿಮ್ಮ ಕಾರ್ಯದಲ್ಲಿ ಮುಂದುವರಿಯಿರಿ. ನೀವು ಇಂದು ಮಕ್ಕಳ ಜೊತೆ ಹೆಚ್ಚಿನ ಸಮಯವನ್ನು ಕಳೆಯುವಿರಿ. ಸಿಗಬೇಕಾದ ಲಾಭದಿಂದ ವಂಚಿತರಾಗಲಿದ್ದೀರಿ. ಅನಪೇಕ್ಷಿತ ವಿಚಾರದಲ್ಲಿ ಹೆಚ್ಚು ಮನಸ್ಸು ಇರುವುದು. ಉಸಿರಾಟ ತೊಂದರೆಯು ಸ್ವಲ್ಪ ಕಾಣಿಸಿಕೊಳ್ಳಬಹುದು. ನೆರೆಹೊರೆಯ ವಿಚಾರದಲ್ಲಿ ಅಸಮಾಧಾನ ಇರಲಿದೆ. ದಾಂಪತ್ಯದಲ್ಲಿನ ವಿರಸದಿಂದ ಮಾನಸಿಕ ಸ್ಥಿತಿ ತಪ್ಪಬಹುದು.

ಇದನ್ನೂ ಓದಿ: ನಿಮ್ಮ ರಾಶಿಗನುಗುಣವಾಗಿ ಜನವರಿ 4ರಿಂದ 10ರ ವರೆಗಿನ ಉದ್ಯೋಗ ಭವಿಷ್ಯ ತಿಳಿಯಿರಿ

ಮೀನ ರಾಶಿ :

ಯಾವುದೋ ಆಲೋಚನೆಯಲ್ಲಿ ನಿಮ್ಮ ಮನಸ್ಸು ಇರುವುದು. ಹೆಚ್ಚಿನ ಸೌಕರ್ಯದಿಂದ ನೀವು ಸೋಮಾರಿಯಾಗುವಿರಿ. ಕೇಳಿದವರಿಗೆ ನಿಮ್ಮ‌ ಸಹಾಯವು ಸಿಗಲಿದೆ.‌ ಕೇಳಿದ್ದಕ್ಕೆ ಮಾತ್ರ ನಿಮ್ಮ ಉತ್ತರವಿರಲಿ. ಕಳೆದ ಕೆಟ್ಟ ಕಾಲವನ್ನು‌ ನೆನಪಿಸಿಕೊಳ್ಳುವಿರಿ. ಉದ್ಯೋಗದಲ್ಲಿ ನಿಮ್ಮ ಕೇಂದ್ರವಾಗಿ ಇರಿಸಿಕೊಂಡು ಮಾತನಾಡುವರು. ಸಹೋದ್ಯೋಗಿಗಳ ಮಾತಿನ ಬಗ್ಗೆ ಅಧಿಕವಾಗಿ ಪ್ರತಿಕ್ರಿಯೆ ಬೇಡ. ನೌಕರರ ಮೇಲೆ ನಿಮ್ಮದೊಂದು ಲಕ್ಷ್ಯ ಇರಬೇಕಾಗುವುದು. ಏಕಾಗ್ರತೆಯು ಭಂಗವಾಗಲು ಅನೇಕ ಕಾರಣಗಳು ಇರಲಿವೆ. ಇಂದಿನ ಕಾರ್ಯವನ್ನು ಮುಂದೂಡುವುದು ಬೇಡ. ನಿಮ್ಮ ಗುಣಗಳನ್ನು ಇತರರು ಆಡಿಕೊಳ್ಳಬಹುದು.

-ಲೋಹಿತ ಹೆಬ್ಬಾರ್ – 8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯ ರಾಜಕಾರಣಕ್ಕೆ ಪ್ರತಾಪ್ ಸಿಂಹ ಅಧಿಕೃತ ಎಂಟ್ರಿ: ಕ್ಷೇತ್ರ ಯಾವುದು ಗೊತ್ತಾ? – Kannada News | BJP former MP Pratap simha enters Karnataka State politics And He Plan Contest from chamaraja assembly constituency in 2028 Poll

ಮೈಸೂರು, (ಜನವರಿ 05): ಪತ್ರಕರ್ತರಾಗಿದ್ದ ಪ್ರತಾಪ್ ಸಿಂಹ (Pratap Simha) ಮೊದಲ ಹೆಜ್ಜೆಯಲ್ಲೇ ಸಂಸದರಾಗಿ ರಾಜಕೀಯ ಪ್ರವೇಶ ಮಾಡಿದ್ದು, ಎರಡು ಬಾರಿ ಮೈಸೂರು-ಕೊಡಗು ಸಂಸದರಾಗಿದ್ದಾರೆ. ಆದ್ರೆ, ಪ್ರತಾಪ್ ಸಿಂಹಗೆ 2024 ಲೋಕಸಭಾ ಟಿಕೆಟ್ ಕೈತಪ್ಪಿತ್ತು.ಇದರೊಂದಿಗೆ ಹ್ಯಾಟ್ರಿಕ್ ಕನಸು  ನುಚ್ಚುನೂರಾಗಿತ್ತು. ಆದರೆ ಇದೀಗ ಪ್ರತಾಪ್ ಸಿಂಹ ರಾಷ್ಟ್ರ ರಾಜಕಾರಣ ಬಿಟ್ಟು ರಾಜ್ಯ ರಾಜಕಾರಣದತ್ತ (Karnataka State politics) ಹೆಜ್ಜೆ ಇಟ್ಟಿದ್ದಾರೆ. ಹೌದು…ಮೈಸೂರಿನಲ್ಲಿಂದು ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ. ಅಲ್ಲದೇ ತಮಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸುವ ಒಲವಿದೆ ಎಂಬ ಕುರಿತೂ ಸಹ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈ ಮೂಲಕ ಅವರ ಮುಂದಿನ ರಾಜಕೀಯ ಹಾದಿ ಕುರಿತು ಇದ್ದ ಕುತೂಹಲಕ್ಕೆ ತೆರೆ ಬಿದ್ದಿದೆ.

ಮುಂದಿನ ರಾಜಕೀಯ ಹೆಜ್ಜೆ ಬಗ್ಗೆ  ಸಿಂಹ ಮಾತು

ಪ್ರತಾಪ್ ಸಿಂಹ ಸ್ನೇಹ ಬಳಗದ ವತಿಯಿಂದ ಚಾಮರಾಜ ವಿಧಾನಸಭಾ ಕ್ಷೇತ್ರದ ಗ್ರೀನ್ ಹೆರಿಟೇಜ್ ಹೋಟೆಲ್‌ನಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರತಾಪ್ ಸಿಂಹ ಅವರು, ಸ್ನೇಹ ಬಳಗದ 2026ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ಈ ವೇಳೆ ಬಳ್ಳಾರಿ ಗಲಭೆ, ಕೋಗಿಲು ಒತ್ತುವರಿ ತೆರವು ಬಗ್ಗೆ ಮಾತನಾಡಿದರು. ಅಲ್ಲದೇ ತಮ್ಮ ರಾಜಕೀಯದ ಮುಂದಿನ ನಡೆ ಬಗ್ಗೆ ಸಹ ಮಹತ್ವದ ಸುಳಿವು ಕೊಟ್ಟಿದ್ದಾರೆ. ರಾಜ್ಯ ರಾಜಕಾರಣಕ್ಕೆ ಯಾವಾಗ ಬರ್ತೀರಿ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, ನಾನು ಈ ಹಿಂದೆಯೇ ಹಲವು ಬಾರಿ ಹೇಳಿದ್ದೇನೆ. ಕೇಂದ್ರಕ್ಕೆ ಹೋಗಿಲ್ಲ ಎಂದರೆ, ರಾಜ್ಯದಲ್ಲಿ ಇರಲೇಬೇಕಲ್ಲವೇ? ಎಂದಿದ್ದಾರೆ. ಈ ಮೂಲಕ ಕರ್ನಾಟಕ ರಾಜಕೀಯ ಎಂಟ್ರಿ ಬಗ್ಗೆ ತಿಳಿಸಿದ್ದಾರೆ.

ಇದನ್ನೂ ನೋಡಿ: Mysuru: ಚುನಾವಣಾ ರಾಜಕೀಯಕ್ಕೆ ರಾಮದಾಸ್​​ ನಿವೃತ್ತಿ: ಕಾರಣ ಬಿಚ್ಚಿಟ್ಟ ಮಾಜಿ ಸಚಿವ

ಚಾಮರಾಜ ಕ್ಷೇತ್ರ ಆಯ್ಕೆ ಯಾಕೆ?

ಇನ್ನು ಚಾಮರಾಜ ವಿಧಾನಸಭಾ ಕ್ಷೇತ್ರವನ್ನೇ ಏಕೆ ಆಯ್ಕೆ ಮಾಡಿಕೊಂಡಿದ್ದೀರಿ ಎಂದು ಮಾಧ್ಯಮದವರು ಕೇಳಿದ ಪ್ರಶ್ನಿಗೆ ಉತ್ತರಿಸಿದ ಪ್ರತಾಪ್ ಸಿಂಹ, ಚಾಮರಾಜ ಕ್ಷೇತ್ರ ಹಣದ ಪ್ಯಾಕೇಟ್ ಕೊಟ್ಟು ಗೆಲ್ಲುವ ಕ್ಷೇತ್ರ ಅಲ್ಲ. ಇಲ್ಲಿಯ ಮತದಾರರು ಕೆಲಸ ನೋಡಿ ಪ್ರೀತಿ ತೋರಿಸುವ ಜನ. ಒಕ್ಕಲಿಗ ಲೆಕ್ಕದಲ್ಲೇ ಈ ಕ್ಷೇತ್ರ ನೋಡುತ್ತಿಲ್ಲ. ಇಲ್ಲಿ ಎಲ್ಲ ರೀತಿಯ ವರ್ಗದ ಜನರಿದ್ದಾರೆ. ಪ್ರಜ್ಞಾವಂತ ಬುದ್ಧಿವಂತರಿದ್ದಾರೆ. ಹೀಗಾಗಿ ಸಹಜವಾಗಿ ನನ್ನ ಆಯ್ಕೆಯಾಗಿದೆ ಎಂದು ಸ್ಪಷ್ಟಪಡಿಸಿದರು.

ಸ್ಪರ್ಧೆ ಮಾಡುವ ವಿಧಾನಸಭಾ ಕ್ಷೇತ್ರ ಯಾವುದು?

ಇನ್ನು ಇಲ್ಲಿರುವ ನಮ್ಮ ಹಿತೈಷಿಗಳು ಎಲ್ಲರೂ ಚಾಮರಾಜ ಕ್ಷೇತ್ರದವರೇ ಆಗಿದ್ದಾರೆ. ಸದ್ಯ ಇಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಆದರೆ, ಶಂಕರಲಿಂಗೇಗೌಡ ಅವರಂತಹ ಜನಪರ ವ್ಯಕ್ತಿ, ಸಮಾಜದ ಬಗ್ಗೆ ಕಾಳಜಿ ಹೊಂದಿದ್ದ ನಾಯಕನನ್ನು ಸತತವಾಗಿ 4 ಸಾರಿ ಗೆಲ್ಲಿಸಿರುವ ಕ್ಷೇತ್ರ (ಚಾಮರಾಜ) ಇದಾಗಿದೆ. ಒಳ್ಳೆಯತನಕ್ಕೆ ಬೆಲೆ ಕೊಡುವ, ಮಣೆ ಹಾಕುವ ಕ್ಷೇತ್ರ ಇದು. ಹೀಗಾಗಿ ಸಹಜವಾಗಿಯೇ ಈ ಬಗ್ಗೆ ಯೋಜನೆ ಮಾಡಿದ್ದೇನೆ. ನಮ್ಮ ಕಾರ್ಯಕರ್ತರು, ಹಿತೈಷಿಗಳ ಅಪೇಕ್ಷೆಯೂ ಇದೇ ಆಗಿದೆ. ಎಲ್ಲಾ ಸಾಧಕ, ಬಾಧಕಗಳನ್ನು ಯೋಚನೆ ಮಾಡಿ, ನಾನು ಕೂಡ ಚುನಾವಣೆಗೆ ಸಿದ್ಧತೆ ಆರಂಭಿಸುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ 2028ರ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ.

ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಆ್ಯಕ್ಟೀವ್

ಈಗಾಗಲೇ ಪ್ರತಾಪ್ ಸಿಂಹ ಅವರು ಕೆಲ ತಿಂಗಳುಗಳಿಂದ ಚಾಮರಾಜ ಕ್ಷೇತ್ರದಲ್ಲಿ ಸದ್ದಿಲ್ಲದೇ ಕಾರ್ಯಚಟುವಟಿಕೆಗಳನ್ನು ಆರಂಭಿಸಿದ್ದಾರೆ. ಕ್ಷೇತ್ರದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಅಲ್ಲದೇ ಕ್ಷೇತ್ರದ ಸಭೆ ಸಮಾರಂಭಕ್ಕೂ ಹಾಜರಾಗುತ್ತಿದ್ದಾರೆ. ಮತ್ತೊಂದು ಹೆಜ್ಜೆ ಮುಂದೆ ಹೋಗಿ ಕ್ಷೇತ್ರದ ಮುಖಂಡರ ಕಟುಂಬಸ್ಥರ ಜನ್ಮದಿನಕ್ಕೂ ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಯಶ ಕೋರುವ ಮೂಲಕ ಗಮನಸೆಳೆಯುತ್ತಿದ್ದಾರೆ.

ಚಾಮರಾಜ ಕ್ಷೇತ್ರದ ರಿಸಲ್ಟ್​

ಇನ್ನು ಚಾಮರಾಜ ವಿಧಾನಸಭಾ ಕ್ಷೇತ್ರದ ಹಿಂದಿನ ಫಲಿತಾಂಶವನ್ನು ನೋಡುವುದಾದರೆ 2023ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಎಲ್ ನಾಗೇಂದ್ರ ಅವರು ಕಾಂಗ್ರೆಸ್​​ನ ಕೆ, ಹರೀಶ್ ಗೌಡ ಎದುರು ಕೇವಲ 4094 ಮತಗಳ ಅಂತರದಿಂದ ಸೋಲು ಕಂಡಿದ್ದರು. ಹರೀಶ್ ಗೌಡ 72,931 ಮತಗಳು ಪಡೆದುಕೊಂಡಿದ್ದರೆ, ನಾಗೇಂದ್ರ 68,837 ಮತ ಪಡೆಯುವ ಮೂಲಕ ಭಾರೀ ಪೈಪೋಟಿ ನೀಡಿದ್ದರು. ಇನ್ನು 2018ರ ಚುನಾವಣೆಯಲ್ಲಿ ಇದೇ ನಾಗೇಂದ್ರ ಅವರು ಕಾಂಗ್ರೆಸ್​​​ನ ವಾಸು ಎದುರು ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇನ್ನು 2013ರ ಚುನಾವಣೆಯಲ್ಲಿ ನಾಗೇಂದ್ರ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು.

ಒಟ್ಟಿನಲ್ಲಿ ಪ್ರತಾಪ್ ಸಿಂಹ ಹತ್ತು ವರ್ಷಗಳ ಕಾಲ ರಾಷ್ಟ್ರ ರಾಜಕಾರಣ ಮಾಡಿ ಇದೀಗ ರಾಜ್ಯ ರಾಜಕಾರಣಕ್ಕೆ ಪ್ರವೇಶ ಮಾಡುತ್ತಿದ್ದು, ಭಾರೀ ಸಂಚಲನ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬಿಗ್ ಬಾಸ್ ಕನ್ನಡ: ಧನುಷ್ ಬಿಟ್ಟು ಇಡೀ ಮನೆ ನಾಮಿನೇಟ್; ಗಿಲ್ಲಿಗೆ ದೊಡ್ಡ ಶಾಕ್ – Kannada News | Gilli Nata Ashwini Gowda and others nominated in Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಧ್ರುವಂತ್, ರಾಶಿಕಾ ಶೆಟ್ಟಿ, ಅಶ್ವಿನಿ ಗೌಡ, ಗಿಲ್ಲಿ ನಟ, ಕಾವ್ಯಾ ಶೈವ, ಧನುಷ್, ರಕ್ಷಿತಾ ಶೆಟ್ಟಿ, ಮ್ಯಾಟೆಂಟ್ ರಘು ಅವರು ಕೊನೇ ಹಂತದ ತನಕ ಬಂದಿದ್ದಾರೆ. ಈ ಸೀಸನ್​​ನ ಫಿನಾಲೆ ಶೀಘ್ರದಲ್ಲೇ ಬರಲಿದೆ. ಕೊನೇ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಇರುವುದು ಕೇವಲ 8 ಜನರು ಆದ್ದರಿಂದ ಅವರ ನಡುವೆಯೇ ಜಗಳ ಜೋರಾಗಿದೆ. ಧನುಷ್ ಅವರು ಕ್ಯಾಪ್ಟನ್ ಆದ್ದರಿಂದ ನಾಮಿನೇಷನ್​​ನಿಂದ ಸೇಫ್ ಆಗಿದ್ದಾರೆ. ಇನ್ನುಳಿದ ಎಲ್ಲರೂ ಈ ವಾರ ನಾಮಿನೇಟ್ ಆಗಿದ್ದಾರೆ. ಕೇವಲ ಒಂದೇ ವೋಟ್​​ನಿಂದ ಗಿಲ್ಲಿ ನಟ (Gilli Nata) ಕೂಡ ನಾಮಿನೇಟ್ ಆಗಿದ್ದಾರೆ. ಹಾಗಾಗಿ ಅವರಿಗೆ ಶಾಕ್ ಆಗಿದೆ.

ಈ ವಾರ ಅಶ್ವಿನಿ ಗೌಡ ಮಾತ್ರವೇ ಗಿಲ್ಲಿ ನಟ ಅವರನ್ನು ನಾಮಿನೇಟ್ ಮಾಡಿದರು. ಒಬ್ಬರೇ ನಾಮಿನೇಟ್ ಮಾಡಿದ್ದರಿಂದ ತಾವು ಈ ವಾರ ನಾಮಿನೇಷನ್​​ನಿಂದ ಪಾರಾಗಬಹುದು ಎಂದು ಗಿಲ್ಲಿ ನಟ ಅವರು ಭಾವಿಸಿದ್ದರು. ಆದರೆ ಅವರು ಕೂಡ ನಾಮಿನೇಟ್ ಆಗಿದ್ದಾರೆ. ವೀಕ್ಷಕರ ಬೆಂಬಲದಿಂದ ತಾನು ಖಂಡಿತಾ ಸೇಫ್ ಆಗುತ್ತೇನೆ ಎಂಬ ಆತ್ಮವಿಶ್ವಾಸ ಕೂಡ ಅವರಿಗೆ ಇದೆ.

ಬಿಗ್ ಬಾಸ್ ಆಟದಲ್ಲಿ ನೂರು ದಿನಗಳು ಕಳೆದಿವೆ. ಇಲ್ಲಿಯ ತನಕ ಬಿಗ್ ಬಾಸ್ ಮನೆಯಲ್ಲಿ ಉಳಿದುಕೊಳ್ಳುವುದು ಎಂದರೆ ತಮಾಷೆಯ ವಿಷಯ ಅಲ್ಲ. ಹಲವು ಬಗೆಯ ವ್ಯಕ್ತಿತ್ವ ಇರುವ ಸ್ಪರ್ಧಿಗಳ ಜೊತೆ ಪೈಪೋಟಿ ನೀಡಬೇಕು. ಹಲವಾರು ಟಾಸ್ಕ್ ಗೆಲ್ಲಬೇಕು. ಆ ಎಲ್ಲ ಹಂತಗಳನ್ನು ದಾಟಿಕೊಂಡು ಈ 8 ಮಂದಿ ಸ್ಪರ್ಧಿಗಳು ಕೊನೇ ವಾರದ ನಾಮಿನೇಷನ್ ತನಕ ಬಂದಿದ್ದಾರೆ.

ಗಿಲ್ಲಿ ನಟ ಅವರು ಆರಂಭದಿಂದಲೂ ಒಂದೇ ರೀತಿಯ ಟ್ರ್ಯಾಕ್ ನಿಭಾಯಿಸುತ್ತಿದ್ದಾರೆ. ಅವರ ಆಟವನ್ನು ವೀಕ್ಷಕರು ಮೆಚ್ಚಿಕೊಂಡಿದ್ದಾರೆ. ಕ್ಯಾವ್ಯಾ ಶೈವ ಜೊತೆಗಿನ ಸ್ನೇಹದ ಕಾರಣದಿಂದ ಹಲವು ಬಾರಿ ಗಿಲ್ಲಿ ಅವರು ಟೀಕೆಗೆ ಒಳಗಾಗಿದ್ದಾರೆ. ಆದರೂ ಕೂಡ ಅವರು ಕಾವ್ಯಾನ ಬಿಟ್ಟುಕೊಟ್ಟಿಲ್ಲ. ಅಂತಿಮವಾಗಿ ಕಾವ್ಯಾ ವರ್ಸಸ್ ಗಿಲ್ಲಿ ಎಂಬ ವಾತಾವರಣ ನಿರ್ಮಾಣ ಆದರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ: ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ

ರಾಶಿಕಾ ಶೆಟ್ಟಿ ಮತ್ತು ರಕ್ಷಿತಾ ಶೆಟ್ಟಿ ನಡುವೆ ದೊಡ್ಡ ಜಗಳ ಆಗಿದೆ. ಇಬ್ಬರೂ ಕೂಡ ಕೈ-ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ. ಅದೇ ರೀತಿ ಮ್ಯೂಟೆಂಟ್ ರಘು ಮತ್ತು ಧ್ರುವಂತ್ ಕೂಡ ಜಗಳ ಮಾಡಿಕೊಂಡಿದ್ದಾರೆ. ಕೊನೇ ಹಂತದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಎಲ್ಲರೂ ಅಗ್ರೆಸಿವ್ ಆಗಿ ನಡೆದುಕೊಳ್ಳುತ್ತಿದ್ದಾರೆ. ಇದೆಲ್ಲದರ ನಡುವೆ ಯಾರು ವಿನ್ ಆಗುತ್ತಾರೆ ಎಂಬುದನ್ನು ನೋಡಲು ವೀಕ್ಷಕರು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದುಬೈ ಮಾದರಿಯ ಡ್ರ್ಯಾಗನ್ ಬೋಟಿಂಗ್​​ ಲೋಕಾರ್ಪಣೆ: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಕೋಬೇಡಿ

ಮೈಸೂರು, (ಜನವರಿ 05): ದಸರಾದ ಪ್ರಮುಖ ಆಕರ್ಷಣೆ (Attraction) ಜಂಬೂಸವಾರಿಯಾದರೆ, ದಸರಾ ನಂತರವೂ ಮೈಸೂರಿಗೆ ಪ್ರವಾಸಿಗರನ್ನು (Tourist) ಸೆಳೆಯುವ ಹಾಟ್ ಫೇವರಿಟ್ ಮೈಸೂರಿನ (Mysuru) ಕರ್ನಾಟಕ ವಸ್ತು ಪ್ರದರ್ಶನ. ಇದೀಗ ಪ್ರವಾಸಿಗರನ್ನು ದೊಡ್ಡ ಮಟ್ಟದಲ್ಲಿ ಆಕರ್ಷಿಸಲು ‘ದುಬೈ ಮಾಡೆಲ್’ ಹೆಸರಲ್ಲಿ ಜಾರಿ ತಂದಿದ್ದ ಯೋಜನೆಗೆ ಚಾಲನೆ ಸಿಕ್ಕಿದೆ. ಹೌದು….ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನದಲ್ಲಿನ ರಾಜೀವ್‌ ಗಾಂಧಿ ಡ್ರ್ಯಾಗನ್‌ ಕೊಳ ದುಬೈ ಮಾದರಿಯಲ್ಲಿ ನಿರ್ಮಾಣವಾಗಿದ್ದು, ಸುಮಾರು 3.59 ಕೋಟಿ ವೆಚ್ಚದ ಡ್ರ್ಯಾಗನ್ ಬೋಟಿಂಗ್ ಇಂದು ಲೋಕಾರ್ಪಣೆಗೊಂಡಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಅವರು ಡ್ರ್ಯಾಗನ್ ಬೋಟ್ ಉದ್ಘಾಟನೆ ಮಾಡಿದರು. ಈ ಡ್ರ್ಯಾಗನ್ ಬೋಟಿಂಗ್ ಅನ್ನು ದುಬೈ ಮಾದರಿಯಲ್ಲಿ ನಿರ್ಮಾಣ ಮಾಡಲಾಗಿರುವುದು ವಿಶೇಷವಾಗಿದ್ದು, ಇದಕ್ಕೆ ರಾಜೀವ್ ಗಾಂಧಿ ಡ್ರ್ಯಾಗನ್‌ ಪಾಂಡ್ ಎಂದು ಹೆಸರಿಡಲಾಗಿದೆ. ಇನ್ನು ಮೈಸೂರು ಪ್ರವಾಸಕ್ಕೆ ಬರುವವರು ಇದನ್ನು ಮಿಸ್ ಮಾಡಿಕೊಳ್ಳಬೇಡಿ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

ಅನಿವಾರ್ಯವಲ್ಲದಿದ್ದರೆ ಇರಾನ್​​ಗೆ ಹೋಗಬೇಡಿ; ಸರ್ಕಾರದಿಂದ ಭಾರತೀಯರಿಗೆ ಸೂಚನೆ – Kannada News | India issued travel advisory to Indian citizens to avoid non essential travel to Iran

ನವದೆಹಲಿ, ಜನವರಿ 5: ಮುಂದಿನ ಸೂಚನೆ ಬರುವವರೆಗೂ ಇರಾನ್‌ಗೆ ಅನಿವಾರ್ಯವಲ್ಲದಿದ್ದರೆ ಪ್ರಯಾಣವನ್ನು ಮಾಡದಂತೆ ಭಾರತದ ವಿದೇಶಾಂಗ ಸಚಿವಾಲಯ ಭಾರತೀಯ ನಾಗರಿಕರಿಗೆ ಸೂಚಿಸಿದೆ. ಇರಾನ್‌ನಲ್ಲಿರುವ (Iran) ಭಾರತೀಯ ನಾಗರಿಕರು ಕೂಡ ಎಚ್ಚರಿಕೆಯಿಂದಿರಬೇಕು, ಪ್ರತಿಭಟನೆಗಳ ಪ್ರದೇಶಗಳಲ್ಲಿ ಓಡಾಡಬಾರದು, ಏನೇ ಸಮಸ್ಯೆಯಾದರೂ ಅಥವಾ ಎಲ್ಲ ರೀತಿಯ ಸೂಚನೆಗಳಿಗೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ವೆಬ್‌ಸೈಟ್ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಗಮನಿಸುತ್ತಿರಬೇಕು ಎಂದು ಸರ್ಕಾರ ಹೇಳಿದೆ.

ರೆಸಿಡೆಂಟ್ ವೀಸಾಗಳ ಮೇಲೆ ಇರಾನ್‌ನಲ್ಲಿ ವಾಸಿಸುತ್ತಿರುವ ಭಾರತೀಯ ಪ್ರಜೆಗಳು ಈಗಾಗಲೇ ಭಾರತೀಯ ರಾಯಭಾರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳದಿದ್ದರೆ ತಕ್ಷಣ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ. ವೆನೆಜುವೆಲಾ ಮೇಲೆ ಅಮೆರಿಕ ದಾಳಿ ನಡೆಸಿ ಅದರ ಅಧ್ಯಕ್ಷರನ್ನು ಜೈಲಿಗೆ ಹಾಕಿದ ನಂತರ ಭಾರತದ ಈ ಕ್ರಮವು ಜಾರಿಗೆ ಬಂದಿದೆ.

ಇದನ್ನೂ ಓದಿ: ತೈಲ ಸಂಪತ್ತಿನ ಮೇಲೆ ಕಣ್ಣಿಟ್ಟರಾ ಟ್ರಂಪ್? ವೆನೆಜುವೆಲಾ ಮೇಲಿನ ಅಮೆರಿಕ ದಾಳಿ ಕುರಿತ ಕುತೂಹಲಕಾರಿ ಸಂಗತಿ ಇಲ್ಲಿದೆ

ವೆನೆಜುವೆಲಾದ ಮೇಲೆ ಅಮೆರಿಕ ನಡೆಸಿದ ಆಕ್ರಮಣ ಮತ್ತು ಅದರ ಅಧ್ಯಕ್ಷರನ್ನು ಬಂಧಿಸಿರುವುದು ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿದೆ. ಅನೇಕ ದೇಶಗಳು ಅಮೆರಿಕದ ಈ ಕ್ರಮವನ್ನು ಖಂಡಿಸಿವೆ. ಯಾವುದೇ ದೇಶದ ಅಧ್ಯಕ್ಷರನ್ನು ಈ ರೀತಿ ಅಪಹರಿಸುವುದು ಸರಿಯಲ್ಲ ಎಂದು ಹೇಳಿದೆ.

ವೆನೆಜುವೆಲಾ ವಿರುದ್ಧದ ಕ್ರಮದ ನಂತರ ಇರಾನ್ ಅಮೆರಿಕದ ಎರಡನೇ ಗುರಿ ಎಂಬ ಚರ್ಚೆಗಳು ಪ್ರಾರಂಭವಾಗಿವೆ. ಟ್ರಂಪ್ ಇರಾನ್ ವಿರುದ್ಧವೂ ಕೆಲವು ಕಠಿಣ ಕ್ರಮ ಕೈಗೊಳ್ಳಬಹುದು ಎನ್ನಲಾಗಿದೆ. ಹೀಗಾಗಿ, ಟ್ರಂಪ್ ಇರಾನ್ ಮೇಲೆ ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಭಾರತ ಈ ಎಚ್ಚರಿಕೆ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:37 pm, Mon, 5 January 26

Source link

ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ಪ್ರಲ್ಹಾದ್​​ ಜೋಶಿ ಟಕ್ಕರ್

ಬೆಂಗಳೂರು, ಜನವರಿ 05: ಸಿದ್ದರಾಮಯ್ಯ ಅತಿ ಹೆಚ್ಚು ಅವಧಿಗೆ ಸಿಎಂ ಆಗಿದ್ದಾರೆಯೇ ಹೊರತು ಅಭಿವೃದ್ಧಿ, ಸಾಧನೆ ಏನೂ ಆಗಿಲ್ಲ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ್​​ ಜೋಶಿ ವಾಗ್ದಾಳಿ ಮಾಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ ಅರಸು ದಾಖಲೆ ಬ್ರೇಕ್ ಆಗಲಿರುವ ವಿಚಾರವಾಗಿ ಪ್ರಯತಿಕ್ರಿಯಿಸಿದ ಪ್ರಲ್ಹಾದ್​​ ಜೋಶಿ,  ಸಿದ್ದರಾಮಯ್ಯ ಸುದೀರ್ಘ ಅವಧಿಗೆ ಸಿಎಂ ಆಗಿರುವುದಕ್ಕೆ ಬೇಸರವಿಲ್ಲ. ರಾಜ್ಯದ ಜನರಿಗೆ ಇದು ಸಂತಸ ತರಬೇಕಿತ್ತು, ಆದರೆ ಜನರಿಗೆ ಸಂತಸವಾಗಿಲ್ಲ. ಸುದೀರ್ಘವಾಗಿ ಖಾಲಿ ಖಜಾನೆ ಮಾಡಿರುವುದೇ ಅವರ ಸಾಧನೆ. ಯಾವುದೇ ಅಭಿವೃದ್ಧಿ ಮಾಡದೆ ಸಿಎಂ ಆಗಿರುವುದೇ ಅವರ ಸಾಧನೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version