ಅದ್ಧೂರಿಯಾಗಿ ನಡೆದ ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ ಭಕ್ತರು – Kannada News | Meghalaya Governor Inaugurates Grand Gavisiddheshwara Rathotsava in Koppal

ಕೊಪ್ಪಳ, ಜನವರಿ 05: ಐತಿಹಾಸಿಕ ಗವಿಸಿದ್ದೇಶ್ವರ ಮಹಾರಥೋತ್ಸವವು ಭಕ್ತಿ ಮತ್ತು ಸಡಗರದಿಂದ ಜರುಗಿತು. ರಥೋತ್ಸವಕ್ಕೆ ಮೇಘಾಲಯದ ರಾಜ್ಯಪಾಲರಾದ ಸಿ.ಎಚ್. ವಿಜಯಶಂಕರ್ ಅವರು ಚಾಲನೆ ನೀಡಿದ್ದು, ಸುಮಾರು 5 ಲಕ್ಷ ಜನರು ಈ ವೇಳೆ ಭಾಗಿಯಾಗಿದ್ದರು. ರಾಜ್ಯದ ಅನೇಕ ಜನಪ್ರತಿನಿಧಿಗಳು  ಸ್ವ ಇಚ್ಛೆಯಿಂದ ಗವಿಸಿದ್ದೇಶ್ವರನ ಆಶೀರ್ವಾದ ಪಡೆಯಲು ಮತ್ತು ಈ ಪುಣ್ಯ ಕಾರ್ಯಕ್ಕೆ ಸಾಕ್ಷಿಯಾಗಲು ಆಗಮಿಸಿದ್ದರು. ಕೇಂದ್ರ ಸಚಿವ ವಿ.ಸೋಮಣ್ಣ, ಸಚಿವ ಶಿವರಾಜ ತಂಗಡಗಿ, ಸಂಸದರಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಸೇರಿ ಹಲವರು ಉಪಸ್ಥಿತರಿದ್ದರು. ಮತ್ತಷ್ಟು ವಿಡಿಯೋ…

Read More

ಚರ್ಮದ ಸಮಸ್ಯೆಗಳನ್ನು ನಿವಾರಿಸಬಲ್ಲುದು ಪತಂಜಲಿಯ ಈ ಆಯುರ್ವೇದ ತೈಲ – Kannada News | Patanjali Divya Kayakalp oil helps in overcoming various skin problems

ಇಂದಿನ ವೇಗದ ಜೀವನದಲ್ಲಿ ಚರ್ಮದ ಸಮಸ್ಯೆಗಳು (skin problems) ಹೆಚ್ಚಾಗಿ ಕಂಡುಬರುತ್ತಿವೆ. ಬದಲಾಗುತ್ತಿರುವ ಜೀವನಶೈಲಿ, ಮಾಲಿನ್ಯ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಒತ್ತಡವು ಚರ್ಮದ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ತುರಿಕೆ, ರಿಂಗ್‌ವರ್ಮ್, ಫಂಗಲ್ ಇನ್ಫೆಕ್ಷನ್, ಶುಷ್ಕತೆ ಮತ್ತು ಉರಿಯಂತಹ ಸಮಸ್ಯೆಗಳು ಅನೇಕ ಜನರನ್ನು ಕಾಡುತ್ತವೆ. ಪತಂಜಲಿಯ ದಿವ್ಯ ಕಾಯಕಲ್ಪ್ ತೈಲವು (Patanjali Divya Kayakalp oil) ಚರ್ಮದ ಸಮಸ್ಯೆಗಳಿಗೆ ಪ್ರಯೋಜನಕಾರಿಯಾಗಿದೆ. ಈ ಎಣ್ಣೆಯನ್ನು ನೈಸರ್ಗಿಕ ಪದಾರ್ಥಗಳಿಂದ ರೂಪಿಸಲಾಗಿದೆ. ದಿವ್ಯ ಕಾಯಕಲ್ಪ್ ತೈಲವನ್ನು ಪ್ರಾಥಮಿಕವಾಗಿ ಸಾಮಾನ್ಯ…

Read More

ಚಿಕ್ಕ ಮಕ್ಕಳಂತೆ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ – Kannada News | Section 144 imposed In humnabad Over BJP MLA Siddu Patil And Congress MLA Bhimrao Patil In KDP Meeting

ಬೀದರ್, (ಜನವರಿ 05): ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಇಂದು (ಜನವರಿ 05) ನಡೆದ ಜಿಲ್ಲಾಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ(ಕೆಡಿಪಿ) ಸಭೆಯಲ್ಲಿ ಹುಮನಾಬಾದ್ (humnabad) ಕ್ಷೇತ್ರದ ಬಿಜೆಪಿ ಶಾಸಕ ಸಿದ್ಧಲಿಂಗಪ್ಪ ಪಾಟೀಳ್ ಹಾಗೂ ಕಾಂಗ್ರೆಸ್ ವಿಧಾನಪತಿಷತ್ ಸದಸ್ಯ ಭೀಮರಾವ್ ಪಾಟೀಲ್ ಪರಸ್ಪರ ಕೈ ಕೈ ಮಿಲಾಯಿಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿಕೊಂಡಿರುವ ಘಟನೆ ನಡೆದಿದೆ. ಸಭೆ ನಡೆಯುತ್ತಿರುವ ವೇಳೆ ಮಾತನಾಡಿದ ಶಾಸಕ ಸಿದ್ದು ಪಾಟೀಲ್, ಹುಮ್ನಾಬಾದ್​​ನಲ್ಲಿ ಅರಣ್ಯ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಸಚಿವ ಈಶ್ವರ್​ ಖಂಡ್ರೆಗೆ ಹೇಳಿದ್ದಾರೆ. ಇದರಿಂದ…

Read More

ನದಿ ತಿರುವು ಯೋಜನೆಗಳಿಗೆ ವಿರೋಧ: ಜ. 11ರಂದು ಶಿರಸಿಯಲ್ಲಿ ಬೃಹತ್ ಸಮಾವೇಶ – Kannada News | Massive Protest Convention in Sirsi on Jan. 11 Against River Diversion Projects in Uttara Kannada

ಜ. 11ರಂದು ಬೃಹತ್​​ ಪ್ರತಿಭಟನೆ ಕಾರವಾರ, ಜನವರಿ 05: ಉತ್ತರ ಕನ್ನಡ ಜಿಲ್ಲೆಯ ಬೇಡ್ತಿ ಹಾಗೂ ಅಘನಾಶಿನಿ ನದಿತಿರುವು ಯೋಜನೆಗಳನ್ನು ಕೈಬಿಟ್ಟು ಪಶ್ಚಿಮಘಟ್ಟ ಸಂರಕ್ಷಿಸಲು ಆಗ್ರಹಿಸಿ ಜ. 11ರಂದು ಬೃಹತ್​​ ಜನ ಸಮಾವೇಶವನ್ನು ಶಿರಸಿಯಲ್ಲಿ ಆಯೋಜಿಸಲಾಗಿದೆ. ಸ್ವರ್ಣವಲ್ಲೀ ಶ್ರೀಗಳ ನೇತೃತ್ವದ ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯ ಅಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ವಿಶೇಷ ಆಹ್ವಾನಿತರಾಗಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್​​ ಹೆಗ್ಡೆ ಭಾಗಿಯಾಗಲಿದ್ದಾರೆ. ಪರಿಸರ ಅರ್ಥಶಾಸ್ತ್ರಜ್ಞ ಪ್ರೋ. ಬಿ.ಎಂ. ಕುಮಾರಸ್ವಾಮಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲಿದ್ದಾರೆ. ಸಂತರ ಸಾನ್ನಿಧ್ಯ…

Read More

ಹೆತ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯವೆಸಗಿ ಗರ್ಭಿಣಿ ಮಾಡಿದ ಅಪ್ಪನಿಗೆ ಗಲ್ಲು ಶಿಕ್ಷೆ! – Kannada News | Tamil Nadu Tirunelveli POCSO Court orders Death Penalty To Father For Impregnating Daughter

ತಿರುನಲ್ವೇಲಿ, ಜನವರಿ 5: ಹೆಣ್ಣುಮಕ್ಕಳ ಪಾಲಿಗೆ ತಮ್ಮ ತಂದೆಯೇ ಮೊದಲ ಹೀರೋ. ಆದರೆ, ತಮಿಳುನಾಡಿನಲ್ಲಿ 14 ವರ್ಷದ ಬಾಲಕಿಯೊಬ್ಬಳ ಪಾಲಿಗೆ ಆಕೆಯ ಅಪ್ಪನೇ ವಿಲನ್ ಆಗಿದ್ದಾನೆ. ತಿರುನಲ್ವೇಲಿ ಜಿಲ್ಲೆಯ ವಲಿಯೂರು ಬಳಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆಯೇ ಗರ್ಭಿಣಿಯನ್ನಾಗಿ (Pregnant) ಮಾಡಿದ್ದಾನೆ. ಆಕೆ ಮಗುವನ್ನೂ ಹೆತ್ತಿದ್ದಾಳೆ. ಡಿಎನ್‌ಎ ಪರೀಕ್ಷೆಯಲ್ಲಿ ಆಕೆಯ ಮಗುವಿಗೆ ಆಕೆಯ ಅಪ್ಪನೇ ತಂದೆ ಎಂಬುದು ದೃಢಪಟ್ಟ ನಂತರ ಪೋಕ್ಸೊ ನ್ಯಾಯಾಲಯವು ಆ ಬಾಲಕಿಯ ತಂದೆಗೆ ಮರಣದಂಡನೆ ವಿಧಿಸಿದೆ. ತಿರುನೆಲ್ವೇಲಿ ಜಿಲ್ಲೆಯ ಪಣಗುಡಿ ಪ್ರದೇಶದ ದಿನಗೂಲಿ…

Read More

ರಾಯಚೂರು: ಸಿಎಂ ಚಾಲನೆ ನೀಡಿದ್ದ ಅಂಬಾದೇವಿ ಜಾತ್ರೆಯಲ್ಲಿ ಗಾಂಜಾ ಘಾಟು; ಇಬ್ಬರು ಅರೆಸ್ಟ್ – Kannada News | Raichur Amba Math Ganja Bust: Two Arrested After TV9 Report Exposes Sale

ರಾಯಚೂರು, ಜನವರಿ 05: ಗಡಿ ಜಿಲ್ಲೆ ರಾಯಚೂರಿನ (Raichur) ಅಂಬಾದೇವಿ ಜಾತ್ರಾ ಮಹೋತ್ಸವದಲ್ಲಿ ಸಾಧುಗಳ ಗಾಂಜಾ ಘಾಟಿನ ಬಗ್ಗೆ ಟಿವಿ9 ವರದಿ ಮಾಡಿತ್ತು. ಈ ಬೆನ್ನಲ್ಲೇ ಅಲರ್ಟ್ ಆದ ಪೊಲೀಸರು ಇಬ್ಬರು ಗಾಂಜಾ ಮಾರಾಟಗಾರರನ್ನು ಅರೆಸ್ಟ್ (Arrest) ​ ಮಾಡಿದ್ದಾರೆ. ಅಜಂ ಸೊಯೆಲ್ ಮತ್ತು ಮಹ್ಮದ್ ಶಾಬಾಜ್ ಬಂಧಿತ ಆರೋಪಿಗಳು. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 400 ವರ್ಷಗಳ ಇತಿಹಾಸವಿರುವ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸೋಮಲಾಪುರ ಗ್ರಾಮದಲ್ಲಿರುವ ಅಂಬಾದೇವಿ ಜಾತ್ರಾ ಮಹೋತ್ಸವದಲ್ಲಿ ಗಾಂಜಾ ಘಾಟಿನ…

Read More

ಬಾತ್‌ರೂಮ್‌ ಟ್ಯಾಪ್, ಕನ್ನಡಿಯ ಮೇಲಿನ ಹಠಮಾರಿ ಕಲೆಗಳನ್ನು ಹೋಗಲಾಡಿಸಲು ಇಲ್ಲಿದೆ ಸಿಂಪಲ್‌ ಸಲಹೆ – Kannada News | You can easily remove stains from taps and mirrors with the help of these home remedies

ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಬಾತ್‌ರೂಮ್‌ ಕ್ಲೀನ್‌ ಮಾಡುವುದು ಸಹ ಅತೀ ಮುಖ್ಯವಾಗಿದೆ. ಸ್ನಾನಗೃಹದ ಶುಚಿತ್ವವನ್ನು ಕಾಪಾಡದೇ ಇದ್ದರೆ ಅನೇಕ ರೋಗಗಳನ್ನು ಆಹ್ವಾನ ಮಾಡಿದಂತೆ. ಹಾಗಾಗಿ ಬಹುತೇಕರು ಪ್ರತಿನಿತ್ಯ ತಪ್ಪದೇ ಬಾತ್‌ರೂಮ್‌ ಕ್ಲೀನ್‌ ಮಾಡುತ್ತಾರೆ. ಆದ್ರೆ ಬಾತ್‌ರೂಮ್‌ನಲ್ಲಿರು ಟ್ಯಾಪ್‌ ಮತ್ತು ನಲ್ಲಿಯ ಸ್ವಚ್ಛತೆಗೆ ಗಮನವೇ ಕೊಡುವುದಿಲ್ಲ. ಅವುಗಳಲ್ಲಿ ಮೊಂಡತನದ ಕಲೆಗಳು (stains) ಹಾಗೆಯೇ ಉಳಿದು ಬಿಡುತ್ತವೆ. ಈ ಹಠಮಾರಿ ಕಲೆಗಳನ್ನು ಹೋಗಲಾಡಿಸುವುದು ಬಲು ಕಷ್ಟದ ಕೆಲಸ. ಹಾಗಾಗಿ ಇವುಗಳ ಸ್ವಚ್ಛಗೊಳಿಸಲು ಜನ ದುಬಾರಿ ಕ್ಲೀನರ್‌ಗಳ ಮೊರೆ ಹೋಗ್ತಾರೆ. ಆದರೆ…

Read More

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ತಪ್ಪನ್ನು ಮಾಡಲೇಬೇಡಿ! ಉಪಯೋಗಕ್ಕಿಂತ ಅಪಾಯಕಾರಿಯಾಗಬಹುದು ಎಚ್ಚರ – Kannada News | Winter Fire Safety: Protect Yourself

ಪ್ರಸ್ತುತ, ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ತೀವ್ರ ಚಳಿ (Winter) ಇದ್ದು ಈ ವಾತಾವರಣದಲ್ಲಿ ದೇಹವನ್ನು ರಕ್ಷಿಸಿಕೊಳ್ಳಲು, ಜನರು ವಿವಿಧ ರೀತಿಯ ಕ್ರಮಗಳನ್ನು ಅಳವಡಿಸಿಕೊಳ್ಳುವುದು ಸಹಜ. ಅವುಗಳಲ್ಲಿ ಬೆಂಕಿ ಕಾಯಿಸುವುದು ಕೂಡ ಒಂದು. ಇದು ಹಳ್ಳಿ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಸಣ್ಣ ಸಣ್ಣ ಮನೆಗಳಲ್ಲಿ, ಜನರು ಬೆಚ್ಚಗಿರಲು ಜೊತೆಗೆ ತೀವ್ರ ಚಳಿಯಿಂದ ಮುಕ್ತಿ ಪಡೆಯಲು ಅಗ್ಗಿಷ್ಟಿಕೆ (Brazier) ಅಥವಾ ಅಂಗೀತಿಯ ಬಳಕೆ ಮಾಡುತ್ತಾರೆ. ಆದರೆ ಶೀತದಿಂದ ಬೆಚ್ಚಗಿರಲು ಬಳಸುವ ಅಗ್ಗಿಷ್ಟಿಕೆ ಅಥವಾ ಮನೆಗಳಲ್ಲಿ ಸೌದೆ ಒಲೆಗಳನ್ನು…

Read More

ಚಳಿಗಾಲದಲ್ಲಿ ಶ್ವಾಸಕೋಶವನ್ನ ಹೇಗೆ ಕಾಪಾಡಿಕೊಳ್ಳಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ – Kannada News | How to protect Healthy lungs during winter Session, here Is narayana hospital doctor Sagar Tips

ನಾವು ಸಾಮಾನ್ಯವಾಗಿ ಆರೋಗ್ಯ (Health) ಎಂದಾಗ ತೂಕ, ಕೂದಲಿನ ಆರೈಕೆ, ಚರ್ಮದ ರಕ್ಷಣೆ ಮತ್ತು ಜೀರ್ಣಕ್ರಿಯೆಯ ಬಗ್ಗೆ ಯೋಚಿಸುತ್ತೇವೆಯೇ ಹೊರತು ಅದಕ್ಕಿಂತ ಮುಂದೆ ಹೋಗುವುದಿಲ್ಲ. ನಮಗಾಗಿ ದಣಿವಿಲ್ಲದೆ ದುಡಿಯುವ ಶ್ವಾಸಕೋಶದ (lungs) ಬಗ್ಗೆ ಯೋಚಿಸಲು ನಾವು ಒಂದು ನಿಮಿಷವನ್ನೂ ಮೀಸಲಿಡುವುದಿಲ್ಲ. ಪ್ರತಿ ವರ್ಷ ನವೆಂಬರ್-ಡಿಸೆಂಬರ್ ತಿಂಗಳ ಚಳಿಗಾಲದ (Winter Session) ಆರಂಭದಲ್ಲಿ ನಮ್ಮ ಶ್ವಾಸಕೋಶಗಳು ಉಸಿರಾಟದ ತೊಂದರೆಗೆ ಸಿಲುಕುತ್ತವೆ. ಪಟಾಕಿಗಳ ಹೊಗೆ, ಕೃಷಿ ತ್ಯಾಜ್ಯ ಸುಡುವಿಕೆ, ಮದ್ಯಪಾನದ ಹೆಚ್ಚಳ, ತಾಪಮಾನದ ಏರುಪೇರು ಮತ್ತು ನಗರಗಳಲ್ಲಿ ಆಗುತ್ತಿರುವ ನಿರಂತರ…

Read More

2025ರಲ್ಲಿ 47 ಲಕ್ಷ ರೂ. ಖರ್ಚು ಮಾಡಿದ ಬೆಂಗಳೂರಿನ ದಂಪತಿ – Kannada News | Content Creators’ Annual Spending Goes Viral: Bengaluru Duo’s Rs 47 Lakh Budget

ಬೆಂಗಳೂರು, ಜ.5: ಬೆಂಗಳೂರು ಮೂಲದ ಕಂಟೆಂಟ್ ಕ್ರಿಯೇಟರ್ ದಂಪತಿ (Bengaluru couple expenses) ತಮ್ಮ ವರ್ಷದ ಖರ್ಚಿನ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರು ಹಂಚಿಕೊಂಡಿರುವ ವಾರ್ಷಿಕ ಖರ್ಚಿನ ಬಗ್ಗೆ ನೆಟ್ಟಿಗರನ್ನು ದಿಗ್ಭ್ರಮೆಗೊಳಿಸಿದೆ. ಪ್ರಕೃತಿ ಅರೋರಾ ಮತ್ತು ಆಶಿಶ್ ಕುಮಾರ್ ಅವರು ಕಳೆದ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಬಾಡಿಗೆ ಮತ್ತು ಪ್ರಯಾಣದಿಂದ ಹಿಡಿದು ಫಿಟ್‌ನೆಸ್ ಮತ್ತು ಶಾಪಿಂಗ್‌ವರೆಗೆ ಎಷ್ಟು ಖರ್ಚು ಮಾಡಿದ್ದಾರೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿರುವ ಇವರ ವಾರ್ಷಿಕ…

Read More