ಲವರ್ಗಾಗಿ ಪತಿಗೆ ಚಟ್ಟಕಟ್ಟಿದ್ದ ಪತ್ನಿ ಪೊಲೀಸ್ ಬಲೆಗೆ: ಅಪಘಾತವೆಂದು ಬಿಂಬಿಸಿ ಗಂಡನ ಶವದೆದುರು ಹೈಡ್ರಾಮಾ ಮಾಡಿದ್ದ ಮಹಿಳೆ
ದೇವನಹಳ್ಳಿ, ಫೆಬ್ರವರಿ 5: ಪ್ರಿಯಕರನಿಗಾಗಿ ಹೆಂಡತಿಯೇ ಗಂಡನನ್ನು ಹತ್ಯೆ ಮಾಡಿ ಅಪಘಾತವೆಂದು ಬಿಂಬಿಸಿ ನಾಟಕವಾಡಿದ್ದ ಪ್ರಕರಣವನ್ನು ಸೂಲಿಬೆಲೆ ಪೊಲೀಸರು ಬಯಲಿಗೆಳೆದಿದ್ದಾರೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆ ಹೊಸಕೋಟೆ ತಾಲೂಕಿನ ಸಿದ್ದೇನಹಳ್ಳಿ ಗ್ರಾಮದಲ್ಲಿ ಜನವರಿ 24ರಂದು ನಡೆದ ಕೊಲೆ ರಹಸ್ಯ ಕೊನೆಗೂ ಬಯಲಾಗಿದ್ದು, ಮಹಿಳೆ ಪುಷ್ಪಾ ಮತ್ತು ಆಕೆಯ ಪ್ರಿಯಕರ ದೇವರಾಜ್ನನ್ನು ಪೊಲೀಸರು ಬಂಧಿಸಿದ್ದಾರೆ. ಲವರ್ ದೇವರಾಜ್ಗಾಗಿ ಪುಷ್ಪಾ ತನ್ನ ಪತಿ ಅಶೋಕ್ (40) ಅನ್ನು ಸಂಚು ರೂಪಿಸಿ ಕೊಲೆ ಮಾಡಿದ್ದಳು. ಇದೀಗ ಆಘಾತಕಾರಿ ರಹಸ್ಯ ಬಯಲಾಗಿದ್ದು,…