Headlines

ಲವರ್​ಗಾಗಿ ಪತಿಗೆ ಚಟ್ಟಕಟ್ಟಿದ್ದ ಪತ್ನಿ ಪೊಲೀಸ್ ಬಲೆಗೆ: ಅಪಘಾತವೆಂದು ಬಿಂಬಿಸಿ ಗಂಡನ ಶವದೆದುರು ಹೈಡ್ರಾಮಾ ಮಾಡಿದ್ದ ಮಹಿಳೆ

ದೇವನಹಳ್ಳಿ, ಫೆಬ್ರವರಿ 5: ಪ್ರಿಯಕರನಿಗಾಗಿ ಹೆಂಡತಿಯೇ ಗಂಡನನ್ನು ಹತ್ಯೆ ಮಾಡಿ ಅಪಘಾತವೆಂದು ಬಿಂಬಿಸಿ ನಾಟಕವಾಡಿದ್ದ ಪ್ರಕರಣವನ್ನು ಸೂಲಿಬೆಲೆ ಪೊಲೀಸರು ಬಯಲಿಗೆಳೆದಿದ್ದಾರೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆ ಹೊಸಕೋಟೆ ತಾಲೂಕಿನ ಸಿದ್ದೇನಹಳ್ಳಿ ಗ್ರಾಮದಲ್ಲಿ ಜನವರಿ 24ರಂದು ನಡೆದ ಕೊಲೆ ರಹಸ್ಯ ಕೊನೆಗೂ ಬಯಲಾಗಿದ್ದು, ಮಹಿಳೆ ಪುಷ್ಪಾ ಮತ್ತು ಆಕೆಯ ಪ್ರಿಯಕರ ದೇವರಾಜ್​​ನನ್ನು ಪೊಲೀಸರು ಬಂಧಿಸಿದ್ದಾರೆ. ಲವರ್ ದೇವರಾಜ್​ಗಾಗಿ ಪುಷ್ಪಾ ತನ್ನ ಪತಿ ಅಶೋಕ್ (40) ಅನ್ನು ಸಂಚು ರೂಪಿಸಿ ಕೊಲೆ ಮಾಡಿದ್ದಳು. ಇದೀಗ ಆಘಾತಕಾರಿ ರಹಸ್ಯ ಬಯಲಾಗಿದ್ದು,…

Read More

ಈ ರಾಶಿಗೆ ಇಂದು ಮಹತ್ವದ ದಿನ: ಕುಜ ಗ್ರಹದ ಪ್ರವೇಶ – Kannada News | Astrological Predictions for All Zodiac Signs: May 11, 2026

ಬೆಂಗಳೂರು, ಮೇ.11: ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸದ ಕೃಷ್ಣ ಪಕ್ಷದ ನವಮಿ ತಿಥಿ ಮತ್ತು ಶತಭಿಷಾ ನಕ್ಷತ್ರದ ಈ ದಿನ, ಹಲವು ಪ್ರಮುಖ ಗ್ರಹಗಳ ಬದಲಾವಣೆಗಳು ಮತ್ತು ವಿಶೇಷ ಯೋಗಗಳು ಇವೆ. ಬೆಳಗ್ಗೆ 7:30 ರಿಂದ 9:05ರ ವರೆಗೆ ರಾಹುಕಾಲವಿದ್ದು, 9:05 ರಿಂದ 10:40ರ ವರೆಗೆ ಶುಭಕಾಲವಿದೆ. ಇಂದು ಕುಜ ಗ್ರಹವು ಮೀನ ರಾಶಿಯಿಂದ ಮೇಷ ರಾಶಿಗೆ ಪ್ರವೇಶಿಸುವುದು ಒಂದು ಮಹತ್ವದ ಘಟನೆ. ಸೂರ್ಯ ಮೇಷದಲ್ಲಿ, ಚಂದ್ರ ಕುಂಭ ರಾಶಿಯ ಶತಭಿಷಾ ನಕ್ಷತ್ರದಲ್ಲಿ ಸಂಚರಿಸುತ್ತಾನೆ. ಗೌರವಾಂಬುದೇಶ್ವರ…

Read More

ಸಿನಿಮಾ ನಿರ್ಮಾಣ ಪ್ರಾರಂಭಿಸಿದ್ದೇಕೆ? ಲಕ್ಷ್ಮಿ ಹೆಬ್ಬಾಳ್ಕರ್ ಕೊಟ್ಟರು ಉತ್ತರ – Kannada News | Lakshmi Hebbalkar started movie production with Anna from Mexico movie

ಲಕ್ಷ್ಮಿ ಹೆಬ್ಬಾಳ್ಕರ್ (lakshmi Hebbalkar) ಕರ್ನಾಟಕದ ಜನಪ್ರಿಯ ಮಹಿಳಾ ರಾಜಕಾರಣಿಗಳಲ್ಲಿ ಒಬ್ಬರು. ಪ್ರಸ್ತುತ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯೂ ಆಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಲವು ವರ್ಷಗಳಿಂದಲೂ ಸಕ್ರಿಯ ರಾಜಕೀಯದಲ್ಲಿದ್ದಾರೆ. ಇದೀಗ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿನಿಮಾ ನಿರ್ಮಾಪಕಿಯೂ ಆಗುತ್ತಿದ್ದಾರೆ. ಮೊಮ್ಮಗಳ ಹೆಸರಲ್ಲಿ ಸಿನಿಮಾ ನಿರ್ಮಾಣ ಪ್ರಾರಂಭಿಸಿರುವ ಲಕ್ಷ್ಮಿ ಹೆಬ್ಬಾಳ್ಕರ್ ನಿರ್ಮಾಣ ಸಂಸ್ಥೆಗೆ ಐರಾ ಫಿಲಮ್ಸ್ ಎಂದು ಹೆಸರಿಟ್ಟಿದ್ದಾರೆ. ನಿರ್ಮಾಪಕಿಯಾಗಿ ‘ಅಣ್ಣಾ ಫ್ರಂ ಮೆಕ್ಸಿಕೊ’ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮೊದಲ ಸಿನಿಮಾ ಆಗಿದ್ದು, ಇತ್ತೀಚೆಗಷ್ಟೆ…

Read More

ಲಾರ್ಡ್ ಮುರುಗನ್ ಕಥೆಯಲ್ಲಿ ಜೂನಿಯರ್ ಎನ್‌ಟಿಆರ್; ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ – Kannada News | Jr. NTR and Trivikram Team Up for Mythological Film; Anirudh Scores Music

ತೆಲುಗು ನಟ ನಟ ಜೂನಿಯರ್ ಎನ್‌ಟಿಆರ್ (JR NTR) ಸದ್ಯ ‘ಡ್ರ್ಯಾಗನ್’ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಈ ಸಿನಿಮಾ ಕೆಲಸಗಳು ನಡೆಯುವಾಗಲೇ ಜೂನಿಯರ್ ಎನ್​​ಟಿಆರ್ ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಸ್ಟಾರ್ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಒಂದು ಭಾರಿ ಬಜೆಟ್‌ನ ಪೌರಾಣಿಕ ಸಿನಿಮಾ ಮೂಡಿಬರಲಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಈ ಚಿತ್ರವನ್ನು ನಂದಮೂರಿ ಕಲ್ಯಾಣ್…

Read More

ಪ್ರವಾಸಿಗರ ಸುರಕ್ಷತೆಗೆ ಆದ್ಯತೆ: ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ; ಇಲ್ಲಿದೆ ಮಾಹಿತಿ – Kannada News | No Touching, Feeding or Bathing: New Safety Rules Issued for Karnataka Elephant Camps

ಸಾಂದರ್ಭಿಕ ಚಿತ್ರImage Credit source: captainscrown.com ಬೆಂಗಳೂರು, ಜೂನ್​​ 17: ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ನಿರ್ವಹಣಾ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗಾಗಿ ಕರ್ನಾಟಕ ಅರಣ್ಯ ಇಲಾಖೆ ಮೊದಲ ಬಾರಿಗೆ ಕರ್ನಾಟಕ ಆನೆ ಶಿಬಿರ ಸುರಕ್ಷತಾ ನಿಯಮಾವಳಿ (Karnataka Elephant Camp Safety Protocol) ಜಾರಿಗೊಳಿಸಿದೆ. ಇದರನ್ವಯ ಇನ್ನು ಮುಂದೆ ಪ್ರವಾಸಿಗರು ಆನೆಗಳನ್ನು ವೀಕ್ಷಿಸಲು ಕನಿಷ್ಠ 30 ಅಡಿ ಅಂತರ ಕಾಯ್ದುಕೊಳ್ಳಬೇಕು. ಆನೆಗಳಿಗೆ ಸ್ನಾನ ಮಾಡಿಸುವುದು, ಮುಟ್ಟುವುದು ಅಥವಾ ಆಹಾರ ನೀಡುವುದು ಸಂಪೂರ್ಣ ನಿಷೇಧವಾಗಿರಲಿದೆ….

Read More

Horoscope Today 9​​​​​th​​ March​: ಇಂದು ಈ ರಾಶಿಯವರಿಗೆ ಅಪಾಯಗಳಿಂದ ಮುಕ್ತಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 9​​​​​, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಷಷ್ಠಿ, ವಿಶಾಖ ನಕ್ಷತ್ರ, ವ್ಯಾಗತ ಯೋಗ ಮತ್ತು ಗಜ ಕರಣ ಇರತಕ್ಕಂತಹ ಈ ದಿನದ ರಾಹುಕಾಲ ಬೆಳಗಿನ 7 ಗಂಟೆ 59 ನಿಮಿಷದಿಂದ 9 ಗಂಟೆ 29 ನಿಮಿಷದವರೆಗೆ ಇರಲಿದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ…

Read More

‘ಜನ ನಾಯಗನ್’ vs ಸಿಬಿಎಫ್​​ಸಿ: ವಿಜಯ್​​ಗೆ ಬೆಂಬಲಿಸಿದ ಕಾಂಗ್ರೆಸ್: ಡಿಎಂಕೆ? – Kannada News | Jana Nayagan vs CBFC case: Congress extended support to Thalapathy Vijay

ರಾಜಕೀಯಕ್ಕೆ ಪ್ರವೇಶಿಸಿರುವ ದಳಪತಿ ವಿಜಯ್ (Thalapathy Vijay), ಸಿನಿಮಾಗಳಿಂದ ದೂರಾಗುವುದಾಗಿ ಹೇಳಿದ್ದು, ‘ಜನ ನಾಯಗನ್’ ತಮ್ಮ ಕೊನೆಯ ಸಿನಿಮಾ ಎಂದಿದ್ದರು. ಸಿನಿಮಾ ನಾಳೆ (ಜನವರಿ 09) ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಿಲ್ಲ. ಇದೀಗ ಪ್ರಕರಣ ನ್ಯಾಯಾಲಯದಲ್ಲಿದೆ. ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನಿರಾಕರಿಸಿರುವುದು ಕೇಂದ್ರ ಸರ್ಕಾರದ ರಾಜಕೀಯ ಪ್ರೇರಿತ ನಡೆ ಎನ್ನಲಾಗುತ್ತಿದೆ. ಇದೀಗ ಕಾಂಗ್ರೆಸ್ ಪಕ್ಷವು ಈ ವಿಷಯದಲ್ಲಿ ವಿಜಯ್​​ಗೆ ಬೆಂಬಲ ಘೋಷಣೆ ಮಾಡಿದೆ. ‘ಜನ ನಾಯಗನ್’ ಸಿನಿಮಾಕ್ಕೆ ಪ್ರಮಾಣ ಪತ್ರ ನಿರಾಕರಿಸಿರುವ…

Read More

‘ಜೆಸಿ’ ಸಿನಿಮಾ ವಿಮರ್ಶೆ: ಮಾಸ್ ಮಸಾಲ ಜೊತೆ ಕಲಸುಮೇಲೋಗರ – Kannada News | JC Movie Review: Dolly Dhananjay backed Surya Prakhyath Kannada action thriller’s brutal mass masala

ಕೊಲೆ, ರಕ್ತಪಾತಗಳ ಸಿನಿಮಾಗಳು ಸಾಕಷ್ಟು ಬಂದು ಹೋಗಿವೆ. ಇದಕ್ಕೆ ದೊಡ್ಡದಾದ ಅಭಿಮಾನಿ ಬಳಗವೇ ಇದೆ. ಸೂರ್ಯ ಪ್ರಖ್ಯಾತ್ ನಟನೆಯ ‘ಜೆಸಿ: ದಿ ಯೂನಿವರ್ಸಿಟಿ’ ಸಿನಿಮಾ ಕೂಡ ಇದೇ ಶೈಲಿಯಲ್ಲಿ ಮೂಡಿ ಬಂದಿದೆ ಎಂಬುದು ಟ್ರೇಲರ್ ನೋಡಿದವರಿಗೆ ಗೊತ್ತಾಗುತ್ತದೆ. ಈ ಸಿನಿಮಾಗೆ ಡಾಲಿ ಧನಂಜಯ್ ಬಂಡವಾಳ ಹೂಡಿದ್ದಾರೆ. ಈ ಸಿನಿಮಾದ ವಿಮರ್ಶೆ ಇಲ್ಲಿದೆ. ಮ್ಯಾಡಿ (ಸೂರ್ಯ ಪ್ರಖ್ಯಾತ್) ಕಾಲೇಜು ಓದೋ ವಿದ್ಯಾರ್ಥಿ. ತಾನಾಯ್ತು, ತನ್ನ ಕಾಲೇಜಾಯ್ತು ಎಂದು ಹಾಯಾಗಿ ಇರುತ್ತಾನೆ. ಬೆಂಗಳೂರಿನ ಭೂಗತ ಜಗತ್ತು ಹೀಗಿರುತ್ತದೆ ಎಂಬುದನ್ನು ಕನಸಲ್ಲೂ…

Read More

ಇಂದಿನ ದಿನ ಭವಿಷ್ಯ: ಸಿಂಹ, ಧನುಸ್ಸಿಗೆ ಅದೃಷ್ಟವೋ ಅದೃಷ್ಟ; ಮೇಷ ಹಾಗೂ ಮೀನ ರಾಶಿಯವರ ಫಲ ಹೇಗಿದೆ? – Kannada News | Zodiac Signs: Astrologer Dr. Basavaraj Guruji on Effects for 8th July 2026

ಬೆಂಗಳೂರು, ಜು.8: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾನುಫಲಗಳನ್ನು ನೀಡಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಅಷ್ಟಮಿ, ರೇವತಿ ನಕ್ಷತ್ರ, ಅತಿಗಂಡ ಯೋಗ, ಕೌಲವ ಕರಣ ಇರಲಿದೆ. ರಾಹುಕಾಲ ಮಧ್ಯಾಹ್ನ 12:23 ರಿಂದ 1:59 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲವು ಬೆಳಗ್ಗೆ 10:48 ರಿಂದ 12:24 ರವರೆಗೆ ಇರಲಿದೆ. ಇಂದು ರವಿ ಮಿಥುನ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ, ಬುಧನ ನಕ್ಷತ್ರವಾದ ರೇವತಿಯಲ್ಲಿ…

Read More

‘ನಾನು ತಾಳಿ ಧರಿಸಿದ್ದು ದೊಡ್ಡ ವಿಷಯ ಅಲ್ಲ’; ಸೀಕ್ರೆಟ್ ಮದುವೆ ವದಂತಿಗೆ ಕಂಗನಾ ಸ್ಪಷ್ಟನೆ – Kannada News | Kangana Ranaut clarifies secret Marriage rumours over Mangalsutra Viral Video

ಬಾಲಿವುಡ್ ನಟಿ ಹಾಗೂ ರಾಜಕಾರಣಿ ಕಂಗನಾ ರಣಾವತ್ ಅವರು ಇತ್ತೀಚೆಗೆ ಮಂಗಳಸೂತ್ರ (Mangalsutra) ಮತ್ತು ಹಸಿರು ಬಳೆಗಳನ್ನು ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿತ್ತು. ಕಂಗನಾ ರಣಾವತ್ ಯಾರಿಗೂ ತಿಳಿಯದಂತೆ ಗುಟ್ಟಾಗಿ ಮದುವೆಯಾಗಿದ್ದಾರೆ ಎಂಬ ವದಂತಿಗಳು ಕಾಳ್ಗಿಚ್ಚಿನಂತೆ ಹಬ್ಬಿದ್ದವು. ಆ ‘ಅದೃಷ್ಟವಂತ ಪುರುಷ’ ಯಾರು ಎಂದು ನೆಟ್ಟಿಗರು ಹುಡುಕಾಡಲಾರಂಭಿಸಿದ್ದರು. ಈ ಎಲ್ಲಾ ಊಹಾಪೋಹಗಳಿಗೆ ಸ್ವತಃ ಕಂಗನಾ ರಣಾವತ್ (Kangana Ranaut) ಅವರೇ ಸ್ಪಷ್ಟನೆ ನೀಡಿದ್ದು, ‘ಇದರಲ್ಲಿ ಇಷ್ಟೊಂದು ತಲೆಕೆಡಿಸಿಕೊಳ್ಳುವಂತದ್ದು ಏನಿದೆ?’ ಎಂದು ಪ್ರಶ್ನಿಸಿದ್ದಾರೆ….

Read More