ಆಗದವರ ಮುಖಕ್ಕೆ ಗುದ್ದಿದ ಸ್ಪರ್ಧಿಗಳು: ವಿಡಿಯೋ ನೋಡಿ – Kannada News | Bigg Boss Kannada 12: Contestants punched punching bags

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಇನ್ನೇನು ಮುಗಿಯುವ ಹಂತದಲ್ಲಿದೆ. ಫಿನಾಲೆಗೆ ಇನ್ನು ಕೆಲವೇ ದಿನಗಳಷ್ಟೆ ಬಾಕಿ ಇದೆ. ಮನೆಯಲ್ಲಿ ಈಗ ಉಳಿದಿರುವುದು ಬಹುತೇಕ ಗಟ್ಟಿ ಸ್ಪರ್ಧಿಗಳೇ. ಇಂದು ಭಾನುವಾರದ ಎಪಿಸೋಡ್ ಆಗಿದ್ದು, ಇಂದು (ಡಿಸೆಂಬರ್ 04) ಮನೆಯಿಂದ ಒಬ್ಬರು ಹೊರಗೆ ನಡೆಯಲಿದ್ದಾರೆ. ಇದೀಗ ಬಿಗ್​​ಬಾಸ್ ಮನೆಯಲ್ಲಿ ಸ್ಪರ್ಧಿಗಳು ತಮಗೆ ಆಗದ ಸ್ಪರ್ಧಿಯ ಮುಖವನ್ನು ಪಂಚಿಂಗ್​ ಬ್ಯಾಗಿಗೆ ಅಂಟಿಸಿ ಮನಸೋ ಇಚ್ಛೆ ಗುದ್ದಿದ್ದಾರೆ. ರಕ್ಷಿತಾ ಅಂತೂ ಕಂಟ್ರೋಲ್ ತಪ್ಪಿ, ಬ್ಯಾಗ್ ಕಿತ್ತು ಹೋಗುವಂತೆ ಗುದ್ದಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸಭೆಯನ್ನ ನಗೆ ಗಡಲಲ್ಲಿ ತೇಲಿಸಿದ ಸಿಎಂ ಕುರ್ಚಿ ಮಾತು, ಜೋರಾಗಿ ನಕ್ಕ ಡಿಕೆಶಿ – Kannada News | Dk Shivakumar smile after CM Siddaramaiah jokes about chair at devanga Function

ಬೆಂಗಳೂರು, (ಜನವರಿ 04): ಸದ್ಯ ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿಯದ್ದೇ ಮಾತು. ಈ ಸಂಬಂಧ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (dk Shivakumar) ಬಣಗಳ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ, ಕುರ್ಚಿ ಬಗ್ಗೆ ಮಾತನಾಡಿ ಸಭೆಯನ್ನು ನಗೆ ಗಡಲಲ್ಲಿ ತೇಲಿಸಿದ್ದಾರೆ. ಹೌದು…ಬೆಂಗಳೂರಿನಲ್ಲಿ ದೇವಾಂಗ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ಸಿಎಂ, ತಮ್ಮ ಕುರ್ಚಿಯಲ್ಲಿ ಬೇರೊಬ್ಬರನ್ನು ಕುಳಿತುಕೊಳ್ಳಲು ಹೇಳಿದ್ದಾರೆ. ಇದನ್ನು ಕೇಳಿ ಸಿಎಂ ಕುರ್ಚಿ ಆಕಾಂಕ್ಷಿ ಡಿಸಿಎಂ ಡಿಕೆ ಶಿವಕುಮಾರ್ ಜೋರಾಗಿ ನಕ್ಕಿರುವ ಪ್ರಸಂಗ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Vastu Tips: ಮನೆಯಲ್ಲಿ ಹಂಸಗಳ ಫೋಟೋ ಇಡುವುದು ಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Vastu Tips: Swan Images for Home Prosperity and Harmony; Vastu Benefits

ವಾಸ್ತು ಶಾಸ್ತ್ರವು ಮನೆಯಲ್ಲಿ ಯಾವ ರೀತಿಯ ವಸ್ತುಗಳನ್ನು ಇಡಬೇಕು? ಯಾವ ರೀತಿಯ ವಸ್ತುಗಳನ್ನು ಇಡಬಾರದು ಎಂಬುದನ್ನು ಹೇಳುತ್ತದೆ. ಅವುಗಳನ್ನು ಎಲ್ಲಿ ಇಡಬೇಕು ಎಂಬುದನ್ನು ಸಹ ಇದು ವಿವರಿಸುತ್ತದೆ. ಅನೇಕ ಜನರು ತಮ್ಮ ಮನೆ ನಿರ್ಮಾಣ ಮತ್ತು ಮನೆಯಲ್ಲಿರುವ ವಸ್ತುಗಳನ್ನು ವಾಸ್ತು ಪ್ರಕಾರ ಆಯಾ ದಿಕ್ಕಿನಲ್ಲಿ ಜೋಡಿಸುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಕೆಲವು ಚಿತ್ರಗಳು ಅಥವಾ ಪ್ರತಿಮೆಗಳನ್ನು ಹೊಂದಿರುವುದು ಒಳ್ಳೆಯದು. ಇವುಗಳನ್ನು ಮನೆಯಲ್ಲಿ ಇಡುವುದು ಪವಿತ್ರವೆಂದು ಪರಿಗಣಿಸಲಾಗುತ್ತದೆ.

ಪೂರ್ವ ದಿಕ್ಕಿನಲ್ಲಿ ಹಂಸಗಳ ಚಿತ್ರ ಇದ್ದರೆ ಶುಭ:

ವಾಸ್ತು ದೋಷಗಳನ್ನು ನಿವಾರಿಸಲು ಕೆಲವು ವಸ್ತುಗಳು ಉಪಯುಕ್ತ. ನಿಮ್ಮ ಮನೆಯಲ್ಲಿ ಹಂಸಗಳ ಚಿತ್ರಗಳನ್ನು ಇಡಲು ಬಯಸಿದರೆ ವಾಸ್ತು ಶಾಸ್ತ್ರ ಹಲವಾರು ಸಲಹೆಗಳನ್ನು ನೀಡುತ್ತದೆ. ನೀವು ಹಾಲ್ ಅಥವಾ ಡ್ರಾಯಿಂಗ್ ರೂಮ್ ಅಥವಾ ಅತಿಥಿ ಕೋಣೆಯಲ್ಲಿ ಹಂಸಗಳ ಚಿತ್ರವನ್ನು ಇಟ್ಟರೆ, ಅದನ್ನು ಕೋಣೆಯ ಪೂರ್ವ ದಿಕ್ಕಿನಲ್ಲಿ ಇಡಬೇಕು. ಹಾಗೆ ಮಾಡುವುದು ಶುಭ. ಆದಾಗ್ಯೂ, ನೀವು ಎಲ್ಲಿ ಬೇಕಾದರೂ ಒಂದು ಜೋಡಿ ಹಂಸಗಳನ್ನು ಅಥವಾ ಒಂದೇ ಹಂಸ ಚಿತ್ರವನ್ನು ಇಡಬಹುದು.

ಆರ್ಥಿಕವಾಗಿ ಲಾಭ ಪಡೆಯಲು ಹೀಗೆ ಮಾಡಿ:

ನೀವು ಆರ್ಥಿಕ ಲಾಭವನ್ನು ಬಯಸಿದರೆ, ನಿಮ್ಮ ಡ್ರಾಯಿಂಗ್ ರೂಮ್ ಅಥವಾ ಅತಿಥಿ ಕೋಣೆಯಲ್ಲಿ ಹಂಸದ ಚಿತ್ರವನ್ನು ನೇತುಹಾಕಿ. ನೀವು ಗೋಡೆಯ ಮೇಲೆ ಒಂದು ಜೋಡಿ ಹಂಸಗಳು ಅಥವಾ ಹಂಸದ ಚಿತ್ರವನ್ನು ನೇತುಹಾಕಬಹುದು.

ನಕಾರಾತ್ಮಕ ಶಕ್ತಿ ದೂರ:

ನಿಮ್ಮ ಮನೆಯಲ್ಲಿ ಹಂಸಗಳ ಚಿತ್ರವನ್ನು ಇಡುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ದೂರವಾಗುತ್ತದೆ. ಅಥವಾ ನಿಮ್ಮ ವ್ಯವಹಾರ ಅಥವಾ ಉದ್ಯೋಗದಲ್ಲಿ ಪ್ರಗತಿ ಸಿಗುತ್ತದೆ. ನಿಮ್ಮ ಕೆಲಸದಲ್ಲಿ ನೀವು ಯಶಸ್ಸನ್ನು ಸಾಧಿಸುವಿರಿ.

ಇದನ್ನೂ ಓದಿ: ಪ್ರಪಂಚದ ಏಕೈಕ ಜಲಾಧಿವಾಸ ಗಣಪ; ಗುಡ್ಡಟ್ಟು ವಿನಾಯಕ ದೇವಸ್ಥಾನದ ಇಂಟರೆಸ್ಟಿಂಗ್​ ಸಂಗತಿ ಇಲ್ಲಿದೆ

ದಾಂಪತ್ಯ ಜೀವನದಲ್ಲಿ ಪ್ರೀತಿ:

ಮಲಗುವ ಕೋಣೆಯಲ್ಲಿ ಹಂಸಗಳ ಜೋಡಿಯ ಫೋಟೋ ಇಡುವುದರಿಂದಲೂ ಹಲವು ಪ್ರಯೋಜನಗಳಿವೆ. ಈ ಫೋಟೋವನ್ನು ಮಲಗುವ ಕೋಣೆಯಲ್ಲಿ ಇಡುವುದರಿಂದ ದಾಂಪತ್ಯ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ಗಂಡ ಮತ್ತು ಹೆಂಡತಿಯ ನಡುವಿನ ಉದ್ವಿಗ್ನತೆ ಮತ್ತು ಸಂಘರ್ಷವನ್ನು ಕಡಿಮೆ ಮಾಡುತ್ತದೆ. ಇದು ಪ್ರೀತಿಯನ್ನು ಹೆಚ್ಚಿಸುತ್ತದೆ.

ಬುದ್ಧಿವಂತಿಕೆ:

ಹಂಸವು ಜ್ಞಾನದ ರೂಪದಲ್ಲಿರುವ ಸರಸ್ವತಿ ದೇವಿಯ ವಾಹನವಾಗಿದೆ. ಆದ್ದರಿಂದ, ನಿಮ್ಮ ಮನೆಯ ಅಧ್ಯಯನ ಕೋಣೆಯಲ್ಲಿ ಹಂಸದ ಚಿತ್ರವನ್ನು ಇಡುವುದರಿಂದ ಸರಸ್ವತಿ ದೇವಿಯ ಆಶೀರ್ವಾದ ಸಿಗುತ್ತದೆ. ಅವರು ಕುಟುಂಬದಲ್ಲಿ ಜ್ಞಾನವನ್ನು ದಯಪಾಲಿಸುತ್ತಾರೆ. ಅಂತಹ ಮನೆಯಲ್ಲಿ ಶಿಕ್ಷಣದ ಕೊರತೆ ಎಂದಿಗೂ ಇರುವುದಿಲ್ಲ. ಮಗುವಿನ ಸ್ಟಡಿ ಟೇಬಲ್ ಮೇಲೆ ಹಂಸ ಪ್ರತಿಮೆ ಇಡುವುದರಿಂದ ಅವರು ಅಧ್ಯಯನದಲ್ಲಿ ಉತ್ತಮ ಸಾಧನೆ ಮಾಡಲು ಮಾತ್ರವಲ್ಲದೆ ಪರೀಕ್ಷೆಗಳಲ್ಲಿಯೂ ಯಶಸ್ವಿಯಾಗುತ್ತಾರೆ. ಸ್ಟಡಿ ಟೇಬಲ್ ಮೇಲೆ ಹಂಸ ಪ್ರತಿಮೆ ಮಕ್ಕಳು ತಮ್ಮ ಅಧ್ಯಯನದ ಮೇಲೆ ಗಮನಹರಿಸಲು ಸಹಾಯ ಮಾಡುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ನಾಯಕನೂ ಸೇರಿದಂತೆ ಆರ್​ಸಿಬಿಯ ನಾಲ್ವರು ಸ್ಟಾರ್ ಆಟಗಾರರಿಗೆ ಇಂಜುರಿ

Source link

ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜೋಶಿ ಕಿಡಿ – Kannada News | Unin Minister Pralhad Joshi Hits out at Karnataka Congress Government for Opposed vbg ramg replaced mgnrega

ಹುಬ್ಬಳ್ಳಿ, (ಜನವರಿ 04) : ವಿಬಿಜಿ ರಾಮ್ ಜಿ (ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಬಗ್ಗೆ ರಾಜ್ಯ ಸರ್ಕಾರ
ಸುಳ್ಳು ಹೇಳುತ್ತಾ ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ. ನರೇಗಾ ಯೋಜನೆಯನ್ನು ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಎಂದು ಪರಿವರ್ತನೆಗೊಳಿಸಲಾಗಿದ್ದು, ಇದರಲ್ಲಿಯೂ ಪ್ರತಿಪಕ್ಷದವರು ರಾಜಕೀಯ ಮಾಡುತ್ತಿರುವುದು ಅವರ ಮೌಢ್ಯವನ್ನು ತೋರಿಸುತ್ತದೆ. ಯೋಜನೆ ಪಾರದರ್ಶಕವಾಗಿ ಮತ್ತು ಸಮರ್ಥವಾಗಿ ಜಾರಿಯಾಗುವುದನ್ನು ಸಹಿಸದ ಪ್ರತಿಪಕ್ಷಗಳು ಈ ಯೋಜನೆಯ ಬಗ್ಗೆ ಸುಳ್ಳು ವದಂತಿಗಳನ್ನು ಹರಡುತ್ತಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (pralhad joshi) ವಾಗ್ದಾಳಿ ನಡೆಸಿದ್ದಾರೆ.

ನರೇಗಾ ಯೋಜನೆಯಲ್ಲಿ ಪ್ರತಿವರ್ಷ ನೂರು ದಿನಗಳ ಉದ್ಯೋಗ ಖಾತರಿಯಿತ್ತು . ಈಗ 125 ದಿನಗಳಿಗೆ ಹೆಚ್ಚಳ ಮಾಡಲಾಗಿದೆ. ಇದರಿಂದ ಗ್ರಾಮೀಣ ಜನರಿಗೆ ಉದ್ಯೋಗವಕಾಶದ ಭರವಸೆಯೊಂದಿಗೆ ಆದಾಯದ ಭದ್ರತೆಯು ಹೆಚ್ಚಾಗಲಿದೆ (ಪ್ರತಿದಿನ ಕೂಲಿ 370 ರೂ ಆಗಿದೆ). ಮುಂದೆಯೂ ಆಯಾ ಗ್ರಾಮ ಪಂಚಾಯತಗಳೇ ಯೋಜನೆಯ ಕೇಂದ್ರವಾಗಿರಲಿದೆ. ಆದರೆ ಇದನ್ನು ಕೇಂದ್ರ ಸರ್ಕಾರ ನಿರ್ಧಾರ ಮಾಡುತ್ತದೆ ಎಂಬ ಭೀತಿಯನ್ನು ಕಾಂಗ್ರೆಸ್ ಮೂಡಿಸುತ್ತಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ರಾಹುಲ್ ಗಾಂಧಿ, ಸಿದ್ದರಾಮಯ್ಯ ಡ್ರಾಮಾ ಬಿಟ್ಟು ವಾಸ್ತವತೆ ಒಪ್ಪಿಕೊಳ್ಳಲಿ; ಪ್ರಲ್ಹಾದ್ ಜೋಶಿ ತಿರುಗೇಟು

ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲ ಮಾಡಿಕೊಡಲು ವರ್ಷದಲ್ಲಿ 60 ದಿನಗಳ ಬಿಡುವು ನೀಡಲಾಗಿದೆ. ಇಂತಹ ರೈತ ಸ್ನೇಹಿ ನಿಯಮಕ್ಕೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕೃಷಿ ವಿರೋಧಿ ನೀತಿ ಅನುಸರಿಸುತ್ತಿದೆ. ಹಿಂದೆ ಕೂಲಿಕಾರರ ಹೆಸರು ಹೇಳಿ ನರೇಗಾ ಯೋಜನೆ ದುರ್ಬಳಕೆ ಮಾಡಲಾಗುತ್ತಿತ್ತು. ಅದಕ್ಕಾಗಿ ಬಯೋಮೆಟ್ರಿಕ್ ತಂತ್ರಜ್ಞಾನ ಬಳಕೆ ಕಡ್ಡಾಯ ಮಾಡಲಾಗಿದೆ. ರಾಜ್ಯ ಸರ್ಕಾರಗಳು ಅನಗತ್ಯ ವೆಚ್ಚ ಕಡಿಮೆ ಮಾಡಲು ಭ್ರಷ್ಟಾಚಾರಕ್ಕೆ ಕಡಿವಾಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ 60:40 ಅನುಪಾತದಲ್ಲಿ ನಿಗದಿ ಮಾಡಲಾಗಿದೆ ಎಂದು ಹೇಳಿದರು

ಸರ್ಕಾರದ ಆಡಳಿತಾತ್ಮಕ ಹಿತದೃಷ್ಟಿಯಿಂದ ಮತ್ತು ಕಾಲಾನುಕಾಲಕ್ಕೆ ಯೋಜನೆಗಳ್ಳಲ್ಲಿ ಪಾರದರ್ಶಕತೆ ಮತ್ತು ಪರಿಣಾಮ ತರುವ ನಿಟ್ಟಿನಲ್ಲಿ ಕೆಲ ಯೋಜನೆಗಳಲ್ಲಿ ಅಗತ್ಯ ಪರಿಷ್ಕರಣೆ ತರುವುದು ಅವಶ್ಯವಾಗಿರುತ್ತದೆ. ಈ ಬದಲಾವಣೆಯ ಮುಖ್ಯ ಉದ್ದೇಶ ಜನರ ಜೀವನೋಪಾಯವನ್ನು ಬಲಪಡಿಸುವ ಕಲ್ಯಾಣ ಮತ್ತು ಮೂಲ ಸೌಕರ್ಯ ಅಭಿವೃದ್ಧಿಇವೆರಡನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕಿದೆ. ಏಕೆಂದರೆ ಇವೆರೆಡೂ ಒಂದಕ್ಕೊಂದು ಪೂರಕ ಮತ್ತು ಅನಿವಾರ್ಯ ಎಂದರು.

MGNAREGA ಯೋಜನೆಯು ಬೇಡಿಕೆ ಆಧಾರಿತ (Demand Driven Scheme) ಯೋಜನೆಯಾಗಿತ್ತು.
ಆದರೆ ಇದು Off the record Target based scheme ಆಗಿ ಪರಿವರ್ತಿತವಾಗಿತ್ತು. ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಇದ್ದ ಅತಿ ದೊಡ್ಡ ಸಮಸ್ಯೆ ಎಂದರೆ ಸೂಕ್ತ ಸಮಯದಲ್ಲಿ ಕೂಲಿ ಮತ್ತು ಸಾಮಗ್ರಿ ವೆಚ್ಚದ ಪಾವತಿ (Wage & material payment). ಹೊಸ ಪರಿಷ್ಕೃತ ಯೋಜನೆಯಡಿ Centralized payment system ಇರುವುದರಿಂದ ಈ ಮೊದಲು ಇದ್ದ ಎಲ್ಲಾ ಗೊಂದಲಗಳಿಗೆ ಫುಲ್ ಸ್ಟಾಪ್ ಬೀಳಲಿದೆ ಎಂದೂ ಸಚಿವ ಜೋಶಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 5:54 pm, Sun, 4 January 26

Source link

ಮತ್ತೆ ಮ್ಯಾಜಿಕ್ ಮಾಡುತ್ತಾ ‘ಲವ್ ಮಾಕ್ಟೆಲ್ 3’? ಬಿಡುಗಡೆ ಯಾವಾಗ? – Kannada News | Darling Krishna starrer Love Mocktail 3 movie release date announced

ಕೋವಿಡ್ ಸಮಯದಲ್ಲಿ ಒಟಿಟಿಯಲ್ಲಿ ದೊಡ್ಡ ಹಿಟ್ ಆಗಿತ್ತು ‘ಲವ್ ಮಾಕ್ಟೆಲ್’ (Love Mocktail) ಸಿನಿಮಾ. ಡಾರ್ಲಿಂಗ್ ಕೃಷ್ಣಗೆ ನಟನಾಗಿ ಮಾತ್ರವಲ್ಲದೆ ನಿರ್ದೇಶಕನಾಗಿಯೂ ದೊಡ್ಡ ಗೆಲುವು ತಂದುಕೊಟ್ಟ ಸಿನಿಮಾ. ಹಾಸ್ಯ, ಭಾವುಕತೆ, ಗೆಳೆತನ, ಒಳ್ಳೆಯ ಸಂಗೀತ ಎಲ್ಲವುಗಳ ಮಿಶ್ರಣವಾಗಿದ್ದ ‘ಲವ್ ಮಾಕ್ಟೆಲ್’ ಅನ್ನು ಸಿನಿಮಾ ಸರಣಿಯಾಗಿ ಮುಂದುವರೆಸಿದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್, 2022 ರಲ್ಲಿ ‘ಲವ್ ಮಾಕ್ಟೆಲ್ 2’ ಸಿನಿಮಾ ನಿರ್ಮಿಸಿದರು. ಆ ಸಿನಿಮಾ ಸಹ ಹಿಟ್ ಆಯ್ತು. ಇದೀಗ ಇದೇ ಜೋಡಿ ‘ಲವ್ ಮಾಕ್ಟೆಲ್ 3’ ಸಿನಿಮಾ ಮಾಡಿದ್ದು, ಸಿನಿಮಾದ ಬಿಡುಡಗೆ ದಿನಾಂಕ ಘೋಷಣೆ ಮಾಡಿದ್ದಾರೆ.

ಇತ್ತೀಚೆಗಷ್ಟೇ ‘ಲವ್ ಮಾಕ್ಟೆಲ್ 3’ ಸಿನಿಮಾ ಮೋಷನ್ ಪೋಸ್ಟರ್ ಲಾಂಚ್ ಮಾಡಿದ್ದರು ಡಾರ್ಲಿಂಗ್ ಕೃಷ್ಣ. ಇದೀಗ ಹೊಸ ವರ್ಷದ ಉಡುಗೊರೆ ಎಂಬಂತೆ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಡಾಲಿಂಗ್ ಕೃಷ್ಣ ಘೋಷಿಸಿದ್ದಾರೆ. ಏಪ್ರಿಲ್ 10 ರಂದು ‘ಲವ್ ಮಾಕ್ಟೆಲ್ 3’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.

2020 ಯಲ್ಲಿ ಬಿಡುಗಡೆ ಆಗಿದ್ದ ಮೊದಲ ‘ಲವ್ ಮಾಕ್ಟೆಲ್’ ಸಿನಿಮಾ ನವಿರು ಪ್ರೆಮಕತೆ, ಭರಪೂರ ಹಾಸ್ಯ, ನಾಸ್ಟೆಲಿಜಿಯಾ ಸೀನುಗಳಿಂದಾಗಿ ಪ್ರೇಕ್ಷಕರ ಮನ ಗೆದ್ದಿತ್ತು. ಸಿನಿಮಾದ ಅಂತ್ಯ ಸಖತ್ ಭಾವುಕವಾಗಿಯೂ ಇತ್ತು. 2022 ರಲ್ಲಿ ಬಂದ ‘ಲವ್ ಮಾಕ್ಟೇಲ್ 2’ ಸಿನಿಮಾ ಪ್ರೇಮವನ್ನು ಕಳೆದುಕೊಂಡವನೊಬ್ಬ ಮತ್ತೆ ಪ್ರೀತಿಯನ್ನು ಅರಸುವ ಆ ಹಾದಿಯಲ್ಲಿ ಎದುರಾಗುವ ಯುವತಿಯರು ಮತ್ತು ಅವರೊಟ್ಟಿಗಿನ ತಮಾಷೆಯಿಂದಾಗಿ ಗಮನ ಸೆಳೆದಿತ್ತು. ಜೊತೆಗೆ ಸಿನಿಮಾನಲ್ಲಿ ಭಾವುಕ ಅಂಶಗಳು ಸಾಕಷ್ಟಿದ್ದವು. ಇದೀಗ ತೆರೆಗಾಣಲು ಸಜ್ಜಾಗಿರುವ ‘ಲವ್ ಮಾಕ್ಟೇಲ್ 3’ ಈ ಹಿಂದಿನ ಎರಡು ಆವೃತ್ತಿಗಳಿಗಿಂತಲೂ ಭಿನ್ನವಾಗಿರಲಿದೆ ಎಂಬ ವಿಚಾರವನ್ನು ಡಾರ್ಲಿಂಗ್ ಕೃಷ್ಣ ಹಂಚಿಕೊಂಡಿದ್ದಾರೆ. ಕತೆ, ನಿರೂಪಣೆ ಸೇರಿದಂತೆ ಎಲ್ಲದರಲ್ಲಿಯೂ ‘ಲವ್ ಮಾಕ್ಟೇಲ್ 3’ ಹೊಸ ಅನುಭೂತಿ ಕೊಡಲಿದೆ ಎಂಬ ಭರವಸೆ ಕೃಷ್ಣ ಅವರದ್ದು.

ಇದನ್ನೂ ಓದಿ:ಈ ಬಾರಿ ನಾನು ಡಾರ್ಲಿಂಗ್ ಕೃಷ್ಣನ ಬಿಟ್ಟು ಹೋಗಲ್ಲ: ಅಮೃತಾ ಅಯ್ಯಂಗಾರ್

‘ಲವ್ ಮಾಕ್ಟೆಲ್ 3’ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಅವರುಗಳು ಬಂಡವಾಳ ಹೂಡಿದ್ದು, ಸಿನಿಮಾವನ್ನು ಕೃಷ್ಣ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ನಕುಲ್ ಅಭಯಂಕರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಶ್ರೀ ಕ್ರೇಜಿ ಮೈಂಡ್ಸ್ ಛಾಯಾಗ್ರಹಣ ಮತ್ತು ಸಂಕಲ ಈ ಸಿನಿಮಾಕ್ಕಿದೆ. ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಸಂವೃತ, ಅಮೃತಾ ಅಯ್ಯಂಗಾರ್, ರಚೆಲ್ ಡೇವಿಡ್, ಅಭಿಲಾಶ್ ದಳಪತಿ, ಮುಂತಾದವರು ನಟಿಸಿದ್ದಾರೆ. ಸಿನಿಮಾದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್​​ನಲ್ಲಿ ತೊಡಗಿಸಿಕೊಂಡಿದ್ದು, ಸಿನಿಮಾದ ಬಿಡುಗಡೆಯನ್ನು ಏಪ್ರಿಲ್ 10ರಂದು ಮಾಡಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ತಾಕತ್ತಿದ್ರೆ ಬಂದು ಹಿಡಿ ಎಂದು ಟ್ರಂಪ್​ಗೆ ಸವಾಲೆಸೆದಿದ್ದ ವೆನಿಜುವೆಲಾ ಅಧ್ಯಕ್ಷ; ಸದ್ದಿಲ್ಲದೆ ಬಂಧಿಸಿ ಕರೆದೊಯ್ದ ಅಮೆರಿಕ ಸೇನೆ – Kannada News | Venezuela president challenged Trump to arrest him, ended up caught in military operation

ವಾಷಿಂಗ್ಟನ್, ಜನವರಿ 4: ವೆನಿಜುವೆಲಾ ಅಧ್ಯಕ್ಷ ನಿಕೋಲಾಸ್ ಮಡುರೊ (Nicolas Maduro) ಅವರನ್ನು ಅಮೆರಿಕದ ಯೋಧರು ಬಂಧಿಸಿ ಕರೆದೊಯ್ದ ಬೆನ್ನಲ್ಲೇ ವೈಟ್​ಹೌಸ್​ನಿಂದ ವಿಡಿಯೋವೊಂದು ಬಿಡುಗಡೆ ಆಗಿದೆ. ಅದರಲ್ಲಿ ಮಡುರೊ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹೇಡಿ (coward) ಎಂದು ಕರೆಯುತ್ತಿರುವುದು, ಸವಾಲು ಎಸೆಯುತ್ತಿರುವುದು ಕೇಳಿಬಂದಿದೆ. ಅಮೆರಿಕದ ಈ ಅಧ್ಯಕ್ಷರೊಂದಿಗೆ ಈ ರೀತಿ ಆಟ ಆಡಿದರೆ ಇದೇ ಶಾಸ್ತಿಯಾಗುತ್ತದೆ ಎಂದು ಈ ವಿಡಿಯೋದಲ್ಲಿ ಮೆಸೇಜ್ ಕೊಡಲಾಗಿದೆ.

ವೆನಿಜುವೆಲಾ ಅಧ್ಯಕ್ಷ ನಿಕೋಲಾಸ್ ಮಡುರೊ ತಮ್ಮ ಮಿಲಿಟರಿ ನೆಲೆಯಲ್ಲಿರುವ ಮನೆಯಲ್ಲಿ ಇದ್ದಾಗ ಮುಂಜಾವಿನಲ್ಲಿ ಅಮೆರಿಕದ ಸೈನಿಕರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದಾರೆ. ಹೈ ಸೆಕ್ಯೂರಿಟಿ ವ್ಯವಸ್ಥೆ ಇದ್ದರೂ ಅಮೆರಿಕನ್ ಸೈನಿಕರು ಮನೆಗೆ ನುಗ್ಗಿ ವೆನಿಜುವೆಲಾ ಅಧ್ಯಕ್ಷ ಮಡುರೊ ಮತ್ತವರ ಪತ್ನಿ ಫ್ಲೋರೆಸ್ ಅವರನ್ನು ಹಿಡಿದು, ಕರೆದೊಯ್ದಿದ್ದಾರೆ.

ಇದನ್ನೂ ಓದಿ: ವೆನೆಜುವೆಲಾ ಅಧ್ಯಕ್ಷ ಮಡುರೊ, ಅವರ ಪತ್ನಿಯನ್ನು ಸೆರೆಹಿಡಿದಿದ್ದೇವೆ; ದಾಳಿಯ ಬಳಿಕ ಟ್ರಂಪ್ ಘೋಷಣೆ

ವರ್ಷದ ಹಿಂದೆ ಟ್ರಂಪ್​ಗೆ ಸವಾಲು ಹಾಕಿದ್ದ ಮಡುರೊ

‘ಬಂದು ನನ್ನ ಹಿಡಿ. ಮಿರಾಫ್ಲೋರೆಸ್​ನಲ್ಲಿ ನಾನು ಕಾಯುತ್ತಿರುತ್ತೇನೆ. ತಡ ಮಾಡವೋ ಹೇಡಿ’ ಎಂದು ಆಗಸ್ಟ್ ತಿಂಗಳಲ್ಲಿ ನಿಕೋಲಾಸ್ ಮಡುರೊ ಭಾಷಣವೊಂದರಲ್ಲಿ ಹೇಳಿದ್ದರು. ಮಡುರೊ ಬಂಧನ ಸಾಧ್ಯವಾಗುವಂತಹ ಸುಳಿವನ್ನು ನೀಡಿದವರಿಗೆ ಬಹುಮಾನದ ಮೊತ್ತವನ್ನು ಅಮೆರಿಕ ಸರ್ಕಾರ ಹೆಚ್ಚಿಸಿತ್ತು. ಅದಕ್ಕೆ ಪ್ರತಿಕ್ರಿಯೆಯಾಗಿ ನಿಕೋಲಾಸ್ ಈ ಸವಾಲು ಹಾಕಿದ್ದರು.

ಇದೀಗ ಅಮೆರಿಕ ಅಧ್ಯಕ್ಷರ ಗೃಹ ಕಚೇರಿಯಾದ ವೈಟ್​ಹೌಸ್, ವೆನಿಜುವೆಲಾ ಅಧ್ಯಕ್ಷರನ್ನು ಅಪಹಾಸ್ಯ ಮಾಡುವ ವಿಡಿಯೋ ಬಿಡುಗಡೆ ಮಾಡಿದೆ. ಅಮೆರಿಕಕ್ಕೆ ಮಡುರೊ ಸವಾಲು ಎಸೆಯುತ್ತಿರುವ ದೃಶ್ಯದ ಜೊತೆಗೆ, ಅವರನ್ನು ಅಮೆರಿಕನ್ ಸೈನಿಕರು ಹಿಡಿಯುತ್ತಿರುವ ದೃಶ್ಯ ಇವೆಲ್ಲವೂ ಆ ವಿಡಿಯೋದಲ್ಲಿದೆ. ‘ಮಡುರೊ ಅವಕಾಶ ಉಳಿಸಿಕೊಳ್ಳಲಿಲ್ಲ’ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್​ಸೆಟ್ ಹೇಳಿರುವ ದೃಶ್ಯವೂ ಆ ವಿಡಿಯೋದಲ್ಲಿದೆ.

ಇದನ್ನೂ ಓದಿ: ತೈಲ ಸಂಪತ್ತಿನ ಮೇಲೆ ಕಣ್ಣಿಟ್ಟರಾ ಟ್ರಂಪ್? ವೆನೆಜುವೆಲಾ ಮೇಲಿನ ಅಮೆರಿಕ ದಾಳಿ ಕುರಿತ ಕುತೂಹಲಕಾರಿ ಸಂಗತಿ ಇಲ್ಲಿದೆ

ಮಾದಕ ವಸ್ತು ಸರಬರಾಜು, ಅಕ್ರಮ ಶಸ್ತ್ರಾಸ್ತ್ರ ಇತ್ಯಾದಿ ವಿವಿಧ ಆರೋಪಗಳನ್ನು ವೆನಿಜುವೆಲಾ ಅಧ್ಯಕ್ಷರ ಮೇಲೆ ಅಮೆರಿಕ ಹಾಕಿದೆ. ಅಮೆರಿಕಕ್ಕೆ ವೆನಿಜುವೆಲಾ ಮೂಲಕ ಕೊಕೇನ್ ಇತ್ಯಾದಿ ಸಾಕಷ್ಟು ಮಾದಕ ವಸ್ತುಗಳು ಸರಬರಾಜು ಆಗುತ್ತಿವೆ. ಅಮೆರಿಕವು ತನ್ನ ನೆರೆ ದೇಶದ ಮೇಲೆ ಆಕ್ರಮಣ ಮಾಡಲು ಇದ್ದ ಕಾರಣಗಳಲ್ಲಿ ಇದೂ ಒಂದು.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

BEL Recruitment 2026: ಭಾರತ್ ಎಲೆಕ್ಟ್ರಾನಿಕ್ಸ್ ನಲ್ಲಿ ನೇಮಕಾತಿ; ಎಂಜಿನಿಯರಿಂಗ್ ಪದವೀಧರರು ಅರ್ಹರು – Kannada News | BEL Trainee Engineer Recruitment 2026: Apply for 119 Engineering Vacancies

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ತರಬೇತಿ ಎಂಜಿನಿಯರ್‌ಗಳಿಗೆ ಸುವರ್ಣ ಅವಕಾಶವನ್ನು ಘೋಷಿಸಿದೆ. BEL ಒಟ್ಟು 119 ಹುದ್ದೆಗಳಿಗೆ ನೇಮಕಾತಿಯನ್ನು ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BEL ನ ಅಧಿಕೃತ ವೆಬ್‌ಸೈಟ್ bel-india.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅನೇಕ ಎಂಜಿನಿಯರಿಂಗ್ ಪದವೀಧರರು BEL ನಲ್ಲಿ ಉದ್ಯೋಗ ಪಡೆಯುವ ಕನಸು ಕಾಣುತ್ತಾರೆ. ಇದು ಅರ್ಹ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವನ್ನು ಒದಗಿಸುತ್ತದೆ. BEL ಹೊರಡಿಸಿದ ಅಧಿಸೂಚನೆಯ ಪ್ರಕಾರ, ಅರ್ಜಿ ಪ್ರಕ್ರಿಯೆಯು ಜನವರಿ 9 ರಂದು ಮುಕ್ತಾಯಗೊಳ್ಳುತ್ತದೆ,ಲಿಖಿತ ಪರೀಕ್ಷೆಯು ಜನವರಿ 11 ರಂದು ನಡೆಯಲಿದೆ.

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ, ವಿಶ್ವವಿದ್ಯಾಲಯ ಅಥವಾ ಕಾಲೇಜಿನಿಂದ ಬಿಇ/ಬಿ.ಟೆಕ್/ಬಿ.ಎಸ್ಸಿ ಎಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು. ವಿವಿಧ ಎಂಜಿನಿಯರಿಂಗ್ ವಿಭಾಗಗಳಿಗೆ ಈ ನೇಮಕಾತಿಯನ್ನು ನಡೆಸಲಾಗುತ್ತಿದೆ. ವಯೋಮಿತಿಗೆ ಸಂಬಂಧಿಸಿದಂತೆ, ಸಾಮಾನ್ಯ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳಿಗೆ ಜನವರಿ 1, 2026 ರಂತೆ ಗರಿಷ್ಠ ವಯಸ್ಸು 28 ವರ್ಷಗಳು. ಸರ್ಕಾರಿ ನಿಯಮಗಳ ಪ್ರಕಾರ ಕಾಯ್ದಿರಿಸಿದ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು.

ಆಯ್ಕೆ ಹೇಗೆ ಮಾಡಲಾಗುತ್ತದೆ?

2026 ರ ಬಿಇಎಲ್ ಟ್ರೈನಿ ಎಂಜಿನಿಯರ್ ನೇಮಕಾತಿ ಆಯ್ಕೆ ಪ್ರಕ್ರಿಯೆಯು ಕೇವಲ ಲಿಖಿತ ಪರೀಕ್ಷೆಯನ್ನು ಆಧರಿಸಿರುತ್ತದೆ. ಈ ಪರೀಕ್ಷೆಯನ್ನು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಘಾಜಿಯಾಬಾದ್ (ಉತ್ತರ ಪ್ರದೇಶ) ನಲ್ಲಿ ನಡೆಸಲಾಗುತ್ತದೆ. ಅರ್ಜಿ ನಮೂನೆಯಲ್ಲಿ ಒದಗಿಸಲಾದ ಮಾಹಿತಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಪರೀಕ್ಷಿಸಿ ಆಯ್ಕೆ ಮಾಡಲಾಗುತ್ತದೆ. ಆದ್ದರಿಂದ, ಅರ್ಜಿ ಸಲ್ಲಿಸುವಾಗ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡುವುದು ಬಹಳ ಮುಖ್ಯ. ಲಿಖಿತ ಪರೀಕ್ಷೆಯು 100 ಅಂಕಗಳಾಗಿದ್ದು, ನಕಾರಾತ್ಮಕ ಅಂಕಗಳು ಅನ್ವಯವಾಗುತ್ತವೆ. ಪ್ರತಿ ತಪ್ಪು ಉತ್ತರಕ್ಕೆ ¼ ಅಂಕವನ್ನು ಕಡಿತಗೊಳಿಸಲಾಗುತ್ತದೆ. ಕನಿಷ್ಠ ಅರ್ಹತಾ ಅಂಕಗಳು ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ-ಎನ್‌ಸಿಎಲ್ ವಿಭಾಗಗಳಿಗೆ 35 ಪ್ರತಿಶತ ಮತ್ತು ಎಸ್‌ಸಿ, ಎಸ್‌ಟಿ ಮತ್ತು ಪಿಡಬ್ಲ್ಯೂಬಿಡಿ ವಿಭಾಗಗಳಿಗೆ 30 ಪ್ರತಿಶತ.

ಇದನ್ನೂ ಓದಿ: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

ಈ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಮರೆಯದಿರಿ:

ಈ ನೇಮಕಾತಿಗೆ ಅರ್ಜಿ ಶುಲ್ಕ 150 ರೂ + 18% GST. ಶುಲ್ಕವನ್ನು SBI ಕಲೆಕ್ಟ್ (ಆನ್‌ಲೈನ್) ಮೂಲಕ ಪಾವತಿಸಬೇಕು. ಆದಾಗ್ಯೂ, SC, ST ಮತ್ತು PwBD ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸುವುದರಿಂದ ಸಂಪೂರ್ಣವಾಗಿ ವಿನಾಯಿತಿ ಪಡೆದಿರುತ್ತಾರೆ. ಶುಲ್ಕವನ್ನು ಪಾವತಿಸುವಾಗ, ಅಭ್ಯರ್ಥಿಗಳು SBI ಕಲೆಕ್ಟ್‌ನಲ್ಲಿ ನಮೂದಿಸಲಾದ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸವು ಅರ್ಜಿ ನಮೂನೆಯಲ್ಲಿ ಒದಗಿಸಲಾದ ಅದೇ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸಕ್ಕೆ ಹೊಂದಿಕೆಯಾಗುವುದು ಅಗತ್ಯ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

CUET UG 2026: CUET UG ನೋಂದಣಿ ಪ್ರಾರಂಭ; ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಲ್ಲಿ ತಿಳಿಯಿರಿ – Kannada News | CUET UG 2026 Application Open: NTA Registration Dates, Eligibility and Fees

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) 2026ರ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ-ಪದವಿಪೂರ್ವ (CUET-UG) ಕ್ಕೆ ಜನವರಿ 3ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NTA ಯ ಅಧಿಕೃತ ವೆಬ್‌ಸೈಟ್ cuet.nta.nic.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. CUET UG ನೋಂದಾಯಿಸಲು ಕೊನೆಯ ದಿನಾಂಕ ಜನವರಿ 30, ಮತ್ತು ಅಭ್ಯರ್ಥಿಗಳು ಜನವರಿ 31 ರವರೆಗೆ ಪರೀಕ್ಷಾ ಶುಲ್ಕವನ್ನು ಪಾವತಿಸಬಹುದು. ಅರ್ಜಿ ನಮೂನೆಯಲ್ಲಿ ತಿದ್ದುಪಡಿಗಳನ್ನು ಮಾಡಲು ತಿದ್ದುಪಡಿ ವಿಂಡೋ ಫೆಬ್ರವರಿ 2 ರಿಂದ ಫೆಬ್ರವರಿ 4ರವರೆಗೆ ತೆರೆದಿರುತ್ತದೆ. ಈ ಸಮಯದಲ್ಲಿ, ಅಭ್ಯರ್ಥಿಗಳು ತಮ್ಮ ಅರ್ಜಿಗಳಿಗೆ ಅಗತ್ಯ ತಿದ್ದುಪಡಿಗಳನ್ನು ಮಾಡಲು ಸಾಧ್ಯವಾಗುತ್ತದೆ.

CUET UG ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ರಾಜ್ಯ ಅಥವಾ ಕೇಂದ್ರ ಮಂಡಳಿಯಿಂದ 12 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಮಧ್ಯಂತರ ಅಥವಾ ಎರಡು ವರ್ಷಗಳ ಪೂರ್ವ-ವಿಶ್ವವಿದ್ಯಾಲಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರು. ಹೈಯರ್ ಸೆಕೆಂಡರಿ ಪ್ರಮಾಣಪತ್ರ (ವೃತ್ತಿಪರ) ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಹ ಅರ್ಹರು ಮತ್ತು CUET-UG ಗೆ ಅರ್ಜಿ ಸಲ್ಲಿಸಬಹುದು.

AICTE ಅಥವಾ ರಾಜ್ಯ ಮಂಡಳಿಯಿಂದ ಮಾನ್ಯತೆ ಪಡೆದ ಕನಿಷ್ಠ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಹೊಂದಿರುವವರು, NIOS ಸೀನಿಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಕನಿಷ್ಠ ಐದು ವಿಷಯಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮತ್ತು NDA ಯ ಜಂಟಿ ಸೇವೆಗಳ ವಿಭಾಗದ ಎರಡು ವರ್ಷಗಳ ಕೋರ್ಸ್‌ನ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಹ CUET UGಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ, ಮೂರು ವಿಷಯಗಳಿಗೆ 1,000 ರೂ. ಅರ್ಜಿ ಶುಲ್ಕ. ಪ್ರತಿ ಹೆಚ್ಚುವರಿ ವಿಷಯಕ್ಕೆ 400 ವಿಧಿಸಲಾಗುತ್ತದೆ. ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಗಳಿಗೆ,900ರೂ. ಮತ್ತು ಹೆಚ್ಚುವರಿ ವಿಷಯಕ್ಕೆ 375 ರೂ. ಶುಲ್ಕ. ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ/ಪಿಡಬ್ಲ್ಯೂಬಿಡಿ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳಿಗೆ, ಮೂರು ವಿಷಯಗಳಿಗೆ 800 ಮತ್ತು ಹೆಚ್ಚುವರಿ ವಿಷಯಕ್ಕೆ 350 ರೂ. ಶುಲ್ಕ.

ಅರ್ಜಿ ಸಲ್ಲಿಸುವುದು ಹೇಗೆ?

  • ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಮೊದಲು cuet.nta.nic.in ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
  • ಮುಖಪುಟದಲ್ಲಿ ಲಭ್ಯವಿರುವ CUET UG 2026 ಅರ್ಜಿ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಹೊಸ ಪುಟದಲ್ಲಿ ನೋಂದಾಯಿಸಿದ ನಂತರ, ಲಾಗಿನ್ ಆಗಿ.
  • ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ಶುಲ್ಕವನ್ನು ಪಾವತಿಸಿ.
  • ಫಾರ್ಮ್ ಅನ್ನು ಸಲ್ಲಿಸಿದ ನಂತರ, ದೃಢೀಕರಣ ಪುಟವನ್ನು ಡೌನ್‌ಲೋಡ್ ಮಾಡಿ ಮತ್ತು ಅದರ ಮುದ್ರಣವನ್ನು ಸುರಕ್ಷಿತವಾಗಿರಿಸಿ.

ಸಹಾಯವಾಣಿ ಸಂಖ್ಯೆ ಬಿಡುಗಡೆ:

ಯಾವುದೇ ಅಭ್ಯರ್ಥಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಯಾವುದೇ ತೊಂದರೆಗಳು ಎದುರಾದರೆ, ಅವರು ಸಹಾಯವಾಣಿ ಸಂಖ್ಯೆ 011-40759000 ಅನ್ನು ಸಂಪರ್ಕಿಸಬಹುದು ಅಥವಾ cuet-ug@nta.ac.in ಗೆ ಇಮೇಲ್ ಮಾಡಬಹುದು. ಅಭ್ಯರ್ಥಿಗಳು ಇತ್ತೀಚಿನ ಪರೀಕ್ಷಾ ನವೀಕರಣಗಳಿಗಾಗಿ nta.ac.in ಮತ್ತು cuet.nta.nic.in ವೆಬ್‌ಸೈಟ್‌ಗಳನ್ನು ನಿಯಮಿತವಾಗಿ ಪರಿಶೀಲಿಸಲು ಸೂಚಿಸಲಾಗಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರೀತಿಸಿ ಮದ್ವೆ: ಹಸುಗೂಸು ಸೇರಿ 3 ಹೆಣ್ಮಕ್ಕಳನ್ನ ಪತ್ನಿ ಕೈಗಿಟ್ಟು ಪತಿ ಪರಾರಿ – Kannada News | A Man leaving His Wife Over three Baby girls at Bengaluru

ಬೆಂಗಳೂರು, (ಜನವರಿ 04): ಮೂರೂ ಹೆಣ್ಣು ಮಕ್ಕಳು (Children) ಎಂದು ಪತ್ನಿಗೆ ಕೈಕೊಟ್ಟು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದ್ದು, ಈ ಸಂಬಂಧ ಈಶಾನ್ಯ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೀಶ್, ಪತ್ನಿಗೆ ಕೈಕೊಟ್ಟು ಪರಾರಿಯಾದ ವ್ಯಕ್ತಿ. ಹರೀಶ್ ಮೂಲತಃ ರಾಜಸ್ಥಾನದವನಾಗಿದ್ದು, ಬೆಂಗಳೂರಿನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಕೆಲಸ ಮಾಡುತ್ತಿದ್ದಾನೆ. ಈತ ವರಲಕ್ಷ್ಮೀ ಎಂಬ ಸ್ಟಾಫ್ ನರ್ಸ್​ನ ಪ್ರೀತಿಸಿ ಮದುವೆ ಆಗಿದ್ದ. ಬಳಿಕ ಕುಟುಂಬಸ್ಥರನ್ನು ಒಪ್ಪಿಸಿ ಮದುವೆಯಾಗಿದ್ದ. ಹೊಸದರಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ, ಈ ಜೋಡಿಗೆ ಹುಟ್ಟಿದ ಮೂವರು ಮಕ್ಕಳು ಕೂಡ ಹೆಣ್ಣು. ಇದರಿಂದ ಹರೀಶ್ ವರಲಕ್ಷ್ಮೀಗೆ ಕೈಕೊಟ್ಟು ನಾಪತ್ತೆಯಾಗಿದ್ದಾನೆ.

ಇದು ಹರೀಶ್​ನ ಅಸಮಾಧಾನಕ್ಕೆ ಕಾರಣವಾಗಿದೆ. ಮೊದಲ ಇಬ್ಬರು ಮಕ್ಕಳು ಹೆಣ್ಣು ಎಂದು ಗೊತ್ತಾದಾಗ ಮೂರನೇಯ ಬಾರಿಗೆ ಗಂಡು ಹುಟ್ಟಬಹುದು ಎಂಬ ಆಸೆಯಲ್ಲಿದ್ದ. ಇದೀಗ ಹರೀಶ್ ಪತ್ನಿ ವಿಜಯಲಕ್ಷ್ಮೀ, ಕಳೆದ ಒಂದೂವರೆ ತಿಂಗಳ ಹಿಂದೆ ಹಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದೀಗ ಒಂದೂವರೆ ತಿಂಗಳ ಹಸಗೂಸು ಹಾಗೂ ಇಬ್ಬರು ಮಕ್ಕಳನ್ನ ಪತ್ನಿಯ ಮಡಿಲಿಗೆ ಹಾಕಿ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಬೆಂಗಳೂರು, (ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ!

ಪತಿ ಕೈಕೊಟ್ಟ ಬೆನ್ನಲ್ಲೇ ಪತ್ನಿ ವರಲಕ್ಷ್ಮೀ ಆತನ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ. ಮೂವರು ಹೆಣ್ಮಕ್ಕಳು ಎಂದು ನಮ್ಮನ್ನು ಬಿಟ್ಟು ಹೋಗಿ ಮತ್ತೊಂದು ಮಹಿಳೆ ಜೊತೆ ವಾಸವಿದ್ದಾನೆ. ಈಗ ನನಗೆ ಮೂವರು ಮಕ್ಕಳನ್ನು ಸಾಕೋದಕ್ಕೆ ಆಗುತ್ತಿಲ್ಲ. ಮಕ್ಕಳ ಶಾಲಾ ಫೀಸ್, ಮನೆ ಬಾಡಿಗೆ ಕಟ್ಟಲೂ ಕೂಡ ಆಗುತ್ತಿಲ್ಲ. ಇದೀಗ ಹುಟ್ಟಿರುವ ಹಸುಗೂಸನ್ನ ಆರೈಕೆ ಮಾಡೋದೇ ಕಷ್ಟವಾಗಿದೆ ಎಂದು ಆರೋಪಿಸಿ ಒಂದು ತಿಂಗಳ ಹಿಂದೆಯೇ ಈಶಾನ್ಯ ವಿಭಾಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಆದ್ರೆ ಪೊಲೀಸರು, ಹರೀಶನನ್ನು ಕರೆಸಿಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾಳೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version