Headlines

ಟೀಮ್ ಇಂಡಿಯಾದ 6 ಆಟಗಾರರಿಗೆ ಚೊಚ್ಚಲ ಐರಿಷ್ ಸರಣಿ! – Kannada News | The Six Indian Players Touring Ireland for the First Time

ಟಿ20 ವಿಶ್ವಕಪ್​ 2026ರ ಬಳಿಕ ಟೀಮ್ ಇಂಡಿಯಾ ಮತ್ತೆ ಚುಟುಕು ಕ್ರಿಕೆಟ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಈ ಬಾರಿ ಭಾರತ ತಂಡ ಕಣಕ್ಕಿಳಿಯಲಿರುವುದು ಹೊಸ ನಾಯಕ ಹಾಗೂ ಯುವ ಪಡೆಯೊಂದಿಗೆ ಎಂಬುದು ವಿಶೇಷ. ಇನ್ನು ಟೀಮ್ ಇಂಡಿಯಾದ ಎದುರಾಳಿ ಐರ್ಲೆಂಡ್. ಜೂನ್ 26 ರಿಂದ ಬೆಲ್‌ಫಾಸ್ಟ್‌ನಲ್ಲಿ ಆರಂಭವಾಗಲಿರುವ ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಗಾಗಿ ಆಯ್ಕೆಯಾಗಿರುವ 16 ಸದಸ್ಯರ ಭಾರತ ತಂಡದಲ್ಲಿ, ಬರೋಬ್ಬರಿ ಆರು ಆಟಗಾರರು ತಮ್ಮ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ ಐರ್ಲೆಂಡ್‌ನಲ್ಲಿ ಪಂದ್ಯವಾಡಲು ಸಜ್ಜಾಗಿದ್ದಾರೆ. …

Read More

ನಟಿ ಸಂಜನಾ ಬುರ್ಲಿಗೆ ತಾಳಿ ಕಟ್ಟಿ ಪ್ರೀತಿಯಿಂದ ಕೆನ್ನೆಗೆ ಮುತ್ತಿಟ್ಟ ಸಮರ್ಥ್

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದ ಸಂಜನಾ ಬುರ್ಲಿ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಮರ್ಥ್ ಅವರ ಜೊತೆ ಸಂಜನಾ ಮದುವೆ ನಡೆದಿದೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಸಂಜನಾ ಬುರ್ಲಿ ಹಾಗೂ ಸಮರ್ಥ್ ವೈವಾಹಿಕ ಜೀವನಕ್ಕೆ ಕಾಲಿಟ್ಟ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಮಾರ್ಚ್ 25ರಂದು ಇವರ ಮದುವೆ ನಡೆದಿದೆ ಎಂದು ಹೇಳಲಾಗುತ್ತಾ ಇದೆ. ರೆಸಾರ್ಟ್ ಒಂದರಲ್ಲಿ ಮದುವೆ ನಡೆದಿದೆ. ತಾಳಿ ಕಟ್ಟಿದ ಬಳಿಕ ಸಮರ್ಥ್ ಅವರು ಸಂಜನಾ ಬುರ್ಲಿ ಅವರಿಗೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 3ರ ದಿನಭವಿಷ್ಯ

ಈ ದಿನ ಭೂಮಿ ಸೂಕ್ತದ ಶ್ರವಣ ಮಾಡುವುದರಿಂದ ಹಲವು ರೀತಿಯ ಅನುಕೂಲಗಳು ಆಗಲಿವೆ. ಸೈಟು- ಜಮೀನು ಅಥವಾ ಬೇರೆ ಯಾವುದಾದರೂ ಭೂಮಿಗೆ ಸಂಬಂಧಿಸಿದ ವಿಷಯಗಳಲ್ಲಿನ ಅಡೆತಡೆಗಳು, ಸಮಸ್ಯೆಗಳು ದೂರವಾಗಲಿವೆ. ಇನ್ನು ಸೈಟು- ಜಮೀನು ಖರೀದಿಗೆ ಪ್ರಯತ್ನ ಮಾಡುತ್ತಿದ್ದಲ್ಲಿ ಅದರಲ್ಲೂ ಅನುಕೂಲ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಎಲ್ಲ ಸನ್ನಿವೇಶದಲ್ಲಿ ಹಾಕಿದ ಶ್ರಮಕ್ಕೆ ತಕ್ಕ ಫಲ ಸಿಗುತ್ತದೆ ಎಂಬ ಖಾತ್ರಿ ಇರುವುದಿಲ್ಲ. ನಿರೀಕ್ಷೆ ಹೆಚ್ಚಾದಷ್ಟೂ ಬೇಸರ…

Read More

ಈ ರೀತಿ ಪ್ರೇಮ ನಿವೇದನೆ ಎಲ್ಲಾದ್ರೂ ನೋಡಿದ್ದೀರಾ, ಸೇನಾ ಹೆಲಿಕಾಪ್ಟರ್ ಎದುರು ತನ್ನ ಗೆಳತಿಯ ಬೆರಳಿಗೆ ಉಂಗುರ ತೊಡಿಸಿದ ಪೈಲಟ್ – Kannada News

ನಾಸಿಕ್, ಜೂನ್ 03: ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಯುದ್ಧ ಸೇನಾ ವಾಯುಯಾನ ತರಬೇತಿ ಶಾಲೆಯ (CAATS) ರನ್‌ವೇ ಇತ್ತೀಚೆಗೆ ಕೇವಲ ಮಿಲಿಟರಿ ಶಿಸ್ತಿಗಷ್ಟೇ ಅಲ್ಲ, ಹೃದಯಸ್ಪರ್ಶಿ ಪ್ರೇಮ ನಿವೇದನೆಯೊಂದಕ್ಕೂ ಸಾಕ್ಷಿಯಾಯಿತು. ದೀರ್ಘ ಹಾಗೂ ಕಠಿಣ ತರಬೇತಿಯನ್ನು ಮುಗಿಸಿ ಭಾರತೀಯ ಸೇನೆಯ ವಾಯುಯಾನ ವಿಭಾಗದ ಪೈಲಟ್(Pilot) ಆಗಿ ಹೊರಹೊಮ್ಮಿದ ಕ್ಯಾಪ್ಟನ್ ಭರತ್ ಭಾರದ್ವಾಜ್, ತಮ್ಮ ವೃತ್ತಿಜೀವನದ ಅತ್ಯುನ್ನತ ಯಶಸ್ಸಿನ ದಿನವನ್ನೇ ತಮ್ಮ ಜೀವನದ ಅತ್ಯಂತ ಸುಂದರ ಕ್ಷಣವನ್ನಾಗಿಯೂ ಬದಲಾಯಿಸಿಕೊಂಡರು. ಪಾಸಿಂಗ್-ಔಟ್ ಪೆರೇಡ್ ಮತ್ತು ರೋಮಾಂಚಕ ವಾಯುಯಾನ ಪ್ರದರ್ಶನ ಮುಗಿದ ತಕ್ಷಣ,…

Read More

ವಿಜಯಪುರದಲ್ಲಿ ಅಸ್ಮಿತಾ ಖೇಲೋ ಇಂಡಿಯಾ ಮಹಿಳಾ ಸೈಕ್ಲಿಂಗ್ ಲೀಗ್‌: ಇಲ್ಲಿವೆ ರೇಸ್‌ನ ರೋಚಕ ಕ್ಷಣಗಳು!

ಸೈಕ್ಲಿಸ್ಟ್‌ಗಳ ತವರೂರು ಎಂದೇ ಪ್ರಸಿದ್ಧಿ ಪಡೆದಿರುವ ಐತಿಹಾಸಿಕ ವಿಜಯಪುರ ನಗರದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಅಸ್ಮಿತಾ ಖೇಲೋ ಇಂಡಿಯಾ ವುಮೆನ್ಸ್ ಸೈಕ್ಲಿಂಗ್ ಸಿಟಿ ಲೀಗ್' ಅತ್ಯಂತ ಯಶಸ್ವಿಯಾಗಿ ನಡೆಯಿತು. ಮಹಿಳಾ ಸೈಕ್ಲಿಸ್ಟ್‌ಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ವಿಶಿಷ್ಟ ಕ್ರೀಡಾಕೂಟಕ್ಕೆ ಇಡೀ ನಗರವೇ ಸಾಕ್ಷಿಯಾಯಿತು ಮತ್ತು ನೂರಾರು ಮಹಿಳಾ ಸೈಕ್ಲಿಸ್ಟ್‌ಗಳು ಸೈಕಲ್ ಸವಾರಿ ಮಾಡುವ ಮೂಲಕ ನಗರದಲ್ಲಿ ಹೊಸ ಕಳೆ ತಂದರು. ಈ ಲೀಗ್ ಅನ್ನು ಕ್ರೀಡಾ ಪ್ರೋತ್ಸಾಹಕ್ಕಾಗಿ ದೇಶದ ಮತ್ತು ರಾಜ್ಯದ ಪ್ರಮುಖ…

Read More

ಕಾಂಗ್ರೆಸ್​ಗೆ ಭಾರೀ ಮುಖಭಂಗ; ರಾಜ್ಯಸಭೆ ಚುನಾವಣೆಗೆ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – Kannada News

ಭೋಪಾಲ್, ಜೂನ್ 9: ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರಿಗೆ ಅನಿರೀಕ್ಷಿತ ಆಘಾತ ಎದುರಾಗಿದೆ. ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ (Rajya Sabha Elections) ಸ್ಪರ್ಧಿಸಲು ಅವರು ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕರಿಸಿದ್ದಾರೆ. ಈ ಮೂಲಕ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ರದ್ದುಗೊಂಡಿದೆ. ಬಿಜೆಪಿ ಮೀನಾಕ್ಷಿ ನಟರಾಜನ್ ಅವರ ನಾಮನಿರ್ದೇಶನಕ್ಕೆ ಆಕ್ಷೇಪ ವ್ಯಕ್ತಪಡಿಸಿತ್ತು….

Read More

ಧಾರವಾಡ ಕವಿವಿಯಲ್ಲಿ ಎಐ ಕ್ರಾಂತಿ: ಸಾಂಪ್ರದಾಯಿಕ ಕೋರ್ಸ್‌ಗಳಿಗೆ ಆಧುನಿಕ ಸ್ಪರ್ಶ – Kannada News | Karnataka University Dharwad Embraces AI Revolution, Bringing a Modern Touch to Traditional Courses

ಧಾರವಾಡ, ಜನವರಿ 08: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ (Karnatak University) ಹೊಸದೊಂದು ಕ್ರಾಂತಿಗೆ ಮುಂದಾಗಿದೆ. ಮುಂಚೆಯಿಂದಲೂ ಉನ್ನತ ಶಿಕ್ಷಣ ನೀಡುವಲ್ಲಿ ಸಾಕಷ್ಟು ಹೆಸರು ಮಾಡಿರುವ ಈ ವಿಶ್ವವಿದ್ಯಾಲಯ ಇದೀಗ ಕೃತಕ ಬುದ್ಧಿಮತ್ತೆಯಲ್ಲಿ (AI) ಕ್ರಾಂತಿಯನ್ನು ಮಾಡಲು ನಿರ್ಧರಿಸಿದೆ. ಇತ್ತೀಚಿನ ದಿನಗಳಲ್ಲಿ ಈ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸಾಕಷ್ಟು ಸದ್ದು ಮಾಡುತ್ತಿದೆ. ಇದೇ ಕಾರಣಕ್ಕೆ ಈ ಕೃತಕ ಬುದ್ಧಿಮತ್ತೆಯನ್ನು ಎಲ್ಲ ಕೋರ್ಸ್​ಗಳಲ್ಲಿ ಕಲಿಸಲು ನಿರ್ಧರಿಸಲಾಗಿದೆ. ಸಾಂಪ್ರದಾಯಿಕ ಕೋರ್ಸ್‌ಗಳಿಗೆ ಆಧುನಿಕ ಸ್ಪರ್ಶ ಕಾಲಕ್ಕೆ ತಕ್ಕಂತೆ ಶೈಕ್ಷಣಿಕ ಕೋರ್ಸ್‌ಗಳು ಕೂಡ ಬದಲಾಗಬೇಕು. ಅದರಲ್ಲೂ…

Read More

ಯಾದಗಿರಿ: ಎರಡು ಎಕರೆ ಜಮೀನಿಗಾಗಿ ರಕ್ತಚರಿತ್ರೆ; ದೊಡ್ಡಪ್ಪನ ಕುಟುಂಬದಿಂದಲೇ ಯುವಕನ ಬರ್ಬರ ಹತ್ಯೆ!

ಸುರಪುರ, ಮಾ.31: ಕೇವಲ ಎರಡು ಎಕರೆ ತುಂಡು ಭೂಮಿಗಾಗಿ ದಶಕಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹವೊಂದು ಯುವಕನ ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ 27 ವರ್ಷದ ಪರಮೇಶ್ವರ ಎಂಬ ಯುವಕನನ್ನು ಆತನ ದೊಡ್ಡಪ್ಪ ಹನುಮಂತರಾಯ ಮತ್ತು ಆತನ ಮಕ್ಕಳು ಸೇರಿ ತಲ್ವಾರ್, ಬರ್ಚಿ ಹಾಗೂ ಕಲ್ಲುಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೊಲೆಯಾದ ಪರಮೇಶ್ವರನ ತಂದೆ ಮಲ್ಲಪ್ಪ ಮತ್ತು ಆರೋಪಿ ಹನುಮಂತರಾಯ ಸಹೋದರರು. ತಲಾ 13 ಎಕರೆ ಜಮೀನು ಹಂಚಿಕೆಯಾಗಿದ್ದರೂ, ಮಲ್ಲಪ್ಪನ ಹೆಸರಿಗಿದ್ದ ಹೆಚ್ಚುವರಿ…

Read More

ಕಾಮಿಡಿ ವಿಷಯದಲ್ಲಿ ಗಿಲ್ಲಿನ ತೆಗಳಿದ್ದ ಧನುಷ್​​ಗೆ ತಾಯಿಯಿಂದಲೇ ಮುಖಭಂಗ – Kannada News | Bigg Boss Kannada: Dhanush’s Mother Praises Gilli’s Comedy, Embarrassing Her Son

ಬಿಗ್ ಬಾಸ್ ಮನೆಯಲ್ಲಿ ಈ ವಾರ ಫ್ಯಾಮಿಲಿ ವೀಕ್ ನಡೆಯುತ್ತಿದೆ. ವಿವಿಧ ಸ್ಪರ್ಧಿಗಳ ಕುಟುಂಬದವರು ದೊಡ್ಮನೆಗೆ ಆಗಮಿಸಿ ಸ್ಪರ್ಧಿಗಳಿಗೆ ಹುರುಪು ತುಂಬುತ್ತಾ ಇದ್ದಾರೆ. ಈಗ ಧನುಷ್​​ಗೆ ತಾಯಿಯಿಂದಲೇ ಮುಖಭಂಗ ಆಗಿದೆ. ಗಿಲ್ಲಿ ಕಾಮಿಡಿ ವಿಷಯದಲ್ಲಿ ಯಾವಾಗಲೂ ಧನುಷ್ ತಕರಾರರು ತೆಗೆಯುತ್ತಲೇ ಇದ್ದರು. ಗಿಲ್ಲಿಯನ್ನು ನಾಮಿನೇಟ್ ಮಾಡಲು ಧನುಷ್ ಕೊಡುತ್ತಿದ್ದ ಕಾರಣಗಳೇ ಇದಾಗಿತ್ತು. ಆದರೆ, ಗಿಲ್ಲಿಗೆ ಧನುಷ್ ತಾಯಿ ಮೆಚ್ಚುಗೆ ಸೂಚಿಸಿದರು. ಧನುಷ್ ಅವರು ಯಾವಾಗಲೂ ಗಿಲ್ಲಿ ಬಗ್ಗೆ ಕಂಪ್ಲೇಂಟ್ ಮಾಡುತ್ತಲೇ ಬರುತ್ತಿದ್ದಾರೆ. ಗಿಲ್ಲಿ ಉತ್ತಮವಾಗಿ ಆಡೋದಿಲ್ಲ, ಹಾಸ್ಯದ…

Read More

Chanakya Niti: ಶ್ರೀಮಂತಿಕೆ ಗಳಿಸಲು ಬಯಸುವವರು ಈ ಗೋಲ್ಡನ್‌ ರೂಲ್ಸ್‌ಗಳನ್ನು ತಪ್ಪದೇ ಪಾಲಿಸಿ – Kannada News | Chanakya Niti: If you follow these three principles of Chanakya, you can become rich

ಜೀವನದಲ್ಲಿ ಯಶಸ್ಸನ್ನು  (Success) ಸಾಧಿಸಬೇಕು, ಶ್ರೀಮಂತಿಕೆಯನ್ನು ಗಳಿಸಬೇಕು, ಸಮಾಜದಲ್ಲಿ ಗೌರವದಿಂದ ಬಾಳಬೇಕು ಎಂಬ ಆಸೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಇದಕ್ಕಾಗಿ ಅನೇಕರು ಕಷ್ಟಪಟ್ಟು ಕೆಲಸ ಮಾಡುತ್ತಾರೆ. ನಮ್ಮಲ್ಲಿ ಅನೇಕರಿಗೆ ಕಷ್ಟಪಟ್ಟು ಕೆಲಸ ಮಾಡಿದರೂ ಸಾಕಷ್ಟು ಹಣ ಗಳಿಸಲು ಸಾಧ್ಯವಾಗುವುದೇ ಇಲ್ಲ. ನಿಮಗೂ  ಹೀಗೆ ಹಗಲಿರುಳು ಶ್ರಮಿಸಿದರೂ ಹೆಚ್ಚಿನ ಹಣ ಸಂಪಾದನೆ ಮಾಡಲು ಸಾಧ್ಯವಾಗುತ್ತಿಲ್ಲವೇ, ಕೈಯಲ್ಲಿ ಹಣ ನಿಲ್ಲುತ್ತಿಲ್ಲವೇ? ಹಾಗಿದ್ರೆ ಆಚಾರ್ಯ ಚಾಣಕ್ಯರು ತಿಳಿಸಿರುವ ಈ ಕೆಲವೊಂದು ಗೋಲ್ಡನ್‌ ರೂಲ್ಸ್‌ಗಳನ್ನು ಪಾಲಿಸಿ. ಇದರಿಂದ ಖಂಡಿತವಾಗಿಯೂ ನಿಮ್ಮ ಜೀವನ ಸಕಾರಾತ್ಮಕವಾಗಿ…

Read More