Headlines

ತಮಿಳುನಾಡಿನಲ್ಲಿ ಅಧಿಕಾರ ಹಂಚಿಕೆಯಿಲ್ಲ, ಡಿಎಂಕೆ ಸ್ವತಂತ್ರವಾಗಿ ಸರ್ಕಾರ ರಚಿಸಲಿದೆ; ಕಾಂಗ್ರೆಸ್​ಗೆ ಸಿಎಂ ಸ್ಟಾಲಿನ್ ಸಂದೇಶ – Kannada News | No Power sharing in Tamil Nadu CM MK Stalin’s message to ally Congress ahead of election

ಚೆನ್ನೈ, ಫೆಬ್ರವರಿ 11: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ (MK Stalin) ಡಿಎಂಕೆ ಸ್ವಂತವಾಗಿ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಿತ್ರಪಕ್ಷಗಳ ನಡುವಿನ ಬಿರುಕು ಬಗ್ಗೆ ಗುಸುಗುಸು ಕೇಳಿಬರುತ್ತಿರುವ ನಡುವೆಯೂ 2026ರ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ಹೇಳಿದ್ದಾರೆ. ತಾವು ರಾಹುಲ್ ಗಾಂಧಿಯೊಂದಿಗೆ ಸಹೋದರ ಬಾಂಧವ್ಯ ಹೊಂದಿರುವುದಾಗಿ ಹೇಳಿದ್ದಾರೆ. ಆದರೆ ಡಿಎಂಕೆ ತನ್ನದೇ ಆದ ಸರ್ಕಾರವನ್ನು ರಚಿಸುತ್ತದೆ ಎಂದು ಸ್ಟಾಲಿನ್ ಪ್ರತಿಪಾದಿಸಿದ್ದಾರೆ. ಡಿಎಂಕೆ ಪಕ್ಷವು 2021ಕ್ಕಿಂತ ಇನ್ನೂ ಹೆಚ್ಚಿನ ಮುನ್ನಡೆ ಸಾಧಿಸುವ ವಿಶ್ವಾಸ…

Read More

SA vs AFG: ಎರಡೆರಡು ಸೂಪರ್​ ಓವರ್​ಗೆ ಸಾಕ್ಷಿಯಾದ ಈ ಪಂದ್ಯದಲ್ಲಿ ಏನೆಲ್ಲಾ ಆಯ್ತು? – Kannada News | T20 World Cup 2026: SA vs AFG Creates History with Double Super Over Thriller!

2026 ರ ಟಿ20 ವಿಶ್ವಕಪ್​ನ (2026 T20 World Cup ) 13ನೇ ಪಂದ್ಯ ದಕ್ಷಿಣ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ (South Africa vs Afghanistan) ನಡುವೆ ನಡೆಯಿತು. ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯ ಟಿ20 ವಿಶ್ವಕಪ್​ ಇತಿಹಾಸದಲ್ಲೇ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಏಕೆಂದರೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಪಂದ್ಯವೊಂದರಲ್ಲಿ ಎರಡೆರಡು ಸೂಪರ್ ಓವರ್​ಗಳು ನಡೆದಿದ್ದು ಇದೇ ಮೊದಲ ಬಾರಿಗೆ. ಈ ದಾಖಲೆಗೆ ಕಾರಣವಾಗಿದ್ದು, ಆಫ್ರಿಕಾ ಹಾಗೂ ಅಫ್ಘನ್ ತಂಡದ ರಣರೋಚಕ ಹೋರಾಟ. ಹಾಗಿದ್ದರೆ ಈ ಪಂದ್ಯದಲ್ಲಿ…

Read More

SA vs AFG: ಅಬ್ಬಬ್ಬಾ ಎಂಥಾ ಪಂದ್ಯ! 2ನೇ ಸೂಪರ್​ ಓವರ್​ನಲ್ಲಿ ಅಫ್ಘನ್ ಮಣಿಸಿದ ಆಫ್ರಿಕಾ – Kannada News | T20 World Cup: SA vs AFG Thriller Double Super Over Win for Proteas in Ahmedabad!

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ದಕ್ಷಿಣ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ (South Africa vs Afghanistan) ನಡುವಿನ 2026 ರ ಟಿ20 ವಿಶ್ವಕಪ್ (T20 World Cup 2026) ಪಂದ್ಯ ರಣರೋಚಕ ಕ್ಷಣಕ್ಕೆ ಸಾಕ್ಷಿಯಾಯಿತು. ಎರಡೆರಡು ಸೂಪರ್​ ಓವರ್​ಗಳು ನಡೆದ ಈ ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ದಕ್ಷಿಣ ಆಫ್ರಕಾ ತಂಡ ಯಶಸ್ವಿಯಾಯಿತು. ವಾಸ್ತವವಾಗಿ ಸೂಪರ್​ ಓವರ್​ಗೂ ಮುನ್ನವೇ ದಕ್ಷಿಣ ಆಫ್ರಿಕಾ ತಂಡಕ್ಕೆ ಸುಲಭ ಜಯ ಧಕ್ಕಿತ್ತು. ಆದರೆ 20ನೇ ಓವರ್​ನಲ್ಲಿ ಕಗಿಸೋ ರಬಾಡ ಮಾಡಿದ ಎರಡೆರಡು ನೋ…

Read More

ಬೆಂಗಳೂರಿನಲ್ಲಿ ಶಾಲಾ ಬಸ್​ ಹರಿದು ಮಕ್ಕಳಿಬ್ಬರು ಸಾವು: ಹಾಲು ತರಲು ಹೊರಟ್ಟಿದ್ದವರು ದುರಂತ ಅಂತ್ಯ – Kannada News | Bengaluru School Bus Accident: Two Children Die in Tragic Thanisandra Crash

ಬೆಂಗಳೂರು, ಫೆಬ್ರವರಿ 11: ಶಾಲಾ ಬಸ್​ ಹರಿದು (School Bus Accident) ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ನಗರದ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್​​ ಬಳಿ ನಡೆದಿದೆ. ವರ್ಷಾ(2) ಹಾಗೂ ಭಾನು(4) ಮೃತ ಮಕ್ಕಳು. ಖಾಸಗಿ ಶಾಲೆಗೆ ಸೇರಿದ ಬಸ್ ಬೈಕ್​​ಗೆ​ ಡಿಕ್ಕಿ ಹೊಡೆದು ಮಕ್ಕಳು ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಡಿಸಿಪಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹೆಣ್ಣೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಯಾದಗಿರಿ ಮೂಲದ ನಾಗನಗೌಡ ಅವರು…

Read More

ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರು: ಮಾರ್ಚ್ 5ರಂದು ಬೃಹತ್ ಹೋರಾಟಕ್ಕೆ ಕರೆ – Kannada News | Contractors Call for Massive Strike on March 5 Over Delayed Bill Payments

ಗುತ್ತಿಗೆದಾರರ ಸಂಘದ ಪೂರ್ವಭಾವಿ ಸಭೆImage Credit source: tv9 kannada ಮಂಡ್ಯ, ಫೆಬ್ರವರಿ 11: ರಾಜ್ಯ ಸರ್ಕಾರ ಬಿಲ್ ಬಾಕಿ ಉಳಿಸಿಕೊಂಡ ವಿಚಾರವಾಗಿ ಸರ್ಕಾರದ ವಿರುದ್ಧ ಗುತ್ತಿಗೆದಾರರು ಸಮರಕ್ಕೆ ಮುಂದಾಗಿದ್ದಾರೆ. ಸಾವಿರಾರು ಕೋಟಿ ರೂ ಬಾಕಿ ಬಿಲ್ ಬಿಡುಗಡೆ (Pending Bills) ಮಾಡದ ಹಿನ್ನೆಲೆ ರಾಜ್ಯ ಕಾಂಗ್ರೆಸ್​​ ಸರ್ಕಾರದ ವಿರುದ್ಧ ತಿರುಗಿಬಿದ್ದ ಗುತ್ತಿಗೆದಾರರು, ಮಾರ್ಚ್ 5ರಂದು ಬೃಹತ್ ಹೋರಾಟಕ್ಕೆ ಕರೆ (Contractors Protest) ನೀಡಿದ್ದಾರೆ. ಮಂಡ್ಯದ ಲೋಕೋಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್…

Read More

ಬೆಂಗಳೂರಲ್ಲಿ ಮೂರುವರೆ ಗಂಟೆಗೆ ಒಂದು ಆತ್ಮಹತ್ಯೆ: ಬೆಚ್ಚಿ ಬೀಳಿಸುವಂತಿದೆ ಅಂಕಿ-ಅಂಶ – Kannada News | Suicide Crisis in Bengaluru: One Life Lost Every 3.5 Hours, Says Report

ಬೆಂಗಳೂರು, ಫೆಬ್ರವರಿ 11: ಐಟಿ ಸಿಟಿ ಬೆಂಗಳೂರಲ್ಲಿ ಆತ್ಮಹತ್ಯೆ ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಏರಿಕೆ ಕಾಣುತ್ತಿದ್ದು, ಅಂಕಿ-ಅಂಶಗಳು ಬೆಚ್ಚಿಬೀಳಿಸುವಂತಿವೆ. ವರದಿಗಳ ಪ್ರಕಾರ, ನಗರದಲ್ಲಿ ಸರಾಸರಿ ಮೂರುವರೆ ಗಂಟೆಗೆ ಒಂದು ಆತ್ಮಹತ್ಯೆ ನಡೆಯುತ್ತಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಒಟ್ಟು 9,450 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದು, ವರ್ಷಕ್ಕೆ ಸರಾಸರಿ ಎರಡು ಸಾವಿರಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಗೃಹ ಇಲಾಖೆಯ ಮಾಹಿತಿಯಂತೆ, ಪ್ರತಿದಿನವೂ ಸುಮಾರು ಆರುರಿಂದ ಏಳು ಮಂದಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಬೆಂಗಳೂರಲ್ಲಿ ನಡೆದ ಆತ್ಮಹತ್ಯೆ ಕೇಸ್​​ಗಳ ಅಂಕಿ-ಅಂಶ ವರ್ಷ ಪ್ರಕರಣಗಳ…

Read More

ಬಜೆಟ್ ನಡುವೆ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ – Kannada News | DK Shivakumar Close Aide HC Balakrishna Reacts On Karnataka Congress MLAs foreign trip

ನವದೆಹಲಿ, (ಫೆಬ್ರವರಿ 11): ಕರ್ನಾಟಕ ಕಾಂಗ್ರೆಸ್​​​ನಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು, ಇದೀಗ ದೆಹಲಿ ಅಂಗಳ ತಲುಪಿದೆ. ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ರಾಹುಲ್​ ಗಾಂಧಿ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಗೆ ಸಿದ್ಧತೆಗಳನ್ನು ನಡೆಸಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್​​ನಲ್ಲಿ ಶಾಸಕರ ವಿದೇಶ ಪ್ರವಾಸ ಭಾರೀ ಸಂಚಲನ ಮೂಡಿಸಿದೆ. ಹೌದು…ಅಧ್ಯಯನ ಹೆಸರಿನಲ್ಲಿ ಕೆಲ ಶಾಸಕರು ಫಾರಿನ್ ಟ್ರಿಪ್ ಹೋಗಲು ಮುಂದಾಗಿದ್ದಾರೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಆಪ್ತ ಶಾಸಕ ಎಚ್​​ಸಿ…

Read More

‘ವಲವಾರ’ ನೋಡಲು ಹೋಗಿ: ‘ಯಾವ ನಾಯಿಗೆ ಬೇಕು ನಿನ್ನ ಟಿಕೆಟ್’ ಎನ್ನಿ – Kannada News | Veerakaputra Srinivas supports Kannada movie Valavara viral Facebook post

‘ಕನ್ನಡದಲ್ಲಿ ಒಳ್ಳೆ ಸಿನಿಮಾಗಳು ಬರಲ್ಲ’ ಪರಭಾಷೆ ಸಿನಿಮಾಗಳನ್ನು ನೋಡುವ ಕನ್ನಡಿಗರ ಕಾಮನ್ ಡೈಲಾಗ್ ಇದು. ಆದರೆ ಒಳ್ಳೆ ಕನ್ನಡ ಸಿನಿಮಾಗಳು ಬಂದಾಗ ಈ ‘ಸಿನಿಮಾ ಪ್ರೇಮಿ’ಗಳು ಜಾಣ ಕುರುಡು ಪ್ರದರ್ಶಿಸುತ್ತಾರೆ. ಈಗ ಮತ್ತೊಮ್ಮೆ ಇದು ಸಾಬೀತಾಗಿದೆ. ಕನ್ನಡದಲ್ಲಿ ‘ವಲವಾರ’ ಹೆಸರಿನ ಸುಂದರ, ಅಪ್ಪಟ ಕನ್ನಡ ಸಿನಿಮಾ ಒಂದು ಬಿಡುಗಡೆ ಆಗಿದೆ. ಆದರೆ ಮತ್ತದೆ ಸಮಸ್ಯೆ, ಸಿನಿಮಾ ಮಂದಿರಕ್ಕೆ ಜನ ಬರುತ್ತಿಲ್ಲ. ಆದರೆ ಕೆಲವು ನಿಜವಾದ ಸಿನಿಮಾ ಪ್ರೇಮಿಗಳು, ಕನ್ನಡ ಮನಸುಗಳು, ಅಪ್ಪಟ ಕನ್ನಡ ಸಿನಿಮಾಕ್ಕೆ ಎಂದಿನಂತೆ ಈ…

Read More

ಹೊಸ ಆದಾಯ ತೆರಿಗೆ ಕಾಯ್ದೆಯಲ್ಲಿ ಪ್ಯಾನ್ ನಿಯಮಗಳ ಬದಲಾವಣೆ ಗಮನಿಸಿ… – Kannada News | New Income Tax law, key PAN rules changes for common people

ನವದೆಹಲಿ, ಫೆಬ್ರುವರಿ 11: ಸರ್ಕಾರ ಆದಾಯ ತೆರಿಗೆ ಕಾನೂನಿನಲ್ಲಿ (New Income Tax rules) ಕೆಲ ಸುಧಾರಣೆಗಳನ್ನು ಮಾಡುತ್ತಿದ್ದು, ಹೊಸ ಕರಡು ನಿಯಮಗಳನ್ನು ರೂಪಿಸಿದೆ. ಇವು ಸಾರ್ವಜನಿಕ ಪರಾಮರ್ಶೆಗೆ ಒಳಪಡುತ್ತಿದ್ದು, ಅಂತಿಮ ನಿಯಮಗಳು 2026ರ ಏಪ್ರಿಲ್ 1ರಿಂದ ಜಾರಿಗೆ ಬರುತ್ತವೆ. ಈ ಪ್ರಸ್ತಾಪಿತ ನಿಯಮಗಳಲ್ಲಿ ಕೆಲ ಪ್ಯಾನ್ ನಿಯಮಗಳ ಬದಲಾವಣೆಗಳೂ ಇವೆ. ನಿಮ್ಮ ಹಣಕಾಸು ಸ್ಥಿತಿ ಗತಿ ಮತ್ತು ವರ್ತನೆಯ ಮೇಲೆ ಪರಿಣಾಮ ಬೀರಬಲ್ಲ ನಿಯಮಗಳೂ ಇದರಲ್ಲಿವೆ. ಕ್ಯಾಷ್ ಡೆಪಾಸಿಟ್ ಮಿತಿ, ವಾಹನ ಖರೀದಿ, ಇನ್ಷೂರೆನ್ಸ್ ಇತ್ಯಾದಿ…

Read More

ಕುಡಿದ ಮತ್ತಿನಲ್ಲಿ ಗೆಳೆಯ ಒಳಚರಂಡಿಯ ಮ್ಯಾನ್​ಹೋಲ್​ಗೆ ಬಿದ್ದಿದ್ದೇ ತಿಳಿಯಲಿಲ್ಲ! – Kannada News | Rohini Sewer Death case Drunk Man Did not Notice his Friend Fall In Manhole

ನವದೆಹಲಿ, ಫೆಬ್ರವರಿ 11: ದೆಹಲಿಯ ರೋಹಿಣಿ ಪ್ರದೇಶದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ರೋಹಿಣಿ ಸೆಕ್ಟರ್ 32ರಲ್ಲಿ ತೆರೆದ ಒಳಚರಂಡಿ ಮ್ಯಾನ್‌ಹೋಲ್‌ಗೆ (Manhole) ಬಿದ್ದು ಕಾರ್ಮಿಕ ಸಾವನ್ನಪ್ಪಿದ್ದಾರೆ. ಮೃತರನ್ನು ಬಿಹಾರದ ಸಮಸ್ತಿಪುರ ಜಿಲ್ಲೆಯ ನಿವಾಸಿ ಬಿರ್ಜು ಕುಮಾರ್ ರೈ ಎಂದು ಗುರುತಿಸಲಾಗಿದೆ. ಈ ಘಟನೆ ಸೋಮವಾರ ಸಂಜೆ ಬೇಗಂಪುರ ಪ್ರದೇಶದ ಮಹಾಶಕ್ತಿ ಕಾಳಿ ದೇವಸ್ಥಾನದ ಬಳಿ ಸಂಭವಿಸಿದೆ. ಬಿರ್ಜು ಕುಮಾರ್ ಸೋಮವಾರ ಸಂಜೆ ರೋಹಿಣಿ ಸೆಕ್ಟರ್ 32ರಲ್ಲಿ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಬಿರ್ಜು ಆಕಸ್ಮಿಕವಾಗಿ…

Read More