Headlines

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನೌಕರ ಹೋರಾಟ: ನಾಳೆಯಿಂದಲೇ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತ? – Kannada News | Karnataka Transport Workers Reject Govt Offer, Statewide Disruption Likely Friday

ಬೆಂಗಳೂರು, ಫೆಬ್ರವರಿ 19: ಕರ್ನಾಟಕ ರಾಜ್ಯ ಸಾರಿಗೆ ನೌಕರರು ತಮ್ಮ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಇಂದು ಬೆಂಗಳೂರು ಚಲೋ ಪ್ರತಿಭಟನೆ ನಡೆಸಿದ್ದಾರೆ. 38 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಮತ್ತು 2024ರ ಜನವರಿ 1ರಿಂದ ವೇತನ ಪರಿಷ್ಕರಣೆ ಮಾಡಬೇಕೆಂದು ನೌಕರರು ಬಿಗಿಪಟ್ಟು ಹಿಡಿದಿದ್ದು, ಸರ್ಕಾರದ 26 ತಿಂಗಳ ಹಿಂಬಾಕಿ ಮತ್ತು 2025ರ ಏಪ್ರಿಲ್‌ನಿಂದ ವೇತನ ಪರಿಷ್ಕರಣೆಯ ಪ್ರಸ್ತಾವನೆಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೆಂಗಳೂರು ಚಲೋ ಪ್ರತಿಭಟನೆ…

Read More

Daily Devotional: ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ವೃಕ್ಷಗಳು ನಮ್ಮ ವಂಶ ಪಾರಂಪರ್ಯವಾಗಿ ಸಹಾಯ ಮಾಡುತ್ತಲೇ ಇವೆ. ಆಹಾರ, ನೆರಳು, ಆಶ್ರಯ ನೀಡುವ ಈ ಮರಗಳಲ್ಲಿ ತುಳಸಿ ಗಿಡವು ಅತ್ಯಂತ ಪೂಜ್ಯನೀಯ ಸ್ಥಾನ ಪಡೆದಿದೆ. ಅರಳೀಮರದಂತೆ ತುಳಸಿ ಗಿಡವನ್ನು ಸಹ ಪೂಜಿಸಲಾಗುತ್ತದೆ. ಪ್ರತಿ ಮನೆಯಲ್ಲೂ ತುಳಸಿ ಗಿಡವಿರಬೇಕು ಎಂಬುದು ಹಿಂದೂ ಸಂಪ್ರದಾಯ. ತುಳಸಿಗೆ ನೀರು ಹಾಕಿ ಪೂಜೆ ಮಾಡುವುದರ ಜೊತೆಗೆ, ಪ್ರತಿದಿನ ಬೆಳಿಗ್ಗೆ ಐದು ನಿಮಿಷಗಳ ಕಾಲ…

Read More

ಧಾರವಾಡ: ಇಲ್ಲಿ ಇಡೀ ಗ್ರಾಮಕ್ಕೇ ಸಿಸಿಟಿವಿ ಕಣ್ಗಾವಲು! ಅಪರಾಧ ಕೃತ್ಯವೂ ಇಳಿಕೆ – Kannada News | Dharwad Mummigatti Village Under Full CCTV Surveillance: Crime Rate Drops, Model Gram Panchayat Emerges

ಇಡೀ ಮುಮ್ಮಿಗಟ್ಟಿ ಗ್ರಾಮಕ್ಕೇ ಸಿಸಿಟಿವಿ ಕಣ್ಗಾವಲು!Image Credit source: tv9 ಧಾರವಾಡ, ಫೆಬ್ರವರಿ 3: ಧಾರವಾಡ (Dharawad) ತಾಲೂಕಿನ ಮುಮ್ಮಿಗಟ್ಟಿ ಗ್ರಾಮ ಸುಮಾರು 12 ಸಾವಿರ ಜನಸಂಖ್ಯೆ ಹೊಂದಿದ್ದು, ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ಕ್ಕೆ ಹೊಂದಿಕೊಂಡೇ ಇದೆ. ಈ ಗ್ರಾಮದ ಪಕ್ಕ ಹೋಗುವ ವಾಹನಗಳ ಮೂಲಕ ಹೊರಗಿನ ಜನರು ಅಕ್ರಮಗಳನ್ನು ಎಸಗುವುದು ಸಾಮಾನ್ಯದ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್​ನಲ್ಲಿ ಮುಖ್ಯವಾದ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗಿದೆ. ಸಾಮಾನ್ಯವಾಗಿ ಗ್ರಾಮ ಪಂಚಾಯತ್​​ಗಳ ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ಮಾಡಬೇಕೆಂದರೂ ಅನುದಾನದ…

Read More

ಫಲಕೊಟ್ಟ ವಯಸ್ಕರ ಶಿಕ್ಷಣ ಅಭಿಯಾನ: ಉಡುಪಿ ಶೀಘ್ರವೇ ಪೂರ್ಣ ಸಾಕ್ಷರ ಜಿಲ್ಲೆ; ಘೋಷಣೆಯೊಂದೇ ಬಾಕಿ

ಉಡುಪಿ, ಮಾರ್ಚ್​​ 31: ಕರ್ನಾಟಕದ ಸಾಕ್ಷರತಾ ಪ್ರಮಾಣ ಶೇ. 82.7ರಷ್ಟಿರುವ ನಡುವೆ ಕರಾವಳಿ ಜಿಲ್ಲೆಗಳು ಪೂರ್ಣ ಸಾಕ್ಷರ ಜಿಲ್ಲೆಗಳಾಗುವತ್ತ ದಾಪುಗಾಲಿಟ್ಟಿವೆ. ಆ ಪೈಕಿ ಉಡುಪಿ ಶೀಘ್ರದಲ್ಲೇ ಪೂರ್ಣ ಸಾಕ್ಷರ ಜಿಲ್ಲೆಯಾಗಿ ಘೋಷಣೆಯಾಗಲಿದ್ದು, ಇದನ್ನು ಜಿಲ್ಲೆಯ ವಯಸ್ಕರ ಶಿಕ್ಷಣ ಅಭಿಯಾನದಲ್ಲಿನ ಮಹತ್ವದ ಮೈಲಿಗಲ್ಲೆಂದೇ ಪರಿಗಣಿಸಲಾಗಿದೆ. ಕಳೆದ ವರ್ಷ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಕ್ಷರಾಸಕ್ತರ ಗುರುತಿಸುವಿಕೆ ಹಾಗೂ ಶಿಕ್ಷಣ ನೀಡುವ ಕಾರ್ಯ ಆರಂಭವಾಗಿತ್ತು. ವಯಸ್ಕರ ಶಿಕ್ಷಣ ಇಲಾಖೆಯ ಮೂಲಗಳ ಪ್ರಕಾರ, ಕಾಪು, ಕಾರ್ಕಳ, ಹೆಬ್ರಿ, ಬ್ರಹ್ಮಾವರ ಮತ್ತು ಬೈಂದೂರು ತಾಲೂಕುಗಳಿಂದ…

Read More

ಕನ್ನಡ ಚಿತ್ರರಂಗಕ್ಕೆ ಗಟ್ಟಿ ನಾಯಕತ್ವದ ಅವಶ್ಯಕತೆ ಇದೆ: ಸುಮಲತಾ

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು. Read More Source link

Read More

‘ಮಗನಿಗೆ ಒಳ್ಳೆಯ ಅಪ್ಪ ಇದ್ದಾನೆ’; ಮೊದಲ ಬಾರಿಗೆ ಡಿವೋರ್ಸ್ ಬಗ್ಗೆ ಮೌನ ಮುರಿದ ಮಯೂರಿ – Kannada News | Mayuri on Divorce Rumors: It’s Personal, My Son’s Happiness Matters Most

ಮಯೂರಿ (Mayuri) ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತುಂಬಾನೇ ಫೇಮಸ್ ಆದವರು. ‘ಅಗ್ನಿ ನಕ್ಷತ್ರ’ ಧಾರಾವಾಹಿ ಮಾಡಿದ ಅವರು ಸಾಕಷ್ಟು ಜನಪ್ರಿಯತೆ ಪಡೆದರು. ನಂತರ ಹಿರಿತೆರೆಗೆ ಕಾಲಿಟ್ಟರು. ಅಲ್ಲಿಯೂ ಜನಪ್ರಿಯತೆ ಸಿಕ್ಕಿತು. 2020ರಲ್ಲಿ ಅವರು ಮದುವೆ ಆದರು. ಆದರೆ, ಅವರ ಸಂಬಂಧದಲ್ಲಿ ಬಿರುಕು ಮೂಡಿದೆ ಎಂಬ ವರದಿ ಇದೆ. ಆದರೆ, ಈ ಬಗ್ಗೆ ಅವರು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ ಎಂದು ಹೇಳಿದ್ದಾರೆ. ರಾಜೇಶ್ ಗೌಡ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ ಮಯೂರಿ. ‘ನಾನು ಸಿಟ್ಟು ಮಾಡಿಕೊಳ್ಳುವುದಿಲ್ಲ….

Read More

IND vs NZ: ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 2 ಬದಲಾವಣೆ – Kannada News | India vs New Zealand 5th T20: Thiruvananthapuram Finale; IND Batting First, Full Playing XIs

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಅಂತಿಮ ಹಂತವನ್ನು ತಲುಪಿದೆ. ಮೊದಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ಈಗಾಗಲೇ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಆದರೆ ಕಿವೀಸ್ ತಂಡವು ನಾಲ್ಕನೇ ಟಿ20ಯಲ್ಲಿ ಭಾರತವನ್ನು 50 ರನ್‌ಗಳಿಂದ ಸೋಲಿಸಿತ್ತು. ಇದೀಗ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಸೋಲಿನ ಅಂತರವನ್ನು ಕಡಿಮೆ ಮಾಡಲು ನೋಡುತ್ತಿದೆ. ಸರಣಿಯ ಅಂತಿಮ ಮತ್ತು ಐದನೇ ಪಂದ್ಯವು ಈಗ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯವು ಟಿ20 ವಿಶ್ವಕಪ್‌ಗೆ ಮುನ್ನ…

Read More

ವಿಡಿಯೋನಲ್ಲಿರುವ ಮಹಿಳೆಯರು ಬೇರೆ-ಬೇರೆ: ಇನ್ಸ್​ಪೆಕ್ಟರ್​​ ಸಂದೇಶ ಕೇಸಿನ ತನಿಖಾ ವರದಿಯಲ್ಲಿ ಬಹಿರಂಗ

ಮಂಗಳೂರು (ಮಾರ್ಚ್ 17): ಪೊಲೀಸ್ ಠಾಣೆಗೆ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆದು ಲೈಂಗಿಕ ಕಿರುಕುಳ ಹಾಗೂ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ (Moodbidri inspector Sandesh case) ನನ್ನು ಅಮಾನತು ಮಾಡಲಾಗಿದೆ. ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರದ ಆರೋಪಗಳ ಬಗ್ಗೆ ಎಸಿಪಿ (ACP) ನೀಡಿದ ಪ್ರಾಥಮಿಕ ತನಿಖಾ ವರದಿಯ ಆಧರಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಅವರು ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನ…

Read More

ದರ್ಶನ್ ವಿರುದ್ಧ ಸಾಕ್ಷಿ ಹೇಳದಂತೆ ಪ್ರಾಣ ಬೆದರಿಕೆ; ‘ಡಿ ಕಂಪನಿ’ ಫ್ಯಾನ್ ಪೇಜ್ ಅಡ್ಮಿನ್ ಸೇರಿ 3 ಫ್ಯಾನ್ಸ್ ಅರೆಸ್ಟ್ – Kannada News | Renukaswamy Murder Case: Three Darshan Fans Arrested for Threatening Witness

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಸಾಕ್ಷಿಯೊಬ್ಬರಿಗೆ ಧಮ್ಕಿ ಹಾಕಿದ ಆರೋಪದ ಮೇಲೆ ನಟ ದರ್ಶನ್ ಅಭಿಮಾನಿ ಬಳಗದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಕೊಲೆ ಕೇಸ್‌ನ 49ನೇ ಸಾಕ್ಷಿಯಾಗಿರುವ ಸಂದೀಪ್ ಎಂಬುವವರಿಗೆ ಸಾಕ್ಷಿ ಹೇಳದಂತೆ ಬೆದರಿಕೆ ಒಡ್ಡಲಾಗಿತ್ತು. ಈ ಬಗ್ಗೆ ಸಾಕ್ಷಿದಾರ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸರು ಸಾಕ್ಷಿಗೆ ಬಿಗಿ ರಕ್ಷಣೆ ನೀಡಿ, ಬೆದರಿಕೆ ಹಾಕಿದ ಆರೋಪಿಗಳಿಗಾಗಿ ಜಾಲ ಬೀಸಿದ್ದರು. ಸದ್ಯ ಕಾರ್ಯಾಚರಣೆ ನಡೆಸಿರುವ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 24ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 24ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಮಕ್ಕಳ ಆರೋಗ್ಯ, ಶಿಕ್ಷಣ, ವ್ಯಾಪಾರ- ವ್ಯವಹಾರಗಳಿಗೆ ಬೇಕಾದ ಅನುಕೂಲ ಮಾಡಿಕೊಡುವುದಕ್ಕೆ ಹೆಚ್ಚಿನ ಶ್ರಮವನ್ನು ಹಾಕಲಿದ್ದೀರಿ. ಸಮಾಧಾನದಿಂದ ಕೆಲವು ಮುಖ್ಯವಾದ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದೀರಿ. ಈ ದಿನ ನಿಮ್ಮ ಪಾಲಿಗೆ ಹೊಸ ರೀತಿಯಲ್ಲಿ ಇರುತ್ತದೆ. ಇಲ್ಲಿಯ ತನಕ ನೀವು…

Read More