ಶಸ್ತ್ರಾಸ್ತ್ರ ತಯಾರಿಕೆಗೆ ಭಾರತವನ್ನು ಪಾರ್ಟ್ನರ್ ಮಾಡಿಕೊಳ್ಳಲು ಯೂರೋಪ್, ಇಸ್ರೇಲ್ ಆಸಕ್ತಿ? – Kannada News | Europe, Israel interested in making India as their defence partner for weapon production

ನವದೆಹಲಿ, ಡಿಸೆಂಬರ್ 29: ಜಾಗತಿಕವಾಗಿ ಸಂಘರ್ಷಗಳು ಹೆಚ್ಚುತ್ತಿದ್ದು, ಮಿಲಿಟರಿ ತಂತ್ರ ಮತ್ತು ಹೂರಣಗಳ ಸ್ವರೂಪವೇ ಬದಲಾಗುತ್ತಿದೆ. ದೀರ್ಘಾವಧಿ ಯುದ್ಧದಲ್ಲಿ ಉಳಿಯಬೇಕಾದರೆ ಶಸ್ತ್ರಾಸ್ತ್ರಗಳು ಪ್ರಮಾಣ ಬಹಳಷ್ಟು ಬೇಕು. ಹೆಚ್ಚಿನ ದೇಶಗಳಲ್ಲಿರುವ ಶಸ್ತ್ರಾಸ್ತ್ರಗಳು ಕೆಲವೇ ದಿನಗಳ ಯುದ್ಧಕ್ಕೆ ಖಾಲಿಯಾಗುತ್ತವೆ. ಯುದ್ಧ ಸಂದರ್ಭದಲ್ಲಿ ಶಸ್ತ್ರಾಸ್ತ್ರಗಳ ಸರಬರಾಜು ಬಹಳ ಅಗತ್ಯವಾಗಿರುತ್ತದೆ. ಇದು ಉಕ್ರೇನ್ ಮತ್ತು ರಷ್ಯಾ ಯುದ್ಧದಿಂದ ಜಗತ್ತು ಕಲಿತಿರುವ ಪಾಠ. ಅಂತೆಯೇ, ಯೂರೋಪ್ ಮತ್ತು ಇಸ್ರೇಲ್ ದೇಶಗಳು ತಮ್ಮ ಶಸ್ತ್ರಾಸ್ತ್ರ ಅಗತ್ಯಗಳಿಗೆ ಭಾರತದತ್ತ ಮುಖ ಮಾಡಹೊರಟಿವೆ.

ಯೂರೋಪ್ ಮತ್ತು ಇಸ್ರೇಲ್ ದೇಶಗಳು ಭಾರತವನ್ನು ತಮ್ಮ ಡಿಫೆನ್ಸ್ ಪಾರ್ಟ್ನರ್ ಆಗಿ ಮಾಡಿಕೊಳ್ಳಲು ಆಸಕ್ತಿ ತೋರುತ್ತಿವೆ. ಭಾರತವು ಡಿಫೆನ್ಸ್ ಪಾರ್ಟ್ನರ್ ಆಗಲು ಸೂಕ್ತವಾದ ಮತ್ತು ವಿಶ್ವಾಸಾರ್ಹವಾದ ದೇಶವಾಗಿ ಯೂರೋಪ್ ಮತ್ತು ಇಸ್ರೇಲ್ ಕಣ್ಣಿಗೆ ಕಾಣುತ್ತಿದೆ. ಇದರಲ್ಲಿ ಅಚ್ಚರಿಯ ಅಂಶವೇನೂ ಇಲ್ಲ.

ಇದನ್ನೂ ಓದಿ: ಅಮೆರಿಕದೊಂದಿಗೆ ಟ್ರೇಡ್ ಡೀಲ್; ಅಂತಿಮ ಪ್ರಸ್ತಾಪ ಸಲ್ಲಿಸಿದ ಭಾರತ; ಕೃಷಿ ತಂಟೆ ಬೇಡ, ಟ್ಯಾರಿಫ್ ನಿಲ್ಲಿಸಿ ಎಂಬುದು ಭಾರತದ ಬೇಡಿಕೆ

ಯುದ್ಧದ ವೇಳೆ ಮದ್ದುಗುಂಡುಗಳು, ಕ್ಷಿಪಣಿಗಳು, ಡ್ರೋನ್, ಏರ್ ಡಿಫೆನ್ಸ್ ಇಂಟರ್ಸೆಪ್ಟರ್ ಇತ್ಯಾದಿಗಳು ಎಷ್ಟು ಬಂದರೂ ಸಾಲದು. ಯೂರೋಪ್ ಮತ್ತು ಇಸ್ರೇಲ್​ನಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಶಸ್ತ್ರಾಸ್ತ್ರ ತಯಾರಿಕೆ ವ್ಯವಸ್ಥೆ ಇದೆ. ಆದರೂ ಕೂಡ ಭಾರತವನ್ನು ಡಿಫೆನ್ಸ್ ಪಾರ್ಟ್ನರ್ ಆಗಿ ಮಾಡಿಕೊಳ್ಳಲು, ಮತ್ತು ಭಾರತದಿಂದ ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳಲು ಇವು ಆಸಕ್ತಿ ತೋರುತ್ತಿರುವುದಕ್ಕೆ ಸಕಾರಣಗಳಿವೆ.

ಮೊದಲಿಗೆ, ಯೂರೋಪ್​ನಲ್ಲಿ ಡಿಫೆನ್ಸ್ ಇಂಡಸ್ಟ್ರಿಗಳು ಇವೆ. ಆದರೆ, ದೀರ್ಘಕಾಲದ ಯುದ್ಧವನ್ನು ನಿರ್ವಹಿಸಲು ಬೇಕಾದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನು, ಮದ್ದುಗುಂಡುಗಳನ್ನು ಕ್ಷಿಪ್ರವಾಗಿ ತಯಾರಿಸಲು ಆಗುವುದಿಲ್ಲ. ಇಸ್ರೇಲ್​ಗೆ ಇದಕ್ಕಿಂತ ದೊಡ್ಡ ಸಮಸ್ಯೆ ಇದೆ. ಅಲ್ಲಿ ದೊಡ್ಡ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ತಯಾರಿಸುವ ವ್ಯವಸ್ಥೆ ಇಲ್ಲ. ಅದರ ಜೊತೆಗೆ, ಸುತ್ತಮುತ್ತ ವೈರಿ ದೇಶಗಳೇ ಇರುವುದರಿಂದ ಮತ್ತು ಇಸ್ರೇಲ್ ಪುಟ್ಟ ಪ್ರದೇಶವಾಗಿರುವುದರಿಂದ ಶಸ್ತ್ರಾಸ್ತ್ರ ತಯಾರಿಕೆ ಘಟಕಗಳನ್ನು ವೈರಿಗಳು ಸುಲಭವಾಗಿ ಗುರಿಯಾಗಿಸಿ ನಾಶ ಮಾಡಬಹುದು. ಹೀಗಾಗಿ, ಬೇರೆ ಕಡೆ ಶಸ್ತ್ರಾಸ್ತ್ರಗಳ ತಯಾರಿಕೆಯ ವ್ಯವಸ್ಥೆ ಮಾಡುವುದು ಅನಿವಾರ್ಯ.

ಇದನ್ನೂ ಓದಿ: ಈ ವರ್ಷ 1 ಟ್ರಿಲಿಯನ್ ಡಾಲರ್ ರಫ್ತು ಗುರಿ ಅಸಾಧ್ಯ; ಭಾರತಕ್ಕಿರುವ ಪ್ರಮುಖ ತೊಡಕುಗಳಿವು…

ಭಾರತವನ್ನು ಯಾಕೆ ನಂಬುತ್ತವೆ ಈ ದೇಶಗಳು…?

ಭಾರತದಲ್ಲಿ ಬಹಳ ವ್ಯಾಪಕವಾಗಿರುವ ಉದ್ಯಮಗಳಿವೆ. ಕಾರ್ಮಿಕ ಸಮೂಹ ದೊಡ್ಡದಿದೆ. ಕೌಶಲ್ಯವಂತ ಕಾರ್ಮಿಕರು, ಅರೆಕೌಶಲದ ಕಾರ್ಮಿಕರು ಹೇರಳ ಸಂಖ್ಯೆಯಲ್ಲಿ ಸಿಗುತ್ತಾರೆ. ಇಲ್ಲಿಯ ಡಿಫೆನ್ಸ್ ಸೆಕ್ಟರ್ ಖಾಸಗಿಯವರಿಗೂ ತೆರೆದಿದೆ. ಕ್ಷಿಪಣಿ, ರಾಡಾರ್, ಯುಎವಿ, ಮದ್ದುಗುಂಡು ಇತ್ಯಾದಿಗಳನ್ನು ತಯಾರಿಸಬಲ್ಲ ಕಂಪನಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಬಹಳ ಕಡಿಮೆ ಸಮಯದಲ್ಲಿ ಹೆಚ್ಚು ಶಸ್ತ್ರಾಸ್ತ್ರಗಳನ್ನು ತಯಾರಿಸಬಲ್ಲ ಸಾಮರ್ಥ್ಯ ಭಾರತಕ್ಕೆ ಇದೆ ಎನ್ನುವುದು ಯೂರೋಪ್ ಮತ್ತು ಇಸ್ರೇಲ್ ದೇಶಗಳಿಗೆ ತಿಳಿದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Chanakya Niti: ನಿಮ್ಮ ಈ ವೈಯಕ್ತಿಯ ವಿಚಾರಗಳನ್ನು ಅಪ್ಪಿತಪ್ಪಿಯೂ ಸಂಬಂಧಿಕರ ಬಳಿ ಶೇರ್‌ ಮಾಡಬೇಡಿ – Kannada News | Chanakya Niti: Chanakya says you should not share these personal details with your relatives

ನಮ್ಮ ಜೀವನದ ಸಿಹಿ ಕಹಿ ಎಲ್ಲಾ ರೀತಿಯ ವಿಚಾರಗಳನ್ನು ನಮ್ಮವರ ಬಳಿ ಹಂಚಿಕೊಳ್ಳುತ್ತೇವೆ. ಅದರಲ್ಲೂ ಹೆಚ್ಚಾಗಿ ಸಂಬಂಧಿಕರು (relatives) ಮತ್ತು ಸ್ನೇಹಿತರ ಬಳಿ ಎಲ್ಲಾ ವಿಚಾರಗಳನ್ನು ಶೇರ್‌ ಮಾಡುತ್ತಿರುತ್ತೇವೆ. ಆದ್ರೆ ಇಂದಿನ ಈ ಕಾಲದಲ್ಲಿ ಯಾರು ನಂಬಿಕೆಗೆ ಅರ್ಹರು, ಯಾರು ನಮ್ಮ ಬೆನ್ನ ಹಿಂದೆ ಮಾತನಾಡುತ್ತಾರೆ, ನಮ್ಮ ಏಳಿಗೆಯನ್ನು ನೋಡಿ ಅಸೂಯೆ ಪಡುತ್ತಾರೆ ಎನ್ನುವುದು ಗೊತ್ತೇ ಆಗಲ್ಲ. ಅದಕ್ಕಾಗಿ ಎಷ್ಟೇ ಹತ್ತಿರದ ಸಂಬಂಧಿಗಳಾದರೂ ಸರಿ ಅವರ ಬಳಿ ನಿಮ್ಮ ಈ ಕೆಲವೊಂದಿಷ್ಟು ವೈಯಕ್ತಿಕ ವಿಚಾರಗಳನ್ನು ಹಂಚಿಕೊಳ್ಳಲೇಬಾರದು, ಇದರಿಂದ ಅನುಕೂಲಕ್ಕಿಂತ ಹಾನಿಯೇ ಹೆಚ್ಚು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ರೆ ಯಾವ ಕಾರಣಕ್ಕಾಗಿ ಯಾವೆಲ್ಲಾ ವೈಯಕ್ತಿಕ ವಿಷಯಗಳನ್ನು ಸಂಬಂಧಿಕರ ಬಳಿ ಶೇರ್‌ ಮಾಡಬಾರದು ಎಂಬುದನ್ನು ನೋಡೋಣ ಬನ್ನಿ.

ನಿಮ್ಮ ಈ ವೈಯಕ್ತಿಯ ವಿಚಾರಗಳನ್ನು ಸಂಬಂಧಿಕರ ಬಳಿ ಶೇರ್‌ ಮಾಡಬೇಡಿ:

ನಿಮ್ಮ ಆದಾಯ: ನಿಮ್ಮ ಆದಾಯ, ಗಳಿಕೆಯ ಬಗ್ಗೆ ಸಂಬಂಧಿಕರ ಬಳಿ ಹಂಚಿಕೊಳ್ಳದಿರುವುದೇ ಉತ್ತಮ. ಏಕೆಂದರೆ ಕೆಲವರು ನಿಮ್ಮ ಆದಾಯದ ಬಗ್ಗೆ ಅಸೂಯೆ ಪಡುವ ಸಾಧ್ಯತೆ ಇರುತ್ತದೆ. ಇದರಿಂದ ಒಳ್ಳೆಯದಕ್ಕಿಂತ ನಕಾರಾತ್ಮಕ ಪರಿಣಾಮಗಳು ಬೀರುವುದೇ ಹೆಚ್ಚು. ಹಾಗಾಗಿ ಈ ವಿಚಾರವನ್ನು ಯಾರೊಂದಿಗೂ ಹಂಚಿಕೊಳ್ಳದಿರಿ.

ಕೌಟುಂಬಿಕ ಕಲಹಗಳು: ಹೆಚ್ಚಿನವರು ತಮ್ಮ ಮನೆಯೊಳಗೆ ನಡೆಯುವ ಕೌಟುಂಬಿಕ ಕಲಹಗಳು ಮತ್ತು ಜಗಳಗಳ ಬಗ್ಗೆ ಸಂಬಂಧಿಕರ ಬಳಿ ಹಂಚಿಕೊಳ್ಳುತ್ತಾರೆ. ಮನೆಯಲ್ಲಿ ನಡೆಯುವ ಕಲಹಗಳ ಬಗ್ಗೆ ಯಾರೊಂದಿಗೂ ಹಂಚಿಕೊಳ್ಳಬಾರದು. ಏಕೆಂದರೆ ಕೆಲವರು ಇದನ್ನು ಗಾಸಿಪ್‌ ಮಾಡುತ್ತಾರೆ. ಇದರಿಂದ ಸಮಸ್ಯೆ ಇನ್ನಷ್ಟು ಹದಗೆಡುತ್ತದೆ.

ಮಾನಸಿಕ ನೋವು: ನಿಮ್ಮ ಮಾನಸಿಕ ನೋವು, ನಿಮ್ಮ ದೌರ್ಜಲ್ಯ, ಹಿಂದೆ ಆದಂತಹ ಅವಮಾನಗಳ ಬಗ್ಗೆ ಸಂಬಂಧಿಕರೊಂದಿಗೆ ಹಂಚಿಕೊಳ್ಳಬೇಡಿ. ಏಕೆಂದರೆ ಎಲ್ಲರೂ ನಿಮಗೆ ಸಹಾನುಭೂತಿ ತೋರುವುದಿಲ್ಲ, ಕೆಲವರು ಅದನ್ನು ಆಯುಧವಾಗಿಯೂ ಬಳಸಬಹುದು.

ಪ್ರೀತಿ ವಿಚಾರ:  ಸಂಬಂಧಿಕರ ಹಸ್ತಕ್ಷೇಪವು ಸಂಬಂಧದಲ್ಲಿ ಅನುಮಾನ ಮತ್ತು ಅಂತರವನ್ನು ಸೃಷ್ಟಿಸಬಹುದು. ನಿಮ್ಮ ಪ್ರೀತಿ ಸಂಬಂಧದ ವಿಚಾರದ ಬಗ್ಗೆ ಯಾರಿಗೂ ಹೇಳಬೇಡಿ ಏಕೆಂದರೆ ನಿಮ್ಮ ನಿಜವಾದ ಪ್ರೀತಿಯ ಇನ್ನೂ ಕೆಲವರು ನಿಮ್ಮ ಪ್ರೀತಿಯ ವಿಚಾರದಲ್ಲಿ ಮೂಗು ತುರಿಸಿ ಸಂಬಂಧದಲ್ಲಿ ಹುಳಿ ಹಿಂಡಬಹುದು.

ಇದನ್ನೂ ಓದಿ: ಕ್ರಿಸ್ಮಸ್‌, ನ್ಯೂ ಇಯರ್‌ಗೆ ಟ್ರಿಪ್‌ ಹೋಗೋ ಪ್ಲಾನ್‌ ಇದ್ಯಾ? ಹಾಗಿದ್ರೆ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ

ಭವಿಷ್ಯದ ಯೋಜನೆಗಳು: ಜೀವನದಲ್ಲಿ ಯಶಸ್ಸನ್ನು ಸಾಧಿಸಲು, ನೀವು ಕಠಿಣ ಪರಿಶ್ರಮದ ಜೊತೆಗೆ ಹಲವಾರು ಇತರ ವಿಷಯಗಳತ್ತ ಗಮನ ಹರಿಸಬೇಕು. ಆಚಾರ್ಯ ಚಾಣಕ್ಯರ ಪ್ರಕಾರ, ನೀವು ನಿಮ್ಮ ಗುರಿಗಳನ್ನು, ಭವಿಷ್ಯದ ಯೋಜನೆಗಳನ್ನು ಸಂಬಂಧಿಕರ ಜೊತೆ ಹಂಚಿಕೊಳ್ಳಬಾರದು. ಏಕೆಂದರೆ ಅವರು  ನಿಮ್ಮ ಪ್ರಗತಿಗೆ ಅಡ್ಡಿ ಉಂಟುಮಾಡಬಹುದು.

ಕೆಟ್ಟ ಅಭ್ಯಾಸಗಳು ಮತ್ತು ನ್ಯೂನತೆಗಳು: ನಿಮ್ಮ ಕೆಟ್ಟ ಅಭ್ಯಾಸಗಳು ಮತ್ತು ನ್ಯೂನತೆಗಳ ಬಗ್ಗೆ ಮುಖ್ಯವಾಗಿ ಸಂಬಂಧಿಕರ ಬಳಿ ಹೇಳಲೇಬೇಡಿ. ನಿಮ್ಮ ಈ ವಿಚಾರಗಳ ಬಗ್ಗೆ ಇತರರೊಂದಿಗೆ ಹಂಚಿಕೊಂಡು ನಿಮ್ಮ ಬಗ್ಗೆ ನಕಾರಾತ್ಮಕತೆಯನ್ನು ಹರಡಬಹುದು. ಇದು ನಿಮಗೆ ಕಳಂಕ ಉಂಟುಮಾಡಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟೀಂ ಇಂಡಿಯಾ ಜೆರ್ಸಿ ಮೇಲೆ ಬಾಬರ್ ಆಝಂ ಆಟೋಗ್ರಾಫ್; ಕೆರಳಿದ ಫ್ಯಾನ್ಸ್ – Kannada News | Babar Azam India Jersey Autograph: Controversy Ignites Fan Fury

ಭಾರತ ಮತ್ತು ಪಾಕಿಸ್ತಾನ (India- Pakistan) ನಡುವಿನ ಎಲ್ಲಾ ರೀತಿಯ ಸಂಬಂಧಕ್ಕೆ ಎಳ್ಳು ನೀರು ಬಿಟ್ಟು ವರ್ಷಗಳೇ ಕಳೆದಿವೆ. ಇದರ ಪರಿಣಾಮವಾಗಿ ಕ್ರಿಕೆಟ್​ ಪಂದ್ಯದಲ್ಲೂ ಉಭಯ ತಂಡಗಳ ಆಟಗಾರರು ದೃಷ್ಟಿಯಿಟ್ಟು ನೋಡುವುದಿರಲಿ, ಕೈಕೂಡ ಕುಲುಕುತ್ತಿಲ್ಲ. ಇದೆಲ್ಲದರ ನಡುವೆ ಪಾಕಿಸ್ತಾನದ ಆಟಗಾರನೊಬ್ಬ ಟೀಂ ಇಂಡಿಯಾ ಜೆರ್ಸಿಯ (India cricket jersey) ಮೇಲೆ ತನ್ನ ಆಟೋಗ್ರಾಫ್ ಹಾಕಿದರೆ ಪರಿಸ್ಥಿತಿ ಏನಾಗಬೇಡ?. ​ಪಾಕಿಸ್ತಾನ ತಂಡದ ಮಾಜಿ ನಾಯಕ ಬಾಬರ್ ಆಝಂ (Babar Azam) ಟೀಂ ಇಂಡಿಯಾ ಜೆರ್ಸಿಯ ಮೇಲೆ ತನ್ನ ಆಟೋಗ್ರಾಫ್ ನೀಡಿರುವುದು ಭಾರತೀಯರನ್ನು ಕೆರಳಿಸಿದೆ. ಇದರಲ್ಲಿ ಬಾಬರ್​ದ್ದು ಯಾವುದೇ ತಪ್ಪಿಲ್ಲದಿದ್ದರೂ, ಅಭಿಮಾನಿಗಳು ಮಾತ್ರ ಬಾಬರ್ ವಿರುದ್ಧ ಕೆಂಡಕಾರುತ್ತಿದ್ದಾರೆ. ಬಾಬರ್ ಆಝಂ ಟೀಂ ಇಂಡಿಯಾ ಜೆರ್ಸಿಗೆ ಅವಮಾನ ಮಾಡಿದ್ದಾರೆ ಎಂತಲೂ ಕೆಲವರು ಆರೋಪಿಸಿದ್ದಾರೆ.

ಟೀಂ ಇಂಡಿಯಾ ಜೆರ್ಸಿ ಮೇಲೆ ಬಾಬರ್ ಆಟೋಗ್ರಾಫ್

ವಾಸ್ತವವಾಗಿ ಪಾಕಿಸ್ತಾನದ ಕೆಲವು ಸ್ಟಾರ್ ಆಟಗಾರರು ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನಲ್ಲಿ ಆಡುತ್ತಿದ್ದಾರೆ. ಅವರಲ್ಲಿ ಪಾಕ್ ತಂಡದ ಮಾಜಿ ನಾಯಕ ಬಾಬರ್ ಕೂಡ ಒಬ್ಬರು. ಈ ಲೀಗ್​ನಲ್ಲಿ ಸಿಡ್ನಿ ಪರ ಆಡುತ್ತಿರುವ ಬಾಬರ್ ಬಳಿ ಟೀಂ ಇಂಡಿಯಾ ಅಭಿಮಾನಿಯೊಬ್ಬರು ಆಟೋಗ್ರಾಫ್ ಕೇಳಿದ್ದಾರೆ. ಆ ಅಭಿಮಾನಿ ಭಾರತ ತಂಡದ ಜೆರ್ಸಿಯನ್ನು ಧರಿಸಿದ್ದು ಬಾಬರ್ ಆ ಜೆರ್ಸಿಯ ಮೇಲೆ ತನ್ನ ಆಟೋಗ್ರಾಫ್ ನೀಡಿದ್ದಾರೆ. ಮೇಲೆ ಹೇಳಿದಂತೆ ಇದರಲ್ಲಿ ಬಾಬರ್ ಅವರ ತಪ್ಪಿಲ್ಲ. ಏಕೆಂದರೆ ಅಭಿಮಾನಿ ಕೇಳಿದ ಕಡೆ ಬಾಬರ್ ತಮ್ಮ ಆಟೋಗ್ರಾಫ್ ನೀಡಿದ್ದಾರೆ.

ಆದಾಗ್ಯೂ ಟೀಂ ಇಂಡಿಯಾ ಜೆರ್ಸಿಯ ಮೇಲೆ ಬಾಬರ್ ಆಝಂ ನೀಡಿದ ಆಟೋಗ್ರಾಫ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಭಾರತೀಯ ಅಭಿಮಾನಿಗಳು ಇದನ್ನು ಭಾರತೀಯ ತಂಡದ ಜೆರ್ಸಿಗೆ ಮಾಡಿದ ಅವಮಾನ ಎಂದು ಕರೆದಿದ್ದಾರೆ. ಇದಕ್ಕಾಗಿ ಬಾಬರ್ ಆಝಂ ತೀವ್ರ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧಗಳು ಈಗಾಗಲೇ ಹದಗೆಟ್ಟಿವೆ. ಇದೆಲ್ಲದರ ನಡುವೆ ಜೆರ್ಸಿ ಮೇಲೆ ಬಾಬರ್ ಆಟೋಗ್ರಾಫ್ ನೀಡಿರುವುದು ಹೊಸ ವಿವಾದವನ್ನು ಹುಟ್ಟುಹಾಕಬಹುದು. ಇತ್ತ ಪಿಸಿಬಿ ಕೂಡ ಬಾಬರ್ ಅವರ ವಿರುದ್ಧ ಕ್ರಮ ಕೈಗೊಳ್ಳಬಹುದು.

ಫಾರ್ಮ್​ ಕಳೆದುಕೊಂಡಿರುವ ಬಾಬರ್

ಆಟೋಗ್ರಾಫ್ ವಿವಾದ ಒಂದೆಡೆಯಾದರೆ, ಇನ್ನೊಂದೆಡೆ ಬಾಬರ್ ತಮ್ಮ ಕಳಪೆ ಫಾರ್ಮ್​ನಿಂದಾಗಿ ತಂಡದಿಂದಲೇ ಹೊರಬಿದ್ದಿದ್ದಾರೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಪಾಕಿಸ್ತಾನ ತಂಡದಲ್ಲಿ ಬಾಬರ್ ಅವರನ್ನು ಆಯ್ಕೆ ಮಾಡಲಾಗಿಲ್ಲ. ಇತ್ತ ಬಿಗ್ ಬ್ಯಾಷ್ ಲೀಗ್‌ನಲ್ಲಿ ಸಿಡ್ನಿ ಸಿಕ್ಸರ್ಸ್‌ ಪರ ಆಡುತ್ತಿರುವ ಬಾಬರ್ ಅಲ್ಲಿಯೂ ಇಲ್ಲಿಯವರೆಗೆ ನಿರಾಶಾದಾಯಕ ಪ್ರದರ್ಶನ ನೀಡಿದ್ದಾರೆ. ಆಡಿರುವ ನಾಲ್ಕು ಪಂದ್ಯಗಳಲ್ಲಿ ಕೇವಲ 71 ರನ್‌ಗಳನ್ನು ಗಳಿಸಿದ್ದಾರೆ, ಸರಾಸರಿ 17.7. ಅವರ ಸ್ಟ್ರೈಕ್ ರೇಟ್ ಕೂಡ 110 ಆಗಿದೆ. ಅವರು ತಮ್ಮ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಮೂರರಲ್ಲಿ ಎರಡಂಕಿಯನ್ನು ತಲುಪಲು ವಿಫಲರಾಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶೂಟ್​ ಮಾಡಿಕೊಂಡು ಪತಿ ಆತ್ಮಹತ್ಯೆ: ನನ್ನ ಗಂಡ ಸೈಕೋ ಎಂದ ಪತ್ನಿ, ಆಗಿದ್ದೇನು? – Kannada News | Kalaburagi: Man Dies by Suicide Using Gun Amid Marital Dispute

ಕಲಬುರಗಿ, ಡಿಸೆಂಬರ್​​ 29: ನಗರದ ಶಿವಶಕ್ತಿ ಕಾಲೋನಿಯಲ್ಲಿ ರಿವಾಲ್ವರ್​ನಿಂದ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ (suicide) ಶರಣಾಗಿರುವಂತಹ ಘಟನೆ ನಡೆದಿದೆ. ಖಂಡುರಾಜ್ ದವಳಜಿ(36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತನ್ನ ಲೈಸೆನ್ಸ್ ರಿವಾಲ್ವರ್​​​ನಿಂದಲೇ ಖಂಡುರಾಜ್ ಶೂಟ್ ಮಾಡಿಕೊಂಡಿದ್ದಾರೆ. ಪತ್ನಿ ಜೊತೆಗಿನ ಜಗಳ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಚೌಕ್ ಠಾಣೆಯ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ.

ನನ್ನ ಗಂಡ ಸೈಕೋ: ಖಂಡುರಾಜ್ ದವಳಜಿ ಪತ್ನಿ ಪ್ರಿಯಾ

ಆತ್ಮಹತ್ಯೆ ಮಾಡಿಕೊಂಡ ಖಂಡುರಾಜ್ ದವಳಜಿ ಪತ್ನಿ ಪ್ರಿಯಾ ನಡತೆ ಬಗ್ಗೆ ಅನುಮಾನ ಪಡುತ್ತಿದ್ದರಂತೆ. ಹೀಗಾಗಿ ಪತ್ನಿ ಜೊತೆ ಜಗಳವಾಡುತ್ತಿದ್ದರು. ರವಿವಾರ ಕೂಡ ಗಲಾಟೆ ಮಾಡಿದ್ದು, ನಿದ್ದೆ ಮಾತ್ರೆ ಕೊಟ್ಟು ಸಾಯಿಸುವುದಕ್ಕೆ ಅಂತಾ ಪ್ಲ್ಯಾನ್ ಮಾಡಿದ್ದರು. ನನ್ನ ಗಂಡ ಸೈಕೋ ರೀತಿ ವರ್ತಿಸುತ್ತಿದ್ದರು ಎಂದು ಪತ್ನಿ ಪ್ರಿಯಾ ಹೇಳಿದ್ದಾರೆ.

ಇದನ್ನೂ ಓದಿ: ಮನೆಗೆ ಬರ್ತಾನೆಂದು ಮಗನ ದಾರಿ ಕಾಯುತ್ತಿದ್ದ ತಾಯಿಗೆ ಬರಸಿಡಿಲು: 10 ದಿನದ ಬಳಿಕ ಪುತ್ರ ಶವವಾಗಿ ಪತ್ತೆ

ಲೈಸೆನ್ಸ್ ಇಲ್ಲದೆ ಇರುವ ಕಂಟ್ರಿ ಮೇಡ್ ಪಿಸ್ತೂಲ್​​ನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಯದಿಂದ ನಾವು ಮನೆ ಬಿಟ್ಟು ಹೋಗಿದ್ದೇವು. ಬೆಳಿಗ್ಗೆ ನನ್ನ ಗಂಡ ಸಾವನ್ನಪ್ಪಿರುವುದು ಗೊತ್ತಾಗಿ ಇವಾಗ ಬಂದು ನೋಡಿದೆ ಎಂದು ಅವರು ಹೇಳಿದ್ದಾರೆ.

ಸಿಮೆಂಟ್ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ: ಸವಾರ ಸಾವು, ಚಾಲಕ ಪರಾರಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡನಹಳ್ಳಿ ಬಳಿ ಸಿಮೆಂಟ್ ಬಲ್ಕರ್ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಇದನ್ನೂ ಓದಿ: ಕುಡಿದ ಮತ್ತಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ವಿದ್ಯಾರ್ಥಿ: ಪಾದಚಾರಿ ಸಾವು

ಬೈಕ್​ನಲ್ಲಿದ್ದ ಪವನ್ ಕುಮರ್(22) ಮತ್ತು ಅಶೋಕ್(24) ಮೃತರು. ಮುಂದೆ ಚಲಿಸುತ್ತಿದ್ದ ಲಾರಿ ಚಾಲಕ ದಿಢೀರ್​ ಬ್ರೇಕ್ ಹಾಕಿದ್ದಕ್ಕೆ ಅಪಘಾತ ಸಂಭವಿಸಿದೆ ಅಂತ ಆರೋಪ ಕೇಳಿಬಂದಿದೆ. ಅಪಘಾತ ಬಳಿಕ ಲಾರಿ ಸಮೇತ ಚಾಲಕ ಪರಾರಿ ಆಗಿದ್ದಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬಿಗ್ ಬಾಸ್ ಗೆಲ್ಲೋದು ಗಿಲ್ಲಿ ನಟ: ಖಚಿತವಾಗಿ ಹೇಳಿದ ಸೂರಜ್ ಸಿಂಗ್ – Kannada News | Suraj Singh says Gilli Nata will win Bigg Boss Kannada Season 12 trophy

ಇನ್ನೇನು ಕೆಲವೇ ದಿನಗಳಲ್ಲಿ ‘ಬಿಗ್​ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಫಿನಾಲೆ ಬರಲಿದೆ. ಈಗಾಗಲೇ ಆಟ ಕೊನೆಯ ಹಂತವನ್ನು ತಲುಪುತ್ತಿದೆ. 14ನೇ ವಾರಕ್ಕೆ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. 13ನೇ ವಾರದಲ್ಲಿ ಸೂರಜ್ ಸಿಂಗ್ (Suraj Singh) ಮತ್ತು ಮಾಳು ನಿಪನಾಳ ಅವರು ಎಲಿಮಿನೇಟ್ ಆಗಿದ್ದಾರೆ. ಡಬಲ್ ಎಮಿಲಿನೇಷನ್​ನಿಂದ ಬಿಗ್ ಬಾಸ್ ಮನೆಗೆ ಶಾಕ್ ಆಗಿದೆ. ಸ್ಪಂದನಾ ಔಟ್ ಆಗಬಹುದು ಎಂದು ಹಲವರು ಭಾವಿಸಿದ್ದರು. ಆದರೆ ಸೂರಜ್ ಔಟ್ ಆದರು. ಎಲಿಮಿನೇಟ್ ಆಗಿ ಹೊರಬಂದ ಸೂರಜ್ ಸಿಂಗ್ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಗಿಲ್ಲಿ ನಟ (Gilli Nata) ಬಿಗ್ ಬಾಸ್ ವಿನ್ ಆಗೋದು ಖಚಿತ ಎಂದು ಸೂರಜ್ ಹೇಳಿದ್ದಾರೆ.

‘ಟಾಪ್ 5 ಸ್ಥಾನದಲ್ಲಿ ಯಾರೆಲ್ಲ ಇರುತ್ತಾರೆ ಎಂಬುದನ್ನು ಮೊದಲು ಹೇಳಿಬಿಡುತ್ತೇನೆ. ಗಿಲ್ಲಿ, ಅಶ್ವಿನಿ ಗೌಡ, ರಾಶಿಕಾ ಶೆಟ್ಟಿ, ಮ್ಯೂಟೆಂಟ್ ರಘು, ರಕ್ಷಿತಾ ಶೆಟ್ಟಿ ಅವರು ಟಾಪ್ 5 ಸ್ಥಾನದಲ್ಲಿ ಇರುತ್ತಾರೆ. ಯಾರು ಗೆಲ್ಲುತ್ತಾರೆ ಅಂತ ಕೇಳಿದರೆ ಶೇಕಡ 100ರಷ್ಟು ಗಿಲ್ಲಿಯೇ ಗೆಲ್ಲುವುದು. ಯಾರು ಗೆಲ್ಲಬೇಕು ಎಂಬುದಕ್ಕೆ 2 ಹೆಸರು ಇದೆ- ಅಶ್ವಿನಿ ಗೌಡ ಮತ್ತು ರಾಶಿಕಾ’ ಎಂದು ಸೂರಜ್ ಸಿಂಗ್ ಉತ್ತರಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ರಘು ಅವರು ಸೈಲೆಂಟ್ ಆಗಿದ್ದಾರೆ. ಅದಕ್ಕೆ ಕಾರಣ ಏನು ಎಂಬುದನ್ನು ಕೂಡ ಸೂರಜ್ ಸಿಂಗ್ ವಿವರಿಸಿದ್ದಾರೆ. ‘ವಾರಾಂತ್ಯದಲ್ಲಿ ಕಿಚ್ಚ ಸುದೀಪ್ ಅವರು ಒಂದು ಹಿಂಟ್ ನೀಡುತ್ತಾರೆ. ಅದನ್ನು ರಘು ಅವರು ಡಿಕೋಡ್ ಮಾಡಲು ಶುರು ಮಾಡುತ್ತಾರೆ. ಎಲ್ಲರ ಬಳಿ ಸಲಹೆ ಕೇಳುತ್ತಾರೆ. ಆ ಯೋಚನೆ ಮಾಡುತ್ತಾ ಮಾಡುತ್ತಾ ಸೈಲೆಂಟ್ ಆಗುತ್ತಾರೆ. ಚರ್ಚೆ ಮಾಡಿದಾಗಲೇ ಅಭಿಪ್ರಾಯಗಳು ಜಾಸ್ತಿ ಬರುವುದು’ ಎಂದಿದ್ದಾರೆ ಸೂರಜ್.

ಗಿಲ್ಲಿ ನಟ ಅವರು ಮೊದಲ ದಿನದಿಂದಲೂ ವೀಕ್ಷಕರನ್ನು ರಂಜಿಸುತ್ತಿದ್ದಾರೆ. ಅವರ ಕಾಮಿಡಿ ಎಲ್ಲರಿಗೂ ಇಷ್ಟ ಆಗುತ್ತಿದೆ. ಮೊದಲೆಲ್ಲ ಗಿಲ್ಲಿ ವಿರುದ್​ಧ ತಿರುಗಿ ಬೀಳುತ್ತಿದ್ದ ಸ್ಪರ್ಧಿಗಳು ಕೂಡ ಈಗ ಗಿಲ್ಲಿಯ ಕಾಮಿಡಿಯನ್ನು ಎಂಜಾಯ್ ಮಾಡಲು ಆರಂಭಿಸಿದ್ದಾರೆ. ಸ್ಪರ್ಧಿಗಳ ಕುಟುಂಬದವರಿಗೂ ಗಿಲ್ಲಿಯ ಆಟ ಇಷ್ಟ ಆಗಿದೆ. ಹಾಗಾಗಿ ಗಿಲ್ಲಿ ಗೆಲ್ಲುವುದು ಖಚಿತ ಎಂದು ಎಲ್ಲರೂ ಮಾತನಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಕಾವ್ಯಾ ಅಪ್ಪ-ಅಮ್ಮನಿಗೂ ಇಷ್ಟವಾದ ಗಿಲ್ಲಿ ನಟ; ಸಿಕ್ತು ವಿಶೇಷ ಉಡುಗೊರೆ

ಕಾವ್ಯಾ ಶೈವ ಅವರು ಗಿಲ್ಲಿ ಜೊತೆ ಕ್ಲೋಸ್ ಆಗಿದ್ದಾರೆ. ಹಾಗಾಗಿ ವೀಕ್ಷಕರ ವೋಟ್ ಹಂಚಿಹೋಗಬಹುದು ಎಂಬ ಅಭಿಪ್ರಾಯ ಹಲವರಿಗೆ ಇತ್ತು. ಆದರೆ ಕಳೆದ ವಾರ ಕಾವ್ಯಾ ಫ್ಯಾಮಿಲಿಯವರು ಬಿಗ್ ಬಾಸ್ ಮನೆಯೊಳಗೆ ಬಂದು ಗಿಲ್ಲಿ ಬಗ್ಗೆ ಮಾತನಾಡಿದ್ದರಿಂದ ಕಾವ್ಯಾಗೆ ನೆಗೆಟಿವ್ ಆಗಿದೆ. ಅದರಿಂದ ಗಿಲ್ಲಿಗೆ ಪ್ಲಸ್ ಆಗುವ ಸಾಧ್ಯತೆ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆ, ಕಾಂಪೌಂಡ್​​ಗಳ ತೆರವು – Kannada News | More Than 20 Houses Demolished on Mavinakere Road, Raichur

ರಾಯಚೂರು, ಡಿಸೆಂಬರ್​​ 29: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ನಡೆದ ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆ ವಿಚಾರ ದೇಶಾದ್ಯಂತ ಚರ್ಚೆಯಾಗುತ್ತಿರುವ ನಡುವೆ ರಾಯಚೂರಿನಲ್ಲೂ ಜೆಸಿಬಿಗಳು ಘರ್ಜಿಸಿವೆ. ನಗರದ ಮಾವಿನಕೆರೆ ರಸ್ತೆಯ ವಾರ್ಡ್ ನಂ. 4ರ ಮುಖ್ಯ ರಸ್ತೆಯ ಎರಡು ಬದಿಯಲ್ಲಿ 20 ಅಡಿ ತೆರವುಗೊಳಿಸಲಾಗಿದೆ. ರಾಯಚೂರು ಎಸಿ ಗಜಾನನ ಬಾಳೆ ನೇತೃತ್ವದಲ್ಲಿ 20ಕ್ಕೂ ಅಧಿಕ ಮನೆ, 25 ಕಾಂಪೌಂಡ್ ಮತ್ತು ಕಟ್ಟೆಗಳು ತೆರವು ಮಾಡಲಾಗಿದೆ. ಪೊಲೀಸ್ ಬಂದೋಬಸ್ತ್​​ನಲ್ಲಿ ತೆರವು ಕಾರ್ಯಾಚರಣೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ! – Kannada News | Kobbari Hori Invades Haveri Restaurant: Video goes Viral

ಹಾವೇರಿ, ಡಿಸೆಂಬರ್ 29: ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಡಿ.ಜೆ. ಪ್ಯಾಲೇಸ್ ರೆಸ್ಟೋರೆಂಟ್ ಮತ್ತು ಲಾಜ್ಡ್‌ನ ಬಾರ್‌ಗೆ ಏಕಾಏಕಿ ಕೊಬ್ಬರಿ ಹೋರಿ ನುಗ್ಗಿದ್ದು, ಮಧ್ಯಪ್ರಿಯರು ಪ್ರಾಣಭೀತಿಯಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ಕೆಲಕಾಲ ಗೊಂದಲ ಉಂಟಾದರೂ, ಹೋರಿಯ ಅಭಿಮಾನಿಗಳು ಕೇಕೆ ಹಾಕಿ ಹೋರಿಯನ್ನು ಹೊರ ಹಾಕಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸ್ಮಶಾನದ ಬಳಿ ಮೃತ ಶಿಶುವನ್ನು ಬಾಯಲ್ಲಿ ಕಚ್ಚಿಕೊಂಡು ಓಡಿದ ನಾಯಿ – Kannada News | Madhya Pradesh: Newborn’s Body Found With Stray Dog Near Cremation Ground, Area on Alert

ನಾಯಿ-ಸಾಂದರ್ಭಿಕ ಚಿತ್ರImage Credit source: iStock

ವಿದಿಶಾ, ಡಿಸೆಂಬರ್ 29: ಸ್ಮಶಾನದ ಬಳಿ ನಾಯಿ(Dog)ಯೊಂದು ಬಾಯಲ್ಲಿ ಮೃತ ಶಿಶುವನ್ನು ಕಚ್ಚಿಕೊಂಡು ಓಡುತ್ತಿರುವುದನ್ನು ಕಂಡು ಜನರು ಬೆಚ್ಚಿಬಿದ್ದಿದ್ದಾರೆ. ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಡಿಸೆಂಬರ್ 28 ರಂದು, ಪರಾಶರಿ ಸ್ಮಶಾನದ ಬಳಿ ಅಂತ್ಯಕ್ರಿಯೆಗೆ ಆಗಮಿಸಿದ ಜನರು  ಶಿಶುವಿನ ಶವವನ್ನು ನಾಯಿ ಕಚ್ಚಿಕೊಂಡು ಓಡುತ್ತಿರುವುದನ್ನು ಕಂಡು ಬೆಚ್ಚಿಬಿದ್ದಿದ್ದರು. ಈ ದೃಶ್ಯವು ಅಲ್ಲಿದ್ದವರನ್ನು ದಿಗ್ಭ್ರಮೆಗೊಳಿಸಿತು ಮತ್ತು ಅವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಡಿಸೆಂಬರ್ 28 ರ ಬೆಳಗ್ಗೆ, ಕೆಲವರು ಪರಾಶರಿ ಸ್ಮಶಾನಕ್ಕೆ ಅಂತ್ಯಕ್ರಿಯೆಗಾಗಿ ಬಂದಿದ್ದರು. ಸ್ಮಶಾನದ ಬಳಿ ನಾಯಿಯೊಂದು ಅಲೆದಾಡುತ್ತಿರುವುದನ್ನು ಅವರು ಗಮನಿಸಿದ್ದರು. ಹತ್ತಿರದಿಂದ ಪರಿಶೀಲಿಸಿದಾಗ, ನಾಯಿ ನವಜಾತ ಶಿಶುವಿನನ್ನು ಬಾಯಿಯಲ್ಲಿ ಹಿಡಿದಿಟ್ಟುಕೊಂಡಿರುವುದನ್ನು ಅವರು ಕಂಡರು.

ಈ ಭಯಾನಕ ದೃಶ್ಯವು ಜನರಲ್ಲಿ ಭಯಭೀತಿಯನ್ನು ಉಂಟುಮಾಡಿತು. ಕೆಲವೇ ಕ್ಷಣಗಳಲ್ಲಿ, ಸ್ಥಳದಲ್ಲಿ ಜನಸಮೂಹ ಜಮಾಯಿಸಿತು ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಯಿತು.
ಮಾಹಿತಿ ಪಡೆದ ಗಂಜ್ ಬಸೋಡಾ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಮತ್ತಷ್ಟು ಓದಿ: ಅಂತ್ಯಕ್ರಿಯೆಗೆಂದು ಬಂದವರು ಹೋಗಿದ್ದು ಆಸ್ಪತ್ರೆಗೆ, 200 ಜನರಿಗೆ ರೇಬಿಸ್ ಇಂಜೆಕ್ಷನ್, ಆಗಿದ್ದೇನು?

ಪೊಲೀಸರು ಶವವನ್ನು ನಾಯಿಯಿಂದ ಬೇರ್ಪಡಿಸಿ ತಮ್ಮ ವಶಕ್ಕೆ ಪಡೆದರು. ಇದು ಇಡೀ ಪ್ರದೇಶದಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಸ್ಮಶಾನ ಮತ್ತು ಸುತ್ತಮುತ್ತ ಇದೇ ರೀತಿಯ ಘಟನೆಗಳು ಈ ಹಿಂದೆಯೂ ನಡೆದಿದ್ದು ಕಳವಳಕ್ಕೆ ಕಾರಣವಾಗಿವೆ ಎಂದು ಸ್ಥಳೀಯರು ಹೇಳುತ್ತಾರೆ.

ಶಿಶುವಿಗೆ ನಾಲ್ಕರಿಂದ ಐದು ತಿಂಗಳಾಗಿರಬಹುದು
ಪ್ರಕರಣಕ್ಕೆ ಸಂಬಂಧಿಸಿದಂತೆ, ಗಂಜ್ ಬಸೋಡಾ ಗ್ರಾಮೀಣ ಪೊಲೀಸ್ ಠಾಣೆಯ ಉಸ್ತುವಾರಿ ಮನೋಜ್ ದುಬೆ ಮಾತನಾಡಿ, ಪ್ರಾಥಮಿಕ ತನಿಖೆಗಳು ಶಿಶುವಿಗೆ ಸುಮಾರು ನಾಲ್ಕರಿಂದ ಐದು ತಿಂಗಳಾಗಿರಬಹುದು ಎಂದು ಸೂಚಿಸುತ್ತವೆ. ಕೆಲವೊಮ್ಮೆ, ಸಾಮಾಜಿಕ ಅಥವಾ ಇತರ ಕಾರಣಗಳಿಗಾಗಿ, ನವಜಾತ ಶಿಶುಗಳನ್ನು ಸ್ಮಶಾನದ ಬಳಿ ನೆಲದಲ್ಲಿ ಹೂಳಲಾಗುತ್ತದೆ ಎಂದು ಅವರು ಹೇಳಿದರು. ಅಂತಹ ಸಂದರ್ಭಗಳಲ್ಲಿ, ಪ್ರಾಣಿಗಳು ನೆಲವನ್ನು ಅಗೆದಾಗ ದೇಹವು ಕಾಣುತ್ತದೆ.

ಪೊಲೀಸರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತಿದ್ದು, ಪ್ರತಿಯೊಂದು ಅಂಶವನ್ನೂ ತನಿಖೆ ನಡೆಸುತ್ತಿದ್ದಾರೆ ಎಂದು ಠಾಣೆಯ ಉಸ್ತುವಾರಿ ಅಧಿಕಾರಿ ತಿಳಿಸಿದ್ದಾರೆ.

ಮೃತದೇಹ ಅಲ್ಲಿಗೆ ಹೇಗೆ ಬಂತು ಮತ್ತು ಯಾವುದೇ ನಿರ್ಲಕ್ಷ್ಯ ಅಥವಾ ಅಪರಾಧ ಕೃತ್ಯ ನಡೆದಿದೆಯೇ ಎಂಬುದನ್ನು ಕಂಡುಹಿಡಿಯಲು ಅವರು ಪ್ರಯತ್ನಿಸುತ್ತಿದ್ದಾರೆ. ಪೊಲೀಸರು ಸುತ್ತಮುತ್ತಲಿನ ಪ್ರದೇಶದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಜನರಿಂದ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.

ಪೊಲೀಸರು ಶಿಶುವಿನ ದೇಹವನ್ನು ಸೂಕ್ತ ಪ್ರಕ್ರಿಯೆಯ ಪ್ರಕಾರ ಸಮಾಧಿ ಮಾಡಿದ್ದಾರೆ. ತನಿಖೆ ಪೂರ್ಣಗೊಂಡ ನಂತರವೇ ಪರಿಸ್ಥಿತಿ ಸ್ಪಷ್ಟವಾಗುತ್ತದೆ ಎಂದು ಆಡಳಿತ ಸ್ಪಷ್ಟಪಡಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 3:13 pm, Mon, 29 December 25

Source link

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಬೆಲೆ ಮತ್ತೆ ದಾಖಲೆ – Kannada News | Gold Price Today on 29th December 2025, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಡಿಸೆಂಬರ್ 29: ಚಿನ್ನದ ಬೆಲೆ ಸೋಮವಾರ ಕಡಿಮೆಗೊಂಡಿದೆ. ನಿನ್ನೆ 100 ರೂನಷ್ಟು ಹೆಚ್ಚಿದ್ದ ಇದರ ಬೆಲೆ ಇವತ್ತು 65 ರೂ ಕಡಿಮೆಗೊಂಡಿದೆ. 13,000 ರೂ ದಾಟಿದ ಆಭರಣ ಚಿನ್ನದ ಬೆಲೆ (gold rates) ಇದೀಗ 12,990 ರೂಗೆ ಇಳಿದಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಇಳಿದಿದೆ. ಕೆಲ ದೇಶಗಳಲ್ಲಿ ಬೆಲೆ ಅಲ್ಪ ಹೆಚ್ಚಳ ಪಡೆದಿದೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ, ಬೆಳ್ಳಿ ಬೆಲೆಯ ಭರ್ಜರಿ ಓಟ ಮುಂದುವರಿಯುತ್ತಲೇ ಇದೆ. ಇಂದು ಇದರ ಬೆಲೆ 4 ರೂ ಹೆಚ್ಚಿದೆ. ನಿನ್ನೆಯಿಂದ ಇದರ ಬೆಲೆ ಬರೋಬ್ಬರಿ 7 ರೂ ಜಾಸ್ತಿಯಾಗಿದೆ. ಕೆಲ ನಗರಗಳಲ್ಲಿ ಬೆಳ್ಳಿ ಬೆಲೆ ಮೊದಲ ಬಾರಿಗೆ 280 ರೂ ಗಡಿ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,29,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,41,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,29,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,800 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,100 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 29ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,171 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,990 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,628 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 258 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,171 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,990 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 258 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,990 ರೂ
  • ಚೆನ್ನೈ: 13,020 ರೂ
  • ಮುಂಬೈ: 12,990 ರೂ
  • ದೆಹಲಿ: 13,005 ರೂ
  • ಕೋಲ್ಕತಾ: 12,990 ರೂ
  • ಕೇರಳ: 12,990 ರೂ
  • ಅಹ್ಮದಾಬಾದ್: 12,995 ರೂ
  • ಜೈಪುರ್: 13,005 ರೂ
  • ಲಕ್ನೋ: 13,005 ರೂ
  • ಭುವನೇಶ್ವರ್: 12,990 ರೂ

ಇದನ್ನೂ ಓದಿ: 2025ರಲ್ಲಿ ಭಾರತದ ಬಿಲಿಯನೇರ್​ಗಳ ಪಟ್ಟಿ; ಯಾರು ಅತಿ ಶ್ರೀಮಂತರು, ಯಾರ ಶ್ರೀಮಂತಿಕೆ ಹೆಚ್ಚು ಏರಿದ್ದು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 570 ರಿಂಗಿಟ್ (12,639 ರುಪಾಯಿ)
  • ದುಬೈ: 505.75 ಡಿರಾಮ್ (12,387 ರುಪಾಯಿ)
  • ಅಮೆರಿಕ: 141 ಡಾಲರ್ (12,678 ರುಪಾಯಿ)
  • ಸಿಂಗಾಪುರ: 180.50 ಸಿಂಗಾಪುರ್ ಡಾಲರ್ (12,627 ರುಪಾಯಿ)
  • ಕತಾರ್: 503.50 ಕತಾರಿ ರಿಯಾಲ್ (12,419 ರೂ)
  • ಸೌದಿ ಅರೇಬಿಯಾ: 513 ಸೌದಿ ರಿಯಾಲ್ (12,298 ರುಪಾಯಿ)
  • ಓಮನ್: 53.65 ಒಮಾನಿ ರಿಯಾಲ್ (12,529 ರುಪಾಯಿ)
  • ಕುವೇತ್: 41.13 ಕುವೇತಿ ದಿನಾರ್ (12,052 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 258 ರೂ
  • ಚೆನ್ನೈ: 281 ರೂ
  • ಮುಂಬೈ: 258 ರೂ
  • ದೆಹಲಿ: 258 ರೂ
  • ಕೋಲ್ಕತಾ: 258 ರೂ
  • ಕೇರಳ: 281 ರೂ
  • ಅಹ್ಮದಾಬಾದ್: 258 ರೂ
  • ಜೈಪುರ್: 258 ರೂ
  • ಲಕ್ನೋ: 258 ರೂ
  • ಭುವನೇಶ್ವರ್: 281 ರೂ
  • ಪುಣೆ: 258

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಗ್ಯಾಂಗ್​​ ಎಸ್ಕೇಪ್​ – Kannada News | Hunasuru Gold Shop Robbery: CCTV Footage of Accused Escape

ಮೈಸೂರು, ಡಿಸೆಂಬರ್​​ 29: ಹುಣಸೂರು ಚಿನ್ನದಂಗಡಿ ದರೋಡೆ ನಡೆಸಿ ದುಷ್ಕರ್ಮಿಗಳು ಎಸ್ಕೇಪ್​​ ಆಗಿರುವ ದೃಶ್ಯ ಟಿವಿ9ಗೆ ಲಭ್ಯವಾಗಿದೆ. ಕೇವಲ ಐದೇ ಐದು ನಿಮಿಷಗಳಲ್ಲಿ ಗೋಲ್ಡ್​​ ಶಾಪ್​​ ರಾಬರಿ ನಡೆಸಲಾಗಿದ್ದು, ಕೆಜಿಗಟ್ಟಲೆ ಚಿನ್ನ ಕದ್ದು ಚಾಲಾಕಿಗಳು ಪರಾರಿಯಾಗಿದ್ದಾರೆ. ಮಧ್ಯಾಹ್ನ 2 ಗಂಟೆ 4 ನಿಮಿಷಕ್ಕೆ ಅಂಗಡಿಗೆ ಎಂಟ್ರಿಕೊಟ್ಟಿದ್ದ ಗ್ಯಾಂಗ್​​ 2 ಗಂಟೆ 9 ನಿಮಿಷಕ್ಕೆ ಶಾಪ್​​ನಿಂದ ತೆರಳಿದೆ. ಚಿನ್ನ ತೆಗೆದುಕೊಂಡ ಹೋಗಲು ಎರಡು ಚೀಲದಂತಹ ಬ್ಯಾಗ್ ತಂದಿದ್ದ ದರೋಡೆಕೋರರು, ಚಿನ್ನದಂಗಡಿಯ ಶೋಕೆಸ್​​ನಲ್ಲಿಟ್ಟಿದ್ದ ದೊಡ್ಡ ದೊಡ್ಡ ಗಾತ್ರದ ಆಭರಣವನ್ನ ಎರಡಲೇ ನಿಮಿಷದಲ್ಲಿ ಒಂದು ಕಡೆ ಗುಡ್ಡೆ ಹಾಕಿದ್ದಾರೆ. ಬಳಿಕ ಮತ್ತೆರಡು ನಿಮಿಷದಲ್ಲಿ ದೊಡ್ಡ ಬ್ಯಾಗ್​​​ಗೆ ಅವನ್ನು ತುಂಬಿಕೊಂಡು ಎಸ್ಕೇಪ್​​ ಆಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version