ನಂಬಿಕೆ ಉಳಿಸಿಕೊಂಡ ಪೊಲೀಸರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯ ರಕ್ಷಣೆ – Kannada News | Bengaluru Police Defy Stereotypes: Swift Action Prevents Suicide, Saves Woman

ಬೆಂಗಳೂರು, ಜ.22: ಸಾಮಾನ್ಯವಾಗಿ ಪೊಲೀಸರು ಎಲ್ಲ ಮುಗಿದ ಮೇಲೆ ಘಟನಾ ಸ್ಥಳಕ್ಕೆ ಬರುತ್ತಾರೆ ಎಂಬ ಮಾತಿದೆ. ಆದರೆ ಈ ಮಾತು ತಪ್ಪು, ಏಕೆಂದರೆ ಪೊಲೀಸರು ಕೂಡ ಜನರನ್ನು ರಕ್ಷಣೆ ಮಾಡಿರುವ ಹಲವು ಘಟನೆಗಳು ಇದೆ . ಇದೀಗ ಇಲ್ಲೊಂದು ಪೊಲೀಸರ ತಕ್ಷಣದ ಸ್ಪಂದನೆಯಿಂದ ಜೀವವೊಂದು ಉಳಿದಿದೆ. ಈ ಘಟನೆಯಿಂದ ಪೊಲೀಸರ ಮೇಲೆ ಮತ್ತಷ್ಟು ನಂಬಿಕೆಯನ್ನು ಹುಟ್ಟಿಸಿದೆ. ಪೊಲೀಸರು ಸರಿಯಾದ ಸಮಯಕ್ಕೆ ಬಂದು ಒಂದು ಜೀವವನ್ನು ಉಳಿಸಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಇದೀಗ ಬೆಂಗಳೂರಿನ ಪೊಲೀಸರು ಜನರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಹುಳಿಮಾವು ಠಾಣೆ ವ್ಯಾಪ್ತಿಯ ಬಸವನಪುರದಲ್ಲಿ ಜ.20ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ರಕ್ಷಣೆ ಮಾಡಲಾಗಿದೆ.

ಕೋಣನಕುಂಟೆ ಠಾಣೆ ಹೊಯ್ಸಳ ಪೊಲೀಸರು ಸರಿಯಾದ ಸಮಯಕ್ಕೆ ಬಂದು ಯುವತಿಯ ಜೀವ ಉಳಿಸಿದ್ದಾರೆ. ಯುವತಿ ವಿಷ ಸೇವನೆ ಮಾಡಿದ ಬಳಿಕ ತಂದೆಗೆ ಕರೆ ಮಾಡಿದ್ದಾಳೆ. ಇದರಿಂದ ಗಾಬರಿಗೊಂಡು ಏನು ಮಾಡಬೇಕು ಎಂದು ತೋಚದೆ, ತಂದೆ 112‌ ಗೆ ಕರೆ ಮಾಡಿದ್ದಾರೆ. ತಕ್ಷಣ ಕೋಣನಕುಂಟೆ ಠಾಣೆ ಹೊಯ್ಸಳ ಪೊಲೀಸರು ಕಾರ್ಯಪ್ರವೃತ್ತರಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕೋಣನಕುಂಟೆ ಠಾಣೆ ಎಎಸ್ಐ ಶ್ರೀನಿವಾಸ ಮೂರ್ತಿ, ಕಾನ್ಸಟೇಬಲ್ ಮಂಜುನಾಥ್ ಈ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಇದೀಗ ಯುವತಿ ಸುರಕ್ಷಿತವಾಗಿದ್ದು, ಯಾವುದೇ ತೊಂದರೆ ಇಲ್ಲ ಎಂದು ಹೇಳಲಾಗಿದೆ. ಆದರೆ ಆಕೆ ಯಾವ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂದು ತಿಳಿದಿಲ್ಲ.

ಇದನ್ನೂ ಓದಿ: ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ, ಇಷ್ಟಪಟ್ಟವನೊಂದಿಗೆ ಬಾಳುವ ಮೊದಲೇ ದುರಂತ ಅಂತ್ಯ

ಕಿರುಕುಳ ನೀಡುತ್ತಿದ್ದ ಪತಿಯನ್ನು ಕೊಲೆ ಮಾಡಿದ ಪತ್ನಿ (ಪ್ರತ್ಯೇಕ ಘಟನೆ)

ಬೆಂಗಳೂರಿನ ಬೊಮ್ಮನಹಳ್ಳಿಯ ಹೊಂಗಸಂದ್ರದಲ್ಲಿ ಕಿರುಕುಳ ನೀಡುತ್ತಿದ್ದ ಪತಿಯನ್ನೇ ಪತ್ನಿ ಕೊಲೆ ಮಾಡಿದ್ದಾಳೆ. ಮೊದಲನೇ ಮಗಳು ಮನೆಬಿಟ್ಟು ಹೋಗಿದ್ದಕ್ಕೆ ಪತ್ನಿಗೆ ಪ್ರತಿದಿನ ಕಿರುಕುಳ ನೀಡುತ್ತಿದ್ದ ಮುರುಗೇಶ್ (50), ಇದರಿಂದ ಬೆಸತ್ತು ಪತ್ನಿ ಲಕ್ಷ್ಮೀ ಕೊಲೆ ಮಾಡಿದ್ದಾಳೆ. ಈ ಘಟನೆ ಜ.20ರಂದು ನಡೆದಿದೆ. ಈ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳಿದ್ರೂ ಮೊದಲನೇ ಮಗಳಿಗೆ ಮದುವೆಯಾಗಿತ್ತು. ಆದರೆ ಎರಡನೇ ಮಗಳು ಮನೆ ಬಿಟ್ಟು ಹೋಗಿದ್ದಳು. ಈ ಕಾರಣಕ್ಕೆ ಅದೇ ದಿನ ರಾತ್ರಿ ಲಕ್ಷ್ಮೀ ಜೊತೆಗೆ ಮುರುಗೇಶ್ ಜಗಳ ಮಾಡಿಕೊಂಡಿದ್ದಾನೆ. ಇದರಿಂದ ಕೋಪಗೊಂಡು ಲಕ್ಷ್ಮೀ ಮುರುಗೇಶ್ ಅನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾಳೆ. ಇದೀಗ ಈ ಬಗ್ಗೆ ಬೊಮ್ಮನಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ – Kannada News | Amid Jana Nayagan Release delay Amazon prime video to Take Legal Action Against Thalapathy Vijay Movie

ಜನ ನಾಯಗನ್ (Jana Nayagan) ಸಿನಿಮಾ ಸಂಕಷ್ಟದಲ್ಲಿದೆ. ಈ ಚಿತ್ರ ಜನವರಿ 9ರಂದೇ ರಿಲೀಸ್ ಆಗಬೇಕಿತ್ತು. ಆದರೆ, ಸೆನ್ಸಾರ್ ಮಂಡಳಿಯಿಂದ ಆದ ಸಮಸ್ಯೆಯಿಂದ ತೊಂದರೆ ಎದುರಾಗುತ್ತಿದೆ.ಸಿನಿಮಾ ರಿಲೀಸ್ ಆದರೆ ಸಾಕು ಎಂಬ ಪರಿಸ್ಥಿತಿಯಲ್ಲಿ ಫ್ಯಾನ್ಸ್ ಇದ್ದಾರೆ. ಈಗ ಚಿತ್ರ ಒಟಿಟಿ ಪ್ಲಾಟ್​​ಫಾರ್ಮ್ ಕಡೆಯಿಂದ ಸಂಕಷ್ಟ ಎದುರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ. ಇದು ಚಿತ್ರತಂಡದ ಚಿಂತೆ ಹೆಚ್ಚಿಸಿದೆ. ‘ಜನ ನಾಯಗನ್’ ಸಿನಿಮಾ ದಳಪತಿ ವಿಜಯ್ ವೃತ್ತಿ ಜೀವನದ ಕೊನೆಯ ಸಿನಿಮಾ. ಇದಾದ ಬಳಿಕ ಅವರು ರಾಜಕೀಯದ ಕಡೆ ಹೊರಳಲಿದ್ದಾರೆ. ಈಗಾಗಲೇ ಅವರು ಪಕ್ಷ ಕೂಡ ಆರಂಭಿಸಿದ್ದು, ಚುನಾವಣಾ ರ್ಯಾಲಿ ನಡೆಸುತ್ತಿದ್ದಾರೆ.

ಏಷ್ಯಾನೆಟ್ ನ್ಯೂಸ್ ವರದಿ ಪ್ರಕಾರ ಅಮೇಜಾನ್ ಪ್ರೈಮ್ ವಿಡಿಯೋ ‘ಜನ ನಾಯಗನ್’ ಚಿತ್ರದ ಹಕ್ಕನ್ನು 120 ಕೋಟಿ ರೂಪಾಯಿಗೆ ಪಡೆದುಕೊಂಡಿದೆ. ಸಿನಿಮಾದ ಮೂಲ ರಿಲೀಸ್ ದಿನಾಂಕ ಜನವರಿ 9. ಇದಕ್ಕೆ ಅನುಗುಣವಾಗಿ ಅಮೇಜಾನ್ ಅವರು ಒಟಿಟಿ ರಿಲೀಸ್ ದಿನಾಂಕವನ್ನು ನಿಗದಿ ಮಾಡಿಕೊಂಡಿರುತ್ತಾರೆ. ಆದರೆ, ಸಿನಿಮಾ ಇನ್ನೂ ಥಿಯೇಟರ್​​​ನಲ್ಲಿ ರಿಲೀಸ್ ಆಗಿಲ್ಲ. ಇದರಿಂದ ಒಟಿಟಿ ಸಂಸ್ಥೆ ಕಡೆಯಿಂದ ನಿರ್ಮಾಪಕರಿಗೆ ಒತ್ತಡ ಬರುತ್ತಿದೆ ಎಂದು ವರದಿ ಆಗಿದೆ.

ಅಮೇಜಾನ್ ಪ್ರೈಮ್ ವಿಡಿಯೋದವರು ಕಾನೂನಾತ್ಮಕವಾಗಿ ಹೋರಾಡಲು ಮುಂದಾಗಿದ್ದಾರೆ ಎಂದು ವರದಿ ಆಗಿದೆ. ಇಲ್ಲವಾದಲ್ಲಿ ಒಪ್ಪಂದದ ಮೊತ್ತದಲ್ಲಿ ಒಂದಷ್ಟು ಹಣವನ್ನು ಕಡಿತಗೊಳಿಸುವ ಸಾಧ್ಯತೆಯೂ ಇದೆ. ಈ ವಿಷಯದಲ್ಲಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂಬುದು ಇನ್ನಷ್ಟೇ ಅಧಿಕೃತವಾಗಬೇಕಿದೆ.

ಇದನ್ನೂ ಓದಿ: ವಿಳಂಬವಾಗುತ್ತಿದೆ ‘ಜನ ನಾಯಗನ್’ ರಿಲೀಸ್; ಚುನಾವಣೆ ಘೋಷಣೆ ಆದರೆ ಸದ್ಯಕ್ಕಿಲ್ಲ ಬಿಡುಗಡೆ

ಜನ ನಾಯಗನ್ ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡದೇ ಇರುವ ವಿಷಯದಲ್ಲಿ ತಂಡದವರು ಕೋರ್ಟ್ ಮೊರೆ ಹೋಗಿದ್ದಾರೆ. ಅಲ್ಲಿಯೂ ತಂಡಕ್ಕೆ ಹಿನ್ನಡೆ ಆಗುತ್ತಿದೆ. ಒಂದೊಮ್ಮೆ ತಮಿಳುನಾಡು ಚುನಾವಣಾ ವಿಧಾನಸಭೆ ದಿನಾಂಕ ಘೋಷಣೆ ಆದರೆ, ಸಿನಿಮಾಗೆ ಹಿನ್ನಡೆ ಆಗಲಿದೆ. ಚಿತ್ರ ಪ್ರದರ್ಶನ ಅಸಾಧ್ಯವಾಗಬಹುದು. ಈ ಚಿಂತೆ ಕೂಡ ನಿರ್ಮಾಪಕರನ್ನು ಕಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 9:03 am, Thu, 22 January 26

Source link

ತನ್ನ ಒಪ್ಪಿಗೆ ಇಲ್ಲದೆ ಪತ್ನಿ ಡಿಶ್​ವಾಶರ್ ತಂದಿದ್ದಕ್ಕೆ ಪತಿ ಮಾಡಿದ್ದೇನು ಗೊತ್ತಾ? ನೀವು ವಿಚ್ಛೇದನ ಕೊಟ್ಟೇಬಿಡಿ ಎಂದ ನೆಟ್ಟಿಗರು – Kannada News | China: Husband Destroys Home Over Wife’s Dishwasher, Netizens Advise Divorce

ಚೀನಾ, ಜನವರಿ 22: ಪತ್ನಿ ತನ್ನ ಒಪ್ಪಿಗೆ ಇಲ್ಲದೆ ಪಾತ್ರೆ ತೊಳೆಯುವ ಸಾಧನ ಡಿಶ್​ವಾಶರ್ ತಂದಿದ್ದಕ್ಕೆ ಕೋಪಗೊಂಡ ಪತಿ(Husband) ಇಡೀ ಮನೆಯಲ್ಲಿರುವ ಪೀಠೋಪಕರಣ, ವಸ್ತುಗಳನ್ನು ಒಡೆದುಹಾಕಿರುವ ಘಟನೆ ಚೀನಾದಲ್ಲಿ ನಡೆದಿದೆ. ಗುವಾಂಗ್‌ಡಾಂಗ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದ್ದು, ಪತ್ನಿ ತನಗೆ ಗೊತ್ತಿಲ್ಲದೆ 25 ಸಾವಿರ ರೂ. ಮೌಲ್ಯದ ಡಿಶ್​ವಾಶರ್ ಖರೀದಿಸಿದ್ದಕ್ಕೆ ಕೋಪಗೊಂಡು ಆತ ಕೆಟ್ಟದಾಗಿ ನಡೆದುಕೊಂಡಿದ್ದಾನೆ.

ಮನೆಯಲ್ಲಿ ಯಾವ ಕೆಲಸಕ್ಕೂ ಪತಿ ಸಹಾಯ ಮಾಡುತ್ತಿರಲಿಲ್ಲ, ಹೀಗಾಗಿ ತನಗೇನು ಮಾಡಬೇಕೆಂದು ತೋಚದೆ, ಸ್ವಲ್ಪ ಕೆಲಸ ಕಡಿಮೆಯಾಗಲಿ ಎಂದು ಈ ಯಂತ್ರವನ್ನು ಖರೀದಿಸಿದ್ದಾಗಿ ಪತ್ನಿ ಹೇಳಿದ್ದಾರೆ.
ಪತಿ ತನ್ನ ಹೆಂಡತಿಗೆ ಆರ್ಡರ್ ರದ್ದುಗೊಳಿಸಿ ಯಂತ್ರವನ್ನು ಹಿಂತಿರುಗಿಸುವಂತೆ ಆದೇಶಿಸಿದಾಗ, ಆಕೆ ನಿರಾಕರಿಸಿದ್ದಾರೆ ಅದಕ್ಕೆ ಕೋಪಗೊಂಡ ಪತಿ ಲಿವಿಂಗ್ ರೂಮಿನಲ್ಲಿದ್ದ ಪೀಠೋಪಕರಣಗಳು ಮತ್ತು ಇತರ ವಸ್ತುಗಳನ್ನು ಒಡೆದುಹಾಕಿದ್ದಾನೆ.

ಧ್ವಂಸಗೊಂಡ ಕೋಣೆಯ ವಿಡಿಯೋವನ್ನು ಕೂಡ ಮಾಡಲಾಗಿತ್ತು. ಅವರು ನನಗೆ ಡಿಶ್‌ವಾಶರ್ ಖರೀದಿಸಲು ಏಕೆ ಅನುಮತಿಸುವುದಿಲ್ಲ ಎಂದು ನನಗೆ ನಿಜವಾಗಿಯೂ ಅರ್ಥವಾಗುತ್ತಿಲ್ಲ. ನಾನು ತಪ್ಪು ಮಾಡಿದ್ದೇನೆಂದು ನನಗೆ ಅನಿಸುತ್ತಿಲ್ಲ ಎಂದು ಮಹಿಳೆ ಹೇಳಿದ್ದಾರೆ.

ಮತ್ತಷ್ಟು ಓದಿ: ಪ್ರೀತಿಸಿ ಮದುವೆಯಾಗಿ ನಾಲ್ಕೇ ನಾಲ್ಕು ತಿಂಗಳು, ಮೂವರು ಪುರುಷರೊಂದಿಗೆ ಸಿಕ್ಕಿಬಿದ್ದ ಪತ್ನಿಯ ಕೊಲೆಗೈದ ಪತಿ

ಘಟನೆಯ ನಂತರ, ಪತ್ನ ಅಳುತ್ತಾ ಮನೆಯಿಂದ ಓಡಿಹೋಗಿದ್ದಾರೆ.ಬೀದಿಯಲ್ಲಿ ಗಂಟೆಗಟ್ಟಲೆ ಅಲೆದಾಡಿ ಬಳಿಕ ಹೋಟೆಲ್​ಗೆ ಹೋಗಿ ಉಳಿದುಕೊಂಡಿದ್ದರು. ಪತಿ ಮನೆಯಿಂದ ದೂರ ಕೆಲಸ ಮಾಡುತ್ತಾರೆ, ತಿಂಗಳಿಗೆ 11,000 ಯುವಾನ್ ( 144,844ರೂ.) ಸಂಪಾದಿಸುತ್ತಾರೆ, ಆದರೆ ಹೆಂಡತಿ ತಮ್ಮ ಇಬ್ಬರು ಮಕ್ಕಳನ್ನು ನೋಡಿಕೊಳ್ಳುತ್ತಾಳೆ.

ಕಳೆದ ವರ್ಷ ತನ್ನ ಅನಾರೋಗ್ಯ ಮತ್ತು ಕೆಲಸ ಮಾಡಲು ಸಾಧ್ಯವಾಗದ ಕಾರಣ ಆಕೆಯ ಮೇಲೆ ಕೋಪ ಹುಟ್ಟಿಕೊಂಡಿದೆ ಎಂಬುದು ಆಕೆಯ ಮಾತು. ಅವರು ಸಾಲದಲ್ಲಿ ಸಿಲುಕಿರುವ ಕಾರಣ ಡಿಶ್‌ವಾಶರ್ ಹಿಂದಿರುಗಿಸಿದ್ದಾರೆ ಎಂದು ಆಕೆ ಹೇಳಿದ್ದಾರೆ.

ಮರುದಿನವೇ ಆಕೆಯ ಪತಿ ಪತ್ನಿಗೆ ಕರೆ ಮಾಡಿ ಕ್ಷಮಿಸು, ಅಂದು ನನ್ನ ಮನಸ್ಥಿತಿ ಕೆಟ್ಟದಾಗಿತ್ತು ಆ ರೀತಿ ನಾನು ನಡೆದುಕೊಳ್ಳಬಾರದಿತ್ತು, ನಿನ್ನ ಚೆನ್ನಾಗಿ ನೋಡಿಕೊಳ್ಳುತ್ತೇನೆ , ನಾವು ಚಿಕ್ಕ ಡಿಶ್​ವಾಶರ್ ಖರೀದಿಸೋಣ ಮನೆಗೆ ಬಾ ಎಂದು ಕೇಳಿದ್ದಾನೆ. ಆಗ ಈ ಕತೆ ಸುಖಾಂತ್ಯಗೊಂಡಿದೆ.

ಆದರೆ ನೆಟ್ಟಿಗರು ಆಕೆಗೆ ವಿಚ್ಛೇದನ ಪಡೆಯುವಂತೆ ಸಲಹೆ ನೀಡಿದ್ದಾರೆ. ಇಂಥಾ ವ್ಯಕ್ತಿ ಜತೆ ಬಾಳುವುದಕ್ಕಿಂತ ವಿಚ್ಛೇದನ ಪಡೆಯುವುದೇ ಬೆಟರ್ ಎಂದಿದ್ದಾರೆ. ಇನ್ನೂ ಕೆಲವರು ಪತಿಯ ಆಕ್ರೋಶಕ್ಕೆ ಚೀನಾದ ಆರ್ಥಿಕ ಸಂಕಷ್ಟಗಳೇ ಕಾರಣ ಎಂದು ದೂಷಿಸಿದರು. ಮಹಿಳೆ ತನ್ನ ಪತಿಯೊಂದಿಗೆ ಚರ್ಚಿಸದೆ ತಮ್ಮ ಕುಟುಂಬದ ಆರ್ಥಿಕ ಸಾಮರ್ಥ್ಯಗಳನ್ನು ಮೀರಿ ವಸ್ತುಗಳನ್ನು ಖರೀದಿಸುವುದು ತಪ್ಪು ಎಂದು ಮತ್ತೊಬ್ಬರು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕೆಆರ್ ಪುರಂ ಬಳಿ ಬೈಕ್ ಶೋರೂಮ್‌ನಲ್ಲಿ ಅಗ್ನಿ ಅವಘಡ: 13 ಎಲೆಕ್ಟ್ರಿಕ್ ಬೈಕ್‌ಗಳು ಭಸ್ಮ – Kannada News | Electric Bike Showroom Fire at KR Puram TC Palya Signal, 13 E Bikes Gutted in Bengaluru

ಬೆಂಗಳೂರು, ಜನವರಿ 22: ಬೆಂಗಳೂರು ನಗರದ ಕೆ.ಆರ್.ಪುರಂನ ಟಿ.ಸಿ.ಪಾಳ್ಯ ಸಿಗ್ನಲ್ ಸಮೀಪದ ಎಲೆಕ್ಟ್ರಿಕ್ ಬೈಕ್ ಶೋರೂಮ್‌ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಜನವರಿ 20ರ ರಾತ್ರಿ ಸುಮಾರು 10.30ರ ವೇಳೆಗೆ ಶೋರೂಮ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಅಲ್ಲಿ ನಿಲ್ಲಿಸಿದ್ದ 13 ಎಲೆಕ್ಟ್ರಿಕ್ ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್, ಪ್ರಾಣಾಪಾಯ ಸಂಭವಿಸಿಲ್ಲ. ಮಾಹಿತಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು. ಘಟನೆ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ, ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದರ್ಶನ್-ವಿಜಯಲಕ್ಷ್ಮೀ ಮದುವೆ ಆದ ಜಾಗದಲ್ಲೇ ಉಗ್ರಂ ಮಂಜು ವಿವಾಹ – Kannada News | Ugram Manju To Marry Sandhya At Dharmasthala in Simple Marriage

ರಾಜೇಶ್ ದುಗ್ಗುಮನೆ |

Updated on:Jan 22, 2026 | 8:35 AM

Share

ಬಿಗ್ ಬಾಸ್​​ಗೆ ತೆರಳುವ ಮೂಲಕ ಒಂದಷ್ಟು ಜನರಿಗೆ ಉಗ್ರಂ ಮಂಜು ಇಷ್ಟ ಆಗಿದ್ದರು. ಈಗ ಅವರು ವಿವಾಹ ಆಗುತ್ತಿದ್ದಾರೆ. ಸಂಧ್ಯಾ ಜೊತೆ ಅವರು ಹಸಮಣೆ ಏರುತ್ತಿದ್ದಾರೆ. ಈ ಮಧ್ಯೆ ಅವರು ಮದುವೆ ವಿಷಯದಲ್ಲಿ ಒಂದು ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಶುಕ್ರವಾರ ಅವರು ಧರ್ಮಸ್ಥಳದಲ್ಲಿ ಮದುವೆ ಆಗುತ್ತಿದ್ದಾರೆ.

Published on: Jan 22, 2026 08:34 AM

Source link

IPL 2026: ಇದೇ ಕಾರಣಕ್ಕೆ RCB ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಹಿಂದೇಟು ಹಾಕುತ್ತಿದೆ!

Source link

ಅಭಿಷೇಕ್ ಶರ್ಮಾ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

Source link

Video: ದೂರ ಕುಳಿತು ಮಾತನಾಡಿ, ಮುಖದ ಹತ್ತಿರ ಬಂದು ಮಾತನಾಡಿದ ವ್ಯಕ್ತಿಗೆ ಸಂಸದೆ ಪ್ರಿಯಾ ಖಡಕ್ ರಿಯಾಕ್ಷನ್ – Kannada News | Awkward Moment on Stage: MP Priya Saroj Steps Back as Supporter Breaches Personal Space

ಲಕ್ನೋ, ಜನವರಿ 22: ಸಮಾಜವಾದಿ ಪಕ್ಷದ ಸಂಸದೆ ಹಾಗೂ ಭಾರತೀಯ ಕ್ರಿಕೆಟಿಗ ರಿಂಕು ಸಿಂಗ್ ಅವರ ಮದುವೆಯಾಗಲಿರುವ ಪ್ರಿಯಾ ಸರೋಜ್ ವೇದಿಕೆ ಕಾರ್ಯಕ್ರಮವೊಂದರಲ್ಲಿ ಇರಿಸುಮುರಿಸು ಅನುಭವಿಸಿರುವ ವಿಡಿಯೋ ವೈರಲ್ ಆಗಿದೆ. ವೇದಿಕೆಯಲ್ಲಿ ಖಾಲಿ ಇದ್ದ ಖುರ್ಚಿಯಲ್ಲಿ ವ್ಯಕ್ತಿಯೊಬ್ಬರು ಬಂದು ಕುಳಿತು ಪ್ರಿಯಾ ಅವರ ಮುಖದ ಹತ್ತಿರ ತಮ್ಮ ಮುಖ ತಂದು ಮಾತನಾಡಿದ್ದು, ಪ್ರಿಯಾ ಅವರ ಕೋಪಕ್ಕೆ ಕಾರಣವಾಗಿದೆ.

ಕೂಡಲೇ ಪ್ರಿಯಾ ಸ್ವಲ್ಪ ಪಕ್ಕಕ್ಕೆ ಸರಿದು ದೂರದಿಂದ ಮಾತನಾಡಿ ಎಂದು ಖಡಕ್ ಆಗಿ ಉತ್ತರ ಕೊಟ್ಟಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಜೌನ್‌ಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ.ಈ ಘಟನೆ ನಡೆದಾಗ ಪ್ರಿಯಾ ಸರೋಜ್ ಅವರನ್ನು ದಂಗಲ್ (ಕುಸ್ತಿ) ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಹ್ವಾನಿಸಲಾಗಿತ್ತು.

ಪ್ರಿಯಾ 2024ರ ಲೋಕಸಭಾ ಚುನಾವಣೆಯಲ್ಲಿ, ಸಮಾಜವಾದಿ ಪಕ್ಷದ ಟಿಕೆಟ್‌ನಲ್ಲಿ ಮೊದಲ ಬಾರಿಗೆ ಮಚ್ಲಿಶಹರ್‌ನಿಂದ ಸ್ಪರ್ಧಿಸಿ ಗೆದ್ದರು, ಬಿಜೆಪಿಯ ಹಾಲಿ ಸಂಸದ ಬಿಪಿ ಸರೋಜ್ ಅವರನ್ನು 35,೦೦೦ ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕರ್ನಾಟಕದಲ್ಲಷ್ಟೇ ಅಲ್ಲ ಕೇರಳ, ತಮಿಳುನಾಡಲ್ಲೂ ನಡೆದಿದೆ ರಾಜ್ಯಪಾಲರು VS ಸರ್ಕಾರ ಸಂಘರ್ಷ! ಅಲ್ಲಿ ಏನೇನಾಗಿತ್ತು? ಇಲ್ಲಿದೆ ನೋಡಿ – Kannada News | Not Just Karnataka: Governor vs Government Clashes in Kerala and Tamil Nadu Explained

ಬೆಂಗಳೂರು, ಜನವರಿ 21: ಕರ್ನಾಟಕ ವಿಶೇಷ ಅಧಿವೇಶನಕ್ಕೆ ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿನ 11 ಅಂಶಗಳನ್ನು ಓದಲು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ. ಇದು ಸಾಂವಿಧಾನಿಕ ಬಿಕ್ಕಟ್ಟಿಗೆ ಕಾರಣವಾಗಿದೆ. ಇದರೊಂದಿಗೆ, ರಾಜ್ಯ ಸರ್ಕಾರಗಳು ಮತ್ತು ರಾಜ್ಯಪಾಲರ ನಡುವಿನ ಸಂಘರ್ಷ ದಕ್ಷಿಣ ಭಾರತದಲ್ಲಿ ತೀವ್ರಗೊಂಡಂತಾಗಿದೆ. ಕರ್ನಾಟಕ ಮಾತ್ರವಲ್ಲದೆ ಕೇರಳ, ತಮಿಳುನಾಡುಳಲ್ಲಿಯೂ ಇಂತಹ ಪ್ರಕರಣ ವರದಿಯಾಗಿತ್ತು. ಕಾನೂನು ತಜ್ಞರ ಪ್ರಕಾರ, ರಾಜ್ಯಪಾಲರ ಭಾಷಣವಿಲ್ಲದೆ ವಿಧಾನಸಭೆ ಕಲಾಪಗಳನ್ನು ನಡೆಸಲು ಸಾಧ್ಯವಿಲ್ಲ.

ತಮಿಳುನಾಡಿನಲ್ಲಿ ರಾಜ್ಯಪಾಲ ಆರ್.ಎನ್. ರವಿ ಅವರು ರಾಷ್ಟ್ರಗೀತೆಗೆ ಅಗೌರವ ತೋರಲಾಗಿದೆ ಎಂದು ಭಾಷಣ ಮಾಡದೆ ಸದನದಿಂದ ಹೊರ ನಡೆದಿದ್ದರು. ಭಾಷಣದಲ್ಲಿ ಆಧಾರರಹಿತ ಹೇಳಿಕೆಗಳಿವೆ ಎಂದು ಕೂಡ ಆರೋಪಿಸಿದ್ದರು. ಕೇರಳದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯಪಾಲರು ಭಾಷಣದ ಕೆಲವು ಅಂಶಗಳನ್ನು ಕೈಬಿಟ್ಟು ಓದಿದ್ದಾರೆ ಎಂದು ದೂರಿದ್ದರು. ಸಂವಿಧಾನದ 176ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರು ಸರ್ಕಾರ ನೀಡಿದ ಭಾಷಣವನ್ನು ಓದಬೇಕು ಎಂದು ಸ್ಪಷ್ಟಪಡಿಸಲಾಗಿದೆ. 1966ರಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದ ಇದೇ ರೀತಿಯ ಪ್ರಕರಣದಲ್ಲಿ ಕೋಲ್ಕತ್ತಾ ಹೈಕೋರ್ಟ್, ರಾಜ್ಯಪಾಲರು ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ನಿರಾಕರಿಸುವಂತಿಲ್ಲ ಎಂದು ತೀರ್ಪು ನೀಡಿತ್ತು ಎಂಬುದು ಗಮನಾರ್ಹ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವರ್ಲ್ಡ್ ರೆಕಾರ್ಡ್… ಟೀಮ್ ಇಂಡಿಯಾದ ಇನ್ನೂರರ ನಾಗಾಲೋಟ

Source link

Exit mobile version