Video: ಮದುವೆ ಮಂಟಪದಲ್ಲಿ ವರನ ಕೈಗೆ ಮುತ್ತಿಟ್ಟ ಮಾಜಿ ಪ್ರೇಯಸಿ, ಆಮೇಲೇನಾಯ್ತು ನೀವೇ ನೋಡಿ – Kannada News | Unexpected Clash Erupts During Wedding Function, Video Circulates Online

ಇಂಡೋನೇಷ್ಯಾ, ಡಿಸೆಂಬರ್ 28: ಇಂಡೋನೇಷ್ಯಾದಲ್ಲಿ ನಡೆದ ಮದುವೆ ಸಮಾರಂಭದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವರನ ಮಾಜಿ ಗೆಳತಿ ಮದುವೆ ಮಂಪಟದಲ್ಲಿ ವಧುವಿನ ಎದುರೇ ಆತನ ಕೈಗೆ ಮುತ್ತುಕೊಟ್ಟಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವೈರಲ್ ಆಗಿರುವ ಈ ಕ್ಲಿಪ್‌ನಲ್ಲಿ, ಮಹಿಳೆ ವರನ ಕೈಗೆ ಮುತ್ತಿಡಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಇದು ವಧುವಿಗೆ ಕೋಪ ತರಿಸಿತ್ತು. ಕೂಡಲೇ ವಧು ಮಾಜಿ ಪ್ರೇಯಸಿ ಕೂದಲು ಹಿಡಿದು ಆಕೆ ಹಿಗ್ಗಾಮುಗ್ಗ ಥಳಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ತಂಗಿ ಮೇಲೆ ಅತ್ಯಾಚಾರ, ಮದುವೆಯಾಗೋದಾಗಿ ಅಕ್ಕನಿಗೆ ಮೋಸ: ಸಹೋದರಿಯರನ್ನು ಕಾಡಿದ್ದ ಆರೋಪಿ ಅರೆಸ್ಟ್​​ – Kannada News | Bengaluru Love Scam: Man Arrested for Cheating and Assaulting Two Sisters

ನೆಲಮಂಗಲ, ಡಿಸೆಂಬರ್​​ 28: ರಾಜ್ಯದಲ್ಲಿ ಮತ್ತೊಂದು ಲವ್​ ಸೆಕ್ಸ್​ ದೋಖಾ ಆರೋಪ ಪ್ರಕರಣ ಸದ್ದು ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿಯಿಂದ ಲಕ್ಷಾಂತರ ಹಣ ಬೆದರಿಸಿ ಪಡೆದಿರುವ ಜೊತೆಗೆ, ಆಕೆಯ ಮನೆಯಲ್ಲಿದ್ದ ಚಿನ್ನಾಭರಣವನ್ನು ಆರೋಪಿ ಕದ್ದಿದ್ದ. ಅಲ್ಲದೆ, ಯುವತಿಯ ಸಹೋದರಿ ಮೇಲೂ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದ ಎನ್ನಲಾಗಿದೆ.

ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಶುಭಾಂಶು ಶುಕ್ಲಾ(27)ನನ್ನು ಪೊಲೀಸರು ಬಂಧಿಸಿದ್ದಾರೆ. ಮೊದಲು ಸಂತ್ರಸ್ತೆಯ ಸಹೋದರಿಯಾದ ಅಪ್ರಾಪ್ತೆಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ, ಆಕೆಯ ಕುಟುಂಬಕ್ಕೂ ಬಲ್ಲವನಾಗಿದ್ದ. ಬಳಿಕ ಬಾಲಕಿ ಸಹೋದರಿಯನ್ನ ಪ್ರೀತಿ ಬಲೆಯಲ್ಲಿ ಬೀಳಿಸಿದ್ದ ಈತ, ಮಾಸ್ಟರ್​​ ಪ್ಲ್ಯಾನ್​​ ಮಾಡಿ ಆಕೆಯನ್ನು ತನ್ನ ಜೊತೆ ಕರೆದುಕೊಂಡು ಹೋಗಿದ್ದ. ತನಗೆ ಮುಂಬೈನಲ್ಲಿ ಕೆಲಸ ಸಿಕ್ಕಿದೆ ಎಂದು ಮನೆಯವರನ್ನು ನಂಬಿಸಿದ್ದ ಸಂತ್ರಸ್ತೆ, ಈತನನನ್ನು ನಂಬಿ ಜೊತೆಗೆ ತೆರಳಿದ್ದಳು. ನಂತರ ಫ್ಲ್ಯಾಟ್​ನಲ್ಲಿ ಶುಭಾಂಶು ಮತ್ತು ಯುವತಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಕುಡಿದ ಮತ್ತಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ವಿದ್ಯಾರ್ಥಿ; ಪಾದಚಾರಿ ಸಾವು

ಇನ್ನು ಸಮಯ ಕಳೆದಂತೆ ಶುಭಾಂಶುಗೆ ಮೊದಲೇ ಮದುವೆಯಾಗಿರುವ ಬಗ್ಗೆ ಸಂತ್ರಸ್ತೆಗೆ ಗೊತ್ತಾಗಿದೆ. ಈ ಬಗ್ಗೆ ವಿಚಾರಿಸಿದಾಗ ಆಕೆಯ ಜೊತೆ ತಾನು ವಿಚ್ಛೇದನ ಪಡೆದುಕೊಳ್ಳುತ್ತೇನೆ. ನಿನ್ನ ಮದುವೆಯಾಗಿ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ಆತ ಹೇಳಿದ್ದ. ಶುಭಾಂಶು ಪತ್ನಿಯೂ ಸಂತ್ರಸ್ತೆ ಜೊತೆ ಮಾತಾಡಿದ್ದು ತಾನು ಆತನಿಗೆ ಡಿವೋರ್ಸ್​​ ನೀಡೋದಾಗಿ ತಿಳಿಸಿದ್ದಳು. ಹೀಗಾಗಿ ಶುಭಾಂಶು ಮೇಲೆ ಭರವಸೆ ಇಟ್ಟು ಸಂತ್ರಸ್ತೆ ಸಂಬಂಧ ಮುಂದುವರಿಸಿದ್ದಳು. ಆದರೆ, ಮತ್ತೊಂದು ಅಪ್ರಾಪ್ತ ಯುವತಿಗೂ ಶುಭಾಂಶು ಇದೇ ರೀತಿ ವಂಚಿಸುತ್ತಿರೋದು ಸಂತ್ರಸ್ತೆಗೆ ಗೊತ್ತಾಗಿದೆ. ಆಕೆ ಮುಂದೆ ಈತನ ಬಂಡವಾಳವನ್ನು ಸಂತ್ರಸ್ತೆ ಬಯಲು ಮಾಡಿದ್ದಳು. ಆ ಬಳಿಕ ಶುಭಾಂಶು ಚಿತ್ರಹಿಂಸೆ ಆರಂಭವಾಗಿತ್ತು ಎಂದು ದೂರಲಾಗಿದೆ.

ಸಂತ್ರಸ್ತ ಯುವತಿ ಬಳಿ 37 ಲಕ್ಷ ಹಣವನ್ನೂ ಪಡೆದಿದ್ದ ಆರೋಪಿ ಶುಭಾಂಶು, ಯುವತಿ ಮನೆಯಲ್ಲಿ 559 ಗ್ರಾಂ ಚಿನ್ನಾಭರಣ ಸಹ ಕದ್ದಿದ್ದ. ಈ ಬಗ್ಗೆ ದೂರು ನೀಡಿದರೆ ಸಾಯಿಸುತ್ತೇನೆ ಎಂದು ಬೆದರಿಸಿದ್ದ. ಆ ಬಳಿಕ ಸಂತ್ರಸ್ತೆ ಚಿತ್ರಹಿಂಸೆ ತಾಳಲಾರದೆ ಶುಭಾಂಶುನನ್ನು ಬಿಟ್ಟು ಬಂದಿದ್ದಳು. ಸಂತ್ರಸ್ತೆಯ ಪರಿಚಯಕ್ಕೆ ಮೂಲ ಕಾರಣವಾಗಿದ್ದ ಆಕೆಯ ಅಪ್ರಾಪ್ತ ಸಹೋದರಿಯ ಮೇಲೂ ಶುಭಾಂಶು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಗ್ರೂಪ್​​ ಸ್ಟಡಿ ಮಾಡಲು ತೆರಳುತ್ತಿದ್ದಾಗ ಪರಿಚಯವಾಗಿದ್ದ ಶುಭಾಂಶು, ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಾನು ಕರೆದಾಗೆಲ್ಲ ಬರಬೇಕು ಎಂದು ಬೆದರಿಸಿದ್ದ ಆತ, ನಿನ್ನ ಮನೆಯವರನ್ನು ನನಗೆ ಪರಿಚಯ ಮಾಡಿಸು ಎಂದಿದ್ದ. ಹಾಗಾದರೆ ಮಾತ್ರ ತಾನು ನಿನ್ನ ಬಿಡೋದಾಗಿ ಹೆದರಿಸಿದ್ದ ಎಂದು ಅಪ್ರಾಪ್ತೆಯೂ ದೂರಿದ್ದಾಳೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 8:17 am, Sun, 28 December 25

Source link

ಝೆಲೆನ್ಸ್ಕಿ- ಟ್ರಂಪ್ ಶಾಂತಿ ಮಾತುಕತೆಗೂ ಮುನ್ನ ಉಕ್ರೇನ್ ಮೇಲೆ ರಷ್ಯಾ ದಾಳಿ – Kannada News | Russia Intensifies Attacks in Ukraine Ahead of Key Zelenskyy Trump Talks

ದಾಳಿ-ಸಾಂದರ್ಭಿಕ ಚಿತ್ರImage Credit source: India TV

ಕೈವ್, ಡಿಸೆಂಬರ್ 28: ಉಕ್ರೇನ್‌(Ukraine)ನ ರಾಜಧಾನಿಯಲ್ಲಿ ರಷ್ಯಾ ಶನಿವಾರ ತೀವ್ರ ದಾಳಿ ನಡೆಸಿದ್ದು, ಓರ್ವ ಸಾವನ್ನಪ್ಪಿದ್ದು, 27 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಶಾಂತಿ ಮಾತುಕತೆ ನಡೆಯುವ ಒಂದು ದಿನದ ಮೊದಲು ಇದು ಸಂಭವಿಸಿದೆ.

ಮುಂಜಾನೆ ದಾಳಿ ಪ್ರಾರಂಭವಾಗಿ ಗಂಟೆಗಳ ಕಾಲ ಮುಂದುವರೆದಿತ್ತು ಕೈವ್‌ನಾದ್ಯಂತ ಪ್ರಬಲ ಸ್ಫೋಟಗಳು ಸಂಭವಿಸಿವೆ. ರಷ್ಯಾ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ಡ್ರೋನ್‌ಗಳ ದಾಳಿ ನಡೆಸಿದೆ.
ವೊಲೊಡಿಮಿರ್ ಝೆಲೆನ್ಸ್ಕಿ ಅವರು ಇಂದು ಫ್ಲೋರಿಡಾದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ, ಯುದ್ಧವು ಈಗ ನಾಲ್ಕನೇ ವರ್ಷವನ್ನು ಸಮೀಪಿಸುತ್ತಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಝೆಲೆನ್ಸ್ಕಿ, ಉಕ್ರೇನ್‌ಗೆ ದೀರ್ಘಾವಧಿಯ ಭದ್ರತಾ ಭರವಸೆಗಳು ವಿವಾದಿತ ಪ್ರದೇಶಗಳ ಭವಿಷ್ಯ ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಚರ್ಚೆಗಳು ಒಳಗೊಂಡಿರುತ್ತವೆ ಎಂದು ಹೇಳಿದರು. ಈ ದಾಳಿಯು ನಮ್ಮ ಶಾಂತಿ ಪ್ರಯತ್ನಗಳಿಗೆ ರಷ್ಯಾದ ಉತ್ತರವಾಗಿದೆ, ಪುಟಿನ್ ಅವರಿಗೆ ಶಾಂತಿ ಬೇಕಾಗಿಲ್ಲ ಎಂದು ಇದು ನಿಜವಾಗಿಯೂ ತೋರಿಸುತ್ತದೆ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ಮತ್ತಷ್ಟು ಓದಿ: ಉಕ್ರೇನ್​​ ಮೇಲಿನ ಯುದ್ಧಕ್ಕೆ ಭಾರತ-ಚೀನಾ ಮುಖ್ಯ ಹೂಡಿಕೆದಾರರು; ವಿಶ್ವಸಂಸ್ಥೆಯಲ್ಲಿ ಮತ್ತೆ ಹಳೇ ರಾಗ ಹಾಡಿದ ಟ್ರಂಪ್

ಉಕ್ರೇನ್‌ಗೆ 1.8 ಶತಕೋಟಿ ಡಾಲರ್ ಮೌಲ್ಯದ ಆರ್ಥಿಕ ಸಹಾಯವನ್ನು ಕೆನಡಾ ಪ್ರಧಾನಿ ಕಾರ್ನಿ ಘೋಷಿಸಿದ್ದಾರೆ, ಇದು ಕೈವ್‌ನೊಂದಿಗೆ ನಿಲ್ಲುವ ಸಮಯ ಎಂದು ಹೇಳಿದ್ದಾರೆ. ರಷ್ಯಾದ ರಕ್ಷಣಾ ಸಚಿವಾಲಯವು ರಾತ್ರಿಯಿಡೀ ದೊಡ್ಡ ಮಿಲಿಟರಿ ಕಾರ್ಯಾಚರಣೆಯನ್ನು ನಡೆಸಿತು.ಈ ದಾಳಿಯಲ್ಲಿ ಕಿಂಜಾಲ್ ಹೈಪರ್ಸಾನಿಕ್ ಕ್ಷಿಪಣಿಗಳು ಮತ್ತು ಡ್ರೋನ್‌ಗಳು ಸೇರಿವೆ ಎಂದು ಸಚಿವಾಲಯ ತಿಳಿಸಿದೆ.

ಉಕ್ರೇನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸಲು ಭಾನುವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಡುವಿನ ಮಾತುಕತೆಗೆ ಮುಂಚಿತವಾಗಿ ರಷ್ಯಾ ಉಕ್ರೇನಿಯನ್ ನಗರಗಳ ಮೇಲೆ ಪ್ರಮುಖ ದಾಳಿಯನ್ನು ಪ್ರಾರಂಭಿಸಿದೆ. ಸುಮಾರು 500 ಡ್ರೋನ್‌ಗಳು ಮತ್ತು 40 ಕ್ಷಿಪಣಿಗಳನ್ನು ಒಳಗೊಂಡ ಇತ್ತೀಚಿನ ದಾಳಿಯಲ್ಲಿ ರಾಜಧಾನಿ ಕೈವ್‌ನಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿ 19 ಜನರು ಗಾಯಗೊಂಡಿದ್ದಾರೆ.

ಈ ದಾಳಿಯ ನಂತರ, ಉಕ್ರೇನ್‌ನ ನೆರೆಯ ದೇಶವಾದ ಪೋಲೆಂಡ್, ಗಡಿಯ ಸಮೀಪವಿರುವ ತನ್ನ ಎರಡು ವಿಮಾನ ನಿಲ್ದಾಣಗಳನ್ನು ಮುಚ್ಚಿತು ಮತ್ತು ತನ್ನ ವಾಯುಪಡೆಯನ್ನು ಜಾಗರೂಕತೆಯಿಂದ ಇರಿಸಿತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಜೋಶ್ ಟಂಗ್​ ಕರಾರುವಾಕ್ ದಾಳಿಯಿಂದ ಆಸ್ಟ್ರೇಲಿಯಾಗೆ 60 ಕೋಟಿ ರೂ. ನಷ್ಟ..! – Kannada News | Cricket Australia lost out on Around Rs. 60.6 crore

ಏಕೆಂದರೆ ಈ ಪಂದ್ಯವನ್ನು ವೀಕ್ಷಿಸಲು ಮೊದಲೆರಡು ದಿನಗಳು 90 ಸಾವಿರಕ್ಕೂ ಅಧಿಕ ಪ್ರೇಕ್ಷಕರು ಸ್ಟೇಡಿಯಂಗೆ ಆಗಮಿಸಿದ್ದರು. ಅತ್ತ ಆಸ್ಟ್ರೇಲಿಯಾದಲ್ಲಿ ಕ್ರಿಸ್ಮಸ್ ರಜೆ ಇರುವುದರಿಂದ 5 ದಿನದಾಟಗಳ ಮೂಲಕ ಕ್ರಿಕೆಟ್ ಆಸ್ಟ್ರೇಲಿಯಾ 5 ಪೌಂಡ್​ ಮಿಲಿಯನ್​ಗಿಂತಲೂ ಆದಾಯಗಳಿಸುವ ನಿರೀಕ್ಷೆಯಲ್ಲಿದ್ದರು. ಆದರೆ ಜೋಶ್ ಟಂಗ್​ನ ನಿಖರ ದಾಳಿಯಿಂದ ತತ್ತರಿಸಿದ ಆಸ್ಟ್ರೇಲಿಯಾ ತಂಡವು ಎರಡು ಇನಿಂಗ್ಸ್​ಗಳ ಮೂಲಕ ಎದುರಿಸಿದ್ದು 479 ಎಸೆತಗಳನ್ನು ಮಾತ್ರ.  ಪರಿಣಾಮ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ಕೇವಲ 2 ದಿನಗಳಲ್ಲೇ ಕೊನೆಗೊಂಡಿದ್ದು, ಇದರಿಂದ ಕ್ರಿಕೆಟ್ ಆಸ್ಟ್ರೇಲಿಯಾಗೆ ಸುಮಾರು 60.6 ಕೋಟಿ ರೂ. ನಷ್ಟವಾಗಿದೆ ಎಂದು ವರದಿಯಾಗಿದೆ.

Source link

ಅಕ್ಷಯ್ ಖನ್ನಾ ಬದಲಿಗೆ ‘ಪಾತಾಳ್ ಲೋಕ್’ ನಟನಿಗೆ ‘ದೃಶ್ಯಂ 3’ ಅವಕಾಶ – Kannada News | Patal Lok actor Jaideep Ahlawat replaces Akshaye Khanna in Drishyam 3

ಬಾಲಿವುಡ್ ನಟ ಅಕ್ಷಯ್ ಖನ್ನಾ (Akshaye Khanna) ಅವರಿಗೆ ‘ಧುರಂಧರ್’ ಸಿನಿಮಾದಿಂದ ಏಕಾಏಕಿ ಅವಕಾಶ ಹೆಚ್ಚಾಯಿತು. ಒಮ್ಮೆಲೇ ಅವರ ಜನಪ್ರಿಯತೆ ಮುಗಿಲು ಮುಟ್ಟಿತು. ಇದರಿಂದಾಗಿ ಅವರ ಡಿಮ್ಯಾಂಡ್ ಜಾಸ್ತಿ ಆಗಿದೆ. 2ರಿಂದ 3 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದ ಅವರು ಈಗ ಏಕಾಏಕಿ 20 ಕೋಟಿ ರೂಪಾಯಿಗೂ ಅಧಿಕ ಸಂಭಾವನೆ ಬೇಕು ಎಂದು ಕೇಳುತ್ತಿದ್ದಾರೆ. ಇದರಿಂದಾಗಿ ‘ದೃಶ್ಯಂ 3’ (Drishyam 3) ಸಿನಿಮಾದ ನಿರ್ಮಾಪಕರಿಗೆ ಕೋಪ ಬಂದಿದೆ. ಹಾಗಾಗಿ ಅಕ್ಷಯ್ ಖನ್ನಾ ಬದಲಿಗೆ ಜೈದೀಪ್ ಅಹಲಾವತ್ (Jaideep Ahlawat) ಅವರಿಗೆ ಅವಕಾಶ ನೀಡಲು ನಿರ್ಮಾಪಕರು ನಿರ್ಧರಿಸಿದ್ದಾರೆ.

‘ದೃಶ್ಯಂ ಎಂಬುದು ಬಹಳ ದೊಡ್ಡ ಬ್ರ್ಯಾಂಡ್. ಅಕ್ಷಯ್ ಖನ್ನಾ ಈ ಸಿನಿಮಾದಲ್ಲಿ ನಟಿಸುತ್ತಾರೋ ಇಲ್ಲವೋ ಎಂಬುದು ಮುಖ್ಯವಾಗುವುದೇ ಇಲ್ಲ. ಈಗ ಅಕ್ಷಯ್ ಖನ್ನಾ ಬದಲಿಗೆ ಜೈದೀಪ್ ಬಂದಿದ್ದಾರೆ. ದೇವರ ದಯೆಯಿಂದ ಅಕ್ಷಯ್ ಖನ್ನಾ ಅವರಿಗಿಂದ ಉತ್ತಮವಾದ ನಟ ನಮಗೆ ಸಿಕ್ಕಿದ್ದಾರೆ. ಅದಕ್ಕಿಂತ ಮುಖ್ಯವಾಗಿ, ಜೈದೀಪ್ ಅವರು ಅಕ್ಷಯ್ ಖನ್ನಾಗಿಂತ ಒಳ್ಳೆಯ ಮನುಷ್ಯ’ ಎಂದು ‘ದೃಶ್ಯಂ’ ಚಿತ್ರದ ನಿರ್ಮಾಪಕ ಕುಮಾರ್ ಮಂಗತ್ ಪಾಠಕ್ ಅವರು ಹೇಳಿದ್ದಾರೆ.

ಅಕ್ಷಯ್ ಖನ್ನಾ ಅವರು ‘ದೃಶ್ಯಂ 2’ ಸಿನಿಮಾದಲ್ಲಿ ನಟಿಸಿದ್ದರು. ಈಗ ‘ದೃಶ್ಯಂ 3’ ಸೆಟ್ಟೇರುತ್ತಿದೆ. ಅಷ್ಟರಲ್ಲಾಗಲೇ ‘ಧುರಂಧರ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಈ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರು ಮಾಡಿದ ರೆಹಮಾನ್ ಡಕಾಯಿತ್ ಪಾತ್ರ ಬಹಳ ಹೈಲೈಟ್ ಆಗಿದೆ. ಆದ್ದರಿಂದ ಅಕ್ಷಯ್ ಖನ್ನಾ ಅವರು ಮುಂದಿನ ಸಿನಿಮಾಗಳ ನಿರ್ಮಾಪಕರಿಂದ ಏಕಾಏಕಿ ದುಬಾರಿ ಸಂಭಾವನೆ ಕೇಳಲು ಶುರು ಮಾಡಿದ್ದಾರೆ.

ಸಂಭಾವನೆ ಮಾತ್ರವಲ್ಲದೇ ತಮ್ಮ ಲುಕ್ ಕೂಡ ಬದಲಾಗಬೇಕು ಎಂಬುದು ಅಕ್ಷಯ್ ಖನ್ನಾ ಅವರ ಡಿಮ್ಯಾಂಡ್. ಅದಕ್ಕೆ ‘ದೃಶ್ಯಂ 3’ ಸಿನಿಮಾದ ನಿರ್ದೇಶಕರು ಒಪ್ಪಿಕೊಂಡಿಲ್ಲ. ಯಾಕೆಂದರೆ, ‘ದೃಶ್ಯಂ 2’ ಚಿತ್ರದಲ್ಲಿ ಅಕ್ಷಯ್ ಖನ್ನಾ ಮಾಡಿದ್ದ ಪಾತ್ರವೇ ಈಗ ಮುಂದುವರಿಯಬೇಕಿತ್ತು. ‘ದೃಶ್ಯಂ 2’ ಚಿತ್ರದಲ್ಲಿ ವಿಗ್ ಇಲ್ಲದೇ ನಟಿಸಿದ್ದ ಅಕ್ಷಯ್ ಖನ್ನಾ ಅವರು ‘ದೃಶ್ಯಂ 3’ ಚಿತ್ರದಲ್ಲಿ ವಿಗ್ ಧರಿಸಿ ಕಾಣಿಸಿಕೊಂಡರೆ ಚೆನ್ನಾಗಿ ಇರುವುದಿಲ್ಲ ಎಂಬುದು ನಿರ್ದೇಶಕರ ವಾದ. ಈ ಕಾರಣಕ್ಕಾಗಿಯೂ ಭಿನ್ನಾಭಿಪ್ರಾಯ ಮೂಡಿತು.

ಇದನ್ನೂ ಓದಿ: 2 ಕೋಟಿಯಿಂದ 21 ಕೋಟಿ ರೂಪಾಯಿಗೆ ಏರಿಕೆ ಆಯ್ತು ಅಕ್ಷಯ್ ಖನ್ನಾ ಸಂಬಳ

ಜೈದೀಪ್ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಈಗಾಗಲೇ ಸಾಬೀತುಪಡಿಸಿದ್ದಾರೆ. ‘ಪಾತಾಳ್ ಲೋಕ್’ ವೆಬ್ ಸರಣಿ ಮೂಲಕ ಅವರು ಅಪಾರ ಜನಪ್ರಿಯತೆ ಪಡೆದಿದ್ದಾರೆ. ಅಕ್ಷಯ್ ಖನ್ನಾ ಅವರಿಂದ ತೆರವಾದ ಪಾತ್ರವನ್ನು ಈಗ ಜೈದೀಪ್ ಮಾಡಬೇಕಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್​ಚಿದೆ. ಸಿನಿಮಾ ತಂಡದಿಂದ ಹೊರನಡೆದಿದ್ದರ ಬಗ್ಗೆ ಅಕ್ಷಯ್ ಖನ್ನಾ ಅವರು ಪ್ರತಿಕ್ರಿಯೆ ನೀಡುವುದು ಇನ್ನೂ ಬಾಕಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದೇಹದ ಮೇಲೆ ಗಾಯಗಳು, ಒಳ ಉಡುಪುಗಳು ನಾಪತ್ತೆ, ಕಾರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – Kannada News | Woman Accuses Udaipur CEO of Physical Assault, Police Record Complaint

ಜೈಪುರ, ಡಿಸೆಂಬರ್ 28: ಮಹಿಳೆಯ ದೇಹದ ಮೇಲೆ ಹತ್ತಾರು ಗಾಯಗಳು, ಒಳ ಉಡುಪುಗಳು ಕೂಡ ನಾಪತ್ತೆಯಾಗಿದ್ದವು, ಐಟಿ ಸಂಸ್ಥೆಯ ಉದ್ಯೋಗಿ ಮೇಲೆ ನಡೆದ ಅತ್ಯಾಚಾರ(Rape) ತೀರಾ ಭಯಾನಕವಾಗಿತ್ತು. ರಾಜಸ್ಥಾನದ ಉದಯಪುರದಲ್ಲಿ ಕಾರಿನಲ್ಲಿ ಈ ಘಟನೆ ನಡೆದಿತ್ತು. ಘಟನೆ ಡಿಸೆಂಬರ್ 20 ರಂದು ನಡೆದಿತ್ತು. ಜಿಕೆಎಂ ಐಟಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಜಿತೇಶ್ ಪ್ರಕಾಶ್ ಸಿಸೋಡಿಯಾ ಹಾಗೂ ಇನ್ನಿಬ್ಬರು ಸೇರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

ಜಿತೇಶ್, ಗೌರವ್ ಸರದಿಯಂತೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ. ಅತ್ಯಾಚಾರವನ್ನು ದೃಢಪಡಿಸಿದ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ, ಮಹಿಳೆಗೆ ಗಾಯಗಳಾಗಿದ್ದು, ಆಕೆಯ ಖಾಸಗಿ ಭಾಗಗಳು ಮತ್ತು ದೇಹದ ಇತರ ಭಾಗಗಳಲ್ಲಿ ತೀರಾ ನೋವಾಗಿದೆ ಎಂದು ತಿಳಿದುಬಂದಿದೆ.

ತನ್ನ ಕೆಲವು ಆಭರಣಗಳು, ಸಾಕ್ಸ್ ಮತ್ತು ಒಳ ಉಡುಪುಗಳು ಕಾಣೆಯಾಗಿವೆ ಎಂದು ಮಹಿಳೆ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಡಿಸೆಂಬರ್ 20 ರಂದು ನಡೆದಿದ್ದೇನು?
ಡಿಸೆಂಬರ್ 20 ರಂದು ಸಂತ್ರಸ್ತೆ ಉದಯಪುರದ ಶೋಬಾಗ್‌ಪುರದ ಹೋಟೆಲ್‌ನಲ್ಲಿ ಸಿಸೋಡಿಯಾ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಪಾರ್ಟಿ ರಾತ್ರಿ 9 ಗಂಟೆಗೆ ಪ್ರಾರಂಭವಾಗಿ ಬೆಳಗಿನ ಜಾವ 1.30 ರವರೆಗೆ ನಡೆಯಿತು. ಮಹಿಳೆ ಸೇರಿ ಎಲ್ಲರೂ ಮದ್ಯ ಸೇವಿಸಿದ್ದರು.

ಬೆಳಗಿನ ಜಾವ 1.30 ರ ಸುಮಾರಿಗೆ, ಜಿತೇಶ್ ಸಿಸೋಡಿಯಾ, ಗೌರವ್ ಸಿರೋಹಿ ಮರಳಲು ಅವಕಾಶ ನೀಡಿದ್ದರು. ಆಗ ಅವರ ಆರೋಗ್ಯ ಹದಗೆಡಲು ಪ್ರಾರಂಭಿಸಿತು. ಗೌರವ್ ಕಾರನ್ನು ಚಲಾಯಿಸುತ್ತಿದ್ದರು ಮತ್ತು ಶಿಪ್ಲಾ, ಜಿತೇಶ್ ಮತ್ತು ಸಂತ್ರಸ್ತೆ ಹಿಂಭಾಗದಲ್ಲಿ ಕುಳಿತಿದ್ದರು. ಕಾರು ಆರೋಪಿಗಳಲ್ಲಿ ಒಬ್ಬರಿಗೆ ಸೇರಿದೆ.

ಪ್ರಯಾಣದ ಸಮಯದಲ್ಲಿ, ಆರೋಪಿಯು ಅಂಗಡಿಯಿಂದ ಸಿಗರೇಟ್ ಹೋಲುವ ವಸ್ತುವನ್ನು ಖರೀದಿಸಲು ವಾಹನವನ್ನು ನಿಲ್ಲಿಸಿ ವ್ಯವಸ್ಥಾಪಕರಿಗೆ ನೀಡಿದ್ದಾನೆ. ಅದನ್ನು ಸೇವಿಸಿದ ನಂತರ ಆಕೆ ಪ್ರಜ್ಞೆ ತಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜ್ಞೆ ಮರಳಿ ಬಂದ ನಂತರ, ಸಂತ್ರಸ್ತೆ ತನ್ನ ಗಾಯಗಳ ಮೇಲೆ ಗಾಯಗಳನ್ನು ಗಮನಿಸಿರುವುದಾಗಿ ಹೇಳಿದ್ದಾರೆ. ಕಾರಿನ ಡ್ಯಾಶ್‌ಕ್ಯಾಮ್ ಅನ್ನು ಪರಿಶೀಲಿಸಿದ್ದರು. ಅದು ಇಡೀ ಅಪರಾಧದ ಮತ್ತು ಆರೋಪಿಗಳ ನಡುವಿನ ಸಂಭಾಷಣೆಯನ್ನು ಸಹ ರೆಕಾರ್ಡ್ ಮಾಡಿದೆ. ಈ ಸಾಕ್ಷ್ಯದೊಂದಿಗೆ ಮಹಿಳೆ ಪೊಲೀಸರನ್ನು ಸಂಪರ್ಕಿಸಿ ಡಿಸೆಂಬರ್ 23 ರಂದು ದೂರು ದಾಖಲಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನಾಲ್ಕು ದಿನಗಳ ಕಸ್ಟಡಿಗೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ವಿವರವಾದ ತನಿಖೆ ಪ್ರಸ್ತುತ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 7:50 am, Sun, 28 December 25

Source link

Virat Kohli: ಆಡಿದ್ದು 2 ಇನಿಂಗ್ಸ್… ಬರೆದದ್ದು ಭರ್ಜರಿ ದಾಖಲೆ  – Kannada News | Virat Kohli becomes the fastest player ever to complete 1000 runs in VHT

15 ವರ್ಷಗಳ ಬಳಿಕ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ (Virat Kohli) ಇದೀಗ ಭರ್ಜರಿ ದಾಖಲೆಯೊಂದಿಗೆ ಮರಳಿದ್ದಾರೆ. ಅದು ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದ್ದ ದೇಶೀಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

Source link

ಕುಡಿದ ಮತ್ತಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ವಿದ್ಯಾರ್ಥಿ: ಪಾದಚಾರಿ ಸಾವು – Kannada News | Bengaluru Drunk Driver Kills Delivery Boy in Audi Crash

ಬೆಂಗಳೂರು, ಡಿಸೆಂಬರ್​​ 28: ವಿದ್ಯಾರ್ಥಿಯೋರ್ವ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ ನಡೆದ ಅಪಘಾತದಲ್ಲಿ ಪಾದಚಾರಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್​ನ 27ನೇ ಕ್ರಾಸ್​ನಲ್ಲಿ ನಡೆದಿದೆ. ಡಿಸೆಂಬರ್ 22ರಂದು ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ವೇಗವಾಗಿ ಬಂದ ಆಡಿ ಕಾರು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಬೆಳಗಾವಿ ಜಿಲ್ಲೆ ಬೈಲಹೊಂಗಲ ಮೂಲದ ಸಂತೋಷ್(26) ಅಸುನೀಗಿದ್ದಾರೆ. ಅಪಘಾತದ ರಭಸಕ್ಕೆ ರಸ್ತೆ ಬದಿ ನಿಂತಿದ್ದ ಕಾರುಗಳಿಗೂ ಡ್ಯಾಮೇಜ್ ಆಗಿದೆ. ಮೃತ ಯುವಕ ಬೆಂಗಳೂರಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಕಾರು ಚಾಲಕ ಅಬ್ದುಲ್ ರೆಹಮಾನ್​ನನ್ನು ಪೊಲೀಸರು ಬಂಧಿಸಿದ್ದಾರೆ. ಪಾದಚಾರಿಗೆ ಕಾರು ಡಿಕ್ಕಿಯಾಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, HSR ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲಕ ಮದ್ಯ ಸೇವಿಸಿದ್ದ ಹಿನ್ನೆಲೆ ರಕ್ತದ ಮಾದರಿಯನ್ನು ಪರೀಕ್ಷೆಗೆ ರವಾನೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಅತೀ ಕಡಿಮೆ ಮೊತ್ತಕ್ಕೆ ಆಲೌಟ್… RCB ದಾಖಲೆ ಸರಿಗಟ್ಟಿದ ರಾಯಲ್ಸ್ – Kannada News | Royals were bowled out for 49 Runs

ಸೌತ್ ಆಫ್ರಿಕಾ ಟಿ20 ಲೀಗ್​ನ 3ನೇ ಪಂದ್ಯದಲ್ಲಿ ಪಾರ್ಲ್ ರಾಯಲ್ಸ್ ತಂಡವು ಅತ್ಯಂತ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿ ಹೀನಾಯ ದಾಖಲೆ ಬರೆದಿದೆ. ಪರ್ಲ್​ನ ಬೋಲ್ಯಾಂಡ್ ಪಾರ್ಕ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಪಾರ್ಲ್ ರಾಯಲ್ಸ್ ಹಾಗೂ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 186 ರನ್ ಕಲೆಹಾಕಿತು.

187 ರನ್​ಗಳ ಗುರಿ ಪಡೆದ ಪಾರ್ಲ್ ರಾಯಲ್ಸ್ ತಂಡವು ಅನ್ರಿಕ್ ನೋಕಿಯ ದಾಳಿಗೆ ತತ್ತರಿಸಿದೆ. ಪರಿಣಾಮ ಕೇವಲ 49 ರನ್​​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಅತ್ಯಲ್ಪ ಮೊತ್ತ ಕಲೆಹಾಕಿದ ಹೀನಾಯ ದಾಖಲೆಯನ್ನು ಬರೆದಿದೆ.

ಇದಕ್ಕೂ ಮುನ್ನ ಈ ದಾಖಲೆ ಪ್ರಿಟೊರಿಯಾ ಕ್ಯಾಪಿಟಲ್ಸ್ ತಂಡದ ಹೆಸರಿನಲ್ಲಿತ್ತು. 2024 ರಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ವಿರುದ್ಧ ಪ್ರಿಟೊರಿಯಾ ಕ್ಯಾಪಿಟಲ್ಸ್ ಕೇವಲ 52 ರನ್​ಗಳಿಗೆ ಆಲೌಟ್ ಆಗಿದ್ದರು.

ಇದೀಗ 49 ರನ್​ಗಳಿಗೆ ಸರ್ವಪತನ ಕಾಣುವ ಮೂಲಕ ಪಾರ್ಲ್ ರಾಯಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಾಖಲೆಯನ್ನು ಸರಿಗಟ್ಟಿದೆ. ಐಪಿಎಲ್​ ಇತಿಹಾಸದಲ್ಲೇ ಅತೀ ಕಡಿಮೆ ಮೊತ್ತಕ್ಕೆ ಆಲೌಟ್ ಆದ ಹೀನಾಯ ದಾಖಲೆ ಆರ್​​ಸಿಬಿ ತಂಡದ ಹೆಸರಿನಲ್ಲಿದೆ.

ಆರ್​ಸಿಬಿ 2017 ರಲ್ಲಿ ಕೆಕೆಆರ್ ವಿರುದ್ಧ 49 ರನ್​ಗಳಿಗೆ ಆಲೌಟ್ ಆಗಿದ್ದರು. ಇದೀಗ ಪಾರ್ಲ್ ರಾಯಲ್ಸ್ ಕೂಡ 49 ರನ್​ಗಳಿಗೆ ಸರ್ವಪತನ ಕಾಣುವ ಮೂಲಕ ಪ್ರಮುಖ ಲೀಗ್​ಗಳಲ್ಲಿ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆದ ಹೀನಾಯ ದಾಖಲೆ ಬರೆದಿದೆ.

 

Source link

ಕರ್ನಾಟಕದಲ್ಲಿ 14 ಸಾವಿರ ಮಕ್ಕಳು ಶಾಲೆಯಿಂದ ದೂರ: ದಕ್ಷಿಣ ಭಾರತದಲ್ಲಿ ರಾಜ್ಯಕ್ಕೆ 3ನೇ ಸ್ಥಾನ! – Kannada News | Karnataka Ranks 3rd in South India with Over 14,000 Children Out of School

ಬೆಂಗಳೂರು, ಡಿಸೆಂಬರ್​ 28: ಉಚಿತ ಶಿಕ್ಷಣದ ಜೊತೆಗೆ ನಾನಾ ಸೌಲಭ್ಯಗಳ ಹೊರತಾಗಿಯೂ ಶಾಲೆಯತ್ತ ಮುಖ ಮಾಡದ ಮಕ್ಕಳ ಸಂಖ್ಯೆ ಮಾತ್ರ ಕಡಿಮೆ ಆಗಿಲ್ಲ. ದೇಶಾದ್ಯಂತ ಈ ಸಮಸ್ಯೆ ಇದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಇತ್ತೀಚಿಗೆ ಈ ಬಗ್ಗೆ ಅಂಕಿಅಂಶಗಳನ್ನ ಬಹಿರಂಗಗೊಳಿಸಿದೆ. ಆ ಪ್ರಕಾರ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯಲ್ಲಿ ಕರ್ನಾಟಕ ದಕ್ಷಿಣ ಭಾರತದಲ್ಲಿಯೇ ಮೂರನೇ ಸ್ಥಾನದಲ್ಲಿದೆ.

2025–26ರಲ್ಲಿ ಕರ್ನಾಟಕದಲ್ಲಿ ಒಟ್ಟು 14,087 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಅವರಲ್ಲಿ 6,462 ಮಂದಿ ಹೆಣ್ಣುಮಕ್ಕಳಾಗಿದ್ದಾರೆ. 2024–25ರಲ್ಲಿ ಈ ಸಂಖ್ಯೆ 9,422 ಇದ್ದು, ಅವರಲ್ಲಿ ಕೇವಲ 115 ಮಂದಿ ಮಾತ್ರ ಹುಡುಗಿಯರಾಗಿದ್ದರು. ಕಳೆದ ಶೈಕ್ಷಣಿಕ ವರ್ಷಕ್ಕೆ ಹೋಲಿಸಿದರೆ ಈ ಸಂಖ್ಯೆ ಪ್ರಸ್ತುತ ಹೆಚ್ಚಾಗಿದೆ. ದೇಶವ್ಯಾಪಿ ಪಟ್ಟಿಯಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದ್ದು, ಗುಜರಾತ್, ಅಸ್ಸಾಂ ಮತ್ತು ಉತ್ತರ ಪ್ರದೇಶಗಳು ಅಗ್ರಸ್ಥಾನದಲ್ಲಿವೆ.

ಇದನ್ನೂ ಓದಿ: ಎಲ್ಲ ತರಗತಿಗೆ ಒಬ್ಬರೇ ಟೀಚರ್​​; ರಾಜ್ಯದಲ್ಲಿವೆ 6,675 ಏಕ ಶಿಕ್ಷಕ ಶಾಲೆಗಳು

ದಕ್ಷಿಣ ಭಾರತದಲ್ಲಿ ಆಂಧ್ರ ಪ್ರದೇಶ ಮೊದಲ ಸ್ಥಾನದಲ್ಲಿದ್ದು, 46,463 ಮಕ್ಕಳು  ಶಾಲೆಯತ್ತ ಇಲ್ಲಿ ಮುಖ ಮಾಡಿಲ್ಲ. ಆ ಪೈಕಿ 17,584 ಮಂದಿ ಹೆಣ್ಣುಮಕ್ಕಳಾಗಿದ್ದಾರೆ. ತಮಿಳುನಾಡು ಎರಡನೇ ಸ್ಥಾನದಲ್ಲಿದ್ದು, 19,897 ಮಕ್ಕಳು ಇಲ್ಲಿ ಶಾಲೆಯಿಂದ ಹೊರಗಿದ್ದಾರೆ. ತೆಲಂಗಾಣದಲ್ಲಿ ಈ ಸಂಖ್ಯೆ 4,753 ಇದ್ದು, ಅವರಲ್ಲಿ 2,006 ಹುಡುಗಿಯರು. ಕೇರಳದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಅತಿ ಕಡಿಮೆ ಇದ್ದು, 1,773 ಮಕ್ಕಳು ಮಾತ್ರ ಶಿಕ್ಷಣದಿಂದ ವಂಚಿತರಾಗಿದ್ದಾರೆ.

ಶಾಲೆಯಿಂದ ಮಕ್ಕಳು ದೂರ ಉಳಿಯಲು ಕಾರಣ ಏನು?

ಶೌಚಾಲಯಗಳು ಮತ್ತು ಕುಡಿಯುವ ನೀರಿನಂತಹ ಮೂಲಸೌಕರ್ಯದ ಕೊರತೆ, ಶಿಕ್ಷಕರ ಅಭಾವ, ಉಚಿತ ಹಾಗೂ ಕಡ್ಡಾಯ ಶಿಕ್ಷಣ 14 ವರ್ಷ ವಯಸ್ಸಿನವರೆಗೂ ಮಾತ್ರ ಸೀಮಿತವಾಗಿರುವುದು, ಬಾಲ್ಯವಿವಾಹ ಮತ್ತು ಹೆಣ್ಣುಮಕ್ಕಳ ಗರ್ಭಧಾರಣೆ ಮೊದಲಾದ ಕಾರಣಗಳಿಂದ ಸಾವಿರಾರು ಮಕ್ಕಳು ಶಾಲೆಗಳಿಂದ ಹೊರಗುಳಿಯುತ್ತಿದ್ದಾರೆ. ಪ್ರಸ್ತುತ ಕರ್ನಾಟಕದಲ್ಲಿ 46,460 ಶಾಲೆಗಳಿದ್ದು, ಇಂದಿಗೂ ಸುಮಾರು 170 ಶಾಲೆಗಳಲ್ಲಿ ಶೌಚಾಲಯ ಸೌಲಭ್ಯಗಳಿಲ್ಲ ಎಂದು ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version