TV9 Kannada Live: ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಕೋಲ್ಕಾತ್ತಾ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿ – Kannada News | TV9 Kannada News Live 21 June 2026, International Day of Yoga 2026, KPCC President swearing in programme, Weather, Political Updates

ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಭಾರತ ಸರ್ಕಾರವು ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನು ಪಶ್ಚಿಮ ಬಂಗಾಳದ ಕೊಲ್ಕತ್ತಾದ ಐತಿಹಾಸಿಕ ರೆಡ್ ರೋಡ್‌ನಲ್ಲಿ ಆಯೋಜಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್​​ ಪದಗ್ರಹಣಮಾಡುತ್ತಿದ್ದು, ಮತ್ತೊಂದೆಡೆ ದೇಶಾದ್ಯಂತ ಇಂದು ನೀಟ್​​ ಮರುಪರೀಕ್ಷೆ ನಡೆಯುತ್ತಿದೆ. ರಾಜ್ಯ, ದೇಶ, ಅಂತಾರಾಷ್ಟ್ರೀಯ, ಸಿನಿಮಾ, ಕ್ರೀಡೆ ಸೇರಿ ಈ ದಿನದ ಪ್ರಮುಖ ಸುದ್ದಿಗಳ ಹೈಲೆಟ್ಸ್​ ಇಲ್ಲಿದೆ.

Source link

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಪ್ರಧಾನಿ ಮೋದಿ ಕಾರ್ಯಕ್ರಮದ ನೇರಪ್ರಸಾರ – Kannada News | International Yoga Day: PM Modi Leads Celebrations in Kolkata; Karnataka Marks Event with ‘Yoga for Healthy Aging’ Theme

ರಾಜ್ಯ ಸೇರಿ ದೇಶಾದ್ಯಂತ ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಭಾರತ ಸರ್ಕಾರವು ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನು ಪಶ್ಚಿಮ ಬಂಗಾಳದ ಕೊಲ್ಕತ್ತಾದ ಐತಿಹಾಸಿಕ ರೆಡ್ ರೋಡ್‌ನಲ್ಲಿ ಆಯೋಜಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರಿನ ವಿಧಾನಸೌಧ ಮುಂಭಾಗದಲ್ಲಿಯೂ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಘೋಷವಾಕ್ಯದಡಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆದಿದೆ. ಮೊದಲ ಬಾರಿಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರ ಕಾರಾಗೃಹಗಳಲ್ಲಿ ಯೋಗ ದಿನಾಚರಣೆ ಆಚರಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

International Yoga Day 2026 Live: ಪ್ರಧಾನಿ ಮೋದಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – Kannada News | International Yoga Day 2026 Live Updates: PM Modi in Kolkata for Yoga Day Celebrations

ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದಲ್ಲಿ ಈ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ಮುಖ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶ್ವಕ್ಕೆ ಭಾರತೀಯ ತತ್ವಜ್ಞಾನ ಮತ್ತು ಯೋಗವನ್ನು ಪರಿಚಯಿಸಿದ ಸ್ವಾಮಿ ವಿವೇಕಾನಂದರು ಜನಿಸಿದ ಪುಣ್ಯಭೂಮಿ ಕೊಲ್ಕತ್ತಾ. ಅವರು ಸ್ಥಾಪಿಸಿದ ರಾಮಕೃಷ್ಣ ಮಿಷನ್ ಹಾಗೂ ಬೇಲೂರು ಮಠಗಳು ಇಂದಿಗೂ ಆಧ್ಯಾತ್ಮಿಕ ಮತ್ತು ದೈಹಿಕ ಶಿಸ್ತಿನ ಪ್ರಮುಖ ಕೇಂದ್ರಗಳಾಗಿವೆ. ಯೋಗದ ಜಾಗತಿಕ ಪ್ರಚಾರಕರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಈ ಬಾರಿ ಕೊಲ್ಕತ್ತಾವನ್ನು ಪ್ರಮುಖ ವೇದಿಕೆಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ನೇರಪ್ರಸಾರ ಇಲ್ಲಿದೆ.

 

 

 

 

Source link

ದಿನ ಭವಿಷ್ಯ: ಇಂದು ಈ ರಾಶಿಯವರ ಭಾಗ್ಯದ ಬಾಗಿಲು ತೆರೆದು ಮುಚ್ಚುವುದು – Kannada News | Dina Rashi Bhavishya June 21, 2026: Daily Horoscope Predictions for Sunday

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಮೃಗಶಿರಾ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ವ್ಯಾಘಾತ, ಕರಣ : ವಣಿಜ, ಸೂರ್ಯೋದಯ – 05 – 55 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:11 – 08:47, ಯಮಗಂಡ ಕಾಲ 12:21 – 13:58, ಗುಳಿಕ ಕಾಲ 15:34 – 17:11

ಮೇಷ ರಾಶಿ: ಧಾರ್ಮಿಕ ಕಾರ್ಯದಿಂದ ಆದಾಯ. ತಾಯಿಯ ಕಡೆಯ ಬಂಧುಗಳು ನಿಮಗೆ ಆಪ್ತರಾಗುವರು. ಇಂದು ನೀವು ಸುಳ್ಳು ಹೇಳಿ ಸಿಕ್ಕಿಬೀಳುವಿರಿ. ಸದಾ ಉದ್ವೇಗದಲ್ಲಿಯೇ ಇರುವ ನಿಮಗೆ ಇನ್ನೊಂದಿಷ್ಟು ಕೆಲಸಗಳು ಬಂದಾವು. ಪರರ ವಶದಿಂದ ಪಾರುಗುವುದು ಕಷ್ಟ. ಯಾವುದನ್ನೂ ಅತಿಯಾಗಿ ಮನಸ್ಸಿಗೆ ಹಚ್ಚಿಕೊಳ್ಳುವುದು ಬೇಡ. ಸರಿಯಾಗುವ ತನಕ ತಾಳ್ಮೆ ಇರಲಿ. ಮನಸ್ಸಿನ ಭಾರವನ್ನು ಕಳೆಯುವ ದಾರಿಗಳು ನಿಮ್ಮ ಮುಂದೆ ಇರುವುದು.

ವೃಷಭ ರಾಶಿ: ನಿಮ್ಮ ಅಂತಶ್ಶಕ್ತಿಯೇ ನಿಮ್ಮ ನಿಜವಾದ ಬಲವಾದುದರಿಂದ ಯಾವ ಸಮಸ್ಯೆಗಳಿಗೂ ನಿರಾತಂಕವಾಗಿ ಇರುವಿರಿ. ಆರ್ಥಿಕಸ್ಥಿತಿಯು ಅಭಿವೃದ್ಧಿ ಹೊಂದಿದರೂ ಯಾವುದೋ ಕಾರಣಕ್ಕೆ ಅದು ಖಾಲಿಯಾಗುವುದು. ಸಾಹಿತ್ಯದ ಮೂಲಕ ಯಶಸ್ಸು ಕಾಣುವ ಆಸೆ ಹೆಚ್ಚುವುದು. ಅಮೂಲ್ಯವಾದ ವಸ್ತುವನ್ನು ಜೋಪಾನವಾಗಿಸಿರಿಕೊಳ್ಳಿ. ಲೆಕ್ಕಕ್ಕೆ ಸಿಗದೇ ಇರುವ ಎಷ್ಟೋ ಹಣವನ್ನು ಕಳೆದುಕೊಳ್ಳುವಿರಿ. ಪಕ್ಷಪಾತದಿಂದ ನಿಮ್ಮ ಸಂಬಂಧಗಳು ಹಾಳಾಗಬಹುದು.

ಮಿಥುನ ರಾಶಿ: ಹೇಳಿದ್ದನ್ನೇ ಮತ್ತೆ ಮತ್ತೆ ಹೇಳಿದರೆ ನಿಮ್ಮ ಬೆಲೆಯೇ ಕಡಿಮೆಯಾಗುವುದು. ಒಮ್ಮೆ ಹೇಳಿ‌ ಸುಮ್ಮನಾಗಿ. ದೀರ್ಘಕಾಲದ ಹೂಡಿಕೆಗೆ ಮನಸ್ಸು ಮಾಡುವಿರಿ. ಕೆಲವು ದಿನ ಹೀಗೆ ಇರಲಿದೆ. ದೈವದಲ್ಲಿ ಭಕ್ತಿಯಿಡಿ. ಯಾರ ಮೇಲೇ ಕುತಂತ್ರ ಮಾಡುವ ಅವಶ್ಯಕತೆ ಇಲ್ಲ. ನಿಮಗೆ ಸಿಗಬೇಕಾದುದು ಸಿಕ್ಕೇ ಸಿಗುತ್ತದೆ. ತೀರ್ಥಕ್ಷೇತ್ರಗಳಿಗೆ ಹೋಗುವ ಮನಸ್ಸಾಗುವುದು. ನೀರಿನ ವಿಷಯದಲ್ಲಿ ಜಾಗಾರೂಕತೆ ಇರಲಿ.

ಕರ್ಕಾಟಕ ರಾಶಿ: ಉದ್ಯೋಗದಲ್ಲಿ ಸ್ವಲ್ಪಮಟ್ಟಿನ ಹಿನ್ನಡೆ ಇರಲಿದೆ. ಬೇಸರಿಸಬೇಕಿಲ್ಲ‌. ಔಷಧ ವ್ಯಾಪಾರದಲ್ಲಿ ಆದಾಯ ಚುರುಕಾಗಲಿದೆ. ಮುಂಬರುವ ದಿನಗಳು ಅವನ್ನೆಲ್ಲ ಸರಿದೂಗಿಸುವುದು‌ ಅಧಿಕಾರಿಗಳು ನಿಮ್ಮ ಕಾರ್ಯವನ್ನು ಕಂಡು ಪ್ರಶಂಸಿಸುವರು. ಶತ್ರುವಿಗೆ ಮಾಡಬೇಕಾದುದನ್ನು ರಹಸ್ಯವಾಗಿ ಮಾಡುವಿರಿ. ನಿಮ್ಮ ಉದ್ಯೋಗಕ್ಕೆ ಯಾರಿಂದಲಾದರೂ ಹೂಡಿಕೆಯನ್ನು ಮಾಡಿಸಿಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳಿಂದ ನಿಮಗೆ ವಂಚನೆಯಾಗಿದೆ ಎಂದನಿಸಬಹುದು.

ಸಿಂಹ ರಾಶಿ: ಕೈಗೆ ಸಿಕ್ಕ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತೆ ಆಗುವುದು. ನಿಮ್ಮ ಕೆಲಸದ ಬಗ್ಗೆ ನಿಮ್ಮ ಗಮನವಿರಲಿ. ಗೌಪ್ಯ ಸಂಗತಿ ನಿಮ್ಮಿಂದ ಬಯಲಾಗುವುದು. ಇನ್ನೊಬ್ಬರ ಕುರಿತು ಟೀಕೆ ಮಾಡುವುದನ್ನು ನಿಲ್ಲಿಸಿ. ಅಶ್ಲೀಷಪದಗಳನ್ನು ಬಳಸಿ ಮನೆಯಲ್ಲಿ ಬೈಗುಳ ತಿನ್ನುವಿರಿ. ಹೊಸ ಆದಾಯದ ಮೂಲವನ್ನು ಕಂಡುಕೊಳ್ಳುವಿರಿ. ಕಾರ್ಯಕ್ಕಾಗಿ ಇಂದಿನ ಓಡಾಟವು ವ್ಯರ್ಥವೇ ಸರಿ. ನಿನ್ನೆಯ ಘಟನೆಯನ್ನು ನೆನಪಿಸಿಕೊಳ್ಳದೇ ಕಾರ್ಯಪ್ರವೃತ್ತರಾಗಿ.

ಕನ್ಯಾ ರಾಶಿ: ಸಾಲವನ್ನು ಮಾಡುವ ಸ್ಥಿತಿಯು ಅನಿರೀಕ್ಷಿತವಾಗಿ ಎದುರಾಗಬಹುದು. ವ್ಯರ್ಥವಾದ ಸುತ್ತಾಟವು ನಿಮಗೆ ಬೇಸರ ತರಿಸಬಹುದು. ಮನೆಯಲ್ಲಿ ಧಾರ್ಮಿಕ ಕಾರ್ಯಗಳನ್ನು ಮಾಡಲಿದ್ದೀರಿ. ಇಷ್ಟು ವರ್ಷದ ಪರಿಶ್ರಮವು ಇಂದು ವ್ಯರ್ಥವಾಗುವುದು. ವಿಶೇಷವಾಗಿ ವಿದ್ಯಾರ್ಥಿಗಳು ಈ ವಿಚಾರದಲ್ಲಿ ಹತಾಶೆಗೊಳ್ಳುವರು. ನೆನಪಿನ ಶಕ್ತಿಗೆ ಸೂಕ್ತವಾದ ಪರಿಹಾರವನ್ನು ಮೊದಲು ಮಾಡಿಕೊಳ್ಳುವುದು ಉತ್ತಮ. ಪ್ರಾಣಿಯಿಂದ ಭಯವಾಗಲಿದೆ. ಬೇಡವಾದುದರ ಬಗ್ಗೆ ಆಸೆ ಬೇಡ.

ತುಲಾ ರಾಶಿ: ದುಃಖಿಸದೇ ಧೈರ್ಯದಿಂದ ಮುಂದಿನ ಕಾರ್ಯದ ಕಡೆ ಗಮನವಿರಲಿ. ಉನ್ನತ ಅಧಿಕಾರಕ್ಕೆ ಹೋಗುವ ಸಂಭವಿದ್ದರೂ ಹಿತಶತ್ರುಗಳ ಪಿತೂರಿಯಿಂದ ಅಥವಾ ಹಿಂದೆಂದೋ ಆಡಿದ ಮಾತಿನ್ನೇ ಇಟ್ಟುಕೊಂಡು ನಿಮಗೆ ಹುದ್ದೆಯನ್ನು ಕೊಡದೇಹೋಗಬಹುದು. ಹೇಳಬೇಕಾದುದನ್ನು ನೇರವಾಗಿ ಸಂಕ್ಷೇಪವಾಗಿ ಹೇಳಿ. ಸಿಟ್ಟು ಬರುತ್ತದೆ ಎಂದು ಗೊತ್ತಿದ್ದರೂ ಅದನ್ನು ನಿಗ್ರಹಿಸಲು ಶ್ರಮವಹಿಸದೇ ಇರುವುದು ವಿಷಾದಕರ ಸಂಗತಿಯಾಗುವುದು. ಸ್ನೇಹಿತರ ನಡುವೆ ಸೈದ್ಧಾಂತಿಕ ಭಿನ್ನತೆ ಬರುವುದು.

ವೃಶ್ಚಿಕ ರಾಶಿ: ಮನೆಯಲ್ಲಿ ನಡೆಯುವ ಕಲಹದಿಂದ ನೀವು ಬೇಸರಗೊಳ್ಳಬಹುದು. ನಿಮ್ಮ ಮಾತನ್ನೇ ಎಲ್ಲರೂ ಪಾಲಿಸಬೇಕು ಎನ್ನುವ ನಿಮ್ಮ ಧೋರಣೆಯನ್ನು ಬದಲಿಸಿಕೊಳ್ಳಿ. ಅವಾಚ್ಯ ಪದಗಳನ್ನು ಮೇಲಿನವರಿಂದ ಕೇಳುವಿರಿ. ಅನಿವಾರ್ಯದ ಪ್ರಯಾಣವು ನಿಮ್ಮನ್ನು ಹೈರಾಣ ಮಾಡುವುದು. ಆಯ್ಕೆಗಳ ವಿಚಾರದಲ್ಲಿ ನೀವು ಹಿಂದುಳಿಯಬಹುದು. ಲಾಭಾಕ್ಕಾಗಿ ವ್ಯಾಪಾರದಲ್ಲಿ ಹೊಸದಾದ ಆಕರ್ಷ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಮಕ್ಕಳ ಜೊತೆ ಚಿಂತೆಯನ್ನೆಲ್ಲ ಬಿಟ್ಟು ಸಂತೋಷದಿಂದ ಕಾಲವನ್ನು ಕಳೆಯುವಿರಿ.

ಧನು ರಾಶಿ: ಆರ್ಥಿಕವಾದ ದುರ್ಬಲತೆ ನಿಮ್ಮನ್ನು ಕಾಡಬಹುದು. ಮಾತಿನಿಂದಲೇ ಇಂದು ನೀವು ಕೆಲಸವನ್ನು ಮಾಡುವಿರಿ. ನಿಮ್ಮನ್ನು ಸುಳ್ಳಾಗಿ ಬಿಂಬಿಸಿಕೊಳ್ಳುವಿರಿ. ಸಾಲಕೊಟ್ಟ ಹಣವು ಬರುತ್ತದೆ ಎಂಬ ನಿರೀಕ್ಷೆಯು ಸುಳ್ಳಾಗಬಹುದು. ದುಂದುವೆಚ್ಚ ಮಾಡಿದ ಕಾರಣ ಮನೆಯಲ್ಲಿ ಕಲಹವಾಗಬಹುದು. ಕಛೇರಿಗೆ ವಿಳಂಬವಾಗಿ ಹೋಗಿ ಮೇಲಧಿಕಾರಿಗಳ‌ ಕೆಂಗಣ್ಣಿಗೆ ಗುರಿಯಾಗುವಿರಿ. ಅನಿರೀಕ್ಷಿತವಾಗಿ ಹಣವು ಖಾಲಿಯಾಗುವುದು. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡಿಕೊಂಡು ಅನಂತರ ಬೇಸರಿಸುವರು.

ಮಕರ ರಾಶಿ: ವೇಗವಾಗಿ ಹಣದಲ್ಲಿ ಅಭಿವೃದ್ಧಿಯ ಕಾಣುವ ಬಗ್ಗೆ ಬಯಕೆ ಬೇಡ. ಮಾತಿಗಾಗಿ ಮಾತು ಬೆಳೆಯಬಹುದು. ನಿಮ್ಮಿಂದ‌ ಸಹಾಯ ಪಡೆದವರ ಆಶೀರ್ವಾದ ಸದಾ ಇರಲಿದೆ. ಅದು ಮತ್ತೇನೋ ಆಗುವ ಸಾಧ್ಯತೆ ಇದೆ, ಜಾಗರೂಕರಾಗಿರಿ. ಏನನ್ನಾದರೂ ಕಳೆದುಕೊಳ್ಳುವ ಭೀತಿ ಇರುವುದು. ಸ್ತ್ರೀಯರಿಂದ ನಿಮ್ಮ‌ ಬಗ್ಗೆ ಸುಳ್ಳು ಅಪವಾದಬರಬಹುದು. ಸರ್ಕಾರ ಕಾರ್ಯವು ಇಂದು ಪೂರ್ಣವಾಗದು ಎಂದು ಅಂದುಕೊಂಡಿದ್ದರೂ ಕೊನೆಗೆ ಕೆಲಸವಾಗುವುದು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು.

ಕುಂಭ ರಾಶಿ: ಮನೆಯಲ್ಲಿ ನಿಮ್ಮ ಬಗ್ಗೆ ಏನಾದರೂ ಮಾತನಾಡಿಕೊಳ್ಳಬಹುದು. ಸೌಂದರ್ಯವೇ ಶತ್ರುವೂ ಆಗಬಹುದು. ಯಾರಿಗೂ ಸಲಹೆಯನ್ನು ಕೊಡಲು ಇಂದು ಹೋಗಬೇಡಿ. ಸಣ್ಣ ವ್ಯಾಪಾರಕ್ಕೆ ಪ್ರಕೃತಿಯಿಂದ ಪ್ರತಿರೋಧ. ಆರ್ಥಿಕಮೂಲಕ್ಕೆ ಪೆಟ್ಟುಬೀಳುವ ಸಾಧ್ಯತೆ ಇದೆ. ಉತ್ತಮ ಜೀವನಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಿ.‌ ಇಲ್ಲವಾದರೆ ಅನಂತರ ದುಃಖಿಸಿ ಪ್ರಯೋಜನವಾಗದು. ಮಕ್ಕಳ ವಿದ್ಯಾಭ್ಯಾಸಕ್ಕೆ ನೀವೇ ವಿಶೇಷ ಕಾಳಜಿಯನ್ನು ತೋರಿ ಅವರನ್ನು ಓದಿಗೆ ಪ್ರೇರಣೆ ಕೊಡಬೇಕಾಗುವುದು.

ಮೀನ ರಾಶಿ: ನಿಮಗಿಂದು ಪ್ರೀತಿಯನ್ನು ಕಳೆದುಕೊಳ್ಳತ್ತೇನೋ ಎಂಬ ಭಯವಿರಲಿದೆ. ದೊಡ್ಡವರನ್ನು ಹಾಗೆಯೇ ಗೌರವಿಸಿ. ಅನುಕೂಲವಿದ್ದರೆ ದೂರದಲ್ಲಿರುವ ತಂದೆ, ತಾಯಿಯರನ್ನು ಭೇಟಿ ಮಾಡುವಿರಿ. ನಿಮ್ಮ ಮನೆಯಯಿಂದ ನೀವು ಇಷ್ಟಪಡುವ ಪ್ರಾಣಿಯು ಕಾಣೆಯಾಗಬಹುದು. ನಿಮ್ಮ ಸಂಗಾತಿಯು ನೀವು ಪ್ರೀತಿ ತೋರಿಸಿಲ್ಲವೆಂದು ಸಿಟ್ಟಾಗಬಹುದು. ಎಲ್ಲದಕ್ಕೂ ಇನ್ನೊಬ್ಬರನ್ನು ಬೊಟ್ಟುಮಾಡಿ ತೋರಿಸುವುದು ಸರಿಯಾಗದು. ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ.

ಲೋಹಿತ್ ಹೆಬ್ಬಾರ್ – 8762924271 (what’s app only)

Source link

International Yoga Day: ಈ ಬಾರಿ ಕೊಲ್ಕತ್ತಾದಲ್ಲೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲು ಕಾರಣವೇನು? – Kannada News | What is the reason for celebrating International Yoga Day 2026 Event in Kolkata this year?

ನವದೆಹಲಿ, ಜೂನ್ 20: ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು (International Yoga Day 2026) ಆಚರಿಸಲಾಗುತ್ತದೆ. ಪಶ್ಚಿಮ ಬಂಗಾಳದ ರಾಜಧಾನಿಯಾದ ಕೊಲ್ಕತ್ತಾದಲ್ಲಿ ನಾಳೆ (ಭಾನುವಾರ) ಈ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ನಾಳೆಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಕೂಡ ಕೊಲ್ಕತ್ತಾಗೆ ತೆರಳಲಿದ್ದಾರೆ. ಈ ಬಾರಿ ಕೊಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತಿರುವುದು ಏಕೆ? ಇದರ ಹಿಂದಿನ ಕಾರಣಗಳ ಬಗ್ಗೆ ಮಾಹಿತಿ ಇಲ್ಲಿದೆ.

ಕೊಲ್ಕತ್ತಾ ಮತ್ತು ಆಧುನಿಕ ಯೋಗದ ಇತಿಹಾಸಕ್ಕೆ ನಿಕಟ ಸಂಬಂಧವಿದೆ. ವಿಶ್ವಕ್ಕೆ ಯೋಗ ಮತ್ತು ಭಾರತೀಯ ತತ್ವಜ್ಞಾನವನ್ನು ಪರಿಚಯಿಸಿದ ಸ್ವಾಮಿ ವಿವೇಕಾನಂದರು ಜನಿಸಿದ್ದು ಇದೇ ಕೊಲ್ಕತ್ತಾದಲ್ಲಿ. ಅವರು ಸ್ಥಾಪಿಸಿದ ರಾಮಕೃಷ್ಣ ಮಿಷನ್ ಮತ್ತು ಬೇಲೂರು ಮಠವು ಇಂದಿಗೂ ಆಧ್ಯಾತ್ಮಿಕ ಹಾಗೂ ದೈಹಿಕ ಶಿಸ್ತಿನ ಕೇಂದ್ರಗಳಾಗಿವೆ. ಹಾಗಾಗಿ, ಇಲ್ಲಿ ಯೋಗ ದಿನವನ್ನು ಆಚರಿಸುವುದು ಯೋಗದ ಜಾಗತಿಕ ಪ್ರಚಾರಕರಿಗೆ ಗೌರವ ಸಲ್ಲಿಸಿದಂತೆ ಎಂದು ಪರಿಗಣಿಸಲಾಗುತ್ತದೆ.

2026ರ ಅಂತಾರಾಷ್ಟ್ರೀಯ ಯೋಗ ದಿನದ ಧ್ಯೇಯವಾಕ್ಯ ‘ಆರೋಗ್ಯಕರ ವಯಸ್ಸಾಗುವಿಕೆಗಾಗಿ ಯೋಗ’ (Yoga for Healthy Ageing) ಎಂಬುದಾಗಿದೆ. ಕೊಲ್ಕತ್ತಾ ನಗರವು ಆಧುನಿಕ ಯೋಗವನ್ನು ಜಗತ್ತಿಗೆ ಪರಿಚಯಿಸಿದ ಸ್ವಾಮಿ ವಿವೇಕಾನಂದರು ಮತ್ತು ಯೋಗದ ಮೂಲಕವೇ ದೀರ್ಘಕಾಲದ ದೈಹಿಕ ಶಿಸ್ತನ್ನು ಸಾರಿದ ಪರಮಹಂಸ ಯೋಗಾನಂದರಂತಹ ಮಹಾಪುರುಷರ ಜನ್ಮಭೂಮಿಯಾಗಿದೆ. ಯೋಗದ ಮೂಲಕ ಘನತೆಯುಳ್ಳ ಮತ್ತು ದೀರ್ಘಕಾಲದ ಆರೋಗ್ಯಕರ ಜೀವನವನ್ನು ಹೇಗೆ ನಡೆಸಬಹುದು ಎಂಬ ಸಂದೇಶ ಸಾರಲು ಈ ಐತಿಹಾಸಿಕ ನಗರಕ್ಕಿಂತ ಉತ್ತಮ ಸ್ಥಳವಿಲ್ಲ ಎಂಬುದು ಕೇಂದ್ರ ಸರ್ಕಾರದ ಯೋಚನೆಯಾಗಿದೆ.

ಇದನ್ನೂ ಓದಿ: NEET UG Re-Exam: ನಾಳೆ ನೀಟ್ ಮರುಪರೀಕ್ಷೆ; ಪರೀಕ್ಷಾ ಕೇಂದ್ರಕ್ಕೆ ಏನು ತರಲೇಬೇಕು, ಯಾವುದು ನಿಷೇಧ? ಡ್ರೆಸ್ ಕೋಡ್ ಏನು?

ಕೊಲ್ಕತ್ತಾ ಕೇವಲ ಸಾಂಸ್ಕೃತಿಕ ನಗರವಲ್ಲ, ಅದು ಪೂರ್ವ ಭಾರತದ ಪ್ರಮುಖ ರಾಜತಾಂತ್ರಿಕ ಕೇಂದ್ರವೂ ಹೌದು. ಇಲ್ಲಿ ಹಲವಾರು ವಿದೇಶಿ ರಾಯಭಾರಿ ಕಚೇರಿಗಳು ಮತ್ತು ಅಂತಾರಾಷ್ಟ್ರೀಯ ಪ್ರತಿನಿಧಿಗಳಿದ್ದಾರೆ. ಈ ಬಾರಿ ವಿಶ್ವದಾದ್ಯಂತ 2,500ಕ್ಕೂ ಹೆಚ್ಚು ಸ್ಥಳಗಳಲ್ಲಿ ಯೋಗ ದಿನ ನಡೆಯುತ್ತಿರುವುದರಿಂದ, ಭಾರತದ ಪೂರ್ವದ ಹೆಬ್ಬಾಗಿಲಾದ ಕೊಲ್ಕತ್ತಾದಿಂದ ಜಾಗತಿಕ ಮಟ್ಟಕ್ಕೆ ಆರೋಗ್ಯ ಮತ್ತು ಸಾಮರಸ್ಯದ ಸಂದೇಶ ರವಾನಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.

ಕೊಲ್ಕತ್ತಾದಲ್ಲಿರುವ ಭಾರತೀಯ ಸೇನೆಯ ಪೂರ್ವ ಕಮಾಂಡ್ ಪ್ರಧಾನ ಕಚೇರಿ ‘ಫೋರ್ಟ್ ವಿಲಿಯಂ’ನಲ್ಲಿ ಪ್ರತಿ ವರ್ಷ ಭಾರಿ ಪ್ರಮಾಣದಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತದೆ. ನೌಕಾಪಡೆ, ವಾಯುಪಡೆ ಮತ್ತು ಗಡಿ ಭದ್ರತಾ ಪಡೆಗಳ (BSF) ನೂರಾರು ಯೋಧರು ಗಂಗಾ ನದಿಯ ದಂಡೆಯ ಮೇಲೆ ಒಟ್ಟಾಗಿ ಯೋಗ ಪ್ರದರ್ಶನ ನೀಡುವ ಮೂಲಕ ದೇಶದ ಆರೋಗ್ಯ ಮತ್ತು ಸುರಕ್ಷತೆಯ ಸಂದೇಶವನ್ನು ಸಾರುತ್ತಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷ ದೇಶದ ಬೇರೆ ಬೇರೆ ಭಾಗಗಳಲ್ಲಿ (ಉದಾಹರಣೆಗೆ ಈ ಹಿಂದೆ ರಾಂಚಿ, ಮೈಸೂರು, ಡೆಹ್ರಾಡೂನ್, ಜಮ್ಮು ಮತ್ತು ಕಾಶ್ಮೀರ) ಯೋಗ ದಿನದ ಕಾರ್ಯಕ್ರಮವನ್ನು ನಡೆಸುವ ಮೂಲಕ ಪ್ರಾದೇಶಿಕ ಸಮತೋಲನ ಮತ್ತು ಒಳಗೊಳ್ಳುವಿಕೆಯನ್ನು ಉತ್ತೇಜಿಸುತ್ತಾ ಬಂದಿದ್ದಾರೆ. ಈ ಬಾರಿ ಪೂರ್ವ ಭಾರತದ ಅತ್ಯಂತ ದೊಡ್ಡ ಮೆಟ್ರೋಪಾಲಿಟನ್ ನಗರವಾದ ಕೊಲ್ಕತ್ತಾವನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಆ ಭಾಗದ ಜನರನ್ನು ರಾಷ್ಟ್ರೀಯ ಮುಖ್ಯವಾಹಿನಿಗೆ ತರಬೇಕೆಂಬುದು ಸರ್ಕಾರದ ಉದ್ದೇಶ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಪ್ರಮಾಣವಚನಕ್ಕೆ ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ

ಕೊಲ್ಕತ್ತಾದ ‘ರೆಡ್ ರೋಡ್’ ವಿಶಾಲವಾದ ಮತ್ತು ಐತಿಹಾಸಿಕ ರಸ್ತೆಯಾಗಿದ್ದು, ಇಲ್ಲಿ ಸಾವಿರಾರು ಜನರು ಒಟ್ಟಿಗೆ ಸೇರಿ ಯೋಗ ಮಾಡಲು ಸೂಕ್ತವಾದ ಮುಕ್ತ ವಾತಾವರಣವಿದೆ. ಗಂಗಾ ನದಿಯ ಸಾಮೀಪ್ಯ ಮತ್ತು ಕೋಲ್ಕತ್ತಾದ ಹಸಿರು ವಲಯವಾದ ‘ಮೈದಾನ್’ ಪ್ರದೇಶದ ಮಧ್ಯೆ ಇರುವ ಈ ಸ್ಥಳವು ಯೋಗದ ದೃಶ್ಯ ವೈಭವವನ್ನು ಜಾಗತಿಕ ಮಟ್ಟದಲ್ಲಿ ಬಿಂಬಿಸಲು ಅತ್ಯಂತ ಆಕರ್ಷಕವಾಗಿದೆ. ಈ ಎಲ್ಲಾ ಕಾರಣಗಳಿಂದಾಗಿ, ಭಾರತ ಸರ್ಕಾರವು 12ನೇ ಅಂತಾರಾಷ್ಟ್ರೀಯ ಯೋಗ ದಿನದ ಮುಖ್ಯ ಕೇಂದ್ರವಾಗಿ ಕೊಲ್ಕತ್ತಾವನ್ನು ಆಯ್ಕೆ ಮಾಡಿಕೊಂಡಿದೆ.

ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವು ಪಶ್ಚಿಮ ಬಂಗಾಳದ ಕೊಲ್ಕತ್ತಾದ ಐತಿಹಾಸಿಕ ರೆಡ್ ರೋಡ್‌ನಲ್ಲಿ ನಡೆಯಲಿದ್ದು, ಅಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಸಾಮಾನ್ಯ ಯೋಗ ಶಿಷ್ಟಾಚಾರ’ದ (Common Yoga Protocol) ಅಭ್ಯಾಸದಲ್ಲಿ ದೇಶವನ್ನು ಮುನ್ನಡೆಸಲಿದ್ದಾರೆ. ರೆಡ್ ರೋಡ್‌ನಲ್ಲಿ ನಡೆಯುವ ರಾಷ್ಟ್ರೀಯ ಆಚರಣೆಯು ಬೆಳಿಗ್ಗೆ 5 ಗಂಟೆಗೆ ಪ್ರಾರಂಭವಾಗಲಿದ್ದು, ಕಾರ್ಯಕ್ರಮದ ಸ್ಥಳದಲ್ಲಿ ಸಾವಿರಾರು ಯೋಗಾಸಕ್ತರು ಭಾಗವಹಿಸಲಿದ್ದಾರೆ. ಹಾಗೆಯೇ ಭಾರತ ಮತ್ತು ವಿದೇಶಗಳಿಂದ ಲಕ್ಷಾಂತರ ನಾಗರಿಕರು ವರ್ಚುವಲ್ ಆಗಿ (ಆನ್‌ಲೈನ್ ಮೂಲಕ) ಇದರಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಈ ಕಾರ್ಯಕ್ರಮವು ಆರೋಗ್ಯ, ಸಾಮರಸ್ಯ ಮತ್ತು ಸಾಮೂಹಿಕ ಯೋಗಕ್ಷೇಮವನ್ನು ಉತ್ತೇಜಿಸುವ ಜಾಗತಿಕ ಆಂದೋಲನವಾಗಿ ಯೋಗದ ಬೆಳೆಯುತ್ತಿರುವ ಪಾತ್ರವನ್ನು ಪುನರುಚ್ಚರಿಸುತ್ತದೆ.

ಸಂಸ್ಕೃತಿ ಸಚಿವಾಲಯವು ದೇಶದ 100 ಐತಿಹಾಸಿಕ ಸ್ಥಳಗಳಲ್ಲಿ ವಿಶೇಷ ಯೋಗ ಆಚರಣೆಗಳನ್ನು ಆಯೋಜಿಸುತ್ತಿದ್ದು, ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಐತಿಹಾಸಿಕ ಮೈಲಿಗಲ್ಲುಗಳು ಮತ್ತು ಯೋಗ ಸಂಪ್ರದಾಯಗಳನ್ನು ಇದು ಜೋಡಿಸುತ್ತದೆ. ಈ ಉಪಕ್ರಮದ ಭಾಗವಾಗಿ, ನವದೆಹಲಿಯ ಕೆಂಪು ಕೋಟೆ, ಉತ್ತರಾಖಂಡದ ಹರಿದ್ವಾರ, ಒಡಿಶಾದ ಕೋನಾರ್ಕ್, ಕರ್ನಾಟಕದ ಹಂಪಿ, ತಮಿಳುನಾಡಿನ ಮಹಾಬಲಿಪುರಂ, ಮಹಾರಾಷ್ಟ್ರದ ಮುಂಬೈ, ಬಿಹಾರದ ನಲಂದಾ, ಗುಜರಾತ್‌ನ ಅಹಮದಾಬಾದ್, ಉತ್ತರ ಪ್ರದೇಶದ ಸಾರನಾಥ್, ಲಡಾಖ್‌ನ ಲೇಹ್, ತೆಲಂಗಾಣದ ಹೈದರಾಬಾದ್ ಮತ್ತು ಅಸ್ಸಾಂನ ಸಿಲ್ಚಾರ್ ಸೇರಿದಂತೆ 12 ಪ್ರಮುಖ ಸ್ಥಳಗಳಲ್ಲಿ ಯೋಗ ದಿನಾಚರಣೆಯ ಪ್ರಮುಖ ಆಚರಣೆಗಳನ್ನು ಆಯೋಜಿಸಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಡುಗಡೆ ಆಯ್ತು ‘ಅಯೋಗ್ಯ 2’ ಸಿನಿಮಾದ ಹೊಸ ಹಾಡು – Kannada News | Satish Ninasam and Rachita Ram starrer Ayogya 2 movie new song released

ಸತೀಶ್‌ ನಿನಾಸಂ (Satish Neenasam) ಹಾಗೂ ರಚಿತಾ ರಾಮ್‌ ಅಭಿನಯದ ‘ಅಯೋಗ್ಯ’ ಸಿನಿಮಾ ಹಿಟ್ ಆಗಿತ್ತು. ಸಿನಿಮಾದ ಕಾಮಿಡಿ, ಹಾಡುಗಳು, ಆಕ್ಷನ್ ಎಲ್ಲವೂ ಜನರಿಗೆ ಇಷ್ಟವಾಗಿತ್ತು. ಇದೀಗ ಅದೇ ತಂಡ ‘ಅಯೋಗ್ಯ 2’ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಸಿನಿಮಾದ ಹೊಸ ಹಾಡೊಂದು ಇಂದು (ಜೂನ್ 20) ಬಿಡುಗಡೆ ಆಗಿದೆ. ಸಿನಿಮಾದ ಹಾಡು ಬಿಡುಗಡೆಗಾಗಿ ವಿಶೇಷ ಕಾರ್ಯಕ್ರಮವನ್ನು ಚಿತ್ರತಂಡ ಆಯೋಜಿಸಿತ್ತು. ಇಂದು (ಜೂನ್ 20) ನಟ ಸತೀಶ್‌ ಹುಟ್ಟುಹಬ್ಬ ಆಗಿದ್ದು, ಇದೇ ದಿನ ಹಾಡು ಬಿಡುಗಡೆ ಮಾಡಲಾಗಿದೆ.

‘ಅಯೋಗ್ಯ 2’ ಸಿನಿಮಾದ ‘ಪುಟ್‌ ಲಕ್ಷ್ಮೀ’ ಹಾಡನ್ನ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಮತ್ತು ಇತರೆ ಕೆಲವು ಪ್ರಮುಖರು ಬಿಡುಗಡೆ ಮಾಡಿದರು. ಹಾಡು ಬಿಡುಗಡೆ ಮಾಡಿ ಮಾತನಾಡಿದ ಅರ್ಜುನ್‌ ಜನ್ಯ, ‘ಈ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ನಾನು ಹಾಡೋಂದನ್ನ ಗೆಸ್ಟ್‌ ಆಗಿ ಬಿಡುಗಡೆ ಮಾಡ್ತಿರೋದು ಎಂದರು. ಹಾಡು ಹಾಡಿರೋ ಪೃಥ್ವಿ ಭಟ್‌ ತುಂಬಾ ಚೆನ್ನಾಗಿ ಹಾಡಿದ್ದಾರೆ ಎಂಟು ವರ್ಷದ ಹಿಂದೆ ‘ಅಯೋಗ್ಯ’ ಸಿನಿಮಾಗೆ ಹಾಡು ಕಂಪೋಸ್ ಮಾಡುವಾಗ ದಿನಗಳು ಹೇಗಿತ್ತು ಅನ್ನೋ ಹಳೆಯ ದಿನಗಳನ್ನು ಅವರು ನೆನಪು ಮಾಡಿಕೊಂಡರು.

ನಿರ್ದೇಶಕ ಮಹೇಶ್‌ ಕುಮಾರ್‌ ಮಾತನಾಡಿ ಇಡೀ ತಂಡದ ಸಹಕಾರಕ್ಕೆ ಧನ್ಯವಾದ ಅರ್ಪಿಸಿದರು. ಎಂಟು ವರ್ಷದ ನಂತರ ಬರ್ತಿದ್ದೀವಿ, ಈ ಹಾಡು ನಿಮ್ಮೆಲ್ಲರಿಗೂ ಖುಷಿ ಕೊಡುತ್ತೆ. ಶೂಟ್‌ ಸಮಯದಲ್ಲಿ ನಡೆದ ಘಟನೆಗಳನ್ನ ಮೆಲುಕು ಹಾಕಿದರು . ‘ಅಯೋಗ್ಯ’ ಸಿನಿಮಾಗಿಂತಲೂ ಅಯೋಗ್ಯ 2 ಚಿತ್ರದಲ್ಲಿ ಹೆಚ್ಚು ಎಂಟರ್ಟೈನ್ಮೆಂಟ್‌ ಇದೆ ಎಂದರು.

ಇದನ್ನೂ ಓದಿ: ‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?

ಇನ್ನು ನಟ ಸತೀಶ್‌ ನಿನಾಸಂ ಹಾಗೂ ನಟಿ ರಚಿತಾ ರಾಮ್‌ ಇಬ್ಬರು ಒಟ್ಟಿಗೆ ವೇದಿಕೆಗೆ ಬಂದು ಹಾಡನ್ನ ಬರೆದಿರುವ ಚೇತನ್‌ ಕುಮಾರ್‌ ,ಹಾಡಿರೋ ಸಿದ್‌ ಶ್ರೀರಾಮ್‌ ಪೃಥ್ವಿ ಭಟ್‌ ಅವರಿಗೆ ಧನ್ಯವಾದ ಹೇಳಿದರು. ಜೊತೆಯಲ್ಲಿ ನಟಿಸಿದಕ್ಕಾಗಿ ಇಬ್ಬರು ಪರಸ್ಪರ ಧನ್ಯವಾದ ತಿಳಿಸಿದರು. ‘ಅಯೋಗ್ಯ 2’ ಸಿನಿಮಾವನ್ನು ಮುನೇಗೌಡ ನಿರ್ಮಾಣ ಮಾಡುತ್ತಿದ್ದಾರೆ. ‘ಅಯೋಗ್ಯ 2’ ಚಿತ್ರದ ಆಡಿಯೋ ಹಕ್ಕು ಒಳ್ಳೆಯ ಬೆಲೆಗೆ ಮಾರಾಟ ಆಗಿದೆ. ಆನಂದ್ ಆಡಿಯೋ ರೂ 2 ಕೋಟಿ ಕೊಟ್ಟು ಹಕ್ಕುಗಳನ್ನು ಖರೀದಿ ಮಾಡಿದೆಯಂತೆ.

ಸಂಭಾಷಣೆಕಾರ ಮಾಸ್ತಿ ಮಾತನಾಡಿ ‘ಅಯೋಗ್ಯ 2’ ಸಿನಿಮಾದ ಡೈಲಾಗ್ಸ್‌ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಈ ತಂಡದ ಜೊತೆ ಕೆಲಸ ಮಾಡೋದೇ ಖುಷಿ ಎಂದರು. ಸಿನಿಮಾದಲ್ಲಿ ಅಭಿನಯಿಸಿರೋ ಶಿವರಾಜ್‌ ಕೆಆರ್‌ ಪೇಟೆ , ಮಂಜು ಪಾವಗಡ ಹಾಗೂ ಕಿರಣ್‌ ನಾಯ್ಕ್‌ ಅಯೋಗ್ಯ೨ ಸಿನಿಮಾ ಅವಕಾಶ ಸಿಕ್ಕಿದ್ದು ಖುಷಿ ಇದೇ ಹೆಚ್ಚು ಕಲಾವಿದರು ಇರೋದ್ರಿಂದ ಎಂಟರ್ಟೈನೆಮೆಂಟ್‌ ಕೂಡ ಹೆಚ್ಚಾಗಿರುತ್ತೆ ಎಂದರು. ಅರ್ಜುನ್ ಜನ್ಯ ಸಂಗೀತ ನಿರ್ದೇಶನದ ಈ ಚಿತ್ರದಲ್ಲಿ ಸುಂದರ್ ರಾಜ್, ಶಿವರಾಜ್ ಕೆ.ಆರ್.ಪೇಟೆ, ಅರುಣಾ ಬಾಲರಾಜ್, ಮಂಜು ಪಾವಗಡ ತಾರಾಗಣದಲ್ಲಿದ್ದಾರೆ. ಸಿನಿಮಾದ ಪ್ರಚಾರ ಕೆಲಸ ಶುರುವಾಗಿದ್ದು ಆಗಸ್ಟ್‌ 14 ರಂದು ಸಿನಿಮಾ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 9:16 pm, Sat, 20 June 26

Source link

‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ – Kannada News | Arjun Janya talks about singer Pruthvi Bhatt singing

ಸತೀಶ್ ನೀನಾಸಂ, ರಚಿತಾ ರಾಮ್ (Rachita Ram) ನಟನೆಯ ‘ಅಯೋಗ್ಯ’ ಸಿನಿಮಾದ ಎರಡನೇ ಭಾಗ ‘ಅಯೋಗ್ಯ 2’ ಎಂಟು ವರ್ಷಗಳ ಬಳಿಕ ಬರಲು ಸಜ್ಜಾಗಿದೆ. ‘ಅಯೋಗ್ಯ’ ಸಿನಿಮಾ ರೀತಿಯಲ್ಲೇ ಹಾಸ್ಯಮಯ ಪ್ರೇಮಕತೆಯನ್ನು ಸಿನಿಮಾ ಒಳಗೊಂಡಿರಲಿದೆ. ಇಂದು (ಜೂನ್ 20) ‘ಅಯೋಗ್ಯ 2’ ಸಿನಿಮಾದ ಹಾಡು ಬಿಡುಗಡೆ ಆಯ್ತು. ಈ ವಿಶೇಷ ಹಾಡನ್ನು ಖ್ಯಾತ ಗಾಯಕ ಸಿದ್ ಶ್ರೀರಾಮ್ ಮತ್ತು ಯುವ ಗಾಯಕಿ ಪೃಥ್ವಿ ಭಟ್ ಹಾಡಿದ್ದಾರೆ. ಹಾಡು ಬಿಡುಗಡೆ ಮಾಡಿದ ಅರ್ಜುನ್ ಜನ್ಯ ಅವರು ಪೃಥ್ವಿ ಭಟ್ ಗಾಯನವನ್ನು ವಿಶೇಷವಾಗಿ ಕೊಂಡಾಡಿದರು. ಅರ್ಜುನ್ ಜನ್ಯ ಹೇಳಿದ್ದೇನು? ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ನಿಮ್ಮ ಸ್ನೇಹದಿಂದ ನನಗೇನೂ ಲಾಭವಾಗಿಲ್ಲ; ಟ್ರಂಪ್ ಆರೋಪಕ್ಕೆ ಮೆಲೋನಿ ಖಡಕ್ ಉತ್ತರ – Kannada News | Being Your Friend Has Not Helped My Popularity; Meloni Hits Back At Trump after he repeats selfie claim

ನವದೆಹಲಿ, ಜೂನ್ 20: ಜಿ7 ಶೃಂಗಸಭೆಯ ಫೋಟೋ ವಿವಾದಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ನಡುವಿನ ವಾಕ್ಸಮರ ತಾರಕಕ್ಕೇರಿದೆ. ಟ್ರಂಪ್ ಅವರ ಅಹಂಕಾರಿ ಹೇಳಿಕೆಗಳಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮೆಲೋನಿ, “ನಿಮ್ಮ ಸ್ನೇಹಿತೆಯಾಗಿರುವುದರಿಂದ ನನಗಂತೂ ಯಾವುದೇ ಸಹಾಯವಾಗಿಲ್ಲ. ನಿಮ್ಮ ಜೊತೆಗಿನ ಸ್ನೇಹದಿಂದ ನನಗೆ ಜನಪ್ರಿಯತೆಯೂ ಬಂದಿಲ್ಲ. ನನ್ನ ಜನಪ್ರಿಯತೆಯ ಬಗ್ಗೆ ಚಿಂತಿಸುವುದು ನಿಮಗೆ ಬೇಡದ ಕೆಲಸ” ಎಂದು ಟ್ರಂಪ್​ಗೆ ನೇರವಾಗಿಯೇ ಖಡಕ್ ಉತ್ತರ ನೀಡಿದ್ದಾರೆ.

ಇಟಲಿ ದೇಶದಲ್ಲಿ ಮೆಲೋನಿ ಜನಪ್ರಿಯತೆ ಕುಸಿಯುತ್ತಿದೆ. ತಮ್ಮ ರೇಟಿಂಗ್ಸ್ ಹೆಚ್ಚಿಸಿಕೊಳ್ಳಲು ಅವರು ನನ್ನ ಸ್ನೇಹಕ್ಕಾಗಿ ಹಂಬಲಿಸುತ್ತಿದ್ದಾರೆ ಎಂಬ ಟ್ರಂಪ್ ಆರೋಪಕ್ಕೆ ಮೆಲೋನಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ನಿಮ್ಮ ಕೆಲಸ ಏನಿದೆಯೋ ಅದನ್ನು ನೀವು ನೋಡಿಕೊಳ್ಳಿ. ಇಟಲಿಯಲ್ಲಿ ನನ್ನ ಜನಪ್ರಿಯತೆ ಎಷ್ಟಿದೆ ಎಂಬುದು ನಿಮಗೆ ಸಂಬಂಧಿಸಿದ ವಿಷಯವಲ್ಲ. ನನ್ನ ದೇಶದ ಜನರಿಗೆ ನನ್ನ ಮೇಲೆ ವಿಶ್ವಾಸವಿದೆ” ಎಂದು ಮೆಲೋನಿ ಹೇಳಿದ್ದಾರೆ.

“ನಿಮ್ಮೊಂದಿಗೆ ಆಪ್ತವಾಗಿ ಇರುವುದರಿಂದ ಇಟಲಿಗೆ ಅಥವಾ ನನಗೆ ಯಾವುದೇ ವೈಯಕ್ತಿಕ ಲಾಭವಾಗಿಲ್ಲ. ಹಾಗಾಗಿ ನಾನೇಕೆ ನಿಮ್ಮ ಸ್ನೇಹಕ್ಕಾಗಿ ಹಂಬಲಿಸಲಿ?” ಎಂದು ಮೆಲೋನಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನನ್ನೊಂದಿಗೆ ಫ್ರೆಂಡ್ ಆಗಲು ಮೆಲೋನಿ ಹಾತೊರೆಯುತ್ತಿದ್ದಾರೆ! ಮತ್ತೆ ಹಳೇ ರಾಗ ಹಾಡಿದ ಟ್ರಂಪ್

ಇಟಲಿಯ ನೀತಿಗಳ ಕುರಿತಾದ ಟ್ರಂಪ್ ಕಾಮೆಂಟ್‌ಗಳಿಗೆ ತಿರುಗೇಟು ನೀಡಿದ ಮೆಲೋನಿ, ದೇಶಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಯಾವಾಗಲೂ ರಾಷ್ಟ್ರೀಯ ಹಿತಾಸಕ್ತಿಗಳ ಆಧಾರದ ಮೇಲೆಯೇ ತೆಗೆದುಕೊಳ್ಳಲಾಗುತ್ತದೆ ಎಂದು ಒತ್ತಿಹೇಳಿದರು. “ಇಟಲಿ ಎಂದಿಗೂ ಒಂದು ಸಾರ್ವಭೌಮ ರಾಷ್ಟ್ರವಾಗಿದೆ. ಏನೇ ಆದರೂ, ನನ್ನ ಜನಪ್ರಿಯತೆಯ ಬಗ್ಗೆ ಚಿಂತಿಸುವುದು ನಿಮಗೆ ಬೇಡದ ಕೆಲಸ. ಅದರ ಬದಲು ನೀವು ನಿಮ್ಮ ಜನಪ್ರಿಯತೆಯ ಕಡೆಗೆ ಗಮನ ಹರಿಸುವುದು ಒಳಿತು” ಎಂದು ಮೆಲೋನಿ ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ತಮ್ಮ ‘ಟ್ರೂತ್ ಸೋಶಿಯಲ್’ ಖಾತೆಯಲ್ಲಿ, ಫ್ರಾನ್ಸ್ ಜಿ7 ಶೃಂಗಸಭೆಯಲ್ಲಿ ಮೆಲೋನಿ ಅವರು ನನ್ನೊಂದಿಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು “ಮತ್ತೆ ಮತ್ತೆ ಬೇಡಿಕೊಂಡಿದ್ದರು” ಎಂದು ಬರೆದುಕೊಂಡಿದ್ದರು. ಅಷ್ಟೇ ಅಲ್ಲದೆ, ಇರಾನ್ ವಿಚಾರದಲ್ಲಿ ಅಮೆರಿಕಕ್ಕೆ ಇಟಲಿ ಬೆಂಬಲ ನೀಡದ ಕಾರಣ ಮೆಲೋನಿ ಗ್ರಾಫ್ ಇಟಲಿಯಲ್ಲಿ ಕುಸಿಯುತ್ತಿದೆ ಎಂದೂ ಟ್ರಂಪ್ ಲೇವಡಿ ಮಾಡಿದ್ದರು. ಮೆಲೋನಿ ನನ್ನೊಂದಿಗೆ ಮತ್ತೆ ಫ್ರೆಂಡ್​ಶಿಪ್ ಬೆಳೆಸಲು ಹಾತೊರೆಯುತ್ತಿದ್ದಾರೆ, ಅದೇ ಕಾರಣಕ್ಕೆ ನನ್ನೊಂದಿಗೆ ಸೆಲ್ಫಿ ಬೇಕೆಂದು ಹಠ ಹಿಡಿದಿದ್ದರು ಎಂದು ಹೇಳಿಕೆ ನೀಡಿದ್ದರು. ಇದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಜಾಗತಿಕ ಮಟ್ಟದಲ್ಲಿ ಮೆಲೋನಿಗೆ ಹಾಗೂ ಇಟಲಿಗೆ ಮುಜುಗರವನ್ನೂ ಉಂಟುಮಾಡಿತ್ತು.

ಇದನ್ನೂ ಓದಿ: ನನ್ನೊಂದಿಗೆ ಫೋಟೋ ಬೇಕೆಂದು ಮೆಲೋನಿ ಬೇಡಿಕೊಂಡಿದ್ದರು; ಟ್ರಂಪ್ ಹೇಳಿಕೆಗೆ ಸಿಡಿದೆದ್ದ ಇಟಲಿ ಪ್ರಧಾನಿ

ಈ ಇಬ್ಬರ ನಡುವಿನ ಈ ವೈಯಕ್ತಿಕ ವಾಕ್ಸಮರ ಈಗ ಅಮೆರಿಕ ಮತ್ತು ಇಟಲಿ ದೇಶಗಳ ನಡುವಿನ ಅಧಿಕೃತ ಬಾಂಧವ್ಯದ ಮೇಲೂ ಪರಿಣಾಮ ಬೀರಲು ಆರಂಭಿಸಿದೆ. ಈ ವಿವಾದದ ಬೆನ್ನಲ್ಲೇ ಇಟಲಿಯ ವಿದೇಶಾಂಗ ಸಚಿವ ಆಂಟೋನಿಯೊ ತಾಜಾನಿ ಅವರು ತಮ್ಮ ನಿಗದಿತ ಅಮೆರಿಕ ಪ್ರವಾಸವನ್ನು ಅಧಿಕೃತವಾಗಿ ರದ್ದುಗೊಳಿಸುವ ಮೂಲಕ ಅಮೆರಿಕಕ್ಕೆ ಪ್ರಬಲ ರಾಜತಾಂತ್ರಿಕ ಸಂದೇಶ ರವಾನಿಸಿದ್ದಾರೆ. ಟ್ರಂಪ್ ಕೇವಲ ಮೆಲೋನಿ ಮಾತ್ರವಲ್ಲದೆ ಒಟ್ಟಾರೆ ನಾಟೋ ಮಿತ್ರರಾಷ್ಟ್ರಗಳನ್ನೂ ಟೀಕಿಸಿರುವುದರಿಂದ, ಐರೋಪ್ಯ ಒಕ್ಕೂಟದ ದೇಶಗಳು ಟ್ರಂಪ್ ಅವರ ಈ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಮಗಳ ಮನೆ ಹಾಳು ಕೃತ್ಯ: ಮರ್ಯಾದೆಗೆ ಹೆದರಿ ದುರಂತ ಅಂತ್ಯ ಕಂಡ ತಾಯಿ! – Kannada News | Mother Dies Amid Distress Over Daughter’s Insurance Crime Case

ತಾಯಿ ಮಹದೇವಿ ಬದಾಮಿ, ಮಗಳು ಸುಮಾ Image Credit source: tv9 kannada

ಬೆಳಗಾವಿ, ಜೂನ್​ 20: ಎರಡು ಕೋಟಿ ರೂ ವಿಮೆ ಹಣಕ್ಕಾಗಿ ಪ್ರಿಯಕರೊಂದಿಗೆ ಸೇರಿ ಪತ್ನಿ ಸುಮಾ ಗಂಡನ ಕೊಲೆ ಪ್ರಕರಣ ಇಡೀ ಬೆಳಗಾವಿಯನ್ನು (belagavi) ಬೆಚ್ಚಿಬೀಳಿಸಿದೆ. ಕೊಲೆಯಾದ ಮೂರು ತಿಂಗಳ ಬಳಿಕ ಮರ್ಡರ್ ಮಿಸ್ಟ್ರಿ ಹೊರ ಬಂದಿತ್ತು. ಒಬ್ಬರಲ್ಲಾ ಇಬ್ಬರಲ್ಲಾ ಬರೋಬ್ಬರಿ 9 ಜನ ಕೊಲೆ ಕೇಸ್​ನಲ್ಲಿ ಹಿಂಡಲಗಾ ಜೈಲು ಸೇರಿದ್ದಾರೆ. ಆದರೆ ಇತ್ತ ಮಗಳು ಮಾಡಿದ ಕೃತ್ಯಕ್ಕೆ 57 ವರ್ಷದ ತಾಯಿ ಸಾವಿಗೆ (death) ಶರಣಾಗಿದ್ದಾರೆ.

ಮುಖ್ಯಾಂಶಗಳು

  • 2 ಕೋಟಿ ವಿಮೆ ಹಣಕ್ಕಾಗಿ ಪತ್ನಿಯಿಂದ ಮಾಜಿ ಸೈನಿಕರ ಹತ್ಯೆ ಕೇಸ್​​
  • ಮಗಳ ಕೃತ್ಯಕ್ಕೆ ತಾಯಿ ನೇಣಿಗೆ ಶರಣು
  • ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ

ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ನಿವಾಸಿ ಸುಮಾ ತಾಯಿ ಮಹಾದೇವಿ ಬದಾಮಿ ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಸೀರೆಯಿಂದ ಪ್ಯಾನ್​ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಪಕ್ಕದ ಮನೆಯವರು ಬಂದು ನೋಡಿದಾಗ ಸಾವಿನ ವಿಚಾರ ಬೆಳಕಿಗೆ ಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಯಮಕನಮರಡಿ ಠಾಣೆ ಪೊಲೀಸರು ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಮಾಜಿ ಸೈನಿಕನ ಮರ್ಡರ್ ಮಿಸ್ಟ್ರಿ: FSL​​ ವರದಿಯನ್ನೇ ತಿರುಚಿದ್ರು, ಸುಪನಾತಿ ಸುಮಾಳ ಅಸಲಿಯತ್ತು ಬಯಲು

ಇತ್ತ ಶವವನ್ನ ಮರಣೋತ್ತರ ಪರೀಕ್ಷೆಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಮಹಾದೇವಿ ಸಾವಿನ ವಿಚಾರ ತಿಳಿಯುತ್ತಿದ್ದಂತೆ ಸಂಬಂಧಿಕರು, ಗ್ರಾಮಸ್ಥರು ಮನೆಯತ್ತ ದೌಡಾಯಿಸಿ ಅದೊಬ್ಬಳಿಗೆ ಹಿಡಿಶಾಪ ಹಾಕಿ ಹೋಗುತ್ತಿದ್ದರು. ಇಳಿ ವಯಸ್ಸಿನಲ್ಲಿ ನೆಮ್ಮದಿಯಿಂದ ಇರಬೇಕಿದ್ದ ತಾಯಿಯ ನೆಮ್ಮದಿಯನ್ನ ಮಗಳು ಕಸಿದುಕೊಂಡು ಹೋದಳು ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಯಿ ಸಾವಿಗೆ ಮಗಳೇ ಕಾರಣ

ತಾಯಿ ಮಹಾದೇವಿ ಸಾವಿಗೆ ಮಗಳು ಸುಮಾ ಕಾರಣ. ಮಾಡಬಾರದ ಕೆಲಸ ಮಾಡಿದ್ದ ಮಗಳಿಂದ ಊರಲ್ಲಿ ತಲೆ ಎತ್ತಿ ಓಡಾಡಲು ಆಗದೆ, ಈ ರೀತಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಮೂರು ತಿಂಗಳ ಹಿಂದೆ ಎರಡು ಕೋಟಿ ರೂ ವಿಮೆ ಹಣಕ್ಕಾಗಿ ಗಂಡನಿಗೆ ಖಾಸಗಿ ಆಸ್ಪತ್ರೆಯಲ್ಲಿ ಸಲಾಯಿನ್ ಬಾಟಲ್​ನಲ್ಲಿ ವಿಷ ಹಾಕಿ ಪ್ರಿಯಕರ ಪುಂಡಲೀಕ ಜೊತೆಗೆ ಸೇರಿಕೊಂಡು ಕೊಲೆ‌ ಮಾಡಿದ್ದಳು. ಇದಾದ ಬಳಿಕ ಎಫ್‌ಎಸ್‌ಎಲ್ ಅಧಿಕಾರಿಗಳನ್ನ ಹಿಡಿದುಕೊಂಡು ಅವರ ಮೂಲಕ ಹಾರ್ಟ್ ಅಟ್ಯಾಕ್​ನಿಂದ ಸಾವಾಗಿದೆ ಎಂದು ವರದಿಯನ್ನ ತಿರುಚಿಸಿ ಕೊಲೆ ಕೇಸ್ ಮುಚ್ಚಿ ಹಾಕಿಸಿದ್ದಳು.

ಎಲ್ಲವೂ ಮುಗಿದು ಹೋಯ್ತು ಅಂದಾಗ ಹಣಕ್ಕಾಗಿ ಪ್ರಿಯಕರ ಪುಂಡಲೀಕ ಮತ್ತು ಸುಮಾ ನಡುವೆ ಗಲಾಟೆಯಾಗಿ ಕೊಲೆ ವಿಚಾರ ಹೊರಗೆ ಬಂದಿತ್ತು. ಬಳಿಕ ಯಮಕನಮರಡಿ ಪೊಲೀಸರು ಕೇಸ್ ದಾಖಲಿಸಿಕೊಂಡು ಒಂಬತ್ತು ಜನ ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಿದ್ದರು.

ಇದನ್ನೂ ಓದಿ: ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​: 2 ಕೋಟಿ ಹಣಕ್ಕಾಗಿ ಚಟ್ಟ, FSL ವರದಿಯನ್ನೇ ಬದಲಿಸಿದ್ದ ಖತರ್ನಾಕ್ ಗ್ಯಾಂಗ್

ಈ ಮರ್ಡರ್ ಮಿಸ್ಟ್ರಿ ಬೆಳಗಾವಿ ಜಿಲ್ಲೆಯ ಜನ ಬೆಚ್ಚಿ ಬೀಳುವಂತೆ ಮಾಡಿತ್ತು. ಇತ್ತ ಮಗಳು ಮಾಡಿದ ಕೃತ್ಯಕ್ಕೆ ತಲೆ ಎತ್ತಿ ಓಡಾಡಲು ಆಗದ ತಾಯಿ ಕೂಡ ಇದೀಗ ಸಾವಿನ ಮನೆ ಸೇರಿದ್ದಾರೆ. ಘಟನೆಯಲ್ಲಿ ಇನ್ನು ಹಲವಾರು ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಇತ್ತ ಹಣಕ್ಕಾಗಿ ಪತ್ನಿ ಗಂಡನ ಬಲಿ ಪಡೆದರೆ, ಅತ್ತ ಮಾನಕ್ಕೆ ಹೆದರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದು ದುರಂತವೇ ಸರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಭಾರತ- ಲಂಕಾ ನಡುವೆ ತ್ರಿಕೋನ ಸರಣಿ ಫೈನಲ್; ಕೆಣಕ್ಕಿದವರ ವಿರುದ್ದ ಅಬ್ಬರಿಸ್ತಾರಾ ವೈಭವ್? – Kannada News | India A vs SL A Tri Series Final: Date, Time, Live Stream and Tilak Varma’s Challenge

ತಿಲಕ್ ವರ್ಮಾ ನಾಯಕತ್ವದ ಭಾರತ ಎ ತಂಡವು ಭಾನುವಾರ ನಡೆಯಲಿರುವ ಏಕದಿನ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎ (India A vs Sri Lanka A) ತಂಡವನ್ನು ಎದುರಿಸುತ್ತಿದೆ. ಈ ಸರಣಿಯಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಮೂರನೇ ಬಾರಿ. ಮೊದಲ ಮುಖಾಮುಖಿಯಲ್ಲಿ ಭಾರತ ಗೆದ್ದಿದ್ದರೆ, ಎರಡನೇ ಮುಖಾಮುಖಿಯಲ್ಲಿ ಶ್ರೀಲಂಕಾ ತಂಡ ಗೆಲುವು ಸಾಧಿಸಿತ್ತು. ಇದೀಗ ಮೂರನೇ ಮುಖಾಮುಖಿಯಲ್ಲಿ ಗೆದ್ದ ತಂಡಕ್ಕೆ ಟ್ರೋಫಿ ಕೂಡ ಸಿಗಲಿದೆ. ಇದರ ಜೊತೆಗೆ ಕಳೆದ ಮುಖಾಮುಖಿಯಲ್ಲಿ ವೈಭವ್ ಸೂರ್ಯವಂಶಿ (Vaibhav Sooryavanshi) ಹಾಗೂ ಶ್ರೀಲಂಕಾದ ಆಟಗಾರರ ನಡುವೆ ಏರ್ಪಟ್ಟಿದ್ದ ವಾಗ್ವಾದದಿಂದಾಗಿ ದೊಡ್ಡ ವಿವಾದ ಹುಟ್ಟಕೊಂಡಿತ್ತು. ಹೀಗಾಗಿ ತನ್ನನ್ನು ಕೆಣಕ್ಕಿದ್ದ ಲಂಕಾ ಆಟಗಾರರು ವಿರುದ್ಧ ವೈಭವ್ ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ಭಾರತ ಎ ಹಾಗೂ ಶ್ರೀಲಂಕಾ ಎ ನಡುವಿನ ತ್ರಿಕೋನ ಸರಣಿಯ ಫೈನಲ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಎ ಹಾಗೂ ಶ್ರೀಲಂಕಾ ಎ ನಡುವಿನ ತ್ರಿಕೋನ ಸರಣಿಯ ಫೈನಲ್ ಪಂದ್ಯ ಜೂನ್ 21 ರ ಭಾನುವಾರದಂದು ನಡೆಯಲಿದೆ.

ಭಾರತ ಎ ಹಾಗೂ ಶ್ರೀಲಂಕಾ ಎ ನಡುವಿನ ತ್ರಿಕೋನ ಸರಣಿಯ ಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಎ ಹಾಗೂ ಶ್ರೀಲಂಕಾ ಎ ನಡುವಿನ ತ್ರಿಕೋನ ಸರಣಿಯ ಫೈನಲ್ ಪಂದ್ಯ ದಂಬುಲ್ಲಾದಲ್ಲಿ ನಡೆಯಲಿದೆ.

ಭಾರತ ಎ ಹಾಗೂ ಶ್ರೀಲಂಕಾ ಎ ನಡುವಿನ ತ್ರಿಕೋನ ಸರಣಿಯ ಫೈನಲ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಎ ಹಾಗೂ ಶ್ರೀಲಂಕಾ ಎ ನಡುವಿನ ತ್ರಿಕೋನ ಸರಣಿಯ ಫೈನಲ್ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿದೆ.

ಭಾರತ ಎ ಹಾಗೂ ಶ್ರೀಲಂಕಾ ಎ ನಡುವಿನ ತ್ರಿಕೋನ ಸರಣಿಯ ಫೈನಲ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಎ ಹಾಗೂ ಶ್ರೀಲಂಕಾ ಎ ನಡುವಿನ ತ್ರಿಕೋನ ಸರಣಿಯ ಫೈನಲ್ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ನ ವಿವಿದ ಚಾನೆಲ್​ಗಳಲ್ಲಿ ವೀಕ್ಷಿಸಬಹುದು.

ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ ಎಂದ ಟೀಂ ಇಂಡಿಯಾದ ಮಾಜಿ ನಾಯಕ

ಉಭಯ ತಂಡಗಳು

ಭಾರತ ಎ ತಂಡ: ಪ್ರಿಯಾಂಶ್ ಆರ್ಯ, ವೈಭವ್ ಸೂರ್ಯವಂಶಿ, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ(ಸಿ), ಕುಮಾರ್ ಕುಶಾಗ್ರಾ(ಡಬ್ಲ್ಯೂ), ಸೂರ್ಯಾಂಶ್ ಶೆಡ್ಗೆ, ನಿಶಾಂತ್ ಸಿಂಧು, ವಿಪ್ರಜ್ ನಿಗಮ್, ಅನುಕುಲ್ ರಾಯ್, ಅನ್ಶುಲ್ ಕಾಂಬೋಜ್, ಯಶ್ ಠಾಕೂರ್, ಆಯುಷ್ ಬದೋನಿ, ಪ್ರಭ್‌ಸಿಮ್ರನ್ ಸಿಂಗ್, ಯುದ್ಧವೀರ್ ಸಿಂಗ್ ಚರಕ್, ಅರ್ಷದ್ ಖಾನ್, ಅಶೋಕ್ ಶರ್ಮಾ.

ಶ್ರೀಲಂಕಾ ಎ ತಂಡ: ನಿರೋಶನ್ ಡಿಕ್ವೆಲ್ಲಾ(ಡಬ್ಲ್ಯೂ), ಅವಿಷ್ಕಾ ಫೆರ್ನಾಂಡೊ, ನುವಾನಿಡು ಫೆರ್ನಾಂಡೊ, ಸದೀರ ಸಮರವಿಕ್ರಮ, ಸಹನ್ ಅರಾಚ್ಚಿಗೆ(ಸಿ), ಅಹಾನ್ ವಿಕ್ರಮಸಿಂಘೆ, ರವಿಂದು ಫೆರ್ನಾಂಡೊ, ವನುಜಾ ಸಹನ್, ವಿಜಯಕಾಂತ್ ವಿಯಸ್ಕಂತ್, ದುಲಾಜ್ ಸಮುದಿತ, ಕುಗತಸ್ ಮಾಥುಲನ್, ವಿಶೇನ್ ಹಲಂಬಗೆ, ಗರುಕ ಸಂಕೇತ್, ಚಾಮಿಕ ಗುಣಶೇಖರ, ಮೊಹಮ್ಮದ್ ಶಿರಾಜ್, ಚಾಮಿಕ ಕರುಣಾರತ್ನ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version