Basava Jayanti 2026: ದಯವೇ ಧರ್ಮದ ಮೂಲವಯ್ಯ; ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿದ ವಿಶ್ವಗುರು ಬಸವಣ್ಣ – Kannada News | Basava Jayanti 2026: What is the significance behind celebration of Basava Jayanti?

ಕಾಯಕವೇ ಕೈಲಾಸ, ದಯೆಯೇ ಧರ್ಮದ ಮೂಲ ಎಂದು ಮನುಕುಲಕ್ಕೆ ಮಹಾ ಸಂದೇಶವನ್ನು ಸಾರಿದ ಬಸವಣ್ಣನವರ (Basavanna) ಜನ್ಮ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ. ತಮ್ಮ ವಚನಗಳ ಮೂಲಕವೇ 12 ಶತಮಾನದಲ್ಲಿ ಸಮಾಜದಲ್ಲಿ ಆಚರಣೆಯಲ್ಲಿದ್ದ ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಇತ್ಯಾದಿ ಅನಿಷ್ಠ ಪದ್ಧತಿಗಳನ್ನು ನಿರ್ಮೂಲನೆ ಮಾಡಿ, ಜ್ಞಾನದ ಬೆಳಕು ಚೆಲ್ಲಿ ಕ್ರಾಂತಿಯ ಬೀಜ ಬಿತ್ತಿದವರು ವಿಶ್ವ ಗುರು ಬಸವಣ್ಣ. ಪ್ರಸಿದ್ಧ ಸಂತರಾಗಿದ್ದ ಇವರು ರಾಜನೀತಿಜ್ಞರಾಗಿ, ಸಮಾಜ ಸುಧಾರಕರಾಗಿ ತಮ್ಮ ಕಾವ್ಯ ಮತ್ತು ಬರವಣಿಗೆಯ ಮತ್ತು ವಿಚಾರಧಾರೆಗಳ ಮೂಲಕ ಸಮಾಜದಲ್ಲಿನ ಅಜ್ಞಾನ, ಅಂಧಕಾರ, ಮೂಢನಂಬಿಕೆಗಳನ್ನು ಹೊಡೆದೋಡಿಸಿ, ಸಮಾಜದ ಅಂಕುಡೊಂಕುಗಳನ್ನು ತಿದ್ದಿ ತೀಡಿ ಮನುಕುಲಕ್ಕೆ ದಾರಿದೀಪವನ್ನು ತೋರಿದರು. ಮನುಕುಲಕ್ಕೆ ಸಮಾನತೆಯ ಪಾಠ ಕಲಿಸಿಕೊಟ್ಟ  ಬಸವಣ್ಣನವರ ತತ್ವ, ಆದರ್ಶಗಳು, ಚಿಂತನೆಗಳು ಇಂದಿಗೂ ನಮಗೆಲ್ಲರಿಗೂ ಪಾಠ, ಬದುಕಿಗೆ ದಾರಿ.  ಅಲ್ಲದೆ ಇಂತಹ ಶ್ರೇಷ್ಠರ ತತ್ವ ಸಿದ್ಧಾಂತಗಳನ್ನು  ಅರ್ಥೈಸಿ ಜೀವನದಲ್ಲಿ ಅಳವಡಿಸಿಕೊಂಡರೆ ಸುಂದರ ಬದುಕು ನಮ್ಮದಾಕುತ್ತದೆ.

ಬಸವ ಜಯಂತಿ ಯಾವಾಗ?

ಮೂಢ ನಂಬಿಕೆ, ಮಡಿ ಮೈಲಿಗೆ, ಮೇಲು ಕೀಲು, ಲಿಂಗ ಅಸಮಾನತೆ ಜಾತಿ ವ್ಯವಸ್ಥೆ ಸೇರಿದಂತೆ ಸಮಾಜದಲ್ಲಿದ್ದ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಿ ಹಲವಾರು ಸಾಮಾಜಿಕ ಸುಧಾರಣೆಗಳನ್ನು ತಂದವರು ಬಸವಣ್ಣನವರು. ಸಮಾಜ ಸುಧಾರಣೆಯಲ್ಲಿ ಬಹುಮುಖ್ಯ ಪಾತ್ರ ವಹಿಸಿದ ಇವರ ಜನ್ಮ ಜಯಂತಿಯನ್ನು ಅಂದರೆ ಬಸವ ಜಯಂತಿಯನ್ನು ಪ್ರತಿವರ್ಷ ವೈಶಾಖ ಮಾಸದ ಶುಕ್ಷ ಪಕ್ಷದ ಮೂರನೇ ದಿನದಂದು ಆಚರಿಸಲಾಗುತ್ತದೆ.

ಸಾರ್ವಜನಿಕ ಬಸವ ಜಯಂತಿ ಆಚರಣೆ ಶುರುವಾದದ್ದು ಯಾವಾಗ?

ಕರ್ನಾಟಕದ ಗಾಂಧಿಯಂದು ಪ್ರಸಿದ್ಧರಾದ ಹರ್ಡೇಕರ ಮಂಜಪ್ಪನವರು 1913ರಲ್ಲಿ ಸಾರ್ವಜನಿಕವಾಗಿ ಬಸವ ಜಯಂತಿಯನ್ನು ಆಚರಿಸಲು ಮುಂದಾದರು. ವೀರಶೈವ, ಲಿಂಗಾಯತ ಸಮಾಜದ ಸಂಘಟನೆಗಾಗಿ ಬಸವ ಜಯಂತಿ ಆಚರಿಸಲು ಹೊರಟ ಅವರಿಗೆ ಬಸವಣ್ಣ ಜನಿಸಿದ ದಿನಾಂಕದ ಬಗ್ಗೆ ಗೊಂದಲ ಏರ್ಪಟ್ಟಿತ್ತು. ಆ ಸಮಯದಲ್ಲಿ ಮುರುಘಾಮಠದ ಪೂಜ್ಯ ಶ್ರೀ ಮೃತ್ಯುಂಜಯ ಸ್ವಾಮಿಗಳು ಅಕ್ಷಯ ತದಿಗೆಯಂದು ಬಸವ ಜಯಂತಿ ಆಚರಿಸಲು ಸೂಚಿಸಿದರು. ಅಂದಿನಿಂದ ಪ್ರತಿ ವರ್ಷ ಅಕ್ಷಯ ತೃತೀಯದಂದು ಬಸವ ಜಯಂತಿ ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ: ಭಾರತದಲ್ಲಿರುವ ವಿಶ್ವ ಪಾರಂಪರಿಕ ತಾಣಗಳ ಬಗ್ಗೆ ನಿಮಗೆಷ್ಟು ಗೊತ್ತು?

ಜಸವ ಜಯಂತಿಯ ಮಹತ್ವವೇನು?

  • ಮಹಾನ್‌ ಕವಿ, ಸಮಾಜ ಸುಧಾರಕ ಮತ್ತು ದಾರ್ಶನಿಕರಾಗಿ ಹೆಸರನ್ನು ಗಳಿಸಿದ ಬಸವಣ್ಣನವರು ತಮ್ಮ ವಚನಗಳ ಮೂಲಕವೇ ಸಮಾಜದಲ್ಲಿ ತಲೆ ಎತ್ತಿ ನಿಂತಿದ್ದ ಪಿಡುಗುಗಳನ್ನು ತೊಡೆದು ಹಾಕಲು ಸಾಮಾಜಿಕ ಜಾಗೃತಿಯನ್ನು ಪಸರಿಸಲು ಆರಂಭಿಸಿದರು.
  • ಜಾತಿ, ಬಣ್ಣ, ಅಂತಸ್ತಿನಲ್ಲಿ ವ್ಯತ್ಯಾಸವಿದ್ದರೂ ಸಮಾಜದಲ್ಲಿ ಎಲ್ಲರೂ ಸಮಾನರು ಎಂದು ಸಾರಿದ ಬಸವಣ್ಣನವರು ಸಮಾಜ ಸುಧಾರಣೆಗೆ ಮಹತ್ವದ ಕೊಡುಗೆಯನ್ನು ನೀಡಿದ್ದಾರೆ.
  • ಸಮಾಜಕ್ಕೆ ಇಷ್ಟೆಲ್ಲಾ ಕೊಡುಗೆ ನೀಡಿದ ವಿಶ್ವ ಗುರು ಬಸವಣ್ಣನವರಿಗೆ ಗೌರವ ಸಲ್ಲಿಸಲು, ಅವರ ತತ್ವ, ಆದರ್ಶಗಳನ್ನು ಸ್ಮರಿಸಲು ಬಸವ ಜಯಂತಿಯನ್ನು ಆಚರಿಸಲಾಗುತ್ತದೆ.
  • ಈ ದಿನದಂದು ಬಸವಣ್ಣನವರ ವಚನಗಳ ಪಠಣ, ಪ್ರದರ್ಶನಗಳು ಮತ್ತು ವಿಶೇಷ ಪೂಜೆಗಳು ನಡೆಯುತ್ತವೆ. ಹಲವಾರು ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಮಹಿಳೆಯ ಹಿಂಬಾಲಿಸಿಕೊಂಡು ಬಂದು ಆಕೆಯ ಮನೆಯೊಳಗೆ ನುಗ್ಗಲು ವ್ಯಕ್ತಿ ಯತ್ನ, ಆಮೇಲೇನಾಯ್ತು ನೋಡಿ – Kannada News | Doorstep Surprise: Husband’s Presence Halts Alleged Stalker

ನಗರದ ಬೀದಿ ದೀಪಗಳು ಮಂದವಾಗಿದ್ದವು. ಸಂಜೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಗೆ ತನ್ನ ಹಿಂದೆ ಯಾರೋ ಬರುತ್ತಿದ್ದಾರೆ ಎಂಬ ಸಂಶಯ ಕಾಡಿತ್ತು. ಅವಳು ಹೆಜ್ಜೆ ಜೋರು ಮಾಡಿದಷ್ಟೂ, ಆ ಅಪರಿಚಿತ ವ್ಯಕ್ತಿಯ ಚಪ್ಪಲಿಯ ಸದ್ದು ಹತ್ತಿರವಾಗುತ್ತಿತ್ತು. ಅಪಾರ್ಟ್​ಮೆಂಟ್ ತಲುಪಿದರೆ ಸಾಕೆಂದು ಓಡಿ ಬಂದರೆ ಆತ ಅಲ್ಲಿಗೂ ಬಂದಿದ್ದ. ಆಕೆ ಮನೆಯ ಬಾಗಿಲು ಇನ್ನೇನು ತೆಗೀಬೇಕು ಅನ್ನುವಷ್ಟರಲ್ಲಿ ಆತ ಕೂಡ ಆಕೆಯ ಹಿಂದೆಯೇ ನಿಂತಿದ್ದ. ಆಕೆ ಬಾಗಿಲು ತೆರೆದು ಒಳಗೆ ಹೋಗಿದ್ದಾಳೆ. ಆತನೂ ಆಕೆಯ ಹಿಂದೆ ಹೋಗಬೇಕು ಅನ್ನುವಷ್ಟರಲ್ಲಿ ಆತನಿಗೆ ಅಚ್ಚರಿ ಕಾದಿತ್ತು, ಆಕೆಯ ಗಂಡ ಮನೆಯೊಳಗೆ ಇದ್ದ ಆತ ಮನೆಯೊಳಗಿಂದ ಹೊರಗೆ ಬರುವುದು ನೋಡಿ ಅಪರಿಚಿತ ವ್ಯಕ್ತಿ ಕೂಡಲೇ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ರವೀಂದ್ರ ಜಡೇಜಾನ ಕಡೆಗಣಿಸಿ ಪಂದ್ಯ ಸೋತ ರಾಜಸ್ಥಾನ್ ರಾಯಲ್ಸ್ – Kannada News | The Jadeja Snub: Riyan Parag’s Strategy Hurting RR

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧ ರಾಜಸ್ಥಾನ್ ರಾಯಲ್ಸ್ (RR) ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು 155 ರನ್​ಗಳು ಮಾತ್ರ. ಈ ಗುರಿಯನ್ನು ಬೆನ್ನತ್ತಿದ ಕೆಕೆಆರ್ ತಂಡವು ಕೊನೆಯ ಓವರ್​ನಲ್ಲಿ ಗೆಲುವು ದಾಖಲಿಸಿತ್ತು.  ಅಂದರೆ ಈ ಪಂದ್ಯದಲ್ಲಿ ಗೆಲ್ಲುವ ಅವಕಾಶ ರಾಜಸ್ಥಾನ್ ರಾಯಲ್ಸ್ ತಂಡದ ಮುಂದಿತ್ತು. ಇದಾಗ್ಯೂ ನಾಯಕ ರಿಯಾನ್ ಪರಾಗ್ ತೆಗೆದುಕೊಂಡು ಒಂದು ನಿರ್ಧಾರದಿಂದ ಆರ್​ಆರ್ ಪಡೆ ಸೋಲನುಭವಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸೋಲಿಗೆ ಕಾರಣವೇನು?

ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅತ್ಯುತ್ತಮ ದಾಳಿ ಸಂಘಟಿಸಿದ್ದು ರವೀಂದ್ರ ಜಡೇಜಾ. ಮೂರು ಓವರ್​ಗಳನ್ನು ಎಸೆದಿದ್ದ ಜಡೇಜಾ ಕೇವಲ 8 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ಇದಾಗ್ಯೂ ರಿಯಾನ್ ಪರಾಗ್ ಅವರು ರವೀಂದ್ರ ಜಡೇಜಾ ಅವರಿಗೆ ಪೂರ್ಣ ನಾಲ್ಕು ಓವರ್‌ಗಳನ್ನು ಬೌಲ್ ಮಾಡಲು ಅವಕಾಶ ನೀಡಲಿಲ್ಲ ಎಂಬುದೇ ಅಚ್ಚರಿ.

ಅದರಲ್ಲೂ ನಿರ್ಣಾಯಕ ಹಂತದಲ್ಲಿ ಜಡೇಜಾ ಅವರ ಅನುಭವವನ್ನು ಬಳಸಿಕೊಳ್ಳಲು ರಿಯಾನ್ ಪರಾಗ್ ಮುಂದಾಗಲಿಲ್ಲ. ಬದಲಾಗಿ ಡೆತ್ ಓವರ್‌ಗಳಲ್ಲಿ ಅನ್-ಕ್ಯಾಪ್ಡ್ ಬೌಲರ್ ಬ್ರಿಜೇಶ್ ಶರ್ಮಾ ಅವರಿಗೆ ಚೆಂಡನ್ನು ನೀಡಿದರು. ಹೀಗೆ ಎಸೆದ 10 ಎಸೆತಗಳಲ್ಲಿ ಬ್ರಿಜೇಶ್ ನೀಡಿದ್ದು ಬರೋಬ್ಬರಿ 21 ರನ್​ಗಳು.

ನಿರ್ಣಾಯಕ ಹಂತದಲ್ಲಿ ಬ್ರಿಜೇಶ್ ಶರ್ಮಾ ನೀಡಿದ 21 ರನ್​ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡ ಸೋಲನುಭವಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಏಕೆಂದರೆ ರವೀಂದ್ರ ಜಡೇಜಾಗೆ ಒಂದು ಓವರ್ ಇದ್ದರೂ ಅದನ್ನು ಮಧ್ಯ ಭಾಗದಲ್ಲಿ ಹಾಕಿಸಿ, ಕೊನೆಯ ಹಂತದಲ್ಲಿ ಜೋಫ್ರಾ ಆರ್ಚರ್ ಅವರನ್ನು ಬಳಸಿಕೊಳ್ಳಲು ಆರ್​ಆರ್ ತಂಡಕ್ಕೆ ಉತ್ತಮ ಅವಕಾಶವಿತ್ತು. ಆದರೆ ರಿಯಾನ್ ಪರಾಗ್ ತೆಗೆದುಕೊಂಡ ಒಂದು ನಿರ್ಧಾರವು ಆರ್​ಆರ್ ಪಾಲಿಗೆ ಮುಳುವಾಯಿತು.

ರಿಯಾನ್ ಪರಾಗ್  ಸಮರ್ಥನೆ:

ಪಂದ್ಯದ ನಂತರ ಮಾತನಾಡಿದ ರಿಯಾನ್ ಪರಾಗ್, “ಆ ಸಮಯದಲ್ಲಿ ಕೆಕೆಆರ್ ಪರವಾಗಿ ರಿಂಕು ಸಿಂಗ್ ಮತ್ತು ಅನುಕುಲ್ ರಾಯ್ ಅವರಂತಹ ಎಡಗೈ ಬ್ಯಾಟರ್‌ಗಳು ಕ್ರೀಸ್‌ನಲ್ಲಿದ್ದರು. ಎಡಗೈ ಸ್ಪಿನ್ನರ್ ಆದ ಜಡೇಜಾ ಅವರಿಗೆ ಬೌಲಿಂಗ್ ನೀಡಿದರೆ ರನ್ ಬಿಟ್ಟುಕೊಡುವ ಸಾಧ್ಯತೆ ಇತ್ತು ಎಂಬ ಕಾರಣಕ್ಕೆ ನಾನು ಈ ನಿರ್ಧಾರ ತೆಗೆದುಕೊಂಡೆ,” ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ವಿಶೇಷ ಎಂದರೆ ರವೀಂದ್ರ ಜಡೇಜಾಗೆ ರಿಯಾನ್ ಪರಾಗ್ ಓವರ್ ನೀಡದಿರುವುದು ಇದೇ ಮೊದಲೇನಲ್ಲ. ಏಪ್ರಿಲ್ 13 ರಂದು ನಡೆದ ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಪಂದ್ಯದಲ್ಲೂ ಜಡೇಜಾ ಅವರಿಗೆ ಒಂದೇ ಒಂದು ಓವರ್ ನೀಡಿರಲಿಲ್ಲ. ಇದೀಗ ಅನುಭವಿ ಆಟಗಾರರನ್ನು ತಂಡದಲ್ಲಿಟ್ಟುಕೊಂಡು ಅವರನ್ನು ಸರಿಯಾಗಿ ಬಳಸಿಕೊಳ್ಳದಿರುವುದು ಚರ್ಚೆಗೀಡಾಗಿದೆ.

ಅಶ್ವಿನ್ ಅಸಮಾಧಾನ:

ಮಾಜಿ ಕ್ರಿಕೆಟಿಗ ಆರ್. ಅಶ್ವಿನ್ ಸೇರಿದಂತೆ ಹಲವು ವಿಶ್ಲೇಷಕರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪರಿಸ್ಥಿತಿ ಏನೇ ಇರಲಿ, ಜಡೇಜಾರಂತಹ ವಿಶ್ವದರ್ಜೆಯ ಬೌಲರ್‌ನ ಅನುಭವದ ಮೇಲೆ ನಂಬಿಕೆ ಇಡಬೇಕಿತ್ತು. ಕೇವಲ ‘ಮ್ಯಾಚ್-ಅಪ್’ (ಎಡಗೈ ಬ್ಯಾಟರ್‌ಗೆ ಎಡಗೈ ಬೌಲರ್) ಲೆಕ್ಕಾಚಾರದಿಂದ ಪಂದ್ಯ ಗೆಲ್ಲಲು ಸಾಧ್ಯವಿಲ್ಲ” ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: IPL 2026: ನಿನ್ನ ಮುಖ ತೋರಿಸಬೇಡ… ಕಾರಣವೇನು?

ಮೇಲ್ನೋಟಕ್ಕೆ ಯುವ ನಾಯಕ ರಿಯಾನ್ ಪರಾಗ್ ಅವರು ಸಂಪ್ರದಾಯಕ್ಕಿಂತ ಭಿನ್ನವಾಗಿ ಯೋಚಿಸುತ್ತಿರುವುದು ಕಂಡು ಬಂದರೂ, ರವೀಂದ್ರ ಜಡೇಜಾ ಅವರಂತಹ ಆಟಗಾರನನ್ನು ಕಡೆಗಣಿಸುವುದು ತಂಡದ ಫಲಿತಾಂಶದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂಬುದಕ್ಕೆ ಆರ್​ಆರ್​ ತಂಡ ಕೊನೆಯ ಎರಡು ಸೋಲುಗಳೇ ಸಾಕ್ಷಿ.

Source link

ಐಷಾರಾಮಿ ‘ಪೋರ್ಷೆ’ ಕಾರಿನ ಬಾನೆಟ್ ಮೇಲೆ ಸಿಮೆಂಟ್ ಮಿಶ್ರಣ! ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಿದ ಉದ್ಯಮಿಯ ವೀಡಿಯೋ ವೈರಲ್ – Kannada News | Viral: Akhil Hemadri Uses Porsche to Fill Bengaluru Potholes, Sparks Citizen Initiative Debate

ಬೆಂಗಳೂರು, ಏ.20: ಬೆಂಗಳೂರಿನ ಗುಂಡಿಗಳ ಬಗ್ಗೆ ದಿನಕ್ಕೊಂದು ಪೋಸ್​​​​ಟ್​​ಗಳು ವೈರಲ್​ ಆಗುತ್ತ ಇರುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತದೆ. ಇದೀಗ ಉದ್ಯಮಿಯೊಬ್ಬರು ತುಂಬಾ ವಿಭಿನ್ನವಾಗಿ ಬೆಂಗಳೂರಿನ ಗುಂಡಿಗಳ ಬಗ್ಗೆ ಅಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರು ಮೂಲದ ಉದ್ಯಮಿ ಅಖಿಲ್ ಹೇಮಾದ್ರಿ ಎಂಬುವವರು ತಮ್ಮ ಕೋಟಿ ಬೆಲೆಯ ಐಷಾರಾಮಿ ಪೋರ್ಷೆ (Porsche) ಕಾರನ್ನೇ ರಸ್ತೆ ದುರಸ್ತಿ ಕಾರ್ಯಕ್ಕೆ ಬಳಸಿ ಸುದ್ದಿಯಾಗಿದ್ದಾರೆ. ಇದನ್ನು ನೋಡಿ ನೆಟ್ಟಿಗರು ಕೂಡ ಅಚ್ಚರಿಗೊಂಡಿದ್ದಾರೆ.

ಇನ್ನು ಈ ಬಗ್ಗೆ ವಿಡಿಯೋವನ್ನು ಇನ್ಸ್ಟಾಗ್ರಾಮ್​​​ನಲ್ಲಿ ಅವರು ಹಂಚಿಕೊಂಡಿದ್ದಾರೆ. ಅವರು ಹಂಚಿಕೊಂಡ ವಿಡಿಯೋದಲ್ಲಿ ಅಖಿಲ್ ಅವರು ತಮ್ಮ ಐಷಾರಾಮಿ ಪೋರ್ಷೆ ಕಾರಿನಲ್ಲಿ ರಸ್ತೆ ಗುಂಡಿ ಇರುವ ಜಾಗಕ್ಕೆ ಬರುವುದನ್ನು ಇದರಲ್ಲಿ ಕಾಣಬಹುದು. ನಂತರ ಕಾರಿನಿಂದ ಸಿಮೆಂಟ್ ಮತ್ತು ನಿರ್ಮಾಣ ಸಾಮಗ್ರಿಗಳನ್ನು ಹೊರತೆಗೆಯುತ್ತಾರೆ. ಇಲ್ಲಿ ಎಲ್ಲರನ್ನೂ ಅಚ್ಚರಿಗೊಳಿಸಿ ವಿಚಾರವೆಂದರೆ, ಅವರು ಆ ಬೆಲೆಬಾಳುವ ಕಾರಿನ ಬಾನೆಟ್ (Bonnet) ಅನ್ನೇ ಸಿಮೆಂಟ್ ಮಿಶ್ರಣ ಮಾಡುವ ವಸ್ತುವಾಗಿ ಉಪಯೋಗಿಸಿಕೊಂಡಿದ್ದಾರೆ.

ಇಲ್ಲಿದೆ ನೋಡಿ ವಿಡಿಯೋ:

ಬಾನೆಟ್ ಮೇಲೆ ಸಿಮೆಂಟ್ ಮತ್ತು ನೀರನ್ನು ಬೆರೆಸಿ, ಹಾರೆ ಹಿಡಿದು ತಾವೇ ರಸ್ತೆಯ ಗುಂಡಿಯನ್ನು ಮುಚ್ಚಿದ್ದಾರೆ. ಈ ವೀಡಿಯೋದೊಂದಿಗೆ ಅಖಿಲ್ ಅವರು ಒಂದು ಮಹತ್ವದ ಸಂದೇಶವನ್ನೂ ಹಂಚಿಕೊಂಡಿದ್ದಾರೆ. “ಭಾರತದಂತಹ ಅತಿ ಹೆಚ್ಚು ಜನಸಂಖ್ಯೆ ಇರುವ ದೇಶದಲ್ಲಿ ಕೇವಲ ಸರ್ಕಾರದ ಮೇಲೆ ಅವಲಂಬಿತರಾಗುವುದು ಸರಿಯಲ್ಲ. ಸಾರ್ವಜನಿಕ ಆಸ್ತಿಪಾಸ್ತಿಗಳ ನಿರ್ವಹಣೆಯಲ್ಲಿ ನಾಗರಿಕರೂ ಪಾಲ್ಗೊಳ್ಳಬೇಕು” ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ಇಂದು ಹೀಟ್ ವೇವ್ ಜೊತೆಗೆ ಕರಾವಳಿಯಲ್ಲಿ ವರುಣಾರ್ಭಟ!

ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಯನ್ನು ಹುಟ್ಟುಹಾಕಿದೆ. “ಇದು ಕೇವಲ ರಸ್ತೆ ಗುಂಡಿ ಮುಚ್ಚುವ ಕೆಲಸವಲ್ಲ, ಬದಲಿಗೆ ಸರ್ಕಾರದ ವಿಳಂಬ ನೀತಿಯ ವಿರುದ್ಧದ ಸೃಜನಾತ್ಮಕ ಪ್ರತಿಭಟನೆ” ಎಂದು ಕೆಲವರು ಶ್ಲಾಘಿಸಿದ್ದಾರೆ. “ಪೋರ್ಷೆ ಕಾರಿನ ಬಾನೆಟ್ ಮೇಲೆ ಸಿಮೆಂಟ್ ಕಲೆಸುವುದು ಕೇವಲ ಪ್ರಚಾರಕ್ಕಾಗಿ (Stunt) ಮಾಡಿದ ಕೆಲಸ” ಎಂದು ಹಲವರು ಟೀಕಿಸಿದ್ದಾರೆ.

ಬೆಂಗಳೂರಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಕ್ಕನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ಎನ್​ಕೌಂಟರ್​ನಲ್ಲಿ ಸಾವು – Kannada News | Ghaziabad Encounter: Man Accused in Child’s Murder Case Shot Dead

ಗಾಜಿಯಾಬಾದ್, ಏಪ್ರಿಲ್ 20: ಅಕ್ಕನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಎನ್​ಕೌಂಟರ್​ನಲ್ಲಿ ಹತ್ಯೆ(Murder) ಮಾಡಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಜಸೀಮ್ ಅಲಿಯಾಸ್ ಛೋಟು ಎಂಬ ಆರೋಪಿಗಾಗಿ ವಾರಗಟ್ಟಲೆ ಹುಡುಕಾಟ ನಡೆಸಿದ ನಂತರ ನಗರದ ಬಂತ್ಲಾ ಕಾಲುವೆ ಕಟ್ ಬಳಿ ಈ ಎನ್‌ಕೌಂಟರ್ ನಡೆದಿದೆ. ಮೃತ ಬಾಲಕಿಗೆ ಕೇವಲ ನಾಲ್ಕು ವರ್ಷ ವಯಸ್ಸು. ಏಪ್ರಿಲ್ 11 ರಂದು ಬಾಲಕಿ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು. ದಿನಗೂಲಿ ಕಾರ್ಮಿಕರಾಗಿದ್ದ ಬಾಲಕಿಯ ಪೋಷಕರು ಕೆಲಸಕ್ಕೆ ಹೋಗಿದ್ದಾಗ, ಆರೋಪಿ, ಸಂತ್ರಸ್ತೆಯ ಮಾವ, ಏನೋ ತಿಂಡಿಕೊಡುತ್ತೇನೆ ಬಾ ಎಂದು ಕರೆದೊಯ್ದಿದ್ದ.

ನಂತರ ಒಂದು ತಿಂಗಳ ಹಿಂದಷ್ಟೆ ತಾನು ಸ್ಥಳಾಂತರಗೊಂಡಿದ್ದ ಬಾಡಿಗೆ ಕೋಣೆಗೆ ಕರೆದೊಯ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿದ್ದ. ನಂತರ ಆ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನ ಬಳಿ ಬಾಲಕಿಯ ಶವ ಪತ್ತೆಯಾಗಿದೆ. ಈ ಘಟನೆಯಿಂದಾಗಿ ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 103(1), 65(2) ಮತ್ತು 238 ರ ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದರು.

ಮತ್ತಷ್ಟು ಓದಿ: ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್​

ಜಸೀಮ್ ಬಗ್ಗೆ ಮಾಹಿತಿ ನೀಡಿದವರಿಗೆ ಪೊಲೀಸರು 50,000 ರೂ. ನಗದು ಬಹುಮಾನವನ್ನೂ ಘೋಷಿಸಿದ್ದರು. ಏಪ್ರಿಲ್ ಗಾಜಿಯಾಬಾದ್‌ನ ತಿಲಾ ಮಾಡ್ ಪ್ರದೇಶದಲ್ಲಿ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು. ಪೊಲೀಸರು ತಕ್ಷಣವೇ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಬಾಲಕಿಯ ಮಾವ ಜಸೀಮ್ ಅಲಿಯಾಸ್ ಛೋಟು ಈ ಅಪರಾಧ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಆತನನ್ನು ತಕ್ಷಣವೇ ವಾಂಟೆಡ್ ಎಂದು ಘೋಷಿಸಲಾಯಿತು ಎಂದು ಉಪ ಪೊಲೀಸ್ ಆಯುಕ್ತ (ಡಿಸಿಪಿ) ಧವಲ್ ಜೈಸ್ವಾಲ್ ಅವರನ್ನು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಭಾನುವಾರ ರಾತ್ರಿ ಬಂತ್ಲಾ ಕಾಲುವೆ ಬಳಿ ಜಸೀಮ್ ಕಾಣಿಸಿಕೊಂಡಿದ್ದಾಗಿ ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಒಂದು ತಂಡ ತಡೆಯಲು ಪ್ರಯತ್ನಿಸಿದಾಗ ಆತ ಪೊಲೀಸರ ಮೇಲೆ ಗುಂಡು ಹಾರಿಸಿದ್ದ. ಗುಂಡಿನ ದಾಳಿಯಲ್ಲಿ, ಜಸೀಮ್‌ಗೆ ಗುಂಡು ತಗುಲಿದ್ದು, ನಂತರ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಆತ ಮೃತಪಟ್ಟಿರುವುದಾಗಿ ತಿಳಿಸಿದ್ದರು.

ಆದಾಗ್ಯೂ, ಅವನ ಇಬ್ಬರು ಸಹಚರರು ಪರಾರಿಯಾಗಿದ್ದಾರೆ ಎಂದು ಪೊಲೀಸರು ಗಮನಿಸಿದರು. ನಮ್ಮ ತಂಡದ ಇಬ್ಬರು ಕಾನ್‌ಸ್ಟೆಬಲ್‌ಗಳು ಸಹ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಪ್ರಥಮ ಚಿಕಿತ್ಸೆಗೆ ಕಳುಹಿಸಲಾಗಿದೆ. ಆತನಿಂದ ಕೆಲವು ಅಕ್ರಮ ಪಿಸ್ತೂಲ್‌ಗಳು ಮತ್ತು ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆತನಿಗೆ ಹಿಂದಿನ ಅಪರಾಧ ಇತಿಹಾಸವೂ ಇದೆ. ಆತ ಮೂಲತಃ ಮುಜಫರ್‌ನಗರ ಪ್ರದೇಶದ ನಿವಾಸಿ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ತಪ್ಪಿದ ಭಾರಿ ದುರಂತ: ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಆಗಸದಲ್ಲೇ ಸುತ್ತಾಡಿ ಬೆಂಗಳೂರಲ್ಲಿ ಲ್ಯಾಂಡ್​​; ಆಗಿದ್ದೇನು? – Kannada News | Hubballi Flight Near Miss: Fly91 Emergency Landing in Bengaluru After Hours in Air

ಹುಬ್ಬಳ್ಳಿ, ಏಪ್ರಿಲ್​​ 20: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಂಭವನೀಯ ವಿಮಾನ ದುರಂತವೊಂದು ತಪ್ಪಿದ್ದು, ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಬಚಾವ್​​ ಆಗಿದ್ದಾರೆ. ಏಕಾಏಕಿ ವೇಗದ ನಿಯಂತ್ರಣ ಕಳೆದುಕೊಂಡ Fly91 ಏರ್​​ಲೈನ್ಸ್ ವಿಮಾನ ಬರೋಬ್ಬರಿ 4 ಗಂಟೆಗಳ ಕಾಲ ಆಗಸದಲ್ಲೇ ಹಾರಾಡಿದೆ. ಹೈದರಾಬಾದ್​​ನಿಂದ ಹುಬ್ಬಳ್ಳಿ ಏರ್​​ಪೋರ್ಟ್​ಗೆ ಬರುತ್ತಿದ್ದ ಫ್ಲೈಟ್​​ನ ಸುರಕ್ಷಿತವಾಗಿ ಲ್ಯಾಂಡಿಂಗ್​ ಮಾಡಲು ಹರಸಾಹಸ ಪಡಲಾಗಿದ್ದು, ಅಂತಿಮವಾಗಿ ವಿಮಾನವನ್ನು ಬೆಂಗಳೂರಿನಲ್ಲಿ ಲ್ಯಾಂಡಿಂಗ್​​ ಮಾಡಲಾಗಿದೆ.

ನಿನ್ನೆ ಮಧ್ಯಾಹ್ನ 3 ಗಂಟೆಗೆ ಹೈದರಾಬಾದ್​​​ನ ರಾಜೀವ್ ಗಾಂಧಿ ವಿಮಾನ ನಿಲ್ದಾಣದಿಂದ ಟೇಕಾಫ್​​ ಆಗಿದ್ದ ವಿಮಾನ ಸಂಜೆ 4.30ಕ್ಕೆ ಹುಬ್ಬಳ್ಳಿ ಏರ್​ಪೋರ್ಟ್​ನಲ್ಲಿ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ ಹುಬ್ಬಳ್ಳಿಯಲ್ಲಿ ವಿಮಾನ ಲ್ಯಾಂಡಿಂಗ್​​ ಮಾಡಲು ಭಾರಿ ಪ್ರಯತ್ನ ನಡೆಸಲಾಗಿದೆಯಾದರೂ, ಅಂತಿಮವಾಗಿ ಅದು ಸಾಧ್ಯವಿಲ್ಲ ಎಂಬುದನ್ನು ಅರಿತು 4 ಗಂಟೆ ಕಾಲ ಮುಂಡಗೋಡ, ದಾವಣಗೆರೆ, ಶಿವಮೊಗ್ಗ ಪ್ರದೇಶದಲ್ಲಿ ಸುತ್ತಾಟ ನಡೆಸಿ ಸಂಜೆ 7.30ಕ್ಕೆ ಬೆಂಗಳೂರು ಏರ್​ಪೋರ್ಟ್​ನಲ್ಲಿ ವಿಮಾನವನ್ನು ಲ್ಯಾಂಡ್​​​​ ಮಾಡಲಾಗಿದೆ.

ಇದನ್ನೂ ಓದಿ: ಬಾಲ ಬಿಚ್ಚಿದರೆ ಗಡೀಪಾರು; ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿಯಲ್ಲಿ ರೌಡಿಗಳಿಗೆ ಕಮಿಷನರ್ ಖಡಕ್ ಎಚ್ಚರಿಕೆ

ಲ್ಯಾಂಡ್​​​​ ಆಗದೆ ವಿಮಾನ ಆಗಸದಲ್ಲೇ ಸುತ್ತಾಡುತ್ತಿದ್ದ ಕಾರಣ ಆತಂಕದಲ್ಲಿದ್ದ Fly91 ಏರ್​​ಲೈನ್ಸ್ ವಿಮಾನದಲ್ಲಿದ್ದ ಪ್ರಯಾಣಿಕರು ಕಣ್ಣೀರಿಟ್ಟಿರುವ ಪ್ರಸಂಗವೂ ನಡೆದಿದೆ. ನಾವಿನ್ನೂ ಜೀವಂತವಾಗಿ ಬರೋದು ಅನುಮಾನವಿದೆ ಎಂದು ಕೆಲವರು ಕುಟುಂಬಸ್ಥರಿಗೆ ಮೊಬೈಲ್​ನಲ್ಲಿ ಸಂದೇಶ ಕಳುಹಿಸಿದ್ದಾರೆ. ಈ ನಡುವೆ Fly91 ಏರ್​​ಲೈನ್ಸ್ ವಿರುದ್ಧ ಪ್ರಯಾಣಿಕರ ಕುಟುಂಬಸ್ಥರು ತೀವ್ರ ಅಸಮಾಧಾನ ಹೊರಹಾಕಿದ್ದು, ಘಟನೆ ಬಗ್ಗೆ ಮಾಹಿತಿ ನೀಡದೆ ಏರ್​​ಲೈನ್ಸ್​​ ನಿರ್ಲಕ್ಷ್ಯ ತೋರಿದ ಆರೋಪ ಕೂಡ ಕೇಳಿಬಂದಿದೆ.

ಹವಾಮಾನ ವೈಪರಿತ್ಯವೋ? ತಾಂತ್ರಿಕ ದೋಷವೋ?

ವಿಮಾನದ ಲ್ಯಾಂಡಿಂಗ್​​ ವೇಳೆ ಅಸಲಿಗೆ ಆದ ಸಮಸ್ಯೆ ಏನು ಎಂಬ ಬಗ್ಗೆ ಇನ್ನೂ ನಿಖರ ಮಾಹಿತಿ ಸಿಕ್ಕಿಲ್ಲ. ಪ್ರಯಾಣಿಕರು ಹೇಳುವಂತೆ ತಾಂತ್ರಿಕದೋಷದಿಂದ ವಿಮಾನ ಹುಬ್ಬಳ್ಳಿಯಲ್ಲಿ ಲ್ಯಾಂಡ್​​ ಆಗಲು ಸಾಧ್ಯವಾಗಿಲ್ಲ. ಆದರೆ ಮೂಲಗಳ ಪ್ರಕಾರ ಹವಾಮಾನ ವೈಪರಿತ್ಯವೇ ಘಟನೆಗೆ ಕಾರಣ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪ್ರೆಗ್ನೆನ್ಸಿಯಲ್ಲಿರುವಾಗಲೇ ದೊಡ್ಡ ರಿಸ್ಕ್ ತೆಗೆದುಕೊಂಡ ದೀಪಿಕಾ ಪಡುಕೋಣೆ – Kannada News | Deepika Padukone Pregnant: Shoots ‘Raaka’ Action Scenes, Team Ensures Safety with Doctors

ನಟಿ ದೀಪಿಕಾ ಪಡುಕೋಣೆ (Deepika) ಅವರು ಈ ಮೊದಲು ದುವಾ ಹೆಸರಿನ ಹೆಣ್ಣು ಮಗುವಿಗೆ ಜನ್ಮನೀಡಿದ್ದರು. ಈಗ ಎರಡನೇ ಮಗು ಆಗಮನದ ಬಗ್ಗೆ ಘೋಷಣೆ ಮಾಡಿದ್ದಾರೆ. ದೀಪಿಕಾ ಪ್ರೆಗ್ನೆಂಟ್ ವಿಷಯ ಘೋಷಣೆ ಮಾಡಿರೋ ವಿಷಯ ಕೇಳಿ ಅನೇಕರು ಖುಷಿ ಆಗಿದ್ದಾರೆ. ಆದರೆ, ಅಲ್ಲು ಅರ್ಜುನ್ ಹಾಗೂ ಅಟ್ಲೀ ಅಭಿಮಾನಿಗಳಿಗೆ ಈ ಬಗ್ಗೆ ಚಿಂತೆ ಶುರುವಾಗಿದೆ. ‘ರಾಕ’ ಸಿನಿಮಾದ ಶೂಟಿಂಗ್ ವಿಳಂಬ ಆಗುತ್ತದೆಯೇ ಎನ್ನುವ ಪ್ರಶ್ನೆಮೂಡಿದೆ. ಆದರೆ, ಹಾಗಾಗುತ್ತಿಲ್ಲ. ಪ್ರೆಗ್ನೆನ್ಸಿ ಮಧ್ಯೆಯೂ ದೀಪಿಕಾ ದೊಡ್ಡ ರಿಸ್ಕ್ ತೆಗೆದುಕೊಳ್ಳುತ್ತಿದ್ದಾರೆ.

‘ರಾಕಾ’ ಸಿನಿಮಾ ಬಹುನೀರಿಕ್ಷಿತ ಚಿತ್ರಗಳಲ್ಲಿ ಒಂದು. ಈ ಸಿನಿಮಾಗೆ ಅಟ್ಲಿ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್ ಅವರು ಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿದೆ. ಈ ಚಿತ್ರಕ್ಕೆ ದೀಪಿಕಾ ನಾಯಕಿ. ಇತ್ತೀಚೆಗೆ ‘ರಾಕಾ’ ಸಿನಿಮಾ ಶೂಟಿಂಗ್ ಆರಂಭ ಆಗಿದೆ. ಈ ಸಮಯದಲ್ಲೇ ದೀಪಿಕಾ ಪ್ರೆಗ್ನೆಂಟ್ ಎನ್ನುವ ವಿಷಯ ರಿವೀಲ್ ಆಗಿದೆ.

ಇದನ್ನೂ ಓದಿ: ದೀಪಿಕಾ-ರಣವೀರ್ ಮಧ್ಯೆ ಯಾವುದೂ ಸರಿ ಇಲ್ಲ ಎಂದವರಿಗೆಲ್ಲ ಬಿತ್ತು ಬಲವಾದ ಏಟು

ಈ ತಿಂಗಳ ಆರಂಭದಲ್ಲಿ ಅರ್ಜುನ್ ಅವರ ಹುಟ್ಟುಹಬ್ಬದಂದು ಚಿತ್ರದ ಶೀರ್ಷಿಕೆ ಮತ್ತು ಫಸ್ಟ್ ಲುಕ್ ರಿವೀಲ್ ಆಗಿದೆ. ದೀಪಿಕಾ ಲುಕ್ ಹೇಗಿರಲಿದೆ ಎಂಬ ಕುತೂಹಲವೂ ಇದೆ. ವಿಶೇಷ ಎಂದರೆ, ‘ತಮ್ಮ ಗರ್ಭಾವಸ್ಥೆಯಲ್ಲಿಯೇ ದೀಪಿಕಾ ಪಡುಕೋಣೆ ರಾಕಾ ಚಿತ್ರಕ್ಕಾಗಿ ತೀವ್ರವಾದ ಆ್ಯಕ್ಷನ್ ಸನ್ನಿವೇಶಗಳನ್ನು ಚಿತ್ರೀಕರಿಸುತ್ತಿದ್ದಾರೆ ಎಂಬುದು ವಿಶೇಷ.

ಶೂಟಿಂಗ್ ವೇಳೆ ತಂಡದವರು ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದಾರಂತೆ. ವೈದ್ಯರನ್ನು ಕೂಡ ಸೆಟ್​​ನಲ್ಲೇ ಇರಿಸಲಾಗಿದ್ದು, ಅವರನ್ನು ಕನ್ಸಲ್ಟ್ ಮಾಡಿಯೇ ಮುಂದುವರಿಯಲಾಗುತ್ತಿದೆ. ಇನ್ನೂ ಕೆಲವು ತಿಂಗಳು ಶೂಟ್​​ನಲ್ಲಿ ಬ್ಯುಸಿ ಇರಲಿದ್ದಾರೆ. ಶಾರುಖ್ ನಟನೆಯ ‘ಕಿಂಗ್’ ಚಿತ್ರವನ್ನು ಕೂಡ ಅವರು ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: ನಿನ್ನ ಮುಖ ತೋರಿಸಬೇಡ… ಕಾರಣವೇನು? – Kannada News | PBKS vs LSG Viral Moment: Shreyas Iyer hiding the face of Shashank Singh

ಐಪಿಎಲ್​ನ 29ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಭರ್ಜರಿ ಜಯ ಸಾಧಿಸಿದರೂ, ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವುದು ಪಂದ್ಯದ ನಂತರ ನಡೆದ ಒಂದು ತಮಾಷೆಯ ಘಟನೆ. ಪಂಜಾಬ್ ಕಿಂಗ್ಸ್​ ತಂಡದ ನಾಯಕ ಶ್ರೇಯಸ್ ಅಯ್ಯರ್ ತನ್ನ ಸಹ ಆಟಗಾರ ಶಶಾಂಕ್ ಸಿಂಗ್ ಅವರ ಮುಖವನ್ನು ಕ್ಯಾಮೆರಾ ಮತ್ತು ಕೋಚ್‌ನಿಂದ ಮರೆಮಾಚಲು ಪ್ರಯತ್ನಿಸಿದ ವಿಡಿಯೋ ಈಗ ವೈರಲ್ ಆಗಿದೆ.

ಕಾರಣವೇನು?

ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ದೊಡ್ಡ ಮೊತ್ತ ಪೇರಿಸಿದರೂ, ಫೀಲ್ಡಿಂಗ್ ವಿಷಯದಲ್ಲಿ ಶಶಾಂಕ್ ಸಿಂಗ್ ಅವರಿಗೆ ಇದು ಕೆಟ್ಟ ದಿನವಾಗಿತ್ತು. ಪಂದ್ಯದ ವಿವಿಧ ಹಂತಗಳಲ್ಲಿ ಶಶಾಂಕ್ ಬರೊಬ್ಬರಿ ಮೂರು ಕ್ಯಾಚ್‌ಗಳನ್ನು ಕೈಚೆಲ್ಲಿದ್ದರು. ಅದರಲ್ಲೂ ಬೌಂಡರಿ ಲೈನ್‌ ಬಳಿ ಅವರು ಬಿಟ್ಟ ಕ್ಯಾಚ್ ಸಿಕ್ಸರ್ ಆಗಿ ಪರಿವರ್ತಿತವಾಗಿತ್ತು. ಈ ತಪ್ಪುಗಳಿಂದಾಗಿ ಡಗೌಟ್‌ನಲ್ಲಿದ್ದ ಕೋಚ್ ರಿಕಿ ಪಾಂಟಿಂಗ್ ಕೂಡ ಒಂದು ಕ್ಷಣ ಅಸಮಾಧಾನಗೊಂಡಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಅಯ್ಯರ್ ಅವರ ಚೇಷ್ಟೆ

ಪಂದ್ಯ ಮುಗಿದ ನಂತರ ಆಟಗಾರರು ಪರಸ್ಪರ ಹಸ್ತಲಾಘವ ಮಾಡುವ ಸಮಯದಲ್ಲಿ, ಶ್ರೇಯಸ್ ಅಯ್ಯರ್ ಅವರು ಶಶಾಂಕ್ ಬಳಿ ಬಂದು, “ಇಷ್ಟು ಕ್ಯಾಚ್ ಬಿಟ್ಟ ಮೇಲೆ ಕೋಚ್​ಗೆ ನಿನ್ನ ಮುಖ ತೋರಿಸಬೇಡ” ಎಂಬಂತೆ ತಮಾಷೆಯಾಗಿ ಅವರ ಮುಖದ ಮೇಲೆ ಕ್ಯಾಪ್ ಎಳೆದು ಮುಚ್ಚಿದರು. ಶಶಾಂಕ್ ಕೂಡ ಈ ಚೇಷ್ಟೆಯನ್ನು ನಗುನಗುತ್ತಲೇ ಸ್ವೀಕರಿಸಿದರು.

ಅತ್ತ ಪಂಜಾಬ್ ಕಿಂಗ್ಸ್ ತಂಡದ ಕೋಚ್ ರಿಕಿ ಪಾಂಟಿಂಗ್ ಕೂಡ ಶಶಾಂಕ್ ಸಿಂಗ್ ವಿರುದ್ಧ ಮೈದಾನದಲ್ಲಿ ಯಾವುದೇ ಅಸಮಾಧನ ಹೊರಹಾಕದೇ ಬೆನ್ನು ತಟ್ಟಿದರು. ಇದೀಗ ಶ್ರೇಯಸ್ ಅಯ್ಯರ್ ಅವರ ಚೇಷ್ಟೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್​ 20 ಓವರ್​ಗಳಲ್ಲಿ 254 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಎಲ್​ಎಸ್​ಜಿ 200 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಪಂಜಾಬ್ ಕಿಂಗ್ಸ್ 54 ರನ್​ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

 

Source link

ಹಾಲಿವುಡ್ ಮಂದಿಯ ಎದುರು ಹೇಗೆ ಮಾತಾಡಿದ್ರು ನೋಡಿ ಯಶ್

ರಾಕಿಂಗ್ ಸ್ಟಾರ್ ಯಶ್ ಅವರು ಹಾಲಿವುಡ್ ವೇದಿಕೆಗಳಲ್ಲಿ ‘ಟಾಕ್ಸಿಕ್’ ಹಾಗೂ ರಾಮಾಯಣ ಚಿತ್ರಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಇದು ನಿಜಕ್ಕೂ ಹೆಮ್ಮೆಯ ವಿಷಯ. ಯಶ್ ಅವರ ಹೊಸ ಹೊಸ ವಿಡಿಯೋಗಳು ವೈರಲ್ ಆಗುತ್ತಿವೆ. ಈಗ ಅವರ ಹೊಸ ವಿಡಿಯೋ ಗಮನ ಸೆಳೆದಿದೆ. ಈ ವಿಡಿಯೋದಲ್ಲಿ ಅವರು ಅದ್ಭುತವಾಗಿ ಹಾಗೂ ನಿರರ್ಗಳವಾಗಿ ಇಂಗ್ಲಿಷ್ ಮಾತನಾಡಿದ್ದಾರೆ. ಇಂಗ್ಲಿಷ್ ವರದಿಗಾರರು ಅದನ್ನು ಭಕ್ತಿಯಿಂದ ಕೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

11 ಅಂಕಗಳು… ಐಪಿಎಲ್​ನಲ್ಲಿ ಹೊಸ ಚರಿತ್ರೆ ಬರೆದ ಪಂಜಾಬ್ ಕಿಂಗ್ಸ್

Source link

Exit mobile version