ಕರಾವಳಿಯಲ್ಲಿ ಮತ್ತೆ ಕಾರಣಿಕ ತೋರಿದ ದೈವ: ತನ್ನಿಂದ ತಾನೆ ತೂಗಿತು ಉಯ್ಯಾಲೆ! ಪಿಲಿಚಂಡಿ ಕಾರ್ಣಿಕ ಕಂಡು ಭಕ್ತರು ಶಾಕ್ – Kannada News | Coastal Karnataka Miracle: Pilichandi Daiva Swing Moves on Its Own, Devotees Stunned by Divine Phenomenon

ಪಿಲಿಚಂಡಿ ದೈವದ ಕಾರ್ಣಿಕ ಕಂಡು ಭಕ್ತರು ಶಾಕ್Image Credit source: tv9

ಮಂಗಳೂರು, ಫೆಬ್ರವರಿ 17: ಕರಾವಳಿಯಲ್ಲಿ (Coastal Karnataka) ಮತ್ತೆ ದೈವದ ಕಾರ್ಣಿಕದ ಕಂಡು ಭಕ್ತರು ಚಕಿತರಾಗಿದ್ದಾರೆ. ಮಂಗಳೂರಿನ (Mangalore) ಬೈಕಂಪಾಡಿ ಕೈಗಾರಿಕಾ ವಲಯದ ಕುಡುಂಬೂರು ನಡುಗಿರಿಯಲ್ಲಿರುವ ದೈವಸ್ಥಾನದಲ್ಲಿ ಅಪರೂಪದ ಘಟನೆ ನಡೆದಿದೆ. ಮಂಗಳೂರು ಭಾಗದ ಶ್ರೀ ಜಾರಂದಾಯ ಹಾಗೂ ಸಹಪರಿವಾರ ದೈವಸ್ಥಾನದಲ್ಲಿ ನಡೆದ ಪಿಲಿಚಂಡಿ ದೈವದ ನೇಮೋತ್ಸವದ ವೇಳೆ ದೈವದ ಉಯ್ಯಾಲೆ ತನ್ನಿಂದ ತಾನೇ ತೂಗಿದ ದೃಶ್ಯ ಭಕ್ತರಲ್ಲಿ ಅಚ್ಚರಿ ಮೂಡಿಸಿದೆ.

ನೇಮೋತ್ಸವದ ಸಂದರ್ಭದಲ್ಲಿ ಪಿಲಿಚಂಡಿ ದೈವಕ್ಕೆ ಗಗ್ಗರ ಇಡುವಾಗ ದೈವಸ್ಥಾನ ಪ್ರದೇಶದಲ್ಲಿ ಏಕಾಏಕಿ ದೊಡ್ಡ ಸದ್ದು ಕೇಳಿಬಂದಿದ್ದು, ಸಿಡಿತದಂತಿದ್ದ ಶಬ್ದದಿಂದ ಅಲ್ಲಿದ್ದವರು ಕ್ಷಣಕಾಲ ಆತಂಕಗೊಂಡರು. ಬಳಿಕ ನೋಡಿದಾಗ ನೇಮೋತ್ಸವ ನಡೆಯುತ್ತಿದ್ದ ಸ್ಥಳದ ಮುಂಭಾಗದಲ್ಲಿರುವ ಹೊಳ್ಳರ ಚಾವಡಿಯಲ್ಲಿದ್ದ ದೈವದ ತೂಗುಯ್ಯಾಲೆ ತನ್ನಿಂದ ತಾನೇ ತೂಗುತ್ತಿರುವುದು ಕಂಡು ಭಕ್ತರು ಆಶ್ಚರ್ಯಕ್ಕೊಳಗಾದರು.

ದೈವದ ಕಾರ್ಣಿಕದ ವಿಡಿಯೋ ಇಲ್ಲಿ ನೋಡಿ

ಉಯ್ಯಾಲೆ ರೀತಿಯ ದೈವದ ಮಂಚದಲ್ಲಿ ಪಿಲಿಚಂಡಿ ದೈವ ತನ್ನ ಕಾರಣಿಕ ಶಕ್ತಿಯನ್ನು ಪ್ರದರ್ಶಿಸಿದೆ ಎಂದು ಭಕ್ತರು ನಂಬಿಕೆ ವ್ಯಕ್ತಪಡಿಸಿದ್ದಾರೆ. ನೇಮೋತ್ಸವದ ಸಂದರ್ಭದಲ್ಲಿ ನಡೆದ ಈ ಘಟನೆಗೆ ಸಾಕ್ಷಿಯಾದ ಭಕ್ತರು, ದೈವ ಪವಾಡವನ್ನು ಕಣ್ಣಾರೆ ಕಂಡ ಅನುಭವವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ದೈವದ ಗಗ್ಗರ ಕಟ್ಟಲು ಕಾಲುಗಳೇ ಇಲ್ಲ: ದೈವ ನರ್ತಕನಿಗೆ ಆಸರೆಯಾದ ಕೃತಕ ಕಾಲು

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮಗಳಿಂದಲೂ ಭಕ್ತರು ದೈವಸ್ಥಾನಕ್ಕೆ ಹರಿದುಬಂದಿದ್ದು, ದೈವದ ಕಾರ್ಣಿಕ ಕಂಡು ಪುಳಕಿತರಾಗಿದ್ದಾರೆ. ಕರಾವಳಿ ಭಾಗದಲ್ಲಿ ದೈವ ನೇಮೋತ್ಸವಗಳ ವೇಳೆ ಇಂತಹ ಅಚ್ಚರಿಯ ಘಟನೆಗಳು ನಡೆದಿರುವ ಉದಾಹರಣೆಗಳು ಇದಕ್ಕೂ ಮೊದಲು ನಡೆದಿವೆ. ಪಿಲಿಚಂಡಿ ದೈವದ ಈ ಪವಾಡ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೂರು ಮಕ್ಕಳ ಕೊಂದು ಶಿಕ್ಷೆ ಅನುಭವಿಸಿ ಬಂದಿದ್ದ ವ್ಯಕ್ತಿ, ಮಹಿಳೆಯ ಕೊಂದು ರೈಲಿನೆದುರು ಹಾರಿ ಆತ್ಮಹತ್ಯೆ – Kannada News | MP Crime Shocker, Man Jailed 18 Yrs for Sons Murder Kills Woman, Commits Suicide

ಭೋಪಾಲ್, ಫೆಬ್ರವರಿ 17: ಮೂವರು ಗಂಡು ಮಕ್ಕಳನ್ನು ಕೊಂದ ಆರೋಪದಲ್ಲಿ ಈಗಾಗಲೇ 18 ವರ್ಷ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದ ವ್ಯಕ್ತಿ ಮಹಿಳೆಯೊಬ್ಬರನ್ನು ಕೊಂದು ಬಳಿಕ ರೈಲಿನೆದುರು ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 50 ವರ್ಷದ ದುರ್ಗಾ ಎಂಬ ಮಹಿಳೆಯನ್ನು ಭೋಪಾಲ್‌ನ ಗೌತಮ್ ನಗರ ಪ್ರದೇಶದಲ್ಲಿ ಆಕೆಯ ಸಂಬಂಧಿ ಪ್ರೀತಮ್ ಕುಶ್ವಾಹ ಇರಿದು ಕೊಂದಿದ್ದಾನೆ. ಜೈಲಿನಿಂದ ಬಿಡುಗಡೆಯಾದ ನಂತರ ಸುಮಾರು ಒಂದು ವರ್ಷದಿಂದ ದುರ್ಗಾ ಅವರ ಮನೆಯಲ್ಲಿ ವಾಸಿಸುತ್ತಿದ್ದರು.

ಗೌತಮ್ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ದುರ್ಗಾ ಅವರ ಮನೆಯೊಳಗೆ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಶ್ವಾಹ ಸ್ವಚ್ಛಗೊಳಿಸುವ ನೆಪದಲ್ಲಿ ಅಲ್ಲಿಗೆ ಆಕೆಯನ್ನು ಕರೆದೊಯ್ದು, ನಂತರ ಹರಿತವಾದ ಆಯುಧದಿಂದ ಪದೇ ಪದೇ ಹಲ್ಲೆ ನಡೆಸಿದ್ದಾನೆ, ಇದರಿಂದಾಗಿ ಆಕೆಯ ಎದೆ ಮತ್ತು ಹೊಟ್ಟೆಯ ಮೇಲೆ ಹಲವಾರು ಗಾಯಗಳಾಗಿವೆ.

ತನಿಖಾಧಿಕಾರಿಗಳು ಆರೋಪಿಗಳ ನಡುವಿನ ಉದ್ವಿಗ್ನತೆಯೇ ಈ ಅಪರಾಧಕ್ಕೆ ಕಾರಣ ಎಂದು ನಂಬಿದ್ದಾರೆ. ಕಳೆದ ಆರು ತಿಂಗಳಿನಿಂದ ದುರ್ಗಾ ಮನೆ ಖಾಲಿ ಮಾಡುವಂತೆ ಆತನ ಮೇಲೆ ಒತ್ತಡ ಹೇರುತ್ತಿದ್ದಳು ಎಂದು ವರದಿಯಾಗಿದೆ, ಇದು ಆರೋಪಿಗಳನ್ನು ಕೆರಳಿಸಿತ್ತು.

ಮತ್ತಷ್ಟು ಓದಿ: ಸಹಪಾಠಿ ಜತೆ ಗಲಾಟೆ: ಮನನೊಂದು ಆತ್ಮಹತ್ಯೆಗೆ ಶರಣಾದ SSLC ವಿದ್ಯಾರ್ಥಿ

ಪೊಲೀಸ್ ಠಾಣೆಯ ಉಸ್ತುವಾರಿ ಮಹೇಂದ್ರ ಸಿಂಗ್ ಠಾಕೂರ್ ಮಾತನಾಡಿ, ತೆಂಡುಖೇಡಾ ಮೂಲದ ಕುಶ್ವಾಹ ತನ್ನ ಮೂವರು ಗಂಡು ಮಕ್ಕಳನ್ನು ಕೊಡಲಿಯಿಂದ ಕೊಂದ ಆರೋಪದಲ್ಲಿ ಶಿಕ್ಷೆಗೊಳಗಾಗಿ 18 ವರ್ಷಗಳ ಶಿಕ್ಷೆಯನ್ನು ಪೂರ್ಣಗೊಳಿಸಿದ್ದ. ಕಳೆದ ವರ್ಷ ಬಿಡುಗಡೆಯಾದ ನಂತರ, ಅವರನ್ನು ತಮ್ಮ ಗ್ರಾಮದಲ್ಲಿ ಸಾಮಾಜಿಕವಾಗಿ ಬಹಿಷ್ಕರಿಸಲಾಯಿತು ಮತ್ತು ದುರ್ಗಾ ಅವರಿಗೆ ಭೋಪಾಲ್‌ನಲ್ಲಿ ಆಶ್ರಯ ನೀಡಿದ್ದರು.

ಆತ ತರಕಾರಿ ಮಾರಾಟ ಮಾಡುವ ಮೂಲಕ ಹಣ ಸಂಪಾದಿಸುತ್ತಿದ್ದ ಮತ್ತು ಅಪರಾಧ ನಡೆಯುವ ಎರಡು ದಿನಗಳ ಮೊದಲು ಅದನ್ನು ಮಾರಾಟ ಮಾಡಿದ್ದ. ಮಹಿಳೆಯನ್ನು ಇರಿದ ನಂತರ, ಕುಶ್ವಾಹ ಪರಾರಿಯಾಗಿದ್ದು, ನಂತರ ನಿಶಾತ್‌ಪುರ ಪ್ರದೇಶದಲ್ಲಿ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಯಾರಿಗೂ ಸಾಧ್ಯವಾಗದೇ ಇರುವುದನ್ನು ಸಾಧಿಸಿ ತೋರಿಸಿದ ಪಾತುಮ್ ನಿಸ್ಸಂಕಾ – Kannada News | Pathum Nissanka Creates New Record Against Australia

T20 World Cup 2026: ಟಿ20 ವಿಶ್ವಕಪ್​ 2026ರ ಮೊದಲ ಶತಕ ಮೂಡಿಬಂದಿದೆ. ಅದು ಸಹ ಶ್ರೀಲಂಕಾದ ಆರಂಭಿಕ ದಾಂಡಿಗ ಪಾತುಮ್ ನಿಸ್ಸಂಕಾ (Pathum Nissanka) ಬ್ಯಾಟ್​ನಿಂದ. ಈ ಸೆಂಚುರಿ ಮೂಡಿಬಂದಿರುವುದು ಆಸ್ಟ್ರೇಲಿಯಾ ವಿರುದ್ಧ ಎಂಬುದೇ ಇಲ್ಲಿ ವಿಶೇಷ. 

Source link

ಮನೆ ಕಟ್ಟಲು ಅನುಮತಿ ನೀಡದ ಪಿಡಿಒ: ಗ್ರಾಮ ಪಂಚಾಯತ್ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೈತ, ವಿಡಿಯೋ ವೈರಲ್ – Kannada News | Farmer Attempts to end life at Gram Panchayat Office After PDO Denies House Construction Permission, Video Goes Viral

ವಿಜಯನಗರ, ಫೆಬ್ರವರಿ 17: ಮನೆ ಕಟ್ಟಲು ಪರವಾನಗಿ ನೀಡದ ಹಿನ್ನೆಲೆಯಲ್ಲಿ ರೈತೊಬ್ಬ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಡಬಗೆರೆ ಗ್ರಾಮ ಪಂಚಾಯತ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಡಬಗೆರೆ ಪಂಚಾಯತ್ ವ್ಯಾಪ್ತಿಯ ಪವನಪುರ ಗ್ರಾಮದ ನಿವಾಸಿ ಕೆ. ಬಸವರಾಜ್ ಎಂಬವರು ಗ್ರಾ.ಪಂ. ಕಚೇರಿಯಲ್ಲೇ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮನೆ ನಿರ್ಮಾಣಕ್ಕಾಗಿ ಇ-ಸೊತ್ತು ಹಾಗೂ ಪರವಾನಗಿ ನೀಡುವಂತೆ ಹಲವಾರು ಬಾರಿ ಅರ್ಜಿ ಸಲ್ಲಿಸಿದ್ದರೂ ಅನುಮತಿ ನೀಡಲಾಗಿಲ್ಲವೆಂದು ರೈತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರವಾನಗಿ ಇಲ್ಲದೇ ಬ್ಯಾಂಕ್ ಸಾಲ ಸಿಗುತ್ತಿಲ್ಲಲ. ಕಳೆದ ಆರು ತಿಂಗಳಿಂದ ಕಚೇರಿಗೆ ಸುತ್ತಾಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಈ ವೇಳೆ ಪಿಡಿಒ ಆಗಿರುವ ಕೃಷ್ಣಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಚೇರಿಯಲ್ಲೇ ಅರ್ಧ ಲೀಟರ್ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯನ್ನು ಗಮನಿಸಿದ ಪಿಡಿಒ ಕೃಷ್ಣಪ್ಪ ಹಾಗೂ ಸ್ಥಳೀಯರು ತಕ್ಷಣ ಮಧ್ಯಪ್ರವೇಶಿಸಿ ರೈತನನ್ನು ರಕ್ಷಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ನಿಮಗೆ ಡಿ ಬಾಸ್, ನನಗೆ ಮಗ; ಇನ್ನೆರಡು ತಿಂಗಳಲ್ಲಿ ಅವನು ಆಚೆ ಬರ್ತಾನೆ’; ರವಿಚಂದ್ರನ್ – Kannada News | Darshan Bail Update: Ravichandran Hints at D boss’ Two Month Release

ನಟ ದರ್ಶನ್ (Darshan) ಅವರು ಸದ್ಯ ಜೈಲಿನಲ್ಲಿದ್ದಾರೆ. ಅವರು ಯಾವಾಗ ಹೊರ ಬರುತ್ತಾರೆ ಎಂದು ಫ್ಯಾನ್ಸ್ ಕಾಯುತ್ತಾ ಕೂತಿದ್ದಾರೆ. ಜಾಮೀನು ಅರ್ಜಿ ಸುಪ್ರೀಂಕೋರ್ಟ್​​​ನಲ್ಲೇ ರಿಜೆಕ್ಟ್ ಆಗಿರುವುದರಿಂದ ಅವರು ಯಾವುದೇ ಜಾಮೀನು ಅರ್ಜಿ ಸಲ್ಲಿಕೆ ಮಾಡಿಲ್ಲ ಎನ್ನಲಾಗುತ್ತಿದೆ. ಹೀಗಿರುವಾಗಲೇ ರವಿಚಂದ್ರನ್ ಕಡೆಯಿಂದ ಒಂದು ಗುಡ್ ನ್ಯೂಸ್ ಸಿಕ್ಕಿದೆ. ದರ್ಶನ್ ಹೊರ ಬರೋದು ಯಾವಾಗ ಎಂಬ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ದರ್ಶನ್ ಹಾಗೂ ರವಿಚಂದ್ರನ್ ಮಧ್ಯೆ ಒಳ್ಳೆಯ ಬಾಧಂವ್ಯ ಇದೆ. 2023ರ ‘ಕ್ರಾಂತಿ’ ಸಿನಿಮಾದಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದಾರೆ. ದರ್ಶನ್ ಅವರಿಗೂ ರವಿಚಂದ್ರನ್ ಎಂದರೆ ಎಲ್ಲಿಲ್ಲದ ಗೌರವ. ಈಗ ರವಿಚಂದ್ರನ್ ಅವರು ಒಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ದರ್ಶನ್ ಹೊರ ಬರೋದು ಯಾವಾಗ ಎಂಬ ಬಗ್ಗೆ ಹಿಂಟ್ ಕೊಟ್ಟಿದ್ದಾರೆ.

ಕಾರ್ಯಕ್ರಮ ಒಂದರಲ್ಲಿ ರವಿಚಂದ್ರನ್ ಮಾತನಾಡಿದರು. ಈ ವೇಳೆ ಸಿನಿಮಾ ಡೈಲಾಗ್ ಹೇಳುವಂತೆ ಅವರಿ ಬಳಿ ಕೋರಲಾಗಿದೆ. ಆದರೆ, ಅಲ್ಲಿದ್ದ ಅಭಿಮಾನಿಗಳು ಡಿಬಾಸ್ ಎಂದು ಕೂಗಿದ್ದಾರೆ. ಆಗ ರವಿಚಂದ್ರನ್ ಅವರು , ‘ಡಿಬಾಸ್ ಎರಡು ತಿಂಗಳಲ್ಲಿ ಆಚೆ ಬರುತ್ತಾರಂತೆ. ಈ ಬಾಯಲ್ಲಿ ಹೇಳಿದೀನಿ ಬರ್ತಾರೆ. ನಿಮಗೆಲ್ಲ ಅವನು ಡಿ ಬಾಸ್, ನನಗೆ ಮಗ, ನೆನಪಿಟ್ಟುಕೊಳ್ಳಿ. ಇದೆಲ್ಲ ಕೆಟ್ಟ ಘಳಿಗೆ ಅಷ್ಟೇ. ಕೆಟ್ಟ ಘಳಿಗೆ ಮನುಷ್ಯನ್ನ ಕುಗ್ಗಿಸುತ್ತದೆ. ಅದೇ ಸಮಯ ಒಂದಲ್ಲ ಒಂದು ದಿನ ಮೇಲಕ್ಕೆ ಎತ್ತಲೇಬೇಕು. ಅವರನ್ನು ಎದೆಯಲ್ಲೇ ಇಟ್ಟು ಪೂಜಿಸಿ’ ಎಂದರು. ಇದೇ ವೇಳೆ ‘ಎಲ್ಲದಕ್ಕೂ ಕಾಯಬೇಕು’ ಎನ್ನುವ ಮಾತನ್ನು ಹೇಳಿದರು.

ದರ್ಶನ್ ಅವರ ಜಾಮೀನು ಸುಪ್ರೀಂಕೋರ್ಟ್​​ನಲ್ಲೇ ರಿಜೆಕ್ಟ್ ಆಗಿದೆ. ಹೀಗಾಗಿ, ಅವರಿಗೆ ಸದ್ಯಕ್ಕೆ ಜಾಮೀನು ಸಿಗೋದು ಅನುಮಾನವೇ ಎಂದೆಲ್ಲ ಮಾತನಾಡಿಕೊಳ್ಳಲಾಗುತ್ತಿದೆ. ಹೀಗಿರುವಾಗ ರವಿಚಂದ್ರನ್ ಅವರು ಪಾಸಿಟಿವ್ ಆಗಿ ಮಾತನಾಡಿದ್ದು, ಅಭಿಮಾನಿಗಳಿಗೆ ಖುಷಿಕೊಟ್ಟಿದೆ.

ಇದನ್ನೂ ಓದಿ: ಪವಿತ್ರಾಗೆ ದೊಡ್ಡ ನಿರಾಸೆ; ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ

ಪವಿತ್ರಾ ಗೌಡ ಅವರು ಮಗಳಿಗೆ ಪರೀಕ್ಷೆ ಸಮಯ ಎಂದು 21 ದಿನಗಳ ಮಧ್ಯಂತರ ಜಾಮೀನು ಕೋರಿದ್ದರು. ಆದರೆ, ಇದನ್ನು ನೀಡಲು ಕೋರ್ಟ್ ನಿರಾಕರಿಸಿದೆ. ದರ್ಶನ್ ಅರ್ಜಿ ಸಲ್ಲಿಕೆ ಮಾಡಿದರೂ ಇದೇ ತೊಂದರೆ ಎದುರಾಗಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚಿಕ್ಕಮಗಳೂರು: ಕಲ್ಲು ತೂರಾಟ ಮಾಡಿದವರ ಮೇಲೆ, ಕಿಡಿಗೇಡಿಗಳ ಹಿಡಿದವರ ಮೇಲೂ ಎಫ್​ಐಆರ್! – Kannada News | Chikkamagaluru Stone Pelting Case: FIR Against Muslim Attackers and Hindus Those Who Caught Them

ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್Image Credit source: tv9

ಚಿಕ್ಕಮಗಳೂರು, ಫೆಬ್ರವರಿ 17: ಚಿಕ್ಕಮಗಳೂರು (Chikkamagaluru) ನಗರದ ತಿಲಕ್ ಪಾರ್ಕ್ ಸಮೀಪ ಹಿಂದೂ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎರಡು ಪ್ರತ್ಯೇಕ ಎಫ್​ಐಆರ್​​ಗಳನ್ನು ದಾಖಲಿಸಿದ್ದಾರೆ. ಕಲ್ಲು ತೂರಾಟ ಮಾಡಿದವರ ಹಾಗೂ ಅವರನ್ನು ಹಿಡಿದು ಪೊಲೀಸರಿಗೊಪ್ಪಿಸಿದವರ ವಿರುದ್ಧವೂ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಸುಧಾ ಎಂಬವರ ಮನೆಯ ಮೇಲೆ ಕಲ್ಲು ಎಸೆದ ಆರೋಪದ ಮೇರೆಗೆ ಹುಸೇನ್ ಮತ್ತು ರಿಯಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಲ್ಲು ತೂರಾಟ ನಡೆಸಿದವರನ್ನು ಹಿಡಿದ ಶಾಮ್ ಮತ್ತು ಸಂತೋಷ್ ಮೇಲೂ ಹಲ್ಲೆ ಆರೋಪದಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಶಾಮ್ ಅವರು ಬಜರಂಗದಳ ಹಾಸನ ವಿಭಾಗದ ಸಹ ಸಂಚಾಲಕರಾಗಿದ್ದು, ಸಂತೋಷ್ ಬಿಜೆಪಿ ಯುವ ಮೋರ್ಚಾ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾಗಿದ್ದಾರೆ.

ತಮ್ಮ ಮೇಲೆ ಬ್ಯಾಟ್‌ನಿಂದ ಹಲ್ಲೆ ನಡೆಸಲಾಗಿದೆ ಎಂದು ಹುಸೇನ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದ್ದು, ಗಾಯಗೊಂಡಿರುವ ಆಕ್ಷದ್ ಮತ್ತು ಹಸೇನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಕ್ಷದ್ ಹಾಗೂ ಹುಸೇನ್ ಮೇಲೆ BNS ಕಾಯ್ದೆಯ ವಿವಿಧ ಕಲಂಗಳ ಅಡಿ ಹಾಗೂ ಎಸ್​ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್​​ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಮತ್ತೊಂದೆಡೆ ಶಾಮ್ ಮತ್ತು ಸಂತೋಷ್ ವಿರುದ್ಧವೂ BNS ವಿವಿಧ ಕಲಂಗಳಡಿ ಕೇಸ್ ದಾಖಲಿಸಲಾಗಿದೆ.

ಈ ಪ್ರಕರಣದಲ್ಲಿ, ಹಿಂದೂಗಳ ಮೇಲೂ ಕೈಗೊಳ್ಳುವಂತೆ ಮುಸ್ಲಿಂ ಸಮುದಾಯದವರು ಹಾಗೂ ಎಸ್​​ಡಿಪಿಐ ಮುಖಂಡರು ಆಗ್ರಹ ವ್ಯಕ್ತಪಡಿಸಿದ್ದರು. ಇದೇ ವೇಳೆ ವಿಹೆಚ್​ಪಿ ಮತ್ತು ಬಜರಂಗದಳ ಮುಖಂಡರೂ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ರಾತ್ರಿ ಬಸವನಹಳ್ಳಿ ಪೊಲೀಸ್ ಠಾಣೆ ಎದುರು ನೂರಾರು ಮಂದಿ ಜಮಾಯಿಸಿದ ಪರಿಣಾಮ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಚಿಕ್ಕಮಗಳೂರಿನ ತಿಲಕ್ ಪಾರ್ಕ್ ಕಲ್ಲು ತೂರಾಟ ಪ್ರಕರಣದ ಹಿನ್ನೆಲೆ

ತಿಲಕ್ ಪಾರ್ಕ್ ಸಮೀಪ ಹಿಂದೂಗಳ ಮನೆಯೊಂದರ ಮೇಲೆ ಕಳೆದ ಒಂದು ವಾರದಿಂದ ಕಿಡಿಗೇಡಿಗಳು ಆಗಾಗ ಕಲ್ಲು ತೂರಾಟ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಸೋಮವಾರ ರಾತ್ರಿ ಕಲ್ಲು ತೂರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಬಜರಂಗ ದಳದವರು ಅವರನ್ನು ಹಿಡಿದು ಬಸವನಹಳ್ಳಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದರು. ಇದಕ್ಕೆ ಎಸ್​ಡಿಪಿಐ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಹಿಂದೂ ಸಂಘಟನೆಗಳ ಮುಖಂಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿತ್ತು.

ಇದನ್ನೂ ಓದಿ: ಚಿಕ್ಕಮಗಳೂರು: ಹಿಂದೂ ಮನೆ ಮೇಲೆ ನಿರಂತರ ಕಲ್ಲು ತೂರಾಟದಿಂದ ಘರ್ಷಣೆ, ವಿಜಯನಗರ ಬಡಾವಣೆ ಬಳಿ ಉದ್ವಿಗ್ನ ಪರಿಸ್ಥಿತಿ

ನಂತರ ಪೊಲೀಸ್ ಠಾಣೆ ಮುಂದೆ ಹಿಂದೂ ಸಂಘಟನೆಗಳ ಹಾಗೂ ಎಸ್​​ಡಿಪಿಐ ಮುಖಂಡರು ಜಮಾಯಿಸಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಸದ್ಯ ಪೊಲೀಸ್ ಬಂದೋಬಸ್ತ್ ಬಿಗಿಗೊಳಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

T20 World Cup 2026: ಸೂಪರ್-8 ಸುತ್ತಿಗೆ 5 ತಂಡಗಳ ಎಂಟ್ರಿ – Kannada News | 5 Teams Qualified For T20 World Cup 2026 Super 8s So Far

ಇನ್ನು ಈ ಬಾರಿ ಟಿ20 ವಿಶ್ವಕಪ್​​ನಿಂದ ಈವರೆಗೆ ಎಲಿಮಿನೇಟ್ ಆದ ತಂಡಗಳೆಂದರೆ… ನಮೀಬಿಯ, ಒಮಾನ್, ಸ್ಕಾಟ್ಲೆಂಡ್, ಇಟಲಿ ಮತ್ತು ನೇಪಾಳ. ಇನ್ನುಳಿದ ಆಸ್ಟ್ರೇಲಿಯಾ, ಪಾಕಿಸ್ತಾನ್, ಝಿಂಬಾಬ್ವೆ, ಅಫ್ಘಾನಿಸ್ತಾನ್, ನ್ಯೂಝಿಲೆಂಡ್, ಐರ್ಲೆಂಡ್, ಯುಎಸ್​ಎ ತಂಡಗಳು ಇನ್ನೂ ಸಹ ಸೂಪರ್-8 ಹಂತಕ್ಕೇರುವ ರೇಸ್​ನಲ್ಲಿದ್ದಾರೆ.

Source link

Bengaluru Air Quality: ಉಡುಪಿಯಲ್ಲಿ ಇನ್ನಷ್ಟು ಹದಗೆಟ್ಟಿದೆ ವಾಯು ಗುಣಮಟ್ಟ – Kannada News | Bangalore Air Pollution Crisis: Udupi’s Air quality dropped more than Bengaluru

ಉಡುಪಿಯಲ್ಲಿ ಇನ್ನಷ್ಟು ಹದಗೆಟ್ಟಿದೆ ವಾಯು ಗುಣಮಟ್ಟ

ಬೆಂಗಳೂರು, ಫೆಬ್ರವರಿ 17: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಉಡುಪಿಯ AQI ಇನ್ನಷ್ಟು ಹದಗೆಟ್ಟಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 175ಕ್ಕೆ ತಲುಪಿದೆ. ಅದಕ್ಕಿಂತ ಹೆಚ್ಚಾಗಿ ಉಡುಪಿಯ ಏರ್ ಕ್ವಾಲಿಟಿ 181 ಆಗಿದೆ. ಜೊತೆಗೆ ಬಳ್ಳಾರಿಯ ವಾಯು ಗುಣಮಟ್ಟವೂ ಸಹ 178 ಆಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –175
  • ಮಂಗಳೂರು-174
  • ಮೈಸೂರು –177
  • ಬೆಳಗಾವಿ – 178
  • ಕಲಬುರ್ಗಿ-146
  • ಶಿವಮೊಗ್ಗ – 174
  • ಬಳ್ಳಾರಿ – 178
  • ಹುಬ್ಬಳ್ಳಿ- 153
  • ಉಡುಪಿ –181
  • ವಿಜಯಪುರ –144

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಅಮೆರಿಕದ ಹಾಕಿ ಕ್ರೀಡಾಂಗಣದಲ್ಲಿ ಗುಂಡಿನ ದಾಳಿ, ಮೂವರು ಸಾವು – Kannada News | Gunfire Erupts at Rhode Island Hockey Game, in US Three Dead

ವಾಷಿಂಗ್ಟನ್, ಫೆಬ್ರವರಿ 17: ಅಮೆರಿಕದ ರೋಡ್ ಐಲೆಂಡ್ ರಾಜ್ಯದ ಹಾಕಿ ಕ್ರೀಡಾಂಗಣದಲ್ಲಿ ನಡೆದ ಗುಂಡಿನ ದಾಳಿಯು ಆ ಪ್ರದೇಶದಲ್ಲಿ ಭೀತಿಯನ್ನು ಸೃಷ್ಟಿಸಿದೆ.ಗುಂಡಿನ ದಾಳಿಯಲ್ಲಿ ಶಂಕಿತ ದಾಳಿಕೋರ ಸೇರಿದಂತೆ ಮೂವರು ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆ. ಸತ್ತವರಲ್ಲಿ ಒಬ್ಬ ಯುವತಿಯೂ ಸೇರಿದ್ದಾರೆ ಎಂದು ಸಿಎನ್‌ಎನ್ ವರದಿ ಮಾಡಿದೆ. ಘಟನೆಯ ನಂತರ ದಾಳಿಕೋರನು ತನ್ನನ್ನು ತಾನೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ ಎಂದು ಕಾನೂನು ಜಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ಗುಂಡು ಹಾರಿಸಿದ ವ್ಯಕ್ತಿ ತನ್ನ ಕುಟುಂಬದ ಸದಸ್ಯರನ್ನೇ ಗುರಿಯಾಗಿಸಿಕೊಂಡಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪಾವ್‌ಟಕೆಟ್‌ನ ಡೆನ್ನಿಸ್ ಎಂ. ಲಿಂಚ್ ಅರೆನಾದಲ್ಲಿ ಈ ಘಟನೆ ನಡೆದಿದ್ದು, ಅಲ್ಲಿ ಎರಡು ಪ್ರೌಢಶಾಲಾ ತಂಡಗಳ ನಡುವೆ ಹಾಕಿ ಪಂದ್ಯ ನಡೆಯುತ್ತಿತ್ತು. ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಆಲಿಯಾ ಭಟ್ ಧರಿಸಿದ ಬಟ್ಟೆ ಮಾಡಲು ಬೇಕಾಯ್ತು 2 ತಿಂಗಳು – Kannada News | Alia Bhatt’s Rahul Mishra Couture: 1370 Hours of Craftsmanship and Eco Message

ಆಲಿಯಾ ಭಟ್ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ತಮ್ಮ ಉಡುಪುಗಳ ಮೂಲಕ ಯಾವಾಗಲೂ ಗಮನ ಸೆಳೆಯುತ್ತಾರೆ. ಈಗ ಅವರ ಉಡುಪೊಂದು ಗಮನ ಸೆಳೆದಿದೆ. ಝೆಂಡಾಯಾ ಮತ್ತು ಗಿಗಿ ಹಡಿದ್ ಅವರಂತಹ ಅಂತರರಾಷ್ಟ್ರೀಯ ನಟಿಯರಿಂದ ಮೆಚ್ಚುಗೆ ಪಡೆದ ಪ್ರಸಿದ್ಧ ವಿನ್ಯಾಸಕ ವಿನ್ಯಾಸಗೊಳಿಸಿದ್ದಾರೆ.ರಾಹುಲ್ ಮಿಶ್ರಾ ವಿನ್ಯಾಸಗೊಳಿಸಿದ ಈ ಅದ್ಭುತ ಉಡುಪಿನ ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ವಿನ್ಯಾಸಕ ರಾಹುಲ್ ಮಿಶ್ರಾ ಈ ಉಡುಪನ್ನು ನೋಯ್ಡಾದಲ್ಲಿರುವ ತಮ್ಮ ಅಟೆಲಿಯರ್‌ನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿದ್ದಾರೆ. ಇದನ್ನು ತಯಾರಿಸಲು 1,370 ಗಂಟೆಗಳು ಬೇಕಾಯಿತು. ಅಂದರೆ ಕುಶಲಕರ್ಮಿಗಳು ಸುಮಾರು ಎರಡು ತಿಂಗಳುಗಳ ಕಾಲ ಇದರ ಮೇಲೆ ಕೆಲಸ ಮಾಡಿದರು. ಗಾಜಿನ ಮಣಿಗಳು, ಸ್ಫಟಿಕ ಮಣಿಗಳು ದಾರದ ಕಸೂತಿಯನ್ನು ಇದರಲ್ಲಿ ಬಳಸಲಾಗಿತ್ತು. ಆಲಿಯಾ ಸ್ಪ್ರಿಂಗ್ 2025 ಕೌಚರ್ ಸಂಗ್ರಹದ ‘ಸಿಟಿಸ್ಕೇಪ್’ ಸಾಲಿನಿಂದ ಈ ತುಣುಕನ್ನು ಆರಿಸಿಕೊಂಡರು. ರಾಹುಲ್ ಮಿಶ್ರಾ ಈ ಸಂಗ್ರಹಕ್ಕೆ ‘ದಿ ಪೇಲ್ ಬ್ಲೂ ಡಾಟ್’ ಎಂದು ಹೆಸರಿಸಿದ್ದಾರೆ.

ಸೌಂದರ್ಯದ ದೃಷ್ಟಿಯಿಂದ ಮಾತ್ರವಲ್ಲ, ಇಂದಿನ ನಗರಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯ ಮತ್ತು ಮಾನವ ನಿರ್ಮಿತ ಹವಾಮಾನ ಬದಲಾವಣೆಯ ಬಗ್ಗೆ ಜಾಗೃತಿ ಮೂಡಿಸಲು ಸಹ ವಿನ್ಯಾಸಗೊಳಿಸಲಾಗಿದೆ ಎಂಬುದು ವಿಶೇಷ. ಆಲಿಯಾ ಭಟ್ ಈ ಗೌನ್‌ಗೆ ವಜ್ರದ ಹಾರ ಮತ್ತು ಅದಕ್ಕೆ ಹೊಂದಿಕೆಯಾಗುವ ಕಿವಿಯೋಲೆಗಳನ್ನು ಜೋಡಿಸಿದ್ದರು.

ರಾಹುಲ್ ಮಿಶ್ರಾ ಅವರ ವಿನ್ಯಾಸಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಕ್ರೇಜ್ ಅನ್ನು ಹೊಂದಿವೆ. ಹಿಂದೆ, ಝೆಂಡ್ಯಾ, ಸೆಲೆನಾ ಗೊಮೆಜ್ ಮತ್ತು ಗಿಗಿ ಹಡಿದ್ ಅವರಂತಹ ಹಾಲಿವುಡ್ ಸೆಲೆಬ್ರಿಟಿಗಳು ಸಹ ಅವರ ಬಟ್ಟೆಗಳಲ್ಲಿ ಮಿಂಚಿದ್ದರು. ಇದು ಅವರ ಉಡುಪಿನ ಮೇಲಿನ ಅದ್ಭುತ ಕರಕುಶಲತೆಯನ್ನು ಎತ್ತಿ ತೋರಿಸಿತು. ಕಲಾವಿದರ ಕಠಿಣ ಪರಿಶ್ರಮ ಮತ್ತು ವಿನ್ಯಾಸಕರ ಚಿಂತನೆಯನ್ನು ಪ್ರತಿಬಿಂಬಿಸುವ ಈ ‘ಸಿಟಿಸ್ಕೇಪ್’ ಗೌನ್‌ನಲ್ಲಿ ಆಲಿಯಾ ದೇವತೆಯಂತೆ ಮಿಂಚಿದರು.

ಇದನ್ನೂ ಓದಿ: ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಮಾಡುತ್ತಾರಂತೆ ಆಲಿಯಾ ಭಟ್

ಆಲಿಯಾ ಭಟ್ ಅವರು ಸದ್ಯ ‘ಆಲ್ಫಾ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಗಮನ ಸೆಳೆಯುವ ರೀತಿಯಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version