ಆಪರೇಷನ್ ಸಿಂಧೂರ್ ವೇಳೆ ಸೈನಿಕರಿಗೆ ನೀರು, ಟೀ, ಲಸ್ಸಿ ನೀಡಿದ್ದ 10 ವರ್ಷದ ಬಾಲಕನ ದೇಶಭಕ್ತಿಗೆ ವಿಶೇಷ ಪುರಸ್ಕಾರ – Kannada News | Armys youngest civil warrior Shravan Singh Honoured With Pradhan Mantri Bal Puraskar

ನವದೆಹಲಿ, ಡಿಸೆಂಬರ್ 26: ಪಂಜಾಬ್​ನ ಫಿರೋಜ್‌ಪುರದ ಚಕ್ ತರಣ್ ವಾಲಿ ಗ್ರಾಮದ 10 ವರ್ಷದ ಶ್ರವಣ್ ಸಿಂಗ್ (Shravan Singh) ಆಪರೇಷನ್ ಸಿಂಧೂರ್ ಸಮಯದಲ್ಲಿ ಹೆಚ್ಚಿನ ಅಪಾಯದ ಗಡಿ ಪೋಸ್ಟ್‌ಗಳಲ್ಲಿ ಸೇವಾ ನಿರತರಾಗಿದ್ದ ಸೈನಿಕರಿಗೆ ಚಹಾ, ಲಸ್ಸಿ, ನೀರು ನೀಡುವ ಮೂಲಕ ಅವರ ದಾಹ ನೀಗಿಸುತ್ತಿದ್ದ. ಭಾರತ ಮತ್ತು ಪಾಕಿಸ್ತಾನದ ನಡುವೆ ಗಡಿಯಲ್ಲಿ ದಾಳಿ ನಡೆಯುತ್ತಿದ್ದುದರಿಂದ ಅದು ಅಪಾಯದ ಸ್ಥಳವಾಗಿದ್ದರೂ ಶ್ರವಣ್ ನಿಸ್ವಾರ್ಥವಾಗಿ ಭಾರತೀಯ ಸೇನಾ ಸಿಬ್ಬಂದಿಗೆ ನೀರು, ಹಾಲು ಮತ್ತು ಚಹಾವನ್ನು ನೀಡುತ್ತಿದ್ದ. ಆ ಸಮಯದಲ್ಲಿ ದೊಡ್ಡವರು ಕೂಡ ಮನೆಯಿಂದ ಹೊರಬರಲು ಹೆದರುತ್ತಿದ್ದರು. ಹೀಗಾಗಿ, ಆ ಬಾಲಕನ ಧೈರ್ಯ ಮತ್ತು ದೇಶಭಕ್ತಿಯನ್ನು ಮೆಚ್ಚಿ ಆತನಿಗೆ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ನೀಡಲಾಗಿದೆ.

10 ವರ್ಷದ ಶ್ರವಣ್ ಸಿಂಗ್ ಪಂಜಾಬ್​ನ ಸರ್ಕಾರಿ ಶಾಲೆಯಲ್ಲಿ 5ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಪ್ರದೇಶಗಳಲ್ಲಿ ನಿಯೋಜಿಸಲಾದ ಭಾರತದ ಸೇನಾ ಸಿಬ್ಬಂದಿಗೆ ನೀರು, ಚಹಾ, ಹಾಲು, ಲಸ್ಸಿ ಮತ್ತು ಐಸ್ ಒದಗಿಸಿ ತಮ್ಮ ದೇಶಭಕ್ತಿ ಪ್ರದರ್ಶಿಸಿದ್ದ. ಅಂತಹ ಅಪಾಯಕಾರಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈನಿಕರಿಗೆ ಆ ಹುಡುಗ ಸಹಾಯ ಮಾಡಿದ್ದ. ಅಷ್ಟೇ ಅಲ್ಲದೆ, ಆ ಸೈನಿಕರಿಗೆ ಉಳಿದುಕೊಳ್ಳಲು ತನ್ನ ಮನೆಯಲ್ಲಿ ಜಾಗ ನೀಡಲು ಆತ ತನ್ನ ಅಪ್ಪನನ್ನು ಒಪ್ಪಿಸಿದ್ದ. ಹೀಗಾಗಿ, ಸೇನೆಯಿಂದ ಆ ಬಾಲಕನಿಗೆ ವಿಶೇಷ ಉಡುಗೊರೆಗಳನ್ನು ಸಹ ನೀಡಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND-W vs SL-W: ಸತತ 3ನೇ ಪಂದ್ಯದಲ್ಲಿ ಟಾಸ್ ಗೆದ್ದ ಹರ್ಮನ್‌ಪ್ರೀತ್; ಭಾರತ ತಂಡದಲ್ಲಿ 2 ಬದಲಾವಣೆ – Kannada News | India Women vs Sri Lanka Women 3rd T20: IND W Aims to Seal Series, Playing XI and Toss

ಭಾರತ ಮತ್ತು ಶ್ರೀಲಂಕಾ (India Women vs Sri Lanka Women) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. ಉಭಯ ತಂಡಗಳ ನಡುವಿನ ಈ ಸರಣಿಯಲ್ಲಿ ಆತಿಥೇಯ ಟೀಂ ಇಂಡಿಯಾ 2-0 ಅಂತರದ ಮುನ್ನಡೆ ಸಾಧಿಸಿದ್ದು, ಇದೀಗ ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಇನ್ನೇರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳಲು ನೋಡುತ್ತಿದೆ. ಇತ್ತ ಮೊದಲೆರಡು ಪಂದ್ಯಗಳಲ್ಲಿ ಏಕಪಕ್ಷೀಯ ಸೋಲು ಅನುಭವಿಸಿದ್ದ ಶ್ರೀಲಂಕಾ ತಂಡ, ಈ ಪಂದ್ಯವನ್ನು ಗೆದ್ದು ಸರಣಿಯನ್ನು ಜೀವಂತವಾಗಿರಿಸಲು ನೋಡುತ್ತಿದೆ.

ಟಾಸ್ ಗೆದ್ದ ಟೀಂ ಇಂಡಿಯಾ

ಏಕದಿನ ವಿಶ್ವಕಪ್​ಗೂ ಮುನ್ನ ಸತತ ಟಾಸ್ ಸೋತು, ಟಾಸ್ ಸೋಲುವುದನ್ನೇ ಕಾಯಕ ಮಾಡಿಕೊಂಡಿದ್ದ ಟೀಂ ಇಂಡಿಯಾ ನಾಯಕಿ ಹರ್ಮನ್​ಪ್ರೀತ್​ ಕೌರ್​ ಅವರ ಲಕ್ ಬದಲಾಗಿದೆ. ಶ್ರೀಲಂಕಾ ವಿರುದ್ಧದ ಈ ಸರಣಿಯ ಮೊದಲ 3 ಪಂದ್ಯಗಳಲ್ಲೂ ಹರ್ಮನ್ ಟಾಸ್ ಗೆದ್ದಿದ್ದಾರೆ. ಅಂದರೆ ಈ ಪಂದ್ಯದಲ್ಲೂ ಟಾಸ್ ಗೆದ್ದಿರುವ ಟೀಂ ಇಂಡಿಯ ನಾಯಕಿ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಲಂಕಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.

ತಂಡದಲ್ಲಿ 2 ಬದಲಾವಣೆ

ಟಾಸ್ ಗೆದ್ದ ಬಳಿಕ ಮಾತನಾಡಿದ ನಾಯಕಿ ಹರ್ಮನ್‌ಪ್ರೀತ್ ಕೌರ್ ಭಾರತದ ಪ್ಲೇಯಿಂಗ್ 11 ರಲ್ಲಿ ಎರಡು ಬದಲಾವಣೆಗಳನ್ನು ಮಾಡಿರುವುದಾಗಿ ತಿಳಿಸಿದ್ದಾರೆ. ಆ ಪ್ರಕಾರ, ಸ್ನೇಹ್ ರಾಣಾ ಮತ್ತು ಅರುಂಧತಿ ರೆಡ್ಡಿ ಬದಲಿಗೆ ರೇಣುಕಾ ಠಾಕೂರ್ ಮತ್ತು ದೀಪ್ತಿ ಶರ್ಮಾ ತಂಡಕ್ಕೆ ಮರಳಿದ್ದಾರೆ. ಏತನ್ಮಧ್ಯೆ, ಶ್ರೀಲಂಕಾದ ನಾಯಕಿ ಚಾಮರಿಅಟಾಪಟ್ಟು ಕೂಡ ಪ್ಲೇಯಿಂಗ್ 11 ರಲ್ಲಿ ಮೂರು ಬದಲಾವಣೆಗಳನ್ನು ಮಾಡಿರುವುದಾಗಿ ತಿಳಿಸಿದ್ದಾರೆ.

ಉಭಯ ತಂಡಗಳು

ಶ್ರೀಲಂಕಾ ತಂಡ: ಚಾಮರಿ ಅಟಾಪಟು (ನಾಯಕಿ), ಹಾಸಿನಿ ಪೆರೇರಾ, ಹರ್ಷಿತಾ ಸಮರವಿಕ್ರಮ, ಕವಿಶಾ ದಿಲ್ಹಾರಿ, ನೀಲಾಕ್ಷಿಕಾ ಸಿಲ್ವಾ, ಇಮೇಶಾ ದುಲಾನಿ, ಕೌಶಿನಿ ನುತ್ಯಂಗನಾ, ಮಲ್ಶಾ ಶೆಹಾನಿ, ಇನೋಕಾ ರಣವೀರ, ಮಲ್ಕಿ ಮಾದರ, ಮತ್ತು ನಿಮಾಶಾ ಮೀಪಗೆ.

ಭಾರತ ತಂಡ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್, ದೀಪ್ತಿ ಶರ್ಮಾ, ಅಮನ್‌ಜೋತ್ ಕೌರ್, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ರೇಣುಕಾ ಸಿಂಗ್ ಠಾಕೂರ್ ಮತ್ತು ಶ್ರೀ ಚರಣಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:41 pm, Fri, 26 December 25

Source link

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು – Kannada News | Bigg Boss Kannada: Raghu became emotion after seeing his family

ಬಿಗ್​​ಬಾಸ್ (Bigg Boss) ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ. ಸ್ಪರ್ಧಿಗಳ ಮನೆ ಸದಸ್ಯರುಗಳು ಒಬ್ಬೊಬ್ಬರಾಗಿ ಬಿಗ್​​ಬಾಸ್ ಮನೆಗೆ ಬರುತ್ತಿದ್ದಾರೆ. ಬಹುತೇಕ ಎಲ್ಲ ಸ್ಪರ್ಧಿಗಳ ಮನೆಯವರು ಸಹ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ರಘು ಅವರ ಕುಟುಂಬದವರು ಸಹ ಮನೆಗೆ ಬಂದಿದ್ದಾರೆ. ರಘು, ಬಿಗ್​​ಬಾಸ್ ಮನೆಯ ಟಫ್ ಮ್ಯಾನ್. ಭಾರಿ ದೈತ್ಯ ದೇಹಿ, ಟಾಸ್ಕ್​​ಗಳಲ್ಲಿಯೂ ಸಖತ್ ಮುಂದೆ, ಅಡುಗೆ ಮಾಡುವುದಕ್ಕೂ ಸೈ, ಕೆಲಸ ಮಾಡುವುದಕ್ಕೂ ಸೈ. ಟಫ್ ಸ್ಪರ್ಧಿ ಎನಿಸಿಕೊಂಡಿದ್ದರೂ ಸಹ ಮನೆಯವರನ್ನು ನೋಡಿದ ಕೂಡಲೇ ಕಣ್ಣೀರು ಹಾಕಿದ್ದಾರೆ ರಘು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ತಮ್ಮ ಹೆಸರು ಬದಲಿಸಿದ್ದೇಕೆ ಅಕ್ಷಯ್ ಕುಮಾರ್? ಕಾರಣ ವಿವರಿಸಿದ ನಟ – Kannada News | Why Akshay Kumar changed his name from Rajiv to Akshay

ಅಕ್ಷಯ್ ಕುಮಾರ್ (Akshay Kumar) ಬಾಲಿವುಡ್​ನ ಸ್ಟಾರ್ ನಟರುಗಳಲ್ಲಿ ಒಬ್ಬರು. ಈಗಲೂ ಅತ್ಯಂತ ಬ್ಯುಸಿ ಸ್ಟಾರ್ ನಟರೆಂದರು ಅದು ಅಕ್ಷಯ್ ಕುಮಾರ್. ವರ್ಷಕ್ಕೆ ಐದು ಆರು ಸಿನಿಮಾಗಳಲ್ಲಿ ಅವರು ನಟಿಸುತ್ತಾರೆ. ಇತ್ತೀಚೆಗೆ ಅಕ್ಷಯ್ ಕುಮಾರ್ ಅವರಿಗೆ ದೊಡ್ಡ ಯಶಸ್ಸು ದೊರೆತಿಲ್ಲವಾದರೂ ಅವರಿಗೆ ಬೇಡಿಕೆ ಏನೂ ಕಡಿಮೆ ಆಗಿಲ್ಲ. ಯಾವುದೇ ಗಾಡ್​ಫಾದರ್​​ಗಳಿಲ್ಲದೆ ಚಿತ್ರರಂಗಕ್ಕೆ ಬಂದ ಅಕ್ಷಯ್ ಕುಮಾರ್, ಸ್ಟಾರ್ ನಟರಾಗಿ ಬೆಳೆದು ನಿಂತಿದ್ದಾರೆ. ಅಂದಹಾಗೆ ಅಕ್ಷಯ್ ಕುಮಾರ್ ಅವರ ನಿಜ ಹೆಸರು ಅದಲ್ಲ ಬದಲಿಗೆ ಅವರ ಹೆಸರು ರಾಜೀವ್ ಎಂದಾಗಿತ್ತು. ಆದರೆ ಅದು ಬದಲಾಗಿದ್ದು ಹೇಗೆ ಗೊತ್ತೆ?

ಬಹುತೇಕರಿಗೆ ಗೊತ್ತಿರುವಂತೆ ಅಕ್ಷಯ್ ಕುಮಾರ್ ಅವರು ಮಾರ್ಷಲ್ ಆರ್ಟ್ಸ್ ಟೀಚರ್ ಆಗಿದ್ದರು. ಸಮರ ಕಲೆಗಳ ಬಗ್ಗೆ ವಿಪರೀತ ಆಸಕ್ತಿ ಇದ್ದ ಅಕ್ಷಯ್, ವಿದ್ಯಾರ್ಥಿಗಳಿಗೆ ಸಮರ ಕಲೆಗಳನ್ನು ಕಲಿಸುತ್ತಿದ್ದರು. ಆಗ ಅವರ ಹೆಸರು ರಾಜೀವ್ ಹರಿ ಓಂ ಭಾಟಿಯಾ ಎಂದಾಗಿತ್ತು. ಅಕ್ಷಯ್ ಅವರಿಗೆ ಒಂದು ಹಿಂದಿ ಸಿನಿಮಾನಲ್ಲಿ ನಟಿಸುವ ಅವಕಾಶ ದೊರೆತಿತು, ಅದು ಬಹಳ ಸಣ್ಣ ಪಾತ್ರ. ಸಿನಿಮಾನಲ್ಲಿ ನಾಯಕಿಗೆ ಅಕ್ಷಯ್ ಸಮರ ಕಲೆ ಕಲಿಸಬೇಕಿತ್ತು.

ಇದನ್ನೂ ಓದಿ:‘ಇದು ಸಮಾಜಕ್ಕೂ ಅಪಾಯಕಾರಿ’; ಅಕ್ಷಯ್ ಕುಮಾರ್ ವಿಡಿಯೋ ಬಗ್ಗೆ ಕೋರ್ಟ್ ಕಳವಳ

ಅದಾಗಲೇ ಸಿನಿಮಾಕ್ಕೆ ಬರುವ ಮನಸ್ಸು ಮಾಡಿದ್ದ ಅಕ್ಷಯ್ ಅವರು ಪಾತ್ರದಲ್ಲಿ ನಟಿಸಲು ಒಪ್ಪಿಕೊಂಡರು. ಬರೋಬ್ಬರಿ ಎಂಟು ಸೆಕೆಂಡುಗಳಷ್ಟೆ ಅವರು ತೆರೆ ಮೇಲೆ ಕಾಣಿಸಿಕೊಳ್ಳುವ ಪಾತ್ರ ಅದು. ಸಿನಿಮಾದ ಹೆಸರು ‘ಆಜ್’. ಮಹೇಶ್ ಭಟ್ ಅವರು ಆ ಸಿನಿಮಾದ ನಿರ್ದೇಶಕ. ಸಿನಿಮಾದ ನಾಯಕನ ಪಾತ್ರದಲ್ಲಿ ನಟಿಸಿದ್ದು ಆಗಿನ ಸ್ಟಾರ್ ನಟರಲ್ಲಿ ಒಬ್ಬರಾದ ಕುಮಾರ್ ಗೌರವ್. ಆ ಸಿನಿಮಾನಲ್ಲಿ ನಾಯಕನ ಪಾತ್ರ ಹೆಸರು ಅಕ್ಷಯ್ ಎಂದಿತ್ತು.

ಅಕ್ಷಯ್ ಅವರಿಗೆ ಕುಮಾರ್ ಗೌರವ್ ಮೇಲೆ ಅಭಿಮಾನ ಇತ್ತು. ‘ನನಗೆ ಸಿನಿಮಾನಲ್ಲಿ ಬರುವ ಆಸೆ ಇದೆ, ನಾನು ನಟಿಸಿದ ಮೊದಲ ಸಿನಿಮಾನಲ್ಲಿ ನಾಯಕನ ಹೆಸರು ಅಕ್ಷಯ್ ಹಾಗಾಗಿ ನಾನು ಅದೇ ಹೆಸರು ಇಟ್ಟುಕೊಳ್ಳುತ್ತೇನೆ ಎಂದುಕೊಂಡು ತಮ್ಮ ಹೆಸರನ್ನು ತಾವೇ ಅಕ್ಷಯ್ ಎಂದು ಬದಲಾಯಿಸಿಕೊಂಡರಂತೆ ಅಕ್ಷಯ್ ಕುಮಾರ್.

ಅಕ್ಷಯ್ ಕುಮಾರ್ ಪ್ರಸ್ತುತ ‘ವೆಲ್​​ಕಮ್​ ಟು ಜಂಗಲ್’, ‘ಭೂತ್ ಬಂಗ್ಲಾ’, ‘ಹೈವಾನ್’, ‘ಜಾಲಿ ಎಲ್​​ಎಲ್​​ಬಿ 4’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಕೆಲ ಸಿನಿಮಾಗಳ ನಿರ್ಮಾಣವನ್ನೂ ಮಾಡುತ್ತಿದ್ದಾರೆ. ಒಂದು ರಿಯಾಲಿಟಿ ಶೋ ಸಹ ನಡೆಸಿಕೊಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪುರುಷರು ರಾತ್ರಿ ಮಲಗುವ ಮುನ್ನ ಕಡ್ಡಾಯವಾಗಿ 2 ಹುರಿದ ಖರ್ಜೂರ ಸೇವನೆ ಮಾಡಬೇಕು ಯಾಕೆ ಗೊತ್ತಾ? – Kannada News | Health Benefits of Dates: What Experts Say

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅದಕ್ಕಾಗಿಯೇ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಅದಲ್ಲದೆ ಈ ಸಮಯದಲ್ಲಿ, ಆಹಾರ ಪದ್ಧತಿಯೂ ಬದಲಾಗುವುದರಿಂದ ಈ ಋತುವಿನಲ್ಲಿ ದೇಹದ ಆರೋಗ್ಯ ಕಾಪಾಡಿಕೊಳ್ಳಲು ಒಣ ಹಣ್ಣುಗಳ ಸೇವನೆ ಮಾಡುವುದು ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾದದ್ದು ಖರ್ಜೂರ (Dates). ಇದನ್ನು ಹುರಿದು ಸೇವನೆ ಮಾಡುವುದರಿಂದ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಆಯುರ್ವೇದದಲ್ಲಿಯೂ ಇದನ್ನು ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಹಾಗಾದರೆ ಹುರಿದ ಖರ್ಜೂರ ಸೇವನೆ ಮಾಡುವುದರಿಂದ ಯಾವ ರೀತಿಯ ಪ್ರಯೋಜನಗಳು ಸಿಗುತ್ತದೆ, ಇದನ್ನು ಯಾವ ಸಮಯದಲ್ಲಿ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ದೆಹಲಿಯ ಆಯುರ್ವೇದ ತಜ್ಞ ಡಾ. ಚಂಚಲ್ ಶರ್ಮಾ ಅವರು ಹೇಳುವ ಪ್ರಕಾರ, ಸಾಮಾನ್ಯವಾಗಿ ಹುರಿದ ಖರ್ಜೂರವು ದೇಹವನ್ನು ಬೆಚ್ಚಗಿಡಲು ಸಹಾಯ ಮಾಡುತ್ತದೆ. ಅದರಲ್ಲಿಯೂ ಈ ರೀತಿಯ ಪೌಷ್ಟಿಕಾಂಶಯುಕ್ತ ಆಹಾರವನ್ನು ಸೇವಿಸಿದಾಗ, ನಿಮ್ಮ ಫಲವತ್ತತೆ ಸುಧಾರಿಸುತ್ತದೆ ಮತ್ತು ಹಾರ್ಮೋನುಗಳು ಸಮತೋಲನದಲ್ಲಿರುತ್ತವೆ. ಖರ್ಜೂರವು ಕಬ್ಬಿಣ ಮತ್ತು ಖನಿಜಗಳಂತಹ ವಿವಿಧ ಪೋಷಕಾಂಶಗಳನ್ನು ಹೊಂದಿರುವುದರಿಂದ ದೇಹದಲ್ಲಿ ಹಾರ್ಮೋನ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ಇವುಗಳ ಸೇವನೆ ಮಹಿಳೆಯರಿಗೂ ಪ್ರಯೋಜನಕಾರಿಯಾಗಿದೆ, ಏಕೆಂದರೆ ಇದರ ಸೇವನೆ ಅಂಡೋತ್ಪತ್ತಿಗೆ ಸಹಾಯ ಮಾಡುವ ಮೂಲಕ ಗರ್ಭಧಾರಣೆಯನ್ನು ಸುಲಭಗೊಳಿಸುತ್ತದೆ.

ಇದನ್ನೂ ಓದಿ: ಚಳಿಗಾಲದಲ್ಲೇಕೆ ಖರ್ಜೂರವನ್ನು ಹೆಚ್ಚೆಚ್ಚು ಸೇವನೆ ಮಾಡಬೇಕು? ಇದರ ಹಿಂದಿದೆ ಮಹತ್ವದ ಕಾರಣ

ಪುರುಷರ ಫಲವತ್ತತೆಯನ್ನು ಸುಧಾರಿಸುತ್ತದೆ

ಡಾ. ಚಂಚಲ್ ಅವರು ಹೇಳುವ ಪ್ರಕಾರ ಹುರಿದ ಖರ್ಜೂರವನ್ನು ತಿನ್ನುವುದರಿಂದ ಪುರುಷರ ಫಲವತ್ತತೆ ಸುಧಾರಿಸುತ್ತದೆ. ಇದು ವೀರ್ಯದ ಗುಣಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಬಂಜೆತನದ ಅಪಾಯವನ್ನು ಕಡಿಮೆ ಮಾಡುತ್ತದೆ. ದೇಹವು ರಾತ್ರಿಯಲ್ಲಿ ತನ್ನನ್ನು ತಾನೇ ಸರಿಪಡಿಸಿಕೊಳ್ಳುವುದರಿಂದ ರಾತ್ರಿ ಮಲಗುವ ಮೊದಲು ಹುರಿದ ಖರ್ಜೂರವನ್ನು ತಿನ್ನಬೇಕು. ಮಲಗುವ ಮೊದಲು ನೀವು ಇವುಗಳನ್ನು ಸ್ವಲ್ಪ ಬೆಚ್ಚಗಿನ ಹಾಲಿನೊಂದಿಗೆ ಅಥವಾ ಹುರಿದು ಆ ಬಳಿಕ ಸೇವನೆ ಮಾಡಬಹುದು.

ಯಾರಿಗೆ ಒಳ್ಳೆಯದಲ್ಲ?

ಹೊಟ್ಟೆ ನೋವು, ಪಿತ್ತಜನಕಾಂಗದ ಕಾಯಿಲೆ ಅಥವಾ ಅನಿಯಂತ್ರಿತ ಮಧುಮೇಹ ಇರುವವರು ಹುರಿದ ಖರ್ಜೂರವನ್ನು ತಿನ್ನಬಾರದು ಎಂದು ಡಾ. ಚಂಚಲ್ ಹೇಳುತ್ತಾರೆ. ಏಕೆಂದರೆ ಅದು ಅವರ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸಬಹುದು. ಈ ಯಾವುದೇ ಸಮಸ್ಯೆಗಳು ಇಲ್ಲದಿದ್ದರೆ ಮಾತ್ರ ನೀವು ಹುರಿದ ಖರ್ಜೂರವನ್ನು ತಿನ್ನಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೇಶಿ ಟೂರ್ನಿಯಲ್ಲಿ ದೇವದತ್ ಪಡಿಕ್ಕಲ್ ಅಬ್ಬರ; ಭಾರತ ತಂಡಕ್ಕೆ ಆಯ್ಕೆ ಯಾವಾಗ? – Kannada News | Devdutt Padikkal’s Vijay Hazare Century Spree: Is an India Call Up Next?

ಕಳೆದ ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡಿದ್ದ ಕೆಲವೇ ಕೆಲವು ಇನ್ನಿಂಗ್ಸ್​ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕನ್ನಡಿಗ ದೇವದತ್ ಪಡಿಕ್ಕಲ್‌, ಇದೀಗ ದೇಶಿ ಅಂಗಳದಲ್ಲಿ ಶತಕಗಳ ಮಳೆ ಸುರಿಸುತ್ತಿದ್ದಾರೆ. ವಿಜಯ್ ಹಜಾರೆ ಟ್ರೋಫಿಯ ಮೊದಲ ಪಂದ್ಯದಲ್ಲಿ 147 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದ ಪಡಿಕ್ಕಲ್, ಕರ್ನಾಟಕ ತಂಡ ದಾಖಲೆಯ ಮೊತ್ತವನ್ನು ಬೆನ್ನಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇದೀಗ ಈ ಟೂರ್ನಿಯ ಎರಡನೇ ಪಂದ್ಯದಲ್ಲೂ ಮಿಂಚಿರುವ ದೇವದತ್ ಸತತ ಎರಡನೇ ಶತಕ ಸಿಡಿಸಿದ್ದಾರೆ. ಜಾರ್ಖಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಕೇವಲ 118 ಎಸೆತಗಳಲ್ಲಿ 147 ರನ್ ಬಾರಿಸಿದ್ದ ಪಡಿಕ್ಕಲ್ ಇದೀಗ ಕೇರಳ ವಿರುದ್ಧದ ಪಂದ್ಯದಲ್ಲಿ 116 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಕೇರಳ ವಿರುದ್ಧದ ಈ ಪಂದ್ಯದಲ್ಲಿ 137 ಎಸೆತಗಳನ್ನು ಎದುರಿಸಿದ ಪಡಿಕ್ಕಲ್ 3 ಸಿಕ್ಸರ್‌ಗಳು ಮತ್ತು 12 ಬೌಂಡರಿಗಳ ಸಹಿತ 124 ರನ್ ಬಾರಿಸಿದ್ದಾರೆ.

ದೇವದತ್ ಪಡಿಕ್ಕಲ್ ಇಷ್ಟೊಂದು ಉತ್ತಮ ಫಾರ್ಮ್‌ನಲ್ಲಿರುವುದು ಇದೇ ಮೊದಲಲ್ಲ. ಈ ಎಡಗೈ ಬ್ಯಾಟ್ಸ್‌ಮನ್ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಭಾರತದ ಅತ್ಯುತ್ತಮ ಬ್ಯಾಟ್ಸ್‌ಮನ್ ಎಂಬುದನ್ನು ಅವರ ಅಂಕಿ ಅಂಶಗಳೇ ಹೇಳುತ್ತವೆ. ಪಡಿಕ್ಕಲ್ ಕೇವಲ 34 ಇನ್ನಿಂಗ್ಸ್‌ಗಳಲ್ಲಿ 11 ಶತಕಗಳು ಮತ್ತು 12 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಇದರರ್ಥ ಅವರು ಬಹುತೇಕ ಎಲ್ಲಾ ಪಂದ್ಯಗಳಲ್ಲಿ ಶತಕ ಅಥವಾ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ.

ಲಿಸ್ಟ್ ಎ ಕ್ರಿಕೆಟ್​ನಲ್ಲಿ 34 ಇನ್ನಿಂಗ್ಸ್‌ಗಳನ್ನಾಡಿರುವ ಪಡಿಕ್ಕಲ್ 82 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 2342 ರನ್ ಗಳಿಸಿದ್ದಾರೆ. ಪಡಿಕ್ಕಲ್ ಅವರ ಸ್ಟ್ರೈಕ್ ರೇಟ್ ಕೂಡ 92 ಕ್ಕಿಂತ ಹೆಚ್ಚಾಗಿದೆ. ಈ ರೀತಿಯ ಅಂಕಿಅಂಶಗಳ ಹೊರತಾಗಿಯೂ, ಪಡಿಕ್ಕಲ್‌ಗೆ ಟೀಂ ಇಂಡಿಯಾ ಏಕದಿನ ತಂಡದಲ್ಲಿ ಆಡುವ ಅವಕಾಶ ಸಿಕ್ಕಿಲ್ಲ.

ಪಡಿಕ್ಕಲ್‌ ಇಲ್ಲಿಯವರೆಗೆ ಭಾರತ ತಂಡದ ಪರ ಎರಡು ಟೆಸ್ಟ್ ಮತ್ತು ಎರಡು ಟಿ20 ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್‌ನಲ್ಲಿ ಒಂದು ಅರ್ಧಶತಕ ಸೇರಿದಂತೆ 30 ಸರಾಸರಿಯಲ್ಲಿ 90 ರನ್ ಗಳಿಸಿರುವ ಪಡಿಕ್ಕಲ್ ಟಿ20ಯಲ್ಲಿ 19 ರ ಸರಾಸರಿಯಲ್ಲಿ 38 ರನ್ ಗಳಿಸಿದ್ದಾರೆ. ಆದಾಗ್ಯೂ ಪಡಿಕ್ಕಲ್ ಅವರಿಗೆ ಇನ್ನೂ ಪೂರ್ಣ ಅವಕಾಶ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ.

2025 ರ ವರ್ಷ ದೇವದತ್ ಪಡಿಕ್ಕಲ್ ಅವರಿಗೆ ವಿಶೇಷವಾಗಿತ್ತು. ಕಳೆದ ಆವೃತ್ತಿಯ ವಿಜಯ್ ಹಜಾರೆ ಟ್ರೋಫಿಯ ಕ್ವಾರ್ಟರ್-ಫೈನಲ್ ಮತ್ತು ಸೆಮಿಫೈನಲ್‌ಗಳಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿದ್ದ ಪಡಿಕ್ಕಲ್, ಸೈಯದ್ ಮುಷ್ತಾಕ್ ಟ್ರೋಫಿಯಲ್ಲಿ 309 ರನ್ ಬಾರಿಸಿದ್ದರು, ಈಗ ವಿಜಯ್ ಹಜಾರೆ ಟ್ರೋಫಿಯಲ್ಲಿ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಭೀತುಪಡಿಸಿರುವ ಪಡಿಕ್ಕಲ್​ಗೆ ಭಾರತ ತಂಡದಲ್ಲಿ ಯಾವಾಗ ಅವಕಾಶ ಸಿಗಲಿದೆ ಎಂಬುದು ಅಭಿಮಾನಿಗಳ ಪ್ರಶ್ನೆಯಾಗಿದೆ.

Published On – 6:20 pm, Fri, 26 December 25

Source link

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ, ಕಾರ್ಯಕರ್ತರಿಂದ ನ್ಯಾಯಾಲಯದೆದುರು ಪ್ರತಿಭಟನೆ – Kannada News | Unnao case survivor family and activists protest at court police ask them to leave

ನವದೆಹಲಿ, ಡಿಸೆಂಬರ್ 26: ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಕುಲದೀಪ್ ಸಿಂಗ್ ಸೆಂಗಾರ್ (Kuldeep Singh Sengar) ಅವರ ಶಿಕ್ಷೆಯನ್ನು ಅಮಾನತುಗೊಳಿಸಿದ ನ್ಯಾಯಾಲಯದ ಆದೇಶವನ್ನು ಪ್ರತಿಭಟಿಸಲು ಇಂದು ದೆಹಲಿ ಹೈಕೋರ್ಟ್ ಹೊರಗೆ ಹಲವಾರು ಮಹಿಳಾ ಹಕ್ಕುಗಳ ಕಾರ್ಯಕರ್ತರು ಮತ್ತು ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಜಮಾಯಿಸಿತ್ತು. ತಕ್ಷಣ ಅವರನ್ನು ಆ ಸ್ಥಳದಿಂದ ಆಚೆ ಹೋಗುವಂತೆ ಪೊಲೀಸರು ಎಚ್ಚರಿಕೆ ನೀಡಿದರು.

ದೆಹಲಿ ಹೈಕೋರ್ಟ್ ಹೊರಗೆ ಪ್ರತಿಭಟನಾಕಾರರನ್ನು ಪ್ರತಿಭಟನೆ ನಡೆಸದಂತೆ ತಡೆಯಲಾಯಿತು. ಇದರಿಂದ ನ್ಯಾಯಾಲಯದ ಭದ್ರತೆಯೊಂದಿಗೆ ಕೆಲಕಾಲ ಪ್ರತಿಭಟನಾಕಾರರು ಮಾತಿನ ಚಕಮಕಿ ನಡೆಸಿದರು. ನ್ಯಾಯಾಲಯದ ಗೇಟ್‌ನಲ್ಲಿ ಪ್ರತಿಭಟನೆಗಳಿಗೆ ಅವಕಾಶವಿಲ್ಲ ಎಂದು ಭದ್ರತಾ ಸಿಬ್ಬಂದಿ ಅವರಿಗೆ ತಿಳಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಾವಿನಲ್ಲೂ ಒಂದಾದ ಜೀವದ ಗೆಳತಿಯರು: ಸುಟ್ಟು ಕರಕಲಾದ ನವ್ಯ-ಮಾನಸಳ ಗೆಳೆತನ ಬಿಚ್ಚಿಟ್ಟು ಕಣ್ಣೀರಿಟ್ಟ ತಂದೆ – Kannada News | Chitradurga Bus Accident: father Manjappa reveals Hassan Navya And Manasa Friendship

ಹಾಸನ, (ಡಿಸೆಂಬರ್ 26): ಚಿತ್ರದುರ್ಗ (Chitradruga) ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ (Bus Incident)  ಒಟ್ಟು 7 ಮಂದಿ ಪ್ರಾಣ ಕಳೆದುಕೊಂಡಿದ್ದು, ಸದಾ ಜೊತೆಯಲ್ಲೇ ಇರುತ್ತಿದ್ದ ಹಾಸನದ (Hassan) ಚನ್ನರಾಯಪಟ್ಟಣ ಮೂಲದ ನವ್ಯ ಹಾಗೂ ಮಾನಸ ಸಹ ಸುಟ್ಟು ಕರಕಲಾಗಿದ್ದಾರೆ. ಇದರೊಂದಿಗೆ ಕುಚಿಕು ಗೆಳೆಯರು ಸಾವಿನಲ್ಲೂ ಜೊತೆಯಾಗಿದ್ದಾರೆ. ಇನ್ನು ಮೃತ ಮಗಳು ನವ್ಯ ತಂದೆ ಮಂಜಪ್ಪ ಮಾತನಾಡಿ, ನಿನ್ನೆ ಬೆಳಿಗ್ಗೆ7 ಗಂಟೆಗೆ ನಮಗೆ ವಿಷಯ ತಿಳಿಯಿತು ಅವರು ಮಾನಸ, ನವ್ಯ, ಮಿಲನ ಮೂರು ಜನರು ಹೋಗಿದ್ರು. ಅದರಲ್ಲಿ ಮಿಲನ ಬದುಕಿದ್ದರಿಂದ ನಮಗೆ ಫೋನ್ ಮಾಡಿ ಹೇಳಿದರು. ಹೋಗಿ ನೋಡಿದಾಗ ನಮ್ಮ ಮಗಳು ಹಾಗೂ ಮಾನಸ ಸಂಪೂರ್ಣ ಸುಟ್ಟು ಹೋಗಿದ್ದರು. ನಮ್ಮ ಮಗಳು ಕೂತಿದ್ದ ಸೀಟ್ ಸಮೀಪಕ್ಕೇ ಲಾರಿ ಡಿಕ್ಕಿಯಾಗಿದೆ. ಅವರು ಅದರೊಳಗೇ ಜ್ಞಾನ ತಪ್ಪಿದಾರೆ. ಹಾಗಾಗಿ ಅಲ್ಲೇ ಸುಟ್ಟು ಹೋಗಿದಾರೆ. ಮೃತದೇಹ ಕಂಡು ಹಿಡಿಯಲು ಆಗದ ರೀತಿ ಆಗಿತ್ತು ಎಂದು ಬಿಕ್ಕಿ ಬಿಕ್ಕಿ ಹತ್ತರು.

ನವ್ಯ-ಮಾನಸದ ಸ್ನೇಹ ಹೇಗಿತ್ತು?

ಇನ್ನು ಮಂಜಪ್ಪ ಅವರು ನವ್ಯ ಹಾಗೂ ಮಾನಸ ಸ್ನೇಹದ ಬಗ್ಗೆ ಎಳೆ ಎಳೆಯಾಗಿ ಬಿಟ್ಟಿದ್ದಾರೆ. ಮಾನಸ ಹಾಗೂ ನವ್ಯ ಒಂದೇ ರೀತಿಯ ಬಟ್ಟೆ ತೆಗೆದುಕೊಳ್ಳುತ್ತಿದ್ದರು. ಒಂದೇ‌ ರೀತಿಯ ಜ್ಯುವೆಲರಿ ಹಾಕಿಕೊಳ್ಳುತ್ತಿದ್ದರು. ಇಬ್ಬರು ಓದಿದ್ದು ಒಂದೇ ಕಾಲೇಜು. ಒಟ್ಟಿಗೆ ಒಂದೇ ಕಡೆ ಕೆಲಸ ಮಾಡುತಿದ್ದರು. ಒಂದೇ ತಟ್ಟೆಯಲ್ಲಿ ಅನ್ನ ತಿನ್ನೋರು. ಎಲ್ಲಿಗೆ ಹೋಗಲಿ ಊರಿಗೆ ಬರಲಿ ಒಟ್ಟಿಗೆ ಓಡಾಡೋರು. ಅವರಿಬ್ಬರು ಒಟ್ಟಿಗೆ ಇದ್ದದ್ದು ನಮಗೂ ಧೈರ್ಯ ಇತ್ತು. ಆದರೆ ದೇವರು ಈ ರೀತಿ ಅನ್ಯಾಯ ಮಾಡಿಬಿಟ್ಟ. ಎರಡು ವರ್ಷದಿಂದ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ಇದ್ದರು. ಜೊತೆಯಲ್ಲೆ ಇದ್ದರು ಈ ಜೊತೆಯಾಗೆ ನಮ್ಮನ್ನ ಬಿಟ್ಟು ಹೋದ್ರು ಎಂದು ಕಣ್ಣೀರಿಟ್ಟರು.

ಇದನ್ನೂ ನೋಡಿ: ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ನವ್ಯಳ ಮದ್ವೆ ಫಿಕ್ಸ್ ಆಗಿತ್ತು


ಚಿತ್ರದುರ್ಗ ಪೊಲೀಸರು ತುಂಬಾ ಸಹಾಯ ಮಾಡಿದ್ರು. ಘಟನೆ ಸಂಭವಿಸುವ ಮುನ್ನ ರಾತ್ರಿ 8 ಗಂಟೆಗೆ ಬಸ್ ಹತ್ತಿದಾಗ ಅರ್ಧ ಗಂಟೆ ಮಾತಾಡಿದ್ದಳು.ಆದ್ರೆ, ಬೆಳಿಗ್ಗೆ ಫೋನ್ ಮಾಡಿದ್ರೆ ಸ್ಚಿಚ್ ಆಫ್ ಆಗಿತ್ತು. ಏಪ್ರಿಲ್ 28-29ಕ್ಕೆ ನವ್ಯಳ ಮದುವೆ ನಿಶ್ಚಯ ಮಾಡಿದ್ದು, ಎಲ್ಲಾ ತಯಾರಿ ಮಾಡಿದ್ದೆವು. ಮಂಟಪ ಸಹ ಬುಕ್ ಮಾಡಲಾಗಿತ್ತಿ. ಅಲ್ಲದೇ ಜನವರಿ 25ಕ್ಕೆ ಬೆಂಗಳೂರಿನಲ್ಲಿ ಎಂಗೇಜ್ಮೆಂಟ್ ಕೂಡ ಮಾಡಬೇಕಿತ್ತು ಸರ್ ಎಂದು ಮಗಳನ್ನು ನೆನೆದು ಗೋಳಾಡಿದರು.

ಕುಚಿಕು ಗೆಳೆಯರನ್ನು ಗುರುತಿಸಲು ಡಿಎನ್​ಎ ಟೆಸ್ಟ್

ನವ್ಯ ಹಾಗೂ ಮಾನಸ ಅವರ ಶವಗಳನ್ನು ಗುರುತು ಹಿಡಿಯಲು ಇಬ್ಬರ ತಂದೆ – ತಾಯಿಯನ್ನು ಕರೆಯಿಸಿದ್ದರೂ ಸಾಧ್ಯವಾಗಿಲ್ಲ.  ಕತ್ತಿನಲ್ಲಿದ್ದ ಚೈನ್ ಮೂಲಕ ಪತ್ತೆ ಮಾಡಲು ಮುಂದಾಗಿದ್ದರು . ಆದ್ರೆ, ಇಬ್ಬರೂ ಕುಚಿಕು ಸ್ನೇಹಿತರಾಗಿದ್ದರಿಂದ ಪರಸ್ಪರ ಎಕ್ಸ್​ಚೇಂಜ್ ಮಾಡಿಕೊಳ್ಳುತ್ತಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಹೀಗಾಗಿ ಪತ್ತೆ ಮಾಡಲು ಗೊಂದಲ ಸೃಷ್ಟಿ ಆಗಿದೆ.  ಹಾಗಾಗಿ,  ಅಂತಿಮವಾಗಿ ಇವರಿಬ್ಬರ ಅಸ್ಥಿಪಂಜರದ ಮೂಳೆಗಳನ್ನು ಅವರ ಸಂಬಂಧಿಕರ ರಕ್ತದ ಸ್ಯಾಂಪಲ್ ನಿಂದ ಡಿಎನ್ ಎ ಟೆಸ್ಟ್ ಮಾಡಿಸಲು ಪೊಲೀಸರು ನಿರ್ಧರಿಸಿದ್ದಾರೆ. ಡಿಎನ್ ಎ ಟೆಸ್ಟ್ ನಿಂದ ಈ ಎರಡು ಅಸ್ಥಿಪಂಜರಗಳಲ್ಲಿ ಯಾರು ನವ್ಯಾ, ಯಾರು ಮಾನಸ ಎಂಬುದು ತಿಳಿದುಬರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕಠಿಣ ಶಿಕ್ಷೆಯಾಗಲಿ; ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ಅಲ್ಪಸಂಖ್ಯಾತರ ಹಿಂಸಾಚಾರಕ್ಕೆ ಭಾರತ ಖಂಡನೆ – Kannada News | India condemns Hindu man lynching and violence against minorities in Bangladesh

ಢಾಕಾ, ಡಿಸೆಂಬರ್ 26: ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಇಬ್ಬರು ಹಿಂದೂ ಪುರುಷರ ಹತ್ಯೆಯ ಘಟನೆಗಳನ್ನು ಭಾರತ ಇಂದು ತೀವ್ರವಾಗಿ ಖಂಡಿಸಿದೆ. ಇತ್ತೀಚಿನ ಹತ್ಯೆಯಿಂದ ಭಾರತ ವಿಚಲಿತವಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಇದರ ಜವಾಬ್ದಾರಿಯುತರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಅವರು ಒತ್ತಿ ಹೇಳಿದ್ದಾರೆ. “ಬಾಂಗ್ಲಾದೇಶದಲ್ಲಿ (Bangladesh) ಅಲ್ಪಸಂಖ್ಯಾತರ ವಿರುದ್ಧ ನಿರಂತರ ದ್ವೇಷವು ಬಹಳ ಕಳವಳಕಾರಿ ವಿಷಯವಾಗಿದೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಹಿಂದೂ ಯುವಕನ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಈ ಹತ್ಯೆಯ ಅಪರಾಧಿಗಳ ಸಾವಿಗೆ ನ್ಯಾಯ ದೊರಕುತ್ತದೆ ಎಂದು ನಿರೀಕ್ಷಿಸುತ್ತೇವೆ” ಎಂದು ಜೈಸ್ವಾಲ್ ಹೇಳಿದ್ದಾರೆ.

ಅಲ್ಪಸಂಖ್ಯಾತರ ಮೇಲಿನ ದಾಳಿಗಳ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ. ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರ ವಿರುದ್ಧ ಸುಮಾರು 2,900 ಹಿಂಸಾಚಾರ ಘಟನೆಗಳು ನಡೆದಿವೆ. ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಭೀಕರ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಬಾಂಗ್ಲಾದೇಶ ಹೊರಡಿಸಿದ ಸುಳ್ಳು ನಿರೂಪಣೆಯನ್ನು ತಿರಸ್ಕರಿಸಿ ನಾವು ಈ ಹಿಂದೆಯೂ ಹೇಳಿಕೆಗಳನ್ನು ನೀಡಿದ್ದೇವೆ” ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಇದು ಬಾಂಗ್ಲಾದೇಶದ 2ನೇ ವಿಮೋಚನೆ: 2024ರ ದಂಗೆಯನ್ನು ಹೊಗಳಿದ ಬಿಎನ್​ಪಿ ನಾಯಕ ತಾರಿಖ್ ರಹಮಾನ್

ಈ ತಿಂಗಳು ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯನ್ನು ಗುಂಪೊಂದು ಥಳಿಸಿ ಕೊಂದ ಎರಡು ಪ್ರತ್ಯೇಕ ಘಟನೆಗಳು ನಡೆದಿತ್ತು. ಬುಧವಾರ ತಡರಾತ್ರಿ ರಾಜ್‌ಬರಿ ಜಿಲ್ಲೆಯಲ್ಲಿ ಹಿಂದೂ ವ್ಯಕ್ತಿಯನ್ನು ಗುಂಪೊಂದು ಹೊಡೆದು ಕೊಂದಿತು. ಅಧಿಕಾರಿಗಳ ಪ್ರಕಾರ, ಈ ಹಿಂಸಾಚಾರವು ಸುಲಿಗೆಗೆ ಸಂಬಂಧಿಸಿದ ಚಟುವಟಿಕೆಗಳಿಂದ ಹುಟ್ಟಿಕೊಂಡಿದೆ ಎಂದು ಆರೋಪಿಸಲಾಗಿದೆ. ಭಾರತ ಬಾಂಗ್ಲಾದೇಶದಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್, ಆಧಾರರಹಿತ ಧರ್ಮನಿಂದನೆಯ ಆರೋಪದ ಮೇಲೆ ಗುಂಪೊಂದು ಥಳಿಸಿ, ಬೆಂಕಿ ಹಚ್ಚಿ, ಹಿಂದೂ ವ್ಯಕ್ತಿ ದೀಪು ಚಂದ್ರ ದಾಸ್ ಅವರನ್ನು ಹತ್ಯೆ ಮಾಡಲಾಗಿತ್ತು. ಆದರೆ, ಈ ಹತ್ಯೆಯನ್ನು ಖಂಡಿಸಿದ ಭಾರತ ಈ ಕೃತ್ಯದ ಅಪರಾಧಿಗಳಿಗೆ ನ್ಯಾಯ ನೀಡಲಾಗುವುದು ಎಂದು ಜೈಸ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: Bomb Attack: ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ; ಬಾಂಬ್ ದಾಳಿಗೆ ಒಬ್ಬ ಬಲಿ

“ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ನಿರಂತರ ದ್ವೇಷವು ಬಹಳ ಕಳವಳಕಾರಿ ವಿಷಯವಾಗಿದೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಹಿಂದೂ ಯುವಕನ ಹತ್ಯೆಯನ್ನು ನಾವು ಖಂಡಿಸುತ್ತೇವೆ” ಎಂದು ಅವರು ಉಲ್ಲೇಖಿಸಿದ್ದಾರೆ.

“ಬಾಂಗ್ಲಾದೇಶದ ಜನರೊಂದಿಗೆ ನಮ್ಮ ಸಂಬಂಧಗಳನ್ನು ಬಲಪಡಿಸಲು ಭಾರತವು ಬದ್ಧವಾಗಿದೆ. ನಾವು ಬಾಂಗ್ಲಾದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಬೆಂಬಲಿಸುತ್ತೇವೆ. ಬಾಂಗ್ಲಾದೇಶದಲ್ಲಿ ಮುಕ್ತ, ನ್ಯಾಯಯುತ, ಎಲ್ಲರನ್ನೂ ಒಳಗೊಂಡ ಮತ್ತು ಭಾಗವಹಿಸುವ ಚುನಾವಣೆಗಳಿಗೆ ನಿರಂತರವಾಗಿ ಕರೆ ನೀಡುತ್ತಿದ್ದೇವೆ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹನುಮಂತನಿಗೆ ಪೂಜೆ ಮಾಡಲು ಕಿತ್ತಾಟ: 3 ಕೇಸ್​ ಬುಕ್, ವಿವಾದದ ಕೇಂದ್ರ ಬಿಂದುವಾದ ಅಂಜನಾದ್ರಿ – Kannada News | Koppal: Anjanadri Temple Dispute: Priests Clash Over Puja Rights

ಕೊಪ್ಪಳ, ಡಿಸೆಂಬರ್​ 26: ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ (Anjanadri Betta). ಅದು ಹನುಮ ಹುಟ್ಟಿದ ಸ್ಥಳ. ಈ ಕ್ಷೇತ್ರಕ್ಕೆ ದೇಶ-ವಿದೇಶದಿಂದ ಭಕ್ತರು ಬರುತ್ತಾರೆ. 575 ಮೆಟ್ಟಿಲೇರಿ ಹನುಮನ ದರ್ಶನ ಪಡೆದು ಪುನೀತರಾಗುತ್ತಾರೆ. ಇದೇ ಹನುಮ ಹುಟ್ಟಿದ ನಾಡು ಇದೀಗ ವಿವಾದದ ಕೇಂದ್ರ ಬಿಂದುವಾಗಿದೆ. ಸ್ವಾಮೀಜಿಗಳಿಬ್ಬರು ಗರ್ಭಗುಡಿಯಲ್ಲಿಯೇ ಜಗಳ ಮಾಡಿಕೊಂಡಿದ್ದಾರೆ. ಖಾವಿಧಾರಿಗಳು ಬಾಯಲ್ಲಿ ಕೀಳುಮಟ್ಟದ ಪದ ಪ್ರಯೋಗವಾಗಿದೆ. ಸದ್ಯ ಪ್ರಕರಣ ಗಂಭೀರವಾಗಿದ್ದು, ಎರಡು ದಿನದ ಅವಧಿಯಲ್ಲಿ ಮೂರು ಕೇಸ್ ದಾಖಲಾಗಿವೆ.

ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ಅರ್ಚಕರ ಗಲಾಟೆ

ಈ ಅಂಜನಾದ್ರಿ ಪರ್ವತದಲ್ಲಿ ಹನುಮ ಹುಟ್ಟಿದ ಎನ್ನುವ ಪ್ರತೀತಿ ಇದೆ. ಇದೇ ಅಂಜನಾದ್ರಿ ಕಳೆದ ನಾಲ್ಕು ದಿನಗಳಿಂದ ಸಾಕಷ್ಟು ಸುದ್ದಿಯಲ್ಲಿದೆ. ಅದಕ್ಕೆ ಕಾರಣ ಸ್ವಾಮೀಜಿಗಳಿಬ್ಬರ ನಡುವಿನ ಗಲಾಟೆ. ಕಳೆದ ನಾಲ್ಕು ದಿನಗಳ ಹಿಂದೆ ಹನುನ ಹುಟ್ಟಿದ ಜಾಗದಲ್ಲಿ ಅರ್ಚಕ ಮಾಹಂತ ವಿದ್ಯಾದಾಸ್ ಬಾಬಾ ಹಾಗೂ ಹಂಪಿಯ ಗೋವಿಂದಾನಂದ ಸರಸ್ವತಿ ಮಧ್ಯೆ ಪೂಜಾ ವಿಚಾರಕ್ಕೆ ಗಲಾಟೆಯಾಗಿತ್ತು. ಮಾತಿಗೆ ಮಾತು ಬೆಳದಿತ್ತು. ಒಂದು ಹಂತಕ್ಕೆ ಕೈಕೈ ಮಿಲಾಯಿಸುವ ಹಂತಕ್ಕೂ ಹೋಗಿತ್ತು.

ಇದನ್ನೂ ಓದಿ: ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್

ಯಾವಾಗ ಅಂಜನಾದ್ರಿಯಲ್ಲಿ ಗಲಾಟೆಯಾಯಿತೋ ಗೋವಿಂದಾನಂದ ಸರಸ್ವತಿ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಗೆ ವಿದ್ಯಾದಾಸ್ ಬಾಬಾ ಸೇರಿ 10 ಜನರ ವಿರುದ್ದ ದೂರು ನೀಡಿದ್ದರು. ಇತ್ತ ವಿದ್ಯಾದಾಸ್ ಬಾಬಾ ಕೂಡ ಆನಲೈನ್​ನಲ್ಲಿ ದೂರು ದಾಖಲಿಸಿದ್ದರು. ಆದರೆ ಅದು ಅಧಿಕೃತವಾಗಿಲ್ಲ, ಈ ಮಧ್ಯೆ ಮರುದಿನ ಮತ್ತೆ ಪಂಚನಾಮೆಗೆ ಬಂದಾಗ ವಿದ್ಯಾದಾಸ್ ಬಾಬಾ ಬೆಂಬಲಿಗರು, ಗೋವಿಂದಾನಂದ ಸರಸ್ವತಿ ಮೇಲೆ ಹಲ್ಲೆ ಮಾಡಿದ್ದಾರೆ. ತಲೆಗೆ ಹೊಡೆದು ಕಬ್ಬಿಣದ ಪೈಪ್​ನಿಂದ ಹಲ್ಲೆಗೆ ಮುಂದಾಗಿದ್ದರು. ಈ ವಿಡಿಯೋ ವೈರಲ್​ ಆಗುತ್ತಿದ್ದಂತೆ, ಗಂಗಾವತಿ ಗ್ರಾಮೀಣ ಪೊಲೀಸರು ಹಲ್ಲೆಗೆ ಮುಂದಾಗಿದ್ದ ಐವರನ್ನು ಅರೆಸ್ಟ್ ಮಾಡಿದ್ದಾರೆ.  ವಿದ್ಯಾದಾಸ್ ಬಾಬಾ ವಿರುದ್ದ ಗೋವಿಂದಾನಂದ ಸರಸ್ವತಿ ಗ್ರಾಮೀಣ ಠಾಣೆಯಲ್ಲಿ ಮತ್ತೊಂದು ದೂರು ದಾಖಲು ಮಾಡಿದ್ದಾರೆ.

ಅರ್ಚಕ ವಿದ್ಯಾದಾಸ್ ಬಾಬಾ ವಿರುದ್ಧ ಮೂರು ಕೇಸ್

ಇನ್ನು ಪಂಚನಾಮೆಗೆ ಹೋದ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮಾಡಿದ ಆರೋಪದಡಿ ಪೊಲೀಸರು ವಿದ್ಯಾದಾಸ್ ಬಾಬಾ ವಿರುದ್ದ ಸ್ವಯಂ ಪ್ರೇರಿತ ದೂರು ದಾಖಲು ಮಾಡಿದ್ದಾರೆ. ಎರಡು ದಿನದ ಅವಧಿಯಲ್ಲಿ ಒಟ್ಟು ಮೂರು ಕೇಸ್ ದಾಖಲಾಗಿವೆ. ಅರ್ಚಕ ವಿದ್ಯಾದಾಸ್ ಬಾಬಾ ವಿರುದ್ಧ ಮೂರು ಕೇಸ್ ದಾಖಲಾಗಿವೆ.

ಇನ್ನು ಅರ್ಚಕ ಮಹಾಂತ ವಿದ್ಯಾದಾಸ್ ಬಾಬಾ ವಿರುದ್ದ ಎರಡು ದಿನದ ಅವಧಿಯಲ್ಲಿ ಮೂರು ಕೇಸ್ ದಾಖಲಾಗಿದ್ದು, ಪೊಲೀಸರ ನಡೆ ಮೇಲೆ ಅನುಮಾನ ಮೂಡಿದೆ. ಇದುವರೆಗೂ ಅರ್ಚಕ ವಿದ್ಯಾದಾಸ್ ಬಾಬಾ ನೀಡಿದ ದೂರು ದಾಖಲಾಗಿಲ್ಲ, ಆದರೆ ಅಂದು ಗೋವಿಂದಾನಂದ ಸರಸ್ವತಿ ನೀಡಿದ ದೂರು ದಾಖಲಾಗಿದೆ. ಹೀಗಾಗಿ ಈ ಪ್ರಕರಣದ ಹಿಂದೆ ಏನೋ ಇದೆ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಇನ್ನು ಅದಕ್ಕೆ ಕೋರ್ಟ್ ಕೇಸ್​​ವೊಂದು ಕಾರಣವಾಯಿತಾ ಎನ್ನುವ ಅನುಮಾನವು ವ್ಯಕ್ತವಾಗುತ್ತಿದೆ.

ಕಳೆದ 2018ರಿಂದ ಅರ್ಚಕ ವಿಚಾರವಾಗಿ ಜಿಲ್ಲಾಡಳಿತ ಹಾಗೂ ವಿದ್ಯಾದಾಸ್ ಬಾಬಾ ನಡುವೆ ವ್ಯಾಜ್ಯ ಇದೆ. ಧಾರವಾಡ ಹೈಕೋರ್ಟ್​ನಲ್ಲಿ ಕೇಸ್ ನಡೆಯುತ್ತಿದೆ. ಇದೀಗ ಆ ಕೇಸ್ ಅಂತಿಮ ಹಂತಕ್ಕೆ ಬಂದು ನಿಂತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಅಂಜನಾದ್ರಿಯಲ್ಲಿ ಯಾರು ಪೂಜೆ ಮಾಡಬೇಕು ಎನ್ನುವುದು ಇತ್ಯರ್ಥವಾಗಲಿದೆ. ಆದರೆ, ಮುಂಚೆ ಈ ಘಟನೆಗಳು ನಡೆದಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಬೇಕು ಅಂತಲೇ ಕಾಣದ ಕೈಗಳು ವಿವಾದ ಸೃಷ್ಟಿ ಮಾಡತಿದೆಯಾ ಅನ್ನೋ ಅನುಮಾನ ಇದೆ. ಇದೇ ಗೋಂವಿದಾನಂದ ಸರಸ್ವತಿ ಕಿಷ್ಕಿಂಧಾ ಪ್ರದೇಶದಲ್ಲಿ ಬೃಹತ್ ಆಂಜನೇಯನ ಮೂರ್ತಿ ಸ್ಥಾಪನೆ ಮಾಡುವುದಾಗಿ ಹೇಳಿಕೊಂಡು ಓಡಾಡಿದ್ದಾರೆ. ಇಷ್ಟು ದಿನ ಬರಲಾರದ ಗೋವಿಂದಾನಂದ ಸರಸ್ವತಿ ಶ್ರೀ ದಿಢೀರ್ ಪ್ರತ್ಯಕ್ಷವಾಗಿದ್ದು ಏಕೆ ಅನ್ನೋ ಅನುಮಾನ ಹುಟ್ಟಿಕೊಂಡಿದೆ.

ಇದನ್ನೂ ಓದಿ: Koppal: ಹನುಮ‌ಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಅಣಿಯಾದ ಅಂಜನಾದ್ರಿ; ಸಿದ್ಧತೆ ಹೇಗಿದೆ?

ಒಟ್ಟಾರೆ ಅಂಜನಾದ್ರಿಯಲ್ಲಿ ತೀರ್ಪು ಬರುವ ಕೆಲವೇ ದಿನಗಳ ಮುಂಚೆ ವಿವಾದ ಸೃಷ್ಟಿಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಜಿಲ್ಲಾಡಳಿತ ಇದುವರೆಗೂ ಅಂಜನಾದ್ರಿ ವಿಚಾರವಾಗಿ ಯಾವುದೇ ಮಾಹಿತಿ ನೀಡಿಲ್ಲ. ಮೂರು ಕೇಸ್​ ದಾಖಲಾದ ಹಿನ್ನಲೆ ಅರ್ಚಕ ವಿದ್ಯಾದಾಸ್ ಬಾಬಾ ಸದ್ಯ ಅಂಜನಾದ್ರಿಯನ್ನು ತೊರೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 5:02 pm, Fri, 26 December 25

Source link

Exit mobile version