Horoscope Today 27 December: ಇಂದು ಈ ರಾಶಿಗೆ ಅಪರೂಪದ ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ – Kannada News | Horoscope Today in Kannada on 27 December Satursday; Dina Bhavishya Tithi Panchanga Details here

ಮೇಷ ರಾಶಿ: ಕಲೆ ನಿಮ್ಮ ಮನಸ್ಸನ್ನು ಆಳವಾಗಿ ಸ್ಪರ್ಶಿಸುತ್ತದೆ. ಪ್ರತಿಭೆ ಭಾವನಾತ್ಮಕವಾಗಿ ವ್ಯಕ್ತವಾಗುತ್ತದೆ. ಕಾಮಗಾರಿ ಏರಳಿತಗಳಿಲ್ಲದೇ ಶಾಂತವಾಗಿ ಸಾಗುತ್ತದೆ. ನೀವು ಎಲ್ಲ ಕಾರ್ಯವನ್ನೂ ಅಚ್ಚುಕಟ್ಟಾಗಿ ಮಾಡಲು ಬಯಸುವಿರಿ. ಶತ್ರುಗಳ ಕಾಟವು ಆಕಸ್ಮಿಕವಾಗಿ ಕಡಿಮೆ ಆಗಲಿದೆ. ನಿಮ್ಮ ಊಹೆಗಳು ಎಲ್ಲವೂ ವಾಸ್ತವಕ್ಕೆ ದೂರವಾದುದಾಗಿದೆ. ಸಂಗಾತಿಯ ಮಾತುಗಳು ನಿಮಗೆ ಖುಷಿ ಕೊಟ್ಟೀತು. ಬಂಧುಗಳ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ. ನಿಮಗೆ ಅರ್ಥವಾಗದ ವಿಚಾರವನ್ನು ಬೇರೆಯವರ‌ ಕಡೆಯಿಂದ ಪಡೆಕೊಳ್ಳುವಿರಿ. ನಿಮ್ಮ‌ ಪ್ರಯಾಣದಲ್ಲಿ ಅಡೆತಡೆಗಳು ಉಂಟಾಗಬಹುದು. ಯೋಜನೆಗೆ ಪ್ರಾಯೋಗಿಕ ದೃಷ್ಟಿ ಬೇಕು….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 27ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ದಿನದ ಆರಂಭದಲ್ಲೇ ಮನೆಯ ಹಿರಿಯರಿಂದ ಆಸ್ತಿ ಅಥವಾ ವಿಲ್‌ಗೆ ಸಂಬಂಧಿಸಿದ ಮಹತ್ವದ ದಾಖಲೆ- ಪತ್ರಗಳ ಬಗ್ಗೆ ಚರ್ಚೆ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಇಷ್ಟು ಸಮಯ ಇದ್ದಂಥ ಒತ್ತಡ- ಗೊಂದಲಗಳು ದೂರವಾಗುತ್ತದೆ. ಸೌರಶಕ್ತಿ (Solar) ಅಥವಾ ಕೃಷಿ ಉಪಕರಣಗಳ ವ್ಯವಹಾರದಲ್ಲಿ ತೊಡಗಿಕೊಂಡವರಿಗೆ ಸರ್ಕಾರದಿಂದ ದೊಡ್ಡ ಮಟ್ಟದ ಸಬ್ಸಿಡಿ ಅಥವಾ ಆರ್ಡರ್ ದೊರೆಯಲಿದೆ. ವಾರಾಂತ್ಯದ ನಿಮಿತ್ತ ದೂರದ ಊರಿನ ದೇವಸ್ಥಾನಗಳಿಗೆ…

Read More

ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್​​​​: ಏಕಾಏಕಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಬಹಿರಂಗ – Kannada News | Twist in Chitradurga Bus Accident: Oil Box Discovery Raises Questions After Fire

ಚಿತ್ರದುರ್ಗ, ಡಿ.26: ಚಿತ್ರದುರ್ಗ ಬಸ್ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದ ಸೀಬರ್ಡ್ ಖಾಸಗಿ ಬಸ್​​​ವೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಬೆಂಕಿ ಅನಾಹುತ ಸಂಭವಿಸಿತ್ತು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪ ನಡೆದ ಈ ದುರ್ಘಟನೆಯಲ್ಲಿ, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ತನಿಖೆಯ ವೇಳೆ, ಅಪಘಾತಕ್ಕೀಡಾದ ಬಸ್‌ನೊಳಗೆ ರಾಶಿ ರಾಶಿ ಆಯಿಲ್ ಬಾಕ್ಸ್‌ಗಳು ಪತ್ತೆಯಾಗಿರುವುದು ಹೊಸ ತಿರುವನ್ನು ನೀಡಿದೆ. ಈ ಆಯಿಲ್ ಬಾಕ್ಸ್‌ಗಳ ಉಪಸ್ಥಿತಿಯು ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಮತ್ತು…

Read More

Snow Removal Job: ಈ ದೇಶದಲ್ಲಿ ಹಿಮ ತೆಗೆಯುವ ಕೆಲಸಗಾಗರಿಗೆ ಸಿಗುತ್ತೆ ಲಕ್ಷಗಳಲ್ಲಿ ಸಂಬಳ! – Kannada News | Canada Snow Removal Jobs: Earn Lakhs! High Salary and Benefits Explained

ಹಿಮ ತೆಗೆಯುವ ಕೆಲಸ ಅಂದರೆ, ಹಿಮದಿಂದ ಆವೃತವಾಗಿರುವ ರಸ್ತೆ, ಮನೆಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಹಿಮದಿಂದ ಮುಕ್ತಗೊಳಿಸುವುದು. ಕೆನಡಾದಲ್ಲಿ ಈ ಕೆಲಸಕ್ಕೆ ಚಳಿಗಾಲದಲ್ಲಿ ಭಾರೀ ಬೇಡಿಕೆಯಿದೆ. ಕೆನಡಾದ ದೈನಂದಿನ ಜೀವನ ಮತ್ತು ಆರ್ಥಿಕತೆಯನ್ನು ನಡೆಸುವಲ್ಲಿ ಹಿಮ ತೆಗೆಯುವ ಕಾರ್ಮಿಕರು ಪ್ರಮುಖ ಪಾತ್ರ ವಹಿಸುತ್ತಾರೆ. ಅದಕ್ಕಾಗಿಯೇ ಸರ್ಕಾರ ಮತ್ತು ಖಾಸಗಿ ಕಂಪನಿಗಳು ಈ ಕೆಲಸಕ್ಕೆ ವಿಶೇಷ ಗಮನ ನೀಡುತ್ತವೆ. ಹಿಮ ತೆಗೆಯುವ ಕೆಲಸ ಉದ್ಯೋಗಿಗಳಿಗೆ ಉತ್ತಮ ಸಂಬಳ ನೀಡುವುದರ ಜೊತೆಗೆ ವಿವಿಧ ಪ್ರಯೋಜನಗಳನ್ನು ನೀಡುತ್ತವೆ. ಯಾವ ಪ್ರದೇಶಗಳಿಗೆ ಹೆಚ್ಚಿನ…

Read More

Belagavi: ಮರ್ಡರ್​​ ಕೇಸ್​​ ತನಿಖೆ ವೇಳೆ ಖಾಕಿಗೇ ಶಾಕ್​​; ಬಯಲಾಗಿದ್ದು ಎರಡು ಪ್ರಕರಣ! – Kannada News | Belagavi Murder Probe Shocks Police, Two Cases Uncovered, Killer Confesse

ಬೆಳಗಾವಿ, ಡಿಸೆಂಬರ್​​ 27: ಗೋಕಾಕ್ ತಾಲೂಕಿನ ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆಯಾದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ ಪತ್ತೆ ಪ್ರಕಣ ತನಿಖೆ ವೇಳೆ ಪೊಲೀಸರೇ ದಂಗಾಗಿದ್ದಾರೆ. ಅಕ್ರಮ ಸಂಬಂಧದ ಕಾರಣಕ್ಕೆ ವ್ಯಕ್ತಿ ಕೊಲೆಯಾಗಿರೋದು ಗೊತ್ತಾಗಿದ್ದರೆ, ಆರೋಪಿ ಈ ಹಿಂದೆ ಮತ್ತೊಂದು ಮರ್ಡರ್​​ ಮಾಡಿ ಎಸ್ಕೇಪ್​​ ಆಗಿದ್ದ ಎಂಬುದೂ ಬಯಲಾಗಿದೆ. ಅಕ್ಟೋಬರ್ 22ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆ ಮಾಡಿದ ರೀತಿಯಲ್ಲಿ ವ್ಯಕ್ತಿಯೋರ್ವರ ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತನ…

Read More

ಟಾಂಗ್ ಕೊಟ್ಟರೂ ಸಹ ಧನ್ವೀರ್ ಬಗ್ಗೆ ಪ್ರೀತಿಯ ಮಾತಾಡಿದ ಕಿಚ್ಚ – Kannada News | Sudeep talks lovingly about Dhanveer Gowda despite he tried to insult him

ಸುದೀಪ್ (Sudeep) ಒಳ್ಳೆಯ ನಟ ಮಾತ್ರವಲ್ಲ, ಜವಾಬ್ದಾರಿಯುತ, ಸೆನ್ಸಿಬಲ್ ವ್ಯಕ್ತಿ ಸಹ ಹೌದು. ಇತ್ತೀಚೆಗೆ ಪೈರಸಿ ಬಗ್ಗೆ ಸುದೀಪ್ ಆಡಿದ ಮಾತು ವಿವಾದಕ್ಕೆ ಕಾರಣವಾಗಿತ್ತು. ಆ ವಿವಾದಕ್ಕೆ ತುಪ್ಪ ಸುರಿದು ಬೆಂಕಿಯನ್ನು ಕಾಡ್ಗಿಚ್ಚು ಮಾಡುವ ಪ್ರಯತ್ನವನ್ನು ಕೆಲವರು ಮಾಡಿದರು. ಆದರೆ ಅದನ್ನೆಲ್ಲ ಸುದೀಪ್ ಜಾಣತನದಿಂದಲೇ ಹ್ಯಾಂಡಲ್ ಮಾಡಿದ್ದು, ಆ ಹೇಳಿಕೆ ಬಳಿಕ ಹಲವು ಸಂದರ್ಶನಗಳನ್ನು ನೀಡಿ ಪ್ರತಿ ಸಂದರ್ಶನದಲ್ಲೂ ಜವಾಬ್ದಾರಿಯುತವಾಗಿ ಮಾತನಾಡಿ, ವಿವಾದವನ್ನು ಭುಗಿಲೇಳಲು ಬಿಡದಂತೆ ಜವಾಬ್ದಾರಿಯುತ ವರ್ತನೆ ತೋರಿದ್ದಾರೆ. ತಮ್ಮ ವಿರುದ್ಧ ಮಾತನಾಡಿದ ಯುವನಟರ ಬಗ್ಗೆಯೂ…

Read More

ಭಾರತ 2025: ಹೊಸ ಭದ್ರತಾ ನೀತಿ, ಆಪರೇಷನ್ ಸಿಂದೂರ್ ಶಕ್ತಿ & ಭಯೋತ್ಪಾದನೆಗೆ ಖಡಕ್ ಉತ್ತರ – Kannada News | 2025: Bharat Secured, A Year That Redefined India’s Military Resolve Under PM Modi

ಭಾರತದ ಭದ್ರತಾ ದೃಷ್ಟಿಯಿಂದ 2025, ಮಹತ್ವದ ವರ್ಷ. ರಾಷ್ಟ್ರೀಯ ಭದ್ರತಾ ನೀತಿಯಲ್ಲಿ ಮಹತ್ತರ ಮೈಲಿಗಲ್ಲು ತಂದ ವರ್ಷ. ಭಾರತದ ಪ್ರಜೆಗಳ ಮೇಲಿನ ದಾಳಿಯನ್ನು ಸಂಯಮದಿಂದಷ್ಟೇ ಅಲ್ಲ ಕ್ಷಿಪ್ರವಾದ, ನಿಖರವಾದ ಮತ್ತು ನಿರ್ಣಾಯಕವಾದ ಕ್ರಮದಿಂದ ಎದುರಿಸಲಾಗುವುದು ಎಂಬುದನ್ನು ಪಿಎಂ ಮೋದಿ (Narendra Modi) ನಾಯಕತ್ವದ ಭಾರತ ತೋರಿಸಿಕೊಟ್ಟಿದೆ. ಭಯೋತ್ಪಾದನೆ ವಿಚಾರದಲ್ಲಿ ಪಿಎಂ ಮೋದಿ ಅವರು ಐದು ಹೊಸ ಸಹಜ ಕ್ರಮಗಳನ್ನು ತಿಳಿಸಿದ್ದಾರೆ. ಈ ನೀತಿಗಳು ಇಂತಿವೆ: ಭಯೋತ್ಪಾದನಾ ದಾಳಿಗಳಿಗೆ ಖಡಕ್ ಉತ್ತರ (ಯಾವುದೇ ದಾಳಿಯನ್ನೂ ನಿರ್ಣಾಯಕ ಪ್ರತಿದಾಳಿಯಿಂದ ಉತ್ತರಿಸಲಾಗುವುದು)…

Read More

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ; ಭುಗಿಲೆದ್ದ ವಿವಾದ – Kannada News | Lord Vishnu statue demolition in Cambodia what is the Controversy 

ಕಾಂಬೋಡಿಯಾ, ಡಿಸೆಂಬರ್ 26: ಥೈಲ್ಯಾಂಡ್-ಕಾಂಬೋಡಿಯಾ ಗಡಿಯಲ್ಲಿ ಮಿಲಿಟರಿ ಘರ್ಷಣೆಗಳು ಮುಂದುವರೆದಿವೆ. ಥೈಲ್ಯಾಂಡ್ ಸೇನೆಯು ಕಾಂಬೋಡಿಯಾ ಗಡಿಯಲ್ಲಿ 9 ಮೀಟರ್ ಎತ್ತರದ ವಿಷ್ಣು ಪ್ರತಿಮೆಯನ್ನು ಕೆಡವಿದೆ. ಇದಕ್ಕೆ ಸಂಬಂಧಿಸಿದ ವೀಡಿಯೊ ವೈರಲ್ (Video Viral) ಆಗುತ್ತಿದೆ. ಈ ದೃಶ್ಯಗಳನ್ನು ನೋಡಿದ ನಂತರ ಪ್ರಪಂಚದಾದ್ಯಂತದ ನೆಟಿಜನ್‌ಗಳು ಮತ್ತು ಭಕ್ತರು ತೀವ್ರ ಕೋಪವನ್ನು ವ್ಯಕ್ತಪಡಿಸುತ್ತಿದ್ದಾರೆ. ಕಾಂಬೋಡಿಯಾದಲ್ಲಿ ಹಿಂದೂ ನಂಬಿಕೆಯ ಮೇಲೆ ದಾಳಿ ನಡೆದಿದೆ. ಇದು ಪ್ರಪಂಚದಾದ್ಯಂತ ಹಿಂದೂಗಳ ಕೋಪವನ್ನು ಕೆರಳಿಸುತ್ತಿದೆ. ಥೈಲ್ಯಾಂಡ್ ಮತ್ತು ಕಾಂಬೋಡಿಯಾ ನಡುವಿನ ಗಡಿ ವಿವಾದದಿಂದ ಪ್ರಭಾವಿತವಾಗಿರುವ ಪ್ರದೇಶದಲ್ಲಿ…

Read More

ಗಿಲ್ಲಿ ಬಗ್ಗೆ ಗುಟ್ಟಾಗಿ ಮಾತಾಡಿದ ಕಾವ್ಯಾ ಫ್ಯಾಮಿಲಿ: ಕೂಡಲೇ ಹೊರಗೆ ಕಳಿಸಿದ ಬಿಗ್ ಬಾಸ್ – Kannada News | Kavya Shaiva family sent out of Bigg Boss Kannada 12 house for this reason

ಬಿಗ್ ಬಾಸ್ ಮನೆಗೆ ಕಾವ್ಯಾ ಅವರ ಕುಟುಂಬದವರು ಬಂದಿದ್ದರು. ಆದರೆ ಕೆಲವೇ ಹೊತ್ತಿನಲ್ಲಿ ಅವರನ್ನು ವಾಪಸ್ ಕಳಿಸಲಾಗಿದೆ. ಬಿಗ್ ಬಾಸ್ (BBK 12) ಮನೆಯ ಮೂಲ ನಿಯಮವನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಈ ಶಿಕ್ಷೆ ನೀಡಲಾಗಿದೆ. ಈ ಘಟನೆಯಿಂದಾಗಿ ಕಾವ್ಯಾ ಶೈವ (Kavya Shaiva) ಅವರಿಗೆ ತುಂಬಾ ನೋವಾಗಿದೆ. ತಾಯಿ ಮತ್ತು ತಮ್ಮ ದಿಢೀರ್ ಅಂತ ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗುವ ಪರಿಸ್ಥಿತಿ ಬಂತಲ್ಲ ಎಂದು ಕಾವ್ಯಾ ಅವರು ಕಣ್ಣೀರು ಹಾಕಿದ್ದಾರೆ. ಗಿಲ್ಲಿ ನಟ (Gilli Nata)…

Read More

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ – Kannada News | Accident Video of Kadali Gavala Palem Rajole Mandal Konaseema District Young Man died

ಮುಂಬೈ, ಡಿಸೆಂಬರ್ 26: ರಸ್ತೆಗಿಳಿದ ಮೇಲೆ ಸ್ವಲ್ಪ ಯಾಮಾರಿದರೂ ಜೀವವೇ ಹೋಗುತ್ತದೆ. ಹೀಗಾಗಿ, ಎಲ್ಲ ರೀತಿಯಿಂದಲೂ ಎಚ್ಚರಿಕೆಯಿಂದ ಇರುವುದು ಅತ್ಯಗತ್ಯ. ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತದ ಸಿಸಿಟಿವಿ ದೃಶ್ಯಾವಳಿ ವೈರಲ್ (Viral Video) ಆಗಿದೆ. ಹಾಲು ತರಲೆಂದು ಬೈಕ್​ನಲ್ಲಿ ಬರುತ್ತಿದ್ದ ಯುವಕನಿಗೆ ಭಾರೀ ವಾಹನವೊಂದು ಜೋರಾಗಿ ಡಿಕ್ಕಿ ಹೊಡೆದಿದೆ. ಈ ದೃಶ್ಯ ಎದುರಿನ ಸಣ್ಣ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅನ್ವೇಶ್ ಎಂಬ 20 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇತರ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರಲ್ಲಿ ಇಬ್ಬರ…

Read More