ಕಾಂಗ್ರೆಸ್ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ, ಸುಮ್ನೆ ಭಾಷಣ ಮಾಡಿ ಹೋಗಿಲ್ಲ: ಖರ್ಗೆ ನಿವಾಸದ ಎದುರೇ ಡಿಕೆಶಿ ಖಡಕ್ ಮಾತು – Kannada News | Karnataka Congress Power sharing issue: DK Shivakumar’s Strong Message Outside Mallikarjun Kharge’s Residence

ಡಿಸಿಎಂ ಡಿಕೆ ಶಿವಕುಮಾರ್ ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರು ಬೆಂಗಳೂರು, ಡಿಸೆಂಬರ್ 26: ಕರ್ನಾಟಕ ರಾಜಕೀಯದಲ್ಲಿ, ವಿಶೇಷವಾಗಿ ಕಾಂಗ್ರೆಸ್ (Congress) ಪಕ್ಷದೊಳಗಿನ ನಾಯಕತ್ವ ಬದಲಾವಣೆ ವಿಚಾರ ಮತ್ತೊಂದು ಮಗ್ಗುಲಿಗೆ ಹೊರಳಿದೆ. ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಸ್ಥಳೀಯವಾಗಿ ಸೃಷ್ಟಿಯಾಗಿರುವ ಸಮಸ್ಯೆಯನ್ನು ಅಲ್ಲಿನವರೇ ಬಗೆಹರಿಸಿಕೊಳ್ಳಬೇಕು’ ಎಂದು ಹೇಳಿರುವುದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಬ್ಬರೂ ಕೂತು ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂಬ ಸಂದೇಶವಾಗಿಯೇ ವ್ಯಾಖ್ಯಾನಿಸಲಾಗುತ್ತಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

Read More

Daily Devotional: ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ? – Kannada News | Daily Devotional: The Astrological Significance of the Index Finger and Its Impact on Destiny

ಬೆಂಗಳೂರು, ಡಿಸೆಂಬರ್ 26: ಶಾಸ್ತ್ರಗಳ ಪ್ರಕಾರ, ಮಾನವ ದೇಹದ ಅಂಗಾಂಗಗಳು, ಅದರಲ್ಲೂ ವಿಶೇಷವಾಗಿ ತೋರು ಬೆರಳಿನ ಆಕಾರವು ವ್ಯಕ್ತಿಯ ವ್ಯಕ್ತಿತ್ವ ಮತ್ತು ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಹೆಬ್ಬೆರಳನ್ನು ಶುಕ್ರನಿಗೆ, ತೋರು ಬೆರಳನ್ನು ಗುರು (ಬೃಹಸ್ಪತಿ) ಗ್ರಹಕ್ಕೆ, ಮಧ್ಯದ ಬೆರಳನ್ನು ಶನಿಗೆ, ಉಂಗುರದ ಬೆರಳನ್ನು ರವಿಗೆ (ಸೂರ್ಯ) ಮತ್ತು ಕಿರು ಬೆರಳನ್ನು ಬುಧನಿಗೆ ಹೋಲಿಸಲಾಗುತ್ತದೆ. ತೋರು ಬೆರಳಿನ ಆಕಾರದಿಂದ ವ್ಯಕ್ತಿಯ ಗುಣಲಕ್ಷಣಗಳನ್ನು ಅರಿಯಲು ಸಾಧ್ಯವಿದೆ. ಉದಾಹರಣೆಗೆ, ಉದ್ದವಾದ ತೋರು ಬೆರಳು ನಾಯಕತ್ವದ ಗುಣಗಳನ್ನು ಸೂಚಿಸುತ್ತದೆ. ಚಪ್ಪಟೆಯಾದ ಮತ್ತು…

Read More

ಮೊದಲ ದಿನವೇ ಅಬ್ಬರದ ಕಲೆಕ್ಷನ್ ಮಾಡಿದ ‘ಮಾರ್ಕ್’ ಹಾಗೂ ‘45’ ಸಿನಿಮಾ – Kannada News | 45 and Mark Movie Box Office: Sudeep And Shivarajkumar Movie Collections Revealed

ಕ್ರಿಸ್​ಮಸ್ ಪ್ರಯುಕ್ತ ರಿಲೀಸ್ ಆದ ‘45’ ಹಾಗೂ ‘ಮಾರ್ಕ್​’ ಸಿನಿಮಾಗಳು (Mark Movie) ಮೊದಲ ದಿನವೇ ಅಬ್ಬರದ ಕಲೆಕ್ಷನ್ ಮಾಡಿವೆ. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿವೆ. ಇಂದು ವಾರದ ದಿನ ಆಗಿರುವುದರಿಂದ, ಯಾವುದೇ ರಜೆ ಇಲ್ಲದಿರುವುದರಿಂದ ಕಲೆಕ್ಷನ್ ಕೊಂಚ ತಗ್ಗಬಹುದು. ಆದರೆ, ಶನಿವಾರ, ಭಾನುವಾರ ಮತ್ತು ಹೊಸ ವರ್ಷದಂದು ಈ ಚಿತ್ರ ಅಬ್ಬರದ ಕಲೆಕ್ಷನ್ ಮಾಡೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಈ ಚಿತ್ರದ ಒಟ್ಟಾರೆ ಗಳಿಕೆ ಎಷ್ಟಾಗುತ್ತದೆ ಎಂಬ ಕುತೂಹಲ ಮೂಡಿದೆ. ‘ಮಾರ್ಕ್​’ ಚಿತ್ರದ ಮೊದಲ…

Read More

Horoscope Today 26 December: ಈ ರಾಶಿಗೆ ಇಂದು ಹಳೆಯ ಸಂಗಾತಿಯ ನೆನಪು ಮತ್ತೆ ಕಾಡಲಿದೆ – Kannada News | Horoscope Today in Kannada on 26 December Friday; Dina Bhavishya Tithi Panchanga Details here

ಮೇಷ ರಾಶಿ: ಹಣವ್ಯಯವು ದಾನವಾಗಿ ಬದಲಾಗುವುದು. ಸಂಬಂಧಗಳಲ್ಲಿ ಕರುಣೆ ಮತ್ತು ಸಹಾನುಭೂತಿ ಹೆಚ್ಚಾಗುತ್ತದೆ. ಓಡಾಟ ಮನಸ್ಸಿಗೆ ಶಾಂತಿ ನೀಡುತ್ತದೆ. ಉದ್ಯೋಗದಲ್ಲಿ ಸೃಜನಶೀಲತೆ ಬೆಳೆಯುತ್ತದೆ. ಮನಸ್ಸನ್ನು ಪ್ರಶಾಂತವಾಗಿ ಇಟ್ಟುಕೊಳ್ಳಲು ನಿಮಗೆ ಆಗದು. ಇಂದು ನೀವು ಹೇಗೇ ಸಮಜಾಯಿಷಿ ಕೊಟ್ಟರೂ ತಪ್ಪು ನಿಮ್ಮದೇ ಆಗಿರುತ್ತದೆ. ಒಂದಿಲ್ಲೊಂದು ಆಲೋಚನೆಗಳು ಬರುತ್ತಲೇ ಇರುತ್ತವೆ. ನಿಮ್ಮ ವಸ್ತುವು ಕಳ್ಳತನವಾಗಬಹುದು ಎಂಬ ಭೀತಿಯು ಉಂಟಾಗಬಹುದು. ಇಂದು ನೀವು ನೆಮ್ಮದಿಯಿಂದ ಇರಲು ಹಿತಶತ್ರುಗಳು ಬಿಡರು. ಸ್ವಂತ ಉದ್ಯೋಗದ ಮೇಲೆ ಕಾಳಜಿಯು ಅನ್ಯ ಕಾರ್ಯದ ನಿಮಿತ್ತ ಕಡಿಮೆಯಾಗುವುದು. ಅಧಿಕಾರ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 26ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಈ ದಿನವು ಸಾಮಾಜಿಕವಾಗಿ ಬಿಡುವಿಲ್ಲದಷ್ಟು ಕೆಲಸಗಳು ಇರುತ್ತವೆ. ಸಮಾಜದ ಮುಖಂಡರಿಗೆ, ರಾಜಕಾರಣಿಗಳಿಗೆ ಮತ್ತು ಸರ್ಕಾರದಲ್ಲಿ ಉನ್ನತ ಹುದ್ದೆಯಲ್ಲಿ ಇರುವ ಅಧಿಕಾರಿಗಳಿಗೆ ಶುಭವಾದ ದಿನ ಇದಾಗಿರಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವದ ಗುಣಗಳು ಮೆಚ್ಚುಗೆಗೆ ಪಾತ್ರವಾಗಲಿವೆ. ಉದ್ಯಮಿಗಳು ಹೊಸ ಮಾರುಕಟ್ಟೆ ತಂತ್ರಗಳನ್ನು ಜಾರಿಗೆ ತರಲು ಅತ್ಯುತ್ತಮ ಸಮಯ. ಕೃಷಿಕರಿಗೆ ಸುಧಾರಿತ ತಂತ್ರಜ್ಞಾನದ ಬಳಕೆಯಿಂದ ಲಾಭ ದೊರೆಯಲಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ…

Read More

ಚಿತ್ರದುರ್ಗ ಬಸ್ ಘಟನೆ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ, ನಾಲ್ವರು ಸಾವು – Kannada News | Four Youths Killed In Bike And Tipper Accident In ajjavara at Chikkaballapur

ಚಿಕ್ಕಬಳ್ಳಾಪುರ, (ಡಿಸೆಂಬರ್ 25): ಚಿತ್ರದುರ್ಗದಲ್ಲಿ ನಡೆದ ಭೀಕರ ದುರಂತದ ಆಘಾತ ಮಾಸುವ ಮುನ್ನವೇ, ಚಿಕ್ಕಬಳ್ಳಾಪುರದಲ್ಲಿ (Chikkaballapur) ಹೃದಯವಿದ್ರಾವಕ ಅಪಘಾತ ಸಂಭವಿಸಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ ಅರುಣ್ ಮೃತ ಯುವಕರು.  ಮೃತರು ಅಜ್ಜವಾರ ಗ್ರಾಮದ ಯುವಕರಾಗಿದ್ದು, ಒಂದೇ ಬೈಕಿನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ…

Read More

ಕಾವ್ಯಾ ಜತೆ ಮದುವೆ ಬಗ್ಗೆ ಮನಸಾರೆ ಮಾತಾಡಿದ ಗಿಲ್ಲಿ: ಆ ಕಡೆಯಿಂದ ಬಂದ ಉತ್ತರ ಏನು? – Kannada News | Gilli Nata wants to talk marriage plans with Kavya Shaiva parents in BBK 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಕಾವ್ಯಾ ಶೈವ ಮತ್ತು ಗಿಲ್ಲಿ ನಟ ಅವರ ಜೋಡಿ ತುಂಬಾ ಹೈಲೈಟ್ ಆಗಿದೆ. ಆರಂಭದಿಂದಲೂ ಅವರಿಬ್ಬರೂ ಕ್ಲೋಸ್ ಆಗಿದ್ದಾರೆ. ಕಾವ್ಯಾ (Kavya Shaiva) ಅವರನ್ನು ಪ್ರತಿ ಬಾರಿಯೂ ಗಿಲ್ಲಿ ನಟ ರೇಗಿಸುತ್ತಾರೆ. ಅವರಿಬ್ಬರಿಗೆ ಪ್ರತ್ಯೇಕ ಫ್ಯಾನ್ ಬೇಸ್ ಇದೆ. ಇಲ್ಲಿಯವರೆಗೆ ಅನೇಕ ಬಾರಿ ಅವರಿಬ್ಬರು ಮುನಿಸು ತೋರಿಸಿದ್ದರೂ ಕೂಡ ಮಾತು ಬಿಟ್ಟಿಲ್ಲ. ಒಬ್ಬರನ್ನೊಬ್ಬರು ಬಿಟ್ಟುಕೊಟ್ಟಿಲ್ಲ. ಆ ಬಾಂಧವ್ಯದ ಪರಿಣಾಮವಾಗಿ ಗಿಲ್ಲಿ (Gilli Nata) ಮನಸ್ಸಿನಲ್ಲಿ ಮದುವೆ…

Read More

ಮೈಸೂರು ಅರಮನೆ ಮುಂಭಾಗ ಭಾರೀ ಸ್ಫೋಟ, ಓರ್ವ ಸಾವು, ಹಲವರಿಗೆ ಗಂಭೀರ ಗಾಯ – Kannada News | One Dies Several injured after nitrogen gas blast in front of mysuru palace

ಮೈಸೂರು, (ಡಿಸೆಂಬರ್ 25): ನೈಟ್ರೋಜನ್ ಗ್ಯಾಸ್ ಸ್ಫೋಟಗೊಂಡು (Nitrogen Gas Blast) ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶ್ವವಿಖ್ಯಾತ ಮೈಸೂರು ಅರಮನೆ (Mysuru Palace) ಮುಂಭಾಗದಲ್ಲಿ ನಡೆದಿದೆ. ಇಂದು (ಡಿಸೆಂಬರ್ 25) ರಾತ್ರಿ ಪ್ಯಾಲೆಸ್ ಮುಂಭಾಗ ಬಲೂನ್​ಗೆ ಗ್ಯಾಸ್ ತುಂಬಿಸುವಾಗ ಸ್ಫೋಟವಾಗಿದ್ದು, ಇದರ ತೀವ್ರತೆ ಎಷ್ಟಿತ್ತು ಎಂದರೆ ಸಿಲಿಂಡರ್​ ಛಿದ್ರ ಛೀದ್ರವಾಗಿದೆ. ಸ್ಥಳಕ್ಕೆ ಕೆ ಆರ್​ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು,ಈ ಸ್ಫೋಟಕ ಸಾಂಸ್ಕೃತಿಕ ನಗರಿ ಜನ ಬೆಚ್ಚಿಬಿದ್ದಿದ್ದಾರೆ. ಅರಮನೆಯ ಜಯ ಮಾರ್ತಾಂಡ ಗೇಟ್…

Read More

ಚುಮು ಚುಮು ಚಳಿ: ಪಂಚಾಯ್ತಿಯೊಳಗೆ ನುಗ್ಗಿ PDO ಚೇರ್ ಮೇಲೆ ಮಲಗಿದ ಶ್ವಾನ – Kannada News | Street dog Sleeps On PDO chair In Examba Gram Panchayat Office video Goes viral

ಬೀದರ್, ಡಿಸೆಂಬರ್ 25): ಜಿಲ್ಲೆಯ ಔರಾದ್ ತಾಲ್ಲೂಕಿನ ‌ಏಕಂಬ ಗ್ರಾಮ ಪಂಚಾಯಿತಿ (Examba Gram Panchayat) ಬೀದಿ ನಾಯಿಗಳ ತಾಣವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಶ್ವಾನವೊಂದು (Street dog) ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯತಿಯೊಳಗೆ ಹೋಗಿ ಪಿಡಿಓ ಚೇರ್​​ ಮೇಲೆ ಆಯಾ ಮಲಗಿದೆ. ಸಿಬ್ಬಂದಿ ಬೆಳಗ್ಗೆ ಪಂಚಾಯಿತಿ ಕಚೇರಿ ಬಾಗಿಲು ಓಪನ್ ಮಾಡಿ ಹೋಗಿದ್ದಾರೆ. ಯಾರು ಇಲ್ಲದಿದ್ದರಿಂದ ಶ್ವಾನ, ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯ್ತಿ ಕಚೇರಿಯೊಳಗೆ ನುಗ್ಗಿ ಪಿಡಿಓ ಕುರ್ಚಿ ಏರಿ ಆಯಾಗಿ ಮಲಗಿಕೊಂಡಿದೆ….

Read More

ಡಿಸಿ, ತಹಶೀಲ್ದಾರ್ ಡೋಂಟ್ ಕೇರ್: ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು – Kannada News | Villegers theft Chicken And Egg From Farm over smell at Gadag

ರಮೇಶ್ ಬಿ. ಜವಳಗೇರಾ | Updated on:Dec 25, 2025 | 9:29 PM Share ಕೋಳಿಫಾರಂ ದುವಾರ್ಸನೆಯಿಂದ ಬೇಸತ್ತು ಕೋಳಿ, ಮೊಟ್ಟೆಗಳನ್ನು ಕದ್ದೊಯ್ದಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದಲ್ಲಿ ನಡೆದಿದೆ. ಕೋಳಿಫಾರಂ​​ನಿಂದ ಬರುತ್ತಿದ್ದ ದುವಾರ್ಸನೆಯಿಂದ ಉಣಚಗೇರಿ ಗ್ರಾಮಸ್ಥರು ರೋಸಿ ಹೋಗಿದ್ದರು. ಹೀಗಾಗಿ ಗ್ರಾಮದಿಂದ ಕೋಳಿಫಾರಂ ತೆರವುಗೊಳಿಸುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್​ಗೆ ಮನವಿ ಮಾಡಿದ್ದಾರೆ. ಆದ್ರೆ, ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಜನರು ತಾಳ್ಮೆಯ ಕಟ್ಟೆ ಹೊಡೆದಿದ್ದು, ಗ್ರಾಮಸ್ಥರೇ ಕೋಳಿಫಾರಂಗೆ ನುಗ್ಗಿ ಕೋಳಿ,…

Read More