Headlines

Horoscope Today 29 December : ಇಂದು ಈ ರಾಶಿಯವರಿಗೆ ಸಾಹಸ ಕಾರ್ಯಗಳು ಕಷ್ಟವಾದರೂ ಮಾಡುವರು

ಮೇಷ ರಾಶಿ: ನೈತಿಕತೆಯ ರಕ್ಷಣೆ ಅಸಾಧ್ಯ ಎನಿಸಬಹದು. ಮಾನಸಿಕ ಶಾಂತಿಯನ್ನು ಬಲವಾಗಿ ತಂದುಕೊಳ್ಳಬೇಕು. ಶತ್ರುವಿನ ಸಂಚು ವಿಫಲ. ಭೂಮಿ ವ್ಯವಹಾರದಲ್ಲಿ ಲಾಭ. ಯಾರ ಮೇಲೂ ಸುಮ್ಮನೇ ಸಂಶಯಪಟ್ಟು ಸಂಬಂಧವನ್ನು ದೂರ ಮಾಡಿಕೊಳ್ಳುವಿರಿ. ದಾಂಪತ್ಯದಲ್ಲಿ ನೆಮ್ಮದಿ ಇಲ್ಲದೇ ಪರಸ್ಪರ ಕಲಹವಾಗಬಹುದು. ಸಾಮಾಜಿಕ‌ ಕಾರ್ಯದಿಂದ ಸಮ್ಮಾನವನ್ನು ನಿರೀಕ್ಷಿಸುವಿರಿ. ಎಲ್ಲರನ್ನೂ ತೃಪ್ತಿಪಡಿಸುವ ಸಂಕಲ್ಪವು ಸುಮ್ಮನೇ ವ್ಯರ್ಥವಾಗಬಹುದು. ನಿಮ್ಮ ಗುರಿಯ ಬಗ್ಗೆ ವಿಶ್ವಾಸವು ನಿಮಗಿರಲಿ. ನಿಮ್ಮಿಂದ ಸಹಾಯ ಪಡೆಯಲು ನಿಮ್ಮನ್ನು ಹೊಗಳುವರು. ಧಾರ್ಮಿಕ ಕಾರ್ಯಗಳಲ್ಲಿ ಶ್ರದ್ಧೆಯು ಇಲ್ಲವಾಗುವುದು. ನಿಮ್ಮ ಮೇಲೆ‌ ಹಿತಶತ್ರುಗಳು‌ ಬೇಕಂತಲೇ…

Read More

ಪೊಲೀಸರ ಲಾಠಿಚಾರ್ಚ್​​ ಖಂಡಿಸಿ ಕಾಫಿನಾಡು ಕೊತ ಕೊತ: ಹಲವೆಡೆ ಬಂದ್​, ಪ್ರತಿಭಟನೆ – Kannada News | Chikkamagaluru Erupts in Protest Over Police Lathi Charge; Bandh in Several Areas

ಚಿಕ್ಕಮಗಳೂರು ಜಿಲ್ಲೆ ಬಹುತೇಕ ಬಂದ್​Image Credit source: Tv9 Kannada ಚಿಕ್ಕಮಗಳೂರು, ಫೆಬ್ರವರಿ 23: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು ಮತ್ತು ನಂತರದ ಲಾಠಿಚಾರ್ಜ್ ವಿಚಾರವಾಗಿ ಕಾಫಿನಾಡು ಚಿಕ್ಕಮಗಳೂರಿನ ಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪ, ಎನ್.ಆರ್.ಪುರ, ಮತ್ತು ಶೃಂಗೇರಿ ತಾಲೂಕುಗಳಲ್ಲಿ ಬಂದ್‌ಗೆ ಕರೆ ನೀಡಲಾಗಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಡಬಗೆರೆ ಸಂಪೂರ್ಣ ಸ್ತಬ್ಧವಾಗಿದ್ದು, ಅಂಗಡಿ ಮುಂಗಟ್ಟು ಮುಚ್ಚಿ ವರ್ತಕರು ಬಂದ್​​ ಬೆಮಬಲಿಸಿದ್ದಾರೆ. ನಿನ್ನೆ ಇಡೀ ದಿನ…

Read More

ಇಸ್ರೇಲ್, ಲೆಬನಾನ್ 10 ದಿನಗಳ ಕದನವಿರಾಮಕ್ಕೆ ಒಪ್ಪಿಕೊಂಡಿವೆ; ಟ್ರಂಪ್ ಘೋಷಣೆ – Kannada News | Israel and Lebanon agreed to 10 day ceasefire Donald Trump Announces

ವಾಷಿಂಗ್ಟನ್, ಏಪ್ರಿಲ್ 16: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಸ್ರೇಲ್ ಮತ್ತು ಲೆಬನಾನ್ 10 ದಿನಗಳ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಿದ್ದಾರೆ. ಶಾಶ್ವತ ಶಾಂತಿಯತ್ತ ಸಾಗುವ ಪ್ರಯತ್ನದಲ್ಲಿ ಎರಡೂ ಕಡೆಯವರು ಯುದ್ಧವನ್ನು ನಿಲ್ಲಿಸಲು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಪ್ರಪಂಚದಾದ್ಯಂತ 9 ಯುದ್ಧಗಳನ್ನು ಬಗೆಹರಿಸುವುದು ನನಗೆ ದೊರೆತ ದೊಡ್ಡ ಗೌರವವಾಗಿದೆ. ಇದು ನನ್ನ 10ನೇ ಯುದ್ಧ ನಿಲ್ಲಿಸುವ ಪ್ರಯತ್ನವಾಗಿದೆ!” ಎಂದು ಟ್ರಂಪ್ ತಮ್ಮ ಬೆನ್ನು ತಾವೇ ತಟ್ಟಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ…

Read More

ಮಗುವಿನ ಹೊಟ್ಟೆಯಲ್ಲಿದ್ದ 25 ಸೆಂ.ಮೀ ಕೂದಲಿನ ಗುಡ್ಡೆ ಹೊರಗೆ ತೆಗೆದ ವೈದ್ಯರು! – Kannada News | Rare Pediatric Surgery: Medicover Bengaluru Removes 480g Hairball from 2 Year Old Pica Patient

ಬೆಂಗಳೂರು, ಮೇ.16: ಸಿಲಿಕಾನ್ ಸಿಟಿಯ ಮೆಡಿಕವರ್ ಆಸ್ಪತ್ರೆಯ ವೈದ್ಯರು ಅತ್ಯಂತ ಅಪರೂಪದ ಮತ್ತು ಸಂಕೀರ್ಣವಾದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ 2 ವರ್ಷದ ಪುಟ್ಟ ಮಗುವಿಗೆ ಮರುಜೀವ ನೀಡಿದ್ದಾರೆ. ಮಗುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 480 ಗ್ರಾಂ ತೂಕದ ಕೂದಲಿನ ಗುಡ್ಡೆ ಹಾಗೂ ರಬ್ಬರ್ ಬ್ಯಾಂಡ್‌ಗಳನ್ನು ಲ್ಯಾಪರೋಸ್ಕೊಪಿಕ್ ಶಸ್ತ್ರಚಿಕಿತ್ಸೆಯ ಮೂಲಕ ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ವೈದ್ಯಕೀಯ ಜಗತ್ತಿನಲ್ಲಿ ಆಹಾರವಲ್ಲದ ವಸ್ತುಗಳನ್ನು (ಕೂದಲು, ರಬ್ಬರ್, ಪ್ಲಾಸ್ಟಿಕ್ ಇತ್ಯಾದಿ) ತಿನ್ನುವ ಇಂತಹ ವಿಚಿತ್ರ ಮಾನಸಿಕ ಮತ್ತು ದೈಹಿಕ ಅಭ್ಯಾಸವನ್ನು ‘ಪೈಕಾ’ (Pica) ಎನ್ನಲಾಗುತ್ತದೆ….

Read More

GAMCB Recruitment 2025: ಬೆಂಗಳೂರಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ – Kannada News | Bengaluru Ayurvedic College Jobs: GAMCB Professor Vacancies, Apply by Dec 30

ಬೆಂಗಳೂರಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳುಡಿಸೆಂಬರ್ 30ರ ಮೊದಲು ಅರ್ಜಿ ಸಲ್ಲಿಸತಕ್ಕದ್ದು. GAMCB ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಬೆಂಗಳೂರು (GAMCB) ಹುದ್ದೆಗಳ ಸಂಖ್ಯೆ: 8 ಉದ್ಯೋಗ ಸ್ಥಳ: ಬೆಂಗಳೂರು ಹುದ್ದೆಯ ಹೆಸರು: ಪ್ರಾಧ್ಯಾಪಕರು ಸಂಬಳ:…

Read More

70 ವರ್ಷದ ವ್ಯಕ್ತಿಯಿಂದ ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರ – Kannada News | Gujarat Case: Elderly Man Held Over Alleged Assault of Disabled Woman

ಮಹಿಸಾಗರ್, ಏಪ್ರಿಲ್ 26: ಸಂಬಂಧಗಳ ಪಾವಿತ್ರ್ಯತೆಗೆ ಧಕ್ಕೆ ತರುವಂತಹ ಘಟನೆಯೊಂದು ಜಿಲ್ಲೆಯ ಲುನಾವಾಡ ಪಟ್ಟಣದಲ್ಲಿ ವರದಿಯಾಗಿದೆ. 26 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಆಕೆಯ 70 ವರ್ಷದ ಸಂಬಂಧಿಕನೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು ಆತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಪೊಲೀಸರ ಮಾಹಿತಿಯ ಪ್ರಕಾರ, ಆರೋಪಿಯು ಸಂತ್ರಸ್ತೆಯ ನೆರೆಮನೆಯವನಾಗಿದ್ದು, ಸಂಬಂಧದಲ್ಲಿ ಚಿಕ್ಕಪ್ಪ ಅಥವಾ ದೊಡ್ಡಪ್ಪನಾಗಬೇಕಿತ್ತು. ಘಟನೆ ನಡೆದ ದಿನ ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿರುವುದನ್ನು ಗಮನಿಸಿದ ಆರೋಪಿ, ತನ್ನ ಪತ್ನಿಯನ್ನು ಮನೆಯಿಂದ ಹೊರಗೆ ಕಳುಹಿಸಿದ್ದಾನೆ. ನಂತರ ಆಕೆಯನ್ನು…

Read More

ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು! – Kannada News | Thieves Break Car Glass, Loot Rs.2.5 Lakh Meant for Treatment in Nelamangala

ನೆಲಮಂಗಲ, ಫೆಬ್ರುವರಿ 04: ಪತ್ನಿಯ ಚಿಕಿತ್ಸೆಗೆಂದು ಸಂಗ್ರಹಿಸಿದ್ದ ಸಾಲದ ಹಣವನ್ನೇ ಕಳ್ಳರು  ದೋಚಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜಿಎಸ್ ಆಸ್ಪತ್ರೆ ಬಳಿ ನಡೆದಿದೆ. ಚಿಕ್ಕಬಾಣವರ ನಿವಾಸಿ ಹೇಮಣ್ಣ ಎಂಬುವವರು ತಮ್ಮ ಪತ್ನಿ ಅನಸೂಯ ಅವರಿಗೆ ಅನಾರೋಗ್ಯ ಹಿನ್ನೆಲೆ ನಗರೂರು ಸಮೀಪದ ಬಿಜಿಎಸ್ ಆಸ್ಪತ್ರೆಗೆ ಆಯುರ್ವೇದ ಚಿಕಿತ್ಸೆಗಾಗಿ ತೆರಳಿದ್ದರು. ಚಿಕಿತ್ಸೆಗಾಗಿ ಹಾಗೂ ಮತ್ತೊಬ್ಬರಿಗೆ ಹಣ ನೀಡಬೇಕಿದ್ದ ಕಾರಣ ಹೇಮಣ್ಣ ಸುಮಾರು ಎರಡು ಲಕ್ಷ ಐವತ್ತು ಸಾವಿರ ರೂಪಾಯಿ ಸಾಲ ಪಡೆದು ಕಾರಿನ ಬ್ಯಾಗ್‌ನಲ್ಲಿ ಇಟ್ಟುಕೊಂಡಿದ್ದರು. ಪತ್ನಿಯನ್ನು…

Read More

ಕಿರುಕುಳ ಆರೋಪ: ಮಾಗಡಿಯಲ್ಲಿ ಪತಿ ಶಾಲೆ ಮುಂದೆಯೇ ಪತ್ನಿ ಪ್ರೊಟೆಸ್ಟ್​​ – Kannada News | Family dispute: Wife protests outside husband’s school in Magadi, Ramanagara

ರಾಮನಗರ, ಡಿಸೆಂಬರ್​​ 30: ಕಿರುಕುಳ ನೀಡಿದ್ದಲ್ಲದೆ ಮನೆಗೆ ಸೇರಿಸದ ಆರೋಪದ ಹಿನ್ನೆಲೆ ಪತಿ ಒಡೆತನದ ಶಿಕ್ಷಣ ಸಂಸ್ಥೆಯ ಎದುರೇ ಕುಳಿತು ಪತ್ನಿ ಪ್ರತಿಭಟನೆ ನಡೆಸಿರುವ ಘಟನೆ ಮಾಗಡಿಯಲ್ಲಿ ನಡೆದಿದೆ. ಮಾರುತಿ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಮಾಲಕ ರೂಪೇಶ್ ಜೊತೆ ಕಳೆದ ಒಂದು ವರ್ಷದ ಹಿಂದೆ ಪ್ರೀತಿ ವಿವಾಹವಾಗಿತ್ತು. ಆದರೆ ಪತಿ ಕಿರುಕುಳ ನೀಡುತ್ತಿದ್ದು, ಕೆಲ ದಿನಗಳಿಂದ ಮನೆಗೂ ತನ್ನನ್ನು ಸೇರಿಸುತ್ತಿಲ್ಲ ಎಂದು ಪ್ರೀತಿ ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೂ ದೂರು ನೀಡಿರುವ ಇವರು, ನ್ಯಾಯಕ್ಕಾಗಿ ಪತಿಗೆ…

Read More

ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಪುತ್ರಿ ಐಶ್ವರ್ಯಾ ಹೇಳಿದ್ದೇನು? – Kannada News | Aishwarya Sarja said as director Arjun Sarja is very strict

ಅರ್ಜುನ್ ಸರ್ಜಾ (Arjun Sarja) ಬಹುಭಾಷಾ ಸ್ಟಾರ್ ನಟ. ಕನ್ನಡ ಪ್ರೇಕ್ಷಕರಿಗೆ ಬಾಲನಟನಾಗಿನಿಂದಲೂ ಪರಿಚಿತವಾಗಿರುವ ಅರ್ಜುನ್ ಸರ್ಜಾ, ಆಕ್ಷನ್ ಹೀರೋ ಆಗಿರುವ ಜೊತೆಗೆ ಒಳ್ಳೆಯ ಸಿನಿಮಾ ನಿರ್ದೇಶಕರು ಸಹ. ಈ ಹಿಂದೆ ಕೆಲವಾರು ಸಿನಿಮಾಗಳನ್ನು ನಿರ್ದೇಶಿಸಿ ಸೂಪರ್ ಹಿಟ್​ಗಳನ್ನು ಕೊಟ್ಟಿರುವ ಅರ್ಜುನ್ ಸರ್ಜಾ ಇದೀಗ ಮಗಳು ಐಶ್ವರ್ಯಾ ಸರ್ಜಾ ಮತ್ತು ಉಪೇಂದ್ರ ಅಣ್ಣನ ಮಗ ನಿರಂಜನ್ ಅವರನ್ನು ಹಾಕಿಕೊಂಡು ‘ಸೀತಾ ಪಯಣ’ ಹೆಸರಿನ ಸಿನಿಮಾ ಮಾಡಿದ್ದಾರೆ. ಸಿನಿಮಾದ ಬಗ್ಗೆ ಟಿವಿ9ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಐಶ್ವರ್ಯಾ ಅವರು…

Read More

ಯಶ್ ‘ಟಿಕೆಟ್’ ಲುಕ್ ಎಐ ಎಂದವರಿಗೆ ಸಿಕ್ತು ಉತ್ತರ; ಯಶ್ ಮೇಕೋವರ್ ನೋಡಿ – Kannada News | Yash’s ‘Toxic’ Ticket Look: Real Makeover Confirmed, Not AI See Hairdresser’s Video

‘ಟಾಕ್ಸಿಕ್’ ಚಿತ್ರದ (Toxic Movie) ಮೂಲಕ ಯಶ್ ಅವರು ಜನರ ಎದುರು ಬರಲು ರೆಡಿ ಆಗಿದ್ದಾರೆ. ಈ ಚಿತ್ರದ ಟೀಸರ್ ಗಮನ ಸೆಳೆದಿದೆ. ಈ ಸಿನಿಮಾದಲ್ಲಿ ಯಶ್ ಅವರು ಎರಡು ಲುಕ್ ಅಲ್ಲಿ ಕಾಣಿಸಿಕೊಂಡಿದ್ದಾರೆ. ಒಂದು ರಾಯ ಮತ್ತೊಂದು ಟಿಕೆಟ್. ಈ ಲುಕ್​​ ಅಲ್ಲಿ ಯಶ್ ಯಂಗ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ಇದನ್ನು ಎಐ ಮೂಲಕ ಮಾಡಲಾಗಿದೆ ಎಂದು ಹೇಳಲಾಗಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಯಶ್ ಅವರು ಪರ್ಫೆಕ್ಷನಿಸ್ಟ್. ಏನೇ…

Read More