Headlines

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ ಪತ್ತೆಯಾಗದ 16.3 ಲಕ್ಷ ಮತದಾರರು, ಬೆಂಗಳೂರಲ್ಲಿ ಅತಿ ಹೆಚ್ಚು? – Kannada News | Karnataka Voter List Revision: Over 16.3 Lakh Voters Untraceable; Major Deletions Expected in Bengaluru

ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ Image Credit source: ceo_karnataka X Account ಬೆಂಗಳೂರು, ಆಗಸ್ಟ್​​ 05: ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಆಗಸ್ಟ್​​ 8ರ ವರೆಗೂ ನಡೆಯಲಿದ್ದು, ಈಗಾಗಲೇ 5,54,32,314 ಎನ್ಯುಮರೇಷನ್ ಫಾರ್ಮ್ ಕೊಡಲಾಗಿದೆ. ಅದರಲ್ಲಿ 4,43,04,632 ಸಾವಿರ ಅರ್ಜಿಗಳು ಡಿಜಿಟಲೈಜೇಷನ್ ಆಗಿವೆ. 16,30,012ರಷ್ಟು ಮತದಾರರು ಪತ್ತೆಯಾಗಿಲ್ಲ. ರಾಜ್ಯದಲ್ಲಿ ASDDO (ಆಬ್ಸೆಂಟ್, ಶಿಫ್ಟ್, ಡೆತ್, ಡೂಪ್ಲಿಕೇಟ್ & ಇತರರು) 1,11,04,705 ಮತದಾರರು ಪತ್ತೆಯಾಗಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ. 66,64,943 ಮತದಾರರು…

Read More

ಪ್ರಧಾನಿ ಮೋದಿಯಿಂದ ಮಾತ್ರ ಪರೀಕ್ಷಾ ಸುಧಾರಣೆ ಸಾಧ್ಯ; ಲೋಕಸಭೆಯಲ್ಲಿ ವಿಪಕ್ಷಗಳ ಬೆವರಿಳಿಸಿದ ತೇಜಸ್ವಿ ಸೂರ್ಯ – Kannada News | Bengaluru BJP MP Tejasvi Surya spoke on the Anti Paper Leak Amendment Bill in Lok Sabha Praises PM Modi

ನವದೆಹಲಿ, ಆಗಸ್ಟ್ 5: ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಈಗಾಗಲೇ ಪ್ರಶ್ನೆಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆ ಮಂಡನೆಯಾಗಿ ರಾಷ್ಟ್ರಪತಿಗಳಿಂದಲೂ ಅಂಗೀಕಾರಗೊಂಡಿದೆ. ಈ ಸಮಯದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಲೋಕಸಭಾ ಮುಂಗಾರು ಅಧಿವೇಶನದಲ್ಲಿ ಮಾಡಿರುವ ಭಾಷಣದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಸದ್ದು ಮಾಡುತ್ತಿವೆ. ಲೋಕಸಭೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆಯ ಮಂಡನೆ ವೇಳೆ ಮಾತನಾಡಿದ್ದ ತೇಜಸ್ವಿ ಸೂರ್ಯ ವಿರೋಧ ಪಕ್ಷಗಳ ಬೆವರಿಳಿಸಿದ್ದಾರೆ. “ದೇಶದ ಯುವಕರಿಗೆ ನ್ಯಾಯಯುತ…

Read More

ಒಬ್ಬ ವ್ಯಕ್ತಿ ತನ್ನ ಹೆಸರಿನಲ್ಲಿ ಎಷ್ಟು ಬ್ಯಾಂಕ್ ಅಕೌಂಟ್ ತೆರೆಯಲು ಅವಕಾಶವಿದೆ – Kannada News | Bank Accounts: How many bank accounts can a person open

ಸಾಂದರ್ಭಿಕ ಚಿತ್ರImage Credit source: Priyanka Parashar/Mint via Getty Images ಸಾಮಾನ್ಯವಾಗಿ ಎಲ್ಲರ ಬಳಿ ಒಂದಾದರೂ ಸೇವಿಂಗ್ ಅಕೌಂಟ್ (Saving account) ಇದ್ದೇ ಇರುತ್ತದೆ. ಆದರೆ ಕೆಲವರು ಒಂದಲ್ಲ ಎರಡು ಮೂರು ಬ್ಯಾಂಕ್ ಖಾತೆಗಳನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಹೊಂದಿರುತ್ತಾರೆ. ಒಬ್ಬ ವ್ಯಕ್ತಿ ತನ್ನ ಹೆಸರಿನಲ್ಲಿ ಎಷ್ಟು ಬ್ಯಾಂಕ್ ಖಾತೆಗಳನ್ನು ಹೊಂದಬಹುದು ಎಂಬುದು ಹೆಚ್ಚಿನವರಿಗೆ ತಿಳಿದೇ ಇಲ್ಲ. ಆದರೆ ವ್ಯಕ್ತಿಯೂ ತನ್ನ ಹೆಸರಿನಲ್ಲಿ ಎಷ್ಟು ಬೇಕಾದರೂ ಬ್ಯಾಂಕ್ ಖಾತೆಗಳನ್ನು ತೆರೆಯಲು ಅವಕಾಶವಿದೆ. ಭಾರತೀಯ ರಿಸರ್ವ್ ಬ್ಯಾಂಕ್…

Read More

ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್: ಸಿಎಂ ಡಿ.ಕೆ.ಶಿವಕುಮಾರ್ ಮನವೊಲಿಕೆ ಸಕ್ಸಸ್ – Kannada News | Congress Leadership Successfully Persuades Indi MLA Yashwantharayagouda Patil to Revoke Resignation

ಬೆಂಗಳೂರು, ಆ.5: ಸಚಿವ ಸಂಪುಟ ವಿಸ್ತರಣೆ ನಂತರ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ನಡುವೆ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಸಚಿವ ಸ್ಥಾನ ಸಿಗದ ಕಾರಣ ರಾಜೀನಾಮೆ ಸಲ್ಲಿಸಿದ್ದ ಪಾಟೀಲ್ ಅವರ ಮನವೊಲಿಕೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ವರಿಷ್ಠರು ಯಶಸ್ವಿಯಾಗಿದ್ದಾರೆ. ರಾಜೀನಾಮೆ ಸಲ್ಲಿಸುವಾಗ, ಯಾವುದೇ ಒತ್ತಡಕ್ಕೆ ಮಣಿದು ನಿರ್ಧಾರವನ್ನು ಹಿಂಪಡೆಯುವುದಿಲ್ಲ ಎಂದು ಯಶವಂತರಾಯಗೌಡ ಪಾಟೀಲ್ ಸ್ಪಷ್ಟಪಡಿಸಿದ್ದರು. ಆದರೆ, ಸಿ.ಎಂ. ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ,…

Read More

ಸಖತ್ ತರ್ಲೆ, ಸಲ್ಮಾನ್ ಖಾನ್ ಬುಕ್ ಪ್ರಿಂಟ್ ಹಾಕಿಸಿದ ಜೆನ್ ಜಿಗಳು – Kannada News | ‘Bhai Ke Dohe’, the collection of the Salman Khan’s tweets

ಸಲ್ಮಾನ್ ಖಾನ್ (Salman Khan), ಬಾಲಿವುಡ್​​ನ ಸೂಪರ್ ಸ್ಟಾರ್ ನಟ. ಭಿನ್ನ ವ್ಯಕ್ತಿತ್ವದ, ಸಾಕಷ್ಟು ವಿವಾದಗಳನ್ನೂ ಹೊಂದಿರುವ ಆದರೆ ಅಷ್ಟೆ ದೊಡ್ಡ ಅಭಿಮಾನಿ ಬಳಗವನ್ನೂ ಹೊಂದಿರುವ ನಟ. ಟ್ರೋಲಿಗರಿಗಂತೂ ಬಲು ಪ್ರಿಯ ಸೆಲೆಬ್ರಿಟಿ ಸಲ್ಮಾನ್ ಖಾನ್. ಇತ್ತೀಚೆಗೆ ಜೆನ್ ಜಿಗಳ ಪ್ರತಿಭಟನೆಗೆ ಸಹ ಸಲ್ಮಾನ್ ಖಾನ್ ಬೆಂಬಲ ನೀಡಿದ್ದರು, ಅಲ್ಲದೆ, ವಿದ್ಯಾರ್ಥಿಗಳು ಪ್ರತಿಭಟನೆ ನಿಲ್ಲಿಸುವಂತೆ, ಸೋನಂ ವಾಂಕ್ಚುಕ್ ಉಪವಾಸ ನಿಲ್ಲಿಸುವಂತೆ ಟ್ವೀಟ್ ಸಹ ಮಾಡಿದ್ದರು. ಇತರೆ ಸೆಲೆಬ್ರಿಟಿಗಳಂತೆ ‘ಪೊಲಿಟಿಕಲಿ ಕರೆಕ್ಟ್’ ಆದ ಟ್ವೀಟ್​​ಗಳನ್ನು ಸಲ್ಮಾನ್ ಖಾನ್ ಮಾಡುವುದಿಲ್ಲ,…

Read More

ಥರ್ಡ್ ಪಾರ್ಟಿ ಇನ್ಷೂರೆನ್ಸ್ ಇಲ್ಲದಿದ್ದರೆ ಪೆಟ್ರೋಲ್-ಡೀಸಲ್ ಸಿಗಲ್ಲ: ಸುಪ್ರೀಂಕೋರ್ಟ್ ನಿರ್ದೇಶನದಲ್ಲಿ ಬರಲಿದೆ ಹೊಸ ಕಾನೂನು – Kannada News | No Petrol likely if don’t have third party insurance for vehicles, Supreme Court tells govt to come up with a law

ನವದೆಹಲಿ, ಆಗಸ್ಟ್ 5: ವಾಹನಗಳಿಗೆ ಮಾನ್ಯತೆ ಹೊಂದಿರುವ ಥರ್ಡ್ ಪಾರ್ಟಿ ಇನ್ಶೂರೆನ್ಸ್ (Third-party Insurance) ಇಲ್ಲದಿದ್ದರೆ ಪೆಟ್ರೋಲ್ ಪಂಪ್‌ಗಳಲ್ಲಿ ಪೆಟ್ರೋಲ್/ಡೀಸಲ್/ಗ್ಯಾಸ್ ಸಿಗದೇ ಹೋಗುವ ದಿನ ದೂರ ಇಲ್ಲ. ಇಂಥದ್ದೊಂದು ಕಾನೂನು ರೂಪಿಸಲು ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಪ್ರಾಯೋಗಿಕವಾಗಿ ಈ ಕಾನೂನು ತರುವಂತೆ ಕೋರ್ಟ್ ಆದೇಶ ನೀಡಿದೆ. ದೇಶದಲ್ಲಿ ಸಂಭವಿಸುವ ರಸ್ತೆ ಅಪಘಾತಗಳಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಸಿಗುವುದನ್ನು ಖಚಿತಪಡಿಸಿಕೊಳ್ಳಲು ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ಪೀಠವು ಈ ಮಹತ್ವದ ನಿರ್ದೇಶನ…

Read More

ಗಂಡನಿಗಿಂತ 3 ಪಟ್ಟು ಹೆಚ್ಚು ಸಂಭಾವನೆ ಪಡೆಯುತ್ತಿದ್ದ ಜ್ಯೋತಿಕಾ: ಈಗ 30 ಪಟ್ಟು ಕಡಿಮೆ – Kannada News | Jyotika Remuneration was 3 times more than husband Suriya Kaakha Kaakha days

ದಕ್ಷಿಣ ಭಾರತದ ಸೂಪರ್‌ಹಿಟ್ ಜೋಡಿಗಳಲ್ಲಿ ನಟ ಸೂರ್ಯ ಹಾಗೂ ಜ್ಯೋತಿಕಾ (Jyotika) ದಂಪತಿ ಪ್ರಮುಖರು. 1999ರಲ್ಲಿ ತೆರೆಕಂಡ ‘ಪೂವೆಲ್ಲಾಂ ಕೇಟ್ಟುಪ್ಪಾರ್’ ಸಿನಿಮಾದ ಶೂಟಿಂಗ್ ಸೆಟ್‌ನಲ್ಲಿ ಮೊದಲ ಬಾರಿಗೆ ಭೇಟಿಯಾದ ಈ ಜೋಡಿ, 2003ರ ‘ಕಾಖಾ ಕಾಖಾ’ ಚಿತ್ರದ ಸಮಯದಲ್ಲಿ ಪ್ರೀತಿಯಲ್ಲಿ ಬಿದ್ದರು. 2006ರ ಸೆಪ್ಟೆಂಬರ್ 11ರಂದು ಚೆನ್ನೈನಲ್ಲಿ ವಿವಾಹವಾದ ಈ ದಂಪತಿ, ಶೀಘ್ರದಲ್ಲೇ ತಮ್ಮ 20ನೇ ಮದುವೆಯ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳಲಿದ್ದಾರೆ. ಈ ಸುಂದರ ದಂಪತಿಗೆ ದಿಯಾ ಎಂಬ ಮಗಳು ಹಾಗೂ ದೇವ್ ಎಂಬ ಮಗನಿದ್ದಾನೆ. ಸೂರ್ಯ (Suriya)…

Read More

ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ: ಸಚಿವ ರಾಮಲಿಂಗಾರೆಡ್ಡಿ ಖಡಕ್ ಎಚ್ಚರಿಕೆ – Kannada News | Karnataka Firm on Mekedatu: Minister Reddy Dismisses TN Resolution, DPR by Aug 15

ಬೆಂಗಳೂರು ಆ. 5: ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ತಮಿಳುನಾಡಿಗೆ ಖಡಕ್ ತಿರುಗೇಟು ನೀಡಿದ್ದಾರೆ. ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಯಾವುದೇ ಅಧಿಕಾರವಿಲ್ಲ ಹಾಗೂ ರಾಜ್ಯ ಸರ್ಕಾರವು ಖಂಡಿತವಾಗಿಯೂ ಈ ಯೋಜನೆಯನ್ನು ಜಾರಿಗೆ ತರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳು ಆಕ್ಷೇಪ ಎತ್ತುವಂತಿಲ್ಲ ಎಂದು ಸ್ವತಃ ಕೇಂದ್ರ ಸರ್ಕಾರವೇ ಸ್ಪಷ್ಟಪಡಿಸಿದೆ. ಯೋಜನೆಗೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿ (DPR) ಸಲ್ಲಿಸಲು…

Read More

ಪ್ರಜ್ವಲ್ ರೇವಣ್ಣ ಹುಟ್ಟು ಹಬ್ಬದ ಹಿನ್ನೆಲೆ ಹಾಸನದಲ್ಲಿ ರಾರಾಜಿಸಿದ ಫ್ಲೆಕ್ಸ್​​ಗಳು – Kannada News | Former MP Prajwal Revanna’s Flexes Return to Hassan After Two Years

ಹಾಸನ, ಆಗಸ್ಟ್​​ 05: ಎರಡು ವರ್ಷಗಳ ಬಳಿಕ ಹಾಸನದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು ಮತ್ತೆ ಪ್ರತ್ಯಕ್ಷವಾಗಿವೆ. ಇಂದು ಪ್ರಜ್ವಲ್ ಹುಟ್ಟು ಹಬ್ಬದ ಹಿನ್ನೆಲೆ ಹೊಳೆನರಸೀಪುರದ ಅಂಬೇಡ್ಕರ್ ವೃತ್ತದಲ್ಲಿ ದೊಡ್ಡ ದೊಡ್ಡ ಫ್ಲೆಕ್ಸ್ ಹಾಕಿ ಶುಭಾಶಯ ಕೋರಲಾಗಿದೆ. ಸಂಸದರಾಗಿದ್ದ ವೇಳೆ ಹಲವು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬಂಧನಕ್ಕ ಒಳಗಾಗಿದ್ದ ಪ್ರಜ್ವಲ್, ಸದ್ಯ ಒಂದು ಕೇಸ್​​ನಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೀವಾವದಿ ಶಿಕ್ಷೆಗೆ ಗುರಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ ಎನ್ನುವುದಿಲ್ಲಿ ಗಮನಾರ್ಹ. ಮತ್ತಷ್ಟು…

Read More

ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಮಹಿಳೆ ಮಾತು ನಂಬಿ ಲಕ್ಷಾಂತರ ರೂ. ಕಳೆದುಕೊಂಡ ಬೆಂಗಳೂರಿನ ವ್ಯಕ್ತಿ – Kannada News | Matrimony Trap: Bengaluru Man Duped of Lakhs in Fake Cryptocurrency Trading Scam; FIR Registered

ಬೆಂಗಳೂರು, ಆಗಸ್ಟ್​ 05: ಮ್ಯಾಟ್ರಿಮೋನಿ ವೆಬ್‌ಸೈಟ್‌ನಲ್ಲಿ ಪರಿಚಯವಾದ ಮಹಿಳೆಯೊಬ್ಬಳು ನಂಬಿಕೆ ಗಳಿಸಿ ನಕಲಿ ಕ್ರಿಪ್ಟೋಕರೆನ್ಸಿ ಟ್ರೇಡಿಂಗ್ ವೆಬ್‌ಸೈಟ್‌ಗಳಲ್ಲಿ ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ, ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಆಗಸ್ಟ್ 3ರಂದು ದಾಖಲಾಗಿರುವ ಎಫ್‌ಐಆರ್ ಪ್ರಕಾರ ಈ ವಂಚನೆ 2025ರ ಅಕ್ಟೋಬರ್ 27ರಂದು ಆರಂಭವಾಗಿದ್ದು, ನಿಹಾರಿಕಾ ಚೌಧರಿ ಎಂಬ ಹೆಸರಿನಲ್ಲಿ ಪರಿಚಯಿಸಿಕೊಂಡಿದ್ದ ಮಹಿಳೆ ಹಣ ಪೀಕಿರುವುದಾಗಿ ಆರೋಪಿಸಲಾಗಿದೆ. ಆಕೆ ತಾನು ಮೂಲತಃ ಆಂಧ್ರಪ್ರದೇಶದ ವಿಜಯವಾಡದವಳಾಗಿದ್ದು, ಪ್ರಸ್ತುತ ಯುನೈಟೆಡ್ ಕಿಂಗ್‌ಡಮ್‌ನಲ್ಲಿ ವಾಸವಿದ್ದೇನೆ. ಲಾಜಿಸ್ಟಿಕ್ಸ್ ಕಂಪನಿಯಲ್ಲಿ…

Read More