Headlines

ಕನ್ನಡದಲ್ಲಿ ಅಂಬರೀಷ್, ತೆಲುಗಿನಲ್ಲಿ ಪ್ರಭಾಸ್; ಇಬ್ಬರೂ ರೆಬೆಲ್ ಸ್ಟಾರ್ ಮಧ್ಯೆ ಇದೆ ಸಾಮ್ಯತೆ

ಕನ್ನಡ ಚಿತ್ರರಂಗದಲ್ಲಿ ರೆಬೆಲ್ ಸ್ಟಾರ್ ಅಂತ ಇದ್ದವರು ಅಂಬರೀಷ್. ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಮಿಂಚಿ ಅವರು ಮರೆಯಾದರು. ಅವರು ಈಗಲೂ ಅನೇಕರ ಫೇವರಿಟ್. ತೆಲುಗಿನಲ್ಲಿ ಪ್ರಭಾಸ್ (Prabhas) ಅವರನ್ನು ರೆಬೆಲ್ ಸ್ಟಾರ್ ಎನ್ನುತ್ತಾರೆ. ಈಗಲೂ ಅವರು ಸಿನಿಮಾಗಳನ್ನು ಮಾಡುತ್ತಾ ಇದ್ದಾರೆ. ಈಗ ಇಬ್ಬರ ಮಧ್ಯೆ ಒಂದು ಸಾಮ್ಯತೆ ಇದೆ ಎಂಬ ವಿಷಯ ಗೊತ್ತಾಗಿದೆ. ‘ಆಲ್​ ರೌಂಡರ್’ ಹೆಸರಿನ ಯೂಟ್ಯೂಬ್ ಚಾನೆಲ್ ಅಲ್ಲಿ ಕಾಸ್ಟಿಂಗ್ ನಿರ್ದೇಶಕ ನಂದ ಕೀಶೋರ್ ಮಾತನಾಡಿದ್ದಾರೆ. ಅವರು ತೆಲುಗು ಚಿತ್ರರಂಗವನ್ನು ಹತ್ತಿರದಿಂದ ಕಂಡವರು….

Read More

ಕರ್ನಾಟಕದ ಕಾಲು ಭಾಗ ಜನ ಕುಡಿಯೋದು ಕ್ಯಾನ್, ಬಾಟಲ್ ನೀರು! ಇಲ್ಲಿ ನಲ್ಲಿ ನೀರಿಗಿಂತ ಬಾಟಲ್ ವಾಟರ್‌ಗೇ ಹೆಚ್ಚು ಡಿಮಾಂಡ್

ಬೆಂಗಳೂರು, ಏಪ್ರಿಲ್ 7: ಭಾರತದಲ್ಲಿ ಕುಡಿಯುವ ನೀರಿನ (Drinking Water) ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ವದ, ಕ್ರಾಂತಿಕಾರಕ ಬದಲಾವಣೆಯಾಗಿದ್ದು, ದೇಶದ ಶೇ 95ರಷ್ಟು ಕುಟುಂಬಗಳು ಇಂದು ಶುದ್ಧ ಕುಡಿಯುವ ನೀರಿನ ಸೌಲಭ್ಯ ಹೊಂದಿವೆ. ಇದರೊಂದಿಗೆ, ಕುಡಿಯುವ ನೀರು ಸಂಪರ್ಕದ ಈ ಪ್ರಗತಿಯಲ್ಲಿ ಭಾರತ ಜಗತ್ತಿಗೇ ಮಾದರಿಯಾಗಿದೆ. ಆದರೆ, ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಂದು ಕುತೂಹಲಕಾರಿ ಬೆಳವಣಿಗೆ ಕಂಡುಬಂದಿದೆ. ಬೆಂಗಳೂರು (Bangalore) ಸೇರಿದಂತೆ ದಕ್ಷಿಣ ಭಾರತದ ಹೆಚ್ಚಿಮ ನಗರವಾಸಿಗಳು ನಲ್ಲಿ ನೀರಿಗಿಂತ ಹೆಚ್ಚಾಗಿ ‘ಬಾಟಲ್ ವಾಟರ್’ ಅಥವಾ ‘ಕ್ಯಾನ್…

Read More

ಪ್ರಸಿದ್ಧ ರಾಜರಾಜೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನಂತ್ ಅಂಬಾನಿಯಿಂದ 12 ಕೋಟಿ ರೂ; ಶಿಥಿಲಗೊಂಡ ಗೋಪುರದ ಪುನಃಸ್ಥಾಪನೆಗೆ ನೆರವು

ಮುಂಬೈ: ಭಾರತದ ಗಣ್ಯ ಉದ್ಯಮಿಯಾದ ಮುಕೇಶ್ ಅಂಬಾನಿ ಅವರ ಮಗ ಅನಂತ್ ಅಂಬಾನಿ (Anant Ambani) ಅವರು ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಬದಲ್ಲಿರುವ ಐತಿಹಾಸಿಕ ರಾಜರಾಜೇಶ್ವರ ದೇವಸ್ಥಾನಕ್ಕೆ (Rajarajeshwara temple) ಕಳೆದ ವಾರ (ಏಪ್ರಿಲ್ 2) ಭೇಟಿ ನೀಡಿದರು. ಸಾಕಷ್ಟು ಸಂಖ್ಯೆಯಲ್ಲಿ ದೇವಸ್ಥಾನದ ಭಕ್ತರು ಮತ್ತು ಅವರ ಹಿತೈಷಿಗಳು ಗುರುವಾರ ಸಂಜೆ 8 ಗಂಟೆಗೆ ಅವರ ಭೇಟಿಗೆ ಸಾಕ್ಷಿಯಾಗಿದ್ದರು. ಮುಕೇಶ್ ಅಂಬಾನಿಯವರ ಕಿರಿಯ ಮಗನಾದ ಅನಂತ್ ಅಂಬಾನಿ ಅವರು ದೇವಸ್ಥಾನದಲ್ಲಿ ವಿವಿಧ ಸೇವೆಗಳನ್ನು ಸಲ್ಲಿಸಿದರು. ಪೊನ್ನುಂಕುಡಂ, ಪಟ್ಟಂ,…

Read More

ಮುಟ್ಟಾದ ಹೆಣ್ಣುಮಕ್ಕಳು ಶಬರಿಮಲೆಗೆ ಹೋಗಬಹುದೇ? ಸುಪ್ರೀಂನಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ ಶುರು

ನವದೆಹಲಿ, ಏಪ್ರಿಲ್ 07: ಶಬರಿಮಲೆ(Sabarimala) ಅಯ್ಯಪ್ಪ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ 2018ರ ತೀರ್ಪಿನ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 7 ರಿಂದ ಆರಂಭಿಸಿದೆ. 9 ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಈ ಸಂವೇದನಾಶೀಲ ಪ್ರಕರಣವನ್ನು ಪರಿಶೀಲಿಸುತ್ತಿದೆ. 10-50 ವರ್ಷದ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿದ್ದ ಹಿಂದಿನ ತೀರ್ಪನ್ನು ಭಕ್ತರು ಮತ್ತು ಕೇರಳ ಸರ್ಕಾರ ವಿರೋಧಿಸಿದ್ದು, ಈ ಬಾರಿಯ ವಿಚಾರಣೆಯಲ್ಲಿ ಧಾರ್ಮಿಕ ಆಚರಣೆ ಮತ್ತು ಸಂವಿಧಾನಿಕ ಹಕ್ಕುಗಳ ಸಮತೋಲನದ ಕುರಿತು ಚರ್ಚೆ ನಡೆಯಲಿದೆ….

Read More

‘ಕೆಡಿ’ ಹಾಡು ವಿವಾದ, ನೋರಾ ಫತೇಹಿ, ಸಂಜಯ್ ದತ್​​ಗೆ ಮತ್ತೊಮ್ಮೆ ನೊಟೀಸ್

ಪ್ರೇಮ್ ನಿರ್ದೇಶಿಸಿ, ಧ್ರುವ ಸರ್ಜಾ (Dhruva Sarja) ನಟಿಸಿರುವ ‘ಕೆಡಿ’ ಸಿನಿಮಾದ ಹಾಡೊಂದು ಭಾರಿ ವಿವಾದ ಸೃಷ್ಟಿಸಿತ್ತು. ‘ಸೆರಗ ಸರ್ಸೆ’ ಹಾಡಿನ ಸಾಹಿತ್ಯ ಮತ್ತು ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿವಾದ ಉಂಟಾಗಿದ್ದು, ಈ ವಿಷಯ ಲೋಕಸಭೆಯಲ್ಲಿ ಸಹ ಚರ್ಚೆ ಆಗಿತ್ತು. ಹಾಡು ಅಶ್ಲೀಲವಾಗಿದೆ ಎಂಬ ಕಾರಣಕ್ಕೆ ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ನಿರ್ದೇಶಕ ಮತ್ತು ಹಾಡಿನ ಮೂಲ ಸಾಹಿತ್ಯ ಬರೆದಿರುವ ಪ್ರೇಮ್, ಹಾಡಿನಲ್ಲಿ ನಟಿಸಿರುವ ನೋರಾ ಫತೇಹಿ, ಸಂಜಯ್ ದತ್ ಹಾಗೂ ಹಾಡಿನ ಹಿಂದಿ…

Read More

ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಶಿಕ್ಷಕಿಯ ಮೃತದೇಹ ಸುಟ್ಟ ದುಷ್ಟ: ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ನಡೆದಿದ್ದು ಭೀಕರ ಕೊಲೆ

ಕಲಬುರಗಿ, ಏಪ್ರಿಲ್​​ 07: ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಅರೆಬೆಂದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣದ ರಹಸ್ಯ ಕೊನೆಗೂ ಬಯಲಾಗಿದೆ. ಕೊಲೆಯಾದ ಮಹಿಳೆ ಶಾಲಾ ಶಿಕ್ಷಕಿ (Teacher)  ಜ್ಯೋತಿ ಕಪಾಳೆ ಹಿರೇಮಠ(57) ಎಂಬುದು ಗೊತ್ತಾಗಿದ್ದು, ಕೊಟ್ಟ ಹಣ (Money) ವಾಪಸ್ ಕೇಳಿದ್ದಕ್ಕೆ ಪರಿಚಯಸ್ಥ ವ್ಯಕ್ತಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಶಿಕ್ಷಕಿಯ ಮೃತ ದೇಹವನ್ನು ಸುಟ್ಟು ಹಾಕಿರೋದು ಹೊತ್ತಾಗಿದೆ. ಪ್ರಕರಣ ಸಂಬಂಧ ಆರೋಪಿ ಆನಂದ್​​ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಂದರಖೇಡ…

Read More

ಇದ್ದಕ್ಕಿದ್ದಂತೆ ಗಂಡ ನಾಪತ್ತೆ, ಮೈದುನನ ಜತೆ ಪತ್ನಿ ಮದುವೆ, 25 ವರ್ಷಗಳ ಬಳಿಕ ಬಂದ ಮೊದಲ ಪತಿ

ಬಿಜ್ನೋರ್, ಏಪ್ರಿಲ್ 07: ಇದ್ದಕ್ಕಿದ್ದಂತೆ ಗಂಡ ನಾಪತ್ತೆಯಾಗಿದ್ದ, ಕುಟುಂಬದವರು ಮಹಿಳೆಯನ್ನು ಮೈದುನನಿಗೆ ಕೊಟ್ಟು ಮದುವೆ(Marriage) ಮಾಡಿದ್ದರು. ಈಗ 25 ವರ್ಷಗಳ ಬಳಿಕ ಮೊದಲ ಪತಿ ಮನೆಗೆ ಮರಳಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್​ನಲ್ಲಿ ನಡೆದಿದೆ.25 ವರ್ಷಗಳಿಂದ ಕಾಣೆಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಅವರ ಕುಟುಂಬದೊಂದಿಗೆ ಮತ್ತೆ ಸೇರಿಸಿದ್ದಾರೆ. ಪಂಜಾಬ್ ನಿವಾಸಿಯಾದ ಈ ವ್ಯಕ್ತಿ ನಹ್ತೌರ್ ಮಾರುಕಟ್ಟೆಯಲ್ಲಿ ಪತ್ತೆಯಾದಾಗಿದ್ದಾರೆ. ಮೂರು ದಿನಗಳ ಹಿಂದೆ, ನಹ್ತೌರ್‌ನ ನಯಾ ಬಜಾರ್‌ನಲ್ಲಿ ಹರಿದ ಬಟ್ಟೆ ಮತ್ತು ಉದ್ದನೆಯ ಗಡ್ಡವನ್ನು ಬಿಟ್ಟಿದ್ದ ಮಧ್ಯ ವಯಸ್ಕ ವ್ಯಕ್ತಿಯೊಬ್ಬರು…

Read More

ಜನಗಣತಿ ಕಾರ್ಯಕ್ಕೆ ಆಸ್ಪತ್ರೆ ಸಿಬ್ಬಂದಿ ನಿಯೋಜನೆ: ರೋಗಿಗಳಿಗೆ ವೈದ್ಯಕೀಯ ಸೇವೆ ಸಿಗೋದು ಡೌಟ್

ಬೆಂಗಳೂರು, ಏಪ್ರಿಲ್ 7: ರಾಜಧಾನಿ ಬೆಂಗಳೂರಿನ (Bangalore) ಸರ್ಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ತಜ್ಞರು ಮತ್ತು ಸಿಬ್ಬಂದಿಯ ಕೊರತೆ ಎದ್ದು ಕಾಣುತ್ತಿದೆ. ಇಂತಹ ಸಂದರ್ಭದಲ್ಲಿ 2027ರ ಜನಗಣತಿ ಸಮೀಕ್ಷಾ ಕಾರ್ಯಕ್ಕೆ ಆರೋಗ್ಯ ಇಲಾಖೆಯ ನೌಕರರನ್ನು ಬಳಸಿಕೊಳ್ಳುತ್ತಿರುವುದು ರೋಗಿಗಳಿಗೆ ಭಾರಿ ಸಂಕಷ್ಟ ತಂದೊಡ್ಡಲಿದೆ. ವೈದ್ಯಕೀಯ ಸೇವೆಗಳ ಮೇಲೆ ಪರಿಣಾಮ ಬೀರಲಿದ್ದು, ಆಸ್ಪತ್ರೆ ಸಿಬ್ಬಂದಿಯನ್ನು ಗಣತಿ ಕಾರ್ಯಕ್ಕೆ ಬಳಸಿಕೊಳ್ಳದಂತೆ ಮನವಿ ಮಾಡಲಾಗಿದೆ. ಯಾರೆಲ್ಲಾ ಜನಗಣತಿ ಕಾರ್ಯಕ್ಕೆ? ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಪ್ಯಾರಾ ಮೆಡಿಕಲ್ ಸಿಬ್ಬಂದಿ, ಲ್ಯಾಬ್ ಟೆಕ್ನಿಶಿಯನ್ಸ್,…

Read More

Viral: ನಿರ್ಮಾಣದ ಹೆಸರಿನಲ್ಲಿ ಹದಗೆಟ್ಟ ಬೆಂಗಳೂರು; ವರ್ಷಗಳ ಬಳಿಕ ನಗರಕ್ಕೆ ಮರಳಿದ ವ್ಯಕ್ತಿ ಹೀಗೆಂದಿದ್ದೇಕೆ?

ಬೆಂಗಳೂರು,  ಏಪ್ರಿಲ್‌ 07: ಮಾಯಾನಗರಿ ಬೆಂಗಳೂರು (Bengaluru), ಯುವಕರ ಪಾಲಿಗೆ ಅದೊಂದು ಕನಸಿನ ಲೋಕ, ಹೀಗಾಗಿ ನೂರಾರು ಕನಸುಗಳನ್ನು ಹೊತ್ತು ಇಲ್ಲಿಗೆ ಲಕ್ಷಾಂತರ ಜನರು ಬರುತ್ತಾರೆ. ಹೀಗೆ ಬಂದವರು ಹಾಗೂ ಇಲ್ಲಿನ ನಿವಾಸಿಗಳು ಕೂಡ ಇಲ್ಲಿನ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಪ್ರಯತ್ನ ಮಾಡುವುದು ಕಡಿಮೆ. ಹೀಗಿರುವಾಗ ಬೆಂಗಳೂರಿನ ನಿವಾಸಿಯೊಬ್ಬರು ಎರಡು ವರ್ಷಗಳ ಬಳಿಕ ಈ ನಗರಕ್ಕೆ ಮರಳಿದ್ದು, ಇಲ್ಲಿನ ವಾಸ್ತವ ಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ. ನಗರದ ಹದಗೆಡುತ್ತಿರುವ ಸ್ಥಿತಿಯ ಬಗ್ಗೆ ಬೆಂಗಳೂರಿನ ನಿವಾಸಿಯೊಬ್ಬರು ಮಾಡಿದ ಪ್ರಾಮಾಣಿಕ ಪೋಸ್ಟ್…

Read More

ಒಂದೇ ಚಿತ್ರದಲ್ಲಿ ಇಬ್ಬರು ಬಿಗ್ ಬಾಸ್ ವಿನ್ನರ್ಸ್; ಗಮನ ಸೆಳೆದ ‘ಎಲ್ರ ಕಾಲೆಳಿಯುತ್ತೆ ಕಾಲ’ ಟ್ರೇಲರ್

ರ‍್ಯಾಪರ್ ಚಂದನ್ ಶೆಟ್ಟಿ ಅವರು ‘ಬಿಗ್ ಬಾಸ್’ ವಿನ್ನರ್ ಆಗಿ ಗಮನ ಸೆಳೆದರು. ಆ ಬಳಿಕ ಅವರು ನಟನೆಯಲ್ಲಿ ಬ್ಯುಸಿ ಆದರು.ಈಗ ಅವರು ನಟ ಕೂಡ ಹೌದು. ಇನ್ನು, ಮತ್ತೋರ್ವ ಬಿಗ್ ಬಾಸ್ (Bigg Boss) ವಿನ್ನರ್ ಮಂಜು ಪಾವಗಡ ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಬ್ಯುಸಿ ಇದ್ದಾರೆ. ಇಬ್ಬರೂ ಒಟ್ಟಾಗಿ ನಟಿಸಿರೋ ‘ಎಲ್ರ ಕಾಲೆಳಿಯುತ್ತೆ ಕಾಲ’ ಟ್ರೇಲರ್ ರಿಲೀಸ್ ಆಗಿದೆ. ಈ ಸಿನಿಮಾಗೆ ನಟ ಸುಜಯ್ ಶಾಸ್ತ್ರಿ ನಿರ್ದೇಶನ ಇದೆ. ಅರ್ಚನಾ ಕೊಟ್ಟಿಗೆ ನಾಯಕಿ ಆಗಿರೋ…

Read More