RCB ಪರ ಇನಿಂಗ್ಸ್ ಆರಂಭಿಸುವವರು ಯಾರು? – Kannada News | Virat Kohli’s Opening Partner: Iyer or Salt for IPL 2026: Qualifier 1

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹೈವೋಲ್ಟೇಜ್ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಧರ್ಮಶಾಲಾದ ಹೆಚ್​​ಪಿಸಿಎ ಮೈದಾನದಲ್ಲಿ ಇಂದು (ಮೇ 26) ನಡೆಯಲಿರುವ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ ಇನಿಂಗ್ಸ್ ಆರಂಭಿಸುವವರು ಯಾರು ಎಂಬುದೇ ಪ್ರಶ್ನೆ. ಏಕೆಂದರೆ ಗಾಯದ ಕಾರಣ ಕಳೆದ ಕೆಲ ಪಂದ್ಯಗಳಿಂದ ಹೊರಗುಳಿದಿದ್ದ ಫಿಲ್ ಸಾಲ್ಟ್ ಇದೀಗ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಇದಾಗ್ಯೂ ಅವರು ಓಪನರ್ ಆಗಿ ಕಣಕ್ಕಿಳಿಯುವ…

Read More

‘ಧುರಂಧರ್’ ಗೆದ್ದರೂ ರಣವೀರ್ ಸಿಂಗ್ ‘ಶಕ್ತಿಮಾನ್’ ಆಗಲು ಸಾಧ್ಯವಿಲ್ಲ: ಕಾರಣ ಏನು? – Kannada News | Mukesh Khanna on why Ranveer Singh is not right for Shaktimaan Movie

ಭಾರತದ ಮೊದಲ ಸೂಪರ್ ಹೀರೋ ‘ಶಕ್ತಿಮಾನ್’ (Shaktimaan) ಕಥೆಯನ್ನು ಬೆಳ್ಳಿತೆರೆಗೆ ತರುವ ಪ್ಲ್ಯಾನ್ ಇದೆ. ಆದರೆ, ಈ ಪಾತ್ರಕ್ಕೆ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅವರನ್ನು ಆಯ್ಕೆ ಮಾಡುವ ವಿಚಾರದಲ್ಲಿ ಕಿರುತೆರೆಯ ಶಕ್ತಿಮಾನ್ ನಟ ಮುಖೇಶ್ ಖನ್ನಾ Mukesh Khanna ಅವರು ಸಹಮತಿ ಸೂಚಿಸುತ್ತಿಲ್ಲ. ರಣವೀರ್ ಎಷ್ಟೇ ದೊಡ್ಡ ನಟನಾಗಿದ್ದರೂ ಅವರು ಶಕ್ತಿಮಾನ್ ಪಾತ್ರಕ್ಕೆ ಸೂಕ್ತವಲ್ಲ ಎಂದು ಮುಖೇಶ್ ಖನ್ನಾ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ರಣವೀರ್ ಸಿಂಗ್ (Ranveer Singh) ಅವರ ನಟನಾ ಸಾಮರ್ಥ್ಯದ…

Read More

ಭಾರತಕ್ಕೆ 2ನೇ ಅತಿದೊಡ್ಡ ರಫ್ತು ಮಾರುಕಟ್ಟೆ ಈಗ ಯುಎಇ ಅಲ್ಲ, ಸಿಂಗಾಪುರ – Kannada News | India’s big export markets, Singapore replaces UAE for second position

ನವದೆಹಲಿ, ಮೇ 17: ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ (west asia conflict) ಭಾರತದ ವಿದೇಶಿ ವ್ಯಾಪಾರ ವಲಯದಲ್ಲಿ ಮಹತ್ವದ ಬದಲಾವಣೆಯಾಗಿದೆ. ಮಾಧ್ಯಮ ವರದಿಯ ಪ್ರಕಾರ, ಯುಎಇ (UAE) ದೇಶವನ್ನು ಹಿಂದಿಕ್ಕಿ ಸಿಂಗಾಪುರವು ಈಗ ಭಾರತದ ಎರಡನೇ ಅತಿ ದೊಡ್ಡ ರಫ್ತು ಮಾರುಕಟ್ಟೆಯಾಗಿ ಹೊರಹೊಮ್ಮಿದೆ. ಮಧ್ಯಪ್ರಾಚ್ಯದಲ್ಲಿ ತಲೆದೋರಿರುವ ಯುದ್ಧದ ಪರಿಸ್ಥಿತಿ ಮತ್ತು ಮಾರ್ಚ್ ತಿಂಗಳಿನಿಂದ ಹಾರ್ಮುಜ್ ಜಲಸಂಧಿ (Strait of Hormuz) ಬಹುತೇಕ ಮುಚ್ಚಿರುವುದು ಜಾಗತಿಕ ಇಂಧನ ಮತ್ತು ಸರಕು ಸಾಗಣೆಗೆ ಭಾರಿ ಹೊಡೆತ ನೀಡಿದೆ. ಇರಾನ್…

Read More

‘ದೀದಿ ನಂಬರ್ 1’ ಶೋಗೆ ರಚನಾ ಬ್ಯಾನರ್ಜಿ ವಿದಾಯ? ಮತ್ತೊಬ್ಬ ನಾಯಕಿಗೆ ಆಫರ್ ನೀಡಿದ ವಾಹಿನಿ – Kannada News | Rachana Banerjee to quit Didi No 1 show Channel approaches another actress

ಬಂಗಾಳಿ ಕಿರುತೆರೆಯ ಅತ್ಯಂತ ಜನಪ್ರಿಯ ‘ದೀದಿ ನಂಬರ್ 1’ (Didi No. 1) ರಿಯಾಲಿಟಿ ಶೋನಿಂದ ನಟಿ ರಚನಾ ಬ್ಯಾನರ್ಜಿ (Rachana Banerjee) ಅವರನ್ನು ಬೇರ್ಪಡಿಸಿ ನೋಡುವುದು ಕಷ್ಟ. ಆದರೆ, ಈಗ ಕೇಳಿಬರುತ್ತಿರುವ ಲೇಟೆಸ್ಟ್ ಸುದ್ದಿಯೊಂದರ ಪ್ರಕಾರ, ರಚನಾ ಬ್ಯಾನರ್ಜಿ ಅವರು ಈ ಶೋನಿಂದ (Reality Show) ಹೊರನಡೆಯಲಿದ್ದಾರೆ ಎನ್ನಲಾಗಿದೆ. ಈಗಾಗಲೇ ವಾಹಿನಿಯು ಅವರ ಜಾಗಕ್ಕೆ ಚಿತ್ರರಂಗದ ಮತ್ತೊಬ್ಬ ಯುವ ನಾಯಕಿಯನ್ನು ಸಂಪರ್ಕಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. 2010ರಿಂದ ಆರಂಭವಾದ ‘ದೀದಿ ನಂಬರ್ 1’ ಶೋಗೆ ರಚನಾ…

Read More

ಸಂಸತ್ ಹೊರಗೆ ರಾಹುಲ್ ಗಾಂಧಿಯ ಚಹಾ-ಪಕೋಡ ಪ್ರತಿಭಟನೆಗೆ ಮಾಜಿ ಅಧಿಕಾರಿಗಳ ವಿರೋಧ; ಕ್ಷಮೆ ಯಾಚನೆಗೆ ಒತ್ತಾಯ

ನವದೆಹಲಿ, ಮಾರ್ಚ್ 17: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಮಾರ್ಚ್ 12ರಂದು ಅಧಿವೇಶನದ (Parliament Session) ವೇಳೆ ಸಂಸತ್ತಿನ ಪ್ರವೇಶದ್ವಾರದಲ್ಲಿ ಕುಳಿತು ವಿಪಕ್ಷದ ಸಂಸದರೊಂದಿಗೆ ಚಹಾ ಮತ್ತು ಪಕೋಡ ಸೇವಿಸಿ ಪ್ರತಿಭಟನೆ ನಡೆಸಿದ ಘಟನೆಗೆ ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು 204 ಮಾಜಿ ಅಧಿಕಾರಿಗಳು ಪತ್ರ ಬರೆದಿದ್ದಾರೆ. “ಮಾರ್ಚ್ 12ರ ಘಟನೆ ತೀವ್ರ ಕಳವಳಕಾರಿ ಮತ್ತು ಉದ್ದೇಶಪೂರ್ವಕವಾಗಿ ಸಂಸದೀಯ ಅಧಿಕಾರದ ನಿರ್ಲಕ್ಷ್ಯ ಮಾಡಲಾಗಿದೆ” ಎಂದು ಸಹಿದಾರರು ಆರೋಪಿಸಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು…

Read More

ಮಿಡಲ್ ಕ್ಲಾಸ್ ಹುಡುಗ UPSC ಪರೀಕ್ಷೆ ಪಾಸ್ ಮಾಡಿದ್ಹೇಗೆ? ಟಿವಿ9 ಜತೆ ಮನದಾಳ ಬಿಚ್ಚಿಟ್ಟ ಟಾಪರ್

ಯಾದಗಿರಿ, ಮಾರ್ಚ್ 10: ಯಾದಗಿರಿ ಜಿಲ್ಲೆಯ ಪ್ರತಿಭಾವಂತ ಯುವಕ ಸಂದೀಪ್ ಬಾಡದ್ ಅವರು ಪ್ರತಿಷ್ಠಿತ ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ 89ನೇ ರ್ಯಾಂಕ್ ಗಳಿಸಿ, ತಮ್ಮ ಹುಟ್ಟೂರಿಗೆ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ. ಇದೀಗ ತಮ್ಮ ಯುಪಿಎಸ್ಸಿ ಸಾಧನೆ ಬಗ್ಗೆ ಟಿವಿ9 ಜತೆ ಮುಕ್ತವಾಗಿ ಮಾತನಾಡಿದ್ದಾರೆ. ಪೋಷಕರಿಗೆ ಯುಪಿಎಸ್​​ಸಿ ಬಗ್ಗೆ ಅರಿವೇ ಇರಲಿಲ್ಲ ಎಂದು ಮಧ್ಯಮ ವರ್ಗದ ಕುಟುಂಬದಿಂದ ಬಂದ ಸಂದೀಪ್ ಹೇಳಿದ್ದಾರೆ. ಅಲ್ಲದೆ, ತಮ್ಮ ಯಶಸ್ಸಿನ ಸೀಕ್ರೆಟ್ ತಿಳಿಸಿದ ಅವರು, ಕನಸು ಕಾಣಿ, ಪ್ರಯತ್ನ ಪಟ್ಟರೆ ಯಾವುದು…

Read More

IND vs NZ: ರಾಹುಲ್ ಶತಕ ವ್ಯರ್ಥ; 2ನೇ ಏಕದಿನ ಪಂದ್ಯ ಗೆದ್ದ ನ್ಯೂಜಿಲೆಂಡ್ – Kannada News | India vs NZ 2nd ODI: Mitchell’s Century Powers New Zealand to 7 Wicket Win, Rahul’s Ton in Vain

ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಬೇಕೆಂಬ ಇರಾದೆಯಲ್ಲಿದ್ದ ಶುಭ್​ಮನ್ ಗಿಲ್ ಪಡೆಗೆ ರಾಜ್‌ಕೋಟ್ ಮೈದಾನದಲ್ಲಿ ಸೋಲಿನ ಆಘಾತ ಎದುರಾಗಿದೆ. ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್​ಗಳಿಂದ ಸೋತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 284 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ಕೇವಲ 3 ವಿಕೆಟ್‌ ಕಳೆದುಕೊಂಡು ಏಕಪಕ್ಷೀಯ ಗೆಲುವು ಸಾಧಿಸಿತು. ಶತಕದ ಇನ್ನಿಂಗ್ಸ್ ಆಡಿದ ಡ್ಯಾರೆಲ್ ಮಿಚೆಲ್ ನ್ಯೂಜಿಲೆಂಡ್‌ ಗೆಲುವಿನ…

Read More

Video: ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ

ಲಕ್ನೋ, ಏಪ್ರಿಲ್ 12: ವಿಚ್ಛೇದನ ಪ್ರಕರಣದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ನವಜಾತ ಶಿಶುವಿನ ಜತೆ ಲಕ್ನೋ ಹೈಕೋರ್ಟ್​​ನ 5ನೇ ಮಹಡಿಯಿಂದ ಹಾರಲು ಯತ್ನಿಸಿರುವ ಘಟನೆ ನಡೆದಿದೆ. ಎಸ್‌ಐ ಧೈರ್ಯದಿಂದ ಮಧ್ಯಪ್ರವೇಶಿಸಿ ಎರಡೂ ಜೀವಗಳನ್ನು ಉಳಿಸಿದ್ದಾರೆ. ಮಹಿಳೆಯೊಬ್ಬರು ಕೋರ್ಟ್​​ನ ಐದನೇ ಮಹಡಿಯ ತುದಿಯಲ್ಲಿ ಮಗುವನ್ನು ಕೈಯಲ್ಲಿ ಎತ್ತಿಕೊಂಡು ನಿಂತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಎಲ್ಲರೂ ಮನವೊಲಿಸಲು ಯತ್ನಿಸಿರುವುದನ್ನು ನೊಡಬಹುದು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

KSRTC ಸೇರಿ ನಾಲ್ಕು ಸಾರಿಗೆ ನಿಗಮಗಳಿಗೆ ಶಕ್ತಿ ತುಂಬಲಿವೆ 5000 ಹೊಸ ಬಸ್! – Kannada News

ಕೆಎಸ್​ಆರ್​ಟಿಸಿ ಬಸ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 9: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ (Shakti scheme) ಜಾರಿಯಾದ ಬಳಿಕ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಂಟಾಗುತ್ತಿರುವ ಭಾರಿ ಜನದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸಾರ್ವಜನಿಕ ಸಾರಿಗೆಯನ್ನು ಮತ್ತಷ್ಟು ಬಲಪಡಿಸಲು ಕರ್ನಾಟಕ ಸರ್ಕಾರ ಬೃಹತ್ ಯೋಜನೆಯೊಂದನ್ನು ರೂಪಿಸಿದೆ. ರಾಜ್ಯಾದ್ಯಂತ ನಾಲ್ಕೂ ಸಾರಿಗೆ ನಿಗಮಗಳಿಗೆ ಹಂತ-ಹಂತವಾಗಿ ಒಟ್ಟು 5,000 ಹೊಸ ಬಸ್‌ಗಳನ್ನು ಖರೀದಿಸಿ ಸೇರ್ಪಡೆಗೊಳಿಸಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಸೋಮವಾರ ಘೋಷಿಸಿದ್ದಾರೆ. ಮುಖ್ಯಾಂಶಗಳು…

Read More