Headlines

ದೆಹಲಿ ವಿಧಾನಸಭೆಯಲ್ಲಿ ಭದ್ರತಾ ಲೋಪ; ಗೇಟ್ ಮುರಿದು ಒಳಗೆ ನುಗ್ಗಿ, ಹೂಗುಚ್ಛ ಇಟ್ಟು ಹೋದ ಕಾರು ಚಾಲಕ!

ನವದೆಹಲಿ, ಏಪ್ರಿಲ್ 6: ಇಂದು ಮಧ್ಯಾಹ್ನ ದೆಹಲಿ ವಿಧಾನಸಭೆಯಲ್ಲಿ (Delhi Assembly) ಗಂಭೀರ ಭದ್ರತಾ ಲೋಪ ಕಂಡುಬಂದಿದೆ. ಉತ್ತರ ಪ್ರದೇಶದ ನೋಂದಣಿ ನಂಬರ್ ಹೊಂದಿರುವ ಅಪರಿಚಿತ ಕಾರು ಗೇಟ್ ಅನ್ನು ಮುರಿದು ಒಳಗೆ ನುಗ್ಗಿದೆ. ಭದ್ರತಾ ಸಿಬ್ಬಂದಿ ನೋಡನೋಡುತ್ತಿದ್ದಂತೆ ಕಾರು ಸ್ಪೀಕರ್ ವಿಜೇಂದರ್ ಗುಪ್ತಾ ಅವರ ಆಫೀಸ್ ಬಳಿ ತೆರಳಿದೆ. ಈ ಘಟನೆ ಕೋಲಾಹಲಕ್ಕೆ ಕಾರಣವಾಯಿತು. ಆ ಕಾರು, ಚಾಲಕ ಮತ್ತು ಘಟನೆಯ ಹಿಂದಿನ ಕಾರಣಗಳನ್ನು ಗುರುತಿಸಲು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಭದ್ರತಾ ವ್ಯವಸ್ಥೆಗಳ…

Read More

ITR Filing 2026: ಹೊಸ ವರ್ಷಕ್ಕೆ ಐಟಿಆರ್ ಫಾರ್ಮ್​ಗಳಲ್ಲಿ ಈ ಕೆಲ ಬದಲಾವಣೆಗಳನ್ನು ಗಮನಿಸಿ

ನವದೆಹಲಿ, ಏಪ್ರಿಲ್ 6: ಹೊಸ ಹಣಕಾಸು ವರ್ಷ ಆರಂಭವಾಗಿದ್ದು, ಈಗ ಟ್ಯಾಕ್ಸ್ ರಿಟರ್ನ್ ಸಲ್ಲಿಸುವ ಸಮಯದ ಆರಂಭ. ಕೇಂದ್ರೀಯ ನೇರ ತೆರಿಗೆ ಮಂಡಳಿ (CBDT) ಐಟಿಆರ್ ಫಾರ್ಮ್​ಗಳನ್ನು ನೋಟಿಫೈ ಮಾಡಿದೆ. ಈ ಫಾರ್ಮ್​ಗಳಲ್ಲಿ ಕೆಲ ಬದಲಾವಣೆಗಳಾಗಿವೆ. ಪ್ರಕ್ರಿಯೆ ಸರಳಗೊಳಿಸಲಾಗಿರುವುದು, ಕಾನೂನು ಬದ್ಧತೆ ನಿಯಮ (compliance rules) ಕಠಿಣಗೊಳಿಸಿರುವುದು ಇತ್ಯಾದಿ ಬದಲಾವಣೆಗಳಿವೆ. ಆದರೆ, ಫಾರ್ಮ್​ಗಳ ಸಂಖ್ಯೆಯಲ್ಲಿ ಬದಲಾವಣೆ ಆಗಿಲ್ಲ. ಅಂದಹಾಗೆ, ಐಟಿ ರಿಟರ್ನ್ ಸಲ್ಲಿಸಲು ಜುಲೈ 31ರವರೆಗೆ ಕಾಲಾವಕಾಶ ಇರುತ್ತದೆ. ಹೀಗಾಗಿ, ಐಟಿಆರ್ ಫಾರ್ಮ್​ಗಳಲ್ಲಿ ಮಾಡಲಾಗಿರುವ ಕೆಲ ಪ್ರಮುಖ…

Read More

ಅಮೆರಿಕ ಮತ್ತು ಇಸ್ರೇಲ್ ವರ್ತನೆ ಆಧುನಿಕ ಅನಾಗರಿಕತೆಯ ಪ್ರತಿಬಿಂಬ; ಇರಾನ್ ಟೀಕೆ

ಟೆಹ್ರಾನ್, ಏಪ್ರಿಲ್ : ಭಾರತದಲ್ಲಿನ ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಇಂದು ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್‌ನ ನಡವಳಿಕೆ ಮತ್ತು ಹೇಳಿಕೆ ಎರಡರಲ್ಲೂ ಆಧುನಿಕ ಅನಾಗರಿಕತೆ ಗೋಚರಿಸುತ್ತಿದೆ ಎಂದು ಟೀಕಿಸಿದ್ದಾರೆ. ಎಎನ್​ಐಗೆ ನೀಡಿದ ಲಿಖಿತ ಸಂದರ್ಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿರುವ ಅವರು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲೆ ಬಾಂಬ್ ಹಾಕುವುದಾಗಿ ನೀಡಿದ ಬೆದರಿಕೆ ಮತ್ತು ಟೆಹ್ರಾನ್ ಬಳಿಯ ಪ್ರಮುಖ ಸೇತುವೆಯನ್ನು ನಾಶಪಡಿಸಲಾಗಿದೆ ಎಂಬ ಅವರ ಇತ್ತೀಚಿನ ಹೇಳಿಕೆ ಬಗ್ಗೆ ಮಾತನಾಡಿದ್ದಾರೆ. “ನಮ್ಮದು ಸಾವಿರಾರು ವರ್ಷಗಳ…

Read More

ಬಾಡಿಗೆಗೆ ಹೋಗಿದ್ದ ವೇಳೆ ಕಿರಿಕ್​: ಹಿಂಬಾಲಿಸಿಕೊಂಡು ಬಂದು ದೊಣ್ಣೆ, ಮಾರಕಾಸ್ತ್ರಗಳಿಂದ ಕನ್ನಡಿಗರ ಮೇಲೆ ದಾಳಿ

ಆನೇಕಲ್, ಏಪ್ರಿಲ್​ 06: ಕನ್ನಡಿಗರನ್ನು ಹಿಂಬಾಲಿಸಿಕೊಂಡು ಬಂದ ತಮಿಳುನಾಡಿನ ಗೂಂಡಾಗಳು ಟಿಟಿ ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಷ್ಟೇ ಅಲ್ಲದೆ ಚಾಲಕನಿಗೆ ಮಾರಣಾಂತಿಕವಾಗಿ ಹಲ್ಲೆ (attack) ಮಾಡಿ ದರ್ಪ ಮೆರೆದಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಟೋಲ್​ ಬಳಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರ ಹಿಡಿದು ಟಿಟಿ ವಾಹನ ಹಿಂಬಾಲಿಸಿ ಬಂದಿದ್ದ ತಮಿಳಿಗರು, ಮಹಿಳೆಯರು, ಮಕ್ಕಳು ಇದ್ದಾರೆಂದು ಗೋಗರೆದರೂ ಬಿಡದೆ ಟಿಟಿ ವಾಹನದ ಗಾಜು ಪುಡಿಗೈದು ಅಟ್ಟಹಾಸ ಮೆರೆದಿದ್ದಾರೆ. ಸದ್ಯ ಚಾಲಕ ರಾಮಕೃಷ್ಣ…

Read More

ಅತಿಯಾಗಿ ಯೋಚನೆ ಮಾಡುವ ಅಭ್ಯಾಸ ನಿಮಗಿದ್ರೆ ಮುಂದೊಂದು ದಿನ ಈ ರೋಗಗಳು ಬರುವುದು ಗ್ಯಾರೆಂಟಿ!

ಇಂದಿನ ಕಾಲದಲ್ಲಿ ಹಲವರಿಗೆ ಅತಿಯಾಗಿ ಯೋಚಿಸುವ ಅಭ್ಯಾಸವಿದೆ (Overthinking). ಚಿಕ್ಕ ವಿಷಯವಾಗಲಿ ಅಥವಾ ದೊಡ್ಡದಾಗಿರಲಿ ಅದರ ಬಗ್ಗೆ ಅತಿಯಾಗಿ ಯೋಚನೆ ಮಾಡುತ್ತಾರೆ. ಆದರೆ ಇದು ಅಷ್ಟಾಗಿ ಯಾರ ಅರಿವಿಗೂ ಬರುವುದಿಲ್ಲ. ಇನ್ನು ಕೆಲವರು ಇದನ್ನು ಸಾಮಾನ್ಯವೆಂದು ನಿರ್ಲಕ್ಷಿಸುತ್ತಾರೆ. ಆದರೆ ಅದು ಸರಿಯಲ್ಲ, ಆರೋಗ್ಯ ತಜ್ಞರು ಹೇಳುವ ಪ್ರಕಾರ, ಈ ರೀತಿಯ ಅಭ್ಯಾಸ ನಿಧಾನವಾಗಿ ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳಿಗೆ ಕಾರಣವಾಗಬಹುದು. ಸಾಮಾನ್ಯವಾಗಿ ಸಣ್ಣ ಸಣ್ಣ ವಿಷಯಗಳನ್ನು ಮತ್ತೆ ಮತ್ತೆ ಯೋಚಿಸುವುದರಿಂದ ಮನಸ್ಸಿನಲ್ಲಿ ಒತ್ತಡ ಉಂಟಾಗುತ್ತದೆ. ಇದರಿಂದ ದೇಹ…

Read More

‘ದಿಲ್‌ದಾರ್’ ಸಿನಿಮಾ ಟೀಸರ್​ನಲ್ಲಿ ಶ್ರೇಯಸ್ ಮಂಜು ಆ್ಯಕ್ಷನ್ ಭರಿತ ಎಂಟ್ರಿ

ಖ್ಯಾತ ನಿರ್ಮಾಪಕ ಕೆ. ಮಂಜು ಅವರ ಪುತ್ರ ಶ್ರೇಯಸ್ ಮಂಜು (Shreyas Manju) ಅವರು ಚಿತ್ರರಂಗದಲ್ಲಿ ನಟನಾಗಿ ಸಕ್ರಿಯರಾಗಿದ್ದಾರೆ. ‘ಪಡ್ಡೆಹುಲಿ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಹೀರೋ ಆಗಿ ಎಂಟ್ರಿ ಕೊಟ್ಟ ಅವರು ಈಗ ಬೇರೆ ಬೇರೆ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಶ್ರೇಯಸ್ ಮಂಜು ನಟಿಸುತ್ತಿರುವ ‘ದಿಲ್​ದಾರ್’ (Dildar) ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ. ಅದರ ಝಲಕ್ ತೋರಿಸಲು ಟೀಸರ್ ರಿಲೀಸ್ ಆಗಿದೆ. ಶ್ರೇಯಸ್ ಮಂಜು ಅವರು ಬರ್ತ್​ಡೇ (ಏಪ್ರಿಲ್ 5) ಪ್ರಯುಕ್ತ ಟೀಸರ್ ಬಿಡುಗಡೆ ಆಗಿದ್ದು…

Read More

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ

ಬೆಂಗಳೂರು/ಚಿಕ್ಕಮಗಳೂರು, (ಏಪ್ರಿಲ್ 06): ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರದ ಫಲಿತಾಂಶ ತಕರಾರು ಪ್ರಕರಣ ಸುಖಾಂತ್ಯ ಕಂಡಿದೆ. ಇದರ ಬೆನ್ನಲ್ಲೇ ಇದೀಗ ಶೃಂಗೇರಿ ವಿಧಾನಸಭಾ ಕ್ಷೇತ್ರದ (Sringeri Assembly constituency) ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಅವರು ಸಲ್ಲಿಸಿದ್ದ  ತಕರಾರು ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka High Court),  279 ಅಂಚೆ ಮತಪತ್ರಗಳನ್ನು 2 ವಾರದಲ್ಲಿ ಮರುಪರಿಶೀಲನೆ ಮಾಡಿ ಫಲಿತಾಂಶ ಪ್ರಕಟಿಸುವಂತೆ ಆದೇಶ ಹೊರಡಿಸಿದೆ. ಹೀಗಾಗಿ ಫಲಿತಾಂಶ ಏನಾಗಲಿದೆ…

Read More

ICC Awards: ಐಸಿಸಿ ಪ್ರಶಸ್ತಿಗೆ ಬುಮ್ರಾ, ಸ್ಯಾಮ್ಸನ್ ನಡುವೆ ಪೈಪೋಟಿ

ಐಪಿಎಲ್ 2026 ರ ಸಂಭ್ರಮದ ನಡುವೆ , ಐಸಿಸಿ ಮಾರ್ಚ್ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಭಾರತದ ಜಸ್ಪ್ರೀತ್ ಬುಮ್ರಾ ಮತ್ತು ಸಂಜು ಸ್ಯಾಮ್ಸನ್ ಸ್ಥಾನ ಪಡೆದಿದ್ದು, ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕಾನರ್ ಈಸ್ಟರ್‌ಹ್ಯೂಗೆನ್ ಕೂಡ ಈ ಪ್ರಶಸ್ತಿಗೆ ಮೂರನೇ ನಾಮನಿರ್ದೇಶಿತರಾಗಿದ್ದಾರೆ. ಬುಮ್ರಾ ಮತ್ತು ಸ್ಯಾಮ್ಸನ್, 2026 ರ ಟಿ20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರ ಪ್ರದರ್ಶನದ ಆಧಾರದ ಮೇಲೆ ಮಾರ್ಚ್ ತಿಂಗಳ ಐಸಿಸಿ ತಿಂಗಳ…

Read More

ಹುಬ್ಬಳ್ಳಿ ಜಿಮ್ ಟ್ರೇನರ್ ಲವ್ ಜಿಹಾದ್ ಕೇಸಿಗೆ ನೇಹಾ ಕೊಲೆ ಲಿಂಕ್: ನಿರಂಜನ ಹಿರೇಮಠ ಸ್ಫೋಟಕ ಆರೋಪ

ಹುಬ್ಬಳ್ಳಿ, (ಏಪ್ರಿಲ್ 06): ಹುಬ್ಬಳ್ಳಿಯಲ್ಲಿ ಒಂದೊಂದೇ ಲವ್ ಜಿಹಾದ್ ಪ್ರಕರಣಗಳು (Hubballi Live Jihad Cases) ಬೆಳಕಿಗೆ ಬರುತ್ತಿವೆ. ಅದರಲ್ಲೂ ಜಿಮ್ ಟ್ರೈನರ್​​ಗಳು ಹಿಂದೂ ಯುವತಿಯರನ್ನ ಪುಸಲಾಯಿಸಿ ಲೈಂಗಿಕವಾಗಿ ಬಳಿಸಿಕೊಂಡು ಬಳಿಕ ಬ್ಲ್ಯಾಕ್ ಮೇಲ್ ಮಾಡುವ ಆರೋಪಗಳು ಕೇಳಿಬರುತ್ತಿವೆ. ಈ ಪೈಕಿ ಸಮೀರ್ ಎನ್ನುವ ಜಿಮ್ ಟ್ರೈನರ್, ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನುವ ಆರೋಪವಿದ್ದು, ಈ ಸಂಬಂಧ ಈಗಾಗಲೇ ಇಬ್ಬರು ಯುವತಿಯರು ಸಮೀರ್ ಮುಲ್ಲಾನ ವಿರುದ್ಧ ದೂರು ದಾಖಲಿಸಿದ್ದಾರೆ….

Read More

ಬೆಂಗಳೂರಿಂದ ರಸ್ತೆ ಮೂಲಕ ಮುಂಬೈಗೆ ಕೇವಲ 5.5 ಗಂಟೆ ಪ್ರಯಾಣ; ಇದು ಎಕ್ಸ್​ಪ್ರೆಸ್​ವೇ ಮ್ಯಾಜಿಕ್

ನವದೆಹಲಿ, ಏಪ್ರಿಲ್ 6: ದೇಶದ ಬೆಳವಣಿಗೆಗೆ ಬೇಕಾದ ಇನ್​ಫ್ರಾಸ್ಟ್ರಕ್ಚರ್​ನಲ್ಲಿ ರಸ್ತೆ ಸೌಕರ್ಯವೂ ಪ್ರಮುಖವಾದುದು. ಅದರಲ್ಲೂ ದೂರದೂರುಗಳನ್ನು ನಗರಗಳನ್ನು ಸಂಪರ್ಕಿಸುವ ಹೆದ್ದಾರಿ ಉತ್ತಮವಾಗಿರುವುದು ಮುಖ್ಯ. ಇತ್ತೀಚೆಗೆ ಸರ್ಕಾರ ನಿರ್ಮಿಸುತ್ತಿರುವ ಎಕ್ಸ್​ಪ್ರೆಸ್​ವೇಗಳು ಪ್ರಯಾಣದ ಅವಧಿಯನ್ನು ಗಣನೀಯವಾಗಿ ಕಡಿಮೆ ಮಾಡಲು ಶಕ್ಯಗೊಂಡಿವೆ. ಬೆಂಗಳೂರಿನ ಮೈಸೂರಿಗೆ ಒಂದೆರಡು ಗಂಟೆಯಲ್ಲೇ ಕಾರಿನಲ್ಲಿ ಹೋಗಬಹುದು. ಇದೀಗ ಪುಣೆ ಮತ್ತು ಬೆಂಗಳೂರು ನಡುವೆ ಎಕ್ಸ್​ಪ್ರೆಸ್​ವೇ (Pune-Bengaluru Expressway) ನಿರ್ಮಿಸುವ ಯೋಜನೆ ಹಾಕಲಾಗಿದೆ. 700ರಿಂದ 745 ಕಿಮೀ ಉದ್ದದ ಪುಣೆ-ಬೆಂಗಳೂರು ಗ್ರೀನ್​ಫೀಲ್ಡ್ ಎಕ್ಸ್​ಪ್ರೆಸ್​ವೇ ಅನ್ನು 40,000 ಕೋಟಿ ರೂ…

Read More