Headlines

ಮೊಬೈಲ್, ಇಂಟರ್ನೆಟ್ ಬಳಸೋದೆ ಇಲ್ವಂತೆ ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್ – Kannada News | Silence as Strategy: Why NSA Ajit Doval Keeps His Phone Switched Off

ನವದೆಹಲಿ, ಜನವರಿ 12: ಭಾರತದ ಭದ್ರತಾ ಸಲಹೆಗಾರ(NSA) ಅಜಿತ್ ದೋವಲ್(Ajit Doval) ಮೊಬೈಲ್, ಇಂಟರ್ನೆಟ್ ಬಳಸುವುದೇ ಇಲ್ವಂತೆ. ಭದ್ರತಾ ಸಲಹೆಗಾರರಾಗಿ ಮೊಬೈಲ್ ಅನ್ನೇ ಬಳಸುವುದಿಲ್ಲ ಎಂದರೆ ಹೇಗೆ ಸಂವಹನ ನಡೆಸುತ್ತಾರೆ ಎನ್ನುವ ಪ್ರಶ್ನೆ ಎಲ್ಲರ ಮನದಲ್ಲಿ ಮೂಡುವುದು ಸಹಜ. ಆದರೆ ಸಾಮಾನ್ಯ ಜನರಿಗೆ ತಿಳಿದಿಲ್ಲದ ಇತರ ಸಂವಹನ ವಿಧಾನಗಳಿವೆ ಎಂದು ಅವರು ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಡೆವಲಾಪ್ ಇಂಡಿಯಾ ಯುವ ನಾಯಕರ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವೈಯಕ್ತಿಕ ಅಗತ್ಯಗಳನ್ನು ಹೊರತುಪಡಿಸಿ ನಾನು ಇಂಟರ್ನೆಟ್ ಅಥವಾ ಫೋನ್…

Read More

Lakkundi Gold Tressure: 8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ! ಉತ್ಖನನಕ್ಕೆ ಜನರ ಕಿರಿಕಿರಿ! – Kannada News | Gadags Lakkundi Dig: Eighth Day Reveals Historical Clues, Draws Crowds, and Raises Concerns

ಗದಗ, ಜನವರಿ 23: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ (Lakkundi Excavation) ಎಂಟನೇ ದಿನಕ್ಕೆ ಕಾಲಿಟ್ಟಿದೆ. ಕೋಟೆ ವೀರಭದ್ರೇಶ್ವರ ದೇಗುಲದ ಆವರಣದಲ್ಲಿ ಸುಮಾರು ಎಂಟು ಅಡಿ ಆಳಕ್ಕೆ ಅಗೆಯಲಾಗುತ್ತಿದ್ದು, ರಾಜ ಮಹಾರಾಜರ ಕಾಲದ ಗತ ವೈಭವದ ಕುರುಹುಗಳು ಪತ್ತೆಯಾಗುವ ನಿರೀಕ್ಷೆ ಸ್ಥಳೀಯರಲ್ಲಿ ಹೆಚ್ಚಿದೆ. ಸುತ್ತಮುತ್ತಲಿನ ಜಿಲ್ಲೆಗಳಿಂದ ಮಾತ್ರವಲ್ಲದೆ, ಫ್ರಾನ್ಸ್‌ನಂತಹ ದೂರದ ದೇಶಗಳಿಂದಲೂ ಪ್ರವಾಸಿಗರು ಲಕ್ಕುಂಡಿಯ ಐತಿಹಾಸಿಕ ಮಹತ್ವವನ್ನು ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ. ಆದಾಗ್ಯೂ, ಉತ್ಖನನ ಸ್ಥಳದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳ ಕೊರತೆಯಿದೆ. ಜಿಲ್ಲಾಧಿಕಾರಿಗಳು ಈ…

Read More

‘ಸಿದ್ದರಾಮಯ್ಯ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ’: ಮಾಜಿ ಸಂಸದ ಪ್ರತಾಪಸಿಂಹ

ಬಾಗಲಕೋಟೆ, ಏ.3: ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರ ನಡೆಸಿದ ಮಾಜಿ ಸಂಸದ ಪ್ರತಾಪಸಿಂಹ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅವರ ಹೆಸರಷ್ಟೇ ಹಿಂದೂ, ಆದರೆ ಅವರ ಗುಣನಡತೆಗಳಲ್ಲಿ ಹಿಂದೂ ಧರ್ಮದ ಯಾವ ಲಕ್ಷಣವೂ ಕಾಣಿಸುತ್ತಿಲ್ಲ ಎಂದು ಪ್ರತಾಪಸಿಂಹ ಆರೋಪಿಸಿದರು. ಯುಗಾದಿ ಮತ್ತು ದೀಪಾವಳಿ ದಿನದಂದು ಮಾಂಸಾಹಾರ ಸೇವಿಸುವ ಬಗ್ಗೆಯೂ ಟೀಕೆ ಮಾಡಿದ್ದಾರೆ. ಈಗ ಕಾಂಗ್ರೆಸ್ ಪಕ್ಷದವರು ಹಿಂದುತ್ವವನ್ನು ಮಂತ್ರ ಜಪಿಸುತ್ತಿದ್ದಾರೆ ಎಂದು ಟೀಕಿಸಿದ ಪ್ರತಾಪಸಿಂಹ, ನಾಗಮಂಗಲದಲ್ಲಿ…

Read More

WPL 2026: ರಣರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್​ಗಳಿಗೆ ಮಣ್ಣು ಮುಕ್ಕಿಸಿದ ಆರ್​ಸಿಬಿ

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಮಹಿಳಾ ಪ್ರೀಮಿಯರ್ ಲೀಗ್​ನ ನಾಲ್ಕನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಆರ್​ಸಿಬಿ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ರಣರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಕೊನೆಯ ಎಸೆತದವರೆಗೂ ಯಾವ ತಂಡಕ್ಕೆ ಗೆಲುವು ಸಿಗಲಿದೆ ಎಂಬುದನ್ನು ಹೇಳುವುದು ಕಷ್ಟಕರವಾಗಿತ್ತು. ಆದಾಗ್ಯೂ ಆರ್​​ಸಿಬಿ ಪರ ಆಲ್​ರೌಂಡರ್ ಪ್ರದರ್ಶನ ನೀಡಿದ ನಡಿನ್ ಡಿ ಕ್ಲರ್ಕ್​ ಕೊನೆಯ ಓವರ್​ನಲ್ಲಿ 2 ಸಿಕ್ಸರ್…

Read More

SIM Card: ಸಿಮ್ ಕಾರ್ಡ್ ನಿಮ್ಮ ಹೆಸರಿನಲ್ಲಿ ಇಲ್ಲವೇ, ಹಾಗಾದ್ರೆ ಹೀಗೆ ಮಾಡಿ – Kannada News | SIM Card: Here is an easy way to register a SIM card in your name.

ಸಾಂದರ್ಭಿಕ ಚಿತ್ರImage Credit source: Firdous Nazir/NurPhoto via Getty Images ಕೆಲವರ ಬಳಿ ಒಂದಲ್ಲ ಎರಡು ಮೂರು ಸಿಮ್ ಕಾರ್ಡ್ (SIM Card) ಇರುತ್ತವೆ. ಆದರೆ ಕೆಲವರ ಸಿಮ್ ಕಾರ್ಡ್ ತಂದೆ ತಾಯಿ ಅಥವಾ ಮನೆಯವರ ಹೆಸರಿನಲ್ಲಿರುತ್ತದೆ. ಸಿಮ್ ಕಾರ್ಡ್ ನಿಮ್ಮ ಹೆಸರಿನಲ್ಲಿ ಇಲ್ಲದೆ ಹೋದರೆ, ನೀವು ದೊಡ್ಡ ಕಾನೂನು ಹಾಗೂ ಭದ್ರತಾ ಅಪಾಯಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಹೆಸರಿನಲ್ಲಿ ಇಲ್ಲದ ಸಿಮ್‌ ಕಾರ್ಡ್ ಅನ್ನು ಅಪರಾಧಿಗಳು ದುರುಪಯೋಗಪಡಿಸಿಕೊಂಡರೆ,  ಆದರಿಂದ ನಿಮಗೆ ಸಮಸ್ಯೆಯಾಗುತ್ತದೆ. ಹೀಗಾಗಿ ನಿಮ್ಮ ಮೊಬೈಲ್…

Read More

ನಾಳೆ ಪಿತೂರಿ ನಡೆದಿದೆ ಎಂದು ನೆಪ ಹೇಳಬೇಡಿ: ಅಮಿತ್ ಶಾ ಸಭೆಗಳ ಬೆನ್ನಲ್ಲೇ ತೆಲಂಗಾಣ ಸರ್ಕಾರಕ್ಕೆ ಓವೈಸಿ ವಾರ್ನಿಂಗ್ – Kannada News | Owaisi Alarms on Amit Shah’s NRC Push: Warns Telangana Govt for Citizen Protection

ಹೈದರಾಬಾದ್, ಜುಲೈ 09: ದೇಶದಲ್ಲಿ ತೀವ್ರ ರಾಜಕೀಯ ಸಂಚಲನ ಮೂಡಿಸಿದ್ದ ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್​ಆರ್​ಸಿ) ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಮತ್ತೆ ಮುಂಚೂಣಿಗೆ ತರಲು ಸಜ್ಜಾಗುತ್ತಿದೆ ಎಂದು ಹೈದರಾಬಾದ್​ ಸಂಸದ ಹಾಗೂ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಗಂಭೀರ ಆರೋಪ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಇತ್ತೀಚಿನ ಸಭೆಗಳು ಹಾಗೂ ತೀರ್ಮಾನಗಳ ಹಿಂದೆ ದೊಡ್ಡ ರಾಜಕೀಯ ತಂತ್ರ ಅಡಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.ಅಮಿತ್ ಅವರು ಸಭೆ ನಡೆಸಿದ್ದಾರೆ ಎಂದರೆ ಸುಮ್ಮನೇ ಯಾವುದೋ ಸಭೆಯಾಗಿರುವುದಿಲ್ಲ,…

Read More

ಅಮೆರಿಕದ ಹತಾಶೆಯೇ ಈ ಒಪ್ಪಂದಕ್ಕೆ ಕಾರಣ ಎಂದ ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ – Kannada News | Iran US Peace Deal: Khamenei Claims Trump’s Desperation Fueled Historic Agreement

ಟೆಹ್ರಾನ್, ಜೂನ್ 19: ವಿಶ್ವ ರಾಜಕಾರಣದಲ್ಲಿ ಭಾರಿ ತಿರುವು ಸಿಕ್ಕಿದೆ. ಇರಾನ್(Iran) ಮತ್ತು ಅಮೆರಿಕ ಜಂಟಿಯಾಗಿ ಇಸ್ಲಾಮಾಬಾದ್ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿರುವುದನ್ನು ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅಧಿಕೃತವಾಗಿ ದೃಢಪಡಿಸಿದ್ದಾರೆ. ಆದರೆ, ಈ ಒಪ್ಪಂದಕ್ಕೆ ಇರಾನ್‌ನ ಉತ್ಸಾಹ ಕಾರಣವಲ್ಲ, ಬದಲಿಗೆ ಯುದ್ಧ ಮುಗಿಸಲೇಬೇಕಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತಾಶೆಯೇ ಕಾರಣ ಎಂದು ಖಮೇನಿ ಲೇವಡಿ ಮಾಡಿದ್ದಾರೆ. ವರ್ಸೈಲ್ಸ್ ಅರಮನೆಯಲ್ಲಿ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಆಯೋಜಿಸಿದ್ದ ಜಿ7 ಶೃಂಗಸಭೆಯ ಔತಣಕೂಟದ…

Read More

Sahavasa Dosha: ಒಬ್ಬ ವ್ಯಕ್ತಿಯ ಜೀವನದ ಮೇಲೆ ಸಹವಾಸ ದೋಷದ ಪ್ರಭಾವ ಹೇಗಿರಲಿದೆ? – Kannada News | The Profound Impact of Company: Understanding Sahavasa Dosha and Its Influence on Life

ಸಹವಾಸ ದೋಷಗಳು ಒಬ್ಬ ವ್ಯಕ್ತಿಯ ಜೀವನವನ್ನು ಹಾಳು ಮಾಡುತ್ತವೆಯೇ ಅಥವಾ ಶ್ರೇಯಸ್ಸು, ವೃದ್ಧಿಯನ್ನು ನೀಡುತ್ತವೆಯೇ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಏಳಿಗೆ ಇರಬಹುದು, ಅವನತಿ ಇರಬಹುದು. ಇವೆಲ್ಲವೂ ಕೂಡ ಸಹವಾಸಗಳ ಪ್ರಭಾವದಿಂದಲೇ ಉಂಟಾಗುತ್ತವೆ. ಆ ಸಹವಾಸ ಉತ್ತಮವಾಗಿದೆಯೇ ಅಥವಾ ಕೆಟ್ಟದಾಗಿದೆಯೇ ಎಂಬುದು ಫಲಿತಾಂಶ ಬಂದಾಗ ಮಾತ್ರ ಗೊತ್ತಾಗುತ್ತದೆ. ಗುರೂಜಿಯವರು ಹೇಳಯವಂತೆ, “ಸಹವಾಸ ದೋಷದಿಂದ ಸನ್ಯಾಸಿಯೂ ಕೆಟ್ಟ”…

Read More

ಬಗೆದಷ್ಟು ಬಯಲಾಗ್ತಿದೆ ಪಿಲಿಕುಳದ ಅಕ್ರಮ: ಕಾಳಿಂಗ ಸರ್ಪದ ಹೆಸರಲ್ಲೂ ಭ್ರಷ್ಟಾಚಾರ? – Kannada News | Pilikula Scam Deepens: Corruption Alleged Even in the Name of King Cobra

ಮಂಗಳೂರು, ಫೆಬ್ರವರಿ 19: ಪಿಲಿಕುಳ ಝೂ‌‌ ಕಳೆದ ಕೆಲ ವರ್ಷಗಳಿಂದ ಅವ್ಯವಸ್ಥೆಯ ಆಗರವಾಗಿದ್ದು, ಇಲ್ಲಿಯ ಸ್ಥಿತಿ ಕಂಡು ಸ್ವತಃ ಹೈಕೋರ್ಟ್ ಗರಂ ಆಗಿತ್ತು. ಆ ಬೆನ್ನಲ್ಲೇ ಕಾಳಿಂಗ ಸರ್ಪದ ಹೆಸರಲ್ಲೂ ಇಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪ ಕೇಳಿಬಂದಿದೆ. ಕಾಳಿಂಗ ಸರ್ಪ ಸಂತಾನಾಭಿವೃದ್ಧಿ ಕೇಂದ್ರ ತೆರೆದು 2 ಕೋಟಿಗೂ ಅಧಿಕ ಅನುದಾನ ಪಡೆದಿದ್ದ ಇಲ್ಲಿಯ ಆಡಳಿತ ಅವುಗಳ ಪಾಲನೆ ಮರೆತಿದೆ. ಹೀಗಾಗಿ ಸರಿಯಾಗಿ ಆಹಾರ, ಆರೈಕೆ ಸಿಗದೆ ಅವು ಸಾವನ್ನಪ್ಪಿವೆ ಎಂದು ದೂರಲಾಗಿದೆ. 2022ರ ಜುಲೈನಲ್ಲಿ ಮೊಟ್ಟೆಯೊಡೆದು 38…

Read More

IND vs SA: ಭಾರತ- ಆಫ್ರಿಕಾ ನಡುವಿನ ಸರಣಿ ನಿರ್ಧಾರಕ ಪಂದ್ಯ ಯಾವಾಗ ಎಷ್ಟು ಗಂಟೆಗೆ ಆರಂಭ? – Kannada News | India vs South Africa 5th T20: Date, Venue, Time, Live Stream and Squads

ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಿನ 4ನೇ ಟಿ20 ಪಂದ್ಯ ದಟ್ಟವಾದ ಮಂಜು ಕವಿದ ಕಾರಣ ರದ್ದಾಯಿತು. ಇದರಿಂದಾಗಿ ಉಭಯ ತಂಡಗಳ ನಡುವಿನ ಈ ಸರಣಿ ಇದೀಗ ಕುತೂಹಲಕಾರಿ ಘಟ್ಟ ತಲುಪಿದೆ. ಸರಣಿಯಲ್ಲಿ ಈಗಾಗಲೇ ಮುನ್ನಡೆ ಸಾಧಿರಿಸುವ ಟೀಂ ಇಂಡಿಯಾ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಲು ನೋಡುತ್ತಿದ್ದರೆ, ಇತ್ತ ಸರಣಿ ಸೋಲಿನ ಆತಂಕದಲ್ಲಿರುವ ದಕ್ಷಿಣ ಆಫ್ರಿಕಾ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲದೊಂದಿಗೆ…

Read More