ದಕ್ಷಿಣದ ಮೇಲೆ ಕಣ್ಣು ಪ್ಯಾನ್ ಇಂಡಿಯಾ ಆಗಲಿದೆ ‘ಧುರಂಧರ್ 2’

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಬಾಕ್ಸ್ ಆಫೀಸ್​​ನಲ್ಲಿ ನಾಗಾಲೋಟ ಮುಂದುವರೆಸಿದೆ. ದಿನಗಳು ಕಳೆದಂತೆ ಸಿನಿಮಾದ ಕಲೆಕ್ಷನ್ ಏರುತ್ತಲೇ ಸಾಗುತ್ತಿದೆ. ಈ ಸ್ಪೈ ಆಕ್ಷನ್ ಥ್ರಿಲ್ಲರ್ ಸಿನಿಮಾ ಪ್ರೇಕ್ಷಕರ ಮನ ಗೆದ್ದಿದೆ. ಸಿನಿಮಾದ ಬಗ್ಗೆ ಅಲ್ಲಲ್ಲಿ ತುಸು ನೆಗೆಟಿವ್ ಅಭಿಪ್ರಾಯಗಳು ಕೇಳಿ ಬರುತ್ತಿದ್ದರೂ ಸಹ ಸಿನಿಮಾ ಪ್ರಿಯರು ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ದಕ್ಷಿಣ ಭಾರತದಲ್ಲಿಯೂ ಸಹ ಸಿನಿಮಾ ಅನ್ನು ಪ್ರೇಕ್ಷಕರು ನೋಡಿ ಮೆಚ್ಚಿಕೊಂಡಿದ್ದು, ಇಲ್ಲಿಯೂ ಸಹ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ.

ಡಿಸೆಂಬರ್ 5 ರಂದು ಬಿಡುಗಡೆ ಆದ ‘ಧರುಂಧರ್’ ಸಿನಿಮಾ, ಕೇವಲ ಹಿಂದಿ ಭಾಷೆಯಲ್ಲಿ ಮಾತ್ರವೇ ವೀಕ್ಷಣೆಗೆ ಲಭ್ಯವಿದೆ. ಕೇವಲ ಹಿಂದಿ ಆವೃತ್ತಿ ಒಂದರಿಂದಲೇ ಈ ಸಿನಿಮಾ ಈ ವರೆಗೆ 900 ಕೋಟಿಗೂ ಹೆಚ್ಚು ಹಣವನ್ನು ಬಾಕ್ಸ್ ಆಫೀಸ್​​ನಲ್ಲಿ ಗಳಿಕೆ ಮಾಡಿದೆ. ಬೆಂಗಳೂರಿನಲ್ಲಿ ಈಗಲೂ (ಡಿಸೆಂಬರ್ 24) ಸಿನಿಮಾದ ಬಹುತೇಕ 90% ಶೋಗಳು ಸೋಲ್ಡ್ ಔಟ್ ಆಗಿವೆ. ಮಾತ್ರವಲ್ಲದೆ ಮುಂದಿನ ಮೂರು ನಾಲ್ಕು ದಿನಗಳ ಶೋಗಳು ಸಹ ಬಹುತೇಕ ಮುಂಗಡವಾಗಿ ಬುಕ್ ಆಗಿವೆ.

‘ಧುರಂಧರ್’ ಸಿನಿಮಾದ ಸೀಕ್ವೆಲ್ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಆದರೆ ಇದೀಗ ಸಿನಿಮಾಕ್ಕೆ ಬೇಡಿಕೆ ಹೆಚ್ಚಾಗುತ್ತಲೇ ಸಿನಿಮಾವನ್ನು ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಿಗೆ ಡಬ್ ಮಾಡಲಾಗಿದ್ದು, ದಕ್ಷಿಣ ಭಾರತದಲ್ಲಿ ಆಯಾ ಭಾಷೆಗಳಲ್ಲಿಯೇ ಬಿಡುಗಡೆ ಮಾಡಲಾಗುತ್ತಿದೆ. ಇದರಿಂದ ಸಿನಿಮಾದ ಗಳಿಕೆ ಇನ್ನಷ್ಟು ಹೆಚ್ಚಾಗುವುದು ಪಕ್ಕಾ ಎನ್ನಲಾಗುತ್ತಿದೆ.

ಇದನ್ನೂ ಓದಿ:‘ಧುರಂಧರ್’ ಯಶಸ್ಸಿನ ಬಳಿಕ ‘ದೃಶ್ಯಂ 3’ ಚಿತ್ರದಿಂದ ಹೊರಬಂದ ಅಕ್ಷಯ್ ಖನ್ನಾ?

ಹಿಂದಿ ಸಿನಿಮಾಗಳು ದಕ್ಷಿಣ ಭಾರತದಲ್ಲಿ ಒಳ್ಳೆಯ ಪ್ರದರ್ಶನ ಕಾಣುವುದಿಲ್ಲ ಎಂಬ ಮಾತು ಚಾಲ್ತಿಯಲ್ಲಿದೆ. ಉತ್ತರ ಭಾರತದಲ್ಲಿ ಸೂಪರ್ ಹಿಟ್ ಆದ ‘ಬ್ರಹ್ಮಾಸ್ತ್ರ’, ‘ಪಠಾಣ್’ ಇನ್ನಿತರೆ ಕೆಲವು ಸಿನಿಮಾಗಳು ಸಹ ದಕ್ಷಿಣ ಭಾರತದಲ್ಲಿ ದೊಡ್ಡ ಕಲೆಕ್ಷನ್ ಮಾಡಿರಲಿಲ್ಲ. ಆದರೆ ‘ಧುರಂಧರ್’ ಹಾಗಿಲ್ಲ, ದಕ್ಷಿಣ ಭಾರತದಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಇದೇ ಕಾರಣಕ್ಕೆ ‘ಧುರಂಧರ್ 2’ ಸಿನಿಮಾವನ್ನು ದಕ್ಷಿಣ ಭಾರತದ ಭಾಷೆಗಳಲ್ಲಿಯೂ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

‘ಧುರಂಧರ್’ ಸಿನಿಮಾ ಸ್ಪೈ ಥ್ರಿಲ್ಲರ್ ಆಗಿದ್ದು, ರಣ್ವೀರ್ ಸಿಂಗ್ ಗೂಢಚಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾನಲ್ಲಿ ಅಕ್ಷನ್ ಖನ್ನ ನಟನೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾನಲ್ಲಿ ಮಾಧವನ್ ಸಹ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಆದಿತ್ಯ ಧಾರ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ದೆಹಲಿ ಮಾಲಿನ್ಯದ ಭೀಕರತೆಯನ್ನು ತೆರೆದಿಟ್ಟ ಸಚಿವ ನಿತಿನ್ ಗಡ್ಕರಿ – Kannada News | Nitin Gadkari Warns of Delhi’s Air Crisis, Cites Health Impact

ನವದೆಹಲಿ, ಡಿಸೆಂಬರ್ 24: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯವು ಅಪಾಯಕಾರಿ ಮಟ್ಟವನ್ನು ತಲುಪಿದ್ದು, ಮಾನವನ ಆರೋಗ್ಯಕ್ಕೆ ಹಾನಿಕಾರಕ ಎಂದು ಘೋಷಿಸಲಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ(Nitin Gadkari) ಕೂಡ ದೆಹಲಿಯ ಮಾಲಿನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಮಾತನಾಡಿದ ನಿತಿನ್ ಗಡ್ಕರಿ, ನಾನು ಎರಡು ದಿನಗಳ ಕಾಲ ದೆಹಲಿಯಲ್ಲಿದ್ದೆ ಮತ್ತು ಗಂಟಲು ಸೋಂಕಿಗೆ ಒಳಗಾಗಿದ್ದೆ ಎಂದರು.

‘ಮೈ ಐಡಿಯಾ ಆಫ್ ನೇಷನ್ ಫರ್ಸ್ಟ್​ ಅನ್​ಲಾಯ್ಡ್​ ನ್ಯಾಷನಲಿಸಂ’ ಎಂಬ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.ಶೇಕಡಾ 40 ರಷ್ಟು ಮಾಲಿನ್ಯ ನಮ್ಮಿಂದಲೇ ಉಂಟಾಗುತ್ತದೆ. ಇದಕ್ಕೆ ಕಾರಣ ಪಳೆಯುಳಿಕೆ ಇಂಧನಗಳು, ಪೆಟ್ರೋಲ್ ಮತ್ತು ಡೀಸೆಲ್ ಎಂದು ಹೇಳಿದ್ದಾರೆ.

ಇಂದಿಗೂ ನಾವು ಕಚ್ಚಾ ತೈಲ ಆಮದಿಗೆ 22 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದ್ದೇವೆ. ದೇಶ ಕಲುಷಿತಗೊಂಡಿದೆ. ಇದು ಯಾವ ರೀತಿಯ ರಾಷ್ಟ್ರೀಯತೆ? ಇಂದು ನಿಜವಾದ ರಾಷ್ಟ್ರೀಯತೆ ಇದ್ದರೆ, ಅದು ಆಮದುಗಳನ್ನು ಕಡಿಮೆ ಮಾಡುವುದು ಮತ್ತು ರಫ್ತು ಹೆಚ್ಚಿಸುವುದರಲ್ಲಿದೆ. ಪರ್ಯಾಯ ಇಂಧನಗಳು ಮತ್ತು ಜೈವಿಕ ಇಂಧನಗಳಲ್ಲಿ ನಾವು ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡಲು ಸಾಧ್ಯವಿಲ್ಲವೇ ಎಂದು ಗಡ್ಕರಿ ಪ್ರಶ್ನಿಸಿದ್ದಾರೆ.

ಮತ್ತಷ್ಟು ಓದಿ: ನಾನು ಬ್ರಾಹ್ಮಣ, ನಮಗೆ ಯಾವುದೇ ಮೀಸಲಾತಿ ಇಲ್ಲ, ಇದು ದೇವರು ನಮಗೆ ಕೊಟ್ಟ ವರ: ನಿತಿನ್ ಗಡ್ಕರಿ

ನಾನು ಇಲ್ಲಿಗೆ 100 ಪ್ರತಿಶತ ಎಥೆನಾಲ್‌ನಲ್ಲಿ ಚಲಿಸುವ ವಾಹನದಲ್ಲಿ ಬಂದಿದ್ದೇನೆ. ಇದು ಶೇ. 60 ರಷ್ಟು ವಿದ್ಯುತ್ ಉತ್ಪಾದಿಸುತ್ತದೆ ಮತ್ತು ಪ್ರತಿ ಕಿಲೋಮೀಟರ್‌ಗೆ ಸರಾಸರಿ 25 ರೂಪಾಯಿಗಳನ್ನು ನೀಡುತ್ತದೆ.ಹಡಗು ಸಾಗಣೆ, ವಾಯುಯಾನ, ಕೈಗಾರಿಕೆ ಮತ್ತು ಸ್ಮಾರ್ಟ್ ಸಾರಿಗೆಯಲ್ಲಿ ಹೈಡ್ರೋಜನ್ ಮಹತ್ವದ ಪಾತ್ರ ವಹಿಸುತ್ತದೆ.

ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡಲು ಸರ್ಕಾರ ಬಲವಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಹೇಳಿದರು. ದೇಶಾದ್ಯಂತ 28 ಪ್ರವೇಶ-ನಿಯಂತ್ರಿತ ಎಕ್ಸ್‌ಪ್ರೆಸ್‌ವೇಗಳನ್ನು ನಿರ್ಮಿಸುವ ಪ್ರಕ್ರಿಯೆಯಲ್ಲಿ ಸರ್ಕಾರವಿದೆ ಎಂದು ಅವರು ಹೇಳಿದರು. ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ರಸ್ತೆ ಅಭಿವೃದ್ಧಿ ಯೋಜನೆಗಳಲ್ಲಿ ಸರ್ಕಾರ 150,000 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡುತ್ತಿದೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು.

ದೆಹಲಿಯ ಗಾಳಿಯ ಗುಣಮಟ್ಟ ತೀವ್ರವಾಗಿ ಹದಗೆಟ್ಟ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಗಡ್ಕರಿ ಈ ಹೇಳಿಕೆ ನೀಡಿದ್ದಾರೆ. ಮಂಗಳವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ವಾಯು ಗುಣಮಟ್ಟ ಸೂಚ್ಯಂಕ (AQI) ಅಪಾಯಕಾರಿ ಮಟ್ಟದಲ್ಲಿ 413 ದಾಖಲಾಗಿದ್ದು, ಇದು ಗೋಚರತೆ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Vijay Hazare Trophy: 412 ರನ್ ಬೆನ್ನಟ್ಟಿ ಚಾಂಪಿಯನ್ ತಂಡಕ್ಕೆ ಮಣ್ಣು ಮುಕ್ಕಿಸಿದ ಕರ್ನಾಟಕ – Kannada News | Record Chase! Karnataka Beats Jharkhand by 5 Wickets in Thrilling VHT Match

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ಹಾಗೂ ಜಾರ್ಖಂಡ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಕರ್ನಾಟಕ ತಂಡ 5 ವಿಕೆಟ್​ಗಳಿಂದ ಗೆದ್ದುಕೊಂಡು ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಇಂದಿನಿಂದ ಆರಂಭವಾಗಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡ, ಕೆಲವೇ ದಿನಗಳ ಹಿಂದಷ್ಟೇ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಗೆದ್ದು ಬೀಗಿದ್ದ ಜಾರ್ಖಂಡ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಜಾರ್ಖಂಡ್ ತಂಡ ದಾಖಲೆಯ 412 ರನ್​ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕರ್ನಾಟಕ ಕೂಡ ಕೆಚ್ಚೆದೆಯ ಪ್ರದರ್ಶನ ನೀಡಿ ಇನ್ನು 15 ಎಸೆತಗಳು ಬಾಕಿ ಇರುವಂತೆಯೇ ಜಯದ ನಗೆಬೀರಿತು.

ಟಾಸ್ ಗೆದ್ದ ಕರ್ನಾಟಕ ಬೌಲಿಂಗ್ ಆಯ್ಕೆ

ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ನಾಯಕ ಮಯಾಂಕ್ ಅಗರ್ವಾಲ್ ಮೊದಲು ಬೌಲಿಂಗ್‌ ಆಯ್ದುಕೊಂಡರು. ಆದರೆ ಜಾರ್ಖಂಡ್ ಬ್ಯಾಟರ್​ಗಳು ಕರ್ನಾಟಕದ ಆಯ್ಕೆಯನ್ನು ತಪ್ಪೆಂದು ಸಾಭೀತುಪಡಿಸಿದರು. ಜಾರ್ಖಂಡ್ ಪರ ಆರಂಭಿಕ ಶಿಖರ್ ಮೋಹನ್ 44 ರನ್ ಬಾರಿಸಿ ತಂಡಕ್ಕೆ ಉತ್ತಮ ಆರಂಭ ನೀಡಿದರು. 4ನೇ ಕ್ರಮಾಂಕದಲ್ಲಿ ಬಂದ ವಿರಾಟ್ ಸಿಂಗ್ ಕೂಡ 88 ರನ್​ಗಳ ಕಾಣಿಕೆ ನೀಡಿದರು.

ಐದನೇ ಕ್ರಮಾಂಕದಲ್ಲಿ ಬಂದ ಕುಶಾಗ್ರ 63 ರನ್​ಗಳ ಇನ್ನಿಂಗ್ಸ್ ಆಡಿದರೆ, 6ನೇ ಕ್ರಮಾಂಕದಲ್ಲಿ ಬಂದ ನಾಯಕ ಇಶಾನ್ ಕಿಶನ್ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಟೀಂ ಇಂಡಿಯಾದಲ್ಲಿ ಆರಂಭಿಕನಾಗಿ ಆಡುತ್ತಿದ್ದ ಕಿಶನ್, ತಮ್ಮ ಬ್ಯಾಟಿಂಗ್‌ ಕ್ರಮಾಂಕವನ್ನು ಬದಲಿಸಿದ್ದಾರೆ. ಇದಕ್ಕೆ ಕಾರಣ ಟೀಂ ಇಂಡಿಯಾದಲ್ಲಿ ಕಿಶನ್​ಗೆ ಆರಂಭಿಕ ಸ್ಥಾನ ಸಿಗುವುದು ಅನುಮಾನ. ಅಲ್ಲದೆ ಭಾರತ ಟಿ20 ವಿಶ್ವಕಪ್ ತಂಡದಲ್ಲಿ ಆಯ್ಕೆಯಾಗಿರುವ ಕಿಶನ್​ಗೆ ಆರಂಭಿಕ ಸ್ಥಾನ ಸಿಗುವುದಿಲ್ಲ.

ಸ್ಫೋಟಕ ಶತಕ ಸಿಡಿಸಿದ ಕಿಶನ್

ಹೀಗಾಗಿ ಗೇಮ್ ಫಿನಿಶರ್ ಸ್ಥಾನವನ್ನು ಪಡೆದುಕೊಳ್ಳುವ ಗುರಿಯಲ್ಲಿರುವ ಕಿಶನ್ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 39 ಎಸೆತಗಳನ್ನು ಎದುರಿಸಿ, 7 ಬೌಂಡರಿ ಹಾಗೂ 14 ಭರ್ಜರಿ ಸಿಕ್ಸರ್​ಗಳ ಸಹಿತ 125 ರನ್ ಬಾರಿಸಿದರು. ಕಿಶನ್ ಶತಕದಿಂದಾಗಿ ಜಾರ್ಖಂಡ್ ತಂಡ ಕರ್ನಾಟಕದ ಮುಂದೆ 412 ರನ್​ಗಳ ಬೃಹತ್ ರನ್ ಕಲೆಹಾಕಿತು.

ಕರ್ನಾಟಕಕ್ಕೆ ಉತ್ತಮ ಆರಂಭ

ಈ ಗುರಿ ಬೆನ್ನಟ್ಟಿದ ಕರ್ನಾಟಕ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಮೊದಲ ವಿಕೆಟ್​ಗೆ ದೇವದತ್ ಪಡಿಕ್ಕಲ್ ಹಾಗೂ ಮಯಾಂಕ್ ಅಗರ್ವಾಲ್ 114 ರನ್​ಗಳ ಭರ್ಜರಿ ಜೊತೆಯಾಟವನ್ನು ನೀಡಿದರು. ಇವರಿಬ್ಬರು ಕೇವಲ 11.5 ಓವರ್​ಗಳಲ್ಲಿ ತಂಡವನ್ನು ಇಷ್ಟು ಮೊತ್ತಕ್ಕೆ ಕೊಂಡೊಯ್ದರು. ಇದೇ ವೇಳೆ ನಾಯಕ ಮಯಾಂಕ್ 54 ರನ್​ಗಳ ಇನ್ನಿಂಗ್ಸ್ ಆಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 34 ಎಸೆತಗಳನ್ನು ಎದುರಿಸಿದ ಮಯಾಂಕ್ 10 ಬೌಂಡರಿ ಕೂಡ ಬಾರಿಸಿದರು.

147 ರನ್ ಸಿಡಿಸಿದ ಪಡಿಕ್ಕಲ್

ಇತ್ತ ದೇವದತ್ ಪಡಿಕ್ಕಲ್ ತಮ್ಮ ಇನ್ನಿಂಗ್ಸ್​ನಲ್ಲಿ 118 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್ ಸಹಿತ 147 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ದೇವದತ್ ಔಟಾಗುವುದಕ್ಕೂ ಮುನ್ನ ಕರ್ನಾಟಕದ ಗೆಲುವು ಖಚಿತವಾದ್ದಂತ್ತಾಗಿತ್ತು. ಉಳಿದ ಕೆಲಸ ಮಾಡಿದ ಕೆ. ಶ್ರೀಕಾಂತ್ 38 ರನ್​ಗಳ ಇನ್ನಿಂಗ್ಸ್ ಆಡಿದರೆ, ಅಭಿನವ್ ಮನೋಹರ್ ಅಜೇಯ 56 ರನ್ ಮತ್ತು ಧೃವ್ ಪ್ರಭಾಕರ್ ಅಜೇಯ 40 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Fitness Trainer Jobs 2025: ಕರ್ನಾಟಕ ಕ್ರೀಡಾ ಇಲಾಖೆಯಲ್ಲಿ ಫಿಟ್‌ನೆಸ್ ತರಬೇತುದಾರ ಹುದ್ದೆಗೆ ನೇಮಕಾತಿ – Kannada News | Karnataka Fitness Trainer Jobs 2025: Apply Offline by Jan 5 | Youth Dept

ಕರ್ನಾಟಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಫಿಟ್‌ನೆಸ್ ತರಬೇತುದಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 05 ರ ಮೊದಲು ಅರ್ಜಿ ಸಲ್ಲಿಸಬಹುದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ ನಿರ್ದೇಶಕರು , ಕರ್ನಾಟಕ ಕ್ರೀಡಾ ಪ್ರಾಧಿಕಾರ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರು-560001, ಇಲ್ಲಿಗೆ ಕಳುಹಿಸಬೇಕು.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಅರ್ಜಿ ಸಲ್ಲಿಸಲು ಕ್ರಮಗಳು:

  • ಮೊದಲನೆಯದಾಗಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • ಬಳಿಕ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
  • ಕೊನೆಗೆ ಅರ್ಜಿ ನಮೂನೆಯನ್ನು ಮೇಲೆ ತಿಳಿಸಲಾದ ವಿಳಾಸಕ್ಕೆ ಕಳುಹಿಸಿ. ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ ಕಳುಹಿಸಬಹುದು.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:36 pm, Wed, 24 December 25

Source link

BSF Recruitment 2025: ಗಡಿ ಭದ್ರತಾ ಪಡೆಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು! – Kannada News | BSF Sports Quota Recruitment 2025: 549 Constable Vacancies Out, Apply Online

ಕೇಂದ್ರ ಸರ್ಕಾರದ ಗಡಿ ಭದ್ರತಾ ಪಡೆ (BSF) 2025 ರ ಕ್ರೀಡಾ ಕೋಟಾದಡಿಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಗ್ರೂಪ್ ‘ಸಿ’ ನಾನ್-ಗೆಜೆಟೆಡ್, ನಾನ್-ಮಿನಿಸ್ಟೀರಿಯಲ್ ಅಡಿಯಲ್ಲಿ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 549 ಕ್ರೀಡಾ ಕೋಟಾದ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇವುಗಳಲ್ಲಿ 277 ಹುದ್ದೆಗಳು ಪುರುಷರಿಗೆ ಮತ್ತು 272 ಹುದ್ದೆಗಳು ಮಹಿಳೆಯರಿಗೆ. ಅರ್ಹ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿಗಳು ಡಿಸೆಂಬರ್ 27 ರಿಂದ ಪ್ರಾರಂಭವಾಗುತ್ತವೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಅಥ್ಲೆಟಿಕ್ಸ್, ಬಾಕ್ಸಿಂಗ್, ಬ್ಯಾಸ್ಕೆಟ್‌ಬಾಲ್, ಹಾಕಿ, ಫುಟ್‌ಬಾಲ್, ಈಜು, ಶೂಟಿಂಗ್, ಜೂಡೋ, ಕರಾಟೆ, ಕುಸ್ತಿ, ವೇಟ್‌ಲಿಫ್ಟಿಂಗ್, ವಾಲಿಬಾಲ್, ಹ್ಯಾಂಡ್‌ಬಾಲ್, ಟೇಬಲ್ ಟೆನಿಸ್, ಬಿಲ್ಲುಗಾರಿಕೆ, ಬ್ಯಾಡ್ಮಿಂಟನ್, ಸೈಕ್ಲಿಂಗ್ ಮುಂತಾದ ಕ್ರೀಡೆಗಳಲ್ಲಿ ಪ್ರವೀಣರಾಗಿರಬೇಕು. ಕಳೆದ ಎರಡು ವರ್ಷಗಳಲ್ಲಿ ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕಗಳನ್ನು ಗೆದ್ದಿರಬೇಕು. ಅಥವಾ ಇವುಗಳಲ್ಲಿ ಭಾಗವಹಿಸಿರಬೇಕು. ಅಲ್ಲದೆ, ಅಭ್ಯರ್ಥಿಗಳ ವಯೋಮಿತಿ 18 ರಿಂದ 23 ವರ್ಷಗಳ ನಡುವೆ ಇರಬೇಕು. ಎಸ್‌ಸಿ ಮತ್ತು ಎಸ್‌ಟಿಗೆ ಐದು ವರ್ಷ ಮತ್ತು ಒಬಿಸಿಗೆ ಮೂರು ವರ್ಷಗಳವರೆಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಈ ಅರ್ಹತೆಗಳನ್ನು ಹೊಂದಿರುವವರು ಜನವರಿ 15, 2026 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು ತಲಾ 159 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಎಸ್‌ಸಿ, ಎಸ್‌ಟಿ ಮತ್ತು ಮಹಿಳೆಯರಿಗೆ ಯಾವುದೇ ಶುಲ್ಕವಿಲ್ಲ. ಅಂತಿಮ ಆಯ್ಕೆಯು ದೈಹಿಕ ಗುಣಮಟ್ಟ ಪರೀಕ್ಷೆ (ಪಿಎಸ್‌ಟಿ), ಮೆರಿಟ್ ಪಟ್ಟಿ (ಕ್ರೀಡಾ ಪ್ರದರ್ಶನದ ಆಧಾರದ ಮೇಲೆ), ದಾಖಲೆ ಪರಿಶೀಲನೆ ಮತ್ತು ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ವೈದ್ಯಕೀಯ ಪರೀಕ್ಷೆಯನ್ನು ಆಧರಿಸಿರುತ್ತದೆ. ಆಯ್ಕೆಯಾದವರಿಗೆ ತಿಂಗಳಿಗೆ ರೂ. 21,700 ರಿಂದ ರೂ. 69,100 ರವರೆಗೆ ವೇತನವನ್ನು ನೀಡಲಾಗುತ್ತದೆ.

ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:47 pm, Wed, 24 December 25

Source link

ಸರ್ಕಾರಿ ಶಾಲೆ​ ಮಕ್ಕಳನ್ನ ಹೆಲಿಕಾಪ್ಟರ್​ನಲ್ಲಿ ಕರೆದೊಯ್ದ MLA ಸತೀಶ್ ಸೈಲ್ ಪುತ್ರಿ – Kannada News | MLA Satish Sails Daughter Organises Free Helicopter Rides in Karwar for Government School Children and Specially Abled

ಕಾರವಾರ, ಡಿಸೆಂಬರ್​​ 24: ಕರಾವಳಿ ಉತ್ಸವದ ಪ್ರಯುಕ್ತ ಉತ್ತರ ಕನ್ನಡ ಜಿಲ್ಲಾಡಳಿತದ ವತಿಯಿಂದ ಹೆಲಿಕ್ಯಾಪ್ಟರ್ ರೈಡ್ ಆಯೋಜನೆ ಮಾಡಲಾಗಿದ್ದು, ವಿಶೇಷ ಚೇತನ ಮಕ್ಕಳು ಇದಕ್ಕೆ ಚಾಲನೆ ನೀಡಿದ್ದಾರೆ. ವಿಶೇಷ ಚೇತನ ಮಕ್ಕಳು ಮತ್ತು ಕಾರವಾರ -ಅಂಕೋಲಾ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತವಾಗಿ ಹೆಲಿಕ್ಯಾಪ್ಟರ್ ರೈಡ್​​ ವ್ಯವಸ್ಥೆ ಮಾಡಲಾಗಿದ್ದು, ತಂದೆಯ ಹುಟ್ಟುಹಬ್ಬದ ಪ್ರಯುಕ್ತ ಶಾಸಕ ಸತೀಶ್ ಸೈಲ್ ಪುತ್ರಿ ಸಾಚಿ ಇದರ ಜವಾಬ್ದಾರಿ ಹೊತ್ತಿದ್ದಾರೆ. ಅರಬ್ಬೀ ಸಮುದ್ರದ ಕಡಲ ತೀರ, ಕಾಳಿ ಸಂಗಮ ಹಾಗೂ ಕಾರವಾರ ನಗರವನ್ನು ಆಗಸದಿಂದ ವೀಕ್ಷಿಸಬಹುದಾದ ಸುಮಾರು 7 ನಿಮಿಷಗಳ ಹೆಲಿಕ್ಯಾಪ್ಟರ್​​ ರೈಡ್​​ಗೆ ಸಾರ್ವಜನಿಕರಿಗೆ 3,900 ರೂ. ದರ ನಿಗದಿ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

412 ರನ್​ಗಳ ಬೃಹತ್ ಗುರಿ; 147 ರನ್​ ಸಿಡಿಸಿದ ದೇವದತ್ ಪಡಿಕ್ಕಲ್ – Kannada News | Karnataka vs Jharkhand: Devdutt Padikkal Century in High Scoring Vijay Hazare Game

ಇದು ಮಾತ್ರವಲ್ಲದೆ ಮೊದಲ ವಿಕೆಟ್​ಗೆ ದೇವದತ್ ಪಡಿಕ್ಕಲ್ ಹಾಗೂ ಮಯಾಂಕ್ ಅಗರ್ವಾಲ್ 114 ರನ್​ಗಳ ಭರ್ಜರಿ ಜೊತೆಯಾಟವನ್ನು ನೀಡಿದರು. ಇವರಿಬ್ಬರು ಕೇವಲ 11.5 ಓವರ್​ಗಳಲ್ಲಿ ತಂಡವನ್ನು ಇಷ್ಟು ಮೊತ್ತಕ್ಕೆ ಕೊಂಡೊಯ್ದಿದ್ದು, ಇವರಿಬ್ಬರ ಸ್ಫೋಟಕ ಆಟಕ್ಕೆ ಸಾಕ್ಷಿಯಾಗಿದೆ.

Source link

ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ಟೀಂ ಇಂಡಿಯಾದ ಐವರಿಗೆ ಅಗ್ರಸ್ಥಾನ – Kannada News | ICC Rankings: 5 Indian Cricketers Crowned No.1; Suryakumar Yadav Drops Out of Top 10

ಐಸಿಸಿ ಮೂರು ಮಾದರಿಗಳ ಇತ್ತೀಚಿನ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ. ಒಂದಲ್ಲ, ಎರಡಲ್ಲ, ಐದು ಭಾರತೀಯ ಆಟಗಾರರು ಈ ಶ್ರೇಯಾಂಕದಲ್ಲಿ ನಂ. 1 ಸ್ಥಾನವನ್ನು ಅಲಂಕರಿಸಿದ್ದಾರೆ. ಟೆಸ್ಟ್, ಏಕದಿನ, ಟಿ20 ಕ್ರಿಕೆಟ್​ನಲ್ಲಿ ಟೀಂ ಇಂಡಿಯಾದ ಆಟಗಾರರು ಪ್ರಾಬಲ್ಯ ಸಾಧಿಸಿದ್ದಾರೆ.

ರೋಹಿತ್ ಶರ್ಮಾ ಏಕದಿನ ಶ್ರೇಯಾಂಕದಲ್ಲಿ ನಂ. 1 ಬ್ಯಾಟ್ಸ್‌ಮನ್ ಆಗಿ ಮುಂದುವರೆದಿದ್ದಾರೆ. ಜಸ್ಪ್ರೀತ್ ಬುಮ್ರಾ ಟೆಸ್ಟ್ ಶ್ರೇಯಾಂಕದಲ್ಲಿ ನಂ. 1 ಬೌಲರ್ ಆಗಿದ್ದರೆ, ರವೀಂದ್ರ ಜಡೇಜಾ ಟೆಸ್ಟ್ ಆಲ್‌ರೌಂಡರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ ಅಭಿಷೇಕ್ ಶರ್ಮಾ ಟಿ 20 ಶ್ರೇಯಾಂಕದಲ್ಲಿ ನಂ. 1 ಬ್ಯಾಟ್ಸ್‌ಮನ್ ಆಗಿದ್ದರೆ, ವರುಣ್ ಚಕ್ರವರ್ತಿ ನಂ. 1 ಟಿ20 ಬೌಲರ್ ಎನಿಸಿಕೊಂಡಿದ್ದಾರೆ.

ಆದಾಗ್ಯೂ ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್​ಗೆ ಆಘಾತ ಎದುರಾಗಿದೆ. ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಸೂರ್ಯ, ಟಿ20 ಶ್ರೇಯಾಂಕದಲ್ಲಿ ಅಗ್ರ 10 ರಿಂದ ಹೊರಬಿದ್ದಿದ್ದಾರೆ. ಕಳೆದ ಎರಡು ವರ್ಷಗಳಿಂದ ಮೌನಕ್ಕೆ ಶರಣಾಗಿರುವ ಸೂರ್ಯ ಆಡಿರುವ 21 ಟಿ20 ಪಂದ್ಯಗಳಲ್ಲಿ 13 ಸರಾಸರಿಯಲ್ಲಿ ಕೇವಲ 218 ರನ್ ಗಳಿಸಿದ್ದಾರೆ. ಇದರಿಂದಾಗಿ ಸೂರ್ಯಕುಮಾರ್ ಯಾದವ್ ಟಿ20 ಶ್ರೇಯಾಂಕದಲ್ಲಿ ನಿರಂತರವಾಗಿ ಕುಸಿತ ಕಂಡಿದ್ದಾರೆ.

ಇತ್ತ ಜಸ್ಪ್ರೀತ್ ಬುಮ್ರಾ ಮತ್ತು ವರುಣ್ ಚಕ್ರವರ್ತಿ ಕೂಡ ಐಸಿಸಿ ಶ್ರೇಯಾಂಕದಲ್ಲಿ ನಂ.1 ಸ್ಥಾನವನ್ನು ಕಳೆದುಕೊಳ್ಳುವ ಹಂತದಲ್ಲಿದ್ದಾರೆ. ಪ್ರಸ್ತುತ ಬುಮ್ರಾ 879 ರೇಟಿಂಗ್ ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದಾರೆ. ಆದರೆ ಆಶಸ್ ಸರಣಿಯ ಕೇವಲ ಒಂದು ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಪ್ಯಾಟ್ ಕಮ್ಮಿನ್ಸ್, 849 ರೇಟಿಂಗ್ ಅಂಕಗಳೊಂದಿಗೆ ನಾಲ್ಕು ಬೌಲರ್‌ಗಳನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ್ದಾರೆ.

ವರುಣ್ ಚಕ್ರವರ್ತಿ ಕೂಡ ಟಿ20 ಬೌಲರ್​ಗಳ ಶ್ರೇಯಾಂಕದಲ್ಲಿ ನಂ. 1 ಸ್ಥಾನದಲ್ಲಿದ್ದಾರೆ. ಆದರೆ ದಕ್ಷಿಣ ಆಫ್ರಿಕಾ ವಿರುದ್ಧ ಅವರ ಅದ್ಭುತ ಪ್ರದರ್ಶನದ ಹೊರತಾಗಿಯೂ, ಅವರು 14 ರೇಟಿಂಗ್ ಅಂಕಗಳನ್ನು ಕಳೆದುಕೊಂಡಿದ್ದಾರೆ. ವರುಣ್ ಅವರ ರೇಟಿಂಗ್ಸ್​ 818 ರಿಂದ 804 ಕ್ಕೆ ಕುಸಿದಿದೆ. ಆದಾಗ್ಯೂ, ವರುಣ್ ಮತ್ತು ನಂ. 2 ಬೌಲರ್ ಜಾಕೋಬ್ ಡಫಿ ನಡುವೆ ಗಮನಾರ್ಹ ಅಂತರವಿದ್ದು, ವರುಣ್ ನಂ.1 ಸ್ಥಾನ ಕೆಲ ದಿನಗಳವರೆಗೆ ಮುಂದುವರೆಯಲಿದೆ.

Published On – 4:55 pm, Wed, 24 December 25

Source link

ಬಿಗ್ ಬಾಸ್ ಮನೆಯೊಳಗೆ ಗಿಲ್ಲಿ ಮಾತು ಕೇಳಿ ಬಿದ್ದುಬಿದ್ದು ನಕ್ಕ ಅಶ್ವಿನಿ ಗೌಡ ತಾಯಿ – Kannada News | Gilli Nata talks with Ashwini Gowda mother in Bigg Boss Kannada Season 12 family week

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ರಿಯಾಲಿಟಿ ಶೋನಲ್ಲಿ ಫ್ಯಾಮಿಲಿ ವೀಕ್ ನಡೆಯುತ್ತಿದೆ. ಅಂದರೆ, ಬಿಗ್ ಬಾಸ್ ಸ್ಪರ್ಧಿಗಳ ಕುಟುಂಬದವರು ಒಬ್ಬೊಬ್ಬರಾಗಿಯೇ ದೊಡ್ಮನೆಗೆ ಬಂದು ಹೋಗುತ್ತಿದ್ದಾರೆ. ಅಶ್ವಿನಿ ಗೌಡ (Ashwini Gowda) ಅವರ ತಾಯಿ ಕೂಡ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ. ಅವರು ಬಂದ ಕ್ಷಣ ಅಶ್ವಿನಿ ಗೌಡ ತುಂಬಾ ಎಮೋಷನಲ್ ಆದರು. ಅಶ್ವಿನಿ ತಾಯಿ ಅವರು ಗಿಲ್ಲಿ ಜೊತೆ ಮಾತನಾಡಿ, ‘ಒಬ್ಬರಿಗೊಬ್ಬರು ಮನಸ್ತಾಪ ಮಾಡಿಕೊಳ್ಳಬೇಡಿ. ಚೆನ್ನಾಗಿರಿ’ ಎಂದು ಸಲಹೆ ನೀಡಿದ್ದಾರೆ. ಅವರನ್ನು ಅತ್ತೆ ಎಂದು ಕರೆಯಲು ಗಿಲ್ಲಿ ನಟ (Gilli Nata) ಶುರು ಮಾಡಿದರು. ಈ ಕ್ಷಣ ಸಖತ್ ಫನ್ ಆಗಿದೆ. ಡಿಸೆಂಬರ್ 24ರ ಸಂಚಿಕೆಯ ಪ್ರೋಮೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ‘ಜಿಯೋ ಹಾಟ್​ ಸ್ಟಾರ್’ ಒಟಿಟಿ ಹಾಗೂ ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಪೂರ್ತಿ ಸಂಚಿಕೆ ವೀಕ್ಷಿಸಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Dharwad: ನಶೆಯಲ್ಲಿದ್ದವನ ಬರ್ಬರ ಕೊಲೆ; ದೇವಸ್ಥಾನದ ಎದುರೇ ಹರಿದ ನೆತ್ತರು – Kannada News | Drunk Man Brutally Murdered by Brother and Brother in Law in Kalaghatagi

ಧಾರವಾಡ, ಡಿಸೆಂಬರ್​​ 24: ಬಸಪ್ಪನ ದೇವಸ್ಥಾನದ ಎದುರೇ ವ್ಯಕ್ತಿಯೋರ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹುಣಸಿಕಟ್ಚಿ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ರಾಮನಕೊಪ್ಪ ಗ್ರಾಮ ನಿವಾಸಿ ವಿಟ್ಠಲ್​ ಕೂರಾಡಿ ಮೃತ ದುರ್ದೈವಿಯಾಗಿದ್ದು, ಇವರ ಸಂಬಂಧಿಕರೇ ಆರೋಪಿಗಳು ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ.

ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಕಸ್ತೂರಿ ಜೊತೆ ವಿವಾಹವಾಗಿದ್ದ ವಿಟ್ಠಲ್, ಪೆಂಡಾಲ್ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ನಿತ್ಯವೂ ಕುಡಿದು ಬಂದು ಈತ ಜಗಳ ಮಾಡುತ್ತಿದ್ದ ಹಿನ್ನೆಲೆ ಪತ್ನಿ ಕಸ್ತೂರಿ ತವರುಮನೆಗೆ ಬಂದು ಹೆತ್ತವರ ಜೊತೆ ವಾಸವಿದ್ದರು. ಕಸ್ತೂರಿ ಮತ್ತು ವಿಟ್ಠಲ್​​ ದಂಪತಿಗೆ ಮೂವರು ಮಕ್ಕಳೂ ಇದ್ದು, ಮಾವನ ಮನೆಗೆ ಆಗಾಗ ವಿಟ್ಠಲ್​​ ಬಂದು ಹೋಗುತ್ತಿದ್ದರು. ಅದರಂತೆ ನಿನ್ನೆ ರಾತ್ರಿಯೂ ಮಾವನ ಮನೆಗೆ ಬಂದಿದ್ದರು. ಬಳಿಕ ದೇವಸ್ಥಾನದಲ್ಲಿ ಮಲಗಿದ್ದರು. ಆದರೆ ರಾತ್ರಿ ಬೆಳಗಾಗುವುದರ ಒಳಗೆ ವಿಟ್ಠಲ್​​ ಕೊಲೆಯಾಗಿದೆ.

ಇದನ್ನೂ ಓದಿ: ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!

ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಕಲಘಟಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವ ಜೊತೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಖಾಕಿ ಮುಂದಾದಾಗ ಕೊಲೆಯಾದ ವಿಟ್ಠಲ್​​ ಸಹೋದರ ಅಣ್ಣಪ್ಪ ಮತ್ತು ಕಸ್ಸೂರಿ ಅವರ ಸಹೋದರ ಪುಂಡಲೀಕ ಎಂಬುದು ಬಹಿರಂಗವಾಗಿದೆ.

ಕಳ್ಳತನವನ್ನೂ ವಿಟ್ಠಲ್​​ ಮಾಡುತ್ತಿದ್ದರು ಎನ್ನಲಾಗಿದ್ದು, ಸ್ವತಃ ಸಹೋದರನ ಬೈಕ್ ಕದ್ದು ತಂದು ಅದಕ್ಕೆ ಬೆಂಕಿ ಹಚ್ಚಿದ್ದರಂತೆ. ಹೀಗಾಗಿ ಅಣ್ಣಪ್ಪ, ವಿಟ್ಠಲ್​ ಮೇಲೆ ಸಿಟ್ಟಾಗಿದ್ದ. ಇನ್ನೊಂದು ಕಡೆ ಕುಡಿದು ಬಂದು ತನ್ನ ಸಹೋದರಿಗೆ ಕಿರುಕುಳ ನೀಡುತ್ತಿದ್ದ ಕಾರಣ ಪುಂಡಲೀಕ ಕೂಡ ಮುನಿಸಿಕೊಂಡಿದ್ದ. ಹೀಗಾಗಿ ಈ ಇಬ್ಬರು ಸೇರಿ ಕೊಲೆಗೆ ಸಂಚು ರೂಪಿಸಿದ್ದರು. ವಿಟ್ಠಲ್​​ಗೆ ಸರಿಯಾಗಿ ಮದ್ಯ ಕುಡಿಸಿದ್ದ ಇವರು, ರಾತ್ರಿ ವೇಳೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂಬುದು ತನಿಖೆ ವೇಳೆ ಗೊತ್ತಾಗಿದೆ. ವಿಟ್ಠಲ್​ ಕೊಲೆ ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕೃತ್ಯದಲ್ಲಿ ಬೇರೆಯವರ ಪಾತ್ರವಿದೆಯಾ ಎನ್ನುವ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 4:55 pm, Wed, 24 December 25

Source link

Exit mobile version