Headlines

ಒಬ್ಬರಲ್ಲ, ಇಬ್ಬರಲ್ಲ ಬರೋಬ್ಬರಿ 500 ಹೆಣ್ಣುಮಕ್ಕಳಿಗೆ ವಂಚನೆ: ಪ್ರೀತಿ ಹೆಸರಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದ್ದ ವಂಚಕ ಅರೆಸ್ಟ್ – Kannada News | Dating App Scam: Man Cheats 500 Women for Rs2 Crore with Fake Profiles and Blackmail

ಕೋಲ್ಕತ್ತಾ, ಏಪ್ರಿಲ್ 16: ಡೇಟಿಂಗ್ ಆ್ಯಪ್‌(Dating App)ಗಳಲ್ಲಿ ಸುಂದರ ಪ್ರೊಫೈಲ್, ಆಕರ್ಷಕ ಮಾತುಗಳು, ಪ್ರತಿಷ್ಠಿತ ಉದ್ಯೋಗದ ಹಣೆಪಟ್ಟಿ, ಆನಂದ್ ಕುಮಾರ್‌ಗೆ ಯಾರನ್ನಾದರೂ ಬಲೆಗೆ ಬೀಳಿಸಲು ಇವಿಷ್ಟೇ ಸಾಕಿತ್ತು. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ನಿವಾಸಿಯಾದ 35 ವರ್ಷದ ಆನಂದ್ ಕುಮಾರ್, ದೆಹಲಿ ಪೊಲೀಸರ ಸೈಬರ್ ಕ್ರೈಂ ತಂಡದ ಕೈಲಿ ಸಿಕ್ಕಿಬಿದ್ದಿದ್ದಾನೆ. ಈತ ಮಾಡಿರುವ ವಂಚನೆಯ ಆಳ ಕೇಳಿದರೆ ಶಾಕ್ ಆಗೋದು ಖಚಿತ. ಆನಂದ್ ಕುಮಾರ್ ಡೇಟಿಂಗ್ ಆ್ಯಪ್‌ಗಳಲ್ಲಿ ಈತ ಒಮ್ಮೆ ಡಾಕ್ಟರ್, ಇನ್ನೊಮ್ಮೆ ಲಾಯರ್, ಮತ್ತೊಮ್ಮೆ…

Read More

ನೆಲಮಂಗಲ: ಪರ ಸ್ತ್ರೀ ವ್ಯಾಮೋಹಕ್ಕಾಗಿ ಪತ್ನಿಗೆ ಕಿರುಕುಳ, ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿ ಮೆಟ್ಟಿಲೇರಿದ ಮಹಿಳೆ – Kannada News | Nelamangala Marital Dispute: Woman Moves DYSP Office After Husband Seeks Divorce Over Extra Marital Affair

ಸಂತ್ರಸ್ತೆ ಜತೆ ಆರೋಪಿ ಪುನೀತ್Image Credit source: tv9 ನೆಲಮಂಗಲ, ಏಪ್ರಿಲ್ 16: ಪರ ಸ್ತ್ರೀ ವ್ಯಾಮೋಹಕ್ಕೆ ಬಿದ್ದ ಪತಿಯೊಬ್ಬ ತನ್ನ ಪತ್ನಿಗೆ ವಿಚ್ಛೇದನ ನೀಡಲು ಮುಂದಾಗಿ, ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿರುವ ಘಟನೆ ನೆಲಮಂಗಲ (Nelamangala) ತಾಲೂಕಿನ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಬೈಲಪ್ಪನ ಪಾಳ್ಯ ನಿವಾಸಿ ಪುನೀತ್ ಕುಮಾರ್ ಹಾಗೂ ಪವಿತ್ರಾ ಅವರ ವಿವಾಹ ಐದು ವರ್ಷಗಳ ಹಿಂದೆ ನಡೆದಿತ್ತು. ಪವಿತ್ರಾ ಅವರ ಪೋಷಕರು ಮಗಳ ಮದುವೆಗೆ 200 ಗ್ರಾಂ…

Read More

VIDEO: ಕೊಹ್ಲಿಯ ಪಾದ ಮುಟ್ಟಿ ನಮಸ್ಕರಿಸಿದ ಯುವ ವೇಗಿ: ಆಮೇಲೇನಾಯ್ತು?  – Kannada News | Virat Kohli stunned as Naman Tiwari tries to touch his feet

ಕ್ರಿಕೆಟ್ ಮೈದಾನದಲ್ಲಿ ಪೈಪೋಟಿಗೆ ಮಾತ್ರವಲ್ಲ, ಕೆಲವೊಮ್ಮೆ ಗೌರವ ಮತ್ತು ಭಾವನಾತ್ಮಕ ಕ್ಷಣಗಳಿಗೂ ಸಾಕ್ಷಿಯಾಗುತ್ತವೆ. ಅಂತಹದೊಂದು ಘಟನೆಗೆ ಐಪಿಎಲ್​ನ 23ನೇ ಪಂದ್ಯ ಸಾಕ್ಷಿಯಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ಮತ್ತು ಎಲ್​ಎಸ್​ಜಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು 146 ರನ್​ಗಳು ಮಾತ್ರ. ಈ ಗುರಿಯನ್ನು 15.1 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 5 ವಿಕೆಟ್​ಗಳ ಜಯ…

Read More

ಅಂದು RCB ಆಟಗಾರನ ಹೀಯಾಳಿಸಿ ಇಂದು ದೂರು ನೀಡಿದ CSK – Kannada News | RCB vs CSK: CSK’s Double Standard in the ‘Idli Sambar’ Row

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಕೇವಲ ಕ್ರಿಕೆಟ್ ಮೈದಾನದ ಹೋರಾಟಕ್ಕೆ ಮಾತ್ರವಲ್ಲದೆ, ಅಭಿಮಾನಿಗಳ ನಡುವಿನ ಜಿದ್ದಾಜಿದ್ದಿಗೂ ಹೆಸರುವಾಸಿ. ಆದರೆ, ಈ ಬಾರಿ ಈ ಪೈಪೋಟಿ ಮೈದಾನದ ಹೊರಗೆ ‘ಸಾಂಸ್ಕೃತಿಕ ಅವಮಾನ’ದ ತಿರುವು ಪಡೆದುಕೊಂಡಿದೆ. ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ನಡುವಿನ ಪಂದ್ಯದ ವೇಳೆ ನಡೆದ ‘ಇಡ್ಲಿ-ಸಾಂಬಾರ್’ ಹಾಡಿನ ವಿವಾದ ಈಗ ಬಿಸಿಸಿಐ (BCCI) ಮೆಟ್ಟಿಲೇರಿದೆ. ಏಪ್ರಿಲ್ 5 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸಿಎಸ್​ಕೆ ವಿರುದ್ಧದ ಪಂದ್ಯದ ವೇಳೆ ಆರ್​ಸಿಬಿ ಡಿಜೆ ಚೆನ್ನೈ…

Read More

ವಚನಾನಂದ ಶ್ರೀ ವಿರುದ್ಧ ಮತ್ತೊಂದು ಸ್ಫೋಟಕ ಆರೋಪ: ರಾಜಕೀಯ ನಾಯಕರ ಕರೆ ರೆಕಾರ್ಡ್​​ ಮಾಡ್ತಿದ್ರಾ ಶ್ವಾಸಗುರು? – Kannada News | Panchamasali Trust Member H.S. Nagaraj Warns Leaders About Vachanananda Srees Phone Recording Habit

ದಾವಣಗೆರೆ, ಏಪ್ರಿಲ್​​ 16: ಪಂಚಮಸಾಲಿ ಸಮಾಜ ಟ್ರಸ್ಟ್‌ನ ಸದಸ್ಯ ಎಚ್.ಎಸ್. ನಾಗರಾಜ್ ಅವರು ವಚನಾನಂದ ಶ್ರೀಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಚನಾನಂದ ಶ್ರೀಗಳು ರಾಜ್ಯದ ಹಿರಿಯ ಮತ್ತು ಪ್ರಮುಖ ರಾಜಕೀಯ ನಾಯಕರೊಂದಿಗೆ ನಡೆಸಿದ ದೂರವಾಣಿ ಸಂಭಾಷಣೆಗಳನ್ನು ರೆಕಾರ್ಡ್ ಮಾಡಿಕೊಳ್ಳುತ್ತಿದ್ದಾರೆ. ಈ ರೆಕಾರ್ಡಿಂಗ್‌ಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸುವ ಅಭ್ಯಾಸ ಹೊಂದಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಇಂತಹ ನಡೆ ರಾಜ್ಯದಲ್ಲಿ ಚುಕ್ಕಾಣಿ ಹಿಡಿದಿರುವ ನಾಯಕರಿಗೆ ತೀವ್ರ ಅಪಾಯಕಾರಿ ಎಂದು…

Read More

ನಾಯಕರದ್ದಾಯ್ತು, ಈಗ ಮುಸ್ಲಿಂ ಧಾರ್ಮಿಕ ಮುಖಂಡರ ಸರದಿ: ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಆಕ್ರೋಶ – Kannada News | After Politicians, Now Muslim Religious Leaders Slam Congress Over Davanagere South Ticket and of Dynasty Politics

ಬೆಂಗಳೂರು, ಏಪ್ರಿಲ್ 16: ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲಿಂ ನಾಯಕರಿಗೆ ಟಿಕೆಟ್ ನಿರಾಕರಣೆ ಮತ್ತು ಪಕ್ಷದೊಳಗಿನ ಅವರ ಸ್ಥಾನಮಾನದ ಕುರಿತು ಅಲ್ಪಸಂಖ್ಯಾತ ಧಾರ್ಮಿಕ ಮುಖಂಡರು ಇದೀಗ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್‌ನ ನಿರ್ಧಾರವನ್ನು ಬೆಂಗಳೂರಿನಲ್ಲಿ ಕಟುವಾಗಿ ಟೀಕಿಸಿರುವ ಮುಖಂಡರು, ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷದ ನಡೆ ಪ್ರಶ್ನಾರ್ಹವಾಗಿದೆ ಎಂದು ಹೇಳಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ಪುತ್ರ ಸಚಿವ, ಅವರ ಪತ್ನಿ ಸಂಸದೆ, ಈಗ ಮಗನಿಗೆ ಉಪಚುನಾವಣೆ ಟಿಕೆಟ್ ನೀಡಿರುವ ಬಗ್ಗೆ ಪ್ರಶ್ನೆಗಳು ಎದ್ದಿವೆ. ಒಂದು ಉಪಚುನಾವಣೆಗಾಗಿ ಮತ್ತು ಒಂದು ಕುಟುಂಬಕ್ಕಾಗಿ…

Read More

ಪಾಕಿಸ್ತಾನದಲ್ಲಿ ಉಗ್ರರಿಗೆ ಶುರುವಾಯ್ತು ನಡುಕ: ಲಷ್ಕರ್ ಸಹ-ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಗುಂಡಿನ ದಾಳಿ – Kannada News | Lashkar Figure Amir Hamza Shot in Lahore, Battles for Life

ಲಾಹೋರ್, ಏಪ್ರಿಲ್ 16: ಲಾಹೋರ್(Lahore)​​ನಲ್ಲಿ ಲಷ್ಕರ್- ಎ- ತೊಯ್ಬಾದ ಸಹ-ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಗುರುವಾರ ಗುಂಡಿನ ದಾಳಿ ನಡೆದಿದೆ. ಯಾವಾಗಲೂ ಪಾಕಿಸ್ತಾನದ ಭದ್ರತಾ ಸಂಸ್ಥೆಗಳ ಕಣ್ಗಾವಲಿನಲ್ಲಿರುತ್ತಿದ್ದ ಹಮ್ಜಾನನ್ನು ಗುರಿಯಾಗಿಸಿಕೊಂಡು ಬಂದೂಕುಧಾರಿಗಳು ಹೊಂಚು ಹಾಕಿದ್ದರು. ಲಾಹೋರ್‌ನ ರಸ್ತೆಯಲ್ಲಿ ಆತ ಸಾಗುತ್ತಿದ್ದಾಗ ಹಠಾತ್ ದಾಳಿ ನಡೆಸಿದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಹಮ್ಜಾನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯಕ್ಕೆ ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ. ಕೇವಲ ಒಂದು ವರ್ಷದ ಅವಧಿಯಲ್ಲಿ ಆತನ ಮೇಲೆ…

Read More

ಒಂದು ಕುಟುಂಬಕ್ಕಾಗಿ ಕಾಂಗ್ರೆಸ್ ನಮ್ಮ ಕೈಬಿಟ್ಟಿದೆ: ಮುಸ್ಲಿಂ ಮುಖಂಡರಿಂದ ತೀವ್ರ ಆಕ್ರೋಶ – Kannada News | Rebellion in Congress: Muslim Leaders Fume Over Davanagere South Ticket; Outraged by Removal of Abdul Jabbar, Naseer Ahmed

ಬೆಂಗಳೂರು, ಏಪ್ರಿಲ್ 16: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ನಿರ್ಧಾರಗಳು ಮುಸ್ಲಿಂ ಸಮುದಾಯದ ತೀವ್ರ ಅಸಮಾಧಾನಕ್ಕೆ ಕಾರಣವಾಗಿವೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಮೌಲಾನಾ ಶಬ್ಬೀರ್ ಅಹ್ಮದ್ ನದ್ವಿ ಹಾಗೂ ಮುಸ್ಲಿಂ ಸಮುದಾಯದ ಇತರ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ, ಮೃತಪಟ್ಟ ನಾಯಕರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವ ಪಕ್ಷದ ಸಂಪ್ರದಾಯ ಇದೆ. ಆದರೆ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮಗ ಮಲ್ಲಿಕಾರ್ಜುನ ಈಗಾಗಲೇ ಶಾಸಕ ಮತ್ತು…

Read More

‘ದರ್ಶನ್ ಮೇಲಿನ ಗೌರವಕ್ಕೆ ನಾನು ಊರು ಬಿಟ್ಟೆ’; ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಶಾಕಿಂಗ್ ಹೇಳಿಕೆ – Kannada News | Darshan’s Ex Manager Mallikarjun Breaks Silence: Reveals D Boss Money and Disappearance

ಇಷ್ಟು ವರ್ಷ ನಾಪತ್ತೆ ಆಗಿದ್ದ ದರ್ಶನ್ (Darshan) ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರು ಈಗ ಮರಳಿ ಪತ್ತೆ ಆಗಿದ್ದಾರೆ. ಅವರು ಸುದ್ದಿಗೋಷ್ಠಿ ನಡೆಸಿ ಅಂದು ನಡೆದ ಘಟನೆ ವಿವರಿಸಿದ್ದಾರೆ. ಈ ವೇಳೆ ಅವರು ಇಷ್ಟು ವರ್ಷಗಳ ಕಾಲ ಎಲ್ಲಿದ್ದರು ಎಂಬ ಸತ್ಯವನ್ನು ರಿವೀಲ್ ಮಾಡಿದ್ದಾರೆ. ಅಲ್ಲದೆ, ಎಲ್ಲವನ್ನೂ ಬಿಟ್ಟು ಹೋಗುವುದರ ಹಿಂದಿನ ಉದ್ದೇಶ ಏನು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ. ‘ನನ್ನಿಂದ ಎಷ್ಟೋ ಜನಕ್ಕೆ ತೊಂದರೆ ಆಗಿದೆ, ನೋವಾಗಿದೆ. ಅವರೆಲ್ಲರಿಗೂ ಕ್ಷಮೆ ಕೇಳುತ್ತೇನೆ’ ಎಂದು ಮಾತು ಆರಂಭಿಸಿದರು….

Read More

Video: ರಸ್ತೆಯಲ್ಲಿ ಇದ್ದಕ್ಕಿದ್ದಂತೆ ಪೋಷಕರೆದುರೇ ಮಕ್ಕಳಿಗೆ ಚಾಕುವಿನಿಂದ ಇರಿದ ಅಪರಿಚಿತ ಮಹಿಳೆ – Kannada News | Horror Unfolds: Two Children Attacked in Front of Parents

ಕೆಲವೊಮ್ಮೆ ಅಪರಾಧಗಳಿಗೆ ಕಾರಣಗಳೇ ಇರುವುದಿಲ್ಲ, ಅಪರಿಚಿತ ಮಹಿಳೆಯೊಬ್ಬಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಕ್ಕಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಇಬ್ಬರು ಮಕ್ಕಳು ತಮ್ಮ ಓಷಕರ ಕೈಹಿಡಿದು ನಡೆದುಕೊಂಡು ಹೋಗುತ್ತಿದ್ದರು. ಏಕಾಏಕಿ ಮಹಿಳೆ ಒಂದು ಮಗುವಿನ ಮೇಲೆ ಹಲ್ಲೆ ನಡೆಸಿದ್ದಾಳೆ. ಏನಾಯಿತು ಎಂದು ಅರ್ಥ ಮಾಡಿಕೊಳ್ಳುವಷ್ಟರಲ್ಲಿ ಮತ್ತೆ ಅದೇ ಮಗುವಿನ ಮೇಲೆ ದಾಳಿಗೆ ಮುಂದಾಗಿದ್ದಾರೆ. ಆಗ ತಾಯಿ ತಡೆದಾಗ ಅಲ್ಲೇ ಪಕ್ಕದಲ್ಲಿ ನಡೆದುಹೋಗುತ್ತಿದ್ದ ಮಗುವಿನ ಮೇಲೆ ಹಲ್ಲೆಗೆ ಮುಂದಾಗಿದ್ದಾಳೆ. ಈ…

Read More