ಹೊಸ ಐಟಿ ರೂಲ್ಸ್; ಎಐ ಸೃಷ್ಟಿದ ಕಂಟೆಂಟ್​ಗೆ ಲೇಬಲಿಂಗ್ ಕಡ್ಡಾಯ; ಫೇಸ್​ಬುಕ್, ಇನ್ಸ್​ಟಾಗಳಿಗೆ ಕಠಿಣ ನಿಯಮ – Kannada News | New IT rules from 2026 Feb 20th, mandatory AI content labelling and other things to know

ಡೀಪ್ ಫೇಕ್ ಕಂಟೆಂಟ್​ನ ಸಾಂದರ್ಭಿಕ ಚಿತ್ರ

ನವದೆಹಲಿ, ಫೆಬ್ರುವರಿ 11: ಎಐ ಸೃಷ್ಟಿದ ಫೋಟೋ, ವಿಡಿಯೋಗಳು (AI generated content) ಥೇಟ್ ನೈಜ ವ್ಯಕ್ತಿ ಮತ್ತು ಸ್ಥಳದ್ದೇ ಎನಿಸುವಂತಿರುತ್ತವೆ. ಯಾವುದು ಅಸಲಿ, ಯಾವುದು ಕೃತಕ ಎಂದು ಮೇಲ್ನೋಟಕ್ಕೆ ಕಂಡು ಹಿಡಿಯುವುದು ಕಷ್ಟ. ದುರುಳರು ಈ ಎಐ ಅನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿರುತ್ತದೆ. ಇದನ್ನು ನಿಯಂತ್ರಿಸಲು ಸರ್ಕಾರವು ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ರೂಪಿಸಿದೆ. ಡೀಪ್​ಫೇಕ್ ವಿಡಿಯೋ, ಸಿಂಥೆಟಿಕ್ ಆಡಿಯೋ, ತಿರುಚಿದ ದೃಶ್ಯಗಳು ಇತ್ಯಾದಿ ಎಐ ಸೃಷ್ಟಿದ ಕಂಟೆಂಟ್ ಅನ್ನು ಐಟಿ ನಿಯಮಗಳಡಿ ತರಲಾಗಿದೆ. ಫೆಬ್ರುವರಿ 20ರಿಂದ ಹೊಸ ನಿಯಮಗಳು ಜಾರಿಗೆ ಬರುತ್ತವೆ.

ಎಐ ಕಂಟೆಂಟ್ ಎಂದು ನೋಡಿದ ಕೂಡಲೇ ಗೊತ್ತಾಗಬೇಕು…

ಫೇಸ್​ಬುಕ್ ಇತ್ಯಾದಿ ಪ್ಲಾಟ್​ಫಾರ್ಮ್​ಗಳು ತಮ್ಮಲ್ಲಿ ಅಪ್​ಲೋಡ್ ಆಗುವ ಕಂಟೆಂಟ್​ಗಳು ಸಿಂಥೆಟಿಕ್ ಆಗಿದ್ದರೆ ಅದು ಗೊತ್ತಾಗುವ ರೀತಿಯಲ್ಲಿ ಲೇಬಲ್ ಆಗಿರಬೇಕು. ಮೆಟಾಡಾಟಾ ಮತ್ತು ಯೂನಿಕ್ ಐಡೆಂಟಿಫೈರ್​ಗಳನ್ನು ಎಂಬೆಡ್ ಮಾಡಬೇಕು. ಒಟ್ಟಿನಲ್ಲಿ, ಸೋಷಿಯಲ್ ಮೀಡಿಯಾ ಮತ್ತು ವೆಬ್​ಸೈಟ್​ಗಳಲ್ಲಿ ಸಿಂಥೆಟಿಕ್ ಕಂಟೆಂಟ್ ಅಪ್​ಲೋಡ್ ಆಗಿದ್ದರೆ, ಅದು ನೋಡುಗರಿಗೆ ಸ್ಪಷ್​ಟವಾಗಿ ಗೊತ್ತಾಗುವಂತಿರಬೇಕು ಎಂಬುದು ಆಶಯ.

ಸಿಂಥೆಟಿಕ್ ಅಥವಾ ಎಐ ಜನರೇಟೆಡ್ ಕಂಟೆಂಟ್ ಯಾವುವು?

ನೈಜವೆನಿಸುವ ರೀತಿಯಲ್ಲಿ ಕಂಪ್ಯೂಟರ್ ಬಳಸಿ ಯಾವುದೇ ಧ್ವನಿ ಅಥವಾ ದೃಶ್ಯವನ್ನು ಸೃಷ್ಟಿಸಿದ್ದರೆ ಅಥವಾ ಬದಲಾಯಿಸಿದ್ದರೆ ಅಂಥದ್ದನ್ನು ಸಿಂಥೆಟಿಕ್ ಆಗಿ ಸೃಷ್ಟಿಸಿದ ಮಾಹಿತಿ ಎಂದು ವ್ಯಾಖ್ಯಾನಿಸಲಾಗಿದೆ.

ಇದನ್ನೂ ಓದಿ: ಟ್ರೇಡ್ ಡೀಲ್; ಫ್ಯಾಕ್ಟ್ ಶೀಟ್​ನಲ್ಲಿ ಬದಲಾವಣೆ; ಭಾರತದ ಒತ್ತಡಕ್ಕೆ ಬಗ್ಗಿತಾ ಅಮೆರಿಕ?

ಗಮನಿಸಬೇಕಾದ ಸಂಗತಿ ಎಂದರೆ, ಫೋಟೋ ಅಥವಾ ವಿಡಿಯೋದಲ್ಲಿ ಮಾಡಲಾಗುವ ಎಲ್ಲಾ ಬದಲಾವಣೆಗಳೂ ಇದಕ್ಕೆ ಒಳಪಡುವುದಿಲ್ಲ. ಉದಾಹರಣೆಗೆ, ಫೋಟೋ ಅಥವಾ ವಿಡಿಯೋದಲ್ಲಿ ಕಲರ್ ಕರೆಕ್ಷನ್, ಬ್ರೈಟ್ನೆಸ್ ಹೊಂದಾಣಿಕೆ, ನಾಯ್ಸ್ ಕರೆಕ್ಷನ್ ಇತ್ಯಾದಿ ಮಾಡಿದರೆ ಸಮಸ್ಯೆ ಇರುವುದಿಲ್ಲ.

ಬಳಕೆದಾರರಿಗೆ ಜವಾಬ್ದಾರಿ…

ಸೋಷಿಯಲ್ ಮೀಡಿಯಾ ಬಳಕೆದಾರರು ತಾವು ಅಪ್​ಲೋಡ್ ಮಾಡುವ ಕಂಟೆಂಟ್ ಎಐ ಸೃಷ್ಟಿತವಾಗಿದ್ದರೆ ಅದನ್ನು ನಮೂದಿಸಬೇಕು. ಇವರು ಕಂಟೆಂಟ್ ಅನ್ನು ಅಪ್​ಲೋಡ್ ಮಾಡುವ ಮುನ್ನ ಅದು ಎಐ ಜನರೇಟೆಡ್ ಹೌದಾ ಅಲ್ಲವಾ ಎಂಬುದನ್ನು ಪ್ಲಾಟ್​ಫಾರ್ಮ್​ಗಳು ಕೇಳಬೇಕು. ಫೇಸ್ಬುಕ್​ನಲ್ಲಿ ಯಾರಾದರೂ ಫೋಟೋ ಅಪ್ಲೋಡ್ ಮಾಡುವಾಗ ಇದನ್ನು ಘೋಷಿಸಬೇಕು.

ಇಷ್ಟು ಮಾತ್ರವಲ್ಲ, ಯಾರಾದರೂ ಉದ್ದೇಶಪೂರ್ವಕವಾಗಿಯೋ ಅಥವಾ ಆಕಸ್ಮಿಕವಾಗಿಯೋ ಎಐ ಸೃಷ್ಟಿತ ಕಂಟೆಂಟ್ ಅನ್ನು ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಲ್ಲಿ ಹಾಕುವ ಸಾಧ್ಯತೆ ಇರುವುದರಿಂದ, ಆಟೊಮೇಟ್ ಟೂಲ್​ಗಳ ಮೂಲಕ ಅವುಗಳ ಕ್ರಾಸ್ ವೆರಿಫಿಕೇಶನ್ ಮಾಡಬೇಕು ಎನ್ನುತ್ತದೆ ನಿಯಮ.

ಪ್ಲಾಟ್​ಫಾರ್ಮ್​ಗಳಿಗೆ ಕಡಿಮೆ ಸಮಯಾವಕಾಶ…

ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಲ್ಲಿ ನಿರ್ದಿಷ್ಟ ಕಂಟೆಂಟ್ ಅನ್ನು ತೆಗೆದುಹಾಕಲು ಕಾನೂನಿನ ಆದೇಶ ಬಂದರೆ ಅದನ್ನು ಪಾಲಿಸಲು 36 ಗಂಟೆ ಇದ್ದ ಕಾಲಾವಕಾಶದ ಅವಧಿಯನ್ನು 3 ಗಂಟೆಗೆ ಇಳಿಸಲಾಗಿದೆ. 15 ದಿನಗಳಿದ್ದ ಕಾಲಾವಕಾಶವನ್ನು ಏಳು ದಿನಕ್ಕೆ ಇಳಿಸಲಾಗಿದೆ. 24 ಗಂಟೆ ಇದ್ದ ಡೆಡ್​ಲೈನ್ ಅನ್ನು 12 ಗಂಟೆಗೆ ಇಳಿಸಲಾಗಿದೆ.

ಇದನ್ನೂ ಓದಿ: ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬಾಂಗ್ಲಾದೇಶ; ಟ್ಯಾರಿಫ್ ಶೇ. 19ಕ್ಕೆ ಇಳಿಕೆ

ಇವು ಕೂಡ ಕ್ರಿಮಿನಲ್ ಅಪರಾಧಗಳೇ…

ಮಕ್ಕಳ ಲೈಂಗಿಕ ದುರ್ಬಳಕೆಯ ಸರಕುಗಳು, ಅಶ್ಲೀಲ ಕಂಟೆಂಟ್, ನಕಲಿ ಎಲೆಕ್ಟ್ರಾನಿಕ್ ರೆಕಾರ್ಡ್​ಗಳು, ನೈಜ ವ್ಯಕ್ತಿಯನ್ನು ಹೋಲುವ ಡೀಪ್​ಫೇಕ್​ಗಳು ಮತ್ತು ನಕಲಿ ಧ್ವನಿಗಳನ್ನು ಸೃಷ್ಟಿಸಿದರೆ ಅದು ಭಾರತೀಯ ನ್ಯಾಯ ಸಂಹಿತೆ, ಪೋಕ್ಸೋ ಕಾಯ್ದೆ ಅಡಿಯಲ್ಲಿನ ಅಪರಾಧವಾಗುತ್ತದೆ ಎಂದು ಹೊಸ ಐಟಿ ನಿಯಮಗಳಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮದುವೆಯಾಗಿ ಮಕ್ಕಳಿರುವ ವಿಷಯ ಮುಚ್ಚಿಟ್ಟು ಮತ್ತೊಂದು ವಿವಾಹ: ಮಹಿಳೆಯ ಸ್ಫೋಟಕ ಹೇಳಿಕೆ – Kannada News | Haveri Marriage Scam: Woman Accused of Fraud Denies Receiving Money, Claims to Have Informed Broker of Previous Marriage

ಹಾವೇರಿ, ಫೆಬ್ರವರಿ 11: ರಾಣೆಬೆನ್ನೂರಿನಲ್ಲಿ ಮದುವೆ ವಂಚನೆಯ ಪ್ರಕರಣವೊಂದು ವರದಿಯಾಗಿದೆ. ತುಮ್ಕಿನಕಟ್ಟಿ ಗ್ರಾಮದ ರವಿಚಂದ್ರ ಎಂಬುವವರಿಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಮೂಲದ ರೇಖಾ ಎಂಬ ಮಹಿಳೆ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ರೇಖಾ ಅವರಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದರೂ ರವಿಚಂದ್ರ ಅವರನ್ನು ಮದುವೆಯಾಗಿ 2.5 ಲಕ್ಷ ರೂಪಾಯಿ ವಧು ದಕ್ಷಿಣೆ ಪಡೆದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮದುವೆಯಾದ ಕೆಲವೇ ದಿನಗಳಲ್ಲಿ ರೇಖಾ ಅವರ ಮಕ್ಕಳು ಕರೆ ಮಾಡಿದಾಗ ಈ ಕೃತ್ಯ ಬಯಲಾಗಿದೆ. ನ್ಯಾಯಕ್ಕಾಗಿ ರವಿಚಂದ್ರ ಅವರು ಹಲಗೇರಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರೋ ರೇಖಾ, ತಮಗೆ ಹಣದ ವಿಷಯ ತಿಳಿದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 2.5 ರಿಂದ 3 ಲಕ್ಷ ರೂಪಾಯಿ ಸ್ವೀಕರಿಸಿದ್ದಾರೆ ಎಂಬ ಆರೋಪವನ್ನು ನಿರಾಕರಿಸಿರುವ ಅವರು, ಹಣವನ್ನು ಯಾರು ತೆಗೆದುಕೊಂಡಿದ್ದಾರೆ ಎಂದು ಬ್ರೋಕರ್​ಗಳನ್ನು ಕೇಳುವಂತೆ ಹೇಳಿದ್ದಾರೆ. ಅಲ್ಲದೆ ಬ್ರೋಕರ್​ಗೆ ತಾನು ಹಿಂದೆಯೇ ಮದುವೆಯಾಗಿದ್ದೇನೆ ಎಂದು ತಿಳಿಸಿದ್ದಾಗಿ ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

NIC Recruitment 2026: GATE ಉತ್ತೀರ್ಣರಿಗೆ ಕೇಂದ್ರದಿಂದ ಉದ್ಯೋಗವಕಾಶ; ತಿಂಗಳಿಗೆ 1,12,400 ರೂ. ಸಂಬಳ – Kannada News | NIC Recruitment 2026: 376 Scientific and Technical Assistant Posts, GATE Required!

ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ವೈಜ್ಞಾನಿಕ ಮತ್ತು ತಾಂತ್ರಿಕ ಸಹಾಯಕ ‘ಎ’ (Scientific & Technical Assistant ‘A’) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಗುಂಪು–ಬಿ, ನಾನ್-ಗೆಜೆಟೆಡ್ ಎಸ್ ಮತ್ತು ಟಿ ವರ್ಗಕ್ಕೆ ಸೇರಿದ ಈ ಹುದ್ದೆಗಳು ತಾಂತ್ರಿಕ ಹಾಗೂ ಐಟಿ ಕ್ಷೇತ್ರದಲ್ಲಿ ಸರ್ಕಾರಿ ಸೇವೆಗೆ ಸೇರಲು ಬಯಸುವವರಿಗೆ ಉತ್ತಮ ಅವಕಾಶವಾಗಿದೆ. ಒಟ್ಟು 376 ಹುದ್ದೆಗಳು ಭರ್ತಿಯಾಗಲಿದ್ದು, ಎಂಎಸ್ಸಿ, ಎಂಎಸ್, ಎಂಸಿಎ, ಬಿಇ ಅಥವಾ ಬಿಟೆಕ್ ಪದವಿ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಆದರೆ GATE ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದು ಕಡ್ಡಾಯವಾಗಿದೆ.

ವರ್ಗವಾರು ಹುದ್ದೆಗಳ ಹಂಚಿಕೆಯಲ್ಲಿ ಮೀಸಲಾತಿ ಇಲ್ಲದ (UR) ವಿಭಾಗಕ್ಕೆ 154 ಹುದ್ದೆಗಳು, ಎಸ್‌ಸಿ ವಿಭಾಗಕ್ಕೆ 56, ಎಸ್‌ಟಿ ವಿಭಾಗಕ್ಕೆ 28, ಒಬಿಸಿ ವಿಭಾಗಕ್ಕೆ 101 ಹಾಗೂ ಇಡಬ್ಲ್ಯೂಎಸ್ ವಿಭಾಗಕ್ಕೆ 37 ಹುದ್ದೆಗಳು ಮೀಸಲಾಗಿದೆ. ಅರ್ಜಿದಾರರು ಸಂಬಂಧಿತ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವುದರ ಜೊತೆಗೆ 2024, 2025 ಅಥವಾ 2026ರಲ್ಲಿ ಪಡೆದ ಮಾನ್ಯ GATE ಅಂಕಗಳನ್ನು ಹೊಂದಿರಬೇಕು.

ಅರ್ಜಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್ ಮೂಲಕ ನಡೆಯಲಿದೆ. GATE 2026 ಫಲಿತಾಂಶ ಪ್ರಕಟವಾದ ದಿನಾಂಕದಿಂದ 10 ದಿನಗಳ ಒಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಈ ಕುರಿತು ಕಿರು ಅಧಿಸೂಚನೆ ಈಗಾಗಲೇ NIC ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದ್ದು, ಶೀಘ್ರದಲ್ಲೇ ವಿವರವಾದ ಅಧಿಸೂಚನೆ ಬಿಡುಗಡೆಯಾಗಲಿದೆ. ಅಭ್ಯರ್ಥಿಗಳು ನಿಯಮಿತವಾಗಿ ವೆಬ್‌ಸೈಟ್ ಪರಿಶೀಲಿಸುವುದು ಒಳಿತು.

ಇದನ್ನೂ ಓದಿ: ಎಕ್ಸಿಮ್ ಬ್ಯಾಂಕ್​ನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ; ತಿಂಗಳಿಗೆ 65,000ರೂ. ಸ್ಟೈಫಂಡ್

ವೇತನದ ವಿಷಯದಲ್ಲಿ, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400 ರಿಂದ 1,12,400 ರೂ. ರವರೆಗೆ (ಪೇ ಲೆವೆಲ್-6) ಸಂಬಳ ಹಾಗೂ ಇತರ ಸರ್ಕಾರಿ ಭತ್ಯೆಗಳು ದೊರೆಯುತ್ತವೆ. ಉದ್ಯೋಗ ಭದ್ರತೆ, ಉತ್ತಮ ವೇತನ ಮತ್ತು ಕೇಂದ್ರ ಸರ್ಕಾರಿ ಸೌಲಭ್ಯಗಳನ್ನು ಬಯಸುವ ತಾಂತ್ರಿಕ ವಿದ್ಯಾರ್ಥಿಗಳಿಗೆ ಇದು ಅತ್ಯುತ್ತಮ ವೃತ್ತಿ ಅವಕಾಶವಾಗಿದೆ. ಈ ವರ್ಷದ GATE ಫಲಿತಾಂಶಗಳನ್ನು ಮಾರ್ಚ್ 11 ರಂದು ಪ್ರಕಟಿಸಲಾಗುವುದರಿಂದ ಆಸಕ್ತರು ಈಗಲೇ ತಯಾರಿ ಆರಂಭಿಸುವುದು ಸೂಕ್ತ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜಮೌಳಿಗೆ ಅತ್ಯಂತ ಪ್ರಿಯವಾದ ವಿಲನ್ ಸುದೀಪ್: ಏಕೆ ಗೊತ್ತೆ?

ರಾಜಮೌಳಿ (Rajamouli) ನಿರ್ದೇಶನ ಮಾಡುತ್ತಿರುವ ‘ವಾರಣಾಸಿ’ ಸಿನಿಮಾದ ಬಿಡುಗಡೆಗೆ ಇನ್ನೂ ಒಂದು ವರ್ಷವಿದೆ. ಆದರೆ ಈಗಲೇ ಸಿನಿಮಾದ ಹೈಪ್ ಆಕಾಶಕ್ಕೇರಿದೆ. ಸಿನಿಮಾನಲ್ಲಿ ಮಹೇಶ್ ಬಾಬು ನಾಯಕ, ಪ್ರಿಯಾಂಕಾ ಚೋಪ್ರಾ ನಾಯಕಿ. ಪೃಥ್ವಿರಾಜ್ ಸುಕುಮಾರನ್ ವಿಲನ್. ಇತ್ತೀಚೆಗೆ ಸಂದರ್ಶನದಲ್ಲಿ ಮಾತನಾಡಿದ್ದ ಮಹೇಶ್ ಬಾಬು, ರಾಜಮೌಳಿಗೆ ತಮ್ಮ ಹೀರೋಗಳಿಗಿಂತಲೂ ವಿಲನ್​​ಗಳೇ ಬಹಳ ಇಷ್ಟ ಎಂದಿದ್ದರು. ‘ವಾರಣಾಸಿ’ಯ ಪೃಥ್ವಿರಾಜ್ ಸುಕುಮಾರ್ ಪಾತ್ರವೇ ರಾಜಮೌಳಿಗೆ ಇಷ್ಟ ಎಂಬುದು ಅವರ ಮಾತಿನ ಉದ್ದೇಶವಾಗಿತ್ತು. ರಾಜಮೌಳಿಯ ಸಿನಿಮಾಗಳಲ್ಲಿ ನಾಯಕರಷ್ಟೆ ವಿಲನ್​​ಗಳು ಸಹ ಬಹಳ ಪವರ್​ಫುಲ್ ಆಗಿರುತ್ತಾರೆ. ಆದರೆ ರಾಜಮೌಳಿಗೆ ತಮ್ಮ ಸಿನಿಮಾಗಳ ವಿಲನ್​​ಗಳಲ್ಲಿ ಅತಿ ಹೆಚ್ಚು ಇಷ್ಟವಾದ ವಿಲನ್ ಸುದೀಪ್.

ಸ್ವತಃ ರಾಜಮೌಳಿ ಹಲವಾರು ಬಾರಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ತಮ್ಮ ಸಿನಿಮಾಗಳಲ್ಲಿಯೇ ತಮಗೆ ಸುದೀಪ್ ಅವರು ಬಹಳ ಇಷ್ಟವಾದ ವಿಲನ್ ಎಂದು. ಸುದೀಪ್ ಅವರೇ ತಮಗೆ ಏಕೆ ಇಷ್ಟವೆಂದು ಸಹ ರಾಜಮೌಳಿ ಹೇಳಿದ್ದಾರೆ. ‘ಆರ್​​ಆರ್​​ಆರ್’ ಸಿನಿಮಾ ಬಿಡುಗಡೆ ಬಳಿಕ ಹಾಲಿವುಡ್​ನಲ್ಲಿ ಕೆಲವರು ರಾಜಮೌಳಿಯ ಬೆಸ್ಟ್ ಸಿನಿಮಾಗಳ ವಿಶೇಷ ಪ್ರದರ್ಶವನ್ನು ಆಯೋಜಿಸಿ, ರಾಜಮೌಳಿ ಅವರನ್ನು ಅತಿಥಿಯಾಗಿ ಆಹ್ವಾನಿಸಿದ್ದರು. ಅಲ್ಲಿಯೂ ಸಹ ರಾಜಮೌಳಿ ಸುದೀಪ್ ಅವರನ್ನು ಕೊಂಡಾಡಿದರು.

ಇದನ್ನೂ ಓದಿ:ಜಪನೀಸ್​ ಸ್ಟುಡಿಯೋಗಳ ಜೊತೆ ದೊಡ್ಡ ಡೀಲ್​​​ಗೆ ಮುಂದಾದ ರಾಜಮೌಳಿ

‘ನಾನು ಸೃಷ್ಟಿಸಿದ ವಿಲನ್​​ಗಳ ಪೈಕಿ ಸುದೀಪ್ ಅವರ ಪಾತ್ರ ನನಗೆ ಬಹಳ ಇಷ್ಟ. ಸುದೀಪ್ ನನ್ನ ಮೆಚ್ಚಿನ ವಿಲನ್. ಅವರು ನಟಿಸಿದ ರೀತಿ ಅತ್ಯದ್ಭುತ’ ಎಂದ ರಾಜಮೌಳಿ, ಸುದೀಪ್ ಅವರ ನಟನಾ ಪ್ರತಿಭೆಯನ್ನು ತಮ್ಮದೇ ರೀತಿಯಲ್ಲಿ ವರ್ಣಿಸಿದ್ದರು. ‘ನಟರಿಗೆ ಎದುರಿಗೆ ಒಬ್ಬ ನಟನಿದ್ದರೆ ನಟಿಸುವುದು ಸುಲಭ. ಎದುರಿಗೆ ಕ್ಯಾಮೆರಾ ಇದ್ದು, ಆ ಕ್ಯಾಮೆರಾ ನಟನೆಂದು ಊಹಿಸುವುದು ಸಹ ಸುಲಭ, ಆದರೆ ‘ಈಗ’ ಸಿನಿಮಾನಲ್ಲಿ ಸುದೀಪ್ ಅವರು ನೊಣದ ಎದುರು ನಟಿಸಬೇಕಿತ್ತು. ಅಲ್ಲದೆ, ನೊಣ, ನಟರ ರೀತಿ ಒಂದು ಕಡೆ ನಿಲ್ಲುವ ಜೀವಿ ಅಲ್ಲ, ಅದು ಅತ್ತಿಂದಿತ್ತ, ಇತ್ತಿಂದತ್ತ ಹಾರಾಡುತ್ತಿರುತ್ತದೆ, ಅದು ಹೇಗೆ ಹಾರಾಡುತ್ತದೆ, ಅದನ್ನು ಹೇಗೆ ಹಾರಾಡಿಸಬೇಕು ಎಂಬುದು ನನ್ನ ಕಲ್ಪನೆಯಲ್ಲಿರುತ್ತಿತ್ತು, ನನ್ನ ಕಲ್ಪನೆಯಲ್ಲಿ ನೊಣ ಹೇಗೆ ಹಾರುತ್ತಿದೆ ಎಂಬುದನ್ನು ಗ್ರಹಿಸಿ ಅದಕ್ಕೆ ಅನುಗುಣವಾಗಿ ಸುದೀಪ್ ನಟಿಸಬೇಕಿತ್ತು, ಸುದೀಪ್ ಅವರ ಆ ಕೆಲಸವನ್ನು ಅತ್ಯದ್ಭುತವಾಗಿ ಮಾಡಿದ್ದಾರೆ’ ಎಂದಿದ್ದಾರೆ ರಾಜಮೌಳಿ.

‘ಈಗ’ ಸಿನಿಮಾನಲ್ಲಿ ಸುದೀಪ್ ಅವರಿಗೆ ಬಹಳ ಸವಾಲುಗಳಿದ್ದವು. ನನ್ನ ಗ್ರಹಿಕೆಯಲ್ಲಿರುವ ನೊಣವನ್ನು ಊಹಿಸಿ ಅವರು ನಟಿಸಬೇಕಿತ್ತು, ಅಲ್ಲದೆ, ಅವರು ನಟಿಸುವಾಗ ನೊಣದ ಮಾಡೆಲ್ ಸಹ ಇಡುವಂತಿರಲಿಲ್ಲ. ಎದುರಿಗೆ ಇಲ್ಲದೇ ಇರುವ ಜೀವಿಗೆ, ಅದೂ ಅವರ ಕಲ್ಪನೆಗೂ ಗೊತ್ತಿರದ ರೀತಿ ವರ್ತಿಸುವ ಜೀವಿಗೆ ಪ್ರತಿಯಾಗಿ ಅವರು ನಟಿಸಬೇಕಿತ್ತು. ಸುದೀಪ್ ಆ ಸಿನಿಮಾನಲ್ಲಿ ಅತ್ಯದ್ಭುತವಾಗಿ ನಟಿಸಿದರು. ಹಾಗಾಗಿ ಸುದೀಪ್ ಅವರು ನನ್ನ ಅಚ್ಚುಮೆಚ್ಚಿನ ವಿಲನ್’ ಎಂದಿದ್ದಾರೆ ರಾಜಮೌಳಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸೊಮಾಲಿಯಾ: ರನ್​​ವೇಯಿಂದ ಜಾರಿ ಬೀಚ್​​ಗೆ ಬಿದ್ದ 55 ಜನರಿದ್ದ ವಿಮಾನ – Kannada News | Aircraft Carrying 55 Slides Off Runway, Stops Near Shoreline in Somalia

ಸೊಮಾಲಿಯಾ, ಫೆಬ್ರವರಿ 11: ಸೊಮಾಲಿಯಾದ ಪ್ರಮುಖ ವಿಮಾನ ನಿಲ್ದಾಣದಲ್ಲಿ 55 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನ(Flight)ವೊಂದು ರನ್‌ವೇಯಿಂದ ಜಾರಿ ಬೀಚ್​ಗೆ ಬಿದ್ದಿರುವ ಘಟನೆ ವರದಿಯಾಗಿದೆ. ಮೊಗಾದಿಶುವಿನ ಅಡೆನ್ ಅಬ್ದುಲ್ಲೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಸಮಯದಲ್ಲಿ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ನಂತರ ಈ ಘಟನೆ ಸಂಭವಿಸಿದೆ.

ಯಾರಿಗೂ ಗಾಯಗಳಾಗಿಲ್ಲ.ಸ್ಟಾರ್‌ಸ್ಕಿ ಏವಿಯೇಷನ್ ​​ನಿರ್ವಹಿಸುತ್ತಿದ್ದ ಈ ವಿಮಾನದಲ್ಲಿ 50 ಪ್ರಯಾಣಿಕರು ಮತ್ತು ಐದು ಸಿಬ್ಬಂದಿ ಇದ್ದರು. ಎಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆಯ ಸಿಇಒ ಅಹ್ಮದ್ ನೂರ್ ದೃಢಪಡಿಸಿದರು. ವಿಮಾನವು ರನ್‌ವೇಯಿಂದ ಜಾರಿ ಹಿಂದೂ ಮಹಾಸಾಗರದ ತೀರದ ಬಳಿ ನಿಂತಿತ್ತು.

ವಿಮಾನವು ಉತ್ತರ ನಗರವಾದ ಗಾಲ್ಕಸಿಯೊಗೆ ತೆರಳುತ್ತಿತ್ತು. ಟೇಕ್ ಆಫ್ ಆದ ಸುಮಾರು 15 ನಿಮಿಷಗಳ ನಂತರ, ಸಿಬ್ಬಂದಿ ತಾಂತ್ರಿಕ ಸಮಸ್ಯೆಯನ್ನು ವರದಿ ಮಾಡಿ ತುರ್ತು ಭೂಸ್ಪರ್ಶಕ್ಕಾಗಿ ಹಿಂತಿರುಗಲು ನಿರ್ಧರಿಸಿದ್ದರು. ಲ್ಯಾಂಡಿಂಗ್ ಪ್ರಯತ್ನದ ಸಮಯದಲ್ಲಿ, ವಿಮಾನವು ರನ್‌ವೇಯಿಂದ ಹೊರಟು ತೀರದ ಕಡೆಗೆ ಚಲಿಸಿತು.

ಮತ್ತಷ್ಟು ಓದಿ: Video: ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ, ಬಹು ವಾಹನಗಳಿಗೆ ಡಿಕ್ಕಿ

ರಕ್ಷಣಾ ತಂಡಗಳು ತ್ವರಿತವಾಗಿ ಪ್ರತಿಕ್ರಿಯಿಸಿವೆ, ವಿಮಾನದಲ್ಲಿದ್ದ ಎಲ್ಲರನ್ನೂ ರಕ್ಷಿಸಲಾಗಿದೆ ಎಂದು ಖಚಿತಪಡಿಸಿಕೊಂಡಿರುವುದಾಗಿ ಸಾರಿಗೆ ಸಚಿವ ಮೊಹಮ್ಮದ್ ಫರಾಹ್ ನುಹ್ ತಿಳಿಸಿದ್ದಾರೆ. ವಿಮಾನವು ಹಾನಿಗೊಳಗಾಗಿದ್ದರೂ, ಯಾವುದೇ ಪ್ರಯಾಣಿಕರು ಅಥವಾ ಸಿಬ್ಬಂದಿಗೆ ಯಾವುದೇ ತೊಂದರೆಯಾಗಿಲ್ಲ.

ವಿಮಾನ ನಿಲ್ದಾಣದ ವಿಡಿಯೋ

ತಾಂತ್ರಿಕ ಸಮಸ್ಯೆ ಮತ್ತು ರನ್‌ವೇ ಘಟನೆಗೆ ಕಾರಣವೇನೆಂದು ಕಂಡುಹಿಡಿಯಲು ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 12:29 pm, Wed, 11 February 26

Source link

ಚಿರತೆಗಳ ಜೊತೆ ಕಾದಾಡಿ ಜೀವ ಉಳಿಸಿಕೊಂಡ ಕಾಡುಹಂದಿ: ವಿಡಿಯೋ ವೈರಲ್​​ – Kannada News | Wild Boar Escapes Leopard Attack in Bhadra Sanctuary’s Lakkavalli Region; Video Goes Viral

ಚಿಕ್ಕಮಗಳೂರು, ಫೆಬ್ರವರಿ 11: ಬೇಟೆಗೆ ಹೊಂಚು ಹಾಕಿದ್ದ ಚಿರತೆಗಳಿಗೆ ಚಳ್ಳೆಹಣ್ಣು ತಿನ್ನಿಸಿ ಕಾಡುಹಂದಿ ಎಸ್ಕೇಪ್​​ ಆಗಿರುವ ಪ್ರಸಂಗ ಭದ್ರಾ ಅಭಯಾರಣ್ಯ ವ್ಯಾಪ್ತಿಯ ಲಕ್ಕವಳ್ಳಿ ವಿಭಾಗದಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೊಬೈಲ್​​ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾಡು ಹಂದಿ ಬೇಟೆಗೆ ಎರಡು ಚಿರತೆಗಳು ಹೊಂಚುಹಾಕಿ ಕುಳಿತಿದ್ದವು. ಒಂದು ಚಿರತೆ ಮರವೇರಿದ್ದರೆ ಮತ್ತೊಂದು ಕೆಳಭಾಗದಿಂದಲೇ ಅಟ್ಯಾಕ್​​ಗೆ ರೆಡಿ ಆಗಿತ್ತು. ಆದರೆ ಚಿರತೆಗೇ ಗುದ್ದಿ ಕಾಡುಹಂದಿ ಎಸ್ಕೇಪ್​​ ಆಗಿದೆ. ಹಂದಿ ಮತ್ತು ಚಿರತೆ ಕಾದಾಟದ ದೃಶ್ಯವೀಗ ವೈರಲ್​​ ಆಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹಿಟಾಚಿ ಕೆಟ್ಟೋಗಿದ್ದಕ್ಕೆ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಅಷ್ಟಕ್ಕೇ ಸುಮ್ಮನಾಗದೆ ಏನು ಮಾಡಿದ್ರು ನೋಡಿ! – Kannada News | Customer Unique Protest Continues in Tumakuru after Locking Tata Hitachi Showroom After Machine Breakdown

ಹಿಟಾಚಿ ಶೋರೂಮ್ ಎದುರು ಗ್ರಾಹಕನ ವಿಭಿನ್ನ ಪ್ರತಿಭಟನೆImage Credit source: tv9

ತುಮಕೂರು, ಫೆಬ್ರವರಿ 11: ಹೊಸದಾಗಿ ಖರೀದಿಸಿದ ಹಿಟಾಚಿ ಯಂತ್ರವು ಮೂರೇ ತಿಂಗಳಲ್ಲಿ ಕೆಟ್ಟು ನಿಂತ ಹಿನ್ನೆಲೆಯಲ್ಲಿ ಬೇಸತ್ತ ಗ್ರಾಹಕ ಶೋರೂಂಗೆ ಬೀಗ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ. ಇಷ್ಟಾದರೂ ಕಂಪನಿ ಸ್ಪಂದಿಸದ ಕಾರಣ ಅಂತರಸನಹಳ್ಳಿ ಬಳಿಯಿರುವ ಟಾಟಾ ಹಿಟಾಚಿ (Tata Hitachi) ಶೋರೂಂ ಮುಂದೆ ಗ್ರಾಹಕ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಶೋರೂಂ ಮುಂದೆ ಶಾಮಿಯಾನ ಹಾಕಿ ಕುಳಿತುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ.

ಹಿಟಾಚಿ ಶೋರೂಂಗೆ ಬೀಗ ಪ್ರಕರಣದ ಹಿನ್ನೆಲೆ

ತುಮಕೂರಿನ ಗಿರೀಶ್ ಎಂಬ ಗ್ರಾಹಕ ಸುಮಾರು ಐದು ತಿಂಗಳ ಹಿಂದೆ 52 ಲಕ್ಷ ರೂಪಾಯಿ ನೀಡಿ ಹೊಸ ಹಿಟಾಚಿ ಯಂತ್ರವನ್ನು ಖರೀದಿಸಿದ್ದರು. ಆದರೆ ಖರೀದಿಸಿದ ಮೂರೇ ತಿಂಗಳಲ್ಲಿ ಯಂತ್ರ ದೋಷಗೊಂಡು ಕಾರ್ಯನಿರ್ವಹಿಸದೇ ನಿಂತಿದ್ದು, ಅದನ್ನು ಸರಿಪಡಿಸುವಂತೆ ಕಂಪನಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಅವರು ಆರೋಪಿಸಿದ್ದಾರೆ. ಕಂಪನಿ ನಡೆಗೆ ಬೇಸತ್ತ ಗಿರೀಶ್ ಶೋರೂಂ ಬಾಗಿಲಿಗೆ ಬೀಗ ಹಾಕಿ, ಹಿಟಾಚಿ ಯಂತ್ರವನ್ನೇ ಶೋರೂಂ ಪ್ರವೇಶದ್ವಾರಕ್ಕೆ ಅಡ್ಡವಾಗಿ ನಿಲ್ಲಿಸಿ ಪ್ರತಿಭಟನೆ ಆರಂಭಿಸಿದ್ದರು. ಇದರಿಂದ ಶೋರೂಂ ಸಿಬ್ಬಂದಿ ಒಳಗೆ ಪ್ರವೇಶಿಸಲು ಸಾಧ್ಯವಾಗದೆ ಹೊರಗಡೆಯೇ ಕಾಯುವಂತಾಗಿದೆ.

ಶೋರೂಂ ಮುಂದೆ ಶಾಮಿಯಾನ ಹಾಕಿ ಕುಳಿತ ಗ್ರಾಹಕ!

ಬುಧವಾರ ಶೋರೂಂ ಮುಂದೆ ಶಾಮಿಯಾನ ಹಾಕಿ ಧರಣಿ ಕುಳಿತಿರುವ ಗಿರೀಶ್, ಸಮಸ್ಯೆ ಬಗೆಹರಿಸಿ ಯಂತ್ರವನ್ನು ದುರಸ್ತಿ ಮಾಡಿಕೊಡುವವರೆಗೂ ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ. ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಟಾಟಾ ಕಂಪನಿಯಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲವೆಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹೊಸದಾಗಿ ಖರೀದಿಸಿದ ಹಿಟಾಚಿ ಕೆಟ್ಟುಹೋಯ್ತೆಂದು ಶೋರೂಮ್​ಗೇ ಬೀಗ ಹಾಕಿದ ಗ್ರಾಹಕ!

ಘಟನೆ ಸ್ಥಳೀಯರಲ್ಲಿ ಚರ್ಚೆಗೆ ಕಾರಣವಾಗಿದ್ದು, ಗ್ರಾಹಕ ಹಾಗೂ ಕಂಪನಿ ನಡುವೆ ಸಮಸ್ಯೆ ಹೇಗೆ ಬಗೆಹರಿಯಲಿದೆ ಎಂಬುದೇ ಸ್ಥಳೀಯರ ಕುತೂಹಲವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮನೆ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ! ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು – Kannada News | Man was brutally beaten for coughing in front of the house in Ramanagar, Later died in Hospital

ಮನೆ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ! ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ರಾಮನಗರ, ಫೆಬ್ರವರಿ 11: ಸಮಾಜದಲ್ಲಿ ಯಾವ್ಯಾವುದೋ ವಿಚಾರಕ್ಕೆ ಗಲಾಟೆ, ಹಲ್ಲಗಳು ನಡೆಯುತ್ತವೆ. ಆದರೆ ವ್ಯಕ್ತಿಯೊಬ್ಬ ಮನೆ ಮುಂದೆ ಬಂದು ಕೆಮ್ಮಿದ ಎನ್ನವ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಾಮನಗರ (Ramnagar) ತಾಲೂಕಿನ ಬಿಡದಿಯಲ್ಲಿ ನಡೆದಿದೆ. ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ ಕೆಮ್ಮಿದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ತಿರುಗಿದೆ.

ಸಣ್ಣದಾಗಿ ಶುರುವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿತು

ರಾಜಸ್ಥಾನ ಮೂಲದ ವಿನೋದ್ ಕುಮಾರ್ ಶೈನಿ (34) ಕಳೆದ 11 ವರ್ಷಗಳಿಂದ ಬಿಡದಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಯೇ ವಾಸವಾಗಿದ್ದರು. ಮೂರು ದಿನಗಳ ಹಿಂದೆ ಮನೆ ಪಕ್ಕದಲ್ಲಿದ್ದ ಸಂಜಯ್ ಅವರೊಂದಿಗೆ ಮಾತಿನ ಚಕಮಕಿ ಉಂಟಾಗಿದ್ದು, ಕೆಮ್ಮಿದ ವಿಚಾರಕ್ಕೆ ಜಗಳ ತೀವ್ರಗೊಂಡಿದೆ ಎನ್ನಲಾಗಿದೆ. ಈ ವೇಳೆ ಸಂಜಯ್, ಹೊಂಬಯ್ಯ (ಹೊಂಬೆಗೌಡ), ವಿಜಯ್ ಸೇರಿದಂತೆ ಇತರರು ಸೇರಿ ವಿನೋದ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಗಂಭೀರವಾಗಿ ಗಾಯಗೊಂಡ ವಿನೋದ್ ಅವರನ್ನು ತಕ್ಷಣ ಬಿಡದಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Bengaluru: ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ; ಆಸೆ ಈಡೇರಿಸು ಎಂದು ಪೀಡನೆ – Kannada News | Married woman physically harassed by father in law police complaint lodged

ಬೆಂಗಳೂರು, ಫೆಬ್ರವರಿ 11: ನನ್ನ ಆಸೆ ಈಡೇರಿಸು ಎಂದು ಸೊಸೆಗೆ ಮಾವನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಬೆಂಗಳೂರಲ್ಲಿ ಕೇಳಿಬಂದಿದೆ. ಥಣಿಸಂಧ್ರದ ಪ್ರತಿಷ್ಟಿತ ಸ್ಕೂಲ್ ಪ್ರಿನ್ಸಿಪಾಲ್ ಆಗಿರುವ ಮಹಿಳೆಗೆ ಆಕೆಯ ಗಂಡನ ತಂದೆ, ಕಾವಲ್ ಬೈರಸಂಧ್ರದ ಶಾಲೆಯೊಂದರ ಫೌಂಡರ್ ಆಗಿರುವ ವ್ಯಕ್ತಿ ಕಿರುಕುಳ ನೀಡಿರುವ ಬಗ್ಗೆ ಆರ್. ಟಿ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಷಯವನ್ನು ಮಗನಿಗೆ ತಿಳಿಸಿದರೆ ಕೊಲ್ಲೋದಾಗಿ ಆರೋಪಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದ ಎಂಬ ಬಗ್ಗೆಯೂ ದೂರಲ್ಲಿ ಉಲ್ಲೇಖಿಸಲಾಗಿದೆ.

ಎಲ್ಲೆಂದರಲ್ಲಿ ಲೈಂಗಿಕ ಕಿರುಕುಳ ಆರೋಪ

2007ರಲ್ಲಿ ಮದುವೆಯಾಗಿದ್ದ ಸಂತ್ರಸ್ತೆಗೆ ಆರಂಭದಲ್ಲಿ ಜೀವನ ಚೆನ್ನಾಗಿಯೇ ಇತ್ತು. ಆದರೆ ಬರ ಬರುತ್ತಾ ಮಾವನ ಕಾಟ ಶುರುವಾಗಿದೆ. 2005ರಲ್ಲಿ ಪತ್ನಿಯ ಸಾವಿನ ಬಳಿಕ ಆರೋಪಿ 2006ರಲ್ಲಿ ಎರಡನೇ ಮದುವೆಯಾಗಿದ್ದ. ಹೀಗಿದ್ದರೂ ಸೊಸೆಯ ಮೇಲೆ ಕಣ್ಣು ಹಾಕಿದ್ದ ಈತ, ಆಕೆಯ ಜೊತೆ ಅನುಚಿತ ವರ್ತನೆ ತೋರಲು ಶುರುಮಾಡಿದ್ದಾನೆ. ಪಕ್ಕದ ಅಪಾರ್ಟ್​​ಮೆಂಟ್​​ನಲ್ಲಿಯೇ ವಾಸವಿದ್ದ ಈತ, ಸಂತ್ರಸ್ತೆ ಮನೆಯಲ್ಲಿ ಒಬ್ಬಳೇ ಇರುವ ಸಮಯ ನೋಡಿಕೊಂಡು ಬಂದು ಆಕೆಗೆ ಲೈಂಗಿಕ ದೌರ್ಜನ್ಯ ನೀಡಲಾರಂಭಿಸಿದ್ದ. ಅಸಭ್ಯ ಪದಗಳನ್ನು ಮಾತನಾಡುವ ಜೊತೆಗೆ ಬಲವಂತಾಗಿ ಬಟ್ಟೆ ಬಿಚ್ಚಲು ಯತ್ನಿಸುತ್ತಿದ್ದ. 2020ರಿಂದಲೇ ಮಾವನ ಈ ರೀತಿಯ ವರ್ತನೆಗಳು ಆರಂಭವಾಗಿತ್ತು. ಆದ್ರೆ ಭಯಭೀತಳಾಗಿದ್ದ ಸಂತ್ರಸ್ತೆ ಎಲ್ಲವೂ ಸರಿಹೋಗಬಹುದೆಂದು ಸುಮ್ಮನಿದ್ದಳು. ಆದರೆ ಆಕೆ ಮತ್ಮತು ಮಕ್ಕಳಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಮಹಿಳೆ ಮೇಲೆ ಹಲ್ಲೆಯನ್ನೂ ನಡೆಸಿದ್ದ. ಬಳಿಕ ಅಪಾರ್ಟ್​​ಮೆಂಟ್​​ನ ಲಿಫ್ಟ್​​, ಸ್ಕೂಲ್​​ ಕ್ಯಾಬಿನ್​​ನಲ್ಲಿಯೂ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರೋದಾಗಿ  ಆರೋಪಿಸಲಾಗಿದೆ.

ಇದನ್ನೂ ಓದಿ: ಲವ್ವರ್‌ಗೆ ತಾಯಿ, ದೊಡ್ಡಮ್ಮನ ಖಾಸಗಿ ಫೋಟೋ ರವಾನೆ; ತನಿಖೆ ವೇಳೆ ಸ್ಫೋಟಕ ಅಂಶ ಬಯಲಿಗೆ

ಮಾವನ ಕಾಟಕ್ಕೆ ಬೇಸತ್ತ ಈಕೆ ಅಂತಿಮವಾಗಿ ವಿಷಯವನ್ನು ಪತಿಗೆ ತಿಳಿಸಿದ್ದು, ಯಾಕೆ ಹೀಗೆ ಮಾಡುತ್ತಿದ್ದೀಯಾ ಎಂದು ಅವರೂ ಪ್ರಶ್ನಿಸಿದ್ದರು. ಬಳಿಕ ಹಿರಿಯರಿಂದ ಈ ಬಗ್ಗೆ ಬುದ್ಧಿಯನ್ನೂ ಹೇಳಿಸಲಾಗಿತ್ತು. ಕೆಲ ದಿನ ಸುಮ್ಮನಾಗಿದ್ದ ಆರೋಪಿ ಮತ್ತೆ ಹಳೇ ಚಾಳಿ ಮುಂದುವರಿಸಿದ್ದಾನೆ. ಸೊಸೆಯ ಸೌಂದರ್ಯದ ಬಗ್ಗೆ ಪತ್ರ ಬರೆದು ತಂದು ಆಕೆಯ ಮುಂದೆಯೇ ಓದ್ತಿದ್ದ ಈತ, ಲೈಂಗಿಕ ಕಿರುಕುಳ ನೀಡಿ ನಂತರ ಆ ಪತ್ರವನ್ನ ತಾನೇ ಇಟ್ಟುಕೊಳ್ಳುತ್ತಿದ್ದ. ಇತ್ತೀಚೆಗ ಸಂತ್ರಸ್ತೆಯ ಮೈಕೈ ಮುಟ್ಟಿ ಆರೋಪಿ ಕಿರುಕುಳ ನೀಡಿದ್ದು, ಈ ವೇಳೆ ಆಕೆ ವಿರೋಧ ವ್ಯಕ್ತಪಡಿಸಿದ ಕಾರಣ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹೀಗಾಗಿ ಮಾವನ ವಿರುದ್ಧ ಕೊನೆಗೂ ಸೊಸೆ ಪೊಲೀಸರಿಗೆ ದೂರು ನೀಡಿದ್ದಾಳೆ.

ವರದಿ: ವಿಕಾಸ್​​, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪಾಕ್ ಬೌಲರ್ ಪರ ಅಶ್ವಿನ್ ಬ್ಯಾಟಿಂಗ್ – Kannada News | R Ashwin Backed Pak’s Usman Tariq Bowling Action

ಪಾಕಿಸ್ತಾನ್ ತಂಡದ ಸ್ಪಿನ್ನರ್ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಆ್ಯಕ್ಷನ್ ಬಗೆಗಿನ ಚರ್ಚೆ ಮುಂದುವರೆದಿದೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಉಸ್ಮಾನ್ ತಾರಿಖ್ ಎಸೆತದಲ್ಲಿ ಆಸ್ಟ್ರೇಲಿಯಾ ದಾಂಡಿಗ ಕ್ಯಾಮರೋನ್ ಗ್ರೀನ್ ಔಟಾಗಿದ್ದರು. ಹೀಗೆ ಔಟಾಗಿ ಪೆವಿಲಿಯನ್​ ಕಡೆ ಹೆಜ್ಜೆ ಹಾಕಿದ್ದ ಗ್ರೀನ್ ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಬಗ್ಗೆ ಪ್ರಶ್ನೆಗಳೆನ್ನೆತ್ತಿದ್ದರು. ಇದೀಗ ಟಿ20 ವಿಶ್ವಕಪ್​ನಲ್ಲೂ ಉಸ್ಮಾನ್ ತಾರಿಖ್ ತನ್ನ ವಿಳಂಬ ರೀತಿಯ ಬೌಲಿಂಗ್​ಗೆ ಶೈಲಿಯನ್ನು ಮುಂದುವರೆಸಿದ್ದಾರೆ. ಇದನ್ನೇ ಭಾರತೀಯ ಕ್ರಿಕೆಟಿಗ ಶ್ರೀವಾಸ್ತವ್ ಗೋಸ್ವಾಮಿ ಪ್ರಶ್ನಿಸಿದ್ದಾರೆ.

“ಫುಟ್​ಬಾಲ್ ಆಟಗಾರರಿಗೆ ಪೆನಾಲ್ಟಿ ರನ್-ಅಪ್ ಸಮಯದಲ್ಲಿ ನಿಲ್ಲಲು ಅವಕಾಶ ನೀಡುವುದಿಲ್ಲ. ಇದು ಹೇಗೆ ಸರಿ? ಆಕ್ಷನ್ – ಎಲ್ಲವೂ ಒಳ್ಳೆಯದು. ಆದರೆ ಈ ವಿರಾಮ? ಅದು ಕೂಡ ಚೆಂಡೆಸೆಯುವ ಮುನ್ನ. ಇದು ಗಂಭೀರ ವಿಷಯ, ಇದನ್ನೆಲ್ಲಾ ಮುಂದುವರೆಸಲು ಅನುಮತಿಸಬಾರದು!” ಎಂಬಾರ್ಥದಲ್ಲಿ ಶ್ರೀವಾಸ್ತವ್ ಗೋಸ್ವಾಮಿ X ನಲ್ಲಿ ಟ್ವೀಟ್ ಮಾಡಿದ್ದಾರೆ.

ಈ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ರವಿಚಂದ್ರನ್ ಅಶ್ವಿನ್, “ಫುಟ್​ಬಾಲ್​ನಲ್ಲಿ ಇದನ್ನು ಅನುಮತಿಸುವುದಿಲ್ಲ ಎಂಬುದನ್ನು ಒಪ್ಪಿಕೊತ್ತೇನೆ! ಆದರೆ ಬ್ಯಾಟರ್ ತನ್ನ ಸ್ಟಾನ್ಸ್ ತೆಗೆದುಕೊಂಡ ನಂತರ, ಅಂಪೈರ್ ಅಥವಾ ಬೌಲರ್‌ಗೆ ತಿಳಿಸದೆ ಸ್ವಿಚ್ ಹಿಟ್ ಅಥವಾ ರಿವರ್ಸ್ ಶಾಟ್ ಹೊಡೆಯಲು ಅನುಮತಿಸಲಾಗುತ್ತದೆ.

ಬ್ಯಾಟರ್​ಗೆ ಹೀಗೆ ಅನುಮತಿಸಬಹುದಾದರೆ, ನಿರ್ಬಂಧಗಳು ಬೌಲರ್‌ಗೆ ಮಾತ್ರ ಏಕೆ ಸೀಮಿತವಾಗಿವೆ?. ವಾಸ್ತವವಾಗಿ ಬೌಲರ್ ಅಂಪೈರ್‌ಗೆ ತಿಳಿಸದೆ ತಾನು ಬೌಲ್ ಮಾಡುವ ತೋಳನ್ನು ಬದಲಾಯಿಸಲು ಅನುಮತಿಸಲಾಗುವುದಿಲ್ಲ!  ಮೊದಲು ಆ ನಿಯಮವನ್ನು ಬದಲಾಯಿಸಬೇಕು” ಎಂದು ಅಶ್ವಿನ್ ಟ್ವೀಟ್ ಮಾಡಿದ್ದಾರೆ.

ಈ ಮೂಲಕ ಪಾಕಿಸ್ತಾನ್ ಸ್ಪಿನ್ನರ್​ನ ಲೇಟ್ ಎಸೆತಗಳನ್ನು ರವಿಚಂದ್ರನ್ ಅಶ್ವಿನ್ ಪರೋಕ್ಷವಾಗಿ ಬೆಂಬಲಿಸಿದ್ದಾರೆ. ಅಂದರೆ ಇಲ್ಲಿ ಬ್ಯಾಟರ್​ಗಳು ಚೆಂಡೆಸೆದ ಬಳಿಕ ಯಾವುದೇ ರೀತಿಯಲ್ಲೂ ಬೇಕಿದ್ದರೂ ಬ್ಯಾಟ್ ಬೀಸಬಹುದು. ಉದಾಹರಣೆಗೆ ರೈಟ್ ಹ್ಯಾಂಡ್ ಬ್ಯಾಟರ್, ಚೆಂಡು ಬರುವಾಗ ಲೆಫ್ಟ್ ಹ್ಯಾಂಡ್ ಆಗಿ ಬ್ಯಾಟ್ ಬೀಸಲು ಅವಕಾಶವಿದೆ.

ಆದರೆ ಬೌಲರ್​ಗಳಿಗೆ ಇಂತಹ ಯಾವುದೇ ಆಯ್ಕೆ ಇಲ್ಲ. ಒಂದು ವೇಳೆ ಬೌಲರ್ ಬಲಗೈ ಬದಲು ಎಡಗೈನಲ್ಲಿ ಚೆಂಡೆಸೆಯಲು ಮುಂದಾದರೆ ಅಂಪೈರ್​ಗೆ ತಿಳಿಸಬೇಕು. ಅದೇ ಬ್ಯಾಟರ್​ ಸ್ವಿಚ್ ಹಿಟ್ ಅಥವಾ ರಿವರ್ಸ್ ಸ್ವೀಪ್ ಮಾಡುತ್ತೇನೆ ಎಂಬುದನ್ನು ಅಂಪೈರ್​ಗೆ ತಿಳಿಸುವ ಅವಶ್ಯಕತೆಯಿಲ್ಲ. ಅಂದರೆ ಇಲ್ಲಿ ಬ್ಯಾಟರ್ ಕೂಡ ತನ್ನ ಬ್ಯಾಟಿಂಗ್ ಶೈಲಿಯನ್ನು ಬದಲಿಸುವುದಲ್ಲವೇ? ಇದಾಗ್ಯೂ ಎಲ್ಲಾ ನಿಯಮಗಳು ಬೌಲರ್​ಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಅಶ್ವಿನ್ ಪ್ರಶ್ನಿಸಿದ್ದಾರೆ.

ಇತ್ತ ವಿಭಿನ್ನ ಶೈಲಿಯ ಬೌಲಿಂಗ್ ಮೂಲಕ ಉಸ್ಮಾನ್ ತಾರಿಖ್ ಈಗಾಗಲೇ ಸಂಚಲನ ಸೃಷ್ಟಿಸಿದ್ದಾರೆ. ಅದರಲ್ಲೂ ಲೇಟ್ ಎಸೆತಗಳ ಮೂಲಕ ಬ್ಯಾಟರ್​​ನ ಮೂವ್​ಮೆಂಟ್​ ಗ್ರಹಿಸುತ್ತಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಇದನ್ನೆ ಶ್ರೀವಾಸ್ತವ್ ಗೋಸ್ವಾಮಿ ಪ್ರಶ್ನಿಸಿದ್ದಾರೆ.

ಆದರೆ ಉಸ್ಮಾನ್ ತಾರಿಖ್​ಗೂ ಮುನ್ನವೇ ರವಿಚಂದ್ರನ್ ಅಶ್ವಿನ್ ಕ್ರಿಕೆಟ್ ಅಂಗಳದಲ್ಲಿ ಇಂತಹ ಲೇಟ್ ಎಸೆತಗಳನ್ನು ಎಸೆದಿದ್ದರು ಎಂಬುದೇ ಸತ್ಯ. 2013 ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದ ಕೊನೆಯ ಎಸೆತದಲ್ಲಿ ಇಂಗ್ಲೆಂಡ್ ತಂಡಕ್ಕೆ 6 ರನ್ ಬೇಕಿದ್ದಾಗ ಅಶ್ವಿನ್ ಲೇಟ್ ಎಸೆತದ ಮೂಲಕ ಭಾರತ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು.

ಇದೀಗ ಉಸ್ಮಾನ್ ತಾರಿಖ್​ಗೆ ಬೆಂಬಲ ವ್ಯಕ್ತಪಡಿಸಿದ ಬೆನ್ನಲ್ಲೇ ಅಶ್ವಿನ್ ಅವರ ಈ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Source link

Exit mobile version