ಕನ್ನಡ ಚಿತ್ರರಂಗದಲ್ಲಿ ಫ್ಯಾನ್ ವಾರ್ ಬಗ್ಗೆ ಚರ್ಚೆ ನಡೆಯುತ್ತಿರುವುದು ತಿಳಿದೇ ಇದೆ. ಸುದೀಪ್ ಹಾಗೂ ದರ್ಶನ್ ಅಭಿಮಾನಿಗಳು ಸಾಕಷ್ಟು ಕಿತ್ತಾಡಿಕೊಳ್ಳುತ್ತಿರುವುದನ್ನು ನೋವು ನೋಡಿರಬಹುದು. ಈ ಬಗ್ಗೆ ಸಾಧು ಕೋಕಿಲಗೆ ಪ್ರಶ್ನೆ ಮಾಡಲಾಯಿತು. ಎಲ್ಲಾ ಸ್ಟಾರ್ಸ್ಗಳ ಫ್ಯಾನ್ಸ್ ನನಗೆ ಅಭಿಮಾನಿಗಳು. ಹೀಗಾಗಿ, ನಾನು ಈ ಬಗ್ಗೆ ಮಾತನಾಡುವುದೇ ಇಲ್ಲ ಎಂದಿದ್ದಾರೆ ಸಾಧು. ಆ ಸಂದರ್ಭದ ವಿಡಿಯೋ ಇಲ್ಲಿದೆ.
12 ಎಕರೆ ಭೂಮಿಯಲ್ಲಿ ಲಕ್ಷಾಂತರ ಲಾಭ; ವಿಕಲಚೇತನ ಕೃಷಿಕನ ಸಾಧನೆ!
ಕೊಪ್ಪಳ, ಡಿಸೆಂಬರ್ 24: ಇಂದಿನ ಕಾಲದಲ್ಲಿ ಕೈಕಾಲು ನೆಟ್ಟಗಿದ್ದರೂ ಕೆಲವರು ದುಡಿದು ತಿನ್ನಲು ಹಿಂದೆ ಮುಂದೆ ನೋಡುತ್ತಾರೆ. ಹೀಗಿರುವಾಗ ಕೊಪ್ಪಳದ (Koppal) ಓರ್ವ ಕೃಷಿಕ ಒಂದು ಕಾಲು ಕಳೆದುಕೊಂಡಿದ್ದರೂ ಕುಗ್ಗದೆ, 12 ಎಕರೆ ಭೂಮಿಯನ್ನು ಉತ್ತಿ ಬಿತ್ತಿ ಲಕ್ಷಾಂತರ ರೂ. ಗಳಿಸಿದ್ದಾರೆ. ಟೊಮೇಟೊ, ಬದನೆ ಸೇರಿ ಹಲವು ತರಕಾರಿಗಳ ಜೊತೆಗೆ ಬೀಜೋತ್ಪಾದನೆಯಲ್ಲಿ ತೊಡಗಿರುವ ಅವರು, ಯುವ ಕೃಷಿಕರಿಗೆ ಸ್ಫೂರ್ತಿಯಾಗಿದ್ದಾರೆ.
ಕೃತಕ ಕಾಲು ಅಳವಡಿಸಿಕೊಂಡೇ ಕೃಷಿ ಚಟುವಟಿಕೆ
ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇಅರಳಿಹಳ್ಳಿ ಗ್ರಾಮದ ರಾಮಣ್ಣ ಸಂಕಷ್ಟವನ್ನು ಶಕ್ತಿಯಾಗಿ ಪರಿವರ್ತಿಸಿಕೊಂಡ ಅಪರೂಪದ ಕೃಷಿಕ. 12 ವರ್ಷಗಳ ಹಿಂದೆ ನಡೆದ ಬೈಕ್ ಅಪಘಾತದಲ್ಲಿ ಒಂದು ಕಾಲು ಕಳೆದುಕೊಂಡರೂ, ಬದುಕಿನ ಓಟದಲ್ಲಿ ಹಿಂದೆ ಬೀಳದೆ ಸಾಧನೆಗೈದಿದ್ದಾರೆ. ಸ್ಥಳೀಯವಾಗಿ ಸಿಗುವ ಕೃತಕ ಕಾಲು ಅಳವಡಿಸಿಕೊಂಡು, ತಮ್ಮ ಜಮೀನಿನಲ್ಲಿ ಯಂತ್ರೋಪಕರಣಗಳ ನೆರವಿನಿಂದ ಕೃಷಿ ಮಾಡುತ್ತಿರುವ ರಾಮಣ್ಣ, ದೈಹಿಕ ಅಸಮರ್ಥತೆಯನ್ನು ಅಸ್ತ್ರವನ್ನಾಗಿಸಿಕೊಂಡಿದ್ದಾರೆ.
ಕೇವಲ ಟೊಮೇಟೋ ಬೀಜೋತ್ಪಾದನೆಯಿಂದ 9 ಲಕ್ಷ ರೂಪಾಯಿ ಆದಾಯ
ಟೊಮೇಟೊ, ಬದನೆ, ಮೆಣಸಿನಕಾಯಿ, ಸೌತೆ ಸೇರಿದಂತೆ ತರಕಾರಿ ಬೆಳೆಗಳ ಜೊತೆಗೆ ಬೀಜೋತ್ಪಾದನೆಯಲ್ಲಿ ತೊಡಗಿರುವ ಅವರು, ಇದೇ ವರ್ಷದಲ್ಲಿ ಕೇವಲ ಟೊಮೇಟೊ ಬೀಜೋತ್ಪಾದನೆಯಿಂದ ಸುಮಾರು 9 ಲಕ್ಷ ರೂಪಾಯಿ ಆದಾಯ ಗಳಿಸಿದ್ದಾರೆ. ಬೆಳಗಿನ ಜಾವದಿಂದಲೇ ಹೊಲಕ್ಕೆ ಕಾಲಿಡುವ ರಾಮಣ್ಣ, ಡಿಸೇಲ್ ಎಂಜಿನ್ಗೆ ಜೋಡಿಸಿದ ಯಂತ್ರಗಳ ಮೂಲಕ ಅಂತರಬೇಸಾಯ, ಕಳೆ ನಿಯಂತ್ರಣ, ನೀರು ಹರಿಸುವುದು, ಔಷಧ ಸಿಂಪಡಣೆ ಸೇರಿದಂತೆ ಎಲ್ಲಾ ಕೃಷಿ ಚಟುವಟಿಕೆಗಳನ್ನು ಸ್ವತಃ ನಿರ್ವಹಿಸುತ್ತಾರೆ.
ವ್ಯಂಗ್ಯವಾಡಿದವರ ಮುಂದೆಯೇ ಸಾಧಿಸಿ ತೋರಿಸಿದ ರಾಮಣ್ಣ
ಭೂಮಿತಾಯಿ ಮೇಲೆ ನಂಬಿಕೆ ಇದ್ದರೆ ಆಕೆ ನಮ್ಮ ಕೈಹಿಡಿಯುತ್ತದೆ ಎನ್ನುವ ಅವರು, ಕೃಷಿಯಲ್ಲಿಯೇ ಸಂತಸ ಕಾಣುತ್ತಾರೆ. ಕಾಲು ಕಳೆದುಕೊಂಡ ಬಳಿಕವೂ ದುಡಿಮೆಯಿಂದ ಹಿಂದೆ ಸರಿಯದ ರಾಮಣ್ಣರನ್ನು ಕೆಲವರು ವ್ಯಂಗ್ಯವಾಡಿ ನಗಿದ ಘಟನೆಗಳೂ ಇವೆ. ಆದರೆ ಅದೇ ವ್ಯಂಗ್ಯ ಇಂದು ಅವರಿಗೆ ಪ್ರೇರಣೆಯಾಗಿದೆ. ಪತ್ನಿಯ ಸಂಪೂರ್ಣ ಸಹಕಾರ ಹಾಗೂ ತಮ್ಮ ಅಚಲ ಪರಿಶ್ರಮದಿಂದ ರಾಮಣ್ಣ ಆರ್ಥಿಕ ಸ್ವಾವಲಂಬನೆ ಸಾಧಿಸಿದ್ದು, ಸಮಾಜವೂ ಅವರ ಸಾಧನೆಯನ್ನು ಗುರುತಿಸಿ ಗೌರವಿಸಿದೆ.
ಹೊರಗಿನ ಆಹಾರಗಳನ್ನು ತಿನ್ನುವ ಮುನ್ನ ಸಾವಿರ ಬಾರಿ ಯೋಚನೆ ಮಾಡಬೇಕು. ಏಕೆಂದರೆ ಅದು ನಮ್ಮ ದೇಹದ ಮೇಲೆ ದೊಡ್ಡ ಪರಿಣಾಮವನ್ನು ಉಂಟು ಮಾಡಬಹುದು. ಇದೀಗ ಇದಕ್ಕೆ ಸಂಬಂಧಿಸಿದಂತೆ ಸುದ್ದಿ ಭಾರೀ ವೈರಲ್ ಆಗಿದೆ. ಫಾಸ್ಟ್ ಫುಡ್(Fast Food )ತಿಂದು ಇದೀಗ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. 11ನೇ ತರಗತಿಯ ವಿದ್ಯಾರ್ಥಿನಿ ಫಾಸ್ಟ್ ಫುಡ್ ಸೇವಿಸಿ, ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾಳೆ. ಅಹಾನಾ ಎಂಬ ಬಾಲಕಿ ದೆಹಲಿಯ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿದೆ.
ಸುಮಾರು ದಿನಗಳಿಂದ ಅಹಾನಾ ಹೊರಗಿನ ಆಹಾರಗಳನ್ನು ಹೆಚ್ಚು ಸೇವನೆ ಮಾಡಿದ ಕಾರಣ ಆಕೆಯ ಸ್ಥಿತಿ ಹದಗೆಟ್ಟಿದೆ ಎಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ. ವೈದ್ಯಕೀಯ ತಂಡದ ಪ್ರಕಾರ, ಆಕೆಯ ಕರುಳುಗಳು ಒಟ್ಟಿಗೆ ಅಂಟಿಕೊಂಡಿವೆ ಮತ್ತು ಅವರ ಜೀರ್ಣಾಂಗ ವ್ಯವಸ್ಥೆಯು ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಇದಕ್ಕೆ ಚಿಕಿತ್ಸೆ ನೀಡಿದ್ರೂ ಆಕೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.
ಅಹಾನಾಗೆ ಚೌಮಿನ್, ಪಿಜ್ಜಾ ಮತ್ತು ಬರ್ಗರ್ ತುಂಬಾ ಇಷ್ಟ:
ಅಹಾನಾಗೆ ಚಿಕ್ಕ ವಯಸ್ಸಿನಿಂದಲ್ಲೂ ಚೌಮಿನ್, ಪಿಜ್ಜಾ ಮತ್ತು ಬರ್ಗರ್ಗಳಂತಹ ಫಾಸ್ಟ್ ಫುಡ್ಗಳನ್ನು ಇಷ್ಟಪಡುತ್ತಿದ್ದಳು. ಮನೆಯಲ್ಲಿ ಮಾಡುವ ಆಹಾರಗಳನ್ನು ಅಷ್ಟೊಂದು ಇಷ್ಟ ಪಡುತ್ತಿರಲಿಲ್ಲ. ಈ ಅಭ್ಯಾಸವೇ ಆಕೆಯ ಈ ಸ್ಥಿತಿಗೆ ಕಾರಣ, ಕೊನೆಗೂ ನಮ್ಮ ಮಗಳನ್ನು ಉಳಿಸಿಕೊಳ್ಳಲು ಆಗಿಲ್ಲ ಎಂದು ಆಕೆಯ ಕುಟುಂಬದವರು ಹೇಳಿದ್ದಾರೆ. ಈ ಘಟನೆ ಅಮ್ರೋಹಾದ ಅಫ್ಘಾನ್ ಮೊಹಲ್ಲಾದಲ್ಲಿ ನಡೆದಿದ್ದು, ಇದು ಕುಟುಂಬ ಮತ್ತು ಸ್ಥಳೀಯ ನಿವಾಸಿಗಳಲ್ಲಿ ಆಂತಕ ಸೃಷ್ಟಿಸಿದೆ.
ವೈದ್ಯರು ಹೇಳಿರುವ ಪ್ರಕಾರ, ಅತಿಯಾಗಿ ಫಾಸ್ಟ್ ಫುಡ್ ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಗೆ, ವಿಶೇಷವಾಗಿ ಮಕ್ಕಳು ಮತ್ತು ಯುವಜನರಿಗೆ ಗಂಭೀರ ಹಾನಿಯಾಗುತ್ತದೆ. ಇಂದು ನಡೆದಿರುವ ಈ ಘಟನೆಗೂ ಕೂಡ ಅದೇ ಕಾರಣ, ಅನಾರೋಗ್ಯಕರ ಆಹಾರ ಪದ್ಧತಿಗಳು ಚಿಕ್ಕ ವಯಸ್ಸಿನಲ್ಲಿಯೇ ಮಾರಕ ಪರಿಣಾಮಗಳನ್ನು ಬೀರುತ್ತವೆ ಎಂದು ಎಚ್ಚರಿಕೆ ನೀಡಿದ್ದಾರೆ. ಅಹಾನಾ ರೈತ ಮನ್ಸೂರ್ ಅಲಿ ಖಾನ್ ಅವರ ಪುತ್ರಿ, ಅವರ ಪತ್ನಿ ಸಾರಾ ಖಾನ್, ಅಹಾನಾ ಸೇರಿ ಒಟ್ಟು ಮೂರು ಮಕ್ಕಳು. ಅದರಲ್ಲಿ ಹಿರಿಯ ಮಗಳು ಮಾರಿಯಾ (23), ಮಗ ಅವನ್, ಕೊನೆಯ ಮಗಳು ಅಹಾನಾ .
ಘಟನೆ ಬಗ್ಗೆ ತಂದೆ ಹೇಳಿದ್ದೇನು?
ನವೆಂಬರ್ 28 ರಂದು ಅಹಾನಾ ಆರೋಗ್ಯದಲ್ಲಿ ಏರುಪೇರು ಕಂಡು ಬಂತು. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ತಕ್ಷಣ ಅಮ್ರೋಹಾದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಆಕೆಯ ಪರಿಸ್ಥಿತಿ ಇನ್ನು ಕೆಟ್ಟಾಗಿತ್ತು. ಅಲ್ಲಿಂದ ಮೊರಾದಾಬಾದ್ಗೆ ಕರೆದೊಯ್ಯಲಾಯಿತು. ಮೊರಾದಾಬಾದ್ನಲ್ಲಿ ನಡೆದ ವೈದ್ಯಕೀಯ ಪರೀಕ್ಷೆಗಳಲ್ಲಿ ಆಕೆಯ ಕರುಳಿಗೆ ಹಾನಿಯಾಗಿದ್ದು, ಹೊಟ್ಟೆಯಲ್ಲಿ ದ್ರವ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ. ಡಾ. ರಿಯಾಜ್ ಶಸ್ತ್ರಚಿಕಿತ್ಸೆ ನಡೆಸಿ, ಆಕೆಯ ಹೊಟ್ಟೆಯಿಂದ ಸುಮಾರು ಏಳು ಲೀಟರ್ ದ್ರವವನ್ನು ತೆಗೆದುಹಾಕಲಾಯಿತು. ಅಹಾನಾ ಇದರಿಂದ ಸ್ವಲ್ಪ ಸುಧಾರಿಸಿಕೊಂಡಿದ್ದಳು, ನಂತರ ಅಲ್ಲಿಂದ ಆಕೆಯ ಚಿಕ್ಕಪ್ಪ ಸಾಜಿದ್ ಖಾನ್ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಗೆ ಕರೆದೊಯ್ದರು.
ಅಲ್ಲಿ ವೈದ್ಯರು ಆಕೆಯ ಕರುಳುಗಳು ಒಟ್ಟಿಗೆ ಅಂಟಿಕೊಂಡಿದೆ ಎಂದು ಹೇಳಿದರು. ಚಿಕಿತ್ಸೆ ನೀಡುತ್ತಿದ್ದಂತೆ ಆಕೆಯ ಸ್ಥಿತಿ ಹದಗೆಡುತ್ತಲೇ ಇತ್ತು. ಡಿಸೆಂಬರ್ 21 ರಂದು ತಡರಾತ್ರಿ, ಆಕೆ ಆರೋಗ್ಯ ತೀವ್ರವಾಗಿ ಹದಗೆಟ್ಟಿತು. ವೈದ್ಯರ ಪ್ರಯತ್ನಗಳ ಹೊರತಾಗಿಯೂ, ಅಹಾನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.
ಫಾಸ್ಟ್ ಫುಡ್ ಆಹಾರ ಸೇವಿಸಬೇಡಿ: ವೈದ್ಯರು
ದೀರ್ಘಕಾಲದ ಫಾಸ್ಟ್ ಫುಡ್ ಸೇವನೆಯಿಂದಾಗಿ ಆಕೆಯ ಕರುಳು ತೀವ್ರವಾಗಿ ಹಾನಿಗೊಳಗಾಗಿದ್ದು, ಇದರಿಂದಾಗಿ ಆಕೆಯ ದೇಹವು ತುಂಬಾ ದುರ್ಬಲವಾಗಿದೆ ಎಂದು ವೈದ್ಯರು ಕುಟುಂಬಕ್ಕೆ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಅಹಾನಾಳ ಚಿಕ್ಕಪ್ಪ ಗುಲ್ಜಾರ್ ಖಾನ್ ಅಲಿಯಾಸ್ ಗುಡ್ಡು ಹೇಳಿದ್ದಾರೆ.ಅಮ್ರೋಹಾದ ಮುಖ್ಯ ವೈದ್ಯಾಧಿಕಾರಿ ಡಾ. ಎಸ್.ಪಿ. ಸಿಂಗ್, ಮಕ್ಕಳಿಗೆ ನಿಯಮಿತವಾಗಿ ಫಾಸ್ಟ್ ಫುಡ್ ಸೇವಿಸಲು ಅವಕಾಶ ನೀಡುವುದರ ವಿರುದ್ಧ ಪೋಷಕರಿಗೆ ಎಚ್ಚರಿಕೆ ನೀಡಿದರು. ಅಂತಹ ಆಹಾರದಲ್ಲಿ ಅತಿಯಾದ ಮಸಾಲೆಗಳು, ಕೊಬ್ಬು ಮತ್ತು ಕಾರ್ಬೋಹೈಡ್ರೇಟ್ಗಳಿವೆ. ತಂಪು ಪಾನೀಯಗಳು, ಚಿಪ್ಸ್ ಮತ್ತು ಫ್ರೆಂಚ್ ಫ್ರೈಗಳು ನೈಸರ್ಗಿಕ ಹಸಿವನ್ನು ನಿಗ್ರಹಿಸುತ್ತವೆ ಮತ್ತು ಮಕ್ಕಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತವೆ ಎಂದು ಹೇಳಿದ್ದಾರೆ.
ಅಹಾನಾಗೆ ಬಾಲ್ಯದಿಂದಲೂ ಫಾಸ್ಟ್ ಫುಡ್ ತುಂಬಾ ಇಷ್ಟವಾಗಿತ್ತು ಎಂದು ಚಿಕ್ಕಪ್ಪ ಸಾಜಿದ್ ಖಾನ್ ಹೇಳಿದ್ದಾರೆ. “ಅವಳು ಮನೆಯಲ್ಲಿ ತಯಾರಿಸಿದ ಆಹಾರಕ್ಕಿಂತ ಚೌಮಿನ್, ಮ್ಯಾಗಿ, ಪಿಜ್ಜಾ ಮತ್ತು ಬರ್ಗರ್ಗಳನ್ನು ಹೆಚ್ಚು ಇಷ್ಟಪಡುತ್ತಿದ್ದಳು. ಪ್ಯಾಕ್ ಮಾಡಿದ ವಸ್ತುಗಳನ್ನು ಸಹ ಅವಳು ರಹಸ್ಯವಾಗಿ ತಿನ್ನುತ್ತಿದ್ದಳು. ನಾವು ಸಾಕಷ್ಟು ಗಮನ ಹರಿಸದಿರುವುದು ನಮ್ಮ ತಪ್ಪು” ಎಂದು ಅವರು ಹೇಳಿದರು.
ಇದು ಜಾಗತಿಕ ಆರೋಗ್ಯಕ್ಕೆ ಅಪಾಯಕಾರಿ:
ಗ್ಲೋಬಲ್ ಬರ್ಡನ್ ಆಫ್ ಡಿಸೀಸ್ ರಿಪೋರ್ಟ್ ಪ್ರಕಾರ, ಫಾಸ್ಟ್ ಫುಡ್ ಸೇವನೆ ಸೇರಿದಂತೆ ಅನಾರೋಗ್ಯಕರ ಆಹಾರಕ್ರಮಗಳು ಪ್ರತಿ ವರ್ಷ ವಿಶ್ವಾದ್ಯಂತ ಸುಮಾರು 11 ಮಿಲಿಯನ್ ಸಾವುಗಳಿಗೆ ಕಾರಣವಾಗುತ್ತವೆ. JAMA ನೆಟ್ವರ್ಕ್ ಮತ್ತು ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ನಂತಹ ಜರ್ನಲ್ಗಳಲ್ಲಿ ಪ್ರಕಟವಾದ ವೈದ್ಯಕೀಯ ಅಧ್ಯಯನಗಳು ಫಾಸ್ಟ್ ಫುಡ್ ಹೃದ್ರೋಗ, ಕ್ಯಾನ್ಸರ್, ಜೀರ್ಣಕಾರಿ ಅಸ್ವಸ್ಥತೆಗಳು ಮತ್ತು ಕರುಳಿನ ಆರೋಗ್ಯಕ್ಕೆ ದೀರ್ಘಕಾಲೀನ ಹಾನಿಯನ್ನುಂಟುಮಾಡುತ್ತವೆ ಎಂದು ಹೇಳಿದೆ.
ಜೈಪುರ, ಡಿಸೆಂಬರ್ 24: ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್(Smartphone) ಬಳಕೆ ಹೆಚ್ಚಾಗಿದೆ. ಮನೆಯಲ್ಲಿ ಪೋಷಕರು ಹೆಚ್ಚೆತ್ತು ಮೊಬೈಲ್ಗಳನ್ನು ಬಳಕೆ ಮಾಡುವುದನ್ನು ನೋಡಿ ಮಕ್ಕಳು ಕೂಡ ಅದೇ ಪರಿಪಾಠ ಬೆಳೆಸಿಕೊಳ್ಳುತ್ತಾರೆ. ಅದು ಅವರ ದೃಷ್ಟಿ ಮೇಲೂ ಪರಿಣಾಮ ಬೀರುತ್ತದೆ. ಮಕ್ಕಳ ಜತೆ ಮನೆಯಲ್ಲಿ ಹೆಚ್ಚು ಹೊತ್ತು ತಂದೆಗಿಂತ ತಾಯಿಯೇ ಇರುತ್ತಾರೆ. ಹಾಗಾಗಿ ಇನ್ನುಮುಂದೆ ಹೆಣ್ಣುಮಕ್ಕಳು ಸ್ಮಾರ್ಟ್ ಫೋನ್ ಬಳಸುವಂತಿಲ್ಲ ಬದಲಾಗಿ ಕೀ ಪ್ಯಾಡ್ ಬಳಸುವಂತೆ ಸೂಚನೆ ನೀಡಲಾಗಿದೆ.
ಇದು ದೇಶಾದ್ಯಂತ ತಮದ ನಿಯಮವಲ್ಲ ಬದಲಾಗಿ, ರಾಜಸ್ಥಾನದ ಪಂಚಾಯತ್ ಈ ನಿರ್ಧಾರ ತೆಗೆದುಕೊಂಡಿದೆ. ರಾಜಸ್ಥಾನದ ಜಲೋರ್ ಜಿಲ್ಲೆಯ ಪಂಚಾಯತ್ 15 ಹಳ್ಳಿಗಳ ಮಹಿಳೆಯರು ಮತ್ತು ಹುಡುಗಿಯರಿಗೆ ಕ್ಯಾಮೆರಾ ಹೊಂದಿರುವ ಸ್ಮಾರ್ಟ್ಫೋನ್ಗಳನ್ನು ನಿಷೇಧಿಸಿದೆ. ಈ ನಿಷೇಧವು ಜನವರಿ 26 ರಿಂದ ಜಾರಿಗೆ ಬರಲಿದೆ.
ಜಾಲೋರ್ ಜಿಲ್ಲೆಯ ಚೌಧರಿ ಸಮುದಾಯದ ಸುಂಧಮತ ಪಟ್ಟಿಯ ಘಾಜಿಪುರ ಗ್ರಾಮದಲ್ಲಿ ಸುಜನರಾಮ್ ಚೌಧರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಹೊರಬಿದ್ದಿದೆ. ಸಭೆಯಲ್ಲಿ 15 ಗ್ರಾಮಗಳ ಗ್ರಾಮಸ್ಥರು ಮತ್ತು ಪಂಚಾಯತ್ ಸದಸ್ಯರು ಭಾಗವಹಿಸಿದ್ದರು.
ಹೊಸ ನಿಯಮದ ಪ್ರಕಾರ, ಸಾರ್ವಜನಿಕ ಸಭೆಗಳು, ಸಾಮಾಜಿಕ ಕಾರ್ಯಕ್ರಮಗಳು, ಮದುವೆಗಳು ಅಥವಾ ನೆರೆಹೊರೆಯವರ ಮನೆಗಳಿಗೆ ಭೇಟಿ ನೀಡುವಾಗಲೂ ಮಹಿಳೆಯರು ಸ್ಮಾರ್ಟ್ಫೋನ್ಗಳನ್ನು ಕೊಂಡೊಯ್ಯಲು ಅನುಮತಿಸಲಾಗುವುದಿಲ್ಲ. ಬದಲಾಗಿ, ಸಂವಹನಕ್ಕಾಗಿ ಮೂಲ ಕೀಪ್ಯಾಡ್ ಮೊಬೈಲ್ ಫೋನ್ಗಳನ್ನು ಬಳಸಲು ಅವರಿಗೆ ಸೂಚಿಸಲಾಗಿದೆ. ನಿರ್ಬಂಧವು ಸಾರ್ವಜನಿಕ ಸ್ಥಳಗಳನ್ನು ಮೀರಿ ವಿಸ್ತರಿಸುತ್ತದೆ, ಮನೆಯ ಹೊರಗೆ ಸ್ಮಾರ್ಟ್ಫೋನ್ಗಳ ಬಳಕೆಯನ್ನು ಗಮನಾರ್ಹವಾಗಿ ಸೀಮಿತಗೊಳಿಸುತ್ತದೆ.
ಆದಾಗ್ಯೂ, ಶಾಲಾ ಬಾಲಕಿಯರು ತಮ್ಮ ಅಧ್ಯಯನಕ್ಕಾಗಿ ಸ್ಮಾರ್ಟ್ಫೋನ್ಗಳನ್ನು ಬಳಸಲು ಅನುಮತಿಸಲಾಗಿದೆ. ಸಮುದಾಯದ ಅಧ್ಯಕ್ಷ ಸುಜನರಾಮ್ ಚೌಧರಿ ಮಾತನಾಡಿ, ಎಲ್ಲಾ ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರೊಂದಿಗೆ ಚರ್ಚಿಸಿದ ನಂತರ, 15 ಹಳ್ಳಿಗಳ ಮಹಿಳೆಯರು ಮತ್ತು ಹುಡುಗಿಯರು ಕರೆಗಳನ್ನು ಮಾಡಲು ಕೀಪ್ಯಾಡ್ ಫೋನ್ಗಳನ್ನು ಬಳಸಬೇಕೆಂದು ನಿರ್ಧರಿಸಲಾಯಿತು.
ವಿಡಿಯೋ
राजस्थान : जालोर जिले के 15 गांवों की महिलाएं और लड़कियां अब स्मार्टफोन का इस्तेमाल नहीं कर सकेंगी
जिला पंचायतों ने जारी किए आदेश, जहां उन्हें केवल कीपैड वाले फोन रखने की ही इजाजत होगी
ಶಾಲಾ ಬಾಲಕಿಯರು ತಮ್ಮ ಅಧ್ಯಯನಕ್ಕಾಗಿ ಮೊಬೈಲ್ ಫೋನ್ಗಳನ್ನು ಹೊಂದಿರುವುದು ಅಗತ್ಯವಿದ್ದರೆ, ಅವರು ಮನೆಯಲ್ಲಿ ಮಾತ್ರ ಅವುಗಳನ್ನು ಬಳಸಲು ಅನುಮತಿಸಲಾಗುವುದು. ಮಕ್ಕಳು ಅತಿಯಾಗಿ ಮೊಬೈಲ್ ಫೋನ್ ಬಳಸುತ್ತಿರುವುದರಿಂದ ಈ ನಿಯಮವನ್ನು ಪರಿಚಯಿಸಲಾಗಿದೆ ಎಂದು ಸುಜನರಾಮ್ ಚೌಧರಿ ಈ ನಿರ್ಧಾರವನ್ನು ಸಮರ್ಥಿಸಿಕೊಂಡರು.
ಜಲೋರ್ ಜಿಲ್ಲೆಯ ಗಾಜಿಪುರ, ಪಾವ್ಲಿ, ಕಲ್ಡಾ, ಮನೋಜಿಯಾ ವಾಸ್, ರಾಜಿಕವಾಸ್, ದತ್ಲವಾಸ್, ರಾಜಪುರ, ಕೋಡಿ, ಸಿದ್ರೋಡಿ, ಅಲ್ದಿ, ರೋಪ್ಸಿ, ಖಾನದೇವಲ್, ಸವಿಧರ್, ಹತ್ಮಿ ಕಿ ಧನಿ (ಭಿನ್ಮಲ್), ಮತ್ತು ಖಾನ್ಪುರ ಗ್ರಾಮಸ್ಥರಲ್ಲಿ ಈ ನಿಯಮವನ್ನು ಜಾರಿಗೊಳಿಸಲಾಗುವುದು.
ಮಂಗಳೂರು, ಡಿಸೆಂಬರ್ 24: ಆಕೆ ಪತಿಯನ್ನೇ ಕೊಲೆ ಮಾಡಿದಾಕೆ. ಸಾಲದೆಂಬಂತೆ ನ್ಯಾಯಾಲಯದಲ್ಲೂ ಆರೋಪ ಸಾಬೀತಾಗಿದೆ. ಇಷ್ಟಾದರೂ ಆಕೆಗೆ ಕೋರ್ಟ್ ಶಿಕ್ಷೆ ವಿಧಿಸಿಲ್ಲ! ಅಷ್ಟೇ ಅಲ್ಲ, ಆಕೆಯನ್ನು ಅಪರಾಧಮುಕ್ತಗೊಳಿಸಿದೆ! ಹಾಗೆಂದು ಆಕೆ ಮನೆಗೆ ಮರಳುವಂತೆಯೂ ಇಲ್ಲ. ಮತ್ತೆಲ್ಲಿಗೆ ಕಳುಹಿಸುತ್ತಾರೆ? ಇದು ಹೇಗೆ ಸಾಧ್ಯ ಎಂಬೆಲ್ಲ ಪ್ರಶ್ನೆಗಳು ಮೂಡುವುದು ಸಹಜ. ಆಶ್ಚರ್ಯ ಆದರೂ ಇದು ಸತ್ಯ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ವಿಶೇಷ ತೀರ್ಪು ನೀಡಿದೆ.
ಏನಿದು ಪ್ರಕರಣ, ಆಶ್ಚರ್ಯಕರ ತೀರ್ಪು?
ಇದು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ 2022ರ ಜುಲೈ 5 ರಂದು ನಡೆದಿದ್ದ ಕೊಲೆ ಪ್ರಕರಣ. ಯೋಹಾನನ್ ಎಂಬುವವರನ್ನು ಅವರ ಪತ್ನಿ ಎಲಿಯಮ್ಮ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದರು. ಪ್ರಕರಣದ ವಿಚಾರಣೆ ವೇಳೆ ಬೆಳ್ತಂಗಡಿ ಪೊಲೀಸರು ಆರೋಪಿ ಎಲಿಯಮ್ಮ ಬಂಧಿಸಿದ್ದರು.
ತಪ್ಪೊಪ್ಪಿಕೊಂಡಿದ್ದ ಆರೋಪಿ ಎಲಿಯಮ್ಮ
ಬೆಳ್ತಂಗಡಿ ಪೊಲೀಸರ ವಿಚಾರಣೆ ವೇಳೆ ಆರೋಪಿ ಎಲಿಯಮ್ಮ ‘ಪರಿಯನ್ನು ಕೊಲೆ ಮಾಡಿರುವುದು ಹೌದು’ ಎಂದು ಒಪ್ಪಿಕೊಂಡಿದ್ದರು. ಹೀಗಾಗಿ ಕೃತ್ಯದ ಗಂಭೀರತೆಯನ್ನು ಪರಿಗಣಿಸಿ ನ್ಯಾಯಾಲಯ ಸಾಕ್ಷಿ ವಿಚಾರಣೆಯನ್ನು ಮುಂದುವರೆಸಿತ್ತು. ಸಾಕ್ಷಿದಾರರು ಕೂಡ ಆಕೆಯ ವಿರುದ್ಧ ಸಾಕ್ಷಿ ನುಡಿದಿದ್ದರು.
ಎಲಿಯಮ್ಮ ಬಚಾವಾಗಿದ್ಹೇಗೆ?
ಕೊಲೆ ಪ್ರಕರಣದ ವಿಚಾರಣೆಯ ಕ್ರಾಸ್ ಎಕ್ಸಾಮಿನೇಷನ್ ಹಂತದಲ್ಲಿ ಆರೋಪಿ ಪರ ವಕೀಲ ವಿಕ್ರಮ್ ರಾಜ್ ಎ. ವಾದ ಮಂಡಿಸಿದ್ದರು. ಎಲಿಯಮ್ಮ ದೀರ್ಘಕಾಲದಿಂದ ಮಾನಸಿಕ ಅಸ್ವಸ್ಥತೆ ಮತ್ತು ಭ್ರಮೆಗಳಿಂದ (Delusional Disorder) ಬಳಲುತ್ತಿದ್ದಾರೆ. ಮಾನಸಿಕ ಅಸ್ವಸ್ಥತೆಯ ಕಾರಣದಿಂದಾಗಿ ಕೃತ್ಯವು ತಪ್ಪು ಅಥವಾ ಕಾನೂನು ಬಾಹಿರ ಎಂದು ತಿಳಿಯುವ ಸ್ಥಿತಿಯಲ್ಲಿ ಆರೋಪಿ ಇರಲಿಲ್ಲ. ಆದ್ದರಿಂದ ಆಕೆ ಅಪರಾಧ ಎಸಗಿಲ್ಲ ಎಂದು ವಿಕ್ರಮ್ ರಾಜ್ ಎ ವಾದ ಮಂಡಿಸಿದ್ದರು.
ಅಚ್ಚರಿಯ ತೀರ್ಪು ಪ್ರಕಟಿಸಿ ಕೋರ್ಟ್ ಹೇಳಿದ್ದೇನು?
ವಾದ-ಪ್ರತಿವಾದಗಳನ್ನು ಆಲಿಸಿ ನ್ಯಾಯಾಧೀಶರಾದ ಮೋಹನ ಜೆ.ಎಸ್. ತೀರ್ಪು ನೀಡಿದ್ದು, ಕೊಲೆ ಕೃತ್ಯ ಸಾಬೀತಾಗಿದ್ದರೂ ಆರೋಪಿ ಅಪರಾಧಿಕ ಹೊಣೆಯಿಂದ ಮುಕ್ತ ಎಂದು ಹೇಳಿದ್ದಾರೆ. ನಂತರ ಆರೋಪಿಯನ್ನು ನಿಮ್ಹಾನ್ಸ್ಗೆ (NIMHANS) ಕಳುಹಿಸಲು ಜೈಲು ಅಧೀಕ್ಷಕರಿಗೆ ಆದೇಶ ನೀಡಿದ್ದಾರೆ.
ಆಕೆ ಬಿಡುಗಡೆಗೆ ಯೋಗ್ಯಳೇ ಮತ್ತು ಆಕೆಯಿಂದ ಸಮಾಜಕ್ಕೆ ಅಥವಾ ಆಕೆಯ ಜೀವಕ್ಕೆ ಅಪಾಯವಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಆರೋಪಿ ಪರ ನ್ಯಾಯವಾದಿಗಳಾದ ವಿಕ್ರಮ್ ರಾಜ್ ಎ ಮತ್ತು ಜೀವನ್ ಎ.ಎಂ. ವಾದ ಮಂಡಿಸಿದ್ದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಅರ್ಜುನ್ ಜನ್ಯ ನಿರ್ದೇಶನದ ‘45’ ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದು. ಈ ಚಿತ್ರಕ್ಕೆ ಡಿಸೆಂಬರ್ 23ರಂದು ವಿಶೇಷ ಶೋ ನಡೆದಿದೆ. ಈ ಶೋ ನೋಡಿದ ಅನೇಕರು ಸಿಳ್ಳೆ-ಚಪ್ಪಾಳೆ ಹೊಡೆದಿದ್ದಾರೆ. ‘ಸಿನಿಮಾ ಅಲ್ಲ, ಶಿವ ತಾಂಡವ ನೋಡಿದಂತಾಯ್ತು’ ಎಂದು ಎಂದು ಅನೇಕರು ಹೇಳಿದ್ದಾರೆ. ‘45’ ಚಿತ್ರದ ನೋಡಿದವರು ತಮ್ಮ ವಿಮರ್ಶೆ ತಿಳಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media
ಆಪ್ಟಿಕಲ್ ಇಲ್ಯೂಷನ್ (Optical Illusion) ಬ್ರೈನ್ ಟೀಸರ್ ನಂತಹ ಒಗಟಿನ ಚಿತ್ರಗಳೇ ಸುಲಭವಾಗಿ ಕಂಡರೂ ಬಿಡಿಸುವುದು ಅಷ್ಟೇ ಕಷ್ಟ. ಇಂತಹ ಒಗಟಿನ ಆಟಗಳತ್ತ ಹೆಚ್ಚಿನವರು ಆಸಕ್ತಿ ತೋರುತ್ತಾರೆ. ಇದೀಗ ನಿಮ್ಮ ಬುದ್ಧಿವಂತಿಕೆ ಹಾಗೂ ವೀಕ್ಷಣಾ ಕೌಶಲ್ಯವನ್ನು ಪರೀಕ್ಷಿಸುವ ಚಿತ್ರವೊಂದಿದೆ. ಈ ಕೋಟೆಯ ಚಿತ್ರದಲ್ಲಿ ನವಿಲೊಂದಿದೆ. ಜಾಣತನದಿಂದ ಮರೆಮಾಡಲಾಗಿರುವ ಈ ಪಕ್ಷಿಯನ್ನು ಕಂಡುಹಿಡಿಯುವುದೇ ದೊಡ್ಡ ಸವಾಲು. ಹತ್ತು ಜನರಲ್ಲಿ ಒಬ್ಬರಿಗೆ ಮಾತ್ರ ಈ ಒಗಟನ್ನು ಬಿಡಿಸಲು ಸಾಧ್ಯವಿದ್ದು ನೀವು ಅವರಲ್ಲಿ ಒಬ್ಬರಾಗಿದ್ದೀರಾ ಎಂದು ಪರೀಕ್ಷಿಸಿಕೊಳ್ಳಿ.
ಈ ಚಿತ್ರದತ್ತ ಒಮ್ಮೆ ಕಣ್ಣಾಯಿಸಿ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ಕೋಟೆಯನ್ನು ಕಾಣಬಹುದು. ಕೋಟೆಯ ಮುಂದೆ ಹುಡುಗನೊಬ್ಬ ನಿಂತು ಕೊಂಡಿದ್ದಾನೆ. ಈ ಕೋಟೆಯಲ್ಲಿ ನವಿಲು ಕೂಡ ಇದೆ. ಇಲ್ಲಿರುವ ಸವಾಲು ಈ ಪಕ್ಷಿ ಎಲ್ಲಿದೆ ಎಂಬುದನ್ನು ಕಂಡುಹಿಡಿಯುವುದು. ನೀವು 7 ಸೆಕೆಂಡುಗಳಲ್ಲಿ ನವಿಲನ್ನು ಹುಡುಕಲು ಸಾಧ್ಯವೇ ಎಂದು ನೋಡಿ.
ಮೊದಲ ನೋಟಕ್ಕೆ ಈ ಚಿತ್ರವನ್ನು ನೋಡಿದಾಗ ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು. ಆದರೆ ಈ ಕೋಟೆಯಲ್ಲಿ ಅವಿತು ಕುಳಿತಿರುವ ನವಿಲನ್ನು ತ್ವರಿತ ವೀಕ್ಷಣಾ ಕೌಶಲ್ಯ ಹೊಂದಿದ್ದವರು ಮಾತ್ರ ಗುರುತಿಸಲು ಸಾಧ್ಯ. ಒಗಟು ಬಿಡಿಸುವಲ್ಲಿ ಸೋತಿದ್ದೀರಾ. ನಾವೇ ನಿಮಗೆ ನವಿಲು ಎಲ್ಲಿದೆ ಎಂದು ಹೇಳುತ್ತೇವೆ. ಈ ಕೆಳಗಿನ ಚಿತ್ರದಲ್ಲಿ ನವಿಲು ಎಲ್ಲಿದೆ ಎಂದು ನಾವೇ ಗುರುತಿಸಿದ್ದೇವೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನImage Credit source: vecteezy
ದಿನಸಿ, ಬಟ್ಟೆಗಳಿಂದ ಹಿಡಿದು ಪ್ರತಿಯೊಂದು ಅಗತ್ಯ ವಸ್ತುಗಳನ್ನು ನಾವು ಮಾರುಕಟ್ಟೆಯಿಂದ ಕೊಳ್ಳುತ್ತೇವೆ. ಅದೇ ರೀತಿ ಹೋಟೆಲ್, ರೆಸ್ಟೋರೆಂಟ್ಗಳಲ್ಲಿ ಊಟ ಮಾಡುತ್ತೇವೆ. ಆದರೆ ಕೆಲವೊಂದು ಬಾರಿ ಗುಣಮಟ್ಟದ ಆಹಾರಗಳು, ವಸ್ತುಗಳು ಸಿಗುವುದೇ ಇಲ್ಲ. ಗ್ರಾಹಕರಿಗೆ (Consumer) ಒಂದಷ್ಟು ಮೋಸಗಳಾಗುತ್ತವೆ. ಈ ಮೋಸಗಳಿಗೆ ಯಾವ ರೀತಿ ಪರಿಹಾರವನ್ನು ಪಡೆಯುವುದು ಎಂಬ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ. ಈ ರೀತಿಯ ಮೋಸಗಳಿಗೆ ಪರಿಹಾರ ಪಡೆಯಲು ಗ್ರಾಹಕರಿಗಾಗಿ ಕೆಲವು ಹಕ್ಕುಗಳಿವೆ, ಈ ಹಕ್ಕುಗಳ ಬಗ್ಗೆ ಶಿಕ್ಷಣ ನೀಡಲು, ಜಾಗೃತಿ ಮೂಡಿಸಲು ಭಾರತದಲ್ಲಿ ಪ್ರತಿವರ್ಷ ಡಿಸೆಂಬರ್ 24 ರಂದು ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವದ ಬಗ್ಗೆ ತಿಳಿಯಿರಿ.
ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನದ ಇತಿಹಾಸವೇನು?
ಗ್ರಾಹಕ ಸಂರಕ್ಷಣಾ ಕಾಯ್ದೆಯನ್ನು 1986 ರಲ್ಲಿ ಅಂಗೀಕರಿಸಲಾಯಿತು ಮತ್ತು ಡಿಸೆಂಬರ್ 24 ರಂದು ರಾಷ್ಟ್ರಪತಿಗಳು ಅದಕ್ಕೆ ಅನುಮೋದನೆ ನೀಡಿದರು. ಉತ್ಪಾದಕರು ಅಥವಾ ಮಾರಾಟಗಾರರಿಂದಾಗುವ ಮೋಸ, ವಂಚನೆ, ಶೋಷಣೆಗಳಿಂದ ಗ್ರಾಹಕರಿಗೆ ರಕ್ಷಣೆ ಒದಗಿಸುವ ಉದ್ದೇಶದಿಂದ ಈ ಕಾಯಿದೆಯನ್ನು ಜಾರಿಗೆ ತರಲಾಯಿತು. ಈ ಕಾಯ್ದೆಯನ್ನು ಅಂಗೀಕರಿಸಿದ ನೆನಪಿಗಾಗಿ ಪ್ರತಿವರ್ಷ ಡಿಸೆಂಬರ್ 24 ರಂದು ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ.
ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನದ ಮಹತ್ವವೇನು?
ರಾಷ್ಟ್ರೀಯ ಗ್ರಾಹಕ ದಿನದ ಪ್ರಾಥಮಿಕ ಉದ್ದೇಶವೆಂದರೆ ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಅವರ ಹಕ್ಕುಗಳನ್ನು ಪ್ರತಿಪಾದಿಸಲು ಅವರಿಗೆ ಅಧಿಕಾರ ನೀಡುವುದು.
ಉತ್ಪನ್ನಗಳು ಮತ್ತು ಸೇವೆಗಳ ಗುಣಮಟ್ಟವನ್ನು ಹೇಗೆ ನಿರ್ಣಯಿಸುವುದು, ವಂಚನೆ ಮತ್ತು ಶೋಷಣೆಯನ್ನು ತಪ್ಪಿಸುವುದು ಮತ್ತು ಕಾನೂನು ನೆರವು ಪಡೆಯುವುದು ಹೇಗೆ ಎಂಬುದರ ಕುರಿತು ಗ್ರಾಹಕರಿಗೆ ಶಿಕ್ಷಣ ನೀಡುವ ಸಾಧನವಾಗಿಯೂ ಈ ದಿನ ಕಾರ್ಯನಿರ್ವಹಿಸುತ್ತದೆ.
ಗ್ರಾಹಕ ವೇದಿಕೆಗಳು, ಸಂಸ್ಥೆಗಳು ಮತ್ತು ಸರ್ಕಾರಿ ಸಂಸ್ಥೆಗಳು ಹಲವಾರು ಜಾಗೃತಿ ಅಭಿಯಾನಗಳು, ವಿಚಾರ ಸಂಕಿರಣಗಳು ಮತ್ತು ಕಾರ್ಯಾಗಾರಗಳನ್ನು ಆಯೋಜಿಸುತ್ತವೆ.
ಸುರಕ್ಷತೆಯ ಹಕ್ಕು: ಗ್ರಾಹಕರು ಮಾರುಕಟ್ಟೆಯಿಂದ ಗುಣಮಟ್ಟದ ಮತ್ತು ಸುಸ್ಥಿರ ಸೇವೆಗಳನ್ನು ಪಡೆಯುವ ಹಕ್ಕನ್ನು ಹೊಂದಿದ್ದಾರೆ. ಈ ಗುಣಮಟ್ಟವನ್ನು ಭಾರತೀಯ ಗುಣಮಟ್ಟ ಸಂಸ್ಥೆ (ISAE) (ಕೈಗಾರಿಕಾ ಮತ್ತು ಎಲೆಕ್ಟ್ರಾನಿಕ್ ಸರಕುಗಳಿಗೆ), ಆಗ್ಮಾರ್ಕ್ (ಕೃಷಿ ಉತ್ಪನ್ನಗಳಿಗೆ) ಮತ್ತು FPO ಮಾರ್ಕ್ (ಸಂಸ್ಕರಿಸಿದ ಆಹಾರ ವಸ್ತುಗಳಿಗೆ) ಗುರುತುಗಳ ಮೂಲಕ ವ್ಯಕ್ತಪಡಿಸಲಾಗುತ್ತದೆ.
ಮಾಹಿತಿ ಹಕ್ಕು: ಗ್ರಾಹಕರು ಮತ್ತು ಗ್ರಾಹಕರು ತಾವು ಖರ್ಚು ಮಾಡುತ್ತಿರುವ ಉತ್ಪನ್ನದ ಬಗ್ಗೆ ಅಗತ್ಯ ಮಾಹಿತಿಯನ್ನು ಪಡೆಯುವ ಹಕ್ಕನ್ನು ಹೊಂದಿರುತ್ತಾರೆ. ಹೌದು ಅವರು ಖರೀದಿಸುತ್ತಿರುವ ಉತ್ಪನ್ನ, ಅದರ ಬೆಲೆ, ಗುಣಮಟ್ಟ, ಪ್ರಮಾಣ, ಉತ್ಪಾದನಾ ದಿನಾಂಕ, ಮುಕ್ತಾಯ ದಿನಾಂಕ ಮತ್ತು ಅದನ್ನು ಹೇಗೆ ಬಳಸುವುದು ಎಂಬುದನ್ನು ತಿಳಿದುಕೊಳ್ಳುವ ಹಕ್ಕನ್ನು ಹೊಂದಿರುತ್ತಾರೆ. ಅಂಗಡಿಯವರು ತಪ್ಪು ಮಾಹಿತಿಯನ್ನು ಒದಗಿಸಿದರೆ, ಅವರು ದೂರು ದಾಖಲಿಸಬಹುದು.
ಆಯ್ಕೆ ಮಾಡುವ ಹಕ್ಕು: ಯಾವುದೇ ಗ್ರಾಹಕರು ಯಾವುದೇ ಅಂಗಡಿ, ಯಾವುದೇ ಮಾಲ್ ಅಥವಾ ಯಾವುದೇ ಶಾಪಿಂಗ್ ತಾಣಕ್ಕೆ ಹೋಗಿ ತಾವು ಬಯಸುವ ಮತ್ತು ತಮ್ಮ ಬಜೆಟ್ ಒಳಗೆ ಏನು ಬೇಕಾದರೂ ಖರೀದಿಸಬಹುದು. ಅಂಗಡಿಯವರು ಅಥವಾ ಮಾರಾಟಗಾರರು ನಿರ್ದಿಷ್ಟ ವಸ್ತುವನ್ನು ಖರೀದಿಸಲು ಅವರ ಮೇಲೆ ಒತ್ತಡ ಹೇರುವಂತಿಲ್ಲ. ಗ್ರಾಹಕರು ತಾವು ಆರಿಸಿಕೊಳ್ಳುವ ಯಾವ ವಸ್ತುವನ್ನಾದರೂ ಆಯ್ಕೆ ಮಾಡುವ ಹಕ್ಕನ್ನು ಹೊಂದಿರುತ್ತಾರೆ.
ವಿಚಾರಣೆಯ ಹಕ್ಕು : ವಂಚನೆ ಅಥವಾ ವಂಚನೆಯ ಸಂದರ್ಭದಲ್ಲಿ ಗ್ರಾಹಕರು ಮೇಲ್ಮನವಿ ಸಲ್ಲಿಸುವ ಅಥವಾ ವಿಚಾರಣೆಯನ್ನು ಕೋರುವ ಹಕ್ಕನ್ನು ಹೊಂದಿರುತ್ತಾರೆ. ಅವರು ಸೂಕ್ತ ವೇದಿಕೆಯ ಮುಂದೆ ತಮ್ಮ ಪ್ರಕರಣವನ್ನು ಮಂಡಿಸಬಹುದು ಮತ್ತು ಕಾನೂನು ಕ್ರಮ ಕೈಗೊಳ್ಳಬಹುದು. ಈ ಉದ್ದೇಶಕ್ಕಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಗ್ರಾಹಕ ವೇದಿಕೆಗಳು ಅಸ್ತಿತ್ವದಲ್ಲಿವೆ.
ಪರಿಹಾರದ ಹಕ್ಕು: ಸರಕು ಮತ್ತು ಸೇವೆಗಳು ನಿಗದಿತ ಬೆಲೆಯಲ್ಲಿ ಲಭ್ಯವಿಲ್ಲದಿದ್ದರೆ, ವಂಚನೆಗಳಾದರೆ ಗ್ರಾಹಕರು ಪರಿಹಾರವನ್ನು ಪಡೆಯುವ ಹಕ್ಕನ್ನು ಹೊಂದಿರುತ್ತಾರೆ. ನಷ್ಟ ಮತ್ತು ಮೋಸಗಳಿಗೆ ದೂರು ನೀಡಬಹುದು. ಉತ್ಪನ್ನ ಮತ್ತು ಸೇವೆಗಳ ಗುಣಮಟ್ಟದಲ್ಲಿ ತೃಪ್ತಿ ಇಲ್ಲದಿದ್ದರೆ ಗ್ರಾಹಕರು ದೂರನ್ನು ದಾಖಲಿಸಬಹುದು. ಇದಲ್ಲದೆ ಒಂದು ಉತ್ಪನ್ನ ಅಥವಾ ಸೇವೆಯಿಂದಾಗಿ ಗ್ರಾಹಕರು ನಷ್ಟ ಅನುಭವಿಸಿದ್ದರೆ, ಅವರು ಮರುಪಾವತಿಗೆ ಮಾತ್ರವಲ್ಲದೆ ಪರಿಹಾರಕ್ಕೂ ಅರ್ಹರು.
ಎಲ್ಲಿ ದೂರು ನೀಡಬೇಕು?
ರಾಷ್ಟ್ರೀಯ ಗ್ರಾಹಕ ಸಹಾಯವಾಣಿ ಪೋರ್ಟಲ್ https://consumerhelpline.gov.in/public/ಅಲ್ಲಿ ದೂರನ್ನು ನೋಂದಾಯಿಸಬಹುದು.
ದೇಶೀಯ ಅಂಗಳದ ಏಕದಿನ ಟೂರ್ನಿ ವಿಜಯ ಹಝಾರೆ ಟೂರ್ನಿಗೆ ಚಾಲನೆ ದೊರೆತಿದೆ. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ಕಣಕ್ಕಿಳಿದಿದ್ದಾರೆ. ಇದಾಗ್ಯೂ ಜಸ್ಪ್ರೀತ್ ಬುಮ್ರಾ ಮಾತ್ರ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ಬುಮ್ರಾ ಈ ಬಾರಿ ಕೂಡ ದೇಶೀಯ ಟೂರ್ನಿಯಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ.
ವಿಜಯ ಹಝಾರೆ ಟೂರ್ನಿಯಿಂದ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ. ಬಿಸಿಸಿಐ ಅವರಿಗೆ ವಿಶ್ರಾಂತಿ ನೀಡಿರುವ ಕಾರಣ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂದು ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ನ ಕಾರ್ಯದರ್ಶಿ ಅನಿಲ್ ಪಟೇಲ್ ತಿಳಿಸಿದ್ದಾರೆ. ಹೀಗಾಗಿ ಪ್ರಸ್ತುತ ನಡೆಯುತ್ತಿರುವ ಏಕದಿನ ಟೂರ್ನಿಯಲ್ಲಿ ಬುಮ್ರಾ ಕಾಣಿಸಿಕೊಳ್ಳುತ್ತಿಲ್ಲ.
ಬುಮ್ರಾ ಮತ್ತೆ ಮೈದಾನಕ್ಕಿಳಿಯುವುದು ಯಾವಾಗ?
ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದ ಜಸ್ಪ್ರೀತ್ ಬುಮ್ರಾ ಟಿ20 ಸರಣಿಯ ಮೂಲಕ ಕಂಬ್ಯಾಕ್ ಮಾಡಿದ್ದರು. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಬುಮ್ರಾ ಮೂರು ಮ್ಯಾಚ್ಗಳಲ್ಲಿ ಕಣಕ್ಕಿಳಿದಿದ್ದರು. ಇದೀಗ ಭಾರತ ತಂಡ ನ್ಯೂಝಿಲೆಂಡ್ ವಿರುದ್ಧದ ಸರಣಿಗಾಗಿ ಸಜ್ಜಾಗುತ್ತಿದೆ.
ನ್ಯೂಝಿಲೆಂಡ್ ವಿರುದ್ಧದ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ ಮೂರು ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಇದಾದ ಬಳಿಕ 5 ಮ್ಯಾಚ್ಗಳ ಟಿ20 ಸರಣಿ ನಡೆಯಲಿದೆ.
ಆದರೆ ಈ ಸರಣಿಯ ಮೊದಲ ಮೂರು ಪಂದ್ಯಗಳಿಗೆ ಜಸ್ಪ್ರೀತ್ ಬುಮ್ರಾ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯ ವೇಳೆಯೂ ಬುಮ್ರಾಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ. ಹೀಗಾಗಿ ಟೀಮ್ ಇಂಡಿಯಾ ವೇಗಿ ಟಿ20 ಸರಣಿ ವೇಳೆ ಮತ್ತೆ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.
ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿ ಶುರುವಾಗುವುದು ಜನವರಿ 21 ರಿಂದ. ಅಲ್ಲಿಯವರೆಗೆ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ಕಲ್ಪಿಸಲು ಟೀಮ್ ಇಂಡಿಯಾ ಆಯ್ಕೆ ಸಮಿತಿ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಬುಮ್ರಾಗೆ ವಿಶ್ರಾಂತಿ ಯಾಕೆ?
ಜಸ್ಪ್ರೀತ್ ಬುಮ್ರಾ ಟೀಮ್ ಇಂಡಿಯಾದ ಪ್ರಮುಖ ವೇಗಿ. ಕಳೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಪಂದ್ಯದ ವೇಳೆ ಅವರು ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದರು. ದೀರ್ಘಾವಧಿಯ ಪಂದ್ಯಗಳನ್ನಾಡುತ್ತಿರುವುದರಿಂದ ಅವರಿಗೆ ಈ ಸಮಸ್ಯೆ ಎದುರಾಗಿತ್ತು.
ಇದೇ ಕಾರಣದಿಂದ ಬುಮ್ರಾ ಅವರನ್ನು ಪ್ರಮುಖ ಸರಣಿಗಳಲ್ಲಿ ಮಾತ್ರ ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಅದರಂತೆ ಮುಂಬರುವ ಟಿ20 ವಿಶ್ವಕಪ್ಗೂ ಮುನ್ನ ಜಸ್ಪ್ರೀತ್ ಬುಮ್ರಾಗೆ ಹೆಚ್ಚಿನ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದ್ದು, ಹೀಗಾಗಿ ವಿಜಯ ಹಝಾರೆ ಟೂರ್ನಿ ಹಾಗೂ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಟೀಮ್ ಇಂಡಿಯಾ ವೇಗಿಯನ್ನು ಹೊರಗಿಡಲಾಗಿದೆ.
ವಿಜಯಪುರ, ಡಿಸೆಂಬರ್ 24: ವಿಜಯಪುರ ಜಿಲ್ಲೆಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಾಳಪ್ಪ ಯರಝರಿ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಆದಾಯಕ್ಕಿಂತ ಹೆಚ್ಚುವರಿಯಾಗಿ ಮಾಡಿಟ್ಟ 2.50 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಬಾಗೇವಾಡಿಯ ಕೃಷಿ ಇಲಾಖೆಯ ಈ ಅಧಿಕಾರಿಯ ಮನೆಯಲ್ಲಿ ಕಂತೆ ಕಂತೆ ಹಣ, ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಲೋಕಾಯುಕ್ತ ತಂಡ ವಶಪಡಿಸಿಕೊಂಡಿದೆ. ದಾಳಿ ವೇಳೆ 29.48 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಮತ್ತು ನಗದು ಪತ್ತೆಯಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ