Headlines

IND vs NZ: ಪಂದ್ಯದ ವೇಳೆ ಗಾಯಗೊಂಡು ಮೈದಾನದಿಂದ ಹೊರನಡೆದ ಟೀಂ ಇಂಡಿಯಾ ಆಲ್‌ರೌಂಡರ್

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸರಣಿಯ ಆರಂಭಕ್ಕೂ ಮುನ್ನ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಇಂಜುರಿಗೊಂಡು ತಂಡದಿಂದ ಹೊರಬಿದ್ದ ಆಘಾತದಲಿದ್ದ ಟೀಂ ಇಂಡಿಯಾಗೆ ಇದೀಗ ಇನ್ನೊಂದು ಆಘಾತ ಎದುರಾಗಿದೆ. ಮೊದಲ ಏಕದಿನ ಪಂದ್ಯಕ್ಕೆ ಸ್ಪಿನ್ ಆಲ್‌ರೌಂಡರ್ ಆಗಿ ತಂಡವನ್ನು ಕೂಡಿಕೊಂಡಿದ್ದ ವಾಷಿಂಗ್ಟನ್ ಸುಂದರ್ ಗಾಯಗೊಂಡು ಅರ್ಧ ಪಂದ್ಯದಲ್ಲೇ ಮೈದಾನ ತೊರೆದಿದ್ದಾರೆ. ಸುಂದರ್ ಬೌಲಿಂಗ್ ಮಾಡುವಾಗ ಬೆನ್ನು ನೋವಿಗೆ ತುತ್ತಾಗಿದ್ದಾರೆ. ಇದರಿಂದಾಗಿ…

Read More

ಒಂದು ವರ್ಷದಲ್ಲಿ 13 ಸಿನಿಮಾ: ಹಳೆಯ ದಿನಗಳ ನೆನೆದ ಶ್ರುತಿ

ನಟಿ ಶ್ರುತಿ (Shruthi) ಕನ್ನಡ ಚಿತ್ರರಂಗದ ಹಿರಿಯ ನಟಿ. ಹಾಸ್ಯ, ಗಂಭೀರ, ಎಮೋಷನಲ್, ಗ್ರಾಮೀಣ, ಪೌರಾಣಿಕ, ಜನಪದ, ಕಲಾತ್ಮಕ ಸಿನಿಮಾ ಹೀಗೆ ಹಲವು ರೀತಿಯ ಸಿನಿಮಾಗಳು, ಪಾತ್ರಗಳಲ್ಲಿ ನಟಿಸಿ ಎಲ್ಲದರಲ್ಲೂ ಸೈ ಎನಿಸಿಕೊಂಡಿದ್ದಾರೆ. ಇದೀಗ ಶ್ರುತಿ ಅವರ 175ನೇ ಸಿನಿಮಾ ‘ಮದರ್’ ಸೆಟ್ಟೇರಿದೆ. ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ನೆರವೇರಿದ್ದು, ನಟಿ ಶ್ರುತಿ ಅವರು ಮುಹೂರ್ತದ ಸಂದರ್ಭದಲ್ಲಿ ಮಾಧ್ಯಮದವರೊಟ್ಟಿಗೆ ಮಾತನಾಡುತ್ತಾ ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source…

Read More

‘ರಣವೀರ್ ಸಿಂಗ್‌ ಶಕ್ತಿಮಾನ್ ಆಗಲು ಮುಖೇಶ್ ಖನ್ನಾ ಒಪ್ಪಿಲ್ಲ ಎಂಬುದೆಲ್ಲ ಪ್ರಚಾರದ ಗಿಮಿಕ್’ – Kannada News

ಭಾರತದ ಮೊದಲ ಸೂಪರ್ ಹೀರೋ ‘ಶಕ್ತಿಮಾನ್’ (Shaktimaan) ಮತ್ತೆ ಸುದ್ದಿಯಲ್ಲಿದೆ. ಈ ಐಕಾನಿಕ್ ಕಥೆಯನ್ನು ಬಿಗ್ ಸ್ಕ್ರೀನ್ ಮೇಲೆ ತರಲು ಬಾಲಿವುಡ್‌ನಲ್ಲಿ ಪ್ರಯತ್ನ ನಡೆಯುತ್ತಿರುವುದು ಹಳೆಯ ವಿಷಯವಾದರೂ, ಶಕ್ತಿಮಾನ್ ಪಾತ್ರಕ್ಕೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿಯೇ ಸದ್ಯದ ದೊಡ್ಡ ಚರ್ಚೆ. ಶಕ್ತಿಮಾನ್ ಪಾತ್ರಧಾರಿ ಹಾಗೂ ನಿರ್ಮಾಪಕ ಮುಖೇಶ್ ಖನ್ನಾ (Mukesh Khanna) ಅವರು ರಣವೀರ್ ಸಿಂಗ್ ಆಯ್ಕೆಯನ್ನು ತೀವ್ರವಾಗಿ ವಿರೋಧಿಸುತ್ತಾ ಬಂದಿದ್ದಾರೆ. ಆದರೆ, ಈಗ ಈ ಇಡೀ ವಿವಾದದ ಹಿಂದೆ ಪ್ರಚಾರದ ಗಿಮಿಕ್ ಅಡಗಿದೆ ಎಂದು ಸಹನಟ…

Read More

ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾ: ಪಟ್ಟಿ ಇಲ್ಲಿದೆ

‘ರೂಮ್​​ಮೇಟ್ಸ್’ ಕನ್ನಡದ ವೆಬ್ ಸರಣಿ. ಹೆಸರೇ ಸೂಚಿಸುತ್ತಿರುವಂತೆ ಒಂದೇ ರೂಮಿನಲ್ಲಿ ಬದುಕುತ್ತಿರುವ ಕೆಲ ಗೆಳೆಯರ ಆತ್ಮೀಯತೆಯ ಕತೆಯನ್ನು ಈ ವೆಬ್ ಸರಣಿ ಒಳಗೊಂಡಿದೆ. ರೂಮ್​​ಮೇಟ್ಸ್​​ಗಳ ನಡುವಿನ ತಮಾಷೆ, ಓನರ್ ಕಾಟ, ಗೆಳೆತಿಯರು, ಗೆಳೆಯರ ಸಹವಾಸ ಇನ್ನೂ ಹಲವು ವಿಷಯಗಳನ್ನು ಒಳಗೊಂಡ ಈ ವೆಬ್ ಸರಣಿ ಜೀ5 ನಲ್ಲಿ ಬಿಡುಗಡೆ ಆಗಿದೆ. ತಮಿಳಿನ ಸ್ಟಾರ್ ನಟ ಧನುಶ್ ನಟಿಸಿರುವ ‘ಕಾರಾ’ ಕೆಲ ವಾರಗಳ ಹಿಂದಷ್ಟೆ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿತು. ದರೋಡೆಕೋರನೊಬ್ಬನ ಕತೆಯನ್ನು ಒಳಗೊಂಡ ಸಿನಿಮಾ ಇದಾಗಿದ್ದು, ಧನುಶ್…

Read More

ಸೈಟ್ ಒತ್ತುವರಿ ಪ್ರಕರಣ: ನ್ಯಾಯಾಲಯದಲ್ಲಿ ಯಶ್ ತಾಯಿಗೆ ಹಿನ್ನಡೆ

ನಟ ಯಶ್ (Yash) ಅವರ ತಾಯಿ ಅವರಿಗೆ ಸೇರಿದ್ದು ಎನ್ನಲಾಗಿದ್ದ ಸೈಟಿಗೆ ಕಟ್ಟಲಾಗಿದ್ದ ಕಾಂಪೌಂಡ್ ಅನ್ನು ಒಡೆದುಹಾಕಿದ್ದು ಇತ್ತೀಚೆಗೆ ಸುದ್ದಿ ಆಗಿತ್ತು. ಹಾಸನದಲ್ಲಿ ಯಶ್ ಅವರ ತಾಯಿ ಪುಷ್ಪ ಅವರಿಗೆ ಸೇರಿದ ಮನೆಗೆ ಹೊಂದಿಕೊಂಡಂತೆ 125*45 ಅಳತೆಯ ಸೈಟಿಗೆ ಪುಷ್ಪ ಅವರು ಕಾಂಪೌಂಡ್ ಹಾಕಿದ್ದರು. ಆ ಕಾಂಪೌಂಡ್ ಅನ್ನು ದೇವರಾಜು ಎಂಬುವರು ಜೆಸಿಬಿ ಬಳಸಿ ಒಡೆದು ಹಾಕಿದ್ದರು. ಆದರೆ ಇದನ್ನು ಯಶ್ ತಾಯಿ ಖಂಡಿಸಿ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ಸಹ ನೀಡಿದ್ದರು. ವಕೀಲರ ಸಹಾಯದಿಂದ…

Read More

TV9 Kannada News Live: ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥನ ಖಡಕ್ ಎಚ್ಚರಿಕೆ! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: Rs 2000 Cr ITC Scam in Bengaluru, PM Modi Visits Netherlands and Army Chief Warns Pakistan

ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥನ ಖಡಕ್ ಎಚ್ಚರಿಕೆ! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು ಬೆಂಗಳೂರು, ಮೇ 16: ಬೆಂಗಳೂರಿನಲ್ಲಿ ಬರೋಬ್ಬರಿ 2,000 ಕೋಟಿ ರೂಪಾಯಿ ಮೊತ್ತದ ಬೃಹತ್ ನಕಲಿ ಐಟಿಸಿ ತೆರಿಗೆ ವಂಚನೆ ಜಾಲವನ್ನು ವಾಣಿಜ್ಯ ತೆರಿಗೆ ಇಲಾಖೆ ಭೇದಿಸಿದ್ದು, ಸಚಿವ ಜಮೀರ್ ಖಾನ್  (Zameer Khan) ಅವರ ‘ನ್ಯಾಷನಲ್ ಟ್ರಾವೆಲ್ಸ್’ಗೆ ನೋಟಿಸ್ ನೀಡಲಾಗಿದೆ. ಇನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಇಯು ನಡುವಿನ ಮುಕ್ತ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ನೆದರ್‌ಲ್ಯಾಂಡ್ಸ್‌ನ…

Read More

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ, ಮೈ ಜುಂ ಎನ್ನಿಸುವ ದೃಶ್ಯ

ಕನ್ಯಾಕುಮಾರಿ, ಏ.1: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ಸೊಂದು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದ ಭೀಕರ ಘಟನೆ ನಡೆದಿದೆ. ವೇಗವಾಗಿ ಬಂದ ಬಸ್ ಸವಾರರನ್ನು ಗಾಳಿಯಲ್ಲಿ ತೂರಿದ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ವರದಿಗಳ ಪ್ರಕಾರ, ಅತಿ ವೇಗವಾಗಿ ಚಲಿಸುತ್ತಿದ್ದ ಕೇರಳ ಸರ್ಕಾರಿ ಬಸ್ ಮೊದಲು ರಸ್ತೆಯಲ್ಲಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ನಂತರ ಚಾಲಕನ ನಿಯಂತ್ರಣ ತಪ್ಪಿದ ಬಸ್, ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನದಲ್ಲಿದ್ದ ದಂಪತಿಗೆ…

Read More

“ನೀವು ವೇಶ್ಯಾವಾಟಿಕೆ ನಡೆಸುತ್ತೀರಾ?”: ಮನೆಯಿಂದ ಹೊರಗೆ ಎಳೆದು ತಂದು ಮಹಿಳೆ ಮೇಲೆ ಅಮಾನವೀಯ ಹಲ್ಲೆ!

ಬೆಂಗಳೂರು, ಏ. 6: ಸಿಲಿಕಾನ್ ಸಿಟಿಯ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಭೀಕರ ಘಟನೆಯೊಂದು ನಡೆದಿದೆ. ಮನೆಯಲ್ಲಿ ಯುವಕನ ಜೊತೆಗಿದ್ದಾಳೆ ಎಂಬ ಕಾರಣಕ್ಕೆ ಪಶ್ಚಿಮ ಬಂಗಾಳ ಮೂಲದ ಮಹಿಳೆಯೊಬ್ಬರನ್ನು ಮನೆಯಿಂದ ಹೊರಗೆ ಎಳೆದು ತಂದು ಅಮಾನವೀಯವಾಗಿ ಹಲ್ಲೆ ನಡೆಸಲಾಗಿದೆ. ಏಪ್ರಿಲ್ 4ರಂದು ಶನಿವಾರ ರಾತ್ರಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪಶ್ಚಿಮ ಬಂಗಾಳ ಮೂಲದ ಮಹಿಳೆಯು ವರ್ತೂರು ವ್ಯಾಪ್ತಿಯಲ್ಲಿ ವಾಸವಿದ್ದರು. ಏಪ್ರಿಲ್ 4ರಂದು ಆಕೆ ತನ್ನ ಮನೆಯಲ್ಲಿ ಯುವಕನೋರ್ವನ ಜೊತೆ ಇದ್ದಾಗ, ಕೆಲವು…

Read More

‘ಕರಾವಳಿ’ ವಿವಾದ, ನಿರ್ದೇಶಕ ಗುರುದತ್​​ಗೆ ಪನ್ನಗಾಭರಣ ಪ್ರಶ್ನೆ – Kannada News | Pannaga Bharana advice to Karavali movie director Gurudatha Ganiga

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ನಟಿಸಿ, ಗುರುದತ್ ಗಾಣಿಗಾ ನಿರ್ದೇಶನ ಮಾಡಿರುವ ‘ಕರಾವಳಿ’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ ಸಿನಿಮಾ ವಿವಾದಕ್ಕೆ ಸಿಲುಕಿಕೊಂಡಿದೆ. ಸಿನಿಮಾ ತಂಡ, ಪ್ರಜ್ವಲ್ ದೇವರಾಜ್ ಅವರನ್ನು ಪಕ್ಕಕ್ಕೆ ಸರಿಸಿ ಸಿನಿಮಾ ಬಿಡುಗಡೆ ಮಾಡಲು ಮುಂದಾಗಿದೆ ಎಂಬ ಆರೋಪ ಎದುರಾಗಿದೆ. ಸಿನಿಮಾಕ್ಕೆ ಪ್ರಜ್ವಲ್ ದೇವರಾಜ್ ಅವರಿಂದ ಡಬ್ಬಿಂಗ್ ಮಾಡಿಸಿಲ್ಲ, ಬದಲಿಗೆ ಬೇರೊಬ್ಬ ಕಲಾವದರಿಂದ ಡಬ್ಬಿಂಗ್ ಮಾಡಿಸಲಾಗಿದೆ. ಖುದ್ದು ನಿರ್ದೇಶಕ ಗುರುದತ್ ಗಾಣಿಗಾ ಅವರು ಪ್ರಜ್ವಲ್ ವಿರುದ್ಧ ಅಸಮಾಧಾನದ…

Read More

Tamil Nadu Election Result: ತಮಿಳುನಾಡಲ್ಲಿ ದಳಪತಿ ಕೀರ್ತಿ ಪತಾಕೆ, ಕಾಂಗ್ರೆಸ್​​​ಗೆ ಬಿಗ್ ಆಫರ್ – Kannada News | Tamil Nadu Assembly Election Result: TVK Invites Congress For Alliance In Tamil Nadu As Party Falls Short Of Majority

ಚೆನ್ನೈ, (ಮೇ 04): ತಮಿಳುನಾಡು  ರಾಜಕೀಯದಲ್ಲಿ (Tamilnadu Politics) ದಳಪತಿ ಸಂಚಲನ ಮೂಡಿಸಿದ್ದಾರೆ. ದ್ರಾವಿಡ ಪಕ್ಷಗಳ ದಶಕಗಳ ಪ್ರಾಬಲ್ಯವನ್ನು ಮುರಿದ ದಳಪತಿ ವಿಜಯ್ (Vijay) ನೇತೃತ್ವದ ತಮಿಳಗಾ ವೆಟ್ರಿ ಕಲಗಂ (ಟಿವಿಕೆ) ತನ್ನ ಮೊದಲ ಚುನಾವಣೆಯಲ್ಲಿ (Election) ಭರ್ಜರಿ ಸಾಧನೆ ಮಾಡಿದೆ. ಇದರೊಂದಗೆ ತಮಿಳುನಾಡಿನಲ್ಲಿ ದಶಕಗಳಿಂದ ನಡೆಯುತ್ತಿರುವ ದ್ರಾವಿಡ ರಾಜಕೀಯದ ಲೆಕ್ಕಾಚಾರವನ್ನೇ ವಿಜಯ್ ಉಲ್ಟಾ ಮಾಡಿದ್ದಾರೆ. ಇನ್ನು ಟಿವಿಕೆ ಗಮನಾರ್ಹ ಸಾಧನೆ ಬಗ್ಗೆ ವಿಜಯ್ ತಂದೆ ಎಸ್​.ಎ.ಚಂದ್ರಶೇಖರ್ ಫುಲ್ ಖುಷ್ ಆಗಿದ್ದು, ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳುವಂತೆ…

Read More